ಒಟ್ಟು 34 ಕಡೆಗಳಲ್ಲಿ , 19 ದಾಸರು , 32 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ವಂದಿಸುವ ಎನ್ನ ಮಂದಿರದಲ್ಲಿ ನಿಲ್ಲೆ ಕೇಳುವದೆನ ಸೊಲ್ಲೆ ಪ ಭವ ಸಿಂಧೂವಿನೊಳು ಬಹು ನೊಂದು ನಿನ್ನ ಬೇಡಿಕೊಂಬೆ ಪಾಲಿಸು ಜಗದಂಬೆ1 ಇಂದಿರೇಶನರಾಣಿ ಮಂದಭಾಗ್ಯನ ಕರುಣ - ದಿಂದಲಿ ಎನ್ನ ನೋಡೆ ನೀ ನಲಿದಾಡೆ 2 ಮಂದಜಾಸನ ಜನನಿ ಸುಂದರ ಸುಗುಣಿ ನಿನ್ನ ಕಂದನು ನಾನಮ್ಮ ಶಿರಿಯೆ ನೀ ಸುಖ ಸುರಿಯೆ 3 ಎಂದಿಗು ಎನ್ನನು ಪೊಂದಿದ ಈ ಭವ ಬಂಧನ ಬಿಡಿಸೆಂದೆ ನಿನ್ನನು ಬೇಡಿಕೊಂಡೆ 4 ದಾತ ಗುರುಜಗನ್ನಾಥ ವಿಠಲನ ಪ್ರೀತಿಯಿಂದ ಎನಗೆ ತೋರೆ, ನೀ ಎನ್ನ ಮನೆಗೆ ಬಾರೆ 5
--------------
ಗುರುಜಗನ್ನಾಥದಾಸರು
ಭಾರತೀ ದೇವಿ ಜಗದುದರನ ಸೊಸೆಯೆ ಶ್ರೀ ವಾಯು ಸತಿಯೆ ಜಗದುದರನ ಸೊಸೆಯೆ ಪ. ಸುಗುಣಿ ನಿನ್ನ ನಾ ಬಗೆ ಬಗೆ ವರ್ಣಿಸೆ ಜಗದೊಳು ಖ್ಯಾತೆಯೆ ನಗಧರ ಪ್ರೀತೆಯೆ ಅ.ಪ. ಸಾರಿ ಬಂದೆ ನಿನ್ನ ನಾರಿಮಣಿಯಳೆ ಭೂರಿ ಕರುಣದಿ ನೀ ಸತಿ ಪದಕೆ ಪತಿ ಸಹ ಭಾರತಿ ನಿನ್ನಯ ವಾರಿಜಪದವನು ಸೇರಿ ಸುಖಿಸುವಂಥ ದಯ ತೋರೆ ನೀ 1 ದಾರಿ ತೋರಿ ನೀ ಪಾರುಗಾಣಿಸೆ ತಾರತಮ್ಯದಿ ವಾರಿಜಾಂಬಕಿಯೆ ಆರು ಅರಿಯದ ಹರಿಯ ಮಹಿಮೆಯ ಸಾರತತ್ವ ನೀ ಪತಿಯಿಂದರಿತಿಹೆ ಬಾರದು ಅಜ್ಞತೆ ನಿನಗೆ ಪ್ರಳಯದಿ ನಾರಿ ರನ್ನೆ ಸರ್ವ ಬುದ್ಯಭಿಮಾನಿಯೆ 2 ಹಾರಪದಕವು ದೋರೆ ಕಂಕಣ ನಾರಿ ನಿನ್ನನು ಯಾರು ವರ್ಣಿಪರೆ ನಾರಿ ನಿನ್ನ ಪತಿದ್ವಾರದಿ ಎನ್ನ ಶ- ರೀರದಿ ಸರ್ವನಿಯಾಮಕರೊಡನೆ ತೋರೆ ಗೋಪಾಲಕೃಷ್ಣವಿಠ್ಠಲನ ನೀರಜನಾಭನ ಶ್ರೀ ರಮೇಶನ 3
--------------
ಅಂಬಾಬಾಯಿ
ಮಾನವ ಶಿಂಗಾರ್ಯರ ಸುತನಮೋ ನಮೋ ಪ ಮಂಗಳಕರ ಕುಲಿಶಾಂಗ ಮತಾಂಬುಧಿ ತಿಂಗಳಸುಗುಣಿತ ನಮೊ ನಮೊ ಅ.ಪ ತುಂಗಮಹಿಮ ದ್ವಿಜ ಪುಂಗವ ವಿಜಿತಾ ನಂಗ ಶರ ದಯಾಪಾಂಗ ನಮೋ || ಡಿಂಗರೀಕ ಜನಪಾಲ ನಮೊ ಭವ ಭಂಗ ವಿದಾರಣ ನಮೊ ನಮೊ 1 ಜಾತರೂಪ ಶಯ್ಯಾತ್ಮಜ್ಯಾತೆ ಹರಿ | ದೂತ ಪ್ರಹ್ಲಾದರನುಜ ನಮೊ || ಪೂತುರೆ ಘನ ಸತ್ವಾತಿಶಯದ ಪ್ರ ಖ್ಯಾತ ದಿನಪ ಪ್ರಸೂತ ನಮೊ 2 ಪಾತಕಾದ್ರಿಜೀಮೂತ ಭ್ರಾತ ಪಣಿ ಪುರಂದರ ಪೋತನಮೊ ಪೂತಗಾತ್ರ ಶುಭದಾತ್ರ ಭರಿಕ್ಷ ಣ್ಮಾತಿರಿಷ್ಯಶ್ವ ಸುಪ್ರೀತ ನಮೊ 3 ಮೌನಿವರ್ಯ ವರದೇಂದ್ರ ಪಾದಾಂಬುಜ ರೇಣು ವಿಭೂಷಿತ ಪಾಲಯಮಾಂ ಧೇನು ನಿಧೆ ದೇವಾಂಶಜ ಪರಮತ ಪಾವಕ ಪಾಲಯಮಾಂ 4 ಮಾನವಿ ಕ್ಷೇತ್ರನಿಕೇತನ ಸನ್ನುತ ಮಾನಿತ ಗುರುವರ ಪಾಲಯ ಮಾಂ ಧೇನುಪಲ ವಿಜಯರಾರ್ಯ ಕೃಪಾನ್ವಿತ ಧೀನೋದ್ಧರಣ ಫಾಲಯಮಾಂ ಮಾನದಿ ಕ್ಷೇತನಿಕೇತನ ಸನ್ನುತ ಮಾನಿತ ಗುರುವರ ಪಾಲಯಮಾಂ ಜ್ಞಾನನಿಧೆ ದೇವಾಂಶಜ ಪರಮತ ಪಾವಕ ಪಾಲಯ ಮಾಂ 5 ಶೌರಿಕಥಾಮೃತ ಸಾರಗ್ರಂಥ ಕೃತ ಸೂರಿ ಕುಲೋತ್ತುಮ ಜಯ ಜಯಭೋ ಧಾರುಣಿ ಸುರಪರಿವಾರ ನಮಿತ ಪದ ಚಾರುಸ್ತಂಭಾಲಯ ಜಯ ಜಯ ಭೀ 6 ಮಂದವೃಂದ ಮಂದಾರ ಭೂಜನತ ಬಂಧೋ ಭಯಾಪಹ ಜಯ ಜಯ ಭೋ ನಂದಜ ಶಾಮಸುಂದರಾಂಘ್ರಿ ಅರ ವಿಂದ ಮರಂದುಣಿ ಜಯ ಜಯ ಭೋ 7
--------------
ಶಾಮಸುಂದರ ವಿಠಲ
ಮಾನಸಾಂಡದಿ ಕಾಂಬೊನ್ಯಾರೇ | ನಮ್ಮಮೌನಿ ಧ್ಯಾನಾಗಮ್ಯ ಕೃಷ್ಣಮೂರುತಿಯೇ ಪ ಗುಂಗುರು ಕುಂತಲ ಶೋಭಾನೇ | ನಮ್ಮಗಂಗಾ ಜನಕ ಗೋಪಿರಂಗಾನೇ |ಮಂಗಳ ಮಹಿಮ ಶುಭಾಂಗಾನೇ | ಹೃದ-ಯಾಂಗಣದಲಿ ನಿಂತು ಕುಣಿವಾನೇ 1 ಕೊಳಲ ಕೈಯಲಿ ಧರಿಸ್ಯಾನೇ | ಚಂದ್ರಬೆಳಕಾಮಿತದಲಿ ಕುಣಿದಾನೇ |ಕಲಕುತ್ತಲೆನ್ನಯ ಮನವಾನೇ | ಹರಿಚಳಕದಿ ಕುಣಿವಂತೆ ಮಾಡ್ಯಾನೇ 2 ಅಗಣಿತ ಮಹಿಮ ಲಾವಣ್ಯಾನೇ | ಹರಿಸುಗುಣಿ ಕಾಲಲಿ ಗೆಜ್ಜೆ ಕಟ್ಯಾನೇಝಗಿ ಝಗಿಸುವ ಹಾರ ಪದಕಾನೇ | ಕೃಷ್ಣಮಘವನಾರ್ಚಿತ ದಿವ್ಯ ಚರಣಾನೇ 3 ಯಾದವರೊಡೆಯನು ಬಂದಾನೇ | ಗುರುವಾದಿರಾಜರ ಮಾತು ಸಲಿಸ್ಯಾನೇಸಾದರದಲಿ ಕೈಯ್ಯ ಪಿಡಿದಾನೇ | ಎನ್ನಮೋದದಿ ಕುಣಿವಂತೆ ಮಾಡ್ಯಾನೇ 4 ಗೋವಳರೊಡಯನು ನಗುತಾನೇ | ಹೃದಯನೋವನು ಕಳೆಯಲು ಬಂದಾನೇಸಾವನೀಪರಿ ಕರುಣಿ ಕಳೆದಾನೇ | ಗುರುಗೋವಿಂದ ವಿಠಲ ಹಯಾಸ್ಯಾನೇ 5
--------------
ಗುರುಗೋವಿಂದವಿಠಲರು
ಶರಣೆಂಬೆನೋ ಪರಮಾತ್ಮನೆ ನೀ ಕರುಣಿಸೆನ್ನನು ಪ ಶರಣಾಶ್ರಯ ಹಿತಾಯ ಸತ್ಯ ಸುಗುಣಿಯನಿನ್ನು ಅ.ಪ ಪರಮಾನಿನಿಯರ ಸಂಗದೊಳಗೆ ಯಿರಿಪುವುದೂ ಮನ ನರಸಿಂಹನಾಮ ಖಡ್ಗವೀಯೊ ಬೇಡ್ವೆ ನಾನದನಾ 1 ಸಕಲಾರ್ಥಮೆನಗೆ ಅರುಹಿ ಕಾಯೊ ಸರ್ವಾರ್ಥ ಫಲಪ್ರದಂ ಸುಕೃತಾರ್ಯ ಸೇವೆಯೊಳಿರಿಸಿ ಸಲಹೊಸರ್ವಸ್ಯಾತ್ಪರಂ2
--------------
ಚನ್ನಪಟ್ಟಣದ ಅಹೋಬಲದಾಸರು
ಶ್ರೀ ನರಸಿಂಹ ಮಂತ್ರ ಜಯ ಜಯ ಜಯ ನರಸಿಂಹ ಜಯ ಜಯ ಮಹಾಲಕ್ಷ್ಮೀರಮಣ ಜಯ ನಿರಾಮಯ ಸರ್ವೋತ್ಕøಷ್ಟ ಆಹ ಜಯ ಕಮಲಜ ಮೃಡಾದ್ಯಮರವಂದ್ಯನೆ ನಮೋ ಭಯಬಂಧಹರ ಭಕ್ತ ಜನರ ರಕ್ಷಕ ಸ್ವಾಮಿ ಪ ಅರದೂರ ಗುಣಪರಿಪೂರ್ಣ ಉಗ್ರವೀರನೆ ಮಹಾವಿಷ್ಣು ಉರುಕಾಂತಿ ಸರ್ವತೋಮುಖನೆ ಆಹ ನರಸಿಂಹ ಭಯಕರಾಶ್ರಿತಜನರ ರಕ್ಷಕ ಶರಣಾದೆ ನಿನಗೆ ನಾ ಮೃತ್ಯುಮಾರಕ ನಮೋ 1 ಸೃಷ್ಟಾ ಪಾತಾ ಅತ್ತ ತ್ರಾತಾ ದುಷ್ಟ ದೈತ್ಯರಿಗತಿ ಕ್ರೂರ ಶ್ರೇಷ್ಠ ಅಸಮಬಲರೂಪ ಆಹ ಇಷ್ಟಭಕ್ತನ ಕಾಯೆ ಕಂಬದಿಂದಲಿ ಬಂದು ತ್ಕøಷ್ಟ ಪ್ರಜ್ವಲಿಪ ನಖದಿ ಸೀಳ್ದೆ ಭ್ರಷ್ಟನ 2 ವಿಶ್ವಸ್ಥ ಬಹಿರಂತವ್ರ್ಯಾಪ್ತ ವಿಶ್ವ ವಿಷ್ಣು ವಷಟ್ಕಾರ ಸರ್ವಜ್ಞ ನಿರ್ದೋಷ ಸುಗುಣಿ ಆಹ ಅಮಿತ ಸಕಾಂತಿಯಿಂ ಜ್ವಲಿಸುವೆ ವಿಶ್ವತೋಮುಖ ಸರ್ವಸಾಕ್ಷಿಸ್ವತಂತ್ರ 3 ನರನಲ್ಲ ನರರೂಪಧಾರಿ ನೀ ಮೃಗವಲ್ಲವು ಸಿಂಹವದ್ರೂವ ನರಮೃಗಗಳಲಿ ನೀ ಸಮನು ಆಹ ಧರೆ ದಿವಿ ಪಾತಾಳ ಜಂತು ಸರ್ವಾಂತಸ್ಥ ಉರು ಜ್ಞಾನ ಬಲರೂಪ ಅನಂತ ನೀ ಏಕ 4 ನ ಎಂದರೆ ಸರ್ವವಂದ್ಯ ರ ಎಂದರೆ ಸುಖ ಜ್ಞಾನ ಸಿಂ ಎಂದರೆ ಗುಣಸಾರ ಆಹ ಇಂದಿರಾಪತಿ ಮಹದೈಶ್ವರ ರೂಪನು ಹ ಎಂದರೆ ನೀನು ಪೂರ್ಣ ನಿರ್ದೋಷ 5 ಭೂತಾದಿ ದುಷ್ಟ ಗ್ರಹಗಳ ಖದ್ರೂಜಾದಿ ಸರ್ವ ವಿಷವ ನೀ ದಯದಿ ಪರಿಹರಿಪೆ ಆಹ ಭಕ್ತ ಜನರಿಗೆ ನೀ ಶುಭವಿತ್ತು ಅಕಾಲ ಮೃತ್ಯುವ ತರಿವ ರಕ್ಷಕ ನಮೋ ಎಂಬೆ 6 ದ್ವಾತ್ರಿಂಶ ಚತುರ್ವಿಂಶಾಕ್ಷರದ ಮಂತ್ರ ಗಾಯತ್ರಿ ಪ್ರತಿಪಾದ್ಯ ವೃತತಿಜಾಸನ ಮಂತ್ರ ಋಷಿಯು ಆಹ ಅಧಿಕಾರಿಗಳು ಇದನು ಶ್ರವಣ ಪಠಣ ಮಾಡೆ ಭೀತಿ ಮೋಹವÀ ಬಿಡಿಸಿ ನಿಖಿಳೇಷ್ಟವೀವೆ 7 ಜಯ ಜಯ ನರಸಿಂಹಸ್ವಾಮಿ ಜಯ ಜಯ ಸರ್ವಜ್ಞ ಭೂಮನ್ ಜಯ ಮಹಾ ತೇಜೋಬಲವೀರ್ಯ ಆಹ ಜಯ ಪುರುಷೋತ್ತಮ ವೇಧಾದಿ ಸುರರಿಂದ ಇಜ್ಯಪೂಜ್ಯನು ದೃಢಭಕ್ತಿಯಿಂ ಮುದದಿ 8 ನಾರ ಉರು ಗುಣಸಿಂಧು ನರಸಿಂಹ ಸುಪ್ರೀತನಾಗೊ ಚಿರಜ್ಞಾನ ಭಕ್ತಿಯ ಸತತ ಆಹ ಪರಮರಿಲ್ಲದ ಬಲಿ ನಿನ್ನಲಿ ಧ್ಯಾನ ತೀವ್ರ ಪ್ರೇರಿಸು ಎನಗೆ ಅನಂತ ಅನುತ್ತಮ 9 ಪ್ರೋದ್ಯಾರ್ಕನಿಭ ದೀಪ್ತವಾದ ವರ್ತುಲ ಉರು ನೇತ್ರತ್ರಯವು ಹಸ್ತದ್ವಯವು ಜಾನುವರೆಗೂ ಆಹ ಸುದರ್ಶನಿ ಶಂಖಿ ಮಹಾಲಕ್ಷಿಯುತ ಕೋಟಿ ಆದಿತ್ಯಾಧಿಕತೇಜ ಉತ್ಕøಷ್ಟ ಶಕ್ತ 10 ಕಮಠ ಕ್ರೋಡ ನೃಹರಿ ಮಾಣವ ಪರಶ್ವಿ ಸುಧನ್ವಿ ಬುದ್ಧ ಕಲ್ಕಿ ಶರಣ ಆಹ ವನರುಹನ ತಾತ ಪ್ರಸನ್ನ ಶ್ರೀನಿವಾಸ ಅನಿಷ್ಟಹ ಇಷ್ಟದ ಎನಗೆ ದಯವಾಗೊ 11
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಸತ್ಯವ್ರತರು ಶಿರಿ ಸತ್ಯವ್ರತಸುರ ತರುವೆ ನಿಮ್ಮಯಪಾದವರಶತ ಪತ್ರಕ್ಕೆಭಿನಮಿಪೇ ಪ ಪರಮ ದುರ್ಮತದ್ವಾಂತ ಭಾಸ್ಕರವರಸುಜ್ಞಾನಾಕಾಂಕ್ಷಿಯಾಗಿಹೆನಿರತ ಶ್ರೀ ಮದಾನಂದ ತೀರ್ಥರವರಸು ಭಾಷ್ಯಾಮೃತವ ನುಣಿಸೋ ಅ.ಪ. ಪೊಗಳಲೆನ್ನಳವೆ ನಿಮ್ಮಗಣಿತ ಮಹಿಮೆಯಜನದಿ ವಿಖ್ಯಾತರೆ ಗುರುವೇ |ಸುಗುಣಿತವ ಭಕ್ತರ್ಗೆ ಕಾಡುವವಿಗಡ ಅಪಸ್ಮಾರ ಕುಷ್ಠವುಮಿಗಿಲು ರೋಗಾದಿಗಳ ಕಳೆಯುತಬಗೆ ಬಗೆಂದಲಿ ಸ್ತುತ್ಯರಾಗಿಹ 1 ಸರಿತು ಪ್ರವಹದಿ ಎರಡೆರಡು ಸುತರ್ಗಳಹರಣ ಪೋಗಲು ಖೇದದೀ |ವರದ್ವಿಜನು ರಘುನಾಥಾಖ್ಯ ಭಕ್ತಿಲಿಶಿರಿಸತ್ಯವ್ರತರನು ಸೇವೆಗೈಯ್ಯುಲುಅರಿತು ಸಂತಾನಾಷ್ಟ ಕಂಗಳತ್ವರಿತ ಕರುಣಿಸಿ ಪೊರೆದಗುರುವರ2 ಶಿರಿಸತ್ಯ ಸಮಧರೀ ವೃಂದಾವನದ ಬಳಿಶಿರಿಮನ್ಯಾಯಾಸುಧೆ ಪಠಿಸೇ |ಗುರುವರರು ಸಂತುಷ್ಟ ಪಡುತಲಿಶಿರವತೂಗಲು ಅಂತರಂಗದಿವರಸುವೃಂದಾವನವು ತನ್ನಯಶಿರವ ತೂಗುತ ತೋರಿತಚ್ಛರಿ 3 ವಾದಿಭಹರ್ಯಕ್ಷ ಮೇಧಾವಿ ವಿಭುಧೇಡ್ಯಸುಧಾಪಿವೃತಿ ಕರ್ತಾರ |ಮೇಧಿನಿಯ ಸಂಚರಿಸಿದುರ್ವಾದಿಗಳ ಬಲು ಖಂಡಿಸುತಭೋಧಿಸುತ ತತ್ವಗಳ ಸುಜನಕೆಹಾದಿಮೋಕ್ಷಕೆ ತೋರ್ದ ಯತಿವರ 4 ವೇದವಿದ್ಯಾಖ್ಯ ಸತ್ಕರಜರೆಂದೆನಿಸುತ್ತಮೋದ ತೀರ್ಥರ ಸೇವೆಗೈದೂ |ಹಾದಿ ಚರಿಸುತ ಸಾಂಗ್ಲಿಕ್ಷೇತ್ರದಿಆದರದಿ ವೃಂದಾವನವ ಪೊಕ್ಕುನಾದಗುರು ಗೋವಿಂದ ವಿಠಲನಮೋದ ಧ್ಯಾನಾಸಕ್ತ ಗುರುವರ 5
--------------
ಗುರುಗೋವಿಂದವಿಠಲರು
ಸುಗುಣಿಯರಿಬ್ಬರು ಬಂದು ಹಗರಣವ ಮಾಡಿದರವ್ವ ಹಗರಣವ ಮಾಡಿದರವ್ವನಗÀಧರನ ಮುಂದೆ ನಾಚಿಕೆ ಇಲ್ಲವ್ವ ಪ. ಸಿಟ್ಟಿಲೆ ತನ್ನೆದೆಯ ಗಟ್ಟಸಿದಳವ್ವತಾ ಗಟ್ಟಿಸಿದಳವ್ವಕಷ್ಟದಿ ಭೀಷ್ಮಿಯುನಿಟ್ಟುಸಿರು ಹಾಕಿದಳವ್ವ1 ಇತ್ತ ದೂತೆಯು ತಾಥಟ್ಟನೆ ಬಂದಳವ್ವತಾ ಥಟ್ಟನೆ ಬಂದಳವ್ವಇಷ್ಟ ಏನೆಂದು ನೆಟ್ಟನೆ ಕೇಳಿದಳವ್ವ2 ಎಷ್ಟು ಹೇಳಲಿ ಈಕೆಎದೆಗಿಚ್ಚಿನವಳವ್ವಭಾವೆ ಎದೆಗಿಚ್ಚಿನವಳವ್ವÀ ಕೃಷ್ಣಗೆ ಕರೆದು ಕೊಟ್ಟಳು ವೀಳ್ಯವವ್ವ 3 ಕೆಟ್ಟ ರುಕ್ಮಿಣಿಯು ಕಲಹಗಾರುತಿಯವ್ವಬಲು ಕಲಹಗಾರುತಿಯವ್ವಅಗ್ಗಿಷ್ಟಿಗೆ ಆದಳು ಅತಿ ಸಿಟ್ಟಿನ ಹುಲಿಯವ್ವ4 ಚಿಕ್ಕ ಚೇಳೆಂದು ಬಲು ಅಕ್ಕರೆ ತೋರಿದೆನವ್ವ ಬಲು ಅಕ್ಕರೆ ತೋರಿದೆನವ್ವಭಾವೆಯ ಉಕ್ಕುಹೇಳಲು ಎನಗೆ ಶಕ್ಯ ಇಲ್ಲವ್ವ5 ಉರಗ ಹಿರಿಯದೆಂದು ಎರಗೊದೇನವ್ವಅದಕೆ ಎರಗೋದೆನವ್ವ ಉರವಣಿಗೆ ರುಕ್ಮಿಣಿಯಮುರಿಯಲಿಲ್ಲವ್ವ 6 ಕೆಂಜಿಗ ಕಚ್ಚಲು ಅಂಜೋರೇನವ್ವಅದಕಂಜುವರೇನವ್ವಭಾವೆಯ ಮಂಜುಳವಾಣಿ ಮೂಲೆಗೆ ಬೀಳಲೆವ್ವ 7 ಹದ್ದುಕುಕ್ಕಿದರೆ ಗದ್ದರಿಸೋರೇನವ್ವಅಂಜಿ ಗದ್ದರಿಸುವರೇನವ್ವರುಕ್ಮಿಣಿಯ ಮುದ್ದು ಮಾತುಗಳಸದ್ದಡಗಲಿಲ್ಲವ್ವ 8 ಒಳ್ಳೆಯವಳಲ್ಲ ಭಾವೆಮುಳ್ಳಿನಂಥವಳವ್ವಬಲುಮುಳ್ಳಿನಂಥವಳವ್ವಇವಳ ತಳ್ಳಿ ಮಾತುಗಳ ತಾಳಲಾರೆನವ್ವ9 ಸುಳ್ಳಿ ರುಕ್ಮಿಣಿ ಶೂಲದಂಥವಳವ್ವಬಲು ಶೂಲದಂಥವಳವ್ವಕಳ್ಳ ಮಾತುಗಳೆಷ್ಟುಕಲಿತಾಡುವಳವ್ವ10 ಮಸೆದ ಕತ್ತಿಯಂತೆ ಎಸೆವಳು ಭಾವೆಯವ್ವಬಲು ಎಸೆವಳು ಭಾವೆಯವ್ವಇವಳ ಹೆಸರು ಅಡಗÀಲಿಎನ್ನ ಉಸಿರು ಮುಟ್ಟಿಲಿಯವ್ವ11 ಬಾಲೆ ರುಕ್ಮಿಯು ಶೂಲದಂಥವಳವ್ವಬಲು ಶೂಲದಂಥವಳವ್ವಕಾಲು ಕೆದರಿಎನ ಮ್ಯಾಲೆ ಬಂದಿಹಳವ್ವ 12 ವೈರಿ ಸವತಿಯುಎನ್ನ ಸರಿಯಳೇನವ್ವ 13 ಶ್ರೇಷ್ಠಳಾದರೆ ನೀಉಚಿತವ ಇಟ್ಟುಕೊಳ್ಳವ್ವನೀ ತೊಟ್ಟುಕೊಳ್ಳವ್ವಇಷ್ಟೊಂದು ಸೊಕ್ಕುಕಟ್ಟಿಡಿಸುವೆನವ್ವ 14 ಸೊಕ್ಕು ಸೊಕ್ಕೆನಲಿಕ್ಕೆ ತಕ್ಕವಳೇನೆ ಭಾವೆಇವಳು ತಕ್ಕವಳೇನೆ ಭಾವೆಇವಳ ಚಕ್ಕಂದಕ್ಕೆ ಹರಿಯುಅಕ್ಕರ ಬಡುವನವ್ವ15 ಅಕ್ಕಸದ ಮಾತು ಕೇಳಲಾರೆನವ್ವನಾ ಕೇಳಲಾರೆನವ್ವಇವಳ ಉಕ್ಕಸಕೆ ಕೃಷ್ಣಧಕ್ಕನೆ ನಾಚಿದನವ್ವ16 ಮುಂಜೆರಗು ಹಿಡಿದು ಗುಂಜಿಸಿ ಎಳೆವೆನವ್ವನಾ ಎಳೆವೆನೆವ್ವಪಂಜರದ ಗಿಳಿಯಂತೆಅಂಜಲಿ ಇವಳವ್ವ17 ಕೈ ಹಿಡಿದು ಕೆಳಗೆ ಎಳೆವೆನವ್ವನಾ ಕೆಳಗೆ ಎಳೆವೆನವ್ವಭಯವೇನವ್ವ ರುಕ್ಮಿಣಿಯ ಭಯವೇನವ್ವಅಯ್ಯೊ ಅಂಜಲ್ಯಾತಕೆ ಸೈ ಸೈಯವ್ವ18 ಎಷ್ಟು ಫಾತುಕಳೆ ನಷ್ಟಳು ಭಾವೆಯವ್ವಬಲು ನಷ್ಟಳು ಭಾವೆಯವ್ವಕೃಷ್ಣನ ತೊಡೆಬಿಟ್ಟು ಇಳಿಸುವೆನವ್ವ19 ಭಾಳೆ ಘಾತುಕಳು ರುಕ್ಮಿಣಿಯವ್ವನೀ ಕೇಳೆ ರುಕ್ಮಿಣಿಯವ್ವಗೈಯ್ಯಾಳಿಯ ತೊಡೆಬಿಟ್ಟು ಇಳಿಸುವೆನವ್ವ20 ಚಂದ್ರನಿಲ್ಲದ ಚಿಕೆÀ್ಕ ಚಂದವೇನವ್ವಅದು ಚಂದವೇನವ್ವನಿಜಳೆ ಎನ್ನಮ್ಯಾಲೆಬಂದಿಹಳ್ಯಾತಕವ್ವ21 ದಾರ ಮಲ್ಲಿಗೆ ನಡುವೆ ತೋರಿದಂತವ್ವಅದು ತೋರಿದಂತವ್ವಇವಳ ಹಿರಿತನವೆಲ್ಲವಅರಿಯೆನವ್ವ22 ಸಿರಿರಮಿ ಅರಸಗೆ ಸರಿಯಿಬ್ಬರು ನೀವÀವ್ವನೀವು ಸರಿಯಿಬ್ಬರವ್ವಬರಿಯೆ ಕರಕರೆಯಹಿರಿಯರಲ್ಲವ್ವ 23
--------------
ಗಲಗಲಿಅವ್ವನವರು
ಸುಜನ ಜನ ವತ್ಸಲನ ಸೋಮ ಸೂರ್ಯರ ನಯನ ಸುಗುಣಿ ಗುಣ ಗಂಭೀರನ |ಭುಜಗ ಭೂಷಣ ಕಂಕಣನ ಭುವನ ರಕ್ಷಕನ ಭುಜ ಚತುಷ್ಕಾಯುಧಗಳಿಂದೆಸೆವ ಶುಭ್ರ ರದನ ವಿಜಯ ಮೂರುತಿ ವಿಘ್ನವಿಪಿನ ದಾಹಕನ ವಿಘ್ನೇಶ್ವರಗೆ ಸಹಸ್ರನಮನ 1 ನೀನೆ ಶಾಶ್ವತ ರೂಪ ನಿನ್ನ ಕೀರ್ತಿ ಪ್ರತಾಪ ಖೂನ ಕಂಡುಉಸುರೆನೆಂದರೆ ಶ್ರುತಿಗಳಾಲಾಪ ಮೌನಗೊಂಡವು ಮಿಕ್ಕ ಶೇಷಾದಿಕರ ಸ್ಫೂರ್ತಿ ನಿಂತು ಹೋಗಿರಲು ಗಣಪ | ........................... ನಗೇಶನ ಮಾರ್ಗದ ಕೀಲ ಕೃಪೆ ಮಾಡಿ ತೋರಿದರು ಶ್ರೀನಾಥ ಶ್ರೀಹರಿಯ ಚಾರಿತ್ರ್ಯ ಪೇಳಿಸಲಿಕೆ ಆಧಾರ ನೀನೇ ಸತ್ಯ 2 ಇಂತು ವಿಘ್ನೇಶ್ವರನ ಬಲಗೊಂಡ ಬಳಿಕ ಸಮನಂತರದೊಳಾ ಶಾರದಾಂಬಿಕೆ ಶ್ರೀಪಾದ ಅಂತರಂಗದ ಪೀಠದಾಸನಕೆ ಕರಕೊಳಲು ಬಂದೊದಗು ಜಿವ್ಹಾಗ್ರದಿ | ನಿಂತು ನಡಿಸುವ ನಿನ್ನ ಶಕ್ತಿ..................................... ವಂತೆ ವಿಶ್ರಾಂತೆ ಪಾವನ ಮೂರ್ತೆ ಪ್ರಖ್ಯಾತೆ ವರದಾತೆ ಲೋಕ ಮಾತೆ 3 ಸುಜನ ಭುಜಗ ತ್ರಿಜಗ ಜೀವರ ಜನನಿ ತ್ರಿತಾಪ ಸಂಹಾರಿಣಿ ತ್ರಿದೇಹ ಸಂಚಾರಿಣಿ | ದ್ವಿಜತುರಂಗ ಗಮನಿ ದಿವ್ಯಾಂಬರಾಭರಣಿ ರಜ .........................ಗಜಗಮನಿ ಗಂಧರ್ವಗಾನ ಲೋಲಿನಿ ವಾಣೀ ರತ್ನ ಕೃತಾಂಗಿ ಅನುಕೂಲಿನಿ 4 ಹಸ್ತಿ ಕೃಮಿ ಕೀಟ ಭೃತ್ವಲಯದೊಳಗುಳ್ಳ ...................................... ಕೇವಲ ಪರಬ್ರಹ್ಮ ಸ್ಫುರಣಸ್ಫೂರ್ತಿಯು ತೋರದಾರಿಂದ ಗುರುವಿನ್ಹೊರತು 5 ಜಲಧಿ ಎಂದು ಮೊರೆ ಹೊಕ್ಕೆ ನಿನ್ನ ಶ್ರೀ ಚರಣ .......... ಮಾಡಿ ರಚಿಸುವ 6
--------------
ಭೀಮಾಶಂಕರ
ಸ್ತುತಿಸಿ ಪ್ರಾರ್ಥಿಪೆ ನಿನ್ನನು ಸರಸ್ವತಿ ಸ್ತುತಿಸಿ ನಮಿಪೆ ನಿನ್ನನು ಪ. ಸ್ತುತಿಸಿ ನಮಿಸಿ ನಿನ್ನ ಜತನ ಮಾಡುತ್ತ ವದನದಿ ಸ್ತುತಿಸುವ ಭಾಗವತರನು ತೋರಮ್ಮಾ ಅ.ಪ. ಅಕ್ಷರಕ್ಷರ ರೂಪದಿ ಶ್ರೀಹರಿಯಾ ಅಕ್ಷಯ ನಾಮವನು ಸ್ತುತಿಯ ಮಾಳ್ಪ ಸುಕ್ಷೇಮ ಪಡೆದಿಹ ಮಾತೆ ಸರಸ್ವತಿ ಪ್ರತಿ ಅಕ್ಷರವನು ಅರಿವಾ ಭಾಗ್ಯವ ತೋರೆ 1 ರಾಗರಾಗದಿ ಭಜಿಪೆ ಶ್ರೀ ಹರಿಯಾ ಅನು ರಾಗಕೆ ಪಾತ್ರಳಾಗಿ ವಲಿಸಿಹೆ ಭಾಗವತಾಗ್ರಣಿ ಶ್ರೀಹರಿ ನಾಮವ ಶೀಘ್ರದಿ ಸ್ತುತಿಸುವ ಭಾಗವತರ ತೋರೆಂದು 2 ಅಗಣಿತ ಮಹಿಮೆಯನೂ ಬಲ್ಲವಳು ನೀ ಸುಗುಣಿ ಸರಸ್ವತಿಯೆ ಶ್ರೀ ಶ್ರೀನಿವಾಸನ ಅಗಣಿತ ಗುಣಗಳ ಪೊಗಳುವ ಮತಿಯಿತ್ತು ಅಘಹರ ಹರಿಭಕ್ತರಾ ಲಗುಬಗೆಯಲಿ ತೋರೆ 3
--------------
ಸರಸ್ವತಿ ಬಾಯಿ
ಇನ್ನಾದರೂ ಹರಿಯ ನೆನೆಯೊ ನೀ ಮನುಜಾ |ಮುನ್ನಾದ ದುಃಖಗಳು ನಿಜವಾಗಿ ತೊಲಗುವುವು ಪ.ಊರೂರ ನದಿಗಳಲಿಬಾರಿ ಬಾರಿಗೆ ಮುಳುಗಿ |ತೀರದಲಿ ಕುಳಿತು ನೀ ಪಣೆಗೆನಿತ್ಯ ||ನೀರಿನಲಿ ಮಟ್ಟಿಯನು ಕಲಸಿ ಬರೆಯುತ ಮೂಗು - |ಬೇರನ್ನು ಪಿಡಿದು ಮುಸುಕಿಕ್ಕಲೇನುಂಟು 1ನೂರಾರು ಕರ್ಮಂಗಳನ್ನು ಡಂಭಕೆ ಮಾಡಿ |ಆರಾರಿಗೋ ಹಣದ ದಾನಕೊಟ್ಟು |ದಾರಿದ್ರ್ಯವನು ಪಡೆದು ತಿರಿದಿಂಬುವುದಕೀಗ |ದಾರಿಯಾಯಿತೆ ಹೊರತು ಬೇರೆ ಫಲವುಂಟೇ? 2ಕಾಡುದೈವಗಳನ್ನು ಚಿನ್ನ - ಬೆಳ್ಳಿಗಳಿಂದೆ |ಮಾಡಿಕೊಂಡವರ ಪೂಜೆಯನೆ ಮಾಡಿ |ಕಾಡುಕಳ್ಳರು ಬಂದು ಅವುಗಳನು ಕೊಂಡೊಯ್ಯೆ |ಮಾಡಿಕೊಂಡಿರ್ದುದಕೆ ಬಾಯಬಡಕೊಳ್ಳುವೆ 3ಮಗನ ಮದುವೆಯು ಎಂದು ಸಾಲವನು ಮಾಡಿ ನೀ |ಸುಗುಣಿಯೆನ್ನಿಸಿಕೊಳಲು ವ್ಯಯ ಮಾಡಿದೆ ||ಹಗರಣವ ಪಡಿಸಿದರೆ ಸಾಲಗಾರರು ಬಂದು |ಬಗೆಬಗೆಯೊಳವರ ಕಾಲ್ಗೆರಗಿ ಬಿದ್ದಿರುವೆ 4ಕೆಟ್ಟುವೀ ಕೆಲಸಗಳ ಮಾಡಿದರೆ ಫಲವೇನು ? |ತಟ್ಟನೇ ಶ್ರೀಹರಿಯ ಪದವ ನಂಬಿ ||ದಿಟ್ಟ ಪುರಂದರವಿಠಲನೆ ಎಂದರೆ |ಸುಟ್ಟು ಹೋಗುವುವಯ್ಯ ನಿನ್ನ ಕಷ್ಟಗಳು 5
--------------
ಪುರಂದರದಾಸರು
ಕಂಡೆ ಗುಣಗಣ ಸಾಂದ್ರಳಕೈಕೊಂಡೆ ಮುಕ್ತಿ ಫಲಗಳ ಪ.ಶೃತಿ ತತಿಗಳಿಂದ ಯುಕ್ತಳಲಕ್ಷ್ಮೀಪತಿಯ ದಯಕೆ ಪೂರ್ಣ ಪಾತ್ರಳಅತಿ ಭಕ್ತಿಯಿಂದ ಯುಕ್ತಳಮಧ್ವಮತಕ ಹಿತದಿಂದ ವ್ಯಾಪ್ತಳ 1ವ್ಯಾಳಾಶಯನನ ಭಕ್ತಳಗುಣಹೇಳಿದೆಮ್ಮ ಸುಶಕ್ತಳೆಏಳು ಲೋಕದಿ ವ್ಯಾಪ್ತಳಕರುಣಾಳು ಎನಿಸುತಿಪ್ಪಳ 2ರಮಿಯ ರೂಪಳೆ ರುಕ್ಮಿಣಿಯದಿವ್ಯ ಪ್ರಮೇಯ ತಿಳಿಸಿದೆ ಭಾಮಿನಿಅಮಿತ ಮಹಿಮಳೆಕಾಮಿನಿನಮಗೆ ಸುಮತಿದಾತಳೆ ಸುಗುಣಿ ನೀ 3
--------------
ಗಲಗಲಿಅವ್ವನವರು
ಚಿಂತೆಗೆಣಿಕೆ ಇಲ್ಲದಂತಾಗಿ ಎನ್ನಂತರಂಗದ ಕ್ಲೇಶಕೆಂತೌಷಧ ರಂಗ ಪ.ಒಂದು ದೊರೆತರೆ ಇನ್ನೊಂದಾಗಲುಬೇಕುಮಂದಿರವಿರಲು ಮೇಲಟ್ಟ ಬೇಕುಮಂದಮತಿಸತಿಇನ್ನೊಬ್ಬ ಸುಗುಣಿ ಬೇಕುಎಂದೆಂದು ಬೇಕೆಂಬ ನುಡಿಗುಂದದು ರಂಗ 1ಅವಭೋಗಿ ಅವಗಿಂತ ಮೀರ್ವೆನೆಂಬುವ ಹವಣುಅವನ ವಿದ್ಯಕೆ ಹೆಚ್ಚಲೆಂಬ ಹವಣುತವಕದಿ ಸಂಪದ ಮೇಳವಿಸುವ ಹವಣುಅವಿರಳ ಹವಣಕೆ ಕಡೆಗಾಣೆ ರಂಗ 2ರೂಢಿಲಿ ಸಿರಿವಂತರ ಮುಂದೆಖೋಡಿಮಾತಾಡಿ ಗುದ್ದಿಸಿಕೊಂಡ ನರನಂತೆನೋಡ ಪ್ರಸನ್ವೆಂಕಟೇಶಅಲ್ಲದಕೃತ್ಯಮಾಡಿ ಕ್ಲೇಶವನುಂಡೆ ನಿನ್ನ ಬೇಡದೆ ರಂಗ 3
--------------
ಪ್ರಸನ್ನವೆಂಕಟದಾಸರು
ದಿಟ್ಟ ಮುಖ್ಯಪ್ರಾಣನೆ ಜಗಜಟ್ಟಿ ಬಾ ಸುತ್ರಾಣನೆಶ್ರೇಷ್ಠದನುಜಘರಟ್ಟ ಸುಗುಣವಿಶಿಷ್ಟ ಭಕ್ತಶಿಖಾಮಣಿ ಪ.ವಾಯುಪುತ್ರ ವಿಚಿತ್ರ ಬಲಿಸುರರಾಯರಾಯರ ಗಂಡನೆಪ್ರೀಯರಾಮಪದಾಬ್ಜಮಧುಕರ ಮಾಯಿಕದನಪ್ರಚಂಡನೆ 1ಶ್ರೀವರೋತ್ತಮ ಹನುಮ ಭೀಮಕೃಪಾವಲಂಬ ಮಹೋಜನೆಪಾವಮಾನಿಪರೇಶ ಪದ್ಮಜ ಭಾವಿ ಯತಿಕುಲರಾಜನೆ2ಶೂರಾಗ್ರಣಿ ಸುಗುಣಿ ಲಕ್ಷುಮಿನಾರಾಯಣದಾಸನೆಭಾರತೀವದನಾರವಿಂದಕೆ ಸೂರ ನಿತ್ಯವಿಲಾಸನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಲಿದಾಡಿದಳ್ ನಳಿನಾಂಬಕಿಒಲಿದೆಮ್ಮನು ಸಲಹಲೋಸುಗ ಪ.ಸುಲಲಿತ ವೀಣಾಪಾಣಿಜಲಜೋದ್ಭವರಮಣಿಸುಗುಣಿಅ.ಪ.ಕೃತೀಶಸುತೆ ಕೃಪಾನ್ವಿತೆಶ್ರುತಿಸಮ್ಮತಗೀತೆಪ್ರತಿರಹಿತೆ ಸತಿಪೂಜಿತೆರತಿಯಾಮಿತ ಶೋಭಿತಳೆ ಧೃತಿ ಸಂಭೃತೆ ಮತಿದಾಯಕಿ 1ಇಭೇಂದ್ರಗಮೆ ವಿಧುಮಂಡಲ-ನಿಭಮುಖಿ ಶಿಖಿಯಾನೆಅಭಯಪ್ರದೆ ಅಖಿಳೇಶ್ವರಿಸುಭಜೆ ಶುಭದೆ ವಿಬುಧೆ ಅಭವೆ ಸದ್‍ವಿಭವಾಸ್ಪದೆ 2ಪರಾಂಬರಿಸು ಪದಾಶ್ರಿತನಪ್ರಭಾಕರಶತಾಭೆಹರಿಲಕ್ಷ್ಮೀನಾರಾಯಣ-ಶರಣೆ ರತುನಾಭರಣೆ ಕರುಣಾರಸವರುಣಾಲಯೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ