ಒಟ್ಟು 16362 ಕಡೆಗಳಲ್ಲಿ , 134 ದಾಸರು , 7361 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೊಲಿಯಬೇಕು ನೀನೊಲಿಯಬೇಕು 'ಜ್ಞಾನ'ೀನನಿಗೆ ನಿತ್ಯಾನಂದ ಮೂರುತಿಯೆ ವಾಸುದೇವಾರ್ಯ ಪನರಳಿ ಬಹುಭವದಿ ನಾನಾ ಯೋನಿಮುಖಗಳಿಂದುರುಳಿ ಕೋಟಲೆಗೊಂಡು ಪುಳು ಪಕ್ಷಿ ಪಶು ಜಲಜತರು ಶಿಲೆಗಳೆನಿಪ ಹಲವಲಿ ನವೆಸವೆದು ಸ್ತ್ರೀಪುರುಷತ್ವ ಭೇದವಹ ನರಜನುಮ ಬಹರೆ 1ಪುರುಷನೆನಿಸಿದರು ಪಾದೋರು ಬಾಹುಜ ಭೇದವರಿತು 'ಪ್ರತ್ವ 'ದ್ಯಾ ನಯ 'ಜ್ಞಾನಶರಧಿಯೆನಿಸುವ ಭಾಗ್ಯ ಬರುವ ಸಾಧನಗಳನುಕರುಣಿಸುವ ಪರಮೇಶನೊಲಿವಂತೆನಗೆ 2'ವೃತ ಫಲವಹ ಸಶಾಸ್ತ್ರ ನಿಗಮಾಧೀತಿಯೊಪ್ಪದಿತದುಕ್ತ ಕರ್ಮಾಚರಣೆಗೈಯುತ ಸಮರ್ಪಿಸುತ್ತೀಶ್ವರಗೆ ತತ್ಫಲವ ಬಯಸದೆತೆಪ್ಪಗಿರುವಧಿಕಾರಿಯಪ್ಪ ಸತ್ಪಥಕೆ3ಶೃತಿಯುಕ್ತಿ ಸ್ವಾನುಭವಗಳ ಬಲದಿ ಮನನಗೈಯುತಲಿ ನಿತ್ಯಾನಿತ್ಯ ವಸ್ತುಗಳ ತಿಳಿದನರ್ಥತೆಯರ್ಥಗಳೊಳು ವೈರಾಗ್ಯ ಭಾಗ್ಯವನೀವಮತಿ ಬಂದು ಭಕತಿ ಜ್ಞಾನಗಳಳವಡುವರೆ 4ಬಂದ ವೈರಾಗ್ಯ ನೆಲೆಗೊಂಡು ಬಳಸಿದ ಕ್ರಿಯಾದಂದುಗವು ಸಡಿಲಿ ಬ'ರಂಗ ವ್ಯಾಪಿಸಿ ಕನಸೆಂದು ಕಾಣುತಲೂಡಲುಣುತಲುಡಿಸಿದರುಡುತತಿಂದು ತೇಗುವ ಕರ್ಮ ಬೆಂದು ಸುಖಿಯಹರೆ 5ಹೊರಗೊಳಗುಗಾಣದಾಗಸದಂತೆ ಬಯಲಾಗಿಕರಣಗಳ ಕಾಲಾಟವುಡುಗಿ ಸ್ವ ವ್ಯತಿರಿಕ್ತವರಸಿದರು ಸಂತೃಪ್ತಿ ತೋರದೆ ಸ್ವಾನುಭವಬರಿಯರಿವೆ ನೆಲೆಯಾಗಿ ತಾನೆ ತಾನಹರೆ 6ನಿಂತವೇದಾಂತ ಪದ್ಧತಿಯ ನಿಲಿಸುವರೆ ಮೊದಲಂತೆ ಕೃಷ್ಣಾವತಾರದಿ ಪಾರ್ಥಗೊರೆದ ಕೃಪೆವಂತ ನೀ ಮರಳಿ ಚಿಕನಾಗಪುರದಲಿ ಹೊಳೆದನಂತಮ'ಮನಾಗಿರುವೆ ವಾಸುದೇವಾರ್ಯ 7
--------------
ತಿಮ್ಮಪ್ಪದಾಸರು
ನೀಯೆನ್ನ ಸದ್ಭಾಗ್ಯ ಆನಂದ ನಿಧಿಯೊ ಪ ಮಧುವೈರಿ ತಾಯಿಯಂದದಿ ಕಾಯೊ ಅ.ಪ ಏನಾಗುವ ಪ್ರೀತಿ ನಿನ್ನಿಂದ ಎನಗಯ್ಯ ಜ್ಞಾನಾದಿ ಆನಂದ ಸುಗುಣ ಸಿಂಧು ದೀನ ಬಾಂಧವ ನಿನ್ನಧೀನದವ ನಾನಯ್ಯ ನಿತ್ಯ ಪವಮಾನ ಹೃತ್ಸದನ 1 ವಿದ್ಯ ಬುದ್ಧಿ ಜ್ಞಾನ ಮನಕರಣ ಶಕ್ತಿ ಸದ್ಧೈರ್ಯ ಸುಖನಿಧಿಯು ನಿರ್ಭೀತ ಪದವಿ ಅದ್ವಯನೆ ನೀನೆನಗೆ ಅನಿಮಿತ್ತ ಬಂಧು ಹರಿ ಸಿದ್ಧಿಸೈ ಈ ಜ್ಞಾನ ಸರ್ವಕಾಲದಿ ದೇವ 2 ನಾನು ನನ್ನದು ಎಂಬ ದೋಷದ ಮಕರಿ ಗಾನೆ ಸಿಕ್ಕಿದ ತೆರದಿ ಮೊರೆಯುತಿಹೆನೊ ದಾನವಂತಕನೆ ಶ್ರೀ ಜಯೇಶವಿಠಲ ದೀನ ಕರಿಯನು ಪೊರೆದ ತೆರದಿ ಸಲಹೊ ಎನ್ನ 3
--------------
ಜಯೇಶವಿಠಲ
ನೀರಜಗಂಧಿಯೇ ಹೇಳೇ ಸುಳಿದವರಾರಮ್ಮಾ | ನೀರಜ ಶರಪತಿ ಕಾಣಮ್ಮಾ ಪ ಅರುಣನಖಾಂಗುಲಿ ಗುಲ್ಫ ಗೆಜ್ಜೆ ಕಾ- ಪುರ ನೂಪುರದ ಲೊಪ್ಪುವನವದಾರಮ್ಮಾ | ಸರಸಿಯೊಳಗಪೊಕ್ಕು ತಮನಸುವ ಬಗೆದು | ವರಶೃತಿ ತಂದವ ಕಾಣಮ್ಮಾ 1 ಕಲಿ ದಶನಂದದಿ ಜಂಘೆ ಪೊಂಬಾಳೆಯ | ಪರಿಯ ತೊಡೆಯುಳ್ಳುವ ದಾರಮ್ಮಾ | ಶರಧಿ ಮಥಿಸುವಂದುಗಿರಿನಿಲ್ಲದಿರೆ ಬಂದು | ಭರದಿ ಬೆನ್ನೆವಿತ್ತವ ಕಾಣಮ್ಮ2 ಕಾಂಚನ ವಸನನಿರಿಯ ಮ್ಯಾಲ ವಡ್ಯಾಣ ಮಿಂಚಿನ ಘಂಟೆಯ ದಾರಮ್ಮಾ | ಕ್ಷಿತಿ ವಯ್ದದನುಜನ ಶೀಳಿ ವಿ | ರಂಚಿ ಗುಳಹಿದವ ಕಾಣಮ್ಮಾ3 ಕಿರಿಡೋಳ್ಳಾತ್ರಿವಳಿಯ ನವರತ್ನ ಪದಕಿಹ | ಉರಸಿನ ವತ್ಸನವ ದಾರಮ್ಮಾ | ನರಹರಿ ರೂಪದಿ ಹಿರಣ್ಯಕನನು ಕೊಂದು | ಶರಣನ ಕಾಯ್ದವ ಕಾಣಮ್ಮಾ4 ಕೌಸ್ತುಭಹಾರ ಮೌಕ್ತಿಕದ ಕೊರಳಲಿಹ | ಹಸ್ತ ಕಡಗದವ ನಾರಮ್ಮಾ | ಸ್ವಸ್ತಿ ಎನುತ ಬಂದು ಬೇಡಿ ಬಲಿಯಾಗರ್ವ | ಸ್ವಸ್ತಿ ಮಾಡಿವನು ಕಾಣಮ್ಮಾ5 ಕ | ಪೋಲ ಹೊಳಹಿನವ ದಾರಮ್ಮಾ | ಏಳು ಮೂರು ಬಾರಿ ಕ್ಷತ್ರಿಯ ರಾಯರ ಸೋಲಿಸಿ ಬಂದವ ಕಾಣಮ್ಮಾ6 ಕರ್ಪೂರ ಕರಡಿಗಿ ಬಾಯಿ ಸಂಪಿಗೆಯಂತೆ | ತೋರ್ಪ ನಾಶಿಕದವ ದಾರಮ್ಮಾ | ದರ್ಪ ಮುರಿದು ರಾವಣನ ತಲಿಯ ಧರೆ | ಗೊಟ್ಟಿಸಿದವ ನಿವ ಕಾಣಮ್ಮಾ7 ಕುಡಿಗಂಗಳ ಭ್ರೂಲತೆಯ ಪೆರೆನೆಣೆಸಲು | ಪೊಡವಿಯೊಳಗ ನಂಬಿದ್ದ ಪಾಂಡವರನು | ಬಿಡದೆ ಸ್ಪಾಪಿಸಿದವ ಕಾಣಮ್ಮಾ8 ಕುರುಳು ಗೂದಲು ತಳಕದ ಮಾಲ್ಯ ಮೌಲಿಕ | ಧರಸಿದ ಮುಕುಟವ ದಾರಮ್ಮಾ | ತರಳನಾಗಿ ಮುಪ್ಪುರ ನಾರಿಯರ ವೃತ | ತ್ವರಿತದಿ ಅಳಿದವ ಕಾಣಮ್ಮಾ9 ನೋಡಲು ಮನಸಿಗೆ ಮೋಹನೆ ಮಾಡುವ | ಪ್ರೌಡದಿ ಮನವವ ದಾರಮ್ಮಾ | ರೂಢಿಲಿ ಕುದುರೆಯ ಏರಿ ಕಲಿಮಲವ | ಝಾಡಿಸಿದವನಿವ ಕಾಣಮ್ಮ10 ಸಹಜದಿ ಸವಿಸವಿ ಮಾತಲಿ ಸೋಲಿಸು | ತಿಹ ಸರ್ವರಿಗಿವ ದಾರಮ್ಮಾ | ಮಹಿಪತಿ ಸುತನ ಹೃದಯದಲಿ ನಿಂತು ತನ್ನ| ಮಹಿಮೆ ಬೀರಿಸುವವ ಕಾಣಮ್ಮಾ11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರಜಾಕ್ಷ ನಿನ್ನೂರಿಗೆ ಪೋಗುವ ದಾರಿಯ ತೋರಯ್ಯ ಪ ದಾರಿಯ ಕಾಣದೆ ಅ.ಪ ಜನ್ಮಾಂತರ ಕೃತ ಕರ್ಮಗಳೆಂಬುವ ಹೆಮ್ಮರಗಳು ಬೆಳೆದು ಧರ್ಮನಿರೋಧ ವಿಕರ್ಮದ ಬಳ್ಳಿಯು ಬಿಮ್ಮನೆ ಬಿಗಿವಡೆದು ಕಂಟಕ ವೆಮ್ಮನು ಕಾಲಿಡಲಮ್ಮಗೊಡವು ಹರಿ1 ದಾರಿಯೊಳಡಸಿಹುದು ರಾರು ಮಂದಿ ಮುಳಿದು ಸಾರಿ ಸಾರಿ ಬಾಯಾರಿಸುತಿರ್ಪವು 2 ಯನು ದಾಂಟುವೊಡರಿದು ಧನಕನಕಾದಿಗಳೆನಿಪ ಪಿಶಾಚಗಳನವರತವು ಬಿಡವು ತನು ಸಂಬಂಧದ ಜನಗಳು ದುರ್ಮೃಗ ವನು ಪೋಲುತ ನಮ್ಮನು ಬಾಧಿಸುತಿರುವರು 3 ಕ್ಷುದ್ರವಿಷಯಗಳುಛಿದ್ರವಹುಡುಕುವ ವಧ್ರುವದೇಹದೊಳು ಕದ್ರುಸುತರವೊಲುಪದ್ರವ ಗೈವ ಭದ್ರದ ಭೀತಿಗಳೂ ಪದ್ರವ ಜರೆಯೆಂಬುದ್ರಿಕ್ತಾಂಗನೆ 4 ಸುರನರವರರೊಳು ಶರಣೋಪಾಯವರ ವರದವಿಠಲ ನಿಜ ಚರಣವ ನಂಬಿದೆ 5
--------------
ವೆಂಕಟವರದಾರ್ಯರು
ನೀರಜಾಕ್ಷ ನಿರ್ದಯವ್ಯಾಕೊ ಕರುಣದಿ ಎನ್ನಾ ಪ ಒಡಲಿಗನ್ನಾ ತೊಡಲು ಅರಿವೆ ಕೊಡುವವರನು ನಾ ಕಾಣೆ ಹರಿಯೇ ಬಡತನ ಕಂಗೆಡಿಸಿತೋ ಕಡೆಗ್ಹಾಯಿಸಯ್ಯ ತ್ವರದಿ ಗುಣಮಣಿಯೇ 1 ಖೂಳ ಜನರ ಆಳಾಗಿ ನಾ ಹಾಳು ಒಡಲನ್ನು ಹೊರೆಯಲಾರೇ ಕೂಳಿಗೋಸುಗ ಬಾಳಾಯ್ತೀಪರಿ ತಾಳಲಾರೆ ಕಾಯೋ ಮುರಾರೇ2 ನೀ ಕೈಬಿಡಬ್ಯಾಡೋ ಶ್ರೀ ಹನುಮೇಶವಿಠಲನೆ ಎನ್ನಾ ಇಷ್ಟದಂದರಿ ಥಟ್ಟನೆ ಮಾಡೋ 3
--------------
ಹನುಮೇಶವಿಠಲ
ನೀರಜಾಕ್ಷನಿನ್ನೂರಿಗೆ ಪೋಗುವ ದಾರಿಯ ತೋರಯ್ಯ ಪ ತೊಳಲುವೆ ದಾರಿಯ ಕಾಣದೆ ಅ.ಪ. ಜನ್ಮಾಂತರಕೃತ ಕರ್ಮಗಳೆಂಬುವ ಹೆಮ್ಮರಗಳು ಬೆಳೆದು ಧರ್ಮನಿರೋಧವಿ ಕರ್ಮದ ಬಳ್ಳಿಯು ಬಿಂಮನೆ ಬಿಗಿವಡೆದು ಲಮ್ಮಗೊಡವುಹರಿ 1 ಮೀರಿಬರಲುಘನ ಚೋರರು ಕಾದಿಹರಾರುಮಂದಿ ಮುಳಿದು ಸಾರಿ ಬಾಯಾರಿಸುತಿರ್ಪವು 2 ದಾಂಟುವೊಡರಿದು ಧನಕನಕಾದಿಗಳೆನಿಪ ಪಿಶಾಚಗಳನವರತವು ಬಿಡವು ಪೋಲುತ ನಮ್ಮನು ಬಾಧಿಸುತಿರುವರು3 ಕ್ಷುದ್ರವಿಷಯಗಳು ಛಿದ್ರವಹುಡುಕುವ ವಧ್ರುಗದೇಹದೊಳು? ಕದ್ರುಸುತರವೋಲುಪದ್ರವಗೈವವಭದ್ರದ ಭೀತಿಗಳೂ ಜರೆಯೆಂಬುದ್ರಿಕ್ತಾಂಗನೆ4 ನರಿಗಳ ಪರಿಯಲಿ ನರಳುವರೆಲ್ಲರು ನರಕಗಳನುಭವಿಸಿ ವರದ ವಿಠಲನಿಜ ಚರಣವೆ ನಂಬಿದೆ 5
--------------
ಸರಗೂರು ವೆಂಕಟವರದಾರ್ಯರು
ನೀರಜಾಕ್ಷೇರೆಲ್ಲ ಬಂದು ಮಾರಜನಕಗೆ ಆರತಿ ಎತ್ತಿರೇ ನಾರಿಮಣಿ ಶ್ರೀ ರುಕ್ಮಿಣಿಮಣಿಗೆ ಪ ವೇದವನು ಕದ್ದ ಖಳನ ಬೇಧಿಸಿದವಗೆ ಆದರದಿಂದ ಮಂದರವೆಂಬೋ ಭೂಧರ ತಂದವಗೆ 1 ಕುಂಭಣಿಯನ್ನು ಬಿಡದೆ ತಂದ ಕುಂಭಿಣಿರಮಣಗೆ ಕಂಭದಿ ಬಂದು ದನುಜ ಡಿಂಭನ ಕಾಯ್ದ ನೃಹರಿಗೆ 2 ಭೂಮಿ ಬೇಡಿದವನಿಗೆ ದುಷ್ಟ ಭೂಮಿಪ ಹರನಿಗೆ ಕಾಮಿನಿಚೋರನ ಶಿರವ ತರಿದ ಸ್ವಾಮಿ ರಾಮಗೆ 3 ಪಾಂಡುಸುತರ ಸಲಹಿ ಖಳರ ದಂಡಿಸಿದವಗೆ ಚಂಡತ್ರಿಪುರರ ಹೆಂಡರ ವ್ರತವ ಖಂಡನೆ ಮಾಳ್ಪಗೆ 4 ದುರುಳ ನೃಪರ ತರಿದ ಕಲ್ಕಿಗೆ ವರದ ನಾಮಗಿರಿ ಶ್ರೀಹರಿಯ ಚರಣಕಮಲಕೆ 5
--------------
ವಿದ್ಯಾರತ್ನಾಕರತೀರ್ಥರು
ನೀರಿನಿಂದಲೆ ಸರ್ವಫಲ ಬಾಹೋದು ನೀರಜಾಕ್ಷನ ಸೇವೆ ಮಾಳ್ಪ ಸುಜನರಿಗೆ ಪ ನೀರಿಲ್ಲದಲೆ ಯಾವ ಸಾಧನವು ನಡೆಯದು ನೀರಿಲ್ಲದಲÉ ಯಾಗ ತಪಸ್ಸು ನಿಲ್ಲುವದು ನೀರಿಲ್ಲದಲೆ ಸ್ನಾನ ಆಚಾರಹೀನವು ನೀರಿಲ್ಲದಲೆ ದೇವತಾರ್ಚನೆಯು ಇಲ್ಲವು 1 ನೀರೆಂದರೆ ಬರಿಯ ಜಡವಾದ ನೀರಲ್ಲ ನೀರಜಾಕ್ಷನು ಜಲದಿ ವಾಸವಾಗಿಹನು ವಾರಿಜಾಸನ ಮುಖ್ಯ ಸುರರೆಲ್ಲ ಹರುಷದಲಿ ನೀರಮಧ್ಯದೊಳಿರುವ ಹರಿಯಧ್ಯಾನಿಪರೆಲ್ಲ2 ಉದಯಕಾಲದಿ ಮುಖವ ತೊಳೆಯೆ ಜಲವಿರಬೇಕು ಮಧುಸೂದನನ ಮನೆಯ ಸಾರಿಸಲು ಜಲಬೇಕು ಹೃದಯ ಶುದ್ಧದಿ ಸ್ನಾನ ಮಾಡೆ ಜಲವಿರಬೇಕು ಮುದದಿ ಮಡಿಯುಡುವುದಕೆ ಉದಕವಿರಬೇಕು3 ಮೃತ್ತಿಕಾಶೌಚಕ್ಕೆ ಅಗತ್ಯಜಲವಿರಬೇಕು ನಿತ್ಯ ಗೋಸೇವೆಗೆ ಉದಕಬೇಕು ಮತ್ತೆ ಶ್ರೀ ತುಳಸಿಗೆರೆಯಲು ಉದಕವಿರಬೇಕು ಮತ್ತೆ ಹರಿಪೂಜೆಗಗ್ರೋದಕವು ಬೇಕು4 ಸಚ್ಚಿದಾನಂದನ ಅಭಿಷೇಕಕ್ಕೆ ಜಲಬೇಕು ಮತ್ತೆ ಪಾಕವು ಮಾಡೆ ಜಲವುಬೇಕು ನಿತ್ಯ ತೃಪ್ತನ ನೈವೇದ್ಯಕ್ಕೆ ಜಲವು ಬೇಕು ಅರ್ತಿಯಿಂದ ಅತಿಥಿ ಪೂಜೆಗೆ ಉದಕಬೇಕು 5 ಪಾದ ತೊಳಿಬೇಕು ಮತ್ತೆ ಅವರಿಗೆ ಸ್ನಾನಕಣಿ ಮಾಡಬೇಕು ಸುತ್ತ ಬೆಳೆÀಗಳಿಗೆಲ್ಲ ಮತ್ತೆ ನೀರಿರಬೇಕು ಸತ್ಯ ಮೂರುತಿ ಪಾದದಂಗುಷ್ಟದಲಿ ಜನಿಸಿದ6 ನಿತ್ಯ ಎರೆಯೆ ನೀರಿರಬೇಕು ಕುಸುಮ ಪುಷ್ಪದ ಗಿಡಕೆ ನೀರುಬೇಕು ವಸುದೇವಸುತನ ತೆಪ್ಪೋತ್ಸವಕೆ ಜಲಬೇಕು ಎಸೆವ ಕದಲಾರತಿಗೆ ಉದಕಬೇಕು 7 ನೀರಿನೊಳು ಹಾವಿನ ಮೇಲೆ ಮಲಗಿದ ಹರಿಯ ನಾಭಿನಾಳದ ತುದಿಯಲಿರುವ ಕಮಲದಲಿ ನೀರಜಾಸನನ ಪಡೆದಿರುವ ಮಹಿಮೆಯ ಕೇಳಿ ನೀರಿನಲಿ ಹರಿಯ ಅವತಾರ ರೂಪಗಳುಂಟು8 ನೀರಿನೊಳು ವಾರುಣಿಯಪತಿಯ ಶಯ್ಯದೊಳಿಹನು ನೀರಿನೊಳು ಮುಳುಗಿ ವೇದವ ತಂದನು ನೀರಿನೊಳು ಮುಳುಗಿ ಭಾರವ ಪೊತ್ತು ನಿಂತನು ನೀರಜಾಕ್ಷನು ನಾರಬೇರ ಮೆದ್ದಿಹನು 9 ನೀರಜೋದ್ಭವಪಿತನು ಕ್ರೂರರೂಪವ ತಾಳ್ದ ನೀರೆ ಅದಿತಿಯ ಪುತ್ರನಾಗಿ ನಿಂತ ನೀರಜಾಕ್ಷನು ಪರಶುವಿಡಿದು ಸಂಚರಿಸಿದನು ನೀರೆಗೋಸುಗ ಸಾಗರಕÉ ಸೇತುವೆಯ ಕಟ್ಟಿದನು10 ನೀರಿನೊಳು ಗಜದ ಶಾಪವ ಕಳೆದು ಪೊರೆದನು ನೀರೆ ದ್ರೌಪದಿಯ ಅಭಿಮಾನವನು ಕಾಯ್ದ ನೀರ ಮಧ್ಯದಿ ದ್ವಾರಕಾಪುರವ ರಚಿಸಿದನು ನೀರಜಾಕ್ಷಿಯರ ಕೂಡಿ ನೀರೊಳಗೆ ಆಡಿದನು 11 ಕಮಲ ಜಲದಲ್ಲಿಹುದು ಕಮಲನಾಭ ವಿಠ್ಠಲ ಜಲದೊಳೋಲ್ಯಾಡುವ ಶ್ರಮವ ಪರಿಹರಿಪ ಚಂದ್ರನು ಜಲದಿ ಪುಟ್ಟಿಹನು ಕಾಮಧೇನು ಐರಾವತವು ಪುಟ್ಟಿದ ಜಲವಯ್ಯ 12
--------------
ನಿಡಗುರುಕಿ ಜೀವೂಬಾಯಿ
ನೀರಿನೊಳು ಮುಳುಗುತಿರೆ ತೋರದಲಿ ಪೋಗುವರೆ ಕರ ಪಿಡಿವರೈ ತೋರು ಶೌರೇ ವಾರಿಜಾನಾಭ ಭಯ ತೋರುವರೆ ಕರುಣಾಳು ಬಾರದಿರುವಂಥ ಅಪರಾಧವೇನೆಲೊ ಹರೀ ಪ. ಪರಿ ಮನಸಿನೊಳಗೊಂದು ಪರಿ ವನಜನಯನನೆ ಭಯವ ತೋರಿ ತೋರೀ ಪರಿ ಏನೋ ಬಿನಗುದೈವರ ಗಂಡ ಪರಿಹರಿಸು ಗಂಡಾ1 ಕರಿಯ ನೀರೊಳು ಕಾಯ್ದೆ ಪೊರೆದೆ ನೀರೊಳು ಮನುವ ಧರಣಿ ಪ್ರಹ್ಲಾದರನು ಜಲದಿ ಸಲಹೀ ಬಿರುದು ಪೊತ್ತವ ಎನ್ನ ಪರಿಯನರಿಯೆಯೆ ದೇವ ಪೊರೆವರಿನ್ನಾರು ಹೇ ಕರುಣಾಳು ಶರಣೂ 2 ಮುಳುಗಿಹೆನು ಸಂಸಾರ ಗಣಿಸಲಾಗದ ಕರ್ಮ ಕರವ ಪಿಡಿದೂ ಧಣಿಸು ನಿನ ದಾಸತ್ವ ಧರೆಯೆ ಮೇಲ್ ಡಂಗುರದೀ ಘಣಿಶಾಯಿ ಗೋಪಾಲಕೃಷ್ಣವಿಠಲ ಕೈಪಿಡಿದು 3
--------------
ಅಂಬಾಬಾಯಿ
ನೀರೆ ದ್ವಾರಕೆಯ ಸೊಬಗು ಬ್ರಹ್ಮರಾಯ ಬಟ್ಟಾನು ಬೆರಗು ನೀರೆಪ. ಚದುರೆ ಬಾಜಾರದಿ ಕುದುರೆ ಸಾಲುಗಳೆಷ್ಟುಎದುರಿಗೆ ಬಾಹೋ ರಥಗಳೆಷ್ಟುಎದುರಿಗೆ ಬಾಹೋ ರಥಗಳೆಷ್ಟು ಅಂಬಾರಿಸದರಿನ ಆನೆ ಸೊಬಗೆಷ್ಟು1 ಹಿಂಡು ಗೆಳತಿಯರೆಲ್ಲ ತಂಡ ತಂಡ ನೆರೆದುದುಂಡು ಮಲ್ಲಿಗೆಯ ತುರುಬಿನದುಂಡು ಮಲ್ಲಿಗೆ ತುರುಬಿನ ಕುವರಿಯರು ಚಂಡನಾಡುವÀರು ಕಡೆಯಿಲ್ಲ 2 ನೀಲಮಾಣಿಕ ಬಿಗಿದ ಮೇಲಾದ ಮನೆಗಳುಮ್ಯಾಲೆ ಕನ್ನಡಿಯ ನಿಲ್ಲಿಸ್ಯಾವಮ್ಯಾಲೆ ಕನ್ನಡಿಯ ನಿಲ್ಲಿಸಿದ ಮನೆಯೊಳುಸಾಲು ದೀವಟಿಗೆ ಸೊಬಗೆಷ್ಟು 3 ಬಟ್ಟ ಮುತ್ತಿನ ತೋರಣ ಕಟ್ಟಿದ ಮನೆಯೊಳುಅಟ್ಟಳ ಮ್ಯಾಲೆ ಧ್ವಜಗಳುಅಟ್ಟಳ ಮ್ಯಾಲೆ ಧ್ವಜಗಳು ಗಗನಕ್ಕೆಮುಟ್ಟಿವೆಂಬಂತೆ ನಿಲ್ಲಿಸ್ಯಾವೆ4 ದೊರೆಗಳ ಮನೆಯಿಂದ ಬರೆದ ಚಿತ್ರದÀ ಬೊಂಬೆಗಳುಕರೆದಾವ ಕೈ ಬೀಸುತೆಕೈ ಬೀಸಿ ನಮ್ಮ ಎದುರಿಗೆಬರತಾವೆಂಬಂತೆ ನಿಲ್ಲಿಸ್ಯಾವ 5 ಏಳಂತಸ್ತಿನ ಮಾಳಿಗೆ ಮ್ಯಾಲಿನ ಗೊಂಬೆಗಳು ಬಾಳೆ ಎಲೆಯಂತೆ ಬಳಕುತ ಬಾಳೆ ಎಲೆಯಂತೆ ಬಳಕುತಕಿವಿಮಾತು ಹೇಳ್ಯಾವೆಂಬಂತೆ ನಿಲ್ಲಿಸ್ಯಾವೆ6 ಮದನ ಜನಕನು ಸುಳಿಯೋನೆಒಮ್ಮೊಮ್ಮೆ ಮುದದಿ ಭಕ್ತರನ ಸಲುಹಲಿ 7
--------------
ಗಲಗಲಿಅವ್ವನವರು
ನೀರೇ ತೋರೇ ಪಯೋನಿಧಿ ವಾಸನಾ| ನೀರ ಜಾಸನಾನಂತ ಸರ್ವೇಶನಾ ಪ ಹಸ್ತ ವರದನ ಹರಿಮಧುಸೂದನ| ಹಸ್ತಿ ವಾಹಜನ ಸೂತಾದನಾ 1 ಕರಿಯೇರಿದಾತನ ಶರಕುರುವಾತನ| ಕರಿಹರ ಸಖ ಸನಾತನಾ 2 ಅನಂತ ಮಹಿಮ ಕೇಶವ ಮುಕುಂದನ| ಅನಂತ ಶಯನ ಗೋವಿಂದನಾ 3 ಮಕರ ಧ್ವಜ ಪಿತನ ಪರಮಾನಂದನ| ಮಕರ ಧ್ವಜ ಪಿತ ವಂದ್ಯನಾ4 ತಂದೆ ಮಹಿಪತಿ ನಂದನ ಜೀವನ| ಹೊಂದಿದವರ ಕಾವಾ ದೇವನಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರೇ ದÉೂೀರೆ ದೋರೆ ರಂಗನಾ| ಕರೆ ತಾರೇ ಮುನಿಜನ ಸಂಗನಾ ಪ ಶರಣ ರಕ್ಷಕ ನೆಂಬೋ ಬಿರುದವ ಸಾರಲು | ಮೊರೆಯಾ ಹೊಕ್ಕೆನು ಕೇಳಿ ಬಂದುನಾ1 ಜ್ಞಾನ ಭಕುತಿಗಳ ಏನೇನರಿಯದ | ಮಾನಿನಿ ನೋಡುವರೇ ಅವಗುಣಾ 2 ಗುರುಮಹಿಪತಿ ಸುತ ಪ್ರಭು ಕರುಣಾಕರ | ನೆನದನು ಮೊರೆಕೇಳಿ ಇಂದಿನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರೊಳು ಮುಳುಗಿದಡೇನು ಫಲ ಪ (ಸಾರವ)ನೋದಿದಡೇನು ಫಲ ಅ.ಪ ಧರ್ಮದಾನದಿಂದೇನು ಫಲ 1 ಹರಿ ಹರಿಯೆಂದರದೇನು ಫಲ 2 ಸ್ತುತಿ ಪೂಜೆಗಳಿಂದೇನು ಫಲ 3 ವ್ರತಗಳ ಮಾಡಲದೇನು ಫಲ 4 ತನುವನು ಪೊರೆದರದೇನು ಫಲ || ಶ್ರೀನಿವಾಸನ ಪಾದವ ಸ್ಮರಿಸದೆ ದಿನವನು ಕಳೆದರದೇನು ಫಲ 5
--------------
ಸದಾನಂದರು
ನೀಲ ಗಗನ ನಿಭ ನಿರ್ಮಲಗಾತ್ರನೆ ಪ ಬಾಲಶಶಾಂಕನ ಪೋಲ್ವ ಸ್ವಾಮಿ ಬಾಲಶಶಾಂಕನ ಪೋಲ್ವ ನೀಲಕುಂತಳ ಪರಿಶೋಭಿತ ಫಾಲಕೆ ಕುಂಕುಮವ ಹಚ್ಚುವೆನು 1 ನಳಿನ ನಯನ ಕೋಮಲ ಕಮಲಾನನ ಚಲುವ ಕರಂಗಳ ತೋರೋ ಸ್ವಾಮಿ ನಳಿನವ ಪೋಲುವ ಚಲುವ ಕರಕೆ ನಾ ನರಿಸಿನ ಹಚ್ಚುವೆನೀಗ ಸ್ವಾಮಿ 2 ಅಂಬುಜನಾಭನೆ ಅಂಬುಧಿ ಗಂಭೀರ ಶಂಬರಾರಿ ಶತತೇಜ ಸ್ವಾಮಿ ಕಂಬುಕಂಧರ ತೋರು ಸಂಭ್ರಮದಲಿ ನಾ ಗಂಧವ ಹಚ್ಚುವೆನೀಗ ಸ್ವಾಮಿ 3 ಸುಮಶರ ಜನಕನೆ ಸುವಶರ ವೈರಿಯ ಕಾರ್ಮುಕ ಭಂಜಕ ಸ್ವಾಮಿ ಸಮ ವಿರಹಿತ ನಿನ್ನ ಕೊರಳಿಗ್ಹಾಕುವೆನೀಗ ಕುಸುಮ ಮಾಲೆಯ ನಾನು ಸ್ವಾಮಿ 4 ವಾರಿಧಿ ಚಂದ್ರಮನೆ ಧೀರ ವೀರ ದಿತಿಜಾರಿದೇವ ಶ್ರೀರಘುವೀರ ಶ್ರೀ ಕರಿಗಿರೀಶನೇ ನಿಮ ಗಾರತಿ ಎತ್ತುವೆ ಸ್ವಾಮಿ 5
--------------
ವರಾವಾಣಿರಾಮರಾಯದಾಸರು
ನೀಲಕಂಠ | ನೀಲಕಂಠ | ನೀಲಕಂಠ | ಪಾಲಯ ಪ ಗಾಳಿದೇವನ ಒಲಿಮೆ ಯಿಂದಕಾಲಕೂಟ ಮೆದ್ದ ಶಿವನೇ ಅ.ಪ. ಸುಕೃತ ಭೃಕುಟಿ ಭವನೆ ಕಳೆವೆ ಪಾಪ 1 ಕಾವೇರಿಕೆ ನರ್ಮದೇಗಳ್ | ಸೇರ್ವ ಸನಿಯ ಶೈಲದಲ್ಲಿ ||ಭಾವ ಜಾರಿ ನಿನ್ನ ಪ್ರಭವ | ತೋರ್ವೆ ಜ್ಯೋತಿರೂಪ ಭಾವ 2 ಸುರರು ನಗುವ ಪರಿಯು ಅಲ್ಲವೆ | ಶರಣ ಜನರ ಪೊರೆಯೆ ಸ್ವೀಕರ 3 ಚಾರು ಚರಣಘೋರ ಭವವ ತಾರಿಪ ಓಂ | ಕಾರ ಪ್ರತಿಮ ಕಾಯೊ ಎಮ್ಮ4 ಹರಿಯ ಪದದ ನೀರನೀಗ | ಹರಿಯ ದ್ವಾರದಿಂದ ತಂದೂಹರಿಯ ದ್ವಾರ ತೋರ್ಪ ಭಾವಿ | ಹರಿಂ5ಶಯ್ಯಗೆ ಎರೆವೆನಂi5 5 ಮನವ ಆಳ್ವನೆ ಮೊರೆಯ ಕೇಳಿ | ಮನದ ಮಲಿನ ತ್ವರದಿ ತಳ್ಳಿಮನದಾಭಿಧನ ಚಿಂತೆಯಲ್ಲಿ | ಮನವನಿರಿಸೊ ಕೃಷ್ಣನಲ್ಲಿ 6 `ದೂಃ` ಎಂತ ಮರುತ ನಿನ್ನ | ಶರೀರದೊಳಗೆ ಇರುವನಲ್ಲಿದೂರುವಾಸ ತೋರೊ ಶ್ರೀಪ | ಗುರು ಗೋವಿಂದ ವಿಠಲ ರೂಪ 7
--------------
ಗುರುಗೋವಿಂದವಿಠಲರು