ಒಟ್ಟು 3030 ಕಡೆಗಳಲ್ಲಿ , 117 ದಾಸರು , 2252 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಎಂಥ ಸೂಕ್ಷ್ಮವ ನೋಡಿರಿವನ ನಮ್ಮ ಕಾಂತೆ ದ್ರೌಪತಿದೇವಿಗೆ ವರಹೀನ ಪ. ಸಣ್ಣ ಕೂಸಿದ್ದಾಗ ಇವನು ಸೂರ್ಯಗೆ ಹಣ್ಣೆಂದುಹಾರಿದ ಗಗನಕ್ಕೆ ತಾನು ಉಡ್ಡೀನ ಗೈದುನೀರಧಿಯ ದಾಟಿದನುಇವನ ಅಂಗದ ಕೋಮಲ ಬಣ್ಣ ವರ್ಣಿಸಲೇನು 1 ಗಂಧಮಾದನ ಗಿರಿ ತಂದು ನೋಡಿ ಗಿರಿ ನಿಂದಲ್ಲೆ ಹಿಂದಕ್ಕೆ ಒಗೆದ ಈಡ್ಯಾಡಿಒಂದೊಂದು ಬೆಡಗವ ನೋಡಿನಮ್ಮ ಇಂದಿರೇಶನು ನಕ್ಕ ಕೌತುಕ ಮಾಡಿ 2 ಹುಟ್ಟಿದಾಗ ಭೀಮ ಒಂದಿಷ್ಟು ಎತ್ತಿಪಟ್ಟನೆ ಬಿದ್ದು ಕೌತುಕ ಮಾಡಿದನೆಷ್ಟುಬೆಟ್ಟಗಳ ಒಡೆದು ಹಿಟ್ಟೆಟ್ಟುಇವನ ಅಂಗದ ಕೋಮಲ ವರ್ಣಿಸಲೆಷ್ಟು3 ಭಿಕ್ಷೆ ಬೇಡಿದನಂತೆ ಕಂಡು ತಾನರಿಯಳು ಕಾಂತೆ ಇಂಥ ದಿಂಡ ಪುರುಷನ ಬೆರೆದಳು ಕಾಂತೆ4 ಘನ್ನಗರಳ ಕುಡಿದನಂತೆ ಅದು ತನ್ನ ದೇಹವ ತಪಿಸುತಲಿದ್ದವರಂತೆಸನ್ಯಾಸ ಇವಗ್ಯಾಕೆ ಕಾಂತೆನಮ್ಮ ಚೆನ್ನ ರಾಮೇಶ ನೋಡಿನಕ್ಕನಂತೆ 5
--------------
ಗಲಗಲಿಅವ್ವನವರು
ಎಂಥವನೆ ಆಗಲಿ ಪತಿಯೆ ಸಾಕ್ಷಾತ್ ಶಿವನುಪತಿಯಿಲ್ಲದೇ ಬೇರೆ ಗತಿಯಿಲ್ಲ ಸತಿಗೆ ಪ ಪತಿತನಾಗಲಿ ಪಾತಕಿಯಾಗಿರಲಿಅತಿಮುದುಕನು ಪ್ರಾಯದವನಾಗಿರಲಿ 1 ಬಡವನಾಗಲಿ ಭೂಪತಿಯಾಗಿರಲಿಕುಡುಕನಾಗಲಿ ಕಡುಗೋಪಿಯಾಗಿರಲಿ 2 ವರ ಕೆಳದಿಯ ರಾಮೇಶ್ವರನ ಪದವನುಸ್ಮರಿಸಿದಂಥ ಗಂಡ ಬರುವನು ಮುನ್ನ 3
--------------
ಕೆಳದಿ ವೆಂಕಣ್ಣ ಕವಿ
ಎಂಥಾ ಪಾವನ ಪಾದವೋ ಕೃಷ್ಣಯ್ಯಾ ಇ-ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ 3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ5 ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ 5
--------------
ವಾದಿರಾಜ
ಎಂಥಾ ಪಾವನ ಪಾದವೋ ಶ್ರೀರಾಮನ ದೆಂಥಾ ಚೆಲುವ ಪಾದವೋ ಪ ಸಂತತವು ಸಜ್ಜನರ ಪಾಲಿಸೆ ನಿಂತು ಧನುವನು ಧರಿಸಿ ಮೆರೆವ ಅ.ಪ ಮುನಿಪತಿ ನುಡಿ ಮನ್ನಿಸಿ ತಪೋವನಕ್ಕನುಜನೊಡನೆ ಗಮಿಸೀ ಮುನಿಯಾಜ್ಞೆಯಿಂ ಘೋರ ತಾಟಕಿಯನೆ ವಧಿಸಿ ವಿನಯದಿ ಯಜ್ಞರಕ್ಷಣೆ ಮಾಡಿ ಮುದವಿತ್ತ 1 ಘನಶಾಪವನು ಕಳೆಯೆ ಮುನಿಯಾಜ್ಞೆಯಿಂ ಘನಶಿಲೆಯ ಮೇಲಡಿಯಿಟ್ಟು ಘನತರ ಮಾನಿನಿಯನು ನಿರ್ಮಿಸಿ ಮೆರೆದ 2 ಗುಹನು ಗಂಗೆಯ ತಟದಿ ದೋಣಿಯ ತಂದು ಗಹನ ಶಂಕೆಯೊಳಂದು ಸಹಜಭಕ್ತಿಯಲಿ ನಿರ್ಮಲಗಂಗೆಯುದಕದಿಂ ದಹಹ ಪಾದರಜವನು ತೊಳೆಯಲೊಪ್ಪಿದ 3 ಹರಧನುವನು ಭಂಗಿಸಿ ಮಿಥಿಲೆಯಲಿ ವರ ವಿಕ್ರಮವ ಮೆರೆಸಿ ತರುಣಿ ಜಾನಕಿಯಂದು ಶಿರದಿ ನಿನ್ನಡಿಗಳಿ ಗೆರಗಲು ಘನ ಶಂಕೆಯಿಂ ಮಾಲೆಯರ್ಪಿಸಿದ 4 ಸಾಧುಗಳ ಪೊರೆಯೆ ಚರಣ ಪಾದುಕೆಗಳ ಶರಣ ಭರತಗಿತ್ತು ಬರಿಗಾಲಲಿ ನಡೆದ ರಘುರಾಮವಿಠಲನ5
--------------
ರಘುರಾಮವಿಠಲದಾಸರು
ಎಂಥಾ ಬಾಲಕನಿವನು ಎಷ್ಟೆಂದ್ಹೇಳಲಿ ನಾನು ಪಂಥಗಾರಿಕೆಯಂಗ ಪರಮ ಪುರುಷರಂಗ ಅಂತವ ತಿಳಿಗುಡನು ಗೋಪೆಮ್ಮಾ ಪ ನೋಟಾವೇಟದಿ ನಲುವಾ ನಡೆಯಾಲೊಲ್ಲದೆ ನಿಲುವಾ ಸ್ಫೋಟ ಹೃದಯವಾಗುವ ಪರಿಯಂಜಿಸುವ ಮಗು ನೀಟ ಘಾತಪಾತಕನಮ್ಮಾಗೋಪೆಮ್ಮ ನಿತ್ಯ ಬೆಣ್ಣೆಯ ಸವಿದು ಕಾಟಕಾರವೆ ಭಂಡಾ ತುರುಗಾವರೋಳು ಪುಂಡಾ ಆಟಕೆ ಗುಣವೇನ ಗೋಪೆಮ್ಮಾ 1 ನಯ ಮಾತಿಲಿ ಬರುವಾ ನೋಡಲು ಕಠಿಣಿರುವಾ ತಾಯಡಬಲ ನೋಡಾ ತರುಣಿಯರನ ಬಿಡಾ ಬಾಯಾದೆರೆದು ಬೇಡವಾ ಗೋಪೆಮ್ಮಾ ತಾಯಿಂಗಂಜನು ನಿನಗೆ ತಡೆದುರೋಗವ ಹೊರಗೆ ಮಾಯಾಗಾರನೆ ಗೋವಾ ಮತಿಯ ಕಡುವನಿವ ಸಾಯಸ ಕಲಿಯಮ್ಮ ಗೋಪೆಮ್ಮಾ 2 ಇದರೇರಿ ಚಿನ್ನವರಾ ಇಕ್ಕಿ ಅಂಗವ ತೋರಾ ಕಾಲ ಕೆದರಿ ಪೊರೆವ ಬಾಲಾ ಅದ್ಭುತ ವಿಕ್ರಮನೆ ಗೋಪೆಮ್ಮಾ ಉದ ಧಿಗಂಜನು ಧುಮುಕಿ ಉಲುವಾ ಬುದ್ದಿಯ ಸೊಕಿ ಮುದದಿ ವಾಜಿರಿಸೇ ಮಹಿಪತಿಸುತ ಪ್ರಭು ಬುಧ ಜನರೊಲುವಂತೆ ಗೋಪೆಮ್ಮಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಮಹಿಮನಿವನೆ ಗೋಪಾಲಕೃಷ್ಣ ಎಂಥ ಮಹಿಮನಿವನೆ ಪ. ಎಂಥಾ ಮಹಿಮನಿವನಂತ ಕಂಡವರಿಲ್ಲ ಕಂತು ಜನಕ ಸರ್ವರಂತರಂಗದೊಳಿಪ್ಪ ಅ.ಪ. ಕರಚರಣಗಳಿಲ್ಲದೆ ಇದ್ದರು | ಮುದುರಿ ಘುರುಘುರುಗುಟ್ಟುತಿಹುದೆ ವರಕಂಬೋದ್ಭವ ವಟು ಪರಿಶು | ಧರಿಸಿರುವನ ಚರಿಸಿ ಮಾವನ ಕೊಂದ ನಿರ್ವಾಣ ಹಯವೇರಿ ಶರಧಿಯೊಳಾಡಿ ಗಿರಿಯಡಿ ಓಡಿ ಧರೆಯನು ತೋಡಿ ಕರಳೀಡ್ಯಾಡಿ ಕರವ ನೀಡಿ ಭಾರ್ಗವ ದಶರಥ ಸುತ ಅಂಬರ ತೊರೆದ ರಾವುತ 1 ಮಂದರ | ಬೆಂಡಂತೆ ಧರಿಸಿ ವನಿತೆಯ ತಂದನೀ ಧೀರ ಘನ‌ಘರ್ಜನೆಯು ಗಂಗಾಜನಕ | ಜಮದಗ್ನಿಸುತ ವನಚಾರಿ ತುರುಪಾಲ ವನಿತೆರೊಂಚಕ ಕಲ್ಕಿ ಜನಿಸಿ ಜಲದಿ ಬೆನ್ನಲಿ ಗಿರಿಕೋರೆ ಘನ ಹೊಸಲಾಸನ ತಿರಿದನುಜನ ತರಿದ ಮಾತೆ ಕಪಿವೆರಸಿ ವೃಂದಾವನ ಚರಿಸಿ ದಿಗಂಬರ ಹರಿ ಏರಿದನೆ 2 ಸುತನಿಗಾಗಮವಿತ್ತನೆ | ಕ್ಷಿತಿಧರಧಾರಿ ಸುತನ ಮೂಗಿನೊಳ್ ಬಂದನೆ ಸುತವಾಕ್ಯ ಸತ್ಯವೆನಿಸಿ ಅತಿ ಕುಬ್ಜ ಕ್ಷಿತಿಯನಿತ್ತು ವ್ರತಧಾರಿ ವಸನ ಚೋರ ವ್ರತಭಂಗ ಏರಿ ತುರಂಗ ಸತಿಯನೆ ಪೊರೆದ ಸತಿಯಂತಾದ ಸತಿಯಳ ಸಂಗ ಸತಿಗರಿದಂಗ ಸತಿಯ ಬೇಡಿ ನೀಡಿ ಸತಿಯ ಕೂಡಿ ಜಾರ ಸತಿ ಹೆಗಲೇರಿದ 3 ವಾಸ ಜಲದಿ ಮೈ ಚಿಪ್ಪು | ಯಜ್ಞ ಸ್ವರೂಪ ಮಾನವ ಮೃಗರೂಪು ಆಸೆಬಡಕ ಮಾತೆ ದ್ವೇಷ ವನದಿ ವಾಸ ಪೋಷ ಪಾಂಡವ ಜಿನ ಮೋಸ ವಾಜಿ ಮೇಲ್ವಾಸ ನಾಸಿಕ ಶೃಂಗ ನಗಪೋತ್ತಂಗÀ ಮಾನವ ಸಿಂಗ ನೃಪರ ದ್ವೇಷ ಪೋಷಿ ಯಜ್ಞವೃಂದ ವಾಸಿ ಘಾಸಿವ್ರತ ಕಲಿಮುಖ ದ್ವೇಷಿ 4 ಅಮೃತ ಭೂಸತಿಯ ಪೊರೆದು ಪಾಪಿ ಕರುಳ್ಬಗೆದ ಜಲಪಿತ ಭೂಪರ ಕಾಡಿ ರಘುಭೂಪ ಸೋದರತಾಪ ಗೋಪ್ಯಕಲ್ಯಂತಕಾಲ ಗೋಪಾಲಕೃಷ್ಣವಿಠ್ಠಲ ಆಪಜವಾಸ ಆ ಪೃಥ್ವೀಶ ಆ ಪುತ್ರಪೋಷ ಆ ಪದ ಸರಿತ ಕೋಪಿ ಲಂಕೆ ಪುರತಾಪಿ ಗೋಪಿಕಾ ವ್ಯಾಪಿ ಮಾನಹೀನ ಘೋಟಕವಹನ 5
--------------
ಅಂಬಾಬಾಯಿ
ಎಂಥಾದರು ಬಂದರು ಚಿಂತೇ ಇಲ್ಲಾ ಪಂಥವು ಸರಿಯಲ್ಲಾ ಪ ಚಿಂತೆ ಎಂದೆಂಬುದೆ ಮನಸಿನ ರೋಗಾ ಸಂತಸ ಸಂತ್ಯಾಗ ಎಂಥೆಂಥ ಮಿಂಚುವ ದೇಹವಿದೀಗ ಕೃಂತನ ವಿಧಿಭಾಗ ಎಂತಲ್ಲಿ ನೆಲೆಸಿ ಹವಣಿತ ರೋಗಾ ಸಂತತ ಜಡ ಬೀಗಾ ನೀ ನೆನ್ನೊ 1 ಹಿತಾಹಿತವೆಂದಿಗೂ ಕೈಶೇರಿಲ್ಲಾ ಕೃತಿಪತಿ ತಾ ಬಲ್ಲಾ ಮತಿಗೆಟ್ಟು ಸತಿಯೇ ಗತಿಯೆಂದೆಲ್ಲಾ ಸುತಮೋಹ ಬಿಡಲಿಲ್ಲಾ ಮಿತಿಮೀರಿ ಪಣ ಭಂಡಾರದೊಳೆಲ್ಲಾ ರತಸುಖರೆ ಡಿಲ್ಲಾ ಕೇಸರಿ ಸುಖಗುರಿ ಮುರಿಯಲು ಧೃತಿಗೆಟ್ಟು ಬಳಲುವ ಸಂಗತಲ್ಯಾರು ತಿಳಿಯೋ 2 ನೀರಿನ ಬುದ್ಬುದ ಪರಿಸಂಸಾರಾ ದುಃಖದ ಆಗಾರಾ ಶ್ರೀರಾಮ ಮಂತ್ರದ ಸಾರಾ ನಿಜ ಸೌಖ್ಯದ ದ್ವಾರಾ ಶೇರಿ ಹಣ ಹೊನ್ನು ಹೆಂಣ ವಿಚಾರಾ ಗಂಜಾಸಮ ತಾರಾ ನಿಜಸುಖವನು ಪಡೆಯೇ 3
--------------
ನರಸಿಂಹವಿಠಲರು
ಎಂಥಾದೋ ಶ್ರೀ ವೈಕುಂಠವೆಂಥಾದೋ ಪ ಕಂತುಪಿತನ ದೇಹಕಿರಣ ಅದ ರಂತರಂಗ ಹೇಮಾಭರಣ ಕಾಂತಿ ಗಂತು ನಾಚಿದ ರವಿ ಅರುಣ ಅಹಾ ನಂತ ಕಾಲದಲ್ಲಿ ಸಂತತ ತುತಿಪರ್ಗೆ ಪ್ರಾಂತಕ್ಕೆ ನಾಲ್ಕು ನಿಶ್ಚಿಂತ ಮುಕ್ತಿಯ ಸ್ಥಾನ 1 ಪಾಲಸಾಗರ ಮಧ್ಯೆ ಕೂಟ ಒಳ ಗೇಳು ಸುತ್ತಿಸಾಗರ ದಾಟಿ ತಾಳ ಮೇಳದವರು ಮೂರುಕೋಟಿ ನಾಮ ಪೇಳ್ವ ಗಾಯಕರ ಗಲಾಟೆ ಆಹ ಶೀಲ ಮುನಿಗಳು ದೇವ ಗಂಧರ್ವರು ಜೀವನ್ಮುಕ್ತರುಗಳು ಸೇರಿಪ್ಪ ಹರಿಪುರ2 ಹೇಮ ಪ್ರಾಕಾರದ ಪುರವು ಅಲ್ಲಿ ಆ ಮಹ ಬೀದಿ ಶೃಂಗಾರವು ನೋಡೆ ಕಾಮಧೇನು ಕಲ್ಪತರುವು ಬಲು ರಮಣೀಯವಾದ ಇರವು ಆಹಾ ಶ್ರೀ ಮೂರುತಿಯೊಂದು ವೇದಾಂತಶ್ರುತಿ ಸಾರೆ ಆ ಮಹಮುಕ್ತರು ಸೇರಿಹ ಮಂದಿರ 3 ಸುತ್ತಲು ಸನಕಾದಿ ಮುನಿಯ ದಿವ್ಯ ನರ್ತನ ಗಾಯನ ಧ್ವನಿಯು ಪುಷ್ಟ ವೃಷ್ಟಿ ಚಂಪಕ ಜಾಜಿ ಹನಿಯು ಅಲ್ಲಿ ಅಷ್ಟಮ ಸ್ತ್ರೀಯರ ಮನೆಯು ಆಹಾ ಪಾದ ಸಂ ಪತ್ತಿಗೀ ಶಯನ ಸರ್ವೋತ್ತಮನ ಗೃಹ 4 ಥಳಥಳಿಸುವ ದಿವ್ಯದ್ವಾರ ಅಲ್ಲಿ ಹೊಳೆವಂಥ ರಂಗಮಂದಿರ ಮುತ್ತಿ ಭಾರ ಹೇಮ ತುಳಸಿ ಸರದ ಶೃಂಗಾರ ಆಹಾ ಹೊಳೆವ ಮಾಣಿಕದ ಮಂಟಪ ಮಧ್ಯದೊಳ್ಮೆರವ ಚೆಲುವ ಜಗನ್ನಾಥ ವಿಠಲನ ನಿಜಸ್ಥಾನ 5
--------------
ಜಗನ್ನಾಥದಾಸರು
ಎಂಥಾದ್ದೊ ಹರಿಯ ಕರುಣ ಪ ಎಂಥಾದ್ದೊ ಹರಿಯ ಮಹಿಮೆಎಂಥಾದ್ದೆನ್ನ ಬಾರದು ಗಡ ಅ.ಪ ಅಂತ್ಯವಿಲ್ಲದ ನಿಜಾನಂದ ತೃಪ್ತನು ಗಡಸಂತರೊಕ್ಕುಡಿತೆಯ ಜಲಕೆ ಹಿಗ್ಗುವ ಗಡ 1 ಸನಕಾದಿ ಮುನಿಮನಕೆ ಸಿಲುಕದಗಮ್ಯನು ಗಡನೆನೆವರ ಮನದಣಿಯೆ ತನ್ನ ತೋರುವ ಗಡ2 ಶ್ರ್ರುತಿತತಿಗೆ ಮೈದೋರದತಿ ಮಹಿಮನು ಗಡಮತಿಯುಳ್ಳವನ ಭಕ್ತಿ ಸ್ತುತಿಗೆ ಹಿಗ್ಗುವ ಗಡ3 ಲೋಕ ಪತಿಗಳಿಗೆಲ್ಲ ಒಡೆಯ ತಾನೆ ಗಡಬಾಕುಳಿಕನಾಗಿ ಭಕುತರ ವಶದಲ್ಲಿಪ್ಪ ಗಡ 4 ಆರರೊಳು ಸಡ್ಡೆಯಿಲ್ಲದ ನಿಸ್ಸಂಗನು ಗಡಸಾರಿದವರಿಗೆ ತಂದೆತಾಯಿ ಸಿರಿಕೃಷ್ಣ ಗಡ 5
--------------
ವ್ಯಾಸರಾಯರು
ಎಂದಿಗಾದರು ಒಮ್ಮೆ ಕೊಡು ಕಂಡ್ಯ ಹರಿಯೆ ಪ ಬೃಂದಾವನಪತಿ ದಯದಿಂದಲೆನಗೆ ಅ ಫಲಭಾರಗಳಿಂದ ತಲೆವಾಗಿ ಶುಕಪಿಕಕಲಕಲದೊಳು ನಿನ್ನ ತುತಿಸಿ ತುಂಬೆಗಳಗಳರವದಿಂ ಪಾಡಿ ಅಪ್ಸರರಂತೆ ಪೂ-ಮಳೆಯಗರೆವ ತರುಲತೆಯ ಜನ್ಮವನು1 ಕೊಳಲ ಶೃತಿಯ ಕೇಳಿ ಸುಖದ ಸಂಭ್ರಮದಲಿಹೊಲಬು ತಪ್ಪಿ ತಾವು ಅರೆಗಣ್ಣು ಮುಚ್ಚಿನಳಿನಾಸನದಿ ಮೌನಗೊಂಡು ಪರಮ ಹಂಸಕುಲದಂತೆ ಧ್ಯಾನಿಪ ಹಂಸ ಜನ್ಮವನು 2 ಚಕೋರ ಜನ್ಮವನು3 ಭಾವಜನೈಯನ ಕಡುಚಲ್ವಿಕೆಯನ್ನುಭಾವಿಸಿ ನಿಡುಗಂಗಳಿಂದ ದಣಿದುಂಡುಗೋವಳೇರಂತೆ ಮನೆ ಮಕ್ಕಳ ಹಿಂಗಿ ನಿನ್ನ ಆವಾಗ ಈಕ್ಷಿಸುವ ಗೋವ್ಗಳ ಜನ್ಮವನ್ನು 4 ತೋಳದಂಡಿಗೆಮಾಡಿ ಹೀಲಿಯ ಚಾಮರವಮೇಲೆ ಎತ್ತಿದ ತಾವರೆ ಗೊಂಡೆಯಿಂದಓಲೈಸಿ ನಿನ್ನನು ಒಲಿಸಿ ಮುಕುತರಂತೆನಾಲೋಕ್ಯ ಸುಖವುಂಬ ಗೋಪರ ಜನ್ಮವನು5 ಕೊಳಲ ಧ್ವನಿಯ ಕೇಳಿ ಎದುರುಗೊಳ್ಳುತ ನಿನ್ನನಳಿನನಾಭಾ ಅವಧಾರೆಂದು ಪೊಗಳೇತಳಿಗೆ ಆರತಿಯೆತ್ತಿ ಲಕ್ಷ್ಮಿಯಂತೆ ನಿನ್ನಚೆಲುವ ಸವಿವಂಥ ಗೋಪೇರ ಜನ್ಮವನು 6 ಇಂದಿರೆಯರಸ ಬ್ರಹ್ಮೇಂದ್ರಾದಿ ವಂದಿತಎಂದು ಮೊಸರ ಕಡೆಯುತ್ತಲಿ ನಿನ್ನಅಂದಿನ ಶ್ರುತಿಯೋ ಉಪ್ಪವಡಿಪ ವ್ರಜ-ದಿಂದುಮುಖಿಯರ ಜನ್ಮವ ಸಿರಿಕೃಷ್ಣ7
--------------
ವ್ಯಾಸರಾಯರು
ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ ಪ ಮುಂದರಿತು ಶ್ರೀಹರಿಯ ಭಜಿಸುವುದು ಲೇಸುಅ ಎಲುವುಗಳು ತೊಲೆಜಂತೆ ನರಗಳವು ಬಿಗಿದಂತೆಬಲಿದ ಚರ್ಮವು ಮೇಲು ಹೊದಿಕೆಯಂತೆಗಳಗಳನೆ ನುಡಿವ ನಾಲಗೆ ಗಂಟೆಯುಲಿಯಂತೆಕೆಲಕಾಲಕೀ ಕೊಂಪೆ ಕಡೆಗಾಹುದಂತೆ 1 ಕಂಡಿಗಳು ಒಂಬತ್ತು ಕಳಬಂಟರೈವರುಅಂಡಲೆವುದೊತ್ತಿನಲಿ ಷಡುವರ್ಗವುಮಂಡಲಕೆ ಹೊಸಪರಿಯ ಮನ್ಮಥನ ಠಾಣ್ಯವಿದುಮಂಡೆ ಹೋಗುವುದನ್ನು ಅರಿಯದೀ ಕೊಂಪೆ2 ಕೊಂಪೆಯಲಿ ಶೃಂಗಾರ ಕೊಂಡಾಡಲಳವಲ್ಲಕೆಂಪು ಬಣ್ಣಗಳಿಂದ ಚೆನ್ನಾಯಿತುಇಂಪಿನಲಿ ಕಾಗಿನೆಲೆಯಾದಿಕೇಶವನನ್ನುಸೊಂಪಿನಲಿ ನೆನೆನೆನೆದು ಸುಖಿಯಾಗು ಮನುಜಾ 3
--------------
ಕನಕದಾಸ
ಎಂದು ಕಾಂಬುವೆ ನಿನ್ನ ಚರಣ ನಾರಾಯಣತಂದು ತೋರಯ್ಯ ನಾ ಬಂದೆನು ಶರಣ ಪ ನಿತ್ಯ ಒತ್ತುವ ಚರಣತೋರ ಗಂಗೆಗೆ ಜನ್ಮ ಕೊಟ್ಟಂಥ ಚರಣಮೂರು ಲೋಕವ ಹಿಡಿದ ಚರಣನಾರಿ ಅಹಲ್ಯೆಯ ಪೊರೆದ ಚರಣ 1 ಪ್ರ್ರಳಯ ಕಾಲದಿ ನೆಕ್ಕುತಿಹ ಚಿಕ್ಕ ಚರಣಇಳೆಗೆ ಸುಯೋಧನನಿಳಿಸಿದ ಚರಣಎಳೆಯ ಧ್ರುವ ತಾ ಕಂಡ ಚರಣತುಳಸಿ ವನದಲಿ ಕುಣಿದ ಚರಣಸುಳಿದು ಭಕ್ತರ ಪೊರೆವ ಚರಣ 2 ಅಖಿಲಾಂಡದ ಸೃಷ್ಟಿ ಸ್ಥಿತಿ ಲಯ ಕಾರಣಭಕುತರು ಕರೆಯಲೋಡುವ ದಿವ್ಯ ಚರಣಶಕಟ ದೈತ್ಯನ ಒದೆದ ಚರಣಯುಕುತಿ ಶಕುತಿಗೆ ಬರದ ಚರಣಯುಕುತಿ ಪಥವನು ತೋರ್ಪ ಚರಣಪ್ರಖರ ಗದುಗಿನ ವೀರನಾರಾಯಣ 3
--------------
ವೀರನಾರಾಯಣ
ಎಂದು ಕಾಂಬೆನು ಪಾಂಡುರಂಗ ಮೂರುತಿಯಾ ಇಂದು ಭಾಗನಿವಾಸ ನರನ ಸಾರಥಿಯ ಪ ಚಾರು ಚರಣಾಂಗುಲಿ ನಖರ ತರುಣೀಂದುಚ್ಛವಿ ತಿರಸ್ಕರಿಸುವ ಪ್ರಖರ ಕಿರುಗೆಜ್ಜೆ ಕಡಗ ನೂಪುರ ಪೆಂಡೆ ಶಫರ ತೆರಜಾನು ಜಂಘೆ ಭಾಸ್ಕರ ರತ್ನ ಮುಕುರ1 ರಂಭಾ ಪೋಲುವ ಊರು ಪೊಂಬಣ್ಣಾಂಬರವ ಕುಂಭೀ ಮಸ್ತಕದೊಲ್ ನಿತಂಬದಿ ಪೊಳೆವ ಕಂಬು ಮೇಖಳಕಂಜ ಗಂಭೀರ ನಾಭೀ ವಿಧಿ ಶಂಭು ಪೂಜಿತನ 2 ಲವಕುಕ್ಷಿತ್ರವಳಿ ಬಾರ್ಗವಿ ವಕ್ಷ ಉರವು ಕೌಸ್ತುಭ ವೈಜಯಂತಿಯ ಸುವಿಶಾಲ ವಕ್ಷದೊಳ್ ವಿವಿಧ ಹಾರಗಳು ನವನೀತ ಚೋರ ಶ್ರೀ ಪವಮಾನಾರ್ಚಿತನ 3 ಪದಕ ಸರಿಗೆಯ ಜಾಂಬೂನದ ಕಂಬುಕಂಠ ರದನೀಕರ ಬಾಹು ಚದುರ ಭುಜಕೀರ್ತಿ ಬದರ ಸಂಕಾಶಾ ಅಂಗದ ರತ್ನ ಕಟಕಾ ಪದಮಾರುಣ ಕರಯುಗ್ಮ ಕಟಿಯಲ್ಲಿಟ್ಟವನಾ4 ವಿಧುಬಿಂಬೋಪಮ ಚಲ್ವವದನ ಕೆಂದುಟಿಯಾ ಬಿದುರಾಭಾದಶನಾಲಿಂಗದನೊಳ್ ಕಿರುನಗೆಯಾ ಕದಪು ಕನ್ನಡಿ ನಾಸಾ ತುದಿ ಚಂಪಕ ತೆನೆಯಾ ಉದಕೇಜಾಯತ ನೇತ್ರಯದುವಂಶೋದ್ಭವನಾ 5 ಕುಂಡಲ ಕರ್ಣ ಸುಲಲಿತ ಭ್ರೂಯುಗಳ ಪೊಳೆವ ಬಾಲ ಶಶಾಂಕ ತಿಲಕಾಂಕಿತ ಫಾಲ ಅಳಿಬಾಲವೆನಿಪ ಕುಂತಳ ರತ್ನ ಚಕಿತ ಕಲಧೌತ ಮಕುಟ ದಿಗ್ವಲಯ ಬೆಳಗುವನ 6 ಮಾನವ ಹರಿಯಾ ವಟುಭಾರ್ಗವ ಕಾಕುಸ್ಥ ಶಠ ಕಂಸದ್ವಿಷನ ನಿಟೆಲಾಂಬಕ ಸಹಾಯ ಖಳಕಟಕಾರಿ ಭೀಮಾ ತಟವಾಸ ಜಗನ್ನಾಥವಿಠಲ ಮೂರುತಿಯ 7
--------------
ಜಗನ್ನಾಥದಾಸರು
ಎಂದು ಕಾಹು(ಣು?)ವೆ ಎನ್ನ ಮನೋಹರ ಎಂದಿ[ಗೆಕಾ] ಹುದಿನ್ನೆಂದಿಗೆ ಬಂದೆ ಭವಭವಭವವೀ ದುಃಖದಿ ನೊಂದೆನೊ ರಂಗನಂಘ್ರಿ ಚರಣವ ಪ. ಮಂಗಳಾಂಗನ ಮಾಧವನ ಕೋಟಿ ಅಂಗಜಜನಕವಿಲಾಸನ ಗಂಗಾಜನಕನ ಗರುಡವಾಹನ ತುಂಗವಿಕ್ರಮನಂಘ್ರಿ ಚರಣವ 1 ಕಂತುಜನಕನ ಕಮಲನಾಭನ ಸಂತತದ ಸರ್ವೇಶನ ಯಂತ್ರವಾಹಕ ಎನ್ನ ಒಡೆಯನ ಚಿಂತಾಯ[ಕ]ನ ಶ್ರೀ ಚೆಲುವಚರಣವÀ 2 ಪರಮಪುರುಷನ ಪುಣ್ಯನಾಮನ ಶರಣುಜನಸರ್ವೇಶನ ಕರುಣಿ ಹೆಳವನಕಟ್ಟೆರಂಗನ ಚರಣ[ವ]---------- 3
--------------
ಹೆಳವನಕಟ್ಟೆ ಗಿರಿಯಮ್ಮ