ಒಟ್ಟು 118 ಕಡೆಗಳಲ್ಲಿ , 39 ದಾಸರು , 109 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ಸಂಸಾರ ಸುಖವು ಬೇಸರಾಯ್ತೆನಗೆ ವಾಸವಾನಜ ಲಾಲಿಸೊ ಪ ಏಸು ಜನುಮದ ಪಾಪವೊ ಈ ಸಂಸಾರ ಬಂಧನವೊ ಅ.ಪ ತಂದೆ ತಾಯಿ ಎಂಬುದದು ಒಂದು ಚಿಂತೆ ಬಂಧು ಬಳಗವು ಎಂಬುದದು ಬೇರೆ ಚಿಂತೆ ಸತಿ ಸುತರೆಂಬದದು ದೊಡ್ಡ ಚಿಂತೆ ಕಂದನಿಲ್ಲದಿರಲದು ಘೋರ ಚಿಂತೆ 1 ಹಿಂದೆ ಮಾಡಿದ ಪಾಪಕೀಸು ಭವಣೆಯು ಸಾಕು ಮುಂದೆ ಬೇಡವೊ ಸ್ವಾಮಿ ಈ ತೆರದ ತಾಪ ಇಂದು ಮಾಡಿದ ಪಾಪ ಒಂದುಳುಹದಂತೆ ತಂದೆ ಕರುಣದಿ ಸುಟ್ಟು ಸಲಹೆನ್ನ ದೊರೆಯೆ 2 ಪಾದ ಸರೋಜದಲಿ ಮಂದಮತಿಯ ಮನ ಚಲಿಸದೆ ನಿಲುವಂತೆ ಒಂದು ಬೇಡುವೆನೊ ದೇವ ಬೇರೊಂದ ನಾನೊಲ್ಲೆ ಮಂದರೋದ್ಧಾರ ಶ್ರೀ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ಈ ಸುಖವ ಬಿಟ್ಟನ್ನು ಬೇರೆ ಸುಖವುಂಟೆ ವಾಸುದೇವನ ಭಜಿಸಿ ಸುಖಿಯಾಗು ಮನವೆ ಈ ಸುಖವ ಬಿಟ್ಟಿನ್ನು ಬೇರೆ ಸುಖವುಂಟೆ ಪ ಕಾಮಕ್ರೋಧಾದಿಗಳ ಕಡೆಗೊತ್ತಿ ನಿರತ ನಿ ಷ್ಕಾಮನಾಗಿಯೆ ತುಲಸಿ ಕುಸುಮಗಳ ತಂದು ಪ್ರೇಮಪೂರಿತನಾಗಿ ಸರ್ವಪರಿಪೂರ್ಣ ಶ್ರೀ ರಾಮಪೂಜೆಯಗೈದು ಸುಖಿಯಾಗು ಮನವೆ 1 ಸೂನು ಮನೆ ಮೊದಲಾದ ಮಮಕಾರವನು ಬಿಟ್ಟು ಧ್ಯಾನವನು ಶ್ರೀಹರಿಯ ಮೂರ್ತಿಯೊಳಗಿಟ್ಟು ಸಾನುರಾಗದಿ ಹರಿಯ ನಾಮಸುಧೆಯನು ನೀನು ಪಾನವನುದಿನ ಗೈದು ಸುಖಿಯಾಗು ಮನವೆ 2 ಧರೆಯೊಳತ್ಯಧಿಕವೆಂದೆನಿಪ ಚಿಕ್ಕನಾಗಾಖ್ಯ ಪುರದೊಳಗೆ ಮಹಿಮೆಯಿಂ ಭಕ್ತರನು ಪೊರೆವ ಗುರು ವಾಸುದೇವಾರ್ಯರೂಪ ವೆಂಕಟಪತಿಯ ಚರಣದಾಸ್ಯವ ಪಡೆದು ಸುಖಿಯಾಗು ಮನವೆ3
--------------
ನಾರಾಯಣದಾಸರು
ಈಗಿದ್ದ ಇರವೇ ಮನುಜರಿಗೆ ಈಗಿದ್ದ ಇರವೇ ? ಪ ಮಾಯಾಪ್ರಪÀಂಚದ ಬಲೆಯ ಪಾಶಕ್ಕೆ ಸಿಕ್ಕಿ ಕಾಯದೊಳಿಹ ಪರಮಾತ್ಮನನರಿಯದೆ ಅ.ಪ. ನರರ ಯೋನಿಗೆ ಬಂದು ನಡತೆ ಸಜ್ಜನರೆಂದು ಬರಿಯ ಬನ್ನಣೆಯೊಳು ಬೆರೆತಿಹರಲ್ಲದೆ ಶರೀರ ಸುಖವನ್ನೆಲ್ಲ ಮರೆತು ತನ್ನಾತ್ಮನೊಳಿರುವ ಸುಖವು ತಾನು ಬಯಸಬೇಕಲ್ಲದೆ ಈಗಿದ್ದ 1 ಮಂದಮತಿಗಳಾಗಿ ಮಮತೆಮಾರ್ಗಕೆ ತಾಗಿ ಅಂದಣದೈಶ್ವರ್ಯ ಬಯಸುವವರಲ್ಲದೆ ಹೊಂದಿಸಿ ಸಚ್ಚಿದಾನಂದ ಬ್ರಹ್ಮದಿಮನ ಬಂದಾಗಿ ನಲಿಸಿ ವಿರಕ್ತಿಯ ಬಂದಿಯೊಳ್ಬಲಿಸಿ ನಿಂದು ನಿಜದ ನಿರುಪಮನೆ ನಿತ್ಯಾತ್ಮನೆ ಎಂದು ಕುಂದದೆ ಸಹಜಾನಂದನಾಗದ ಮೇಲೆ ಈಗಿದ್ದ 2 ಪರಮಪುರುಷರಾದ ಪ್ರಹುಢ ಸಂತರ ಪಾದ ಸ್ಮರಣೆಯ ನಿರುತ ಮಾಡಿರಬೇಕಲ್ಲದೆ ಪರತತ್ವಮಯನಾದ ಗುರುಮಹಾರಾಯನ ಕರುಣವ ಪಡೆದು ಕಣ್ಣಿನೊಳು ಶ್ರೀ ಚರಣವ ಪಿಡಿದು ಬರಿಯಮಾತಲ್ಲವೆಂದರಿತು ಪೂರ್ಣ ಬ್ರಹ್ಮ ಗುರುವಿಮಲಾನಂದ ಭರಿತನಾಗದ ಮೇಲೆ ಈಗಿದ್ದ 3
--------------
ಭಟಕಳ ಅಪ್ಪಯ್ಯ
ಉದ್ದರುಸುವದೆನ್ನ ಉದಧಿಶಯನ | ಪಾದ | ಪದ್ಮದ್ವಯಕೆಯಿಂದು ಪ ಅಂದು ನೀ ಪೇಳಿದಂದಲಿ ತೀರ್ಥಯಾತ್ರೆ | ನಿಂದರದೆ ಸಂಚರಿಸಿ ಪುಣ್ಯವೆಲ್ಲಾ | ತಂದು ನಿನಗರ್ಪಿಸಿದೆ ಕೈ ಕೊಂಡು | ತೋರು ತಡಮಾಡದಲೆ ದೇವಾ 1 ಯಾತರವ ನಾನು ನರಮನೆ ಗಾಯಕರ ದೂತರೆಂಜಲನುಂಡು ಬೆಳದ ನರನೋ || ನೋತ ಫಲವಾವದೊ ನೀನೆ ಬಲ್ಲೆಯಾ ಜೀಯಾ | ಮಾತು ಮಾತಿಗೆ ಹಿಗ್ಗಿ ನಗುವ ಚನ್ನಿಗರಾಯಾ2 ಇಷ್ಟೆನ್ನ ಮನದ ಭೀಷ್ಟೆ ಒಂದೆ ವುಂಟು | ಕೃಷ್ಣಾ ಸ್ನಾನ ಕೃಷ್ಣ ಸಂದರುಶನಾ | ಕೊಟ್ಟು ಕೇವಲವಾಗಿ ನಿನ್ನಂಘ್ರಿಯಲಿ ರತಿ | ಇಟ್ಟು ಭಜಿಸುವಂತೆ ಭಾಗ್ಯವನು ಕೊಡೊವೇಗಾ3 ಏನು ಕಡಿಮೆ ನೀನು ಒಲಿದರಾದಡೆ ರಾಮ | ಧೇನು ತರುಮಣಿ ಬಾರದೆ ನಿಲ್ಲವೇ || ಶ್ರೀನಿವಾಸನೆ ನಿನ್ನ | ಲೇಶ ಸುಖವು ತೋರದು ದೇವಾ 4 ವೆಂಕಟಗಿರವಾಸಾ ವೇದ ವಂದಿತ ಚರಣಾ | ಶಂಖ ಚಕ್ರಪಾಣಿ ಕರುಣಾಕರಾ | ಶಂಖಾಣ ನೃಪವರದ ವಿಜಯವಿಠ್ಠಲ ತಿಮ್ಮ ಅಂಕದ ಮೇಲಾಡುವ ಬಾಲನೆಂದು ಬಿಡದೆ 5
--------------
ವಿಜಯದಾಸ
ಎಂಥಾ-----------ಈಗ ಪಿಡಿಯೊ ಎನ್ನ ಕೈಯ್ಯ ಬೇಗ ಅನಂತಾ ಭಗವಂತಾ ಶ್ರೀಕಾಂತಾ ಜಗದಂತ ....... ಪ ಒಂದೊಂದು ದಿನವು ಎಂಬುದು ಒಂದೊಂದು ಯುಗವು ಆಗಿ ಬೆಂದು ಬಹಳ ಬೇಸರದಿಂದ ತಂದೆ ----------ಬಂದೀ ಕಂದನೆಂದು ಕರುಣದಿಂದ ---------ಗೋವಿಂದ ನಂದ ಮುಕುಂದಾ ಶ್ರೀ ಮಂದರಧರ 1 ಮಕ್ಕಳು ಮರಿಗಳು ಎಲ್ಲಾ ------ಕಾಣದ ದೇವಾ ಶುಷ್ಕ ಭೂತರಾಗಿ ಇನ್ನು ಸುಖವು ಕಾಣದೆ ---ನೆಗೊಂಡು ಬಹಳಘೋರ ನಾ ಬಡುವದು ಕಂಡು ನಿಕ್ಕಾಸಲಾರದೆ ನಿನ್ನ ಮೊರೆಯ ಹೊಕ್ಕ ಕಾಯಯ್ಯ ನೀನೆ --------- ಶ್ರೀ ಲೋಕನಾಯಕ ಹರಿಯೆ 2 ಮನಸು ನಿನ್ನ ಧ್ಯಾನವು ಬಿಟ್ಟು ತಿರಸೂ? ಚಿಂತನೆಗೊಳಗೆ ಆಗಿ ಕನಸಿನಲ್ಲಿ ಕಾಣೋನಿಲ್ಲಾ ಕಾಯದ ಸುಖವೆಂಬಾದಿನ್ನು ಅನಿಮಿತ್ತ ಬಂಧು ಕೃಷ್ಣ ಹರಿ 'ಹೊನ್ನ ವಿಠ್ಠಲ' ರಾಯ ಮನಸಿಜನಯ್ಯ ಮೋಹನ್ನ ನಿಧಾನಾ ಸುರಧೇನು ಸದ್ಗುಣಪೂರ್ಣ 3
--------------
ಹೆನ್ನೆರಂಗದಾಸರು
ಎಂದಿಗಾದರು ಒಮ್ಮೆ ಕೊಡು ಕಂಡ್ಯ ಹರಿಯೆ ಪ ಬೃಂದಾವನಪತಿ ದಯದಿಂದಲೆನಗೆ ಅ ಫಲಭಾರಗಳಿಂದ ತಲೆವಾಗಿ ಶುಕಪಿಕಕಲಕಲದೊಳು ನಿನ್ನ ತುತಿಸಿ ತುಂಬೆಗಳಗಳರವದಿಂ ಪಾಡಿ ಅಪ್ಸರರಂತೆ ಪೂ-ಮಳೆಯಗರೆವ ತರುಲತೆಯ ಜನ್ಮವನು1 ಕೊಳಲ ಶೃತಿಯ ಕೇಳಿ ಸುಖದ ಸಂಭ್ರಮದಲಿಹೊಲಬು ತಪ್ಪಿ ತಾವು ಅರೆಗಣ್ಣು ಮುಚ್ಚಿನಳಿನಾಸನದಿ ಮೌನಗೊಂಡು ಪರಮ ಹಂಸಕುಲದಂತೆ ಧ್ಯಾನಿಪ ಹಂಸ ಜನ್ಮವನು 2 ಚಕೋರ ಜನ್ಮವನು3 ಭಾವಜನೈಯನ ಕಡುಚಲ್ವಿಕೆಯನ್ನುಭಾವಿಸಿ ನಿಡುಗಂಗಳಿಂದ ದಣಿದುಂಡುಗೋವಳೇರಂತೆ ಮನೆ ಮಕ್ಕಳ ಹಿಂಗಿ ನಿನ್ನ ಆವಾಗ ಈಕ್ಷಿಸುವ ಗೋವ್ಗಳ ಜನ್ಮವನ್ನು 4 ತೋಳದಂಡಿಗೆಮಾಡಿ ಹೀಲಿಯ ಚಾಮರವಮೇಲೆ ಎತ್ತಿದ ತಾವರೆ ಗೊಂಡೆಯಿಂದಓಲೈಸಿ ನಿನ್ನನು ಒಲಿಸಿ ಮುಕುತರಂತೆನಾಲೋಕ್ಯ ಸುಖವುಂಬ ಗೋಪರ ಜನ್ಮವನು5 ಕೊಳಲ ಧ್ವನಿಯ ಕೇಳಿ ಎದುರುಗೊಳ್ಳುತ ನಿನ್ನನಳಿನನಾಭಾ ಅವಧಾರೆಂದು ಪೊಗಳೇತಳಿಗೆ ಆರತಿಯೆತ್ತಿ ಲಕ್ಷ್ಮಿಯಂತೆ ನಿನ್ನಚೆಲುವ ಸವಿವಂಥ ಗೋಪೇರ ಜನ್ಮವನು 6 ಇಂದಿರೆಯರಸ ಬ್ರಹ್ಮೇಂದ್ರಾದಿ ವಂದಿತಎಂದು ಮೊಸರ ಕಡೆಯುತ್ತಲಿ ನಿನ್ನಅಂದಿನ ಶ್ರುತಿಯೋ ಉಪ್ಪವಡಿಪ ವ್ರಜ-ದಿಂದುಮುಖಿಯರ ಜನ್ಮವ ಸಿರಿಕೃಷ್ಣ7
--------------
ವ್ಯಾಸರಾಯರು
ಎಂದಿಗೊ ಕಾಣೆ ಸುಖವು | ಜೀವಕೆ ಪ ಬಂಧಕದೊಳು ಸಿಕ್ಕಿ ಬಾಧೆ ಪಡುತಿಹುದು ಅ.ಪ ಜನರೂಢಿ ನೋಡಿದರೆ ಕೊನೆಗಾಣುವುದೇ ಇಲ್ಲ 1 ಗರ್ಭಯಾತನೆ ಎಂಬೋದÀರ್ಭುದವಾಗಿಹದು ನಿರ್ಭರ ದುಃಖಗಳಾವಿರ್ಭೂತವಾಗುವುದೊ 2 ಬಾಳುವ ಕೌಮಾರದಿ ಬಹುಚಿಂತೆಯನುದಿನ 3 ಬದ್ಧ ಸಂಸಾರಕೆ ಮದ್ದು ಮಾಡುವರಾರು 4 ಯಾವಾವಸ್ಥೆಗಳಲ್ಲಿ ಜೀವಗೆ ಸುಖವಿಲ್ಲ ಕಾವನು ಗುರುರಾಮವಿಠಲನೊಬ್ಬನೆ ಬಲ್ಲ 5
--------------
ಗುರುರಾಮವಿಠಲ
ಎನ್ನ ಮನದ ಡೊಂಕ ತಿದ್ದಯ್ಯಾ ಗೋಪಾಲಕೃಷ್ಣ ಪ ಎನ್ನ ಮನದ ಡೊಂಕ ತಿದ್ದಿ ಮುನ್ನ ಮನ್ನಿಸದಿ[ರೆ]ತಿದ್ದಿಬನ್ನ ಪಡಲಾರೆ ಭವಾಬ್ಧಿಯನ್ನೆ ದಾಟಿಸೊ ಅಪಾರಮಹಿಮ ಅ.ಪ. ಉದಯವಾದರೆ ಊಟದ ಚಿಂತೆ ಉಂಡಮೇಲೆ ಭೋಗದ ಚಿಂತೆದರಮೇಲೆ ಹದಿನಾಲ್ಕು ಲೋಕಂಗಳನೆ ಆಳ್ವ ಚಿಂತೆ 1 ಸುಖವು ಬಂದರೆ ನಾನೆ ಸಮರ್ಥ ದುಃಖವು ಬಂದರೆ ಹರಿಯುಮಾಡ್ದರೊಕ್ಕ ಬಂದರೆ ನಾನೆ ಧನಿಕ ಸಿಕ್ಕಿಬಿದ್ದರೆ ಹರಿಯ ವ್ಯಾಪಾರ 2 ತಿಳಿದು ತಿಳಿದು ಪತಂಗದ್ಹುಳವು ಕಿಚ್ಚಿನಲ್ಲಿ ಬೀಳೋಹಾಂಗೆಕಾಲಕಳೆದೆ ಮೂಕನಂತೆ ಮುದ್ದು ಹಯವದನನೆ 3
--------------
ವಾದಿರಾಜ
ಏಕ ಚಿಂತಿಸಲಯ್ಯ ಈ ಜಗದ ಸುಖಕಾಗಿ ಸಾಕು ಇದರೊಳು ಸುಖದ ಲೇಶವನು ಕಾಣೆ ಪ ಒಂದು ಸುಖ ಬಯಸಿದೊಡೆ ಹಿಂದೆ ನೂರೆಂಟಾಗಿ ಸಂದಣಿಪ ದುಃಖಗಳು ಬಂದು ಒದಗುವವಿದಕೆ ಎಂದಿಗೂ ಬಯಸೆನಾ ಈ ತೆರೆದ ಸುಖವನ್ನು ಹಿಂದಿನಾ ಕರ್ಮದಂತಾಗುತಿರುವುದಕೆ 1 ಮೊದಲು ಸವಿಯಾಗಿಹುದು ತುದಿಯಲಿದು ವಿಷವಹುದು ಬದಲಾಗುತಿಹ ಇಂಥ ಸುಖ ಬೇಡವೆನಗೆ ಮೊದಲುಕೊನೆ ಇಲ್ಲದಿಹ ಸದಮಲಾನಂದವಹ ಪದವ ಮರೆಯಿಸುತಿರುವದಿದು ಬೇಡವೆನಗೆ 2 ಅನಿಸಿಕೆಯೆ ಕೂಡಿರುವ ಈ ಸುಖವು ನಿಜವಲ್ಲ ಮನವಾಣಿಗಳಿಗಾಚೆಗಿಹ ಸುಖವು ನಿಜವು ತಾನೆ ಸುಖರೂಪನೆಂದನಿತರೊಳು ನಿಶ್ಚಯಿಸಿ ಜ್ಞಾನಿಶಂಕರನೆ ನಾನಾದ ಮೇಲಿನ್ನು 3
--------------
ಶಂಕರಭಟ್ಟ ಅಗ್ನಿಹೋತ್ರಿ
ಏನು ಸಾಧಿಸುವದೇನರಿದು ಙÁ್ಞನಗಮ್ಯ ಗುರುಮಾರ್ಗದೊರೆಯಲರಿಯದು ಧ್ರುವ ನೀತಿಶಾಸ್ತ್ರವನೋದಿ ಪಂಡಿತನಾಗಲಿಬಹುದು ಶ್ರುತಿ ಸ್ಮøತಿಗಳ ತಿಳಿದು ತರ್ಕಸ್ಯಾಡಲಿಬಹುದು ಅತಿ ಬಲ್ಲತನದಿ ಯತಿಯನಿಸಿಕೊಳ್ಳಲಿಬಹುದು ಕ್ಷಿತಿಯೊಳು ಮೆರೆಯಲಿಬಹುದು ಸುತತ್ವ ಜ್ಞಾನಖೂನ ದೊರೆಯಲರಿಯದು 1 ಗೃಹತ್ಯಾಗಮಾಡಿ ಸಂನ್ಯಾಸಿ ಅಗಲಿಬಹುದು ದೇಹ ದಂಡಿಸಿ ವನವಾಸಿಯಾಗಲಿಬಹುದು ಗುಹ್ಯಗೊಪೆಯಲಿ ಸೇರಿ ತಪಸಿಯೆನಿಸಲಿಬಹುದು ಬಾಹ್ಯನಿಷ್ಠೆಯದೋರಬಹುದು ಸೋಹ್ಯ ಸದ್ಗುರುಮಾರ್ಗ ದೊರೆಯಲರಿಯದು 2 ಹಲವು ಕುಟಿಲದ ವಿದ್ಯವನು ಸಾಧಿಸಲಿಬಹುದು ಜಲದೊಳಗೆ ಮುಳಗಿ ಮಂತ್ರವನು ಜಪಿಸಲಿಬಹುದು ಸೀಲಿ ಸಾಲ್ವಳಿಯ ಸುಶಕುನ ಪೇಳಲಿಬಹುದು ಮ್ಯಾಲೆ ಜನರಂಜಿಸಲಿಬಹುದು ಮೂಲ ಮುಕ್ತಿ ಕೀಲ ತಿಳಿಯಲರಿಯದು 3 ಪೃಥ್ವಿಯನೆ ತಿರುಗಿ ಬಹುಭಾಷೆಯಾಡಲಿಬಹುದು ಮತಿವಂತನಾಗಿ ಕವಿತ್ವಮಾಡಲಿಬಹುದು ಗೀತರಾಗವು ಜಂತ್ರದೊಳು ನುಡಿಸಲಿಬಹುದು ಚದುರಂಗ ಪಗಡ್ಯಾಡಿ ಗೆಲಬಹುದು ಮತ್ತ ಮನ ಬೆರೆವ ಘನಸುಖವು ದೊರೆಯಲರಿಯದು 4 ಶೂರತನದಲಿ ಪರಾಕ್ರಮ ಹಿಡಿಯಲಿಬಹುದು ಧೀರಗುಣದಲಿ ಮಹಾಧೀರನೆನಿಸಲಿಬಹುದು ನೂರ್ಬಲದ ಪೌರುಷಲಿ ರಾಜ್ಯನಾಳಲಿಬಹುದು ಸಿರಿಸೌಖ್ಯದೊಳಿರಲಿಬಹುದು ಸಾರ ಸುಜ್ಞಾನಸುಖ ದೊರೆಯಲರಿಯದು 5 ಪರ್ವತಾಗ್ರದಲೇರಿ ಧರೆಗೆರಗಲಿಬಹುದು ಹರಿವ ನದಿಯನೆ ಹಾರಿ ಹೋಗಲಿಬಹುದು ಮೊರೆವುತಿಹ್ಯ ಸರ್ಪದಾ ವಿಷವು ಧರಿಸಲಿಬಹುದು ಕ್ರೂರ ಮೃಗದೊಳು ತಿರುಗ್ಯಾಡಬಹುದು ಪಥ ದೊರೆಯಲರಿಯದು 6 ಪೊಡವಿಯೊಳು ಹವಲು ವಿದ್ಯವ ಸಾಧಿಸಲುಬಹುದು ಬಡದ ಬವಣಿಯ ಬಟ್ಟು ನಾಡ ಶೋಧಿಸಬಹುದು ಗೂಢ ವಿದ್ಯದ ಮಾತು ಆಡಿ ತೋರಿಸಬಹುದು ಹಿಡಿದು ಮೌನವ ಕೂಡಬಹುದು ಮೂಢಮಹಿಪತಿ ಒಡಿಯನ ಕೃಪೆ ಪಡೆವದೆ ದುರ್ಲಭವು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದ್ಹೇಳಲಿ ಸ್ವಾನಂದ ಘನ ಸುಖವು ಧ್ರುವ ಮಾತಿನಂತಲ್ಲ ಜ್ಯೋತಿರ್ಮಯದ ಸುಖ ನೇತಿ ನೆÉೀತಿವೆಂಬುದು ಶ್ರುತಿವಚನ 1 ಹೋಲಿಕೆಯ ಮಾತಿಗಿದು ಕೇಳು ಸಿಲುಕುವುದಿಲ್ಲ ಮೂಲ ತಿಳಿದವನೆ ಬಲ್ಲ ಮ್ಯಾಲೆ ಮಂದಿರದ 2 ಅಂಜನೆ ಇಟ್ಟ ಗುರು ಕೃಪೆಯಿಂದ ನಿಜ ಗುರುತು ಕಂಡವನೆ ಬಲ್ಲ ಹರಿಮಹಿಮೆಯ 3 ಸ್ವಾನುಭವದ ಸುಖಜ್ಞಾನಿಗಳಿಗಲ್ಲದೆ ನೀನು ನಾನೆಂಬವರಿಗೆ ಖೂನ ತಿಳಿಯದು 4 ಮನಕರಿಗಿ ಮಹಿಪತಿ ಘನ ಬೆರೆದ ಗುರುತ ಏನೋ ಎಂತೋ ತಿಳಿ ಮಾತ ಆನಂದಭರಿತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಂದು ಕೊಟ್ಟರೆ ಶಿವ ಮತ್ತೊಂದು ಕೊಡನಯ್ಯ ಆನಂದ ವಸ್ತುವಿಗೊಂದು ಲೀಲೆ ಇದಯ್ಯ ಪ ರೊಕ್ಕವಿದ್ದವರಿಗೆ ಮಕ್ಕಳೆಂಬವರಿಲ್ಲ ಮಕ್ಕಳಿದ್ದರೆ ತಕ್ಕವನಿತೆಯಿಲ್ಲ ಚೊಕ್ಕಸತಿಯು ಸಿಕ್ಕಿತಾನುರೂಪದೊಳಿರೆ ಪಕ್ಕನೆ ಅಗಲಿ ಪೋಗುವರಯ್ಯ 1 ಚೆಲುವ ಹೆಣ್ಣೆಗೆ ತಕ್ಕ ಚೆಲುವ ಪುರುಷನಿಲ್ಲ ಚೆಲುವ ನಾದವ ಗೊಳ್ಳೆಲಲನೆಯಿಲ್ಲ ಹಲವು ಜನ್ಮದ ಪುಣ್ಯ ಫಲದಿಂದ ಸೇರಲು ಹೊಳೆದು ಹೋಗುವರಿದರೊಳಗೊಬ್ಬರಯ್ಯ 2 ಸತಿ ಸುತರು ಇರುತಿರಲು ದಾರಿದ್ರ ತಿಂಬುವುದಕಿಲ್ಲ ಗತಿಯಿಲ್ಲದವನಿಗೆ ನರಕವಿಲ್ಲ ಅತಿಶಯವಾಗಿ ತಿಂಬುದಕ್ಕಿದ್ದ ನರರಿಗೆ ಸತತ ಶಾರೀರ ಸುಖವಿಲ್ಲವಯ್ಯ 3 ಉಂಬಲೂಡಲು ಸರ್ವಸಕಲ ಸಂಪತ್ತೆಲ್ಲ ತುಂಬಿರಲು ತನ್ನ ಗೃಹದೊಳೆಲ್ಲ ಬೆಂಬಿಡದೆ ರೋಗವು ಪುಟ್ಟಿತನುವಿನೊಳ್ ತಿಂಬುದಕವಗೆ ಬಾಯಿಗಳಿಲ್ಲವಯ್ಯ 4 ಸಕಲ ಜೀವರಿಗು ಚಿಂತೆಗಳಿಲ್ಲದವರಿಲ್ಲ ಸುಖವು ಸ್ವಪ್ನದೊಳು ಕಾಣುವುದಿಲ್ಲವಯ್ಯ ಬಕನ ವೈರಿಯ ಕೋಣೆಯ ಲಕ್ಷ್ಮೀಪತಿ ಪ್ರಿಯ ಮಕರ ಕೇತನ ವೈರಿಯಾಟವಿದಯ್ಯ 5
--------------
ಕವಿ ಪರಮದೇವದಾಸರು
ಕಂಡದ್ದು ಬಯಸಿ ಕಂಗೆಡು ಬೇಡಾ ಪಾದ ಬಿಡಬೇಡಾ ಪ ಕಾಲನಿನ್ನದಲ್ಲ ಕಡುಮೂರ್ಖ ಆ ಕಾಲ ಪುರುಷ ಮಾಡಿದನೇಕಾ ಪರಿಗಳಿಂದ ಇನ್ನು ಯಾಲೋಕಾದಲಿ ನಡುವುದಲ್ಲಾ ಸುಖದು:ಖ ಪಾಲಿಗೆ ಬಂದದ್ದು ಬಿಡದನಕಾ ಪ್ರಾಪ್ತಿ ಇದ್ದಷ್ಟೇ ಇಲ್ಲಧಿಕಾ ಶ್ರೀಲೋಲನ ನೀನಿರುವತನಕಾ ಸ್ಮರಿಸದೆ ಇರಬೇಡ ಅವಿವೇಕಾ 1 ಘಣಿಯಲ್ಲಿ ಬರದದ್ದು ತಪ್ಪದಲ್ಲೆ ಜಗ ಭಗವಂತ ನೀ ಮಾಡಿದಲ್ಲೆ--- -------- ನಿನ್ನದಲ್ಲೆ ಅನುಗ್ರಹ ಮಾಡುವ ಭರದಲ್ಲೆ ನಗಧರನಾ ನಾಮ ಬಲದಲ್ಲೆ ಅಘಗಳ ಕಳಿ ನೀ ತೀವ್ರದಲ್ಲೆ 2 ಇಷ್ಟಾರ್ಥ ನೀ ಮಾಡಬೇಕಂದಿ ಸಂಚಿತ ಎಲ್ಲೆಂದಿ ಕಷ್ಟವ ಪಡಕೊಂಡು ನೀ ಬಂದಿ ಕಾಮಕೆ ಸುಖವು ಇಲ್ಲೆಂದಿ ಇಷ್ಟದಿ ಶ್ರೀ ಹರಿ ಪದಹೊಂದಿ ಇರದೆ ನೀ ಇರಬೇಡಾ ಇಬ್ಬಂದಿ ಸ್ಪಷ್ಟದಿ 'ಹೊನ್ನಯ್ಯ ವಿಠ್ಠಲಂದಿ’ ಸಾರ್ವದಿ ಮುಂದಕ ನೀ ಬಂದಿ3
--------------
ಹೆನ್ನೆರಂಗದಾಸರು
ಕಣ್ಣ ಮುಂದಿರುವ ವಿಷಯಾದಿ ಸುಖಕೆ ಪ ಮೊರೆವೆ ನರಕುರಿಯೆ ಅದನರಿತಿಹೆಯ ಮನವೆ 1 ಸನ್ನುತದ ನಿಜಸುಖದೊಳಿರಬಹುದು ಮನವೆ 2 ನರಕದೊಳ್ ಬಾಯ್‍ಕಳೆದರೊದಗುವುದೆ ಸುಖವು 3 ತಿರುತಿರುಗಿ ಬಳಲುತಿರೆ ಸುಖವಾಗಬಹುದೊ 4 ದ್ಗುರುವಾಗುತಿಹನಲ್ಲೊ ಅರಿತುಕೊ ಮನವೆ5 ಧ್ಯಾನಿಸುವ ಪುಣ್ಯಾತ್ಮರಿಗೆ ಗೋಚರಿಸಬಹುದು | ತಾನಾಗಿ ಶರಣರೊಳು ಕರುಣವಿಡಬಹುದು6 ಶರಧಿಯೊಳಗೋಲಾಡುತಿರು ನಿರುತ ಮನವೆ 7
--------------
ಸದಾನಂದರು
ಕಮಲ ಪರ ಭವ ಬಂಧ ನಮಗೆಕುಹಕ ಬುದ್ಧಿಯಲಂದು ಬಯಲ ಭ್ರಾಂತಿಗೆ ಸಂದುಬಹು ದುಃಖಬಟ್ಟುದ ನೆನೆದು ನಾವಿಂದು 1ತನುವಿದನೆನಿತು ಪೋಸಲು ಮತ್ತೆವನಿತಾದಿ ಜನರ ನಂಬಿರಲುಧನ ತನ್ನದೆಂದು ಬಚ್ಚಿಡಲು ಭೋಗಕನುಕೂಲವಾುತೆಂದೆನಲುತನುವಳಿುತು ಜನ ಸಡಿಲಿತು ಗಳಿಸಿದಧನ ಹೋುತನುಮಾನವೇತಕಿನ್ನಿನಿತು 2ಸುಖವೆಂಬದು ದುಃಖ ತಿಳಿಯೆ ಮದಮುಖರಾಗದಿರಿ ಮನವೆಳೆಯೆಸುಖಪರಿಪೂರ್ಣನು ಹರಿಯೆ ುನ್ನುಸುಖವುಂಟು ನಮಗಾತನೊಲಿಯೆಸಕಲ ಲೋಕೇಶ ಶ್ರೀ ತಿರುಪತಿ ವೇಂಕಟೇಶನಕುಟಿಲ ಭಕುತರಿಗುಂಟು ಸಂತೋಷ 3ಓಂ ಶ್ರೀ ಹರಯೇ ನಮಃ
--------------
ತಿಮ್ಮಪ್ಪದಾಸರು