ಒಟ್ಟು 1412 ಕಡೆಗಳಲ್ಲಿ , 104 ದಾಸರು , 1111 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತುಂಗಭದ್ರ ನದಿ ತೀರದಿ ನೆಲಸಿಹನ್ಯಾರೆ ಪೇಳಮ್ಮಯ್ಯ ಪ. ರಂಗ ತಾನು ಇಲ್ಲಿರುತಿಹನಮ್ಮ ಅ.ಪ. ಶಂಖ ಚಕ್ರ ತ್ರಿಶೂಲವ ಧರಿಸಿಹನ್ಯಾರೇ ಪೇಳಮ್ಮಯ್ಯ ಶಂಕಿಸದಂದದಿ ತೋರುವನಮ್ಮ 1 ಈ ಪರಿರೂಪವ ಧರಿಸಲು ಕಾರಣವೇನೇ ಪೇಳಮ್ಮಯ್ಯ ಈ ಪರಿರೂಪವ ಧರಿಸಿಹನಮ್ಮ 2 ಪರಿ ಶುದ್ಧ ಸಾತ್ವಿಕರಿಗೆ ಹ್ಯಾಗೇ ಪೇಳಮ್ಮಯ್ಯ ಶುದ್ಧ ಜ್ಞಾನವನಿತ್ತು ಸಲಹುವನಮ್ಮ 3 ವಿಷ್ಣು ಭಕ್ತರ ಮನಸಿಗೆ ತೋರುವ ಮತಿ ಏನೇ ಪೇಳಮ್ಮಯ್ಯ ಬಿಟ್ಟಿರಲಾರದ ಗುಟ್ಟು ಕಾಣಮ್ಮ 4 ಪರಿ ಲೀಲೆ ಇದೇನೆ ಪೇಳಮ್ಮಯ್ಯ ಹರಿಯು ತಾನು ಒಲಿಯನು ಕಾಣಮ್ಮ 5 ಪರಿ ಹ್ಯಾಗೇ ಪೇಳಮ್ಮಯ್ಯ ಪರಿ ಧರಿಸುವದೊಂದರಿದೇನಮ್ಮ 6 ಹರಿಹರ ಕ್ಷೇತ್ರದಿ ನೆಲಸಿಹ ಸ್ವಾಮಿಯ ಭಜಿಸುವದ್ಹ್ಯಾಗೇ ಪೇಳಮ್ಮಯ್ಯ ಕರಕರೆ ಭವವನು ಕಳೆಯಬೇಕಮ್ಮ 7 ಶ್ರೀಸತಿ ಪಾರ್ವತಿ ಸಹಿತದಿ ನೆಲಸಿಹನ್ಯಾರೇ ಪೇಳಮ್ಮಯ್ಯ ಶೇಷಭೂಷಣ ಸಹ ಶ್ರೀನಿವಾಸ ಕಾಣಮ್ಮ 8
--------------
ಅಂಬಾಬಾಯಿ
ತುಂಗಭದ್ರೆ ಸುತರಂಗಿಣಿ ತೀರಗನ್ಯಾರೇ ಪೇಳಮ್ಮಯ್ಯ ಪ ಮಂಗಳ ಮಹಿಮ ಶುಭಾಂಗ ಮೂರುತಿ | ಶ್ರೀ ಹರಿಹರ ಇವ ಕಾಣಮ್ಮ ಅ.ಪ. ಬಹು ಕಂಟಕಿ ಆ ಗುಹನ ತಪಸಿಗೆ | ಮೆಚ್ಚಿದ ಹರ ನೋಡಮ್ಮಮ್ಮ |ಅಹಿ ಭೂಷಣ ತಾ ವರವನು ಕೊಟ್ಟನು | ಬಹು ಬೇಗನೆ ನೋಡಮ್ಮಮ್ಮ|ವಿಹಗವಾಹ ಹರಿ ಮತ್ತೆ ರುದ್ರನಿಂ | ಇವನ ಜೇಯ ನೋಡಮ್ಮಮ್ಮ |ಮಹಿಯೊಳು ಸುರರಾಹವ ಕೆಡಸುತ | ಬಹು ಹಿಂಸಕ ನೋಡಮ್ಮಮ್ಮ 1 ಸುರಲೋಕಕು ಈ ಅಸುರನ ಬಾಧೆಯು | ತಟ್ಟಿತು ನೋಡಮ್ಮಮ್ಮ |ಸುರ ಭೂಸುರರೆಲ್ಲರು ಮೊರೆಯಿಟ್ಟರು | ಹರಿಯಲಿ ನೋಡಮ್ಮಮ್ಮ |ಸಿರಿಯರಸನು ತಾನಭಯವನಿತ್ತವರನು | ಕಳುಹಿದ ನೋಡಮ್ಮಮ್ಮ | ಕರುಣಾಕರ ತಾ ಹರಿಹರ ರೂಪದಿ | ದುರುಳನ ತರೆದ ನೋಡಮ್ಮಮ್ಮ 2 ಕೃತ್ತಿವಾಸ ತಾ ನಿತ್ತ ವರವ ಹರಿ | ಪಾಲಿಸಿದನು ನೋಡಮ್ಮಮ್ಮ | ದಿತಿಸುತನಾಯುವು ದಶಶತಕಳೆಯಲು | ವತ್ತಿದ ಕೆಳಗವನಮ್ಮಮ್ಮ |ಹಿತದಿಂದಲಿ ತಾ ಭಕುತರ ಪೊರೆಯುವ | ಹರಿಹರನ ನೋಡಮ್ಮಮ್ಮ | ದೈತ್ಯನ ಪೆಸರಿಲಿ ಪಾವನವಾಯಿತು | ಈ ಕ್ಷೇತ್ರವು ಕಾಣಮ್ಮಮ್ಮ 3 ದಕ್ಷಿಣ ಪಾಶ್ರ್ವದಿ ಅಭಯ ಹಸ್ತ | ತ್ರಿಶೂಲ ಧರನ ನೋಡಮ್ಮಮ್ಮ | ಅಕ್ಷಿಯ ಮಾನಿಯು ದಕ್ಷಿಣ ಶಿರದಲಿ | ಮೆರೆಯುವನು ನೋಡಮ್ಮಮ್ಮ | ದಕ್ಷಸುತೆಯು ತಾ ವಿರೂಪಾಕ್ಷನ | ಸೇವಿಪಳೂ ನೋಡಮ್ಮಮ್ಮ |ಪಕ್ಷಿವಾಹಗೆ ತಾನರ ಮೈಯ್ಯಾದನು | ತ್ರ್ಯಕ್ಷನು ಕಾಣಮ್ಮಮ್ಮ 4 ಕಂಬು | ಧರನಾ ನೋಡಮ್ಮಮ್ಮ ಲಕ್ಷ್ಮೀವನಿತೆಯು ಕಾಮನ ಜನಕನ | ಸೇವಿಪಳೂ ನೋಡಮ್ಮಮ್ಮ ಶುಮಲಾಂಗ ವನಮಾಲೆಗಳನು | ಧರಿಸಿಹ ನೋಡಮ್ಮಮ್ಮ |ಸಾಮಸನ್ಮುತ ಗುಣಧಾಮನ ಲೀಲೆ | ಇದೆಲ್ಲವು ಕಾಣಮ್ಮಮ್ಮ 5 ಕ್ರೋಶ ಪಂಚ ನಾಲ್ಕಾರದಿ ಮೀಸಲು | ಸುಕ್ಷೇತ್ರವ ನೋಡಮ್ಮಮ್ಮ | ಭಾಸಿಸುವವು ಇಲ್ಲೆಕಾದಶ ವರ | ತೀರ್ಥಂಗಳು ನೋಡಮ್ಮಮ್ಮ | ಈ ಸುಕ್ಷೇತ್ರವು ಆ ಮಹಕಾಶಿಗೆ | ಸಮವೆನಿಸಿದೆ ನೋಡಮ್ಮಮ್ಮ |ಅಸಮ ಮಹಿಮ ಹರಿ ಅಸುರಗೆ ಕೊಟ್ಟನು | ಈ ಪರಿವರ ಕಾಣಮ್ಮಮ |6| ಕೃತಿ ವಿಧಿ ಜನಕನಿಗೂ | ಭೇದವೆ ಸರಿ ಕೇಳಮ್ಮಮ್ಮ ಮೋದಮಯ ಗುರು ಗೋವಿಂದ ವಿಠಲನ | ಲೀಲೆಗಳಿವು ಕಾಣಮ್ಮಮ್ಮ 7
--------------
ಗುರುಗೋವಿಂದವಿಠಲರು
ತುದಿಯ ನಿಗಮವ ಕೇಳು ತಂದೆ ಶ್ರೀ ಹರಿಯೆಹುದುಗಿಹವು ಮಂತ್ರಗಳು ಹೊರೆವೆ ನೀ ದೊರೆಯೆ ಪಮೂರು ವೇದಗಳಿಂದ ಮಾಡಿ ಕ್ರತುಗಳ ಜನರುಸೇರಿ ಭೂಸ್ವರ್ಗಗಳ ಸವಿದು ಭೋಗ್ಯಗಳಾಭೂರಿ ಜನ್ಮಗಳೆತ್ತಿ ಬಳಲುತಿರೆ ಜಗವನ್ನುತೋರಲೋಸ್ಕರ ಮಂತ್ರತತಿಗಳಿಹವಾಗಿ 1ಮಂತ್ರಂಗಳಲಿ ಸ್ವಾಮಿಮೂರ್ತಿವತ್ತಾಗುತಿರೆ ಯಂತ್ರ ಪೀಡಿತ ಜನರನೆತ್ತಿ ಬದುಕಿಸಲುತಂತ್ರವಿದ ಮಾಡಿದೆ ನೀ ತಂದೆ ಲೋಕಕ್ಕೆ ಸ್ವಾತಂತ್ರನಾಗಿಹನೆಂದು ತಿಳುಹಿಕೊಡೆ ದೇವ 2ಈ ರೀತಿಯಲಿ ನೀನು ಯಜ್ಞಕಧಿಪತಿಯಾಗಿಸೇರಿ ಮಂತ್ರಂಗಳಲಿ ಸದ್ರೂಪನೆನಿಸಿಕೋರಿದರ್ಥವ ಕೊಟ್ಟು ಕಾಯುತ್ತ ಸಂಸಾರಪಾರ ತಿರುಪತಿಯನ್ನು ಪಡೆದ ವೆಂಕಟಪತಿಯೆ 3ಓಂ ಮಧುರಾಕೃತಯೇ ನಮಃ
--------------
ತಿಮ್ಮಪ್ಪದಾಸರು
ತುಂಬಿ ಬೆಳಗುತಿರುವಿಯಂತೆ ಎ ನಗೆ ಕಾಣದ ಬಗೆಯಾಕಂತೆ ಪ ಜಗವನು ವ್ಯಾಪಿಸಿ ಬಗೆಬಗೆಯಿಂದಲಿ ಝಗಿಝಗಿಕಪೆಂಬಾನಂತ ಸ್ಮøತಿಗಳಿವೆ ಅ.ಪ ಸರಸಿಲಿ ಸ್ಮರಿಸಲು ಬಂದಂತೆ ತರುಣಿಯ ಸಭೆಯೊಳು ಕಾಯ್ದಂತೆ ಕರೆಯಲು ಕಂಬದಿ ಹೊರಟಂತೆ ತರಳಗೆ ಅಡವಿಲಿ ಒಲಿದಂತೆ ಅರಿತು ವಿಚಾರಿಸಿ ನೋಡಲಿವೆಲ್ಲ ನಿನ್ನ ಖರೆ ಪರತರಮಹಿಮ 1 ಅರಣ್ಯವಾಸಿಗಳ ಪರೀಕ್ಷಂತೆ ಅರಿತು ಪರುಷ ಕರುಣಿಸಿದಂತೆ ಚರಣದ್ವೊರೆಯ ತಮ್ಮನಂತೆ ಸ್ಥಿರಪಟ್ಟವನಿಗೆ ಕಟ್ಟ್ದಂತೆ ವರ ವೇದೋಕ್ತಿಗಳರಿತು ನೋಡಿದರೆ ಸ್ಮರಿಸುವ ಭಕುತರ ನಿರುತ ಚಿಂತಾಮಣಿ 2 ಪೊಡವಿಪಾಲನಿಗೆ ಶಾಪಂತೆ ಬಿಡದೆ ಚಕ್ರದಿಂದ ಕಾಯ್ದಂತೆ ಕಡಲ ಮಧ್ಯದಲಿ ಮನೆಯಂತೆ ದೃಢಕರಿಗೆ ಮೈ ನೆರಳಂತೆ ಕಡುದಯಾನಿಧಿ ಎನ್ನೊಡಲೊಳು ಬಿಡದಂತಿರಿಸಯ್ಯ ಒಡೆಯ ಶ್ರೀರಾಮ 3
--------------
ರಾಮದಾಸರು
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ
ತೆರಳಿ ಪೋದರಿಂದು ಪರಮ ಪದವನರಸುತ ಪ ಸಿರಿ ಶೇಷದಾಸಾರ್ಯರು ಅ.ಪ. ಸಿರಿಯುಕ್ತ ರಕಾಕ್ಷಿ ವರುಷ ಭಾದ್ರಪದಸಿತ ವರಪೌರ್ಣಿಮಾ ಸಹಿತವಾದ ಕವಿವಾರದಿ ಸರು ನಿಶಿಯೊಳು ಶತತಾರ ನಕ್ಷತ್ರ ಬರುತಿರೆ ನರಹರಿಯ ಚರಣಕಾಂಬ ಕಡು ತವಕದಿಂದ 1 ತಂದೆ ಮುದ್ದುಮೋಹನ ದಾಸವರ್ಯರಿಂದ ಕುಂದುರಹಿತನಾದ ಪ್ರಾಣನಾಥವಿಠಲ- ನೆಂದು ಅಂಕಿತೋಪದೇಶವನು ಕೈಕೊಂಡು ಬಂಧುರವಾದನೇಕ ಪದಗಳನು ರಚಿಸಿ 2 ದಾಸವೃತ್ತಿಯ ಕಂಡು ದೇಶ ದೇಶವ ಸುತ್ತಿ ಕರವ ನೀಡದೆ ಲೇಸು ಮಾಡುತಲಿ ಸಚ್ಛಿಷ್ಯರಿಗೆ ತತ್ತ್ವೋಪ- ದೇಶವನು ಪರಮ ಸಂತೋಷದಿಂದಗೈದು 3 ಆಶಪಾಶವ ತೊರೆದು ಮೀಸಲು ಮನರಾಗಿ ವಾಸುದೇವನ ನಾಮ ಸೋಸಿನಿಂದ ಭಜಿಸಿ ಸಾಸುವೆಯಷ್ಟಾದರಾಯಾಸವನುಪಡದೆ ಈ ಶರೀರ ವಿಶ್ವೇಶನಾಧೀನವೆಂದು 4 ಅಂಗೋಪಾಂಗವ ಮರೆದು ನಿಸ್ಸಂಗಯುತರಾಗಿ ಕಂಗಳನು ಮುಚ್ಚುತ ಭಂಗವಿಲ್ಲದ ಸುಖವ ಹಿಂಗದೆ ಕೊಡುವಂಥ ಮಂಗಳನ ಶ್ರೀ ರಂಗೇಶವಿಠಲನಂತರಂಗದಿ ನೋಡುತ5
--------------
ರಂಗೇಶವಿಠಲದಾಸರು
ತೆರಳಿದರು ವೈಕುಂಠ ಪುರದರಸನ ಚರಣಾಬ್ಜ ಸೇವಿಸಲು ನರಸಿಂಹದಾಸರು ಪ ಜವಹರುಷದಿಂದ ಪಾರ್ಥಿವ ಮರುಷ ಮಾರ್ಗಶಿರ ಅಪರ ಪಕ್ಷದ ಪಪ್ಠಿ ಭೌಮವಾರ ದಿವದಿ ಪ್ರಾತಃಕಾಲ ಸಮಯದಲಿ ಶ್ರೀ ಲಕ್ಷ್ಮೀ ಕಮಲ ಧೇನಿಸುತ ಸಂತೋಷದಲಿ 1 ವರಹತನಯಾತೀರ ಪ್ರಾಚಿದಿಗ್ಬಾಗದಲಿ ಸುಕೃತ ಛಾಗಿಯೆಂಬಾ ಪುರವರದಿ ತತ್ವ ತತ್ವೇಶರೊಳು ಲಯವರಿತು ಪರಮ ಪುರುಷನ ದಿವ್ಯ ನಾಮಗಳ ಸ್ಮರಿಸುತಲಿ 2 ಭವ ಅನಂ ತರಸನ ಜಠರದಿ ಜನಿಸಿ ಬಂದೂ ಪುರಂದರ ದಾಸರಂಘ್ರಿಗಳ ಸ್ಮರಿಸುತ ಜಗನ್ನಾಥ ವಿಠಲನೊಲುಮೆಯ ಪಡೆದು 3
--------------
ಜಗನ್ನಾಥದಾಸರು
ತೇಜಿಯೇರಿ ಮೆರೆದು ಬಂದ ರಾಜಬೀದಿಯೊಳಗಿಂದ ಕಸ್ತೂರಿ ರಂಗ ಪ. ಸುತ್ತಮುತ್ತ ಸಾವಿರಾರು ಸಾಲುದೀವಟಿಗೆ ಹತ್ತುದಿಕ್ಕಿಲಿ ಬೆಳಗುತಿಹ ಹಗಲುಬತ್ತಿಗಳು ಇತ್ತೆರಪು ಭೂಸುರರು ಸಾಲುಗಟ್ಟಿ ನಿಂತಿರಲು ಮತ್ತೆ ಸಭಾದಿಂದ ತೇಜಿ ಮೆಲ್ಲನೆ ನಡೆಸುತ್ತ ಜಾಣ1 ತಾಳ ಶಂಖ ಭೇರಿ ತಮ್ಮಟೆ ತಂಬೂರಿ ಮೊದಲಾದ ಮೇಲು ಪಂಚಕಂಗಳೆಲ್ಲ[ಮಿಗೆ] ಪೊಗಳಲು ಗಾಳಿ ಗೋಪುರದ ಮುಂದೆ ರಾಯಬಿಡದಂತೆ ಸುತ್ತ ಧೂಳುಗಳೆಬ್ಬಿಸಿ [ವೈಹಾಳಿ] ನಿಕ್ಕುತ ಜಾಣ 2 ಮುತ್ತಿನ ತುರಾಯಿ ಅಂಗಿ ಮುಂಡಾಸು ತತ್ಥಳಿಪ ವಜ್ರಕೆಂಪಿನ ತಾಳಿ ಚೌಕಳಿ ಮುತ್ತಿನ ಕುಂಡಲವಿಟ್ಟು ಮೋಹಿಸುತ ಬೀದಿಯೊಳು ಕತ್ತಿಯ ಉಡಿಯಲ್ಲಿ ಕಟ್ಟಿ ಕೈಯಲಿ [ತೇಜಿಯ] ಪಿಡಿದು 3 ರಂಭೆ ಮೊದಲಾದ ದೇವರಮಣಿಯರು ಕುಂಭದ ಆರತಿಯೆತ್ತಿ ಕೂಡಿ ಪಾಡಲು ಶಂಭು ಮುಖ್ಯ ನಿರ್ಜರರೆಲ್ಲ ಸ್ವಾಮಿ ಪರಾಕೆಂದೆನುತ ಅಂಬುಜಭವಾದಿಗಳ ಆಳಿದ ಶ್ರೀರಂಗಧಾಮ 4 ವೇದಘೋಷದಿಂದ ವಿಪ್ರರು ಸ್ತುತಿಸಲು ಮೋದದಿಂದ ಗಾಯಕರು ಹಾಡಿ ಪಾಡಲು ಹಾದಿ ಬೀದಿಯಲಿ ನಿಂತು ಸಜ್ಜನರಿಗೆಲ್ಲ ದೇವ ಆದರದಿಂದಿಷ್ಟಾರ್ಥವಿತ್ತು ಮೋದದಿಂದ ಮನ್ನಿಸುವ 5 ಹಚ್ಚನೆ ಹೆಸರುಬೇಳೆ ಹಾಲುಕೆನೆಗಳು ಮುಚ್ಚಿತಂದ ಕೆನೆಮೊಸರು ಮೀಸಲು ಬೆಣ್ಣೆಯು ಅಚ್ಚ ತುಪ್ಪದಿ ಪಕ್ವವಾದ ಅತಿರಸ ಹುಗ್ಗಿಗಳು ಮೆಚ್ಚಿವುಂಡು ಪಾನಕ ನೀರುಮಜ್ಜಿಗೆಗಳನೆ ಕುಡಿದು 6 ಸಣ್ಣಮುತ್ತು [ತೆತ್ತಿಸಿದ] ಸಕಲಾತಿ ಗೊಂಡ್ಯ ಹೊನ್ನ [ತೆತ್ತಿಸಿದ ಹೊಸ] ಹೊಳೆವ ಸೊಬಗಿನ ಉನ್ನಂತ ಗುಣರಾಯ ಉತ್ತಮರಾಜಾಶ್ವವೇರಿ ಎನ್ನ ಹಯವದನ ರಂಗ ಎಲ್ಲರಿಗಿಷ್ಟಾರ್ಥಕೊಡುವ 7
--------------
ವಾದಿರಾಜ
ತೊರವಿ ನರಸಿಂಹನ ಸ್ತೋತ್ರ ನರಹರೀ | ಪಾಲಿಸೊ ಎನ್ನ | ನರಹರೀ ಪ ನರಹರೀ | ನಮಿಸೂವೆ ನಿನ್ನ | ಚಾರುಚರಣ ಕಮಲಕ್ಕೆ ಮುನ್ನ | ಅಹತೊರವಿ ಕ್ಷೇತ್ರದಲ್ಲಿ | ಪರಿಪರಿ ಭಕುತರಮೊರೆಯ ಕೇಳ್ಕರುಣದಿ | ವರವ ನೀಡುತಲಿಹ ಅ.ಪ. ಪೂರ್ವ ಸಾಲಿಗ್ರಾಮ ರೂಪ | ದಲ್ಲಿದೂರ್ವಾಸ ಪೂಜಿತ | ರೂಪ | ಇದ್ದುಓರ್ವ ಭಕ್ತನಿಗೆ ಸಲ್ಲಾಪ | ತೇಜಗೈವದ ಕೇಳ್ವದು ಅಪರೂಪ | ಅಹಊರ್ವಿಯೊಳ್ ಚಿಮ್ಮಲಗಿ | ಸರ್ವಾಧಿಕವು ಕ್ಷೇತ್ರಇರ್ವೆ ನಾನಲ್ಲೀಗ | ತರ್ವೋದು ತೊರವೀಗೆ 1 ಸೊಲ್ಲ ಲಾಲಿಸಿ ಗಾಢ ಭಕ್ತ | ಎದ್ದುಚೆಲ್ಲೀದ ವಾರ್ತೆ ಸರ್ವತ್ರ | ಜನರಲ್ಲಸ ಗೊಳದೆ ಮುಂದತ್ತ | ಹಸಿಹುಲ್ಲನು ತೆಂಕದಿಶಿಯಿತ್ತ | ಅಹಚೆಲ್ಲುತ ಪೋಗುತಿರೆ | ಜ್ವಲೀಸಿತದುಚಿಮ್ಮಲ್ಲಿಗಿ ಊರ್ಬಳಿ | ಒಳ್ಳೆ ಕೃಷ್ಣಾತೀರ 2 ಸ್ವಪ್ನ ಸೂಚಿತ ತಾಣ ಬಗೆದು | ನೋಡೆಅಪ್ಪ ನೃಹರಿ ಕಂಡನಂದು | ಭಕ್ತರಪ್ಪಿ ಆನಂದಾಶ್ರು ಬಿಂಧು | ಕೈಚಪ್ಪಾಳೆ ಬಡಿದುಘೇಯೆಂದು | ಆಹಅಪ್ಪಾರ ಮಹಿಮನ | ಗೊಪ್ಪಾದ ಘನಮೂರ್ತಿಉಪ್ಪರಿ ತಂದಿಡುತ | ದರ್ಪದಿ ನಿಂತರು 3 ಶಿರಿ ಹಾಗೂ ಪ್ರಹ್ಲಾದರಾಯ | ಯುಕ್ತಹಿರಣ್ಯಕನ ತನ್ನ ತೊಡೆಯ | ಮೇಲೆಇರಿಸಿ ಉದರ ಸೀಳ್ದ ಬಗೆಯ | ಕೇಳಿಕರುಳನು ಮಾಲೆಯ ಪರಿಯ | ಆಹಧರಿಸುತ್ತ ತೋರ್ದನು | ಹಿರಣ್ಯಕಶಿಪೂಜತರಳ ಭಕ್ತನ ತೆರ | ತರಳನರಿದಿಷ್ಟೆಂದು 4 ಶಿಷ್ಟ ಮತ್ಸ್ಯಾವತಾರ | ಯುಕ್ತಶ್ರೇಷ್ಠ ಪ್ರಭಾವಳಿಹಾರ | ಸುವಿಶಿಷ್ಟದಿ ನರ ಮೃಗಾಕಾರ | ನಾಗಿಅಷ್ಟವು ಭುಜಯುಕ್ತಾಕಾರ | ಆಹಶಿಷ್ಟ ಭಕ್ತರಿಂದ ಕಷ್ಟವಿಲ್ಲದೆ ತೆರಳಿಶ್ರೇಷ್ಠ ತೊರವಿಯಲ್ಲಿ ಇಷ್ಟನಾಗಿ ನಿಂದ 5 ಮುನ್ನಿದ್ದ ನೃಹರಿಯ ಶಿಲೆಯ | ಕೊಂಡುಚೆನ್ನ ತೀರ್ಥದಿ ನರಹರಿಯ | ಇಡಲುಕೃಷ್ಣೆಗೆ ಪೋಗುವ ಪರಿಯ | ಪೇಳೆಘನ್ನ ಮೂರ್ತಿಯ ಒಯ್ದ ಬಗೆಯ | ಆಹ ಇನ್ನು ಮುನ್ನು ಪೇಳ್ವ | ನನ್ನೆಯ ಜನರಿಹರು ಮನ್ನಿಸುತೀವಾರ್ತೆ ಚಿನ್ಮಯನ ಕೊಂಡಾಡಿ 6 ಗುಪ್ತಾವು ಗಂಗಾ ಸನ್ನಿಹಿತ | ತೀರ್ಥಉತ್ತಮ ದಿಂದಭಿಷೇಚಿತ | ನಾಗಿನಿತ್ಯವು ಪವಮಾನ ಸೂಕ್ತ | ಪಂಚಯುಕ್ತವು ಪೂಜಾದಿ ಕೃತ | ಆಹಭಕ್ತಿ ಪೂರ್ವಕವಾದ | ಉತ್ತಮ ಸೇವೆಯನಿತ್ಯ ಕೈಗೊಳ್ಳುತ | ಭಕ್ತರಭೀಷ್ಟದ 7 ಮಾಸ | ಎರಡುಉತ್ಸವ ವೈಭವ ಘೋಷ | ಕೇಳಿ ಕುತ್ಸಿತ ಜನರೊಲ್ಲ ಈಶ | ಅಂತೆ ಸಚ್ಛಾಸ್ತ್ರ ಪ್ರವಚನ ಪೋಷ | ಆಹವತ್ಸಾರಿ ದುರುಳನ | ಕುತ್ಸಿತ ಉದರವವಿಸ್ತ್ರುತ ನಖದಿಂದ | ಕುತ್ತಿದ ಚಿಂತಿಸು 8 ನರಹರಿ ನಾಮಕ ಕವಿಯು | ಇಲ್ಲಿತೊರವಿಯ ನರಹರಿ ಸನಿಯ | ಚೆಲ್ವವರರಾಮ ಕಥೆಯನ್ನು ಬರೆಯು | ಅವ - ಕುವರ ವಾಲ್ಮೀಕಿಯೆ ಮೆರೆಯು | ಆಹತೊರವೆ ರಾಮಾಯಣ | ವಿರಚಿತ ವಾಯ್ತಿಲ್ಲಿಹರಿಯನುಗ್ರಹ ಜಾತ | ವರ ಕವಿತೆ ಉಲ್ಲಾಸ 9 ಹೃದಯ ಗುಹೆಯಲ್ಲಿ ವಾಸ | ಉಪನಿಷದು ಪೇಳ್ವದು ಅಂತೆಲೇಸ | ಬಲುಮುದದಿಂದ ಮಾಳ್ಪದ ವಾಸ | ಅಂಥಬುಧಜನಕಹುದು ಸಂತೋಷ | ಆಹವಿಧವು ಈ ಪರಿಯೆಂದು | ವಿಧಿಸಲು ಜಗತೀಗೆಹದುಳದಿ ತೊರವಿ ಸ | ನ್ನಿಧಿ ಗುಹೆಯೊಳುವಾಸ 10 ವಿಭವ | ದಿಂದಲೀವನು ಮುಕ್ತಿಯ ಸುಖವ | ಈತಕೈವಲ್ಯಾಕಧಿಪತಿ ಇರುವ | ಆಹತಾವಕನಾಗಿ ಗುರು | ಗೋವಿಂದ ವಿಠಲನಭಾವದಿ ನೆನೆವಂಗೆ | ತೀವರ ವರವೀವ11
--------------
ಗುರುಗೋವಿಂದವಿಠಲರು
ತೊರೆದು ಜೀವಿಸುಬಹುದೆ ಹರಿ ನಿನ್ನ ಚರಣವನುಬರಿಯ ಮಾತೇಕಿನ್ನು ಅರಿತು ಪೇಳುವೆನಯ್ಯ ಪ ತಾಯಿ ತಂದೆಯ ಬಿಟ್ಟು ತಪವ ಮಾಡಲುಬಹುದುದಾಯಾದಿ ಬಂಧುಗಳ ಬಿಡಲುಬಹುದುರಾಯ ಮುನಿದರೆ ಮತ್ತೆ ರಾಜ್ಯವನು ಬಿಡಬಹುದುಕಾಯಜಪಿತ ನಿನ್ನಡಿಯ ಬಿಡಲಾಗದು 1 ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದುಪಡೆದ ಕ್ಷೇತ್ರವ ಬಿಟ್ಟು ಪೋಗಬಹುದುಮಡದಿ ಮಕ್ಕಳ ಕಡೆಗೆ ತೊಲಗಿಸಿಯು ಬಿಡಬಹುದುಕಡಲೊಡೆಯ ನಿನ್ನಡಿಯ ಗಳಿಗೆ ಬಿಡಲಾಗದು 2 ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದುಮಾನಾಭಿಮಾನ ತಗ್ಗಿಸಲು ಬಹುದುಪ್ರಾಣನಾಯಕನಾದ ಆದಿಕೇಶವರಾಯಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು 3
--------------
ಕನಕದಾಸ
ತೊಲಗು ನೀ ತೊಲಗಿನ್ನು ಅಭಿಮಾನವೆಅಲೆಬಡಿಸದಿರೆನ್ನನೂ ಹಲವು ಜನರಕಾಲಕೆಳಗೆ ನಿಲ್ಲಿಸಿಯನ್ನ ಹೊಲೆಗೆಲಸವ ಮಾಡಲೆಳಸಿ ನೆಗ್ಗಿದೆಯಲ್ಲ ಪಸತಿಸುತ ಪೋಷಣೆಯು ಮುಖ್ಯವು ಮಾತಾಪಿತೃಗಳಾರಾಧನೆಯು ಬಳಗ ಬಂಧು ತತಿಗಳ ಮನ್ನಣೆಯು ಕುಲ ಜಾತಿ ದೇವತೆಯ ಪೂಜಿಪ ಹಬ್ಬವು ಬಿಡಕೂಡದುವ್ರತ ಉಪವಾಸವಾರತಿಯಕ್ಷತೆಯು ಮುಂಜಿಯುಸುತೆಗೆ ಮದುವೆಯೆಂದು ಮತಿಗೆಡಿಸಿದೆಯಲ್ಲ 1 ಅರೆಘಳಿಗೆಯು ನಿಲ್ಲಲು ವೇಳೆಯ ಕೊಡದೆರಗಿಸಿ 'ಷಯದೊಳು ನಾನಾ ಬಗೆಹರುಬಿಗೆ ಹರುಸಲು ಮನವನೀಕೊರಗಿಸಿ ಕುಣಿಸುತಲು ಒಂದೇ ಕ್ಷಣಹರಿನಾಮ ಸ್ಮರಣೆಗೆ ತೆರಹುದೋರಿಸದಾಯುಹರಿದು ಪೋಗುವ ಹಾಗೆ ಕರಗಿಸಿದುದೆ ಸಾಕು 2ಶ್ರವಣಕೆ ಮನ'ತ್ತೆಯಾ ನಾಮ ಸ್ಮøತಿ ಸ'ಯ ಸೇ'ಸಬಿಟ್ಟೆಯ ಸಜ್ಜನರೊಳೊಂದುವ ದಾರಿಯ [ತೋರಿ]ದೆಯ ಎಂದಾದರು ಶಿವಸೇವೆಗಳ ತಂದೆಯ 'ೀಗಾಗುವ ಹವಣನರಿಯದೆ ಸಂಗವ ಮಾಡಿ ನಿನ್ನೊಳಗ'ವೇಕವನು ಪಡೆದವನಾದೆನಯ್ಯಯ್ಯೊ 3ಕಂಡವರೊಡವೆಯನು ತಂದು ಕರೆದು'ಂಡು ಬಳಗವನ್ನು ಮನ್ನಿಸಿಯವರ್ಕೊಂಡಾಡೆ ಹರುಷವನು ತೋರಿಸಿ ಬಹಭಂಡಾಟನಡತೆಯನು ಕರೆಸಿಯನ್ನಗುಂಡಿಗೆ ನೂಕಿಸೆ ಕಂಡೆ ನಿನ್ನಾಟವಮೊಂಡಮುಂಡೇದೆನ್ನೀ ಕೂಗಕೇಳಿ ಬೇಗ 4ಶ್ರೌತ ಸ್ಮಾರ್ತದ ಬಟ್ಟೆಯ ಹೊಂದುವರೆ ನೀನೋತು ಮಾರ್ಗವ ತೊಟ್ಟೆಯ ಅನ್ಯಾಯದ ರೀತಿಯ ನೀ ಬಿಟ್ಟೆಯ ನರಕಬಪ್ಪ ಭೀತಿಯ ನೀತೊಟ್ಟೆಯ ಯೇನೆನ್ನದೆಲೆಕಾತರಿಸುತ ಕಾಮಕಾತು ಕ್ರೋಧವ ಮಾಡಿಮಾತಿಗಾದರು ಒಮ್ಮೆ ಸೋತವನಾದೆಯ 5ಕಲಹವ ಜನರೊಳಗೆ ಗಂಟಿಕ್ಕಿತುತೊಲಗಿಸಿ ಬಯಲೊಳಗೆ ನಿಲ್ಲಿಸಿಯೆನ್ನಹಲವು ಬಗೆಯ ಮಾತಿಗೆ ಗುರಿಯ ಮಾಡಿಬಳಲಿ ಬಾಡುವ ರೀತಿಗೆ ಕಂಗೆಡಿಸಿದೆಕಾಲದೊಳು ಧನದೊಳು ಬಲದೊಳು ಛಲದೊಳುನೆಲೆಗೊಂಡು ನೀಯೆನ್ನ ಥಳಿಸಿದುದೇ ಸಾಕು 6ಅರಿಯದಾದೆನು ನಿನ್ನನು ಅದರಿನಿಂದಹುರಿದೆ ನೀನೆನ್ನುವನು ಚಿಕ್ಕನಾಗಪುರದೊಳಗಜ್ಞರನು ರಕ್ಷಿಸಲಾಗಿಗುರುವಾಸುದೇವಾರ್ಯನು ನೆಲಸಿಹನುಮರೆಯೊಕ್ಕೆರಗಿ ನಿನ್ನ ಪರಿಯ ಪೇಳಲು ಜ್ಞಾನದುರಿಯೊಳು ದ'ಪನೆಚ್ಚರ ನಿಲಬೇಡಿನ್ನು 7
--------------
ವೆಂಕಟದಾಸರು
ತೊಳೆಯಲಿ ಬೇಕಿದನು ಮನುಜಪ ಭವಕೂಪದಿ ಬಿದ್ದು ತೊಳಲಿ ಬಳಲಿ ಬಳಲಿ ಮಲಿನವಾಗಿಹ ಮನ ಹರಿಧ್ಯಾನ ಜಲದಲಿ ಅ.ಪ ಕಾಮಕ್ರೋಧದಿಂದ ಜನಿಸಿದ ಲೋಭಮೋಹ ಲೋಭದಿಂದ ಮದಮತ್ಸರ ಷಡ್ವಿಧ ತಾಪಗಳಿಂದ ಹದಗೆಟ್ಟಿರೆ ಮನ ಮುದದಿ ಹರಿಧ್ಯಾನದಿ 1 ದುರ್ಜನ ಸಂಗದೊಳು ಸೇರುತ ಮನ ವರ್ಜಿಸಿ ಹರಿ ಚರಿತ ಅರ್ಜುನ ಸಖ ಸರ್ವೇಶನ ನಾಮವು ಲಜ್ಜೆಯಿಲ್ಲದೆ ಸ್ಮರಿಸುತ ನಲಿಯಲು ಮನ 2 ಜನನ ಮರಣ ಕ್ಲೇಶದಿ ದು:ಖದಿ ಮನ ಮರಳಿ ಮರಳಿ ಪಾಪದಿ ಎಣಿಕೆ ಇಲ್ಲದ ದೋಷದೊಳಗೆ ಮುಸುಕಿದ ಮನ ನಿತ್ಯ 3 ಇಂದಿರೇಶನ ಧ್ಯಾನವ ಮಾಡಲು ಮನ ವೃಂದವ ಕೂಡಿ ಮಂದೋರದ್ಧರ ಗೋ_ ವಿಂದನೆನ್ನಲು ಮನ 4 ನಿಚ್ಚ ಭಕುತಿಯಿಂದ ಶ್ರೀ ಹರಿಪಾದ ಅರ್ಜಿಸಿಮುದದಿಂದ ರುಕ್ಮಿಣಿಯರಸನ ಸತ್ಯಸಂಕಲ್ಪನ ಮೆಚ್ಚಿಸಿ ಮುಕುತಿಯ ನೈದಲು ಈಮನ 5 ಮಧ್ವಮತದಿ ಜನಿಸಿ ನಿರಂತರ ಮಧ್ವರಾಯರ ಭಜಿಸಿ ಸದ್ವೈಷ್ಣವರ ಸಂಗದೊಳಾಡುತ ಲಜ್ಜೆತೊರೆದು ಕಾಲಗೆಜ್ಜೆ ಕಟ್ಟಲುಮನ6 ಕಂಬು ಚಕ್ರಧಾರಿ ಶ್ರೀ ಶೌರಿ ನಂಬುವರಾಧಾರಿ ಶಂಬರಾರಿಪಿತ ನಂಬಿದೆ ನಿನ ಪಾದ ಶಂಭುವಂದಿತ ಪಾಲಿಸಿಂದು ಸ್ಮರಿಸಲು ಮನ 7 ತೊಳೆದು ತೊಳೆದು ವಿಷಯ ವಾಸನೆಯನ್ನು ಹಲವು ವಿಧದಿ ತೊಳೆದು ಕಲುಷದೂರನ ನಾಮ ಸ್ಮರಣೆಯ ಮಾಡಲು ಮರುತ ಮತದ ಸಂಗ ದೊರೆವುದು ತವಕದಿ8 ಕಳವಳಿಸದೆ ಮನವು ನಿಶ್ಚಲದಲಿ ಥಳ ಥಳ ಥಳ ಹೊಳೆಯೆ ಕಮಲನಾಭ ವಿಠ್ಠಲವಲಿದು ಪಾಲಿಸುವನುಹಲವು ಬಗೆಯಲಿ ಹಂಬಲಿಸದೆ ಮನ 9
--------------
ನಿಡಗುರುಕಿ ಜೀವೂಬಾಯಿ
ತೋರುವನೂ | ದಯ ದೋರುವನೂ|| ಭಕ್ತರಿಗೆ | ದಯ| ದೋರುವನು ಪ ತೋರುತಲವರನು | ಪರಿಪರಿವಿಧದೊಳು ಪೊರೆಯುವನೂ | ಹರಿ | ಮೆರೆಯುವನೂಅ. ಪ ಆದಿಯೊಳಾ| ತಮನೆಂಬಾಸುರನನು || ಭೇದಿಸಿ ವೇದವ ತಂದವನು || ಮೋದದಿ ಗಿರಿಯನು | ಕೂರ್ಮವತಾರದಿ | ಸಾಧಿಸಿ ಬೆನ್ನೊಳು ಪೊತ್ತವನು 1 ಧರಣಿಯ ಕದ್ದೊಯ್ದಸುರನ ಬಗಿಯಲು | ವರಾಹವತಾರವ ತಳೆದವನು|| ನರಮೃಗರೂಪದೊ| ಳುದಿಸುತ ಕಂಬದಿ| ವರ ಪ್ರಹ್ಲಾದನ ಪೊರೆದವನು 2 ಬಲಿಯೊಳು ದಾನವ |ಬೇಡುತ ಮೂರಡಿ| ಯೊಳಗಿಳೆಯನು ತಾನಳೆದವನು|| ಭಾರ್ಗವನೂ ಭೃಗು ಮೊಮ್ಮಗನು| 3 ಶರಣಗೆ ಲಂಕಾ| ಪುರದೊಡೆತನವನು| ಸ್ಥಿರವಾಗಿತ್ತಿಹ ರಾಘವನು|| ತುರುಗಳ ನಿಕರವ ಪೊರೆದವನು 4 ಬೌದ್ದವತಾರವ | ಧರಿಸಿದ ಮಹಿಮನು| ಕಲ್ಕಿಸ್ವರೂಪದಿ ಮೆರೆಯುವನು|| ಶ್ರಧ್ದೆಯೋಳವನನು | ಭಜಿಸಲು ಮುದದಲಿ | ಅಬ್ಧಿವಾಸ ಮೈದೋರುವನು 5 ಮಧುವನದಲಿ ಧ್ರುವ | ತಪವಾಚರಿಸಲು | ಮುದದೊಳು ಧ್ರುವಪದವಿತ್ತವನು | ಸುದತಿಯು ಮೊರೆಯಿಡ | ಲಕ್ಷಯ ಸೀರೆಯ | ಇತ್ತವನೂ ದಯವಿತ್ತವನು6 ಶೇಷಗಿರೀಶನು | ದಾಸರಿಗೊಲಿದವ | ರಾಸೆಯ ಸಲಿಸಿದ | ಶ್ರೀವರನು || ಶೇಷಶಯನ ಹರಿ | ದಾಸದಾಸನೆ | ನ್ನಾಸೆಯನೂ ತಾನೀಯುವನು 7 ಪಂಕಜನಾಭನು | ಪರಮಪವಿತ್ರನು | ಕಿಂಕರಜನಪರಿಪಾಲಕನು || ಶಂಕಚಕ್ರಂಗಳ ಧರಿಸಿದ ಶ್ರೀಪತಿ | ವೆಂಕಟೇಶ ದಯದೋರುವನು 8
--------------
ವೆಂಕಟ್‍ರಾವ್
ತೋರೊ ನಿನ್ನಯ ಮೂರ್ತಿಯ ಮೂರ್ತಿ ಬೀರೊ ಹೃದಯವೆಂಬೊ ನೀರಜಹಾದೊಳಗೆ ಸಾರೋ ಸಾರಿ ಸಾರಿಗೆ ಸೇರೊ ಬಾರೊ ಬಾರೊ ಪರಿವಾರದೊಡನೆ ಮನಸೂರೆಗೊಡುವೆ ಕಂ ಸಾರಿ ಮುರಾರಿ ಪ ತುಂಬೆ ವಿಶ್ವಮಾಯಾದ ಬೊಂಬೆ ನಾಮ ಪೀಯೂಷ ಉಂಬೆ ಸೇವೆಯ ಕೈಕೊಂಬೆ ಅನ್ಯರ ನಂಬೆ ಕಾಂಬೆ ನಮಿಸಿ ಪಾಲಿಸೆಂಬೆ ಕಾಲಿಗೆ ಮನ ದುಂಬೆ ದಂತೆ ಎರಗಿ ಅಂಬೆ ಪಿಡಿವಾಕೊಂಬೆ ಅಂಬುಜಾಕ್ಷ ನೀ ನೆಂಬದು ಸುರನಿಕರಂಬ ಹಂಬಲಿಸಲು ದಿಂಬಾಗಿ ಕರ್ಣಾವಲಂಬನವಾಯಿತು ಇಂಬಿಡು ಪ್ರಾಙ್ಞನೆಂದೆಂಬ ಮೂರುತಿಯಾ1 ಸ್ನಾನ ಪ್ರಣಮ ವಾಚಾ ಮಾನದಿಂದಲಿ ಬಲು ಮೌನವಾಗಿದ್ದು ಮಾಳ್ಪ ಧ್ಯಾನವು ಇತ್ತು ಮಾಜ್ಞಾನಾ ನಾನಾ ಪ್ರಕಾರದಿಂದ ದಾನಧರ್ಮಂಗಳ ನಿ ದಾನ ಕೊಂಡಡಲಾಮೇಲೆ ನೆನೆವೆನನುದಿನ ಮಾನವನ ಹೀನವ ನಾಡದೆ ನೀನೆನಿಸದೆ ಸುಮ್ಮನದಿಂದಲಿ ನೋಡೊ ದಾನವನ ವಡಲನು ಬಗದು ಕರುಳನು ವನಮಾಲೆ ಹಾಕಿದ ಶ್ರೀನಿಕೇತನ 2 ಇಂದು ಮಾಡುವದೇನು ಚಂದ ಭಕ್ತರಿಗತಿ ಬಂಧವನೆ ಯಾಕೆಂದಾ ಅಂದ ರಕ್ಕಸನಾಗಿ ಕೊಂದಾವರದ ಮುಕ್ಕುಂದಾ ವಂದಿತ ಮರ ವೃಂದಾ ಕರುಣದಿಂದಾ ಎಂದಿಗೆಂದಿಗೆ ಎನ್ನಿಂದಗಲದೆ ಗೋ ವಿಂದ ಇಂದಿರಾಪತಿ ಸುಂದರ ವಿಗ್ರಹ ಮಂದಿರದೊಳು ಸುಮದಾಸನದಲ್ಲಿ ಬಂದು ವಿಜಯವಿಠ್ಠಲೆಂದು ನೀನಿಂದು3
--------------
ವಿಜಯದಾಸ
ತ್ರಾಣಿ ಶ್ರೀ ಕೃಷ್ಣವೇಣಿ ಪ್ರಾಣಪತಿ ಪದಕಮಲ ಕಾಣಿಸು ಹೃದಯದಿ ತ್ರಾಣಿ ಶ್ರೀ ಕೃಷ್ಣ ವೇಣಿ ಪ ಯಮಧರ್ಮತನಯೆ ಶ್ರೀ ಕೃಷ್ಣ ಸಂಗದಿ ಜನಿಸಿ ಕಮಲ ಸಂಭವನ ಲೋಕದಲಿ ಮೆರೆದೆ ಸುಮನಸರ ನುಡಿಗೇಳಿ ಲೋಕಗಳ ದುರಿತೋಪ ಶಮನ ಗೊಳಿಸಲು ಬಂದೆ ತುಮಲ ಹರುಷದಲಿ 1 ಭೂತನಾಥನ ಜಟಾಜೂಟದಿಂದುದ್ಭವಿಸಿ ಶ್ವೇತಪಿಂಗಳ ಶೈಲಶಿಖರಕಿಳಿದೇ ಭೂತಳಕೆ ಭೂಷಣಳೆನಿಸಿ ಪೂರ್ವವನಧಿ ನಿ ಕೇತನವನೈದಿ ಸುಖಿಸಿದಿ ನಿನ್ನ ಪತಿಯೊಡನೇ 2 ಪ್ರಾಣಿಗಳು ನಿನ್ನ ಜಲಪಾನವನು ಗೈಯೆ ನಿ ತ್ರಾಣ ಸಂಹಾರ ವ್ಯಾಧಿಗೆ ಭೇಷಜಾ ಪ್ರಾಣ ಪ್ರಯಾಣ ಪಾಥೇಯವೆಂದರಿಯೆ ನಿ ರ್ವಾಣಪದವಿತ್ತು ಕಲ್ಯಾಣವಂತರ ಮಾಳ್ಪೆ 3 ಜನಪದಗಳಾಗಿ ಕಾನನವಾಗಿ ಮನ್ವಾದಿ ದಿನಗಳಲ್ಲಾಗಿ ಮತ್ತೇನಾಗಲೀ ಮನುಜ ಮಜನಗೈಯೆ ವಾಜಪೇಯಾದಿ ಮಖ ವನುಸರಿಸಿದಕೆ ಫಲವೇನು ತತ್ಪಲವೀವೆ 4 ಅರವತ್ತು ಸಹಸ್ರ ವರುಷಂಗಳಲ್ಲಿ ನಿ ರ್ಜರ ತರಂಗಿಣಿಯ ಮಜ್ಜನದ ಫಲವು ಗುರುವು ಕನ್ಯಸ್ಥನಾಗಿರಲು ಒಂದಿನ ಮಿಂದ ನರರಿಗಾ ಪುಣ್ಯಸಮನೆನಿಸಿ ತತ್ಫಲವೀವೇ 5 ಮನನಶೀಲ ಸುಯೋಗಿಗಳಿಗಾವ ಗತಿಯು ಇಹ ವನುದಿನದಿ ನಿನ್ನ ತೀರದಲಿ ಇಪ್ಪಾ ಮನುಜೋತ್ತಮರಿಗೆ ಆ ಗತಿಯಿತ್ತು ಪಾಲಿಸುವೆ ಅನುಪಮ ಸುಕಾರುಣ್ಯಕೆಣೆಗಾಣಿ ಜಗದೊಳಗೆ 6 ತಾಯೆ ಎನ್ನನುದಿನದಿ ಹೇಯ ಸಂಸಾರದೊಳ ಗಾಯಾಸ ಗೊಳಿಸದಲೆ ಕಾಯಬೇಕೊ ವಾಯುಪಿತ ಶ್ರೀ ಜಗನ್ನಾಥ ವಿಠ್ಠಲ ಹೃ ತ್ತೋಯಜದೊಳಗೆ ಕಾಂಬುಪಾಯ ಮಾರ್ಗವ ತೋರೆ 7
--------------
ಜಗನ್ನಾಥದಾಸರು