ಒಟ್ಟು 45 ಕಡೆಗಳಲ್ಲಿ , 30 ದಾಸರು , 44 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎ. ಬಿಡಿ ಹಾಡುಗಳು ವಿತ್ತ ವಿಚಾರ ವಿತ್ತವೇ ಸರ್ವ ಪ್ರಮತ್ತಮರ್ಥದಾ ಪ ವಿತ್ತವಿಲ್ಲದಿರೆ ಭಿತ್ತಿವರ ಬೊಂಬೆಯಂತೆ ಅ.ಪ. ವಿತ್ತವಿರಲು ಪ್ರಾಥರುತ್ಥಾಯ ಸ್ನಾನವುವಿತ್ತದಿಂದಲಿ ಮಾಗಳಾರ್ಥಿಗಳುವಿತ್ತದಿಂದಲಿ ಪತ್ನಿ ಪುತ್ರರು ಸ್ವಾಧೀನಾವಿತ್ತ ಹೀನಾಮೂಲ ವಸ್ತಿ ಮಾಡುವನು 1 ವಿತ್ತದಿಂದಲಿ ಪುರಾಣೋಕ್ತ ವ್ರತಗಳಗ್ನಿಹೋತ್ರಶ್ವಮೇಧಾನ್ನ ಸತ್ರಗಳುವಿತ್ತದಿಂದಲಿ ಮಧ್ಯಾನ್ಹೊತ್ತಿಲೀ ಬಹುಜನಾತಿಥ್ಯವು ಹರಿಪೂಜೆ ನರ್ತನಾ ತತಿಗಳು 2 ವಿತ್ತದೊಳಗೆ ಹರಿಪತ್ನಿಯೂ ಕುಣಿಯುವಳುವಿತ್ತದಿಂದಲಿ ಮಹಾಪತ್ತು ನಾಶಾವಿತ್ತದಿಂದಲಿ ಸುವಿರಕ್ತಿ ಭಕ್ತಿ ಜ್ಞಪ್ತಿವಿತ್ತಮಿಂದಿರೇಶ ನೊಕ್ತ್ರ ತೋರಿಸುವನು 3
--------------
ಇಂದಿರೇಶರು
ಕಥನಾತ್ಮಕ ಹಾಡುಗಳು ಉದ್ಭವಿಸಿದ ಕಂಬದಿ | ಶ್ರೀ ನಾರಸಿಂಹ ಉದ್ಭವಿಸಿದ ಕಂಬದಿ ಪ. ಉದ್ಭವಿಸಿದ ಬೇಗ ಪದ್ಮಸಂಭವಪಿತ ಮುದ್ದು ಬಾಲಕನ ಉದ್ಧರಿಸುವೆನೆಂದು ಅ.ಪ. ದುರುಳನು ಪ್ರಹಲ್ಲಾದನು | ಪರಿಪರಿಯಿಂದ ಕರಕರಪಡಿಸೆ ಕುವರನ ನರಹರಿ ಎನ್ನನು ಪೊರೆ ಎಂದು ಮೊರೆಯಿಡೆ ಸುರರು ನೋಡುತಿರೆ ಭೋರ್ಗರೆಯುತ ಆ ಕ್ಷಣ 1 ಎಲ್ಲಿರುವನು ಹರಿ ಎಂದು | ದೈತ್ಯನು ಮಗನ ಇಲ್ಲಿ ಸ್ಥಂಭದಿ ತೋರೆಂದು ಖುಲ್ಲನು ಹಿಂಸಿಸೆ ಸರ್ವತ್ರದಿ ಶ್ರೀ- ನಲ್ಲನಿರುವನೆಂದು ಸಾಧಿಸೆ ಭಕ್ತನು 2 ತನಯನ ನುಡಿ ಉಳಿಸಲು | ನರಹರಿ ಹೊಸಲೊಳ್ ಇನನು ತಾ ಮುಳುಗುತ್ತಿರಲು ದನುಜನ ತೊಡೆಯ ಮೇಲಿಟ್ಟು ನಖದಲಿ ಕನಲಿ ಸೀಳಿ ಕರುಳ್ಮಾಲೆ ಧರಿಸುತ 3 ಸುರರು ಜಯ ಜಯವೆನ್ನುತ | ಪೊಗಳುತ್ತಲಿರೆ ನರಹರಿ ಉಗ್ರ ತಾಳುತ ಸುರರು ಬೆದರಿ ಪ್ರಹ್ಲಾದನ ಕಳುಹಲು ಕರಿಗಿರಿ ನರಹರಿ ಶಾಂತನೆನಿಸಿದ 4 ತಾಪವಡಗಿತು ಜಗದಲಿ | ವರ ಭಕ್ತನಿಂದ ಶ್ರೀಪತಿ ಲಕುಮಿ ಸಹಿತಲಿ ಗೋಪಾಲಕೃಷ್ಣವಿಠ್ಠಲ ಗುರುವರದ ಈ ಪರಿಯಿಂದ ಭಕ್ತರ ಪೊರೆಯಲು5
--------------
ಅಂಬಾಬಾಯಿ
ಕಥನಾತ್ಮಕ ಹಾಡುಗಳು ನೋಡಬನ್ನಿರಿ ಕಾರ್ಪರೇಶನ ಪಾಡಿರೈ ಸರ್ವೇಶನಾ ರೂಢಿಯೊಳು ಶೇಷಾದ್ರಿನಿಲಯನ ಕೂಡಿಕೊಂಡಿಲ್ಲಿರುವನ ಪ ಚಿಪ್ಪಗಿರಿ ದಾಸಾರ್ಯರೀತರು ಪಿಪ್ಪಲವ ಕಂಡಾಗಲೇ ಕಾರ್ಪರಾರಣ್ಯೆಂಬ ಪದದಿ ಸಂಕ್ಷಿಪ್ತ ಮಹಿಮೆಯ ಪೇಳ್ದರು 1 ಅಪರದಿಗ್ಭಾಗದಲಿ ನೋಡಲು ಸಪತ ಋಷಿಗಳ ಸ್ಥಾನವು ತ್ರಿಪಥಗಾಮಿನಿ ವ್ಯಕ್ತಳಾದಳು ತಪಕೆ ವಿಶ್ವಾಮಿತ್ರರ 2 ಯತ್ರಶ್ವೇತ ಶೃಂಗ ಕೃಷ್ಣಾಚೋತ್ತರ ವಾಹಿನಿಯೊಳು ತತ್ತದಾನ ಸ್ನಾನ ಕಾಸಿಗೆ ಉತ್ತಮವು ಫಲವೀಯಲು 3 ಚಾರುಕೃಷ್ಣಾತೀರವಿದರೊಳು ಕಾರ್ಪರಾಖ್ಯ ಮುನೀಂದ್ರನಾ ಘೋರತಪ ಕೊಲಿದರಳೆ ಮರದಾಗಾರನೆನಿಸಿದ ಧೀರನ 4 ನೀರಜಾಸನ ಮುಖ್ಯ ಸುರ ಪರಿಹಾರ ಸೇವಿತ ಚರಣನ ಸೇರಿದವರಘ ದೂರ ಮಾಡುವ ಘೋರನರಹರಿ ರೂಪನ 5 ಇಂತು ಅಶ್ವತ್ಥಾಂತರದಿ ಸಿರಿಕಾಂತನರಿಯನೆ ವಿಪ್ರರೊಳ್ ಶಾಂತ ನಾರಪ್ಪಯ್ಯನೆಂಬ ಮಹಾಂತರಿಲ್ಲಿರುತಿಪ್ಪರು 6 ದೊಡ್ಡವರ ಗುರುತರಿಯದಿವರನು ದಡ್ಡರೆನ್ನುತ ಭ್ರಾತ್ರರು ದೊಡ್ಡ ಕೃಷ್ಣಾನದಿಯೊಳಿವರನು ಕಟ್ಟಿ ಹಾಕಲು ಕೋಪದಿ 7 ಕಡಲಶಯನನ ಕರುಣದಿಂದಲಿ ದಡಕೆ ಸೇರಿದನಂತರ ದೃಢ ವಿರಾಗದಿ ವೆಂಕಟಾದ್ರಿಗೆ ನಡೆದರಾಗಲೆ ಹರುಷದಿ 8 ಶುಭ ಪಂಕಜ ಷಟ್ವದಾಯಿತ ಚಿತ್ತರು ಕೃಷ್ಣನಿರುತಿಹ ಬೆಟ್ಟದಡಿಯನು ಮುಟ್ಟಿಮಲಗಲು ಸ್ವಪ್ನದಿ9 ಇಲ್ಲಿ ದರ್ಶನವಿಲ್ಲ ನೀವಿರುವಲ್ಲಿ ಪುಣ್ಯಸ್ಥಾನವು ಪೋಗಿರೋ ಭೂಸುರ 10 ಧೇನು ರೂಪದಿ ಬರುವೆ ಕಾರ್ಪರ ಕಾನನದ ಅಶ್ವತ್ಥದಿ ಕಾಣುವುದು ಕ್ಷೀರಾಭಿಷೇಚನ ಧ್ಯಾನಿಸೆನ್ನನು ದ್ವಿಜವರ 11 ಇಂತುಸ್ವಪ್ನದಿ ಸೂಚಿಸಿದ ವೃತ್ತಾಂತವನು ಸಂಚಿಂತಿಸಿ ಕಂತು ಜನಕನ ಇಚ್ಛೆಯಿಂದಲೆ ಸಂತಸದಿ ಗಿರಿಗೊಂದಿಸಿ 12 ಮುಂದೆ ನಡೆದರು ಹಿಂದೆ ಗೆಜ್ಜೆಗಳಿಂದ ಬರುತಿಹ ಗೋಗಳ ಗೋವಿಂದನಂಘ್ರಿಯ ಸ್ಮರಿಸುತ 13 ಕುರುಕಿ ಹಳ್ಳಿಯ ಗ್ರಾಮದಿ ತಿರುಮಲೇಶನ ಕಂಡರು 14 ಗುರುತನು ಕಾಣುತ ಬಂದನು ಎನ್ನುತ 15 ಮುನಿವರನು ಸುಖದಿಂದಿರುತಿರೆ ತಿರೆ 16 ಬಂದರಲ್ಲಿಗೆ ತಮ್ಮ ಗ್ರಾಮದ ಬಂಧು ಬಾಲಕರೆಲ್ಲರು ಕಾಯುವದೆನುತಲಿ 17 ಚಾರು ಶಿಲೆಯೊಳಗೊಂದುದಿನ ಅಂಗಾರದಲಿ ಪ್ರಾಣೇಶನ ಪರಿಹಾರನುನಿಮಗೆಂದರು 18 ಪಾದ ನಿಷ್ಠೆಯಿಂದಲಿ ಸೇವಿಸೆ ಸಿದ್ಧಿಗಳಾಗ್ವವು 19 ನಾರಪ್ಪಯ್ಯರೆಂಬ ಮಹಾತ್ಮರು ಹರಿ ಸಂತತ 20 ಧರಣಿಯನು ಸಂಚರಿಸುತ ಚೆನ್ನೂರ ಗ್ರಾಮದಿ 21 ತೋರಿತಂದಿನ ರಾತ್ರಿಯೋಳ್ ಮಹಿಮೆಯಾ 22 ಭೂಪನ ಸ್ಪಪ್ನದಿ ತರುವನು ತೋರಿಸಿ 23 ಕಟ್ಟಿಸೆಲೊ ಭೂಪತಿಯೆ ಮಂದಿರ ಕೃಷ್ಣವೇಣಿಯ ಗರ್ಭದಿ ಶ್ರೇಷ್ಠನೆನ್ನಯ ಕರುಣದಿ 24 ಸುಪ್ರಭಾತದಲೆದ್ದು ನೃಪತಿಯು ಸ್ವಪ್ನಸೂಚಿತ ಸ್ಥಾನವ ಕ್ಷಿಪ್ರ ನೋಡುವೆನೆನುತ ಸೈನ್ಯದಿ ಕಾರ್ಪರಕೆ ಬಂದಿಳಿದನು25 ಆನೆಗಳು ಕಟ್ಟಿರುವ ಶಿಲೆಗಳು ಕಾಣಿಸುವ ವೀಗಾದರು ನನಸೇವಿಸಿದನು 26 ಮಂದಿರವಮೇಲ್ ನಿರ್ಮಿಸಿ ಇಂದಿರೇಶನ ಪದಕೆ ಭೂಸಂಬಂಧ ವೃತ್ತಿಯನೊಪ್ಪಿಸಿ27 ಹಿಂದೆ ನೋಡಲು ಚಂದ್ರಶೇಖರ ನಂದಿಪತಿ ಮಂದಿರಗಳು ವಂದೇ ವತ್ಸರದೊಳಗೆ ಶಿಲ್ಪಿಗಳಿಂದ ಕಟ್ಟಿದ ಶಿಲೆಗಳು 28 ವೃಷ್ಟಿಯ ಮಹಿಮೆಯ ಕಾಮಿತಾರ್ಥವನೀವುದು 29 ಮಾಸ ದೊ ಶರಧಿ ಸೇರುವ ಸಮಯದಿ 30 ಷೋಡಶ ಕರಗಳಿಂ ಹೊರಟನು ವೃಕ್ಷದಿ31 ತೀರ್ಥ ಸ್ನಾನದ ನರಹರಿ ದರ್ಶನ 32 ದಕ್ಷಿಣಾಯನ ಪರ್ವದಲಿ ಈ ವೃಕ್ಷದೆಡೆಯಲಿ ಸ್ನಾನವು ಮೋಕ್ಷ ಮಾರ್ಗಕೆ ಸಾಧನವು ಪ್ರದಕ್ಷಿಣಾದಿಕಮೆಲ್ಲವು33 ಮಂದಿರವ ಕಾಣುತಲೆ ಶ್ರೀಗೋವಿಂದ ಗೋವಿಂದೆನುತಲಿ ಬಂಧು ವರ್ಗ ಸಮೇತ ಭಕುತರ ವೃಂದ ಬರುವದು ನೋಡಿರೈ34 ಪಾಲಿನಭಿಷೇಕದಿ ಅರ್ಚನ ಪಾಲಕಿಯ ಸೇವಾವಧಿ ವಾಲಗವ ಕೈಕೊಳುತ ಭಕುತರ ಪಾಲಿಸುವ ನರಸಿಂಹನ 35 ವಾರವಾರಕೆ ಭಕ್ತಜನ ಪರಿವಾರ ಸೇವೆಯಕೊಳ್ಳುತ ಘೋರತರ ಸಂಸಾರ ಭಯಪರಿಹಾರ ಮಾಡುವ ದೇವನ 36 ತಪ್ಪದಲೆ ಪ್ರತಿವರ್ಷ ದ್ವಿಜ ಸಂತರ್ಪಣಾದಿಗಳಿಂದಲಿ ಕೊಪ್ಪರದಿ ನವರಾತ್ರ ಮೊದಲಾದುತ್ಸವಾದಿಗಳಾಗ್ವವು 37 ಹಿಂದೆ ಚಾತುರ್ಮಾಸ್ಯ ಕಾಲವು ಬಂದಿರಲು ವಿಭುದೇಂದ್ರರು ಬಂದರಿಲ್ಲಿಗೆ ಶಿಷ್ಯರಾದ ಯತೀಂದ್ರ ನಾರಾಯಣಾರ್ಯರು38 ಆ ಸಮಯದಿ ರಘುನಾಥ ತೀರ್ಥ ಯತೀಶರಿಲ್ಲಿಗೆ ಬಂದರು ತೋಷದಲಿ ವಿಭುದೇಂದ್ರ ತೀರ್ಥಮುನೀಶರವರಿಗೆ ಪೇಳ್ದರು39 ವೃಕ್ಷದಲಿ ಸನಿÀ್ನಹಿತ ನರಹರಿಯಕ್ಷನೆದುರಿಗೆ ನಮ್ಮಯ ಶಿಷ್ಯರೋದುವ ಗ್ರಂಥದರ್ಥ ಪರೀಕ್ಷೆ ಮಾಡಿರಿ ಎಂದರು40 ಮೌನಿರಘುನಾಥಖ್ಯರವರನು ಏನು ಓದುತಿರೆನ್ನಲು ಆನುಪೂರ್ವಿ ಸುಧಾಖ್ಯ ಗ್ರಂಥಾರ್ಥಾನುವಾದವ ಮಾಡಲು41 ಮೇದಿನಿಯಲಿ ವಾದಿಜಯ ಸಂಪಾದಿಸಿರಿ ನೀವೆಂದರೂ ಸಾದರದಿ ನಿಮಗೆಲ್ಲ ಜನ ಶ್ರೀಪಾದರಾಜರು ಎನ್ನಲಿ42 ಸೇವೆಯ ಮಾಡಲು ಒಂದು ವತ್ಸರದೊಳಗೆ ಸತ್ಯಾನಂದ ಯತಿಗಳ ಜನನವು43 ಸತ್ಯಧರ್ಮರು ಬಂದರೀ ಸುಕ್ಷೇತ್ರದರ್ಶನ ಮಾಡಲು ಮುತ್ತಿನ್ಹಾರವ ಪದಕ ಸಹಿತಾಗಿತ್ತರೀ ನರಸಿಂಹಗೆ 44 ಇದ್ದರಿಲ್ಲಿ ಜ್ಞಾನವೃದ್ಧ ಜನಾರ್ದನಾಭಿದ ಒಡೆಯರು ಶುದ್ಧ ಮನದಲಿ ನರಹರಿಯ ಪದಪದ್ಮ ಸೇವೆಯ ಮಾಡುತ45 ಬಿಡದೆ ತಪವಾಚರಿಸಿ ಕಾರ್ಪರದೊಡೆಯನನುಪಮ ಕರುಣವ ನಿತ್ಯದಲಿ ಪರಿಶುದ್ಧ ಮಧುಕರ ವೃತ್ತಿಯಿಂ ತಂದನ್ನವ ಎತ್ತಿ ವೃಕ್ಷಕೆ ಕಟ್ಟುವರು ಇದು ಬುತ್ತಿ ನಾಳೆಗೆ ಎನ್ನುತ47 ಪನ್ನಗಾರಿ ಧ್ವಜನಿಗರ್ಪಿಸಿ ಉಣ್ಣುತಿಹರಾನಂದದಿ48 ಮಂದಮತಿ ಭೂದೇವನೊಬ್ಬನು ನಿಂದೆ ಮಾಡಿದನಿವರನು ತಂದು ಕಟ್ಟಿದ ಅನ್ನ ತಂಗಳೆಂದು ತಿಳಿಯದೆ ಉಂಬರು 49 ನಿಂದೆ ಮಾಡಿದ ವಿಪ್ರನನು ಕರೆಸೆಂದರರ್ಚನ ಸಮಯದಿ ತಂದು ವೃಕ್ಷದಿ ಕಟ್ಟಿದನ್ನವ ತಂದು ಕೆಳಗಿಡಿರೆಂದರು 50 ಪೋಗಲು ವಿಪ್ರನು ಕೆಳಗಿಂತೆಂದರು
--------------
ಕಾರ್ಪರ ನರಹರಿದಾಸರು
ತಾತ್ವಿಕ ಹಿನ್ನೆಲೆಯ ಹಾಡುಗಳು (ಸರ್ವೋತ್ತಮತ್ವ ವರ್ಣನೆ) ಸಕಲವು ತ್ವದಧೀನವು ಶ್ರೀಶನೀ ಕೇಳು ಪ. ಸಕಲವು ತ್ವದಧೀನ ಸಾಕಯ್ಯ ಸತ್ಯಮಾನ ವಿಖನ ಸಗಣಧಾಮ ವಿಶ್ವಗುಣಾಭಿರಾಮ ಅ.ಪ. ಕಮಲ ಸಂಭವ ಮುಖರು ಶ್ರೀಶ ತ್ವತ್ಪಾದ ವಿಮಲ ಪದ್ಮ ಸೇವಕರು ಅಮಿತ ಗುಣಾಂಬುಧಿ ಆಡುವಿ ನಿರುತದಿ ದುರಿತ ಬೀಜ ಶ್ಯಾಮ ಸುಂದರ ರಾಜ 1 ದೇಹ ಗೇಹಾದಿಗಳೆಲ್ಲ ಸುವರ್ಣ ಪಕ್ಷಿ ವಾಹ ನಿನ್ನೊಶ ಭೂನಲ್ಲ ಮೋಹದಿ ತನ್ನದೆಂದು ಜೋಹಗೊಂಡ ಪರಿಗೆ ಬಾಹದಿರದು ಕೇಡು ಬಿಡದೆಂದು ನಗೆಗೇಡು 2 ಪರಮ ಕೃಪಾಳು ನಿನ್ನ ಪಾದವ ನಂಬಿ ಮರೆದೆ ದುರ್ಮಾನವನ್ನ ಉರಗ ಗಿರೀಂದ್ರನೋಳ್ಮೆರೆವ ಮಹಾತ್ಮನೆ ಶರಣ ಜನ ಮಂದಾರ ಸೇರಿಸು ಕೃಪಾಧಾರ3
--------------
ತುಪಾಕಿ ವೆಂಕಟರಮಣಾಚಾರ್ಯ
ತಾತ್ವಿಕ ಹಿನ್ನೆಲೆಯ ಹಾಡುಗಳು ಪಾದಪೂಜೆಯನು ಮಾಡುವೆ ರಾಮಾ ಪಾದಪೂಜೆಯನು ಪ ಕಾಯಾ ವಾಚದಲೀ ಮನಸಿನಿಂದ ನ್ಯಾಯ ಮಾರ್ಗದಲೀಅ.ಪ. ಘನ ಭಕ್ತಿರಸವೆಂಬ ನೀರನು ತಂದು ತನುವೆಂಬ ಘಟದಿಂದ 1 ವರಭೂತದಯೆಯೆಂಬ ಗಂಧವ ಪೂಸಿ ಪರಮ ಸುಕೃತಿಯಿಂದ 2 ದಾನಧರ್ಮಗಳೆಂಬ ಹೂವನು ಹಾಕಿ ವೀಣಾದಿ ಸ್ವರದಿಂದ 3 ಸತ್ಯ ಜ್ಞಾನಗಳೆಂಬ ಮಂತ್ರವ ಹÉೀಳಿ ಅತ್ಯಂತ ಕೃಪೆಯಿಂದ 4 ಸ್ವಾರ್ಥ ತ್ಯಾಗವು ಯೆಂಬ ಆರತಿ ಮಾಡಿ ನರ್ತನಸ್ತುತಿಯಿಂದ 5 ದೇಹವಾಹುತಿಕೊಟ್ಟು ಅರ್ಪಣೆ ಮಾಡಿ ಮೋಹದುಪೇಕ್ಷೆಯಿಂದ6 ಭಕ್ತರಾಕೃತಿಯಿಂದ 7 ಜನುಮಕ್ಕೆ ಬರದಂತೆ ಬೇಡುವೆ ನಿಂದು ತನುಬಂಧ ಹರಿವಂತೆ 8 ಪನ್ನಗಶಯನನನ್ನು ಪೂಜಿಪೆನಿಂದು ಚನ್ನಕೇಶವನನ್ನು 9
--------------
ಕರ್ಕಿ ಕೇಶವದಾಸ
ನಿತ್ಯ ಚಿದಾತ್ಮಕ ಸತ್ಯ ರುಕ್ಮಿಣಿಯರು ಜೊತ್ತಿಲಾಡುತ ತಮ್ಮ ಪತಿಯ ಉತ್ತಮಗುಣಗಣ ವರ್ಣಿಸುವದಕನುವೃತ್ತರಾಗುತ ವಾದಿಸಿದರು ಪ. ಅಕ್ಕ ಕೇಳರಿಗಳ ವಶರಾಗಿ ಸೆರೆಯೊಳು ಸಿಕ್ಕಿದವರ ಮಗನಿವನು ಚಿಕ್ಕತನದಿ ಗೋವ ವಕ್ಕಲಿಗರು ಬಾಯೊ- ಳಿಕ್ಕಿದನ್ನವನುಂಡದೇನು 1 ನಿರಪರಾಧಿಯನೀತ ತರಿದನೆಂಬಕೀರ್ತಿ ಬರದಂತೆ ಸೆರೆಯೊಳುದಿಸಿದ ಸುರರೆಲ್ಲ ಗೋಪರಾಗಿರುವುದರಿತು ಸೇವ- ಕರಿಗೊಲಿವುತ್ತಲಿ ಮೆರೆವ 2 ಪಾಂಡುಕುಮಾರನ ಭಂಡಿ ಹೊಡಲು ಪಾಲ ನುಂಡನು ವಿದುರನ ಗೃಹದಿ ಗಂಡರಾಳುವ ಗರತೇರ ನೆರೆದವನ ಹೆಂಡರಾಗಿರುವದಿನ್ನೆಂತು 3 ಭಕ್ತವತ್ಸಲನೆಂಬ ಬಿರುದ ತೋರುವದತಿ ಶಕ್ತಿ ಹರಿಗೆ ಶೋಭಾಕರವು ತೊತ್ತಿನ ಮಗನಿಂದಲಿತ್ತ ಕೌರವನೆಂಬ ತತ್ವ ತೋರಿದನಲ್ಲವೇನೆ 4 ಧರೆಯನಾಳದೆ ತನ್ನ ಪರಿವಾರ ಸಹಿತಾಗಿ ಶರಧಿಯೊಳಗೆ ವಾಸವಾಗಿ ದುರುಳ ಜರಾಸಂಧ ಬರುವ ಭೀತಿಯ ತಾಳಿ ಲ್ಲಿರುವ ಕಾರಣವೇನೆ ಜಾಣೆ 5 ಈರೆಂಟು ಮತ್ತೊಂದು ಭಾರಿ ಸಮರದಲ್ಲಿ ಬಾರುಹದ್ರಥನನ್ನು ಗೆಲಿದ ಧೀರನೀತನು ಭಕ್ತ ಮಾರುತಿಯಲಿ ಜಯ ತೋರಲಂತಿರುವನು ಕಾಣೆ 6 ಜಾರ ಚೋರರಿಗೆಲ್ಲ ಗುರು ನಿಮ್ಮ ಪತಿಯೆಂದು ವೂರನಾರಿಯರೆಲ್ಲ ನುಡಿವ ಕ್ರೂರ ಮಾತನು ಕೇಳಲಾರೆನಕ್ಕಯ್ಯ ಯಿ ನ್ಯಾರಿಗೆಂದುತ್ತರ ಕೊಡುವೆ 7 ಘತಿತ ಪಾವನ ಪದ್ಮಜಾತಜನಕ ಶ್ರೀ ಪತಿ ಸುಜನಾನಂದದಾಯಿ ವಿತತ ವಿಡಂಬನ ತೋರುವ ವೆಂಕಟ ಪತಿ ದೋಷಹರ ಶೇಷಶಾಯಿ 8 ಹಸೆಗೆ ಕರೆವ ಮತ್ತು ಆರತಿಯ ಹಾಡುಗಳು
--------------
ತುಪಾಕಿ ವೆಂಕಟರಮಣಾಚಾರ್ಯ
ಬಿಡಿ ರಚನೆಗಳು ವೆಂಕಣ್ಣಕವಿಯ ಹಾಡುಗಳು ಕುಣಿದಾಡೋ ಕೃಷ್ಣ ಕುಣಿದಾಡೋ | ಒಮ್ಮೆ | ಕುಣಿದಾಡೋ ಪ ಮುದ್ದು ಮೊಗದೊಲವ ಮುಗುಳ್ನಗೆದೋರಿ | ತದ್ಧಿಮಿಕೆಂದು ಮುರಾರಿ1 ಹಸ್ತಾಂಗುಲಿ ಅಭಿನಯಗಳ ಪಟ್ಟು ನ್ಯಸ್ತದಿ ಹೆಜ್ಜೆಯನಿಟ್ಟು 2 ಗೆಜ್ಜೆ ನೂಪುರ ಘಲ್ಘಲ್ ಘಲರವದಿಂದ ತದ್ದಣಿಕೆಂದು ಮುಕುಂದ 3 ಸ್ಥಾಯಿ ಮೃದಂಗ ತಾಳದಿ ಶ್ರುತಿಗೂಡಿ ಮಾ-ಗಾಯಿ ಕುಂಡಲಗಳೋಲಾಡಿ4 ಧಾಮ 5
--------------
ಅನ್ಯದಾಸರು
ಭದ್ರ ಗೀತಾವಳಿ (ಮದುವೆ ಹಾಡುಗಳು) ಜಯಜನಕಜಾಮಾತ ಜಯಜಾನಕೀ ಕಾಂತ ಮದನ ತಾತ ಜಲಜಾಪ್ತಸಂಕಾಶ ವಿಲಸದ್ಗುಣಾವೇಶ ಲಲಿತ ಸನ್ಮøದುಭಾಷ ಪರಮಪುರುಷ ನತಕಾಮಸುರಧ್ರುಮ ದಿತಿಜಾಬ್ಜಕುಲಸೋಮ ಕ್ಷಿತಿನಾಥ ರಘುರಾಮ ಸಮರಭೀಮ ಪಿತೃವಾಕ್ಯಪರಿಪಾಲ ಸತ್ಯವ್ರತ ಸುಶೀಲ ವಿನುತ ಮಹಿತ ಚರಿತ ಭವಭಯಾಂಭುದಿ ತರಣ ಭಕ್ತಭರಣ ಸೇವ್ಯ ದೇವದೇವ ಸುವಿಮಲ ಯಶಶ್ಚಂದ್ರ ರಾಮಚಂದ್ರ
--------------
ನಂಜನಗೂಡು ತಿರುಮಲಾಂಬಾ
ಮುಯ್ಯದ ಹಾಡುಗಳು ನೋಡೆ ಧರಣಿ ನಿನ್ನ ಬೀಗರೋಡಿ ಬರುವುದಾ ಕಾಡು ಜನರು ನಗುವ ರೀತಿ ಮಾಡಿ ಮೆರೆವುದಾ ಪ. ಸುತ್ತ ನಾಲ್ಕು ಮುಖದಿ ವೇದ ತತ್ವ ಪೇಳ್ವ ಹಂಸ ಪಕ್ಷಿ ಹತ್ತಿಕೊಂಡು ಬಂದ ಹಳಬ ಮುತ್ಯನೊಬ್ಬನು ಹಸ್ತದೊಳಗಕ್ಷಮಾಲೆಯೆತ್ತಿ ಮಣಿಗಳೆಣಿಸುವಗಿ ನ್ನೆತ್ತ ಪೂಜೆಯಿಲ್ಲವೆಂಬರತ್ಯಾಶ್ಚರ್ಯವರಿಯೆಯ 1 ಮತ್ತೊಬ್ಬನ ನೋಡೆ ಮುದಿಯೆತ್ತನೇರಿ ಬರುವನಿವನ ಜೊತೆಯಲಿರುವ ಭೂತಗಣವು ಸುತ್ತ ಮೆರೆವುದ ಬತ್ತಲಿದ್ದು ಭಸ್ಮ ಪೂಸಿ ಕೃತ್ತಿವಾಸನನಾದ ಫಾಲ ನೇತ್ರ ರುಂಡಮಾಲಶೂಲವೆತ್ತಿ ಕುಣಿವ ಮುತ್ಯತನವ 2 ಗರುವದಿಂದ ಗಜವನೇರಿ ಬರ್ವನ ನೋಡಮ್ಮ ಶತ ಪರ್ವವನ್ನು ಪಿಡಿದ ಸಕಲ ಗೀರ್ವಾಣೀಶನ ಸರ್ವಾವಯವದಲ್ಲಿ ಕಣ್ಣಾಗಿರ್ವದೇನೊ ತಿಳಿಯದು ನಿ ಗರ್ವಿ ಶಿರೋಮಣಿಯೆ ಈತ ಪರ್ವತಾರಿಯೆಂಬುವುದನು 3 ಠಗರು ಕೋಣನೆಗಳ ಮೇಲೆ ಸೊಗಸಿನಿಂದಲೇರ್ದ ಕೆಲಸ ಬಗೆ ಬಗೆ ಬೈರೂಪ ವರ್ಣನೆಗಳು ಸಾಕಿನ್ನು ಸುಗುಣೆ ಮೊದಲೆ ತಿಳಿಯದೆ ನೀ ಮಗಳನೀವ ಭಾಷೆ ಕೊಟ್ಟ ಬಗೆಯ ಪೇಳೆ ಭಾಗ್ಯದ ಹಮ್ಮಿಗೆ ತಕ್ಕಂಥ ನಗೆಯ ಕೇಳೆ 4 ಎರಡು ಮಗುಗಳದರಳೊಂದು ಬಿರುದ ಹೊಟ್ಟೆ ಮೇಲೆ ಕಟ್ಟಿ ದುರಗ ಬೆಳೆವ ಪೋರ ನೋಡೆ ಕರಿಯ ಕುವರನು ಕಿರಿಯ ಕೂಸಿನೊಂದು ನವಿಲ ಮರಿಯನೇರುತ್ತಾರು ಮುಖದಿ ಮೆರೆವ ಛಂದವೇನನೆಂಬೆ ಥರವೆ ನಿನಗೆ ಮಿಸುಣಿ ಗೊಂಬೆ 5 ಅಳಿಯನ ಸಂಸ್ಥಿತಿಯ ನೋಡಿ ತಿಳಿವದೆಂತು ಸುಲಭವಲ್ಲ ಹಲವು ಜನರ ಕೂಡಿಕೊಂಡು ಸುಳಿವರೆ ಬಲ್ಲ ನೆಲೆಯ ಕಾಣದಖಿಳ ವೇದ ಕುಲವು ಭ್ರಮೆಯ ತಾಳ್ವದಿಂಥಾ ಕುಲವೆಂದರಿಯಳಾಗಿ ಲೋಕ ಚೆಲುವೆ ಮಗಳನಿತ್ತೆಯಲ್ಲೆ 6 ಆದರೀತ ಭಕ್ತಜನರ ಕಾದುಕೊಳುವನೆಂಬ ಗುಣವ ಶೋಧಿಪರಿಗೆ ಸಕಲಾನಂದ ಸಾಧಕನೆಂದು ಬೋಧಗೊಳದೆ ನುಡಿದ ಸ್ವಾಪರಾಧವೆಲ್ಲ ಕ್ಷಮಿಸಿ ನಮ್ಮ ಶ್ರೀದ ವೆಂಕಟಾದ್ರಿನಾಥ ಕಾದುಕೊಳಲಿ ಕರುಣವಿಡಲಿ 7
--------------
ತುಪಾಕಿ ವೆಂಕಟರಮಣಾಚಾರ್ಯ
ಮುಯ್ಯಾ ಒಯ್ದಹಾಡುಗಳು ಕೋಲೆನ್ನಿ ಕೋಮಲೆಯರು ಅಮ್ಮಯ್ಯ ಮುಯ್ಯಿ ಮೇಲೆನ್ನಿ ಮೇಲೆನ್ನಿರಿ ಅಕ್ಕಯ್ಯ ಪ. ಇಂದು ಗುರುಗಳಂಫ್ರಿಗೆರಗಿ ಅಮ್ಮಯ್ಯ ಸುಭದ್ರೆ ತಂದ ಮುಯ್ಯಿ ರಚಿಪೆÀನಕ್ಕಯ್ಯ 1 ನಿಷ್ಠಿಲೆ ಗುರುಗಳಿಗೆ ನಮಿಸಿ ಅಮ್ಮಯ್ಯ ದ್ರೌಪದಿ ಕೊಟ್ಟ ಮುಯ್ಯವ ರಚಿಪೆ ಅಕ್ಕಯ್ಯ 2 ಪಾದ ಭಾವೆ ಚರ್ಚಾ ಮಾತುಗಳನ್ನೆ ರಚಿಸೆ ನಕ್ಕಯ್ಯ 3 ರುಕ್ಮಿಣಿ ನಕ್ಕುನುಡಿದ ನುಡಿಯ ರಚಿಪೆನಕ್ಕಯ್ಯ 4 ನಮ್ಮ ಗುರುಗಳಂಫ್ರಿಗೆರಗಿ ಅಮ್ಮಯ್ಯ ಪಾರ್ಥ ರಮಿಯರಸನ ಮಹಿಮೆ ರಚಿಪೆನಕ್ಕಯ್ಯ 5
--------------
ಗಲಗಲಿಅವ್ವನವರು
ಮುಯ್ಯಾ ತಿರುಗಿಸಿದ ಹಾಡುಗಳು ಕಾಲಕಾಲಕ್ಕೆ ಗುರುಗಳ ಕಾಲಿಗೆ ಎರಗುವೆ ಕೋಲೆನ್ನಿ ಕೆಲದೆಯರು ಕೋಲೆನ್ನಿರೆ ಪ. ಸೊಲ್ಲು ಸೊಲ್ಲಿಗೆ ನಮಿಸಿ 1 ವೀತ ದೋಷನೆಂಬೊ ನೂತನ ಪುಷ್ಪ ಮುಡಿದು ಪ್ರೀತಿ ಬಡುವಗುರುಗಳ ಮಾತು ಮಾತಿಗೆ ನಮಿಸಿ2 ಬಾಲೆ ಗುರುಗಳ ಹೃದಯ ಆಲಯ ವಶವಾದ ಬಾಲಗೋಪಾಲನೆಂಬೊನೀಲ ಮಾಣಿಕವೆ ಬಿಗಿದು 3 ನಿತ್ಯ ಮೂರುತಿ ಎಂಬೊಮುತ್ತು ಮಾಣಿಕವೆ ಬಿಗಿದು4 ಸಿರಿ ರಮೆಯರಸನೆÉಂಬೊ ಬರಿಯ ಮಾಣಿಕವೆ ಬಿಗಿದು5
--------------
ಗಲಗಲಿಅವ್ವನವರು
ಲೋಕನೀತಿಯ ಹಾಡುಗಳು ಆರು ಹಿತರಾದಾರು ಈ ವಿಶ್ವದೊಳಗೆ ಕೃತಿ ಹೊರತು ಪ ಪಿತನಲ್ಲ ಸುತನಲ್ಲ ರತಿಯಲ್ಲ ಸುತೆಯಲ್ಲ ಅತಿ ಪ್ರೀತಿಯಿಂ ಪೊರೆದ ನಿಜಮಾತೆಯಲ್ಲಾ ಸುತನಪೇಕ್ಷಿಸಿ ಹೆದರಿ ಅಜಮಿಳನು ಕರೆಯಲ್ಕೆ ಪತಿತ ಪಾವನ ಹರಿಯ ನಾಮ ಹಿತವಾಯ್ತು 1 ಧನವಲ್ಲ ಸಿರಿಯಲ್ಲ ಬಹು ಬೆಳೆದ ಮೈಯಲ್ಲ ಹಣ ರಾಶಿ ಗಳಿಸುವ ದುರ್ಬುದ್ಧಿಯಲ್ಲ ಮನ ಮತ್ಸರಗಳಲ್ಲ ಕಾಮಕ್ರೋಧಗಳಲ್ಲ ತನುವಲ್ಲ ಡಂಬರದ ವೇದಾಂತವಲ್ಲ2 ತರಳನಾಗಿಹ ಧೃವಗೆ ತರುಣ ಪ್ರಲ್ಹಾದನಿಗೆ ಕರಿರಾಜ ಹನುಮಾದಿ ನಿಜ ಭಕ್ತರಿಂಗೇ ವರಧರ್ಮ ಪುತ್ರನಿಗೆ ಮಧ್ಯ ಪಾಂಡವನಿಗೇ ಪರಮ ಪತಿವ್ರತಾ ರಮಣಿ ದ್ರೌಪದಿಗೇ 3 ಧರಣಿಯನು ಹೊತ್ತಿರುವ ಆದಿಶೇಷಗೆ ಮತ್ತೆ ನಿರುತವೂ ಭಜಿಸಿದ ಪರಮ ದಾಸರಿಗೆ ಸಿರಿಯರಸ ಶ್ರೀಹರಿಯ ಭಜನೆಯೊಂದುಳಿದು 4 ಜನ್ಮಬಂಧವ ನೀಗಿ ಪರಮ ಪದವಿಯ ಕೊಡುವ ಸನ್ನುತವು ನಿಜ ಸೌಖ್ಯವನ್ನು ಕರುಣಿಸುವ ಪ್ರಾಣಿಯಲಿ ಆತ್ಮನಲಿ ಶ್ರಧ್ಧೆ ಹುಟ್ಟಿಸುವಂಥ ಚನ್ನಕೇಶವ ಸ್ವಾಮಿ ಭಕ್ತಿಯೊಂದುಳಿದು 5
--------------
ಕರ್ಕಿ ಕೇಶವದಾಸ
ಲೋಕನೀತಿಯ ಹಾಡುಗಳು ಶ್ರೀನಾಥನ ನಾಮಾಮೃತ ರುಚಿಯೆಲ್ಲ ಪರಮ ಭಕುತಗಲ್ಲದೆ ಪ ಹೀನ ಮನುಜರು ಕೇಳಿ ಹಿರ್ರನೆ ಹಿಗ್ಗಿ ಆನಂದಪಡಬಲ್ಲರೆ ಅ.ಪ. ಕ್ಷೀರ ವಾರಿಯ ಕೂಟ ಮರಾಳ ತಿಳಿವಂತೆನೀರು ಕೋಳಿಯು ಬಲ್ಲುದೆಸಾರಮೇಯನ ಬಾಲ ನಳಿಗೆಯೊಳಿಟ್ಟರೆನೇರವಾಗಬಲ್ಲದೆದಾರು ಪ್ರತಿಮೆಗೆ ಸೀರೆಯನುಡಿಸಲುನಾರಿಯಾಗಬಲ್ಲುದೆಭಾರತಿಪತಿ ಪಾದವರಿಯದ ಮನುಜನುನಾರಾಯಣನ ಬಲ್ಲನೆ1 ಉದರಕ್ಕೆ ಗ್ರಾಸವ ನಡೆಸದ ಮನುಜನುಮದುವೆ ಮಾಡಲು ಬಲ್ಲನೆಸದನಕ್ಕೆ ಜನ ಬರೆ ಕದನವ ತೆಗೆವವಬುಧರು ಎಂಬುದ ಬಲ್ಲನೆವಿಧಿಯಂತೆ ಮಸೆದು ಮತ್ಸರಿಸುವವ ನಮಗೆಹದುಳ ಹಾರೈಸುವನೆಮದವೆಗ್ಗಳಿಸಿ ಮೆರೆವ ಮನುಜ ಹರಿಪದಗಳರ್ಚಿಸಬಲ್ಲನೆ 2 ಕನ್ನಡಿಯೊಳು ರೂಪು ಹೊಳೆದಂತೆ ಹಂಚಿನೊಳ್‍ಇನ್ನು ಕಾಣಿಸಬಲ್ಲುದೆಕಣ್ಣಿಲ್ಲದವನಿಗೆ ಚಿನ್ನವ ತೋರಲುಬಣ್ಣ ಹೇಳಲು ಬಲ್ಲನೆಹೆಣ್ಣಿನ ಮೇಲಿನ ವ್ಯಾಮೋಹ ಬಿಡದವಸಂನ್ಯಾಸಿಯಾಗುವನೆಅನ್ಯ ದೈವಂಗಳ ಭಜಿಸುವ ನರಗೆ ಮೋ-ಹನ್ನ ವಿಠ್ಠಲ ಒಲಿವನೇ 3
--------------
ಮೋಹನದಾಸರು
ವಿಶೇಷ ಸಂದರ್ಭದ ಹಾಡುಗಳು 250 * ಅಡಗಿದೇತಕೊ ರಜತ ಕವಚದೊಳಗೆ ಅಡಿ ಭಕ್ತರಾಡುವೋ ಬಿಡಿ ನುಡಿಗೆ ಪ. ಗೇಣು ಪ್ರಮಾಣದಾ ಪ್ರಾಣರಾಯನೆ ಛಿದ್ರ ಕಾಣುತಿರೆ ಶಿಲೆರೂಪದಲ್ಲಿ ನಲಿದು ಆನಂದದಿಂ ನುಡಿದ ಆನತರ ವಚನಕ್ಕೆ ನೀ ನಾಚಿ ಜಗಕಿನ್ನು ಕಾಣಬಾರದು ಎಂದು 1 ದುರುಳ ಸೀತೆಯ ಕದ್ದು ತೆರಳುತಿರೆ ನಿಮ್ಮ ಕಂ ಡರವಿಂದನಯನೆ ಆಭರಣ ಕಟ್ಟೊಗೆಯೇ ಸಿರಿಚರಣ ಸ್ಪರ್ಶವೆನಗಿರಲೆಂದು ಪೈಜಣವ ಮುರಿಸಿ ಕವಚವ ಮಾಡಿ ಮೆರೆವ ವೈಖರಿಯೇ 2 ರಜತಗಿರಿ ವಾಸ ರಣದಲ್ಲಿ ಬ್ರಹ್ಮಾಸ್ತ್ರವನು ಭುಜಬಲದಿ ಬಿಡಲು ಲೆಕ್ಕಿಸದೆ ಮೂದಲಿಸೀ ನಿಜವಾಸ ಸ್ಥಳವಿಲ್ಲದಲೆಯಲೆಂದೆನ್ನುತಲಿ ರಜತಗಿರಿ ಕವಚ ಮಾಡಿರುವ ವೈಭವವೋ 3 ಕುನ್ನಿ ಮತಗಳ ಮುರಿದು ಘನ್ನ ಶಾಸ್ತ್ರವನೊರೆದು ಚನ್ನಕೃಷ್ಣನ ರಜತ ಪೀಠದಲಿ ನಿಲಿಸೀ ಎನ್ನೊಡೆಯನಾಸನವು ಎನಗೆ ಭೂಷಣವೆಂದು ಚನ್ನಾಗಿ ಮೈಗೆ ಸುತ್ತಿರುವ ವಿಸ್ಮøತಿಯೋ 4 ನಿನ್ನಲ್ಲಿ ವಡಕಿರಲು ಪೂಜಿಸುವ ಜ್ಞಾನಿಗಳಿ ಗಿನ್ನೊಂದು ನುಡಿ ಅಜ್ಞರಿಂ ಬೇಡವೆಂದೂ ಚನ್ನಾಗಿ ಹಿಂದೆ ಮುಂದೆಡಬಲದಿ ಮೇಲ್ ಕೆಳಗೆ ಇನ್ನು ತೋರದ ತೆರದಿ ಮರೆಮಾಡಿಕೊಂಡೂ5 ವಡೆಯ ಈರೇಳು ಲೋಕದಿ ವ್ಯಾಪ್ತನಾಗಿ ನೀ ನುಡಿದು ಶ್ರೀಮಂತ್ರ ಜೀವರ ಕಾಯೊ ಎನಲೂ ವಡೆಯಗುತ್ತರ ಪೇಳಲಾರದಲೆ ಬ್ಯಾಸತ್ತು ಪರಿ ಏನೋ 6 ಕಂಡವರು ಬಿಡುವರೇ ಆಡದಲೆ ನಿನ ಚರಿತೆ ಚಂಡ ವಿಕ್ರಮನಹುದೊ ಮುನಿಯದಲೆ ಸಲಹೋ ಕರ ಪೂಜ್ಯ 7
--------------
ಅಂಬಾಬಾಯಿ
ವಿಶೇಷ ಸಂದರ್ಭದ ಹಾಡುಗಳು ರಂಗನತೇರಿಗೆ ಬನ್ನಿರೋ ತೆಂಗು ಹೂ ಹಣ್ಣುಗಳ ತನ್ನಿರೋ ಬಂಗಾರದ ಗಿರಿಯಪ್ಪ ಎನ್ನಿರೋ ರಂಗ ಪರ್ಸಾದವ ಕೊಳ್ಳಿರೊ 1 ತೆಂಗಿನಮರ್ದುದ್ದ ತೇರೈತೆ ಅಲ್ಲಿ ರಂಗಿನ ಬಾವುಟ ಹಾರೈತೇ ಸಿಂಗಾರದಬಟ್ಟೆಯೇರೈತೇ ಹಂಗೂ ಹಿಂಗೂ ಜನ ಸೇರೈತೇ 2 ಬಾಳೆಕಂಬಗಳನು ಕಟ್ಟವ್ರೇ ತೋಳುದ್ದ ಹೂಸರ ಬಿಟ್ಟವ್ರೇ ತಾಳಮ್ಯಾಳ್ದೋರೆಲ್ಲಾ ನಿಂತವ್ರೇ ಬಾಳತುತ್ತೂರ್ಗೋಳನೂತ್ತವ್ರೇ 3 ತೇರಿನ ಗದ್ದುಗೆ ಬಂಗಾರ ತೋರಗಲ್ದಪ್ಪ ಅಲಂಕಾರ ಹಾರುವರ ಬಾಯಲ್ಲಿ ಓಂಕಾರ ರಂಗಪ್ಪಗಾಗೈತೆ ಸಿಂಗಾರ 4 ಭಟ್ಟರು ಮಂತ್ರವ ಹೇಳ್ತವ್ರೆ ಕಟ್ಟುನಿಟ್ಟಾಗಿ ನಿಂತವ್ರೇ ಬಟ್ಟಂದ ಹೂಗೊಳ ಹಾಕ್ತವ್ರೇ ಸಿಟ್ಟಿಲ್ಲದೆ ರಂಗ ನಗತವ್ನೇ 5 ಇಂಬಾಗಿ ಹೂರ್ಜಿಯ ಹಿಡಿದವ್ರೆ ದೊಂಬರೆಲ್ಲ ಕುಣಿತವ್ರೆ ಹಿಂಬದಿಯಲಿ ತೇರ ನಡೆಸವ್ರೇ 6 ಹಣ್ಣು ಜನ್ನವ ತೇರಿಗೆಸಿತಾರೆ ತಣ್ಣನೆ ಪಾನಕ ಕೊಡುತಾರೆ ಸಣ್ಣೋರೆಲ್ಲ ಕೈಮುಗಿತಾರೆ, ಹಣ್ಣು ಕಾಯ್ಗಳ ಗಾಲಿಗಿಡುತಾರೆ7 ತಕ್ಕೋ ಹಣ್ಕಾಯ ಎಂಬೋರು ಕೆಲವರು ನಕ್ಕು ಕುಣಿಯುವರೆಲ್ಲ ನೂರಾರು ಜನರು 8 ರಂಗಪ್ಪನ ತೆಪ್ಪ ತೇಲುತಿವೆ ಸಂಗೀತ ವಾದ್ಯ ಕೇಳುತಿವೆ ರಂಗುವiತಾಪು ಹೊಳೆಯುತಿವೆ ಮಂಗಳಾರತಿ ದೀಪ ಕಾಣುತಿವೆ 9 ಜೋಮಾಲೆ ಸರಗಳು ಹೊಳೆಯುತಿವೆ ನಾಮ ಮಂತ್ರಗಳೆಲ್ಲ ಮೊಳಗುತಿವೆ 10 ರಂಗಿನದೀಪ ಉರಿಯುವುದಣ್ಣ ಮಾಂಗಿರಿರಂಗನೆ ಬಲುಸೊಗಸಣ್ಣ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್