ಒಟ್ಟು 3015 ಕಡೆಗಳಲ್ಲಿ , 118 ದಾಸರು , 2173 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲ ಲೀಲೆ ಇದೆಲ್ಲ ಲೀಲೆಎಲ್ಲ ಲೀಲೆ ರಂಗಗೆಲ್ಲ ಲೀಲೆ ಪ. ಪುಟ್ಟಿಸುವುದು ಮನವಿಟ್ಟು ಕಾವುದುದುಷ್ಟರ ಶಿಕ್ಷೆ ಅಲ್ಲಿ ವಿಶಿಷ್ಟರ ರಕ್ಷೆ1 ನೀರೊಳುಲ್ಲಾಸ ಮತ್ತಾರಣ್ಯವಾಸಹಾರುವರಾಟ ತನ್ನ ನಾರಿಯ ಬೇಟ 2 ಗೊಲ್ಲರಾಕೃತಿ ಬತ್ತಲೆಯ ಸ್ಥಿತಿಬಲ್ಲಿದ ದೈವ ಕಲಿಯ ಗೆಲ್ಲುವ ಭಾಗ 3 ವರನಿಪ್ಪುದು ಕರೆದರೆ ಬಪ್ಪುದುಧರೆಯಜಮ ಪರಿಪರಿಯ ಕರ್ಮ4 ಹೆಂಗಳಕೂಟ ಅಪಾಂಗದ ನೋಟ ಹಾಸ್ಯದಂಗದಿಂದೂಟ ರಣರಂಗದಿಂದೋಟ 5 ಅಂಬಿನ ವೇಧ ನಿನ ತುಂಬಿದ ಕ್ರೋಧ ತ್ರಿ-ಯಂಬಕ ಪೂಜೆ ತ್ರಿವಿಡಂಬನವೋಜೆ6 ಕರ್ತುಮಾಕರ್ತು ಮತ್ತನ್ಯಥಾಕರ್ತು ಎಂಬಶಕ್ತಿದೇವಗೆ ಬಲುಯುಕ್ತಿ ಇವಗೆ7 ನಾವೆಕರ್ತವ್ಯಂ ಸುಪ್ರವೆ ವಕ್ತವ್ಯಂಏಸು ಮಹಿಮೆಗೆ ಕೃತಕೃತ್ಯ ನಮಗೆ 8 ಪ್ರಿಯಮೋದನ ದೈತ್ಯೇಯಭೇದನಹಯವದನ ನಿನ್ನರ್ಥಿ ಕಾಯಿದನ9
--------------
ವಾದಿರಾಜ
ಎಲ್ಲರ ಮಾತು ನಿಜ | ಇದು ಅಲ್ಲ ಎಂಬುದು ಸಜ ಪ ಬಲ್ಲವರು ಮನದಲಿ ಯೋಚಿಪುದು ಸು- ಸೂರಿ ಜನಗಳಿಗೆ ಅ.ಪ ಅಂತರ್ಯಾಮಿಯ ವೀಕ್ಷಾ | ಇದು ಅ ದ್ವೈತ ಮತದ ದೀಕ್ಷಾ ಸ್ವಾಂತದಿ ನೋಡೆ ಪ್ರಪಂಚಕಾಯ ಭಗ ವಂತನೆಂಬುದು ವಿಶಿಷ್ಟಾದ್ವೈತವು 1 ಅಣುರೇಣು ತೃಣಕಾಷ್ಠದಲಿ | ನೋಡೆ ಅ- ವನೇ ವ್ಯಾಪಿಸಿಹನಲ್ಲಿ ರೇಣು ಬೇರೆ ಅವನೇ ಬೇರೆ ಅನಿಲಾಂತರ್ಗತನಾಗಿ ಸಮಸ್ತದಿ 2 ಮೂರು ವಿಧದ ಜೀವಗಳು ಕರ್ಮ ಮೂರಾಗಿ ತೋರುವ ಗುರುರಾಮ ವಿಠಲನು 3
--------------
ಗುರುರಾಮವಿಠಲ
ಎಲ್ಲರೂ ದಾಸರಹರೇ ಪ ಪುಲ್ಲನಾಭನ ದಯವಿಲ್ಲದೆ ಅ.ಪ. ಜ್ಞಾನವಿಲ್ಲ ಭಕುತಿಯಿಲ್ಲ ಧ್ಯಾನ ವೈರಾಗ್ಯ ಮೊದಲೆ ಇಲ್ಲ ಹೀನ ಕರ್ಮಗಳನು ಮಾಡಿ ಶ್ರೀನಿವಾಸನ ಮರೆತವರು 1 ಪರವಧುವಿನ ರೂಪ ಮನದಿ ಸ್ಮರಣೆ ಮಾಡುತ ಬಾಯಿಯೊಳು ಹರಿಯ ಧ್ಯಾನ ಮಾಡುತಿರುವ ಪರಮ ನೀಚರಾದ ಜನರು 2 ಪಟ್ಟೆನಾಮ ಹಚ್ಚಿ ಕಾವಿ ಬಟ್ಟೆಯನ್ನು ಹೊದ್ದುಕೊಂಡು ಅಟ್ಟಹಾಸ ತೋರಿಕೊಳುತ ಗುಟ್ಟು ತಿಳಿಯದಿರುವ ಜನರು 3 ದೊಡ್ಡ ತಂಬೂರಿಯ ಪಿಡಿದು ಅಡ್ಡ ಉದ್ದ ರಾಗ ಪಾಡಿ ದುಡ್ಡುಕಾಸಿಗಾಗಿ ಭ್ರಮಿಸಿ ಹೆಡ್ಡರಾಗಿ ತಿರುಗುವವರು 4 ನೋವು ಬಾರದಂತೆ ಸದಾ ಓವಿಕೊಂಡು ಬರುತಲಿರುವ ದೇವ ರಂಗೇಶವಿಠಲನ ಸೇವೆಯನ್ನು ಮಾಡದಿರುವ 5
--------------
ರಂಗೇಶವಿಠಲದಾಸರು
ಎಲ್ಲಾ ಶಾಸ್ತ್ರದ ಸಾರದ ತಿಳಲ್ಮನ ದಲ್ಲಿ ಹರಿಯನು ಕಾಂಬುದಕೆ ಪ. ಮನದಲಿ ಹರಿಯನು ಕಾಂಬುವ ಸೊಬಗು ಬಲ್ಲಿದ ವೈಕುಂಠಕೋಡ್ವದಕೆ ಅ. ವಿಧಿನೀಷೇಧಗಳಾಚರಿಸುವುದು ವಿಧ ವಿಧ ಜೀವರ ಸಾಧನಕೆ ವಿಧ ವಿಧ ಸಾಧನ ನಂತರ ತಿಳಿವುದು ವಿಧಿ ಜನಕನ ಪದಪಿಡಿವುದಕೆ 1 ಸ್ನಾನಜಪಾಹ್ನೀಕಗಳೆಲ್ಲವು ತನ್ನ ಧ್ಯಾನಕೆ ಶ್ರೀಹರಿ ನಿಲ್ವುದಕೆ ಧ್ಯಾನಕೆ ಶ್ರೀಹರಿ ನಿಂತ ಮೇಲೆ ಸು ಜ್ಞಾನದಿಂದ ತನ್ನರಿವುದಕೆ 2 ನೆಲೆ ಇಲ್ಲದ ಕರ್ಮಾಳಿಗಳ್ ದೇಹದ ಮಲಿನ ತೊಳೆದು ಶುದ್ಧಿಗೈವುದಕೆ ಮಲಿನ ತೊಳೆದು ಮನಶುದ್ಧದಿ ಹೃದಯದಿ ಇಳೆಯರಸನ ನೆಲೆ ಅರಿವುದಕೆ 3 ಅಗ್ನಿ ಹೋತ್ರಯಜ್ಞಾದಿ ಕಾರ್ಯಗಳ್ ಶೀಘ್ರದಿ ಹರಿಯನು ಕಾಂಬುದಕೆ ಶೀಘ್ರದಿ ಹರಿಯನು ಕಂಡ ಮ್ಯಾಲೆ ಇವು ಅಗ್ರಜವಲ್ಲೆಂದರಿವುದಕೆ 4 ರಂಗನ ಮೂರ್ತಿಯನಿಟ್ಟು ಪೂಜಿಸುವುದು ಅಂಗÀದಲ್ಲಿ ತಾನು ಕಾಂಬುದಕೆ ಅಂಗದಲ್ಲಿ ತಾನು ಕಂಡ ಮೇಲೆ ಇವು ಅಂಗಡಿ ಎಂತೆಂದರಿವುದಕೆ 5 ನಿತ್ಯ ನೈಮಿತ್ತಿಕ ಕರ್ಮಗಳೆಲ್ಲವು ಚಿತ್ತದಿ ಹರಿಯನು ತೋರ್ಪುದಕೆ ಚಿತ್ತದಿ ಹರಿಯನು ಕಂಡ ಮೇಲೆ ಇವು ಮತ್ರ್ಯರಿಗೆಸಗಿ ಮೌನಾಗ್ವುದಕೆ 6 ಚಾಂದ್ರಾಯಣ ವ್ರತ ಉಪವಾಸಗಳು ಇಂದ್ರಿಯ ನಿಗ್ರಹ ಮಾಡ್ವದಕೆ ಇಂದ್ರಿಯ ಚಲಿಸದೆ ಮನ ಧೃಡವಾಗಲು ಹಿಂದಿನ ಹಂಬಲ ತ್ಯಜಿಪುದಕೆ 7 ಮಧ್ವಶಾಸ್ತ್ರದ ಸಾರತತ್ವ ಮನ ಶುದ್ಧಿಯಗೈಸುತ ಸುಖಿಪುದಕೆ ಶುದ್ಧರಾದ ಶ್ರೀ ಗುರು ಕರುಣವು ಅನಿ- ರುದ್ಧನ ಹೃದಯದಿ ತೋರ್ವದಕೆ 8 ನೇಮದಿ ದ್ವಾದಶ ನಾಮಧಾರಣೆ ಹರಿ ನಾಮದ ದೇಹ ಬೆಳಗ್ವದಕೆ ಕಾಮಕ್ರೋಧವ ಬಿಡುವುದು ವಳಗಿನ ಶ್ರೀ ಮನೋಹರನನು ಕಾಂಬುದಕೆ 9 ಹೊರಗಿನ ವಸ್ತು ದೃಷ್ಟಿಸುವುದು ಶ್ರೀ ಹರಿ ವರ ವಿಶ್ವರೂಪವ ತಿಳಿವುದಕೆ ವರ ವಿಶ್ವರೂಪಧ್ಯಾನದಿಂದ ತನ್ನ ವರ ಬಿಂಬನ ಕಂಡು ನಲಿವುದಕೆ 10 ಅರಗಣ್ಣ ಮುಚ್ಚುವ ಅಭ್ಯಾಸಗಳೆಲ್ಲ ಸ್ಥಿರಮನವಾಗುವ ಕಾರಣಕೆ ಸ್ಥಿರಮನ ಶ್ರೀ ಹರಿ ದಯ ಮಾಡಲು ನೇತ್ರ ತೆರೆಯದೆ ಬಿಂಬನ ಕಾಂಬುದಕೆ 11 ಶಾಸ್ತ್ರದಿ ಪೇಳುವ ಧ್ಯಾನ ಪ್ರಕರಣವು ಶ್ರೋತ್ರದಿ ಕೇಳುತ ತಿಳಿವುದಕೆ ಗಾತ್ರದಿ ಶ್ರೀ ಗುರು ಕೃಪೆ ಮಾಡಲು ವಳ ನೇತ್ರದಿ ಸರ್ವವು ಕಾಂಬುದಕೆ 12 ಪಕ್ಷಮಾಸ ವ್ರತ ಪಾರಾಯಣ ಅಪ- ರೋಕ್ಷ ಪುಟ್ಟಲು ದಾರಿ ತೋರ್ವದಕೆ ಶಿಕ್ಷ ರಕ್ಷಕರಾದ ಗುರುಕರುಣವು ಅಪ- ರೋಕ್ಷ ಪುಟ್ಟಿಸಿ ನಿಜವರಿವುದಕೆ13 ಪರಿ ಜನರನು ಸೇವಿಸುವುದು ತನ್ನ ಪರಮಾರ್ಥತೆ ದೂರಾಗ್ವದಕೆ ಗುರುಚರಣವ ಸೇವಿಸುವುದು ಶ್ರೀ ಹರಿ ಅರಘಳಿಗಗಲದೆ ಪೊರೆವುದಕೆ 14 ಡಾಂಭಿಕ ಸಾಧನವೆಲ್ಲವು ಶ್ರೀ ಹರಿ ಡಿಂಬದೊಳಗೆ ಮರೆಯಾಗ್ವದಕೆ ನಂಬಿ ಶ್ರೀ ಹರಿ ಗುರು ಚರಣವ ಪೊಗಳ್ಪದು ಡಿಂಬದೊಳಗೆ ಹರಿ ಕಾಂಬುದಕೆ15 ಕರ್ಮ ವೈರಾಗ್ಯಗಳೆಲ್ಲವು ಪುಟ್ಟಿಸಲೂ ಭಕ್ತಿ ಜ್ಞಾನಕ್ಕೆ ಪುಟ್ಟಲು ಭಕ್ತಿ ಜ್ಞಾನ ಪಾಂಡುರಂಗ ವಿಠ್ಠಲನೊಬ್ಬನ ಪಿಡಿವುದಕೆ 16 ಯಾತ್ರೆ ತೀರ್ಥ ಚರಿಪುದು ಶ್ರೀ ಹರಿ ತನ್ನ ಗಾತ್ರದಲ್ಲಿರುವನೆಂದರಿವುದಕೆ ಗಾತ್ರವೆ ಕ್ಷೇತ್ರವೆಂದರಿತ ಮೇಲೆ ಸ ರ್ವತ್ರದಿ ವಿಠಲನ ಕಾಂಬುದಕೆ17 ಎಂತೆಂತೋ ಮಾರ್ಗಗಳರಸುವುದು ಚಿಂತನೆಗೆ ಹರಿ ನಿಲ್ವುದಕೆ ಚಿಂತನೆಗೆ ಹರಿ ನಿಂತ ಮೇಲೆ ತಾನು ಶಾಂತನಾಗಿ ಜಡನಾಗ್ವದಕೆ 18 ಹೊರಗಿನ ಸಂಸ್ಕಾರಗಳೆಲ್ಲವು ತನ್ನ ವಳಗಿನ ಸಂಸ್ಕಾರ ತೆರೆವುದಕೆ ವಳಗಿನ ಸಂಸ್ಕಾರ ತೆರೆದಮ್ಯಾಲೆ ತನ್ನ ಇರವರಿತು ಸುಖ ಸುರಿವುದಕೆ19 ಸಾಸಿರ ಜನ್ಮದ ಸಾಧನಗಳು ಹರಿ ದಾಸನಾಗಿ ತಾನು ಮೆರೆವುದಕೆ ದಾಸನಾದ ಮೇಲೆ ಕ್ಲೇಶಕೆ ಸಿಲುಕದೆ ಶ್ರೀಶನ ಹೃದಯದಿ ಕಾಂಬುದಕೆ 20 ಸಾರತತ್ವವನು ಅರಿವುದು ಗುರು ಮಧ್ವ- ಚಾರ್ಯರ ಮಾರ್ಗವ ಪಿಡಿವುದಕೆ ಪ್ರೇರಕ ಗೋಪಾಲಕೃಷ್ಣವಿಠಲ ಮನ ಸೇರಲು ಕಂಡು ತಾ ನಲಿವುದಕೆ 21
--------------
ಅಂಬಾಬಾಯಿ
ಎಲ್ಲಾಪರಾಧವೈಯ್ಯಾ ಹರಿಪ್ರೀತಿ ಯಿಲ್ಲದಿಹ ಕರ್ಮಗಳು ಝಲ್ಲರಿಯ ಛಾಯಾ ಪ. ಸಾಧುಲಿಂಗವ ಧರಿಸಿ ವೇದ ವೇದಾಂತ ಸ- ದ್ಬೋಧೆಯನು ಕೇಳಿದರು ಪೇಳಿದರು ಸುಪವಿತ್ರ ಮೇದಿನಿಯ ಸರ್ವತೀರ್ಥಸ್ನಾನ ಮಾಡಿದರು ಓದಿದರು ಸರ್ವಶಾಸ್ತ್ರ ಸಾಧಿಸುತ ಕಾಮ ಕ್ರೋಧಾದಿಗಳ ಜೈಸಿ ವನ ಕೈದಿ ತಪಗೈದರು ಮಹಾದಾನಿಯಾದರು ವಿ- ರಾಧವಧ ಪಂಡಿತನ ಪಾದಕರ್ಪಣ ವಿನಹ ಬಾಧಿಸದೆ ಬಿಡದು ಜನ್ಮ 1 ಹರಿಯೆ ಸರ್ವೋತ್ತಮ ಚರಚರಾತ್ಮಕ ಜಗ- ದ್ಗುರುತಮ ಮಹಾಮಹಿಮ ಕರುಣಾರ್ಣವನ ನಾಮ ಸ್ಮರಣೆಯಿಲ್ಲದೆ ಮಾಳ್ಪ ಪರಿಪರಿಯ ಕರ್ಮಗಳು ನರಕ ಸ್ವರ್ಗದ ಭ್ರಮಣವು ಸ್ಥಿರವೆಂದು ನಂಬಿ ದುಸ್ತರ ಭವಾರ್ಣವದಿ ಮುಳುಗಿ ತಿರುತಿರುಗಿ ಜನ್ಮಮಂ ಧರಿಸಿ ಬಹುದುಃಖ ಸಾ ಗರದಿ ತೇಲಾಡುವುದನರಿಯದತಿ ದುರ್ಮೋಹ ಸೆರೆಯೊಳಗೆ ಬಿದ್ದ ಮೇಲೆ 2 ಸರ್ವತಂತ್ರಸ್ವತಂತ್ರ ಸರ್ವತ್ರ ವ್ಯಾಪ್ತ ಸುರ ಸಾರ್ವಭೌಮಸುನಾಮ ಸಾಮಗಾನಪ್ರೇಮ ದೂರ್ವಾದಳಶ್ಯಾಮ ದುರ್ಗಾರಮಣ ಜಗವ ಗರ್ವದಿಂ ತಾ ಕರ್ತುವೆಂದಹಂಕರಿಸಿ ಜಗ ಕೊರ್ವನೆ ಹೃಷೀಕೇಶ ಕೇಶವ ದೈತ್ಯ ಪೂರ್ವಕವೆ ನಿರಪರಾಧ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಲ್ಲಾಪರಾಧವೈಯ್ಯಾ ಹರಿಪ್ರೀತಿ ಯಿಲ್ಲದಿಹ ಕರ್ಮಗಳು ಝಲ್ಲರಿಯ ಛಾಯಾಪ. ಸಾಧುಲಿಂಗವ ಧರಿಸಿ ವೇದ ವೇದಾಂತ ಸ- ದ್ಬೋಧೆಯನು ಕೇಳಿದರು ಪೇಳಿದರು ಸುಪವಿತ್ರ ಮೇದಿನಿಯ ಸರ್ವತೀರ್ಥಸ್ನಾನ ಮಾಡಿದರು ಓದಿದರು ಸರ್ವಶಾಸ್ತ್ರ ಸಾಧಿಸುತ ಕಾಮ ಕ್ರೋಧಾದಿಗಳ ಜೈಸಿ ವನ ಕೈದಿ ತಪಗೈದರು ಮಹಾದಾನಿಯಾದರು ವಿ- ರಾಧವಧ ಪಂಡಿತನ ಪಾದಕರ್ಪಣ ವಿನಹ ಬಾಧಿಸದೆ ಬಿಡದು ಜನ್ಮ 1 ಹರಿಯೆ ಸರ್ವೋತ್ತಮ ಚರಚರಾತ್ಮಕ ಜಗ- ದ್ಗುರುತಮ ಮಹಾಮಹಿಮ ಕರುಣಾರ್ಣವನ ನಾಮ ಸ್ಮರಣೆಯಿಲ್ಲದೆ ಮಾಳ್ಪ ಪರಿಪರಿಯ ಕರ್ಮಗಳು ನರಕ ಸ್ವರ್ಗದ ಭ್ರಮಣವು ಸ್ಥಿರವೆಂದು ನಂಬಿ ದುಸ್ತರ ಭವಾರ್ಣವದಿ ಮುಳುಗಿ ತಿರುತಿರುಗಿ ಜನ್ಮಮಂ ಧರಿಸಿ ಬಹುದುಃಖ ಸಾ ಗರದಿ ತೇಲಾಡುವುದನರಿಯದತಿ ದುರ್ಮೋಹ ಸೆರೆಯೊಳಗೆ ಬಿದ್ದ ಮೇಲೆ 2 ಸರ್ವತಂತ್ರಸ್ವತಂತ್ರ ಸರ್ವತ್ರ ವ್ಯಾಪ್ತ ಸುರ ಸಾರ್ವಭೌಮಸುನಾಮ ಸಾಮಗಾನಪ್ರೇಮ ದೂರ್ವಾದಳಶ್ಯಾಮ ದುರ್ಗಾರಮಣ ಜಗವ ಗರ್ವದಿಂ ತಾ ಕರ್ತುವೆಂದಹಂಕರಿಸಿ ಜಗ ಕೊರ್ವನೆ ಹೃಷೀಕೇಶ ಕೇಶವ ದೈತ್ಯ ಪೂರ್ವಕವೆ ನಿರಪರಾಧ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಲ್ಲಾರಿಗೆಲ್ಲಿಹದು ಫುಲ್ಲನಾಭನ ಸೇವೆ ಸುಲಭವಲ್ಲವಿದು ದುರ್ಲಭ ಸದ್ಗುರು ಮಾರ್ಗ ಧ್ರುವ ಕೋಟ್ಯಾನುಕೋಟಿಗೊಬ್ಬ ಮುಟ್ಟಿ ಕಂಡಿದರಲಿ ನೆಟ್ಟಿಸಿ ತನ್ನೊಳು ತಾ ದೃಷ್ಟಿಸಿ ಗುರುಪಾದ 1 ಮಾತಿನಂತಲ್ಲವಿದು ಜ್ಯೋತಿರ್ಮಯದ ಸುಖ ನೆÉೀತಿನೆÉೀತಿವೆಂಬುದು ಶ್ರುತಿ ಸಾರುತದ ವಾಕ್ಯ 2 ಹರಡಿಸಿರಾಗದು ಮೂರುಲೋಕದೊಳಗ ಕರುಣಿಸಿದರಾಹುದು ಗುರು ಕೃಪೆಯಿಂದ 3 ವರ್ಮ ತಿಳಿಯದೆಂದೆಂದು ಕರ್ಮತಮಂಧರಿಗೆ ಬ್ರಹ್ಮ ಸುಖದೋರುವ ಸ್ವಾಮಿ ಸದ್ಗುರು ಧರ್ಮ 4 ಸೇವೆ ಸೂತ್ರನರಿಯದ ಭಾವಿ ಮಹಿಪತಿಗೆ ಭಾವಭಕ್ತಿಯ ಕೊಟ್ಟು ಪಾವನಗೈಸಿದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಲ್ಲಿ ನೋಡಿದರಲ್ಲಿ ರಾಮ - ಇದ ಪ ಬಲ್ಲ ಜಾಣರ ದೇಹದೊಳಗೆ ನೋಡಣ್ಣ ಅ ಕಣ್ಣೇ ಕಾಮನ ಬೀಜ - ಈಕಣ್ಣಿಂದಲೆ ನೋಡು ಮೋಕ್ಷ ಸಾಮ್ರಾಜ್ಯಕಣ್ಣಿನ ಮೂರುತಿ ಬಿಗಿದು - ಒಳಗಣ್ಣಿಂದಲೇ ದೇವರ ನೋಡಣ್ಣ 1 ಮೂಗೇ ಶ್ವಾಸ ನಿಶ್ವಾಸ - ಈಮೂಗಿಂದಲೇ ಕಾಣೊ ಯೋಗ ಸಂನ್ಯಾಸಮೂಗನಾದರೆ ವಿಶೇಷ - ಒಳಮೂಗಲಿ ನೋಡಣ್ಣ ಲೀಲಾವಿಲಾಸ 2 ಕರ್ಮ ಕುಠಾರ - ಒಳಗಿವಿಯಲ್ಲಿ ಕಾಣೊ ನಾದದ ಬೇರ 3 ಬೊಮ್ಮ ಮಾಡಿದ ತನುಬಿಟ್ಟು - ವಿಶ್ವಕರ್ಮನು ಮಾಡಿದ ಬೊಂಬೆಯನಿಟ್ಟುಸುಮ್ಮನೆ ಕೂಗುಗಳಿಟ್ಟು - ಅದನಂಬುವನೆಂಬೋನು ಹೋಹ ಕಂಗೆಟ್ಟು4 ರೂಢಿಯೊಳಗೆ ಶುದ್ಧ ಮೂಢ - ಈಕಾಡುಕಲ್ಲುಗಳನ್ನು ನಂಬಬೇಡನಾಡಾಡಿ ದೈವಗಳನೆಲ್ಲ - ನಮ್ಮಬಡದಾದಿ ಕೇಶವನೊಬ್ಬನೆ ಬಲ್ಲ 5
--------------
ಕನಕದಾಸ
ಎಲ್ಲಿ ಹುಟ್ಟಿದರೇನು ಎಲ್ಲಿ ಮಡಿದರೇನು ಸೊಲ್ಲು ಸೊಲ್ಲಿಗೆ ಬರುತಿರಲು ಪ ಇಹವು ಎಂಬತ್ತನಾಲ್ಕು ಲಕ್ಷ ಜೀವ ರಾಶಿಯಲ್ಲಿ ಮರಳಿ ಮರಳಿ ಹುಟ್ಟಿ ಸತ್ತು ಬರುವ ಜನ್ಮದೊಳಗೆ ಜ್ಞಾನವಿರಲಿ ಕಲ್ಲಿ ಹರಿಯ ಸ್ಮರಣೆ ನಿರುತ ವಿರಲು ಬಂದರದು ಆನಂದ 1 ನೊರಜು ಕೀಟ ಸರಿಸೃಪಾದಿ ಕ್ರಿಮಿ ಮೃಗಾದಿ ಪಕ್ಷಿನಿಚಯ ತರು ಲತಾದಿ ಸಕಲ ಜೀವ ಜಂತು ಜ್ಞಾನ ವಿರಲಿ ಕಾವ ಜನ್ಮದಲ್ಲಿ ಬಂದರೇನು ಅಳಿದರೇನು ಜಿಹ್ವೆ ಕೊನೆಯೊಳಿರಲಿಕದು ಆನಂದ 2 ಕರ್ಮ ವಶದಿ ಕೂಚುಮಾಡಿ ಜನ್ಮಕಿಕ್ಕಿ ಚಾಚಿ ಬರಗುತಿಹಳುಮಾಯೆ ಈಚ - ರಾಚರಂಗಳೆಲ್ಲ ಬ್ರಾಹ್ಮವೆಂದು ತಿಳಿದವರಿಗೆ ಕೀಚಕಾರಿ ಕೋಣೆ ಲಕ್ಷ್ಮೀಪತಿಯ ಸ್ಮರಣೆಯೊಂದು ಆನಂದ 3
--------------
ಕವಿ ಪರಮದೇವದಾಸರು
ಎಲ್ಲಿದ್ದರು ಕಾಯ್ವ ಯದುಕುಲತಿಲಕ| ಭಕ್ತ ರೆಲ್ಲಿದ್ದರು ಕಾಯ್ವ ಯದುಕುಲತಿಲಕ ಪ ಅಡವಿಯೊಳಿರಲು ಅರಣ್ಯದೊಳಿರಲು ಮಡುವಿನೊಳಿರಲು ಮರದ ಮೇಲಿರಲು ಪೊಡವಿಗೀಶ್ವರ ತಾನು ದೃಢಭಕ್ತನಂ ಬಿಡದೆ ರಕ್ಷಿಸುವ ಯೆಂತೆಂಬೊ ಬಿರುದು 1 ತಂದೆಯ ಬಾಧೆಗೆ ಕಂದ ನಿಮ್ಮನು ಕರೆಯೆ ಬಂದು ಕಂಭದಲಿ ನೀ ಕಾಯ್ದೆ ಗೋವಿಂದಾ ಅಂದು ದ್ರೌಪದಿ ಹಾಯೆಂದು ಬದರಲು ಕೇಳಿ ಆ ನಂದದಿಂದಕ್ಷಯವನಿತ್ತ ರಂಗನು ನೀನು 2 ಭರದೆ ಭಗದತ್ತನು ಅಸ್ತ್ರ ಬಿಡಲು ಕೊರಳ ಚಾಚಿದನಾಗ ಕರುಣಾವಾರಿಧಿಯು ವರುಣಗದೆಯನಾಗ ಮರುಳತನದಿ ಬಿಡೆ ಮರಳಿ ಅವನ ಉರುಳಿಸಿತು ಶೃತಾಯುವು 3 ಸಿಂಧುರಾಜನ ಶಿರವ ಅವನ ತಂದೆ ಕೈಯಲಿ ಹಾಕಿ ಬಂದ ಭಾರವನೆಲ್ಲಾ ಕಾಯ್ದೆ ಗೋವಿಂದ ಕರ್ಣ ಅಪ್ರಮೇಯನು ಭೂಮಿ ಕ್ಷಿಪ್ರದಿಂ ಒತ್ತಿದಾ 4 ಅಂದು ಅರ್ಜುನ ತನ್ನ ಕಂದನೊಡನೆ ಕಾದೆ ಹಿಂದಿನ ವೈರದಿಂ ಶಿರವನ್ನು ಹರಿಯೆ ಬಂದು ಮುಕುಂದ ಸಂಧಿಸಿ ಶಿರವನ್ನು ಆ ಇಂದಿರೆ ರಮಣ5 ಉತ್ತರೆ ಗರ್ಭವು ಬತ್ತಿ ಬೀಳಲು ಆಗ ಉತ್ತಮ ಋಷಿಗಳೆಲ್ಲರ ನೋಡಿ ನಿತ್ಯಬ್ರಹ್ಮಚಾರಿಗಳು ಪಾದದೀ ಮೆಟ್ಟಿದರೆ ಬದುಕುವುದೆಂದನು ಕೃಷ್ಣ 6 ಸನತ್ಕುಮಾರರು ಶೌನಕರು ಮೊದಲಾಗಿ ಪರುಶುರಾಮ ಹನುಮಾದಿಗಳು ಬ್ರಹ್ಮಚರ್ಯವು ನಮಗಿಲ್ಲವೆನುತ ಬ್ರಹ್ಮಚರ್ಯಕ್ಕೆ ಆಧಾರ ನೀನೆನ್ನಲು ವಾಮಪಾದದಿ ತುಳಿದೆಬ್ಬಿಸಿದನು ಶಿಶುವ 7 ಸರಸಿರುಹನಯನಾ ಫಣಿರಾಜಶಯನ ಶರಣಾಗತದುರಿತಾಪಹರಣ ದೈತೇಯಸಂಹರಣ ಗೋವರ್ಧನೋದ್ಧರಣ ಪೀತಾಂಬರಾಭರಣ ಕೌಸ್ತುಭಾಭರಣ 8 ಅಶ್ವತಾಮನ ಅಸ್ತ್ರ ವಿಶ್ವವನು ಸುಡುತಿರೆ ವಿಶ್ವನಾಯಕ ಶಮನ ಮಾಡಿ ಕಾಯ್ದು ಅಸಮಸಾಹಸದಿ ಚಕ್ರವ ಪಿಡಿದು ಗರ್ಭದ ಶಿಶುವನ್ನು ಕಾಯ್ದ ಕುಶಲಿ ವೆಂಕಟಕೃಷ್ಣ 9
--------------
ಯದುಗಿರಿಯಮ್ಮ
ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ಪ ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನುಅ ತರಳ ಪ್ರಹ್ಲಾದ ಹರಿ ವಿಶ್ವಮಯನೆಂದುಬರೆದೋದಲವನ ಪಿತ ಕೋಪದಿಂದಸ್ಥಿರವಾದಡೀ ಕಂಬದಲಿ ತೋರು ತೋರೆನಲುಭರದಿಂದ ಬರಲದಕೆ ವೈಕುಂಠ ನೆರೆಮನೆಯೇ1 ಪಾಪ ಕರ್ಮವ ಮಾಡಿದಜಮಿಳನ ಯಮಭಟರುಕೋಪದಿಂದೆಳೆಯುತಿರೆ ಭೀತಿಯಿಂದತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತದ್ವೀಪವೀ ಧರೆಗೆ ಸನಿಹದಲ್ಲಿಹುದೆ 2 ನೆಗಳು ನುಂಗುತಿರೆ ಭಯದಿಂದಮೊರೆಯಿಡಲು ಕೇಳಿ ತ್ವರಿತದಲಿ ಬಂದುಕರುಣದಲಿ ಬಂಧನವ ಪರಿಹರಿಸೆ ಗಜರಾಜನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ 3 ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆತರುಣಿ ಹಾ ಕೃಷ್ಣ ಎಂದೊದರೆ ಕೇಳ್ದುಭರದಿಂದ ಅಕ್ಷಯಾಂಬರವೀಯೆ ಹಸ್ತಿನಾಪುರಿಗೆ ದ್ವಾರಾವತಿಯು ಕೂಗಳತೆಯೆ 4 ಅಣು ಮಹತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯಗಣನೆಯಿಲ್ಲದ ಮಹಾಮಹಿಮನೆನಿಪಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನುನೆನೆದವರ ಮನದೊಳಿಹನೆಂಬ ಬಿರುದುಂಟಾಗಿ5
--------------
ಕನಕದಾಸ
ಎಲ್ಲಿರುವೆಯೊ ಎಂದು | ತಲ್ಲಣಗೊಳುತ್ತಿದ್ದೆ ಇಲ್ಲೆ ಬಂದೆಯೊ ದೇವನೆ ಪ. ಪುಲ್ಲಲೋಚನ ಎನ್ನ ಉಲ್ಲಾಸಗೊಳಿಸುತ ನಿಲ್ಲೊ ಹೃತ್ಕಮಲದಿ ನೀ ಬಹು ಮುದದಿ ಅ.ಪ. ಕಪಟನಾಟಕ ದೇವ | ಅಪರಿಮಿತ ಮಹಿಮ ಗುಪಿತರೂಪನೆ ನಿನ್ನನು ವಿಪುಲಮತಿಯಿಂದ ವರ್ಣಿಸಲಾಪೆನೆ ಸಪುತ ಸಪುತ ಭುವನೇಶ ಕೃಪೆಮಾಡೊ ಕೃಪಣವತ್ಸಲ ನಿನ್ನ ಕಾಣದೆ ಅಪರಿಮಿತವಾಗಿ ನೊಂದೆನಯ್ಯ ತಪಿಸುವುದು ನಿನಗುಚಿತವೆ ಹರಿ ಕೃಪೆ ಮಾಡೊ ಬೇಗ ಶ್ರೀನಿವಾಸ 1 ಹರಿ ನಿನ್ನ ಪಾದವ | ನಿರುತದಿ ಧ್ಯಾನಿಪ ವರಮತಿ ಎನಗೆ ನೀಡೊ ಗರುವಿಕೆಯನೆ ಬಿಡಿಸು ಶರಣಳ ಪೋಷಿಸು ಸುರವರ ನಿನ್ನಂಘ್ರಿಗೆರಗಿ ಬಿನ್ನೈಸುವೆ ಕರೆಕರೆಗೊಳಿಸುವುದುಚಿತವೆ ತೊರೆದರೆ ಎನ್ನ ಪೊರೆವರ್ಯಾರೊ ಥರವಲ್ಲ ನಿನಗಿನ್ನು ಕೇಳಿದು ಪೊರೆಯದಿದ್ದರೆ ನಗರೆ ಭಕ್ತರು 2 ಮಂದಮತಿಯಿವಳೆಂದು | ಹಿಂದು ಮಾಡಿದರÉನ್ನ ಕುಂದು ನಿನಗೆ ತಪ್ಪದೊ ಬಂಧನ ಬಿಡಿಸು ನೀ ಬಂಧನದೊಳಗಿಡು ಮಂದಿರ ಹೃದಯದಿ ಎಂದೆಂದಿಗಗಲದೆ ಮಂದಭಾಗ್ಯೆಯ ಮಾತು ಕಿವಿಗೆ ಮಂದಗಮನೆಯ ಮಧ್ಯೆ ಇರುವಗೆ ಮಂದಹಾಸ ಮುಖೇಂದು ವದನನೆ 3 ಅಜಸುರ ವಂದ್ಯನೆ | ಭಜಿಸಲಾಪೆನೆ ನಿನ್ನ ತ್ರಿಜಗದೊಡೆಯ ಹರಿಯೆ ವಿಜಯಸಾರಥಿ ಎನ್ನ ರಜತಮವನೆ ಕಳೆದು ಕುಜನರೊಳಿಡದಲೆ ನಿಜಗತಿ ಪಾಲಿಸೊ ಗಜವರದ ಗಂಭೀರ ದೇವನೆ ಧ್ವಜವಜ್ರೌಕುಶ ಪಾದಕಮಲನೆ ಭಜಿಸಿದವರಿಗೊಲಿವ ದೇವನೆ ಭುಜಗಭೂಷಣನಿಂದ ವಂದ್ಯನೆ 4 ಸೃಷ್ಟ್ಯಾದಿ ಕರ್ತನೆ | ಎಷ್ಟು ಬೇಡಲೊ ನಾನು ಇಷ್ಟ ದೈವÀವೆ ಕೇಳಲೊ ಭ್ರಷ್ಟತನವನೆಣಿಸದೆ ದೃಷ್ಟಿಯಿಂದಲಿ ನೋಡಿ ಕಷ್ಟಬಿಡಿಸಿದರೆ ಮುಟ್ಟಿಪೂಜಿಸುವೆನೊ ದಿಟ್ಟ ಗೋಪಾಲಕೃಷ್ಣವಿಠ್ಠಲ ಇಷ್ಟು ಬಿನ್ನಪ ನಷ್ಟ ಮಾಡದೆ ಕೊಟ್ಟು ಧೈರ್ಯವ ಮೆಟ್ಟಿ ಪಾಪವ ಸುಟ್ಟು ಕರ್ಮವ ಕೃಷ್ಣ ಸಲಹೊ 5
--------------
ಅಂಬಾಬಾಯಿ
ಎಷ್ಟು ದಿವಸ ಹೀಗೆ ಕಳೆಯಲೊ ಗೋಪಾಲಕೃಷ್ಣ ಎಷ್ಟು ದಿವಸ ಹೀಗೆ ಕಳೆಯಲೊ ಪ. ಎಷ್ಟು ದಿವಸ ಹೀಗೆ ಎನ್ನ ಸೃಷ್ಟಿಗೊಡೆಯ ಬಳಲಿಸುವೆಯೊ ಕಷ್ಟಪಡಲಾರೆ ಭವದಿ ದೃಷ್ಟಿಯಿಂದ ನೋಡಿ ಸಲಹೋ ಅ.ಪ. ನಾನಾ ಜನ್ಮದಿ ತೊಳಲಿಸಿ ಎನ್ನನು ನೀನೆ ತಂದೆಯೊ ಮಾನವತ್ವದಿ ನಾನು ಎಂಬುದು ಬಿಡಿಸಿ ಈಗ ನೀನೆ ಕರ್ತನೆನಿಸಿ ಕಾಯೋ1 ದೇಹಸ್ಥನೆಂದೆನಿಸಿ ಎನ್ನ ದೇಹ ಮಧ್ಯದಿ ಕಾಣದಿಹರೆ ದೇಹಗಳನು ಧರಿಸಲಾರೆ ದೇಹ ಮೋಹ ಬಿಡಿಸದಿಪ್ಪರೆ 2 ಭೃತ್ಯವತ್ಸಲನೆಂದು ನಿನ್ನ ಭಕ್ತರೆಲ್ಲರು ಕರೆಯುತಿಹರೊ ಪೊತ್ತ ಬಿರುದು ಬಿಡುವರೇನೊ ಭೃತ್ಯಳೆಂದು ಎನ್ನ ಸಲಹೊ3 ಪೋಗುತಿದÉ ದಿವಸ ನೋಡು ಬೇಗ ಬೇಗನೆ ದಯವ ಮಾಡು ಭೋಗದಲಿ ವೈರಾಗ್ಯ ನೀಡು ಭಾಗವತರ ಸಂಗ ಕೊಡು 4 ಕರ್ಮದಲ್ಲಿ ಶ್ರದ್ಧೆಯಿಲ್ಲ ಧರ್ಮದಲ್ಲಿ ಬುದ್ಧಿಯಿಲ್ಲ ನಿರ್ಮಲದ ಜ್ಞಾನವಿಲ್ಲ ನಿರ್ಮಲಾತ್ಮ ಬಲ್ಲೆಯಲ್ಲ 5 ಅಂಧಕಾರದಿ ಎನ್ನನಿರಿಸಿ ಚಂದವೇನೋ ಹೀಗೆ ಮಾಳ್ಪದು ಕರ್ಮ ಸ್ವೀಕರಿಸಿ ಮುಂದೆ ಕರ್ಮವಿಡದೆ ಸಲಹೋ 6 ಅಪಾರ ಜನುಮದಲ್ಲಿನ ಪಾಪ ಸಮೂಹಗಳ ತರಿದು ಶ್ರೀಪಾದ ಸ್ಮರಣೆ ನೀಡೋ ಗೋಪಾಲಕೃಷ್ಣವಿಠಲ 7
--------------
ಅಂಬಾಬಾಯಿ
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಎಷ್ಟು ಭಜಿಸಿದರು ಸಾಕಷ್ಟು ನನಗಾಗದೊ ಪ ಮೂರ್ತಿ ಅಂಗಜಪಿತ ಮೋಹನಾಂಗಚೆಂಗೊಳಲನು ನುಡಿಸುತಲಿರುವಭಂಗಿಯಲಿ ನಿನ್ನ ರೂಪಕಂಗಳಿಂದ ನೋಡಿ ನೋಡುತ 1 ಪೂರ್ಣ ಗುಣ ನಿರ್ದೋಷನೆಸುವರ್ಣಗರ್ಭ ನಿನ್ನ ಲೀಲೆವರ್ಣಿಸುತಿಹ ಕೀರ್ತನೆಯನುಕರ್ಣದಿಂದ ಕೇಳಿ ಕೇಳುತ 2 ನಿತ್ಯ ಮನಕೆ ಮುದವತಪ್ಪ ನಿನ್ನ ನಾಮ ಸುಧೆಯಚಪ್ಪರಿಸುತ ನಾಲಗೆಯಲಿಒಪ್ಪಿ ಸವಿದು ಸವಿಯುತಿರಲು 3 ಅಮಮ ನಿನ್ನ ತನುವಿನಿಂದಘಮಘಮಿಸುತ ಬರುವ ಗಂಧಅಮಿತ ಮುದವ ಮೂಗಿಗಿಡಲುರಮಿಸಿ ಮೂಸಿ ನೋಡುತಿರಲು 4 ಪಾವನತರ ನಿನ್ನಡಿಯಲಿಸೇವೆಗೊಳ್ಳು ನಿರುತದಲಿಕಾವುದಯ್ಯ ಶ್ರೀ ಗದುಗಿನದೇವ ವೀರನಾರಯಣ 5
--------------
ವೀರನಾರಾಯಣ