ಒಟ್ಟು 2020 ಕಡೆಗಳಲ್ಲಿ , 113 ದಾಸರು , 1581 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೈಯ ಮುಗಿವೆ ಗುರುರಾಯ ಶರಣು ಜಗ- ದಯ್ಯನೆ ಬಾಹುಲೇಯ ಪ. ಒಯ್ಯನೆ ಬಿನ್ನಪ ಗೈಯುವೆ ಕರುಣಾಳು ಧೈರ್ಯ ಸಾಹಸ ಗುಣಧುರ್ಯನೆ ಜಯ ಜಯಅ.ಪ. ವ್ಯರ್ಥ ಜನ್ಮವಾಯಿತು ಹರಿಯ ಸ್ಮರಣೆ ಉತ್ತಮೋತ್ತಮ ಗುಣವ ಪಾಲಿಸು ಭಕ್ತವತ್ಸಲ ಭಯನಿವಾರಣ ಸತ್ಯಮಾರ್ಗದಿ ನಡೆಸು ಶಂಕರ- ಪುತ್ರ ಪುಣ್ಯಚರಿತ್ರಭರ್ತನೆ 1 ತಾಮಸಗುಣಗಳು ಪರಿಹರಿಸು ನಿ- ಸ್ಸೀಮ ಮಹಿಮನೆ ನೀನು ಶ್ರೀ ಮನೋರಮನಿಷ್ಠೆ ಸಜ್ಜನ- ಸ್ತೋಮಸಂಗವನಿತ್ತು ದುರ್ಜನ- ಸೀಮೆಯೊಳು ಪೊಕ್ಕಿಸದಿರೆನ್ನ ಸು- ಧಾ ಮಯೂಖಾಸ್ಯನೆ ಮಹೇಶನೆ 2 ಭೂಮಿಗಧಿಕವೆನಿಪ ಪಾವಂಜಾಖ್ಯ ಗ್ರಾಮಾಧಿಪತಿ ನಿಷ್ಪಾಪ ಯೋಗಿ ಲ- ಲಾಮ ಲಕ್ಷ್ಮೀನಾರಾಯಣನ ಮ- ಹಾಮಹಿಮೆಯನು ಪೊಗಳಿ ಹಿಗ್ಗುವ ಕೋಮಲಾಂಗ ಸುಮಂಗಲಪ್ರದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕೈಯ ಮುಗಿವೆನು ಮಹಾಲಿಂಗ ಜಗ- ದೈಯನೆ ವೃಷಭತುರಂಗ ಪ. ಧೈರ್ಯಸಾಹಸ ಸಮುದ್ರ ರುದ್ರ ಸುರ- ವರ್ಯನೆ ಸದಯಾಪಾಂಗ ಅ.ಪ. ಕೆಂಡಗಣ್ಣಿನ ಪರಶಿವನೆ ಸುಪ್ರ- ಚಂಡ ಚಂಡಿಕಾಧವನೆ ಮಂಡೆಯೊಳಗೆ ಭಾಗೀರಥಿಯ ತಾಳ್ದ ಕಂಡಪರಶು ಪಾವನನೆ 1 ಚಂದ್ರಕಲಾಧರ ಹರನೆ ಗೋ- ವಿಂದನ ವರ ಕಿಂಕರನೆ ಸುಂದರ ಶುದ್ಧಸ್ಫಟಿಕಶರೀರನೆ ವೃಂದಾರಕ ಮುನಿವೃಂದವಂದಿತನೆ2 ಪಾವಂಜೆ ಕ್ಷೇತ್ರವಾಸ ಪರಿ- ಪಾಲಿಸು ಫಣಿಪತಿಭೂಷ ದೇವ ಲಕ್ಷ್ಮೀನಾರಾಯಣದಾಸನ ಕಾವ ಕಲ್ಮಷವಿನಾಶ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕೈಯ ಮುಗಿವೆನು ಮಹಾಲಿಂಗ ಜಗ- ದೈಯನೆ ವೃಷಭತುರಂಗ ಪ. ಧೈರ್ಯಸಾಹಸ ಸಮುದ್ರ ರುದ್ರ ಸುರ- ವರ್ಯನೆ ಸದಯಾಪಾಂಗಅ.ಪ. ಕೆಂಡಗಣ್ಣಿನ ಪರಶಿವನೆ ಸುಪ್ರ- ಚಂಡ ಚಂಡಿಕಾಧವನೆ ಮಂಡೆಯೊಳಗೆ ಭಾಗೀರಥಿಯ ತಾಳ್ದ ಕಂಡಪರಶು ಪಾವನನೆ1 ಚಂದ್ರಕಲಾಧರ ಹರನೆ ಗೋ- ವಿಂದನ ವರ ಕಿಂಕರನೆ ಸುಂದರ ಶುದ್ಧಸ್ಫಟಿಕಶರೀರನೆ ವೃಂದಾರಕ ಮುನಿವೃಂದವಂದಿತನೆ2 ಪಾವಂಜೆ ಕ್ಷೇತ್ರವಾಸ ಪರಿ- ಪಾಲಿಸು ಫಣಿಪತಿಭೂಷ ದೇವ ಲಕ್ಷ್ಮೀನಾರಾಯಣದಾಸನ ಕಾವ ಕಲ್ಮಷವಿನಾಶ3
--------------
ತುಪಾಕಿ ವೆಂಕಟರಮಣಾಚಾರ್ಯ
ಕೊಂಡಜ್ಜಿ ಶ್ರೀ ಜನಾರ್ದನ ಸ್ವಾಮಿ ಸ್ತೋತ್ರ ಎಂಥಾ ಸುಂದರನೊ ಶ್ರೀಕಾಂತನೂ ||ಅ|| ಸಂತರ ಮನೋರಥ ಸಂತತ ಪಾಲಿಸಿಪಂಥಾವ ಗೆಲಿಪ ಮಹಾಂತನೋ - ಶ್ರೀಕಾಂತನೂ ಅ.ಪ. ಮಾನಿನೀಯಳ ಬಿಟ್ಟು | ಮೌನಿಯಂದದಿ ನೀನುಕಾನನವನೆ ಸೇರಿ ನೆಲೆಸೀರ್ಪುದೂ | ಮುನಿಜನ ವಂದ್ಯಾ 1 ತೊಂಡ ಜನರು ನಿನ್ನ | ಬಂಡುಣಿಯಂದದಿಪುಂಡು ಮಾಡುವರೆಂದು ಬಂದೆಯಾ | ಪುಂಡರಿಕಾಕ್ಷಾ 2 ಹಿಂಡು ಭಕ್ತರು ತಮ್ಮ | ದಿಂಡು ಮಂಡಿಪರೆಂದು ಕೊಂಡಜ್ಜಿಯಲಿ ನೆಲಿಸೀದ್ಯಾ | ಪಾಂಡವ ಪ್ರೀಯಾ 3 ವೇಲಾಪುರಿಗೆ ಪೋಗ | ಲೊಲ್ಲೆನೆಂದೆನುತಲಿಇಲ್ಲೇ ನೆಲಸಿ ಪೂಜೆಗೊಂಬುದು ಫಾಲಾಕ್ಷ ಪ್ರಿಯನೇ 4 ಎಲ್ಲಿಪೋದರೂ ಬಿಡ | ಲೊಲ್ಲರೂ ನಿನ್ನ ಜನಸಲ್ಲಿಸೆನ್ನಯ ಮನೋಭೀಷ್ಟವ | ಹೇ ಜನಾರ್ಧನಾ 5 ಆರು ಕಾಯುವರಿಲ್ಲ | ಸಾರಿದೆ ತವ ಚರಣಪೋರನಾಮಯ ಹರಿಸಯ್ಯಾ | ನಾರದ ವಂದ್ಯಾ 6 ಗುರುಗಳಂತರ ಗುರು | ಗೋವಿಂದ ವಿಠಲನೆಪರಿಪರಿ ನಿನ ಕೀರ್ತಿ ನುಡಿಸಯ್ಯಾ | ಸುರವರ ವಂದ್ಯಾ7
--------------
ಗುರುಗೋವಿಂದವಿಠಲರು
ಕೊಡಿಸೊ ಅಂಕಿತವಾ ಗುರುರಾಯಾ ನಿನ್ನ ಅಡಿಗಡಿಗೆರಗಿ ನಾ ಬೇಡುವೆನಯ್ಯಾ ಪ ನಾ ಶರಣೆಂಬೆ ತಂದೆ ದರುಶನ ನುಡಿಯ ಪಾಲಿಸೋದಯದಿಂದ 1 ಎಂದು ಬಿಡದಲೇ ಕಾಡಿ ನೀ ದಯ ಮಾಡಿ 2 ಬೇಡ್ವೆ ಈ ಭಾಗ್ಯ ಯೋಗಿ 3 ಇಷ್ಟಾ ಪೂರೈಸೋ ನೀನು ನೋಡೊ ಸುರ ಕಾಮಧೇನು 4 ಅಂತರ್ಯಾಮಿ ಬಲ್ಲ ಇತ್ತರೆ ನಿನ್ನ ಕೇಳ್ವರಿಲ್ಲಾ 5
--------------
ಹನುಮೇಶವಿಠಲ
ಕೊಡು ಸುಖವ ಜಗಪಾಲಯ ಒಡೆಯ ವೈಕುಂಠದಾಲಯ ಪ ಕೊಡು ಸುಖ ನಿಮ್ಮಯ ಅಡಿಯದಾಸರ ಸೇವೆ ಸಡಗರ ಸಂಪದ ಎಡೆಬಿಡದೆ ಅ.ಪ ಜಡಮತಿಯನು ಕೆಡಿಸಿ ಜಡದೇಹಮೋಹ ಬಿಡಿಸಿ ಜಡಭವತೊಡರನು ಕಡೆಹಾಯ್ಸಿ ಅಡಿಗಡಿಗೆ ನಿನ್ನಡಿದೃಢ ಭಕುತಿ 1 ಸಾಗರಸಂಸಾರಭೋಗದ ಬಲುಘೋರ ನೀಗಿಸಿ ನಿಜಜ್ಞಾನ ಪಾಲಿಸಿ ಬೇಗನೆ ನೀಡು ತವದರುಶನವ 2 ಮನಸಿನ ಹರಿದಾಟ ಘನಘನ ದುಶ್ಚಟ ವನು ಪರಿಹರಿಸಿ ದಯಮಾಡು ಮನಶಾಂತಿ ಸದುಗುಣವ 3 ತನುತ್ರಯದಲಿ ನಿನ್ನ ನೆನಹನು ನಿಲಿಸೆನ್ನ ಬಿನುಗು ತ್ರಿದೋಷ ದೂರಮಾಡಿ ಜನನ ಮರಣಂಗಳ ಗೆಲಿಸಭವ 4 ಭೂಮಿಯೊಳಧಿಕೆನಿಪ ಸ್ವಾಮಿ ಶ್ರೀರಾಮಭೂಪ ನೇಮದಿ ಬೇಡುವೆ ವರ ನೀಡು ಆ ಮಹಕೈವಲ್ಯ ಪದವಿಯ 5
--------------
ರಾಮದಾಸರು
ಕೊಡುಕೊಡು ವರವನು ತಡವು ಮಾಡದೆ ಎ ನ್ನೊಡೆಯ ಶ್ರೀಹರಿ ಕೃಪೆ ಮಾಡಯ್ಯ ಪ ಬಿಡದಿರೆನ್ನನು ಜಗದೊಡತಿಯಾಣೆ ನಿ ನ್ನಡಿಗಳನೆಂದಿಗೂ ಬಿಡೆನಯ್ಯಾ ಅ.ಪ ಕ್ಷಿತಿಯೊಳಗತಿಶಯ ಪತಿತ ಪಾವನ ಶ್ರೀ ಪತಿ ನೀಗತಿ ಎನುತಿಹೆನಯ್ಯ ರತಿಪತಿಪಿತನೆ ಸುಮತಿಯನು ಪಾಲಿಸಿ ಗತಿಯನು ತೋರಿಪುದೆನಗಯ್ಯ1 ನಿನ್ನ ಪದವ ನಂಬಿ ನಿನ್ನವನೆನಿಸಿದ ಎನ್ನನುಪೇಕ್ಷಿಪರೇನಯ್ಯ ಸನ್ನುತ ನಿನ್ನನು ಮನ್ನಿಸಿ ಕೇಳುವ ಬಿನ್ನಪವಿನಿತೆ ಕೇಳಯ್ಯ 2 ಎಲ್ಲರ ಹೃದಯದೊಳಲ್ಲಿ ನೆಲೆಸಿರುವ ಫುಲ್ಲನಯನ ನೀ ಪೇಳಯ್ಯ ಕಲ್ಲುಮನದಿ ನೀನೊಲ್ಲದೊಡೀ ಜಗ ದಲ್ಲಿ ಪೋಪುದಿನ್ನೆಲ್ಲಯ್ಯ 3 ಪತಿಯಗಲಿದ ಪತಿವ್ರತೆಗೆ ಇತರರಲಿ ರತಿ ಸಂಜನಿಸುವದೇನಯ್ಯ ಗತಿಪತಿಯೆಲ್ಲರಪತಿ ನೀನೆನ್ನುತ ಶ್ರುತಿನುತಿಪುದು ಪುಸಿಯೇನಯ್ಯ 4 ಜಗದೊಳು ನಿನ್ನನೆ ಸುಗುಣಿಯು ಎನ್ನುತ ನಿಗಮವು ಪೊಗಳುತಲಿಹುದಯ್ಯ ಖಗಪತಿಗಮನನೆ ಬಗೆ ಬಗೆಯಲಿ ರತಿ ಸೊಗಯಿಸು ನಿನ್ನೊಳು ಎನಗಯ್ಯ 5 ಸೃಷ್ಟಿನಾಥಪದ ವಿಷ್ಟರ ಭಕ್ತಿಯ ಕೊಟ್ಟರಭೀಷ್ಟವು ಎನಗಯ್ಯ ಇಷ್ಟರ ಮೇಲಿನ್ನು ಲಕ್ಷ ಕೊಟ್ಟರೂ ಎನ ಗಿಷ್ಟವಲ್ಲ ಶ್ರೀ ಕೃಷ್ಣಯ್ಯ 6 ಚರಣಕಮಲದೊಳಗೆರಗುವೆ ಪುಲಿಗಿರಿ ವರದವಿಠಲ ದಯೆಯಿರಿಸಯ್ಯ ಚರಣಶರಣನಿಗೆ ಕರುಣಿಸದಿದ್ದರೆ ಕರುಣಿಗಳರಸರಿನ್ನಾರಯ್ಯ 7
--------------
ವೆಂಕಟವರದಾರ್ಯರು
ಕೊಡುವೆ ತಾಂಬೂಲವ ಪಿಡಿಯೊ ಪಿಡಿಯೊ ದೇವಾ ಅಡಿಗಳಿಗೆರಗುವೆನಾ ಪ ವಿಪ್ರ ಮಡದಿಯರನ್ನವ ಕೊಡಲು ಭುಂಜಿಸಿದ ಪಾಲ್ಗಡÀಲ ಶಯನ ಕೃಷ್ಣ ಅ.ಪ ಮಡದಿಯ ನುಡಿಕೇಳಿ ಕಡುಭಕುತಿಯಲವ ಪಿಡಿಯವಲಕ್ಕಿಯನು ಕೊಡಲು ಭುಂಜಿಸಿಮಿತ್ರ ಬಡವ ಸುದಾಮನಿಗೆ ಕೆಡದ ಸಂಪದವನ್ನು ಗಡನೆ ನೀಡಿದ ದೇವಾ1 ಕುಬ್ಜೆಗಂಧಕೆ ಒಲಿದು ಕಬರಿಯ ಪಿಡಿದೆತ್ತಿ ಸುಭಗರೂಪಳ ಮಾಡಿದ ಅಬ್ಜನಾಭನೆ ತ್ವತ್ಪಾ- ದಬ್ಜಕರ್ಪಿಸಿದಂಥ ಶಬರಿಯ ಫಲಮೆದ್ದ ಪ್ರಭು ಶ್ರೀರಾಮನೆ ನಿನಗೆ 2 ಲಲನೆ ದ್ರೌಪದಾದೇವಿ ಗೊಲಿದಕ್ಷಯಾಂಬರ- ಗಳನೆ ಪಾಲಿಸಿಪೊರೆದ ಬಲುವಿಧ ಭಕುತರ ಬಳಗವ ಸಲಹಲು ಇಳೆಯೊಳು ಕಾರ್ಪರ ನಿಲಯ ಶ್ರೀ ನರಹರಿಯೇ3
--------------
ಕಾರ್ಪರ ನರಹರಿದಾಸರು
ಕೋನೇರಿ ವಾಸ ವಿಠಲ | ನೀನೆ ಪೊರೆ ಇವನ ಪ ಕಾಣೆ ನಿನ್ಹೊರತು ಕಾ | ರುಣ್ಯ ಮೂರುತಿ ಹರಿಯೆ0ಜ್ಞಾನಗಮ್ಯನೆ ಸಲಹೊ | ಮಾಣದಲೆ ಇವನಾ ಅ.ಪ. ಸುಕೃತ | ರಾಶಿ ಫಲಿಸಿತೊ ಇವಗೆ ದಾಸ ದೀಕ್ಷೆಯಲಿ ಬಹು | ಆಶೆ ತೋರುವನೋವಾಸವಾನುಜ ನಿನ್ನ | ದಾಸತ್ವ ಪಾಲಿಸುತಪೊಷಿಸೂವುದು ಬಿಡವೆ | ಶೇಷಾದ್ರಿವಾಸಾ 1 ತೈಜಸನು ಗುರುವಾದಿ | ರಾಜಾಖ್ಯ ರೂಪದಲಿಮಾಜದಲೆ ಪೇಳ್ವ ವಿ | ಭ್ರಾಜದಂಕಿತವಾವಾಜರೂಪಯು ಹರಿಯೇ | ಯೋಜಿಸಿಹೆ ಇವಗೆನಿವ್ರ್ಯಾಜ ಕರುಣಿಯೆ ಪೂರ್ಣ | ತೇಜೌಜ ನಿಧಿಯೇ 2 ಮಧ್ವ ಸಮಯದ ಜ್ಞಾನ | ವೃದ್ಧಿ ಗೈಸಿವನಲ್ಲಿಅದ್ವೈತ ತ್ರಯದರಿವು | ಬುದ್ಧಿಗೇ ನಿಲುಕೀಅಧ್ವಯನು ಹರಿಯೆಂಬ | ಸಿದ್ಧಾಂತ ಮನಸಿನಲಿಬದ್ಧವಾಗುವ ತೆರದಿ | ಸಿದ್ಧಿಸೋ ಹರಿಯೇ 3 ಕಂಸಾರಿ ತವನಾಮ | ಶಂಸನ ಪ್ಲವದಿಂದಸಂಸಾರ ನಿಧಿ ತರಣ | ಸಂಶಯವು ರಹಿತಾಅಂಶ ಅವತಾರ ಆ | ವೇಶ ವಿಷಯಗಳ ನಿಸ್ಸಂಶಯದಿ ತಿಳಿಸಿ ಪದ | ಪಾಂಸು ಸೇವೆ ಈಯೋ 4 ಸರ್ವಜ್ಞ ಸರ್ವೇಶ ಸರ್ವಮೂಲನೆ ದೇವದುರ್ವಿಭಾವ್ಯದೆ ಹರಿಯೆ | ಶರ್ವವಂದ್ಯಾಸರ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆದರ್ವಿ ಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು
ಕೋಲದೇವ ತನಯ ಕೂಲ ಸುನಿಲಯ ಪಾಲಿಸು ಜೀಯಾ ನೀ ಪಾಲಿಸು ಜೀಯಾ ಪ ದೇವಸ್ವಭಾವ ಮಹಿದೇವ ಸಂಸೇವಿತ ಪಾವನ ಸುಚರಿತ ದೇವ ಮುನಿಗತಿಪ್ರೀತ 1 ದೈಶಿಕ ಕುಲನಾಥ ಪೂಶರನಿರ್ಜಿತ | ಭಾಸುರ ಕಾಷಾಯ ವಾಸ ಭೂಷ ವ್ಯಾಸರಾಯಾ 2 ಶಾಮಸುಂದರ ಮೂಲರಾಮಪದಾರ್ಚಕ ಕಾರ್ಮುಕ ಗಜಸ್ತೋಮಸಿಂಗ ಮಂಗಳಾಂಗ 3
--------------
ಶಾಮಸುಂದರ ವಿಠಲ
ಕ್ಷಮಿಸೊ ಯೆನ್ನಪರಾಧಗಳನು ಪ ಮಾಯಾ ಭ್ರಮಿತನ ಕರುಣದೊಳೀಕ್ಷಿಸೊ ಅ.ಪ ಗಿಷ್ಟಾದರು ದಯೆಯಿಟ್ಟು ಪೊರೆಯೊ ಹರಿ 1 ಮಂದರಧರ ಸರ್ವೇಶ್ವರನೆ || ನಂದದ ಸ್ಮರಣೆಯ ಕುಂದದೆ ಪಾಲಿಸೊ 2 ಸತಿಸುತರಿಹಪರವೆನಗೆ ನೀನೆ ಸ-| ಸತತ ಮೈದೋರೊ ಸದಾನಂದ ಗುರುವರ 3
--------------
ಸದಾನಂದರು
ಕ್ಷೀರಸಾಗರ ಸಂಭವೆ ರಮೆ ಪಾಲಯಾಶು ಮಾಂ ದೇವಿ ಪ ಮಾರಜನಕ ಮೋಹನಾಂಗಿಯೆ ಸಾರಸಾಕ್ಷಿಯೆ ವರಲಕ್ಷ್ಮಿಯೆ ಅ.ಪ. ಪದ್ಮಗಂಧಿಯೆ ಪದ್ಮ ವದನೆಯೆ ಪದ್ಮನೇತ್ರೆಯೆ ಪದ್ಮಹಸ್ತಯೆ ಪದ್ಮನಾಭ ಸುಪದ್ಮಿನೀ ಭಾಮೆಯೆ 1 ಮಣಿ ಚಂದ್ರಮಂಡಲೆ ಮಧ್ಯಭಾಸುರೆ ಶ್ರೀ ಸಿಂಧುರಗಮನೆಯೆ 2 ಭೋಗಭಾಗ್ಯವನಿತ್ತು ನೀ ಪಾಲಿಸು ಶ್ರೀ ಧೇನುಪುರೀಶ್ವರಿ 3
--------------
ಬೇಟೆರಾಯ ದೀಕ್ಷಿತರು
ಖಗವರನೇ ಪಾಲಿಸೋ ಪ ಪೆಗಲೊಳು ಹರಿಯನು | ಮಿಗೆ ಭಕುತಿಲಿ ಪೊತ್ತುನಗಧರ ಬಿಂಬವ | ನಗುತ ನಖದಿ ನೋಳ್ಪ ಅ.ಪ. ವೇದೋದಿತ ಕ್ರಿಯ | ಕಾದ್ಯಭಿಮಾನಿಯೆವೇದಮಯನೆ ಹರಿ | ಗಾದೆಯೊ ವಾಹನಸಾಧಿಸಿ ಶ್ರೀಹರಿ | ಪಾದಾಂಬುಜಗಳಹಾದಿಯ ತೋರೊ ಅ | ಗಾಧ ಮಹಾತ್ಮಾ 1 ಸಾಸಿರ ಬೃಹತಿಯ | ಸೂಸಿ ನೀ ಪೊಗಳುತಸಾಸಿರ ನಾಮನು | ಕೇಶವ ನೊಲಿಮೆಯಪೋಷಿತ ನಾಗಿಹೆ | ಆಶುಗ ಹೃದಯಾಕಾಶದೊಳಿರುತಿಹ | ಶ್ರೀಶನ ತೋರಿಸಿ 2 ಪಾವಮಾನಿಸುತ | ಪಾವಿಸಿ ಮನ್ಮನಭಾ5¥5 | ಗೋವಿಂದ ವಿಠಲನ |ಪಾವನ ನಾಮ ಸು | ಭಾವನ ಉಣಿಸುತಕೋವಿದ ಸಂಗತಿ | ಈವುದು ನೀ ಸದ 3
--------------
ಗುರುಗೋವಿಂದವಿಠಲರು
ಖಳರನು ತರಿವಾ ಬಗಳಾಂಬೆಗೆಕಮಲದಾರತಿ ಬೆಳಗಿರೆ ಪ ಅರಿ ಎಂಬ ಶಬ್ಧವು ಕಿವಿಗೆ ಬೀಳಲುಸರಿದವು ಸರಿದವು ಖಡ್ಗದಿಂ ಕೆಂಗಿಡಿಭರದಿಂದರಿಯನೆ ತುಡುಕಿಯೆ ಮುಂದಲೆತರಿದಳಾಗಲೆ ತಲೆಯ ಬಗಳಾಂಬೆಮುರಿದಳಾಗಲೆ ತಲೆಯ ಬಗಳಾಂಬೆ1 ಕಡಿಯುತ ಅವುಡನು ಅರಿಯನು ದೃಷ್ಟಿಸಿಝಡಿಯುತ ಮುದ್ಗರ ಹಿಡಿದು ನಾಲಗೆಮೃಡಹರಿ ಬ್ರಹ್ಮರು ಅಹುದಹುದೆನೆಹೊಡೆದಳಾಗಲೆ ಅರಿಯ ಬಗಳಾಂಬಪುಡಿಯ ಮಾಡಿದಳರಿಯ ಬಗಳಾಂಬ 2 ಕಾಲಲಂದುಗೆ ಗೆಜ್ಜೆ ಕಂಠಾಭರಣವುಮೇಲೆ ಸರಿಗೆವೋಲೆ ಮೂಗುತಿ ಹೊಳೆಯಲುಲೋಲ ಚಿದಾನಂದ ರೂಪಿಣಿ ಬಗಳೆಯುಪಾಲಿಸಿದಳು ಭಕ್ತರ ಬಗಳಾಂಬಲಾಲಿಸಿದಳು ಭಕ್ತರ ಬಗಳಾಂಬ 3
--------------
ಚಿದಾನಂದ ಅವಧೂತರು
ಗಜವÀದನ ಪಾಲಿಸೊಗಜವÀದನ ಪಾಲಿಸೊ ಪತ್ರಿಜಗದೊಡೆಯ ಶ್ರೀ ಭುಜಗಭೂಷಣಗಜವÀದನ ಪಾಲಿಸೊ ಅ ಪಭಕ್ತಿಯೊಳು ಭಜಿಪೆನು ರಕ್ತಾಂಬರಧರಮುಕ್ತಿಪಥವ ತೋರೊ ಶಕ್ತಿ ಸ್ವರೂಪನೇ 1 ವಾಸವ ಪೊಗಳುವೆಲೇಸಪಾಲಿಸೊ ನಿತ್ಯವಾಸವನುತ2 ಪೊಡವಿಯೊಳಗೆ ನಿನ್ನ ಬಿಡುವರ್ಯಾರೊ ಎನ್ನಕಡುಹರುಷದಿ ಕಾಯೋ ವಿಜಯ ವಿಠ್ಠಲದಾಸ 3
--------------
ವಿಜಯದಾಸ