ಒಟ್ಟು 1300 ಕಡೆಗಳಲ್ಲಿ , 103 ದಾಸರು , 1133 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ನೋಡಬಲ್ಲಿರೆ ದಿವ್ಯ ಉಡುಪಿ ಕ್ಷೇತ್ರ ಸತ್ಪಾತ್ರ ಪ. ಶ್ರೇಷ್ಠ ಸದ್ಗುರು ಚರಣ ಕಮಲಗಳಿಗಭಿನಮಿಸಿ ಅಷ್ಟು ದೇವತೆಗಳಿಗೆ ಅಭಿವಂದಿಸಿ ಮುಟ್ಟಿ ಹಿರಿಯರ ಚರಣ ಮಹದಾಜ್ಞೆ ಸ್ವೀಕರಿಸಿ ಪಟ್ಟ ಬ್ರಹ್ಮನ ಪದಕೆ ಸಿರಿಹರಿಗೆ ಎರಗಿ 1 ಎಷ್ಟು ಜನ್ಮದ ಫಲವೊ ಈ ಯಾತ್ರೆ ಕೈಕೊಳಲು ಶ್ರೇಷ್ಠ ಶ್ರೀ ಮಧ್ವಮುನಿ ಮತದಿ ಜನಿಸಿ ದಿಟ್ಟ ವೈಷ್ಣವರಾದ ಭಕ್ತಸಂಗವ ಕೂಡಿ ಬಿಟ್ಟು ಮನ ಕಲ್ಮಷಗಳೆಲ್ಲ ಮುಂದೋಡಿ2 ಭರತಖಂಡದಿ ಪುಟ್ಟಿ ವಾಯುಮತ ಪೊಂದಿದಕೆ ಹರುಷದಲಿ ಈ ಯಾತ್ರೆ ಗೈದಲ್ಲದೆ ಹರಿದು ಪೋಗದು ಜೀವದಜ್ಞಾನದಂಧತೆಯು ಪರಮ ಸುಜ್ಞಾನದಾತನ ನೋಡಬನ್ನಿ 3 ಮಧ್ವರಾಯರ ಕರುಣ ಮುದ್ದು ಕೃಷ್ಣನ ಕತೆಯು ಸದ್ವೈಷ್ಣವರ ಸಂಗ ಸನ್ಮೋದ ಲಾಭ ಹೃದ್ವನಜದಲಿಪ್ಪ ಹರಿಯ ಕಾಣಲು ಮಾರ್ಗ ಗೆದ್ದು ಭವದಬ್ಧಿ ದಾಟುವಿರಿ ನೀವಿನ್ನು 4 ಶ್ರೀ ಪತಿಯು ಬಾಲರೂಪದಿ ಇಲ್ಲಿ ನೆಲಸಿಹನು ಗೋಪಿಕಾಜನಪ್ರಿಯ ಗೋಪಿಬಾಲ ಗೋಪಾಲಕೃಷ್ಣವಿಠ್ಠಲನ ನೋಡುವ ಪುಣ್ಯ ಈ ಪರಮ ಪುರುಷನೇ ತಂದಿತ್ತನೆಂದೂ 5
--------------
ಅಂಬಾಬಾಯಿ
* ಮುತ್ತೈದೆಯಾದೆ ನಾ ಮುರವೈರಿ ದಯದಿ ನಿತ್ಯತೃಪ್ತನು ಎನ್ನ ನಿಜಕರವ ಪಿಡಿಯೆ ಪ. ಗುರುಗಳುಪದೇಶಾಂಬುಧಿಯಲಿ ಪುಟ್ಟಿದ ಎನ್ನ ಕರೆದರು ಕಮಲಾಭಿದಾನದಿಂದ ವರುಷವೆಂಟಾಗೆ ಗುರುಜನಕ ಎನ್ನನುದಯದಿ ಸಿರಿವರನೆ ಪೊರೆ ಎಂದು ಒಪ್ಪಸಿದ ಕತದಿಂ1 ಗುರು ಕೊಟ್ಟ ಅಂಕಿತವೆ ಮಾಂಗಲ್ಯವಾಯ್ತೆನಗೆ ಗುರುವಿಟ್ಟ ನಾಮವೆ ತಿಲುಕವಾಯ್ತು ಗುರುಕರುಣವೆಂಬ ಕವಚವ ತೊಟ್ಟೆ ಹರುಷದಲಿ ಗುರು ಪ್ರೀತಿ ಎಂಬ ವಸನವನುಟ್ಟು ಮುದದಿ 2 ಗುರುವು ಬೋಧಿಸಿದ ಭಕ್ತಿ ಜ್ಞಾನ ವೈರಾಗ್ಯ ಸರಿ ಮಾಡಿ ಮೂರು ಕಾಲಿನ ಜಡೆಯನು ಪರಿಪರಿಯ ತತ್ವಗಳೆ ಚೌರಿ ರಾಗುಟಿ ಗೊಂಡ್ಯ ಗುರುವಾಜ್ಞೆ ಎಂಬ ಪುಷ್ಪವ ಧರಿಸಿ ಶಿರದಿ3 ಗುರುವಾಕ್ಯ ಶ್ರವಣವೇ ಕರ್ಣಕುಂಡಲವಾಯ್ತು ಗುರುವಿನ ನಿರ್ಮಾಲ್ಯವೇ ನಾಸಿಕಾಭರಣ ಗುರುನಾಮಗಳೆ ರತ್ನ ಪರಿಪರಿಯ ಹಾರಗಳು ಗುರುಭಕ್ತಿ ಎಂಬ ನಡು ಒಡ್ಯಾಣ ಧರಿಸಿ 4 ಗುರುವು ಪೇಳಿದ ಸದ್ಗುಣಗಳೆ ಪಾದಾಭರಣ ಗುರುವಿನ್ವಾತ್ಸಲ್ಯವೆ ಪರಿಮಳ ದ್ರವ್ಯ ಗುರು ಅನುಗ್ರಹವೆಂಬೊ ಮಂಗಳ ದ್ರವ್ಯಗಳು ಗುರು ಮಾತೆ ಎನ್ನ ಪೋಷಿಸಿ ಹರಿಗೆ ಕೊಡಲು 5 ಹೃದಯವೆ ಲಗ್ನ ಮಂಟಪ ದಿವ್ಯ ಶೃಂಗಾರ ಪದುಮಭವ ಸುರರೆ ನೆರದಿಹ ಬಂಧು ಬಳಗ ಒದಗಿ ಬಹ ಸುಜ್ಞಾನ ಸಂಬಾರ ಸಲಕರಣೆ ಮದನ ಪಿತನೆದುರಿಗೆ ನಿಲಿಸಿ ಧಾರೆಯನೆರೆಯೆ 6 ಗುರುವೆ ಜನನಿ ಜನಕ ಗುರುವೆ ಪುರೋಹಿತರು ಗುರುವಚನವೆಂಬ ಅಕ್ಷತೆ ಎರಚುತಿರಲು ಪರಮ ಜೀವಚ್ಛಾದಿ ಕದ ಪರದೆ ತೆಗೆಯುತಿರೆ ಹರಿಗೆ ಗುಣನಾಮ ಜೀರಿಗೆ ಬೆಲ್ಲ ಎರಚೆ 7 ಸುಮನೊ ವೃತ್ತಿಗಳೆಂಬ ಕಮಲದ್ಹಾರವನ್ಹಾಕಿ ಕಮಲನಾಭನ ಪದಕೆರಗಿ ನಿಲಲೂ ಕಮಲಹಸ್ತವ ಶಿರದ ಮೇಲಿಟ್ಟು ಶ್ರೀ ಕೃಷ್ಣ ಕಮಲೆ ನಿನ್ನನು ಪೊರೆವೆನೆಂಬ ಅಭಯ ಕೊಡಲು 8 ಸೂತ್ರ ಬಂಧಿಸಲು ಮುಕ್ತರಾರಾಧ್ಯ ಲಕ್ಷ್ಮೀಕಾಂತನು ಮುಕ್ತರಾರಾಧ್ಯ ಜಗದ್ಭರ್ತೃ ಮುನಿಜನವಂದ್ಯ ವ್ಯಕ್ತನಾಗಲು ಮನದಿ ಗುರು ಕಟಾಕ್ಷದಲಿ 9 ಗುರು ತಿಳಿಸಿದಂಥ ಸ್ವರೂಪದರ್ಪಣ ನೋಡಿ ಪರಮ ಸೌಭಾಗ್ಯ ಆನಂದಪಡುವೆ ಗುರುಗಳಂತರ್ಯಾಮಿ ಗೋಪಾಲಕೃಷ್ಣವಿಠ್ಠಲ ಗುರುಬಿಂಬನೇ ಎನಗೆ ಸುಖವ ಪಾಲಿಸಲಿ 10
--------------
ಅಂಬಾಬಾಯಿ
* ಸೂರ್ಯ | ನಾರಾಯಣ ರಥ ಸೂರ್ಯ ಪ. ಸೂರ್ಯ ರಥವನು ಭಾರಿ ವಸನಾಭರಣ ತೊಡುತಲಿ ಮೂರುಲೋಕವ ಬೆಳಗು ಮಾಡುತ ಭಾರಿ ತಮವನು ಛೇದಿಸುತ್ತ ಅ.ಪ. ಸಪ್ತ ಹಯೆಗಳ್ ಕಟ್ಟುತ | ಚಕ್ರೇಕ ರಥಕೆ ಸಪ್ತ ಋಷಿಗಳ್ ಪೊಗಳುತ | ಅರುಣ ಸಾರಥ್ಯ ಸಪ್ತ ಜಿಹ್ವನ ತೆರದಿ ತೋರುತ ಸಪ್ತ ಶರಧಿಯ ದಾಟಿ ಸಾರುತ ಸಪ್ತಗಿರಿ ಮೇರು ಸುತ್ತುತಾ ರಥ ಶುಭ ದಿವಸದಲ್ಲಿ 1 ವಾಲಖಿಲ್ಯರು ಎದುರಲಿ | ಅರವತ್ತು ಸಾವಿರ ಓಲಗ ತೊಡುತಲಲ್ಲೀ | ಹಿಂದು ಮುಂದಿನಲಿ ಗಾಲಿದಬ್ಬುವ ರಕ್ಕಸೊಬ್ಬನು ವ್ಯಾಳನೊಬ್ಬನು ರಜ್ಜರೂಪಕೆ ಮೇಲೆ ಯಕ್ಷಕಿನ್ನರರು ಸುತ್ತಲು ಕರ್ಮ ಸಾಕ್ಷಿಯು 2 ಉತ್ತರಾಯಣ ಮಾಘದಿ | ಸ್ನಾನವಗೈದು ಉತ್ತಮರಘ್ರ್ಯ ಕರದಿ | ಪಿಡಿಯುತ್ತ ಭರದಿ ಉತ್ತಮ ಗಂಗಾದಿ ತೀರ್ಥದಿ ಉದಿಸಿ ಬರುವಗೆ ಕೊಡುವ ಕತದಿ ಚಿತ್ತ ನಿರ್ಮಲದಿಂದ ಕಾದಿರೆ ಹತ್ತಿ ಛಾಯೆಯೆ ಸಹಿತ ರಥದಿ 3 ಜಗಚಕ್ಷುವೆನಿಸಿದನೂ | ಧರ್ಮಜಗೆ ವಲಿದು ಮಿಗೆ ಅಕ್ಷಪ್ರದನಾದನೂ | ಸವಿತೃ ನಾಮಕನೂ ಬಗೆ ಬಗೆಯ ಜೀವರುಗಳಯುವ ತೆಗೆದು ಸೆಳೆಯುತ ದಿನದಿನದಲಿ ನಿಗಮಗೋಚರ ನಾಜ್ಞೆಧಾರಕ ಸುಗುಣರಿಗೆ ಸುಜ್ಞಾನವೀಯುತ 4 ಕಮಲ | ಗದೆಯ ಧರಿಸಿ ಕಿಂಕರಾದ್ಯರ ನುತಿಗಳ | ಕೇಳುತ್ತ ಬಹಳ ಶಂಖ ಚಕ್ರಾಂಕಿತನು ಶಿರಿಸಹ ಶಂಕಿಸದೆ ತನ್ನ ಹೃದಯದಲ್ಲಿರೆ ಬಿಂಕ ಗೋಪಾಲಕೃಷ್ಣವಿಠಲಗೆ ಕಿಂಕರನು ತಾನÉಂದು ಪೊಗಳುತ 5
--------------
ಅಂಬಾಬಾಯಿ
ಅ ಸಾಗಿ ಬಾರೋ ಗುರುರಾಘವೇಂದ್ರರಾಯ | ವರ ಸತ್ಕಲುಗೇಯ ಪ ಕೂಗುತ ಕರೆಯುವ ಭಾಗವತರ ಮೊರೆಯ ಲಾಲಿಸೋ ಮುನಿವರ್ಯ ಅ.ಪ ಪಾವನಘನ ವೃಂದಾವನ ಮಂದಿರನೆ ಸದ್ಗುಣ ಬಂಧುರನೇ ಪಾವಮಾನಿಮತಶರಧಿ ಚಂದಿರನೇ ಧರಸಮ ಕಂದರನೇ ಛಾವಣಿಪುರ ಸುಜನಾವಳಿ ಕೋರಿಕೆಯ ಗರೆಯಲು ಶುಭಕಾಯ 1 ಶರಣಜನರು ಮೈಮರೆದು ಕರೆಯಲಾಗಿ ನಿಲ್ಲದೆ ವರಯೋಗಿ | ಭರದಿ ಬಂದು ಕರಪಿಡಿಯುವ ಧೊರೆ ನೀನು ಎಂದರೀತೆವು ಸುರಧೇನು ಗತಿದಾಯಕ ನೀನೆಂದು ಭಜಿಪೆವು ದಯಾಸಿಂಧು 2 ಶಾಮಸುಂದರನ ಪ್ರೇಮವ ಪಡೆದಾತ ಜಗದೊಳು ಪ್ರಖ್ಯಾತ ನೇಮದಿ ಭಜಿಪರ ಕಾಮಿತ ಕೊಡುವಾತ ದೈಶಿಕ ಕುಲನಾಥ ಹೇಮಶಯ್ಯ ಸುಕುಮಾರ ಮಮತೆಯಿಂದ ಮಂತ್ರಾಲಯದಿಂದ 3
--------------
ಶಾಮಸುಂದರ ವಿಠಲ
ಎಚ್ಚರಿಕೆಚ್ಚರಿಕೆ ಪ. ನಿಶ್ಚಿಂತೆಯಲಿ ಹರಿಯ ಧ್ಯಾನವ ಮಾಡುವುದಕ್ಕೆ- ಅ.ಪ ಅಜನು ತೊಳೆದು ಅರ್ಚಿಸುವ ಶ್ರೀಪಾದಕ್ಕೆ ಎಚ್ಚರಿಕೆಧ್ವಜವಜ್ರರೇಖೆಯಿಂದೊಪ್ಪುವ ಪಾದಕ್ಕೆ ಎಚ್ಚರಿಕೆÀವ್ರಜದÀ ಗೋಪಿಯರು ಭಜಿಸುವ ಪಾದಕ್ಕೆ ಎಚ್ಚರಿಕೆಸುಜನರೆಲ್ಲರು ಬಂದು ಎರಗುವ ಪಾದಕ್ಕೆ ಎಚ್ಚರಿಕೆ 1 ಸುರರೆಲ್ಲರು ಬಂದು ಎರಗುವ ಪಾದಕ್ಕೆ ಎಚ್ಚರಿಕೆ ಸರಸಿಜಾಕ್ಷಿ ಸವಿದೊತ್ತುವ ಪಾದಕ್ಕೆ ಎಚ್ಚರಿಕೆಗರುಡನೇರಿ ಮೆರೆವ ಗಂಭೀರ ಪಾದಕ್ಕೆ ಎಚ್ಚರಿಕೆಉರಗನ ಮೇಲೆ ಓಡ್ಯಾಡಿದ ಪಾದಕ್ಕೆ ಎಚ್ಚರಿಕೆ2 ಲಲನೆಯರ ಸ್ತನದಲ್ಲಿ ಕುಣಿದಂಥ ಪಾದಕ್ಕೆ ಎಚ್ಚರಿಕೆಜಲಜಾಸನ ಬಂದು ವಂದಿಪ ಪಾದಕ್ಕೆ ಎಚ್ಚರಿಕೆಶಿಲೆಯ ಸ್ತ್ರೀಯಳ ಮಾಡಿದ ಶೃಂಗಾರ ಪಾದಕ್ಕೆ ಎಚ್ಚರಿಕೆಚೆಲುವ ಹಯವದನನ ಚರಣಾರವಿಂದÀಕ್ಕೆ ಎಚ್ಚರಿಕೆ3
--------------
ವಾದಿರಾಜ
ವೇದತತಿಗಳ ಕದ್ದೊಯ್ದವನ ಕೊಂದು ಪ್ರಳ ಯೋದಧಿಯೊಳಗೆ ಚರಿಸಿ | ಚರಿಸಿ ವೈವಸ್ವತನ ಕಾಯ್ದ ಮಹಾಮಹಿಮ ದಯವಾಗೊ 1 221ಮಂದರಾದ್ರಿಯ ಧರಿಸಿ ಸಿಂಧುಮಥನವ ಮಾಡಿ ಬೃಂದಾರಕರಿಗೆ ಅಮೃತವ | ಅಮೃತವನುಣಿಸಿದ ಇಂದಿರಾರಾಧ್ಯ ದಯವಾಗೊ 2 222 ಸೋಮಪನ ನುಡಿಕೇಳಿ ಹೇಮಾಂಬಕನ ಕೊಂದಿ ಭೂಮಿಯಾ ನೆಗಹಿದ ದಾಡಿಂದ | ದಾಡಿಂದ ನೆಗಹಿದ ಸ್ವಾಮಿ ಭೂವರಹ ದಯವಾಗೊ 3 223 ಕಂದ ಕರೆಯಲು ಕಂಬದಿಂದುದಿಸಿ ರಕ್ಷಿಸಿದಿ ವಂದಿಸಿದ ಸುರರ ಸಲಹೀದಿ | ಸಲಹೀದಿ ನರಸಿಂಹ ತಂದೆ ನೀನೆಮಗೆ ದಯವಾಗೊ 4 224ವೈರೋಚನಿಯ ಭೂಮಿ ಮೂರುಪಾದವ ಬೇಡಿ ಭೂ ವ್ಯೋಮವಳೆದೆ ಭಾ ಗೀರಥಿಯ ಜನಕÉ ದಯವಾಗೊ 5 225 ಕುವಲಯಾಧೀಶ್ವರರ ಬವರ ಮುಖದಲಿ ಕೊಂದೆ ಅವನಿಭಾರವ ನೀನುಳುಹಿದ | ಇಳುಹಿದಾ ಸ್ವಾಮಿ ಭಾ ರ್ಗವರಾಮ ಎಮಗೆ ದಯವಾಗೊ 6 226 ಶತಧೃತಿಯ ನುಡಿಗೆ ದಶರಥನ ಗರ್ಭದಿ ಬಂದು ದಿತಿಜರನು ಸವರಿ ಸುಜನರ | ಸುಜನರ ಪೊರೆದ ರಘು ಪತಿ ಎನಗೆ ದಯವಾಗೊ 7 227 ವಸುದೇವ ದೇವಕೀ ಬಸುರೀಲಿ ಜನಿಸಿದ ವಸುಧೆ ಭಾರವನು ಇಳುಹಿದಿ | ಇಳುಹಿ ಪಾಂಡವರ ಕ ವಿಸಿದ ಶ್ರೀಕೃಷ್ಣ ದಯವಾಗೊ 8 228 ಜಿನನೆಂಬ ದನುಜ ಸಜ್ಜನ ಕರ್ಮವ ಮಾಡೆ ಜನಿಸಿ ಅವರಲ್ಲಿ ದುರ್ಬುದ್ಧಿ | ದುರ್ಬುದ್ಧಿ ಕವಿಸಿದ ವಿನುತ ಬುದ್ಧ ದಯವಾಗೊ 9 229 ಕಲಿ ವ್ಯಾಪಾರ ವೆಗ್ಗಳವಾಗೆ ತಿಳಿದು ಶಂ ಫಲಿ ಎಂಬ ಪುರದಿ ದ್ವಿಜನಲ್ಲಿ | ದ್ವಿಜನÀಲ್ಲಿ ಜನಿಸುವ ಕಲಿಮಲವ ಹರಿಸುವ ಕಲ್ಕಿ ದಯವಾಗೊ 10 230 ಧಾರುಣಿಯಲ್ಲಿ ಹತ್ತವತಾರದಲಿ ಸುಜ ನರ ರಕ್ಷಿಸಿದೆ ಜಗನ್ನಾಥ | ಜಗನ್ನಾಥವಿಠಲ ಮ ವೈರಿ 11
--------------
ಜಗನ್ನಾಥದಾಸರು
ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
ಸತ್ಯಲೋಕೇಶನೆ ಬಳಿತ್ಥಾದಿ ಶ್ರುತಿವಿನುತ ಸುರಪೂಜ್ಯ ಭಕುತರ ವಿ ಪತ್ತು ಪರಹರಿಸಿ ಸಲಹಯ್ಯ 1 270 ಸತ್ಯಲೋಕವೆ ಸದನ ತತ್ವಾಭಿಮಾನಿಗಳು ಭೃತ್ಯರೆನಿಸುವರು ಮಹಲಕ್ಷ್ಮಿ | ಮಹಲಕ್ಷ್ಮಿ ಜನನಿ ಪುರು ಷೋತ್ತಮನೆ ಜನಕನೆನಿಸುವ 2 271ಚತುರದಶ ಲೋಕಾಧಿಪತಿಯೆಂದೆನಿಪ ನಿನಗೆ ಸರ ಸ್ವತಿಯು ನಿಜರಾಣಿ ವಿಹಗೇಂದ್ರ | ವಿಹಗೇಂದ್ರ ಶೇಷ ಪಾ ರ್ವತಿಪರಾತ್ಮಜರು ಎನಿಸೋರು 3 272 ಋಜುಗಣಾಧೀಶ್ವರನೆ ಅಜಪದವಿಗೋಸುಗದಿ ಭಜಿಸಿದವನಲ್ಲ ಹರಿಪಾದ | ಹರಿಪಾದ ಸೇವೆಯು ಸ ಹಜವೇ ಸರಿ ನಿನಗೆಂದೆಂದು 4 273 ಚತುರಾಸ್ಯ ತತ್ವ ದೇವತೆಗಳಂತರ್ಯಾಮಿ ನತಿಸಿ ಬಿನ್ನೈಪೆ ನಿನ್ನಲ್ಲಿ | ನಿನ್ನಲ್ಲಿ ಭಕ್ತಿಶಾ ಶ್ವತವಾಗಿರಲೋ ಹರಿಯಲ್ಲಿ 5 274 ದ್ವಿಶತ ಕಲ್ಪದಲಿ ತಪವೆಸಗಿ ಅಸುದೇವ ಪೊಂ ಹರಿಯಿಂದ ಮಿಕ್ಕ ಸುಮ ನಸರಿಗುಂಟೇನೊ ಈ ಭಾಗ್ಯ 6 275 ಇನಿತಿದ್ದ ಬಳಿಕ ನೀ ಸಲಹದಿಪ್ಪುದು ನಮ್ಮ ಅನುಚಿತೋಚಿತವೊ ನೀ ಬಲ್ಲೇ | ನೀ ಬಲ್ಲೆ ಶಾರದಾ ವನಿತೆಯ ರಮಣ ದಯವಾಗೊ 7 276 ಸತ್ವಾತ್ಮಕ ಶರೀರ ಮಿಥ್ಯಾದಿ ಮತಗಳೊಳು ಉತ್ಪತ್ತಿ ಸಂಪತ್ತು ಕೊಡದಿರು | ಕೊಡದಿರೆನಗೆಂದು ಸಂ ಪ್ರಾರ್ಥಿಸುವೆ ನಿನಗೆ ನಮೋ ಎಂದು 8 277 ಅಜ್ಞಾನವೆಂಬ ಧಾನ್ಯವನು ಒರಳಿಗೆ ಹಾಕಿ ಸುಜ್ಞಾನವೆಂಬೊ ಒನಕೀಲಿ | ಒನಕೀಲಿ ಪಾಪಧಾನ್ಯಗಳ ನುಗ್ಗು ಮಾಡಿದೆಯೊ ಘಳಿಗ್ಯಾಗೆ 9 278 ಮಾತರಿಶ್ವನೆ ನಿನ್ನ ಪ್ರೀತಿಯೊಂದೇ ಜಗ ನ್ನಾಥವಿಠಲನ್ನ ಕರುಣಕ್ಕೆ | ಕರುಣಕ್ಕೆ ಕಾರಣವು ಯಮ ಯಾತನವು ಬರಲು ನಾನಂಜೆ 10
--------------
ಜಗನ್ನಾಥದಾಸರು
--------ಹರಿ ನಾರದವರದ ಪ ಅಗಣಿತ ಮಹಿಮನ ಆನಂದ ನಿಲಯನ ಬಗೆ ಬಗೆಯಲಿ ಭಕ್ತರನ ಬಿಡದೆ ಪೊರೆವನಾ 1 ಸುಜನ ವಿಲಾಸನ ಕಂದನ ಕಾಯ್ದನ -----ವರದನಾ ಸುಂದರ ರೂಪನಾ 2 ಜಲದೊಳಾಡುವನ ನೆಲದ ಮೇಲಾಡುವನ ಬಲವುಳ್ಳ ಅರಸನ ಬತ್ತಲೆ ಹಯವನೇರಿದನ 3 ಶೃಂಗಾರ ಭೂಷಣನ ಸುರಮುನಿವಂದ್ಯನ ಗಂಗೆಯ ಪಡೆದನ ಕರುಣಾಸಾಗರನ 4 ಕರ್ಣ ಮೌಕ್ತಿಕ ಹಾರನಾ ಸಕಲ ಆಭರಣನ ಸರಸಿಜನಯ್ಯನ 5 ನಿತ್ಯ ಕಲ್ಯಾಣನ ಜಗದೋದ್ಧಾರನ ಜಾನಕಿ ಪ್ರೇಮನಾ 6 ಅಚ್ಯುತಾನಂತನ ಹರಿ 'ಹೊನ್ನ ವಿಠ್ಠಲನ’ ಸಚ್ಚಿದಾನಂದ ಸರ್ವೋತ್ತಮ ದೇವನ 7
--------------
ಹೆನ್ನೆರಂಗದಾಸರು
------ನ್ಯರ ಸಂಗಾ ಘಳಿಗೆ ಸಾಕಯ್ಯ ಪ ಎಲ್ಲಾ ಇದ್ದೂ ದುರ್ಜನ ಸಂಗ ಎಂದಿಗೂ ಬೇಡಯ್ಯ ----- ಹರಿಯಾ ಮರೆಯದೆ ಇರುವಂಥಾ ------ಕೃಷ್ಣನ ----- ನಿರುವಂಥ ಸುಜನಾರ ಸಂಗ ಕೂಡದ ನಿನ್ನಿಂತಾ ಪರಾಸು (?) ಮಕ್ಕಾಳ ಕೂಡಿ----------- 1 ಉದಯದಾವೇಳೆ ಉಚಿತಕರ್ಮ ಮಾಡುವಾ ಸದಯ ಹೃದಯರಾದ ಸಜ್ಜನಸಂಗ------- ಸದಯ ಕಾಲಾದಿ ಯಿ-----ಸನ್ನಿಧಿ ಸೇರುವಾ ಕುದಯಾ ಕುಜನಾರ ಕೂಡಿದವ -----ಸೇರುವಾ 2 ಅನೇವಿಷಾ (ಅನಿಮಿಷಾ) ಶ್ರೀ ಕೃಷ್ಣಾನ ಅರಸುತಿರುವಂಥ ಜನ ಮಹಾಮಹಿವiರಾದ ಶರಣಾರ -------ರದಂಥಾ ಹೊನ್ನ ವಿಠ್ಠಲನ ಕರುಣಾವು ಪಡುವಂಥಾ ಮಾರ್ಗ- ವನ್ನು ಸೌಖ್ಯವು ತೋರುವಂಥಾ 3
--------------
ಹೆನ್ನೆರಂಗದಾಸರು
(4) ಚನ್ನಾಕೇಶವ ಶರಣು ಶರಣು ಚೆನ್ನಕೇಶವರಾಯ ಚರಣಗಳೇ ಗತಿ ನಂಬಿದೆ ಜೀಯಾ ಪ ತರಳಧ್ರುವನಿಗಿತ್ತೆಯೊ ಬಹುಶ್ರೇಯ ವರದ ವೇಂಕಟ ಶ್ರೀರಂಗ ಚೆಲ್ವರಾಯಾ ಶರಣ ಶ್ರಿತನಭಯಾ ಆನಂದನಿಲಯಾಅ.ಪ ಅಂದುಗೆ ಗೆಜ್ಜೆಯ ಘಲುಘಲು ತುಂದಿಲನಗೆಮೊಸ ಪೀತಾಂಬರದಿಂ ಧಿಂದಿಮಿಕಿಟ ಕುಣಿಗೋವಿಂದಾ ನಿತ್ಯ ಮುಕುಂದ 1 ಕವಿಕುಲಸ್ತುತ್ಯನೆ ದೇವವರೇಣ್ಯ ಭವಸಾಗರ ತಾರಣ ಪ್ರಾವೀಣ್ಯ ಭುವನಗಳೆಲ್ಲಕು ನೀನೇ ಗಣ್ಯ ಪವಿತ್ರಯೋಗಿಯ ಧ್ಯಾನ ಹಿರಣ್ಯ ಪಾವನ ಪುಣ್ಯ ಶ್ರುತಿ ಪ್ರಾಮಾಣ್ಯ 2 ವಿದುರೋದ್ಭವ ಅಕ್ರೂರ ತ್ರಾತ ಮಧುರ ಬಾಂಧವ ಬದರೀನಾಥ ವಿಧಿ ಪಿತನರನಾರಾಯಣ ಪೂತ ಮಧುಕೈಟಭಾರಿ ಬಹುಪ್ರಖ್ಯಾತ ಬುಧಪ್ರೀತ ಭಾಗ್ಯದಾತ 3 ಒಂದೇ ಅಳತೆಗೆ ಜಗವು ಮೂರಡಿ ಚಂದಿರ ಮುಖಿಮಣಿ ಕೊಟ್ಟನು ಕರಡಿ ನಿಂದೆಯಾ ಕಾಳಿಂಗನ ಮೇಲ್ಗಾರುಡಿ ತಂದೆ ಕರೆದನ ಕರುಣದಿ ಕರಪಿಡಿ ಇಂದೆ ಕಡೆಜನ್ಮಮಾಡಿ ಇಡು ನಿನ್ನಪದದಡಿ4 ಹೆಜ್ಜಾಜೀಶ್ವರ ಶಿವ ಶಂಕರನೆ ಸಜ್ಜನ ಮುನಿಗಣ ಹೃದ್ಭಾಸ್ಕರನೆ ದುರ್ಜನಶಿರಹರ ಶಂಖಚಕ್ರಧರ ವಜ್ರಿ ಅಜಹರಗಾಧಾರ ಧೀರ ಸುಜಯ ಭೂಮ್ಯೋದ್ಧಾರಿ ಜಂiು ಶ್ರೀಕರ 5
--------------
ಶಾಮಶರ್ಮರು
(ಅನಂತಚತುರ್ದಶಿಯ ದಿನದ ಪ್ರಾರ್ಥನೆ) ಪದ್ಮನಾಭ ಪರಿಪಾಲಿಸು ದಯದಿಂದ ಪದ್ಮಜಾದಿ ವಂದ್ಯ ಪರಮ ದಯಾಳೊ ಪದ್ಮಿಯಳರಸ ಹೃತ್ಪದ್ಮನಾಮಕ ಸ್ವರ್ಣ ಸದ್ಮ ವೃತ್ತಿಪದಪದ್ಮವ ತೋರೊ ಪ. ಚಿಂತಿತದಾಯಕ ಸಂತರ ಕುಲದೈವ ಕಂತು ಜನನಿಯೊಡಗೂಡಿ ನೀನು ನಿಂತು ಎನ್ನಲಿ ಕೃಪೆ ಮಾಡೆಂದು ನಮಿಪೆ ಧು- ರಂತ ಮಹಿಮ ನಿನ್ನ ಚರಣಾಬ್ಜಯುಗಲಾ 1 ಆದಿ ಮಧ್ಯಾಂತವಿದೂರ ನಿನ್ನಲಿ ಮಹ ದಾದಿ ತತ್ವಗಳೆಲ್ಲ ನಿಂತಿಹವು ಆದಿ ಭೌತಿಕ ಮೊದಲಾದ ತಾಪಗಳನ್ನು ಶ್ರೀದ ನೀ ಬಿಡಿಸಲು ಸದರವಾಗಿಹವು 2 ಒಂದರಿಂದೊಂದಾದರಿಂದ ಮೂರು ಮೂರ್ತಿ ಇಂದಿರೆ ಸಹಿತಾವಿರ್ಭೂತನಾಗಿ ಮುಂದಿನ ಮಹದಾದಿ ತತ್ವವ ನಿರ್ಮಿಸಿ ನಿಂದನಂತಾಸಂತರೂಪನಾದವನೆ 3 ಭವ ಚಕ್ರದೊಳು ತಂದು ನವ ನವ ಕರ್ಮಗಳನೆ ಮಾಡಿಸಿ ಅವರ ಯೋಗ್ಯತೆ ಮೀರದಲೆ ಫಲಗಳನಿತ್ತು ನಿತ್ಯ ತೃಪ್ತನಾಗಿರುವಿ 4 ಮಛ್ವಾದ್ಯನಂತವತಾರಗಳನೆ ಮಾಡಿ ಸ್ವೇಚ್ಛೆಯಿಂದ ಸುಜನರ ಸಲಹಿ ಕುಚ್ಛಿತ ಜನರಿಗೆ ತುಚ್ಛಗತಿಯನೀವೆ ಸ್ವಚ್ಛ ಬ್ರಮ್ಹಾದಿಕ ವಿವ್ಛಾ(?)ವಿಷಯನೆ 5 ನಾನಾವತಾರದಿ ನಂಬಿದ ಸುರರಿಗೆ ಆನಂದವಿತ್ತು ರಕ್ಷಿಪೆ ಕರುಣದಿ ದಾನವರಿಗೆ ಅಧ:ಸ್ಥಾನವ ನೀಡುವಿ ಮಾನವರನು ಮಧ್ಯಗತರ ಮಾಡಿಸುವಿ 6 ಹಿಂದೆ ಮುಂದಿನ ಭವದಂದವ ತಿಳಿಯದ ಮಂದಾಗ್ರೇಸರ ನಾನಾದೆಂಬುದನು ಅಂಧಕರಾರಣ್ಯದಿಂದ ಮೂಢನಾದಂ ದಿಂದ ಬಿನ್ನೈಪೆನು ಇಂದಿರಾಧವನೆ 7 ಮಾಡುವ ಕರ್ಮವು ನೋಡುವ ವಿಷಯಗ- ಳಾಡುವ ಮಾತು ಬೇಡುವ ಸೌಖ್ಯವು ನೀಡುವ ದಾನವೋಲ್ಯಾಡುವ ಚರ್ಯವ ನೋಡಲು ತಾಮಸ ಪ್ರಹುಡನಾಗಿಹೆನು 8 ಆದರು ನಿನ್ನಯ ಪಾದಾರವಿಂದ ವಿ- ನೋದ ಕಥಾಮೃತ ಪಾನದೊಳು ಸ್ವಾದ ಲೇಶದಾದರ ತೋರ್ಪದ- ನಾದಿ ಮೂರುತಿ ನೀನೆ ತಿಳಿಸಬೇಕದನೂ 9 ಇದರಿಂದಲೇ ಮುಂದೆ ಮದನನಯ್ಯನೆ ನಿನ್ನ ಪದವ ಕಾಣುವೆನೆನುತೊದರುವೆನು ಹೃದಯ ಮಂಟಪದಿ ನೀ ಹುದುಗಿರುವುದರಿಂದ ಕದವ ತೆರೆದು ತೋರೊ ವಿಧಿಭವವಿನುತಾ 10 ಕನ್ನೆ ಸುಶೀಲೆಯ ಕರಸೂತ್ರ ರೂಪದ ನಿನ್ನ ತಿಳಿಯದೆ ಕೌಂಡಿಣ್ಯನಂದು ಮನ್ನಿಸದಿರೆ ಮದ ಮೋಹಗಳೋಡಿಸಿ ನಿನ್ನ ರೂಪವ ತೋರ್ದ ನಿಜಪೂರ್ಣ ಸುಖದಾ 11 ಬ್ರಹ್ಮಾದಿಗಳನೆಲ್ಲ ನಿರ್ಮಿಸಿ ರಕ್ಷಿಸಿ ತಮ್ಮ ತಾವರಿಂiÀiದ ನಿಮ್ಮ ಸ್ತುತಿಪರೆ ಕು- ಕರ್ಮಿ ನಾನೆಂದಿಗಾದರೂ ಶಕ್ತನಹುದೆ 12 ಅದು ಕಾರಣದಿಂದ ಪದುಮನಾಭ ನಿನ್ನ ಪದ ಕಮಲಗಳಲಿ ರತಿಯನಿತ್ತು ಸದರದಿ ಸಲಹಯ್ಯ ವಿಧುಶೇಖರಾರ್ಚಿತ ಮದನನಯ್ಯ ಮರುದಾದಿ ವಂದಿತನೆ 13 ದೋಷರಾಶಿಗವಕಾಶನಾದರೂ ಯೆನ್ನ ಶ್ರೀಶ ನಿನ್ನ ದಾಸದಾಸನೆಂದು ಘೋಷವಾದುದರಿಂದ ಪೋಷಿಸಬೇಕಯ್ಯ ಶೇಷಗಿರೀಶ ಸರ್ವೇಶ ನೀ ದಯದಿ 14
--------------
ತುಪಾಕಿ ವೆಂಕಟರಮಣಾಚಾರ್ಯ
(ಅನಂತಪದ್ಮನಾಭ ಪ್ರಾರ್ಥನೆ) ಚಿಂತಿತದಾಯಿ ನಿರಂತರ ಸುಖದಾನಂತಪದ್ಮನಾಭಾ ಸಕಲಸುಜನಾಂತರ ಫಲದಾ ಪ. ಯಾಕೆಂದರೆ ಪೂರ್ಣಾ ನಂದನೀನೊಲಿಯಲು ಎಂದಿಗು ಕುಂದನು ಹೊಂದದಲಿರುವೆ ಸುಂದರ ವಿಗ್ರಹ ಸುಲಭದಿ ಸಕಲಾನಂದ ವಾರಿಧಿಯೊಳಿಳಿವೆ ಭವ ಬಂಧನ ಬಿಡಿಸುವ ದೊರೆ ನಿನ್ನರಿಯದೆ ಮಂದ ಬುದ್ಧಿಯಿಂದಿರುವುದು ಥರವೆ1 ನೀಲಾಳಕ ಪರಿಶೋಭಿತ ಮುಖಕಮಲಾಲಿಸು ಬಿನ್ನಪವÀ ಲೀಲಾಮೃತರಸ ಕುಡಿಸುತ ಕರುಣದಿ ಪಾಲಿಸು ವರಸುಖವಾ ಪದದೊಳಗಿರಿಸಿದ ದುರಿತ 2 ಹೆಂಡತಿ ಜನಿಸಿದ ಮನೆಯೊಳಗಿರುವುದೆ ಪುಂಡರೀಕನಾಥಾ ಪಂಡಿತರುಗಳಿದ ಕಂಡರೆ ನಗರೆ ಬ್ರಹ್ಮಾಂಡಕೋಟಿಭಾಸಾ ಅಂಡಲೆಯದೆ ಹೃನ್ಮಂಡಲದೊಳು ಶುಭಕುಂಡಲ ರಮೆಯೊಡಗೊಂಡು ಬೇಗದಲಿ ನಿಭ ಕುಂಡಲಿಗಿರಿಗ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಆ) ವಿವಿಧ ದೇವತಾ ಸ್ತುತಿ ಬ್ರಹ್ಮನ ಸ್ತುತಿ ಚತುರವದನಗೊಂದಿಸುವೆನು ಮದನನಯ್ಯನ ಜ್ಯೇಷ್ಠಕುವರ ಚತುರವದನಗೊಂದಿಸುವೆನು ಪ ಜಗವ ಸೃಷ್ಟಿಪ ಗುರುವರನ ಮೂ- ನಿತ್ಯ ನೋಡುತಿಹನ ನಗವೈರಿಮುಖಸುರಪ್ರಿಯನ ನಿಗಮೋಕ್ತ ಯಾಗ ಮಾಡುವನ 1 ಸುರರು ಅಸುರರೆಂಬ ಭೇದ ವಿರದೆ ಸರ್ವರಿಗಿಷ್ಟವೀವನೆ ಪುರಹರಾದ್ಯಖಿಲಾಮರರು ನಿನ್ನ ಸ್ಮರಿಸುತಾಜ್ಞೆಯ ಧರಿಸುವರು 2 ಯಜ್ಞಕುಂಡದೊಳುದ್ಭವಿಸಿದ ಸ- ರ್ವಜ್ಞ ರಾಜೇಶ ಹಯಮುಖ ಸುಜ್ಞಾನ ವೇದಾರ್ಥಗಳನು ಬೋಧಿಸಿಷÀ್ಟ ಸಾ- ಯುಜ್ಯವ ನಿನಗೆ ಕೊಟ್ಟಿಹನು 3
--------------
ವಿಶ್ವೇಂದ್ರತೀರ್ಥ
(ಇ) ದಶಾವತಾರ ಅಂಜಿ ಬಿಡಲಿ ಬ್ಯಾಡೋ ಮುಂದಕೆ ಮುಂದೆ ಅಂಜಿ ಕೂಡಲಿ ಬೇಕೋ ಹಿಂದಕೆ ಪ ಅನಿಮಿಷಾಗತ ರೂಪ ನೋಡಿದ್ಯಾ ಮತ್ತೆ ಘನ ಕಮಲೇಶನೆಂದಾಡಿದ್ಯಾ ಒಳ್ಳೆ ವನಚದರೆಪಿ [?] ಯೆಂದೋಡಿದ್ಯಾ ಮತ್ತೆ ಮನುಜ ಮೃಗನ ಕಂಡಂಜಿದ್ಯಾ ನರ- ಸನುಮತದೀಕ್ಷಿಸು ಮತ್ಸ್ಯಕಚ್ಛಪ ರೂಪಾ ಧನುಜ ಸಂಹಾರಕಾಗಿ ವರನರಸಿಂಹರೂಪ 1 ವಟುರೂಪದಿ ದಿಟವೆಂದಾಡಿದ್ಯಾ ಮತ್ತೆ ಕಠಿಣಪರಷು ಕಂಡೋಡಿದ್ಯಾ ನರ- ವಟುರಾವಣಾದಿ ಕಂಡಂಜಿದ್ಯಾ ಮತ್ತೆ ಭಟ ಮುಷ್ಠಿಹರನಂದಾಡಿದ್ಯಾ ನರ- ಧಟ ಹರವಾಮನ ಪರಶುರಾಮರೂಪ ಸಟೆಯಿಲ್ಲ ತಿಳಿ ಶ್ರೀ ರಾಮಕೃಷ್ಣರೂಪ 2 ನನ್ನ ರೂಪವ ಕಂಡಂಜಿದ್ಯಾ ಮತ್ತೆ ಸುಜ್ಞ ಹಯವದನನೆಂದಾಡಿದ್ಯಾ ಕರಿ ವಿಘ್ನನಾಶಕ ಬೌದ್ಧಕಲಿಕೆಯು ಧ್ಯಾನ ಮಗ್ನನಾಗೆವರನ್ನು ಕಂಡಿದ್ಯಾ ನರ ಪ್ರಜ್ಞವಿರಲಿ ಪತ್ತುಪಾವನ ರೂಪನ ಸುಜ್ಞ ನರಸಿಂಹವಿಠ್ಠಲನಾಣೆ ಸಾರುವೆ 3
--------------
ನರಸಿಂಹವಿಠಲರು