ಒಟ್ಟು 530 ಕಡೆಗಳಲ್ಲಿ , 77 ದಾಸರು , 433 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವ ಶಿವ ಶಿವ ಎನ್ನಿರೊ - ಮೂಜಗದವರೆಲ್ಲಶಿವ ಶಿವ ಶಿವ ಎನ್ನಿರೊ ಪ ಆಗಮ ಸಿದ್ಧಾಂತ ಮೂಲದ ಜಪವಿದು ಶಿವಶಿವಶಿವ ಎನ್ನಿರೋ - ನಿಮ್ಮರೋಗದ ಮೂಲವ ಕೆಡಿಪ ಔಷಧವಿದು ಶಿವಶಿವಶಿವ ಎನ್ನಿರೊ 1 ಮನುಜ ಜನ್ಮದಿ ಹುಟ್ಟಿ ಮೈಮರೆದಿರಬೇಡಿ ಶಿವಶಿವಶಿವ ಎನ್ನಿರೋ - ನಿಮ್ಮತನುಮನ ಪ್ರಾಣವ ವ್ಯರ್ಥವ ಮಾಡದೆ ಶಿವಶಿವಶಿವ ಎನ್ನಿರೊ 2 ಅಪರಾಧಕೋಟಿ ತ್ಯಜಿಸಬೇಕಾದರೆ ಶಿವಶಿವಶಿವ ಎನ್ನಿರೋ - ಮುಂದೆಉಪಮಿತರೋರ್ಮಿತರರಿಯದ ಜಪವಿದು ಶಿವಶಿವಶಿವ ಎನ್ನಿರೊ3 ಜವನ ಬಾಧೆಯ ನೀವು ಜಯಿಸಬೇಕಾದರೆ ಶಿವಶಿವಶಿವ ಎನ್ನಿರೋ - ನಿಜಸವಿಮಲ ಮುಕ್ತಿಯ ಪಡೆಯಬೇಕಾದರೆ ಶಿವಶಿವಶಿವ ಎನ್ನಿರೊ 4 ಭುವನಕೆ ಬಲ್ಲಿದರಾಗಬೇಕಾದರೆ ಶಿವಶಿವಶಿವ ಎನ್ನಿರೋ - ನೀವುಭವನ ಪದವಿಯನು ಪಡೆಯಬೇಕಾದರೆ ಶಿವಶಿವಶಿವ ಎನ್ನಿರೊ 5 ಗುರುಲಿಂಗ ಜಂಗಮವ ಅರಿಯಬೇಕಾದರೆ ಶಿವಶಿವಶಿವ ಎನ್ನಿರೋ - ಮುಂದೆಪರಮಾತ್ಮನ ನೀವು ತಿಳಿಯಬೇಕಾದರೆ ಶಿವಶಿವಶಿವ ಎನ್ನಿರೊ6 ಪೃಥ್ವಿಗೆ ಸದ್ಗುರು ಆಗಬೇಕಾದರೆ ಶಿವಶಿವಶಿವ ಎನ್ನಿರೋ - ನೀವುತತ್ತ್ವಪತಿ ಆದಿಕೇಶವನ ಕೂಡಬೇಕಾದರೆ ಶಿವಶಿವಶಿವ ಎನ್ನಿರೊ7
--------------
ಕನಕದಾಸ
ಶಿವನ ನಾಮಾಮೃತವ ಸವಿದು ಧನ್ಯರಾಗಿರೊ ಜಗದೊಳು ಪ ಶಿವ ಶಿವ ಎಂಬೊ ಎರಡಕ್ಷರವು ಭವರೋಗಕೆ ಇದು ಮೂತೌಷಧವು ಜವನಾಳ್ಗಳ ಭಯ ಲವಲೇಶವಿಲ್ಲವು ಇದು ಸತ್ಯವು 1 ಪಾತಕ ಪಹರಿನಿತು ಪೋತ ಮಾರ್ಕಂಡೇಯಗಾಯುವ ನೀಡಿತು ಭೂತೇಶನ ಪದವಾರಿಜ ಧ್ಯಾನದಿ ಧನ್ಯರಾಗಿರೋ 2 ಹರನ ದಿವ್ಯಪದವಾರಿಜ ಧ್ಯಾನ ಪರ ಚರ ಮುಕುತಿ ಪಥಕೆ ಸೋಪಾನ 3
--------------
ಶಾಮಸುಂದರ ವಿಠಲ
ಶುಕ ಮುನಿವಂದ್ಯ ಹರಿ ಮುಖ ಪೀಠದಲಿ ಕುಳಿತೂ ಪ ಸುಖದಿ ನೀ ಪವಡಿಸಯ್ಯಾ ಅ.ಪ ಬೊಮ್ಮ ದಿವಿಜ ಭವರೋಗ ವೈದ್ಯ ನಿಂ ನವಸರದೂಳಿಗ ನವಸುಂದರ ನಿದ್ದೆ ಪೊ ತ್ತವನೇ ನೀ ಪವಡಿಸಯ್ಯಾ 1 ತುಂಬುರು ನಾರದನೆಂಬರು ವೀಣೆಯ ಸಂಭ್ರಮದಿಂ ಮೇಳೈಸಿ ಅಂಬುಜನಾಭ ನೀನೆಂಬ ಗೀತವ ಸವಿ ದುಂಬಿ ಪಾಡಲು ಕೇಳುತಾ ಟುಂಬ ನೀ ಪವಡಿಸಯ್ಯಾ 2 ಪೆಡೆದಲೆಗನ ಮೃದುವಡೆದ ಹಾಸಿನ ಮೇ ಲಿಡಿಕಿರಿ ವಡಸಿಸುವಾ ಯಡಕೆಲೆ ಸಂಭ್ರಮಿಸೇ ಮಡದಿ ರನ್ನಳು ಸೌಮ್ಯನಾಯಕಿ ಯೊಡನೈಗೂಡಿ ಮೃಡನುತನೆ ಪವಡಿಸಯ್ಯಾ 3
--------------
ಬೇಲೂರು ವೈಕುಂಠದಾಸರು
ಶುಂಠನಿಗೆ ಉಂಟೆ ವೈಕುಂಠಾ | ಬಂಟನಿಗೆ ಉಂಟೆ ಒಡತನವು ಪ ಕಳ್ಳನಿಗೆ ಉಂಟೆ ಪರರು ಒಡವೆ ಗಳಿಸಿದ ಕಷ್ಟ | ಸುಳ್ಳನಿಗೆ ಉಂಟೆ ಮಿತಿಯಾದ ಭಾಷೆ|| ಕೊಲ್ಲುವನಿಗೆ ಉಂಟೆ ದಯಾದಾಕ್ಷಿಣ್ಯದ ಮಾತು | ಕ್ಷುಲ್ಲಕನಿಗೆ ಉಂಟೆ ಗುಣ ಭಾರಿ ಬುದ್ಧಿಗಳು 1 ಉಪವಾಸಿಗೆ ಉಂಟೆ ಅನ್ನ ಆಹಾರದ ಚಿಂತೆ | ತಪಸಿಗೆ ಉಂಟೆ ಇಹದ ವ್ಯಾಕುಲ || ಕೃಪಣನಿಗೆ ಉಂಟೆ ದಾನ-ಧರ್ಮದ ಚಿಂತೆ | ಚಪಳನಾರಿಗೆ ಉಂಟೆ ತನ್ನ ಮನೆವಾರ್ತೆ 2 ರುಚಿ | ಹಾದಿ ಬಿಟ್ಟವಗುಂಟೆ ಮನದ ಧೈರ್ಯ || ವೇದನೆಬಡುವಗುಂಟೆ ಅನ್ನಿಗರ ಸಂಧಾನ | ಕ್ರೋಧದವಗುಂಟೆ ಬಲು ಶಾಂತ ನೀತಿ 3 ಕಾಮಾತುರಗೆ ಉಂಟೆ ಭವಕುರಿತ ಲಜ್ಜೆಗಳು | ನೇಮ ನಿತ್ಯಗೆ ಉಂಟೆ ಮನದರೋಗ || ಹೇಮಾತುರಗೆ ಉಂಟೆ ಗುರು ಬಾಂಧವ ಸ್ನೇಹ | ತಾಮಸಿಗೆ ಉಂಟೆ ಶುಭಕರ್ಮ ಸದ್ಭಕ್ತಿ 4 ದಾನಿಗೆ ಉಂಟೆ ಇಂದಿಗೆ ನಾಳಿಗೆಂಬೋದು | ಜ್ಞಾನಿಗೆ ಹತ್ಯಾದಿ ದೋಷ ಉಂಟೆ | ಸಿರಿ ವಿಜಯವಿಠ್ಠಲ ಸ್ವಾಮಿಯ ಧೇನಿಸುವಗುಂಟೆ ದಾರಿದ್ರ್ಯ ದುಷ್ಕರ್ಮ5
--------------
ವಿಜಯದಾಸ
ಶ್ರೀ ಕ್ರೋಧನ ನಾಮ ಸಂವತ್ಸರ ಸ್ತೋತ್ರ 157 ಕ್ರೋಧನ ಸಂವತ್ಸರ ನಿಯಾಮಕ ಸ್ವಾಮೀಶ್ರೀ ಪದುಮಾಲಯಪತಿ ನಾರಸಿಂಹನ ಪಾದ ಕೃತಿ ನಡೆಸಿ ಶರಣರ ಕಾಯ್ವ ಪ ಈ ಸಂವತ್ಸರ ರಾಜಾ ಶುಕ್ರ ಮಂತ್ರೀ ಶನಿಯು ಶನೈಶ್ಚರನೇ ಸೈನ್ಯಾರ್ಘ ಮೇಘ ಸಸ್ಯಪತಿ ರಸಪಗುರು ನಿರಸ ಸಸ್ಯಪ ಮಂಗಳ ಸುಸೌಖ್ಯ ಬಹುಕ್ಷೀರ ಧಾನ್ಯ ವೃಷ್ಟಿದ ಚಂದ್ರ 1 ಕಾಡು ಕಿಚ್ಚು ಮೊದಲಾದ ಅಗ್ನಿಭಯ ರೋಗ ಪೀಡೆ ಜನರಲ್ಲು ರಾಜರಲು ಪರಸ್ಪರ ಅಡಿಗಡಿಗೆ ಸ್ನೇಹಹಾನಿ ಸೈನ್ಯಕಲಹ ದುಷ್ಟಭಯ ಕಳೆದು ಭಕ್ತರ ಕಾಯ್ವ ಹರಿ 2 ತತ್ವದೇವರ್ಗಳು ಸಭಾರ್ಯಾ ರವಿಸೋಮರು ಶಿವಾಶಿವ ವರ ಸಮೀರ ಇವರುಗಳಿಂ ಸೇವ್ಯ ಶ್ರೀ ಶ್ರೀಯುಕ್ ಪ್ರಾಣಯಮ್ಮೊಳ್‍ಜ್ವಲಿಸಿಕಾಯ್ವ ಸರ್ವಗ ವೇಧಪಿತ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಧನ್ವಂತ್ರಿ ಸ್ತೋತ್ರ(ನಾರಾಯಣಾಚ್ಯುತ ವಿಠಲ ದಾಸಿಗಾಗಿ) ಕಾರುಣ್ಯ ನಿಧಿ ತವಾ | ಪಾರ ಮಹಿಮೆಯ ಕೇಳಿಸಾರಿದೆನೊ ಪಾದಾಬ್ಜ ಶರಣೆಂದು | ಶರಣೆಂದೆಶ್ರುನಾಥಪಾರು ಮಾಡಾಕೆಯ ವೃಜಿನವ 1 ಆಂತ್ರಕೆಟ್ಟಿಹುದೆಂದು | ತಾಂತ್ರಿಕರು ಪೇಳುವರುಆಂತ್ರ ಸರಿಮಾಡುವ ಕಾರ್ಯವ | ಕಾರ್ಯನಿರ್ವಹಿಸಿ ಸ್ವಾ-ತಂತ್ರ ಪುರುಷಾ ದಯತೋರೋ 2 ಪಾದ ಭಜಿಸೂವ | ಭಜಿಸೂವ ದಾಸಿಗೆಈ ರೀತಿ ಭವಣ್ಯಾಕೊ ಧನ್ವಂತ್ರಿ 3 ಆರೋಗ್ಯ ಆಯುಷ್ಯ | ಆರಾಧಕರ್ಗೀವೆಈರನುತ ಧನ್ವಂತ್ರಿ ಕರುಣಾಳು | ಕರುಣಾಳು ಸರ್ವಜ್ಞಆರೋಗ್ಯ ದಾಸಿಗೆ ಕೊಡು ಎಂಬೆ4 ಧಂ ಎಂದು ಉಚ್ಛರಿಸೆ | ಧ್ವಂಸ ಮಾಡುವೆ ರೋಗಧನಂತ್ರಿಯೆನ್ನೆ ಭವರೋಗ | ಭವರೋಗ ವಾರಿಸುವಧನ್ವಂತ್ರಿ ರೂಪಿ ನಮೊ ಎಂಬೆ 5 ಕರದಲ್ಲಿ ಸುಧೆ ಕಲಶ | ಧರಿಸಿರುವ ಬಗೆಯೇನೊಶರಣರ್ಗೆ ಸುಧೆಯಾನುಣಿಸುತ್ತ | ಉಣಿಸುತ್ತಲಮರತ್ವಕರುಣಿಸುವಿ ಎಂದೂ ಶ್ರುತಿ ಸಿದ್ಧ 6 ಇಂತಿರಲು ದಾಸಿಸ | ತ್ಪಂಥಗಳನ್ನುದ್ದರಿಸೊಅಂತು ತವ ಚರಣಾಬ್ಜ ಬೇಡುವೆ | ಬೇಡುವೆನೋಪಾದಾಕ್ರಾಂತಳಿಗೆ ಸುಧೆಯಾ ನೂಣೀಸೊ7 ಚಂದ್ರ ನಿವಹದ ಕಾಂತಿ | ಯಿಂದಮೃತ ಕಿರಣದಿಂಹೊಂದ್ಯಮಿತ ಸುಖರೂಪಿ ಉಲ್ಲಾಸವೀವುತ್ತಚಂದುಳ್ಳ ಸುಧೆ ಕಲಶ ಪಿಡಿಯುತ್ತ 8 ಆತು ಜ್ಞಾನಾಂಕವನು | ಆತ್ಮಸ್ಥಶೀತಾಂಶುಧೌತ ಮಂಡಲಗ ಲಕ್ಷ್ಮೀಶ | ಲಕ್ಷ್ಮೀಶ ಹರಿಯನ್ನುಮಾತು ಮಾತಿಗೆ ನಾನು ಸ್ಮರಿಸೂವೆ 9 ಉತ್ತಮಾಂಗದಲಿರುವ | ಹತ್ತೆರಡು ದಳ ಕಮಲಪ್ರಸ್ಥಿತನು ಧನ್ವಂತ್ರಿ ಮಕರಂದ | ಮಕರಂದ ಸ್ರವಿಸುವನಭಕ್ತಿಯಲಿ ಸ್ಮರಿಸೋದು ರೋಗಾರ್ತೆ 10 ಕಮಲ ಹೃದಯಸ್ಥ 11 ಸದನ ಷಟ್ದಳ ಕಮಲಗುದವು ಮೂಲಾಧಾರಾನಾಲ್ದಳವುನಾಲ್ದಳ ಕಮಲಸ್ಥಬದಿಗನು ಧನ್ವಂತ್ರಿ ರೂಪೀಯು 12 ರೂಪೀ ಈ ದೇಹವನು | ವ್ಯಾಪಿಸುತ ತಾನಿದ್ದುಕಾಪಾಡಲೋಸುಕದಿ ಮಕರಂದ | ಮಕರಂದ ಸುರಿಸುವವ್ಯಾಪಾರದಿಂ ಜೀವರುದ್ಧಾರ 13 ಹತ್ತಿರುವ ಅಜ್ಞಾನ | ವತ್ತಿಬಹ ಭಯದುಃಖಮತ್ತೆ ಮಹವಿಷವು ಇದರಿಂದ | ಇದರಿಂದ ಪರಿಹಾರ ಭಕ್ತಿಯಿಂ ಭಜಿಸೇ - ಸುಖ ಸೌಖ್ಯ 14 ಶರಣರ್ಗೆ ತಪ್ಪದೆಲೆ | ಗೆರೆವೆ ಸೌಖ್ಯಂಗಳನುಗುರು ಗೋವಿಂದ ವಿಠಲಾ | ವಿಠ್ಠಲ ಧನ್ವಂತ್ರಿಮರುತಾಂತರಾತ್ಮಾ ಸಲಹಯ್ಯ15
--------------
ಗುರುಗೋವಿಂದವಿಠಲರು
ಶ್ರೀ ರಮಣಿಯರಸ ಕಂ ಜೋದ್ಬವಾರ್ಚಿತ ಪುಣ್ಯ | ಚಾರುತರ ಯುಗ್ಮಪದ ರಂಜನಾಸುರ ಸಂ | ಹಾರ ಸುರ ಜನ ಪಾಲ ಪರಮಾನಂದ ಸಾ | ಕಾರನಲಿದುಪ್ಪವಡಿಸಾ ಹರಿಯೇ ಪ ಹರಿವೇಗ ಮಂಮೀರ್ವ ಹರಿಗಳೇಳಂಗಳದಲಿ | ಹರಿಯಾಗ್ರಜನನಿಂದ ಹರಿಪದದೊಳಗ ಜವದಿ ಹರಿವುತಿಹ ಝಗ ಝಗಿಪ ಹರಿಮಯದ ರಥದೊಳಗ | ಹರುಷಾದೊಳಡರ್ದು ಬಳಿಕಾ || ಹರಿದಿಕ್ಕಿ ಲಿಂದೊಗೆದು ಹರಿಜಗಳ ವಿಸ್ತರಿಸಿ | ಹರಿಯುಮೊದಲಾದವರ ಹರಿಸಿ ತೇಜವ ಜಗಕ | ಪರಿ ಹರಿಸಿ ಉದಿಸಿದಹರಿಯು ನರಹರಿಯೆ ಉಪ್ಪವಡಿಸಾಹರಿಯೇ1 ಪವನಜ ಖಗರಾಜ | ಭಜಿಪಧ್ರುವದ ಶಶಿರಾನುಜ ಭಿಷ್ಮಾ ತನ್ನ ಆ | ತ್ಮ ಜರಿತ್ತ ರಿಕ್ಷಪತಿ ರಜನೀಶ ವಾನ್ನರ | ಧ್ವಜ ವಿಧುರ ಅಂಬರೀಷಾ || ದ್ವಿಜ ಪುಂಡಲೀಕ ಪದ್ಮಜ ಮುಖ್ಯರಾದ ನಾ | ಶುಕ ಉದ್ಧವ ಬಲಿ ಜಯ ವಿಜಯರ ಕೂಡಿ | ಸುಜನರೈ ತಂದ | ರಂಬುಜ ಪದಕ ನಮಿಸೆ ವಾ | ರಿಜನಾಭ ಉಪ್ಪವಡಿಸಾ ಹರಿಯೇ 2 ಪಾಕ ಶಾಸನ ಅಗ್ನಿ ಆಕಾಳ ನೈಋತಿರ | ತ್ನಾಕರ ಪ್ರಭಂಜನಪಿ ನಾಕಿವರ ಕೌಬೇರ | ನಾಕೆರಡು ದಿಕ್ಕಿನವರೇಕೋ ಭಾವದಲಿಂದ ನಾಕ ಪುರಗಜ ಅಜಮಹಾ ಕೋಣ ಮನುಜ ಮಕ | ಹಾಕುರಂಗಂದಣವು ಗೋಕುಲೆಂದ್ರನು ಇಂತು | ವಾಹನ ವಿವೇಕದೇರಿ ಬಂದಿದೆ | ಲೋಕೇಶ ಉಪ್ಪವಡಿಸಾ ಹರಿಯೇ3 ಶ್ರೇಷ್ಠ ಕಶ್ಯಪ ಋಷಿ ವಶಿಷ್ಠ ಗಾರ್ಗೇಯ ತಪೋ | ನಿಷ್ಠ ವಿಶ್ವಾಮಿತ್ರ ಸೃಷ್ಠಿಯೊಳ ಜಲದ ಸಂ | ದಷ್ಟ ವರುಣನ ಗರ್ವ ಭಷ್ಟ ಮಾಡಿದಗಸ್ತಿ | ಅಷ್ಟಾದಶ ಧ್ವಯ ಬಾರಿ ಸೃಷ್ಟಿರ ಚನೆಯ ಕಂಡ | ತುಷ್ಟ ಬಕದಾಲ್ಪ್ಯ ಉತ್ಕøಷ್ಟ ಸನಕಾದಿಗಳು | ದೃಷಮಾನಿಸರಾಗಿ ಮುಟ್ಟಿಸ್ತುತಿ ಸುತಲಿದೇ | ಕೃಷ್ಣ ನೊಲಿ ದುಪ್ಪವಡಿಸಾ ಹರಿಯೇ 4 ವರ ವಾಮ ದೇವಾತ್ರಿ ಪರಮಗಾಲ ವನುಸೌ | ಭರಿಯ ಕೌಡಿಣ್ಯ ಸುಖ ಭರಿತ ಕೌಸಿರ ಮತಿ | ಪರಿಪೂರ್ಣ ಜಯಾಮುನೀರ್ವರು ಭರತರುಸುಗುಣ ಶರಧಿ ವೈಶಂ ಪಾಯನಾ|| ಸುರಪುರೋಹಿತ ಮಹಾ ಸುರರ ವಂಶಾವಳಿಯು | ತರಣಿಜ ಬುಧಾದಿಗಳ | ಕರದೊಳು ಸುಫಲವಿರಿಸಿ ಹರುಷಾದಲಿ ನಿಂದಿದೆ || ಪರಬೊಮ್ಮ ಉಪ್ಪ ವಡಿಸಾ ಹರಿಯೇ 5 ಡಮರುಧರ ಜಡೆಯೊಳಗ ಸಮುಲ್ಲಾಸದಲಿ ಮೆರೆವ ಅಮರ ನದಿ ಪಾಪಹರ ಸಮಕೃಷ್ಣ ವೇಣಿ ಸು | ವಿಮಲ ಗೋದಾವರಿ ಕುಮುದ್ವತಿ ಕಾವೇರಿ | ಶ್ರಮಹಾರಿ ತುಂಗ ಭದ್ರಿ || ಯಮುನಿ ಫಲ್ಗುಣಿ ಮಹೋತ್ತಮ ಸರಸ್ವತಿ-ಕಪಿಲ | ನರ್ಮದಿ ಮೊಲಾಗಿ ಅಮಲಗ್ರೋದ ಕವ | ಕ್ರಮದಿಂ ಕೊಂಡು ನದಿ ಚಮು ಬಂದಿದೇ ಪೊರಗ | ಕಮಲಾಕ್ಷ ಉಪ್ಪವಡಿಸಾ ಹರಿಯೇ6 ದಾರುಣೀ ಚರರಾದಾ ಚಾರುಗೋ ಬ್ರಾಹ್ಮಣರು | ಸಂರಕ್ಷಣೆಯ ಮಾಳ್ವ ಧೀರಯ ಯಾತಿ | ಮೇರು ಸಮ ಹರಿಶ್ಚಂದ್ರ ವೈರಾಟ ಪತಿಜನಕ | ಆರಾಯ ನಳ ನಹುಷನು || ಶೂರ ಹಂಸಧ್ವಜನು ಸಾರಿ ವಿಷ್ಟಕ್ಸೇನ | ವೀರ ಪಾಂಚಾಲನ - ಕ್ರೂರ ಚಂದ್ರಹಾಸ ಮ | ಯೂರ ಧ್ವಜ ಪ್ರಮುಖರಾರತದಿ ಬಂದರಿದೆ | ಕಾರುಣನೆ ಉಪ್ಪಾವಡಿಸಾ ಹರಿಯೇ 7 ವಾರಿಯೋಳ್ ನಡೆವಹತೇರಗಜ ಶೃಂಗರಿಸಿ | ಏರಿಬಂದಿಳಿದು ಮಹಾ ವೀರ ಭಟರೋಗ್ಗೀನೊಳು | ಬಾರಿ ಬಾರಿಗೆ ನಿಮ್ಮ ಚೀರುತ ಬಿರುದಂಗಳನು ಭೂರಿಜನ ಸಚಿದಣಿಸುತಾ || ಪಾರವಿಲ್ಲದ ಪಟಹ ಭೇರಿ ನಿಸ್ಸಾಳತಹ | ಳಾರವರಿದು ಊದುತಲಿ ಈ ರೀತಿ ನೃಪರದಳ | ಚಾರುವಾಲಗವ ಮನವಾರಗುಡುತಿದೆ ಪರಮ ಶೌರಿ ವಲಿದು ಪ್ಪವಡಿಸಾಹರಿಯೇ 8 ಕೇಣವನು ಗೊಳ್ಳದಿಹ ಜಾಣ ಕಲೆಯಿಂದ ಗೀ | ರ್ವಾಣ ಸ್ತ್ರೀಯರು ನೃತ್ಯ ಮಾಣುತಲಿ ಬರೆಕರದಿ | ವೀಣೆಯನು ತಾಂ ಪಿಡಿದು ವಾಣಿ ತುಂಬರ ಸುಪ್ರ ವೀಣನಾರದ ಗಣಪನು || ಶ್ರೇಣಿಯಿಂ ತೊಡಗೂಡಿ ತ್ರಾಣದಿಂದಲಿ ನಾಮ | ವಾಣಿಯಲಿ ವಚಿಸುತಿದೆ ಕಾಣಲ್ಕೆ ನಿಂದಿದೆ | ಏಣಾಂಕನುಜೆ ಮುಗಿದು ಪಾಣಿಯನು ಗುರು ಮಹಿಪತಿ ಪ್ರಾಣನೊಲಿದುಪ್ಪವಡಿ ಸಾ ಹರಿಯೇ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ರಾಘವೇಂದ್ರ ಶ್ರೀ ರಾಘವೇಂದ್ರ ಶ್ರೀ ರಾಘವೇಂದ್ರ ಎನ್ನಿರೋ ``ಶ್ರೀ ರಾಘವೇಂದ್ರಾಯನ ನಮಃ'' ಎಂಬ ಪ ನಾಮವ ಸ್ಮರಿಸಿ | ಸುಖಿಯಾಗು ಮನವೇ ಅ.ಪ ಸಂಸಾರ ಸಾಗರದಿ ಬೆಂದು ಬಳಲಿರುವೇನಯ್ಯ ಮುಂದೇನು ಗತಿ ಕಾಣೆ ಗಾಡಾಂಧಕಾರದೊಳು ಮುಳುಗಿ ಬೆಂಡಾದೆನೊ ಕರುಣಿಸೈ ಗುರುರಾಘವೇಂದ್ರಾ1 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆಂದು ನಂಬಿದೆನೈ ಪ್ರಭವೆ ಸಂದೇಹವೇಕಿನ್ನು ಕಂದನೆನು ತೆಂದು ಕಾಯೋ ಗುರುವೇ ಶ್ರೀ ರಾಘವೇಂದ್ರ ಪ್ರಭುವೆ2 ಅಂಧತ್ವ ಮೂಕತ್ವ, ಬಧಿರತ್ವ ಎಕಲಾಂಗಿಗಳ ಹಿಂದೆ ಪೊರೆದೆ ನೀನೆಂಬ ವಾರ್ತೆಕೇಳಿ ನಿನ್ನ ಘನ್ನಮಹಿಮಾ ಶ್ರೀ ರಾಘವೇಂದ್ರಾ 3 ಭವರೋಗ ಗಳೆಲ್ಲ ಪರಿಹರಿವುದೊ ಸ್ಮರಣೆ ಮಾತ್ರದಿ ಸಕಲ ಪಾಪಗಳನೋಡಿಸಿ ಪುನೀತರನೆ ಮಾಡುವಿಯೊ ಗುರುವೆ 4 ಬಿಡೆನು ಬಿಡೆನು ನಿನ್ನಡಿಗಳಿಗೆ ಸೇವಿಸಲು ದೃಢ ಭಕುತಿಯನೆ ಕೊಡು ಎನಗೆ ಶ್ರೀ ರಾಘವೇಂದ್ರಾ ಅಪಾರ ಮಹಿಮ ಶ್ರೀ ರಾಘವೇಂದ್ರಾ 5
--------------
ರಾಧಾಬಾಯಿ
ಶ್ರೀ ರಾಹುದೇವ ಸ್ತೋತ್ರ ಆಬsÀಯ ಹರಿ ಅನುಗ್ರಹ ಪಡೆದ ರಾಹುದೇವನೇ ನಮೋ ಪ ಸ್ವರ್ಭಾನು ಛಾಯಾಗ್ರಹಕೆ ನೀ ದೇವ ಅಪ ಹೃತ್‍ತಿಮಿರ ತನು ರೋಗ ಸರ್ವಪೀಡೆ ಪರಿಹರಿಸಿ ಸುದರ್ಶನೀಯ ಒಲಿಸೆನಗೆ ಸತ್ಜ್ಞಾನ ಕರ್ಮಜದೇವ 1 ಮಹಾವೀರ್ಯನೇ ಊಧ್ರ್ವಕೇಶ ಮಹಾಶೀರ್ಷನೆ ಮಹಾವಕ್ತ್ರ ಮಹಾದಂಷ್ಟ್ರ ಮಹಾಯಶ ನಮಸ್ತೇ 2 ನೀರಜಪಿತ ಶ್ರೀ ಪ್ರಸನ್ನ ಶ್ರೀನಿವಾಸ ವಿಭು ಹರಿಯ ಭೃತ್ಯನೇ ನಮೋ ಪಾಹಿ ಮಾಂ ಸತತ 3 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಿಷ್ಣು ತೀರ್ಥರು (ಮಾದನೂರು) ಶ್ರೀ ವಿಷ್ಣು ತೀರ್ಥರೆ ನಮೋ ಪ ತಾಮರಸ ಭ್ರಮರರೆಂದನಿಸೂವಲೌಕಿಕ ಸುವೈದಿಕ ಸುಶಬ್ದ ಜಾತವಸಾರ್ವಭೌಮ ಹರಿಗನ್ವಯಿಪರಂ ಭಜಿಸುತ್ತ ಇಷ್ಟಾರ್ಥವಂ ಪಡೆಯಿರೊ ಅ.ಪ. ಸವಣೂರು ಸನಿಯ ಸಿದ್ಧಾಪುರದ ಸೀಮೆಯಲಿಅವಸಿತರು ಬಾಲ ಆಚಾರ್ಯ ಭಾಗೀರ್ಥಿ ಎಂಬುವರು ಸದ್ಧರ್ಮರತರೆನಿಸಿ ಜಯತೀರ್ಥರಂ ಸೇವಿಸಲು ಬಹು ಭಕುತಿಲಿ |ಅವರನುಗ್ರಹ ಜಾತ ವರಶಿಶುವಿಗವರ ನಾಮವನಿಟ್ಟು |ಕಾಲದೊಳಗುಪನಯ ನವಂ ಮಾಡಿ ಸರ್ವ ವೇದ ವೇಂದಾಗ ಪಾರಂಗತರು ಐಜಿ ಆಚಾರ್ಯರಲಿ ಬಿಡಲು 1 ಕುಶಲತೆಯು ಮತ್ತೆ ಸೌಶೀಲ್ಯ ಗುಣನಿಧಿ ಎನಿಪಶಿಷ್ಯನಿಗೆ ಸಚ್ಛಾಸ್ತ್ರ ಪಾರಂಗತನು ಎನಿಸಿಒಸೆದು ದ್ವಿತಿಯಾಶ್ರಮಕೆ ಚೋದಿಸಿ ಕಳುಹಲವ ಗೃಹಧರ್ಮ ಸ್ವೀಕರಿಸುತ |ಎಸೆವ ಕೀರ್ತಿಲಿ ಮೆರೆದು ಶಿಷ್ಯರಿಗೆ ಶಾಸ್ತ್ರ ಬೋ-ಧಿಸುತಲಿರಲು ಸತ್ಸಂತಾನವಂತರಾಗುತಎಸೆವ ಹಂಸತೂಲಿಕ ತಲ್ಪದೊಳು ಪವಡಿಸಿರೆ ಅಪರಾಹ್ನ ರೋಗಾರ್ತರು 2 ಪತಿ ಪುರಂದರ ಸುದಾಸಾರ್ಯ ನುಡಿದುದನುಅಂತೆ ಮಂಚ ಬಾರದು ಮಡದಿ ಬಾರಳು ಎಂಬಪಿಂತಿನ್ವಚನವ ಕೇಳಿ ಚಿಂತಿಸುತ್ತಿರೆ ತಮಗೆ ಜಾತಿ ಸ್ಮøತಿ ಒದಗುತಿರಲು 3 ಘನವಾದ ಐಶ್ವರ್ಯ ಸತಿಸುತರು ಬಂಧುಗಳತೃಣಕೆ ಸಮ ತಿಳಿಯುತ್ತ ಜಯ ಗುರೂ ಹೃದ್ಗತವಅನು ಸರಿಸೆ ಅಜ್ಞಾತ ಬಗೆಯಲಿರುತಿಹನೆಂದು ವೈರಾಗ್ಯವನೆ ಪೊಂದುತ ||ಮನೆಯಿಂದ ಹೊರ ಹೊರಟು ಅನತಿ ದೂರವಸಾಗೆಘನ ಸರ್ಪ ರೂಪದಿಂ ತೋರಿ ಕೊಳೆ ಜಯತೀರ್ಥ ಮುನಿವರ್ಯ ಹೃದ್ಗತವ ತಿಳಿದು ವಸುಮತಿ ವ್ಯರ್ಥ ಸಂಚರಣೆ ಸಂತ್ಯಜಿಸುತ 4 ಶೃತಿ ಸ್ಮøತಿಗೆ ಸಮ್ಮತವು ದಶಮತಿಯ ಸಮಯವೆನುತತಿ ಹಿತದಿ ಪ್ರವಚನೆಗೆ ಪ್ರೇರಿಸಿಹ ಗುರುಮತವ ಸತ್ಕರಿಸಿ ಕಾರುಣ್ಯ ಕೊಂಡಾಡಿ ಸಾಧಿಸಲು ತೃತಿಯಾಶ್ರಮವನು ||ಹಿತದಿ ಕೈಕೊಂಡು ಮಲವ ತಾನಪಹರಿಪಸರಿತೃತಟದಲಿ ಇರುವ ಮನುವಳ್ಳಿ ಪಳ್ಳಿಯಲಿ ನೆಲಿಸುತಲಿ ವಿಹಿತ ಕರ್ಮಾಚರಿಸಿ ಸಿರಿಮತ್ಸು ಮಧ್ವ ವಿಜಯವ ಪಠಿಸುತಿಹರು 5 ಸಂಚಿತ ಸಿರಿ ವಿಷ್ಣುತೀರ್ಥರೆಂಬಂಕಿತದಿ ಮೆರೆಯುತಿಹರು 6 ಭಾಗವತ ಸಾರದುದ್ಧಾರವನುಮುಂತಾದ ಮುಕುತಿ ಸತ್ಪಂಥಗಳ ಬೋಧಿಪಗ್ರಂಥಗಳ ರಚಿಸಿ ಸುಜನೋದ್ಧಾರವನೆ ಗೈದು ಶೋಭಿಸುವರವನಿಯಲ್ಲಿ 7 ಲಕ್ಷುಮಿಯು ನರೆಯಣರನುಗ್ರಹವನೇ ಪಡೆದುದಕ್ಷಿಣದಿ ಬದರಿಕಾಶ್ರಮವೆನುತಿರೆ ಮೆರೆವತ್ರಕ್ಷ್ಯ ಮೋದೇಶ್ವರ ಪುರದಲಿ ನೆಲಿಸಿ ನೂರೆಂಟು ಸಲ ಸುಧೆ ಪ್ರವಚಿಸುತಲಿ ||ಕುಕ್ಷಿಯೊಳಗುಳ್ಳ ಸು ಕ್ಷೇತ್ರಗಳ ಸಂಚರಿಸಿ ಲಕ್ಷಿಸುತ || ಯೋಗ್ಯ ಜನಕುಪದೇಶ ಚರಿಸಲುಸ್ವಕ್ಷೇತ್ರಕೇ ಮರಳಿ ಕುಶಸರಿತು ತೀರದಲಿ ಪರ್ಣ ಶಾಲೆಯಲಿ ವಸಿಸಿ 8 ಕಾಲ ತಾ ತಿಳೀಯುತ್ತ ಶಿಷ್ಯಜನಕರಿವಿತ್ತು ಶಾಲಿವಾನ ಸಹಸ್ರ ಷಟ್ಯತೊತ್ತರವಷ್ಟಸಪ್ತತಿಯು ಮಾಘಾಸಿತ ಪಕ್ಷ ತ್ರಯೋದಶಿ ಸುಮೂಹೂರ್ತದಿ ||ಸುರರು ಭೂಸುರರೆಲ್ಲ ಜಯಘೋಷ ಗೈಯ್ಯುತಿರೆವರ ಮಹಾತ್ಮರು ಆಗ ಹೊಗಲು ವೃಂದಾವನವಪರಿಜನರು ಮುಳುಗಿದರು ದುಃಖ ಆನಂದ ಸಾಗರದಲದನೇನೆಂಬನು 9 ಅವತಾರಮಾರಭ್ಯ ಐದು ದಶ ವರ್ಷಗಳುಅವನಿಜನ ದೃಗ್ವಿಷಯರೀ ಮಹಾತ್ಮರು ತಾವುಅವಧೂತ ವೇಷದಿಂ ಭವನ ಪಾವನವೆನಿಸಿ ಪಿಂತೆ ಶುಕಮುನಿಯಂದದಿ ||ಪವನ ಮತ ಶರನಿಧಿಗೆ ಶಶಿಯು ಇಪ್ಪತ್ತೆಂಟುಪವಿತರ ಸುಲಕ್ಷಣ ಸುತನುವಿಂದುರೆ ಮೆರೆದುಅವನಿಸುರ ಶಿಕ್ಷಣ ಸದುಪದೇಶನುಷ್ಠಾನದಿಂ ಗೈದ ಕೀರ್ತಿಯುತರು 10 ಇವರ ನಾಮಸ್ಮರಣೆ ಕಲಿಮಲದ ಅಪಹರಣೆಇವರ ಸೇವೆಯ ಫಲವು ಸರ್ವಾಮಯ ಹರವುಇವರುನುಗ್ರಹವಿರಲು ವಾದಿನಿಗ್ರಹವಹುದು ಇದಕೆ ಸಂಶಯ ಸಲ್ಲದು ||ಇವರಿಹರು ಸುರತರುವಿನಂದದಲಿ ಶರಣರಿಗೆಇವರೆ ಚಿಂತಾಮಣಿಯು ಸರ್ವ ಭಯ ಹರಿಸುವರು ಇವರ ಗುಣಕೊಂಡಾಡಿ ಇವರೊಲಿಮೆ ಅರ್ಜಿಸಲು ಸರ್ವಕಾಮವು ಲಭ್ಯವು 11 ಸರ್ವಕ್ಷೇತ್ರಾಧಿಕದಿ ಭೂವರಹ ನಿಲ್ಲಿರುವಸರ್ವಭಯ ನಾಶನಕೆ ನರಹರಿಯು ಅರಿರೂಪಸರ್ವಭಕ್ತರ ಭೀಷ್ಟ ವರ್ಷಣಕೆ ಗೋಪಾಲಕೃಷ್ಣರೂಪದಿ ಇರುವನು ||ಇವರ ವೃಂದಾವನದೊಳೀ ಪರೀ ಹರಿರೂಪಪವನ ರೂಪಗಳಿಹವು ಶಿರದೊಳಗೆ ಜಯ ಮುನಿಯುಸರ್ವಋಷಿ ದೇವತೆಗಳಿಹರು ವೃಕ್ಷರೂಪದಿ ಈ ಪವಿತರ ಕ್ಷೇತ್ರದಿ 12 ಭಾಗವತ ನಿಷ್ಠಾತರೆ ||ನಮೊ ನಮೋ ಭಕ್ತಜನ ಕಾಮಧುಕ್ ಭವ್ಯಾತ್ಮನಮೋ ಶ್ರೀ ಮದಾನಂದ ಮುನಿಚರಣ ಮಧುಪರೆನಮೊ ಗುರೂ ಗೋವಿಂದ ವಿಠಲ ಪಾದಾಶ್ರಿತರೆ ನಮೊ ವಿಷ್ಣುತೀರ್ಥ ಪಾಹಿ ||
--------------
ಗುರುಗೋವಿಂದವಿಠಲರು
ಶ್ರೀ ಶೇಷದೇವರು ಪೋಷಿಸೆನ್ನನು ನಿರುತ ಶೇಷದೇವ ದೋಷ ನಾಶನಗೊಳಿಸಿ ಲೇಸಾಗಿ ಪಿಡಿಕರವ ಪ ತಲ್ಪ ಅನುಜ ಪೂರ್ವಜನಾ ಘನಸೇವೆಯನು ಗೈದು | ಫಣಿರಾಜನೆ ವಿನಯದಲಿ ಬಿನ್ನೈಪೆ | ನಿನಗಶನವಾದಾತ ಅನುದಿನ 1 ಭೂಗಗನ ಪಾತಾಳ | ಸಾಗರವ ವ್ಯಾಪಿಸಿದ ಯೋಗ ಸಾಧನ ಶೂರ | ನಾಗನಾಥ ಬಾಗಿಬೇಡುವೆ ಭವದ ರೋಗಕೌಷಧವಾದ ಭಾಗವತ ಶ್ರವಣ ಸುಖರಾಗದಲಿ ನೀಕೊಟ್ಟು 2 ಸಾನಿಸಿರಾಂಬಕ ನಮಿತ | ಸಾಸಿರಾನನನಾದ ವಾಸುಕೀವರ | ವಾರುಣೀಶ ನಿನ್ನ || ಹಾಸಿಗೆಯಗೈದಂಥ ಶ್ರೀ ಶಾಮಸುಂದರನ ನಿತ್ಯ 3
--------------
ಶಾಮಸುಂದರ ವಿಠಲ
ಶ್ರೀಕರ ನೀನೆ ಗತಿಯಲ್ಲದೆ ಬ್ಯಾರಾಕರವಿಲ್ಲ ಕೃಪಾಕರನೆ ದುರಿತ ನಿರಾಕರಿಸಯ್ಯ ಪರಾಪರನೆ ಪ. ರಾಜಿಕ ದೈಹಿಕ ದೈವಿಕರೆಲ್ಲ ಮ- ಹೋಜಸ ನಿನ್ನೊಶವಾಗಿಹವು ಪೂಜಿಸದೆನ್ನ ಸಭಾಜಿಸು ಮಂಗಲ ಭಾಜನ ಶತ್ರು ಪರಾಜಯ ಮಾಡಿಸು 1 ಹಲವಂಗದಿ ನಾ ಬಳಲುವ ಚಿಂತೆಯು ತಿಳಿಯದೆ ಚಿನ್ಮಯ ಜಲಜ ಸುಲಭದಿ ಸಂಪತ್ಫಲಗಳ ವರ್ಧಿಸಿ ನೆಲೆದೋರೆನ್ನೊಳು ಸುಕಟಾ 2 ರೋಗಭಯಂಗಳ ನೀಗುತ ಭಕ್ತಮ- ನೋಗತ ಫಲಸಂಯೋಗಗಳ ಬೇಗದಿ ನೀಡು ಕರಾಗತ ಮಾಡು ಸು- ನಾಗ ಗಿರೀಂದ್ರ ಸರಾಗ. . . . . . 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಕರಾರ್ಚಿತ ವಿಠಲ | ಸಾಕ ಬೇಕಿವಳಾ ಪ ವಾಕು ಮನ್ನಿಸುತಾ ಅ.ಪ. ಕಂಸಾರಿ ತವಪಾದಪಾಂಸು ಸೇವಾ ಸಕ್ತೆ | ಸಂಶಯ ನಿರಹಿತಾಅಂಶ ಆವೇಶ ಅವ | ತಾರಗಳ ತಿಳಿಸುತಲಿಶಂಸನದಿ ತವನಾಮ | ಸಂಪ್ರೀತನಾಗೊ 1 ದುಷ್ಕರ್ಮಗಳ ಭಾದೆ | ದೂರಾಗುವಂತೆಸಗೊನಿಷ್ಕಾಮ ಕರ್ಮಕ್ಕೆ | ಮಾರ್ಗವನೆ ತೊರೋ |ಶುಷ್ಕ ಆಚಾರಗಳ | ತ್ಯಜಿಸುತ್ತ ತವನಾಮಅಕ್ಕರದಿ ಭಜಿಪಂಥ | ಚೊಕ್ಕಮನವೀಯೊ 2 ಶರ್ವವಂದ್ಯನೆ ದೇವ | ತವನಾಮ ಸಂಸ್ಕøತಿಯಸರ್ವದಾ ಸರ್ವತ್ರ | ಇವಳಿಗೊದಗಿಸುತಾಭವವನದಿ ಉತ್ತರಿಸೊ | ಭವರೋಗ ಭೇಷಜನೆದರ್ವಿಜೀವಿಯ ಕಾಯೊ | ಪವನಂತರಾತ್ಮ 3 ಸೃಷ್ಟಾದಿಕರ್ತನೇ | ಸುಗುಣಮೂರುತಿ ದೇವಕಷ್ಟಂಗಳ ಪರಿಹರಿಸಿ | ಕಾಪಾಡೊ ಹರಿಯೇಕೃಷ್ಣಮೂರುತಿ ದೇವ | ಕಾರುಣ್ಯ ಸಾಗರನೆಸುಷ್ಠಮನ ನಿಲಿಸೊ ತವ | ಚರಣದೊಳು ಹರಿಯೆ 4 ಸೂಚಿಸಲು ತೈಜಸನು | ಯೋಚನೆಯ ಕೈಕೊಂಡುವಾಚಿಸಿಹೆ ಅಂಕಿತದಿ | ದಾಸ ಸದ್ವೀಕ್ಷಾ |ಮೋಚ ಕೇಚ್ಛೆಯ ಮಾಡಿ | ಕೈಪಿಡಿಯೊ ಈಕೆಯನುಖೇಚರಾಂತಕ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀನರಹರಿ ಕರುಣಾಜಲಧೆ ತವಚರಣವ ನಂಬಿದೆ ಪ ದೀನಜನರು ಪ್ರತಿದಿನ ಮೊರೆಯಿಡುತಿರೆ ನಿಕರ ಕುಲಿಶಾಯುಧ ಧುರಧೀರಾ ಶೂರಾ ಹಿರಣ್ಯ ಕಶಿಪು ಪುರಂದರ ಸನ್ಮುನೀಂದ್ರ ನುತಿ ಪಾತ್ರಸುಚರಿತ 1 ಉಗ್ರರೂಪ ಸಕಲಗ್ರಹಭಯ ಪರಿಹಾರೀ ಶೌರೀ ಮುರ ವೈರಿ ಜಲಜನಾಭ ನಿನ್ನಯ ಚಿಂತನೆ ಕೊಡು 2 ಕ್ಷುದ್ರರೋಗಗಳುಪದ್ರಪಡಿಸುತಿಹದೈಯ್ಯ | ಜೀಯಾ ಕ್ಷೇಮವಿತ್ತು ನಿನ್ನವರ ದಾಸನೆನಿಸೈಯ್ಯಾ ರುದ್ರಾಂತರ್ಗತ ಗುರುರಾಮ ವಿಠಲ ಭದ್ರಮೂರುತಿ ಘಟಿಕಾಚಲನಿಲಯ 3
--------------
ಗುರುರಾಮವಿಠಲ
ಶ್ರೀನಿವಾಸ ಜಗನ್ನಿವಾಸ ಪ ದೀನ ರಕ್ಷಕ ನಿಖಿಲ ಮಾನವರಮಾನಾಭಿಮಾನ ದೊಡೆಯನು ನೀನೇಯಲ್ಲದಿಲ್ಲಾ ಅ.ಪ. ನಕ್ರಮುಖದಲ್ಲಿ ಸಿಕ್ಕಿ ದುಃಖಿಸುವ ಕರಿರಾಜ ಚಕ್ರವರ್ತಿಯು ಶರಣು ಹೊಕ್ಕೆನನಲು ಚಕ್ರವನು ಪಿಡಿದು ನೀನಕ್ಕರೆಯೊಳೈತಂದು ನಕ್ರವದನವಸೀಳಿ ರಕ್ಷಿಸಿದೆ ಗಜವಾ-ದೇವ 1 ಹಿಂದೆ ನಾನಾನ್ನಗಿರಿಯಿಂದ ಬಹದಾರಿಯೊಳು ಸಂದುಗೆಳೀಚಲು ಭಂಡಿ ಸಂಜೆಯೊಳಗೆ ಮುಂದಾಗ ಜೊತೆಯೊಳಗೆ ಬಂದು ಜನಕೆಲ್ಲಿನೀ ಬಂದು ಬೆಳಕನು ತೋರಿ ಮಂದೆಗೂಡಿದೆ ಕೃಷ್ಣಾ 2 ಇಂದು ನಿಜ ಸತಿಯುನೊಂದಳುಬ್ಬಸರೋಗದಿಂದ ಗಾಳಿಯದೀಪದಂದಮಾಗಿ/ ನಂದಿಪೋಗದ ಮುನ್ನ ಬಂದು ನೀಮರೆಯಾಗು ಎಂದು ಮೊರೆಯಿಡಲೀಗ ಬಂದು ಸಲಹಿದೆ ತಂದೆ 3 ತುರುಗಾಯ್ವರಸುಗಳನು ಮರಳಿಪಡೆದೆ ನರಪೌತ್ರನನು ಬಾಣದುರಿಯಿಂದ ರಕ್ಷಿಸಿದೆ ಸರಿಯಾರು ನಿನಗೆ ಸುರನರಭುಜಂಗರಲ್ಲಿ4 ತರಳಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಕುರು ವರವಿಭೀಷಣ ತಾಪಸರನುಪೊರೆದೆ ಶರಣರನು ಪಾಲಿಸುವ ಬಿರುದು ಧರಿಸಿಹ ವ್ಯಾಘ್ರಗಿರಿಯೊಳಗೆ ನೆಲಸಿರುವ ವರದ ವಿಠಲ ರಾಯ 5
--------------
ಸರಗೂರು ವೆಂಕಟವರದಾರ್ಯರು