ಒಟ್ಟು 21 ಕಡೆಗಳಲ್ಲಿ , 14 ದಾಸರು , 21 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಷಟ್ಪದಿ ಭೃಂಗ ದಿವಿಜ ಲಲಾಮ ಶುಭಗುಣ ಸಾಂದ್ರ ಗುರುವರನೇಸೇರಿಹೆನು ತವಶಿಷ್ಯ ಕೋಟಿಲಿ ಬೀರಿ ಕರುಣಾ ದೃಷ್ಟಿ ಶ್ರುತಿ ಭಂಡಾರ ಸೂರೆಯ ಮಾಡ್ವ ಹಾ ಹಾ ಕಾರದಿಂ ತಪಿಪ 1 ಬಾಲ ನೆನ್ನಯ ಶಿರವ ನಿಮ್ಮಯ ಶೀಲಕರದಿಂ ಭೂಷಿಸುತ ಕವಿತಾ ಲತಾಂಗಿಯ ತಾಂಡವಾಡಿಸಿ ಚಂದ್ರಮೌಳಿನುತಕಾಳಿಮನಕುಮುದೇಂದು ಜಗಸಂ ಚಾಲಕ ಪ್ರಭು ಮುಖ್ಯ ಪ್ರಾಣಗುಪಾಲಿಸುತ ಸತ್ತಾದಿ ಸಕಲವ ಪೊರೆದು ಮೆರವಂಥಾ 2 ಪತಿ ಮಾ ವಂದ್ಯ ನಿರುಪಮ ನಾರಸಿಂಹನುಅಂದು ನಿಮ್ಮನು ಕಾಯ್ದ ತೆರಪೊರೆ ಶ್ರೀ ಸುಧೀಂದ್ರ ಸುತ 3 ಏನಿದೇನಿದು ನಿಮ್ಮ ಮಹಿಮೆಯಮಾನವರಿಯಲು ಸುರರಿಗಾಗದುಮಾನವರ ಪಾಡೇನು ಶಿರತೂ ಗುತಿಹ ಫಣಿರಾಜಮಾನ್ಯ ಸುರ ಋಷಿ ಕರುಣ ಬಲವೋಮೇಣ್ಪರಿಸರನ ಕೃಪೆಯೊ ಕಾಣೆನುದಾನಿ ನರಹರಿ ವರದ ಫಲವೋ ಮೊತ್ತವೇ ಯೆಂಬೆ 4 ಜಂಭಾರಿ ಮೇಣಾಬಾಲ ಸುಬ್ರಹ್ಮಣ್ಯನೋ ಶಂಕಿಪುದು ಸುರನೀಕಾ 5ಸೂಕ್ಷ್ಮಮತಿಗಳೆ ಪೇಳಿ ಸರ್ವಾಧ್ಯಕ್ಷನವತಾರವನು ಯಾವ ಸುಲಕ್ಷಣ ಭಕುತಗೇನೆ ಮಾಡಿಹ ನಮ್ಮಗುರುವ ಬಿಡೆಪಕ್ಷ ವಹಿಸದೆ ಪೇಳಿ ಯಾವನು ಲಕ್ಷ್ಯ ಮಾಡದೆ ಕಷ್ಟ ಮಾತೆಯಕುಷಿಯಂ ಬಂದಿಹನು ಮುಮ್ಮುಡಿ ನಮ್ಮ ನುದ್ಧರಿಸೆ 6 ವ್ಯಾಜ ವಿಲ್ಲದಲೆದೈತ್ಯ ಪಿತತಾನಿತ್ತ ಬಾಧೆಗೆ ನಾಥ ನರಹರಿ ಬಂದುದಚ್ಚರಿಯಂತೆ ಭಾವಿಸೆ ಭಕ್ತವತ್ಸಲ ಬಿರುದು ಪೊಳ್ಳೆಬಿಡೆ 7 ಸತಿ ಸಂಹಾರ ಕಾಟವು ಮತ್ತೆ ಯತಿ ಯಂತಾಗೆ ಹಾಗೆಯೆನಿಂತಿರಲು ವೃಂದಾವನದಿ ಕಾಡುವರು ಶಿಷ್ಯಗಣಾ 8 ಸತಿಯ ಬೇಕೆಂದೊಬ್ಬ ನೀಡೈ ಸುತನ ದಂಪತಿ ವ್ಯಾಜ್ಯ ಹರಿಸಿರಿಜತನ ಮಾಡಿಸಿ ವೇತನವ ಹರಿಸಿನ್ನು ವ್ಯಾಧಿಗಳಪಥನ ವಾಯಿತು ಕೂಳುಕೊಡಿಸೈ ಸತತ ವೀತೆರ ಬಯಕೆ ವ್ರಾತದಿಸುತಪ ನೀನೆಂತಾಗೆ ಕುಪಿತನು ಬಲ್ಲ ಬತ ಹರಿಯೇ 9 ತಿರುಗುತಲಿಹರು ತಮ್ಮಯ ಹೀನ ನಡತೆಗಳಿಂದ ಸ್ತ್ರೀಯರು ವಿಧಿಯ ನಡೆಸುವರು ಚೆನ್ನ ಔಷಧ ವಿಹುದು ನಿನ್ನಲಿ ಹಣ್ಣಿನಾಶಯ ತೋರಿನೀ ಭವ ಹುಣ್ಣುವಳಿಯುವೆ ಎಷ್ಟು ಕರುಣಿಯೊ ಗುರುವೆ ಶರಣೆಂಬೆ 1 ಕಳತ್ರ ವೆಲ್ಲವನೆಂತೆನಲು ಬಲು ಹುಚ್ಚುತನವ ರ್ಣಿಸಲು ಮಿಕ್ಕುದುದಾಉಕ್ತಿ ಭಜಿಸುವಗೇನು ಪೇಳ್ವುದು ಮುಕ್ತಿಕರಗತ ವೇಕೆ ಸಂಶಯ ಶಾಸ್ತ್ರ ಭಾಗ್ಯವೆ ಸಾಕು ಕರುಣಿಸಿ ನಮಿಪೆ ಭೂಯಿಷ್ಠ 11 ಸೂತ್ರ ಖರೆ 12 ಪ್ರೀತಿತಮ ಇವನಂಥ ದಾತನ ಗ್ರಂಧ ನಿಚಯವ ಭೋಜ್ಯ ಕಿಡುತಲಿ ಸುತ್ತಿಗೆದ್ದಲು ಹುಳಕೆ ಮೆಚ್ಚುವ ನೇನು ಪಯ ಸುರಿಯೆಪುತ್ರರಿಗೆ ಮದ್ದಿಕ್ಕಿ ಪಿತನಿಗೆ ಮತ್ತೆ ಭೋಜನ ವಿಕ್ಕೆ ಬಹುಸುಪ್ರೀತಿ ಯಾದಂತಾಯ್ತು ಹರಿಹರೀ ಪಾಹಿಮಾಂ ಪಾಹೀ 13 ಶುಂಠನಾದರು ಪಠಿಸೆ ನಮ್ಮಯ ಕಂಠದಿಂ ಬಂದಂಧ ನುಡಿವೈಕುಂಠ ರಮಣನ ಕಾಂಬ ಪಂಡಿತ ನೆನೆಸಿ ಧರೆಯೊಳಗೆಕಂಟಕವ ನಿರಿದು ಭವದಲಿ ವಿಷ ಕಂಠ ಗಾತಪ್ರಿಯ ತನ್ನಯಭಂಟನನು ಮಾಡಿಕೊಳಲೆಂತೆಂದೆನ್ನ ಹರಿಸಿ ಪೊರೆ 14 ಏಳಿರೇಳಿರಿ ಸಂತ ಮಿತ್ರರೆ ಕೇಳಿ ಕೇಳಿದುದೆಲ್ಲ ನೀಡುವಪಾಲಕನು ಶ್ರೀ ರಾಘವೇಂದ್ರನು ಇಲ್ಲ ಮೆರೆಯುತಿರೆಕೇಳಿ ಭವಸುಖ ಮತ್ತೆ ಭವದಲಿ ಬೀಳುವರೆ ವಿಜ್ಞಾನ ಯಾಚಿಸಿಕೊಲ್ಲಿರೀ ಸಂಸಾರ ಬೀಜವ ಕಲಿಯು ಎಷ್ಠರವ15ನಾಲ್ಕುಶತ ಐವತ್ತು ವರುಷವೆ ವೋಲಗವ ಕೈಕೊಂಬ ಮುಂದಿವಅಲಸವ ಮಾಡಿದೆಡೆ ಸುರತರು ಬಿಟ್ಟತೆರವೇನೆಜಾಲ ಮಾತುಗಳೇಕೆ ಮುಂದಿನ ಶೀಲ ಮಾರ್ಗವ ನೋಡ್ವ ಜಾಣನುಪಾಲಿಸೈಧೋರೆ ಕೆಟ್ಟೆ ಕೆಟ್ಟೆನು ಎನ್ನ ಕೈ ಕೊಡುವ 16 ಏಕೆ ಭಯ ನಮಗಿನ್ನು ನರಕದ ಏಕೆ ಕಳವಳ ಅಶನ ವಸನÀಕೆಏಕೆ ಸಂಶಯ ಜ್ಞಾನ ವಿಶಯದಿ ಪಿಡಿಯೆ ಗುರುವರನೆನೂಕಿ ವಿಷಯದಿ ಬಯಕೆ ಬೇಗನೆ ಬೇಕು ಎನ್ನುತ ಜ್ಞಾನ ನಿಧಿಗಳಹಾಕಿ ದಂಡವ ಪಾಹಿ ಗುರುವರ ಪಾಹಿ ಯೆಂತೆನ್ನ 17 ಭುಕ್ತಿ ಹಾಗೆ ವಿರಕ್ತ ಭಕ್ತಿಯು ಭಕ್ತ ವೃಂದಕೆ ಭ್ರಷ್ಟ ಬಿಟ್ಟವನು 18 ಜಯ ಜಯವು ಗುರುಸಾರ್ವಭೌಮಗೆಜಯ ಜಯವು ಮಂತ್ರಾಲಯಸ್ಥಗೆಜಯ ಜಯವು ವಿಜಯೀಂದ್ರ ಪೌತ್ರಗೆ ವ್ಯಾಸರಾಜನಿಗೆಜಯ ಜಯ ಪರಿಮಳಾ ಪ್ರದಾತಗೆ ಜಯಜಯವು ಖಂಡಾರ್ಥ ನೀಡ್ದಗೆಜಯ ಜಯವು ಸಶರೀರ ಬೃಂದಾ ವನದಿ ಸೇರ್ದವಗೇ 19 ಜಯ ಜಯವು ಬಾಹ್ಲೀಕ ರಾಯಗೆ ಜಯ ಜಯವು ಶ್ರೀ ಸತ್ಯಸಂಧಗೆಜಯ ಜಯವು ಪ್ರಹ್ಲಾದರಾಜಗೆ ಶಿಷ್ಯ ವತ್ಸಲ್ಯಗೆಜಯ ಜಯವು ಶ್ರೀ ರಾಘವೇಂದ್ರಗೆಜಯ ಜಯವು ಮಂಗಳವ ಸುರಿಪಗೆಜಯ ಜಯವು ಜಯ ಮುನಿಯ ಪ್ರೀಯಗೆ ನಮ್ಮ ಗುರುವರಗೆ 20 ಮಾನನಿಧಿ ಜಯತೀರ್ಥ ರಾಯರಘನ್ನ ಹೃದಯಗ ವಾಯು ವಂತರಶ್ರೀ ನಿಲಯ ಶ್ರೀ ಕೃಷ್ಣವಿಠಲ ಪ್ರೀಯ ಗುರುರಾಜನಾನು ಪಾಮರ ಬಾಲ ನುಡಿಗಳ ನೀನೆ ತಿದ್ದುತ ಮನ್ನಿಪುದು ನಾನಿನ್ನ ದಾಸರ ದಾಸನೆಂದು ಸ್ವೀಕರಿಸು ಶರಣು 21
--------------
ಕೃಷ್ಣವಿಠಲದಾಸರು
ಸಣ್ಣವನ ಬಿನ್ನಪವ ಸಲಿಸಬಹುದಯ್ಯ ಬಣ್ಣಿಸಲೊಶವಲ್ಲ ದಯವುಳ್ಳ ದೊರೆಯೆ ಪ ನಿನ್ನ ಗುಣ ಸುರ ತರುವು ವನದಿ ಶುಕಾದಿಗ ಳುನ್ನತವಾಗಿಹವು ಉಚಿತವೇ ಸರಿಯು ಎನ್ನ ಮನ ಕೋಡಗವು ಅಡವಿಯನು ಬಿದ್ದದೆ ಇ ದನ್ನ ಅದರೊಳಗೆ ಇಡಬಹುದಯ್ಯ ಹರಿಯೆ 1 ಕಮಲಭವ ವಾಣಿ ಮುಖ ನಯನಗಳು ಎಂಬ ಮಹ ಕಮಲೋತ್ಪಲಗಳಿಂದ ಶೋಭಿಸುತಿಹ ವಿಮಲ ಲಾವಣ್ಯ ಸುಧಾಂಬುಧಿಯೊಳಿಡಿಸಯ್ಯ ಮಮ ನೇತ್ರ ಮೀನಗಳ ವಿಷಯ ಪಂಕದಿ ತೆಗಿಸು 2 ನಿಮ್ಮ ನಾಮಾಮೃತದ ಸೂರೆಯನು ಬಿಟ್ಟು ಶ್ರೀ ಭವ ಮುಖರ ಕೆರೆ ಕೋಡೇರಿಸುವಿ ತುತಿ ಚೂರ್ಣ ತೆಗೆದು ತೊಳೆದು ತುಂಬೊ ನಮ್ಮ ವದನ ಕರಡಗೆಯ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
45ಅನುದಿನದಲಿ ಬಂದು ತನುವ ಸೂರೆಯಗೊಂಡು |ಎನಗೊಂದು ಮಾತ ಪೇಳೊ ಜೀವವೆ ! ಪಘನಕೋಪದಲಿ ಬಂದು ಯಮನವರಳೆದೊಯ್ವಾಗ |ನಿನಕೂಡಿನ್ನೇತರ ಮಾತೂ ಕಾಯವೆ! ಅ.ಪಬೆಲ್ಲದ ಹೇರಿನಂತೆ ಬೇಕಾದ ಬಂಧು - ಬಳಗ |ನಿಲ್ಲೊ ಮಾತನಾಡತೇನೆ ಜೀವವೆ ||ನಿಲ್ಲಗೊಡದೆ ಬಂದು ಯಮನವರೆಳೆದೊಯ್ವಾಗ |ಬೆಲ್ಲ ಬೇವಾಯಿತಲ್ಲೋ ಕಾಯವೆ ! 1ಸತ್ಕರೆ ಹೇರಿನಂತೆ ಸವಿದುಂಡು ಪಾಯಸವ |ದಿಕ್ಕೆಟ್ಟು ಹೋಗುತೀಯೋ ಜೀವವೆ ||ದಕ್ಕಗೊಡದೆ ಬಂದು ಯಮನವರೆಳೆದೊಯ್ವಾಗ |ಸಕ್ಕರೆ ವಿಷವಾಯ್ತೋ ಕಾಯವೆ ! 2ಅಂದಣದೈಶ್ವರ್ಯ ದಂಡಿಗೆ - ಪಲ್ಲಕ್ಕಿ |ಮಂದಗಮನೆಯರು ಜೀವವೆ ||ಮಂದಗಮನೆ ಯಾರೊ - ಮಡದಿ - ಮಕ್ಕಳು ಯಾರೋ -ಬಂದಂತೆ ಹೋಗ್ತೀನಿ ಕಾಯವೆ ! 3ಸೋರುವ ಮನೆಯಲಿ ಧ್ಯಾನ - ಮೌನಾದಿಗಳು |ಬೇರಿತ್ತು ನಿನ್ನ ಮನಸು ಜೀವವೆ ||ನೀರಮೇಲಣ ಗುಳ್ಳೆ ತೋರಿ ಹಾರಿದಂತೆ |ಯಾರಿಗೆ ಯಾರಿಲ್ಲ ಕಾಯವೆ ! 4ಹುಟ್ಟಿದ್ದು ಹೊಲೆಯೂರು ಬೆಳದದ್ದು ಮೊಲೆಯೂರು |ಇಟ್ಟದ್ದು ಈ ಊರು ಜೀವವೆ ||ಸೃಷ್ಟಿಗೊಡೆಯ ನಮ್ಮ ಪುರಂದರವಿಠಲನ |ಗಟ್ಟ ಪೂಜೆಯ ಮಾಡೊ ಕಾಯವೆ ! 5
--------------
ಪುರಂದರದಾಸರು
ಕೃಷ್ಣೇತಿ ಮಂಗಳಂ ದಿವ್ಯನಾಮ ಪಇಷ್ಟರಿಂದಲಿ ಭವಬಂಧನನಷ್ಟವಾಗಿ ಹೋಹುದೋ ಅ.ಪನಾರದಮುನಿ ತಾನು ನರಕ ಪಟ್ಟಣಕೆ ಹೋಗಿವಾರೀಜನಾಭ ಎಂದು ಒದರಿದಾಗ ||ಘೋರ ಪಾತಕವೆಲ್ಲ ದೂರವಾಗಿ ಹೋಯ್ತುಸೂರೆಯಾಯಿತು ಸ್ವರ್ಗಲೋಕವೆಲ್ಲ 1ಅಜಮಿಳನು ಈ ನಾಮ ಅಂತ್ಯಕಾಲಕೆ ಸ್ಮರಿಸೆನಿಜಪದವಿಯೈದಿದನು ನಿಮಿಷದಲಿ ||ಭುಜಗಭೂಷಣನು ತಾ ಶ್ರೀರಾಮನಾಮವನಿಜಕಾಂತೆಯನು ಕರೆದು ಉಪದೇಶವಿತ್ತ 2ಪಂಚಪಾಂಡವರನು ಪರಿಪಾಲಿಸಿತು ನಾಮಪಾಂಚಾಲೀ ಮೊರೆಕೇಳಿ ಪೊರೆಯಿತು ನಾಮ ||ವಂಚನೆ ಮಾಡಿ ಕೌರವರ ಮಡುಹಿ ನಿ -ಶ್ಚಿಂತೆಯಲಿ ಪಾಂಡವರ ಪಟ್ಟಗಟ್ಟಿದ ನಾಮ 3ಸರಸಿಯೊಳಗೆ ಮುಳುಗಿ ಅರಿಯ ಬಾಧೆಗೆ ಸಿಲುಕಿಕರಿರಾಜ ಹರಿಯೆಂದು ಮೊರೆಯಿಡಲು ||ತ್ವರಿತದಿಂದಲಿ ಬಂದು ಕರಿಯನುದ್ಧರಿಸುತಕರಿರಾಜವರದನೆಂದೆನಿಸಿಕೊಂಡ ನಾಮ 4ಧ್ರುವ ತನ್ನ ತಂದೆ ತೊಡೆಯ ಮೇಲೇರಲು ಪೋಗೆಅವನ ಮಲತಾಯಿ ಗರ್ಜಿಸಿದಳಾಗ ||ಧ್ರುವ ಸುಖಬಿಟ್ಟು ವನಕೆ ಪೋಗಿ ತಪ ಮಾಡಿಸವಿಯಾದಚಲಪದವ ಪಡೆದನಾಗ 5ಹಿರಣ್ಯಕಶಿಪು ತನ್ನ ಮಗನ ಬಾಧೆಯ ಪಡಿಸೆಗಿರಿಯ ಶಿಖರದಿಂದೀಡಾಡಲು ||ನರಹರೆ ನರಹರೆ ರಕ್ಷಿಸೆಂದನ್ನಲುನರಸಿಂಹ ರೂಪದಿಂದವನ ಪಾಲಿಸಿದ 6ಕಂದನ ಅಪರಾಧವ ಕೇಳದೆ ನೃಪನು ತಾನಂದತಿ ದಾರುಣ ಕಡಹದೋಳು ಕೆಡಹೆ ||ಅಂದು ಸುಧನ್ವ ಶ್ರೀಕೃಷ್ಣನೆಂದೆನಲಾಗಿಬೆಂದು ಕಂದಿವ ಎಣ್ಣೆ ತಣ್ಣೀರಾಯಿತು 7ಅಸುರ ಬಾಧೆಗೆ ಸಿಲುಕಿ ಅಶೋಕವನದಲಿಶಶಿಮುಖಿ ಬೀಜಮಂತ್ರವ ಜಪಿಸೆ ||ಅಸುರನ ಕೊಂದು ಅಶೋಕವನವ ಬಿಡಿಸಿವಸುಧೀ ಸುತೆಯ ಸಲಹಿದ ರಾಮನಾಮ 8ಪರಿಪರಿ ಭಕ್ತರನು ಪಾಲಿಸಿತು ಈ ನಾಮಪರಮ ಮಂಗಲವು ಪಾವನವು ಈ ನಾಮ ||ಸುರರು ಬ್ರಹ್ಮಾದಿಗಳು ಸ್ರೋತ್ರ ಮಾಡುವ ನಾಮಧರೆಯೊಳುಸಿರಿಪುರಂದರ ವಿಠಲ ನಾಮ9
--------------
ಪುರಂದರದಾಸರು
ಕೊಡಬಹುದೇ ಮಗಳ - ಸಮುದ್ರರಾಜಕೊಡಬಹುದೇ ಮಗಳ ಪನಡೆದರೆ ಬಡವಹಳೆಂಬ ಕುಮಾರಿಯ |ಹಿಡಿಬಿಟ್ಟಿ ಮಾಡಿ ಹರಿಗೆ ಸಿಂಧುರಾಜನುಅ.ಪಕುರುಹಬಲ್ಲವರಾರು, ಕುಲಗೋತ್ರವಾವುದೊ |ಅರಿತ ರಾಯರೊಳಗೆ ಆರ ಮಗನೊ ಇವ |ವರುಶಭಾಂಗಿಗೆ ತಕ್ಕ ವರನಹುದೆ ಇವ |ಹಿರಿಯರೆಂಬುದ ನೆರೆಹೊರೆಯೂ ಕಾಣದನಿವ |ಪರಿಪಂಥಿಜನಕೆಲ್ಲ ಪ್ರಾಣಘಾತಕನಿವ |ನಿರುತ ಮೇಘವ ಪೋಲ್ವ ನೀಲಮೆಯ್ಯವನಿವ,ಹಿರಿದಾದ ನಾಲ್ಕು ಹಸ್ತಗಳುಳ್ಳವನಿವ |ಅರುಣಚ್ಛಾಯೆಯ ರೇಖೆ ಅರಳಿಸಿಹಾರುವ ||ಗರುಡಹಕ್ಕಿಯ ನೆಚ್ಚಿದ - ಎದೆಯ ಮೇಲೆ |ಭರದಿ ಒದೆಯ ಮೆಚ್ಚಿದ - ಘೋರರೂಪ |ಧರಿಸಿ ಕೋಪದಿ ಹೆಚ್ಚಿದ - ಕರೆವ ಗೋವ |ಕರುಗಳ ಕೊರಳುಚ್ಚಿದ - ಸಂಸಾರದೊಳ್ |ಇರುತಿಹ ನಾರಿಯರ ಮನವೆಲ್ಲ ಬಿಚ್ಚಿದ 1ಅಡಿಗಡಿಗೆ ಹತ್ತು ಅವತಾರವ ಮಾಡಿದ |ಕಡುಕಪತಿಯಲ್ಲದೆ ಭಾರಿ ಗುಣದವನಲ್ಲ |ಗಿಡದ ಮರೆಯಲಿದ್ದು ಕಪಿಯ ಕೊಂದನುಹೊಲ್ಲ |ನಡತೆಯಲಿ ಸಲೆ ಜನಲಜ್ಜೆ ಇವನಿಗಿಲ್ಲ |ಹಿಡಿದು ಪೂತನಿ ಮೊಲೆಯುಂಡ ಚೌಪಟಮಲ್ಲ |ಮಡುಹಿದ ಮಾವನ ಮಧುರೆಯೊಳಗೆಖುಲ್ಲ |ಕೊಡೆಮಾಡಿ ಬೆಟ್ಟವ ಗೋಕುಲದೊಳಗೆಲ್ಲ |ಮಡದಿಯರುಡುಗೆಯ ಕದ್ದದ್ದು ಹುಸಿಯಲ್ಲ ||ಕಡಹದ ಮರವೇರಿದ -ಅವರಮಾನ - |ಕೆಡಿಸಿ ಭಂಡರ ಮಾಡಿದ - ದಧಿಕ್ಷೀರ - |ಗಡಿಗೆ ಸೂರೆಯ ಮಾಡಿದ - ಕಾಳಿಂಗನ - |ಮಡುವ ಕಲಕಿ ನೋಡಿದ - ಸ್ಯಂದನವನು |ನಡೆಸುವ ಕಾರಣ ನರಗೆ ಸಾರಥಿಯಾದ 2ಊದುತ ಕೊಳಲನರಣ್ಯದೊಳ್ ಗೋಗಳ |ಕಾದು ಕುಂಚಿಗೆ ಮಾಡಿ ಕಂಬಳಿ ಪೊದೆವನು |ಓದನವನು ಬೇಡಿ ಹೊಟ್ಟೆಯ ಹೊರೆದನು |ಯಾದವರೊಳಗಾಡಿ ಎಂಜಲನುಂಡನು |ಕ್ರೋಧದಿಂದ ಸುರರ ಕೊಂದು - ಕೊಂದಿಡುವನು |ಪಾದರಿ ಪೆಣ್ಣುಗಳೊಳಗಿರುತಿಪ್ಪನುಆದಿಯೆ ಇವಗಿಲ್ಲ ಎಂದೆಂದಿಗಿಪ್ಪನು |ಭೂದಿವಿಜರ ಕೂಡ ಬಿಕ್ಷಕೆ ಪೋಪನು ||ಮೇದಿನಿಯೊಳಗಿರುವ - ಮಸ್ತಕವು ಬೋ - |ಳಾದವರೊಳಗಿರುವ - ನೋಡಲು ಭೇದಾ - |ಭೇದದಂದದಿ ತೋರುವ - ಸಭೆಯೊಳಗೆ |ಬೈದರೆ ಮೈದೋರುವ ಶೇಷಶಾಯಿ - |ಯಾದಂಥಪುರಂದರ ವಿಠಲನೆಂದರಿಯದೆ3
--------------
ಪುರಂದರದಾಸರು
ಷಡ್ವರ್ಗ ಸುಳಾದಿಝಂಪೆತಾಳಧನಧಾನ್ಯ ಗೃಹಕ್ಷೇತ್ರ ವನಿತೆ ಪುತ್ರಾದಿತರನೆನವಿನಲಿ ಜನುಮಗಳ ತಂದೀವ ಕಾಮಕನಕಗಿರಿ ಕೈಸಾರ್ದಡಂಪರಸುದೊರೆದಡಂಇನಿತು ತೃಪುತಿಯೈದದೆನ್ನ ಮನೋಕಾಮಜನಪರ ಸಿರಿಬಯಕೆ ಜಾಣೆಯರ ಸಂಗತಿಯಕನಸಿನೊಳಗಾದಡಂ ಬಿಡದಿಹುದು ಕಾಮತನಗಲ್ಲದ್ಹವಣದಿಹ ಕಾಮಕಾಮಿನಿಭೂತಕೆನಿತಶನ ಸಾಲದಾಯಿತೈ ಪೂರ್ಣಕಾಮಮುನಿನಾರಿಯಳ ಕಲ್ಲಮೈಯನೆತ್ತಿದಪಾದವನು ಎನ್ನ ದುರ್ವಿಷಯ ಕಾಮದಲ್ಲಿಟ್ಟು ನಿನ್ನಜ್ಞಾನ ಭಕುತಿ ವೈರಾಗ್ಯ ಕಾಮವನೀಯೊದಿನಕರಕುಲೋದ್ದಾಮ ಪ್ರಸನ್ವೆಂಕಟ ರಾಮ1ಮಠ್ಯತಾಳಗುರುಹಿರಿಯರಿಗಂಜದೆ ನಿಕ್ಕರ ನುಡಿಸುವ ಕ್ರೋಧಬರಿಯಹಂಕಾರದಿ ಬೆರತಘರಾಶಿಯನೆರಹಿಸಿ ನಿರಯವನುಣಿಸುವ ಕ್ರೋಧಮರುಳನ ದುರುಳನ ಮಾಡುವ ಕ್ರೋಧಗುರುಹಿರಿಯರಿಗಂಜದೆ ಉರುಕೋಪದಲೆದ್ದ ಕಾಳುರಗನ ಪೆಡೆದುಳಿದಾ ಸಿರಿಚರಣವ ಕ್ರೋಧಾಹಿಶಿರದ ಮ್ಯಾಲಿಡು ಗಡ ಗರುಡಾದಿ ಪ್ರಸನ್ವೆಂಕಟ ತಾಂಡವ ಕೃಷ್ಣ 2ರೂಪಕತಾಳಹೀನ ಧರ್ಮನ ಮಾಡಿಸುರಋಷಿಪಿತೃ ಋಣವೇನು ಕಳಿಯಲಿಲ್ಲವೆನ್ನ ಲೋಭಜೇನನೊಣನ ವೋಲು ತಾನುಣ್ಣನೊದಗಿಸಿನಾನಾಲಾಭದಲಿ ತುಂಬದು ಲೋಭಭಾಂಡದಾನವ ಬೇಡಿಳೆಯಾಜಾಂಡವನೊಡೆದಶ್ರೀನುತಾಂಘ್ರಿಯಲೊದ್ದು ಲೋಭದ ಕೋಶವನುನೀನೆ ಸೂರೆಯ ಮಾಡೊ ಪ್ರಸನ್ವೆಂಕಟ ವಾಮನ್ನ ಉದಾರಿಶಿಖಾಮಣಿಭಾಗ್ರ್ವಾ3ಪಂಚಘಾತ ಮಠ್ಯಅನ್ನಕೆ ಉಬ್ಬಿ ಯೌವನ ರೂಪಕೆ ಕೊಬ್ಬಿಧÀನ್ನಕೆ ಮೊಬ್ಬೇರಿಸಿತೆನ್ನ ಮದವುಎನ್ನ ಸವಿಸುವ ಪರಿವಾರ ಭುಜಬಲೆಂಬುನ್ನತಿಯಿಂದುನ್ಮತ್ತನ ಮಾಳ್ಪ ಮದವುದಾನವೇಂದ್ರನ ಮೌಳಿಯನ್ನು ತುಳಿದ ಪದದಿಎನ್ನ ಮದರಾಜನ ಮೆಟ್ಟಿಯಾಳೆಲೆ ದೇವನಿನ್ನ ಧ್ಯಾನವಿರತಿ ಮದದಿಂದ ಕೊಬ್ಬಿಸು ಪ್ರಸನ್ವೆಂಕಟ ಉರುಕ್ರಮ ಧನ್ಯರೊಡೆಯ 4ತ್ರಿವಿಡಿತಾಳಉತ್ತಮರ ಅವಗುಣವೆಣಿಸುತಹೊತ್ತು ಯಮಪುರಕೊಯ್ವ ಮತ್ಸರಮತ್ತೆ ಪರಸೌಖ್ಯಕ್ಕೆ ಕುದಿಕುದಿಸಿತು ಮತ್ಸರವುಚಿತ್ತಜನ ಶರ ಮತ್ಸರಿಸುತಿರೆಮೊತ್ತ ಗೋಪೇರ ಕುಚದ ಪೀಠದಿಒತ್ತಿ ಸುಖವಿತ್ತ ಪದವೆನ್ನೆದೆಲಿಡು ಪ್ರಸನ್ವೆಂಕಟ ಕೃಷ್ಣ 5ಅಟ್ಟತಾಳಇಂದುಮುಖಿಯರ ಕಂಡಂದಗೆಡಿಪ ಮೋಹಕಂದಗಳಾಡಿಸಿ ಕರುಣ ಉಕ್ಕಿಪ ಮೋಹತಂದೆ ತಾಯಿ ಬಂಧುವರ್ಗದ ಮೋಹಮುಂದಣಗತಿಗೆ ಮೂರ್ಛೆಯನಿತ್ತ ಮೋಹಕಂದರ್ಪನ ಗೆದ್ದಯೋಗಿಜನರ ಹೃದಯಾಂಧಕಾರವ ಗೆದ್ದು ತವಪಾದನಖಪೂರ್ಣಚಂದ್ರ ಚಂದ್ರಿಕೆದೋರಿ ಅಭಿಜÕನ ಮಾಡೆನ್ನ ದಯಾಸಿಂಧುಪ್ರಸನ್ನವೆಂಕಟ ಮುನಿಜನವಂದ್ಯ6ಏಕತಾಳಎನ್ನ ಕಾಮವೆಂಬ ಗಿರಿಗ್ವಜ್ರಾಂಕಿತ ಪದಎನ್ನ ಕ್ರೋಧವೆಂಬಾಹಿಗೆ ಧ್ವಜದಂಡಾನ್ವಿತ ಪದಎನ್ನ ಮದವೆಂಬ ಗಜಕಂಕುಶಾಂಕಿತ ಪದಎನ್ನ ಮತ್ಸರಾನ್ವಯಕೆ ಗಂಗಾನ್ವಿತ ಪದಎನ್ನ ಲೋಭ ಗೆದ್ದ ಮನೋಳಿಗೆ ಅಬ್ಜಯುತ ಪದಎನ್ನ ಮೋಹಧ್ವಾಂತ ಪೂರ್ಣೇಂದು ನಖದ ಪದಎನ್ನ ಮನೋರಥ ಸಿದ್ಧಿಯನು ಕರೆದೀವ ಪ್ರಸನ್ನವೆಂಕಟನ ದಿವ್ಯಪಾದಪಾಂಕಿತ ಪದಜತೆಇಂತು ಬಾಧಿಪ ಷಡ್ವರ್ಗದಂಬನೆ ಕಿತ್ತು ಸಂತತ ಶ್ರೀಚರಣ ಸ್ಮರಣೆಮುಂತಾದೌಷಧವನಿತ್ತೆನ್ನ ರಕ್ಷಿಸು ಧನ್ವಂತರಿ ಪ್ರಸನ್ನವೆಂಕಟ ನರಹರಿಯೆ
--------------
ಪ್ರಸನ್ನವೆಂಕಟದಾಸರು