ಒಟ್ಟು 910 ಕಡೆಗಳಲ್ಲಿ , 93 ದಾಸರು , 733 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಗುವು ಬರುತಿದೆ ಎನಗೆ ನಗುವು ಬರುತಿದೆಬಿಗಿದು ಶ್ವಾಸ ಮೂಗ ಹಿಡಿದು ನಿಟಿಲ ನೋಡುವವರ ಕಂಡು ಪ ಹಡೆದ ದೈವ ಹತ್ತಿರಿರಲು ನೋಡಿದರು ನೋಡದಂತೆಮೃಡನು ತಾನೆ ಇರಲು ಮೂಗ ಕೊನೆಯ ನೋಡುವವರ ಕಂಡು 1 ಹೊಳೆಯುತಿಹುದು ಪರಬ್ರಹ್ಮ ನಾನಾ ರೂಪಗಳನು ತಾಳಿತಿಳಿಯದಲೆ ತನ್ನನೀಗ ಕಣ್ಣು ಮುಚ್ಚುವವರ ಕಂಡು2 ಮನಕೆ ನಿಲುಕದವನು ತಾನೆ ಮಂಗಳವಾಗಿ ಬೆಳಗುತಿರಲುಮನದಿ ಪೂಜೆಯನ್ನು ಮಾಡ್ವ ಮಂದಮತಿಗಳನ್ನು ಕಂಡು3 ತಾನು ದೇವ ನಿಜವಿದಿರಲು ತಂದು ಪ್ರತಿಮೆ ಇಟ್ಟುಕೊಂಡುಏನೋ ಮಂತ್ರ ಒದರುತಿರುವ ಮನುಜರನ್ನು ಕಂಡು ನನಗೆ4 ಯೋಗ ಮಾಡಿಕೊಂಬುದೇನು ಯೋಗಮಾಡುವವನೆ ಇರಲುಯೋಗಿಯಾದ ಚಿದಾನಂದ ತಾನೆ ಸಾಕ್ಷಿಯಾಗಿ ಇರಲು5
--------------
ಚಿದಾನಂದ ಅವಧೂತರು
ನಡತೆ ನನ್ನದು ಕೇಳಿರಯ್ಯ ಪ ಒಡೆಯ ವಲಿವ ಹ್ಯಾಗೆ ಪೇಳಿರಯ್ಯ ಅ.ಪ. ಒಡವೆ ತರದಿಹನೆಂದು ಕೋಪ ಮಡದಿನಟಿಸುತ ಹೆದರೀ ಒಡನೆ ಸ್ನಾನವ ಮಾಡಿತಂದು ಕೊಡುವ ಪ್ರಸನ್ನ ಗೈಯ್ಯಲವಳಾ ಆಹಾ ಒಡಿಯ ದೇವಗೆ ಹರಕೆ ನಡಿಸಬೇಕೆನ್ನಲು ಭೂರಿ ನೋಡುವೆನೆಂತೆಂಬೆ 1 ಒರಿಸೆ ಸಾಲಿಗ್ರಾಮ ಗೃಹದಿ ಅರಿವೆ ಹರಕು ಸಹ ಇಲ್ಲವೆನ್ನೇ ತರುವೆನೆನುತ ತಿಂಗಳಾರು ಕಾಲ ಬರಿದೇ ಆಹಾ ತರಲು ಸೂಳೆಗೆ ಸೀರೆ ಭರದಿ ಕೂಡಿಯೆ ಅವಳ ಪುರವ ಪೇಟೆಪೇಟೆಗಳೆಲ್ಲ ತಿರುಗಿ ತಿರುಗುವೆ ಮುದದೀ 2 ಹರಿಗೆ ದೀಪವ ಹಚ್ಚೆ ತೈಲ ಇರದು ತಾರೆನೆ ಹಡೆದ ತಾಯಿ ಬರಲಿ ಸಂಬಳ ತರುವೆ ಕೊಡುವಿ ಉರಿವ ಕಾಟವನೆಂದು ನುಡಿವೆ ಆಹಾ ಪರಮ ಸಂಭ್ರಮದಿಮದ ತಿಂಡಿ ಅಂಗಡಿಯಲಿ ಹರಕು ಜಿಹ್ವೆಂiÀi ಚಪಲ ಪೂರ್ಣಮಾಡುವೆ ನಿರುತ 3 ವೃತ್ತಪತ್ರಿಕೆಯಲ್ಲಿ ಹೆಸರು ಎತ್ತಿಹಾಕುವರೆನೆ ಒಡನೆ ವಿತ್ತದಾನವಗೈವೆ ಬರಿ ಉ- ನ್ಮತ್ತಕಾರ್ಯಕಾದರು ಸರಿಯೇ ಆಹಾ ಉತ್ತಮಭಕ್ತರು ಅರಸುತ್ತ ಬರ್ಪುದ ಕಂಡು ವತ್ತಿ ಬಾಗಿಲು ಕೊಂಡಿ ಸ್ವಸ್ಥವಿಲ್ಲೆಂಬೆ4 ಕಂಡು ಕರೆಯುತ ಭಾರಿ ಊಟ ತೊಂಡನಂದದಿ ನೀಡಿ ಮನದಿ ಉಂಡು ಹರುಷವ ನೆನೆವೆ ಧನ್ಯ\ ಆಹಾ ಕೆಂಡ ಬಿಸಿಲಲಿ ಬಡವ ಕಂಡು ಮಹಡಿಯ ಬರಲು ಪಿಂಡ ಪಿಡಿಯನು ಹಾಕೆ ತಂಡುಲವಿಲ್ಲೆಂಬೆ5 ದಾನಗೈದರು ಒಮ್ಮಿಂದೊಮ್ಮೆ ಮಾನಪಡೆಯಲು ಊರ ಒಳಗೆ ನಾನೆಂಬ ಹಂಕಾರ ಬಿಡದೆ ಶ್ರೀನಿಧಿ ಸ್ವಾಮಿತ್ವ ನೆನೆಯೆ ಆಹಾ ಸ್ವಾನುಭವ ಕಾಣದೆಲೆ ಜ್ಞಾನ ಭಾಸ್ಕರನಂತೆ ಪು- ರಾಣಪೇಳುತ ನನ್ನ ಸಮಾನ ವಿಲ್ಲಂತೆಂಬೆ6 ನೂರಿತ್ತು ಸಂಬಳ ಹಿಂದೆ ಮನದಿ ಊರಿತ್ತು ಹರಿಭಕ್ತಿ ಎಲ್ಲಿ ಈಗ ನೂರ್ಹತ್ತು ಕೊಟ್ಟರು ದೇವ ಬೆ- ನ್ಹತ್ತಿದೆ ತಾಪತ್ರಯ ಬಹಳ ಆಹಾ ಸಿರಿ ಕೃಷ್ಣವಿಠಲನೆ ದೃಷ್ಟಿ ವಾರುಗಾಣೆನು ಕಾಣೆನು ಸತ್ಯ ಪೊರೆಯೋ ಶರಣೆಂತೆಂಬೆ7
--------------
ಕೃಷ್ಣವಿಠಲದಾಸರು
ನಡೆದು ಬಾರಯ್ಯ ಕೃಷ್ಣ ನಡೆದು ಪ ಪಕ್ಷಿವಾಹನ ಪರಪೇಕ್ಷಾರಹಿತ ನಿನ್ನ ಕುಕ್ಷಿಯೊಳಗೆ ಜಗ ರಕ್ಷಿಸುವಾತನೆಂದು ವಕ್ಷಸ್ಥಳದಿ ಶ್ರೀಮಾ- ರೀಕ್ಷಕನುಳುಹಿದಂತಕ್ಷದಿ ನೋಡುತಧೋಕ್ಷಜ ಹರಿಯೆ 1 ಸತ್ಯವಂತನೆ ಕೇಳಸತ್ಯ ಅಜ್ಞಾನ ಭವ- ಕತ್ತಲೊಳಗೆ ಬಹಳ ಶತ್ರು ಸಮೂಹದಲ್ಲಿ ಸುತ್ತಿ ಬಳಲುವೆ ಕೇಳಾಪತ್ತು ಬಾಂಧವ ನಿನ್ನ ಚಿತ್ತಕ್ಕೆ ತಂದು ಸಮಸ್ತ ಸುರೇಶ ನಿನ್ನ ಕರಿ ಸರ್ವೋತ್ತಮ ಹರಿಯೆ 2 ಚಾರ ಮಾಡಿದರು ನಿನ್ನಾರು ತಿಳಿಯಲಿಲ್ಲೊ ಶೂರ ಸುತಗೆ ಸುಕುಮಾರನೆನಿಸಿದಂಥ ಅ- ಸಮೀರಜ ಭವ ಸುರ ನಾರದಪ್ರಿಯನೆ ಉದ್ಧಾರಮಾಡು ಎನ್ನನು 3 ಧ್ವಜ ವಜ್ರಾಂಕುಶ ಪಾದಭಜಕರೆನಿಸುವಂಥ ಸುಜನರ್ವಂದಿತನಾದ ಕುಜನ ಕುಠಾರಿಯೆ ನೀ ಅಜಮಿಳಗೊಲಿದಂಥಜಗಣೇಂದ್ರನ ಪ್ರಿಯ ನಿಜವಾಗಿ ನೋಡೆನ್ನ ರಜತಮ ಕಳೆಯುವ 4 ಕಡಲಶಯನನಾದ ಉಡುರಾಜ್ವದನ ಬಿಟ್ಟು ಭಿಡಿಯ ಭೀಮೇಶ ಕೃಷ್ಣ್ನೆನ್ನೊಡೆಯನೆನುತ ಬಂದ ಬಡವ ಸುದಾಮಗಿಟ್ಟಿ ಹಿಡಿ ಹಿಡೀ ಎಂದು ಭಾಗ್ಯ ತಡೆಯದೆ ನಾ ನಿನ್ನಡಿಗಳಿಗೆರಗುವೆ ಕೊಡು ಕೊಡು ವರಗಳ ಪೊಡವಿ ಪಾಲಿಪನೆ 5
--------------
ಹರಪನಹಳ್ಳಿಭೀಮವ್ವ
ನಂಬಿ ಕೆಟ್ಟವರಿಲ್ಲವೋ ರಾಯರ ಪಾದಾ ನಂಬದೆ ಕೆಡುವುರುಂಟೋ ಪ ನಂಬಿದ ಜನರಿಗೆ - ಬೆಂಬಲ ತಾನಾಗಿ ತುಂಬಿ ಕೊಡುವರನ್ನ ಅ.ಪ ಜಲಧರ ದ್ವಿಜವರಗೆ ತಾನೇ ಒಲಿದು ಸುಲಭದಿ ಮುಕುತಿಯನಿತ್ತ ಚಲುವ ಸುತನ ಪಡೆದಲಲನೆಗೆ ತ್ವರದಿಂದ ಪುಲಿನ ಗರ್ತದಿ ದಿವ್ಯ - ಜಲವ ನಿತ್ತವರನ್ನ 1 ಮೃತ್ಯುದೂತರು ತನ್ನನು ಪೊಂದಿದ ನಿಜ ಭೃತ್ಯನ ಕರೆದೊಯ್ಯಲು ಸತ್ತ ದ್ವಿಜನ ತಾನು - ಮತ್ತು ಧsರೆಗೆ ತಂದು ಮೃತ್ಯು ಬಿಡಿಸಿ ಸುಖ - ವಿತ್ತು ಪೊರೆದಿಹರನ್ನಾ 2 ಧಿಟ ಗುರುಜಗನ್ನಾಥ ವಿಠಲನೊಲಿಮೆ ಘಟನವಾದುದರಿಂದ ಘಟನಾಘಟನ ಕಾರ್ಯ - ಘಟನಾ ಮಾಡುವ ನಮ್ಮ ಪಟು ಗುರುವರ ಹೃ - ತ್ಪುಟ ದಿರುವೋರನ್ನ 3
--------------
ಗುರುಜಗನ್ನಾಥದಾಸರು
ನಂಬಿ ನೋಡಿರೋ ಅಂಬುಜಾಕ್ಷನ ಗುಂಭಗುರುತ ಹಂಬಲಿಸದೆ ಇಂಬುದೋರುದು ಧ್ರುವ ಬಿಡದೆ ವಂದಿಸಿ ನೋಡಿ ಸಂಧಿಸಿದರೆ ಭಿನ್ನವಿಲ್ಲದೆ ನೋಡಿ ಚೆನ್ನಾಗಿ ಕೂಡಿಕೊಂಬ ಧನ್ಯಗೈಸಿ ಜೀವ ಪ್ರಾಣ ಪಾವನ ಮಾಡುವ 1 ಕಂತು ಪಿತನ ನಿತ್ಯ ಯೋಗಕ್ಷೇಮ ತಾ ಹೊತ್ತು ನಡೆಸುವ ಹತ್ತಿಲೆ ತಂದು ತಪ್ಪದೆ ತುತ್ತು ಮಾಡ್ಯುಣಿಸುವ 2 ಸಣ್ಣ ದೊಡ್ಡದೆನ್ನ ಗುಡದೆ ಕಣ್ಣದೆರಿಸಿ ಚಿನ್ನುಮಯದ ಬಣ್ಣ ಭಾಸುತ ಪುಣ್ಯಮಹಿಮೆ ಕಾಣಿಸುವದು ವಾಸನೆ ಪೂರಿಸಿದ ವಾಸುದೇವ ನಿಶ್ಚಯ ಲೇಸಾಗಿ ಪಾಲಿಸುತಿಹ್ಯ ದಾಸ ಮಹಿಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮಗೆಲ್ಲಿ ಮನೆಗಳಯ್ಯ ನಾರಾಯಣ ಪ ಕಮಲ ಬ್ರಹ್ಮಾಂಡ ಕೋಟಿ ಒಡಲೊಳು ತಾಳ್ದಂಥರಮಾಧವ ನಿಮಗೆ ನೀರೊಳಗೆ ವಾಸವಾಯಿತುಅ ಜಲನಿಧಿಯನುತ್ತರಿಸಿ ಲಂಕೆಯನೈವುದಕೆಕುಲಗಿರಿಯ ಕಿತ್ತು ತಂದು ಸೇತುವೆ ಕಟ್ಟಿಸಲೆ ದೈತ್ಯನ ಕೊಂದು ಸೀತೆಯ ತಂದನಿಗೆ ಗಿರಿತಲೆಯ ಮೇಲೆ ಇಹ ಪ್ರಾಪ್ತಿಯಾಯಿತು 1 ಪೃಥ್ವಿಯ ತಲೆಯನು ಪರೆಮಾಡಿ ತಾಳಿದಳುತ್ಯಾನಮಮ್ಮನ ತಂದೆಯ ಮೆಲುವನಮೃತ್ಯುನಾಶಕನೆಂದು ಸುತ್ತಿದ್ದಾನೆಹುತ್ತಿನೊಳಗೆ ಇಹ ಪ್ರಾಪ್ತಿಯಾಯಿತು 2 ನಾಡದೇವತೆಗಳ ಸೆರೆಗಳ ಬಿಡಿಸಿಕ್ರೀಡೆಯಾಯಿತು ನಿಮ್ಮ ದಯದಿಂದಲಿರೂಢಿಯೊಳತಿ ಸೇವಕನಾದ ಗರುಡನಿಗೆಬೋಡು ಮರದ ಮೇಲೆ ಇಹ ಪ್ರಾಪ್ತಿಯಾಯಿತು 3 ಜಲನಿಧಿ ಸುತನ ಮೊಮ್ಮಗನ ಕೊಂದ ಶೂರ ನಕುಲ ಸಹದೇವ ಪಾಂಡವರೈವರುಲಲನೆ ದ್ರೌಪದಿಯೊಂದಿಗೆ ವನವಾಸ ಹೋಗಿಹೊಲದೊಳಗೆ ಇಹ ಪ್ರಾಪ್ತಿಯಾಯಿತು4 ಇಂಥಿಂಥವರಿಗೆಲ್ಲ ಮನೆಯಿಲ್ಲದಿರಲು ನ-ನ್ನಂಥವನಿಗಿನ್ನೆಲ್ಲಿ ಇರಲು ಸಾಧ್ಯಕಂತುಪಿತ ಕಾಗಿನೆಲೆಯಾದಿಕೇಶವನೆ ನಿ-ಶ್ಚಿಂತನಾಗಿ ನಿಮ್ಮ ಗುಡಿಯಲಿಪ್ಪೆನು 5
--------------
ಕನಕದಾಸ
ನಮಿಪೆ ನದಿ ದೇವತೆಗಳೇ | ನಿಮಗೆ ಪ. ನಮಿಪೆ ನದಿ ದೇವತೆಗಳೇ ನಿಮ್ಮ ಚರಣಕ್ಕೆ ಕಮನೀಯ ಗಾತ್ರೆಯರೆ ಕಂಜದಳ ನೇತ್ರೆಯರೆ ಸುಮನರ ವಂದಿತರೆ ಸುಗುಣ ಸಂಪನ್ನೆಯರೆ ಅಘ ಹರೆಯರೇ ಕಮಲನಾಭನ ಅಂಗೋಪಾಂಗ ಸಂಜಾತೆಯರೇ ಅಮರ ಭೂ ಪಾತಾಳ ಲೋಕ ಸಂಚರೆಯರೆ ನಮಿಸಿ ಸ್ನಾನವಗೈವ ನರರ ಪಾವನಗೊಳಿಪ ಅಮಿತ ಪಾವಿತ್ರತರರೇ 1 ಗಂಗೆ ಗೋದಾವರಿ ಯಮುನೆ ಸರಸ್ವತಿ ಸಿಂಧು ಮಂಗಳಾಂಗೆ ಕೃಷ್ಣ ಭೀಮರಥಿ ಪಲ್ಗುಣಿ ಸಂಗಮ ತ್ರೀವೇಣಿ ಸರಯು ಗಂಡಿಕಿ ಸೀತ ತುಂಗಭದ್ರಾ ನಾಮರೇ ಅಂಗ ಮಾಲಾಪಾರಿ ಕಾವೇರಿ ಕಪಿಲೆ ನರ ರಂಗ ಪಾವನ ಗೈವ ಪುಷ್ಕರಗಳಭಿಮಾನಿ ಅಂಗನೆಯರೆÀಲ್ಲರಿಗೆ ಅಭಿವಂದಿಸುವೆ ಅಘವ ಹಿಂಗಿಸುವುದೆಂದು ಮುದದೀ 2 ಬಂದು ಸ್ವಪ್ನದಿ ಮಾಘ ಶುದ್ಧ ನವಮೀ ಭರಣಿ ಸಂಯೋಗದ ಪರ್ವವೆಂದು ಭದ್ರೆಲಿ ಸ್ವಾನ ವಿಂದು ಗೈದೆವು ಎಂದು ಮುಂದೆ ಕುಳ್ಳಿರೆ ನಾನಾ ನಂದದಿಂ ಕಂಡು ನಿಮ್ಮಾ ಸುಂದರಿಯರೇ ನಿಮ್ಮ ಸಂದರ್ಶನದಿ ಫಲವು ಬಂದುದೆನಗೆಂದು ನಾನಂದ ವಚನಕೆ ನಲಿದು ಒಂದು ಅರಿಯದ ಎನಗೆ ತಂದು ಕೊಟ್ಟಿರಿ ಸ್ನಾನ ದಿಂದ ಬಹು ಪುಣ್ಯ ಫಲವಾ 3 ಹರದಿಯರೆ ಕಂಡೆ ನಿಮ್ಮರವಿಂದ ಮುಖ ಶುಭ್ರ ಸರಿತು ದೇವತೇಗಳೇ ಗುರು ಕೃಪೆಯ ಬಲದಿಂದ ಸಿರಿ ನದಿಗಳೇ ಜಗದಿ ಭರದಿಂದ ಪರಿದು ಸಾಗರವ ಕೂಡುವ ತ್ವರದಿ ಪರಿಪರಿಯ ಜಲ ಜಂತು ಸಂಸಾರಿ ಸಂಗೆಯರೆ ನರರು ಬಣ್ಣಿಸಲಳವೆ ಕರುಣಿ ನಿಮ್ಮಯ ಮಹಿಮೆ ಸಿರಿಕಾಂತ ಪ್ರಿಯಸುತೆಯರೇ 4 ಶ್ರೇಷ್ಟನದಿ ಅಭಿಮಾನಿ ಸತಿಯರೇ ಎನ್ನ ಅಘ ಸುಟ್ಟು ನಿರ್ಮಲ ಭಾವ ಕೊಟ್ಟು ಹೃತ್ಪದದಲಿ ವಿಷ್ಣು ಮೂರ್ತಿಯ ಕಾಂಬ ಶ್ರೇಷ್ಟ ಜ್ಞಾನದ ಮಾರ್ಗ ಕೊಟ್ಟು ಸದ್ಭಕ್ತಿ ಭರದೀ ಚಿಟ್ಟನೇ ಚೀರಿ ದಾಸ್ಯದ ಭಾವದಲಿ ಕುಣಿದು ಶ್ರೇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲನ ಪದ ಮುಟ್ಟುವೊ ವಿಜ್ಞಾನ ಪ್ರವಹ ರೂಪದಿ ವಲಿದುದಿಟ್ಟಿಯರ ಸಂತೈಸಿರಿ 5
--------------
ಅಂಬಾಬಾಯಿ
ನರಿತು ಅರ್ಚಿಸಲು ಲಿಂಗೈಕ್ಯಕೆ ಯೋಗ್ಯ ಪ ವೈರಿ ಸಂಸಾರ ಮಾಯಾ ವನಿತೆ ಇಕ್ಕಿದ ಮದ್ದು ದುಃಖದಾಕಾರಾ ಮನವೆ ಶುದ್ಧಾತ್ಮವಿಚಾರಾ ನೀನು ನೆನೆದು ಮರೆಯದಿರು ಗುರು ಉಪಕಾರಾ 1 ನಗಿಸಿ ಅಳಿಸುವುದು ಕುಂದು ಭಕ್ತ ರಘವ ನಿವಾರಿಸಿ ಸಲಹಬೇಕೆಂದು ಮೃಗಧರ ರೂಪಿಲಿ ಬಂದು ಸ್ವಾಮಿ ಸೊಗಸಾಗಿ ಶ್ರೀ ಗುರುಚಿತ್ತಕೆ ತಂದು 2 ಜೋಡಿಲ್ಲದೈಶ್ವರ್ಯದಿಂದಾ ಹೋ ಗಾಡಿಸೋ ಘೋರಸಂಸಾರದ ಬಂಧಾ ನೋಡೋ ನಿತ್ಯಾತ್ಮನ ಚಂದಾ ನಲಿ ದಾಡೋ ಎನ್ನನು ಗುರು ವಿಮಲಾನಂದಾ 3
--------------
ಭಟಕಳ ಅಪ್ಪಯ್ಯ
ನವನೀತ ಜೋರನ ಅವನ ಕಂಡರದೇಳಿ ಹವಣಿಸಿ ಹಿಡಿದುಕೊಂಬಾ ಧ್ರುವ ನಾಕು ಬೀದಿಯೊಳಗೆ ಸಾಕು ಸಾಕು ಮಾಡಿದ ಸೋಂಕದೆ ಕೈಯ್ಯಗೊಡಾ ಬೇಕೆಂದಾರುಮಂದಿಗೆ 1 ಹದಿನೆಂಟು ಸಂಧಿಯೂಳು ಶೋಧಿಸಿನೋಡಿದರೆ ಮದನ ಮೋಹನ ನೋಡಿ 2 ತಾನೆ ಸಿಕ್ಕುವ್ಹಾಗೊಂದು ಮನಗೂಡಬೇಕು ತಂದು ದೀನ ಮಹಿಪತಿ ಸ್ವಾಮಿ ಅನಕಾ ದೋರತಾ ಬಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನಾಡ ದೈವಗಳ ಪೂಜೆಯನು ಮಾಡಿದರೆ | ಕೇಡಲ್ಲದೆ ಮತ್ತೆ ಕೈವಲ್ಯವುಂಟೇ ಪ ಕೊಳಚಿ ನೀರನು ದಾಟಲರಿಯದ ಮನುಜಗೆ ನಿಲವುದ್ದ ದ್ರವ್ಯ ಕೊಡುವೆ ಎನ್ನ ನಾ- | ಜಲನಿಧಿಯ ಉತ್ತರಿಸಿಕೊಂಡು ಎಂದರೆ ಅವನು | ಅಳಿಯದಂತೆ ದಡಕೆ ತರಬಲ್ಲನೇ 1 ಕತ್ತಲೆಗಂಜುವನ ಕರೆತಂದು ಶೃಂಗರಿಸಿ | ಉತ್ತಮದ ವಾಜಿವಾಹನವ ಮಾಡಿ || ಕತ್ತಿಯನು ಕರದಲ್ಲಿ ಕೊಟ್ಟು ರಿಪುಪರಿವಾರ- | ದತ್ತ ಒಂದಡಿಯಿಟ್ಟು ಬರಬಲ್ಲ್ಲನೇ 2 ತನಗೆ ಬಂದಾವಸ್ತು ಪರಿಹರಿಸಿಕೊಳ್ಳದೆ ಪರ- | ಮನ ವಿಡಿದು ಭಜಿಸಿದರೆ ಏನಾಗದೊ || ಬಿನಗು ದೈವರಗಂಡ ಶ್ರೀ ವಿಜಯವಿಠ್ಠಲನ | ವನಜಪದ ನೆನೆದರೆ ಮುಕುತಿಯುಂಟು 5
--------------
ವಿಜಯದಾಸ
ನಾನೀಯದಿದ್ದರೆ ನೀನೇನನೀವೆ ಪ ನಾನು ಎಂಬುದು ಮಾತ್ರ ನಾ ನಿನಗಿತ್ತರೆ ಏನನೀಯುವೆ ರಂಗ ದೀನದಯಾಳು ಅ.ಪ ಅವಲಕ್ಕಿಯನು ತಂದವಗೆ ಭಾಗ್ಯವನಿತ್ತೆ ನವಫಲವನಿತ್ತವಳಿಗೆ ಒಲಿದೆ ನವನೀತವಿತ್ತರ್ಗೆ ಸುವಿಲಾಸಗಳನಿತ್ತೆ ಭುವಿಯೆಲ್ಲವಿತ್ತಂಥವನ ಬಾಗಿಲಕಾಯ್ದೆ 1 ಗಜರಾಜನಂದು ಪಂಕಜವೊಂದನಿತ್ತಂದು ಅಜಗರನನು ಕೊಂದು ಸೌಜನ್ಯವನಿತ್ತೆ ಭುಜದ ಮೇಲೆ ನಿನ್ನನಂಗಜ ಪೊತ್ತು ತಿರುಗಲು ರಜತಪದವಿಯನಿತ್ತು ವಿಜಯ ನೀ ಗೈದೆ 2 ಮಡದಿಮಣಿಯು ತಾನುಟ್ಟ ಪೀತಾಂಬರ ದೆಡ್ಡೆಯ ಹರಿದು ನಿನ್ನ ಅಡಿಗೆ ಕಟ್ಟಲ್ಕೆ ಮಡದಿಗೆ ಅಕ್ಷಯದುಡುಗೆಯ ನೀನಿತ್ತೆ ಮೃಡನು ತಾನೇನು ಕೊಡಲೋ ಗೋವಿಂದಾ 3 ಜಗಜಟ್ಟಿ ಹನುಮನು ಬಗೆದು ನಿನ್ನಯ ದುಗುಡವ ಬಿಡಿಸಿದ ಬಗೆಯ ನೀನÀರಿತೂ ಜಗದೊಳು ಸರಿಯಾದುಡುಗರೆಯಿಲ್ಲದೆ ನಗುತ ನಿನ್ನನು ನೀನೆ ಸೊUಸಿನಿಂದಿತ್ತೆ 4 ನಾನೆಂಬುದಲ್ಲದೆ ಏನುಂಟು ಎನ್ನೊಳು ನೀನೀವೆನಿದ ಮಾತ್ರ ಶ್ರೀನಾಯಕೇಶ ಏನನಾದರೂ ಸರಿ ನೀನೀಯೋ ಮುರವೈರಿ ನಾನು ನನ್ನದು ನಿನ್ನಧೀನ ಮಾಂಗಿರಿರಂಗ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಗಾ ಎನುತಂದು ಸಾರಲಾ ನುಡಿಕೇಳಿ ಆರಯ್ದು ಕಯ್ವಿಡಿದು ಕಾಯ್ದೆ ದ್ವಿಜನ ಗೋವಿಂದ ಪೊರೆ ಎಂದು ಗೋಳಿಟ್ರಗಜರಾಜಗಾ ದಿವ್ಯದರ್ಶನಾನಂದಮಾಯ್ತು ಅಕ್ಷಯನೆ ಕಾಪಿಡೆಂದಾಕ್ಷಣವೆ ಪಾಂಚಾಲಿ ಗಕ್ಷಯಾಂಬರಗಳಿಂ ರಕ್ಷೆಯಾಯ್ತು ಪಾರ್ಥಸೂತನೆ ನಿನ್ನನರ್ಥಿಯಿಂ ಕೆಲಸಾರ್ದು ಪ್ರಾರ್ಥಿಸುತ್ತಿರ್ಪೆನೈ ಪರಮಪುರುಷ ವರಶೇಷಗಿರಿನಿಲಯ ಸುಗುಣವಲಯ ಶರದಿಂದು ನಿಭವದನ ಚತುರವಚನ ದಮನ ಗರುಡಗಮನ ಪರಿಪಾಹಿ ಮಮದೇವ ಸುಪ್ರಭಾವ
--------------
ನಂಜನಗೂಡು ತಿರುಮಲಾಂಬಾ
ನಾರದ ಇಲ್ಲೆ ಬಂದಿಹ ಮುನಿ ಇಲ್ಲೇ ಬಂದಿಹಾಎಲ್ಲ ಲೋಕ ತಿರುಗಿ ಇಲ್ಲೆ ಬಂದಿಹಾ ಪ ಫುಲ್ಲನಾಭನ ಭಕ್ತರಲ್ಲಿ ಮಾಣಿಕ್ಯವೇಅ.ಪ. ಕರದಿ ವೀಣೆಯನ್ನು ಧರಿಸಿ ಶಿಷ್ಯರಿಂದಸುರಮುನಿಯು ಕೇಳಿ ಭರದಿ ಜಾಗರಕ್ಕೆ 1 ಹರಿಯ ದಿನದಿ ನಿನ್ನ ಚರಿತಾಮೃತವ ಪಾಡೆಹರಿಯ ನಿಲಯದಿ ಗಾನ ಭರದಿ ಮಾಡುತಲೆ 2 ನಂದ ಬಾಲಕನ ತಂದುತೋರುವನೇಇಂದು ನಿನ್ನ ತುತಿಪೆ ಇಂದಿರೇಶ ದಾಸಾ 3
--------------
ಇಂದಿರೇಶರು
ನಾರದ ದೇವಋಷಿಗಳ ನೋಡಿದೆ ಹರಿಪಾದ ಸೇವಕರ ಕೊಂಡಾಡಿದೆ ದೇವಋಷಿ ಹರಿಪಾದ ಸೇವಕರು ನಮ್ಮಾ ್ವಸು- ದೇವಸುತನಂಕದಲ್ಲುದಿಸಿದುತ್ತಮರಿವರು ಪ ವಾಣಿಪತಿಪಿತನ ಚರಣಾಂಬುಜ ಸೇವೆ ಮಾಡೋ ಜನರಲ್ಲೆ ಕರುಣ ಜಾಣ ನಾರಂದ ಜಗದೀಶನ ಗುಣಮಹಿಮೆ ವೀಣಾಪಾಣಿಗಳಿಂದ ಸ್ತುತಿಸಿ ಕೊಂಡಾಡುವರು 1 ಪ್ರೀತಿಯಿಂದ್ಹರಿಯ ನೋಡಿ ಸುರಪಾರಿ- ಜಾತವನು ತಂದು ನೀಡಿ ಮಾತುಳಾಂತಕನ ಮಡದಿ(ಯ)ರಿಗೆ ಕಲಹವನ್ಹೂಡಿ ಭೂತಳಕೆ ಸುರತರುವ ತರಿಸಿದರ್ಹರಿಕರಗಳಿಂದ2 ದಾಸಿಯಲ್ಲುದಿಸಿ ವಿಷಯಗಳು- ದಾಶ(ಸೀ?)ನವ ಮಾಡಿ ಬ್ಯಾಗ ಅಸುರಾಂತಕನ ಅತಿಭಕ್ತಿಯಿಂದಲಿ ಭಜಿಸಿ ಭೀ- ಮೇಶಕೃಷ್ಣನ ಗುಣವ ಪಾಡಿ ಕೊಂಡಾಡುವರು3
--------------
ಹರಪನಹಳ್ಳಿಭೀಮವ್ವ