ಒಟ್ಟು 560 ಕಡೆಗಳಲ್ಲಿ , 76 ದಾಸರು , 482 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿತ್ತ ಅಸಾರ್ಥಕತೆಯ ತಿಳಿದು ಪುರುಷಾರ್ಥ ಪ್ರದನು ಶ್ರೀ | ಹರಿಯ ಪ್ರಾರ್ಥಿಸೋ ಪ ಮಡದಿ ಮನೆ ಮಕ್ಕಳೆಲ್ಲ | ಬಿಡದೆ ನಿನ್ನ ಸೇವಿಸೋರುಹಿಡಿಯ ತುಂಬ ಹೊನ್ನು ಹಣವು | ಬಿಡದೆ ಬರುತಿರೇ 1 ಪ್ರಾಣ ಉತ್ಕ್ರಮಣ ಸಮಯ | ಮಾನಿನೀಯು ರೋದಿಪಾಳುಪ್ರಾಣ ಪೋದ ತನುವ ಸೋಕೆ | ತಾನೆ ಒಲ್ಲಳು 2 ಮಂದ ಮಾನವ 3 ಬಿಂಬ ಚಲಿಸೆ ತಾನು ಪ್ರತಿ | ಬಿಂಬ ಚಲಿಪ ಮತಿಯೆ ನಿಜವುಉಂಬು ಕೊಂಬ ಕೊಡುವುದೆಲ್ಲ | ಬಿಂಬದೆನ್ನೆಲೋ 4 ಇಂದಿರೇಶನರ್ಚಿಸೂತ | ಇಂದೆ ಗಳಿಸೊ ಪುಣ್ಯ ದ್ರವ್ಯನಂದ ಕಂದಗರ್ಪಿಸೋದು | ದ್ವಂದ್ವ ಕರ್ಮವ 5 ತನುವು ಮನವು ನಿನ್ನದಲ್ಲ | ಗುಣದ ಕಾರ್ಯ ನಿನ್ನದಲ್ಲನಾನು ನನ್ನದೆಂಬ ಮತಿಯು | ಹೀನ ತಿಳಿಯೆಲೋ 6 ನಿತ್ಯ ಬದ್ಧ ಜೀವಿ ನೀನು | ಸತ್ಯ ಸ್ವಾತಂತ್ರ ಹರಿಯುದತ್ತ ಕರ್ತೃತ್ವವಿಹುದು | ಕೃತ್ಯ ಉಂಬಲು 7 ಹರಿಯ ರೂಪ ಹೃದಯದಲ್ಲಿ | ಪರಿಕಿಸಾದೆ ಗತಿಯು ಇಲ್ಲಕರುಣಿಸಿಹನು ಮನುಜ ದೇಹ | ಹರಿಯ ಕಾಣಲು 8 ಮಧ್ವ ಮತದಿ ಜನ್ಮವಿರಲ | ಅವಿದ್ಯೆಗಳನ ನೀಗಿಕೊಂಡುಮಧ್ವಮುನಿಯ ಕರುಣ ಪಡೆದು | ಸಿದ್ಧನಾಗೆಲೋ 9 ಕಮಲ | ಭಾವದಿಂದ ಪೂಜಿಸಾದೆಸಾವು ಹುಟ್ಟು ತಪ್ಪೊದಿಲ್ಲ | ಕೋವಿದನಾದರು10 ಅಂಶದಿಂದ ಇರುತ ತಾವು | ಹಂಸ ಮಂತ್ರ ಸರ್ವರಲ್ಲಿವಿಂಶತ್ಯೇಕ ಸಾಸಿರಾವು | ಅಂತೆ ಷಟ್ಯತ 11 ದಿನಕೆ ಇಂತು ಜಪವ ಚರಿಸಿ | ವಿನಯದಿಂದನಿರುದ್ದನೀಗೆಎಣಿಕೆ ಮಾಡಿ ಅನಿಲ ಸಹಿತ | ತಾನೆ ಅರ್ಪಿಪ 12 ಪರ್ವಕಾಲದಿದನು ತಿಳಿದು | ಶರ್ವ ವಂದ್ಯ ಶೇಷಶಾಯಿಸರ್ವ ಕಾರ್ಯಗಳನು ಲಾ | ತವ್ಯ ಗಿತ್ತಿಹ 13 ದೈತ್ಯ ಜನರು ಅರಿಯದಂತೆ | ಯುಕ್ತನಾಗಿ ಬ್ರಹ್ಮ ವಾಯುಆಪ್ತ ವಾಕ್ಯ ಮೀರದಂತೆ | ಗುಪ್ತ ಚರಿಸುವ 14 ತತ್ವಕಿದು ವಿರುದ್ಧವಲ್ಲ | ವ್ಯಕ್ತ ವಿಹುದು ಲೋಕದಲ್ಲಿಮತ್ತೆ ಕ್ಷಣಕೆ ಒಪ್ಪೆನೆಂದು | ಇತ್ತು ಸ್ಥಾನವ 15 ಗೊತ್ತು ಮಾಡಿ ಪೋಗುವಂತೆ | ಭ್ರಾತೃ ವಾದಿರಾಜರೀಗೆಇತ್ತು ಪದವಿಗಳನು ತಾವು | ಸೂಕ್ತ ಪೇಳ್ವರು 16 ಭಾರತೀಶ ಕರ್ಮ ವೀಯೆ ಗುರುಗೋವಿಂದ ವಿಠಲ ಗತಿ ಇತ್ತು | ಕಾವ ಬಿಡದಲೆ 17
--------------
ಗುರುಗೋವಿಂದವಿಠಲರು
ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ವಿಷ್ಣೋ ಭೋ ಸಂಸೇವಿತ ಜಿಷ್ಣೊ ಉಷ್ಣಾಂಶಾಯುತ ಪುರುರೋಚಿಷ್ಣೊ ಪ ಸುಜನ ಭವಪಾಶನಾಶ ವಾಗೀಶಜನಕ ಲಕ್ಷ್ಮೀಶ ಪರೇಶ 1 ನೀರದ ಶ್ಯಾಮ ಸುರಾರಿಸ್ತೋಮ ವಿರಾಮ 2 ವಿಹಂಗ ಗಮನಯದು ಪುಂಗವ `ಹೆನ್ನೆರಂಗ ' ಕೃಪಾಂಗ 3
--------------
ಹೆನ್ನೆರಂಗದಾಸರು
ವೆಂಕಟಗಿರಿವಾಸ ವೆಂಕಟಗಿರಿವಾಸ ವೆಂಕಟಗಿರಿವಾಸ ಶ್ರೀ ವೆಂಕಟೇಶ ಪಸುರ ಸಮುದಾಯ ಶಿರೋಮಣಿ ರಾಜಿತಚರಣಸರೋರುಹ ಶ್ರೀ ವೆಂಕಟೇಶ 1ಕಮನೀಯ ವಿಗ್ರಹ ಕಮಲಾಲಯಾಕರಕಮಲಶೋಭಿತಪಾದ ಶ್ರೀ ವೆಂಕಟೇಶ 2ವಿಧಿಮುಖಾಮರಗಣ ವಿಧಿವಿಹಿತಾರ್ಚಿತಬುಧಹೃದಯಾಲಯ ಶ್ರೀ ವೆಂಕಟೇಶ 3ಸನಕಾದಿಮುನಿವಂದ್ಯ ಸಾಧುಸಂರಕ್ಷಕವನಧಿಸುತಾ ಭೂಮಿಧವ ವೆಂಕಟೇಶ 4ಅಂಜನವೃಷಶೇಷ ವಿನತಾತನುಜ ನಾಮರಂಜಿತಾಚಲವಾಸ ಶ್ರೀ ವೆಂಕಟೇಶ 5ನಾರಯಣಾದ್ರಿ ಸಿಂಹಾದ್ರಿ ಶ್ರೀಶೈಲೇತಿಸಾರ ವೆಂಕಟನಾಮಾಷ್ಟಕ ಭೂಧರೇಶ 6‘ವೆಂ ಪಾಪಂ ಕಟತಿ ನಾಶಯತೀತಿ’ ವಿಖ್ಯಾತಸಾಂಪ್ರತ ಸುಸ್ಥಿರ ಶ್ರೀ ವೆಂಕಟೇಶ 7ನಿತ್ಯ ನಿಜಾನಂದ ನಿರುಪಮಾಮಿತಶಕ್ತಿವೃತ್ತಿ ಪ್ರವರ್ತಕ ಶ್ರೀ ವೆಂಕಟೇಶ 8ದಿವ್ಯ ದಕ್ಷಿಣಮುಖ್ಯದೋರ್ಧೃತ ಶ್ರೀ ಚಕ್ರಸವ್ಯದೋರ್ಧೃತ ಶಂಖ ಶ್ರೀ ವೆಂಕಟೇಶ 9ಭಜಿತವ್ಯಂ ಪಾದಪಂಕಜಮಿತಿ ದರ್ಶಿತನಿಜ ದಕ್ಷಾಧಃಪಾಣೇ ಶ್ರೀ ವೆಂಕಟೇಶ 10ಭಜತಾಂ ಭವಾಂಭೋಧಿ ಕಟಿಮಿತಮಿತಿ ವಾಮಕಟಿ ನ್ಯಸ್ತ ಕರಕಂಜ ಶ್ರೀ ವೆಂಕಟೇಶ11ಹಾರ ಕಿರೀಟ ಕುಂಡಲ ಗಾತ್ರ ಶ್ರೀ ವೆಂಕಟೇಶ 12ಕಂಕಣ ಕೇಯೂರ ವಲಯ ಶೋಭಿತ ಕರಕುಂಕುಮಾಂಕಿತ ಮಾಲ ಶ್ರೀ ವೆಂಕಟೇಶ 13ಕಟಿಸೂತ್ರ ಕಲಿತ ಪೀತಾಂಬರ ಕಿಂಕಿಣಿಕಟಕಮಂಡಿತಪಾದ ಶ್ರೀ ವೆಂಕಟೇಶ 14ತಿರುಪತೀತಿಖ್ಯಾತ ತೀರ್ಥಭೂತಾದ್ರೀಶವರದ ವಿಶ್ವಾಧಾರ ಶ್ರೀ ವೆಂಕಟೇಶ 15ಓಂ ಮುರಾರಯೇ ನಮಃ
--------------
ತಿಮ್ಮಪ್ಪದಾಸರು
ವೆಂಕಟರಮಣ ಶ್ರೀ ಲಕ್ಷ್ಮೀರಮಣ ಪಂಕಜದಳ ನೇತ್ರ ಮುಗುಳ್ನಗೆ ವದನ ಪ ಧರೆಯ ಈರಡಿಯ ಮಾಡಿದ ಚಾರುಚರಣ ದುರಿತ ಸಂಹರಣ 1 ಉಟ್ಟ ಪೊಂಬಟ್ಟೆ ಪೀತಾಂಬರಾವರಣ ಇಟ್ಟ ಶ್ರೀಗಂಧ ಕಸ್ತೂರಿಸಿರಿವದನ 2 ಅರಿಗದೆ ಶಂಖಾಬ್ಜವರ ಚತುರ್ಭುಜನ ಕೊರಳ ತುಳಸಿಯ ಮಾಲೆ ವನಮಾಲಾಭರಣ 3 ರತ್ನ ಕಿರೀಟಿ ವಿಚಿತ್ರದಾಭರಣ ಗು ಗಮನ ದುಷ್ಟ ಧೈತ್ಯ ಸಂಹರಣ 4 ದುರ್ಗ ಮೂಡಲ ಗಿರಿಯಲಿ ವಾಸವಿಹನ ಹೆಗ್ಗಾಳೆ ಮೌನಿ ವೆಂಕನ ಮೇಲೆ ಕರುಣ 5
--------------
ಕವಿ ಪರಮದೇವದಾಸರು
ವೈಕುಂಠ ವಿಠ್ಠಲನೆ ನೀನಿವನ ಸಾಕಬೇಕಯ್ಯ ಶ್ರೀ ಹರಿಯೆ ಪ ನಾಕಪತಿಯೆ ನಿನ್ನ ತೋಕನೆಂದೆನಿಸಿ ಕೃಪಾಕರುಣೆ ಕಾಪಾಡ ಬೇಕೊ ಹರಿಯೆ ಅ.ಪ. ಪುಂಡಲೀಕ ವರದ ಪಾಂಡುರಂಗನೆ ನಿನ್ನತೊಂಡನಾಗಿಹನ ಕೈಗೊಂಡು ಕಾಪಾಡೊ ಹರಿಯೆ |ಅಂಡಜಸುವಾಹನನೆ ಮಾರ್ತಾಂಡ ಶತತೇಜಭಾಂಡ ಕಾರಕ ಭೀಮ ಗೊಲಿದಂತೆ ಒಲಿಯಬೇಕು 1 ಇಹಪರಗಳೆರಡಕ್ಕೂ ಅಹಿಶಯ್ಯ ನಿನ ಪಾದವಹಿಸೆ ಸೇವಿಪನಯ್ಯ ಸಹಜ ಭಕ್ತಿಯಲಿವಿಹಗೇಂದ್ರ ವಾಹನನೆ ಐಹಿಕದ ಭಯಹರಿಸಿವಿಹಿತ (ಕರುಣ)ದಿಂದಿವನ ಕಾಪಾಡು ಬೇಕು ಹರಿಯೇ 2 ವಿಘ್ನಹರ ನಿನ್ನಲ್ಲಿ | ಲಗ್ನ ಗೈಸಿಹಮನವ ನಿ-ರ್ವಿಘ್ನತೆಯ ನೀಡಯ್ಯ ಸರ್ವಕಾಲದಲಿಯಜ್ಞೇಶ ಯಜ್ಞ ಭುಗ್ ಯಜ್ಞಸಾಧನ ಯಜ್ಞಯಜ್ಞಾನು ಸಂಧಾನ ಸರ್ವಕಾರ್ಯದಲೀಯೊ 3 ವೃಂದಾರ ಕೇಂದ್ರ ರಿಂ | ವಂದ್ಯ ಹಯಮುಖ ಪಾದಭೃಂಗರೆಂದೆನಿಸುವ ಭಾವಿ ಮರುತರ ಚರಣದೀಸಂಧಿಸುತ ಧೃಡಭಕ್ತಿ ವೃಂದಾವನಾಖ್ಯಾನಸಂದೋಹ ಸುಜ್ಞಾನ ನೀನಿತ್ತು ಸಲಹೊ ಹರಿಯೇ 4 ಪತಿ ನಿನ್ನ ಹಂಬಲಿಸಿ ಬೇಡುವೆನುಇಂಬಿಟ್ಟು ತವ ಪಾದದ್ಹಂಬಲವ ನೀಯೋಉಂಬುಡುವ ಕ್ರಿಯೆಗಳಲಿ ಬಿಂಬ ಕ್ರಿಯೆಗಳ ತಿಳಿಸಿಬಿಂಬ ತವರೂಪ ಹೃದಯಾಂಬರದಿ ತೋರಿ ಸಲಹೋ 5 ಪಂಚಪಂಚಸುತತ್ವ | ಪಂಚ ಭೇದದಜ್ಞಾನಸಂಚಿಂತೆಯ ನೀಯೋ ವಾಂಛಿತಾರ್ಥದನೇಪಂಚ ಅವಿದ್ಯೆಯ ಕಳೆದು ಪಂಚಸು ಪರ್ವದಲಿಪಂಚಾಸ್ಯನಲಿ ನಿನ್ನ ಪಂಚರೂಪವ ತೋರಿಸೋ 6 ದಿವಿಜ ವಂದ್ಯಮಧ್ವಾಂತರಾತ್ಮ ಗುರು ಗೋವಿಂದ ವಿಠಲ ತವದಿವ್ಯ ರೂಪವ ತೋರಿ ಕಾಪಾಡೊ ಹರಿಯೆ 7
--------------
ಗುರುಗೋವಿಂದವಿಠಲರು
ವೈಕುಂಠನಾಯಕನೂ ಈ ಮಹಾತ್ಮನು ವೈಕುಂಠನಾಯಕನು ಪ. ಪಾಕಶಾಸನತ, ನಾಕಪಾಲಕ ಸರ್ವಲೋಕನಾಯಕ ಭಕ್ತರಕ್ಷಕ ಶ್ರೀಕಳತ್ರ ಸುಪವಿತ್ರನೀತನು ಅ.ಪ. ವೆಂಕಟಗಿರಿಯಿಂದ ಅಂಕನಶೆಟ್ಟಿಪುರಕೆ ಬಿಂಕದಿಂದೈತಂದ ಕಾಂಕ್ಷಿತಾರ್ಥವನೀವನು ಭಕ್ತರಮನಶಂಕೆಯ ಕಳೆಯುವನು ಕಂಕಣಕರ ಬದ್ಧನಾಗಿಹ ಪಂಕಜಾಸನ ಜನಕ ಲಕ್ಷ್ಮೀಕಾಂತ ಸರ್ವಾಂತರ್ಯಾಮಿಯಾಗಿಹ 1 ಬಂದವರೆಲ್ಲ ತಾವು ಬಂದಂತೆ ಮನನೊಂದು ಹಿಂದಿರುಗಿ ಪೋಗುವರೆಂಬ ಮಾತಿಲ್ಲ ಬಂದು ಬಂದವರಿಗೆಲ್ಲ ಬೇಡಿದುದಿತ್ತಾನಂದ ದಿಂದವರೀಯುವ ಕಾಣಿಕೆಗಳ ಚೆಂದದಿಂ ಸುರೇಂದ್ರ ವಂದ್ಯ ಕರೀಂದ್ರಪೂಜಿತ ನಂದ ಕಂದ ಮುಚುಕುಂದ ವರದನು 2 ಅಂಗವಿಹೀನರಿಗಂಗವ ಸರಿಗೈದು ಇಂಗದ ಭೋಗಭಾಗ್ಯಂಗಳ ನೀವನು ಕಂಗೆಟ್ಟಿಹರಕಾಯ್ವನು - ಬೇಡುತ್ತಿಹ ಬಂಜೆಗೆ ಮಕ್ಕಳನು ನೀಡುವನು ತನ್ನ ನಂಬಿದವರ ಕೈಬಿಡನು ಸತ್ಯಾತ್ಮನು ಮಂಗಳಾಂಗ ಯದುಪುಂಗವ ಸದಯಾಪಾಂಗ ಶ್ರೀ ರಂಗ ತುಂಗವಿಕ್ರಮ ಶೇಷಗಿರಿವರ 3
--------------
ನಂಜನಗೂಡು ತಿರುಮಲಾಂಬಾ
ವ್ಯರ್ಥದಲಿ ತೋರುವನೆ ತ್ರೈಲೋಕ್ಯಕರ್ತ ಭಕ್ತನಾದರೆ ಪರಮ ಮುಕ್ತಿ ಸೇರುವುದು ಪ ಉತ್ತಾನ ಭೂಪತಿಯ ಪುತ್ರನಂತಿರಬೇಕು ಸತ್ಯವೊಂದಿರಬೇಕು ಹರಿಶ್ಚಂದ್ರನಂತೆ ಭಕ್ತಿರಸವಿರಬೇಕು ಪ್ರಹ್ಲಾದನಂತೆ ಹಸ್ತವಿರಬೇಕು ಶ್ರೀರಾಮ ಭಕ್ತನಂತೆ 1 ವ್ರತವ ಮಾಡಲು ಬೇಕು ಅಂಬರೀಶನ ಪರಿಯ ಪಥವ ನಡೆಯಲು ಬೇಕು ವಿಹಗನಂತೆ ಶತಮುಖವ ರಚಿಸಿದರೆ ಪುರುಹೂತನಂತಿಹನು ಯತಿಯಾಗಬೇಕು ಗುರುಮಧ್ವಪತಿಯಂತೆ 2 ಗೀತಸೇವನೆ ಬೇಕು ನಾರದರ ತೆರನಂತೆ ಪ್ರೀತನಾಗಲು ಬೇಕು ಪಾರ್ಥನಂತೆ ನೀತಿಶಾಸ್ತ್ರವು ಬೇಕು ಶುಕಶೌನಕರಂತೆ ಖ್ಯಾತಿಯಿರಬೇಕು ರವಿಜಾತನಂತೆ 3 ಶುದ್ದನಾಗಿರಬೇಕು ಉದ್ಧವನ ತೆರನಂತೆ ಬದ್ಧನಾಗಿರಬೇಕು ಅಕ್ರೂರನಂತೆ ಹೊದ್ದಿಕೊಂಡಿರಬೇಕು ಫಣಿರಾಜನಂದದಲಿ ಮುದ್ದಾಗಿಯಿರಬೇಕು ಆ ವಿದುರನಂತೆ 4 ವೇದವೋದಲು ಬೇಕು ವ್ಯಾಸಮುನಿಯಂದದಲಿ ಆದರಿಸಬೇಕು ತಾ ಧರ್ಮನಂದದಲಿ ಪಾದಪೂಜೆಯು ಬೇಕು ಲಂಕಾಧಿಪತಿಯಂತೆ ಭೇದ ನೋಡಲು ಬೇಕು ವಸಿಷ್ಠನಂತೆ 5 ಸ್ಮøತಿಯ ನೋಡಲು ಬೇಕು ಪಾರಾಶರಂದದಲಿ ಮಿತಿಯಿರಲು ಬೇಕು ಆ ಭೀಷ್ಮನಂದದಲಿ ಜೊತೆಯಾಗಿಯಿರಬೇಕು ಪುಂಡರೀಕನ ತೆರದಿ ವ್ರತವಿರಲು ಬೇಕು ರುಕುಮಾಂಗನಂದದಲಿ 6 ದಾನ ಮಾಡಲು ಬೇಕು ಬಲಿಯ ಪ್ರೌಢಿಕೆಯಿಂದ ಧ್ಯಾನವಿರಬೇಕು ಋಷಿ ಗಾಗ್ರ್ಯನಂದದಲಿ ಪ್ರಾಣ ಸಂದೇಹದೊಳು ಕರಿರಾಜನಂದದಲಿ ಕಾಣಬೇಕಾ ಹರಿಯ ಅಜಮಿಳನ ತೆರದಿ 7 ಜಪಗಳನು ತಪಗಳನು ದಾನಧರ್ಮಂಗಳನು ಅಪರೂಪವಾಗಿರ್ದ ಪೂಜೆಗಳನು ಉಪವಾಸವನು ಮಾಡಿ ವ್ರತ ನೇಮ ನಿಷ್ಠೆಗಳ ಕಪಟವಿಲ್ಲದೆ ರಚಿಸಿ ಕಂಡರೈ ನಿನ್ನ 8 ಇವರಂತೆ ನೋಡುವರೆ ಸ್ಥಿರವಿಲ್ಲ ಬುದ್ಧಿಗಳು ಇವರ ದಾಸರ ದಾಸ ದಾಸ ನಾನು ನಿತ್ಯ ಮನದೊಳಗೆ ನಿಲುವಂತೆ ಭಾವಿಸೈ ಕೋನೇರಿ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ವ್ರಜ ವಿಹಾರ ಜಯ ಮುರಾರೆ ಪ ಭಜಿಪ ಯೋಗವೇನು ಸುಕೃತವೊ ಅ.ಪ ಮುರಳಿನಾದ ಸುಧೆಯ ಧಾರೆ ಹರಿದುದೆನ್ನ ಶ್ರವಣದಲ್ಲಿ ಬೆರೆತೆ ನಿನ್ನ ಮರೆತೆ ಮೈಯ್ಯ ಹಿರಿಯದಾಯ್ತು ಜನುಮವಿಂದು 1 ಮೃದುಲಹಾಸ ಮಧುರಭಾಷ ವದನ ಸೊಬಗ ನೋಡಿದೆನೋ ಶ್ರೀಶ ಸದನದಲಿ ಮನೋಹರ ವಿಲಾಸ ಹೃದಯ ಕಮಲಕಾದುದು ವಿಕಾಸ 2 ಭೋಕ್ತ ನಿನಗೆ ಭಕುತಿ ಕುಸುಮವೆನ್ನ ಸೇವೆ ಸುಖವನೀಪರಿ ನಿತ್ಯಗೊಳಿಸೊ ಮುಕುತಿಯಿರಲಿ ಶ್ರೀ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಶಂಕರ ದೇವನಾಲಂಕಾರ ಶಯನ ಶಂಖ ನೃಪನ ಪಾಲಾ ಶಂಖಾದಿ ಸೂದನ ಶಂಕೆಯಿಲ್ಲದೆ ತಾಯಿ ಸಂಕಲೆ ಕಡಿದ ಶಶಾಂಕಕೋಟಿ ಪ್ರಭಾವ ಸಂಕರುಷಣ ದೇವ ಶಂಖಾರಿಧರನೆ 1 ಕಂಬದಿ ಬಂದಚ್ಯುತನೆ ಗೊಲ್ಲರ ಸಲಹಿದ ಗೋವರ್ಧನಧರ ಪುಲ್ಲ ಲೋಚನನೆ2 ಅಖಿಳ ಅಸುರರ ಶಕುತಿಯ ಅಪಹರಿಸಿದ ಅದಿತಿ ರುಕ್ಮಿಣಿಯೊಡನೆ ವಿಹಾರ ಸಕಲ ಸುರರೊಡೆಯ ಸಾಮಗಾಯನಲೋಲ ಶಕುಜನಕನೆ3 ಶಾಮಲ ಶರೀರ ವರ್ಣ ವಿನುತ ರೋಮ ರೋಮ ಕೂಪದಿ ಆನಂದ ಭರಿತ ದಾಮೋದರ ವಿಶ್ವದಾನಿಗಳರಸನೇ ಸಾಮಜವರದ 4 ಸನ್ನುತ ಚರಣ ಅನಿರುದ್ಧ ದೇವನೆ ಅಸುರ ಸಂಹರಣಾ ಕನಕಗರ್ಭಾದಿ ಸುರಕಟಕ ಪಾಲಕನೆ ವನಜ ಜಾಂಡವ ಪೆತ್ತ ವೈಕುಂಠ ಪುರಾಧೀಶ 5 ಫಣಿ ಫಣ ಮರ್ದನ ಪ್ರಣವ ಪ್ರತಿಪಾದ್ಯ ಪ್ರ ಸನ್ನವದನಾ ರಣರಂಗ ಭೀಮಾ ಭಕುತ ಜನ ಮೋದನಾ ಅಣು ಸ್ಥೂಲದಲಿ ಗಮನ 6 ಶ್ವೇತವಾಹನನ ಸಮರದಿ ಕಾಯಿದಾ ಅಖಿಳ ಜೀವ ಭೇದಾ ದರ ಪರಮ ಸುಮೋದಾ ಭೀತಿರಹಿತ ಕಲ್ಪಭೂಜನೆನಿಪ ಜಗನ್ನಾಥವಿಠ್ಠಲನೆ 7
--------------
ಜಗನ್ನಾಥದಾಸರು
ಶಂಕರನಂದನ ನಮೋ ನಮೋ ಕಿಂಕರಪಾಲಕ ನಮೋ ನಮೋ ಪ ಪಂಕಜಭವನುತ ನಮೋ ನಮೋ ಸಂಕಟ ಪರಿಹರ ನಮೋ ನಮೋ ಅ.ಪ ಓಂಕಾರಪ್ರಿಯ ದಿವ್ಯಶರೀರಾ ಶಂಕರ ಸುಖಕರ ಭವಪರಿಹಾರ ಅಂಕನಾಥ ಸರ್ವೇಶ ಮನೋಹರ 1 ಗಿರಿಜಾನಂದ ಕುಮಾರ ಶರಣಾಗತ ಪರಿವಾರ ವರಕೈಲಾಸ ವಿಹಾರ | ಸುರುಚಿರ ವಜ್ರಶರೀರಾ ಶರವಣಭವ ಭುಜಗೇಶ | ಕರುಣಾಕರ ಜಗದೀಶ ಹರಿಪರ್ಯಂಕ ಪರೇಶ ಮುದಗಾಂಕಿತ ಧೃತಕೋಶ 2 ಚಿಂತಾ ಜಲನಿಧಿ ಭೀಮ | ಸಂತ ಶರಣಜನ ಪ್ರೇಮ ಅಂತರ ಭಯಹರ ಜಗದಭಿರಾಮ ಸಂತಸದಾಯಕ ಮಾಂಗಿರಿಧಾಮ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶರಣರ ಕಾಯಕವೇ ಮಾಡಿ | ಗುರುಧರ್ಮ ಕಾಯಕವನೆ ಮಾಡಿ ಪ ಕಂದೋಪಮನ್ಯಾನಂದವ ಪಡೆದಾ 1 ಐದು ವರುಷದ ಮಗವಿಡಿದ ದೃಢಾ 2 ಇಳೆಯೊಳು ಕರಿರಾಜ ನೆಲೆಗೊಂದು ವಿಡಿದಾ 3 ಐವರಂಗನೆ ಭಾವದಿ ನುಡಿದಾ 4 ಭಾರವಪ್ಪಿಸಿ ಕೊಟ್ಟಾ ಕೀರಿಟಿ ಜಡಿದಾ 5 ಅಂದಿಗಿಂದಿಗೆ ಸಾಧುವೃಂದವು ನಡದಾ 6 ಮಹಿಪತಿಜ ಹೇಳಿದ ವಿಹಿತಾವಿಡಿದಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಗಿರಿಯ ತಿಮ್ಮಾ | ಶರಣು ಪುರುಷೋತ್ತಮಾ | ಶರಣು ಮಹಾ ಮಹಿಮ | ಶರಣು ಪರಬೊಮ್ಮಾ | ಪರಿಹರಿಸುವದು ಹಮ್ಮಾ ಪ ವರೇಣ್ಯ | ಭಂಗ | ಹರಿಸಿದ ಶಿರಿ ರಂಗ | ವಿಹಂಗ | ತುರಗ ತುರಗ ವದನ | ಸದನ ಕರ ಮುಗಿವೆನೈಯಾ | ಕರದ ಮಾತಿಗೆ ಜೀಯಾ | ಭರದಿಂದ ಕೊಡು ಮತಿಯಾ 1 ಪಾದದಲಿ ಪೆಣ್ಣಾ | ಮೋದದಲಿ ಪೆತ್ತ ಚಿಣ್ಣಾ | ನಾದ ಬಲು ಪಾವನ್ನಾ | ಭೇದಾರ್ಥ ಜ್ಞಾನ | ಆದರಿಸೆ ಅನುದಿನಾ | ನೀ ದಯದಲಿ ಕೊಡು | ಈ ದೇಹ ನಿನ್ನ ಬೀಡು | ಯಾದುದೆ ಇತ್ತ ನೋಡು 2 ಜಲದೊಳಗಾಡಿದೆ | ಚಲಕೆ ಬೆನ್ನ ನೀಡಿದೆ | ನೆಲ ಬಂದು ನೆಗಹಿದೆ | ಖಳನನ್ನ ಕೆಡಹಿದೆ | ಇಳಿಯ ಮೂರಡಿ ಮಾಡಿದೆ | ಕುಲವ ಕೂಡಲಲಿ ಹಾರ | ಜಾರ ಚೋರ | ಅಳಿದೆ ಮುಪ್ಪುರು ಶೂರಾ | ವಿಜಯವಿಠ್ಠಲ ಪಾರಾ | ಫಲವೀವೆ ಧರಣೀಧರಾ 3
--------------
ವಿಜಯದಾಸ
ಶರಣು ಶರಣು ಹರ ಸುಂದರ ಶಂಕರ | ಹೊರೆಯೋ ನಾ ನಿಮ್ಮ ಬಾಲನು ಪ ಪತಿ - ಧರ | ಸರ್ವ ಜನರ ಸಹಕಾರೀ || ಅಘ ಕುಲಿಶ ನೆ | ಪರ್ವತ ಸುತೆ ಮನೋಹಾರಿ 1 ಭವ ಭ್ರಮ | ಪಂಚಾಕ್ಷರ ಸುಖದಾತಾ || ವಂಚನಿಲ್ಲವದರ ವಾಂಛಿತ ಪೂರಿತ | ಅಂಚೆ ಗಮನೆ ಸನ್ಮತಾ 2 ಮಹಿತಳ ವ್ಯಾಪಕ ಮಹಿಮನು - ಪಮ್ಯನೆ | ಮಹಿಪತಿ ನಂದನ ಪ್ರಭೋ | ಅಹಿಯಾ ಭರಣನೆ ಅಹವರಾನಳವಿದು | ವಿಹಿತಾಂಬಕ ತೃಯ ಶಂಭೋ || 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಹೋಗುವೆನಯ್ಯ ನಾನು ಪ ಸಿರಿ ಅಜಭವ ಶಕ್ರ ಸುರಸ್ತೋಮಗಳನೆಲ್ಲ ಸರಸದಿಂದ ಆಳ್ವ ಪರಮಪುರುಷ ಹರಿಗೆ ಶಿರಬಾಗಿ ನಮಿಸುತ ಅ.ಪ. ನಿರುತ ಆನಂದದಿ ಮೆರೆದು ಇರುವಂಥ ನಿರಜ ನಿತ್ಯನು ಆದ ಉರಗನ ಮೇಲ್ವರಗುತ ಪರಮ ಪರಾತ್ಪರ ಪರಮವೇದದ ಸಾರ ಪರಮ ಸದ್ಗುಣ ಪೂರ್ಣ ಪುರುಷಸೂಕ್ತ ವಂದ್ಯ ಪರಿಪರಿ ರೂಪದಿ ಸರ್ವತ್ರ ಇರುವಂಥ ನಿರ್ಗುಣ ನಿರಾಕಾರ ನಿರುಪಮ ನಿಸ್ಸೀಮ ನಿರುತ ತೃಪ್ತನು ಆದ ಸರ್ವಸಾರ ಭೋಕ್ತ ಸರ್ವರ ಬಿಂಬನು ಸರ್ವಗುಣ ಪೂರ್ಣ ಸರ್ವರ ಆಧಾರ ಸರ್ವೇಶ ಸ್ವತಂತ್ರ ಸರ್ವಶಬ್ದ ವಾಚ್ಯ ಸರ್ವರಿಂ ಭಿನ್ನನು ಸರಸಸೃಷ್ಟಿಯ ಮಾಳ್ವ ನೀರಜನಾಭಗೆ ಚರಣವ ಪಿಡಿಯುತ್ತ ಉರುಗಾಯನ ದೇವ ಸಲಹು ಸಲಹೆಂದು 1 ವಾರಿಯೊಳಾಡುವ ಭಾರವಹೊರುವ ಕೋರೆಯತೀಡುವ ಕರುಳಾನು ಬಗೆಯುವ ವರವಟು ಆಗುವ ಪರಶುವ ಪಿಡಿಯುವ ನಾರಿಯ ಹುಡುಕುವ ನಾರಿಯ ಕದಿಯುವ ಬರಿಮೈಯ್ಯ ತೋರುವ ತುರುಗವನೇರುವ ನಾರಿಯು ಆದವ ಭಾರತ ಮಾಡುವ ವರ ಸಾಂಖ್ಯ ಹೇಳುವ ಕರಿಯನು ಪೊರೆಯುವ ಪೋರಗೆ ಒಲಿದವ ವರ ಋಷಭನಾದ ಹರಿ ಯಜ್ಞ ನಾದವ ತರಿವ ರೋಗಂಗಳ ವರಹಂಸ ರೂಪನು ತುರುಗ ವೇಷಧಾರಿ ನಾರಾಯಣ ಮುನಿಯೆ ಗುರು ದತ್ತಾತ್ರೇಯನೆ ಪರಿಸರ ಪರಮಾಪ್ತ ಪೊರೆಯೊ ಮಹಿದಾಸನೆಂದು ಕರವೆತ್ತಿ ಮುಗಿಯುತ 2 ಪಾಪಿಯ ಪೊರೆದವಗೆ ತಾಪ ಇಲ್ಲದವಗೆ ಅಪವರ್ಗದಾತಗೆ ವಿಪನ ಏರಿದವಗೆ ಗೋಪತಿಯಾದವಗೆ ತಾಪವ ಮೆದ್ದವಗೆ ಚಾಪವ ಮುರಿದವಗೆ ಚಪಲ ಇಲ್ಲ ದವಗೆ ಕಪಟರ ವೈರಿಗೆ ಗುಪ್ತದಿ ಇರುವಗೆ ವಿಪ್ರನ ಸಖನಿಗೆ ಅಪ್ರಮೇಯನಿಗೆ ಗೋಪೇರ ವಿಟನಿಗೆ ತಾಪಸ ಪ್ರೀಯಗೆ ವಿಪ್ರಶಿಶು ತಂದವಗೆ ಮುಪ್ಪಿಲ್ಲ ದವಗೆ ತ್ರಿಪುರಾರಿ ಸಖಗೆ ಕೃಪಣ ವತ್ಸಲನಿಗೆ ತಪ್ಪು ಮಾಡದವಗೆ ಆಪ್ತತಮನಿಗೆ ಸಪ್ತ ಶಿವವ್ಯಕ್ತನಿಗೆ ಶ್ರೀಪತಿಯಾದವಗೆ ಕಪಟನಾಟಕ ಪ್ರಭು ಗೋಪಾಲಕೃಷ್ಣಗೆ ಒಪ್ಪಿಸಿ ಸರ್ವಸ್ವ ಅಪ್ಪನೆ ಅಪ್ಪನೆ ತಪ್ಪದೆ ಸಲಹೆಂದು 3 ಅನ್ನವು ಆದವಗೆ ಅನ್ನಾದ ನೆಂಬುವಗೆ ಅನ್ನದ ಖ್ಯಾತನಿಗೆ ಚಿನ್ಮಯ ರೂಪಗೆ ಬೆಣ್ಣೆಯ ಕಳ್ಳಗೆ ಅನಾಥನಾದವಗೆ ಕನಕಮಯನಿಗೆ ಅನಂತರೂಪನಿಗೆ ಉಣ್ಣದೆ ಇರುವವಗೆ ಉಣ್ಣುತ ಉಣಿಸುವವಗೆ ಜ್ಞಾನಿಗಮ್ಯನಿಗೆ ಜ್ಞಾನ ದಾಯಕನಿಗೆ ಗುಣತ್ರಯ ದೂರಗೆ ಭಾನುವ ತಡೆದವಗೆ ಆನತ ಬಂಧುವಿಗೆ ಅನುಪಮನಾದವಗೆ ತನುಮನ ಪ್ರೇರಿಪಗೆ ದಾನವ ವೈರಿಗೆ ತನ್ನಲ್ಲೆ ರಮಿಸುವನಿಗೆ ಮನ್ಮಥ ಪಿತನಿಗೆ ಪೆಣ್ಣಿನ ಪೊರೆದವಗೆ ಅಣುವಿಗೆ ಅಣುವಿಹಗೆ ಘನಕೆ ಘನ ತಮನಿಗೆ ಕಣ್ಣಿಲ್ಲದೆ ನೋಳ್ಪ ಉನ್ನತ ಪ್ರಭುವಿಗೆ ಬೆನ್ನು ಬೀಳುವೆ ನಾನು ಇನ್ನು ಕಾಯೋ ಎಂದು 4 ಹೇಯನಾಗದ ಶೃತಿ ಗೇಯನು ಸುಜನರ ಪ್ರೀಯನು ಸರ್ವರ ಕಾಯುವ ಸುಂದರ ಹಯಮುಖ ಸರ್ವದ ಪ್ರಾಯದಿ ಮೆರೆಯುವ ಗಾಯನ ಪ್ರಿಯನಾದ ಮಾಯಾರಮಣ ಭಾವ ಮಾಯೆ ಹರಿಸಿ ಮುಕ್ತಿ ಭಾಗ್ಯ ಭಕ್ತರಿಗೀವ ತೋಯಜಾಂಬಕ ಸುರ ನಾಯಕರಿಗೆ ಭಕ್ತಿ ತೋಯದಿ ಮುಳುಗಿಪ ಶ್ರೀಯರಸಾಭಯ ದಾಯಕ ಗುರು ಮಧ್ವ ರಾಯರ ಪ್ರಿಯನಾದ ಜೇಯ ಜಯಮುನಿ ವಾಯುವಿನ ಅಂತರದಿ ನವನೀತ ಧರಿಸಿರ್ಪ ತಾಂಡವ ಸಿರಿಕೃಷ್ಣ ವಿಠಲ ರಾಯನಿಗೆ ಕಾಯ ವಾಚಮನದಿ ಗೈಯ್ಯುವ ಸಕಲವನು ಈಯುತ ನಮಿಸುತ ಜೀಯನೆ ಜೀಯನೆ ಕಾಯಯ್ಯ ಕಾಯೆಂದು 5
--------------
ಕೃಷ್ಣವಿಠಲದಾಸರು