ಒಟ್ಟು 454 ಕಡೆಗಳಲ್ಲಿ , 77 ದಾಸರು , 415 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರಾಮ ಶ್ರೀ ರಘುನಂದನ ಶರಣು ಸಾರ್ವ- ಭೌಮ ಭೂಸುರವಂದ್ಯ ಸೋಮಶೇಖರಮಿತ್ರ ಕಾಮಿತ ಫಲದಾತ್ರ ಸನ್ನುತ ಸೀತಾ ಪ. ಕ್ರೂರ ದಾನವ ಸಂಹಾರ ಕೌಸಲ್ಯಾಕುಮಾರ ಭೂ- ಭಾರಹರ ಭಜಕÀಜನೋದ್ಧಾರ ವೇದಾಂತಸಾರ ಚಾರುವದನ ಮಣಿಹಾರ ಕುಂಡಲಧರ ವೀರರಾಘವ ವಿಶ್ವಾಧಾರ ಕರುಣಿಸು ಸೀತಾ 1 ಪಾಪರಹಿತ ಪಾವನ ಚರಿತ ಅಹಲ್ಯಾ ಹರಣ ದಿವ್ಯರೂಪ ರಮಾರಮಣ ತಾಪ ವಿಚ್ಛೇದನ ತಾಮಸ ಗುಣಹರಣ ದ- ಯಾಪರ ಬ್ರಹ್ಮಸ್ವರೂಪ ಮೂರುತಿ ಸೀತಾ 2 ಮಾಧವ ಪುಣ್ಯಚರಿತ ಕರುಣಾಪಾಂಗ ಹೆಳವನಕಟ್ಟೆ ರಂಗಯ್ಯ ಸದಾನಂದ ಸುಮತೀಂದ್ರ ಹೃದಯ ಪಂಕಜಭೃಂಗ ಕದನ ವಿಕ್ರಮ ಬಾಹು ಕೋದಂಡಧೃತ ಸೀತಾ 3
--------------
ಹೆಳವನಕಟ್ಟೆ ಗಿರಿಯಮ್ಮ
ರಾಮದೂತ ನËಮಿಭಕುತ ಕಾಮಿತದಾತ ಸುರಶೇವಿತ ಪ ಈ ಮಹಿಯೊಳೂ ಗ್ರಾಮಕೂಡ್ಲಿಗಿ ಧಾಮಮಾರುತ ಪಾಹಿಸತತಅ.ಪ ಭೂಮಿಸುತೆಯ ಕ್ಷೇಮವಾರ್ತೆಯ ರಾಮಗರುಹಿದ ಪದಕೆರಗಿದ ಹೇ ಮಹಾತ್ಮನೆ ಪ್ರೇಮದಿ ರಘು ರಾಮ ನೀಡಿದ ಬ್ರಹ್ಮನ ಪದ 1 ಇಂದು ಕುಲದಿ ಬಂದು ಕೌರವ ವೃಂದ ಮಥಿಸಿದೆಯಾ ಪಾಂಡು ತನಯ ಪೊಂದಿದಿಯಾ ನಂದಗೋಪನ ಕಂದನ ಕೃಪೆಯಾ ಪಾಲಿಸಯ್ಯಾ 2 ವ್ಯಾಸಶಿಷ್ಯ ಯತೀಶ್ವರ ತವ ಶಾಸ್ತ್ರದಿ ಮತಿಯಾ ಕರುಣಿಸಯ್ಯಾ ಶ್ರೀಶಕಾರ್ಪರ ವಾಸ ಶ್ರೀನರ ಕೇಸರಿಗೆ ಪ್ರೀಯ ಮಧ್ವರಾಯಾ 3
--------------
ಕಾರ್ಪರ ನರಹರಿದಾಸರು
ರಾಮಾ ರಕ್ಷಿಸೋ ಎನ್ನ ಪ್ರೇಮಾ ಸಂಪೂರ್ಣಕಾಮಾ ಪ ಸ್ವಾಮಿ ಜಗನ್ನಾಥ ಸರ್ವಾಂತರ್ಯಾಮಿ ರಾಮಿಯ ರಮಣ ಶ್ರೀ ರಘುಕುಲಭೂಷಣ ಅ.ಪ ಅಂಗಜ ಜನಕಯ್ಯ ಮೋಹನಾಂಗ ಜಗದಂತರಂಗ ಶೃಂಗಾರ ಪರಿಮಳ ಭೂಷಿತಾಂಗಾ ಒಪ್ಪಿರುವೊ ರಂಗಾ ಗಂಗೆಯ ಜನಕ ತುರಂಗನೇರಿದಾ ಮಂಗಳ ಮಹಿಮ ಕುರಂಗಲೋಚನಾ ಅಂಗನೆಯರೆಡಬಲ ಸಂಗಡದಲಿ ಮೋಹಂಗಳ ಮಾಡುತ ಶೃಂಗಾರದಲಿ ರಂಗ ಮಂಟಪ ಮಧ್ಯರಂಗಲಿರುವ ರಾಮಂಗಾರ --- ಹೆನ್ನರಂಗನಾಯಕ 1 ಚಂದದಿಂದಾದಿ ವೇಣು -----ನಂದದಿ ಮೋದ ಮಂದಾರಧರ ಮಾಧವನಾದ ಗೋವಿಂದ ನಿ ನೋಡಾ ಸಿಂಧು ಶಯನ ಮುನಿ ವಂದಿತ ಚರಣಾರವಿಂದ ಭಜಿಸುವ ಕಂದನ ತೋರದಯ ದಿಂದ ಪಾಲಿಸುವ ತಂದೆಯು ನೀನೆ ಎಂದು ತಿಳಿದು ಈ ಪಾದ ಹೊಂದಿ ಭಜಿಸುವೆನು 2 ಚಂಡಶಾಸನ ಬಿರುದಿನಾ ದೇವಾದಿದೇವ ಮಂಡಲಾಧಿಪ ಮಹಾನುಭಾವ ಭಕ್ತರ ಕಾಯುವ ಪುಂಡರೀಕ ವರದಂಡ-----ಕುಂಡಲಿಶಯನ ಕೋ ದಂಡಧರ ಬಲೋದ್ದಂಡ ವಾನರದಂಡನೆ ಕೂಡಿಸಿ ಪುಂಡ ರಕ್ಕಸರ ಹಿಂಡನೆ ಹಿಡಿದು ಮಂಡಿಗಳನು ಬಿಡದೆ ಚಂಡಿಸಿದಂಥಾ ಗಂಡರಗಂಡ `ಶ್ರೀ ಹೆನ್ನೆವಿಠ್ಠಲಾ ' 3
--------------
ಹೆನ್ನೆರಂಗದಾಸರು
ರಾಯರ ನೋಡಿರೈ ಮ'ಪತಿರಾಯರ ಪಾಡಿರೈ ಪರಾಯರ ನೋಡುತ ಪಾಡುತ ಭಕುತಿಯಮಾಡಲು ಬೇಡಿದ ವರಗಳ ಕೊಡುವಾ 1ತಂದೆಯ ನೋಡಿರೈ ಮ'ಪತಿಕಂದನ ಪಾಡಿರೈಕುಂದಗಳೆಣಿಸದೆ ಬಂದು ಭಕುತಜನ ವೃಂದವ ಪೊರೆಯುವ ತಂದೆ ಮ'ಪತಿ 2ಭೋಗಿಯ ನೋಡಿರೈ ತಾಪಸಯೋಗಿಯ ಪಾಡಿರೈತ್ಯಾಗರಾಜ ಭೂಪತಿ'ಠ್ಠಲಪ್ರಿಯ ಭೋಗಿಭೂಷಣಾಂಕ ವೈಷ್ಣವಾಗ್ರಣಿ 3
--------------
ಭೂಪತಿ ವಿಠಲರು
ರುದ್ರದೇವರ ಸ್ತೋತ್ರ ಇಂದುಧರನೆ ಬಾರೊ | ಸುರ | ವೃಂದವಂದ್ಯನೆ ಬಾರೊಕುಂದಾದೆನ್ನ ಮನಸಿಗೇ ಮುಕುಂದ ಪ್ರಿಯನೆ ಬಾರೋ ಪ ರಜತಾದ್ರಿ ನಿವಾಸನೆ ಬಾರೋಗಜದೈತ್ಯ ವಿನಾಶನೆ ಬಾರೋ ||ಅಜಸುತನಧ್ವರ ಭಜನೆಯ-ಗೆಡೆಸಿದ ಗಜಮುಖನಯ್ಯನೆ ಬಾರೋ 1 ಅಗಣಿತ ಶೌರ್ಯನೆ ಬಾರೋಸರ್ಪ ಭೂಷಣನೆ ಬಾರೋ 2 ಕಂದನ ತಲೆ ಕೆಡಹಿದವನೆ ಬಾರೋಇಂದ್ರ ಅಜಗೊರಳಗೊಲಿದನೆ ಬಾರೋ ||ಅಂಧಕಾಂತಕ ಇಂದ್ರವಂದಿತನಂದಿವಾಹನನೆ ಬಾರೋ 3 ಅಂಬರ ಪುರಹರನೆ ಬಾರೋ ತ್ರಿ-ಯಂಬಕ ಮಹದೇವನೆ ಬಾರೋ ||ಅಂಬಿಕೆ ವಲ್ಲಭ ಸಿಂಧೂರ ಮುಖ ಪಿತಶಂಭು ಮೂರುತಿಯೆ ಬಾರೋ 4 ಸುರ ನದಿಯ ಪೊತ್ತವನೆ ಬಾರೋವರ ಪಂಪಾಪುರ ನಿಲಯನೆ ಬಾರೋ ||ಶಿರಿ ಮೋಹನ್ನ ವಿಠಲನ್ನಪರಮ ದಾಸನೆ ಬಾರೋ 5
--------------
ಮೋಹನದಾಸರು
ಲಕ್ಷ್ಮೀರಮಣ ಮರೆಯ ಹೊಕ್ಕೆ ರಕ್ಷಿಸೈ ಪಾಂಡುಪಕ್ಷನೆ ಪ ಪಕ್ಷಿವಾಹನ ದುಷ್ಟಶಿಕ್ಷ ಮೋಕ್ಷದಾಯಕ ಶಿಷ್ಟರಕ್ಷ ಅ.ಪ ತರಳ ಧ್ರುವನ ಪೊರೆದೆಯೆಲೊ ಕರಿಮೊರೆಯ ಕಾಯ್ದಯ್ಯ ಕರುಣದಿ ಕುರುಪ ಸಭೆಯಲಿ ದ್ರೌಪದಿ ಮೊರೆಯನಿಡಲಾಕೆಮಾನವ ಕಾಯ್ದಿ 1 ನರಗೆ ಸಹಯನಾಗಿ ಸಾರ ಧರೆಯ ಗೆಲಿಸಿದಿ ನಿರುತದಿ ಕರವ ಪಿಡಿದಿ ಪರಮ ಪ್ರೇಮದಿ ಒರೆದೆಲೊ 2 ಇಂದು ಎನಗೆ ಸಂಧಿಸಿದ ಮಹ ಬಂಧನವ ನಿವಾರಿಸೈ ಪಾದ ನಂಬಿದೆ ಕಂದನನು ಪೊರೆ ಶ್ರೀರಾಮ3
--------------
ರಾಮದಾಸರು
ಲಂಬೋದರನ ಸಹೋದರನೆ ಪ ಶಂಭುಜಕರುಣಾಸಾಗರನೆ ಅ.ಪ ಶೂರಪದ್ಮನ ಎದೆ ಸೀಳಿದನೆ ಮಾರನ ಪೋಲುವ ಸುಂದರನೆ ಧೀರ ಹಿರಣ್ಯಕನಾರಾಧನೆಗೆ ಮೆಚ್ಚಿ ಸೂರೆಯ ಮುಕ್ತಿಯನಿತ್ತವನೆ 1 ವರವಜ್ರ ಶಕ್ತ್ಯಾಯುಧ ಧರನೆ ಸುರಮುನಿ ನಮಿತ ಸರ್ವೇಶ್ವರನೆ ಸುರುಚಿರ ರತ್ನಾಭರಣ ವಿಭೂಷಣನೆ ಶರಣ ರಕ್ಷ ಕುಮಾರಕನೆ2 ದಾಸ ಜನರ ಮನತೋಷಕನೆ ವಾಸುದೇವನ ಸಖ ಷಟ್ಶಿರನೆ ದೋಷವಿನಾಶನೆ ನಾಶರಹಿತ ಪಾವಂಜೇಶನೆ ಕಾರ್ತಿಕೇಯನೆ ಸ್ಕಂದನೆ 3
--------------
ಬೆಳ್ಳೆ ದಾಸಪ್ಪಯ್ಯ
ಲಾಲಿ ಪಾಡಿರೆ ಮುದ್ದು ಬಾಲಕಂದನಿಗೆ ಬಾಲಬ್ರಹ್ಮಚಾರಿಯಾದ ಕಪಿವರಗೆ ಪ. ಅಂಜನೆಯ ಸುತನಾಗಿ ಅಂಬರಕೆ ಹಾರಿ ಕಂಜಸಖನಿಗೆ ತುಡುಕಿ ವಜ್ರತನುವಾಗಿ ಸಂಜೀವ ತಂದು ಕಪಿಪುಂಜಗಳ ಸಲಹಿ ಮಂಜುಭಾಷಣ ರಾಮಪಾದ ದಾಸನಿಗೆ 1 ಪುಟ್ಟಿ ಕುಂತಿಯ ಉದರದಲಿ ಗಿರಿ ಒಡೆದು ದುಷ್ಟ ಕೀಚಕ ಬಕಾದಿಗಳ ಸಂಹರಿಸಿ ಕುಟ್ಟಿ ಕೌರವರ ಕುಲ ದ್ರೌಪದಿಯ ಕೂಡಿ ಪಟ್ಟವಾಳಿದ ಕೃಷ್ಣ ಪಾದಸೇವಕಗೆ 2 ಶ್ರೀಪತಿಯ ಆಜ್ಞೆಯಲಿ ವಿಪ್ರಸುತನಾಗಿ ಪಾಪಿ ದುರ್ಮತಗಳನು ತರಿದು ಮುರಿದೊಟ್ಟಿ ಸ್ಥಾಪಿಸುತ ಸಚ್ಛಾಸ್ತ್ರ ಯತಿಯಾಗಿ ಚರಿಸಿ ಗೋಪಾಲಕೃಷ್ಣವಿಠ್ಠಲನ ಮೆರೆಸಿದಗೆ 3
--------------
ಅಂಬಾಬಾಯಿ
ಲಾಲಿ ಲಾಲಿ ನಮ್ಮ ಹರಿಯೆ ಲಾಲಿ ಪ ಶ್ರೀಲತಾಂಗಿಯೊಡನೆ ಮೆರೆವದೊರೆಯೆ ಲಾಲಿ ಅ.ಪ ನಂದಲಾಲಿ ಗೋವಿಂದ ಲಾಲಿ ಕಂದನಾಗಿ ಲೋಕ ತಂದೆ ಲಾಲಿ 1 ಬಾಲಲಾಲಿ ತುಲಸಿಮಾಲ ಲಾಲಿ ಕಾಲಕಾಲವಂದ್ಯ ಗೋಪೀಲೀಲ ಲಾಲಿ 2 ವಾಸುದೇವ ಲಾಲಿ ದೇವಕೀತನಯ ಸದ್ಭಾವಲಾಲಿ 3 ರಂಗಲಾಲಿ ಮಂಗಳಾಂಗಲಾಲಿ ಗಂಗಾತಾತ ಲೋಕೋತ್ತುಂಗ ಲಾಲಿ4 ರಾಮಲಾಲೀ ಭಕ್ತಪ್ರೇಮ ಲಾಲಿ ಶ್ಯಾಮಸುಂದರಾಂಗ ನಮ್ಮ ಸ್ವಾಮಿ ಲಾಲಿ 5 ಸತ್ಯ ಲಾಲಿ ಮೌನಿಸ್ತುತ್ಯ ಲಾಲಿ ನಿತ್ಯ ನಿಗಮವೇದ್ಯ ಅನ್ಯುಕ್ತಲಾಲಿ6 ರಾಜಲಾಲಿ ರತ್ನತೇಜ ಲಾಲಿ ರಾಜರಾಜಪೂಜ್ಯ ಜಾಜಿಶ್ರೀಶ ಲಾಲಿ 7
--------------
ಶಾಮಶರ್ಮರು
ಲೀಲೆಯೊಳಾಡಿಸೊ ಹರಿ ನಿನ್ನ ಲೀಲೆಯೊಳಾಡಿಸೊ ಪ ಲೀಲೆಯೊಳಾಡಿಸೊ ಕಾಲಕಾಲದಿ ನಿನ್ನ ಶೀಲನಾಮವೆನ್ನ ನಾಲಗ್ಗೆ ಕರುಣಿಸು ಅ.ಪ ಮಂದಮತಿಯ ಹರಿಸೋ ಮನ ಗೋ ವಿಂದನೊಳೊಡಗೊಡಿಸೊ ಎಂದೆಂದಿಗು ಆ ನಂದನ ಕಂದನ ಪಾದ ಮನಮಂದಿರದಿರಿಸೊ 1 ಶೀಲಗುಣವ ಕಲಿಸೊ ಭವಗುಣ ಜಾಲವ ಪರಹರಿಸೊ ಪಾಲಿಸಿ ನಿಮ್ಮ ಧ್ಯಾನಲೋಲನೆನಿಸಿ ಯಮ ದಾಳಿ ನೀಗಿಸಿ ಭವಮಾಲೆಯ ಗೆಲಿಸೊ 2 ಮೋಸ ಮಾಯ ಹರಿಸೊ ವಿಷಯ ದಾಸೆಯ ಪರಿಹರಿಸೊ ಭಾಸುರಕೋಟಿಪ್ರಭೆ ಸಾಸಿರನಾಮದ ಶ್ರೀಶ ಶ್ರೀರಾಮ ನಿಮ್ಮದಾಸೆನಿಸೊ 3
--------------
ರಾಮದಾಸರು
ಲೋಕದೊಳಿವನಂಥ ಪುಂಡು ಮಕ್ಕಳಿಲ್ಲವೆಂದು ಪ. ಒಂದು ಹೆಜ್ಜೆಯನಿಡವಲ್ಲಿ ಬೀಳುತಲಿಹನೆ ನಿಂದಿಹವದನ್ನು ನಾ ಕಾಣೆ ಅ.ಪ. ಇಂದು ನಮ್ಮಯ ಮನೆವೊಕ್ಕು ಬೆಣ್ಣೆಯ ಸವಿದನೆಂಬುದು ಗೋಪಿ ನಿನ್ನ ಕಂದನ ಸರಿಯಲ್ಲವೆ 1 ಅನ್ನವನುಣ್ಣಲರಿಯ ಅಮ್ಮಿಬೇಡುತಲಿಹನೆ ಸೊಲ್ಲು ಗೋಪಿ 2 ಬಲುಹಿಂದ ಹಾಲನೆರೆಯೆ ಬಾಯತೆಗಿಯಲೊಲ್ಲ ಒಲೆಯ ಮೇಲಿನಹಾಲ ಒಬ್ಬನೆ ಕುಡಿದಾನೆಂದು ಹೆಳವನಕಟ್ಟೆ ರಂಗನಾ ದೂರುವುದೊಳಿತೆ 3
--------------
ಹೆಳವನಕಟ್ಟೆ ಗಿರಿಯಮ್ಮ
ವತ್ಸರ ಸಾರ್ಥಕವಾಗಲಿಪಾರ್ಥ ಸಖನ ಗುಣ ಕೀರ್ತಿಸುತಾ ಪ ಅರ್ಥಿಯಿಂದ ಹರಿಕೀರ್ತನೆ ಮಾಡಲುಆರ್ತೇಷ್ಟದ ಸಕಲಾರ್ಥವ ಕೊಡುವ ಅ.ಪ. ವತ್ಸರ ಸಾರಿತು ಹಿಂದೆಸಾರಿತು ನಮ್ಮಾಯುವು ಮುಂದೇ |ವಾರಿಜಾನಾಭನ ಸೇರಿ ಭಜಿಸಲುಸೇರಲಿಲ್ಲ ನಾವ್ ದಿನ ಒಂದೇ1 ತಂದೆ ವೆಂಕಟನ ಪ್ರೇಮದ ದಾಸರುಸಂದೇಶವನೆ ಕಳುಹಿಸದರೂಇಂದಿರೆಯರಸನ ಭಕ್ತ ವೃಂದದಿಛಂzಸÀದಿ ಭಜಿಸೆಂದರುಹಿದರೂ 2 ಇಂದಿನಿಂದಾದರು ಒಂದು ಗೂಡುತ ನಂದಕಂದನನು ಭಜಿಸುವ ಬನ್ನಿಸುಂದರ ಗುರು ಗೋವಿಂದ ವಿಠಲನದ್ವಂದ್ವ ಚರಣವನು ವಂದಿಸೆ ಬನ್ನಿ 3
--------------
ಗುರುಗೋವಿಂದವಿಠಲರು
ವಂದನೆಯ ಮಾಡುವೆ ಶ್ರೀಗುರುವಿಗೆ- ವಂದನೆಯ ಮಾಡುವೆÀ ಪ ವಂದನೆ ಮಾಡುವೆನಿಂದು ಯದುಶೈಲದೋಳ್ ಚಂದದೊಳಿರುತಿಹ ತಂದೆ ನಾರಾಯಣಗೆ ಅ.ಪ ಹರುಷದಿಂದಲಿ ಇನ್ನು ಹರಸಿ ಸಜ್ಜನರಿಗೆ ವರಗಳ ಕೊಡುತಿಹ ವರಲಕ್ಷ್ಮಿ ತಾಯಿಗೆ 1 ಹಿರಿದಾದ ದೈತ್ಯನ ಸೀಳಿ ಸಂತೋಷದಿ ಮೊರೆಹೊಕ್ಕ ಕಂದನ ಪೊರೆದ ನರಸಿಂಹಗೆ 2 ಪಾವನತರಮಾದ ದೇವಸಮೂಹವ ಕಾವ ಕೃಪಾನಿಧಿ ಕಲ್ಯಾಣಮ್ಮಗೆ 3 ವಿಸ್ಫುರಿತದಲ್ಲಿರ್ಪ ವೈರ್ಮುಡಿ ತಿರುಮಣ್ಣು ಸರ್ಪಶಯನಗರ್ಪಿಸಿದಂತ ಗರುಡಗೆ 4 ಶ್ರೀಲೋಲನಡಿಗಳ ಲೀಲಾಮೃತಗಳ ಶೀಲರಾಗಿ ಕುಡಿದ ಶ್ರೇಷ್ಠ ಆಳ್ವಾರ್ರಿಗೆ 5 ವರದವಿಠಲನ ಒಲಿದು ತಾ ಬಂದಿನ್ನು ಗಿರಿಯೊಳು ನೆಲೆಸಿದ ವರ ಗುರುಪೀಠಕೆ 6 ಪಂಕಜಾಕ್ಷನಪಾದಪಂಕಜ ನಂಬಿಹ ವೆಂಕಟಪುರದೊಳಗಿರುವ ವೈಷ್ಣವರಿಗೆ 7 ವಿಷ್ಣುವಿನಂಶದಿ ಪುಟ್ಟಿ ಸಂತೋಷದಿ ಸೃಷ್ಟಿಯನಾಳ್ವ ಶ್ರೀ ಕೃಷ್ಣಭೂಪಾಲಗೆ8 ಮರೆಯದೆ ಭಕ್ತರ ಕರುಣದಿಂದಲಿ ಕಾಯ್ವ ವರಮಹದೇವನ ಪುರದಶ್ರೀರಂಗಗೆ 9
--------------
ರಂಗದಾಸರು
ವಂದಿಪೆ ಯತಿವರೇಂದ್ರ ತವ ಪಾದದ್ವಂದ್ವಕ್ಕಾನಂದಾ ದಿನಾ ಬಂದ ಕಂದನಾ ಪಾಲಿಸೆಂದೆ ಪ ಸಿಲ್ಕಿರುವೆನಾ ಶರಣು ಬಂದೆನಾ 1 ಮೂಢ ಸೇವಕನಾ ಬಿಡಿಸೊ ವ್ಯಸನಾ 2 ಶ್ರೀಶನಾದ ಹನುಮೇಶವಿಠಲನ್ನಾ ದಾಸ ಉದಾಸೀನದಲ್ಲೆ ಎನ್ನಾ ಪೋಷಿಸೊ ನೀ ಮನದಾಸೆ ಪೂರೈಸಿನ್ನು ಕರುಣಾಜ್ಞಾನಪೂರ್ಣ 3
--------------
ಹನುಮೇಶವಿಠಲ