ಒಟ್ಟು 2419 ಕಡೆಗಳಲ್ಲಿ , 114 ದಾಸರು , 1608 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರ ಪ ಸೂರಿನಿವಾಸ ಭೋಗಾಪುರ ಮಂದಿರ ಮಾಮುದ್ಧರ ಅ.ಪ ಶ್ರೀರಘುವರನಾಜ್ಞೆಯಿಂದಲಿ ವಾರಿಧಿಯಕ್ಷಣದಲಿ ಹಾರಿ ಭೂಮಿಸುತೆ ಗೆರಗುತಲಿ ಮುದ್ರಿಕೆಯ ಕೊಡುತಲಿ ಶ್ರೀರಾಮಗೊಂದಿಸಿದಿ ಕ್ಷೇಮದಲಿ ಇಹಳೆಂದು ಪೇಳಿ 1 ಇಂದು ಕುಲದಿ ಪಾಂಡು ನೃಪತಿಯ ಎನಿಸಿದೆಯೊ ತನಯ ಬಂಥ ಕೌರವ ವೃಂದ ಮಥಿಸಿದೆಯಾರಣದೊಳಗೆ ವಿಜಯ ನಂದಸುತನ ನೊಲಿಮೆ ಪಡದಿಯಾ ಭೀಮಶೈನರಾಯ 2 ಮೇದಿನಿ ಸುರಗೃಹದಿ ಜನಿಸಿದ ವೇದಾರ್ಥ ತಿಳಿಸಿದ ವಾದಿಗಳ ನಿರ್ವಾದಗೈಸಿದ ದಿಗ್ವಲಯ ಚರಿಸಿದ ಭೇದ ಭೋದಕ ಶಾಸ್ತ್ರವಿರಚಿಸಿದ ಶ್ರೀ ಪೂರ್ಣಬೋಧ 3 ಕಾಲಕಾಲಗಳಲ್ಲಿ ದ್ವಿಜಜನ ಬರುತಿಹರು ನಿನ್ನ ಧೂಳಿ ದರುಶನಾಬಿಷೇಚನ ಶೇವಿಪರು ಘನ್ನ ಪಾಲಿಸಬೇಕಯ್ಯ ಭಕುತರನಾ ಪಾಂಚಾಲಿರಮಣ 4 ನೀರಜಾಸನಾದಿ ಸುರಗಣ ವಂದಿತ ಸುಚರಣ ಕಾರ್ಪರ ಶಿರಿನಾರಸಿಂಹನ ಒಲಿಸಿರುವ ನಿನ್ನ ಹರಣ 5
--------------
ಕಾರ್ಪರ ನರಹರಿದಾಸರು
ಕರ ಪಿಡಿಯೊ ಬೇಗಾ ಪ ಸಿರಿ | ಮಾಧವನೆ ಭಿನ್ನವಿಪೆಕಾದುಕೊ ಬಿಡದಿವನ | ಹೇ ದಯಾಪೂರ್ಣ 1 ಪ್ರಾಚೀನ ಕರ್ಮಗಳ | ಯೋಚಿಸಲು ಯನ್ನಳವೆಮೋಚ ಕೇಚ್ಛೆಯ ತೋರೊ | ಕೀಚಕಾರಿ ಪ್ರೀಯನೀಚೋಚ್ಛ ತರತಮವ | ವಾಚಿಸಿವನಲಿ ನಿಂತುವಾಚಾಮ ಗೋಚರನೆ ಸಾಕ್ಷಿ ವೇದ್ಯಾ 2 ಭಾಗವತ ಪೀಯೂಷ | ವೇಗ ಉಣಿಸುತಲಿವನನೀಗೊ ಭವರೋಗವನು | ನಾಗಾರಿವಾಹಾಜಾಗರ ಸ್ವಪ್ನದಲಿ | ನೀಗಿ ಭ್ರಮವೆರಡನ್ನುಜಾಗು ಮಾಡದೆ ಸಲಹೋ ಭೊಗಿಶಯನಾ 3 ಭವ | ಅಂಬುಧಿಯ ದಾಂಟಿ ನೀ-ಲಾಂಬು ದಾಭ ಹರಿ ಹೃದಯಾಂಬರದಿ ತೋರಿಇಂಬಿಟ್ಟು ಭಕ್ತನ್ನ | ಸಲಹೆ ಬಿನ್ನವಿಪೆ ಕೃ-ಪಾಂಬುಧಿಯೆ ತವ ಪಾ | ದಾಂಬುಜದಲಿಡುವೆ 4 ಭಾವ ಕ್ರಿಯ ದ್ರವ್ಯದೊಳು | ಅದ್ವಯನು ನೀನೆಂಬಭಾವದನುಭವವಿತ್ತು | ಇವನ ಪಾಲಿಪುದುಕಾವ ಕರುಣಿಯೆ ಗುರು | ಗೋವಿಂದ ವಿಠ್ಠಲನೆಗೋವತ್ಸಧ್ವನಿದಾವು | ಧಾವಿಸೂವಂತೆ 5
--------------
ಗುರುಗೋವಿಂದವಿಠಲರು
ಕರಕಮಲ ತಡೆಯುವುದೆ ಕಟುಖಾರವಾ ನಿತ್ಯ ಪೂಜಿಸುವ ಕೋಮಲದಾ ಪ. ಪರಿವಾರ ಜನವು ಭೋಜನಕೆ ಕುಳಿತಿರಲು ನರ ಹರಿಗೆ ಅರ್ಪಿತದ ಹುಳಿಯಲ್ಲಿ ಕರವಿಟ್ಟು ಪರಿಪಕ್ವ ಶಾಖದ ಹೋಳುಗಳ ಬಡಿಸಲು ಕರ ಕರೆಗೆ ಸಿಲುಕೇ 1 ಮಧ್ವದುಗ್ಧಾಭ್ಧಿಯಲಿ ಜನಿಸಿದ ಸುಧಾರಸವ ಶುದ್ಧ ದೃಷ್ಟಿಯಲ್ಲೀ ಸವಿಸವಿದು ಮಧುರಾ ಹೃದ್ವಜದಲಿ ತುಂಬಲನುವಾದ ಪುಸ್ತಕವ ಮುದ್ದಾಗಿ ಪಿಡಿಯಲನುಕೂಲವಾಗಿ ಇಂಥ 2 ಗಂಧ ಕುಸುಮಾಕ್ಷತೆಗಳಿಂದ ಶ್ರೀ ತುಳಸಿದಳ ದಿಂದ ವಿಠ್ಠಲ ಕೃಷ್ಣ ಲಕ್ಷ್ಮಿನರಹರಿಯಾ ವೃಂದ ಸಾಲಿಗ್ರಾಮ ಹನುಮ ಯತಿಕುಲಜರುಗ ಳಿಂದ ಸಹಿತದಿ ಪೂಜೆ ವಿಭವದಲಿ ಗೈದಾ 3 ಮಧುರಾನ್ನ ಸವಿದು ಮಧುಸೂದನನ ಗುಣಗಳನು ವಿಧವಿಧದಿ ಮಧ್ವಗ್ರಂಥದಿ ಕಂಡು ನಲಿದೂ ಹೃದಯ ನಿರ್ಮಲದಿ ಆಲಿಸುವ ಭಕ್ತರಿಗೆ ಮಧುರ ರಸಮನದ ಎಡೆಯಲ್ಲಿ ಬಿಡಿಸುವ ಇಂಥ 4 ಗೋಪಾಲಕೃಷ್ಣವಿಠ್ಠಲನ ಭಕ್ತರು ಬಂದು ಶ್ರೀಪಾದಕೆರಗೆ ಸಿರದಲ್ಲಿ ಅಕ್ಷತೆಯಾ ಅಪಾರ ಕರುಣದಿಂದಲಿ ಸೂಸಿ ನಲಿಯುತಲಿ ಅಪತ್ತು ಕಳೆವ ಶ್ರೀ ಪ್ರದ್ನುಮ್ನತೀರ್ಥಯತಿ 5
--------------
ಅಂಬಾಬಾಯಿ
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕರಿವರದ ಗೋಪಾಲ ವಿಠಲ ಸಲಹೋ ಪ ತರಳನನು ನಿನ್ನಡಿಗೆ ಒಪ್ಪಿಸಿಹೆ ಹರಿಯೇ ಅ.ಪ. ಸ್ವಾಪದಲಿ ನರಸಿಂಹ ರೂಪದಲಿ ಕರವೆತ್ತಿಶ್ರೀಪತಿಯೆ ಅನುಗ್ರಹಿಸಿ ಕರುಣಿಸಿರುವೇಈ ಪರಿಯ ಮಹಿಮೆಗಳ ನಾ ಪೇಳಲಳವಿಲ್ಲಕೈಪಿಡಿದು ತರಳನ್ನ ಕಾಪಾಡೊ ಹರಿಯೇ 1 ಸಿದ್ಧಾಂತ ಜ್ಞಾನಗಳು ಸಿದ್ಧಿಯಾಗಲಿ ಇವಗೆಮಧ್ವ ಮತ ದೀಕ್ಷೆಯಲಿ ಶುದ್ಧವಾಗಿರಲೀಶುದ್ಧಭಕ್ತಿಯಲಿಂದ ವೃದ್ಧರನು ಸೇವಿಸಲಿಮಧ್ವ ವಲ್ಲಭ ನಿನ್ನ ಪ್ರಾಧ್ಯಾನ ವಿರಲೀ 2 ನಿತ್ಯ ಮಂಗಳದಾ 3 ಪರಿಪರಿಯ ಮಹಿಮೆಗಳ | ತೋರುತಲಿ ಇವನಲ್ಲಿಧರೆಯ ಜನಗಳಿಗೆಲ್ಲ | ತೋರಿ ಕೌತುಕವಾಮೆರೆವ ಸಂಪದವಿತ್ತು | ಮರೆಸಿದೆ ತವಸ್ಮøತಿಯಪೊರೆಯ ಬೇಕೆಂದೆನುತ | ಮೊರೆ ಇಡುವೆ ಹರಿಯೇ 4 ಅಷ್ಟ ಸೌಭಾಗ್ಯಗಳು | ಅಷ್ಟು ಸ್ಥಿರವಲ್ಲೆಂಬಸುಷ್ಠು ಮತಿಯಿಲ್ಲವಗೆ | ನಿಷ್ಠೆ ಇರಲೆಂಬಶೇಷ್ಠ ಭಿನ್ನಪಕೃಷ್ಣ | ದ್ವೈಪಾಯ ನಾತ್ಮಕನೆಕೃಷ್ಣ ಗುರು ಗೋವಿಂದ ವಿಠ್ಠಲನೆ ಸಲಿಸೋ 5
--------------
ಗುರುಗೋವಿಂದವಿಠಲರು
ಕರುಣದಿ ಕಾಯಬೇಕಿನ್ನು ಪ್ರಾಣೇಶ ಅರಿಯೆನೊ ಅನ್ಯರ ಜಗದ್ವಾಸ ಪ. ಪರಿಪರಿ ಬವಣೆಯ ಪರಿಹಾರಗೈಸುತ ತ್ವರಿತದಿ ಸಲಹೊ ಭಾರತಿಗೀಶ ಅ.ಪ. ಅನ್ನವಸನಗಳಿಗೆ ಅಲ್ಪರ ತೆರದೊಳು ಬನ್ನಬಡುತಲಿರಲು ನಿನ್ನ ಪಾದವ ನಂಬಿ ನೀ ಗತಿ ಎನುತಿರೆ ಮನ್ನಿಸಿದ ಮಹಿಮ ನಿಸ್ಸೀಮ 1 ಮನದಿ ಬಹುನೊಂದು ನಿನ್ನ ಘನತೇನೆಂದು ಅನುದಿನ ಕಾಯೊ ಎಂದು ಎನುತಿರೆ ಸ್ವಪ್ನದಿ ಹನುಮ ನಿನ್ನಭಯ ಹಸ್ತ ವನೆ ಶಿರದಿ ಇಟ್ಟೆ ಶ್ರೇಷ್ಠನೆ 2 ಉಭಯ ಹಸ್ತವು ಎನ್ನ ಶಿರದ ಮ್ಯಾಲಿಡುತಲಿ ಅಭಯ ಕೊಡುತಲಿರಲು ನಿರ್ಭಯದಿಂದ ನಾ ನಿನ್ನ ಭಜಿಪೆನಯ್ಯ ಶುಭಗುಣನಿಲಯ ಜೀಯಾ 3 ಹನುಮ ಭೀಮಾನಂದ ಮುನಿಯಾಗಿ ಜಗದಲಿ ಹನನಗೈಯುತ ದನುಜರ ವನಜಾಕ್ಷ ಹರಿಯನು ಘನವಾಗಿ ಸೇವಿಸಿ ಅನುದಿನದಲಿ ಕಾಯ್ವೆ ಸುಜನರ4 ಶ್ವಾಸಜಪವ ಮಾಡಿ ರಾಶಿ ಜೀವರ ಕಾಯ್ವೆ ಶ್ವಾಸ ನಿಯಾಮಕನೆ ಶ್ರೀಶ ಶ್ರೀ ಗೋಪಾಲಕೃಷ್ಣವಿಠ್ಠಲನಿಗೆ ಕೂಸು ಎಂದೆನಿಸಿರುವೆ ನೀ ಕಾವೆ 5
--------------
ಅಂಬಾಬಾಯಿ
ಕರುಣದಿ ಕಾಯೊ ಕರುಣದಿ ಕಾಯೊ ಕಮಲನಯನ ಎನ್ನ ಪ ಪರಮಪುರುಷ ಹರೆ ಸರಸಿಜನಾಭನೆ ಅ.ಪ ನೀನೆ ತಂದೆಯು ಎಂದು ಜ್ಞಾನದಿಂದಲಿ ಬಂದು ಧ್ಯಾನಿಸುವೆನು ಈಗ 1 ತಾಯಿ ನೀನೇಯೆಂದು ಬಾಯಿಗೆ ಬಂದಂತೆ ಜೀಯ ನಿನ್ನನು ನೆನೆವೆ 2 ಜಗದೊಳಗೆಲ್ಲ ನೀನೆ ಸುಗುಣ ಶೀಲನು ಎಂದು ಮುಗಿಲು ಮುಟ್ಟುತಲಿದೆ3 ಸಂಗತಶ್ರಮವನು ಭಂಗವಗೈದ ಭು- ಜಂಗ ಗಿರಿಯ ವಾಸ 4 ಲೀಲೆಯಿಂದಲಿ ವ್ಯಾಘ್ರಶೈಲದಲಿರುವ ಶ್ರೀ ಲೋಲ ವರದವಿಠಲ 5
--------------
ವೆಂಕಟವರದಾರ್ಯರು
ಕರುಣದಿ ಕಾಯೊ-ಕರುಣದಿ ಕಾಯೊ ಕಮಲನಯನ ಯನ್ನ ಪ ಪರಮಪುರುಷ ಹರೆ ಸರಸಿಜನಾಭನೆ ಅ.ಪ. ಧ್ಯಾನಿಸುವೆನು ಈಗ 1 ನಿನ್ನನು ನೆನೆವೆ 2 ಎಂದು ಮುಗಿಲು ಮುಟ್ಟುತಲಿದೆ 3 ಸಂಗತ ಶ್ರಮವನ್ನು ಭಂಗವಗೈವ ಭುಜಂಗ ಗಿರಿಯವಾಸ 4 ಲೀಲೆಯಿಂದಲಿ ವ್ಯಾಘ್ರ ಶೈಲದಲ್ಲಿರುವ ಶ್ರೀ ಲೋಲವರದವಿಠಲ 5
--------------
ಸರಗೂರು ವೆಂಕಟವರದಾರ್ಯರು
ಕರುಣದಿ ಪೊರೆಯೆನ್ನ ಪ್ರಭುವೇ ಮೂಲ ಗುರುವೆ ಪ ಪರಮ ದಯಾನ್ವಿತ ಸುರಕಲ್ಪತರುವೆ ಅ.ಪ. ಅಂಗಜಪಿತನಾಜ್ಞೆ ಹಿಂಗಾದೆ ನೀಯಾಂತು ಅಂಗನೆ ಸೀತೆಯ ಅರಸುತ್ತ ಪೋದೆಯೊ ತುಂಗವಿಕ್ರಮ ನೀನು ಮಂಗಳಾಂಗಿಯ ಕಂಡು ಶೃಂಗಾರವನವನ್ನೆ ಭಂಗಮಾಡಿದೆಯೊ 1 ಕರಿಪುರದರಸನ ವರಪುತ್ರ ನೀನಾಗಿ ಕರಿರಾಜವರದಗೆ ಭಾವನಾಗಿ ಧರಣಿ ಭಾರವೆಲ್ಲ ಹರಿಸಿದೆ ನೀನು 2 ಯತಿಯ ರೂಪವ ತಾಳಿ ಕ್ಷಿತಿಯೊಳು ಚರಿಸುತ ದಿತಿಜರ ಬಾಯ್ಗಳ ಬಡಿಯುತಲಿ ಪತಿತ ಪಾವನ ಶ್ರೀ ರಂಗೇಶವಿಠಲನೆ ಪ್ರತಿಯಿಲ್ಲವೆಂತೆಂಬ ಮತಿಯಿತ್ತದೇವ 3
--------------
ರಂಗೇಶವಿಠಲದಾಸರು
ಕರುಣಾ ಪೊಂದಿರೆ ಕೊರತೆಗಳುಂಟೆ ಶ್ರೀ ನರಹರಿಯ ಪ ನರಿಗಳ ಕೂಗಿಗೆ ಹುಲಿಯಂಜುವುದೆ ಬಿರುಗಾಳಿಗೆ ದೊಡ್ಡ ಗಿರಿ ನಡುಗುವುದೆ ಅ.ಪ ನಾನು ತಾನೆಂದು ಕುಣಿಯುತಲಿದ್ದ ಮಾನವರನು ಜರಿದು ನೀನೆ ಸೇವೆಯನು ಮಾಡೆಂದೆನುತ ತಾನೊಲಿಯುತಲಿ ಹೀನ ಜನರು ಅಪಮಾನವ ಬಯಸಲು ನಾನಿಹೆನೆನ್ನುವ ಜಾನಕಿನಾಥನ 1 ಬಂಧುಗಳೆನ್ನ ನಿಂದಿಸುತಿಹರು ಒಂದನೂ ಕೊಡೆಯೆಂದು ಹಿಂದು ಮುಂದೆನಗೆ ಕುಂದು ಕೋರುವರು ಒಂದನರಿಯರು ಮುಂದೆ ಎನಗೆ ಬಲು ತೊಂದರೆಗಳಿರುವು ವೆಂದು ಪೇಳುವರು ಮಂದರಧರನ 2 ಧನಿಕನಲ್ಲೆಂದು ಅಲ್ಲಗೆಳೆಯುವರು ಧನವಿಲ್ಲದಿರಲು ಘನತೆ ಎಂತೆಂದು ಜರಿಯುತಲಿಹರು ಮನವನರಿಯರು ಧನ ಪಿಶಾಚಿಯನು ಮನದಿಂದ ತೊಲಗಿಸಿ ಮನದಲಿ ನೆಲಸಿಹ ವನರುಹ ನಯನನ 3 ನಂಬಿದರೆಮ್ಮ ಧನಕನಕಗಳ ತುಂಬುವೆವೆಂಬ ಜಂಭದ ಮಾತ ನಂಬದೆ ಇರಲು ಹಂಬಲಿಸುವರು ನಂಬುವ ಭಕುತರ ಹಿಂಬಾಲಿಸುತಲಿ ಬೆಂಬಲಿವೀಯುತವ ಅಂಬುಜನಾಭನ 4 ಚತುರನಲ್ಲೆಂದು ಅತಿದೂರುವರು ಹಿತರಂತೆ ನಟಿಸಿ ಮಿತಿಮೀರಿ ಎನಗೆ ಬೋಧಿಸುತಿಹರು ಮನ್ಮತಿಯನರಿಯರು ರತಿಪತಿಯೆನ್ನನು ಪ್ರಸನ್ನನಾಗಿ ದಿವ್ಯ ಗತಿ ತೋರುತಲಿರೆ ಚತುರತೆಯೇತಕೆ 5
--------------
ವಿದ್ಯಾಪ್ರಸನ್ನತೀರ್ಥರು
ಕರುಣಾದಿ ಪಿಡಿ ಕರವಾ ದೇವರ ದೇವ ಪ ಕರುಣಾದಿ ಪಿಡಿಕರ ಸರಸಿಜಾಂಬಕ ಎನ್ನ ಗುರು ರಘುಪತಿ ಪಾಲಾ ಮರುತಾಂತರಿಯಾಮಿ ಅ.ಪ ಗತಶೋಕ ಜಿತಮಾಯ ಪತಿತ ಪಾವನವೇದ್ಯ ಪ್ರತಿಪಾದ್ಯ ಕ್ಷಿತಿಪ ಭಾರತಿ ಕಾಂತ ವಂದ್ಯಾ ಆ ನತರ ಪಾಲಕ ದುಷ್ಟದಿತಿಜಾರಿ ತವಪಾದ ಶತಪತ್ರ ಬಿಡದೆ ಸಂತತ ಭಕುತಿಯಲಿಂದ ಸ್ತುತಿಪಾರ ಮಿತ ಅಘವಾ ಕಳೆದು ಮತ್ತೆ ಹಿತದಿ ಸದ್ಗತಿ ಕೊಡುವಾ ನಿನ್ನಯ ದಿವ್ಯಾಚ್ಯುತವಾದ ಘನದಯವಾ ಪೊಗಳು ವಂಥ ಮತಿವಂತರನು ಕಾಣೆ ಶತಮುಖಜಜ ಮಾವಾ 1 ಅನಿಮಿತ್ಯ ಬಂಧುವೆ ವನಚಾರಿ ಕೂರ್ಮನೆ ಕನಕ ನೇತ್ರಾರಿ ಪಾವನತರ ನರ ಪಂಚ ನಾನಾ ರೂಪದಿಂದ ಬಾಲನಾ ಕಾಯ್ದೊನರ ಹರಿಬಲಿ ನಿತ್ಯ ಅನಘಾತ್ಮ ಜನನೀಯ ಕೊಂದಾನೆ ಜನಕ ಜಾಪತಿಯ ರು ಕ್ಮಿಣಿ ಮನೋಹರನೆ ವಸನದೂರ ಹಯರೂಢ ಜನನ ರಹಿತ ವಿಖ್ಯಾತಾ ನಮಿಸುವೆ ಅನಿಮಿಷಪಜನ ಸುತಾ ಬೇಡಿಕೊಂಬೆ ಅನುದಿನದಲಿ ಮಮತಾ ಕನಕೋದರನ ತಾತಾ 2 ಸರಿವೀರ ಹಿತ ಬಲಿಸರಸಿ ಜಾಂಬಕ ಮುರ ಹರ ಹರ ವಂದಿತ ಹರಿಮುಖ ಹರಿನುತ ಪಾದ್ಯ ಹರಸು ಎನ್ನಯ ಅಘ ನಿರುತ ನಿನ್ನ ಡಿಂಗರರ ನೀಕರದಿತ್ತು ಗುರುವಿನ ಚರಣಾದಿ ಸ್ಥಿರ ಭಕುತಿಯ ಕೊಟ್ಟು ವರ ಶಿರಿಗೋವಿಂದ ವಿಠಲನೆ ನೀ ಯನ್ನ ಮರಿಯದೆ ಮಮತೆಯಿಂದಾ ನಿತ್ಯ ಗರಿಯುತಲಿರು ಆನಂದಾ ನಿನ್ನಯ ಪಾದಾದಿರಲಿ ಮನಸು ಮುಕುಂದಾ ದುರುಳ ಭವದ ಬಂಧ 3
--------------
ಅಸ್ಕಿಹಾಳ ಗೋವಿಂದ
ಕರುಣಿಸಯ್ಯಾ ಗುರುವರ್ಯ ಪರಮ ಸುಹೃದಯಾ | ನಿರುತ ನಿನ್ನವನೊ ನಾನು ಪುರಂದರರಾಯ ಯಿಂದು ಪ ಲೋಕದ ಜನರು ತಮ್ಮ ಸುಕುಮಾರರಿಗೆ ಪೆಸರು | ಯಾಕೆ ಯಿಡವರೊ ಜೀಯ್ಯಾ | ನೇಕ ಮಮತೆಯಲಿ || ಬೇಕೆ ಎನಗೆ ಯಿಂಥsÀ ಖ್ಯಾತಿ ನೀ ಕೊಟ್ಟ ಭಾಗ್ಯವೆಯಿರಲಿ | ವಾಕು ವ್ಯರ್ಥವಾಗದಂತೆ ಸಾಕುವದು ಬಿಡದೆ ಒಲಿದು 1 ಅಡವಿ ಹತ್ತಿ ಪೋಪ ನರನ ಒಡನೆ ಕೂಡಿಕೊಂಡು ಬಂದು | ಕಡು ಮಹೋತ್ಸವವ ಮಾಡಿ ವೇಗ ಪೊಡವಿಪತಿತನವು || ತೊಡರು ಕಳೆದು ಸರ್ವರೊಳಗೆ | ನಡತಿವಂತ ಮಾಡಿದಂತೆ ಬಡವನ್ನಾ ಉದ್ಧರಿಸು ಜ್ಞಾನಿ2 ಯಿರಲಾಗಿ ಪುತ್ರನೀಗೆ ಬರುವಾವೆ ಪಾಲಿಪದು ಎತ್ತಲಿದ್ದರೂ | ಸತ್ಯ ವಿಜಯವಿಠ್ಠಲನ್ನ | ತುತ್ತಿಸುವ ಮಹಾಮಹಿಮಾ 3
--------------
ವಿಜಯದಾಸ
ಕರುಣಿಸಿ ಕೇಳು ಕಂದನ ಮಾತಗರುಡವಾಹನನೆ ಗಂಗೆಯ ಪೆತ್ತ ಹರಿಯೆಪ. ಇತ್ತ ಬಾರೆಂಬುವರಿಲ್ಲ ಇರವ ಕೇಳುವರಿಲ್ಲಹತ್ತಿಲಿ ಕುಳ್ಳಿರು ಎಂಬ ದಾತರಿಲ್ಲತತ್ತರಗೊಳ್ಳುತಲಿದೆ ತಾವರೆಯೆಲೆಯೊಳನೀರಿನಂತೆಹತ್ತು ನೂರಾರು ನಾಮವುಳ್ಳ ಶ್ರೀಹರಿಯ ನೀ ಕೇಳೊ1 ಇಂದು ಬಂಧನವಿಲ್ಲ ಇದ್ದವ ಕೇಳುವುದಿಲ್ಲಒಂದು ಸುತ್ತಿಗೆ ಬಟ್ಟೆಯಾದರೂ ಇಲ್ಲ ಈಬೆಂದೊಡಲಿಗೆ ಒಬ್ಬ ಅಯ್ಯೋ ಎಂಬುವನಿಲ್ಲಬಿಂದು ಮಾತ್ರದಲ್ಲಿ ಸುಖವ ಕಾಣೆ ಹರಿಯೆ 2 ಎಲ್ಲಿಯೂ ಧಾರಣೆಗೊಂದು(?)ನೆರಳನು ಕಾಣೆ[ಅಲ್ಲವÀÀತಿಂದಿಲಿಯಂತೆ]ಬಳಲುತಿದ್ದೆಫುಲ್ಲಲೋಚನ ಪೂರ್ಣ ಹಯವದನ[ಸಲ್ಲುವ]ನಾಣ್ಯವ ಮಾಡಿ ಸಲಹೋ ಎನ್ನ ಹರಿಯೆ 3
--------------
ವಾದಿರಾಜ
ಕರುಣಿಸು ಬೇಗ ಸಿರಿವರ ಕರುಣಿಸು ಬೇಗ ಪ. ಲಕ್ಷ್ಮಾಶ್ರಯ ವಕ್ಷಸ್ಥಳ ಪಕ್ಷೇಂದ್ರ ವಿಹಾರಿ ಅಕ್ಷಾರಿ ಪ್ರಿಯ ಪೂರ್ಣ ಕಟಾಕ್ಷದಿ ನೋಡುತಲಿ 1 ಕಂಠೇಧೃತ ಕೌಸ್ತುಭ, ವೈಕುಂಠಾಲಯವಾಸಿ ಶುಂಠಾಶಯ ಧೂವನ ನರ ಕಂಠೀರವ ಕಮಠಾ 2 ದೂರೀಕೃತ ಘೋರಾಮಯ ಧೀರಾಖಳ ಸಾರಾ ನಾರಾಯಣ ನರಕಾರ್ಣವ ತಾರಣ ರಘುವೀರ 3 ಭಕ್ತಾವನಶಕ್ತಾಮೃತ ರಕ್ತಾಧರ ಶ್ರೀದ ಪಾದ 4 ವಾಗೀಶ ವೃತಾನುಗ ಸಕಲಾಗಮನುತ ಚರಣ ಭೋಗೀಶ ಧರಾಲಯ ದಯವಾಗು ಸದಾಶರಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸೊ ಗುರು ಎನಗೆ ಅರಘಳಿಗಿ ನೀ ಎನ್ನ ಹೃದಯದಿಂದಲಗದ್ಹಾಂಗೆ ಧ್ರುವ ಕಣ್ಣಿನೊಳಗ ನಿನ್ನ ಕಾಣದಿದ್ದರೆ ಪೂರ್ಣ ಪ್ರಾಣನಿಲ್ಲದೊ ನಿಮಿಷಾರ್ಧದಲಿ ಕ್ಷಣಕ್ಷಣಕ್ಕೊದಗಿ ನೀ ಖೂನದೋರದಿದ್ದರೆ ತನು ವಿಕಳಿತವಾಗಿ ಕ್ಷೀಣಹೊಂದುವದೊ 1 ಬೇಡುವದೊಂದೆ ನಾ ಬಿಡದೆ ನಿಜರೂಪ ಪೊಡವಿಯೊಳಗೆ ದೃಢ ನಿಶ್ಚಯಲಿ ಎಡಬಲವು ನೋಡದೆ ಒಡಲ ಹೊಕ್ಕಿದೆ ನಿನ್ನ ಕಡೆಗಾಣಿಸುವದೆನ್ನೊಡೆಯನೆ ಪಿಡಿದು ಕೈಯ 2 ಸುತ್ತಸೂಸುತಲಿನ್ನು ಚಿತ್ತದಿಂದಗಲದೆ ನಿತ್ಯವಾಗಿರೊ ನೀ ಹೃತ್ಕಮಲದಲಿ ಹೆತ್ತ ತಾಯಿಯೋಪಾದಿ ತುತ್ತುತುತ್ತಿಗೆ ಒಮ್ಮೆ ಹತ್ತಿಲಿದ್ದು ಸಂತತ ಸಲಹೊ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು