ಒಟ್ಟು 903 ಕಡೆಗಳಲ್ಲಿ , 100 ದಾಸರು , 815 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುರ್ಗೇ ಪಾಲಿಸೆ ಹೇ ದುರ್ಗೇ ಪಾಲಿಸೆ ಪ ಭಾರ್ಗವಿ ಭಜಕರ ವರ್ಗವ ಕರುಣದಿ ಅ.ಪ ಸರ್ಗಸ್ಥಿತಿ ಲಯಕಾರಣೆ ಜಗಕೆ ಸು ಮಾರ್ಗದಿ ನಡೆಯಲನುಗ್ರಹ ಮಾಡೆ 1 ವಂದಿಸುವೆನು ಭವಬಂಧವ ಬಿಡಿಸ್ಯಾ ನಂದವ ಕರುಣಿಸು ನಂದಾತ್ಮಜಳೆ 2 ಕಡಲತನುಜೆ ತವಕಡು ಕರುಣದಲಿ ಬಡಜಭವ ಮುಖರು ಪಡೆದರು ಪದವನು 3 ನಭ ಸಂಚಾರಿಣೆ ಆಯುಧ ಭವ ಭಯಹಾರಿಣಿ ನಮೊನಮೋ4 ಇಂದಿರೆ ಪದುಮ ಸುಮಂದಿರೆ ತವಪದ ದ್ವಂದ್ವದಿ ಭಕುತಿಯ ಪೊಂದಿ ಸುಖಿಸುವಂತೆ 5 ವೀರರೂಪಿ ಅಸÀುರಾರಿಯೆ ತವಪರಿ ವಾರದ ಭಯವನು ತಾರದಿರೆಂದಿಗೂ 6 ಮಂಗಳಕೃಷ್ಣ ತರಂಗಿಣೆ ಕಾರ್ಪರ ತುಂಗಮಹಿಮೆ ನರಸಿಂಗನ ರಾಣಿ7
--------------
ಕಾರ್ಪರ ನರಹರಿದಾಸರು
ದೇವ ದೇವ ದೇವ ದೇವ ದೇವಾದಿದೇವ| ಶ್ರೀ ದೇವನೇ ದೇವಾ|ಸಲಹೆನ್ನ ಸದಾ ಪ ವಸುಧಿಯ ತನುಭವ ತನುಗಿರಿ ಕುಲಿ|ಶಾ| ಮರರಿಗಡಿಗಡಿಗೆ ನೀ ಸಲಹುವೆ ಕರುಣದಿ| ಬಿಸರುಹ ಲೋಚನ ದೇವ ದೇವಾ| ಸುರತರು ದೇವದೇವ1 ನಗವರಧರ ಮೃಗಕುಲದಧಿಪತಿ| ವೈರಿಯ ಕುಲವರ ವರದನೇ ಕೇಶವಾ| ಉಡಗಣ ಪತಿಯನ ಪಡೆದನ ತನುಜೆಯ| ರಮಣನೆ ಮಹಿಪತಿ ನಂದನ ಜೀವನಾ| ಪೊಡವಿ ಮನೋಹರ ದೇವ ದೇವಾ 2
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೇವತಾವೃಂದ ಶ್ರೀಗಣಪತಿ 1 ಆರಂಭದಲಿ ನಮಿಪೆ ಬಾಗಿ ಶಿರವಹೇರಂಬ ನೀನೊಲಿದು ನೀಡೆನಗೆ - ವರವ ಪ ದ್ವಿರದ ವದನನೆ ನಿರುತ | ದ್ವಿರದ ವರದನ ಮಹಿಮೆಹರುಷದಲಿ ಕರಜಿಹ್ವೆ ಎರಡರಿಂದಬರೆದು ಪಾಡುವದಕ್ಕೆ | ಬರುವ ವಿಷ್ನುನವ ತರಿದಕರುಣದಿಂದಲಿ ಎನ್ನ ಕರಪಿಡಿದು ಸಲಹೆಂದು 1 ಪತಿ ಜಂಭಾರಿ ಧರ್ಮಜರು |ಂಬರಾಧಿಪ ರಕುತಾಂಬರನೆ ನಿನ್ನ ||ಸಂಭ್ರಮದಿ ಪೂಜಿಸಿದರೆಂಬವಾರುತಿ ಕೇಳಿÀಂಬಲವ ಸಲಿಸೆಂದು | ನಂಬಿ ನಿನ್ನಡಿಗಳಿಗೆ2 ಸೋಮಶಾಪದ ವಿಜಿತ | ಕಾಮ ಕಾಮಿತ ದಾತವಾಮ ದೇವನ ತನಯ ನೇಮದಿಂದಶ್ರೀಮನೋಹರನಾಥ ಶಾಮಸುಂದರ ಸ್ವಾಮಿನಾಮನೆನೆಯುವ ಭಾಗ್ಯ ಪ್ರೇಮದಲಿ ಕೊಡು ಎಂದು 3
--------------
ಶಾಮಸುಂದರ ವಿಠಲ
ದೇವದೇವತಾಸ್ತುತಿ ಅಜಸುರಸನ್ನುತ ಸುಜನವಂದಿತ ಹರೇ ಭುಜಗ ಭೂಷಣ ಪ್ರಿಯ ಪ ಅತಿಶಯ ಕಾಮದಿ ಸತಿಯನಪಹರಿಸಿದ ಪತಿತ ರಾವಣನನು ಖತಿಯಲಿ ಕೊಂದೆ ನೀಂ 1 ಪರಿ ಪರಿಸಲು ವಾಲಿಯ ತರಿದೆಯೊ ಶರದಿಂದ 2 ದಶರಥನುದರದಿ ದಶರಥನಾಗಿಯು ಪಶುಪತಿ ಮಿತ್ರನೆ ಜನಿಸಿದೆ ಕರುಣದಿ 3 ಮಾನವ ಜಿತಾಸುರ ಮಾನವ ರೂಪನೆ ಪೊರೆ 4 ಧೇನುನಗರಪತಿ ದಾನವಖಂಡನ ಧ್ಯಾನ ಸ್ವರೂಪನೆ ಜ್ಞಾನವ ಪಾಲಿಸು 5
--------------
ಬೇಟೆರಾಯ ದೀಕ್ಷಿತರು
ದೇವದೇವತೆಗಳ ಸ್ತುತಿ ವೀರನ ನೋಡಿರೈ ನರಮೃಗಾಕಾರನ ಪಾಡಿರೈ ಪ ಕಾರ್ಪರ ಋಷಿ ತಪಕೊಲಿದು ಅಶ್ವತ್ಥದಿ ಮೆರೆವಾ ಭಕುತರ ಪೊರೆವಾ ಅ.ಪ ದುರಿತ ತಿಮಿರಕೆ ಸವಿತ ವ್ರಾತ ಸೇವಿತ ತ್ವರಿತ ಮಧ್ಬಂಧು ಪೊರೆಯೊನೀನೆಂದು ಪ್ರಾರ್ಥಿಸುವರಿಗಭೀಷ್ಟಿಯಗರಿಯಲು ದೇವ ತರುಸ್ವಭಾವ 1 ಉಗ್ರನಾದರು ಭಕುತಾಗ್ರಣಿಗಳಿಗೆ ಅನುಗ್ರ ಒಲಿವನು ಶೀಘ್ರ ವಾಗ್ಧೇವಿಯರ ಸನಾಜ್ಞದಿ ನಮಿಸಿ ಪ್ರಹ್ಲಾದ ಸ್ತುತಿಸಲು ಒಲಿದ ಉಗ್ರವದನ ಶಾಲಿಗ್ರಾಮಗಳ ರೂಪದಲಿ ವೃ- ಭಾರ್ಗವಿ ಪ್ರಕಟನಾಗಿಹನ 2 ತೋರಿಸುವದಕೆ ಅಸುರನ ಮಥಿಸಿ ನೆಲಸಿಕರುಣದಿ ದಿವಿಜರೊಡೆಯನ3 ಪೋಪುದು ವೃಜಿನ ತಿಳಿವದು ಮುನ್ನ ಭಾನು ಕರ್ಕಾಟಸ್ಥಾನದಿ ಬರುವ ಕಾಲದಲಿ ತೀರ್ಥಗಳಲ್ಲಿ ಹೃದಯದಿ ಪೊಳಿವ 4 ತರುವರ ಸಂಸ್ಥಾ ಚರಿತ ತ್ರಿಗುಣಾತೀತ ಪದಯುಗಲ ಬಿಡದನುಗಾಲ ಸಾರಿ ಭಜಿಪರಿಗಪಾರ ಸೌಖ್ಯಗಳ ಗರಿವ ವಿಘ್ನವ ತರಿವ5
--------------
ಕಾರ್ಪರ ನರಹರಿದಾಸರು
ದೇವಾ ನಿನ್ನ ಚರಣವನ್ನು ಮರೆಯಲಾರೆನು ಮರೆಯದಂತೆ ಕರುಣದಿ ಎನ್ನಾ ಸ್ಮರಣೆಯೊಳಿಡು ನೀನು ಪ ಪಂಕಜಾಂಬಕಿ ಲಕ್ಞ್ಮೀರಮಣಾ ರಂಗರಕ್ಷಕಾ ಶಂಕಾನಾಶ ಸರ್ವಾಧಾರ ಶಂಕರಸಖಾ ಶಂಖ ಚಕ್ರಗಳ ಕರದೊಳ್ ಪಿಡಿದ ಪಂಕಜನೇತ್ರನೇ 1 ತನ್ನವರಿಂತೆಂದೆನಿಸಿ ಕೊಂಡು ಅನ್ಯರ ಭಜಿಪುದು ಬನ್ನ ಬಡುವುದು ಮುನ್ನ ಎನ್ನನು ಪೊರೆವರ್ಯಾರೊ ಪನ್ನಗಶಯನನೇ 2 ಅಂತು ಇಂತೆನಲೊಲ್ಲೆ ದೇವಾ ಅನಂತ ಮಹಿಮೆಯಾ ಸಂತಸಾಧು ಸಾಧ್ಯನಾಗಿಹ ಅಂತರಾತ್ಮನಾ ಚಿಂತೆ ಭ್ರಾಂತಿಗಳ ತೊರೆದು ಗುರುವರ ಶಾಂತಿ ಪಾಲಿಪನೇ 3
--------------
ಶಾಂತಿಬಾಯಿ
ದೇವಾದಿ ದೇವ ನೀನವಧರಿಸು ಭಿನ್ನಪವ ಪ ಈ ವಿವಿಧ ಸುರರೊಳಗೆ ಸರಿಯಲ್ಲ ನಿನಗೆ ಅ.ಪ. ಸರಸಿಜಾಸನ ಶಂಭು ಮೊದಲಾದ ಸುರರೆಲ್ಲಾ ಪರತಂತ್ರರವರಲಿ ಕೊರತೆಯುಂಟು ನಿರ್ದೋಷ ನಿರವಧಿಕ ಕಲ್ಯಾಣಗುಣಪೂರ್ಣ ನಿರ್ದುಃಖ ನಿರತಿಶಯ ನಿರುಪಮಾನಂದಾತ್ಮ ಸರ್ವಜ್ಞ ಸರ್ವೇಶ ಸರ್ವತಂತ್ರ ಸ್ವತಂತ್ರ ಸರ್ವವಸ್ತುಗಳಲಿ ಸರ್ವದಾ ಪರಿಪೂರ್ಣ ಪರಿಪೂರ್ಣಕಾಮ ನಿನ್ನುರದಲೆನಗೆ ಸ್ಥಿರವಾಸಕೆಡೆಯ ನೀ ಕರುಣದಿಂದಿತ್ತು ಹರುಷಪಡಿಸುವುದೆನ್ನ ಶರಧಿಮಂದಿರನೆ ಗಿರಿಯ ಧರಿಸಿದೆ ಕರಿಗಿರೀಶನೆ
--------------
ವರಾವಾಣಿರಾಮರಾಯದಾಸರು
ದೊರೆಯೆನ್ನನು ಕಾಯೈ ಶ್ರೀಚಕ್ರಪಾಣಿ ಪ ನಿರುತವು ಶರಣೆಂದೆನ್ನುತ ಕೋರುವೆ ಪರಿಯೊಳುಸೇರೇ ಬಂದಿಹೆ ಕರಪಿಡಿ ಅ.ಪ ಆಯುರಾರೋಗ್ಯ ಸುಖಸಂಪದಕೊಡುವ ಸೌಭಾÀಗ್ಯ ಕರ್ತೃವು ಶ್ರೇಯದ ವಿದ್ಯೆಯ ಕರುಣಿಸ ಪ್ರಭೆಯೊಳು ಸನ್ಮಾನವೀವಾ ಧ್ಯೇಯನೇಭತ್ತಿಜ್ಞಾನವೈರಾಗ್ಯವನಿತ್ತುವಿಮುಕ್ತಿಕೊಡುವ ಅ ನ್ಯಾಯದೆ ನಡೆವರ ವ್ಯರ್ಥರಗೈವನು ನೀನೈ ಶ್ರೀಶ್ಯಾಮಸುಂದರ 1 ಮನ್ನರೋಗಕ್ಕೆ ನಿನ್ನ ಪಾದತೀರ್ಥ ಔಷಧವು ಬೇಡ ಉನ್ನತ ಭಯಕ್ಕೆ ಸುದರ್ಶನ ಸ್ಮರಣೆ ಮಂತ್ರವೇತಕ್ಕೆ ಇನ್ನಿತರ ಕಷ್ಟಗಳಿಗೆಲ್ಲ ನಿನ್ನ ನಾಮಮಂತ್ರ ಭಜನ ಚೆನ್ನಪಾದಕೃಪೆ ಇನ್ನೊದಗಿಹುದೈ ನಾಂ ನಿತ್ಯಸಂತೊಷಿ 2 ನಿರಾಯಾಸದಿಂ ದಾಸಗಂತ್ಯದಲಿ ಪ್ರಶಾಂತನಾಗಿ ಹರಿನಾರಾಯಣ ನಾರಾಯಣಯೆಂದು ಕರೆವಂತೆ ಮಾಡಿ ಹರುಷದಿ ನೋಹರಾಕಾರವ ತೋರಿ ವೈಕುಂಠಕೆನ್ನನು ಕರುಣದಿ ಕರೆದೊಯ್ ಅಜಪೂಜಿತ ಹೆಜ್ಜಾಜಿಕೇಶವ 3
--------------
ಶಾಮಶರ್ಮರು
ಧನ್ಯನಲ್ಲವೇ ಇವನು ಧನ್ಯನಲ್ಲವೇ ಪ ಧನ್ಯನಲ್ಲವೇ ಪನ್ನಂಗಶÀಯನ ನುನ್ನತ ಮಹಿಮೆ ತನ್ನೊಳ್ತಿಳಿದವ ಅ.ಪ ಕರಿ ಮೊಸಳಿಗೆ ಸಿಲ್ಕಿ ಪೊರೆಯೊ ಹರಿಯೆನಲು ಕರುಣದಿಂದಲಿ ಬಂದು ಪೊರೆದನೆಂದರಿತವ 1 ದುರುಳ ದುಶ್ಯಾಸನನು ಸೀರೆ ಸೆಳೆಯುತಿರೆ ತರುಣಿಗ್ವರದ ಶ್ರೀಪರಮನೆಂದರಿತವ 2 ಬಲಿಯನು ರಸಾತಳಕಿಳಿಸಿ ತಾ ಪಾದದಿ ಒಲಿದು ಮನೆಯ ಬಾಗಿಲ ಕಾಯ್ದೆಂದರಿತವ 3 ಮಲತಾಯಿ ಧ್ರುವನೊದೆದು ಛಲದಿ ನೂಕಲು ಕಂದ ನಳಿನಾಕ್ಷ ಗತಿಯೆನಲು ಒಲಿದು ಸಲಹಿದ್ದರಿತವ 4 ನೀನೆಗತಿಯೆನಗೀ ಭುವನದಾರು ಗತಿಯಿಲ್ಲ ಪಾದ ನೆನವಿನೊಳಿರ್ದವ 5
--------------
ರಾಮದಾಸರು
ಧನ್ಯನಾದೆನು ಗುರು ನಿಮ್ಮಯ ದಯದೀ ಪ ಹಿಂಗಿತು ಮುನ್ನಿನಂಗವದೋಷವು ಮಂಗಲವಾಗಲು ಇಂಗಿತ ಸುಖದಾ 1 ಸಾರಾಸಾರ ವಿಚಾರದ ತತ್ವದ ದಾರಿಯ ಸುಜನಕ ದೋರುತ ಕರುಣದಿ ಪ್ರೇರಿಸಿ ಸುಮತಿಯ ಶ್ರೀ ರಘುಪತಿ ಸಾ ಕಾರವ ತೋರಿಸಿ ತಾರಿಸಲಾಗಿ 2 ಕರುಣಿ ಅಭಿನವ ತೀರ್ಥ ಮುನಿಕರ ವಾರಿಧಿ ಶ್ರೀ ಸತ್ಯ ಪೂರಣ ಚಂದ್ರರ ಸಾರಲು ಹೋಯಿತು ಮೂರು ತಾಪಗಳು ದೋರಲು ಕಂದಗ ಪಾರದ ಸುಖವು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧನ್ಯನಾದೆನು ನಾಂ ಪ ಘನ್ನಮಹಿಮ ಶ್ರೀನಿವಾಸ ಕರುಣದಿಂದ ಒಲಿದನಿನ್ನು ಅ.ಪ ದೇಶದೇಶದಿಂದ ಸಕಲ ದಾಸಜನರು ಬಂದು ಸದಾ ಶ್ರೀಶ ಸಲಹೆಂದು ಕೂಗುವ ಘೋಷ ಕೇಳಿ ಕರ್ಣಗಳಿಂ 1 ವೈರಿ ವಿನುತ ಅರ್ಥ ಗಳಿಸುವವನ ಕಂಡು2 ಸತಿಯರೆಲ್ಲ ಮುತ್ತಿನಾ- ರತಿಯ ಬೆಳಗುವುದು ಕಂಡು 3 ಸಂತಸದಿ ಮಹಂತರು ಶ್ರೀ- ಕಾಂತನ ಗುಣರಾಸಿ ಪೊಗಳಿ ಸ್ವಾಂತನಿರ್ಮಲರಾಗಿ ಭಜಿಪ- ರಂತರಾತ್ಮನ ಕಂಡು 4 ಭೂಮಿಗಧಿಕ ಶೇಷಗಿರಿ ಧಾಮಪೂರ್ಣಕಾಮ ಭಕ್ತ- ಸ್ತೋಮವನ್ನು ಪಾಲಿಪ ಗುರು- ರಾಮವಿಠಲನ್ನ ಕಂಡು 5
--------------
ಗುರುರಾಮವಿಠಲ
ಧ್ರುವತಾಳ ಬಂದೆನ್ನ ಕಾಯೊ ಕರುಣದಿಂದ ಕೈಪಿಡಿದು ದೀನ ಬಂಧುವೆ | ಒಂದೂರು ಮಂದಿರಾರ್ಯ | ಸಂದೇಹವ್ಯಾಕೆ ನಿನ್ನ ಪೊಂದಿದ ಸತ್ಯಶಿಷ್ಯವೃಂದದೊಳಗೆ ನಾ ಕಡೆಯವನೋ ತಂದೆ ನೀನಗಲಿದಕೆ ನೊಂದೆನೊ ನಾ ಭವ ಬಂಧದೊಳಗೆ ಬಿದ್ದು ಬಹುವಿಧದಿ ನಮಗಿನ್ನು ಹಿಂದು ಮುಂದು ಮನಕೆ ನೀ ತಾರದಲೆ ಕಣ್ಣೆರೆದು ಈಕ್ಷಿಸಿ ಎನ್ನೊಳಿದ್ದ | ಮಂದಮತಿಯ ಬಿಡಿಸಿ ಮಧ್ವಶಾಸ್ತ್ರವ ತಿಳಿಸೋ | ಮಂದರಕುಜ ಭಕ್ತಸಂದೋಹಕೆ | ಹಿಂದೆ ವರದಾತನೆಂದೆನಿಸಿದ ಕರ್ಮಂದಿಗಳರಸರ ಕ್ಷೇತ್ರದಲ್ಲಿ | ಬಂದ ಸಮಯವೆನ್ನ ಬಿನ್ನಪ ಚಿತ್ತಕೆ | ತಂದು ತವಕದಿಂದ ಭೂಸುರರ ಸಂದಣಿಯಲ್ಲಿ ನಿನ್ನ ಮಹಿಮೆ ಪ್ರಕಟಿಸಿ ಇಂದುವಿನಂತೆ ಪೊಳೆದು ಮೆರೆದ ಕರುಣೀ ಅಂದಿನಾರಭ್ಯ ನೀನೆ ಸ್ವರೂಪೋದ್ಧಾರಕರ್ತನೆಂದು ದೃಢನಾಗಿ ನಂಬಿ ತ್ವತ್ವಾದಕೆ ವಂದಿಸಿ ಮೊರೆ ಇಡೆ ಇಂದು ನೀನು ನಮ್ಮ ಛಾತ್ರಮಾಲೆಯಲ್ಲಿ ಸಂದವನೆಂದು ಮನದಿ ಭಾವಿಸಿದೆವು | ಎನುತ ಛಂದದಿ ಸಿಂಧು ಪೋಲುವ ಕರುಣಿ ಸುಜ್ಞಾನ ಸದ್ಭಕ್ತಿ ಕುಂದದ ವೈರಾಗ್ಯ ಭಾಗ್ಯವ ಕೊಟ್ಟು ಧಾಮ ಶಾಮಸುಂದರವಿಠಲನ ಒಂದೇ ಮನದಿ ಭಜಿಪಾನಂದ ಭಾಗ್ಯವ ನೀಡೋ 1 ಮಟ್ಟತಾಳ ಅನುಪಮಸುಚರಿತ್ರ | ಅನುದಿನದಲಿ ಎನ್ನ ಅಣುಗನೆಂದರಿತೊಂದು ಕ್ಷಣವಗಲದೆ ಇದ್ದು ಬಿನುಗು ಬುದ್ಧಿಯ ಕಳದು | ಧನದಾಶೆಯ ಕಡಿದು ಮನದ ಚಂಚಲ ಬಿಡಿಸಿ | ಹನುಮ ಭೀಮಾನಂದ ಮುನಿಕೃತ ಪಾದವನಜ ಸೇವಿಪುದಕೆ ತನುವಿಗೆ ಬಲವಿತ್ತು ದಿನದಿನದಲಿ ನೆನೆಯುವ ಸಂಪದ ಗುಣನಿಧಿಯನುಗ್ರಹಿಸೋ 2 ತ್ರಿವಿಡತಾಳ ಭವ ಮೊದಲಾದ ಬುಧರು ಹರಿಯಾಜ್ಞೆಯಲಿ ಮದಡಾರುದ್ಧರಿಸಲು ಜಗದಿ ಬಂದು | ಸುಧೆಯಂತೆ ಸವಿಯಾದ ಮಧುರ ಕನ್ನಡದಲ್ಲಿ | ಮುದದಿ ರಚಿಸಿದಂಥ | ಪದಸುಳಾದಿಗಳಲ್ಲಿ ಹುದುಗಿದ ವೇದಾರ್ಥ ತ್ವತ್ವಾದಾಶ್ರಿತರಿಗೆ | ವಿಧ ವಿಧದಿಂದಲಿ ಬೋಧಿಸುತಾ | ವದಗಿದ ಅಜ್ಞಾನ ಸದೆದು ಸುಮತಿ ಕೊಟ್ಟು ಸದಾಚಾರ ಸಂಪನ್ನನೆನಿಸಿ | ಅವರ ಬದಿಗನು ನೀನಾಗಿ ಸುಕ್ಷೇಮ ಚಿಂತಿಸಿ | ಅಧಮರಿಂದಲಿ ಬಾಧೆ ಬಾರದಂತೆ ಸದಯನೆ ಸಲಹಿದ ಕಾರಣದಿಂದಲಿ | ವಿದಿತವಾಯಿತು ನಿನ್ನ ಮಹಿಮೆ ಮನಕೆ ಪದೆ ಪದೆ ಪ್ರಾರ್ಥಿಪೆ ಸದಮಲಗಾತ್ರನೆ ಅಧೋಗತಿ ತಪ್ಪಿಸಿ ಬಿಡದೆ ಒಲಿದು | ಯದುಕುಲೋದ್ಭವ ಪೊಳೆವಂತೆ ಕೃಪೆಮಾಡು 3 ಅಟ್ಟತಾಳ ಗುರುವರ ಶ್ರೀ ನರದ್ವಿರದಾರಿ ನಾಮಕ | ವರ್ಣಿಸಲಳವಲ್ಲ ನಿನ್ನುಪಕಾರವು | ಜ್ವರಬಹುಜನರಿಗೆ ಪರಿಹಾರ ಮಾಡಿದಿ ತುರಗ ಕಚ್ಚಿದ ಘಾಯ ತಕ್ಷಣ ಮಾಯಿಸಿದಿ | ಶರಣಗೆ ಬಂದಪಮೃತ್ಯು ಓಡಿಸಿದಿ | ಅರಿಯದರ್ಭಕಿ ಹೋಮಕುಂಡದಿ ಬೀಳೆ | ತ್ವರಿತಭಿಮಂತ್ರಿಸಿ | ಭಿಸ್ಮವಲೇಪಿಸಿ ಉರಿತಂಪುಗೈಸಿದಿ || ಪುರದವರ ಮೊರೆ ಕೇಳಿ ಮಾರಿಯ ಭಯ ಕಳೆದಿ | ತರುಳರು ದಕ್ಕದ ದೀನಕುಟುಂಬಕ್ಕೆ ಚಿರಕಾಲ ಬಾಳುವ ಸಂತಾನ ನೀಡಿದಿ | ಸ್ಮರದೂರ ನಿಮ್ಮಾಜ್ಞೆ ಮೀರದ ಕಿಂಕರನ ತರುಣಿಗೆ ಸೋಂಕಿದ ಭೂತವ ಬಿಡಿಸಿದಿ | ನೆರೆನಿನ್ನ ಪದವನುಸರಿಸೀದ ಸುಜನಕ್ಕೆ ವರಭಾಗವತಶಾಸ್ತ್ರ ಅರುಹೀದಿ ಸಲುಹೀದಿ | ಹರಿಕಥಾಮೃತಸಾರವ ಸಾರೀದಿ | ತರತಮದ ಭೇದಜ್ಞಾನವ ಬೀರಿದಿ | ವರದಾಯಕ ಸತ್ಯದೇವನ ಪಾವನ ಚರಿತೆ ವಿಚಿತ್ರವಾಗಿ ಪರಿಪರಿ ಪೇಳುತ್ತ ಪೊರೆದೆ ನಿನ್ನವರನ್ನು ಧರೆ ಋಣ ತೀರಿದ ಕುರುಹು ಅರಿತು ಒಬ್ಬರಿಗೆ ಸೂಚಿಸದೆ ಪರಲೋಕಯಾತ್ರೆಗೆ ತೆರಳಿದದಕೆ ನಿನ್ನ ಪರಿವಾರದ ನಾವೆಲ್ಲರೂ ನಿತ್ಯಸಿರಿಯ ಕಳೆದುಕೊಂಡ ಲೋಭಿಗಳಂದದಿ ಶರಧಿ ಕಾಯ ತೊರೆದರೇನಾಯಿತು ಮರೆಯಾದೆ ಗೋವತ್ಸನ್ಯಾಯದಂತೆ ನೀ ದರುಶನ ಸ್ವಪ್ನದಿಗರೆದು ಸಂತೈಸುತ ನಿರಯಕೆ ನಮ್ಮನು ಗುರಿಮಾಡದೆ ಪೊರೆ ತರುಳಗೊಲಿದ ಶಾಮಸುಂದರವಿಠಲ ಸರಸಿಜಾಂಘ್ರಿಯುಗ್ಮ ಮಧುಪನೆಂದೆನಿಸಿ 4 ಆದಿತಾಳ ಭೂಮಿ ವಿಬುಧವರ ರಾಮವಿಠಲಾರ್ಯರ ಶ್ರೀ ಮುಖದಿಂದ ಸಕಲಶಾಸ್ತ್ರಮನನಮಾಡಿ | ಶ್ರೀಮತ್ಸು ಶೀಲೇಂದ್ರಸ್ವಾಮಿಗಳಿಂದಲಿ ನೀ ಮಾನಿತನಾಗಿ ಕಾಮಿತಫಲಪ್ರದ ರಾಯರ ದಯಪಡೆದು ಕಾಮಾದಿ ಷಡ್ರಿಪುವರ್ಗ ಜಯಿಸುತಲಿ | ನೇಮನಿಷ್ಟೆಯಲಿ ಜಪತಪಾಚರಿಸುತ ಹೇಮರಜತಧನ ತೃಣಸಮಾನೆನಿಸುತ ಸಾಮಜವರದನ ಕಳೆಯದೆ ಪಾಮರ ಜನರನು ಪ್ರೇಮದಿಂದದ್ಧರಿಸಿ | ಸಾಮಗಾನಪ್ರೇಮ ಶಾಮಸುಂದರನ ಧಾಮವ ಸೇರಿದ ಹೇ ಮಹಾಮಹಿಮನೆ 5 ಜತೆ ನಿನ್ನೊಡೆಯನ ದ್ವಾರಾ ಶ್ರೀ ಶಾಮಸುಂದರನ ಎನ್ನಂತರಂಗದಿ ನೋಳ್ವಂತೆ ಕರುಣಿಸೋ ||
--------------
ಶಾಮಸುಂದರ ವಿಠಲ
ನಕಯಾರಿಗುಸುರಿದರೆನ್ನ ದೂರ ಕೇಳ್ಪರ ಕಾಣೆ ಮಾರಮಣ ಮಾರಜ ಸಲಹೊ ಕೃಪಾ ವಾರಿನಿಧಿ ಕರುಣದಲಿ ಪ. ವಿದೂರ ಪಾಲಿತಾಖಿಳ ಸಜ್ಜನ ಜ್ವಾಲಾ ಕರಾಳನಖರಾಳಿ ವಿದಳಿತ ದೈತ್ಯ ಪಾಲದಾನವ ಮರ್ದನ ಖೂಳರನು ಸದೆದು ದಯ ಬಾಲಿಕಾ ಪಾಲಿತ 1 ವ್ರಜಸುಂದರೀವೃಂದ ವಂದ್ಯ ವೃಂದಾರಕಾದಿ ವಂದ್ಯ ಕುಂದ ನೀನೆಣಿಸಿದರೆ ಇಂದು ಪೊರೆವರ ಕಾಣೆ ಚಂದ್ರಶೇಖರ ಸಖನೆ 2 ದೋಷಗಣದೂರ ನಿಶ್ಯೇಷ ಸದ್ಗುಣಭರಿತ ವಾಸವಾರ್ಚಿತ ಪದಾಬ್ಜ ಶ್ರೀಶ, ವಾಗೀಶ ಗೌರೀಶ ಫಣಿವೀಶಮುಖದಾಸಜನ ಪರಿಪಾಲಕ ದೋಷರಾಶಿಯ ಕಳೆದು ಪೋಷಿಸುವ ದೊರೆಯೆ ನಿ- ನ್ನಾಶ್ರಯವೆ ನಂಬಿದೆನು ಶೇಷಭೂಧರ ರಮಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಂದ ಕುಮಾರ ಇಂದುಕುಲ ತಿಲಕ ಪ ಎಂದಿಗು ನಿನ್ನಯ ಸುಂದರ ಚರಣವ ವಂದಿಸಿ ನಲಿಯುವ ನಂದವೆನಗೆ ಕೊಡೊ ಅ.ಪ ಧನಕನಕಗಳನು ದಿನ ದಿನ ಗಳಿಸುವ ಅನುರಾಗಗಳನು ಕೊನೆಗಾಣಿಸೊ ದೇವ ವನಜಸಂಭವಪಿತ ಕನಸಿನಲ್ಲಿಯೂ ನಿನ್ನ ಮನನದಿ ಹಿಗ್ಗುವ ಮನವ ಎನಗೆ ಕೊಡೆಲೊ 1 ಭಯವಿಲ್ಲದೆ ದೋಷಮಯದ ನೋಟಗಳನು ಬಯಸುವ ಮತಿಯನು ಲಯಮಾಡೋ ದೇವ ಮಾಧವ ಎನ್ನ ನಯನಗಳಿಗೆ ನಿನ್ನ ಪ್ರಿಯ ರೂಪದ ಪರಿಚಯವ ಮಾಡಿಸೊ ಸದಾ 2 ಕಾಲವ ಕಳೆಯಲು ಆಲಸವಿಲ್ಲದೆ ಪೇಳಬಾರದ ನುಡಿ ಚಾಲನು ತೊಲಗಿಸೊ ಬಾಲ ಗೋಪಾಲ ಎನ್ನ ನಾಲಿಗೆಯಲಿ ನಿನ್ನ ಲೀಲೆಗಳನು ಸದಾ ಲಾಲಿಸಿ ಪೊಗಳಿಸೊ 3 ಪರಿಪರಿ ಭೋಗಕೆ ಪರಿದಾಡುತ ಸದಾ ಪರರ ಸೇವಿಸುತಿಹ ಕರಗಳ ನಿಲ್ಲಿಸೊ ಮುರಳೀಧರ ಕೃಷ್ಣ ಕರುಣದಿಂದಲಿ ಎನ್ನ ಕರಗಳಿಗೆ ನಿನ್ನ ವರಸೇವೆಯ ನೀಡೊ 4 ಭುವಿಯಲಿ ದುರುಳರ ಸವಿನುಡಿಗಳಿಗತಿ ಕಿವಿಗೊಟ್ಟು ಕೇಳುವ ಲವಲವಿಕೆಯ ಬಿಡಿಸೊ ದಿವಿಜರೊಡೆಯ ಎನ್ನ ಕಿವಿಯೊಳಗೆ ನಿನ್ನ ನವ ನವ ಚರಿತೆಯ ಸವಿರಸ ಸುರಿಸೆಲೊ 5 ಮಾಧವನನು ಮರೆತು ಪಾದಗಳಿಂದಲಿ ಮೇದಿನಿ ತಿರುಗುವ ಮೋದವೆನಗೆ ಬೇಡ ಯಾದವಪತಿ ನಿನ್ನ ಪಾದದರುಶನದ ವಿ ನೋದಕ್ಕೆ ಸುತ್ತಲು ಆದರ ಪೊಂದಿಸೊ 6 ಭಿನ್ನ ಅಂಗಗಳಿಂದ ಎನ್ನ ಕರ್ಮಗಳನು ನಿನ್ನ ಸೇವೆಯೆಂದು ಬಿನ್ನೈಸುವೆ ದೇವ ಎನ್ನ ದುರಿತಗಳ ಭಿನ್ನ ಮಾಡುತಲಿ ಪ್ರ ಸನ್ನನಾಗಿ ಎನಗೆ ಸನ್ಮತಿ ದಯಮಾಡೊ 7
--------------
ವಿದ್ಯಾಪ್ರಸನ್ನತೀರ್ಥರು
ನಂದಗೋಪನ ಕಂದ ನಾನುವೃಂದಾರಕೇಂದ್ರ ಖಳಕುಲ ಮರ್ದನಪ. ಎಂದೆಂದು ಎನ್ನ ನಂಬಿದ ಭಕುತರಿಗೆ ಸುತ್ತಿಂದಬಂದ ಕ್ಲೇಶಗಳನ್ನೆಲ್ಲ ಖಂಡಿಸಿತಂದೆ ಮಕ್ಕಳ ಪೊರೆವಂತೆ ಪಾಲಿಸುತಿಹೆಕಂದರ್ಪನಾಣೆ ಇದು ಎನಗೆ ಬಿರುದು 1 ಅಂದಂದು ಅವರು ಬೇಡಿದ ಇಷ್ಟಂಗಳನಿತ್ತೆಸಂದೇಹವಿಲ್ಲ ಸಂತತ ಸಲಹುವೆಮಂದಜನರೊಡನಾಡಿ ಮರುಳುಗೊಳದಿರು ಮನುಜ ಚೆಂದದಿಂದೆನ್ನ ಪೂಜೆಯನು ಮಾಡು 2 ಇಂದ್ರ ಗರ್ವಿಸಲವಗೆ ಸಾಂದ್ರ ಸುರತರುವ ಆನಂದನವನವನು ಪೊಕ್ಕು ಕಿತ್ತುತರಲುಒಂದಾಗಿ ರಣಕೆ ಬಂದು ನಿಂದಮರರನು ಕರುಣದಲಿಅಂದು ಪಾಲಿಸಿದೆ ಭಕ್ತರ ಬಂಧುವೆನಿಸಿ 3 ಇಂದುಮುಖಿ ಸಭೆಯಲ್ಲಿ ಕರೆಯಲಾಕ್ಷಣದೊಳಗೆಬಂದವಳ ಅಭಿಮಾನವನು ಕಾಯ್ದೆಇಂದುಧರ ಭಸ್ಮನುಪದ್ರದಲಿ ಬಳಲುತಿರೆಬಂದೊದಗಿ ಶಿವನÀ ಕಾಯಿದವನರಿಯಾ4 ಅಂಧಂತಮವ ದಾಟಿ ಅನಂತಾಸನಕೆ ಪೋಗಿಒಂದು ನಿಮಿಷದೊಳಗೆ ದ್ವಿಜನ ಸುತನ ತಂದೆಸಿಂಧುವಿನೊಳಗೆ ದೈತ್ಯನ ಕೊಂದು ಸಾಂದೀಪ -ನಂದನನÀ ಯಮನಪುರದಿಂದ ತಂದೆ 5 ನೃಪರ ಬಹುಬಲ ಜರಾ -ಸಂಧನ ಗಧೆಯ ಗಾಯದಿ ಕೊಲಿಸಿಅಂದವನ ದೆಸೆಯಿಂದ ನೊಂದ ನೃಪರನು ಬಿಡಿಸಿಕುಂದದುಡುಗೊರೆಯ ನಾ ಕೊಡಿಸಿ ಮೆರೆದೆ6 ಹಿಂದಾಗಜೇಂದ್ರನಿಗೊದಗಿದವನಾರು ಪಿತನಿಂದನೊಂದ ಪ್ರಹ್ಲಾದನ್ನ ಕಾಯ್ದವರದಾರುಮಂದರಗಿರಿಯನೆತ್ತಿ ಸುರರಿಗಮೃತ ಉಣಿ-ಸಿಂದಿರೆಯನಾಳ್ದ ಹಯವದನನರಿಯಾ7
--------------
ವಾದಿರಾಜ