ಒಟ್ಟು 1328 ಕಡೆಗಳಲ್ಲಿ , 95 ದಾಸರು , 1023 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿತ್ತಜನಯ್ಯನ ಚಿಂತಿಸು ಮನವೇಹೊತ್ತು ಕಳೆಯದೆ ಸರ್ವೋತ್ತಮನ ನೆನೆ ಮನವೆ ಪ ಕಾಲನ ದೂತರು ನೂಲು ಹಗ್ಗವ ತಂದುಕಾಲು ಕೈಗಳ ಕಟ್ಟಿ ಮ್ಯಾಲೆ ಕುಟ್ಟಿಕಾಲಪಾಶದೊಳಿಟ್ಟು ಶೂಲದಿಂದಿರಿವಾಗಪಾಲಿಸುವರುಂಟೆ ಜಾಲವ ಮಾಡದೆ 1 ದಂಡಧರನ ಭಟರು ಚಂಡಕೋಪದಿ ಬಂದುಕೆಂಡದ ನದಿಯ ತಡಿಗೆ ಕೊಂಡೊಯ್ದುಖಂಡಖಂಡವ ಕಿತ್ತು ಕೆಂಡದೊಳಿಡುವಾಗಹೆಂಡಿರು ಮಕ್ಕಳು ಬಂದು ಬಿಡಿಸಬಲ್ಲರೆ ಮರುಳೆ 2 ಅಂಗಳಿಗೆ ದಬ್ಬಣಂಗಳ ಸೇರಿಸಿ ಎರಡುಕಂಗಳಿಗೆ ಸೀಸವ ಕಾಸಿ ಪೊಯ್ಯಲುತಂಗಿ ಅಕ್ಕ ಬಂದು ಭಂಗವ ಬಿಡಿಸುವರೆಅಂಗವು ಸ್ಥಿರವಲ್ಲ ರಂಗವಿಠಲ ಬಲ್ಲ 3
--------------
ಶ್ರೀಪಾದರಾಜರು
ಚಿನ್ನದ ಚಾವಡಿ ಮ್ಯಾಲೆ ಪನ್ನಂಗಶಯನರು ಮಾನ್ಯ ಮಾನ್ಯರು ಮುಕ್ತರು ಮುಕ್ತರನೆ ನೋಡುತಲಿಇನ್ಯಾರ ಭಯವು ನಮಗಿಲ್ಲ 1 ಮುತ್ತಿನ ಚಾವಡಿ ಮ್ಯಾಲೆ ಮುಕ್ತರನೆ ನೋಡುತಲಿ ಲಕ್ಷ್ಮಿನಾರಾಯಣರು ಕುಳಿತಾರೆ ಕುಳಿತು ನೋಡುತಲಿರಲು ಮತ್ಯಾರ ಭಯವೂ ನಮಗಿಲ್ಲ 2 ಯಮಧರ್ಮರಾಯಗೆ ನಮೋ ನಮೋ ನಾನೆಂಬೆ ಘನ ಗುಣ ಮಹಿಮ ನೀನೆಂದು ನೀನೆಂದು ಸ್ತುತಿಪೆನೊ ಅನುಮಾನವೇಕೆ ಸಲಹೆನ್ನ 3 ರಂಗ ರಂಗಾಯೆಂದು ರಂಗನ್ನ ನೆನೆದರೆ ಹಿಂಗೋದು ಸಕಲ ದಾರಿದ್ರ್ಯ ದಾರಿದ್ರ್ಯ ಕಳೆವಂಥ ಮಂಗಳಾಂಗಿಯೆ ಶ್ರೀ ಮಾಲಕ್ಷ್ಮಿ 4 ಸಾಮಜವರದನು ಭೀಮೇಶಕೃಷ್ಣನು ಕಾಮಿತಾರ್ಥಗಳ ಕೊಡುವೋನು ಕೊಡುವಂಥ ಶ್ರೀಹರಿಯೆ ಪ್ರೇಮದಲಿ ಎನ್ನ ಸಲಹಲಿ 5
--------------
ಹರಪನಹಳ್ಳಿಭೀಮವ್ವ
ಚೆನ್ನಕೇಶವದೇವರಾಯಇನ್ನು ಸುಖಿಪೆನೆಂತೆನಗೆ ಅನ್ಯಥಾ ಗತಿಯಿಲ್ಲ ಪ. ಅನುದಿನ ಸಂದಣಿಸೆ 1 ಉಡುವಾಸೆ ನುಡಿವಾಸೆ ಬೇಡುವಾಸೆ ಕೊಡುವಾಸೆಒಡಲ ತುಂಬಬೇಕೆಂಬ ಆಸೆಕೊಡದವನ ಬಡಿದು ಜಡಿವಾಸೆ ಬಿಡದಿರಲು 2 ಹಯವದನನೆ ದೇವ ನಿನ್ನ ನೆನೆಯದಿದ್ದೀಮನಕೆಭಯವೆಲ್ಲಿಹುದು ಜಗನ್ನಾಥ ನಿನ್ನದಯವನೆ ಬೀರಿ ನಿರ್ದಯನನ್ನುದ್ಧರಿಸೊ 3
--------------
ವಾದಿರಾಜ
ಛಲ ಮಾಡುವ ಲೀಲೆಗಳರಿನ್ನಾರನು ಕಾಣಿನೊ | ತ್ಸಲನೆಂಬೊ ನಾಮವನು ಧ್ವಜವೆತ್ತಿ ಮೆರವುವದೊ ಪ ಅತಿಶ್ರೇಷ್ಠನಾಗಿ ಕೀರ್ತಿ ಪಡೆÀದು ಪಸರಿಸಿ | ಪ್ರತಿಯಿಲ್ಲ ಎನಿಸಿಕೊಂಬೆ ನಾ | ಸತತವನು ಪರರಾಶೆ ಮಾಡದಲೆ | ಚತುರತನ ಚತುರೋಪಾಯದಿ ಬಾಳುವೆ | ಕ್ಷಿತಿಯೊಳಗೆ ಅಭಿಮಾನ ಕ್ಷಿತಿಯಾಗದಂತೆ ಸು | ಮತಿಗಳಿಂದಲಿ ಬದುಕುವೆ | ಸುತ ಸಹೋದರ ನಡುವೆ | ಅತುಳ ಬಲವಂತನೆನೆಸುವೆನೆಂದು ಇದ್ದೆನಲ್ಲನೆ 1 ಜಡದೇಹವನು ಮೆಚ್ಚಿ ಮುಪ್ಪು ದೂರೆಂತೆಂದು | ಕಡು ಸಾಹಸವ ತಾಳಿದೇ ಒಡಿಯರಾರೆನಗಿಲ್ಲ ಒಬ್ಬರಿಗೆ | ಒಡಿಯನೆಂದು ಎಡೆಎಡೆಗೆ ಪೇಳಿಕೊಂಬೆ | ಮಡಗಿ ಧನವನು ಧರ್ಮ ಕೊಡದತೀ ಕೃಪಣನಾಗಿ | ಪಡವೆ ಸಂಸಾರವೆಂಬೊ ಅಹಂಕಾರವನು ತಾಳಿ | ಎಡಹಿ ಮುಂಗಾಣದ ಅಧಮನಂತೆ ಇದ್ದೆನಲ್ಲದೆ 2 ಪುರುಷ ಪಟಾಂತ್ರದವನಾಗಿ ಎಲ್ಲ | ಧಿಕ್ಕರಿಸಿ ನಿರಾಕರಿಸುವೆ | ಜರೆದು ನಿಷ್ಕರುಣದಲಿ | ವರ ಅಭ್ಯಾಗತಿಗಳನು | ಹುರುಳಗೆಡಿಸಿ ನೋಡುವೆ | ಗುರು ಹಿರಿಯರನು ಮರುಗುವಂತೆ ಕೇಡು ನುಡಿದು ಉ | ತ್ತರ ಅನುತ್ತರನಾಡುವೆ | ಪರಿಪರಿಯ ಮಾಯದ ಶರಧಿಯೊಳು ಬಿದ್ದು ಲಜ್ಜಿ ಉರಿಯೊಳಗೆ ಪೊಕ್ಕಂತೆ ಮರುಗುತ್ತಿದ್ದನಲ್ಲವೆ 3 ಅಪರಾಧವೇನಯ್ಯಾ ವಿಪರೀತ ತೋರದೆ | ಅ | ಪರಿಮಿತ ಪರಮಹಿಮನೆ | ಉಪಕಾರಕ್ಕಪಕಾರವೊ | ನಿಪುಣತನವಿರಲಿಲ್ಲವೊ | ಸಪುತೆರಡು ಲೋಕದೊಳಗಾನೆಂದು ಇದ್ದೆನಿಲ್ಲವೊ | ವಿಪುಳ ವೈಕುಂಠ ತೊಲಗಿಸದೆ ಸುಮ್ಮನಿರಬಲ್ಲನೆ4 ಪರದೈವ ನಾನೆಂದು ಪೇಳುವರ ಗಂಡನೆ | ಸರಿಗಾಣೆ ಈ ಮಹಿಯೊಳು | ಪತಿ | ಕರಿಸಿ ನಿಜಕರವ ಪಿಡಿಯಾಡದೆ | ಪರಮೇಷ್ಠಿ ಹರಿದು ತಲ್ಲಣಿಸಿ ನೆರದು ಭೀಕರಗೊಂಬರು | ಪರಮಾಣು ರೂಪ ಭಕ್ತರ ಪರುಶ | ಸಿರಿ ವಿಜಯವಿಠ್ಠಲ ವರ ವೆಂಕಟನೆ | ಶರಣಜನ ಪರಿವಾರ5
--------------
ವಿಜಯದಾಸ
ಛಳಿಸದಿರು ಚಂಡಿ ತನುವೆ ನೀನುಒಳಗಾಗದೊರಟುತನವೆ ತರವೆ ಪಗರ್ಭವಾಸವಗಳಿಸಿದೆ ಹಾಗೆ ನೀನರ್ಭಕತ್ವದಲಾಡಿದೆ ಬಿಡದೆನಿರ್ಭಯದಿ ನೀ ಬದುಕಿದೆ ಭೋಗದಲಿದುರ್ಭಗರ ದಾರಿಗೊಲಿದೆ ನಲಿದೆ 1ಕಾಮಾಂಧಕಾರಕೆಳೆದೆ ನನ್ನ ನಿಷ್ಕಾಮದಲಿ ನಿಲಿಲೀಸದೆ ಕಳದೆನೇಮಕ್ಕೆ ನೀನಲಸಿದೆ ಶೀತೋಷ್ಣಭೀಮಕ್ಕೆ ನೀ ಬೆದರಿದೆ ಬರಿದೆ 2ಕಾಲಗಳ ಬಹು ಕಳಸಿದೆ ವ್ಯರ್ಥದಲಿಶ್ರೀಲೋಲನನುಸರಿಸದೇ ಹೋದೆಮೂಲವನೆವರೆ ಮಾಡಿದೆ ದೋಷಗಳಕೀಲುಗಳಿಗಳಿಕಾಲ್ನೀಡಿದೆ ಜಡಿದೆ 3ಮನವೀಗ ಮಾಡಿತಿನಿತಾ ನಾನಿದಕೆಮನೆ ಮಾತ್ರವಾಗೆ ಮಾತನಿಡುತಾತನುವಿನಲಿ ತಪ್ಪಿಡಿಯುತಾ ಯಾಕೆ ನೀನೆನುವೆಯನೆ ನೀನೆ ಚಿತ್ತವ್ರಾತಾ 4ಮನ ನೀನೆ ನೀನೆ ಮನವೂ ಕ್ರಿಯೆಯಮನ ಮಾಡೆ ಮೂಡ್ದೆತನುವೂ ಘನವೂನೆನೆಯಲೆರಡಿಲ್ಲ ನೀವು ಏಕತ್ವವೆನುತೆಂದೆನಿರೆ ಬಂಧವೂ ದಿಟವೂ 5ಕಾರಣವೆ ಮನವಾದರೆ ಅದರೊಡನೆಹೋರುವೆನು ನಾನು ಹೆದರೆನದರೆತೋರೆ ನೀ ಮುಂದೆ ಬೇರೆ ಬಂಧನವೂಬೀರಿತಿದು ನೀ ಕಯ್ಯಾರೆ ತಾರೆ 6ನೀ ಬಾರದಿರುವೆಯಲ್ಲ ುೀಮಾತನಾ ಬಾಯಲೆನ್ನೆನಲ್ಲಾ ಸೊಲ್ಲಾಆ ಬಗೆಯ ಮೂಡಿತಿಲ್ಲ ಇದಿರಾಗಿನೀ ಬಂದು ನಿಲಲು ಸಲ್ಲಾ ಹೊಲ್ಲಾ 7ನನಗುಂಟು ಮನಸಿಗುಂಟು ವ್ಯವಹಾರನಿನಗಾಗಬಾರದಂಟೂ ನಂಟುಜನಿಸಿಬರೆ ಬಂತುಗಂಟು ಆವರಣವೆನಗಾುತು ಪದರವೆಂಟೂ ಬಂಟೂ 8ಅನುಮಾನವಿಲ್ಲವಿಸಿದಕೆ ಪ್ರತ್ಯಕ್ಷವನುಭವಿಸಿ ಪೇಳ್ದೆನದಕೆ ಅಳುಕೆಜಿನುಗದಿರು ಮುಂದೆ ಜೋಕೆ ಹರಿಯಂಘಿü್ರಯನುಸರಿಸದಂದವೇಕೆ ಬೇಕೆ 9ಹರಿಪಾದಪದ್ಮವನ್ನು ನಾನುಬೆರೆವೆ ನೀ ಬಳಲಿಕೆಯನೂ ುನ್ನೂತರಬೇಡ ತಥ್ಯವನ್ನು ಪಡೆವದಕೆಬರೆ ಮುಂದೆ ಬಹುಮಿತ್ರನೂ ನೀನು 10ಶರೀರವಿರೆ ಶ್ರಮವು ನಿನಗೆ ಜನ್ಮಗಳಧರಿಸುತ್ತ ದಣಿವು ನಿನಗೆ ಹೀಗೆಸರಿಯಾಯ್ತು ದುಃಖ ನಮಗೆ ಇದಕಂಡುಇರುವ ಬಗೆ ವಿಶ್ವದೊಳಗೆ ಹೇಗೆ 11ಅದರಿಂದ ನೀನು ನಾನು ಒಂದಾಗಿಹುದುಗಲಾದಿಯನೀಶನೂ ತಾನುಪದವಿಯನು ಪಾಲಿಸುವನು ಬಳಿಕಲಿನ್ನುದುಸುವಕಷ್ಟಗಳನೂ ಕೊಡನೂ 12ಬರುವದಾನಂದ ನಮಗೆ ತಿರುಪತಿಯವರದ ವೆಂಕಟರಮಣಗೆ ಎರಗೆಭರಿತಾತ್ಮಗಾವು ಹೊರಗೆ ಹೀಗೆ ನಾವಿರಲುಂಟು ದೇವನೊಳಗೆ ಸಲುಗೆ 13ಕಂ||ಛಂದಾನುವೃತ್ತಿ ಮೂರ್ಖರಿಗೆಂದಾಡಿದ ನುಡಿಯು ಸತ್ಯವಾುತೀ ದೇಹವುಮುಂದೊರದೆ ಪೇಳಲುತ್ತರನೀಂದೊಡಬಡಿಸುತ್ತ ಕೇಳಿಕೊಳುತಿಹದೊಲವಿಂ
--------------
ತಿಮ್ಮಪ್ಪದಾಸರು
ಛೀ ಛೀ ಮನವೆ ನಾಚದ ತನುವೆನೀಚವೃತ್ತಿಯ ಬಿಟ್ಟುನೆನೆ ಕಂಡ್ಯ ಹರಿಯ ಪ. ಕಿವಿಗೊಟ್ಟು ಗಂಟೆಯ ನಾದಕ್ಕೆ ಹುಲ್ಲೆಯನಿವಹ ಬಲೆಗೆ ಸಿಕ್ಕಿ ಬಿದ್ದುದನರಿಯನವ ಯೌವನೆಯರ ಕೋಕಿಲಾಲಾಪದಸವಿನುಡಿಗೇಳದಚ್ಯುತನ ಕಥೆ ಕೇಳೊ 1 ಪಣ್ಣೆಂದು ಭ್ರಮಿಸಿ ಪತಂಗ ದೀಪದಿ ಬಿದ್ದುಉಣ್ಣದುರಿವುದ ನೀ ಕಂಡು ಕಂಡರಿಯಬಣ್ಣದಬಲೆಯರ ರೂಪಿಗೆ ಮರುಳಾಗಿಮಣ್ಣ ತಿನ್ನದೆ ಮಾಧವನ್ನ ನೀ ಸ್ಮರಿಸೋ 2 ಗಾಣದ ತುದಿಯ ಮಾಂಸವ ಮೆಲ್ಲುವ ಮತ್ಸ್ಯಪ್ರಾಣವ ಬಿಡುವುದಂಗನೆಯರಧರವಮಾಣದೆ ಬಯಸಿ ಕೆಡದೆ ಶ್ರೀಮನ್ನಾರಾ-ಯಣ ನಾಮಾಮೃತಸವಿ ಎಲೆ ಮನವೆ 3 ಕರಿ ಕರಿಣಿಯ ಸ್ಪರುಶಕೆ ಪೋಗಿಕುಳಿಯ ಬಿದ್ದುದ ನೀ ಕಂಡು ಕಂಡರಿಯಲಲನೆಯರಾಲಿಂಗನಕೆÀಳೆಸದೆ ಸಿರಿ-ಲಲನೇಶನಂಘ್ರಿಯ ಅಪ್ಪಿಕೋ ಮನವೆ 4 ಅಳಿ ಪರಿಮಳಕ್ಕಾಗಿ ನಳಿನದೊಳಗೆ ಸಿಕ್ಕಿಅಳಿವಂತಂಗನೆಯ ಮೈಗಂಧವ ಬಯಸಿಬಳಲದೆ ವರದ ಶ್ರೀಕೃಷ್ಣನಂಘ್ರಿಯೊಳಿಪ್ಪತುಳಸಿಯನಾಘ್ರಾಣಿಸು ಕಂಡ್ಯಮನವೆ 5
--------------
ವ್ಯಾಸರಾಯರು
ಛೀ ಹಳಿ ಥೂ ಖೋಡಿ ಪಾಪಿ ಮನವೆ, ನಿನ್ನ ಪ ಕುಹಕ ಬುದ್ಧಿಗಳೆಲ್ಲ ಬಿಡು ಕಂಡ್ಯ ಮನವೆಅ.ಪ ಬಣ್ಣದ ಬೀಸಣೆಗ್ಯಂತೆ ಹೆಣ್ಣು ತಿರುಗೋದ ಕಂಡು ಕಣ್ಣು ಸನ್ನೆಯಮಾಡಿ ಕೈ ಹೊನ್ನು ತೋರಿ ತಣ್ಣೀರು ಹೊಯಿದ ಹೊಸ ಸುಣ್ಣದಂತೆ ಕುದಿದು ನಿನ್ನ ಕಣ್ಣಿಗೆ ಮಣ್ಣು ಚೆಲ್ಲಿಕೊಂಬರೆ ಮನವೆ 1 ನೆರೆಹೊರೆ ಮನೆಗಳಲಿ ಪ್ರಸ್ಥವನ್ನು ಮಾಡಿದರೆ ಕರೆಯದೆಲೆ ಮೊದಲ್ಹೋಗಿ ಹಾಳು ಹರಟೆ ಬಡಿಗಂಟು ಸುದ್ದಿ ನೂರಾರು ಹೇಳಿ ಅವರ ಹಿರಿಯ ಮಗನಂತೆ ಉದರವ ಪೊರೆವೆ ಮನವೆ 2 ಉತ್ತಮಾನ್ನವ ನೀಡೆ ಮುಸುರೆ ಬಯಸುವಂತೆ ಚಿತ್ತದೊಲ್ಲಭನ ಸಂಗಡದಿ ನಲಿದು ಮತ್ತೆ ಉಪರತಿಗೆ ಪರಪುರುಷನ ಬಯಸುವ ತೊತ್ತು ಬುದ್ಧಿಯನೆಲ್ಲ ಬಿಡು ಕಂಡ್ಯ ಮನವೆ 3 ಪಗಡೆ ಚದುರಂಗ ಕವಡೆಯನಾಡÀ ಕರೆದರೆ ನಿಗುರುವುವು ಕರ್ಣಗಳು ಮೊಚ್ಚೆಯಂತೆ ಜಗದೀಶನ ದಿನದಿ ಜಾಗರಕೆ ಕರೆದರೆ ಮುಗಿಲ್ಹರಿದು ಬಿದ್ದಂತೆ ಧರೆಗಿಳಿವೆ ಮನವೆ 4 ವಾಸುದೇವನ ಪೂಜೆಯೊಮ್ಮೆ ಮಾಡೆಂದರೆ ಬೇಸತ್ತು ತಲೆಯ ಚಿಟ್ಟಿಕ್ಕಿ ಕುಳಿತೆ ಆ ಸಮಯದೊಳಗೊಬ್ಬ ಕಾಸು ಕೊಟ್ಟೇನೆನಲು ದಾಸಿ ಮಗನಂತೆ ಬೆನ್ನಟ್ಟಿ ಪೋದೆ ಮನವೆ 5 ಕುಳ್ಳಿರುವ ಸ್ಥಳವೆಷ್ಟು ಕೂಳು ತಿಂಬುವುದೆಷ್ಟು ಉಳ್ಳನಕ ಕೀರ್ತಿಯಪಕೀರ್ತಿಯೆಷ್ಟು ಗುಳ್ಳೆಯಂದದ ದೇಹನೆಚ್ಚಿ ನೀ ಕೆಡಬೇಡ ಉಳ್ಳಿಪÀರೆ ಸುಲಿದರೆ ಹುರುಳಿಲ್ಲ ಮನವೆ 6 ಬಿಂದು ಮಾತ್ರವೊ ಸುಖವು ದು:ಖ ಪರ್ವತದಷ್ಟು ಸಂದೇಹವಿಲ್ಲವಿದು ಶಾಸ್ತ್ರಸಿದ್ಧ ಎಂದೆಂದು ಸಿರಿಯರಸ ವಿಜಯವಿಠ್ಠಲನಂಘ್ರಿ ಕುಂದದೆ ಹೃದಯದೊಳು ನೆನೆಕಂಡ್ಯ ಮನವೆ 7
--------------
ವಿಜಯದಾಸ
ಜನನ ಮರಣ ಎರಡು ಇಲ್ಲವೊ ತಾ ತಿಳಿದ ಮೇಲೆ ಪ ಮನದೊಳಿರುವ ಮಮತೆ ಅಳಿದು ಘನವಿವೇಕವಾಗಿ ಕಾಣುವ ಇನಕುಲೇಶನನ್ನು ಬಿಡದೆಅನುರಾಗದೊಳು ಭಜಿಸಿದವಗೆ ಅ.ಪ ಆರುಮೂರು ಮೀರಿ ನೋಡೆಲೈ ಅಲ್ಲಿರುವ ತಾರಕದಾರಿ ಪ್ರಣವ ಸಾರುತಿದೆ ನೋಡೈ ಘೋರ ಕತ್ತಲೆಯನರಿದು ಮಾರಜನಕನನ್ನು ನೆನೆದು ಏರಿ ಶಿಖರದೊಳಗೆಯಿರುವ ತೇರು ಕಂಡುಬಂದಬಳಿಕ 1 ದಾನವಾರಿಯನ್ನು ಕಾಣೆಲೊ ಶ್ರೀಪರಮ ಚರಿತ ಗಾನಲೋಲನನ್ನು ಕಾಣೆಲೈ ಭಾನುಕೋಟಿರೂಪನಹುದು ಗುರುವು ತುಲಸಿರಾಮದಾಸ ದೀನರಕ್ಷಕನೆಂದು ಭಜನೆ ಮಾಡಿಕೊಂಡು ಬಂದಬಳಿಕ 2
--------------
ಚನ್ನಪಟ್ಟಣದ ಅಹೋಬಲದಾಸರು
ಜನುಮ ಸಾರ್ಥಕವ ಮಾಡಿಸು ತಂದೇ ನೆನೆವರ ಕಾವನು ನೀನೆಂದು ಬಂದೇ ಪ ನಾನಿರುವುದು ಲೌಕಿಕರ ಸಮೂಹ ಏನ ಗೈವುದೋ ಪ್ರಪಂಚದ ಮೋಹ 1 ಅಜ್ಞನು ನಾ ನನ್ನದೆಂಬುದ ಬಿಡಿಸು ಸುಜ್ಞಾನದೀಪ ಕೊಟ್ಟು ಪ್ರಜ್ವಲಿಸು 2 ಅಜ್ಞನಾ ಯೆನ್ನಪರಾಧಾವ ಕ್ಷಮಿಸು ವಿಜ್ಞಾಪಿಸಿಕೊಂಬೇ ನೀ ಮನಸ್ಕರಿಸು 3 ಹಗಲಿರಳು ಯನ್ನ ಹೆಗಲೊಳು ಕುಳಿತು ಮಿಗಿಲಾಗಿಸು ದಿನ್ಯ ಸೇವೆಗಳನಿತು 4 ನಾಲಗೆ ಮಧ್ಯದಿ ನೀ ನಲಿದಾಡಿ ಬಾಳುವೆಯೆಲ್ಲವು ಭಜಿಪುದ ಮಾಡಿ 5 ಕಣ್ಣೆಲ್ಲಿ ಸುಳಿದರೆ ಅಲ್ಲಿನೀ ಕಂಡು ಉನ್ನತವೈಭವ ತೋರು ಮನಗೊಂಡು 6 ಜಾಜೀಕೇಶವ ಜಯ ಪದವಿತ್ತು ರಾಜೀವಾಂಬಕ ಪೊರೆ ಭಾರಪೊತ್ತು 7
--------------
ಶಾಮಶರ್ಮರು
ಜನುಮದ ದಿವಸವಿದು ಹನುಮ ನಿನ್ನಜನುಮದ ದಿವಸವಿದೂ ಪ ಅನುದಿನ ನಿನ್ನನುನೆನೆಯುವ ಜನರಿಗೆ ಘನ ಮುದ ಕೊಡುವಂಥ ಅ.ಪ. ಯಾವಾಗಲೂ ಹರಿಯ ಭಕುತಿಯಲಿಸೇವೆಮಾಳ್ಪ ಪರಿಯಭಾವುಕರಿಗೆ ಕಲಿಸುವುದಕೆ ಗಡಜೀವಿಯಾಗಿ ಅವತರಿಸಿದ ನಿನ್ನದೂ 1 ಪೊಡವಿಯ ಮಾತೆಯನು ದನುಜಬ ಚ್ಚಿಡಲವಳಿರುವದನುಹುಡುಕಿ ತೆಗೆಯಲಾ ಕಡಲನೆ ಜಿಗಿಯುವಕಡುಶಕ್ತಿಯ ಗಡ ಪಡೆದ ನಿನ್ನಯ 2 ಧಾರುಣಿನ ಕಾರಣ ಗದುಗಿನವೀರನಾರಾಯಣಚಾರು ಚರಣದಿ ತೋರಿ ಭಕುತಿಯನುಸೂರೆಗೈಯ್ಯೆ ಮೈದೋರಿದ ನಿನ್ನನು 3
--------------
ವೀರನಾರಾಯಣ
ಜನುಮಪಾವನ ಹರಿನಾಮ ಭಜನೆ ಜನುಮ ಪಾವನ ಪರಲೋಕಸಾಧನ ಪ ದಿನದಿನದಿ ಘನವಾಗಿ ಕನಸುಮಸಿನೊಳು ಬಿಡದೆ ವನಜನಾಭನ ನೆನೆದರಿಲ್ಲ ಜನನ ಮರಣ 1 ಲೊಂದುಭವದ ಬಂಧನಗಳ್ ಸಂಧಿಸವೆಂದಿಗು 2 ಕಾಮಜನಕ ಸ್ವಾಮಿ ಶ್ರೀರಾಮಮಂತ್ರ ಗೂಢದಿಟ್ಟು ನೇಮದಿಂದ ಪೊಗಳುತಿರೆ ಆ ಮಹಮೋಕ್ಷ ಸಿದ್ಧಿ3
--------------
ರಾಮದಾಸರು
ಜಪವ ಮಾಡಿದರೇನು ತಪವ ಮಾಡಿದರೇನುವಿಪರೀತ ಕಪಟಗುಣ ಕಲುಷವಿದ್ದವರು ಪ ಆದಿಗುರುವರಿಯದೆ ಅತ್ತಲಿತ್ತಲು ತೊಳಲಿವೇದಶಾಸ್ತ್ರವನೋದಿ ಬಾಯಾರಲುಹಾದಿಯನು ಕಾಣದಂತಿರುತಿರ್ದು ಹಲವೆಂಟುವಾದ ತರ್ಕದೊಳಿದ್ದ ಭೇದವಾದಿಗಳು 1 ತುಂಬಿ ಬತ್ತಿದಂತೆಮಡದಿ ಮಕ್ಕಳಿಗೆಂದು ಒಡವೆ ವಸ್ತ್ರವ ಗಳಿಸೆಹಿಡಿಯಲಾ ಯಮನವರ ಕಟ್ಟಿಗೊಳಗಾಗಿ 2 ಚಳಿಮಳೆಯ ಅತಿ ಕಾರುಗತ್ತಲೆಯೊಳಗೆ ಎದ್ದುಹೊಳೆಯೊಳಗೆ ಮುಳುಗಿ ಜಪ ತಪವ ಮಾಡಿಕಳವಳಿಸಿ ನೂರೆಂಟು ಹಲುಬಿ ಬಳಲಲು ಬೇಡನಳಿನಾಕ್ಷ ಆದಿಕೇಶವನ ನೆನೆ ಮನವೆ 3
--------------
ಕನಕದಾಸ
ಜಯದೇವ ಜಯದೇವ ಜಯ ಲಂಬೋದರ | ಜಯ ಶಂಭು ಸತಿಗತಿ ಪ್ರಿಯ ಸುಕುಮಾರ ಪ ಜಯತು ಜಯತೆಂಬೆ ನಿನ್ನಯ ಪದವನಾಶ್ರಯಿಸಿ | ಜಯತು ಪಾಲಿಸೋಯೆನ್ನ ಮನದಿಷ್ಟ ಸಲಿಸಿ ಅ.ಪ. ಸುರರ ಪೂಜೆಯಗೊಂಡು ಸಂತುಷ್ಟಿಗೊಳದೆ | ನರರ ಭಕ್ತಿಗೆ ಮೆಚ್ಚಿ ಧರೆಗೆ ನೀನಿಳಿದೆ || ಪರಿಪರಿ ಭಕ್ಷ್ಯ ಪಾಯಸ ಕಜ್ಜಾಯಗಳ| ವರಶುಭ ದಿನ ಚೌತಿಗುಂಬೆ ಲೇಸುಗಳ 1 ತ್ರಿಭುವನದೊಳು ಸರ್ವರಿಂದ ಸೇವೆಯನು | ವಿಭವದಿ ಕೈಗೊಳ್ಳುತ್ತೊರೆದ ಶುಭವನು || ಅಭಯವನಿತ್ತು ರಕ್ಷಿಸುವೆ ಭಕ್ತರನು | ಇಭಮುಖ ಗಣಪ ಪಾಲಿಸೊ ಭಾಗ್ಯಗಳನು 2 ಪಾದ ನೆನೆವೆ ಮನ್ಮನದಿ | ಘನ ದುರಿತವ ದೂರಪಡಿಸು ನೀ ಮುದದಿ || ಚಿನುಮಯ ಮೂರ್ತಿಯ ಪದವ ಧ್ಯಾನಿಸುವ | ಮನಕೆ ಸುಜ್ಞಾನ ಮತಿಯ ಪಾಲಿಸಯ್ಯ 3 ದಾಸರಿಗೊಡೆಯ ಗಣೇಶ್ವರ ನಿನ್ನ | ಲೇಸಿನೊಳ್ ಭಜಿಸಿ ಕೇಳುವೆ ಗುಣರನ್ನ | ದಾಸನೆಂದೆನಿಸಿ ಲೋಕದಿ ರಂಜಿಸೆನ್ನ | ದೋಷವ ತ್ಯಜಿಸನುದಿನ ಸಲಹೆನ್ನ 4 ಸಕಲ ಸುಜ್ಞಾನ ಕವಿತೆಗಳ ಮುದದಿ | ಸಖನಾಗುತೆನ್ನ ನೀ ಪೊರೆಯಯ್ಯ ದಯದಿ || ಭಕುತ ವತ್ಸಲ ಶ್ರೀನಿವಾಸನ ಪ್ರಿಯ ನೀ | ಸುಕುಮಾರ ಕುಡುಮದೊಡೆಯ ಗಜವದನ 5
--------------
ಸದಾನಂದರು
ಜಯದೇವಿ ಜಯದೇವಿ ಜಯ ಬಗಳಾಮುಖಿಯೇಜಯವೆಂದು ಬೆಳಗುವೆನು ಜಯಭಕ್ತ ಸಖಿಯೇ ಪ ನಿತ್ಯ ಪೀತೋಪಚರಣೆಪೀತಕುಂಡಲ ಹಾರಪೀತ ವರ್ಗಾವರಣೆಪೀತಮೂರ್ತಿಯ ನೆನೆವೆ ಪೀತ ಪ್ರಿಯೆ ಸ್ಮರಣೆ 1 ಬತ್ತೀಸಾಯುಧ ಪಿಡಿದೆ ಭಯಂಕರಿ ಉಗ್ರೇಶತ್ರುನಾಶಕಿ ನೀನು ಭಕುತ ಸಾಹಸ್ರೇಮತ್ತೆ ಹುಡುಕುತ್ತಿರುವೆ ದುಷ್ಟರನು ಶೀಘ್ರೆನಿತ್ಯ ನಾ ಭಜಿಸುತಿಹೆ ಮನವ ಏಕಾಗ್ರೇ 2 ಬ್ರಹ್ಮ ಚಿದಾನಂದ ಬಗಳಾಮುಖಿ ರಾಣಿಹಮ್ಮಳಿದ ಮಹಿಮರಾ ಮೆಚ್ಚಿನ ಕಟ್ಟಾಣಿಬ್ರಹ್ಮರಂಧ್ರದೊಳು ವಾಸಿಸುತಿಹ ದಿನಮಣಿಬಿಮ್ಮನೆ ನಮಗೊಲಿಯೆ ಶೀಘ್ರದಿಂ ಕೃಪಾಣಿ 3
--------------
ಚಿದಾನಂದ ಅವಧೂತರು
ಜಾತಿ ಕುಲಗೋತ್ರಗಳ ಖ್ಯಾತಿ ಹಿರಿದಲ್ಲಯ್ಯ ಪ ನೀತಿ ನಯ ಭಕುತಿಗಳು ಹಿರಿಯವಯ್ಯ ಅ.ಪ ಸ್ನಾನ ಸಂಧ್ಯಾ ಹೋಮ ಧ್ಯಾನ ದಿನಚರ್ಯೆಗಳ ತಾನಲಕ್ಷ್ಯವ ಗೈವ ಮಾನವನು ದ್ವಿಜನೇ ಶ್ರೀನಿವಾಸಾ ರಂಗ ದಾನವಾರಿ ಎಂದು ಜಾನಿಸುವ ಹರಿಜನರು ಹೀನರಹರೇ1 ಬೂದಿ ನಾಮವ ಬಳಿದು ವೇದಾಂತಿ ತಾನೆಂದು ಮೇದಿನಿಯ ಜನರಲ್ಲಿ ಕ್ರೋಧ ತೋರಿ ಮಾಧವನ ಭಕುತರಲ್ಲಿ ಭೇದ ವೈರವ ತಾಳಿ ವಾದ ಮಾಡುವ ನರಗೆ ಹರಿಯ ಕೃಪೆಯುಂಟೆ 2 ವನಜನಾಭನ ನೆನೆದು ತನುಮನವನರ್ಪಿಸದೆ ಧನದಾಸೆದೋರುವನು ಹರಿಭಕುತನೆ ಕನಸುಮನಸಿನೊಳೆಲ್ಲ ಮಾಂಗಿರೀಶನ ಭಜಿಸಿ ದಿನಪೂಜೆಗೈವವನು ಕುಲಹೀನನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್