ಒಟ್ಟು 1497 ಕಡೆಗಳಲ್ಲಿ , 112 ದಾಸರು , 1202 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುರಾಯ ನೀ ಎನ್ನ ತವರ ಮನಿ | ಶರಣರಿಗೆ ಕೈವಲ್ಯದಾನಿ ಪ ಗುರುವೆ ಎನ್ನ ಬಂಧು | ಬಂದು ಪೇಳಿರಿ ವಾಕ್ಯ ಎನಗೊಂದು | ಬಿಡಿಸೀದಿ ಈ ಜೀವಶಿವ ಸಂದು | ನಿಜರೂಪ ತೋರಿದಿ ಕೃಪಾಸಿಂಧು 1 ಶಮ ದಮವು ಕೊಡುತಾನೆ |ಅಂತರ ಬಾಹ್ಯದಲಿ ತಾ ತುಂಬ್ಯಾನೆ 2 ಇರಲಾರೆನು ಬಿಟ್ಟು ಅರಕ್ಷಣಾ | ಗುರುರಾಯ ಎನ್ನಜೀವದ ಪ್ರಾಣ | ದೊರಕಿದಿ ಪರಮವೇ ದಾನಸಾರಿ ಪೇಳುವ ಜ್ಞಾನಬೋಧ ಪೂರ್ಣ 3
--------------
ಜ್ಞಾನಬೋದಕರು
ಗುರುವೆ ನಿನ್ನಯ ದಾಸನಾದೆ ಎನ್ನಕರುಣದಿ ಪೊರೆವೊಡೆ ನಾನೇ ನೀನಾದೆ ಪ ನಿರ್ಮಳ ಕಾವಿಯನುಟ್ಟು ಭೇದಮರ್ಮವೆನಿಪ ರುದ್ರಾಕ್ಷಿಯ ತೊಟ್ಟುಧರ್ಮ ಕುಂಡಲವೆಂಬೊದಿಟ್ಟು ಹರಕರ್ಮ ಭಸ್ಮವ ಸ್ಥಾನ ಸ್ಥಾನಕೆ ಇಟ್ಟು 1 ಸ್ವಸ್ಥ ಸುಸ್ಥಳದಲ್ಲಿ ಕುಳಿತು ಗುರುವಿಸ್ತರಿಸಿದ ಗೋಪ್ಯವ ಮಾಡ ಕಲಿತುನಾಸ್ತಿ ಎಂಬುದ ನಾ ಮರೆತು ಪರವಸ್ತುನೀ ನಿಜವೆ ಎಂಬುದ ನಾನರಿತು 2 ತಾನೆಂದು ಚಿಂತಿಸಲ್ಯಾಕೆ ಚಿ-ದಾನಂದ ಗುರುವೆ ಎದುರಲಿರಲಿಕೆಧ್ಯಾನ ಮೌನಗಳವು ಯಾಕೆ ನಾನುನೀನೆ ಎಂಬುದ ಮನಗಂಡಿರಲೇಕೆ 3
--------------
ಚಿದಾನಂದ ಅವಧೂತರು
ಗುರುವೆ ಪರಬ್ರಹ್ಮ ವಾಸುದೇವಾರ್ಯಗುರುವೆ ಪರಬ್ರಹ್ಮ ಪಅರಿವು ಮರವೆಗಳ ಪರಿಯ ನಿರೂಪಿಸಿಅರಿ'ನ ಘನವಾಹ ತೆರಗೈದು ಪಾಲಿಪ ಅ.ಪಸುಖಬುದ್ಧಿುಂಪಾಪಾಸಕ್ತ ಮಾನಸರನುಯುಕುತಿುಂದಲಿ ಹರಿಭಕುತಿಗಳವಡಿಪ 1ಭಾಗವತಾರ್ಥದಿ ರಾಗವ ಪುಟ್ಟಿಸಿಹಾಗೆ ಗೀತಾಮೃತ ಸಾಗರದೆಡೆಗೊಯ್ವ 2ನಾನಾಮತಗಳೊಳು ಮಾನಿಸಹೊಗದಂತೆಶ್ರೀನಿವಾಸನ ಪಾದಧ್ಯಾನವ ಬಲಿಸುವ 3ಕಾಮಾದಿ ಕಲುತ ತಾಮಸ ಜನರನುಪ್ರೇಮದಿಂದಲಿ ಸಪ್ತ ಭೂ'ುಕೆಗೇರಿಪ 4ಒಂದೊಂದರೊಳು ಮತಿನಿಂದು ತಿಳಿದೊಳಿಸೆಂದು ನಡೆದೂ ಪೂರ್ಣಾನಂದರಹುದಮಾಳ್ಪ 5ಹೊರಗೊಳಗುಗಾಣದೆ ಬರಿಯರಿವಳಮಲಪರಮನೆ ನಾನೆಂಬ ಪರಿಗೈದು ಪೊರೆವ 6ಕರುಣದಿಂ ಚಿಕನಾಗಪುರದಿ ಭಜಕರಿಗೆಕರದು ಜ್ಞಾನಾಮೃತವೆರೆವ ವಾಸುದೇವಾರ್ಯ 7
--------------
ವೆಂಕಟದಾಸರು
ಗುರುಸ್ತುತಿ ರಾಘವೇಂದ್ರ ಸಲಹೊ ಗುಣಸಾಂದ್ರ ಪ ಭಗವದ್ಗೀತಾ ವಿವರಣ ತಂತ್ರದೀಪ ನಿಗಮತತಿಗೆ ಖಂಡಾರ್ಥವ ರಚಿಸಿ ಖಗರ್ಥಗಳನು ಅತಿ ಸ್ಫುಟವಾಗಿ ವಿವರಿಸಿ ಖಗವಾಹನ ತೋರಪಡಿಸಿದ ಧೀರ 1 ಧರಣಿ ವಿಜರರಿಗೆ ವರಗಳ ಕೊಡುವಂಥ ಸುರತರುವೆ ನಿಂಗೆ ಕರಗಳ ಮುಗಿದು ಪರಮಪುರುಷ ಹರಿಚರಣ ಕಮಲದಲಿ ಸ್ಥಿರವಾದ ಭಕುತಿಯ ಬೇಡುವೆ ಧೀರ 2 ಚಂಡ ಕುಮತಗಳ ಖಂಡಿಸಿ ಬುಧಜನ ಮಂಡಲದೊಳಗೆ ಪ್ರಚಂಡನೆಂದೆನಿಸಿ ಕುಂಡಲಿಶಯನ ಪಾದಮಂಡಿತ ಹೃದಯ ಭೂ ಮಂಡಲದೊಳಗೆ ಅಖಂಡಲನಾದ 3 ಶ್ರದ್ಧೆಯಿಂದಲಿ ವರ ಮಧ್ವಾಚಾರ್ಯರ ಮತ ಪದ್ಧತಿ ಬಿಡದಂತ ಬುದ್ಧಿಯನಿತ್ತು ಉದ್ಧರಿಸಯ್ಯ ಕೃಪಾಬ್ಧಿಯೇ ಬುಧಜನಾ ರಾದ್ಯಚರಣ ಪರಿಶುದ್ಧ ಚರಿತ್ರ 4 ಕಾಮಜನಕನಾದ ನಾಮಗಿರೀಶ್ವರಿ ಸ್ವಾಮಿ ನೃಹರಿಪಾದ ತಾಮರಸಂಗಳ ಪ್ರೇಮದಿ ಪೂಜಿಪೆನೆಂಬೊ ಕಾಮಿತವರ ನೀಡೊ ಶ್ರೀ ಮತ್ಸುಧೀಂದ್ರಕರ ತಾಮರಸಭವನೆ 5
--------------
ವಿದ್ಯಾರತ್ನಾಕರತೀರ್ಥರು
ಗೋಕುಲದ ಸತಿಯರೆಲ್ಲ ಶ್ರೀಕೃಷ್ಣನಾಟಗಳದೂರುತಲೆ ಪಾಡುವರು ಪ. ಕಪಟ ಸರ್ವಾಂಗದೊಳಗಿದಕೊಮಣ್ಣ ಮೆಲುವನು ತನ್ನ ತೆರೆಬಾಯಿ ತೆರೆವನಿವಚಿಣ್ಣತನದಾ ತನುವ ತೋರುತಲೆ ವನದೊಳಗೆಪಣ್ಣು ಫಲಗಳ ಸವಿವುತಅಣ್ಣನೊಡನೆ ಕೊಳಲನೂದುತಲಿ ಗೋಕುಲದಹೆಣ್ಣುಗಳ ಮರುಳು ಮಾಡುವ ಗಂಡುಗಲಿಯಿವನಿನ್ನ ಮಗ ಅಮ್ಮಮ್ಮ ಶುಕನ ನುಡಿಗಳ ಗೆಲುವಬಣ್ಣಿಸುವ ಕವಿಯದಾವ1 ಸುರರು ಸೋಲುತಿರೆಆರ್ತಿಯ ಕಳೆವರೆ ಭವರೋಗಕಿವನೆ ಮದ್ದುಇತ್ತಲೀತನ ಚೆಲುವ ಕಾಣುತಲಿ ಕಂದರ್ಪಪೃಥ್ವಿಯಲಿ ಬಿಲ್ಲ ಬಿಸುಟ 2 ಮೂರ್ತಿ ಕೀರ್ತಿಯ ಸೊಬಗುಚಿತ್ರ ಚರಿತ್ರಗಳ ಕಂಡಿರೆ ನಿಮ್ಮ ಕುಮಾರನಾದ ಹತ್ತುಸಾವಿರ ಪೆಸರು ಸಲ್ಲುವುದಮ್ಮ ಸ-ರ್ವತ್ರ ನೋಡುವ ಸುಜನರುಚಿತ್ತದೊಳಗೆಲ್ಲ ಪುರವಿಟ್ಟವರು ಅರಸುತಿರೆವ್ಯಾಪ್ತನೆಂಬುದಕೆ ತಮ್ಮ ತಮ್ಮ ಮನವೇ ಸಾಕ್ಷಿಮುಕ್ತಿ ನಮಗೇಕೆ ಹಯವದನನಂಘ್ರಿü್ರಗಳಾಣೆನಿತ್ಯದಲಿ ಇವನ ನೋಡುತಲಿಹುದು ಸಾಕೆಲೆ ಗೋಪಿ3
--------------
ವಾದಿರಾಜ
ಗೋದೆ ಸಮಸ್ತಫಲದೆ ಸ್ನಾನ ಒದಗಿಮಾ-ದರೊಮ್ಮೆ ವೈಕುಂಠಪದವೀವೆ ಪ. ಬ್ರಹ್ಮಾದಿ ಶಿಖರದಿಂ ಪುಟ್ಟಿ ನೀನು ಬಲುಬ್ರಹ್ಮ ಋಷಿಯಾದ ಗೌತಮ ಮುನಿಯಬ್ರಾಹ್ಮರಿಂದಲಿ ಬಂದ ಗೋಹತ್ಯ ಪರಿಹರಿಸಿಅಮ್ಮಮ್ಮ ಸಪ್ತಮುಖದಿಂದ ಸಾಗರವ ಬೆರೆದೆ 1 ಆದಿಯಲಿ ತ್ರಿಯಂಬಕನ ಜ[ಡೆ]ಯಲುದಿಸಿದೆ ನೀನುಮುದದಿಂದ ಪಶ್ಚಿಮಕಾಗಿ ನಡೆಯೆ ಕಂಡುಒದಗಿ ಗೌತಮನು ಕುಶದಿಂದ ತಿರುಗಿಸÀಲು ನೀಸದಮಲ ಕುಶಾವರ್ತಳೆಂದೆನಿಸಿಕೊಂಡೆ 2 ಔದುಂಬರ ವೃಕ್ಷಮೂಲದಿಂದುದ್ಭವಿಸಿಉದಧಿಯನು ಕೂಡಬೇಕೆಂದು ಬೇಗಮೇದಿನಿಯಿಳಿದು ತಿರುಗುತಲಿ ನೀ ಮುದದಿಂದಆದರದಿ ಪೂರ್ವಾಬ್ಧಿಯನು ಕೂಡಿದೆ 3 ಸಿಂಹರಾಸಿಯಲಿ ಸುರಗುರು ಬಂದುದು ಕೇಳಿಅಂವ್ಹ ರಾಸಿಗಳು ಸಂಹಾರಕಾಗಿಬಂಹ್ವಾಯಾಸದಿ ಬಂದು ನಿಮ್ಮನು ಕಂಡೆಅಂವ್ಹಂಗಳು ಪರಿಹರಿಸಿ ಮುಕುತಿಯ[ಕೊಡು]ದೇವಿ 4 ವಿನಯದಲಿ ಸ್ನಾನಪಾನವನು ಮಾಡುವರಿಗೆವನಜಾಕ್ಷ ಹಯವದನ ಹರಿಯವನಜನಾಭನ ಲೋಕಸಾಧನವಾದಘನ ಭಕುತಿಯನಿತ್ತು ರಕ್ಷಿಸುದೇವಿ 5
--------------
ವಾದಿರಾಜ
ಗೋಪಗೋವಿಂದ ವಿಠಲ | ನೀ ಪಾಲಿಸಿವಳಾ |ಸ್ವಾಪಜಾಗ್ರತ್ಸುಪ್ತಿ ಸರ್ವ ಕಾಲದಲೀ ಪ ಪತಿಸುತರು ಭಾಂದವರು | ಹಿತದಿಂದ ಸೇವಿಸುತಕೃತಿಸರ್ವ ನಿನಸೇವೆ | ಮತಿ ನೀಡೊ ಹರಿಯೇ |ಅತುಳ ವೈಭವ ತೋರಿ | ಕೃತಕಾರ್ಯಳೆಂದೆನಿಸುಕ್ಷಿತಿರಮಣ ನಿನಗಿದುವೆ ಪ್ರಾರ್ಥಿಸುವೆ ದೊರೆಯೇ 1 ಮೋದಮುನಿ ಮತ ದೀಕ್ಷೆ | ಸಾದರದಿ ಕೊಟ್ಟೈದುಭೇದಗಳ ತಿಳಿಸುತ್ತ | ಕಾದುಕೊ ಇವಳಾನೀದಯದಲಂಕಿತವ | ಓದಿಸಿಹೆ ತೈಜಸನೆಸಾದಿಸುವೆ ಅದನೀಗ | ಹೇ ದಯಾವರನೇ 2 ಸಂಚಿತ ಕಳೆವ | ಧರ್ಮ ನಿನ್ನದೊ ಸ್ವಾಮಿಭರ್ಮ ಗರ್ಭನ ಪಿತನೆ | ಕರ್ಮನಾಮಕನೇ ನಿರ್ಮಮತೆ ಮನದಿ ನಿ | ಷ್ಕಾಮ ಕರ್ಮದಲಿವಳಪೇರ್ಮೆಯಲ್ಲಿರಿಸೆಂದು | ಸ್ವಾಮಿ ಪ್ರಾರ್ಥಿಸುವೇ 3 ಸರ್ವಜ್ಞ ಸರ್ವೇಶ | ಸರ್ವದಾ ತವನಾಮಸರ್ವತ್ರ ಸ್ಮøತಿಯಿತ್ತು | ಸರ್ವಾಂತರಾತ್ಮದುರ್ವಿಭಾವ್ಯನೆ ದೇವ | ದರ್ವಿ ಜೀವಿಯ ಕಾವಸರ್ವ ಕರ್ತೃವು ನೀನೆ | ಶರ್ವ ಸನ್ನುತನೇ 4 ಸೃಷ್ಟಿಕರ್ತನೆ ದೇವ | ಕಷ್ಟಗಳ ಪರಿಹರಿಸಿಶಿಷ್ಟಳ್ಹøತ್ಕಂಜದಲಿ | ಇಷ್ಟ ಪ್ರದನಾಗೀಇಷ್ಟ ಮೂರ್ತಿಯ ಕೋರಿ | ಹೃಷ್ಟಳನ ಮಾಡೆಂದುಕೃಷ್ಣ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಗೋಪಾಲ ಸಕಲಪಾಲ ಶ್ರೀಪಾಲ ಜಗಕೆ ಮೂಲ ಪ ತಾರಾಧಿಪಾಶು ಜಾಲ ಶ್ರೀ | ಪಾವನ ಚರಣ ಮಾಲೋಲ ಅ.ಪ ಗೋಪಿಕಾ ವನಸುಮ ಮಧುಕರ ಸುರುಚಿರ ಸುಖಕರ ವಿಸರ ಅಘಕುಲಪರಿಹರ ಸಮೀರಕುವರ ನುತಪದಮುಕುರ ಮುರಳೀಧರಿತಕರ ನೀರಜಾಕ್ಷಶೃಂಗಾರ ನಿಕರ ಮಾಂಗಿರೀಶ ಭವನಾಶ ರಾಮಭದ್ರ ಶುಭಕರ ವಿಧಿಶಿವ ಸುರನಿಕರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಾಲ ಹರಿ ವಿಠಲ ನೀ ಪಾಲಿಸಿವಳಾ ಪ ಪಾಪೌಘಗಳ ಕಳೆದು ಸುಪವಿತ್ರಳನೆ ಮಾಡಿಕೈ ಪಿಡಿದು ಪೊರೆಯಿವಳ | ಗೋಪಾಲ ಬಾಲ ಅ.ಪ. ನಿನ್ನ ಸೇವಿಸೆ ದಾಸ | ಘನ್ನ ದೀಕ್ಷೆಯ ಮನದಿಕನ್ಯೆ ಬಹು ಭಕ್ತಿಯಲಿ | ಬಿನ್ನವಿಸಿ ಇಹಳೊಮನ್ಯು ಸೂಕ್ತೋದಿತನೆ | ಚೆನ್ನ ತೈಜಸನಾಗಿಇನ್ನು ಪೇಳ್ದಂಕಿತವ | ಕನ್ಯೆ ಗಿತ್ತಿಹನೋ 1 ಪತಿಸೇವೆ ದೊರಕಿಸುತ | ಪತಿವ್ರತೆಯಳೆಂದೆನಿಸಿಅತುಳ ವೈಭವ ತೋರಿ | ಹಿತದಿಂದ ಪೊರೆಯೋವ್ರತತಿ ಜಾಸನ ಪಿತನೆ | ಗತಿಗೋತ್ರ ನೀನೆನಿಸಿಸುತೆಸಮಳ ಪೊರೆವುದಕೆ | ಮತಿ ಮಾಡೊ ಹರಿಯೇ 2 ತಾರತಮ್ಯ ಜ್ಞಾನ ಮೂರೆರಡು ಭೇದಗಳಸಾರತತ್ವಗಳುರುಹಿ | ಸಾರತಮ ನಿನ್ನಾಪಾರುಗಾಣದ ಮಹಿಮೆ | ಚಾರುಕೀರ್ತಿಸುವಂತೆತೋರೊ ಸನ್ಮಾರ್ಗವನು | ವಾರಿನಿಧಿ ಶಯ್ಯಾ 3 ಹರಿಗುರೂ ಸದ್ಭಕ್ತಿ | ಹಿರಿಯರಲಿ ಆಸಕ್ತಿಸರ್ವ ಕಾರ್ಯವು ಹರಿಯ ವರಸೇವೆಯೆಂಬಾವರಮತಿಯ ಕರುಣಿಸುತ | ಹರಿಯು ತಾನಿತ್ತುದನಹರುಷದಲಿ ಉಂಬಂಥ | ಅರಿವು ಕೊಡು ಸತತ 4 ಭಾವಜಾರಿಯ ತಾತ | ಪಾವಮಾನಿಯ ಪ್ರೀತಕೇವಲಾನಂದಮಯ | ಜೀವ ಪರತಂತ್ರಾಈ ವಿಧವು ಇರಲಾಗಿ | ನೀವೊಲಿಯಲಿನ್ಯಾರುಕಾವರನು ಕಾಣೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗೋಪಾಲದಾಸರ ಸ್ಮರಣೆ | ಬಹುತಾಪತ್ರಯದ ನಿವಾರಣೆ ಪ ಶ್ರೀಪತಿ ವೇಂಕಟೇಶನ | ಸಾಪರೋಕ್ಷದಿ ಕಂಡುಹಿಗ್ಗುತವ್ಯಾಪ್ತದರ್ಶಿಗಳಾಗಿ ಭಕ್ತಿಲಿ | ಆಪರಂತಪನೊಲುಮೆಗಳಿಸಿದ ಅ.ಪ. ಬಾಲ್ಯತನದಿ ವೇದಮಾತಾ | ಎಂಬಗಾಯತ್ರಿ ಮಂತ್ರವು ಜಪ್ತಾ |ಸೂರ್ಯಾಂತರ್ಗತನಾದ | ಹರಿಯನ್ನು ಕಾಣುತಾಕಾರ್ಯೋನ್ಮುಖನು ಆದ | ಪ್ರಶ್ನೆಗಳ ಪೇಳಲು 1 ಇರಲೊಂದು ಕಾಲಕ್ಕೆ ವಿಜಯಾ | ದಾಸರ್ ಬರವಾಯ್ತು ಕೇಳಿರಿ ಚರ್ಯಾ || ವರ ವಿಜಯ ದಾಸಾರ್ಯರೆಂಬರ | ಪ್ರತಿಭೆಯಾವರಣ ಮುಸುಕಿಲಿನಿರುತ್ತರರು ಆಗಿಹರ್ | ಪ್ರಶ್ನೋತ್ತರಗಳ ಕೇಳಲು2 ಮೂಷಕ | ವರಸುವಾಹನನಂಶ ಸಂಭವ 3
--------------
ಗುರುಗೋವಿಂದವಿಠಲರು
ಗೋಪಿ ಹಾಡಿ ದಣಿಯಳೂ ಪ ನೋಡಿ ಹಾಡಿ ಹೊಗಳಿ ಕೃಷ್ಣಗೆ ಮಾಡಿ ಮಾಡಿ ಸಿಂಗರವನು ಅ.ಪ ಮಣ್ಣತಿಂದು ಚಪ್ಪರಿಸುವ ಚಿಣ್ಣನೆಡೆಗೆ ಓಡಿಬಂದು ಸಣ್ಣಬಾಯ ಬಿಡಿಸಿ ವಿಶ್ವವ ಕಣ್ಣಿನಿಂದ ಕಂಡು ನಲಿದು 1 ವಿಕಳೆಯಸುವ ಹೀರಿ ಕುಣಿದು ಶಕಟಖಳನನೊದ್ದು ಕೊಂದು ಬಕನ ಸೀಳಿ ಫಣಿಯ ತುಳಿದ ವಿಕಸಿತಾಂಗನ ಹಾಡಿ ಹೊಗಳಿ 2 ಗಿರಿಯನೆತ್ತಿ ಬೆರಳಿನಿಂದ ಕರದಮುರಳಿನಾದದಿಂದ ಧರೆಯ ದಿವಿಯಗೈದ ಮಾಂಗಿರಿಯರಸರಂಗನಂಗವ ನೋಡಿ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋವಿಂದ ಗೋವಿಂದ ಎನ್ನಲರಿಯದೆ - ವೃಥಾನೋವಿಂದ ಭಂಗವ ಪಡುವುದುಚಿತವೆ ? ಪ ಕ್ಷೀಣ ಶಾಸ್ತ್ರಾರ್ಥವನು ಪರಿಗ್ರಹಿಸಿ ನಿಖಿಲ ಕುರಿಕೋಣಗಳ ತಲೆಚೆಂಡ ಕುಟ್ಟಿಸುತಪ್ರಾಣ ಹತ್ಯವ ಮಾಳ್ಪುದಾವ ಸತ್ಕರ್ಮ - ನಾರಾ-ಯಣನ ನಾಮಸ್ಮರಣೆ ಮಾಡು ಮನವೆ 1 ಖಂಡವನು ಕೊಯ್ದು ಕೊಡಬೇಡ ದಳ್ಳುರಿಯಗ್ನಿಕುಂಡವನು ಹೊಕ್ಕು ಹೊರಡುವುದುಚಿತವೆಭಂಡರಂದದಿ ಬತ್ತಲೆಯೆ ಬರುವುದಾವಾಟಪುಂಡರೀಕಾಕ್ಷನ ನೆನೆ ಕಂಡ್ಯ ಮನವೆ 2 ಕುಟ್ಟಿಕೊಳ್ಳದಿರಿ ಜಟ್ಟಿ ಗುಂಡಿನಲಿ, ಶಸ್ತ್ರವನುಚಿಟ್ಟಿ ಕೊಳ್ಳದಿರಿ, ಬೆನ್ನಲಿ ಸಿಡಿಯನುಕಟ್ಟಿ ತೂಗಿಸಿಕೊಳ್ಳದಿರಿ ಕರಟಕದಂತೆಗುಟ್ಟಿನಲಿ ಗೋಪಾಲಕನ ಸ್ಮರಿಸು ಮರುಳೆ 3 ತೊಗಲ ಬಿಲ್ಲೆಗಳ ಕೊರಳಲ್ಲಿ ಕಟ್ಟಿಕೊಂಡುಹಗಲಿರುಳು ಅನ್ನಪಾನಕೆ ಹೋಗದೆಮೃಗವೈರಿಯಂತೇಕೆ ಕಿಸುಕೆಲೆವ ರಂಪಾಟಜಗದಾಧಿಪತಿಯ ನಾಮ ಸ್ಮರಿಸು ಮರುಳೆ 4 ಉತ್ತಮರು ಸುರೆಯನೀಂಟುವರೆ ತರಹರಿಸಿ ಮದೋ-ನ್ಮತ್ತರಾಗಿ ಅಸಭ್ಯ ಶಬ್ದವ ನುಡಿವರೆಸತ್ತ ಹೆಣದಂತೆ ಬಿದ್ದಿಹುದಾವ ನೀತಿ ಪುರು-ಷೋತ್ತಮನ ನಾಮ ಸ್ಮರಣೆಯ ಮಾಡು ಮನವೆ 5 ವೇದೋಕ್ತ ಪೂಜೆಯಲಿ ತೃಪ್ತಿಪಟ್ಟರೆ ನೀವುಅದರಿಂದ ಫಲವೇನು ಪೇಳಿರಯ್ಯನಾದವನು ಕೇಳ್ದ ಹರಿಣದಂದದಿ ಕೆಡದೆ ಮಧುಸೂದನನ ನಾಮ ಸ್ಮರಣೆಯ ಮಾಡು ಮರುಳೆ 6 ನಿಂದಾಪವಾದ ಘಟಿಸುವುದೈಸೆ ಇದರಿಂದಮುಂದೆ ಮುಕ್ತಿಯು ನಿಮಗೆ ಸಾಧ್ಯವಹುದೆತಂದೆ ಶ್ರೀ ಕಾಗಿನೆಲೆಯಾದಿಕೇಶವ ನಾಮಒಂದೇ ವೈಕುಂಠ ಪದವನೈದಿಪುದಯ್ಯ 7
--------------
ಕನಕದಾಸ
ಗೋವಿಂದ ನಿನ್ನಾನಂದದಲ್ಲಿಡೋ ಗೋವಿಂದ ಪ ಗೋವಿಂದ ಹೃದಯಾರವಿಂದದಲ್ಲಿ ಇಂದೂ ಮುಂದೂ ಚರಣಾರವಿಂದ ತೋರೊ ಅ.ಪ ಬೆಟ್ಟದ ದರುಶನ ಲಾಭವು ಕಷ್ಟ ಪಟ್ಟರು ದೊರೆಯಲಸಾಧ್ಯವು ನೋಡೆ ಸುಟ್ಟು ಹೋಗುವುದಘರಾಶಿಯು ಪಟ್ಟ ಶ್ರಮವು ಇಷ್ಟಾರ್ಥವು ದಿಟ್ಟ ಮನವ ಕೊಟ್ಟು ಅಟ್ಟುರಿಯ ಕಳೆದು ಮೆಟ್ಟು ಮೆಟ್ಟಲನೇರಿ ದಿಟ್ಟಿಪರೋ ನಿನ್ನ1 ಪದುಮಜಾಂಡ ಕೋಟಿ ನಾಯಕ ದೇವ ಶ್ರೀದ ಸೃಷ್ಟಾದ್ಯಷ್ಟ ಕರ್ತೃ ನೀನೆ ಆದ್ಯಂತ ಜಗದಾಧಾರಕ ಅಂತರಾತ್ಮಕ ವಿಶ್ವವ್ಯಾಪಕ ಆದಿಮೂಲ ಚತುಷ್ಪಾದ ಎಂದೆನಿಸಿ ತ್ರಿ- ಪಾದ ಇಳೆಯೊಳಿಟ್ಟೆ 2 ಸದಮಲಾತ್ಮಕನೇ ದೇವ ಸರ್ವದಾ ಎಲ್ಲಾ ಹದಿನಾಲ್ಕು ಲೋಕವ ಧರಿಸಿದೆ ದಿವ್ಯ ನೆಲೆಸಿದೆ ಸರ್ವರ ಹೃದಯದ ಪದುಮದಲಿ ಪೊಳೆದು ತ್ರಿಜಗವಂದಿತನಾಗಿ ಮೇದಿನಿಯೊಳು ಮೆರೆಯುತಿಹೆ 3 ಧ್ವಜವಜ್ರಾಂಕುಶಯುಕ್ತಲಾಂಛನ ದೆÉೀವ ಅಬ್ಜಭವಾರಾಧ್ಯ ಚರಣದಿವ್ಯ- ಅಬ್ಜಸಖಕೋಟಿಕಿರಣ ಪಾದಾಭರಣದಿಂದ ಕಿರಣಾ ತಾ ಝಗಝಗಿಸುತ್ತ ನೂಪುರ ಕಾಲಂದಿಗೆ ಗೆಜ್ಜೆ ಸಜ್ಜುಗೊಂಡಿಹ ಮೂರ್ಜಗದೊಡೆಯನೆ ಹರಿ 4 ತಟಿತಕೋಟಿನಿಭಸಮಕಾಯ ಕಟಿಯ ದಿವ್ಯರತ್ನಖಚಿತದಟ್ಟಿಯಾ ತೊಟ್ಟ ಪಟ್ಟೆಪೀತಾಂಬರ ಬಟ್ಟೆಯಾ ಸೊಂಟಪಟ್ಟಿಯ ಇಟ್ಟ ಪರಿಯಾ ಅಟ್ಟಹಾಸದಿ ನಿಂದ ಸೃಷ್ಟಿಗೊಡೆಯ ಮನೋ- ಭೀಷ್ಟದಾಯಕ ಬೆಟ್ಟದೊಡೆಯನೆ 5 ಕರಚತುಷ್ಟಯದಲ್ಲಿ ಮೆರಯುವಾ ಶ್ರೀ ಸು- ದರ್ಶನ ಶಂಖದಿಂದಿರುವಾ ದೀನ ಶರಣಜನರಿಗಭಯ ಹಸ್ತವಾ ಕರೆದು ನೀಡುವ ಕಾಮಿತಾರ್ಥವ ಪರಿಪರಿ ಭಾಪುರಿ ಭುಜಗಾಭರಣಾದಿಗಳ ಧರಿಸಿರುತ ಭಕ್ತಜನರಘ ಹರಿಸುವಾ6 ವಕ್ಷಸ್ಥಳದಲ್ಲಿ ಶ್ರೀವತ್ಸವೂ ಕಂಠ ದಕ್ಷಿಣದಲ್ಲಿ ತೋರ ನಕ್ಷತ್ರದಂತಿಹ ಹಾರವೂ ಕುಕ್ಷಿ ಅಂದವೂ ಮೋಕ್ಷದಾತೃವು ಅಕ್ಷರ ವಾಚ್ಯತ್ರ್ಯಕ್ಷಾದಿ ಸುರವಂದ್ಯ ಈ ಕ್ಷಿತಿಗಿಳಿದು ಪ್ರತ್ಯಕ್ಷನಾಗಿ ನಿಂದೆ 7 ಮಂದಹಾಸಮುಖ ಅರವಿಂದ ದಂತ ಚಂದಕರ್ಣಕುಂಡಲದಿಂದ ಕೆಂದುಟಿಯಿಂದ ಒಪ್ಪುವ ಚೆಂದ ಪೊಂದಿ ಮಕುಟ ಸರ್ವಾಲಂಕಾರ ಪರಿಪೂರ್u ಬಂಧ ಮೋಚನ ಹರಿ ಶ್ರೀ ವೇಂಕಟೇಶನೆ 8 ಪರಿಪರಿ ಮುಕ್ತಜೀವರುಗಳು ಇಲ್ಲಿ ಪರಿವಾರ ತರುಲತೆ ಶಿಲೆಗಳು ಇನ್ನು ವಿರಜೆ ಮೊದಲಾದ ಸರ್ವತೀರ್ಥವು ಸ್ವಾಮಿ ತೀರ್ಥವೂ ಮೋಕ್ಷದಾತೃವೂ ಭವ ಶಕ್ರಾದಿನುತಉರಗಾದ್ರಿವಾಸವಿಠಲ ಜಗದೀಶನೆ 9
--------------
ಉರಗಾದ್ರಿವಾಸವಿಠಲದಾಸರು
ಗೋವಿಂದ ಸಲಹೆನ್ನನು - ಸದಾನಂದಗೋವಿಂದ ಸಲಹೆನ್ನನು ಪ ಗೋವಿಂದ ಸಲಹೆನ್ನ ಕುಮುದಲೋಚನ ನಿನ್ನಸೇವಕರಡಿಯ ಸೇವಕನಯ್ಯ ಗೋವಿಂದ ಅ ಅಚ್ಯುತ ಸರ್ವೋ-ತ್ತಮನೆ ಚಿನ್ಮಯ ಗೋವಿಂದ - ನಿಶ್ಚಲಭಕ್ತಿಕ್ರಮವ ಬೋಧಿಸೊ ಗೋವಿಂದ - ಪಾಪವನೆಲ್ಲಶಮನಗೊಳಿಪ ಗೋವಿಂದ - ಲಕ್ಷ್ಮೀರಮಣನಮೋ ದಶಾವತಾರಿ ಗೋವಿಂದ 1 ಮನವೆನ್ನ ಮಾತು ಕೇಳದು ಕಾಣೊ ಗೋವಿಂದಮನವ ಗೆಲ್ಲುವ ಬಲ ಎನಗಿಲ್ಲ ಗೋವಿಂದಕನಸಿನಂತಿಹ ದೇಹ ಸ್ಥಿರವಲ್ಲ ಗೋವಿಂದಬಿನುಗು ಬುದ್ಧಿಗಳ ಬಿಡಿಸಯ್ಯ ಗೋವಿಂದನೆನಹು ನಿನ್ನೊಳಗಿಟ್ಟು ನಡೆಸಯ್ಯ ಗೋವಿಂದನೆನೆವ ದಾಸರ ಮನದೊಳಗಿರ್ಪ ಗೋವಿಂದವನಜಲೋಚನ ನಾ ನಿನ್ನವನಯ್ಯ ಗೋವಿಂದಘನ ಮಹಿಮನೆ ನಿನ್ನ ಮೊರೆಹೊಕ್ಕೆ ಗೋವಿಂದಮುನಿಗಳ ಮನದೊಳು ಮಿನುಗುವ ಗೋವಿಂದನಿನಗಲ್ಲದಪಕೀರ್ತಿ ಎನಗೇನೊ ಗೋವಿಂದಜನನ ರಹಿತ ಗೋವಿಂದ - ನಿನ್ನಡಿಗಳನೆನವು ಕೊಡೊ ಗೋವಿಂದ - ದುರ್ವಿಷಯ ವಾ-ಸನೆಯ ಬಿಡಿಸೊ ಗೋವಿಂದ - ಕುತ್ಸಿತ ಕೆಟ್ಟತನವ ಬಿಡಿಸೊ ಗೋವಿಂದ - ಸದ್ಗುಣವೆಂಬಧನವ ತುಂಬಿಸೊ ಗೋವಿಂದ - ಇದಕ್ಕೆ ಬಡ-ತನವೆ ನಿನಗೆ ಗೋವಿಂದ - ಸದಾ ನಿನ್ನಘನ ಸ್ಮರಣೆ ಕೊಡು ಗೋವಿಂದ - ಸನಕಸನಂದನಾರ್ಚಿತ ಗೋವಿಂದ 2 ಕಿನ್ನರ ಸನ್ನುತ ಗೋವಿಂದ - ಅಪರಿಮಿತಕರುಣಾಸಾಗರ ಗೋವಿಂದ - ಅರಿಯದಂಥಪರಮ ಜ್ಯೋತಿಯೆ ಗೋವಿಂದ - ಗಂಗೆಯ ಪೆತ್ತಚರಣ ನಿರ್ಮಲ ಗೋವಿಂದ - ತೆತ್ತೀಸ ಕೋಟಿಸುರರ ಪೊರೆವ ಗೋವಿಂದ - ಶ್ರೀವೈಕುಂಠಪುರದೊಳಗಿಹ ಗೋವಿಂದ - ಅಚ್ಯುತಾನಂತತಿರುಪತಿ ನೆಲೆಯಾದಿ ಕೇಶವ ಗೋವಿಂದ 3
--------------
ಕನಕದಾಸ
ಘನ ಗುರು ನೀನೆನೋ ಎನಗೆ ಸಾಕ್ಷಾತವೋ ಮನಕಾದನಕೂಲವೋ ಧ್ರುವ ಕಣ್ಣಿಲೆ ಕಂಡೆವೋ ಚನ್ನಾಗ್ಹಿಡಿದೆವೋ ಇನ್ನೆಲ್ಲಿಗ್ಹೋದೆಲವೋ ಮುನ್ನಿನ ಪುಣ್ಯವೋ ನಿನ್ನ ನೋಡಿದೆವೋ ಧನ್ಯ ಧನ್ಯವಾದೆವೋ 1 ಸಾಧಿಸಿ ಬಿಡೆವೋ ಭೇದನ ಮಾಡೆವೋ ಸದಮಲ ಸುಖಗೂಡುವೆವೋ ಸಾಧನ ಮಾಡುವೆವೋ ಭೇದಿಸಿ ನೋಡುವೆವೋ ಸದೋದಿತ ಬೆರದಾಡುವೆವೋ 2 ಗುಹ್ಯ ಗುರುತವೋ ಧ್ಯಾನಿಸುವೆವೋ ದಂiÀiಮಾಡಬೇಕೆಲವೋ ಇಹಪರ ನೀನೆವೋಮಹಿಪತಿ ನಿಜವೋ ತಾಯಿತಂದೆ ನೀನೆವೋ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು