ಒಟ್ಟು 412 ಕಡೆಗಳಲ್ಲಿ , 77 ದಾಸರು , 384 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹ್ಯಾಂಗೆ ಉದ್ಧಾರ ಮಾಡ್ಯಾನೋ ಶ್ರೀಹರಿ ಹೀಗೆ ದಿನಗಳಿವಂಗನಿಗೆ ಪ ಬ್ಯಾಗ ಪತಿಗೆ ತಾ ಬಾಗದನುಕೂಲವಾಗಿರದೆ ತಿಳಿದ್ಹಾಗೆ ನಡೆವಳ ಅ.ಪ. ಉದಯದಲೆದ್ದತಿ ಸಜಮಲಳಾಗಿ ತಾ ಮುದದಿ ಪತಿಗೆ ನಮಿಸದವಳಿಗೆ ಪದುಮಾಕ್ಷಿ ತುಳಸಿಯ ಪೂಜಿಸಿ ಮನದಿ ಮಾಧವನ ಭಕ್ತಿಲಿ ಸ್ತುತಿಸದವಳಿಗೆ ಪದುಮನಾಭನೇ ಸರ್ವಪರನೆಂದು ಅರಿಯದೆ ಅಧಮ ಶಾಸ್ತ್ರವ ಕೇಳಿ ಅದರಂತೆ ನಡೆವಳ 1 ಹರಿದಿನದಲಿ ಉಂಡು ಹರಿಯನ್ನದಲೇ ಊರ ತಿರುಗಿ ಹೊತ್ತು ಕಳೆವಳಿಗೆ ಸರಸದಿ ನರಹರಿ ನಾಮ ಸಂಕೀರ್ತನೇ ಇರುಳು ಜ್ಯಾಗರ ಮಾಡದವಳಿಗೆ ದೊರಕಿದಷ್ಟರಲೇ ತಾ ಹರುಷ ಪಡೆದೇ ಧನ ಪತಿ ಹೊರಗ್ಹಾಕ್ವಳ 3 ಗುರು ಹಿರಿಯರ ಅತ್ತೆಮಾವರ ಜರಿದು ತಾ ಹಿರಿಯಳು ಮನಿಗೆ ನಾನೆನುತಿರ್ಪಳು ಪರರ ನಿಂದಿಸಿ ಭೂಸುರರು ಬಂದರೆ ಅನ್ನ ದೊರಕದೆನುತ ಹೇಳಿ ಕಳಹುವಳ ಸರಸ ಮೃಷ್ಟಾನ್ನವ ಹರುಷದಿ ಪತಿದ್ವಾರಾ ಹರಿಗರ್ಪಿಸದಲೇ ತ್ವರದಿ ತಾ ತಿನ್ವಳ 3 ಪತಿ ಅಂತರ್ಯಾಮಿ ಶ್ರೀ ಪತಿಯನರಿದು ತನ್ನ ಪತಿಯ ಸೇವೆ ಮಾಡದಿರುವಳಿಗೆ ಪತಿ ಮುಕ್ತಿ ಪಥವೆಂದು ಪತಿಹಿತದವನೆಂದು ಅರಿಯದೇ ಪತಿ ನೋಡ್ವಳಿಗೆ ಪತಿಯಿಂದಲಂಕೃತವಾಗಿಹ ಮಂಗಳಸೂತ್ರವೇ ಸಕಲ ಭೂಷಣವೆಂದರಿಯದವಳಿಗ್ಹಾಂಗೆ 4 ಪರಮ ಅತ್ತೆಯ ಮಾತು ಶಿರದಿ ಸ್ವೀಕರಿಸಿ ಐವರ ಕೂಡ ಧಾರೆಯರೆಸಿಕೊಂಡಾ ಪರಮ ಪಾವನಳಾದ ಭಾರತೀ ದೇವೇರ ಸ್ಮರಿಸದೇ ಅದರಂತಾಚರಿಸದೆ ಇರುವಳಿಗ್ಹ್ಯಾಂಗೆ 5 ವನವಾಸದಲಿ ಪಾಂಡು ತನಯರ ಕೂಡ ತಾ ಧನ ಸುಖ ಬೇಡದೆÀ ಪೋದವಳು ಘನ ಹಸಿವುತೃಷೆಯಿಂದ ಅನ್ನ ಬೇಡಿದ ದುರ್ವಾಸಾದಿಗಳನು ಆದರಿಸಿದವಳಾ ಆಜನನಿ ದೃಪವ ನಂದನಿಯ ಕೃತ್ಯಗಳನ್ನು ನೆನೆದು ತನ್ನಯ ಮನವನ್ನು ತೊಳೆಯದವಳು 6 ಮರುತಂತರ್ಗತ ಸ್ವಾಮಿ ಸಲಹೆನ್ನದೇ ಪರರಿಗೊಂದೆಡೆ ಇಕ್ಕಿ ಪಂಕ್ತಿ ಭೇದವ ಮಾಡಿ ಕರ್ಮ ಮಾಡ್ವಳಿಗೆ ಪರಮ ಪಾವನನಾದ ಹನುಮೇಶವಿಠಲನ ನೆರೆ ನಂಬದಲೇ ದೇಹ ಸ್ಥಿರವೆಂದು ತಿಳಿವಳಿಗ್ಹ್ಯಾಂಗ 7
--------------
ಹನುಮೇಶವಿಠಲ
124-2ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಆರಣೀ ಸಜ್ಜನರ ಸೌಭಾಗ್ಯ ಏನೆಂಬೆಸೂರಿವರ ಸತ್ಯವರ್ಯ ಭಾವಿ ಸತ್ಯಪ್ರಿಯರಆರಾಧಿಸಿ ಕಳುಹಿಸಿದ ಸ್ವಲ್ಪ ಕಾಲದಲೆಆರಣಿಗೆ ಬಂದರು ಸತ್ಯವಿಜಯಾರ್ಯ 1ಸಂಸ್ಥಾನ ಮೂರ್ತಿಸ್ಥ ಹರೀಪೂಜೆ ವೈಭವವುನಿತ್ಯಪ್ರವಚನ ಪಾಠ ಕೀರ್ತನೆ ಏನೆಂಬೆಸತ್ಯವಿಜಯರು ಯುಕ್ತ ಕಾಲದಲಿ ದೇಹಅದಾರುಢ್ಯ ಹೊಂದಿದರು ರಾಜಗೆ ಹೇಳಿದರು 2ತಮ್ಮ ತರುವಾಯ ಸಂಸ್ಥಾನ ಸರ್ವಾಡಳಿತಶ್ರೀಮನೋಹರ ಹರಿಪ್ರಿಯರು ಸತ್ಯವರ್ಯಸುಮನೋಹರ ಸತ್ಯಪ್ರಿಯ ತೀರ್ಥ ನಾಮದಲಿರಮಾರಮಣನ ಸೇವೆಗೆ ವಹಿಸಬೇಕೆಂದು 3ಆದ ಕಾರಣ ಆ ಸ್ವಾಮಿಗಳ ಕರೆತರಿಸಿಭಕ್ತಿ ವಿನಯದಿ ಮಠವ ಒಪ್ಪಿಸಬೇಕೆಂದುಹಿತದಿ ಆಜ್ಞಾಪಿಸಿ ಹರಿಪುರಯೈದಿದರುಚೈತ್ರ ಕೃಷ್ಣ ಪುಣ್ಯದಿನ ಏಕಾದಶಿ ದ್ವಾದಶಿಲಿ 4ಆರಣೀರಾಜನು ಸತ್ಯವರ್ಯ ತೀರ್ಥರಲಿಅರಿಕೆ ಮಾಡಿ ಸ್ವಾಮಿಗಳು ಕೆಲವು ದಿನಮೇಲ್ಆರಣಿಗೆ ಪೋದರು ಶ್ರೀಮಠದ ಆಡಳಿತಹರಿಪ್ರೀತಿ ಸೇವೆಗೆ ಕೊಂಡರು ತಾವು5ಮೊದಲೇವೆ ಶ್ರೀ ಸತ್ಯವರ್ಯ ತೀರ್ಥರ ಮಠಸಂಸ್ಥಾನ ವೈಭವದಿ ಪ್ರಕಾಶಿಸುತ್ತಿತ್ತುಸತ್ಯ ವಿಜಯರ ಕೋರಿಕೆಯಂತೆ ಈವಾಗಹೊಂದಿದರು ಸತ್ಯವಿಜಯರ ಸಂಸ್ಥಾನ 6ಸತ್ಯಾಭಿನವರ ಪದ್ಧತಿಯಲ್ಲಿ ಶ್ರೀಮಠಸತ್ಯಪೂರ್ಣ ಸತ್ಯವಿಜಯರಿಂದ ವೈಭವದಿಇದ್ದ ಆಮಠ ಪೀಠ ಅಲಂಕರಿಸಿದರೀಗಸತ್ಯವರ್ಯ ವೈರಾಗ್ಯ ನಿಧಿಯು ಶ್ರೀಮಾನ್ 7ಬಾದರಾಯಣರಾಮ ಯದುಪತಿಯ ಸೇವೆಗೆಪ್ರೀತಿಗೆ ಸ್ವಾಮಿಗಳು ಮಠವನ್ನು ಹೊಂದಿಸತ್ಯವಿಜಯರು ಕೋರಿದಂತೆ ತಮ್ಮಯನಾಮಸತ್ಯಪ್ರಿಯತೀರ್ಥರೆಂದು ಕೊಂಡರು ಮುದದಿ 8ಧನ ಸತ್ಯಪ್ರಿಯ ತೀರ್ಥರುವಿಜೃಂಭಣೆಯಿಂದ ಚರಿಸಿ ಪುರಜನರ್ಗೂರಾಜನಿಗೂ ಫಲ ಮಂತ್ರಾಕ್ಷತೆಗಳ ಕೊಟ್ಟುರಾಜ ಮಾರ್ಯಾದೆ ಕೊಂಡುಹೊರಟರು ಅಲ್ಲಿಂದ 9ಆಂಧ್ರದೇಶದ ಕಡಪ ಉತ್ತರ ಕರ್ನಾಟಕಮತ್ತು ದಕ್ಷಿಣ ಕರ್ನಾಟಕ ಶ್ರೀರಂಗಇಂಥ ಸ್ಥಳಗಳಲ್ಲಿ ಸಂಚಾರ ಮಾಡುತ್ತಾಹಿತದಿ ಅನುಗ್ರಹಿಸಿದರು ಭಕ್ತವೃಂದಕ್ಕೆ 10ಪೀತಾಸಿಂಗ ರಾಘವಜಿ ಮುರಾರಿ ಮೊದಲಾದಕೃತಜÕ ಜನ ಪ್ರಮುಖರ ಭಕ್ತಿ ಯುತವಾದಭೂದಾನ ಗ್ರಾಮದಾನ ಮಾಡಿದ್ದ ಸ್ವೀಕರಿಸಿಶ್ರೀದನಿಗೆ ಅರ್ಪಿಸುತ ಒಲಿದರು ಸಜ್ಜನಕೆ 11ರಾಯಚೂರು ಹರಿಯಾಚಾರ್ಯರೆಂಬ ವೈಷ್ಣವಕಾಯವಾಙ್ಮನ ಇದ್ದ ಬ್ರಾಹ್ಮಣ ದಂಪತಿಯುಪ್ರಿಯ ವತ್ಸರುಗಳೊಡೆ ಸ್ವಾಮಿಗಳ ಕಡೆ ಬಂದುವಿನಯದಿ ನಮಿಸಿ ನಿಂತರು ಮಠದಲ್ಲಿ 12ಹರಿಯಾಚಾರ್ಯರ ಮಕ್ಕಳಲಿ ರಾಮಾರ್ಯಸ್ಫುರದ್ವರ್ಚಸ್ ಯುತ ಬಹುಚೂಟಿಯಾದ ಮಗನುಶ್ರೀ ಶ್ರೀಗಳು ಆ ಹುಡುಗಗೆ ಮಠದಲ್ಲಿಶಾಸ್ತ್ರಾಭ್ಯಾಸಾದಿಗಳ ಒದಗಿಸಿದರು 13ಕಾಲಕ್ರಮದಲ್ಲಿ ವಟುಗೆ ವಿವಾಹ ಮಾಡಿದರುಮಕ್ಕಳು ರಾಮಚಾರ್ಯರಿಗೆ ಎರಡುಮಾಲೋಲ ಇಚ್ಛೆಯಿಂ ಸ್ವಾಮಿಗಳು ದಕ್ಷಿಣಸ್ಥಳ ಯಾತ್ರೆ ಗೈದರು ಸೇತು ಸಮೀಪ 14ಮಾನಾಮಧುರೆಯ ವೇಗವತೀ ತೀರವುತನ್ನ ಮಠವನ್ನು ಸ್ಥಾಪಿಸಿದರು ಅಲ್ಲಿಘನಮಹಾ ಸೂರಿಯು ರಾಮಚಾರ್ಯರನ್ನತನ್ನ ಸಮೀಪದಲ್ಲೇ ನಿಲ್ಲಿಸಿದರು 15ಬಹು ವರ್ಷ ಸಂನ್ಯಾಸ ರತ್ನರಾಗಿ ಬೆಳಗಿವಹಿಸಿ ಸಂಸ್ಥಾನವ ಏಳು ವರ್ಷಶ್ರೀಹರಿಗೆ ಪ್ರಿಯರಾಮಾಚಾರ್ಯರಿಗೆ ಸಂನ್ಯಾಸವಿಹಿತದಿ ಇತ್ತರು ಶ್ರೀ ಸ್ವಾಮಿಗಳು 16ಸತ್ಯಪ್ರಿಯ ಗುರುವರ್ಯ ತಮ್ಮ ಪ್ರಿಯ ಶಿಷ್ಯರಿಗೆಸತ್ಯಬೋಧ ತೀರ್ಥವೆಂಬ ಸಂನ್ಯಾಸ ನಾಮವನ್ನಿತ್ತುಚೈತ್ರ ಶುದ್ಧ ಹದಿಮೂರನೆ ಪುಣ್ಯ ದಿನದಿಯದುಪತಿಯ ಧ್ಯಾನಿಸುತ ಹರಿಪುರಯೈದಿದರು 17ಮತ್ತೊಂದು ಅಂಶದಲಿ ಬೃಂದಾವನದಲ್ಲಿನಿಂತಿಹರು ಅಶ್ವಾಸ್ಯಧ್ಯಾನಪರರಾಗಿಹಿತದಿ ಕೊಡುತಿಹರು ವಾಂಛಿತವ ಶರಣರಿಗೆಸದಾನಮೋ ಮಾಂಪಾಹಿ ಗುರುವರ್ಯ ಶರಣು 18ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 19 ಪ
--------------
ಪ್ರಸನ್ನ ಶ್ರೀನಿವಾಸದಾಸರು
139-7ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹಂಸನಾಮಕ ಪರಂಬ್ರಹ್ಮ ವಿಧಿಸನಕಾದಿವಂಶಜ ಗುರುಗಳಲಿ ಜಗದೇಕ ಗುರುವುದಶಪ್ರಮತಿ ಈ ಮಧ್ವ ಮುನಿಯ ಪೀಳಿಗೆ ಜಾತವ್ಯಾಸಮುನಿ ಯೋಗಿವರ್ಯರಿಗೆ ಆ ನಮಿಪೆ 1ವ್ಯಾಸರಾಯರ ಮುಖ ಕಮಲದಿಂದುಪದೇಶದಾಸತ್ವ ಹೊಂದಿದರು ಪುರಂದರದಾಸಾರ್ಯದಾಸಶ್ರೇಷ್ಠರು ದಯಾನಿಧಿಯು ಈಪುರಂದರದಾಸಾರ್ಯರೇ ನಾರದರ ಅವತಾರ 2ಪುರಂದರಾರ್ಯರಹಸ್ತಕಂಜಸಂಜಾತರುಧೀರ ಭೃಗು ಅವತಾರ ವಿಜಯದಾಸಾರ್ಯಹರಿದಾಸವರ ವಿಜಯದಾಸರ ಶಿಷ್ಯರುಸೂರಿಸುರವರ್ಯ ಗೋಪಾಲ ದಾಸಾರ್ಯ 3ವಿಶ್ವೋಪಾಸಕರು ವರಗಣೇಶಾಂಶರುಈಶಾನುಗ್ರಹಿ ಗೋಪಾಲ ದಾಸಾರ್ಯಬೇಸರವಿಲ್ಲದೆ ಸ್ಮರಿಪ ಸಜ್ಜನರ ಪಾಲಿಪರುದಾಸತ್ವ ಜಗನ್ನಾಥದಾಸರಿಗಿತ್ತವರು 4ಸೂರಿಕುಲತಿಲಕನು ಜಗನ್ನಾಥ ದಾಸಾರ್ಯಈರೆರಡು ಮುಖ್ಯ ಜನ್ಮವಕೊಂಡಹಿಂದೆಗುರುಯುಕ್ ಪುರಂದರಾರ್ಯರವತ್ಸಗುರುರಾಯ ಸೇವಾರತಮದ್ರದೇಶಾಧಿಪ ಈ ರೀತಿ ಮೂರು 5ಮಾರೀಚ ದಿತಿ ಪೌತ್ರ ಮೊದಲನೆಯದಲ್ಲಿಧೀರ ಪ್ರಹ್ಲಾದನಿಗೆ ಭ್ರಾತ ಸಂಹ್ಲಾದಹರಿಅಧೋಕ್ಷಜನ್ನೊಲಿಸಿ ಕೊಂಬ ಮಾರ್ಗವ ಅರಿತನಾರದಾನುಗ್ರಹಿಯು ಉಪದೇಶಕೇಳಿ6ಹರಿಯ ಸೇವಿಸುವುದಕೆ ಶಿಷ್ಯರುದ್ಧಾರಕ್ಕೆಪ್ರಾರಬ್ಧ ಕರ್ಮವು ತೇದು ಹೋಗಲಿಕೆಧರೆಯಲ್ಲಿ ಪುನರ್ಜನ್ಮ ಕೊಂಡನು ಬ್ಯಾಗವಟ್ಟನರಸಿಂಹ ದಾಸರ ಮಗನೆನಿಸಿಕೊಂಡು 7ಸೂರಿಕುಲ ಶಿರೋಮಣಿ ವರದೇಂದ್ರ ಯತಿವರರುಶ್ರೀರಾಘವೇಂದ್ರರ ಸ್ಮರಿಪುದಿವರಲ್ಲಿಭಾರಿಪಂಡಿತ ಶ್ರೀನಿವಾಸ ಇವರಲ್ಲೋದಿಪೌರ ವಿದ್ಯಾರ್ಥಿಗಳಿಗೆ ಪಾಠ ಪೇಳ್ದ 9ಗರುವಕೊಳಗಾಗಿ ಈ ಶ್ರೀನಿವಾಸಾಚಾರ್ಯಕರುಣಾಶಾಲಿಗಳು ವಿಜಯದಾಸರನ್ನಕ್ಷುದ್ರ ಮಾತುಗಳಾಡಿ ಸ್ವೋತ್ತಮಾಪರಾಧದಿಂಘೋರವ್ಯಾಧಿ ಕೊಂಡು ಕುಗ್ಗಿದನು ತೀವ್ರ 10ಪರಿಪರಿ ಔಷಧೋಪಚಾರಗಳು ಸೋತುಹರಿಗುರು ಕ್ಷೇತ್ರಾಟನ ಸೇವಾದಿಗಳುಹರಿವಾಯುಸ್ತುತಿಕ್ಷೀರಅಭಿಷೇಕಫಲದಿಂಅರಿತನು ಅಪರಾಧಕ್ಷಮೆಬೇಡೆ ಹೊರಟ11ತ್ವರಿತದಲಿ ವಿಜಯಾರ್ಯರಲ್ಲಿ ಶರಣಾಗಿಕರುಣದಿ ಕ್ಷಮಿಸಿ ಉದ್ಧರಿಸಬೇಕೆಂದಕರುಣಿಸಮ ಚಿತ್ತರು ಶರಣನಿಗೆ ಹೇಳಿದರುಗುರುಗಳು ಗೋಪಾಲದಾಸರ ಕಾಣೆಂದು 12ತನ್ನಲ್ಲಿ ಗುರುಗಳು ಕಳುಹಿಸಿ ಬಂದಿಹನುದೀನನು ನಿಜ ಶರಣಾಗಿಹನು ಎಂದುಘನಮೂಮಂತ್ರ ಸಹ ಧನ್ವಂತರಿ ಜಪಿಸಿಧನ್ವಂತರಿಗೆ ಬಿನ್ನೈಸಿದರು ದಾಸರು 13ವಿಜಯಗೋಪಾಲ ವೆಂಕಟ ಜಗನ್ನಾಥನ್ನಪೂಜಿಸಿ ನೈವೇದ್ಯಾನ್ನ ಜೋಳದರೊಟ್ಟಿಭುಜಿಪುದಕೆ ಕೊಡುತ ಹರಿಗುರುಗಳ ಸ್ಮರಿಸುನಿಜ ಭಕ್ತಾಯುಷ್ಪ್ರದ ಸತ್ಪತಿ ಎಂದು 14ದ್ರವ ಮಾತ್ರ ಕೊಂಬ ಆ ರೋಗಿ ತಿಂದನು ರೊಟ್ಟಿದ್ರಾವಿಕ ಆಯಿತು ರೋಗ ದಿನ ದಿನದಿದೈವಾನುಗ್ರಹವಾಯ್ತುಗುರುಅನುಗ್ರಹದಿಂದಶ್ರೀ ವೆಂಕಟ ಶೈಲಾಧಿಪನು ಒಲಿದ 15ರೋಗ ನಿವೃತ್ತ ಆಚಾರ್ಯ ದಾಸರ ಸಹಪೋಗಿ ವೆಂಕಟಗಿರಿಯಲ್ಲಿ ಶ್ರೀನಿಧಿಗೆಭಕುತಿಯಿಂ ಸನ್ನಮಿಸಿ ಮಲಗೆ ನಿತ್ರಾಣದಲಿಬೇಗ ಗಜವರದಹರಿಬಂದು ತಾ ಪೊರೆದ16ಶ್ರೀನಿಧಿಃ ಸರ್ವ ಭೂತಾನಾಂ ಭಯಕೃದ್ಭಯನಾಶನನು ವಿಜಯಾರ್ಯರ ರೂಪದಲಿ ಪೇಳೆದಾನ ಎರೆದರು ಗೋಪಾಲ ದಾಸಾರ್ಯರುತನ್ನ ಆಯುಷ್ಯದಲಿ ನಲವತ್ತು ವರ್ಷ 17ರೊಟ್ಟಿ ಕೊಟ್ಟಾಗಲೇಗುರುಪ್ರೇರಣೆಯಂತೆಕೊಟ್ಟಿದ್ದರು ಆಯುಷ್ಯ ಆಚಾರ್ಯಗೆದಿಟವಾಗಿ ಜಗಕೆ ತಿಳಿಸೆ ವೆಂಕಟ ಈಗಕೊಡಿಸಿದನು ಆಯುರ್ದಾನದ ಧಾರೆ 18ಘನ್ನ ಹರಿಗುರು ಭಕ್ತಿ ಶಿಷ್ಯ ವಾತ್ಸಲ್ಯವಏನೆಂಬೆ ನಮ್ಮಗುರುಗೋಪಾಲ ದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ನ ಆಯುಷ್ಯವ ಕೊಡುವರೆ ಅನ್ಯರಿಗೆ 19ಏನೆಂಬೆಅನಿಮಿತ್ತ ಬಂಧುವೆಂಕಟಪತಿಯದೀನ ದಯಾಳತ್ವ ಆಚಾರ್ಯನಿಗೆತಾನೇವೆ ಗೋಪಾಲದಾಸರ ರೂಪದಿತಂದುಅನ್ನ ಕೊಟ್ಟ ಆಯುಷ್ಯವ ಕೊಡಿಸಿದವ 20ಶ್ರೀನಿವಾಸಾಚಾರ್ಯ ಹರಿತನ್ನ ದಾಸರಿಗೆತಾನೆ ಬಂದೊಲಿವುದು ನೇರಲ್ಲಿ ಕಂಡುತನ್ನನ್ನು ಹರಿದಾಸರಲಿ ಓರ್ವ ಮಾಡೆಂದುವಿನಯದಿಂ ಗೋಪಾಲದಾಸರ ಬೇಡಿದನು 21ವಿಜಯಗೋಪಾಲನ್ನವಿಜಯದಾಸರ ಸ್ಮರಿಸಿನಿಜ ಶಿಷ್ಯಾಚಾರ್ಯನಿಗೆ ಉಪದೇಶಿಸಿದರುಅಜಪದಾರ್ಹನು ಮಧ್ವನಲ್ಲಿ ಜ್ವಲಿಸುವಶ್ರೀತಶ್ರೀ ಜಗನ್ನಾಥ ಎಂದು ಧ್ಯಾನಿಸು ಎಂದು 22ಪೋಗಿ ಪಂಢÀರಪುರ ಭೀಮರತಿಯಲ್ಲಿಸ್ವಗುರು ಆದಿ ಹನ್ನೆರಡು ಸ್ಮರಿಸುಬಾಗು ಮಧ್ವಾಂತಸ್ಥ ಹರಿಗೆಮಜ್ಜನಮಾಡುಜಗನ್ನಾಥ ಹರಿತೋರ್ವ ಪೊಳೆವ ಹರಿನಾಮ 23ಝಗಿ ಝಗಿಪ ತೇಜಸ್ಸು ಶಿರೋಪರಿ ಕಂಡನುಮೂಗಿನೊಂದೊಂದಡಿ ಶಿರದ ಮೇಲೆ&ಟಜquo;ಜಗನ್ನಾಥ ವಿಠಲ&ಡಿಜquo; ನಾಮ ಪ್ರಜ್ವಲಿಸಿತುಜಗನ್ನಾಥ ತನ್ನಿಚ್ಛೆಯಿಂದಲೇ ತೋರ್ದ 25ಜಡಜ ಭವಪಿತ ಡರಕ ಜಗನ್ನಾಥ ವಿಠಲನನೋಡಿದರು ಜಗನ್ನಾಥದಾಸ ಆಚಾರ್ಯಪೊಡವಿಗೊಡೆಯನುವಿಜಯಗೋಪಾಲ ಜಗನ್ನಾಥವಿಠ್ಠಲ ಪ್ರಸನ್ನನಾದನು ಶ್ರೀನಿವಾಸ 26ವೆಂಕಟಗಿರಿನಾಥ ಪಂಢರಿ ಜಗನ್ನಾಥಅಕಳಂಕ ಗುಣನಿಧಿ ವಿಠಲಪ್ರಸನ್ನನಾಗಿದಾಸರು ಮೂಲ ಮಂತ್ರಾದಿಗಳಿಂದಏಕಾಗ್ರ ಚಿತ್ತದಲಿ ಭಜಿಸಿ ಸ್ತುತಿಸಿದರು 27ಪುರಂದರದಾಸಾರ್ಯರ ವಂದಿಸಿ ಅವರಿಂದವಿರಚಿತ ಶ್ರೀಮಧ್ವ ರಮಣ ನಿನ್ನಭಾರಿತತ್ವವಕೊಂಡಕೀರ್ತನೆ ಹಾಡುತ್ತಶ್ರೀಕರ ವಿಠಲನ ಮಂದಿರದೊಳು ಪೊಕ್ಕರು 28ವಿಶ್ವವಿಷ್ಣು ವಷಟ್ಕಾರಾದಿ ನಾಮನುದಾಸಪ್ರಿಯಜನ ವಿಠ್ಠಲ ರುಕ್ಮಿಣಿಯಕೇಶವಾದಿಪಾದಾಂತ ಸಂಸ್ತುತಿಸಿ ನಮಿಸಿದರುದಾಸರು ಶರಣು ತಾನೆನ್ನುತ ಮುದದಿ 29ಏನೆಂಬೆ ವಿಠ್ಠಲನ ರುಕ್ಮಿಣಿಯ ವಾತ್ಸಲ್ಯಅನುಪಮ ಔತಣ ದಾಸರಿಗೆ ಮಾಡಿಅನುತ್ತಮ ಪ್ರಸಾದ ಮಾಲಾದಿಗಳ ಕೊಟ್ಟುಅನುಗ್ರಹಿಸಿ ಕಳಿಸಿದರು ದಾಸರ ಸ್ವಪುರಕೆ 30ಮಳಖೇಡ ಕೃಷ್ಣ ಮಂತ್ರಾಲಯಕೆ ಪೋಗಿಅಲ್ಲಿರುವಗುರುದೇವತಾ ನಮನ ಮಾಡಿಗೋಪಾಲದಾಸ ಉದ್ಧಾರಕರ ಬಳಿಬಂದುಕಾಲಿಗೆರಗಿದರು ಕೃತಕೃತ್ಯ ಭಾವದಲಿ 31ವಾಸುದೇವಗೆ ಪ್ರಿಯ ಐಜಿ ಮಹಾತ್ಮರುವ್ಯಾಸತತ್ವಜÕ ಹರಿದಾಸ ಯತಿವರರುಸಸೋದರ ಪರಿವಾರ ಗೋಪಾಲದಾಸಾರ್ಯರಬಿಸಜಾಂಘ್ರಿ ಸನ್ನಮಸಿ ಹೊರಟರಲ್ಲಿಂದ 32ಚೀಕಲ ಪರಿವಿಯಲಿ ಏಕಾತ್ಮ ನರಹರಿಯಅಕಳಂಕ ದೃಢಭಕ್ತಿಯಿಂದ ಪೂಜಿಸುವಆ ಕರುಣಿ ವಿಜಯದಾಸರ ಕಂಡು ನಮಿಸಿಚಿಕ್ಕಂದಿ ಸ್ವಪುರ ಮಾನವಿಯಯೈದಿದರು 33ಮನುತೀರ್ಥ ತಟದಲ್ಲಿ ಮೀಸಲಾಗಿವರಿಗೆಅನ್ಯರಾಕ್ರಮಿಸದೇ ರಕ್ಷಿಸಲ್ಪಟ್ಟಮನೆಯಲ್ಲಿ ನರಹರಿಯ ಹನುಮನ್ನ ಪೂಜಿಸುತದಿನದಿನದಿ ಪ್ರವಚನ ಭಜನೆ ಮಾಡಿದರ 34ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 35- ಅಷ್ಟಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಅಂದೆ ನಿರ್ಣಯಸಿದರು ಕಾಣೋ |ಇಂದಿರಾಪತಿ ಪರದೈವತವೆಂಬುದ ಪಅಂದು ಚತುರ್ಮುಖ ನಾರದನಿಗೆ ತನ್ನ |ತಂದೆ ಶ್ರೀಹರಿ ಪರದೈವವೆಂದು ||ಸಂದೇಹಗಳ ಪರಿಹರಿಸಿಹ ದ್ವಿತೀಯದಸ್ಕಂಧದೊಳಯ್ದನೆಯ ಅಧ್ಯಾಯದಲಿ 1ಅಂದು ಕಪಿಲದೇವ ದೇವಹೊಲೆಗೆ ತಾನು |ಚೆಂದದ ತತ್ತ್ವವನೆಲ್ಲ ಬೋಧಿಸಿದ ||ಅಂದದಲರ್ಜುನ - ಉದ್ದವರಿಗೆ ಅಂದಾ - |ನಂದದಿ ಗೀತಾಶಾಸ್ತ್ರವನೊರೆದನೆಂದು 2ವೇದೈಶ್ಚ ಸರ್ವೋರಹಮೇವ ವೇದ್ಯಃ |ವೇದವಿಧಾಯಕ ನಾಮದವನು ||ವೇದಾಕ್ಷರಗಳು ಹರಿನಾಮಗಳೆಂದು |ವೇದಾಂತ ಸಿದ್ಧಾಂತಗಳಲಿ ಪೇಳಿದರೆಂದು 3ರಾಜಸ -ತಾಮಸ ಪೌರಾಣಗಳಿವು |ರಾಜಸ -ತಾಮಸ ಜೀವರಿಗೆ ||ರಾಜಸ -ತಾಮಸ ಗತಿಗೋಸ್ಕರ ಮುನಿ - |ರಾಜ ವ್ಯಾಸನು ಮೋಹಕವೆಂದು ಪೇಳಿದ 4ಬಿಡು ಪಾಷಂಡಮತದ ದುರ್ಬುದ್ಧಿಯ |ಬಿಡದೆಮಾಡು ವೈಷ್ಣವಸಂಗವ ||ಧೃಡಭಕ್ತಿಯಿಂದ ಶ್ರೀಹರಿಯ ಪೂಜಿಸಿದರೆ |ಮೃಡಪ್ರಿಯ ಪುರಂದರವಿಠಲನೊಲಿವನೆಂದು 5
--------------
ಪುರಂದರದಾಸರು
ಇಕ್ಕೊಳ್ಳಕ್ಕೊ ಸಿಕ್ಕ ರಂಗನೋಡುಈಠಕ್ಕ ಮಾಡಿಹ ಬಹು ಕೇಡು ಪಪೆಟ್ಟಿಗೆಯೊಳು ದೇವರುಗಳು ಗಂಡಸ- |ರಿಟ್ಟಿರಲವ ಅಂಜದಾಲೆ ||ಮುಟ್ಟಿ ಮನೆಗೊಂದೊಂದೊಗೆದು ಮುರು-ಬಟ್ಟಿ ಮಾಡಿಬಿಟ್ಟನಲ್ಲೆ 1ತಾ ಕೆಡಿಸಿ ಒಡೆದಡಕಲಿ ಗಡಿಗೆಗಳನು |ಆಕಳ ಒಳಘೊಗಿಸಿಹ್ಯನೂ ||ಈ ಕರಕರೆಯರಿಯಳು ನಮ್ಮತೆಯೆಂ-ಬಾಕೆನ್ನನು ಕೊಲ್ಲುವಳಲ್ಲೆ 2ಅಡಕಲಿಯೊಳು ದೇವರ ತಾಳಿಯ ಸರ |ತುಡುಗು ಮಾಡಿ ತಕ್ಕೊಂಡು ||ಗಡಬಿಡಿ ಮಾಡೆಲ್ಲೊಗೆದನೊ ನಾ ಎ- |ಷ್ಠುಡುಕಿದರೂ ಸಿಗವಲ್ಲೆ3ನೆಲವಿಗೇರಿಸಿದ ಚಟ್ಟಿಗಿಗಳು ಒಂ- |ದಳುಕದೆ ಮೊದಲಂತಿಹವೆ ||ಇಳುಕಲು ಒಂದಕ್ಕೊಂದಕೆ ತೂತು |ಪಾಲ್ಗಳು ಈಸನಿಲ್ಲವಲ್ಲೆ 4ಅಡವಿಯ ದೇವರ ಹೆಸರಿಲಿ ತುಪ್ಪವ |ಮಡಿಯ ಮಾಡಿ ತುಂಬಿರಲು ||ಕುಡಿದು ಮುಚ್ಚಿ ಮೊದಲಪ್ಪಂದಿಟ್ಟಿಹ |ಕೊಡದೊಳು ಬರಿ ನೀರಲ್ಲೇ 5ಅಂಡಜವಾಹನಓಕಳಿ ಚಲ್ಲಿಹ |ಪುಂಡತನದಿ ಮಂಚದ ಮೇಲೆ ||ಭಂಡಿದು ಏನೆಂಧೇಳಲಿ ಮನೆಯೊಳು |ಗಂಡನ ಸಿಟ್ಟು ನೀ ಬಲ್ಲೆಲ್ಲೆ 6ಏನೆನರಿಯದವಳಿಗಿದು ಬಂದಿತು |ಕ್ಷೋಣಿಯೊಳಗೆ ಒಣಹರಲೆ ||ಮಾನನೀಯಳೆ ಈಪರಿಮಾಡಿ- |ದನಿಕೋ ಪ್ರಾಣೇಶ ವಿಠಲನೀಗ 7
--------------
ಪ್ರಾಣೇಶದಾಸರು
ಇನ್ನು ಪುಟ್ಟಿಸದಿರಯ್ಯ ಪುಟ್ಟಿಸಿದಕೆ ಪಾಲಿಸಯ್ಯಎನ್ನ ದಯದಿ ಪಾಲಿಸಯ್ಯ ಪನಿನ್ನ ಚರಣಾಂಬುಜವ ನಂಬಿದೆನೊ ಶ್ರೀ ಹರಿಯೆಬನ್ನು ಬಿದ್ದೆನು ಭವಬಂಧನವ ಬಿಡಿಸಯ್ಯ ಅ.ಪಅಮರೇಂದ್ರವಂದಿತನೆ ಅನಂತಮಹಿಮನೆಕಮಲಸಖಾನಂತಕರನೆ ||ಕಮಲಾಯತಾಂಬಕನೆ ಕಾಮಿತದಾಯಕನೆವಿಮಲಗುಣ ವಿಭೀಷಣಗೆ ಒಲಿದ ದಯದಿಂದಲೆನ್ನ1ಅಜಮಿಳ ಅಂಬರೀಷ ಅಕ್ರೂರ ವಿದುರಗೆಗಜರಾಜ ಗಿರಿಜೇಶಗೆ ||ನಿಜಭಕ್ತ ಪ್ರಹ್ಲಾದಅಜ ಧ್ರುವ ಅರ್ಜುನಗೆದ್ವಿಜ ಸುತ ರುಕ್ಮಾಂಗದರಿಗೊಲಿದ ದಯದಿಂದಲೆನ್ನ2ಅವರಂತೆ ನಾನಲ್ಲಅವರ ದಾಸರ ದಾಸಸವರಿ ಬಿಸುಟೆನ್ನ ದೋಷ ||ಪವಿತ್ರನ್ನ ಮಾಡಯ್ಯ ಪುಂಡಲೀಕ ವರದನೆಅವಸರಕೆ ದ್ರೌಪದಿಗೆ ಒಲಿದ ದಯದಿಂದಲೆನ್ನ 3ಎಂದೆಂದು ನಿನ್ನ ಪಾದವೆನಗೆ ನೆಲೆಯಾಯಿತುಎಂದೆಂದು ನಿನ್ನ ನಾಮಭಜನೆ ||ಎಂದೆಂದು ನೀಯೆನ್ನ ಬಿಡದೆ ಪಾಲಿಸೊ ಸ್ವಾಮಿಅಂದು ಅಂಜನೆಕಂದನಿಗೆ ಒಲಿದ ದಯದಿಂದಲೆನ್ನ 4ಅಂತರಂಗದುಬ್ಬಸವ ಅಯ್ಯೋ ನಿನಗುಸಿರುವೆನುಚಿಂತೆಗಳ ಪರಿಹರಿಸೊ ||ಸಂತತ ಪಾಲಿಸೊಪುರಂದರ ವಿಠಲನೆಚಿಂತಿಪ ಗೌತಮನ ಸತಿಗೆ ಒಲಿದ ದಯದಿಂದಲೆನ್ನ 5
--------------
ಪುರಂದರದಾಸರು
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಚ್ಚರ ಮನವೇ ಯದುಪತಿಯನೆಚ್ಚದಿರು ಚೋಹದನಿಕೆ ತನುವ ಪ.ವೇಳ ವೇಳಾಯು ವೃಥಾ ಹೋಯಿತೆಚ್ಚರಕಾಲಪಮೃತಿ ವೃಕ ಕೊಲುವೆಚ್ಚರಕೋಳು ಹೋಗುತದಲ್ಪ ಕೃತ ಪುಣ್ಯವೆಚ್ಚರನಾಲಿಗೆಯಲಿ ಸಿರಿನಾಥನೆಚ್ಚರ 1ಸತಿಸದನಾತ್ಮಜಸ್ಥಿರವ್ಯರ ವೆಚ್ಚರತಿಥಿ ಪೂಜೆಗಳಲಿ ಸತ್ವರ ಎಚ್ಚರಪ್ರತಿದಿನ ತತ್ವದಿ ಪ್ರವೀಣನಾಗೆಚ್ಚರಾಹಿತಲ್ಪನ ಕೀರುತಿ ಹೊಗಳೆಚ್ಚರ 2ಹರಿಭಟರೌಘದಿ ಹಿಂಗದಿರೆಚ್ಚರದುರಿತಭಯ ದಂದುಗದೆಚ್ಚರಪರಾಪರದ ವಚನವಟ್ಟಿಸದಿರೆಚ್ಚರಪರಿಪರಿ ಸದ್ವ್ವ್ರತ ಪಿಡಿದೆಚ್ಚರ 3ಸಂತವರಿಯರನುಸರಣಿಗಳೆಚ್ಚರೇಕಾಂತ ಬೀರುವ ಗುರುಕೃಪೆಯೆಚ್ಚರಸಂತ್ಯಿರಲಾಗಿ ಶಾಂತಸರಕುಕೊಳ್ಳೆಚ್ಚರಕಂತುಪಿತನ ನಾಮ ಕಡೆಗೆಚ್ಚರ 4ವಿಷಯಗತೇಂದ್ರಿಯವಿಡಿದಾಳುವೆಚ್ಚರಮೀಸಲು ವೈರಾಗ್ಯ ಮುರಿಯದೆಚ್ಚರಬಿಸಜನಾಭನ ಭಕ್ತಿ ಬಲಿದಿರುವೆಚ್ಚರಪ್ರಸನ್ನವೆಂಕಟಪತಿ ಪದದೆಚ್ಚರ 5
--------------
ಪ್ರಸನ್ನವೆಂಕಟದಾಸರು
ಎಂಥ ಬಾಲಕೃಷ್ಣ ಗೋಪೇರಂತಃಚೋರಾನಂತನೆಕಂತುಪಿತ ಕೋಟಿ ಕಾಂತಿಯಲ್ಲಿ ಭ್ರಾಂತ ಮಾಡಿದನಿವ ಪ.ಬಾಲನಾದರೊಳಿತು ಒಳ್ಳೆ ಬಾಲೆಯರಮೊಳೆಮೊಲೆಗಾಲದ ಹಣ್ಣೆಂದು ನಖದಲಿ ಸೀಳಿ ನೋಡುವರೆಹೇಳಲೇನೆಂತೆನ್ನ ನಳಿತೋಳಲಪ್ಪಿ ತೊಂಡೆಹಣ್ಣಿಗ್ಹೋಲುವದೆಂದಧರನುಂಡ ತಾಳಬಹುದೇನಮ್ಮ 1ನಿಚ್ಚಟಮೈಯೊಳು ನಾವುನಿಚ್ಚಮೈಯ ತೊಳೆಯುವಾಗಬಚ್ಚಲೊಳು ಬಂದು ಕಣ್ಣಮುಚ್ಚಿ ಅಟ್ಟಹಾಸದಿಸಚ್ಚಿದಾನಂದಗೋಪಾಲ ವಚ್ಚೆರೆಗಂಗಳೆಯರಹುಚ್ಚುಮಾಡಿ ಹೋದನಿವನ ನೆಚ್ಚಬಹುದೇನಮ್ಮ 2ಹತ್ತಿಲಿದ್ದ ಸುಪ್ತ್ತಪುರುಷನ್ನೊತ್ತಿ ರತಿಕಳೆದೋರಿಚಿತ್ತ ಸೂರೆಗೊಂಬುದಾವ ಕೃತ್ಯವಮ್ಮ ರಂಗಗೆಸುತ್ತಿನವರರಿಯರೆಂದು ಚಿತ್ತವಾಯಿತಲ್ಲದೆಅತ್ತೆ ಮಾವ ಕಂಡರೆಮ್ಮ ತೊತ್ತು ಮಾಡಿ ಬಡಿವರೆ 3ಹಟನೆಂದು ಬಾಯೊಳು ಬಾಯಿಟ್ಟು ಮುದ್ದನಿಡಲುಬಟ್ಟಕುಚವಿಡಿದೆಮ್ಮ ರಟ್ಟು ಮಾಡಬಹುದೆದಿಟ್ಟ ಜಾರನಿಗೆ ಕೈಯ ಕಟ್ಟುವೆವೆಂದರೆ ಚೆಲ್ವಬಟ್ಟಗಲ್ಲ ಕಚ್ಚಿ ಕ್ಷತವಿಟ್ಟೋಡಿದ ನಮ್ಮಯ್ಯ 4ಚಿನ್ನನಾದರೇನು ಚೊಕ್ಕ ಚಿನ್ನದಂಥ ಗುಣವುಳ್ಳಚೆನ್ನಿಗನ ರೂಪಕೊಲಿದ ಕನ್ಯೆಯರು ಪೂರ್ವದಪುಣ್ಯವಂತರಲ್ಲದುಳಿದಿನ್ನಾರಿಗೆಲ್ಲಿ ಎಂದೂ ಪ್ರಸನ್ವೆಂಕಟೇಶ ಸಿಕ್ಕ ಇನ್ನು ಸುಖ ದಕ್ಕೀತೆ 5
--------------
ಪ್ರಸನ್ನವೆಂಕಟದಾಸರು
ಎಲೆಮಾನವಹರಿಯ ಸ್ಮರಿಸುಸಲೆ ಕಾವನು ಖರಿಯ ಪ.ಶಂಖಾರಿ ಸಂಧೃತನ ಮತ್ತಾಶಂಖಜನ ಬಲಹೃತನಶಂಕರ ವಿಧಿನÀುತ ಚರಣನುದಾರಾಶಂಕಾವಾರಣ ವಾರಣೋದ್ಧರನ 1ಕಮನೀಯತರ ಗಾತ್ರನಅರುಣಕಮಲಾಯತ ನೇತ್ರನಕಮಲಾವ್ಯಯಪೂತಮುಖ ಚಾರುವಿಲಸಿತಕುಮುದಾಸಿತ ಶರಣ ಕರುಣಾಕರನ 2ಅಗಣಿತಗುಣಗಣ್ಯನಾನಂತಆಗಮನಿಗಮಾದಿ ಪೂರ್ಣನಅಗಧರ ಮಹಿವರ ಪ್ರಸನ್ವೆಂಕಟವರಅಗನಂದನಿಲಯ ಕಲಿಯಕೋಲಾಹಲನ 3
--------------
ಪ್ರಸನ್ನವೆಂಕಟದಾಸರು
ಎಷ್ಟೋಹರಿಮರುತರ ಕೃಪಿ ನಿನ್ನಲ್ಲಿ |ಕೆಟ್ಟುದೇ ಭೂಷಣವಾಗಿಹುದೋ ಪಾರ್ವತೀ ರಮಣ ಪವಿಷವನ್ನೆ ಭೋಜನ ಮಾಡಿ ಜೀರ್ಣಿಸಿಕೊಂಡಿ |ವಸನಬಿಟ್ಟು ಜಿನಸ್ಥಿ ಭಸ್ಮ ಧರಿಸಿ ||ವೃಷಭವಾಹನನಾಗಿ ಭೂತ ಪ್ರೇತಗಳೊಳು ಸ್ಮ |ರಿಸದ ಭೂಮಿಯೊಳಿರಲು ಪೂಜಿಪರು ಸುರರೆಲ್ಲ 1ತಂದೆ ತಲೆ ಕಡಿದುದಕೆಕುಂದುಹೊಂದದಲಿದ್ದೆ |ನಿಂದಿತನ ಶಿರದ ಮೇಲಿರಿಸಿಯಿದ್ದೆ ||ಒಂದೊಂದೆ ನೀನೆ ಪರದೈವ ಎಂದು ಪೇಳ್ದೆ | ಗೋವಿಂದನಿಂದರ್ಚನೆಯ ಕೊಂಡೆ ಭಳಿ ಭಳಿರೆ ಶಿವ 2ಗುರುವೆನಿಸಿಕೊಂಬೆ ಪ್ರಾಣೇಶ ವಿಠಲನೊಳು | ಮತ್ಸರಿಸುತಿಹ ಖಳರಿಗೆ ಇದಲ್ಪವೇನೊ ||ಸರಿವಬ್ಬರಿಗೆ ಆಹೆನೆಂಬುವನು ಕೆಡುವ ನೀ |ಉರುಗನಂತಾಗಬೇಕೆಂದಾಗಿ ಮೆರೆದೆಲವೊ3
--------------
ಪ್ರಾಣೇಶದಾಸರು
ಕರುಣಿಸೊ ಕರುಣಾಸಾಗರ ನರಹರಿಯೆ ನಿನ್ನಚರಣದಾಚರಣೆಗೆಚ್ಚರಾದರನು ಪ.ಮನ ಮಲಿನವ ತೊಳೆದನುದಿನ ದೃಢದೊಳುಜ್ಞಾನ ಭಕ್ತಿ ವಿರಕ್ತಿಯ ಘನಾಸಕ್ತಿಯಮನಗಂಡು ಮುದವಂತರೆನಿಸಿ ನಾಮಾಮೃತಉಣಬಲ್ಲ ಪೂತಾಂಗ ಮಾನಿಸರ ಸಂಗ 1ಸಭ್ಯರ ದೂಷಣ ಕೇಳುಬ್ಬಸ ಶ್ರವಣಕೆಇಬ್ಬರ ಕಲಹದಿ ಶಬ್ದಗುಂದಿಅಬ್ಜನಾಭನ ಬಿರುದುಬ್ಬುಬ್ಬಿ ಸುಖವೇರಿಕೊಬ್ಬಿ ಕುಣಿವ ಶಂಲಬ್ಧರೂಳಿಗವ 2ವೃಂದಾವನದಲಿ ಮುಕುಂದನಾಲಯದಮುಂದಾ ದಿಗಿದಿಗಿತ ವಾದ್ಯವಂದನಿಂದತಂದೆ ಪ್ರಸನ್ನವೆಂಕಟೇಂದ್ರ ನಿನ್ನ ಮುದ್ರಾಂಕಹೊಂದುವ ಜನುಮವ ಆನಂದಮುನಿಮತವ 3
--------------
ಪ್ರಸನ್ನವೆಂಕಟದಾಸರು
ಕಾಯೆ ಭಾರತೀ ನಿನ್ನ ಆರಾಧಿಸುವೆ ಯನ್ನ |ಮಾಯಾಮಂದಿರನವರ ಕಿಂಕರನು ಯೆನಿಸೇ ಪವ್ಯೋಮಜ ರಮಣಿನಳಿನಭವಜಾತೆಕೃತಿಪುತ್ರೆ |ಸಾಮಜಗಮನೆ ಉರಗವೇಣಿ ಕಾಳೀ ||ಸೋಮಮುಖಿ ಬೇರೊರಸಿ ಯನ್ನ ದುರ್ಮತಿಯಳಿದು |ರಾಮಧ್ಯಾನದಲಿ ಮನ ನಿಲ್ಲಿಸುವದನಿಶ 1ಲೋಕನಾಯಿಕೆ ಶೈಲಜಾಪತಿ ಮುಖ ಪೂಜಿತಳೆ |ನೀ ಕರುಣದಲಿ ನೋಡಿಕರವಪಿಡಿಯೇ ||ಕಾಕುಮನುಜರ ಸಂಗವನು ಕೊಡದೆಯೊಂದಿನಕು |ಲೌಕಿಕವ ಸಂಪಾದಿಸಿಸಬೇಡವಮ್ಮ 2ಕೃಷ್ಣೆ ನಳನಂದಿನಿ ದ್ರುಪದ ತನುಜೆ ಶಿವಕನ್ಯೆ |ದುಷ್ಟ ಜನ ಗಿರಿಕುಲಿಶೆ ಸ್ವರ್ಣಗಾತ್ರೆ ||ಕೊಟ್ಟ ಮಾತಿಗೆ ತಪ್ಪದಲೆ ಕಾಯ್ವ ಪ್ರಾಣೇಶ |ವಿಠಲನ ಚರಣಯುಗ ಸರಸೀರುಹ ಭೃಂಗೆ3
--------------
ಪ್ರಾಣೇಶದಾಸರು
ಕೂಗದೆ ಉಸುರಿಕ್ಕದೆ- ನೀವು |ಬೇಗನೆ ಬನ್ನಿ ರಂಗ ಮನೆಯ ಪೊಕ್ಕ ಪಹೆಜ್ಜೆಗಳಿವೆಕೋ ಮನೆಯಲಿ-ಕಾಲ |ಗೆಜ್ಜೆಯ ದನಿ ಕೇಳಬರುತಲಿದೆ ||ನಿರ್ಜರಪತಿ ತನ್ನ ಮನಸಿಗೆ ಬಂದಂತೆ |ಮಜ್ಜಿಗೆ ಓಕುಳಿ ಆಡಿಹನಕ್ಕ 1ಸೂರಿನ ಕೆಳಗೆ ಕುಳ್ಳಿರಿಸಿ-ತನ್ನ |ಓರಗೆ ಮಕ್ಕಳುಗಳ ನಿಲ್ಲಿಸಿ ||ಕೇರಿಕೇರಿಯಿಂದ ಗೋಡೆ ಧುಮುಕಿ ಪೋಗಿ |ಸೂರೆಗೊಳ್ಳುತಾನೆ ಸುಮ್ಮಗೆ ಬನ್ನಿ 2ಹಾಲು ಚೆಲ್ಲಿ ಹಳ್ಳ ಹರಿದಿಹವೆ-ಮೊಸರ |ಮೇಲಿನ ಕೆನೆಗಳು ಬಳಿದಿಹವೆ ||ಬಾಲಚೋರ ಶ್ರೀ ಪುರಂದರವಿಠಲನು |ಚಾಲುವರಿದರಿನ್ನು ಬಿಡಬಾರದಕ್ಕ 3
--------------
ಪುರಂದರದಾಸರು
ಕೇಳಿಮರೆವುದು ಮನ ಕುಶಶಯನನಆಳು ಕಂಡಂತೆಚಂದ್ರಮೌಳಿಹೇಳಿದಂತೆಪ.ಮುಂಜಾವದಿ ಗುರುಮಧ್ವಮತ ಮಹಿಮಾಹರಪಾದಕಂಜಗಳ ಬಲಗೊಂಡು ಕಲಿಯಾನಕೆಂದು ಲಕುಂಜರವರದನ ನಾಮ ಕೀರ್ತನೆ ಮಾಡೆಂದುಮಂಜುಳ ಶಾಸ್ತ್ರಶ್ರವಣ ಮಹಿಮೆ ಪುರಾಣ 2ಪ್ರಸನ್ವೆಂಕಟೇಶನಪಾದಪಿಡಿದವರಿಗಾಹ್ಲಾದನಿಶಿದಿನ ಸಂಸಾರ ನಿಸ್ಸಾರಘೋರ3
--------------
ಪ್ರಸನ್ನವೆಂಕಟದಾಸರು