ಒಟ್ಟು 32405 ಕಡೆಗಳಲ್ಲಿ , 137 ದಾಸರು , 8458 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧರ್ಮದಮಾತು ಹಳಸಿ ಬಂದಿತು ಯುಗ ಧರ್ಮದಿಂದದು ವನವನು ಸೇರಿತು ಪ ಆಟ ನೋಟಕೆ ಉಂಟು ಪೋಟ ಪುಂಡರಿಗುಂಟು ಮಾರ ಕಟ್ಟಲುಂಟು ಕಾಟಕ ದೊರೆಗೆ ದಂಡವನು ಕೊಡಲಿಕುಂಟು ಚಂದ್ರ ಜೂಟಗರ್ಪಿತವೆಂದು ಕೊಡಲು ದ್ವಿಜರಿಗಿಲ್ಲ 1 ಕಲ್ಲು ಮಣ್ಣಿಗೆ ಇಕ್ಕಲುಂಟು ಆಕಳ ಎಮ್ಮೆ ಕೊಳ್ಳಲಿ ಕುಂಟು ಕೈಯೊಳು ಹೊನ್ನು ಚಿನ್ನಗಳ ಬಂಗಾರ ಮಾಡಿಸಲುಂಟು ಇಲ್ಲದೇಹಿ ಎಂದು ಯಾಚಿಪದ್ವಿಜರಿಗೆ 2 ಬಣ್ಣ ಸಣ್ಣಗಳ ಕೊಡಲಿ ಕುಂಟು ಕಾಮನ ತನ್ನ ಕೈಯಾರೆ ಲಕ್ಷ್ಮೀಶಗರ್ಪಿತವೆಂದು ಮನ್ನಿಸಿ ದ್ವಿಜರಿಗೀಯಲಿಕೆ ದುಡ್ಡುಗಳಿಲ್ಲ 3
--------------
ಕವಿ ಪರಮದೇವದಾಸರು
ಧರ್ಮವೆಂದೆನಿಪ ಮಾರ್ಗವನು ಬಿಟ್ಟುಕರ್ಮವೆಂದೆನಿಪ ಕಾನನವ ಪೊಕ್ಕುದುರ್ಮಾರ್ಗದಲಿ ನಡೆದವಗೆ ಘೋರವ್ಯಾಧಿಕರ್ಮಪಾಕದಲಿ ಸಾರುತಿದೆ ಜಗದಿ ಪ ಹರಿಹರ ವಿಭೇದಗೈದವಂಗೆ ದಂತಚ್ಯುತವುಗುರುದೈವಗಳ ನಿಂದೆಗೈದವಗೆ ಉನ್ಮದವುಪರಸತಿಯ ಕಾಮಿಸಿದವಗೆ ಪಾಂಡು ರೋಗವುಕೆರೆಗಳನು ಒಡೆಸಿದಾತಗೆ ಶೀತಜ್ವರವುಹಿರಿಯರನು ಜರಿದವಗೆ ಪೀನಾಶಿ ರೋಗವುಧರೆಯನಳಿಸಿದವಗೆ ಸರ್ವಾಂಗ ಪರಿಶ್ವೇತವುಪುರ ಅಗ್ರಹಾರ ಕೆಡಿಸಿದವಗೆ ರಾಜರೋಗವೆಂದುಅರಿವುದು ಸಕಲ ಜನರು 1 ಕಥೆ ಪುರಾಣಗಳ ಹಳಿದವಗೆ ಕಾಸಶ್ವಾಸಮತಭೇದವನು ಮಾಡಿದವಗೆ ಮೂಲವ್ಯಾಧಿಪಿತಮಾತೆಯರ ಸಲಹದವಗೆ ಗಂಡಾಮಾಲೆಯತಿಗಳನು ನಿಂದಿಸಿದವಗೆ ಸನ್ನಿಪಾತ - ಪರಸತಿಯರಿಗೆ ಅಳುಪಿದಾತಗೆ ಮೂತ್ರ ಕೃಚ್ರಪತಿವ್ರತೆಯರ ಪೀಡಿಸಿದವಗೆ ಅತಿಸಾರಮತಿಗೇಡಿ ಮೂರ್ಖನಿಗೆ ಕ್ಷಯರೋಗ - ಇದುಕ್ಷಿತಿಯೊಳಗೆ ಸಿದ್ಧಾಂತ 2 ಶಿಶು ಹತ್ಯೆ ಗೈದವಗೆ ಕುಕ್ಷಿಶೂಲೆಪಶುಗಳನು ಮರ್ದಿಸಿದವಗೆ ಪ್ರಮೇಹವುಉಸಿರಲೇಕಿನ್ನು ಸ್ವಾಮಿದ್ರೋಹಿಗೆ ಬಹುಮೂತ್ರಪುಸಿಯನಾಡುವ ಪುರುಷಗೆ ರಕ್ತ ಕಾಳಿಹಸಿದವರಿಗನ್ನವಿಕ್ಕದವಗೆ ಆಮ್ಲಪಿತ್ತವೃಷಭವನು ಒದ್ದವಗೆ ಬಿಗರುವಾತಮುಸುಕುವುದು ವಿಶ್ವಾಸಘಾತಕಗೆ ನರರೋಗಪುಸಿಯಲ್ಲವಿದು ಕೇಳಿ ಜನರು 3 ಕೊಟ್ಟು ಭಾಷೆಯ ತಪ್ಪಿದವಗೆ ಉಪಜಿಹ್ವೆಕೊಟ್ಟು ತುಪ್ಪಿದವಗೆ ಕರಕಂಪನಕೊಟ್ಟರೂ ಕೊಡಲಿಲ್ಲವೆಂಬವಗೆ ಉದರರೋಗಕೊಟ್ಟವರಿಗೆರಡು ಬಗೆವಗೆ ಮೇಹರೋಗಅಷ್ಟಮದದಿಂದ ಮೆರೆವವಗೆ ಬೆರಗಿನ ರೋಗಬಟ್ಟೆಯೊಳು ಮುಳ್ಳು ಹರಡಿದವಗೆ ನೇತ್ರವ್ಯಾಧಿಹುಟ್ಟುವುದು ಕಂಕಣ ಕಂಟಕಗೆ ಕುಷ್ಠರೋಗಕಟ್ಟಿಟ್ಟ ಬುತ್ತಿ ಇದು4 ಕರ್ಮ ಬಲ್ಲವರಾರುಎಂದು ಮಂದಮತಿಗಳಾಗಿ ಕೆಟ್ಟಳಿಯದಿರೆಹಿಂದಣದೆಲ್ಲವೂ ಬಹದೆಂಬುದಕೆ ಸಾಕ್ಷಿಇಂದು ಕಣ್ಣೆದುರೆ ಜಗದೊಳಗೆ ತೋರುತಿಹುದಿಗೊಚಂದದಲಿ ತಾಯಿ ಮಗುವಿಗೆ ಮೊಲೆಯ ಹಾಲುಣಿಸುವಂದದಲಿ ಉಣಿಸಿದಲ್ಲದೆ ಬಿಡದು ಮರೆಯದಿರಿಕಂದರ್ಪಪಿತ ಸೊಂಡೆಕೊಪ್ಪದಾದಿಕೇಶವನಮುಂದರಿತು ಭಜಿಸಿ ಮುಕ್ತಿಯ ಪಡೆಯಿರಣ್ಣ5
--------------
ಕನಕದಾಸ
ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ಧವಳಗಂಗೆಯ ಗಂಗಾಧರ ಮಹಾಲಿಂಗ ಮಾ- ಧವನ ತೋರಿಸಯ್ಯ ಗುರುಕುಲೋತ್ತುಂಗ ಪ. ಅರ್ಚಿಸಿದವರಿಗಭೀಷ್ಟವ ಕೊಡುವ ಹೆಚ್ಚಿನ ಅಘಗಳ ಬೇಗನೆ ತರಿವ ದುಶ್ಚರಿತರನ್ನೆಲ್ಲ ದೂರದಲ್ಲಿಡುವ ನ- ಮ್ಮಚ್ಚುತಗಲ್ಲದ ಅಸುರರ ಬಡಿವ 1 ಮಾರನ ಗೆದ್ದ ಮನೋಹರಮೂರ್ತಿ ಧಾರುಣಿಯೊಳಗೆ ತುಂಬಿದೆ ನಿನ್ನ ಕೀರ್ತಿ ಹರಿಯ ತೋರಿಸಯ್ಯ ನಿನಗೆ ಶರಣಾರ್ಥಿ 2 ಚೆನ್ನ ಪ್ರಸನ್ನ ಶ್ರೀ ಹಯವದನನ್ನ ಅನುದಿನ ನೆನೆವಂತೆ ಮಾಡೊ ನೀ ಎನ್ನ ಅನ್ಯರನರಿಯೆನೊ ಗುರುವೆಂಬೆ ನಿನ್ನ ಇನ್ನಾದರು ಹರಿಯ ತೋರೊ ಮುಕ್ಕಣ್ಣ 3
--------------
ವಾದಿರಾಜ
ಧಾರಿಣೀ ಭವಘೋರ ದುಃಖ ನಿವಾರಿಣಿ ಪ. ಧಾರಿಣಿಯೊಳು ಕಾಣೆ ನಿನಗೆಣೆಯಾರ ನಾನೆಲೆ ಗೀರ್ವಾಣಿ ಪಾಲಿಸು ಗುಣಮಣಿ ಅ.ಪ ಕಾಳಿದಾಸನೆ ಮುಖ್ಯ ಕವಿತಾಲೋಲರೆಲ್ಲರು ಧರೆಯೊಳು ಜಯಶೀಲರೆನ್ನಿಸಿ ಮೆರೆಯಲು ಲೋಲಲೋಚನೆ ನಿನ್ನ ಕೃಪೆಯದಲ್ಲೇ ನುಡಿಭರದೊಳು ಬಂದು ತೋರುವುದೆನ್ನೊಳು 1 ಪುಸಿಯು ಬಾರದ ತೆರದೊಳೆಮ್ಮಯ ರಸನೆಯಲ್ಲಿರು ಸಂತತಂ ರಸವ ತೋರುತೆ ಸಂತತಂ ಎಸೆವ ಶೇಷಗಿರಿಶನಂಘ್ರಿಯ ಭಜಿಸಿ ಬದುಕೆಂದೆನ್ನುತೆ ವರವ ಪಾಲಿಸು ಸುಪ್ರಿತೆ 2
--------------
ನಂಜನಗೂಡು ತಿರುಮಲಾಂಬಾ
ಧೀಂಧೀಂಧೀಂಧಿಂ ಧೀರು | ಮಜರೆ ಸಂಭ್ರಮದ | ಅಂದು ಶ್ರೀಕೃಷ್ಣ ರುಕ್ಮಿಣಿಯ ಪಾಣಿ | ಗ್ರಹಣ | ದಿಂದ ದ್ವಾರಕೆಯ ಹುಗುವ ಸಮಯದಲಿ ಪ ಚಪಳ ವಾಜಿಗಳು | ಬೆರೆಬೆರೆದು ಕುಣಿವಾಟಾದಿಂದಾ ಇಡಿಯೇ | ತೆರೆಹಿಲ್ಲ | ಸಿಂಧು ಗುರಿ ಪತಾಕೆಗಳ ಹೊಳೆವ | ರೂಪಿಯೇ | ಮೆರೆವ ತಮ್ಮಟ ಭೇರಿನಾದ ಕಹಳೆಗಳಿಂದ | ಹರಿಪದದಿ ಪ್ರತಿ ಶಬ್ದವು ನುಡಿಯೇ 1 ಭಟ್ಟರು ಗಾಯಕವಂದಿ ಬಿರುದು ಕೊಂಡಾಡು ತಲಿಹ | ನಟನೆ ದಿವ್ಯಾಂಗ-ನೆಯರಾ ಮುಂದ | ಘಟನೇ ಪುಟುವೆರಸೀ ಸ್ವಸ್ತಿ ವಚನಾದಿಂದ ನಟನುಗ್ರಶೇನ ತಾಯಿ | ತಂದಿ ದಂಪತಿಗಳ ಕುಟಿಲೀರ್ವ ಸಾಂಬ ಕೃತ ವವರ್ಮನಾ | ರ್ಭಟೆಯ ಬಲರಾಮ ನೋಡನೀ ವೃಂದ 2 ಹೃದಯ ಮಧ್ಯದ ಪದಕದಂತೆ ಬರಿತಿಹ ನಡುವೆ ವಧು ಇದಿರು ಗೊಂಬುವ ಸಂಭ್ರಮದ ಪಟ್ಟಣದಲಾರು ತುದಿ ಮೊದಲ ಬಣ್ಣಿಸುವಾ ಸಿರಿಯಾ | ವದಗಿ ಮುಂದಕ ಹೋಗಿ ಮಂಗಳಾರುತಿಗಳನು ಸುದತಿಯರು ತಂದೆ ತ್ತಲು ತ್ವರಿಯು | ಮುದದಿಂದ ಗೃಹ ಪ್ರವೇಶವ ಮಾಡಿದನು ಸರ್ವಾ | ವಿದಿತ ಮಹಿಪತಿ ನಂದನಾ ಧೂರೆಯು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧೀರ ಕುಮಾರ ಮಾರಾವತಾರ ಪಾಹಿ ತ್ರ್ಯಂಬಕನ ಕುಮಾರ ಪ ನಿನ್ನಲಿ ದೇವಸೈನ್ಯದ ಭಾರ ಗಿರಿಜಾದೇವಿಯ ಮೋಹದ ಕುವರ ಪೊರೆಯೊ ಎನ್ನನು ಕರುಣಾಸಾಗರ 1 ಅಮರಸೇನೆಗೆ ನೀನಗ್ರೇಸರ ಭೂಸುರ ಹತ್ಯಾ ಪಾಪಸಂಹಾರ ನಮಿಸುವರಿಗಿಷ್ಟ ಫಲವೀವ ವೀರ 2 ವಿಪ್ರಜನರಿಗತಿಪ್ರಿಯ ವಲ್ಲೀಸೇನೆಗೆ ಪ್ರಾಣಪ್ರಿಯ ಚಕ್ರಾಭಿಮಾನಿ ಮೂರುತಿಯಾಗುತಿರುವಿ 3
--------------
ವಿಶ್ವೇಂದ್ರತೀರ್ಥ
ಧೀರ ಶೂರನ್ನ ಗುಣಗಂಭೀರ ಶೂರನ್ನಪೋರತನದ ಈ ನಾರಿಯರನೆಚ್ಚದಿರು ವೀರ ಶೂರನ್ನ ಪಲ್ಲ ಎಲ್ಲ ಮಂಗಳಕಾರ್ಯ ಕಲ್ಲು ಒರಳು ಪೂಜೆ ಬಲ್ಲನಾರಿಯರು ನಗದಿರಿಬಲ್ಲ ನಾರಿಯರು ನಗದಿರಿ ಲಕ್ಷ್ಮಿವಲ್ಲಭಇದಕೆ ಒಲಿಯಲಿ 1 ತುಂಬಿ ಕುಂಕುಮ ಮಾಡಿ ಅರೆದೆವಕುಂಕುಮ ಮಾಡಿ ಅರೆದು ಬೀಸಿದೆವಮ್ಮ ಪಂಕಜನಾಭ ಒಲಿಯಲಿ2 ತುಂಬಿ ಅರಿಷಿಣ ಮಾಡಿ ಅರೆದೆವ ಅರಿಷಿಣ ಮಾಡಿ ಅರೆದು ಬೀಸಿದೆವಮ್ಮಸರಸಿಜನಾಭಒಲಿಯಲಿ 3 ತುಂಬಿ ಗಂಧವ ಮಾಡಿ ಅರೆದೆವಗಂಧವ ಮಾಡಿ ಅರೆದು ಬೀಸಿದೆವಮ್ಮಇಂದಿರೆಯರಸು ಒಲಿಯಲಿ4 ತುಂಬಿ ಬುಕ್ಕಿಟ್ಟು ಮಾಡಿ ಅರೆದೆವಬುಕ್ಕಿಟ್ಟು ಮಾಡಿ ಅರೆದು ಬೀಸಿದೆವಮ್ಮ ಧಿಟ್ಟ ರಾಮೇಶÀ ಒಲಿಯಲಿ 5
--------------
ಗಲಗಲಿಅವ್ವನವರು
ಧೀರತನವ ಪಾಲಿಸೋ ಪ ಭವ ತೀರಕ್ಕೆನ್ನನು ಸೇರಿಸೋ ಅ.ಪ ತೊಳಲುತ ಖಿನ್ನನಾಗಿ ವರ್ಣಶ್ರೇಷ್ಠರಕುಲದಿಬಹು ಪುಣ್ಯದಿ ಇನ್ನು ಪುನರಪಿ ಜನ್ಮವಿಲ್ಲ ನಿನ್ನ ಕಿಂಕರನನ್ನು ಸೇರಿಸಿ ಪಾಲಿಸಿ ||ನಾರಾ|| 1 ಅಷ್ಟಯೋನಿಗಳಲ್ಲಿ ಹುಟ್ಟಿಸಾಯುತ ಬಲು ಮೊರೆಯಿಟ್ಟು ಬೇಡಲಿ ಎಳ್ಳಿನಷ್ಟು ಕಾರುಣ್ಯವು ಪುಟ್ಟದೇನೋ ಸೃಷ್ಟಿಗೈಯುವೇ ಪುಷ್ಠಿಗೈಯುವೆ ಕಟ್ಟಕಡೆಯೊಳು ನಷ್ಟಪಡಿಸುವೆ ಸೃಷ್ಟಿಯೊಳು ಜೊತೆಗಟ್ಟಿನೋಡುವ ದಿಟ್ಟರಾರೈ ವಿಷ್ಟಮೂರುತಿ2 ಧರೆಯ ರಾಜ್ಯವನೊಲ್ಲೆ ಸಿರಿಯಸಂಪದ ವೊಲ್ಲೆ ಸುರರು ಭೋಗಿಪ ಸುರಪುರವಾನೊಲ್ಲೆ ನಿನ್ನ ಹೊರತಾದಕೈವಲ್ಯ ಸ್ಥಿರವೊಲ್ಲೆನು ನಾನಾ ತೆರದಿ ಭಕ್ತಿಯೊಳಿರಲಿ ಯನ್ನಯ ಕರಣವೃತ್ತಿಯು ಪರಮ ಪುಲಿಗಿರಿ ವರದ ವಿಠಲ 3
--------------
ಸರಗೂರು ವೆಂಕಟವರದಾರ್ಯರು
ಧೀರನ ನೋಡಿರೈ ಕರುಣಾಪೂರನ ಪಾಡಿರೈ ಪ ಸಮೀರಜ ಕಪಿನೃಪ, ದ್ವಿಜನ ಭಾವಿ ಅಜನ ಅ.ಪ ಮಾಧವ ಫಣಿಯಕಪಿಶಿರೋಮಣಿಯ-1 ಸದನ ಜಿತನೇಕಮದನಮಂದಮತಿ ಜರಾಸಂಧನಂಗವ ಸೀಳಿದನ ಬಹು ಬಲ್ಲಿದನ 2 ಮುದ್ದು ಮುಖವ ನೋಡಿ ತಿದ್ದಿ ಮಾಡಿದಮೈಸಿರಿಯ ಇನ್ನೊಮ್ಮೆ ದೊರೆಯಒದ್ದಕ್ಷಕುವರನ ಗುದ್ದಿಬಿಸುಟ ಹೊಂತಕಾರಿಯ ಭಾರತಿ ದೊರೆಯಶುದ್ಧಾನಂದ ಸಮುದ್ರ ಶ್ರೀಕೃಷ್ಣಗೆ ಕಿರಿಯ ಮಿಕ್ಕ ಜಗಕ್ಹಿರಿಯಅದ್ವೈತಶಾಸ್ತ್ರದ ಸದ್ದಡಗಿಸಿದ ಆರ್ಯಾ ನಮ್ಮ ಮಧ್ವಾಚಾರ್ಯಾ 3
--------------
ವ್ಯಾಸರಾಯರು
ಧೀರನೋ ಚೋರನೋ ಹೇರನೋ ದಾರಿರುವಿ ದೂರ ನಿಲ್ಲೋ ಪ ಚಾರು ಮರಕಟ ರೂಪವ ತೋರಿ ಮಾಯ ದನುಜಾರಿ ಚಾರಕನೆಂದು ಸಾರುತಿರುವೀ ಬಾರಿ ಬಾರಿಗೆ ಶ್ರೀರಾಮ ಆರೈಸಿಸುವಿ ಎಂದೂ ತೋರದಿರು ದಿಟವೆನಗೆ1 ರಕ್ಕಸರ ಮಾಯೆಯನು ಲೆಕ್ಕಿಸುವವಳಲ್ಲ ನಾ ಅಕ್ಕರವ ತೋರದಿರಲು ಮಿಕ್ಕ ಮಾತುಗಳೇಕೆ ಇಕ್ಕುವೆನು ಶಾಪವನೆನೆ ತÀಕ್ಷಣದಿ ಮುದ್ರಿಕೆಯನಿತ್ತಾ 2 ಶ್ರೀರಾಮ ಮುದ್ರಿಕೆಯ ನೋಡಿ ಪರಮ ನೀ ಭಕ್ತನಹುದು ಪಿರಿದಾಗಿ ನಿನ್ನ ಕೀರ್ತಿ ನರಸಿಂಹ ವಿಠಲನು ಭರದಿಂದ ಮಾಳ್ಪನು ಕರವಿಡುವ ಶಿರದೀ 3
--------------
ನರಸಿಂಹವಿಠಲರು
ಧುಮ್ಮಸಾಲೆನ್ನಿರೈಯ್ಯಾ | ಒಮ್ಮೆ ಸಾಧು ಜನರು | ಬೊಮ್ಮನ ಪದವಪಡದ | ನಮ್ಮ ಮುಖ್ಯ ಪ್ರಾಣನ ಪ ನಷ್ಟರಾವಣನ ಬಾಲಕ್ಕಿಟ್ಟ ಬೆಂಕಿಯಿಂದ ಲಂಕಾ | ಪಟ್ಟಣವ ಸುಟ್ಟು ಬೊಬ್ಬೆ ನಿಟ್ಟ ಹನುಮಪ್ಪನಾ 1 ಪಾಪಕರ್ಮಕೀಚಕಾದಿ | ಕಾಪುರುಷ ಕೌರವರಾ | ಕೋಪಾಗ್ನಿಯಲಿ ಸುಟ್ಟ | ಭೂಪ ಭೀಮನಾ 2 ಉದ್ಧಟ ದುರ್ವಾದಿಗಳಾ | ಸಿದ್ಧಾಂತವೆಂಬ ವಹ್ನಿಯಲ್ಲಿ | ಬುದ್ಧಿಯಿಂದ ಉರಹಿದಾಪ್ರ | ಸಿದ್ಧಮಧ್ವರಾಯನಾ 3 ಮೂಲ ಗುರುವಾಗಿ ಜಗ | ಪಾಲಿಸುವಾ ಮಹಿಪತಿ | ಸಿರಿ | ಲೋಲನಿಜ ದಾಸನಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧುಮ್ಮಸಾಲೆನ್ನಿರ್ಯೋ ಶ್ರೀ ಗುರುವಿನ ಬಳಗವೆ ಧುಮ್ಮಸಾಲೆನ್ನಿ ಸದ್ಗುರುವಿನ ಬಳಗವೆ ಧ್ರುವ ಗುರುವಿನ ಬಳಗವೆಂದು ಗುರುತುವಿಟ್ಟು ನೋಡಿರ್ಯೋ ಅರುಹಿನೊಳು ಮುಣಗಿ ಪರಮಸುಖ ಸೂರ್ಯಾಡಿರ್ಯೋ ಗರ್ವಿನಾಹರಿಗೆ ಬಿಟ್ಟು ಹರಿದುಹೋಗ ಬ್ಯಾಡಿರ್ಯೋ ಪರ್ವಣಿದೆ ಗುರುಕರುಣ ಪಡೆದು ಪೂರ್ಣಕೂಡಿರ್ಯೋ 1 ಧುಮ್ಮಸಾಲೆನ್ನಿರ್ಯೋ ಬೆರದು ಬ್ರಹ್ಮ ಸುಖವ ಸಮ್ಯಙÁ್ಞನದಿಂದ ದೂರಮಾಡಿ ಭವದು:ಖವ ನಿಮ್ಮ ನಿಮ್ಮೊಳು ನೋಡಿ ಘನ ಕೌತುಕವ ಹ್ಯಮ್ಮಿಯೊಳಗಾಗಿ ನೀವು ಹೋಗಬ್ಯಾಡಿ ಹೋಕುವ 2 ಕಣ್ಣದ್ಯರದು ನೋಡಿರ್ಯೊ ಚಿನ್ನುಮಯ ರೂಪವ ಭಿನ್ನವೆಲ್ಲದ್ಯದೆ ತನ್ನೊಳು ಸಮೀಪವ ಪುಣ್ಯ ಹಾನಿ ಮಾಡಿಕೊಂಡು ಹಿಡಯಬ್ಯಾಡಿ ಕೋಪವ ಕಣ್ಣ ದ್ಯರಸಿಕುಡುವ ಹಚ್ಚಿ ಗುರು ತಾನ ದೀಪವ 3 ನಮ್ಮ ನಿಮ್ಮ ದ್ಯಾವರೆಂದು ಹೊಯಿದಾಡಬ್ಯಾಡಿರ್ಯೋ ಬೊಮ್ಮನ ಪಡದ ಪರಬ್ರಹ್ಮನೊಬ್ಬ ನೋಡಿರ್ಯೋ ಇಮ್ಮನಕ ಹೋಗದೆ ಒಮ್ಮನವ ಮಾಡಿರ್ಯೋ ಸುಮ್ಮನೆ ಸುವಿದ್ಯದೊಳು ಬೆರದು ನಿಜಗೂಡಿರ್ಯೋ 4 ಸುಗ್ಗಿಯೋ ಸುಗ್ಗಿಯೋ ಸುಙÁ್ಞನದ ಲಗ್ಗಿಯೋ ಭಾಗ್ಯವಿದೆ ನೋಡಿ ಭಕ್ತಿ ಙÁ್ಞನ ವೈರಾಗ್ಯಯೋ ಬಗ್ಗಿ ನಡವ ಸಾಧುಸಂತ ಜನರಿಗಿದು ಯೋಗ್ಯಯೋ ಹಿಗ್ಗಿ ಹರುಷಪಡುವ ಮಹಿಪತಿಯ ನಿಜ ಸ್ರಾಘ್ಯಯೋ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧುಮ್ಮಸಾಲೆಯ ನೋಡಿ ಧುಮ್ಮಸಾಲೆಯಾ ಪ ಧುಮ್ಮಸಾಲೆಯ ನೋಡಿ ಘಮ್ಮವಾದ ಪ್ರಾಣಿಗಳು | ತಮ್ಮ ಸುದ್ದಿ ತಮಗಿಲ್ಲಾ ಹಮ್ಮಿನಿಂದಲಿ | ಧಿಮ್ಮಹಿಡಿದು ಭವದೊಳು ಸುಮ್ಮನೆವೆ ಕೆಟ್ಟು ಹೋದ | ಗ್ಯಾದರೆಯು ಪರಬೊಮ್ಮನಾಮ ನೆನೆಯಿರೋ 1 ವಿದ್ಯೆಯಿಂದ ವಾದಿಸುತ ಮುದ್ದಿಯಿಂದ ಕಣ್ಣು ಮುಚ್ಚಿ | ಸದ್ಯ ಶಕ್ತಿ ಯೌವನದಿ ಗುದ್ದಿ ಹೆಟ್ಟು ತಾ | ಪರಿ ನಿಜ | ಬುದ್ಧಿ ಹೋಗಾಡಿಸಿ ಅನಿರುದ್ಧನನ ಮರೆತಿರೋ 2 ಒಂದು ಕವಡಿಯಲಾಭ ತಮಗೆ ಹೊಂದದಿದ್ದರೆ ಸರಿ | ಬಂದು ನಿಂದು ಒಳ್ಳೆವರಾ ನಿಂದೆ ಮಾಡುತಾ | ಇಂದು | ಕೂಪ ಲಿಟ್ಟರೋ 3 ಉಡಗಿ ಬಿಟ್ಟು ಹುಡಿಯಹಚ್ಚಿ ಜಡಿಯಬಿಟ್ಟು ಸಿದ್ಧಗಾಗಿ | ಪೊಡವಿಲಿನ್ನು ಲಾಭಾ ಲಾಭಾ ನುಡಿಯ ಹೇಳುವಾ | ತುಡುಗರಿಗೆ ಹೋಗಿಕಾಲ ವಿಡಿದು ಗೋಂದಲ್ಹಾಕುವರು | ಕಡಲಶಯನನ ಭಜಿಸದೆವೆ ಅಡಲು ಬಿಟ್ಟು ಹೋದರೋ 4 ಸಿರಿಯ ಸುಖಗೀಪರಿ ಪರಿಯ ವೃತ ತಪದಿಂದಾ | ಚರಿಸಿ ನೋಡು ಕಣ್ಣು ವಿದ್ದು ಕುರುಡರಾದರೋ | ಗುರುಮಹಿಪತಿ ಸ್ವಾಮಿ ಚರಣ ನಂಬಿಯಚ್ಚರದಿ | ನಿರಪೇಕ್ಷ ಭಕ್ತಿಯಿಂದಾ ತರಣೋಪಾಯ ನೋಡರೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧೂಪವಿಡುವನ ಬಳಿಗೇ ದೀಪವಿಡುವ ಆ ಪರಮ ಕರುಣಾಳು ಶ್ರೀಪತಿಯ ನೆನೆನೆನೆದು ಪ ವಸುಮತಿಯನಿತ್ತವನ ಹೊಸಲಬಳಿಯಾಳಾದ ಬಸಿವಲೆಯನಿತ್ತಳಿಗೆ ವಸನಗಳನಿತ್ತ ಬಿಸಜವೊಂದಿತ್ತವನ ಹೊಸಖೇಚರನಗೈದು ಬಿಸವುಂಡ ಬಾಲಕನ ಜಸವ ಚಿರಗೈದ 1 ಅವಲಕ್ಕಿ ಇತ್ತವಗೆ ನಿಧಿಯನೇ ಅರ್ಪಿಸಿದ ಸವಿಗಂಧವಿತ್ತವಳ | ಸುಂದರಿಯ ಗೈದ ನವನೀತವಿತ್ತವರನೆಲ್ಲ ತನ್ನೊಳೆ ಹುಗಿದ ಭವವ ಪರಿಹರಿಸಲ್ಕೆ ಬೇಸರಿಹುದೇ ಹರಿಗೆ 2 ಅವನ ಜಾನಿಪ ಜನರ ಮರೆಯನಾ ನೀಲಾಂಗ ಅವನ ಪೂಜಿಪ ನರರ ಮುನ್ನಿಲುವನಾಗಾಗ ಅವನ ಕಥೆ ಕೇಳ್ವರ್ಗೆ ಉಂಟವನ ಸತ್ಸಂಗ ಅವನೆ ಗತಿಯೆಂದವನಿಗೊಲಿವ ಮಾಂಗಿರಿರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್