ಒಟ್ಟು 1275 ಕಡೆಗಳಲ್ಲಿ , 106 ದಾಸರು , 1055 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾ ಕಾಯುತಿದ್ದ ಕೃಷ್ಣನು ಗೋಪಾಲರನೂಗೋಕುಲದಲ್ಲಿ ಗೂಢನೂ ಪುೀಕುಂಭಿನಿಯೊಳಗಿರುತಿಹ ದುಷ್ಟರನೂಕುವ ಬಿಲದಲಿ ಅನುಪಮ ಧೀರಾ ಅ.ಪಅಸಿತ ಪಕ್ಷವು ಬಂದುದೂ ಮಾಸಗಳೊಳುಎಸೆವೇಕಾದಶಿಯೆಂಬುದು ಬರಲು ಅಂದುಬಸವಾಸುರಾನಾ ಬಡಿದು ತಾನಂದು ವ್ರಜದಿ ವಸುಧೇಶ ನಿದ್ದನೊಲಿದು ಅಸುರನು ಅಳಿಯಲು ಆ ವ್ರಜವುಳಿಯಲು ಹಸುಗಳು ಹೆಚ್ಚಲು ಹರಿ ತಾನಲಿಯಲು ವಸಗೆವ್ರಜದೊಳಗೆ ಬಹುಮಸಗೆ ಹೆಸರಾಗೆ 1ದ್ವಾದಶೀ ದಿವಸಾದಲ್ಲಿ ಉದಯಕಾಲವಾದುದು ''ತದಲ್ಲಿ ಶ್ರೀಕೃಷ್ಣನಿಗೆಬೋಧವಾಗಲು ಬೇಗದಲಿ ಬಾಲರು ಸಹಾ ಮಾಧವಾ ಮುದದಿಂದಲಿಕಾದಿರೆ ಗೋವ್ಗಳ ಕಾನನಮಧ್ಯದಿಕಾದಲು ಬಂದಾ ಕೇಶಿಯನುದಯದಿಕಾದಿ ಅಸುವಸಿಗಿದಿ ವೊದ'ದೀ ಈ 'ಧದಿ 2ವೃಂದಾಖ್ಯವಾದವನಾದಿ ಗೋಪಾಲಕರಾ ವೃಂದದಾ ವರಸ್ತೋಮವಾಮದಿ ನಿಂದಿದ್ದನಾಗಾಕಂದರ್ಪಕೋಟಿತೇಜದಿ ಕುಂಭಿನಿಯನ್ನು ಹೊಂದಿಸಿದನು ಹರುಷದಿ ಮಂದರಧಾರನು ಮಂಜುಳ ಮ'ಮನು ನಿಂದಿಹ ನೀರನು ನಿಜಗುಣಧಾಮನು ಅಂದು ಅಜಬಂಧು ತಾನೆಂದೂ ಅಲ್ಲಿನಿಂದು3ಘನ ನೀಲಾಳಕದ ವೃಂದ 'ುಶ್ರಿತವಾದಾಮಣಿಮಯ ಮಕುಟದಿಂದಾ ಮೂಡುವ ಕಾಂತಿಪಣೆಯಲ್ಲಿ ಮೊಳೆಯುವಂದಾ ಕಸ್ತುರಿತಿಲಕ ಗಣನೆಗೆ ಬರುವ ಛಂದಾ ಗುಣಿಸುವರಾರಿದ ಗುಣನಿಧಿಯೊಪ್ಪಿದ ಪ್ರಣತಪ್ರೇಮದ ಪದ ಮುಖ ಪದ್ಮದಗುಣನೂ ಗುರುತರನೂ 'ನಯವನೂ 'ವರಿಪನೂ 4ಸಿಂಗಾರಿಯ ಸೋಲಿಸುವಾ ಸುಭ್ರುವದಿಂದಾಮಂಗಳವಾದ ಮುಖದ ಮನ್ನಿಸುತಿಹಕಂಗಳ ಕೋಡಿವರಿವಾ ಕಟಾಕ್ಷವನ್ನೂ ಸಂಗಿಸಿದ ಸುಸ್ಮಿತವಾ ತೊಂಗುತ ತೋರಲು ತನ್ನಾಸಿಕವೂರಂಗಿಸಿ ರಾಜಿಸೆ ರದನಚ್ಛದವೂಹೊಂಗೆ ುೀರಂಗೆ ನೋಳ್ಪಂಗೆ ಭವ'ಂಗೆ 5ಕುಂಡಲಗಳ ಕಾಂತಿಯೂ ಕರ್ನಾಗಳಲ್ಲಿಮಂಡಿತವಾಗಿ ಮತ್ತೆಯೂ ಮುಕುರದಂಥಾಗಂಡ ಸ್ಥಳಗಳಲ್ಲಿಯೂ ಗೋಚರಿಸುತ ದಿಂಡಾಗಿ ತೋರೆ ದೀಪ್ತಿಯೂ ಪುಂಡರೀಕಾಕ್ಷನು ಪೊಳೆಯುತಲಿದ್ದನು'ಂಡುತ ಖಳರನು ಹೆದರುವ ಜನರನುಕಂಡೂ ಕರಕೊಂಡೂ ಕೈಕೊಂಡೂ ಹುರಿಗೊಂಡೂ6ವೇಣುವ 'ವರಿಸಲು 'ೀರನಾ ಮುದ್ದೂತಾನೊಂದು ತೇಜ ತೋರಾಲು ಅಂಗುಲೀಗಳುಅನುಕೂಲಗಳಾಗಾಲು ಉಂಗುರಗಳೊಳು ಮಾಣಿಕ್ಯಗಳು ಮೂಡಲುಭಾನುವ 'ುೀರಲು ಬಾಹುಗಳೊಪ್ಪಲುಗಾನಗಳಾಗಲು ಗೋವ್ಗಳು ಕೇಳಲುತಾನು ತೋರಿದನು ಜಾಣುವನು ಜಗಧರನೂ 7ಭೋಗಿಯ ಭೋಗದ ಹಾಗೆ ಬಾಹುಗಳಿರೆತೂಗಿ ಜಾನುಗಳ ತಾಗೆ ಕೇಯೂರಗಳರಾಗ ರಂಜಿತಗಳಾಗೆ ಕಂಕಣವಲಯ ಯೋಗದಿಂದಿರೆ 'ೀಗೆಆಗಿನ ಕಾಲದಲಮರಿದ ಶೃಂಗದುೀಗುರು ಕೃಷ್ಣನ ಇಷ್ಟ ಕೊಳಲಿನಯೋಗೀ ಇಹಭಾಗೀ ಗತರಾಗೀ ಗುರಿಯಾಗೀ8ಕಂಬುಕಂಧರದಿಂದಲೂ ಅಲ್ಲಿರುತಿಹತೊಂಬೆ ತಾರಹಾರಗಳು ಲಕ್ಷ್ಮಿಯು ತಾನುಇಂಬೀನುರದಲಿರಲು ಕೌಸ್ತುಭಕಾಂತಿ ತುಂಬಿ ನಾಭಿಯ ತಾಕಲುಅಂಬುಜ ಸಂಭವನಾಲಯ'ರಲುಜೃಂಭಿಸಿ ಮಾಲೆಯು ಜೋಲಿಡುತಿರಲೂನಂಬೀ ಬಹುತುಂಬೀ ುಹವೆಂಬೀ ಜಗದಿಂಬೀ 9ಕಟಿತಟದತಿಶಯವು ಕಾಂಚಿಯಧಾಮಾಸ್ಪುಟವಾಗಿ ಸ್ವರ್ಣವಸ್ತ್ರವು ಊರುಗಳಲ್ಲಿಗೆಘಟಿಸಿರೆ ಗೂಢವಾದವೂ ಜಾನುಗಳಿಂದ ಪಟು ಜಂಘೆ ಪುದುಗಿಹವೂಕಟಕಗಳಿಂದಲು ಕಡುಚೆಲುವೆನ್ನಲುಅಟಸುತಲಡಿಗಳು ಅತಿಮೃದುವೆನ್ನಲುದಿಟನೂ ನರನಟನೂ ಭವತಟನೂ ಪಟುತರನೂ 10ಕಮಲ ಸೋಕಲು ಕಂದುವ ಲಕ್ಷ್ಮೀಯಕರಕಮಲಕೆ ಕಾಂತಿಯನೀವ ಯೋಗಿಯ ಹೃದಯಕಮಲದಿ ಕುಳಿತಿರುವ ುೀ ದಿವ್ಯಪಾದ ಕಮಲವಕಾಣಿಸುವಾಕಮಲೆಯ ಕಾಂತನ ಕಮಲಜ ಜನಕನ ಕಮಲವ ಕಾವನ ಕಾಂತಿಯ 'ುೀರ್ವನಕ್ರಮವೂ ಕಾಮದವೂ ಶ್ರಮ ಶಮವೂ ಶೋಭನವೂ 11ಬಲಿಯ ಬಳಿಗೆ ಬಂಜವು ಭಾಗ್ಯವನಿತ್ತುಸಲ'ದ ಸೌಮ್ಯಗಳಿವು ಬ್ರಹ್ಮನು ಬಂದುತೊಳೆಯಲು ಬಂದು ತೋರುತಿದ್ದವು ಆ ಪಾದಗಳೆ ಇಳೆಯೊಳಗಿರುತಿಹವೂಕಲಿಮಲಹರಗಳು ಕಲಿಗಳ ಕಾವವುತಾಳಿದವು ನಾಗನ ತದ್ವಶವಾಗಲುಸಿಲುಕೀ ಸಿರಿತುಳುಕೀ ಅಘಕಲಕೀ ಅವು ನಿಲುಕೀ 12ಅಂಕುಶವರ'ಂದವು ಧ್ವಜವಜ್ರವಂಕೀತವಾಗಿಯಾಢ್ಯಾವು ಲಕ್ಷ್ಮಿಯ ಕುಚಕುಂಕುಮವನ್ನು ಕದ್ದವು ಭೂ'ುಗೆ ಪಾದ ಪಂಕಜಗಳು ಬಂದಾವುಕಿಂಕರರಭಿಮತ ಕಂಕೆಯನಟ್ಟುತಮಂಕುಗಳೆನಿಸುತ ಮಲೆವರ ಮುರಿಯುತಶಂಕೆ ಸಲೆ ಕೊಂಕೆ ಹೊರೆುಂಕೆ ಸಿರಿಸೋಂಕೆ13ಈ ರೀತಿಯಲಿ ಈಶನು ಇರುತಲಿರೆನಾರದ ಬಂದು ನಿಂದನು ಕಾಣುತ ಕೃಷ್ಣಕಾರುಣ್ಯ ನಿಧಿ ಕೇಳ್ದನು ಕ್ಷೇಮಗಳನು ತೋರುತ ರೂಪವ ತಾನುವಾರಿಜನೇತ್ರನು ವರದವರೇಣ್ಯನು'ುೀರದೆ ಮುನಿಯನು ಮಾತನು ನುಡಿದನುಸಿರೀ ಅನುಸಾರೀ ಬಗೆದೋರೀ ಮುರವೈರೀ 14ಅರಿತನು ಆತನನುವ ಆ ಕಂಸಗಾಗಅರು' ತೋರಿಸಿದರ್ಥವ ಅದು ತನ್ನ ಕಾರ್ಯನೆರವೇರುವತಿಶಯವ ತಾನಾಗಿ ಮುನ್ನ ಪಿರಿದಾಗಿ ಪ್ರೇರಿಸಿರುವಕರುಣಾವನಧಿಯು ಕಾರ್ಯವ ತೋರಿಯುಮುರಹರಮೂರ್ತಿಯು ಮುಂದಿರುವಲ್ಲಿಯುಅರಿತೂ ಅಲ್ಲಿಕುಳಿತೂ ಬರೆಹೊತ್ತೂ ುದಿರಿತ್ತು 15ಕಾಣುತ ಮುನಿಕೃಷ್ಣನ ಮಾನಸದಲ್ಲಿಧ್ಯಾನಿಸಿದನು ದೇವನ ತಾ ಬಂದುದನ್ನುತಾನು ತೋರಿಸಲು ತತ್ತ್ರಾಣ ಬಂದಾಗ ನ'ುಸಿ ಪ್ರಾಣೇಶಗತಿಪ್ರ'ೀಣಾಕೃಷ್ಣಾ ಕಂಸಗೆ ಹೊದ್ದುವ ರೀತಿಗೆಶ್ರೀನಿಧಿಯಾದಗೆ ಸೂಚಿಸಿ ಸ್ವಾ'ುಗೆತಾನು ಅಜಸೂನು ಅರು'ದನು ಅರಿತದನೂ 16ಮಾನುಷಮೂರ್ತಿಯಾಗಿಯೆ ಭೂ'ುಗೆ ಬಂದುಆನತರನು ಆಳಿಯೆ ಅರ್ಥವ ಸಲಿಸಿಧೇನುವಾಗಿಹೆ ಧೊರೆಯೆ ಯೆನ್ನುತ 'ೀಗೆ ಆನತನಾಗುತಲಿಯೆಮಾನಸಪುತ್ರನು ಮಾತನು ನುಡಿದನುಶ್ರೀನಿಧಿ ತಿರುಪತಿ ವೆಂಕಟರಮಣನುತಾನೂ ತಾಳಿದನೂ ಮಾನಸನೂ ಮಾಡ್ದುದನೂ 17
--------------
ತಿಮ್ಮಪ್ಪದಾಸರು
ತಾತ್ವಿಕ ಹಿನ್ನೆಲೆ ಅಗಣಿತಾಗಣಿತ ಮಹಿಮ ಜಗದೊಳು ನಿಮ್ಮ ಬಗೆ ತಿಳಿಯುವರಾರಮಮ ಪ ಮಗನ ಮಗನಿಗೆ ಒಲಿದು ಮಗಳಧಾರೆಯನೆರದಿ ಮಗಳಮಗನ್ವೈರಿಯ ನಿಗಯಿಟ್ಟು ಸಲಹಿದಿ ಅ.ಪ ಓಂಕಾರದಾಚೆಗಿರ್ದ ಅಮಲರೂಪ ಓಂಕಾರದೊಳು ನೆಲೆಸಿದಿ ಅಂಕುರಿಸಕ್ಷರ ತ್ರಯಲಂಕಾರದಿಂ ಸೃಷ್ಟಿ ಸಂಕಲ್ಪಗೈದು ನಿಷ್ಕಲಂಕನೆಂದೆನಿಸಿದಿ 1 ಸೃಷ್ಟಿ ಉತ್ಪತ್ತಿಗೈದಿ ಉದರದಿ ಇಟ್ಟು ರಕ್ಷಕನೆಂದೆನಿಸಿದಿ ಶಿಕ್ಷಕೆನಿಸಿ ಸರ್ವಸಾಕ್ಷಿನೀನೆಯಾಗಿ ಮೋಕ್ಷ ನೀಡುವ ಮದಧ್ಯಕ್ಷನೆಂದೆನಿಸಿದಿ 2 ಮೇದಿನಿಗೆ ಪತಿಯೆನಿಸಿದಿ ದಾಸರ ಪ್ರಿಯ ಮೇದಿನಿಸುತೆ ಮದುವ್ಯಾದಿ ವೇದಸಮ್ಮತಗೈದಿ ಸಾಧುಜನಕಹುದಾದಿ ಆದಿಶ್ರೀರಾಮ ಮಮ ಬೌದ್ಧದೇವನಾದಿ 3
--------------
ರಾಮದಾಸರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಾನೆ ಬ್ರಹ್ಮಪುಟ್ಟಿರೆ ಮಾನವರೆದೆಂಬರಯ್ಯತಾನೆ ತನ್ನ ತಿಳಿದು ನೋಡೆ ತಾನೆ ಚಿದಾನಂದ ವಸ್ತು ತಾನೆ ಬ್ರಹ್ಮ ಪುಟ್ಟಿರೆ ಪ ತಂದೆ ತಾಯಿಯೆಂಬುವರು ಒಂದನ್ನೂ ಮಾಡಲಿಲ್ಲಇಂದು ಕಿವಿ ಮೂಗು ತಾಳಿ ಬಂದಿದೆ ಸಾಕ್ಷಾತ್ ವಸ್ತುತಾನೆ ಬ್ರಹ್ಮಯಿರುತಲಿದೆ 1 ಭಾವ ಕಲ್ಪಿತವಲ್ಲದ ದೇವನೆ ತಾನಾಗಿರೆದೇವತೆಯೆಂಬುದ ಮರೆತು ಕಲ್ಲದೇವರ ಪೂಜಿಪರಯ್ಯಾತಾನೆ ಬ್ರಹ್ಮ ಇರುತಲಿರೆ 2 ಕಾರಣಪುರುಷನಾಗಿ ದೇಹವನ್ನೇ ಧರಿಸಿರೆಕಾರಣಪುರುಷನ ಬಿಟ್ಟು ಬೇರೆ ಧ್ಯಾನಿಸುವರಯ್ಯಾತಾನೆ ಬ್ರಹ್ಮ ಪುಟ್ಟಿರೆ3 ವೇದಶಾಸ್ತ್ರಪುರಾಣದ ಓದೆಲ್ಲ ತಾನೆ ಇರೆಓದನ್ನು ತಿಳಿಯದ ತಾವು ಓದಿಓದಿ ಸಾವರಯ್ಯೋ ತಾನೇ ಬ್ರಹ್ಮ ಪುಟ್ಟಿರೆ 4 ಇಂದು ಹರವಾಸರೆಂದು ಬಂಧ ಹೆಸರ ಮಾಡುತಬಂಧ ಹರ ಚಿದಾನಂದಗೆ ಒಂದು ಕುತ್ತ ಎಣಿಸರಯ್ಯೋ ತಾನೆ ಬ್ರಹ್ಮ ಪುಟ್ಟಿರೆ 5
--------------
ಚಿದಾನಂದ ಅವಧೂತರು
ತಾಯೆ ಲಕ್ಷುಮಿ ದೇವಿಯೇ | ನೀನೇ ಗತಿತಾಯೆ ಲಕ್ಷುಮಿ ದೇವಿಯೇ ಪ ಕಾಯ ಮಮತೆಯ ಕಳೆದು ಬೇಗನೆ | ತೋಯಜಾಕ್ಷನ ತೋರಿ ಪೊರೆಯುವದಾಯ ನಿನ್ನದು ತಾಯೆ ಶ್ರೀಹರಿ | ಪ್ರೀಯೆ ನಿನ್ನನು ನಮಿಸಿ ಬೇಡುವೆ ಅ.ಪ. ಗೋಪಿ ನಂದನೆ ಹೇ ದುರ್ಗೇ | ಕಠೋರೆ ಉಗ್ರೆತಾಪತ್ರಯಗಳ ವಿನಾಶೇ | ಮೋಕ್ಷ ಪ್ರದಾತೇ ||ಶ್ರೀಪತಿಯ ಪಾದಾಬ್ಜ ಮಧುಪೆ | ಪಾಪಹರ ತವ ಪತಿಯ ನಾಮವಪ್ರಾಪಿಸುತ ದಿನದಿನದಿ ಯನ್ನನು | ಕೈ ಪಿಡಿದು ಕಾಪಾಡು ದೇವಿ 1 ಭವ ವಂದಿತೇ | ತ್ರಿಜಗನ್ಮಾತೆಹರಿಗೆ ಸಮಾಸಮವ್ಯಾಪ್ತೆ | ಹರಿಯಂಕ ಸಂಸ್ಥೇ ||ಅರಿದರಾಂಕುಶ ಪರಶು ಶಕ್ತಿ | ಧರಿಸಿ ಮೆರೆಯುವ ಹರಿಯ ರಾಣಿಯೆವಾರೆ ನೋಟದಿ ಬ್ರಹ್ಮ ಭವರಿಗೆ | ವರ ಸುಪದವಿಗಳಿತ್ತು ಪೊರೆವಳೆ 2 ಭವ ಚಾರು ಚರಣವ ತೋರು ಎನಗೆ 3
--------------
ಗುರುಗೋವಿಂದವಿಠಲರು
ತಾರಮ್ಮ ಶ್ರೀ ರಂಗಧಾಮನ ತಂದು ತೋರಮ್ಮ ಎನ್ನಯ ಪ್ರೇಮನ ವಾರಿಜಸಖಶತಕೋಟಿತೇಜನ ಹೊಂತ- ಕಾರಿಯ ನೀ ಕರತಾರೆ ಸೈರಿಸಲಾರೆ ಪ. ವೃಂದಾವನದೊಳಗಾಡುವ ಶ್ರೀ- ಗಂಧವ ಮೈಯೊಳು ತೀಡುವ ಚಂದದಿ ಕೊಳಲೂದಿ ಪಾಡುವ ನಮ್ಮ ಕಂದರ್ಪ ಜಲಕ್ರೀಡೆಯಾಡುವ ನಂದ ನಂದನ ಗೋವಿಂದನ ಕಾಣದೆ ಒಂದು ನಿಮಿಷ ಯುಗವಾಗಿ ತೋರುತಲಿದೆ 1 ಉಡುವ ಸೀರೆಯ ಸೆಳೆದೋಡುವ ದೊಡ್ಡ ಕಡಹದ ಮರವೇರಿ ನೋಡುವ ಕೊಡಲೊಲ್ಲದೆ ಬಹುಕಾಡುವ ಲಜ್ಜೆ- ಗೆಡಿಸಿ ಮಾನಿನಿಯರ ಕೂಡುವ ತಡವ್ಯಾತಕ್ಕೆ ಸಖಿ ತವಕದಿಂದಲಿ ಪೋಗಿ ಎ- ನ್ನೊಡೆಯನ ಕರತಾರೆ ಅಡಿಗೆರಗುವೆ ನಾ 2 ನೀಲವರ್ಣನ ನಿಜರೂಪನ ಶ್ರೀ- ಲೋಲ ಹೆಳವನಕಟ್ಟೆವಾಸನ ಜಾಲಿ ಹಾಳ ವೆಂಕಟೇಶನ ಭಕ್ತ- ಪಾಲಕ ಪರಮವಿಪೋಷನ ಆಲಸ್ಯವ್ಯಾಕೆನ್ನ ಇನಿಯನ ಕರೆತಾರೆ ಬಾಲೆ ನಿನಗೆ ಕಂಠಮಾಲೆಯ ಕೊಡುವೆ. 3
--------------
ಹೆಳವನಕಟ್ಟೆ ಗಿರಿಯಮ್ಮ
ತಾಳಲಾರೆನು ದೇವ ಪಾಪ ತಪ್ಪಿಸಿ ಬೇಗ ಸಂಜೀವ ಕಾಳಭೈರವನಿಗಪ್ಪಣೆಯ ಕೊಡೊ ದೈತ್ಯಕುಲ ಕಾಲ ಬಿಡಿಸುವುದೆನ್ನ ನೋವ ಪ. ನರಹರಿಯೆ ಸರ್ವತ್ರ ಇರುವಂಥ ನಿನಗೆ ನಾ- ನರುಹಲೇನಿಹುದಿನ್ನು ಜೀಯ ಉರಿಯನುಗುಳುವ ಘೋರ ಶರಗಳೋಲ್ ಪ್ರತಿನಿಮಿಷ ವಿರಿವುತಿದೆ ಬಲ್ಲಿ ಮಹರಾಯ ತರಹರಿಸಿ ದಿನದಿನಕೆ ಕರುಗುತಿಹ ಮದ್ದೇಹ ಸ್ಥಿರವಾಗಲೀ ನಿನ್ನ ಪಾಯ ದರ ಚಕ್ರ ಶಾಙ್ರ್ಗನಂದಕ ಚರ್ಮಗದೆಗಳನು ಧರಿಸಿ ವೋಡಿಸು ಶತ್ರುಮಾಯ 1 ಕಾಶೀಶ ಕಳುಹಿಸಿದ ಪೈಶಾಚ ದಕ್ಷಿಣಾಗ್ನಿಯನು ದೋಷವೆಣಿಸದ ಅಂಬರೀಷನಲಿ ಮುನಿದ ದು- ರ್ವಾಸ ಮುನಿಕೃತ ಕೃತ್ರಿಮವನು ನಾಶಗೈದಖಿಳಗುಣ ಭೂಷಣನೆ ನಿನಗೆನ್ನ ಪೋಷಣೆಯು ಬಹು ಭಾರವೇನು 2 ಸರ್ವಶಕ್ತಿಯೆ ನಿನಗೆದುರ್ವಾದ್ಯವುಂಟೆ ಗುರು ಶರ್ವ ಸುರನಾಥ ಮುಖವಂದ್ಯ ಗೀರ್ವಾಣ ಪಕ್ಷಜನ ನಿರ್ವಹಿಸಿ ನೀನೆ ಯೆನ- ಗಿರ್ವೆ ಗತಿಯಾಗಿ ಸುರವಂದ್ಯ ಬರ್ವ ದುರಿತಗಳ ಮಹದೂರ್ವಣೆಗೆ ಪುಡಿಗೈದು ಗರ್ವಿ ವೈರಿಗಳ ಸದೆ ಬಡಿದು ಪೂರ್ವದಿಂದಲಿ ಸೇವೆ ಸ್ವೀಕರಿಸು ಸರ್ಪವರ ಪರ್ವತೇಶನೆ ಬೇಗ ಒಲಿದು 3
--------------
ತುಪಾಕಿ ವೆಂಕಟರಮಣಾಚಾರ್ಯ
ತಿರುಪತಿ ಶೇಷಾದ್ರಿವಾಸ ಶ್ರೀನಿವಾಸ ಪ ಶೇಷಾದ್ರಿವಾಸ ವಾಸುಕಿಶಯನನೆ ಕೇಶಿಸಂಹಾರಕನೆ ಕ್ಲೇಶಭವದೂರನೆ ಅ.ಪ ಭಾಭರಣನೇ ಕರುಣಾಸಾಗರನೆ 1 ಪಾಂಡವಪಕ್ಷ ಶ್ರೀನಿವಾಸ ದೈತ್ಯಕುಲಶಿಕ್ಷ ಯಾದವರಕ್ಷ ಯದುಕುಲಪಕ್ಷನೆ ಸಜ್ಜನ ರಕ್ಷನೆ ಕರುಣಾಕಟಾಕ್ಷನೆ 2 ಭವಭಯಭಂಗ ಶ್ರೀನಿವಾಸ ಕರುಣಾಪಾಂಗ ಗರುಡತುರಂಗನೆ ನೀಲಮೇಘಾಂಗನೆ ಸುಗ್ರೀವಸಂಗನೆ ವಾಲಿ ವಿಭಂಗನೆ 3 ಕ್ಷೀರಾಬ್ಧಿಯಿಂದ ನಾರಾಯಣ ಭರದಿ ತಾ ಬಂದ ಕಮಲದೊಳಗೆ ಬಂದ ರಮಣೀಸಹಿತ ತಾ ನಿಂದ ಭಕ್ತರ ಪೊರೆಯುತ ನಿಂದ ಗೋವಿಂದ 4 ಗರುಡವಾಹನನೆ ಶ್ರೀನಿವಾಸ ಪರಮಪಾವನನೆ ಪಂಕಜನಯನನೆ ಪದ್ಮಿನೀ ಅರಸನೆ ಶ್ರೀನಿವಾಸನೆ ಎನ್ನ ರಕ್ಷಿಸೊ ನೀನು 5
--------------
ಯದುಗಿರಿಯಮ್ಮ
ತಿರುಪತಿಯ ಶ್ರೀ ವೆಂಕಟೇಶ ಕಮಲ ಪ ಹೇಮಮುಖದೀ ನದಿಯ ಕಂಡೇ ಗೋಮಿನೀ ಪದ್ಮಾವತಿ ಕಂಡೆಭೂಮಿಸುರರ ಮೇಳವ ಕಂಡೆ ಆ ಮಹಾ ಗಾಳಿಗೋಪುರ ಕಂಡೆ 1 ಸ್ವಾಮಿ ಪುಷ್ಕರಿಣೀಯ ಕಂಡೆ ಭೂಮಿ ವರಹಾ ದೇವರ ಕಂಡೆರಾಮದೂತನ ಪಾದವ ಕಂಡೆ ಸ್ವಾಮಿಯ ಮಹಾದ್ವಾರವ ಕಂಡೆ 2 ಹರಿಯು ಅಡಗಿದ ಹುತ್ತನು ಕಂಡೆ ಹರಿಯಧ್ವಜದ ಸ್ತಂಭವ ಕಂಡೆಪರಿಪರಿ ವೈಭವವನು ಕಂಡೆ ಪರಮಪುರುಷನಾ ಮೂರ್ತಿಯ ಕಂಡೆ 3 ಹರಿಹರಿ ಎನ್ನುವರನು ಕಂಡೆ ಹರಿದು ಒಳ ಪೋಗುವರನು ಕಂಡೆಹರಿಣಾಂಜನದ ತಾಡನ ಕಂಡೆ ಮಣಿಮಯಿಮುಕುಟವನು ಕಂಡೆ 4 ಹಣೆಯಲ್ಲಿಯ ನಾಮವ ಕಂಡೆ ಅನುಪಮಾದಂಗವನೂ ಕಂಡೆಕೊರಳ ಸರಗೀ ಸರಗಳ ಕಂಡೆ ಹರಳು ರತ್ನದಾಭರಣಗಳನು ಕಂಡೆ 5 ಉರದಿ ಶ್ರೀ ಭೂದೇವಿಯರ ಕಂಡೆ ಕರದಿ ಶುಭಶಂಖ ಚಕ್ರಗಳ ಕಂಡೆಗುರು ಶ್ರೀವಾದಿರಾಜರ್ಪಿಸಿದ ವರ ಶಾಲಿಗ್ರಾಮ ಹಾರವ ಕಂಡೆ 6 ಉದಗಿ ಪೀತಾಂಬರವ ಕಂಡೆ ನಡುವಿನೊಡ್ಯಾಣವನು ಕಂಡೆಜಡಿದ ಮಣಿಗಣ ಭೂಷಣನ ಕಂಡೆ ಜಡಜನಾಭನ ಮೂರ್ತಿಯ ಕಂಡೆ 7 ಅಂದದೀ ಕಾಲ್ಗಡಗವ ಕಂಡೆ ಸುಂದರ ಪಾದಗಳ ಕಂಡೆಮಂದಹಾಸ ಮುಖಾಬ್ಜ ಕಂಡೆ ಇಂದಿರೆಯ ರಮಣನ ಕಂಡೆ 8 ಆಗಮ ಶೃತಿ ಘೋಷವ ಕಂಡೆ ಭಾಗವತರಾ ಮೇಳವ ಕಂಡೆಬಾಗಿಲಾ ಬಲ ಹಸ್ತವ ಕಂಡೆ ಭಾಗೀರಥಿಯಾ ಪಿತನವ ಕಂಡೆ 9 ಚಿನ್ನದ ಕೂಪವನೂ ಕಂಡೆ ಅನ್ನಪೂರ್ಣಾದೇವಿಯ ಕಂಡೆರನ್ನದ ಹರಿವಾಣವ ಕಂಡೆ ಉಂಬುವ ವೈಭವವನು ಕಂಡೆ 10 ಕಪ್ಪದ ಕಣಜವನೂ ಕಂಡೆ ತಪ್ಪದೇಹಾರುವವರನು ಕಂಡೆಇಪ್ಪತ್ತು ದುಡ್ಡಿಗೆ ತೀರ್ಥ ಒಪ್ಪಿಲೇಮಾರುದನುರನು ಕಂಡೆ 11 ಸಾಸಿರ ನಾಮಗಳ ಒಡೆಯಾ ವಾಸುದೇವಾಚ್ಯುತನ ಕಂಡೆಕಾಸಿಗೆ ಕೈಚಾಚುವಂಥ ಕೇಸಕ್ಕ ತಿಮ್ಮಪ್ಪನ ಕಂಡೆ 12 ಆವ ಜನುಮದ ಸುಕೃತವೋ ಎನಗೆ ಭೂವೈಕುಂಠವನ್ನೇ ಕಂಡೆಶ್ರೀವಿಧಿಭವಾದಿ ವಂದ್ಯ ಐಹೊಳಿ ವೆಂಕಟೇಶನ ಕಂಡೆ 13 ಶುಭ ಮಂಗಲಂ ಸಿರಿಗೆಜಯ ಪುದವೀ ಪದ ಕೇಳಿ ಪೇಳಿದರೆ ಒಲಿದು ಫಲವೀವ ಕುಲಸ್ವಾಮಿ ಅವರೀಗೆ 14
--------------
ಐಹೊಳೆ ವೆಂಕಟೇಶ
ತಿರುವಲ್ಲಿಕೇಣಿ (ಚೆನ್ನೈ) ದರುಶನ ಮಾಡುವ ಬಾಬಾರೋ ಪ ಪರಮ ಪುರುಷನವ ಪಾರ್ಥನ ಸೂತನು ವರಗೀತಾಮೃತವುಸುರಿದವನು ಅ.ಪ ಶರನಿಧಿಯೊಳು ಮಿಂದು ಐತರುವವರಿಗೆ ವರದಾಭಯಕರ ತೋರುವವನು ಪರಮಾಚಾರ್ಯಗೆ ದರುಶನವಿತ್ತು ಪರಭಕ್ತಿಯ ಸಾರಿದನಿವನು 1 ಚಾರು ವೇದಂಗಳ ತುರಗವ ಗೈದ ಧಾರುಣಿಯನು ರಥಹೂಡಿದನು ಮರುತಾತ್ಮಜನನು ಧ್ವಜಕೇರಿಸಿದನು ದುರುಳ ಕೌರವನ ಧುರದಿ ಸೋಲಿಸಿದನು2 ಹತ್ತವತಾರದಿ ಬಂದವನಿವನೇ ಮತ್ತದೈತ್ಯರನೆಲ್ಲ ಕೊಂದವನಿವನೇ ಉತ್ತಮಭಕ್ತರ ಕಾಯಲು ಮಾಂಗಿರಿ ಅತ್ತ ನಿಂದಾ ರಂಗನಾಥನು ಇವನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಿಳಿಯದು ಅಟಾ ಶ್ರೀಹರಿ ನಿನ್ನಾ| ನಳಿನ ಸಂಭವ ಮೊದಲಾದ ನಿರ್ಜರರಿಗೆ ಪ ಮೊತ್ತವೆನಿಪ ಕ್ಷೀರ ಸಾಗರ ಮಧ್ಯಲಿ| ಉತ್ತಂಗವಾದ ಶೇಷನ ಮಂಚದ ಮ್ಯಾಲೆ| ಸುತ್ತಸನಕಾದಿ ಭಾಗವತರ ಸಂಗ| ನಿತ್ಯವೆರಸಿ ಕ್ರೀಡಿಸುವದ ಬಿಟ್ಟು| ಮತ್ತೆ ವನದೊಳಾಡುವರೇ ತೃಣಗಳ| ಕಿತ್ತಿ ಹಾಸಿಕೆ ಮಾಡುವರೇ ಕಪಿಸಂಗ ಅತ್ಯಂತ ದಲ್ಹಿಡುರೇ ಕುಬ್ಸಿಯಾ| ವತ್ತಿನೀ ಅಳುವರೇ1 ಗಂಭೀರವಾದ ಸುರವರದಿಂದ ನಾರದ| ತುಂಬುರ ಮಾಳ ಗೀತವ ಕೈಕೊಂಡು| ಕೌಸ್ತುಭ ಮಾಲೆಯ ಹಾಕಿ| ವಾಹನ ಬಿಟ್ಟು| ಕೊಂಬು ಕೊಳನ ನೂದುರೇ ಗುಂಜಿಯಾ ವಣಿ ಬಿಂಬಸರವ ಹಾಕುತೀ ಕಲಿಯಾದಾ| ಕಂಬಳಿ ಯನುರೆ ಪೊದ್ದು ವಸ್ತ್ರದಿ ಮರ| ಸಂಭ್ರಮ ವೇಸರೇ 2 ಸುಜನ ಸಮರ್ಪಿಪ ಊಟವ| ದಯದಿಂದ ಕೈಕೊಂಡು ತೃಪ್ತನಾಗಿ| ಶ್ರೀಯಾ ಕುಚ ಕೊಡಮ್ಯಾಲ ಕರವನಿಟ್ಟು| ಜಯವಿಜಯ ವೆಂಬದ್ವಾರ ಪಾಲರಿರೆ| ಗೋವಲ್ಲರೆಂಜಲ ತಿಂಬುದೇ ಸರಗಹಗ| ಕೈಯ್ಯಲಿಂದ ತೊಳೆವರೇ ಮುದದಿ| ಬಲಿಯ ಬಾಗಿಲ ಕಾವುರೇ ಮಹಿಪತಿ ನಂದನ ಜೀವನ-ನೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಳಿಯದು ಆರಿಗೆ ನಳಿನಾಕ್ಷನ ಘನ ವಿಲಸಿತಮಹಿಮೆ ಸುಲಭವಲ್ಲಮಮ ಪ ಒಳಗು ತಾನೆ ಹೊರಗು ತಾನೆ ಒಳಗ್ಹೊರಗೊಂದಾಗಿ ಬೆಳಗುವ ತಾನೆ ಬಳಗ ತಾನೆ ಬಂಧು ತಾನೆ ಹಲವು ಜೀವರ ಸಲೆರೂಪನು ತಾನೆ 1 ಹಸಿವು ತಾನೆ ತೃಷೆಯು ತಾನೆ ಹಸಿತೃಷೆ ತೀರಿಪ ಸೂತ್ರನು ತಾನೆ ಎಸೆವ ತತ್ವಮಸಿ ಮಹವಾಕ್ಯವ ಕುಶಲದಿ ನುಡಿಸುವ ಈಶನು ತಾನೆ 2 ರಕ್ಷಕ ತಾನೆ ಶಿಕ್ಷಕ ತಾನೆ ಸಾಕ್ಷಿಯಾಗಿ ನ್ಯಾಯ ವೀಕ್ಷಿಪ ತಾನೆ ಸೂಕ್ಷ್ಮಜ್ಞಾನವಿತ್ತಕ್ಷಯದ್ಹೊರೆಯುವ ಮೋಕ್ಷಕರ್ತ ಶ್ರೀರಾಮ ತಾನೆ 3
--------------
ರಾಮದಾಸರು
ತಿಳಿಯದೋ ನಿನ್ನಾಟ ತಿರುಪತಿಯ ವೆಂಕಟ ಪ ಪೊಳೆವ ನೀರೊಳು ಗೆಲುವ ಮೋರೆಯನೆಲವ ನೋಡುವ ಸುಳಿವ ಕಂಬದಿ |ಇಳೆಯನಳೆಯುವ ಭಳಿರೆ ಭಾರ್ಗವ ಖಳನ ಛೇದಿಸಿ ಕೊಳಲ ಧ್ವನಿಗೆ ||ನಳಿನಮುಖಿಯರ ನಾಚಿಸುವ ಬಲು ಹಯದಳದ ಬಹು ಹವಣಿಗಾರನೆ ಅ .ಪ. ಬೊಮ್ಮ ಭಾರ ಬೆನ್ನಿಲಿಕೋರೆ ದಾಡೆಯ ನಾರಸಿಂಹನೆ |ಧರೆಯ ಬೇಡಿದ ಧೀರ ಪುರುಷನೆವಾರಿ ಬಂಧನ ಮಾರಜನಕನೆ ||ನಾರಿಯರ ವ್ರತವಳಿದು ಕುದುರೆಯನೇರಿ ಮೆರೆಯುವ ಸುಂದರಾಂಗನೆ 1 ಅಖಿಳ ಭೂಮಿಯ ತಂದ ನರಹರಿ |ಯುಕುತಿಯಲಿ ನೆಲನಳೆದ ಭಾರ್ಗವಮುಕುತಿಗೋಸುಗ ಫಲವ ಸವಿದನೆ ||ರುಕುಮನನುಜೆಯ ರಮಣ ಬೌದ್ಧನೆಲಕುಮಿ ರಮಣನೆ ಕಲ್ಕಿರೂಪಿಯೆ 2 ಬನ್ನ ಬಡುಕನೆ ||ಹೆಣ್ಣುಗಳ ವ್ರತ ಕೆಡಿಸಿ ತೇಜಿಯಬೆನ್ನನೇರಿದ ವ್ಯಾಸ ವಿಠ್ಠಲ* 3
--------------
ವ್ಯಾಸವಿಠ್ಠಲರು
ತುಂಗಭದ್ರೆ ಸುತರಂಗಿಣಿ ತೀರಗನ್ಯಾರೇ ಪೇಳಮ್ಮಯ್ಯ ಪ ಮಂಗಳ ಮಹಿಮ ಶುಭಾಂಗ ಮೂರುತಿ | ಶ್ರೀ ಹರಿಹರ ಇವ ಕಾಣಮ್ಮ ಅ.ಪ. ಬಹು ಕಂಟಕಿ ಆ ಗುಹನ ತಪಸಿಗೆ | ಮೆಚ್ಚಿದ ಹರ ನೋಡಮ್ಮಮ್ಮ |ಅಹಿ ಭೂಷಣ ತಾ ವರವನು ಕೊಟ್ಟನು | ಬಹು ಬೇಗನೆ ನೋಡಮ್ಮಮ್ಮ|ವಿಹಗವಾಹ ಹರಿ ಮತ್ತೆ ರುದ್ರನಿಂ | ಇವನ ಜೇಯ ನೋಡಮ್ಮಮ್ಮ |ಮಹಿಯೊಳು ಸುರರಾಹವ ಕೆಡಸುತ | ಬಹು ಹಿಂಸಕ ನೋಡಮ್ಮಮ್ಮ 1 ಸುರಲೋಕಕು ಈ ಅಸುರನ ಬಾಧೆಯು | ತಟ್ಟಿತು ನೋಡಮ್ಮಮ್ಮ |ಸುರ ಭೂಸುರರೆಲ್ಲರು ಮೊರೆಯಿಟ್ಟರು | ಹರಿಯಲಿ ನೋಡಮ್ಮಮ್ಮ |ಸಿರಿಯರಸನು ತಾನಭಯವನಿತ್ತವರನು | ಕಳುಹಿದ ನೋಡಮ್ಮಮ್ಮ | ಕರುಣಾಕರ ತಾ ಹರಿಹರ ರೂಪದಿ | ದುರುಳನ ತರೆದ ನೋಡಮ್ಮಮ್ಮ 2 ಕೃತ್ತಿವಾಸ ತಾ ನಿತ್ತ ವರವ ಹರಿ | ಪಾಲಿಸಿದನು ನೋಡಮ್ಮಮ್ಮ | ದಿತಿಸುತನಾಯುವು ದಶಶತಕಳೆಯಲು | ವತ್ತಿದ ಕೆಳಗವನಮ್ಮಮ್ಮ |ಹಿತದಿಂದಲಿ ತಾ ಭಕುತರ ಪೊರೆಯುವ | ಹರಿಹರನ ನೋಡಮ್ಮಮ್ಮ | ದೈತ್ಯನ ಪೆಸರಿಲಿ ಪಾವನವಾಯಿತು | ಈ ಕ್ಷೇತ್ರವು ಕಾಣಮ್ಮಮ್ಮ 3 ದಕ್ಷಿಣ ಪಾಶ್ರ್ವದಿ ಅಭಯ ಹಸ್ತ | ತ್ರಿಶೂಲ ಧರನ ನೋಡಮ್ಮಮ್ಮ | ಅಕ್ಷಿಯ ಮಾನಿಯು ದಕ್ಷಿಣ ಶಿರದಲಿ | ಮೆರೆಯುವನು ನೋಡಮ್ಮಮ್ಮ | ದಕ್ಷಸುತೆಯು ತಾ ವಿರೂಪಾಕ್ಷನ | ಸೇವಿಪಳೂ ನೋಡಮ್ಮಮ್ಮ |ಪಕ್ಷಿವಾಹಗೆ ತಾನರ ಮೈಯ್ಯಾದನು | ತ್ರ್ಯಕ್ಷನು ಕಾಣಮ್ಮಮ್ಮ 4 ಕಂಬು | ಧರನಾ ನೋಡಮ್ಮಮ್ಮ ಲಕ್ಷ್ಮೀವನಿತೆಯು ಕಾಮನ ಜನಕನ | ಸೇವಿಪಳೂ ನೋಡಮ್ಮಮ್ಮ ಶುಮಲಾಂಗ ವನಮಾಲೆಗಳನು | ಧರಿಸಿಹ ನೋಡಮ್ಮಮ್ಮ |ಸಾಮಸನ್ಮುತ ಗುಣಧಾಮನ ಲೀಲೆ | ಇದೆಲ್ಲವು ಕಾಣಮ್ಮಮ್ಮ 5 ಕ್ರೋಶ ಪಂಚ ನಾಲ್ಕಾರದಿ ಮೀಸಲು | ಸುಕ್ಷೇತ್ರವ ನೋಡಮ್ಮಮ್ಮ | ಭಾಸಿಸುವವು ಇಲ್ಲೆಕಾದಶ ವರ | ತೀರ್ಥಂಗಳು ನೋಡಮ್ಮಮ್ಮ | ಈ ಸುಕ್ಷೇತ್ರವು ಆ ಮಹಕಾಶಿಗೆ | ಸಮವೆನಿಸಿದೆ ನೋಡಮ್ಮಮ್ಮ |ಅಸಮ ಮಹಿಮ ಹರಿ ಅಸುರಗೆ ಕೊಟ್ಟನು | ಈ ಪರಿವರ ಕಾಣಮ್ಮಮ |6| ಕೃತಿ ವಿಧಿ ಜನಕನಿಗೂ | ಭೇದವೆ ಸರಿ ಕೇಳಮ್ಮಮ್ಮ ಮೋದಮಯ ಗುರು ಗೋವಿಂದ ವಿಠಲನ | ಲೀಲೆಗಳಿವು ಕಾಣಮ್ಮಮ್ಮ 7
--------------
ಗುರುಗೋವಿಂದವಿಠಲರು
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ