ಒಟ್ಟು 873 ಕಡೆಗಳಲ್ಲಿ , 94 ದಾಸರು , 730 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆರೆನಂಬಿದವರನ್ನ ಪರಿವೆಮಾಡದೆ ಇನ್ನು ಪೊರೆಯದಿರುವರೆ ಪರಮಪುರುಷನೆ ನರಹರೆ ನಿಮ್ಮ ಚರಣ ಕಮಲವ ಹಾಗೆ ಸ್ಮರಿಸುತಿರುವಂಥ ಪರಮಪುಣ್ಯ ಭಕ್ತಜನ ರನು ಪಾಲಿಸದೆ ಇನ್ನು ಇರುವದುಚಿತವೆ ಪ ಅಮಿತ ಪರಾಕ್ರಮ ಕುಂಡಲಶಯನ ಅಕ್ರೂರ ವಂದ್ಯಾ ಪುಂಡರೀಕಾಕ್ಷನೆ ಪುಣ್ಯ ಪ್ರಭಾವನೆ ಕುಂಡಲಾಧಿಪ ದೇವ ಮಹಾನುಭಾವ ದಂಡಿದಾನವ ಖಂಡಗರ್ವ ಅಖಂಡಮುನಿಮನ ಮಂಡಲ ನಿಲಯ ಕೋದಂಡಧರನೆ ಅಂಡಜ ಗಿರಿವಾಸ ಹರಿಗೋವಿಂದನೆ 1 ಭೂಮಿಜರಮಣ ಸಂಪೂರ್ಣಾನಂದನೆ ಸಾಮಗಾನಲೋಲ ಸರ್ವೇಶನೆ ಕಾಮತಾರ್ಥಗಳೀವ ಕರುಣಾಸಾಗರ ದೇವಾ ಸ್ವಾಮಿ ಜಗನ್ನಾಥ ಸರ್ವೋತ್ತಮನೆ ಕಾಮ ಜನಕ ಸುದಾಮ ರಕ್ಷಕ ಪ್ರೇಮ ಸೀತಾರಾಮ ಜಗತ್ಪತಿ ಶೌರಿ ಶ್ರೀಹರಿ ಕೋಮಲಾಂಗ ಕೃಷ್ಣ ಮೂರುತಿ 2 ಅಖಿಲಾಂಡಕೋಟಿ ಬ್ರಹ್ಮಾಂಡ ನಾಯಕನಾಗಿ ಸಕಲಭಾರಕರ್ತ ಶ್ರೇಷ್ಠನೆ ನಿಕರದಿ ಸಲಹುವ ನಿಜನಿತ್ಯಾನಂದಾನೆ ಪ್ರಕೃತಾದಿ ಪಾಲಿಸುವ ಪರಮಾತ್ಮನೆ ಸಕಲ ವೈಭವ ಚಿದ್ವಿಲಾಸನೇ ನಿಖರಾರೈ ನಿನ್ನಲಿ ನಮೋ ಭಕುತವತ್ಸಲ ಮುಕುತಿದಾಯಕ ರುಕ್ಮಣಿಯವರ 'ಹೆನ್ನವಿಠ್ಠಲಾ’ 3
--------------
ಹೆನ್ನೆರಂಗದಾಸರು
ನೋಡಿ ಶ್ರೀ ಹರಿಪೂಜಿ ಮಾಡುದು ಬಿಡಿ ಮನಕೃತ ವಾಜಿ ಧ್ರುವ ಮಂಗಳಕರಸುಖ ಕಂಗಳಗಿದಿರಿಡುತದನೇಕ ಮುಂಸಗುಡಿಯಲಿ ಮೂಡಿ ರಂಗದೋರುವ ಘನಕೌತುಕ 1 ತಾಳ ಮೃದಂಗ ಘನ ಭೇರಿ ಫಳಗುಡುತದೆ ಪರೋಪರಿ ತಿಳಿದವನಧಿಕಾರಿ ಕೇಳಲ್ಹೋಗುದು ಭವಭಯ ಹಾರಿ 2 ಹೇಳಲೆನ್ನಳವಲ್ಲ ಹೊಳೆವುತಿಹುದು ಮೂಜಗವೆಲ್ಲ ಕೇಳಿ ಸವಿಯ ಸೊಲ್ಲ ತಿಳಿದ ಮಹಿಮ ತಾನೆ ಬಲ್ಲ 3 ಅಜಪ ಸುಜಪ ಮಂತ್ರ ರಾಜಿಸುತಿಹುದು ಬಾಹ್ಯಾಂತ್ರ ತ್ರಿಜಗ ಮಾಡುವ ಪವಿತ್ರ ಸುಜನ ನೋಡುವ ಸುಚರಿತ್ರ 4 ಸ್ವಹಿತ ಸುಖದ ಸಾರ ಶ್ರೀಹರಿಪೂಜಿ ನಿರಂತರ ಮಹಿಪತಿ ಮನೋಹರ ಸಾಹ್ಯ ಸಕಲಕಿದೆ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿದೆ ಮನದಣಿಯೆ ಶ್ರೀನಿವಾಸನ ನೋಡಿದೆ ಮನದಣಿಯೆಪ. ನೋಡಿದೆನು ಶೇಷಾದ್ರಿಯಿಂದೊಡ- ಗೂಡಿ ಭಕ್ತರ ಬೀಡಿನೊಳು ನಲಿ ದಾಡಿ ಮೆರೆವ ಸಗಾಢ ದೈತ್ಯವಿ ಭಾಡ ಶ್ರೀಹರಿ ರೂಢಿಗೊಡೆಯನ ಅ.ಪ. ಶರಣರಪೇಕ್ಷೆಯನು ಕೊಟ್ಟುಳುಹಲು ಕರುಣಾಳು ನಿಜದಿ ತಾನು ಸ್ಥಿರತೆಯೊಳು ಸ್ವಪ್ನದಲಿ ತಾ ಗೋ ಚರಿಸಿ ಭರವಸೆಯಿತ್ತು ವೆಂಕಟ ಗಿರಿಯವೋಲ್ ಸಾನ್ನಿಧ್ಯ ವದನಾಂ- ಬುರುಹದಲಿ ಮೆರೆದಿಹನ ಚರಣವ 1 ಲಲನೆ ಲಕ್ಷ್ಮಿಯು ಬಲದಿ ಶೋಭಿಪ ವಾಮ ದೊಳಗೆ ಗಣಪ ಮುದದಿ ಒಲವಿನಿಂ ಗರುಡಾಂಕ ಮೃದುಪದ ನಳಿನದಾಶ್ರಯದಿಂದ ವಾಯುಜ ಬಳಗ ಚಾತುರ್ದೇವತೆಯರಿಂ- ದೊಳಗೆ ಪೂಜೆಯಗೊಂಬ ದೇವನ 2 ಕುಂಡಿಲಕೊಳದೊಳಿಹ ಪ್ರಾಣೇಶ ಮುಂ- ಕೊಂಡು ಪಟ್ಟಣಕೆ ಬಹ ಕೆಂಡದಂದದೊಳುರಿವ ಶತಮಾ- ರ್ತಾಂಡದೀಪ್ತಾ ಮುಖಂಡ ಭೃತ್ಯನ ಕೊಂಡುಯಿದಿರಲಿ ಮಂಡಿಸಿದನಖಿ ಳಾಂಡಕೋಟಿ ಬ್ರಹ್ಮಾಂಡನಾಥನ 3 ನೀಲಮೇಘಶ್ಯಾಮಲ ಕೌಸ್ತುಭವನ ಮಾಲಕಂಧರಶೋಭನ ವಜ್ರ ಮುತ್ತಿ ಸಾಲ ಸರ ಪೂಮಾಲೆಗಳ ಸುಖ ಲೀಲೆಯಿಂದೊಪ್ಪಿರುವ ಭಕ್ತರ ಕೇಳಿಯಲಿ ನಲಿದಾಡುತಿಹನನು 4 ಕಾಣೆನು ಪ್ರತಿನಿಧಿಯ ನಮ್ಮೊಡೆಯ ಲ- ಕ್ಷ್ಮೀನಾರಾಯಣ ಹರಿಯ ಕಾಣಿಕೆಯ ಕಪ್ಪಗಳ ತರಿಸುತ ಮಾನಿಸುತ ಭಕ್ತಾಭಿಮತವನು ತಾನೆ ಪಾಲಿಸಿ ಮೆರೆವ ಕಾರ್ಕಳ ಶ್ರೀನಿವಾಸ ಮಹಾನುಭಾವನ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪ(ಪಾ)ವನಾ ಗುರು ಪವಮಾನ ಪ ಪಾವನ ಗುರು ಪವಮಾನ ದೇವ ಅವಾವಕಾಲದಿ ಸಲಹುವ ಕರುಣಿ ಕೃಪಾ ವಲೋಕನದಿಂದ ಕಾವುದೆಮ್ಮನು ಗುರುಅ.ಪ ಪರಮ ಮಹಿಮ ಶ್ರೀ ಮುಕುಂದಾ ನಿಂದ ಕರುಣಾದಿಂದ ಜನಿಸಿಬಂದ ಬಂದು ಸರ್ವಜೀವರೊಳಾನಂದದಿಂದ ಕರಣದೊಳು ನಿಂತಚಂದಾ ||ಆಹ|| ನಿರುತದಿ ಹರಿಪ್ರೇರಣೆಯಿಂದ ಕಾರ್ಯವ ಪರಿಪರಿಮಾಡಿ ಶ್ರೀಹರಿಗರ್ಪಿಸುವ ದೇವ 1 ತರುಚ್ಛಾಯೆಯಂತೆ ಶ್ರೀ ಹರಿಗೆ ನೀನೆ ಪರಮ ಪ್ರತಿಬಿಂಬನಾಗೆ ಸರ್ವ ಚರಾಚರಾದಿಗಳೊಳಗೆ ಅದರ ದರಯೋಗ್ಯತೆಗನುವಾಗೇ ಆಹ ನಿರುತಕಾರ್ಯವ ಮಾಳ್ವೆ ಅಣುಮಹದ್ರೂಪನೆ ಪರಿಪರಿ ಪ್ರಾಣಾದಿಗಳ ಕಾರ್ಯ ನಿನ್ನಿಂದ2 ಚಕ್ರವರ್ತಿ ಆಜ್ಞೆಯಂತೇ ಪುರದ- ಧಿಕಾರಿನಿಯಮದಂತೇ ಅದಕ- ಧಿಕೃತರಿರುವರಂತೇ ಅಂತೆ ತ- ತ್ವ ಕಾರ್ಯವು ನಿನ್ನಿಚ್ಛೆಯಂತೇ ||ಆಹ|| ಮಿಕ್ಕಾದ ತತ್ವರಿಗೆ ತಕ್ಕ ಕಾರ್ಯವನಿತ್ತು ನಿ- ಯುಕ್ತರ ಮಾಡುವೆ ಹರಿಉಕ್ತಿಯ ಮೀರದೆ 3 ಇಭರಾಜವರದನ ಪ್ರೀಯ ನೀನೆ ಪ್ರಭುವಾಗಿರುವೆ ಸರ್ವಕಾಯದೊಳು ಶುಭಾಶುಭಂಗಳ ಕಾರ್ಯ ನಿತ್ಯ ನಿಬಿಡ ನಿನ್ನಿಂದಲೆ ಜೀಯಾ ||ಆಹ|| ಅಬುಜಾಂಡದೊಳಗೆಲ್ಲ ಪ್ರಬಲ ನಿನ್ನಯ ಶೌಂiÀರ್i ಅಬುಜಭವನ ಪದಪಡೆವ ಪ್ರಭುವೆ ನೀನು4 ಪ್ರಾಣಾದೇವ ನಿನ್ನಿಂದ ಪಂಚ- ಪ್ರಾಣಾದಿರೂಪಗಳಿಂದ ತನು ಸ್ಥಾನದಿಭೇದಗಳಿಂದ ಜಡ ಪ್ರಾಣಭೂತ ಪಂಚದಿಂದಾ ||ಆಹ|| ಕಾಣಿಸಿಕೊಳ್ಳದೆ ಜಾಣತನದಿ ಪುಣ್ಯ ಪಾಪ ಜೀವಗೆ ಉಣಿಸುತಲಿರುವೆಯೊ5 ಪಾಯೂಪಸ್ಥದಿ ಅಪಾನ ಮುಖ ನಾಸಿಕ ಶ್ರೋತ್ರ ಪ್ರಾಣಾ-ನಾಭಿ ಅಯನವಾಗಿರುವ ಸಮಾನಾ ಇನ್ನು ಪಯಣವು ನಾಡಿಯೊಳು ವ್ಯಾನ ||ಆಹ|| ಒಯ್ದುಕೊಡುವ ಫಲಕಾರ್ಯವೆಲ್ಲ ಉದಾನನಿಂದ ಕೂಡಿ ಜೀಯ ನೀ ನಡೆಸೂವೆ 6 ಸೃಷ್ಟಿಯೊಳು ನೀ ಪ್ರವಿಷ್ಟನಾಗಿ ಸೃಷ್ಟಿಕಾರ್ಯದೊಳು ಚೇಷ್ಟಾ ಮಾಡಿ ಸೃಷ್ಟೀಶನೊಲಿಸಿ ಪ್ರತಿಷ್ಠಾ ತತ್ವ ಶ್ರೇಷ್ಠರೆಲ್ಲರ ಮನೋಭೀಷ್ಠ ||ಆಹ|| ತುಷ್ಟಿಪಡಿಸಿ ಪರಮೇಷ್ಠಿಯಾಗುವೆ ಕಪಿ ಶ್ರೇಷ್ಠನೆ ಉರಗಾದ್ರಿವಾಸವಿಠಲನದೂತ 7
--------------
ಉರಗಾದ್ರಿವಾಸವಿಠಲದಾಸರು
ಪಂಚಮಿಯ ದಿನ ವಿಭವ ನಮ್ಮ ಶ್ರೀನಿವಾಸನ ಮಹಾತ್ಮವ ಮಾನಿನಿ ರನ್ನೆ ನೀ ಪೇಳೆ ಭಕ್ತಾ- ಧೀನದ ಚರಣದ ಲೀಲೆ ಭಾನು ಉದಯದಲಿ ವೀಣಾದಿ ಸು- ಗಾನ ವಾದ್ಯ ನಾನಾವಿಧ ರಭಸದಿ1 ಎತ್ತಲು ನೋಡಿದಡತ್ತ ಜನ- ಮೊತ್ತವಿಲಾಸವಿದೆತ್ತ ಚಿತ್ತದಿ ನಲಿನಲಿದಾಡಿ ತೋಷ- ವೆತ್ತಿರುವನು ಒಟ್ಟುಗೂಡಿ ಸುತ್ತುಮುತ್ತು ಒತ್ತೊತ್ತಿಲಿಹರು ವಿ- ಪ್ರೋತ್ತಮ ಶ್ರೀಹರಿಭಕ್ತರ ಮಯವಿದು2 ಚಾಮರ ಛತ್ರ ಸಿಗುರಿಯು ಜನ- ಸ್ತೋಮ ಪತಾಕೆ ತೋರಣವು ಹೇಮದ ಕಂಚುಕಿ ಈಟಿ ಗುಣ- ಧಾಮನ ಬಿರುದುಗಳ್ ಕೋಟಿ ಆ ಮಹಾಭೇರಿ ಪಟಹ ನಿಸ್ಸಾಳಕ ಸಾಮಗಾನ ಸಾಮ್ರಾಜ್ಯವೋಲಿಹುದು3 ಬಾಲರು ವೃದ್ಧ ಯೌವನರು\ಜನ- ಜಾಲವೆಲ್ಲರು ಕೂಡಿಹರು ಲೋಲ ಸ್ರೀಮುಂದ್ರಾಂಕಿತದಿ ಬಹು ವಿ- ಶಾಲ ದ್ವಾದಶನಾಮ ಮುದದಿ ಆಲಯದೊಳಗಿಹ ಬಾಲಕಿಯರು ಸಹ ಸಾಲಂಕೃತ ಸಮ್ಮೇಳದಿ ನಲಿವರು4 ಒಂದು ಭಾಗದಿ ವೇದಘೋಷ ಮ- ತ್ತೊಂದು ಭಾಗದಿ ಜನಘೋಷ ಇಂದಿನ ದಿನದತಿಚೋದ್ಯ ಏ- ನೆಂದು ವರ್ಣಿಸುವದಸಾಧ್ಯ ಚಂದಿರಮುಖಿ ಯಾರೆಂದೆನಗುಸುರೆಲೆ ಮಂದರಧರ ಗೋವಿಂದನ ಮಹಿಮೆಯ5 ಊರ್ವಶಿ : ಕೇಳಿದ್ಯಾ ನಳಿನಾಕ್ಷಿ ಶ್ರೀಹರಿಲೀಲೆ ಪೇಳಲೇನದಾ ಮೂರ್ಲೋಕದೊಳಗೀ ವಿ- ಶಾಲವ ನಾ ಕಾಣೆಪ. ಸೋಜಿಗ ಸೌಭಾಗ್ಯ ಸಂಪದಕಿದು ಬೀಜ ಕಾಣೆಲೆ ರಾಜೀವನಾಭನ ಪೂಜಾವಿನೋದದಿ ರಾಜವದನೆ ವನಭೋಜನದಿಂದಿನ1 ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹ ಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹ ರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು2 ನೂತನವೆಂದು ನೀ ಪೇಳುವಿ ಚಂದಿರ ಮುಖಿ ಜನಸಂದಣಿಗಳು ಮಹಾ ಮಂದಿ ಓಲೈಸುವರಿಂದು ಮುಕುಂದನ3 ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆಪ. ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆ ಕಾಣುವ ಯೋಗಭೋಗ1 ಎನಗತಿ ಮನವು ನಿನಗತಿ ಛಲವು ಜನುಮಾಂತರ ಪುಣ್ಯವೈಸೆ ನೀ2 ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾ ಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾಪ. ಅನವರತದಿಂದ ಬರುವ ಪುರುಷನಲ್ಲ ಮೀನಕೇತನ ಶತರೂಪ ಕಾಣೆ1 ನೂತನ ಪುರುಷನಿವನ್ಯಾರೆಂದರಿಯೆನಮ್ಮಾ ಶಾತಕುಂಭದ ಮಂಟಪವೇರಿ ಬರುವನಮ್ಮಾ2 ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾ ತರತರ ರತ್ನವರದ ಬಾಯೊಳಿರುವದಮ್ಮಾ3 ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾ ಪರಮ ಪುರುಷನಂತೆ ತೋರುವನು ಅಮ್ಮಾ4 ಬಾಲಾರ್ಕನಂತೆ ಮುಖ ಪ್ರಜ್ವಲಿಪುದು ನೀಲಮಾಣಿಕ್ಯ ಕಾಂತಿಯ ಸೋಲಿಪುದು5 ತೋರಲರಿಯೆ ಕಾಲಿಗೆರಗುವೆನು ಪೇಳಬೇಕು ಸಖಿಯೆ6 ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾ ಬೆರಳೊಳು ವಜ್ರದುಂಗುರವನಿಟ್ಟವನಮ್ಮಾ7 ವರರತ್ನಖಚಿತದಾಭರಣದಿಂದ ಮೆರೆವ ಚರಣ ಸರೋಜದೊಳು ರೇಖೆಯಿಂ ಶೋಭಿಸುವ 8 ವಲ್ಲಭೆಯರ ಸಹಿತುಲ್ಲಾಸದಿ ಬರುವ ಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ9 ಬಲ್ಲಿದ ಪುರುಷನಿವನೆಲ್ಲಿಂದ ಬಂದ ಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ10 ಊರ್ವಶಿ : ನೋಡು ನಿತ್ಯಾನಂದಕರನ ಮೂಡಗಿರಿಯಿಂದೋಡಿ ಬಂದನ ನೋಡೆಪ. ಛಪ್ಪನ್ನೈವತ್ತಾರು ದೇಶ ಸರ್ಪಶೈಲ ರಾಜವಾಸ ಚಪ್ಪರ ಶ್ರೀ ಶ್ರೀನಿವಾಸ1 ತಿರುಗುತ್ತಿಪ್ಪಾ ತಿರುಮಲೇಶ ಶರಣ ರಾಮನ ಭಕ್ತಿಪಾಶ ದುರುಳಿನಲಿ ನಿಂದಿರ್ಪಶ್ರೀಶ ತರಿಸುವನು ಕಾಣಿಕೆ ವಿಲಾಸ2 ಪಟ್ಟದರಸನಾದ ದೇವ ಸೃಷ್ಟಿಯಾಳುವಜಾನುಭಾವ ದೃಷ್ಟಿಗೋಚರವಾಗಿ ಕಾಯ್ವ ಇಷ್ಟವೆಲ್ಲವ ಸಲಿಸಿ ಕೊಡುವ 3 ಊರ್ವಶಿ : ಬಂದ ಗೋವಿಂದ ಸಾನಂದದಿ ಭಕ್ತರ ವೃಂದ ನೆರಹಿ ವನಕೆ ಅಂದಣವೇರಿ ಮುಕುಂದನೊಲವಿನಲಿ ಕುಂದಣ ಮಂಟಪವೇರಿ ಮತ್ತೊಬ್ಬನು ಸಂದರುಶನವಂ ನೀಡುತ ಯಿಬ್ಬರು ಒಂದಾಗುತ್ತಾನಂದವ ಬೀರುತ್ತ 1 ಅಕ್ಕ ನೀ ನೋಡು ಬಹುಮಾನದಿ ಸಿಕ್ಕಿದಿ ಬಿರುದು ಪೊತ್ತಾ ಉಕ್ಕುವದತಿ ತೋಷ ಸ್ತುತಿಪಾಠಕ ಜನಗಳ ಮಿಕ್ಕಿ ನೊಡುವ ನೋಟಕೆ ಮನಸಿನೊಳು ಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2 ಪವಿತ್ರ ನಿಶಾನಿಧಾರಣಾ ಪವಿತ್ರಗೈಯುವ ಕಾರಣ ಮಿತ್ರಮಂಡಳವನು ಮೀರಿ ಪೊಳೆವುತಿಹ ರತ್ನಖಚಿತ ಮಂಟಪದಲಿ ಮಂಡಿಸಿ ಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವ ಕೀರ್ತಿಯ ಧರಿಸಿ ಜಗತ್ರಯಪಾವನ 3 ನಿಸ್ಸಾಳ ಪಟಹ ಭೂರಿ ಜನ ಜಾಲ ಕೂಡಿರುವ ಮೇಳವಿಸುತ್ತನುಕೂಲಿಸಿ ಬಹು ಬಿರು ದಾಳಿಗೆ ಸಂಭ್ರಮದೇಳಿಗೆಯಿಂದಲಿ ಕೋಲು ಪಿಡಿದು ಓಹೋಯೆಂಬಂಥ ವಿ- ಶಾಲ ಭಕ್ತರ ಮೇಲು ಸಂತೋಷದಿ 4 ದೇಶದೇಶದ ಜನರು ನಾನಾ ವಿಧ &ಟಿ
--------------
ತುಪಾಕಿ ವೆಂಕಟರಮಣಾಚಾರ್ಯ
ಪಂಚರೂಪಾತ್ಮಕ ನೀನೇ ಈ ಪಾಂಚಭೌತಿಕ ದೇಹದಿ ಸಂಚರಿಸೂವೆ ಪ ಸ್ಥೂಲರಸವನು ಇತ್ತು ಸಲಹೂವೆ ಅ.ಪ ರಸಪಾಯುಆಪಜಿಹೆÀ್ವನಾಸಿಕ ಗಂಧ ಪೃಥುವಿ ಉಪಸ್ಥಯುಕ್ತ ಕೋಶವಹುದಯ್ಯ ಆ ಶನೈಶ್ವರ ವರುಣ ಭೂದೇವಿಯಿಂದಲಿ ಸೇವಿಪ ಸತತ ಲೇಶವಾದರು ಬಿಡದೆ ತಾ ಖಂಡಾಖಂಡ ರೂಪದಿ ದೇಶ ಕಾಲಗಳಲ್ಲಿ ನೆಲೆಸಿ ಕೋಶಕಾರ್ಯವ ಗೈವೆ ಪ್ರಾಣನಿಂ ಉಭಯಪಕ್ಷಗಳು ಧೇನಿಸುತಿಹರು ಭುಜದ್ವಯ ಶ್ರೀಶ ನಿನ್ನಯ ಮಧ್ಯದೇಶವೆ ಈ ಶರೀರದÀ ಮಧ್ಯಭಾಗವು ಪ್ರಸಿದ್ಧ ಪುರುಷನೆ ನಿನ್ನಿಂದೋಷಧಿಗಳು ಓಷಧಿಗಳಿಂದನ್ನವೆಲ್ಲವು ಪೋಷಣೆ ಎಲ್ಲ ಅನ್ನದಿಂದಲೆ ದೋಷದೂರ ನೀನನ್ನದನ್ನದಾ1 ಪಾಣಿತ್ವಗ್ವಾಯು ಸ್ಪರ್ಶ ನೇತ್ರ ತೇಜ ಪಾದರೂಪಗಳಿಂದಲಿ ಕಾಣಿಸಿಕೊಳ್ಳುವುದು ಪ್ರಾಣಮಯದ ಕೋಶವು ತಾನಲ್ಲಿಹ ಪ್ರದ್ಯುಮ್ನ ಮೂರುತಿ ಸತತ-ಗಣಪತಿ ಅಗ್ನಿ ವಾಯು ಮರೀಚಿಗಳೆಲ್ಲರೂ ಸನ್ನುತಿಪರೋ ಪ್ರಾಣಾಧಾರನಾಗಿಹೆ ತ್ರಾಣ ನಿನ್ನಿಂದ ಸ್ಥೂಲದೇಹಕೆ ಅ- ಪಾನ ನಿಂದೊಡಗೂಡಿ ನೆಲೆಸಿಹೆ ಪ್ರಾಣಪತಿ ಪ್ರದ್ಯುಮ್ನ ನಿನ್ನಯ ಶಿರದ ಸ್ಥಾನವು ಪ್ರಾಣನಲ್ಲಿಹುದೋ ದಕ್ಷಿಣೋತ್ತರಪಕ್ಷವಿರುತಿಹುದೋ ಕಾಣಿಪುದು ಮಧ್ಯದೇಶವು ಆಗಸದೊಳು ಉ- ದಾನ ವಾಯುವಿನಲ್ಲಿ ಇರುತಿಹುದೋ ಧೇನಿಪೋರು ಪೃಥುವಿಯು ಪಾದವೆಂಬುದು ಸ- ಮಾನ ವಾಯುವಿನಲಿ ಇರುತಿಹುದು ಜ್ಞಾನ ರೂಪದಿ ಈ ಪರಿಯಲಿ ರೂಪವಿರುತಿಹುದು ಪ್ರಾಣಿಗಳಿಗಾಯುಷ್ಯವಿತ್ತು ಪ್ರಾಣಪ್ರೇರಕನಾಗಿ ಪೊರೆಯುವೆ ಪ್ರಾಣಧಾರಣೆ ನಿನ್ನದಯ್ಯಾ ಪ್ರಾಣನುತ ಪ್ರದ್ಯುಮ್ನಮೂರುತೆ2 ತತ್ವಯುತವಾಕ್ಯೋಕ್ತಾಗಸ ಶಬ್ದ ಈತೆರ ಯುಕ್ತವಾದೀ ಕೋಶವು ಇದಕೆ ಖ್ಯಾತವಾದ ಮನೋಮಯ ಕೋಶದೊಳು ಸತತ ರುದ್ರೇಂದ್ರಾದಿ ಸುರರೆಲ್ಲರು ವಂದಿಸುತಿಹರು ಖ್ಯಾತ ಸಂಕÀರುಷಣನೆ ಖಂಡಾಖಂಡರೂಪದಿ ನೆಲೆಸಿ ಕೋಶದಿ ಪ್ರೀತಿಯಿಂದಲಿ ವ್ಯಾನನೊಡಗೂಡಿ ನೀನೆ ಯಜ್ಞಭುಕುವು ಯಜುರ್ವೇದವೆ ನಿನ್ನ ಶಿರವಹುದು ಶ್ರುತಿಗಳೊಳು ಭುಜದ್ವಯಂಗಳಾಗಿಹುದು ನುತಿಪ ಪಾಂಚರಾತ್ರಾಗಮ ವೆಂಬುದೆ ನಾಮಕಂಗಳೆನಿಪುದೆ ನಿನ್ನ ಪಾದದ್ವಯಂಗಳು ಖ್ಯಾತ ನಿನ್ನಯ ರೂಪ ಮಹಿಮೆಯ ತಿಳಿಯಲಸದಳವೋ ಜಾತರಹಿತ ನಿನ್ನ ವರ್ಣಿಸೆ ಮಾತು ಮನಸಿಗೆ ನಿಲುಕದಂತಿಹೆ ಖ್ಯಾತ ನೀನಹುದೊ ಮನೋಮಯ ಪ್ರೀತಿಯಿಂದಲಿ ಸಲಹೋ ಎನ್ನನು 3 ಮಹತ್ತತ್ವ ಪ್ರಾಚುರ್ಯದಿಂದಿಹ ಈ ವಿಜ್ಞಾನಮಯಕೋಶದಿ ಶ್ರೀಹರಿ ವಾಸುದೇವಾ ನೀನೆ ನೆಲೆಸಿಹೆ ಅಹರಹ ಬ್ರಹ್ಮ ವಾಯುಗಳಿಂದಲಿ ಮಹಾಪೂಜೆ ವಂದನೆಗೊಳುತಿಹೆ- ಖಂಡಾಖಂಡದಿ ತುಂಬಿಹೆ ದೇಹದೊಳು ಉದಾನನಿಂದೊಡಗೂಡಿ ಸಹಾಯನಾಗಿಹೆ ಜೀವಿಗಳಿಗೆ ಬಾಹ ದುರಿತದಿಂ ಪಾರುಗಾಣಿಸೋ ದೇಹ ದೇಹಿಯ ರೂಪ ನೀ ಸ್ವಗತಭೇದವಿವರ್ಜಿತನೆ ಶಿರವೆ ನಿನ್ನಯ ಶ್ರದ್ಧವೆಂಬೊರು ಮಹಾ ಭುಜಂಗಳೆ ಋತುಸತ್ ಎಂದೆನಿಸಿಕೊಳುತಿಹುದು ಇಹುದು ಮಧ್ಯದೇಶವೆ ಜಗಕೆ ಆಶ್ರಯವೆನಿಪ ಯೋಗಾವು ಮಹವೆಂಬುದೆ ಪಾದವೆನಿಸಿತು ಸೂರ್ಯತೇಜದೊಳು ಮಹಾ ಪ್ರಳಯದಿ ಉದರದೊಳಿಟ್ಟು ಇಹಪರದಿ ರಕ್ಷಿಸುವೆ ದೇವ4 ನಂದಮಯ ಕೋಶವು ತನ್ಮಯ ಅವ್ಯಕ್ತತತ್ವದಿಂದಲಿ ನನ್ನೀಯಿಂದ ಆನಂದಮಯ ಮೂರುತಿ ನಾರಾಯಣನೀ ಕೋಶಾಂತರ್ಗತನು ನೀನೆ ಸಮಾನನೊಡಗೂಡಿಹೆ ಅನಾದಿಲಿಂಗವ ಭಂಗಗೈಸುವಳೋ ಘನಮಹಿಮ ನಿನ್ನ ಅನುಸರಿಸಿ ತಾನಿಪ್ಪಳೋ ಛಿನ್ನ ಭಕ್ತರಿಗೊಲಿಯಳೋ ಅವಿ ಚ್ಛಿನ್ನ ಭಕ್ತರ ಜನನಿ ಎನಿಪಳೋ ಪ್ರಾಪ್ಯನು ಎಂದು ಪ್ರಿಯವೆಂದು ಘನ ದಕ್ಷಿಣೋತ್ತರ ಪಕ್ಷವೆನಿಪೋವು ತನ್ನ ಮಧ್ಯದ ಪ್ರದೇಶವೆಂಬೋದು ಜ್ಞಾನ ಸುಖ ಆನಂದ ಪಾದಗಳು ಬ್ರಹ್ಮನಾಮಕ ವಾಯುವೆಂಬುವರೋ ಆನಂದಮೂರುತಿ ಮಹಿಮೆ ಎಂತಿಹುದೋ ಭಿನ್ನನಾಮದಿ ಕರೆಸುತಲಿ ತಾ ಅ ಭಿನ್ನನಾಗಿ ಚರಿಸಿ ಕೋಶದಿ ಘನಕಾರ್ಯವ ನಡೆಸುತಿರ್ಪೆ ಪನ್ನಗಾದ್ರಿ ಶ್ರೀ ವೇಂಕಟೇಶನೆ 5
--------------
ಉರಗಾದ್ರಿವಾಸವಿಠಲದಾಸರು
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪತಿ ಪಿತ | ಅರವಿನುತಗೆ (ಮಾರುತನುತಗೆ) 1 ಕಾಲಜನನುಜಗ ಕಾಕಾದಲಯ ಕಾಲದುರಿತರಿದ ಕಾಲಕಾಲಗ 2 ಕಾಲಿಂದಿ ನದಿ ಯೊಳು ಕಾಳಿಯಸಿರದಲಿ ಕಾಲಲಿ ಕುಣಿದ ಲೋಕಾವಳಿ ವ್ಯಾಪಕಗ 3 ಕಾಳರೂಪದಿ ಗಜಕಾಲ್ವಿಡಿದ ಮಕರಿ ಕಾಲ ಜಲದ ಭಗ 4 ಪತಿ ಜನಗ ತಂದೆ ಮಹಿಪತಿನಂದನ ಪಾಲ ಮುಕುಂದ ಶ್ರೀಹರಿಗೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪತಿ ವಿಠಲ | ಉದ್ದರಿಸೊ ಇವಳ ಪ ಮೋದದಾಯಕನಾಗಿ | ಶ್ರೀದ ಶ್ರೀಹರಿಯೇ ಅ.ಪ. ದಾಸರಾಯರ ಕರುಣ | ವಾಶ್ರಯಿಸಿ ದಿನದಿನದಿಲೇಸು ಕೊಂಡಾಡುತಲಿ | ಮೇಶ ದಾಸರನೂಭಾಸುರ ಸುಗಾನ ಉ | ಲ್ಲಾಸದಲಿ ಮೈಮರೆದುಕೇಶವನ ಗುಣವನಧಿ | ಈಸುವಂತೆಸಗೋ 1 ವ್ಯಾಜ ಕರುಣೀಮಾಜದಲೆ ವೆಂಕಟನ | ನೈಜ ರೂಪವ ಕಂಡವ್ಯಾಜದಲ್ಲಿಂಕಿತಳು | ವಾಜಿ ಮುಖ ಹರಿಯೇ 2 ವಲ್ಲಭೆಯು ಶ್ರೀ ತುಳಸಿ | ಚೆಲ್ವಶಿಲೆ ಸುತ್ತುತಲಿನಲ್ಲ ಹರಿಪರಿ ಪೂರ್ಣ | ಎಲ್ಲೆಡೆಯಲೆಂಬಾಸೊಲ್ಲನಿವಳಿಗೆ ತೋರಿ | ಸಲ್ಲಿಸಿಹ ಹರಿಸೇವೆಬಲ್ಲವರ ಬಲ್ಲರೋ | ಘುಲ್ಲಕರಿಗಲ್ಲಾ 3 ಹರಿಗುರೂ ಸದ್ಭಕ್ತಿ | ಗುರು ಹಿರಿಯರ ಸೇವೆ ಕರುಣಿಸುತ ಕನ್ಯೆಯನು | ಪೊರೆಯುವುದು ಸತತಗಿರಿಜೆ ದರ್ಶನ ಫಲಕೆ | ಸರುವ ಮಂಗಳವಿತ್ತುನಿರುತ ಸಲಹೆಂದಿವಳ | ಪ್ರಾರ್ಥಿಸುವೆ ಹರಿಯೇ 4 ಮಧ್ವರಾಯರ ಮತದಿ | ಶುದ್ಧ ಬುಧಿಯನಿತ್ತುಮಧ್ವೇಶ ಹರಿಪಾದ | ಹೃದ್ಗುಹದಿಕಾಂಬಅಧ್ಯಾನಲ್ಲಿವಳ | ಬದ್ಧಳನೆ ಮಾಡಿ ಪೊರೆಮಧ್ವಾಂರಾತ್ಮ ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಪದವ ಕಲಿಸೆನಗೆ ಶ್ರೀಹರಿ ಪದವ ಕಲಿಸೆನಗೆ ಪ ಪದವ ಕಲಿಸಯ್ಯ ಪದುಮನಾಭ ಪದದ ಮಹಿಮೆಯೆಂಬ ಸುಧೆಯು ಭರಿತವಾದ ಅ.ಪ ನಾಗಶಾಯಿಯ ವಿಮಲನಾಮವೆಂಬ ರಾಗಕಲಿಸು ಮಿಗಿಲು ಭೋಗ ಭಾಗ್ಯದಾಸೆ ನೀಗಿಸಿ ಈ ಭವ ರೋಗ ಗೆಲಿದು ತಲೆದೂಗಿ ನಲಿಯುವಂಥ 1 ದೋಷದೂರನ ಚರಿತರಸದಿಂ ಸೂಸಿ ಹರಿವ ಕವಿತ ಶ್ಲೇಷ ನೀಗಿಸಿ ಪ್ರಪಂಚ್ವಾಸನದುಳಕಿಸಿ ಸಾಸಿರನಾಮ ಹುಸಿ ತಾಳದಿ ಪಾಡುವಂಥ 2 ಯತಿತತಿಗಳು ಪೊಗಳ್ವ ಬಿಡದತಿ ಮತಿಮಾನ್ಯರು ಪಾಡ್ವ ರತಿಪತಿಪಿತ ಶ್ರೀರಾಮ ನಿನ್ನಡಿಭ ಕ್ತ್ಯತಿಗಣಕೂಡಿದ ಅತಿಶಯಾನಂದಕರ 3
--------------
ರಾಮದಾಸರು
ಪನ್ನಗಾಚಲವಾಸ-ಪ್ರಪÀನ್ನರ ಪಾಲಕ ಶ್ರೀಶಾ-ಸರ್ವೇಶಾ ಕನಕ ರತುನಮಯ ಮುಕುಟಾಧಾರ ಘನ ನವಮಣಿಮಯ ಕುಂಡಲಧರ ಇನಕೋಟಿಪ್ರಭಕೌಸ್ತುಭಹಾರ ಮನಸಿಜಧನುಸಮ ಭ್ರೂಸಮಾಕಾರ ಘನ ಚಂಪಕಗೆಣೆ ನಾಸ ಗಂಭೀರ ವನಜದಳಾಯತೇಕ್ಷಣಾಕಾರ ವನರುಹಾ ಘನ ಸ್ಮಿತ ಸುಗಂಭೀರ ಮುನಿಮಾನಸಮಂದಿರ ಸುವಿಹಾರ ಅಪ್ರಾಕೃತ ಶರೀರ ತನುಮನ ವಚನದಿ ಅನವರತದಿ ಕಿನ್ನರ ಸುರಮುನಿಗಣ ತನುಸದನದಿ ಹೃದ್ವನಜದಿ ಘನಪದ ವನರುಹ ಧೇನಿಸಿ ದೃಢಸ್ನೇಹದಿಂದಿರುವ ಕರ್ಮ ಒಪ್ಪಿಸುವ ಘನಮೋದದಿಂದಲಿರುವಾ ನುತಿಸುವಾ ಬೇಡುವಾ ಜನುಮ ಸ್ಥಿತಿ ಮೃತಿಗೆ ಬೆದರದಿರುವಾ ನಿನ್ನವರೊಳು ತನ್ನಿರವ ತೋರಿಸುಹ ಘನ್ನಪಾತಕವ ಕಳೆದುನ್ನತ ಸಾಧನವನ್ನೆ ಕೊಟ್ಟು ನನ್ನಿಯಿಂದಲೆ ಪೊರೆವಾ ತನ್ನಧಾಮದಿ ಕಾಪಿಡುವಾ 1 ಉತ್ತಮ ಮೌಕ್ತಿಕ ಸರಿಗೆ ನ್ಯಾವಳ ಒತ್ತೊತ್ತಾಗಿಹ ತ್ರಿವಳಿಯ ಮಾಲಾ ರತುನ ಪದಕದಾ ಸರದ ವಿಹಾರ ಅತಿಮನೋಹರ ಹೃದಯ ವಿಶಾಲ ಸಲೆಸಿರಿವತ್ಸ ವಕ್ಷದಿ ಲೋಲ ಸುತ್ತಿದ ಭಾಪುರಿ ಭುಜದ ವಿಸ್ತಾರ ಸಿತಾನಿಸಿತ ಉಪವೀತದಿ ಲೊಲ ದಾತಾಪಿತ ತವನಾಭಿಯ ಕಮಲ ಉತ್ತಮಕಮಲ ಕಲ್ಹಾರದ ಮಾಲ ಹಸ್ತಾಭರಣದಿ ಮೆರೆಯುತ ಪೊತ್ತಿಹ ಚಕ್ರಾಧ್ಯಾಯುಧನೆತ್ತಿ ದುರುಳೊನ್ಮತ್ತರ ಸದೆದು ತ್ವದ್ಭಕ್ತರ ಮನೋರಥ ಪೂರ್ತಿಗೈವ ಪುರುಷೋತ್ತಮ ಭವಭಯಹಾರೀ ನಿತ್ಯನೂತನವಿಹಾರೀ-ಪ್ರಣವಸ್ತನೆ ನೀ ಕಂಸಾರೀ ಪೃಥಕ್ ಪೃಥಕ್ ತದಾಕಾರೀ-ನರಹರೀ-ಶ್ರೀಹರೀ ಹೃತ್ಪುಷ್ಕರದಳ ವಿಹಾರೀ ಭಕ್ತವತ್ಸಲ ಅವ್ಯಕ್ತನೆ ಜಗದುತ್ಪತ್ತಿ ಸ್ಥಿತಿಲಯ ಕರ್ತ ವ್ಯಾಪ್ತ ನಿರ್ಲಿಪ್ತ ಸತ್ಯಸು- ಹೃತ್ತಮ ನೀನೆ ಮುರಾರೀ ಉತ್ತಮ ಸಮರಹಿತ ಶೌರೀ 2 ಪಕ್ಷಿಧ್ವಜ ಸುಖಭರಿತ ವಿಹಾರ ಕುಕ್ಷಿಯೊಳು ಅಬ್ಜಾಂಡಕೋಟಿಗಾಧಾರ ತ್ರಕ್ಷಾದ್ಯಮರನುತ ಗುಣಾಧಾರ ಸಾಕ್ಷಿಮೂರುತಿ ಸರ್ವಕಾಲಾಧಾರ ವಕ್ಷದೊಳು ಶ್ರೀವತ್ಸ ಗಂಭೀರಾ ಮು- ಮುಕ್ಷುಗಳೊಡೆಯನೆ ವೈಕುಂಠಾಗಾರ ಅಕ್ಷರಕ್ಷರರವಿಲಕ್ಷಣಧೀರ ರಕ್ಷಕ ಭಕುತಜನರುದ್ಧಾರ ದಕ್ಷಿಣಾಕ್ಷಿಕಂಠ ಹೃದಯವಿಹಾರ ರಕ್ಷಕ ತ್ರಿಜಗದಾಧ್ಯಕ್ಷ ಕರುಣಕಟಾಕ್ಷದಿ ಈ ಜಗ ವೃಕ್ಷದೊಳು ನಿರಪೇಕ್ಷನಾಗಿ ಫÀಲಭಕ್ಷಿಪ ಜೀವರ ಲಕ್ಷಕೋಟಿ ನೀ ಸಾಕ್ಷಿಯಾಗಿಹೆ ನೀ ರಕ್ಷ ಕಮಲಾಕ್ಷ ಪಕ್ಷಿವಾಹನನೆ ನಿನ್ನ ಪರೋಕ್ಷಾಪೇಕ್ಷಿಗಳಿಗೆ ನಿನ್ನ ಕ- ಟಾಕ್ಷವೀಕ್ಷಣದಿಂದ ಪ್ರತ್ಯಕ್ಷ ರಿಪುಶಿಕ್ಷ ಅಧ್ಯಕ್ಷ ಸಾಕ್ಷಿಯಾಗಿಹೆ ನೀ ರಕ್ಷಾ ಮೋಕ್ಷ ಜೀವರಿಗಪರೋಕ್ಷವನಿತ್ತು ನಿ- ಷ್ಪಕ್ಷನಾಗಿ ಜಗರಕ್ಷಿಸುತ್ತ ಸುರಪ ದಕ್ಷ ಚತು- ರಾಕ್ಷರಸ್ಥ-ನರಹರ್ಯಕ್ಷ ಶರಣಜನರ ಕಲ್ಪವೃಕ್ಷ3 ಪಟುತರಾಂಗ ಸುಕಟಿಯ ವಿಸ್ತಾರ ತೊಟ್ಟಿಹÀರತುನದ ಪಟ್ಟವಿಹಾರ ಉಟ್ಟಿಹ ಪಟ್ಟೆ ಪೀತಾಂಬರ ಧಾರಾ ಬಟ್ಟ ಜಾನುದ್ವಯ ಜಂಘಾಶೂರ ಇಟ್ಟಿಹ ಸಾಲಿಗ್ರಾಮದ ಹಾರ ದಟ್ಟವಾಗಿಹ ಕಾಲಂದಿಗೆಯ ವಿಹಾರ ಇಟ್ಟಿಹ ಬೆರಳಲಿ ರತ್ನದುಂಗುರ ಶ್ರೇಷ್ಟಪದದಿ ಧ್ವಜಚಿಹ್ನಾಕಾರ ದಿಟ್ಟಿ ನಖಾಗ್ರದಿ ತಟಿತ ಪ್ರಭಾಕರ ಪಟುತರ ಕರಪಾದ ಚಟುಲರೂಪ ಮನ- ತಟದಿ ಇಟ್ಟು ಲವತೃಟಿಯು ಬಿಡದೆ ಸುರ- ನಿತ್ಯ ಕರಪುಟದಿ ನಮಿಸಿ ಉತ್ಕಟದಿ ಗುಣಗಳ ಪಠಣದಿಂದಿರೆ ಮುದದಿ ಪಟುತರ ಭಕುತಿಯ ಭರದೀ ನಟಿಸುತ ತನು ಮರೆದಾತುರದಿ ಉ- ತ್ಕಟದಲಿ ನುತಿಸುತ ಭರದೀ ನಟಿಸುವಾ ಸ್ಮರಿಸುವಾ ಭಕುತಜನರ ಕಂಟಕವಾ ಆ ಧಿಟರು ನೀತ ಭಟರಂದು ನಿಜ ಜಠರಾಲಯದಿ ಇಂ- ಬಿಟ್ಟು ಭಕುತರ ಕಟಕಪೊರೆದು ಭವಾಬ್ಧಿಯ ಕಂಟಕ ಜಗಶಿಕ್ಷಾ 4 ಸ್ವಗತಭೇದವಿವರ್ಜಿತಶೂನ್ಯ ನಿಗಮಾತೀತ ದೇವವರೇಣ್ಯ ಬಗೆಬಗೆ ಸ್ವರ ಶಬ್ದವಾಚ್ಯವರೇಣ್ಯ ಅಗಣಿತಗುಣಗಣಪೂರ್ಣ ಸಂಪೂರ್ಣ ಯೋಗಿಗಳ್ ಪೊಗಳುವ ಸವಿತೃವರೇಣ್ಯ ಬಗೆಗಾಣರೊ ಸಾಕಲ್ಯದಿ ನಿನ್ನ ತ್ರಿಗುಣ ವಿರಹಿತನಾಗಿಹನ್ನ ನಗಜಾಧವ ಪಿಕನುತಪಾವನ್ನ ದುರ್ಗಾ ಶ್ರೀ ಭೂದೇವಿಯರಮಣ ಯುಗ ಯುಗದೊಳು ಜಗಕಾರ್ಯದಿ ಧರ್ಮ ಪ್ರಘಟ- ನೆಗೋಸುಗ ಸ್ವಗತರೂಪ ತಾ ನೆರಹಿ ಕ್ರೂರ ಪಾ- ಪೌಘರ ಮಡುಹಿ ಜಗದೇಕ ವೀರ ಮಿಗೆ ಜನಿಸಿದೆ ಜಗದೀಶಾ ಸುಗುಣ ಸಾಕಾರ ಸರ್ವೋತ್ತಮ ಶ್ರೀಶಾ ಜಗಜ್ಜಾಲ ಲೀಲಾವಿಲಾಸ ಜಗವೆಲ್ಲಾ ಈಶಾವಾಸ್ಯ ಸೃಜಿಸಿ ನೆಲೆಸೀ ಸ್ವಪ್ರಯೋಜನ ರಹಿತನೆನಿಸೀ ಖಗವರೂಥÀ ಶ್ರೀ ವೇಂಕಟೇಶ ಪನ್ನಗಗಿರಿಯೊಳು ನೆಲೆಸಿ ಜೀವರ ಯೋಗ್ಯಸಾಧನೆ ಇತ್ತು ಮನೋಭೀ-ಷ್ಟವನ್ನೆ ಸಲಿಸಿ ಉರಗಾದ್ರಿವಾಸವಿಠಲನೆನಿಸೀ 5
--------------
ಉರಗಾದ್ರಿವಾಸವಿಠಲದಾಸರು
ಪನ್ನಗಾದ್ರಿವಿಠಲ | ನನ್ನೆಯಿಂ ಸಲಹೋ ಪ ಸನ್ನುತಿಸಿ ತವ ದಾಸ್ಯ | ಪ್ರಾರ್ಥಿಸುತ್ತಿಹಳಾ ಅ.ಪ. ಮೂರ್ತಿ | ಅನಘ ತವನಾಮವನುಗುಣಿಸಿ ಇತ್ತಿಹೆ ಹರಿಯೇ | ಮುನಿ ಮೌಳಿ ವರದಾ 1 ಭವವನದಿ ಉತ್ತರಿಸೆ | ಭುವನ ಪಾದವ ವೆನಿಪತವನಾಮ ಅಮೃತವ | ಸರ್ವದಾ ಸವಿಯೇ |ಹವಣಿಸೋ ಅಭಯಾದ್ರಿ ನಿವಸಿತ ಶ್ರೀಹರಿಯೇಧ್ರುವ ವರದ ಕರಿವರದ | ಪವನಾಂತರಾತ್ಮಾ 2 ಮುಕ್ತಿಗೇ ಸೋಪಾನ | ಸತ್ಯಗವನೆ ಕೊಟ್ಟುಭಕ್ತಿ ಸುಜ್ಞಾನಗಳು | ಮತ್ತೆ ವೈರಾಗ್ಯ |ಇತ್ತು ಇವಳನು ಪೊರೆಯೆ | ಪ್ರಾರ್ಥಿಸುವೆ ಶ್ರೀಹರಿಯೇ |ಉತ್ತಮೋತ್ತಮನೆ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಪಯಸಾಗರ ಶಯನನೆ ಭಜಿಪೆನು ನಿನ್ನ ಭವಸಾಗರದಾಟಿಸು ಶ್ರೀಹರಿ ಎನ್ನ ಪ. ಹಿಂದೆ ಮುಂದೆ ಗತಿ ನೀನೆಂದು ನಂಬಿರುವೆ ಇಂದಿರೆಯರಸನೆ ಎಂದಿಗಾದರು ಕಾಯೊ ತಂದೆ ಬಂದು ಎನ್ನ ಬಂಧನ ಬಿಡಿಸೊ 1 ಕರುಣಾಸಾಗರ ವರದಮೂರುತಿ ನಿನ್ನ ಸ್ಮರಣೆಯೆನಗೆ ನೀ ನಿರುತದಿ ನುಡಿಸು ಪರಮಪಾಮರನಿಗೆ ನಿನ್ನ ಚರಣವ ತೋರೊ 2 ಪುಟ್ಟಿಸಿದವನೀ ಕಷ್ಟ ಪಡಿಸುವುದು ಇಷ್ಟವೆ ನಿನಗದು ಕೃಷ್ಣಮೂರುತಿ ಸೃಷ್ಟೀಶ ಶ್ರೀ ಶ್ರೀನಿವಾಸ ದೊರೆಯೆ 3
--------------
ಸರಸ್ವತಿ ಬಾಯಿ
ಪರ ಉಪಕಾರವ ಮರೆಯದಿರೆಚ್ಚರಿಕೆ ಪ ಕೇಡು ನೆನೆಯ ಬೇಡ ನಂಬಿದವರ ಮೇಲೆ ಕೆಡುವೆ ನೀನೆಚ್ಚರಿಕೆ ಅ ಸಿರಿ ಇರುವಾಗ ಬಂಧುಬಳಗಗಳೆಚ್ಚರಿಕೆಹಾಳು ಸಂಸಾರಕ್ಕೆ ಹಲವರ ಬಾಯ್ಗಳ ಬಡಿಯದಿರೆಚ್ಚರಿಕೆ 1 ಮೂಢರ ಒಡನಾಡಿ ಮುಂದೆ ಕೆಡಲು ಬೇಡ ಮೋಸ ನೋಡೆಚ್ಚರಿಕೆನಾಡೊಳು ಸುಜನರ ನೋಡಿ ನಡೆ ಕಂಡ್ಯ ನಟನೆ ಬೇಡೆಚ್ಚರಿಕೆ 2 ಚೆನ್ನಾಗಿ ಬದುಕಿದೆ ಗಳಿಸಿದೆ ನಾನೆಂಬ ಹೆಮ್ಮೆ ಬೇಡೆಚ್ಚರಿಕೆನಿನ್ನಾಯು ಮುಗಿಯಲು ಯಮದೂತರು ಬಂದು ಎಳೆಯುವರೆಚ್ಚರಿಕೆ 3 ಹೆಣ್ಣು ಹೊನ್ನು ಮಣ್ಣು ನಿನ್ನನ್ನಗಲಿ ಹೋಗುವರೆಚ್ಚರಿಕೆಮುನ್ನ ಮಾಡಿದ ಪುಣ್ಯ ಬೆನ್ಹತ್ತಿ ಬರುವುದು ಮುಂದೆ ನೋಡೆಚ್ಚರಿಕೆ 4 ಒಬ್ಬರಂತೆಲ್ಲರ ನೋಡು, ಸತ್ಕರ್ಮದಿ ಉಬ್ಬಬೇಡೆಚ್ಚರಿಕೆಕಬ್ಬುಬಿಲ್ಲನ ಪಿತನ ಏಕಾಂತ ಭಾವದಿ ನೆರೆನಂಬು ಎಚ್ಚರಿಕೆ 5 ತಿಂದೋಡಿ ಬಂಧುಬಳಗ ತಪ್ಪಿಸಿಕೊಂಬರೆಂದು ನೋಡೆಚ್ಚರಿಕೆಎಂದೆಂದು ಅಗಲದ ಬಂಧು ಶ್ರೀಹರಿ ನಮಗೆಂದು ನೋಡೆಚ್ಚರಿಕೆ 6 ಕಾಲನ ದೂತರು ಯಾವಾಗ ಎಳೆವರೊ ಕಾಣದು ಎಚ್ಚರಿಕೆಬೇಲೂರ ಪುರವಾಸ ನೆಲೆಯಾದಿಕೇಶವನಾಳಾಗು ಎಚ್ಚರಿಕೆ 7
--------------
ಕನಕದಾಸ
ಪರಬೊಮ್ಮನ ಧ್ಯಾನಿಸು ಕಂಡ್ಯಾ ಸೋಹಂ ಎನುತಿರಕಂಡ್ಯಾ ಪ ಒಂದು ನಿಮಿಷ ಸುಖವಿಲ್ಲ ವಿಧಿ ಏಳೇಳೆಂದು ಎಳೆವರಲ್ಲ ಗೋವಿಂದನೆ ತಾ ಬಲ್ಲ 1 ಯೋನಿಯೊಳಗೆ ಜನಿಸಿ ನಾನದನೆಲ್ಲವ ನುಳಿದು ಈಗಳು ನರಮಾನವನೆಂದೆನಿಸಿ ಏನೋ ಪುಣ್ಯದಿ ಪುಟ್ಟಿದೆ ನಿಲ್ಲಿ ನಿಧಾನದಿ ಸಂಚರಿಸಿ ಆನಂದ ಮಯನೆನಿಸಿ 2 ಎಲ್ಲಾ ಜನ್ಮದೊಳ್ಳಿತು ನೀನಿದರಲ್ಲಿ ಸಾಧಿಸುಗತಿಯಾ ಹೊಲ್ಲದ ತನುವಿದ ನಂಬಿ ನೀ ಕೆಡದಿರು ಪೊಳ್ಳೆ ನಿನಗೆ ತಿಳಿಯ ಬಲ್ಲಡೆ ಜಿಹ್ವೆಯೊಳಗೆ ನೀ ನಿರಂತರ ಸೊಲ್ಲಿಸು ಶ್ರೀಹರಿಯ ಲಕ್ಷ್ಮೀನಲ್ಲನ ಪೋಗು ಮರೆಯ 3
--------------
ಕವಿ ಪರಮದೇವದಾಸರು