ಒಟ್ಟು 134 ಕಡೆಗಳಲ್ಲಿ , 49 ದಾಸರು , 126 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಷ್ಟಾರ್ಥ ಪಾಲಿಸಯ್ಯ ಪ ಭೃಷ್ಟನಾದೆನು| ಧರಣಿಯೊಳಗತಿ| ದುಷ್ಟಜನ ಸಂಸರ್ಗದಿಂದಲಿ| ಕೃಷ್ಣನಿನ್ನಯ| ದಾಸರಾಗಿಹ| ಶ್ರೇಷ್ಠ ಜನರನು| ಪೊರೆವ ತೆರದಿ 1 ಗತಿಹೀನನಾದೆನಯ್ಯ|| ಮತಿಯ ಪಾಲಿಸಿ | ಕರುಣದಿ ಸ| ದ್ಗತಿಯು ದೊರಕುವ| ತೆರದಿ ನಿನ್ನನು| ಪತಿಕರಿಸಿ ಪಿತ| ನಂತೆ ಪೊರೆವ 2 ಪಂಕಜನಾಭ ದೇವ| ವೆಂಕಟರಾಯ| ಕಿಂಕರರನು ಪೊರೆವ| ಕಿಂಕರಗೆ ಮತಿ| ದೋರಿ ಪೊರೆಯೈ| ಪಂಕಜಾಂಬಕ | ಪರಮಪಾವನ 3
--------------
ವೆಂಕಟ್‍ರಾವ್
ಈತನೆ ಗತಿಯೆಂದು ನಂಬಿದೆನೆ ನಾ ನೀತನಂಥ ನಿಷ್ಕರುಣನ ಕಾಣೆ ಪಾತಕಹರ ಅ ನಾಥರಕ್ಷಕ ಮಹದಾತ ಪರಮಭಕ್ತ ಪ್ರೀತನೆಂಬುದ ಕೇಳಿ ಪ ಮರುಳಾಗಿವನ ಬೆನ್ಹತ್ತಿದೆನೆ ಮನೆ ಮಾರುಗಳೆಲ್ಲವ ತೊರೆದೆನೆ ಕರುಣವಿಲ್ಲ ತುಸು ಹೊರಳಿ ನೋಡುವಲ್ಲ ತಿರುತಿರುಗಿ ಮನಕರಗಿ ಸಾಕಾಯಿತು 1 ಜಾತಿಹೀನನೆಂಬುವೆನೇನೆ ಲೋಕ ನಾಥನಿಗೆ ಕುಲ ಅದೇನೆ ಈತನ ಹೊರ್ತು ಮತ್ತಾರಾಸೆನಗಿಲ್ಲ ನೀತಿಯೆ ಈತಗೆ ಜಾತಿಭೇದವೆಂಬ 2 ಹೊಲೆಯರ ಮನೆಯಲ್ಲುಂಡನೆ ಇವ ಗೊಲ್ಲರ ಕುಲದಲ್ಹುಟ್ಟಿದನೆ ಗೊಲ್ಲರ ನಲ್ಲೆಯರಲ್ಲಿ ಹೋಗಿ ಈತ ಗುಲ್ಲುಮಾಡಿ ಬೆಣ್ಣೆಗಳ್ಳನೆನಿಸಿಕೊಂಡ 3 ಪಾತರದವಳಲ್ಲಿಗ್ಹೋದನೆ ತಾ ನೀತಿವಂತನ ಕಟ್ಟೊಡ್ಹೆಸಿದನೆ ನೀತಿವಂತರು ಕೇಳಿರೀತನ ರೀತಿಯ ದಾತ ಜಗನ್ನಾಥ 4 ನಿಲ್ಲದು ಮನ ಘಳಿಗಿವನಲಿ ನಾ ಸಲ್ಲದ್ಹಾಂಗ್ಹೋದೆ ಮತ್ತೆಲ್ಲ್ಹೋಗಲಿ ಬಲ್ಲಿದ ಶ್ರೀರಾಮನೆಲ್ಲ್ಹೋದರು ಬಿಡೆ ಕಲ್ಲೆದೆಯವಗಾಗಿ ಪ್ರಾಣಹೋಗಲಿನ್ನು 5
--------------
ರಾಮದಾಸರು
ಉಕ್ಕುವ ತುಪ್ಪಕೆ ಕೈಯಿಕ್ಕುವೆ ನಾನು ಪ ಚಕ್ರಧರ ಪರಮಾತ್ಮನೊಬ್ಬನಲ್ಲದಿಲ್ಲವೆಂದು ಅ.ಪ ಕರಿ ಮೊರೆಯಿಡಲು ಕಂಡುನೆರೆದ ಬೃಂದಾರಕರು ಅಂದು ಪೊರೆದರೆ ಬಂದುಕರದಲೊಪ್ಪುವ ಮುತ್ತಿಗೆ ಕನ್ನಡಿಯ ನೋಡಲೇಕೆಭರದಿ ಗಜೇಂದ್ರನ್ನ ಕಾಯ್ದ ಹರಿಯೆ ಪರದೈವವೆಂದು 1 ಮತಾಂತರದಲ್ಲಿ ಭಗವದ್ಗೀತೆಯನದ್ವೈತವೆಂದುವಾತಗುದ್ಧಿ ಕೈಗಳೆರಡು ನೋಯಿಸಲೇಕೆ‘ಏತತ್ಸರ್ವಾಣಿ ಭೂತಾನ್ಯೆಂ’ಬ ಶೃತ್ಯರ್ಥವ ತಿಳಿದುಜ್ಯೋತಿರ್ಮಯ ಕಿರೀಟಿ ಅಚ್ಯುತಾಂತರ್ಯಾಮಿಯೆಂದು 2 ತಾನೆ ಪರಬ್ರಹ್ಮನೆಂಬ ಮನುಷ್ಯಾಧಮನು ತಾನುಜ್ಞಾನಹೀನನಾಗೆ ಲೋಕದಾನವನೆಂದುಭಾನು ಕೋಟಿ ತೇಜೋತ್ತಮ ವರದ ಶ್ರೀಹರಿಯೆಂಬಜ್ಞಾನವೆ ಕೈವಲ್ಯದ ಸೋಪಾನವೆಂದು ಸಭೆಯಲ್ಲಿ 3 ತಪ್ಪಾದ ವಿಚಾರದಿಂದ ತತ್ತರವ ಪಡಲೇಕೆತಪ್ಪು ಶಾಸ್ತ್ರ ವೋದಿ ದೇಹ ದಂಡಿಸಲೇಕೆಕಲ್ಪ ಕಲ್ಪಾಂತರದಲ್ಲಿ ವಟಪತ್ರಶಯನನಾಗಿಮುಪ್ಪು ಮೊದಲಿಲ್ಲದ ಮುಕುಂದನಲ್ಲದಿಲ್ಲವೆಂದು 4 ಶಕ್ತಿ ಶೂನ್ಯನಿವನೆಂದು ಸಂಶಯವ ಪಡಲೇಕೆಕೃತ್ಯದಿಂದ ನೋಡೆ ಶ್ರೀಕೃಷ್ಣನೊಬ್ಬನೆಹತ್ತಾರು ಸಾಸಿರ ನೂರು ಗೋಪಸ್ತ್ರೀಯರನ್ನು ಆಳಿನಿತ್ಯ ಬ್ರಹ್ಮಚಾರಿಯೆನಿಪ ನಿಷ್ಕಳಂಕನೊಬ್ಬನೆಂದು 5
--------------
ವ್ಯಾಸರಾಯರು
ಉದಕ ಕಡೆದರೆ ಬೆಣ್ಣಿಲ್ಲಿಹ್ಯದೋ ಪ ಜೀವನ ಬಳಿಗ್ಹೋಗಿ ದೈನ್ಯಬಡುತ ಬಲು ಮಣಿದು ಬೇಡಲಲ್ಲೇನಿಹ್ಯದೋ ಅ.ಪ ಕಾಣದೆ ಬೊಗಳಿದರೇನಾದೋ ಒಣ ಗಾಣಾತರುವವಲಲ್ಲೇನಾದೋ ಕೋಣನ ಬಳಿಗ್ಹೋಗಿ ಸಾನುರಾಗದಿ ಒಳ್ಳೆ ವೀಣೆ ನುಡಿಸಲಲ್ಲೇನಾದೋ 1 ದೀನನ ಕಾಡಲು ಏನಾದೋ ಮಹ ಹೀನನ ಸೇರಿದರೇನಾದೋ ಜ್ಞಾನಬೋಧಾಮೃತ ಜಾಣತನದಿ ಅ ಜ್ಞಾನಿಗೆ ತೋರಿದರೇನಾದೋ 2 ಭಂಡರ ದಂಡಿಸಲೇನಾದೋ ಮಿಂಡೆ ಷಂಡನ ಕೂಡಿದರೇನಾದೋ ಮಂಡೆಬೋಳಿ ಮುಂದೆ ಗೊಂಡೆಮುತ್ತಿನ ಮಹ ದಂಡೆಯ ತಂದಿಡಲೇನಾದೋ 3 ಪಥ ಕೇಳೆಲೇನಾದೋ ಬಲು ದುರುಳ ಧರೆಯಾಳಿದರೇನಾದೋ ಕರುಣವಿಲ್ಲದ ಪರಮ ಪಾಪಿಗಳಿ ಗೆರಗಿ ಬೇಡಲಲ್ಲೇನಾದೋ 4 ಮಾನವ ಇಹ್ಯಮೆಚ್ಚಲಲ್ಲೇನಾದೋ ಮತಿ ಹೀನರ ಜಾಣತ್ವದೇನಾದೋ ಪ್ರಾಣೇಶ ರಾಮನ ಖೂನ ತಿಳಿಯದ ಮಾನವನಾದಲ್ಲೇನಾದೋ 5
--------------
ರಾಮದಾಸರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಎಂಥ ಪಾಪಿ ನಾನು ಹರಿ ಹರಿ ಪ ಕರ್ಮ ತಿಂತಿಣಿಗಳ ಬಾಧೆಗಳನು | ಅಂತ್ಯಗಾಣದಾದೆನಯ್ಯ ಅ.ಪ ಪರಹಿತಾರ್ಥ ಮನದೊಳೆಣಿಸದೆ || ನರಕದುಃಖದೊಳು ಗೋಳಿಡಲು | ಬರುವರಾರು ಕಾಣದಿರಲು 1 ಪರ ಇರುತ ಮಾಯಾಬಲೆಯೊಳಗೆ ಬಿದ್ದೆ || ಕರೆದರಾರು ಬಾರದಿನಿತು | ಪರಿಯ ಭವಕಿಲ್ಬಿಷವನುಣುವ 2 ಶ್ವಾನನಂತೆ ನಾನು ತೊಳಲಿದೆ || ತಾನು ತನ್ನದೆಂದಧರ್ಮ ನಾ | ಏನನೆಂದರು ಕೇಳರಯ್ಯ 3 ಅನ್ಯರೆಂದು ಪರರ ನಿಂದಿಸಿ | ಪುಣ್ಯಹೀನನಾದೆನಯ್ಯ 4 ಸರ್ವವಿಧದಿ ಭಜಿಸಿ ನಿಜ | ಸರ್ವೇಶ ಶ್ರೀನಿವಾಸನೆನದೆ 5
--------------
ಸದಾನಂದರು
ಎಲೆ ಮನಸೆ ಎಲೆ ಮನಸೆ ಹರಿಪಾದ ನಂಬು ಸುಲಭ ಭಕ್ತರಿಗಾತ ಕೊಡುವ ನಿನಗಿಂಬು ಪ ಕುಲಹೀನನೆನಬೇಡ ಹಳಿದುಕೊಳ್ಳಲಿ ಬೇಡ ತಿಳಿಗೇಡಿಯೆನಬೇಡ ಕಳವಳಿಸಬೇಡ ಮಲಿನವೆಂದೆನಬೇಡ ಜಳಕ ಮಡಿಯೆನಬೇಡ ತಿಳಿದು ಭಜಿಪರ ಬೆಂಬಲನು ನಾನೆಂಬ 1 ವಿಪಿನ ಸೇರಲಿಬೇಡ ಕೌಪೀನ ಬೇಡ ಕಪಟಬುದ್ಧಿಯ ಬಿಟ್ಟು ಸಫಲ ಮಾನಸದಿಂದ ಆಪತ್ತು ಬಂಧುಯೆನೆ ಕೃಪೆಮಾಡ್ವ ಬಂದು 2 ದಾನಧರ್ಮವು ಬೇಡ ನಾನಾ ಕರ್ಮವು ಬೇಡ ಮೌನದೊಳಿರಬೇಡ ಏನುವ್ರತಬೇಡ ಧ್ಯಾನದಾಯಕ ಎನಗೆ ನೀನೆ ಗತಿಯೆಂದೆನಲು ದೀನದಯ ಶ್ರೀರಾಮ ಮಾಣದೆ ಕಾಯ್ವ 3
--------------
ರಾಮದಾಸರು
ಏನಿದ್ದರೇನು ಈ ಮಾನವನಿಗೆ ಜಗದಲ್ಲಿ ದಾನವಾಂತಕನ ಗುಣಜ್ಞಾನವನು ಪೊಂದದಲೆ ಪ ಕಾನನದಿ ಬೆಳಗುತಿಹ ಬೆಳದಿಂಗಳಂದದಲಿ ಜ್ಞಾನ ಹೀನನಿಗೆ ಈ ಮಾನವನ ಜನುಮ ಅ.ಪ ದಾನ ಮಾಡಿದರೇನು ಧರ್ಮ ಮಾಡಿದರೇನು ಸ್ನಾನ ಮಾಡಿದರೇನು ನದಿನದದಲಿ ಜ್ಞಾನವಿಲ್ಲದ ಕರ್ಮಗಳ ರಚಿಸಲೇನುಂಟು ವಾನರಗೆ ಕರದೊಳಿಹ ಮಣಿಗಳಿಂದೇನು ಫಲ 1 ಯಾತ್ರೆ ಮಾಡಿದರೇನು ಕಾಶಿ ರಾಮೇಶ್ವರದ ಕ್ಷೇತ್ರಗಳ ವಾಸದಿಂದೇನು ಫಲವು ಚಿತ್ರ ಚರಿತನಲಿ ದೃಢಭಕುತಿಯನು ಪೊಂದದಿರೆ ನೇತ್ರರಹಿತನಿಗುಂಟೆ ಚಿತ್ರಗಳ ಫಲವು 2 ಹೊನ್ನಿನ ಮದದಿಂದ ಹೆಮ್ಮೆಗೋಸುಗ ಬಹಳ ಅನ್ನಛತ್ರಗಳ ರಚಿಸಿದರೇನು ಫಲವು ತನ್ನವರ ದೃಢಭಕುತಿಯನ್ನರಿವ ಸತತ ಪ್ರ ಸನ್ನ ಹರಿದಾಸರಿಗೆ ಇನ್ನೇನು ಬೇಕು 3
--------------
ವಿದ್ಯಾಪ್ರಸನ್ನತೀರ್ಥರು
ಏನು ಗತಿ ಎನಗಿನ್ನು ಏನು ಗತಿಯೋ ನೀನು ಸಿರಿ ಕೃಷ್ಣ ಪ ಕಾಯ ಮೊದಲಾದ ಬದುಕುಗಳೆಲ್ಲ ಸ್ಥಿರತರಗಳಲ್ಲೆಂದು ತೋರಿಸಲು ಪರಮ ಭಕುತಿಯು ಪುಟ್ಟಿ ಮೊದಲೆ ನಾ ನಿನ್ನ ಪದ ಮರೆದು ಬಿಡುವೆನು ತಡಿಯದೇ ಕರುಣಿ 1 ಹೀಗೆ ತೋರದೆ ಪೋದರೆ ಎನಗೆ ಹಂಬಲವು ಆಗುವುದು ಸತ್ಯಲೋಕಗಳ ತನಕ ಭೋಗಗಳು ಕೊಟ್ಟರೆ ಮರೆವೆ ಅದರಿಂದ ನಾ ಕೂಗುವೆನು ಕೊಡದಿದ್ದರೆ 2 ಪಾಮರನ ಮಾಡಲೆನ್ನನು ತಿಳಿಯದಲೇವೆ ಸೀಮೆ ಇಲ್ಲದ ಪಾಪ ಮಾಡುವೆನೊ ಪ್ರೇಮದಲಿ ಪಾಂಡಿತ್ಯ ನೀಡಿದರೆ ಭಕುತ ಜನ ಸ್ತೋಮ ನಿಂದಿಸುವೆನಯ್ಯಾ 3 ಧನದಿಂದ ಹೀನನ್ನ ಮಾಡೆ ಲೋಕದಲಿನ್ನು ಜನರು ಕೊಡುವುದು ಎಲ್ಲ ಎನಗೆ ಕೊಡಲೆಂಬೆ ಧನವು ನೀ ಕೊಡಲು ಬಲು ಮದದಿಂದ ಕೆಟ್ಟು ಸ- ಜ್ಜನಕೆ ಕಾಸೊಂದು ಕೊಡಿನೊ 4 ಏಸು ಪರಿಯಲಿ ಪೇಳಿದರು ಕೇಳೆನ್ನ ನಿಜ ವಾಸನಿಯು ತನಗೆ ತಾನಿಟ್ಟಾಹದೈ ವಾಸುದೇವವಿಠಲ ನೀ ಎನ್ನಯ ಮನದಲ್ಲಿ ವಾಸವನು ಮಾಡಿ ಬೋದÉೈಸದನಕೆÀ5
--------------
ವ್ಯಾಸತತ್ವಜ್ಞದಾಸರು
ಏನು ಬಲ್ಲಿದನೋ ಹನುಮಂತ ನೀನು ಏನು ಬಲ್ಲಿದನೋ ಪ ಏನು ಬಲ್ಲಿದನಯ್ಯ ನೀನು ಜ್ಞಾನಮೂರುತಿ ಜಾನಕೀಶನ ಧ್ಯಾನ ಸುಖಸಾಮ್ರಾಜ್ಯದಲ್ಲಿ ಲೀನನಾಗಿ ಸುಖಿವೆ ಬಲವಂತ ಅ.ಪ ಶರಧಿ ಜಿಗಿದವನೋ ಭರದಿ ದುರುಳನ ಪುರವ ಸೇರಿದನೋ ನಿರುತ ದೊರೆಮಾತೆ ದರುಶನಾದನವನೋ ಪರಮವೀರನೋ ಧರೆಯ ಮಾತೆ ಕೃಪಾಪಾತ್ರನಾಗಿ ಪರಮಪಾವನ ವರವ ಪಡೆದು ಮರಳಿ ದುರುಳನ ವನವ ಸೇರಿ ಧುರವ ಜೈಸಿದಿ ಧೀರಮಾರುತಿ 1 ತಿರುಗಿ ಅಂಗದನ ಬಲವನ್ನು ಸೇರಿ ಸಾರ ಕಥನವನ್ನು ಅರುಹಿ ಮುಂದೆ ಪರಮಪಾವನನ ಚರಣಕಂಡಿನ್ನು ಇರಿಸಿ ಹರಿಯಾಜ್ಞಂಗೀಕರಿಸಿ ತ್ವರದಿ ದಕ್ಷಿಣಶರಧಿ ಹೂಳಿಸಿ ಭರದಿ ಲಂಕೆಗೆ ಮುತ್ತಿಗಿತ್ತಯ್ಯ 2 ಬುದ್ಧದೇಹದ ಕುಂಭಕರ್ಣನ ಕ್ಷುದ್ರ ಇಂದ್ರಜಿತುನ ಮತ್ತವನ ತಂದೆ ಬುದ್ಧಿಹೀನನ್ನ ಹತ್ತು ತಲೆಯವನ ಯುದ್ಧದಿಂದ ಬದ್ಧರಕ್ಕಸ ರೊದ್ದು ಬೇಗನೆ ಛಿದ್ರ ಮಾಡಿ ಜ ಗದ್ರಕ್ಷ ಶ್ರೀರಾಮ ಪಾದಪದ್ಮಕ್ಕೆ ಮುದ್ದು ಮುಖಿಯನು ತಂದುಕೊಟ್ಟೆಯ್ಯ 3
--------------
ರಾಮದಾಸರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಏನೇನಿಲ್ಲದ ಧನಹೀನನಿಗೆ ಹರಿ ನಾಮವೆ ಭಾಗ್ಯಕರ ಸಾಧಿಸು ಮುಕ್ತೀಕರ ಪ ನೊಂದನು ಮಾಡದಿರೆ ಇಂದಿನ ಜನ್ಮದೊಳಗೆ ದಾರಿದ್ರ್ಯವು ಬಂದು ಪೀಡಿಸುತಲಿದೆ ಮುಂದೆ ಸಾಧಿಸಿ ಕೊಂಬೆನೆಂದರೆ ಕೈಯೊಳೊಂದರೆ ಕಾಸಿಲ್ಲವು ಪಾಲಿಸೋ ಹರಿಯೇ 1 ಕುಟ್ಟಿ ಕೊಂದರೆ ಪಣೆಯ ನಿನ್ನಿಷ್ಟವಮನ ದಣಿಯ ಪಡೆದಷ್ಟು ಉಣ್ಣಬೇಕಲ್ಲದೆ ಪೂಜಿಸೋ ಹರಿಯೆ 2 ಮಾತ್ರವು ಸುಖವಿಲ್ಲ ಜಗದೇಕ ವಂದ್ಯನ ನೆನೆಸು ಶ್ರೀ ಲಕ್ಷ್ಮೀಶನ ಭಜಿಸಿದರೆ ಬೇಕಾದನಿತುವನಿತ್ತು ಕಡೆಗೆ ತನ್ನ ಲೋಕವ ಪಾಲಿಪನು 3
--------------
ಕವಿ ಪರಮದೇವದಾಸರು
ಏನೊ ಜೀವ ನನ್ನ ನುಡಿವ ನಾಲಗೆಯು ನಿನ್ನದೇನೊ ಕಾಣೆ ನಿನ್ನಾ ಬಣ್ಣವನೆನ್ನಾಣೆ ಕೇಳು ಪೇಳುವೆನೂ ಪಭೂತಂಗಳು ಪುಸಿಯೇನೊ ಮಾತೆ ಮಾಯೆಯಲ್ಲವೇನೊಏತಕೀಗರ್ವವು ನೀನು ಜಾತನಾದ ಬಗೆಯೇನೊಕೈತವವ ಬಿಡುುನ್ನೂ ಹೇತು ಹೀನೋಕ್ತಿಗಳೇನುನೀತಿಯಾಗಿ ಪೇಳು ನಾನು ತಾತಪ್ಯಮಾನನಪ್ಪೆನೂ 1ಬಿಸಿಲು ದೊರೆದೇರನೆ ನಾನು ಮಸಿಯಮಾತ ನುಡಿವೆ ನೀನುನಶಿದು ಪೋಪೆನಹುದು ನಾನು ಹಸದೊಳಿಪ್ಪುದುಂಟೆ ನೀನುಸಸಿನೆ ತಿಳಿದುಸುರಿನ್ನು ಕುಸಿಯ ಹಾಕದಿರೆನಿನ್ನೂನುಸುಳುದಾರಿ ಮನವನ್ನು ಹೊಸದು ಕೊಂಡಾಡಿದರೇನು 2ನೋಡುವ ಕಣ್ಣು ನಿನ್ನದೇನೊ ಆಡುವಾಟನಿನ್ನದೇನೊಓಡುವ ಕಾಲು ನಿನ್ನದೇನೊ ನೀಡುವ ಕೈ ನಿನ್ನದೇನೊಬೀಡ ಬಿಡುವರೆ ನೀನು ಗೂಡಾಗಿುದ್ದೆ ನಾನುಕೂಡಲಿಂದ್ರಿಯ ಕರಣ ತಾನು ಕಾಡುಪಾಲಾಗುವೆನೀನು 3ಎದ್ದು ನಡೆದಾಡುವೆ ನಾನು ನಿದ್ರೆಗೈವೆ ಮಲಗಿ ನಾನುಹೊದ್ದುಕೊಂಬೆ ಹೊದಿಕೆಗಳನು ಗದ್ದುಗೆಗಧಿಕಾರಿ ನಾನುಸಿದ್ದಿಯೆನ್ನಿಂದಲೆ ತಾನು ನಿರ್ಧರಿಪುದಿದ ನೀನುಬುದ್ದಿಹೀನನಾಗದಿರಿನ್ನು ಬದ್ಧವಾಡು ಕೇಳ್ವೆ ನಾನು 4ತಿರುಪತೀಶನಂಘ್ರಿ ನಾನು ಬರಿಯ ಪ್ರತಿಬಿಂಬ ನೀನುಗುರುವಾಸುದೇವಾರ್ಯರನ್ನು ಎರಗಿ ಸಂಪಾದಿಸಿದೆ ನಾನುಕರೆದು ಬಿಗಿದಪ್ಪಿದರೆನ್ನುವನು ಒರೆಯೆ ಕಿವಿಯೊಳ್ಮಂತ್ರವನ್ನುಭರದಲೆನ್ನ ಜಿಹ್ವೆ ಜಪಿಸಿ ಅಂತೆನೆಂಬೆ ನಿನ್ನ ನೀನು 5ಕಂ||ಒರಟುತ್ತರದಿಂದ ದೇಹವು ಬರಿ ಜಗಳವ ತೆಗೆಯೆ ಜೀವನರಿತಿದರಂದವ ನೆರೆಮೂರ್ಖರ ದಾರಿಯೊಳಗೆಬರುತರುಪುವ ಜಾಣನೆಂದು ನೀತಿಯ ನುಡಿದಂ
--------------
ತಿಮ್ಮಪ್ಪದಾಸರು
ಏಸುಬಾರಿ ಬೇಡಿದರೆ ಹೇಗಾಯಿತು ಹರೇ ವಾಸುದೇವನೆ ನಿನ್ನ ಧ್ಯಾನಕೆ ಸರಿಬಾರದಿರೆ ಪ ಪರಿ ಘಾಸಿಗೊಳಗಾಗಿ ಬಹು ಕ್ಲೇಶದಿಂದಲಿ ನಿನ್ನ ಆಶಿಸಿದವನಾ ಭೂಸುರ ಧೊರಿಯೆ ಶ್ರೀನಿವಾಸ ವೇಣುಗೋಪಾಲ ಕೂಸಿನಂದದಿ ಎತ್ತಿ ಪೋಷಿಸುವುದು ನಿನಗೆ ಹುಟ್ಟದೊ 1 ಸಂಸಾರ ವೆಂಬಂಥ ಶರಧಿಯೊಳು ಮುಳುಗಿ ಬಹು ಹಿಂಸೆ ಬಡುತಲಿ ಬಹಳ ಹೀನನಾಗಿ ಕಂಸಮರ್ದನನಾದ ಘನಮಹಿಮಗೋವಿಂದ ಸಂಶಯವಿಲ್ಲದೆ ನಿಮ್ಮ ಸ್ಮರಿಸುತಲಿ ಅನುದಿನವೂ 2 ಅಘಹರನೆ ನಗಧರನೆ ಆದಿ ಪರಾಕ್ರಮನೆ ನಿಗಮಗೋಚರನಾದ ಘನ 'ಹೊನ್ನ ವಿಠ್ಠಲ 'ನೆ ಜಗತ್ಕರ್ತನೆ ನಿನ್ನ ಚಿಂತನೆಯೆ ಅನುದಿನವೂ ಕರುಣಹುಟ್ಟದೇನು 3
--------------
ಹೆನ್ನೆರಂಗದಾಸರು
ಕಂಡಿರೇ ಬ್ರಹ್ಮದಾಟವ ಕಂಡಿರೆ ಬ್ರಹ್ಮದಾಟ ಅ-ಖಂಡರಾದ ಮಹಾತ್ಮರಿರಾ ಪ ಬುದ್ಧಿಯನ್ನು ಹೇಳುತಿದೆ ಬುದ್ಧಿಯನ್ನು ಕೇಳುತಿದೆಬುದ್ಧಿಹೀನನೆಂದು ತಾನೆ ಬದ್ಧನಾಗಿ ಕುದಿಯುತಿದೆ 1 ಒಮ್ಮೆ ಸುಖಪಡುತಲಿದೆ ಒಮ್ಮೆ ದುಃಖ ಮಾಡುತಿದೆಒಮ್ಮೆ ಹಾಡಿಪಾಡಿ ನಕ್ಕು ಒಮ್ಮೆ ಕೆಲೆದು ಕೆನೆಯುತಿದೆ 2 ದುಡುಕು ತಾನು ಮಾಡುತಿದೆ ದುಡುಕು ಅವನದೆನ್ನುತಿದೆದುಡುಕು ದುಡುಕು ಎಂದು ತಾನೆ ಬಿಡಿಸಿ ನ್ಯಾಯ ಹೇಳುತಿದೆ3 ಗಂಡ ಹೆಂಡಿರಾಗಿ ಇದೆ ಗಂಡು ಮಗನ ಬೇಡುತಿದೆಗಂಡು ಗಂಡು ಎಂದು ತಾನು ಗಂಡ ದೀಪ ಹೊರುತಲಿದೆ 4 ಬಹಳ ವೇಷ ಹಾಕಿ ಇದೆ ಬಹಳ ಹೆಸರ ಕರೆಸುತಿದೆಬಹಳ ಚೇಷ್ಟೆಯಿಂದ ತಾನು ಬಹಳ ಭೇದವಾಗಿ ಇದೆ 5 ಇಂತು ಬಹಳ ರೂಪವಿದೆ ಇಂತು ತಿಳಿಯಲೊಂದೆ ಇದೆಇಂತು ಚಿದಾನಂದ ಬ್ರಹ್ಮ ಇಂತು ಹೊತ್ತು ಕಳೆಯುತಿದೆ 6
--------------
ಚಿದಾನಂದ ಅವಧೂತರು