ಒಟ್ಟು 592 ಕಡೆಗಳಲ್ಲಿ , 85 ದಾಸರು , 475 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದೊದಗಿತು ಪುಣ್ಯಫಲವು ಮುಚುಕುಂದವರದ ವಾಸುದೇವಾರ್ಯರೊಲವು ಪಸಂಚಿತಾಗಾಮಿಪ್ರಾರಬ್ಧವೆಂಬ ಕಂಚುಕಿಯಾದ ಕರ್ಮದ ಬಹುಬದ್ದದಂಚುಗಾಣುವುದಾವ ಸಿದ್ಧ ಇದು ಕಿಂಚಿದಾದುದು ಗುರುಚರಣರೇಣಿಂದ 1ಏನು ಸುಕೃತವ ಮಾಡಿದೆನೊ ನಿನಗಾನತ ನಾನಾದ ಬಗೆಯು ತಾನೇನೊನೀನೆ ಕರುಣವಿತ್ತುದೇನೊ ನಾನು ಜ್ಞಾನವೆಂತೆಂಬ ಸ್ವರೂಪವನರಿಯೆನೊ 2ಪರಿಹರಿಸಿತು ಜನ್ಮ ಮರಣ ದುಃಖ ದುರವಣೆ ದಹಿಸಿತು ಲಕ್ಷ್ಮಿಯರಮಣತಿರುಪತಿ ವೆಂಕಟರಮಣ ನೀನೆ ಗುರು ವಾಸುದೇವರೂಪಿನಲಿತ್ತೆ ಕರುಣ3ಓಂ ನರನಾರಾಯಣಾತ್ಮಕಾಯ ನಮಃಕಂ||ಭೃಗುವಾರದರ್ಚನೆಯನಿದನಿಗಮಾಗಮವೇದ್ಯ ಗ್ರಹಿಸಿ ಸಿರಿ ಧರಣಿಯು ಸಹಭಗವಂತ ನಿನ್ನ ಭಕ್ತರೊಳಗಲದೆ ನಾನಿಹುದ ಮಾಡು ವೆಂಕಟರಮಣಾ
--------------
ತಿಮ್ಮಪ್ಪದಾಸರು
ಬಂದೊದಗಿತು ಪುಣ್ಯಫಲವೂ ಮುಚುಕುಂದ ವರದ ವಾಸುದೇವಾರ್ಯರೊಲವು ಪಸಂಚಿತಾಗಾ'ು ಪ್ರಾರಬ್ಧವೆಂಬಕಂಚುಕಿಯಾದ ಕರ್ಮದ ಬಹು ಬದ್ಧದಂಚುಗಾಣುವುದಾವ ಸಿದ್ಧ ಇದುಕಿಂಚಿದಾದುದು ಗುರುಚರಣರೇಣಿಂದಾ 1ಏನು ಸುಕೃತವ ಮಾಡಿದೆನೊ ನಿನಗಾನತ ನಾನಾದ ಬಗೆಯು ತಾನೇನೋನೀನೆ ಕರುಣ'ತ್ತುದೇನೋ ನಾನುಜ್ಞಾನವೆಂತೆಂಬ ಸ್ವರೂಪವನರಿಯೆನೊ3ಪರಿಹರಿಸಿತು ಜನ್ಮ ಮರಣ ದು:ಖದುರವಣೆ ದ'ಸಿತು ಲಕ್ಷ್ಮಿಯ ರಮಣತಿರುಪತಿ ವೆಂಕಟರಮಣ ನೀನೆಗುರು ವಾಸುದೇವ ರೂಪಿನಲಿತ್ತೆ ಕರುಣ 3
--------------
ತಿಮ್ಮಪ್ಪದಾಸರು
ಬನ್ನಿರೈಯ್ಯ ಬನ್ನಿರೈಯ್ಯ ಬನ್ನಿರೈಯ್ಯ ಬನ್ನಿರಿ ಪ ಚಿನ್ನ ಕೃಷ್ಣನ ಚೆನ್ನಾಗಿ ನೆನೆದು ಪ್ರಸನ್ನ ಮಾಡಿರಿ ಅ.ಪ. ಸತಿಯು ಸುತರು ಗತಿಯು ಎಂದು ಕೆಡಲು ಬೇಡಿರಿ ಮಿತಿಯು ಇಲ್ಲ ಮೇರೆಯು ಇಲ್ಲ ಫಲವು ಇಲ್ಲ ಕೇಳಿರಿ ಮತಿಯ ಹರಿಯ ಅಡಿಯಲ್ಲಿಟ್ಟು ಪ್ರೀತಿಮಾಡಿರಿ ಗತಿಯನೀಡಿ ತ್ವರಿತದಿಂದ ಪೊರೆವ ನಿಮ್ಮ ನೊಡಿರಿ 1 ಇಂದು ಕಾಲ ಕಳೆಯ ಬೇಡಿರಿ ಶುಭ ಇಂದೆ ನೆನೆಯಿರಿ ಬಂದು ಯಮನ ಭಟರು ಕರೆದರೆ ಏನು ಮಾಡೋರಿ ಮುಂದೆ ಇಂಥ ಜನ್ಮಬಹುದೆ ಬಂಧ ನೂಕಿರಿ2 ಆಶಪಾಶ ಮೋಸ ಬಲುಕ್ಲೇಶ ತಿಳಿಯಿರಿ ಹೇಸಿಕೆ ಸಂಸಾರವನು ಘಾಸಿಕೆ ನೋಡಿರಿ ವಾಸವೇಶ ಜಯಮುನೀಂದ್ರ ವಾಯುಸ್ಥ ಕೃಷ್ಣ ವಿಠಲನ ದಾಸನಾಗಿ ಗೆಜ್ಜೆಕಟ್ಟಿ ನಿರಾಶೆಯಿಂದ ಭಜಿಸಿರಿ 3
--------------
ಕೃಷ್ಣವಿಠಲದಾಸರು
ಬರಿದೆ ದಣಿಯಬೇಡಿ | ಬಯಲ ಸಾಧನ ಕೂಡಿ | ನೆರೆ ಮಾಡಿ ಸಾಧು ಸಂತರಾ | ದಯವಂತರಾ ಪ ಏನು ಓದಿದರೇನು | ಏನು ಕೇಳಿದರೇನು | ಜ್ಞಾನಿಗಳೊಡನಾಡದೇ | ಅನುಭವವಾಗುದೇ 1 ಬುಡದಲಿ ಫಲವಿದೆ | ತುದಿಮರನೇರುವರೇ | ಬಿಡು ಬಿಡು ನಾನಾ ಸಾಯಸಾ | ಭ್ರಾಂತಿ ವೇಷಾ 2 ಗುರು ಮಹಿಪತಿ ನುಡಿ | ಸಾರಿದ ನಂದ ನೋಡಿ | ಮರೆಯದೆ ಮಾಡಿ ಸಾಧನಾ | ಹರುಷ ನಿಧಾನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬರುದೆ ಭ್ರಮೆಯಗೊಂಡ್ಯೊ ಮರುಳ ಮನುಜ ನೀನು ಧ್ರುವ ಎರವ್ಹಿನ ಮನೆಯೊಳು ಮರಹು ಮರೆಯಗೊಂಡು ಗರವು ಹಿಡಿದು ನಿನ್ನ ಕುರುಹು ತಿಳಿಯಲಿಲ್ಲ ಹರೆದು ಭ್ರಾಂತಿಗೆ ಬಿದ್ದು ಸೊರಗಿ ದಣಿದೆಲ್ಲ 1 ಏನು ಮರುಳಗೊಂಡ್ಯೊ ಹೀನಯೋನಿಯ ಮುಖಕೆ ಕಾನನದೊಳು ಪೊಕ್ಕು ಖೂನ ತಿಳಿಯದೆ ನಿನ್ನ ಜನುಮಜನುಮ ಬಂದ್ಯೊ ಜ್ಞಾನಶೂನ್ಯದಲಿ 2 ನಾನು ನನ್ನದು ಎಂದು ಏನು ಗಳಿಸಿಕೊಂಡ್ಯೊ ಸ್ವಾನುಭವದ ಸುಖ ಅನುಭವಿಸದೆ ಹೋಗಿ ಸ್ವಾನ ಸೂಕರಯೋನಿ ಮುಖಸೋಸಿದೆಲ್ಲ 3 ಹೊನ್ನು ಹೆಣ್ಣಿನ ಸವಿಯು ಬಣ್ಣಿಸಿ ನೀ ಬಯಸಿದಲ್ಲ ಮಣ್ಣೇ ಮಾಣಿಕವೆಂದು ದಣ್ಣನೆ ದಣುವರೆ ಕಣ್ಣಗೆಟ್ಟರೆ ಬ್ಯಾಡೊ ತನ್ನೊಳರಿಯದೆ 4 ಮುತ್ತಿನಂಥ ಜನುಮ ವ್ಯರ್ಥಗಳಿಯಬ್ಯಾಡ ಪಾದ ಬೆರ್ತು ಮಹಿಪತಿ ಪೂರ್ಣ ಸಾರ್ಥಕ ಮಾಡಿಕೊಳ್ಳೊ ಗುರುತುವರಿತು ನೀ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರಯ್ಯ ತಿಮ್ಮಯ್ಯಾ ತೋರಯ್ಯಾ ಮುಖವನು | ತಾರಯ್ಯಾ ಒಂದು ಚುಂಬನ ಕರುಣ | ಬೀರಯ್ಯಾ ನಮ್ಮ ವಶಕೆ ಪ ಶೋಭಾನೆ || ನಿಲ್ಲು ನಿಲ್ಲೆಲೊ ದೇವಾ | ಎಲ್ಲಿ ಪೋಗುವಾ ನೀನು ಸಲ್ಲದು ನಿನ್ನ ಚೋರಂಗ ಲೀಲಿಗೆ ಪಳ್ಳಿಸೋಕುದೆ ಇಲ್ಲ ಇಲ್ಲದೆ 2 ಹಾರಿಸಿ ವೈದು ಮರನೇರಿ | ಹಾರಿಸಿ ಮರನೇರಿದ ಸಣ್ಣ | ಪೋರ ಬುಧ್ಧಿಗಳ ಬಿಡವಲ್ಲಿ 3 ತುರುಕರಗಳ ಕಾಯ್ದು | ಚರಿಸಿದೆ ಅಡವಿಯ | ಪರಸತಿಯರ ವ್ರತಗಳ | ಪರಸತಿಯರ ವ್ರತಗಳ ಕೆಡಿಸಿದ | ಪರಮಾತ್ಮನಿಗೆ ಎಣೆಯುಂಟೆ 4 ಕೇಸಕ್ಕಿ ತಿರುಮಲ ಲೇಸಯ್ಯಾ ನಿನ್ನ ಗುಣ | ಕಾಸುಕಾಸಿಗೆ ಬಿಡದಲೆ | ಕಾಸುಕಾಸಿಗೆ ಬಿಡದೆ | ಬಡ್ಡಿಕೊಂಬ ಆಶೆಗಾರನು ಬಹು ಸೂರಾಳೊ 5 ಅಣಕವಾಡಲಿ ಬೇಡ ಕೆಣಕಿದರೆ ನಿನ್ನ | ಹೊಣಿಕೆಹಾಕುವೆ ಹಿಡತಂದು ಎನ್ನಯ | ಮನವೆ ನಿನ್ನಯ ಚರಣಕ್ಕೆ ಶೋಭಾನೆ 6 ಬೆಟ್ಟದ ಕೊನೆ ಏರಿ ಎಷ್ಟು ದೂರ ಓಡೀ | ಗಟ್ಯಾಗಿ ನಿನ್ನ ಚರಣದ | ಗಟ್ಯಾಗಿ ನಿನ್ನ ಚರಣದ ಕೊನಿಯ ಉಂ ಗುಷ್ಟ ಕಚ್ಚದಲೆ ಬಿಡೆ ನಾನು 7 ಹಿಂದೆ ಯಾರು ಏನು ತಂದು ಕೊಟ್ಟರೋ ನಿನಗೆ | ಇಂದು ನಾನೇನು ಕೊಡಲಿಲ್ಲವೆಲೋ ತಂದೆ | ಕಣ್ಣಿರದು ನೋಡೊ ಕಮಲಾಕ್ಷ | ಶೋಭಾನೆ 8 ಭಕ್ತನ ನುಡಿಕೇಳಿ ಚಕ್ಕನೆ ಬಿಗಿದಪ್ಪಿ | ತೆಕ್ಕಿಸಿದಾ ವಿಜಯವಿಠ್ಠಲ ಎನ್ನ ಅಕ್ಕರವೆಲ್ಲ ತೀರಿಸಿದಾ | ಶೋಭಾನೆ 9
--------------
ವಿಜಯದಾಸ
ಬಾರೆ ವೆಂಕಟರಮಣಿ ಶ್ರೀದೇವಿ ನೀ ಬಾರೆ ವೆಂಕಟರಮಣಿ ಪ ನಿತ್ಯ ಅ.ಪ. ಏನು ಪುಣ್ಯವೆ ನಂದು ಪಾರಾಯಣನೀನು ಕೇಳುವಿ ಬಂದುಹೀನ ಮಾನವನಿಗೆ ನೀನು ಬರುವಿ ಎಂಬೊಜ್ಞಾನವಿಲ್ಲದೆ ಉಚ್ಚ ಸ್ಥಾನದೊಳಗೆ ಬಾರೆ 1 ಸ್ವಪ್ನದೊಳಗೆ ಬರುವಿ ಶ್ರೀದೇವಿ ನೀಕ್ಷಿಪ್ರದಿಂದಲಿ ಪೋಗುವಿಸರ್ಪಶಯನ ನಮ್ಮಪ್ಪ ಗೋಕುಲ ಬಾಲಅಪ್ಪಿಕೊಳ್ಳುವ ಸುಖ ಒಪ್ಪಿಸಬೇಕಮ್ಮ 2 ಸಿರಿ ರಂಗನಂಕದಿ ಕೂತುಭೃಂಗಕುಂತಳೆ ಹೃದಯಂಗಳದೊಳಗಾಡೆ 3 ಎಲ್ಲ ದೇವತೆಗಳನೆ ತಪಾದಿಯೆಪುಲ್ಲ ವಾರಿಜನಯನೆಗೊಲ್ಲ ಬಾಲನಪಾದ ಪಲ್ಲವ ನೋಡದೆನಿಲ್ಲಲೊಲ್ಲದು ಮನಸೊಲ್ಲು ಲಾಲಿಸೆ ತಾಯೆ4 ಇಂದಿರೇಶನ ರಾಣಿ ಎನ್ನಯ ಮನೋ-ಮಂದಿರದೊಳು ಬಾ ನೀನಂದಗೋಕುಲ ಬಾಲಾನಿಂದು ಕರದೊಳೆತ್ತಿತಂದು ತೋರಿಸೆ ಅರವಿಂದನಿಲಯೆ ಲಕ್ಷ್ಮಿ 5
--------------
ಇಂದಿರೇಶರು
ಬಾಲಕೃಷ್ಣ ಏನು ಮೋದವೊ ವೇಣು ಬಾಲಕೃಷ್ಣಾನೀನು ಮಲಗಿ ತೊಡಿಯೊಳು ಗಾನ ಕೇಳಿದೆಯೋ ಪ ವ್ಯಾಳರಾಜ ಚರಿತೆ ಪೇಳುತಿರಲು ಒಬ್ಬಲೋಲ ಕಣ್ಣು ತೆರೆದು ಕೇಳಿದೆಯೋ ಕೂಸೇ 1 ಹಿಂದೆ ಎರಡು ಕಾಲು ಮುಂದೆ ಎರಡು ಕರವುಪೊಂದಿ ತೊಡಿಯಲಿ ಗಾನ ಚೆಂದ ಕೇಳಿದೆಯೋ2 ಇಂದಿರೇಶನ ಪೂಜಾಕಾಲದಲ್ಲಿನಂದತನಯ ಪದವ ಬಂದು ಕೇಳಿದೆಯೋ 3
--------------
ಇಂದಿರೇಶರು
ಬಿನ್ನಪವ ಕೇಳು ಜೀಯಾ ಬನ್ನಬಡಿಸುವ ಮಾಯಾ ಬೆನ್ನು ಬೀಳದಂತೆ ಮಾಡು ಎನ್ನ ಕೂಡಾಡು ಪ ಹತ್ತದ ಜನಕೆ ನೀನು ಹತ್ತಿಲಿ ಇದ್ದರೆ ಏನು ಉತ್ತರ ಲಾಲಿಸದಿಪ್ಪ ಉತ್ತಮ ಶ್ಲೋಕಾ ತತ್ವ ಬಲ್ಲವಂಗೆ ದೂರತ್ತಲಿದ್ದರೇನು ಅವನ ಪತ್ತಿಗೆ ಬಂದೊದಗುವ ಚಿತ್ತಜನಯ್ಯಾ 1 ಇಂದೆ ಕೈವಲ್ಯವ ಕೊಡುವೆ ಒಂದು ಕ್ಷಣ ಮಾಯಿಗಳ ಮಂದಿರದಲ್ಲಿ ಜನಿಸಿ ಎಂದು ನುಡಿದಡೆ ಮಂದರಧರನೆ ಕೇಳು ಎಂದೆಂದಿಗೆ ಎನ್ನ ನರಕ ಬಂಧನದಲ್ಲಿಡು ಅಲ್ಲಿ ಪೊಂದುವರಾರೊ 2 ಸೂಕರ ಗಾರ್ಧಭ ನಾನಾ ಕೆಟ್ಟ ಜಾತಿಯವರ ಯೋನಿಯೊಳು ಕಟ್ಟಿಹಾಕಿ ಹೀನಾಯ ಉಣಸೀ ಅನಂತ ಕಲ್ಪಕ್ಕೆ ಪವಮಾನ ಮತ ಪೊಂದಿಸಿ ನಿರ್ವಾಣವೀವೆನೆಂದರಾಗೆ ನಾನಾದಿ ಬಯಿಪೆ 3 ಗುರುಪ್ರಸಾದದಿಂದಲಿ ಪರಮ ಸದ್ಗತಿ ಎನ ಗರಿದಲ್ಲ್ಯಾವಾಗಾದರು ಸ್ಥಿರವೆ ಸಿದ್ಧ ನಿರಯ ದುರಾತ್ಮಗಿಲ್ಲ ಕರವ ಮುಗಿದು ಒಂದು ವರ ಬೇಡುವೆ 4 ಭಾಗವತರ ಸಹವಾಸ ಭಾಗವತರ ಕಥಾಗುಣ ಭಾಗ ಗುಣಿಸುವ ಮತಿ ಭಾಗೀರಥಿ ಯಾತ್ರೆ ಭಾಗ್ಯವೆ ಪಾಲಿಸು ದುಷ್ಟ ಭಾಗಾದಿಯರೋಡಿಸಿ ಕಡೆ ಭಾಗಕ್ಕೆ ಎನ್ನೆಡಬಲ ಭಾಗದಲಿ ಸುಳಿಯೊ 5 ಕಾಣಿಕಾಣೆ ಙÁ್ಞನವಿಲ್ಲ ತುತಿಪುದಕ್ಕೆ ಧ್ಯಾನವÀರಿಯೆ ನಿನ್ನನೆ ನಿದಾನಿಸಲಿಕ್ಕೆ ನಾನಾಪರಾಧವ ಮಾಡಿದ ಮಾನವನೋ ದೀನಬಂಧೊ ನೀನೊಲಿದು ಎನ್ನ ಮನಕೆ ಆನಂದ ತೋರೋ 6 ರಜತಪೀಠ ಪುರನಿವಾಸಾ ರಜನಿಪತಿ ಸಂಕಾಶಾ ರಜನಿಚರ ವಿನಾಶಾ ಸುಜನಮಾನಸಹಂಸ ರಜದೂರ ಮಂದಹಾಸಾ ವಿಜಯವಿಠ್ಠಲ ಶ್ರೀಶಾ ಭಜಿಪೆ ಲೇಶಾ 7
--------------
ವಿಜಯದಾಸ
ಬಿನ್ನಹಕೆ ಬಾಯಿಲ್ಲ ಭೂತನಾಥ ಪ ನಿನ್ನ ಪದರಜ ಸ್ನಾನ ನೀಡೆನ್ನ ಉದ್ಧರಿಸು ಅ.ಪ. ಹೀನ ಯೋಗ್ಯತೆಗಿನ್ನು ಏನು ಮಾಡಲೊ ಸ್ವಾಮಿ ಧೇನು ವತ್ಸನ ತೆರದಿ ಪಾಲಿಸೆನ್ನ ವೇಣುಗೋಪಾಲನಾ ಧ್ಯಾನ ನಿಲ್ಲದು ಮನದಿ ನಾನು ನನ್ನದು ಬಿಡದು ಎನಗಾವ ಗತಿಯಿನ್ನು 1 ನೀಲಕಂಠನೆ ನಿನ್ನ ನೀಳಪಾದದ ಧೂಳಿ ಮೂರ್ಲೋಕದಘತೂಲಕಗ್ನಿ ಸತತ ಫಾಲಾಕ್ಷ ಪತಿತ ಪರಿಪಾಲಕನು ನೀನೊಬ್ಬ ಹಾಲಲ್ಲಿ ಅದ್ದೆನ್ನ ಹರಿಭಕ್ತರ ಬಂಧು 2 ಮನಕರಣ ತನು ವಿಷಯ ಘನಪಾಶದಲಿ ಸಿಕ್ಕಿ ಉಣಿಸುವುವು ಮಹದುಃಖ ಎನ್ನ ಮೀರಿ ತುಂಬಿ ಎನಿತು ನಿನ್ನಲಿ ನಿಂದು ಪೊರೆಯೆಂದು ಮೊರೆ ಇಡಲಿ 3 ದುಷ್ಟವಾಸನೆ ಶಕ್ತಿ ಮೆಟ್ಟಿ ಆಳುವುದೆನ್ನ ವೃಷ್ಟೀಶನಲಿ ಎನ್ನ ಪೋಗಬಿಡದೊ ದುಷ್ಟನಕ್ರಗೆ ಸಿಕ್ಕ ಕರಿಯಂತೆ ಬಾಯ್ಬಿಡುವೆ ಕಷ್ಟ ಪರಿಹರಿಸಯ್ಯ ಹರಿನಿಷ್ಠಧ್ಯಾನವನಿತ್ತು 4 ಶತಕೋಟಿ ಶ್ರುತಿಯಲಿ ಜಯೇಶವಿಠಲ ನತಬಂಧು ಎಂತೆಂದು ಸಾರುತಿಹುದು ಹಿತಭಕ್ತ ನೀ ಹರಿಗೆ ಹರಿಮೀರ ನಿನ್ನುಕ್ತಿ ಪತಿತಪಾವನ ನನ್ನ ಹರಿಭಕ್ತನ ಮಾಡು5
--------------
ಜಯೇಶವಿಠಲ
ಬುದ್ಧಿಮಾನಿಯೆ ಎನ್ನ ಉದ್ಧರಿಸು ತಾಯೆ ಪ ಶ್ರದ್ಧಾದೇವಿ ನಿನ್ನ ಕೃಪೆಯಾಗೆ ಹರಿ ನಲಿವ ಅ.ಪ. ಮಧ್ವಮುನಿ ಮನದೈವನತಿ ಮುದ್ದು ಪರಿಸರಳೆ ವಿದ್ಯಾ ಅಸಾದ್ಯ ಕರುಣಾಬ್ಧಿ ದೇವಿ ಪ್ರಧ್ವಂಸ ಮಾಡು ಮಮ ಹೃದ್ರೋಗ ಮೂಲ ಪ್ರ ಬುದ್ಧರಲಿ ಪದವಿತ್ತು ಉದ್ಧಾರ ನೀ ವಹಿಸು 1 ನಿನ್ನ ಕೃಪೆಯಮೃತ ರಸವಿನ್ನು ದೊರೆಯಲು ನಾವು ಧನ್ಯ ಧನ್ಯರು ಮಾತೆ ಭಕ್ತಿಮೂರ್ತೆ ವಿಧಿ ರುದ್ರಸೇವ್ಯ ಪದ ಪುಷ್ಕರಳೆ ಪುಣ್ಯ ಪುರುಷ ಸಮೀರ ಸಂತ ಸಂಸ್ತುತೆ ಪಾಹಿ 2 ನೀನೊಲಿಯದ ಜೀವ ಏನು ಸಾಧನೆ ಮಾಡೆ ಪ್ರಾಣವಿಲ್ಲದ ದೇಹ ಶೃಂಗರಿಸಿದಂತೆ ವಾನರ ಪ್ರತಿಬಿಂಬ ಜಯೇಶವಿಠಲ ತಾನೊಲಿಯ ಅವಗೆಂದು ನಿನ್ನವರ ಕರವಶನು 3
--------------
ಜಯೇಶವಿಠಲ
ಬ್ರಾಹ್ಮಣನುಣಲಿಕೆ ರಾಗಿ ಹಿಟ್ಟು ತನ್ನ ಬಂಧು ಜನಕ್ಕೆ ಒಬ್ಬಟ್ಟು ಪ ಪಾಮರ ಜನರಲಿ ವಾಡಿಕೆಯಿದು | ಶ್ರೀ ರಾಮನೊಲಿವನೆ ಎಂದಿಗಾದರು ಅ.ಪ ಮಾತು ಮಾತಿಗೆ ಸಾಲಮಾಡಿ | ಬಹ ಳಾತುರದಲಿ ಓಡಾಡಿ ಜಾತುಕನಂದದಿ ಜನಗಳ ಮೆಚ್ಚಿಸಿ ಪಾತಕವಾದರು ಲಾಭವಧಿಕ 1 ದೊಡ್ಡದಾಗಿ ಮನೆಕಟ್ಟಿದರೆ -ಸಾಲ ಹೆಡ್ಡಗಾದರು ಹುಟ್ಟುವುದು ದುಡ್ಡುದೇವರಿಗಿಂತ ದೊಡ್ಡದೇವರು ಯಾವುದು? ಬಡ್ಡಿ ಹಚ್ಚು ಬರುವನೆ ಮಹರಾಯನು2 ಹೊಟ್ಟೆಗೆ ತಿಂಬುವದ್ಯಾರು ಬಲ್ಲರು? ವುಟ್ಟ ಬಟ್ಟೆಯಲ್ಲರು ನೋಡುವರು ಸಿಟ್ಟು ಬಂದರೆ ಬೆಂಕಿಯಂತವ ನಾನು ಹೊಟ್ಟೆ ಚಿಕ್ಕದು ಕಣ್ಣು ದೊಡ್ಡದು 3 ಪರಲೋಕವು ಉಂಟೆಂದು ಪೇಳು ವರರಿಯದವರು ತಾವು ಮುಂದು ನರಕವುಸ್ವರ್ಗವು ಯಾರು ನೋಡಿರುವರು ಪುರಾಣ ಶಾಸ್ತ್ರಗಳು ಯಾತಕೆ ಬಿಡಿ4 ಅತಿಥಿಗಳಿಗೆ ನೀರುಮಜ್ಜಿಗೆ | ಮೊಸರು ಸತಿಸುತರಿಗೂ ಮತ್ತು ತನಗೆ ಯಿತರರಿಗೆಲ್ಲಾ ಎಣ್ಣೆಕರೆದ ಭಕ್ಷ್ಯ ಘೃತಭಕ್ಷ ತನಗೆ ಮಾತ್ರ 5 ಎಣ್ಣೆಯು ಬಲುರುಚಿ ನಮಗೆ | ತುಪ್ಪ ವಿನ್ನೇತಕೆ ಹೆಚ್ಚು ಬೆಲೆಗೆ ಕಣ್ಣಲಿ ಕಂಡದು ಮಾತ್ರ ಸತ್ಯ | ನಾ ವನ್ಯರ ನುಡಿ ನಂಬುವುದಿಲ್ಲವು 6 ವೊರಿಗೆಲ್ಲ ನಾ ಮೇಟಿ | ಯನ್ನ ನಾರು ಪೋಲುವರು ಸಾಟಿ ನೂರೆಲೆ ಬೀಳ್ವುದು ನಮ್ಮ ಮನೇಲೀ ಘೋರ ಕ್ಷಾಮದಲಿ ನಾನೆ ಪೊರೆವೆ 7 ಪರರಂತೆ ನಾನಿರಬೇಕು | ಶ್ರೀ ಹರಿ ಇಷ್ಟು ಕೊಟ್ಟರೆ ಸಾಕು ಗುರುಹಿರಿಯರು ನುಡಿಯೇತಕವರು ಮುದು- ಕರು ಏನು ಬಲ್ಲರು ಲೌಕೀಕವ 8 ಗುರುರಾಮವಿಠಲೆಲ್ಲಿ ಭ್ರಾಂತು -ಈ ಕರೆಕರೆ ನಮಗೇಕೆ ಬಂತು ಸೇರಿತು ಬಡವರಾವು 9
--------------
ಗುರುರಾಮವಿಠಲ
ಭಕುತರಿಗಾಗಿ ನೀ ಬಡುವ ಕಷ್ಟಗಳು ಅಕಟ ಪೇಳಲಳವೆ ( ನೋಡಲಳವೆ) ಲಕುಮಿ ಪತಿಯೆ ಯಾತಕೆ ವೃಥಾನಿಕರಕೆ ಸುಖವೀವೆಕಾವೆ ಪ ಮಂದಿಮನ ವಲಿಸಿ ಮದುವೆ ನೀನು ಮ ತ್ತೊಂದು ಮಾಡಿಕೊಳುತ್ಯಾ ಅಂದಣಾದಿ ಐಶ್ವರ್ಯವನ್ನು ಪರರಿಂದ ಕೇಳಿಕೊಳುತ್ಯಾ ನಿಂದೆ ಮಾಡುವರೆಂಬೊ ಭಯದಿ ಅವರ್ಹಿಂದೆ ಹಿಂದೆ ಇರುತ್ಯಾ ಅಂದವಾದ ಆಟಗಳೊಳಗೆ ಇದುವಂದು ಎನುತ್ಯಾದೇವ 1 ಸಡಗರದಲಿ ಕರಪಿಡಿದು ಕಾಯ್ದೆ ನೀ ಹುಡುಗರೀರ್ವರನ್ನು ಮಡುವಿನೊಳಗೆ ಆ ಮಕರಿಯಿಂದ ಕಾಲ್ಹಿಡಿಸಿಕೊಂಡವನ್ನ ಮಡದಿಗಂತು ಗಡಿತಡಿಯದೆ ನೀಡಿದಿ ಉಡುಗೆ ಅಗಣಿತವನ್ನು ಕಡಿಗೆ ನಿನ್ನ ಕರದೊಂದು ದಿನಾದರು ಬಡಿಶ್ಯಾರೆ ಸುಖವನ್ನು ಏನು 2 ಏನು ತಪ್ಪು ನಿನ್ನವರು ಮಾಡಿದರು ಕಾಣಬಾರವು ನಿನಗೆ ವೈರಿ ಪರಪ್ರಾಣಹಾರಿಗಳ ಪೊರೆದು ಕರುಣಿ ಸುರಧೇನು ಬಾರೊ ಬ್ಯಾಗ ಮಾನಸ ಮಂದಿರಕೆ ಈಗ 3
--------------
ಅಸ್ಕಿಹಾಳ ಗೋವಿಂದ
ಭಯ ಹಾರಿಣೇ ದಯಾ ಕರುಣೀ ಪ ಜಯಲಕ್ಷ್ಮಿ ನಿನ್ನ ಪದದಿ ಜಯವು ಕೋರಲು ನಿ ರ್ದಯವೇನೆ ಜನನಿ ಅ.ಪ ಏನು ನೀಡಿದಿ ತಾಯಿ ಧ್ಯಾನಿಸಿ ಬೇಡುವಗೆ ಹೀನ ಅಪಜಯವಿದೇನು ಕಾರಣವು 1 ಪರಮಪರತರ ಕಲ್ಪತರುವಿನೊಳ್ಸುಖ ಬಯಸೆ ಪರಮ ಪರಿತಾಪವು ಬರುವುದೇನಮ್ಮ 2 ಸಿರಿಯರಾಮನ ಪ್ರಿಯೆ ಪರಮಮಂಗಳೆ ನಿನ್ನ ಪರಿ ಭಂಗ ಕಳೆಯೆ 3
--------------
ರಾಮದಾಸರು
ಭಯಕೃದ್ಭಯನಾಶನ ಮಾಯಾರಮಣ ಭವಭಯಹರಣ ಪ ಜೀಯ ಕಾಯುವುದಯ್ಯ ಪರಿಹರಿಸಯ್ಯ ತಾಪ- ತ್ರಯ ದಯೆತೋರಯ್ಯ ಎನ್ನೊಡೆಯಾ ಅ.ಪ ನಾನರಿಯೆ ನಿನ್ನಯ ಗುಣಗಣಾದಿಗಳ ಅನುದಿನದಿನಾ ಅನುಭವಿಸಿ ಭವಚಕ್ರದಾಟಗಳ ಜನುಮ ಜನುಮಾಂತರದಿ ಬಂದ ವಾಸನಾದಿಗಳ ದೀನವತ್ಸಲ ದೂರ ನೋಡುವೆಯ ನೀನರಿಯ ಎನ್ನನು ಉಳುಹುವ ಪರಿಯ ಎನಗ್ಯಾರಿಹರೊ ನಿನ್ಹೊರತು ಪೂರೆವರಯ್ಯ ವನಜಸಂಭವನಯ್ಯ ಜೀಯ 1 ಕರಿ ಮಕರಿ ಪಿಡಿಯಲು ಬಂದ ಪರಿಯೇನು ನಿಖಿಳಖಳಕುಲವೈರಿ ಶ್ರೀಹರಿ ಸಿರಿಗೆ ಹೇಳದ್ದೇನು ಭಕುತನಾರ್ತಧ್ವನಿಯ ಕೇಳಿ ಬಂದೆಯಾ ಏನು ನಾನು ಆಸಾಧನವನರಿಯೇನು ಘನ್ನಮಹಿಮ ನಿನ್ನಯ ಕೀರ್ತಿಯನು ಕೇಳಿ ಬಂದೆನು ಇನ್ನೇನು ನಿನಗೆ ಏನು ತೋರಿದಂತೆ ಮಾಡಿನ್ನು ಎನ್ನೊಡೆಯ ನೀನೆಂದಡಿಗೆ ಬಿದ್ದಿಹೆನೊ ಇನ್ನು 2 ಈಸಲಾರೆನು ಸಾರಿ ಈ ಭವಸಾಗರದೊಳಗೆ ಶ್ರೀಶ ನಿನಗತಿಶಯವೆ ಕರುಣವಿಲಾಸ ತೋರೆನಗೆ ದಾಸದಾಸದಾಸರದಾಸ್ಯ ಕೊಡಿಸೆನಗೆ ಶ್ರೀಶ ಎನ್ನಯ ಮನದ ಕ್ಲೇಶವನೂ ನಾಶವಗೈಸು-ನಿರಾಶ್ರಯನಾಗಿಹೆನು ಏಸುಬಲ್ಲೆನು ಕಾಸಿನವನು ಬೇಸರಿಸದಿರು ಇನ್ನೂ-ಮುನ್ನೂ 3 ತಾಪತ್ರಯಗಳಿಂದನುದಿನದಿ ನಾ ನೊಂದೆ ಶ್ರೀಪತಿಯೆ ಹೃತ್ತಾಪಕಳೆದು ಪೊರೆಯಬೇಕೆಂದೆ ಗೋಪನಿನ್ನಯ ಶ್ರೀಪಾದದೊಳು ಮನವ ನೀಡೆಂದೆ ಕುಪಿತವೇ ನಿನ್ನವನು ನಾನೆಂದೆ ಭೂಪ ಆಪತ್ತೋದ್ಧಾರಕನೆಂದೆ ಪಾಪಿಮಾನವಜನುಮದಲಿ ಬಂದೆ ಕಾಪಾಡುವುದು ಎಂದೇ-ತಂದೇ 4 ಭೂಸ್ಥಳದಿ ನಿಂತ ಶ್ರೀ ವೇಂಕಟೇಶ ಹರೇ ತ್ರಿಸ್ಥಳದೊಳು ಈ ಸ್ಥಳವೆ ವೈಕುಂಠ ದೊರೆಯೆ ವಿಸ್ತರದಿ ಮಹಿಮೆಯ ಪಾಡಿ ಪೊಗಳಲು ನಾವು ಶಕ್ತರೆ ಸ್ವಸ್ಥಚಿತ್ತವಿಲ್ಲ ಶ್ರೀಹರೇ ಈ ಸ್ಥಿತಿಯಲ್ಲಿ ಎನ್ನ ನೋಡುವರೆ ದುಸ್ಥಿತಿಯಬಡವನಕೈಯ ಬಿಡುವರೆ-ಶೌರೆ5
--------------
ಉರಗಾದ್ರಿವಾಸವಿಠಲದಾಸರು