ಒಟ್ಟು 37 ಕಡೆಗಳಲ್ಲಿ , 23 ದಾಸರು , 34 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯತಿವೃಂದ ಜಯತೀರ್ಥ ಜಯತೀರ್ಥ ಪ ಭವ | ಭಯಹರ ಗುರುವರ ಅ.ಪ ಕಾಗಿಣಿ ತಟ ಸ್ಥಿತ | ಮೇಘನಾಥಪುರ ಆಗರವೆನಿಸಿದ ಯೋಗಿವರೇಣ್ಯ 1 ತತ್ವಗಳರ್ಥವ | ಪುಸ್ತಕ ಭಾರವ ಎತ್ತಿನ ರೂಪದಿ | ಪೊತ್ತ ಮಹಾತ್ಮ 2 ಮರುತ ಸುಶಾಸ್ತ್ರಕೆ | ವಿರಚಿಸಿ ಟೀಕೆಯ ಮುರಿದು ಕುಭಾಷ್ಯವ | ಮೆರೆದ ಮಹಂತ 3 ನೆರೆನಂಬಿದೆ ಶ್ರೀ | ಹರಿನಾಮವ ನಿರುತಗರಿದು ಪೊರಿ | ನರನವತಾರಿ 4 ಭೀಮ ಭವಾಟವಿ | ಧೂಮ ಶ್ರೀ ಶಾಮಸುಂದರ ಪ್ರೇಮದ ದಾಸ 5
--------------
ಶಾಮಸುಂದರ ವಿಠಲ
ವ್ಯಾಪಾರ ಉದ್ಯೋಗವನು ಮಾಡುವೆ | ಭೂಪಾಶದೊಳಗೆ ಎಲ್ಲರಿಗೆ ಬಲ್ಲಿದನಾಗಿ ಪ ಮುರಾರಿ ನಾಮವೆಂಬೊ ಮುಂಡಾಸವನೆ ಸುತ್ತಿ | ಅರವಿಂದನಾಭವೆಂಬೊ ಅಂಗಿಯ ತೊಟ್ಟು || ನರಹರಿನಾಮವೆಂಬೊ ನಡುಕಟ್ಟನೆ ಸುತ್ತಿ | ಕರುಣಾಸಾಗರನೆಂಬೊ ಕಠಾರಿಯನು ಸಿಕ್ಕಿಸಿ 1 ಕಮಲನಾಭವೆಂಬೊ ಕಮಲದಾನಿ ಪಿಡಿದು | ತಿಮಿರದೋಷವೆಂಬೊ ಪಾಯಿಪೋಸು ಮೆಟ್ಟಿ || ಶಮೆದಮೆಯೆಂಬೊ ಪರಿಚಾರಕರ ಒಡಗೊಂಡು ಗಮಿಸಿದ್ದೆನೊ ಹರಿದಾಸರಿದ್ದ ಚಾವಡಿಗೆ 2 ಪೋಗಿ ನಮಸ್ಕಾರವೆಂದು ತಲೆಬಾಗಿ ನಿಲ್ಲಲು | ಭಾಗವತರು ಕರೆದು ಇಂಬನಿತ್ತು || ಯೋಗಕ್ಷೇಮವೆಲ್ಲ ವಿಚಾರಿಸಿ ಪ್ರೀತಿಯಲಿ | ಈಗಳೆ ಕುಳಿತ ಅಚ್ಯುತನ ತೋರಿದರು 3 ಕಂಡು ಕರವನು ಮುಗಿಯೆ ಕರುಣಾಸಾಗರನೆಂಬೊ | ಮಂಡಲಾಧಿಪನು ಕರೆದು ಮನ್ನಿಸಿ || ಗಂಡುಗಲಿಯಾಗೆಂದು ಸಂಚುಗಾರಿಕೆ ತುಲಸಿ | ದಂಡೆ ಕೊರಳಿಗೆ ಹಾಕಿ ದಾಸರೊಳಗಿರಿಸಿದನು 4 ಘನವಾದ ಉದ್ಯೋಗ ದೊರಕಿತು ನನಗಿನ್ನು | ಅನುಮಾನವಿಲ್ಲವು ಎಂದೆಂದಿಗೂ || ದಿನದಿನಕೆ ಹರಿನಾಮವೆಂಬೊ ಲೆಖ್ಖ-| ವನು ಬರೆದು ತ್ರಿಲೋಕದರಸನಿಗೆ ಒಪ್ಪಿಸಿದೆ || 5 ಬರೆದು ಲೆಖ್ಖವ ನೋಡಿ ದಯಾಪಯೋವಾರಿಧಿ | ಹರುಷದಿಂದಲಿ ಎನಗೆ ಸಂಬಳಕ್ಕೆ || ಬರೆಸಿ ಕೊಟ್ಟನು ಸನದು ಕೇಶವಾದಿಯಂಬೊ | ವರಹಗಳು ಎಂದಿಗಾದರು ಅಳಿವಿಲ್ಲದೆ || 6 ಈಸು ದಿನ ಉದ್ಯೋಗ ಹೀನನಾಗಿ ನೊಂದೆ | ದಾಸರಾ ದಯದಿಂದ ದೊರೆಕಿತಿಂದು || ಸಂಚಿತ ಕರ್ಮ ಓಡಿಸಿ |ಶ್ರೀಶ ವಿಜಯವಿಠ್ಠಲನಲ್ಲಿ ಬಾಳಿದೆನೊ || 7
--------------
ವಿಜಯದಾಸ
ಶ್ರೀ ರಾಘವೇಂದ್ರರು ಎಲ್ಲಿರುವೆ ತಂದೆ ಬಾರೊ ಗುರುರಾಯನೆ ಪ ಬಳಲುವೆ ಭವದಿ ತಳಮಳಿಸುವೆನೊ ಕಳವಳಿಕೆಯ ಬಿಡಿಸೊ ಗುರುರಾಯನೆ 1 ತಡ ನೀ ಮಾಡಲು ತಡೆಯದಾಗದೋ ಗಡ ಬಾ ಇಡು ದಯವಾ 2 ಸಕಲರಲ್ಲಿ ವ್ಯಾಪಕನೆಂದ್ಹರಿಯನು ಪ್ರಕಟಿಸಿದಿ ಜಗದಿ 3 ಹರಿನಾಮವು ಸರ್ವತಾರಕವೆಂಬÉೂೀದು ಮೆರಸಿದಿ ಧರೆಯೊಳಗೆ 4 ಧೀರನಾದ ಹನುಮೇಶ ವಿಠಲನಾ ಧ್ಯಾನದಿ ಮನ ನಿಲ್ಲಿಸೋ5
--------------
ಹನುಮೇಶವಿಠಲ
ಶ್ರೀಶಪದ ಕಮಲಕ್ಕೆ ಮಧುಪ | ನಿನ್ನದಾಸನೆಂದೆನಿಸುವುದು ಧನಪ | ಸಖ ಮ-ಹೇಶನ ಸುತ ಪೇಳ್ವೆ ಭಿನ್ನಪ | ನೀ ಪ್ರ-ಕಾಶಿಪುದು ಮನವಿ ವಿಘ್ನಪ 1 ಪತಿ ಕರುಣಿ ಶುಭಗಾತ್ರ | ಗ್ರಂಥಲೇಸೆನಿಸಿ ಲಿಖಿಸಿದೆ ಪವಿತ್ರ | ಮೂರ್ತಿಪಾಶಾಂಕುಶ ಪಾಣಿ ಸುಚರಿತ್ರ 2 ಸ್ವಾಂತ | ದಲ್ಲಿಅಭಯ ನೀ ತಿಳಿಸು ನಿಶ್ಚಿಂತ 3 ವಿಘ್ನಪನೆ ದುರ್ವಿಷಯದಲ್ಲಿ | ಬಹಳಮಗ್ನವಿಹ ಮನವ ಹರಿಯಲ್ಲಿ | ನಿರತಲಗ್ನ ಮಾಡಿಸು ತ್ವರ್ಯದಲ್ಲಿ | ಇನ್ನೂ ವಿಘ್ನಗಳಿಗಂಜಿಕೆಯು ಎಲ್ಲಿ ? | 4 ಧನಪ ವಿಶ್ವಕ್ಸೇನ ಯಮಳ | ಆ ಅ-ಶ್ವಿನೀಗಳ್ಗೆ ಸಮ ಕರಿಗೊರಳ | ಪುತ್ರನನುಜನೇ ಶೇಷ ಶತಗರುಗಳ | ರಲ್ಲಿಗುಣೋತ್ತಮನೆ ಕಾಯೊ ನಮ್ಮಗಳ | 5 ಬವರ | ದಲ್ಲಿಗೌರಿಪತಿ ವರದಿ ಉದ್ಧಟರ | ಆದಕ್ರೂರಿ ಜನ ಸಂಹಾರಿ ಶೂರ | 6 ಸೂತ್ರ ಅಪರೂಪ | ಖಳರದರ್ಪ ಭಂಜನನೆ ಶುಭರೂಪ | 7 ಶ್ರೀಶನತಿ ನಿರ್ಮಲವು ಎನಿಪ | ನಾಭಿದೇಶಗತನಾಗಿಹನೆ ಗಣಪ | ರಕ್ತವಾಸೆರಡು ಶೋಭಿತನೆ ಸುರಪ | ಮಿತ್ರಮೂಷಕಾ ವರವಹನ ರೂಪ | 8 ಶಂಕರಾತ್ಮಜ ದೈತ್ಯ ಜನಕೆ | ಅತಿ ಭ-ಯಂಕರ ಗತಿಯ ನೀಡಲ್ಕೇ | ನೀನುಸಂಕಟ ಚತುರ್ಥಿಗ ಎನೆಲ್ಕೆ | ಹಾಗೆಮಂಕು ಜನಾವೃತವು ಮೋಹಕ್ಕೆ 9 ಸಿದ್ಧಿ ವಿಧ್ಯಾಧರರು ಎಂಬ | ಗಣಾರಾಧ್ಯ ಪದಕಮಲ ನಿನದೆಂಬ | ಜನಕೆಸಿದ್ಧಿದಾಯಕ ವೇಗ ಎಂಬ | ಮಹಿಮಬುದ್ಧಿ ವಿದ್ಯೆಗಳ ಕೊಡು ತುಂಬ 10 ಭಕ್ತವರ ಭವ್ಯಾತ್ಮ ಪರಮ | ಶಾಸ್ತ್ರಸಕ್ತವಾಗಲಿ ಮನವು ಅಧಮ | ವಿಷಯಸಕ್ತಿರಹಿತನ ಮಾಡಿ ಪರಮ | ಶುದ್ಧಭಕ್ತನೆಂದೆನಿಸು ನಿಸ್ಸೀಮ | 11 ಶಕ್ರ ಪೂಜಿಸುತ ಗುರು ನಿನ್ನ ವೈರಿಶುಕ್ರ ಶಿಷ್ಯರ ಕೊಂದ ನಿನ್ನ | ಆ ಉ-ರುಕ್ರಮ ರಾಮ ಪೂಜಿಸೆನ್ನ | ತೋರ್ದವಕ್ರ ತುಂಡನೆ ಕರುಣವನ್ನ 12 ಕೌರವನು ಭಜಿಸದಲೆ ನಿನ್ನ | ಆಸಮೀರನ ಗದೆಯಲಿಂದಿನ್ನ | ಹತನುತಾರಕಾಂತಕನನುಜ ಯೆನ್ನೆ | ಧರ್ಮಪ್ರೇರಕನೆ ಸಂತೈಸು ಎನ್ನ 13 ಮೂಕರನ ವಾಗ್ಮಿಗಳ ಗೈವ | ಗುರು ಕೃ-ಪಾಕರನೆ ಕಾಮಗಳ ಕೊಡುವ | ಪರಮಲೇಖಕನೆ ಮನ್ಮನದಲಿರುವ | ಬಹುವ್ಯಾಕುಲವ ಪರಿಹರಿಸು ದೇವ | 14 ಸತ್ತೆ ವೃತ್ತಿಯು ಮತ್ತೆ ಪ್ರಮಿತಿ | ಜಗಕೆಇತ್ತು ತಾ ಸೃಷ್ಟ್ಯಷ್ಟಕತ್ರ್ರೀ | ಎನಿಪಚಿತ್ತಜ ಪಿತನ ದಿವ್ಯ ಸ್ಮøತಿ | ಇತ್ತುನಿತ್ಯ ನೀ ಪಾಲಿಪುದು ಸದ್ಗತಿ 15 ಪಂಚವಕ್ತ್ರನ ತನಯ ಕೇಳೊ | ಎನಗೆಪಂಚಭೇದದ ಜ್ಞಾನ ಪೇಳೊ | ಹರಿಯುವಾಂಛಿತ ಪ್ರದನ ದಿಟ ಆಳೊ | ಭವದಿವಂಚಿಸದೆ ಕಾಯೊ ಕೃಪಾಳೊ | 16 ಏನು ಬೇಡುವುದಿಲ್ಲ ನಿನ್ನ | ದುಷ್ಟಯೋನಿಗಳು ಬರಲಂಜೆ ಘನ್ನ | ಲಕುಮಿಪ್ರಾಣಪತಿ ತತ್ವರಿಂದಿನ್ನ | ಕಾರ್ಯತಾನೆಂಬ ಮತಿಯ ಕೊಡು ಮುನ್ನ 17 ಭಕ್ತ ಜನ ಕಲ್ಪ ತರುವೆನಿಪ | ಉಮೆಯಪುತ್ರ ಮಮ ಮಮತೆಯನು ಹರಿಪ | ದಾಯಹತ್ತಿಹುದು ನಿನ್ನಲ್ಲಿ ಗಣಪ | ಕಳೆಯೊಎತ್ತಿ ಕೈ ಮುಗಿವೆ ಭವರೂಪ 18 ಜಯ ಜಯವು ಎಂಬೆ ವಿಘ್ನೇಶ | ತಾಪತ್ರಯಗಳಿನು ನೀನೇ ವಿನಾಶ | ಗೈದುಭಯ ಶೋಕರಹಿತ ವಿದ್ಯೇಶ | ಜನ್ಮಾಮಯ ಮೃತಿ ಹರಿಸೊ ನಭಕೀಶ | 19 ನಮಿಸುವೆನೊ ಹೇರೊಡಲ ನಿನ್ನ | ಕರುಣಿಕಮಲಾಕ್ಷ ಹರಿನಾಮವನ್ನ | ನಿರುತವಿಮಲ ಮನದಿ ನುಡಿವಂತೆ ಎನ್ನ | ಮಾಡಿಕಮಲೇಶ ಪದ ತೋರೊ ಘನ್ನ20 ಎರಡು ನವ ಮೂರು ಪದಗಳನ್ನ | ಗೌರಿತರಳನಲಿ ಇರುವಂಥ ಪ್ರಾಣ | ಪತಿಯುಗುರು ಗೋವಿಂದ ವಿಠ್ಠಲನಾ | ಪದದಿಇರಿಸುವರ ಹರಿ ಪೊರೆವ ಅವರನ 21
--------------
ಗುರುಗೋವಿಂದವಿಠಲರು
ಸಾಸಿರ ಮಾತುಗಳ್ಯಾಕೊ ಎಲೆಮನ ಕೇವಲ ಹರಿನಾಮವೊಂದೆ ಸಾಕೊ ಪ ಸ್ನಾನವುಯಾಕೊ ಮೌನವುಯಾಕೊ ದಾನವಾರಿಯಧ್ಯಾನವೊಂದೆ ಸಾಕೊ 1 ಮಂತ್ರವುಯಾಕೊ ತಂತ್ರವುಯಾಕೊ ಮಂತ್ರಮೂರ್ತಿ ಚಿಂತೆಯೊಂದೆ ಸಾಕೊ 2 ಹೋಮವುಯಾಕೊ ನೇಮವುಯಾಕೊ ಸ್ವಾಮಿ ಶ್ರೀರಾಮನ ಭಕ್ತಿಯೊಂದೆ ಸಾಕೊ 3
--------------
ರಾಮದಾಸರು
ಸೋತುಹೋದೆ ನಾನು ಶ್ರೀಹರಿ ಸೋತುಹೋದೆ ನಾನು ಪ ಪತಿತ ಪಾವನ ಮೂರ್ತಿಯ ಪ್ರೀತಿಯ ಸತತ ಪಡೆಯಲು ಕೆಲಸವ ಮಾಡಿ ಅ.ಪ. ನಿತ್ಯದಿ ಭಜಿಸುತ ಹರಿನಾಮವನು ಸತ್ಯಧರ್ಮದಿ ನಡೆಯುತಲೀ ಭ್ಯತ್ಯರಂದದಿ ಸೇವೆಯ ಮಾಡುತ ನಿತ್ಯನೆನಾ ಧನ್ಯಾತ್ಮನಾಗದೆ 1 ಪರಮಾತ್ಮನ ಕೀರ್ತನೆಯನು ಮಾಡುತ ಹರುಷದಿ ದಾಸನಾಗುತಲೀ ಹರಿಯ ಸಾಸಿರ ನಾಮವ ಸ್ಮರಿಸುತ ಶರಣಾಗತ ಪರಿಪಾಲನ ನೋಡಿದೆ 2 ಹೊನ್ನು ಹÉಣ್ಣು ಮಣ್ಣಿಗೋಸುಗ ಜನ್ಮವ ಮೋಹದಿ ನವಿಸದಲೇ ಚಿನ್ಮಯ ರೂಪನ ಪೂಜೆಯ ಮಾಡುತ ಚನ್ನಕೇಶವ ಪಾದವ ಸೇರದೆ 3
--------------
ಕರ್ಕಿ ಕೇಶವದಾಸ
ಸ್ಮರಿಸಿ ಸುಖಿಸೆಲೋ ಮಾನವಾ ಪ ಸರಸಿಜಾಸನ ಸತತ ನೆನೆವ ಹರಿನಾಮವನು ಅ.ಪ ಜವರಾಯ ಕಿಂಕರರ ಹಿಮ್ಮೆಟ್ಟಸಿದ ನಾಮ ಧ್ರುವರಾಯಗೊಲಿದ ಘನವು ಈ ನಾಮ ನವನೀತರೂಪದಿಂದ ಘನವ ತಾಳ್ದಿಹ ನಾಮ ಸುವಿಲಾಸದಿಂ ಪಾರ್ಥಗೊಲಿದಿರ್ಪನಾಮವನು 1 ಸನಕಾದಿ ಮುನಿಗಳು ಸತತ ಭಜಿಸುವ ನಾಮ ಅನಿಲಜಾತನಿಗೊಲಿದ ಪರಮನಾಮ ವನಚಾರಿಯಾಗಿದ್ದ ಶಬರಿಗೊಲಿದ ನಾಮ ವನಚರರ ಗರುವವನು ಮುರಿಯುವ ನಾಮ 2 ಪಾಂಚಾಲಿಗಕ್ಷಯದ ವರವನಿತ್ತಾ ನಾಮ ಪಾಂಚಜನ್ಯವ ಸಿರಿಯೊಳೆಸೆಯುತಿಹ ನಾಮ ವಂಚಕರ ಹೃದಯಗಳ ಭೇದಿಸುತ್ತಿಹನಾಮ ಚಂಚಲೆಯರುತ್ಸಾಹದಿಂ ಭಜಿಪ ನಾಮವನು 3 ದುರುಳದೈತ್ಯರ ಮನವ ಕದಡಿ ಕಲಕುವ ನಾಮ ಶರಣಾಗತಾವಳಿಯ ಪೊರೆಯುತಿಹನಾಮ ತರಳಪ್ರಹ್ಲಾದ ತಾ ಪಿತಗೊರೆವ ನಾಮವನು 4 ಮಾಂಗಿರೀ ವರಾಗ್ರದೊಳು ಮರೆಯುತಿಹ ಸಿರಿನಾಮ ಶೃಂಗಾರ ಶ್ರೀ ಪಾಂಡುರಂಗ ನಾಮ ಗಂಗಾಧರಾನುತ ಸುಖದಾತ ಶ್ರೀನಾಮ ಮಂಗಳಕರ ರಾಮದಾಸನುತ ನಾಮವನು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ಮರಿಸೊ ಹರಿನಾಮ ಏ ಮನುಜಾ ಸ್ಮರಿಸೋ ಹರಿನಾಮ ನಿರವಧಿ ಸುಖಧಾಮ ಪರಮ ಪುರುಷಗಿದು ಪರಿಪೂರ್ಣ ಪ್ರೇಮ ಪ. ತರಳ ಪ್ರಹ್ಲಾದನ ಪೊರದು ಪಾಂಚಾಲಿಗೆ ತ್ವರಿತದೊಳಕ್ಷಯವಿತ್ತು ಸರಸಿಯೊಳಗೆ ಕರಿರಾಜನ ಸಲಹಿದ ನರ ಕಂಠೀರವ ಕರುಣಿಸುವನು ಬೇಗ 1 ಹಲವು ಜನ್ಮಗಳಲ್ಲಿ ಗಳಿಸಿದ ದುಷ್ಕøತ ಗಳನೆಲ್ಲ ನಿರ್ಮೂಲಗೊಳಿಸುವುದು ಜಲಜ ಸಂಭವ ಮಾಳ್ಪ ಕೆಲಸದಿ ಸಿಲುಕದೇ ನೆಲೆಗೊಂಡು ಸೌಖ್ಯವ ಸಲಿಸಬೇಕಾದರೆ 2 ಕಲಿಕೃತ ಕಲ್ಮಷ ಬಲೆಯಿಂದ ಮೋಚನ- ಗೊಳಿಸಲು ಹರಿನಾಮವಲ್ಲದಿನ್ನು ಚಲಿತ ಚಿತ್ತದ ಕರ್ಮಬಲದಿಂದಲಾಹದೆ ನಳಿನನಾಭನೇ ನೀ ಬೆಂಬಲನಾಗು ತನಗೆಂದು 3 ಉದಯಾರಂಭಿಸಿ ಮತ್ತೊಂದು ದಯ ಪರ್ಯಂತ ವಿಧಿವಿಹಿತಗಳೆಲ್ಲ ಸದರವೇನೊ ಪದುಮನಾಭನ ನಾಮ ಒದಗಿದರದು ಪೂರ್ಣ- ವದರಿಂದ ಸರ್ವರ ಹೃದಯ ನೀ ಮರೆಯದೆ 4 ಸಂಚಿತಾಗಾಮಿಗಳಂಚುವಂ ದಿತಿಜರ ಸಂಚಯಕನುದಿನ ಸ್ಮರಿಸುವರ ಕಿಂತಿತಾರಬ್ದ ಪ್ರಪಂಚವ ತ್ವರಿತದಿ ಮಿಂಚಿನಂದದಿ ತೋರಿ ಪರಿಹಾರಗೊಳಿಪರೇ 5 ಕರುಣಾಭಿಮಾನಿಗಳರಿತು ಮಾಡಿಸುತಿಹ ನಿರತ ಕೃತ್ಯಗಳೊಂದು ಮೀರದಲೆ ಹರಿಯಾಜ್ಞೆ ಇದು ಯೆಂದು ಚರಿಸುತಲನುದಿನ ಪರಮೋತ್ತಮ ಕಾರ್ಯಧುರವಿದೆ ತನಗೆಂದು 6 ನಾಗ ಗಿರೀಂದ್ರನ ನೆನೆದರೆ ಇಹಪರ ಭೋಗ ಸಾಮ್ರಾಜ್ಯವು ಸ್ಥಿರವಾಹುದು ವಾಗೀಶನ ಪರಮಾಗಮ ಸಿದ್ಧಾಂತ- ವಾಗಿಹದಿದೆಯೆಂದು ನೀ ಗುರುತವನಿಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮಾರ್ತರು ನಾಮವ ಧರಿಸಿ ಯಥಾರ್ಥವು ಹರಿನಾಮವ ಬಹಳ ವಿಸ್ತರಿಸಿ ಪ ಕಣ್ಣಿಗೆ ಕಾಣದೆ ಪೂರ್ಣವಾಗಿಹ ನಾಮ ಚನ್ನಕೇಶವ ರಾಯನೆಂದೆಂಬ ನಾಮ ಉನ್ನತವಾಗಿಹ ನಾರಾಯಣ ನಾಮ ಮಾಧವ ನಾಮವ 1 ಅಂತರಂಗದಿ ಗೋವಿಂದನ ನಾಮವ ಸಿರಿ ನಾಮವ ಸಂತತ ಮಧುಸೂದನನೆಂಬ ನಾಮವ ಪಂಥವಿಡಿದು ತ್ರಿವಿಕ್ರಮ ನಾಮವ 2 ಅನುದಿನ ವಾಮನ ನಾಮವ ವನಜಾಕ್ಷ ಶ್ರೀಧರ ಗುಣ ನಾಮವ ವಿನಯದಿ ಹೃಷಿಕೇಶನೆನುತಿಹ ನಾಮವ ತನುವಾದ ಪದುಮನಾಭನ ನಾಮವ 3 ಅಂದದೊಳು ಧರಿಸಿರುವ ದಾಮೋದರ ನಾಮ ಚಂದದಿ ವಾಸುದೇವನ ನಾಮವ ಕುಂದದೆ ಸಂಕರ್ಷಣನೆಂಬ ನಾಮವ ಬಂಧನ ಪರಿಹಾರ ಪ್ರದ್ಯುಮ್ನ ನಾಮವ 4 ಅರ್ಥಿಯಿಂದಲೆ ಅನಿರುದ್ಧನ ನಾಮವ ಉತ್ತಮ ಪುರುಷೋತ್ತಮ ನಾಮವ ಭಕ್ತಿಯಿಂದಲೆ ಅಧೋಕ್ಷಜನೆಂಬ ನಾಮವ ಮೃತ್ಯುವು ಕಾಣದ ನರಹರಿ ನಾಮವ 5 ಅಚ್ಯುತ ನಾಮವ ನಿಶ್ಚಯಿಸಿ ಜನಾರ್ದನ ನಾಮವ ಬಚ್ಚಿಡಬೇಡ ಉಪೇಂದ್ರನ ನಾಮವ ಸಿರಿ ನಾಮವ 6 ದುಷ್ಟನಿಗ್ರಹವಾದ ಕೃಷ್ಣನ ನಾಮವ ಬೆಟ್ಟದ ವರಾಹತಿಮ್ಮಪ್ಪನ ನಾಮವ ಅನುದಿನ ಘನ ನಾಮವ ಸೃಷ್ಟಿಯೊಳು ಉತ್ತಮ ಸ್ಮಾರ್ತನೆ ವೈಷ್ಣವ 7
--------------
ವರಹತಿಮ್ಮಪ್ಪ
ಹರಿ ಎನ್ನು ಹರಿ ಎನ್ನು ಹರಿ ಎನ್ನು ಮನವೆ ಪ. ನಿರುತದಿ ಪೊರೆವನ ಮರೆವರೆ ಮನವೆ ಅ.ಪ. ಸರಿಯುವುದು ಆಯುಷ್ಯ ಸಂಪತ್ತು ನೋಡು ಬರುತಿದೆ ಮೃತ್ಯುವು ಕರೆಯಲು ನೋಡು ಹರಿನಾಮ ಯಮದಂಡ ಕಡಿವುದು ನೋಡು ಪರಮಪುರುಷನ ನೀ ಬಿಡದೆ ಕೊಂಡಾಡು 1 ಹರಿಯ ನಾಮಾಮೃತ ಸುಜನಕೆ ನೀಡು ಹರಿಯ ಜ್ಞಾನಾನಂದಾಂಬುಧಿಯೊಳೊಲ್ಯಾಡು ಹರಿಯ ಮೂರುತಿಯನ್ನು ಮನದಲ್ಲಿ ನೋಡು ಹರಿಭಕ್ತಿ ಮದವೇರಿ ಕುಣಿ ಕುಣಿದಾಡು 2 ಹರಿಗುರು ಸ್ಮರಣೆಯ ನಿರುತದಿ ಮಾಡು ಹರಿಭಕ್ತಿ ಲಾಂಛನ ಮೈಯಲ್ಲಿ ಮೂಡು ಹರಿದಾಸ ಸಂಪತ್ತಿನೊಳಗೆ ಓಲಾಡು ಹರಿಯ ಮನದಿ ಕಂಡು ನಲಿನಲಿದಾಡು 3 ಕಾಮಕ್ರೋಧಗಳನ್ನು ಖಂಡಿಸೀಡ್ಯಾಡು ನೇಮ ಶ್ರೀ ಗುರು ಆಜ್ಞೆಯಂದದಿ ಮಾಡು ಯಾಮ ಯಾಮಕೆ ಹರಿನಾಮವ ಪಾಡು ಶ್ರೀಮದಾನಂದತೀರ್ಥರ ಮತ ನೋಡು 4 ಶ್ರೀ ಪರಮಾತ್ಮನ ಗುಣವ ಕೊಂಡಾಡು ಶ್ರೀಪತಿ ಭಕ್ತರ ಸಂಗದಿ ಕೂಡು ಭವ ಹರ ಸ್ತುತಿ ಮಾಡು ಗೋಪಾಲಕೃಷ್ಣವಿಠ್ಠಲನ ದಯ ಬೇಡು 5
--------------
ಅಂಬಾಬಾಯಿ
ಹರಿಯಾ ಪಾದಕ ಶರಣೆನ್ನಿ | ಸ್ಮರಣೆಗೆ ಹರಿಯನು ಕರೆತನ್ನಿ ಪ ಅವನ ನಾಮವನೆನಿಯಲು ಭಕುತಿಲಿ | ಭವಭಯ ಮೂಲದಿ ನೀಗುವದು | ಆವಾಗ ಕಂಗಳ ಸಿರಿಸುಖ ದೋರುತ | ಜೀವನ ಗತಿನೆಲೆ ಹೊಂದುವದು 1 ಸಿಕ್ಕಿತ್ತು ನರದೇಹ ದೊರಿಯಲು ಪುಣ್ಯದಿ | ಸರ್ಕನೆ ಸಂತರ ಮೊರೆಹೊಕ್ಕು | ದಕ್ಕಿಸಿಕೊಳ್ಳದೇ ಬೋಧಾಮೃತವನು | ಪುಕ್ಕಟೆ ದಿನವನು ಗಳೆವರೇ 2 ತನುವಿದು ನೋಡಲು ನೆಚ್ಚಿಕೆ ಇಲ್ಲದ | ಮನಿಗಂಧರ್ವದ ಪುರದಂತೆ | ತನುವಿಗೆ ಹತ್ತಿದ ಸಂಸಾರ ಸುಖ | ಕನಸಿನ ಭಾಗ್ಯವ ತೆರೆದಂತೆ 3 ಇದರೋಳು ನಾ ನನ್ನದು ಎಂದೆನುತಲಿ | ಮದಮತ್ಸರವಾ ಬಗೆಯಲಿ | ಕುದಿಕುದಿದೇಳು ತಜ್ಞಾವಿಹೀನದಿ | ಉದರವ ಹೊರವುತ ತಿರುಗವರೇ 4 ಈಗಾಗಯನ್ನದೇ ಹರಿನಾಮವ | ನಾ | ಲಿಗೆ ಕೊನಿಯಲಿ ತಂದಿರಿಸೀ | ಭವ | ಸಾಗರ ಸುಳಿಯಿಂದಲಿ ತರಸೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹುಚ್ಚಾದೇನಣ್ಣಾ | ಮುಚ್ಚುಗೊಂಡು ನಾನು ಪ ಮರುಳು ಬೀಜಾಕ್ಷರನು1 ಕುಣಿದು ಕೂಗುವೆ ಹರಿನಾಮವನು 2 ಹಿಂದಾದಾ ನೆನೆಯದೆ ಮುಂದ ಹಂಬಲಿಸದೇ | ಬಂದದನುಂಡು ಕುಳ್ಳಿರುವೆನು 3 ಗಂಡು | ಜರಿದು ಬಲ್ಲವಿಕೆ ಹಮ್ಮವನು 4 ಗುರು ಮಹಿಪತಿ ಬೋಧಾ | ಹರಿಸೀ ಸಂಶಯ ಬಾಧಾ | ಮರೆಸಿತು ಅನ್ಯ ದಾರಿಯನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ನೇಕೆ ಯಮನ ಬಾಧೆಗಳು? |ಎನ್ನ ಜಿಹ್ವೆಯೊಳಗೆ ಹರಿನಾಮವಿರಲು ಪಪತೀತ ಪಾವನನೆಂಬ ನಾಮ-ಸಕಲ |ಶ್ರುತಿತತಿಗಳಿಗೆಲ್ಲ ನಿಲುಕದೀ ನಾಮ ||ಕ್ರುತುಕೋಟಿ ಫಲ ಒಂದೇ ನಾಮ-ಸದ್ |ಗತಿಗೆ ಸಂಗಡ ಬಾಹೋದಲೆ ದಿವ್ಯನಾಮ1ಮುನ್ನ ಪ್ರಹ್ಲಾದನೆ ಸಾಕ್ಷಿ - ನಮ್ಮ |ಕನ್ಯಾಶಿರೋಮಣಿ ದ್ರೌಪದಿ ಸಾಕ್ಷಿ ||ಚೆನ್ನ ಅಜಮಿಳನೊಬ್ಬ ಸಾಕ್ಷಿ ಆ |ಉನ್ನಂತ ಲೋಕವಾಳುವ ಧ್ರುವ ಸಾಕ್ಷಿ 2ಹದಿನಾಲ್ಕು ಲೋಕವಾಳುವ - ನಮ್ಮ |ಮದನಜನಕನಾಗಿ ಮಹಿಮೆ ತೋರುವ ||ಪದುಮನಾಭನಾಗಿ ಮೆರೆವ- ನಮ್ಮ |ಪುರಂದರವಿಠಲನ ಹರುಷದಿ ಕರೆವ 3
--------------
ಪುರಂದರದಾಸರು
ಈ ಕಾರಣ ಹರಿನಾಮವ ನೆನೆಯಲಿಬೇಕಾಲಸ್ಯವಿಲ್ಲದಲೆಭೀಕರ ಯಮಭಟರಂತ್ಯದಿ ಕವಿಯಲಿನೂಕುವುದೀ ಅಸ್ತ್ತ್ರದಲಿ ಪ.ಷೋಡಶ ಉಪಚಾರದ ಪೂಜಾವಿಧಿಮಾಡುವ ಪಕ್ವಗೆ ಸಾಧ್ಯ ತಾಮಾಡೇನೆಂದರಗಾಧಮಾತಾಡಿದರೇನದಸಾಧ್ಯರೂಢಿಲಿ ಶ್ರೀಹರಿಗುಣ ಸಂಕೀರ್ತನೆಪಾಡಿದರತಿ ಆಹ್ಲಾದ 1ಸುಜ್ಞಾನಿಗಳ್ಹರಿ ಮೆಚ್ಚಿಸಿದರೆ ಅನಭಿಜÕರಿಗೆಲ್ಲಿಯ ಜ್ಞಾನಭವಸುಗ್ಗಿಯೊಳೆಲ್ಲಿ ಧ್ಯಾನ ವೈರಾಗ್ಯದ ನಡೆಯು ಕಠಿಣ ಅನಘ್ರ್ಯದ ಭೋಜನ ದೊರೆತಿದೆ ಹರಿನಾಮಂಗಳೆ ಅಮೃತದ ಪಾನ 2ಈ ಜನುಮವು ಜಗುಳುವ ಮುನ್ನಖಗರಾಜಗಮನ ರಂಗನ್ನ ಸರ್ವದಾ ಜಪಿಸುವನೆ ಧನ್ಯ ಸುಖಬೀಜವಿದೆನ್ನಿತ್ರಿಜಗತ್ಪತಿ ಪ್ರಸನ್ವೆಂಕಟರಾಯನಸೋಜಿಗನಾಮಂಗಳಣ್ಣ3
--------------
ಪ್ರಸನ್ನವೆಂಕಟದಾಸರು
ಏಕೆ ಮೈ ಮರೆದೆ ನೀನು - ಜೀವನವೇ - |ಏಕೆ ಮೈಮರೆದೆ ನೀನು ಪಏಕೆ ಮೈಮರೆದೆ ನೀ - ಲೋಕಾರಾಧ್ಯನ ಪಾದ|ಬೇಕೆಂದು ಭಜಿಸು ಕಾಣೋ - ಜೀವನವೇ ಅ.ಪ.ಮದ್ದಾನೆಗಳೆಂಟು ಸೊಕ್ಕಿನಿಂ ಬರುವಾಗ |ಎದ್ದು ಕುಳ್ಳಿರಬಾರದೆ - ಜೀವನವೇ ||ಅಧ್ಯಾತ್ಮಕಾ ಹರಿನಾಮವ ಶ್ರುತಿಮಾಡಿ |ಒದ್ದು ಬಿಸಾಡು ಕಣೊ - ಜೀವನವೇ 1ಕಂದರ್ಪನೆಂಬವ ಕಾದುತ ಬರುವಾಗ |ನಿಂದಿಸುತಿರಬಾರದೆ - ಜೀವನವೇ ||ಒಂದೇ ಮನಸು ಎಂಬ ವಜ್ರಾಯುಧವ ಪಿಡಿದು |ಕೊಂದು ಬೀಸಾಡು ಕಾಣೊ - ಜೀವನವೇ 2ವಿಷಯದಿ ಸುಖಕಾಣೆ ಪಶುಜನರೊಳು ದೇಹ |ಹಸನುಗಳೆಯಲು ಬೇಡವೋ - ಜೀವನವೇ||ಬಿಸಜಾಕ್ಷ ಪುರಂದರವಿಠಲನೊಲಿಯೆ ಸುಖ -|ರಸದಿ ಲೋಲಾಡು ಕಾಣೋ - ಜೀವನವೇ 3
--------------
ಪುರಂದರದಾಸರು