ಒಟ್ಟು 470 ಕಡೆಗಳಲ್ಲಿ , 76 ದಾಸರು , 425 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಷಯಾಸೆ ಬಿಡಲೊಲ್ಲದೋ ದೇವ ಪ. ವಸುದೇವಸುತ ನಿನ್ನ ವಶವಾಗೋತನಕ ಅ.ಪ. ಉದಯದಲಿ ಎದ್ದು ಹರಿಪದಗಳನು ಸ್ಮರಿಸದಲೆಕುದಿದು ಪರರನ್ನೆ ಬೈದು ಸುಯಿದುಮುದದಿಂದ ಮಜ್ಜನವ ಮಾಡದಲೆ ಕಂಡಕಡೆಒದಗಿ ಪರಸದನಕಾಗಿ ಪೋಗಿಮದಗರ್ವದಿಂದ ಗುರುಹಿರಿಯರಿಗೆ ವಂದಿಸದೆಕದನವನೆ ತೆಗೆದು ಬಂದು ನಿಂದುಇದೆ ಸಾಧನವೆಂದು ಉದರ ನೆವದಿ ತಿರುಗಿಸುದತಿಯರ ಸುಖಬಡಿಸಿ ಮದನವೆಗ್ಗಳನಾದೆ 1 ಓದುವೆನು ವಿದ್ಯೆಗಳ ಓದನದ ಬಯಕೆಯಲಿಸಾಧುಶಾಸ್ತ್ರಗಳ ಮರೆದು ತೊರೆದುಕಾದುವೆನು ತರ್ಕವ್ಯಾಕರಣ ಬಲದಿಂದಬೀದಿಬೀದಿಯಲಿ ಚರಿಸಿ ಅರಸಿಮಾಧವನ ಪೂಜಿಸದೆ ಪರರ ಅನ್ನವನುಂಡು ಶೋಧಿಸದೆ ಪುಣ್ಯಪಾಪ ಲೇಪಕ್ರೋಧದಿಂದಲಿ ಇನಿತು ಪರಿಪರಿಯ ಬವಣೆÀಯಿಂದಬೋಧನೆಗೆ ಒಳಗಾಗಿ ಕುಧರ್ಮವನು ಪಡೆದೆ2 ಪರರ ಸೌಭಾಗ್ಯ ವಿದ್ಯಾ ಮಕ್ಕಳ ಕಂಡುಮರುಗಿ ಮನದೊಳಗೆ ಕೊರಗಿ ಸೊರಗಿತರತರಕೆ ಪರರಾಂಗನೆಯರ ಚೆಲುವಿಕೆ ಕಂಡು[ತೆರೆದ] ಕಣ್ಣಿಂದ ನೋಡಿ ಬಾಡಿಎರಗಿ ಮನ ಅವರಲ್ಲಿ ಏಕಾಂತದಲಿ ಕಂಡುಕರದಿ ಸನ್ನೆಯನು ಮಾಡಿ ಕೂಡಿಹೊರಗೆ ಗುಣವಂತನೆಂದೆನಿಸಿ ಧರೆಯೊಳಗೆ ಪಾಮರ ಬುದ್ಧಿಯಿಂದ ಸಂಚರಿಸಿ ನಿನ್ನನು ಮರೆದೆ3 ದೇಶದೇಶಕೆ ಧನದಾಸೆಗಾಗಿ ನಡೆದುಬ್ಯಾಸರದೆ ಮನೆ ಮನೆಗೆ ಪೋಗಿ ಕೂಗಿಭೂಸುರೋತ್ತಮರು ನಾವೆಂದು ಪರರಮುಂದೆಹೇಸದಲೆ ಪೇಳಿಕೊಂಡು ಭಂಡುಮೋಸಗೊಳಿಸಿ ಪರರ ಆಶ್ರಯವನೆ ಮಾಡಿಭೇಷಜವ ತೋರಿ ಕಳೆದೆ ಪೊಳೆದೆಈಸುಪರಿ ಧನವ ತಂದು ಕೂಳನೆ ಹಾಕಿಆಸತಿಸುತರೆನಗೆ ಗತಿಯೆಂದು [ಗುಣಿಸಿದೆ] 4 ಕಾಯದಾಸೆಗಾಗಿ ನೋಯಬಯಸದಲೆ ಉ-ಪಾಯವ ಚಿಂತಿಸುತ್ತಲಿತ್ತಹೇಯವಿಲ್ಲದೆ ಸ್ನಾನ ಸಂಧ್ಯಾವಂದನೆ ತೊರೆದುತೋಯಿಸದೆ ದೇಹವನ್ನು ಇನ್ನುಮಾಯಮೋಸಗಳಿಂದ ಬಾಯಿಗೆ ಬೇಕಾದ್ದುಆಯಾಸಪಟ್ಟು ತಂದು ತಿಂದುಶ್ರೀಯರಸ ಹಯವದನರಾಯನೆ ನಾ ನಿನ್ನಮಾಯವನು ತಿಳಿಯದನ್ಯಾಯದಿಂದಲಿ ಕೆಟ್ಟೆ 5
--------------
ವಾದಿರಾಜ
ವಿಷ್ಣುಶತಕ ಶಿರಿದೇವಿ ಹೃತ್ಕುಮುದ ಚಂದ್ರಮನೆ ಕರುಣಾರ್ಣವಾಗಣಿತ ಸದ್ಗುಣನೇ ಭಂಜನ ಮುರಾಂತಕನೇ ಪರಮಾತ್ಮ ಪಾಲಿಸು ಪರಾತ್ಪರನೇ 1 ಕಮಲಾಸನಾದ್ರಿಜೆ ಮನೋಹರ ಮು ಖ್ಯಮರಾಳಿಯಂ ಭಕುತಿಯಿಂ ಬಲಗೊಂಡು ಮ- ಹಾತ್ಮರಾದ ಗುರುಪಾದಕೆ ನಾಂ ನಮಿಸೀ ಪ್ರಬಂಧವನು ಹೇಳುತಿಹೇಂ2 ನೂರಾದ ಪದ್ಯಗಳೊಳಾಂ ಸಕಲಂ ಧಾರಾಳವಾಗಿ ತವ ಸನ್ನಿದಿಯೋಳ್ ಸಾರಂಗಳಂ ಗ್ರಹಿಸಿ ಬಿನ್ನಯಿಪೇಂ ಶ್ರಿರಾಮನೀಂ ದಯದಿ ಲಾಲಿಸಿ ಕೇಳ್ 3 ಕವಿತಾ ಧುರೀಣತೆಯು ಬಂದುದು ನಿ_ ನವ ಯುಕ್ತಿ ಚತುರತೆಗಳೊಂದರಿಯೇಂ 4 ಜೀವಕ್ಕೆ ನೀನು ಮಿಗೆ ಚಿತ್ತದಿ ಶ್ರೀ ದೇವೀ ಮನೀಷದೊಳು ಬ್ರಹ್ಮನಿಹಂ ಯಾ ವಿಶ್ವನಾಥ ಸಹ ರುದ್ರ ಮನೋ ಭಾವಂಗಳಿಂಗೊಡೆಯನಾಗಿರುವಂ 5 ಸಲೆ ಹಮ್ಮಿಗಾ ತ್ರಿಪುರ ಸಂಹರನೇ ಉಳಿದಿಂದ್ರಿಯಗಳಿಗೆ ಜಿಷ್ಣುಮುಖರ್ ಒಳಗಿದ್ದು ಒಳ್ಳಿದನು ಕೆಟ್ಟುದನೂ ಬಲವಿತ್ತು ಮಾಡಿಸುವರೈ ಹರಿಯೆ 6 ಜಲಜಾತ್ಮಜಾಭಿಮತ ಬಂಧು ಪಥಂ ಗಳು ಮೂರು ಬಗೆಯು ನೋಡಿದರೆ 7 ಮಿಗೆ ಕರ್ಮಕರ್ಮವು ವಿಕರ್ಮಗಳೂ ಜಗದಲ್ಲಿ ಎಲ್ಲರಿಗು ಮೂಲವಿದೂ ತ್ರಿಗುಣ ಪ್ರಬದ್ಧರಹ ಜೀವಗಣಾ ಖಗರಾಜ ವಾಹನನೆ ಸಾಕ್ಷಿಯು ನೀಂ 8 ಸದಸದ್ವಿವೇಕಾವನು ಕಾಣದೆ ಸ ಚಿದಚಿದ್ವಿಲಕ್ಷಣನು ನೀನೆನದೇ ಮದಗರ್ವದಿಂದ ಮೆರೆದಾಂ ಕೆಡುವೇಂ 9 ಕುಹುಕಾತ್ಮರಾದವರ ಸಂಗದಿ ಬಂ- ದಿಹ ನೋವು ನಾನಕಟ ಬಣ್ಣಿಸೇಂ10 ಅಂತವರ್ಗವಾರ್ವರು ಶರೀರದೊಳಿ ದುರ್‍ವೃತ್ತಿ ಪುಟ್ಟಿಸುತ ಕೊಲ್ಲುತಿಹರ್ ಪರಮಾತ್ಮ ನಿನ್ನವರ ಸೇರಿರುವೇಂ 11 ಮಲಮೂತ್ರ ಕೂಪವಹ ದೇಹವಿದು ಜಲಗುಳ್ಳೆ ಎಂದರಿತಡಂ ಬರಿದೇ ಕಲುಷಾತ್ಮನಾದೆ ಕರಿರಾಜವರದಾ 12 ಹಸನಾಗಿ ತೋರುತಿಹ ದುರ್ವಿಷಯಂ ಬಿಸಿನೀರು ತುಂಬಿರುವ ಬಾವಿಯಿದುಂ ಕುಸುಮಾಸ್ತ್ರನೆಂಬ ಕಡುಗಳ್ಳನು ತಾ ನೆಸಗೀ ಪ್ರವಾಹದಲಿ ನೂಕುತಿಹಂ13 ಪಾದ ಪದ್ಮಂಗಳ ನಂಬಿದೆ ವೆಂ- ಮ್ಮವಮಾನ ಮಾನಗಳು ನಿನ್ನದುದೆಂ- ದ್ವ್ಯವಸಾಯವಂತರೆ ಮಹಾತ್ಮಕರೂ 14 ಜನುಮಗಳನೆತ್ತುತಲಿ ಜೀವರು ನಿಂ ನನು ಕಾಂಬ ಯೋಚನೆ ತಿರಸ್ಕರಿಸೀ ಘನ ಕಾಮಭೋಗಗಳಪೇಕ್ಷಿಸಿತಾಂ ಧನಕಾಗಿ ದುರ್ಜನರ ಸೇವಿಸುವರು 15 ಹಿತದಿಂದ ಎಲ್ಲರಿಗೆ ನೀನೆ ಇದಂ ಮತಿಹೀನರಾದವರು ಬಾಹ್ಯರ ನಂ- ಬುತ ದುಃಖದಿಂದಲವಿವೇಕರಹರ್ 16 ಗುಣಶೂನ್ಯ ನೀನೆನುತ ಕೊಂಚ ಜನಂ ಗಣಿಸಲ್ಕಸಾಧ್ಯವಹ ವಾದಗಳಿಂ ಘನ ತರ್ಕದಿಂದ ಅನುವಾದಿಸಿ ದುರ್ ಜನ ಮುಖ್ಯರೆನಿಸುತಿಹರ್ ಭುವಿಯೊಳ್ 17 ಅನುಮಾನವೇ ತಮಗೆ ಮುಖ್ಯವೆನು- ತನುಸಾರಿ ರಾಜಸದಿ ತಾಂ ಮುಳುಗೀ ವನಜಾಕ್ಷ ಕೋರಿಕೆಗಳಿಂ ಭಜಿಪರ್ 18 ಉದರ ಪ್ರಯುಕ್ತ ಪರರಾಶ್ರಯಿಸಿ ಪದ್ಯ ಪದ್ಯ ಪೇಳಿ ಬಹುನೀಚನು ನಾ- ನುದಯಾಸಮುದ್ರರೆಲೆ ನೀವೆನುತೇ ಸುದುರಾತ್ಮರಂ ಪೊಗಳಿ ಕೆಟ್ಟೆನು 19 ಹಿತತತ್ವ ಭಾವದಲಿ ದುರ್ಜನರು ಮತಿವಂತರಂತೆ ಬಹಿಯೋಳ್ ನಟಿಸಿ ಸತಿ ಪುತ್ರ ವಿತ್ತಗಳ ಮೋಹದಲೀ ವ್ಯಥೆಪಟ್ಟು ಬಾಯ್ಬಿಡುತ ನೋಯುತಿಹರ್20 ಮೊದಲಾಗಿ ಎಲ್ಲರನು ಮಾಯದಿ ನಿ- ನ್ನುದ ರಾಖ್ಯ ವಾರಿನಿಧಿಯಿಂದಲಿ ತಾವ್ ಉದಿಸಿರ್ಪರೆಂದುಸುರುಗುಂ ಶ್ರುತಿಗಳ್ 21 ಅನುಮಾನವುಳ್ಳ ಜನಕೆಂದಿಗು ಪಾ- ಮೂರ್ತಿ ನಿನ್ನ ಘನ ಜ್ಞಾನ ಸುಖಂ ತೃಣ ಮಾತ್ರವೂ ಬರದು ಸ್ವಪ್ನದೊಳು ಜನದಲ್ಲಿ ಕೀರ್ತಿ ಬಹಿಯೊಳ್ ಬರಿದೆ 22 ಗುರುಸೇವೆಯಿಂದ ತನುದಂಡಿಸಿ ತಾ ನಿರುತಂ ಸುಶಾಸ್ತ್ರಗಳ ನೋಡುತಲಿ ಸ್ಥಿರ ಚಿತ್ತನಾಗಿ ಶ್ರವಣಾದಿಗಳಿಂ ಹರಿಭಕ್ತರಿಂದ ಕಡೆಸೇರುತಿಹಂ 23 ಕವಿಯಾದವರ್ ನಿರುತವುಂ ಮಿಗೆ ಭಾ- ಗವತಾದಿ ಗ್ರಂಥಗಳ ಸಜ್ಜನರಿಂ ಕಿವಿಯಿಂದ ಕೇಳುವುದಕಂ ಬಹು ಜ- ನ್ಮವು ಪಕ್ವವಾಗಿ ಸಲೆ ಪ್ರಾಪ್ತಿಸುಗುಂ 24 ಹರಿಕೃಷ್ಣ ಕೇಶವ ಮುಕುಂದ ನೃಕೇ- ಸರಿ ವಿಷ್ಣುವಾಮನ ತ್ರಿವಿಕ್ರಮ ಶ್ರೀ ಪದ್ಮನಾಭ ಮಧುಸೂದನ ಹೇ ಪುರಷೋತ್ತಮೌಚ್ಯುತ ಜನಾರ್ದನನೇ 25 ವಸುದೇವ ನಂದನ ಮುರಾಂತಕನೇ ಹೃಷಿಕೇಶ ನಾರೇಯಣ ಮಾಧವನೇ ಪರಿ ಪಾ- ಲಿಸುಪೇಂದ್ರ ಭಕ್ತರ ಅಧೋಕ್ಷಜನೇ 26 ಪರಮಾತ್ಮ ನೀನೆಮಗೆ ಎನ್ನುತನಂ- ಬರು ನಿನ್ನ ತಾಮಸರು ಸತ್ಯವಿದು ನೆರೆ ನೋವಿನಿಂಬಳಲಿ ತಾವ್ ಮಿಗೆ ಸಂ- ಸರಣ ಪ್ರವಾಹದೊಳು ಬೀಳುತಿಹರ್ 27 ದ್ಗುಣದಲ್ಲಿ ದುರ್ಗುಣಗಳೇ ಗಣಿಸಿ ಘನ ಮೋಹ ದುಃಖದೊಳು ಸತತ ನಿ- ನ್ನನು ಕಾಂಬ ಯೋಚನೆಯ ಬಿಟ್ಟಿರುವರ್ 28 ನ್ನನು ನಂಬಿ ನಂಬಿದಲೆ ತಾವ್ ನಿರತಂ- ಘನ ಕಾಮ ಕ್ರೋಧ ಮದ ಮತ್ಸರದಿಂ ಜನದಿಂದ ಯತ್ನವನು ಮಾಡುತಿಹರ್ 29 ದೇವಾದಿದೇವ ದಿವಿ ಭೂಮಿಗಳೋಳ್ ಭಾವ ಪ್ರಭೇದದಲಿ ಧ್ಯಾನಿಪರಿಂ- ಗೀ ವೇಷ್ಟಸಿದ್ಧಿಗಳ ನೀನೆ ಸದಾ 30 ಯೋಗಿ ಜನವಂದಿತ ಸ- ಜ್ಜನಕಲ್ಪವೃಕ್ಷ ಜಗದೇಕ ವಿಭೋ ವನಜಾಕ್ಷ ಇಂದಿರೆಯ ವಲ್ಲಭ ಬ್ರಾ- ಹ್ಮಣ ಪ್ರೀಯ ಭಕ್ತಸುಖದಾಯಕನೇ 31 ರವಿಕೋಟಿತೇಜ ರಮಣೀಯ ಕಥಾ- ತವನಾಮ ಕೀರ್ತನೆಯ ಮಾಳ್ಪರ ಪಾ- ಪವ ನೀನೆ ಓಡಿಸುವುದೇನರಿದೈ 32 ವರಾಹ ನೃಕೇ- ಸರಿ ವಾಮನಾವನಿ ಸುರೋತ್ತಮ ಭಾ- ಸ್ಕರ ವಂಶ ಚಂದ್ರವಸುದೇವಜ ಭಾ ಬುದ್ಧ ಕಲ್ಕ ವಪುಷೇ ನಮಃ 33 ಮುನಿಕರ್ದಮಂಗುದಿಸಿ ತಾಯಿಗೆ ಪಾ ವನ ರಾಜಯೋಗವನು ಬೋಧಿಸಿದೈ ಘನಯೋಗಿವರ್ಯ ಕಪಿಲಾಖ್ಯನೆನಿ- ನ್ನನು ನಂಬಿ ಪ್ರಾರ್ಥಿಸುವೆನಾನನಿಶಂ 34 ರ್ಜುನ ಕಾರ್ತವೀರ್ಯಗುಪದೇಶಿಸಿದೇ ಘನಯೋಗ ಬೋಧೆಯನು ಹೈಹಯರ್ ತಾ ವನುವಾದ ಶಿಷ್ಯರೆಲೆದತ್ತವಿಭೋ 35 ಋಷಭಾಖ್ಯನಾಗಿ ಸುತರಿಂಗೆ ಮಹಾ ಋಷಿಚರ್ಯ ಬೋಧಿಸಲವರ್ ತಿಳಿದು ದಶಯೋಗಿವಂದಧಿಕ ಎಂಬತ್ತು ಭೂ- ಮಿಸುರಕ್ರಿವೃತ್ತಿಯಲಿ ಶೋಭಿಸಿದರ್ 36 ಜಂಭ್ವಾಖ್ಯ ದ್ವೀಪದೊಳು ಖಂಡಗಳಿಂ ಅಂಭೋಜನಾಭ ತವನೇಮದಲೀ 37 ಹರಿ ನೀನೆ ಪುಟ್ಟಿಯದು ಸ್ಥಾಪಿಸಿ ದು ರ್ನರರನ್ನು ಕೊಂದು ಶರಣಾಗತರಂ ಪರಿಪಾಲಿಸುತ್ತಿರುವೆ ಸಂತತವುಂ 38 ಕಲಿಕಾಲವೀಗ ಖಳರೆಲ್ಲರು ಸ- ತ್ಕುಲದಲೆ ಪುಟ್ಟಿ ನೆರೆ ಸಾಧುಗಳಂ ಬಲುಬಾಧಿಸುತ್ತ ದುರಿತಂ ಘಳಿಸೇ ನರಕಂಗಳಲ್ಲಿ ನೆರೆಯಾಗುತಿಹರ್ 39 ಪರಮಾತ್ಮ ತತ್ವದಲಿಯೇ ಮರವು ದುರ್ವಿದ್ಯವಭ್ಯಸಿಪುದಕೆ ಮನವು 40 ಪರರನ್ನು ನೋಡಿಯವರಂತೆ ತಾ ವಿರಬೇಕೆನ್ನುತ್ತಲನಿಶಂ ಬಳಲೀ ಗುರುಯತ್ನಮಾಡಿ ವಿಫಲಾಗಲು ಶ್ರೀ ಹರಿ ನಿನ್ನದೂರುತಿರುವರ್ ದುರುಳರ್41 ಕರ್ಣ ಮುಖರಿಂದಲಿ ಸಂ ಗರದಲ್ಲಿ ಕಾದಿ ಮಡಿದಂ ಬರಿದೇ42 ಜಮದಗ್ನಿ ಪುತ್ರನಿಗೆ ಶಿಷ್ಯನು ಭೀ ಷ್ಮಮಹಾ ಪರಾಕ್ರಮಿಯು ದ್ರೋಣನುತಾಂ ಕಮಲಾಪ್ತಪುತ್ರ ಕಲಿ ಶಲ್ಯ ಮುಖ್ಯರ್ ಭ್ರಮೆಯಿಂದಲನ್ನಕಸುಗಳ್ ತೊರೆದರ್ 43 ಯಮಜಂ ವೃಕೋದರನು ಫಲ್ಗುಣನೂ ಯಮಳರ್ ತವಾಂಫ್ರಿಸ್ಮøತಿಯೇ ಬಲವಾ- ಗಿ ಮಹಾಪದಂಗಳನು ದಾಂಟಿದರೈ ಸುಮಬಾಣನಯ್ಯನೆ ಮಹಾತ್ಮರವರ್ 44 ಹರಿ ನಿನ್ನ ಡಿಂಗರಿಗರಿಗಾಶ್ರಯವೇ ವರಭಾಗ್ಯ ನಿತ್ಯಸುಖವೆನ್ನುತಲೀ ಅರಿದುತ್ತಮರ್ ಬಯಸರೆಂದಿಗು ಪಾ- ಮರರಂತೆ ತುಚ್ಛಗಳ ಸ್ವಪ್ನದೊಳು 45 ಸಲೆ ಚಿನ್ನ ಬೆಳ್ಳಿ ಬೆಲೆ ಹೆಚ್ಚು ಪಟ ಗಳ ಗೃಹಕ್ಷೇತ್ರ ಸುತದಾರ ಧನ- ಗಳ ನಿತ್ಯವೆಂದರಿದು ಲೆಕ್ಕಿಸದೇ ಜಲಜಾಕ್ಷ ನಿನ್ನ ಭಜಿಪರ್ ಸುಜನರ್ 46 ಸುಜನಾಬ್ಧಿ ಚಂದ್ರ ಸುಗುಣಾರ್ಣವ ನೀ ನಿತ್ಯ ನಿರವದ್ಯ ಸ್ವಭಾ ವಜ ಕರ್ಮದಿಂ ಸಕಲ ಪ್ರಾಣಿಗಳೂ ನಿಜಯೋಗ್ಯತೆಯಂತೆ ವರ್ತಿಪುದು 47 ಕರುಣಾನಿಧೇ ಕಮಲಲೋಚನನೆ ಸು- ರರಾಜ ಸೋದರನೆ ಭಾವಜನೈ ಯರಮಾಧಿನಾಥ ಯದುವಂಶ ಭೂ ರಥಾಂಗ ಪಾಣಿಯೆ ಜನಾರ್ದನನೇ 48 ರಘುವಂಶಕೇತು ರವಿಮಂಡಲದೋಳ್ ಭಗವನ್ನಿರಂತರದಿ ನೀನಿರುತೆ ಜಗಕೆಲ್ಲ ಕಾಲದನುಸಾರದಿ ನೀ ನಘನಾಳಿಯಿಂದ ಮಳೆಯಂ ಕೊಡುವೇ 49 ವಿಭುದಾಗ್ರಗಣ್ಯರಹ ಜ್ಞಾನಿಗಳೂ ಶುಭವನ್ನು ಲೋಕಕೆ ಸದಾಚರಿಸಿ ನಭ ಭೂಮಿ ಮಧ್ಯದಲಿ ಕೀರ್ತಿ ಸೌ- ರಭವಾಗಿ ಸ್ಥಾಪಿಸಿ ವಿಮುಕ್ತರಹರ್ 50 ಯೋಗ ಪ್ರವರ್ತನೆಯಲೇ ಸುಖಿಸಿ ರೋಗಾದ್ಯುಪದ್ರಗಳು ಇಲ್ಲದಲೇ ರಾಗಾದಿ ದೋಷಗಳ ಸುಟ್ಟಿರುವರ್ 51 ಮನವಾಕ್ಕು ಕಾಯಗಳೊಳೊಂದೆ ವಿಧಂ ಋಣಮುಖ್ಯ ಸೂತಕಗಳಿಲ್ಲದೆಲೇ ಗುಣವಂತರೆನ್ನಿಸಿಯೇ ಶೋಭಿಸುತಾ ಜನದಲ್ಲಿ ಮೌನದಲಿ ವರ್ತಿಸುವರ್ 52 ನರರೊಳ್ ದಿವೌಕಸರು ಪುಟ್ಟುತಲೀ ಹರಿಭಕ್ತಿಯುಕ್ತರೆನಿಸುತ್ತಲಿಸ- ತ್ವರದಿಂದ ಸಾಧನವ ಮಾಡುತಲೀ<
--------------
ಗುರುರಾಮವಿಠಲ
ವೃಂದಾವನ ನೋಡಿದೆ | ಸತ್ಯ ಪ್ರೀಯರವೃಂದಾವನವ ನೋಡಿದೇ ಪ ಸತ್ಯ ಪೂರ್ಣ ಕರಜರೆನಿಸಿ | ಸುತ್ತಿಕ್ಷೇತ್ರಗಳನೆಲ್ಲಮತ್ತೆ ಬರಲು ಶ್ರೀರಂಗಕ್ಕೆ | ಫತ್ತೇಸಿಂಗ ಭೇಟಿಯಾದ 1 ಶತೃಗಳ ಗೆದ್ದು ಬಂದು | ಸತ್ಯಪ್ರಿಯರಿಗೆರಗಿ ಅವನೂ ಇತ್ತು ಊರುಗಳನೆರಡು | ನೆತ್ತಿ ಚಾಚಿ ನಮಿಸೀದ 2 ಮಾನಮಧುರಿ ಊರಿನಲ್ಲಿ | ಪ್ರಾಣೋತ್ಕ್ರಮಣ ಸಮಯದಲ್ಲಿಜ್ಞಾನಿ ರಾಮಾಚಾರ್ಯರಿಗೆ | ದಾನ ಮಾಡ್ದ ತುರ್ಯಾಶ್ರಮ 3 ಮಾಧವನ ದಯದಿಂದೆ | ಸಾಧಿಸುತ ಬದರಿ ಯಾತ್ರೆವೇದವತಿ ತೀರದಲ್ಲಿ | ಸಾಧುಗಳ ವೃಂದಾವನ 4 ವೇದ ವೇದ್ಯನಾದ ಗುರು | ಗುರುಗೋವಿಂದ ವಿಠಲನಮೋದದಿಂದ ಭಜಿಸುತ್ತ | ಆದರದಿ ಧ್ಯಾನಾಸಕ್ತ 5
--------------
ಗುರುಗೋವಿಂದವಿಠಲರು
ವೆಂಕಟೇಶ ಕಲ್ಯಾಣ ಶ್ರೀವೆಂಕಟ ದೊರೆಯೆ ಪ ವಿಶ್ವಸೃಷ್ಟಿಯಗೈದಂಥ ತಾನಿನ್ನು ಅರಿಯೆನು ಎಂತೆನಲು ಅ.ಪ ಸುರವರ ನಾರೆಂದು ಅರಿಯೆಭೃಗುವು ತಾನು ಪತಿ ಹರ ವಿಧಿಗಳೆನೆಲ್ಲ ಬರುವ ಬಗೆಯ ಕಂಡು ಸುರತ ಕೇಳಿಯಸೋಗು ಧರಿಸಿ ಮಲಗಿರಲಂದು ಜರಿದುವದಿಯಲು ವಕ್ಷ ಹರಿಸಿ ದುಗುಡವ ಮುನಿಗೆ ವರಸಿ ಚರಣದ ಕಣ್ಣು ತರಿದು ಸಾಧನೆ ಅಧಿಕ ಸಿರಿಗೆ ಪ್ರೇರಿಸಿ ಕೋಪ ತೊರೆದು ಧಾಮವ ಬೇಗ ಧರೆಗೆ ಇಳಿಯುತ ಬಂದು ಗಿರಿಯ ಹುತ್ತವ ಸೇರಿ ಸುರಿಸೆ ವಿಧಿಯು ಪಾಲು ಕರುಣದಿಂದಲಿ ಕೊಂಡು ದೊರೆಯ ಸೇವಕ ಗೋವ ಹರಿಸೆ ಕೊಡಲಿಯ ನೆತ್ತೆ ಶಿರವನೊಡ್ಡುತ ರಕ್ತ ಧಾರೆ ಚಿಮ್ಮಿಸಿನಭದಿ ಬರಲು ಚೋಳನು ದೊರೆಗೆ ಕ್ರೂರ ಶಾಪವನಿತ್ತು ಕರೆಸಿಗುರುಗಳಮದ್ದು ತರಲು ಹೊರಟದೇವ ನಿರುತ ಚಿನ್ಮಯಗಾತ್ರ ಉರು ವೈದ್ಯ ಧನ್ವಂತ್ರಿ ನಿರುಪಮ ನಾಟಕದೆ 1 ಸಾಮ ವಿಶ್ವದ ಸಾರ್ವಬೌಮ ಬೇಡಿದೆ ರಚಿಸೆ ಧಾಮ ಕ್ರೋಢನ ಕಂಡು ಪ್ರೇಮದಿಂದಲಿ ಬಕುಳೆ ವಾಮ ಕಂದನು ಆಗಿ ಭಾಮೆ ಪಾಕವನುಂಡು ಕಾಮ ವರ್ಜಿತ ಪೂರ್ಣ ಕಾಮ ಕುದುರೆಯನೇರಿ ಕಾಮ ಬೇಟೆಯೋಳ್ ನಿಜ ಕಾಮಿನಿಯನು ಕಂಡು ದ್ಧಾಮ ಮೋಹವ ತೋರಿ ಭೂಮಿಜಾತೆಯ ಘಟಿಸೆ ಭಾಮೆ ಬಕುಳೆಯ ಕಳಿಸಿ ಧರ್ಮದೇವತೆಯೆನಿಸಿ ಜಾಮಾತ ಸನ್ನಾಹ ಜಾಣ್ಮಿಯಿಂದಲಿನಡೆಸಿ ಕಾಮಿತಾರ್ಥವ ಕೊಂಡು ಧಾಮ ಸೇರಲು ಬಕುಳೆ ಹೇಮಮಯ ದಾರಿದ್ರ ನೇಮದಾಟವ ತೋರಿ ಹೇಮಗರ್ಭನ ಕರಿಸೆ ಸೋಮಶೇಖರ ಕೊಡಿಸೆ ಹೇಮರಾಶಿಯ ತಂದು ಭೀಮರುಜೆಗಳ ನಟಿಸೆ ಸೋಮಸೋದರಿಕರಿಸಿ ಮಾಮನೋಹರಗೈದ ಸೀಮೆಇಲ್ಲದಂಥ 2 ಮದುವೆ ಹಬ್ಬಿಸಿ ಭಕ್ತ ಹೃದಯ ತುಂಬುವ ನಂದ ಮುದದಿ ಬೆಳೆಸೆ ಪಯಣ ವದಗೆ ಶುಕರಾತಿಥ್ಯ ಸದಯಗೊಳ್ಳುತ ತೃಪ್ತಿ ಬದಿಗರೆಲ್ಲರಿಗಿತ್ತು ಮದನಮೋಹನ ತೇಜ ಮದುವೆ ಊರನು ಸೇರಿ ಕುದಿವ ಕುತೂಹಲದಿ ಅದ್ಭುತ ಸ್ವಾಗತವ ಪದುಮಾವತಿಯ ತಂದೆ ಹೃದಯ ಪೂರ್ವಕ ನೀಡೆ ಆದರದಿ ಸ್ವೀಕರಿಸಿ ಪಾದದ್ವಂಧ್ವವ ನೀಡಿ ವೇಧಾದಿ ನಿಜವೃಂದ ಮೇದಿನೀ ಸುರವೃಂದ ಮೋದ ಮೆಲ್ಲಲು ಕೂಡಿ ವೇದ ಘೋಷವುಗೈಯೆ ವಾದ್ಯದುಂದುಭಿ ಮೊಳಗೆ ವೇದವೇದ್ಯನು ಮದುವೆ ವೇದಿಕೆಯನು ಏರಿ ಕಾದುಕೊಂಡಿಹ ಜನಕೆ ಸಾಧಿಸುತಲಭೀಷ್ಠ ಕರ ಸಾದರ ಪಿಡಿದಂಥ ಖೇದ ತರಿಯುತ ನಿಜ ಮೋದದಾನವ ಗೈವ 3 ತಿರುಪತಿ ತಿಮ್ಮಪ್ಪ ಸುರಗಣ ಜಗದಪ್ಪ ವರಸಮರಿಲ್ಲಪ್ಪ ಭರದಿ ಕಸಿವಕಪ್ಪ ಅರಿತವರಿಲ್ಲಪ್ಪ ಧರಿಸಿಹ ಸಿರಿಯಪ್ಪ ಕರುಣ ಸುರಿಸುವನಪ್ಪ ಉರುಗಗಿರಿಯಲ್ಲಿಪ್ಪ ಸುರತರು ಇವನಪ್ಪ ಗಿರಿಸಪ್ತ ದೊರೆಯಪ್ಪ ಹರಿಕೆ ಕೊಳ್ಳುವನಪ್ಪ ಅರಿಮಾರಿ ಸರಿಯಪ್ಪ ಶರಣರ ಪೊರೆಯಪ್ಪ ಕರೆಕರೆ ಬೇಡಪ್ಪ ಸ್ವರತ ಸುಖಮಯನಪ್ಪ ಅರವಿದೂರನಪ್ಪ ಮರೆವ ಶರಣರ ತಪ್ಪ ಸರ್ವಹೃದಯಗನಪ್ಪ ಪರಿಪೂರ್ಣಗುಣನಪ್ಪ ಅರಿಶಂಖುಧರನಪ್ಪ ಉರಿವ ರವಿಯಲ್ಲಿಪ್ಪ ಸರ್ವಮುಕ್ತರಿಗಪ್ಪ ಬಿರಿವ ಖಳರೆದೆಯಪ್ಪ ಮರುತ ಮಂದಿರನಪ್ಪ ಪರಿಮರ ಹೌದಪ್ಪ ಪೊರೆದೆ ಮಾಧವನಪ್ಪ ವರಲೀಲಾ ಮಯನಪ್ಪ ಪರಮ ಅದ್ಭುತನಪ್ಪ ಪರಮಾತ್ಮಹೌದಪ್ಪ ಕರಣ ಚೋದಿಪನಪ್ಪ ಕರಣಕ್ಕೆಸಿಗನಪ್ಪ ದುರಿತ ಪಾವಕನಪ್ಪ ಪರಮ ಪಾವನನಪ್ಪ ಹರನ ಅಪ್ಪನಿಗಪ್ಪ ಪರಮೋಚ್ಚಹೌದಪ್ಪ 4 ಬಾದರಾಯಣ ಪೂರ್ಣ ಭೋಧ ತೀರ್ಥರ ದೈವ ಮೋದ ಚಿನ್ಮಯಗಾತ್ರ ವೇದ ವಿಭಜಿಸಿ ನಿಂದ ಖೇದವಿದ್ಯೆಯ ಕೊಂದ ವಾದಿವಾರಿಣಿ ಸಿಂಹ ವಾದಿರಾಜರ ಹೃದಯ ಮೋದ ಹಯಮುಖ ಶುದ್ಧ ವೇದರಾಶಿಯತಂದ ವೇಧಗರುಹಿದ ಕರುಣಿ ಖೇದ ನೀಡುತಲಿದ್ದ ಆದಿದೈತ್ಯರ ಕೊಂದು ಮೇದಿನಿಯನು ಎಯ್ದೆ ಶ್ರೀಧರ ನರಸಿಂಹ ಗೋಧರಮಹಿದಾಸ ಕಾದುಕೊ ಶ್ರೀ ವಿಷ್ಣು ಭೇದ ವಿದ್ಯೆಯಮನಕೆ ಭೋಧಿಸು ವರ ಕಪಿಲ ಸಾಧು ಋಷಭದತ್ತ ಯಾದವ ಕುಲರನ್ನ ಕಾಯ್ದೆ ಗೋಪಿಯ ರನ್ನ ಸೀಳ್ದೆ ಕೌರವರನ್ನ ಪೇಳ್ದೆ ಪಾರ್ಥಗೆ ಗೀತೆ ಶುದ್ಧ ಜಯಮುನಿಹೃಸ್ಥ ಮಧ್ವ ಇಂದಿರೆನಾಥ ಮುದ್ದು ಕೃಷ್ಣವಿಠಲ ಬಿದ್ದೆ ಪಾದದಿ ಶರಣು 5
--------------
ಕೃಷ್ಣವಿಠಲದಾಸರು
ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ ಕಾಣದೆ ನಿಲ್ಲಲಾರೆನೆ ಪ ಕಾಣುತ ಭಕುತರ ಕರುಣದಿ ಸಲಹುವ ಜಾಣೆ ತ್ರಿವೇಣಿ ಕಲ್ಯಾಣಿ ಸುಸನ್ನುತೆ ಅ.ಪ. ತರಣಿ ಒಂದು ಘಳಿಗೆ ನೀ ಹರಿಯ ಬಿಟ್ಟಿರಲಾರಿ ಮಂದಗಮನೆ ಎನ್ನ ಮುಂದಕ್ಕೆ ಕರೆಯೆ 1 ಕರುಣವಿಂದೆನ್ನ ಕರೆವುದು ಭವ ಸ್ಮರನಪಿತನ ಮುರಹರನ ಕರುಣದಿ 2 ಸುಜನರಿಗೆಲ್ಲ ದಾತಳೆ ಸುಶೀಲೆ ಕೇಳೆ ಕುಜನರ ಸಂಗದೂರಳೆ ನಿಜ ಪದವಿಯನಿತ್ತು ಸಲಹುವ ನಮ್ಮ ವಿಜಯವಿಠ್ಠಲ ನಿಜಪದ ತೋರಿಸೆ 3
--------------
ವಿಜಯದಾಸ
ವೈಶಾಖದುತ್ಸವ ಗೀತೆ ವರ್ಣಿಸಲಳವೆ ವೈಶಾಖದುತ್ಸವವಾ ಪ. ವೃಷಭಸೇರಿದ ವೈಶಾಖಮಾಸದ ಶುಕ್ಲ ಪಕ್ಷದ ಷಷ್ಠಿಯಲಿ ಕಂಕಣವ ಕಟ್ಟಿ ಪಟ್ಟದರಸಿ ಯರ್ಸಹಿತ ದಿಟ್ಟತನದಲಿ ಪೊರಟು ಶ್ರೇಷ್ಠವಾದ ಮಧ್ಯಮಂಟಪಕೆ ನಡೆತಂದ 1 ಮುದ್ದುಮೊಖ ಮುಗುಳ್ನಗೆಯು ವಜ್ರದ ಕಿರೀಟವು ತಿದ್ದಿದ ಕಸ್ತೂರಿತಿಲಕ ಹೊಳೆವ ವಜ್ರದ ಪದಕಗಳು ನಾಲ್ಕು ಮೂರನೆ ಧರಿಸಿ ಪ್ರಜ್ವಲಿಸುತ ಬಂದ ಅರ್ಜುನ ಸಾರಥಿಯು 2 ಶಿರದಿ ಪುಷ್ಪವ ಧರಿಸಿ ಪರಮಪುರುಷನು ತಾನು ಕೊರಳಲ್ಲಿ ವೈಜಯಂತಿಮಾಲೆಯನು ಧರಿಸಿ ಕರದಲ್ಲಿ ಪರಿಮಳದ ಗಂಧವನು ಧರಿಸಿ ಪರಮ ಪುರುಷನು ಬರುವ ಪರಿಯನೇನೆಂಬೆ 3 ದಂತದ ಉಯ್ಯಾಲೆಮಂಟಪದಲಿ ನಿಂದು ಕಂತುಪಿತ ಕರ್ಪೂರದಚೂರ್ಣದಲಿ ಮಿಂದು ಅಂತರಂಗದಿ ಭಕ್ತರಿತ್ತ ನೈವೇದ್ಯ ಉಂಡ ಲಕ್ಷ್ಮೀ ಕಾಂತನು ನಡೆತರುವ ಪರಿಯನೇನೆಂಬೆ 4 ಮುಂದೆ ದ್ರಾವಿಡವೇದ ಹಿಂದೆ ವೇದಘೋಷಗಳು ಆ ನಂದದಿಂ ಭಕ್ತರೆಲ್ಲ ಮುಂದೆ ಬರುತಿರಲು ಛಂದದಿಂ ರಂಭೆಯರ ಕೋಲಾಟಗಳ ನೋಡಿ ಇಂದಿರೆಯಿದಿರು ಮಂಟಪಕೆ ನಡೆತಂದ 5 ಸೃಷ್ಟಿಪತಿ ರಂಗನಿಗೆ ದೃಷ್ಟಿ ತಾಕುವುದೆಂದು ಹಿಟ್ಟಿನಾರತಿಯಿಂದ ದೃಷ್ಟಿಯನು ತೆಗೆದು ಶ್ರೇಷ್ಠವಾದ ಕರ್ಪೂರದ ಆರತಿಯನೆತ್ತಲು ಥಟ್ಟನೆ ತಿರುಗಿದನು ಕೃಷ್ಣಮೂರುತಿ ತಾನು 6 ಸಪ್ತದಿನದಲಿ ರಂಗ ರತ್ನಮೌಳಿಯ ಧರಿಸಿ ಮುತ್ತಿನಾ ಹಾರವನು ಹಾಕಿ ರತ್ನದ ಉಡದಾರ ಉಡಗೆಜ್ಜೆಯನು ಧರಿಸಿ ಪತ್ನಿ ಸಹಿತಲೆ ಬಂದು ಭತ್ತವನಳಿಸುವ ಸೊಬಗ 7 ಮುತ್ತಿನ ಕಿರೀಟವಿಟ್ಟು ಮುದದಿ ನಿಲುವಂಗಿ ತೊಟ್ಟು ರತ್ನದಾ ಹಸ್ತದಲಿ ಅಭಯವನು ಕೊಟ್ಟು ಕತ್ತಿ ಈಟಿ ಗುರಾಣಿ ಬತ್ತಳಿಕೆ ಅಳವಟ್ಟು ಹಸ್ತದಲಿ ಕಡಿವಾಣವಿಟ್ಟು ಬರುವ ಸೊಬಗ 8 ಹತ್ತಿ ಹಯವನು ರಂಗ ಒಂಭತ್ತು ದಿನದಲಿ ಮತ್ತೆ ಪುಷ್ಕರಣಿಯ ತೀರ್ಥದಲ್ಲಿ ಮಿಂದು ಅರ್ತಿಯಿಂ ಬಂದ ನೀರಾಳಿಮಂಟಪಕೆ 9 ಮಿಂದು ಮಡಿಯನೆ ವುಟ್ಟು ಛಂದದಿಂದಲೆ ರಂಗ ಬಂದು ಕಂಕಣವನ್ನು ಬಿಚ್ಚಿ ಆ ಘೃತ ಚೂತಫಲಗಳ ಸವಿದು ನಿಂದ ವೆಂಕಟರಂಗ [ಕರುಣಾಂತರಂಗ] 10
--------------
ಯದುಗಿರಿಯಮ್ಮ
ವ್ಯರ್ಥದಲಿ ತೋರುವನೆ ತ್ರೈಲೋಕ್ಯಕರ್ತ ಭಕ್ತನಾದರೆ ಪರಮ ಮುಕ್ತಿ ಸೇರುವುದು ಪ ಉತ್ತಾನ ಭೂಪತಿಯ ಪುತ್ರನಂತಿರಬೇಕು ಸತ್ಯವೊಂದಿರಬೇಕು ಹರಿಶ್ಚಂದ್ರನಂತೆ ಭಕ್ತಿರಸವಿರಬೇಕು ಪ್ರಹ್ಲಾದನಂತೆ ಹಸ್ತವಿರಬೇಕು ಶ್ರೀರಾಮ ಭಕ್ತನಂತೆ 1 ವ್ರತವ ಮಾಡಲು ಬೇಕು ಅಂಬರೀಶನ ಪರಿಯ ಪಥವ ನಡೆಯಲು ಬೇಕು ವಿಹಗನಂತೆ ಶತಮುಖವ ರಚಿಸಿದರೆ ಪುರುಹೂತನಂತಿಹನು ಯತಿಯಾಗಬೇಕು ಗುರುಮಧ್ವಪತಿಯಂತೆ 2 ಗೀತಸೇವನೆ ಬೇಕು ನಾರದರ ತೆರನಂತೆ ಪ್ರೀತನಾಗಲು ಬೇಕು ಪಾರ್ಥನಂತೆ ನೀತಿಶಾಸ್ತ್ರವು ಬೇಕು ಶುಕಶೌನಕರಂತೆ ಖ್ಯಾತಿಯಿರಬೇಕು ರವಿಜಾತನಂತೆ 3 ಶುದ್ದನಾಗಿರಬೇಕು ಉದ್ಧವನ ತೆರನಂತೆ ಬದ್ಧನಾಗಿರಬೇಕು ಅಕ್ರೂರನಂತೆ ಹೊದ್ದಿಕೊಂಡಿರಬೇಕು ಫಣಿರಾಜನಂದದಲಿ ಮುದ್ದಾಗಿಯಿರಬೇಕು ಆ ವಿದುರನಂತೆ 4 ವೇದವೋದಲು ಬೇಕು ವ್ಯಾಸಮುನಿಯಂದದಲಿ ಆದರಿಸಬೇಕು ತಾ ಧರ್ಮನಂದದಲಿ ಪಾದಪೂಜೆಯು ಬೇಕು ಲಂಕಾಧಿಪತಿಯಂತೆ ಭೇದ ನೋಡಲು ಬೇಕು ವಸಿಷ್ಠನಂತೆ 5 ಸ್ಮøತಿಯ ನೋಡಲು ಬೇಕು ಪಾರಾಶರಂದದಲಿ ಮಿತಿಯಿರಲು ಬೇಕು ಆ ಭೀಷ್ಮನಂದದಲಿ ಜೊತೆಯಾಗಿಯಿರಬೇಕು ಪುಂಡರೀಕನ ತೆರದಿ ವ್ರತವಿರಲು ಬೇಕು ರುಕುಮಾಂಗನಂದದಲಿ 6 ದಾನ ಮಾಡಲು ಬೇಕು ಬಲಿಯ ಪ್ರೌಢಿಕೆಯಿಂದ ಧ್ಯಾನವಿರಬೇಕು ಋಷಿ ಗಾಗ್ರ್ಯನಂದದಲಿ ಪ್ರಾಣ ಸಂದೇಹದೊಳು ಕರಿರಾಜನಂದದಲಿ ಕಾಣಬೇಕಾ ಹರಿಯ ಅಜಮಿಳನ ತೆರದಿ 7 ಜಪಗಳನು ತಪಗಳನು ದಾನಧರ್ಮಂಗಳನು ಅಪರೂಪವಾಗಿರ್ದ ಪೂಜೆಗಳನು ಉಪವಾಸವನು ಮಾಡಿ ವ್ರತ ನೇಮ ನಿಷ್ಠೆಗಳ ಕಪಟವಿಲ್ಲದೆ ರಚಿಸಿ ಕಂಡರೈ ನಿನ್ನ 8 ಇವರಂತೆ ನೋಡುವರೆ ಸ್ಥಿರವಿಲ್ಲ ಬುದ್ಧಿಗಳು ಇವರ ದಾಸರ ದಾಸ ದಾಸ ನಾನು ನಿತ್ಯ ಮನದೊಳಗೆ ನಿಲುವಂತೆ ಭಾವಿಸೈ ಕೋನೇರಿ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ಶಯನ ಸಮಯಕಂ||ಸಂದಣಿ ಹರೆಯದೆ ಭಕ್ತರವೃಂದವು ಕೈವಾರಿಸುತ್ತ ಬರಲೆಡಬಲದೊಳ್‍ಇಂದಿರೆ ಧರಣಿಯು ಸಹಿತಾಮಂದಸ್ಮಿತಮುಖನು ನೋಡುತೈತಹನೊಲವಿಂದೇವ ಶಯನಕೆ ಬರುವ ಸಮಯ ಬಳಿಕೀಗದೇವತೆಗಳೆಲ್ಲರನು ಕಳುಹಿ ನಿಜ ಮಂದಿರಕೆ ಪಶ್ರೀದೇವಿ ಭೂದೇವಿಯರು ತಮ್ಮ ಕರಗಳಲಿಆದಿಪುರುಷನ ಕರಗಳನು ಪಿಡಿದು ಮುದದಿಮಾಧವನ ಮುಖಪದ್ಮವನು ನೋಡಿ ಹರುಷದಲಿವೇದವೇದ್ಯನ ಪೀಠದಿಂದಿಳಿಸಿ ತರುತಿಹರು 1ಸನಕಾದಿ ಭಾಗವತ ಮೂರ್ತಿ ತಾನಿದಿರಿಟ್ಟು ಮತ್ತೀಗಮನದೊಳಗೆ ನೆಲಸುವಂದದಿ ಮುಂದೆ ನಿಂದಿಹನು 2ತನ್ನಿಂದ ನಿರ್ಮಿಸಿದ ಫಲಪತ್ರಗಳಮನ್ನಿಸುತ ಭಕ್ತಿಯಲಿ ಭಕ್ತರಿತ್ತುದನುಉನ್ನತದ ಪದವಿಯನು ಬಳಿಕಿತ್ತು ಬರುತಿಹನುಪನ್ನಗಾರಿಧ್ವಜನು ತಿರುಪತಿಯ ವೆಂಕಟನು 3ಓಂ ವೇಣುನಾದ ವಿಶಾರದಾಯ ನಮಃ
--------------
ತಿಮ್ಮಪ್ಪದಾಸರು
ಶರಣಜನೋದಧಿಚಂದ್ರಾ ಸಿರಿ ಯರಸ ದೇವ ದೇವ ಕರುಣಿ ಮುಕುಂದಾ ಪ ಹಾರದ ನಿಗದಿಯ ಬಿಟ್ಟು ಸೋತವನಾಗಿ ವ್ಯಾಸ ಭೀಷ್ಮನ ಗೆಲಿಸಿದೆ ಮುಕುಂದಾ 1 ಹಗಲೇ ಇರಳ ಮಾಡಿ ಸೈಂಧವನಸುವನು ತೆಗಿಸಿ ನರನ ವಾಸಿ ಕೊಂಡ್ಯೋ ಮುಕುಂದಾ 2 ಶರಧಿಯಂಜಿಸಿಕೊಂಡು ಪಕ್ಷಿಯ ಶಿಶುವಾಗಿ ಗರುಡನ ವಾಸಿಯ ಕೊಂಡ್ಯೊ ಮುಕುಂದಾ 3 ದಶಜನುಮವತಾಳಿ ಮುನಿಯ ಬೆದರಿಸ್ಯಂಬ ರಿಕ್ಷಣ ಫಲನಡಿಸಿದೆ ಮುಕುಂದಾ 4 ಗುರು ಮಹಿಪತಿ ಸ್ವಾಮಿ ಭಕ್ತ ವತ್ಸಲನೆಂಬ ಬಿರುದುವಾಳಿದರೆಂದು ಸಲಹೋ ಮುಕುಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣಾಗತ ರಕ್ಷಿಸಿ ಸ್ವಾಮಿ ಪೊರೆವುದು ಎನ್ನನು ಹರಿಯೇ ಶರಣಾಗತನೊಳು ನಿರ್ದಯ ಸರಿಯೇ ಕರುಣಾಕರ ಗುಣನಿಧಿಯೇ ಪ ಅಪರಾಧಗಳನು ಕ್ಷಮಿಸಿ ಸ್ವಾಮಿ ಕಾಪಾಡೋ ಮಾಧವನೇ ಅಪಾರಪರ ಮಹಿಮನೇ ಪುರಾಣ ಪುರುಷೋತ್ತಮನೇ 1 ಸಂಕಟಪರಿಹಾರಕನೇ ನಮ್ಮ ವೆಂಕಟ ವಿಠಲನೆ 2 ಸೃಷ್ಟಿಕರ್ತನು ನೀನೆ ಸ್ವಾಮಿ ಅಷ್ಟೈಶ್ವರ್ಯವೂ ನೀನೆ ಶಿಷ್ಟರ ಪಾಲಿಪ ನೀನೆ ದುಷ್ಟರ ಸಂಹಾರಕನೇ 3 ವೇದ ಪುರಾಣವು ನೀನೆ ಮೇಧಿನಿಗಧಿಪತಿ ನೀನೆ ಮಾಧವ ಮಧುಸೂದನನೇ ಆದಿ ಮೂರುತಿ ನೀನೆ 4 ಹನುಮೇಶ ವಿಠಲನೇ ಸ್ವಾಮಿ ಜನನಿ ಜನಕನು ನೀನೆ ಜ್ಞಾನ ಪ್ರದಾಯಕ ನೀನೆ ಘನ ಮುಕ್ತಿಗೊಡೆಯನು ನೀನೆ 5
--------------
ಹನುಮೇಶವಿಠಲ
ಶರಣು ನಿನಗೆ ಶರಣೆಂದೆನೊ ಹರಿಯೇ ಕರುಣಿಸಿ ಕಾಯೋ ಎನ್ನಧೊರಿಯೆ ಪ ಪರಮಕೃಪಾಕರ ಪಾವನ ನರಹರಿ ಪಾಲಿಸೊ ಎನ್ನನಿ--- ಶರಣೆಂದ ವಿಭೀಷಣನ ಆದಿಭಕ್ತರ ಶ್ರಮ ಪರಿಹರಿಸಿದಂಥ ಶ್ರೀಧರಾ 1 ಭಕ್ತಾ ಪಾಂಡವ ಪಕ್ಷಾ ಬಲಿಯ ಭೂಮಿಯ ಭಿಕ್ಷಾ ಯುಕ್ತಿಲಿ ನೀ ಸಾಧಿಸಿದ ಯೋಧನೆ ಮುಕ್ತಿದಾಯಕ ದೇವ ಮುರಹರ ಮಾಧವನೆ ಮೌಕ್ತಿಕ ಮುಕುಟ ಧರಿಸಿದನೆ 2 ಸುಂದರ ಮೂರುತಿ-----ಜಗತ್ಪತಿ ಇಂದಿರಾ ಹೃದಯಾನಂದನೆ ಬಂದ ಭಕ್ತರ ಬಿಡದೆ ಅಂದಿಗೆ ನೀನೆ ಪೊರೆದೆ----ಹೆನ್ನ ವಿಠ್ಠಲಾ ಸಲಹೋ ಎನ್ನ 3
--------------
ಹೆನ್ನೆರಂಗದಾಸರು
ಶರಣು ಶ್ರೀ ನಂದನೇಶ್ವರ | ಪಾಲಿಸು ಜಗದೀಶ್ವರ | ಶರಣು ಶ್ರೀ ನಂದನೇಶ್ವರ ಪ ಶರಣು ಶ್ರೀ ಗುರುವರ ಗಂಗಾಧರ | ಕರ ಕಪಾಲಧರ ಹರ ಮೃತ್ಯುಂಜಯ ಅ.ಪ. ತಂದೆ ನಿನ್ನಯ ಪಾದವ | ಮರೆತಿಹುದರಿಂದ | ನಿಂದ ಹಲವಂಗದಲಿ ಭವಭವದಿ || ನೊಂದು ಬಂದೆ ನಾನಿಂದೀ ಭವದೊಳು | ಹೊಂದಿ ತವಾಂಘ್ರಿಯನಂದದಿ ಭಜಿಸುವೆ 1 ಭೇದ ಬುದ್ಧಿಯ ಮಾನವರು | ವೇದ ಶಾಸ್ತ್ರದ| ಹಾದಿಯರಿಯದ ಮತ್ಸರರು || ಸಾಧುಗಳೊಡನೆ ವಿರೋಧವನೆಣಿಸುವ | ಬಾಧಕರಾದರು ಹೇ ದಯಾನಿಧಿಯೇ 2 ತೊಡಕುಗಳನ್ನೆ ಬಿಡಿಸಿ | ಬಾಧೆಗಳ ವಾರಿಸಿ | ಕಡು ದುಷ್ಟಾತ್ಮರ ಶಿಕ್ಷಿಸಿ | ಎಡೆಬಿಡದೆನ್ನ ಮನೋರಥ ಸಲಿಸುತ | ದೃಢತರ ಭಕುತಿಯ ಕೊಡು ಕೃಪೆಯಿಂದಲಿ 3 ಪಾದ | ಮುಕುತಿ ಸಂಪದ ಪಾಲಿಸೊ || ಶಕುತಿಯೊಳಗೆ ನೀ ಯುಕುತಿಯಿಂದ ನಿಜ | ಸುಖದ ಪದವಿಯೊಳು ಪ್ರಕಟದಿ ಪೊರೆಯೈ4 ಯೋಗಿಗಳರಸ ನೀನೆಂಬ | ಬಿರುದುಗಳ ತೋರಿಸು- | ತೀಗೆನ್ನಪರಾಧವ ಕ್ಷಮಿಸೆಂಬ || ರಾಗದ ನುಡಿಯೊಳೆನ್ನಾಗಮನವೊಪ್ಪಿಸು- | ತೀಗ ಸದಾನಂದ ಯೋಗಾಂತರ್ಗತ 5
--------------
ಸದಾನಂದರು
ಶರಧಿ ಸುಖಾತ್ಮಜೆ ಪ ಶರಣು ತವ ಚರಣಾರವಿಂದಕೆ ಶರಣು ಸುರನುತ ಜಂಘಕೇಶರಣು ಕರಿಕರಭೋರು ಯುಗಳಕೆ ಶರಣು ಸುಟೊಂಕಕೆ1 ಕರ ಕಣ್ಣು ಮೂಗು ಭ್ರೂಲತೆ ಕರಣಾಭರಣಕೆ 2 ಶರಣು ಸಾಲಕ ಬಿಂಬ ಫಾಲಕೆ ಶರಣು ಕುಸುಮಿತ ವೇಣಿಗೆಶರಣು ಮಾಧವನಂಕ ಬಿಂಬದಿ ಮೆರೆವ ಸುಖ ಮುತ್ತೈದಿಗೆ 3 ಕಾಲ ಸ್ವಭರ್ತೃಸುಮಜಿತೆ ಭಕ್ತಪೋಷಣೆಕೃತ್ಯ ಕರುಣಾ ಸಾರಸಾಂಡ ಸುಪಾಸ್ತ ಸಂಸಿತಳೆ ನೀ4 ಸೊಲ್ಲು ಪೇಳುವೆ ಸ್ನೇಹದಿಂದಲಿಪುಲ್ಲನಾಭನ ಪರಿಚಿಸೀ ಈಗವನಲ್ಲಿ ನೀ ಪೇಳೆ 5 ದೇವಶರ್ಮನು ನಿನ್ನ ಚರಣಾಧ್ಯಾನದಲಿ ಸನ್ನುತಿಸಿ ಕರುಣತೋಯಜಾಕ್ಷನ ಕಂಡು ಸುಖಿಸಿದುಪಾಯವ ಬಲ್ಲವನು 6 ಸುಂದರಾಂಗಿಯೆ ಸಾರಸಾಕ್ಷಿಯೆ ಮಂದಹಾಸಿನಿ ಮಾರಮೋಹಿನಿಇಂದಿರೇಶನ ಮಾನಿನಿಯೆ ತವಕದಿಂದ ನಿಂತಿಹೆನು 7
--------------
ಇಂದಿರೇಶರು
ಶಾರದೇ ಮಜ್ಜನನಿಯೆ - ಶಾರದೇ ಪ ಶಾರದೆ ಶರಣೆಂಬೆ ನಿನ್ನ | ಚರಣನೀರಜ ದ್ವಂದ್ವಕೆ ಯನ್ನ | ಆಹಕಾರುಣ್ಯದಲಿ ಹೃದಯ | ವಾರಿಜದೊಳು ಮೆರೆವಮಾರಮಣನ ದಿವ್ಯ | ಮೂರುತಿ ತೋರಿಸು ಅ.ಪ. ವಾಣಿ ನಿಲ್ಲ್ವುದು ಎನ್ನ ವದನಾ | ದಲ್ಲಿನೀ ನುಡಿಸೇ ಹರಿ ಗಾನಾ | ಕರವೀಣೆ ನುಡಿಪಂತೆ ಯೆನ್ನಾ | ದೇಹವೀಣೆ ನುಡಿಸೇ ನೀ ಮುನ್ನಾ | ಅಹವೇಣಿ ಮಾಧವನಾದ | ಶ್ರೀನಿವಾಸನ ಕಾಂಬಜ್ಞಾನಾನು ಸಂಧಾನ | ಮಾಣದೆ ಎನಗೀಯೇ 1 ಅಜ್ಞರೊಳಾಗ್ರಾಣಿ ನಾನು | ಇಂಗಿತಜ್ಞಳೆ ನಾ ಪೇಳ್ವುದೇನೂ | ಆಭಿಜ್ಞರೊಳಿರಿಸುವುದಿನ್ನೂ | ಸರ್‍ವಜ್ಞರ ಮತ ತಿಳಿಸಿನ್ನೂ | ಆಹವಿಜ್ಞಾನ ಸುಸಖ ಬ್ರಹ್ಮ | ಯಜ್ಞಾನೆ ಜಗಕೆಂಬಸುಜ್ಞಾನ ಸುಖವಿತ್ತು | ಪ್ರಾಜ್ಞನ ಕಾಣಿಸೇ 2 ವ್ರತನೇಮ ಉಪವಾಸ ಒಂದೂ | ಮಾಡಿಕೃತಕೃತ್ಯನಲ್ಲಮ್ಮ ಬಂಧೂ | ಕೃತಿಪತಿಯೆ ಎನಗೆ ಗತಿ ಎಂದೂ | ದ್ವಂದ್ವಕೃತಿಗಳ ನರ್ಪಿಪ ಸಂದೂ | ಆಹಹಿತದಿ ತಿಳಿಸಿ ಗುರು | ಗೋವಿಂದ ವಿಠಲನಸುತನಾಗಿ ಮೆರೆವಂಥ | ಚತುರಾಸ್ಯ ಪ್ರಿಯರಾಣಿ 3
--------------
ಗುರುಗೋವಿಂದವಿಠಲರು
ಶಿಲೆಯ ನಾರಿಯ ಮಾಡ್ದ ಹನುಮ ನಿಲಯಾ ಪ ನೆಲೆಯಿಲ್ಲದಾ ಮಹಿಮ ಶ್ರೀರಾಮ ಗೋಚರಿಸೊ ಅ.ಪ ಶ್ರುತಿಗಗೋಚರ ನೀನು ಸರ್ವೇಶ ಸ್ವಾತಂತ್ರ ನೀನು ಕೃತಿಮಗ್ನ ಪಶು ನಾನು ಗೋಪಾಲದೇವ ಮೃತಿ ಭೀತಿ ವಶನಾಗಿ ನೆಲೆತಪ್ಪಿ ಪೋಗುತಿಹೆ ಅತಿಭಯದಿ ನಡುಗುವೆ ಹೇ ಶ್ರುತಿನಾಥ ಪೊರೆ ಎನ್ನ 1 ಪರಮ ಮಂಗಳ ಅನಿಲದೇವ ಮಂದಿರ ಶ್ರೀಶ ಪರತತ್ವ ಪರಮಾತ್ಮ ಪಿಡಿಯೊ ಕರವ ಮರುವೆಂಬ ಮಾರಿಯನು ನಿರ್ಮೂಲ ಮಾಡಯ್ಯ ದೊರಿ ನಿನ್ನ ಸ್ಮøತಿ ಸತತ ಅಚ್ಛಿನ್ನವಾಗಿರಲಿ 2 ಭಾನು ಕೋಟಿ ತೇಜ ಶ್ರೀ ಕ್ರೀಡೆಮಾಳ್ಪ ಜ್ಞಾನ ಪಾಲಿಸು ಎನಗೆ ಜಯೇಶವಿಠಲ ಆನಿ ಅಜಮಿಳ ಅನಿಮಿತ್ತ ಬಾಂಧವನೆ 3
--------------
ಜಯೇಶವಿಠಲ