ಒಟ್ಟು 8036 ಕಡೆಗಳಲ್ಲಿ , 131 ದಾಸರು , 4635 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀ ಮನೋಜ್ಞ ವಿಠಲ | ಕಾಪಾಡೊ ಇವಳಾ ಪ ಪಕ್ಷೀಂದ್ರವಹ ಹರಿಯೆ | ಇಕ್ಷುಶರ ಪಿತನೇ ಅ.ಪ. ಸುಕೃತ | ದಿಂದ ಫಲ ತೊರೆತಿಹುದುಮಂದಾಕೀನಿ ಜನಕ | ಇಂದಿವಳ ಪೊರೆಯೆ 1 ಹರಿಯೆ ಪರತರನೆಂಬ | ಸುರರ ಮನೊ ಭಾವದಲಿಹರಿ ಗುರು ಹಿರಿಯರಲಿ | ವರಭಕ್ತಿಯುತಳೂತರತಮದ ಸುಜ್ಞಾನ | ವರಭೇದ ಪಂಚಕದಅರಿವಿತ್ತು ಪೊರೆ ಇವಳ | ಮರುತಾಂತರಾತ್ಮ 2 ಕಂಸಾರಿ ಪೂಜೆ ಎಬಂಶವನು ತಿಳಿಸುತ್ತ | ಕಾಪಾಡೊ ಹರಿಯೇಸಂಶಯವುರಹಿತ ತ | ತ್ವಾಂಶ ದರಿವಿತ್ತು ವಿಪಾಂಸಗನು ಹರಿಯಪದ | ಪಾಂಸುವನೆ ತೊಡಿಸೋ 3 ಅಕ್ಷಯ ಫಲದಾತಈಕ್ಷಿಸೋ ಇವಳ ಕರು | ಣೇಕ್ಷಣದಿ ಹರಿಯೇ 4 ಗೋವತ್ಸ ದನಿಕೇಳಿ | ಧಾವಿಸುವ ಪರಿಯಂತೆಶ್ರೀವರನೆ ನೀನಾಗಿ | ಓವಿ ಪೊರೆ ಎಂಬಾಆವ ಈ ಬಿನ್ನಪವ | ನೀವೊಲಿದು ಸಲಿಸುವುದುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಮನೋಹರ ವಿಠಲ | ರಕ್ಷಿಸೋ ಹರಿಯೇ ಪ ಲಕ್ಷಿಸದಲೇ ಇವಳ | ಲಕ್ಷಾಪರಾಧಾ ಅ.ಪ. ತೈಜಸ ಮೂರ್ತಿದರುಶನವ ತಾನಿತ್ತು | ಹರುಷ ಪಡೆಸಿಹನೋಹರಿದಾಸ್ಯಕೇ ಮಾರ್ಗ | ವರಸೂಚಿ ಎಂಬಂತೆಪರಮ ಸಿದ್ಧತೆ ತೋರ್ದೆ | ವರಸತೀ ಮಣಿಗೇ 1 ಕಾರುಣಿಕ ನೆಂ | ದರಿತು ಬೇಡುವೆ ಹರಿಯೆಸರುವ ಕಾರ್ಯದಿ ನಿನ್ನ | ಸ್ಮರಣೆ ಸುಖವೀಯೋ 2 ಎರಡು ಮೂರ್ಭೇಧಗಳ | ಅರಿವನೀಕೆಗೆ ಇತ್ತುಎರಡು ನಾಲ್ಕರ ವರ್ಗ | ದೂರಗೈಸೋಮರುತಾಂತರಾತ್ಮ ನಿ | ನ್ಹೊರತು ಕಾಯುವರಾರೊಎರಡೇಳು ಭುವನಗಳ | ಅರಸಿಯೂ ಕಾಣೇ 3 ವಿಶ್ವ ಕರ್ಮ | ಸತ್ಶ್ರವಣ ಕೊಡುತಾ 4 ಭೂವಿ ಬುಧ ಹೆದ್ದೈವ | ಮಾವಿನೋದಿಯೆ ಹರಿಯೆನೀವೊಲಿಯ ದಿನ್ನಿಲ್ಲ | ಮಾವ ಕಂಸಾರೀದೇವ ದೇವೇಶ ಗುರು | ಗೋವಿಂದ ವಿಠ್ಠಲ್ಲಭಾವದೊಳು ಮೈದೋರಿ | ಕಾವುದೀಕೆಯನೂ 5
--------------
ಗುರುಗೋವಿಂದವಿಠಲರು
ಲಕ್ಷ್ಮೀದೇವಿ ಅಂಜಿಸುವುದ್ಯಾಕಮ್ಮ ಕಂಜೋದ್ಭವ ನಮ್ಮ ನೀ ಅಂಜಿಸಿದರೆ ಲೋಕ ಅಂಜದಿರುವುದೆ ಪ ಕುಂಜರಗಮನೆ ನಾವಂಜನದೇವಿ ಸಂಜಾತನಾದ ಪ್ರಭಂಜನನಣುಗರು ಪಾದ ಕಂಜಕ್ಕೆ ವಿಮುಖ ಸಂಜಿಲಿ ಚಲಿಸುವ ಪುಂಜರು ಕಡಿಮೆ 1 ನಿನ್ನನೆ ನಂಬಿ ನಾವಿನ್ನು ಸಂಸೃತಿಯ ಬನ್ನವೆ ಕಳಕೊಂಡು ಚನ್ನಾಗಿ ಜಗದಿ ಧನ್ಯರಾದೇವೆಂದು ಮನ್ನಾದಿ ಬಯಸೆ ಅನ್ಯಾರಂದದಲಿ ನೀ ನಮ್ಮನ್ನ ನೋಡುವರೆ2 ಸಿರಿ ನಾರಸಿಂಹನ್ನ ವರ ಭಕ್ತಿಯಲಿ ನೀನು ಕರವಶ ಮಾಡಿಪ್ಪೆ ಪರವೇನೆ ನಿನಗೆ ಪರಮೇಷ್ಠಿ ಮೊದಲಾದಮರರ ನೀ ಪೊರೆವೆ ಸಿರಿ ವಾಸುದೇವವಿಠಲನ್ನ ತೋರಮ್ಮ 3
--------------
ವ್ಯಾಸತತ್ವಜ್ಞದಾಸರು
ಲಕ್ಷ್ಮೀದೇವಿ ಅಂಬೋರುಹೇಕ್ಷಣೆ ಅಂಬಾಲತೇ ಜಗ ದಂಬಾ ಪೊರೆಯೆ ಸತತ ಗಂಭೀರ ಗಜಗಮನೆ ಪ ನಂಬಿದೆ ನಿನ್ನ ಪದಾಂಬುಜಯುಗಳವ ಕಂಬು ಕಂಧರಿ ಕನಕಾಂಬರ ಧಾರಿಣಿ ಬೆಂಬಲವೀಯೆ ವಿಳಂಬವ ಮಾಡದೆ ಅ.ಪ `ಯಂಕಾಮಯೇ'ತ್ಯಾದಿ ಶೃತಿಗಳೆಲ್ಲಾ ಪಂಕಜಭವಮುಖ ಸುಮನಸರು ಕಿಂಕರರೆನ್ನುತ ಪೊಗಳುತಿರೆ ಶಂಕೆಯುಂಟೆ ನಿನ್ನ ಮಹಿಮೆಗಳಲ್ಲಿ ಶ ಶಾಂಕ ಸೋದರಿ ಆತಂಕವ ಬಿಡಿಸೆ 1 ನೀರಜಾತಗಣ ಕೃತ ನಿಲಯೇ ಮಾರಜನಕ ಹರಿ ಪ್ರಿಯ ಜಾಯೆ ಕೋರುವೆ ನಿನ್ನಯ ಪರಮದಯೆ ಸಾರಸಾಕ್ಷಿ ಸರಿಯಾರು ನಿನಗೆ ಕರು ಣಾರಸಮಯೆ ಸುವಿಶಾರದೆ ಜನನಿ 2 ಕನ್ಯೆ ನಿಖಿಲ ಸುರನರರೊಳಗೆ ಮಾನ್ಯೆ ನಿನ್ನ ಪೋಲುವರನ್ಯರುಂಟೆ ನಿನ್ನ ದಾಸನಾದ ಎನ್ನ ಮನೋರಥ ವನ್ನು ತಿಳಿಸೆ ಪ್ರಸನ್ನ ಶ್ರೀ ಹರಿಯಲಿ 3
--------------
ವಿದ್ಯಾಪ್ರಸನ್ನತೀರ್ಥರು
ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀದೇವಿ ಸ್ತೋತ್ರ ಎಂದು ಬರುವಳೋ ಗೋ-ವಿಂದನೊಲ್ಲಭೆ ಲಕ್ಷ್ಮೀ ರಂಗನ ಸನ್ನಿಧಿಗೆ ಪ ಮಂಗಳಾಂಗಿ ಸರ್ವಾಂಗ ಬಳಲಿ ಮುಖಕಂದಿ ಕಳೆಗುಂದಿದಂತೆ | ಬಲು ವ್ಯಥೆಯಂತೆ ಅ.ಪ ಶೇಷನ ಶಿಖಿ ಮ್ಯಾಲೆವಾಸುದೇವರು ಲಕ್ಷ್ಮೀ ಸಮೇತರಾಗಿರುತಿರಲುಆ ಸಮಯದಿ ಭೃಗುಮುನಿ ಬಂದು ಕೋ-ಪಿಸೆ ಸೋಕಿಸಿದನು ಪಾದವಾ | ವಕ್ಷ ಸ್ಥಳವಾ 1 ಥಟ್ಟನೆ ಇಳಿದಾಳುಸಿಟ್ಟಿನಿಂದಲಿ ಬಹು ಧಿಕ್ಕಾರ ಮಾಡಿದಳುಲಕ್ಷ್ಮೀರಮಣನೆಂಬೊ ಬಿರುದು ನಿಮಗೆ ಈಹೊತ್ತಿಗೆ ಅಲ್ಲೆಂದಾಳು | ತೆರಳಿದಳು 2 ನಿಲ್ಲದೆ ಪೊರಟಾಳುಫುಲ್ಲಾಕ್ಷಿ ಮನದೊಳು ತಲ್ಲಣಿಸುತಿರಲುವಲ್ಲಭನರಿಯದ ಸ್ಥಳವಿಲ್ಲದಿರೆ ತಾಯಿ ಕೊಲ್ಲಾಪುರಕೆ ಬಂದಾಳು | ನೆಲೆಗೊಂಡಾಳು 3 ಜಾತೆ ಬಾಮಾರನ ಮಾತೆ ಬಾ ವಾರಿಜದಳನೇತ್ರೆ ಬಾಮೂರ್ಲೋಕದೊಳಗೆ ನೀ ಪ್ರಖ್ಯಾತೆ ಬಾರೆಂದು ಶ್ರೀಮ-ನ್ನಾರಾಯಣನೆ ಕರೆಯಲು | ನಸುನಗೆಯೊಳು 4 ಜಯ ಲಕ್ಷ್ಮೀರಮಣಗೆಜಯ ಶ್ರೀನಿವಾಸಗೆ ಜಯ ಮೋಕ್ಷದಾಯಕಗೆಜಯತು ಕೊಲ್ಹಾಪುರದೊಳ್ ನೆಲಸಿದವಳಿಗೆಶ್ರೀದೇವಿಯಳಿಗೆ5 ವೆಂಕಟ ವಿಠಲವೈಕುಂಠಪತಿ ಲಕ್ಷ್ಮೀ ಶಾಂತ ಏಕಾಂತದೊಳುಶಂಖಚಕ್ರಧರ ಸರ್ವಮಂಗಳಕಾರಸಂಚಿತಾಗಮದೂರನು ಮಲಗಿರುವನು6
--------------
ವೆಂಕಟೇಶವಿಟ್ಠಲ
ಲಕ್ಷ್ಮೀದೇವಿಯ ಪ್ರಾರ್ಥನೆ ಶ್ರೀನಿವಾಸನ ಕರುಣಾನು ಸಂಸರಣಿ ಜ್ಞಾನ ಭಕ್ತಿಗಳನ್ನು ಪಾಲಿಸಂಭರಣಿ ಪ. ಅಜಭವಾದಿಗಳಿಗೆ ನಿಜಪದದಾಯಿನಿ ವೃಜಿನ ಸಮೂಹ ನಿವಾರಿಣಿ ಕುಜನ ಕುಠಾರಿಣಿ ಕುಂಜರ ಗಮನೆ ಪಾಲು ದಧಿವಾಸನ ಕೂಡಿ ಸದನದಿ ನೆಲೆಗೊಳ್ಳೆ 1 ಆರಿಗೆ ನಿನ್ನ ಕರುಣಾರಸ ದೊರೆವದೊ ನೀರಜಾಲಯೆ ನಿನ್ನ ಸೇರಿಕೊಂಡಿಹ ಎನ್ನ ವೈರಿ ಜನರು ಬೇಗ ಗಾರಾಗದುಳಿವರೆ 2 ನೀನೊಲಿಯಲೂ ಸರ್ವ ಮಾನವರೊಳಗತಿ ಮಾನ ಮಹತ್ವಾದಿ ಸದ್ಗುಣವೂ ತಾನಾಗಿ ಬರುವವಿಂನೇನೆಂದು ನಿನ್ನ ಮಹಿ- ಮಾನು ವರ್ಣನೆ ಮಾಳ್ಪೆ ದೀನ ದಯಾಕಲೆ 3 ಮಂದಿರದೊಳಗೆ ನೀ ನಿಂದು ನಗುತ ನಲಿ ವಂದ ನೋಡುತ ಮಿತ್ರ ಬಂಧುಗಳು ಮಂದರಧರ ತಾನೆ ನಿಂದು ರಕ್ಷಿಸನೆಂದಾ ನಂದ ಪೂರಿತ ಮನದಿಂದ ಸೇರಿರುವರು 4 ಸರಸಿಜನಾಭ ಶ್ರೀಹರಿಯು ನಿನ್ನನ್ನೆ ಮುಂ ದಿರಿಸಿ ಚತುರ್ವಿಧ ಪುರುಷಾರ್ಥವಾ ಕರುಣಿಪೆನೆಂದು ಕಂಠಸರದ ಮಧ್ಯೂರದಲಿ ಧರಿಸಿ ಶೋಭಿಪ ಶೇಷಗಿರಿವರ ಶಿಖರದಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀನಾರಾಯಣ ಕಾಯೋ ನಿನ್ನ ನಂಬಿದವರÀುಕ್ಷಿಯೊಳು ಜಗಂಗಳನಿತ್ತು ರಕ್ಷಿಸಿದ ಶ್ರೀಶ ಪ. ಕಂದ ಪ್ರಹ್ಲಾದನ್ನ ಕಾಯ್ದೆ ಚಂದದಿ ಕಾಯೊಯೆಂದು ಬಂದಮುಂದೆ ನಿಂದ ಮಂದಿಯೊಳು ನಿಂದು ನೀ ಸಲಹಯ್ಯ 1 ಕರಿರಾಜ ಕರೆಯಲು ಭರದಿ ಬಂದು ಪೊರೆದೆ ನೀಶರಣು ರಕ್ಷಾಮಣಿಯೆ ಸಿರಿಯಮ್ಮಗೊಲಿದೆ ನೀ 2 ಶರಣು ಮುಖ್ಯ ಸುರರ ವರದೈವವಾದೆ ನೀನುಶರಣು ರಕ್ಷಾಮಣಿಯೆ ಸಿರಿಯಮ್ಮಗೊಲಿದೆ ನೀ 3 ಮೀನಾಂಕ ತಲೆದೊರಿದೆ ನೀ 4 ಹಯವದನನಾಗಿ ನೀ ತ್ರಯೀಚೋರರನ್ನು ಕೊಂದುಸ್ತ್ರೀಯರಿಗೆ ನ್ಯಾಯದಿಂದ ದಯ ಬೀರಿದೆಯಲ್ಲ 5
--------------
ವಾದಿರಾಜ
ಲಕ್ಷ್ಮೀರಮಣ ಮರೆಯ ಹೊಕ್ಕೆ ರಕ್ಷಿಸೈ ಪಾಂಡುಪಕ್ಷನೆ ಪ ಪಕ್ಷಿವಾಹನ ದುಷ್ಟಶಿಕ್ಷ ಮೋಕ್ಷದಾಯಕ ಶಿಷ್ಟರಕ್ಷ ಅ.ಪ ತರಳ ಧ್ರುವನ ಪೊರೆದೆಯೆಲೊ ಕರಿಮೊರೆಯ ಕಾಯ್ದಯ್ಯ ಕರುಣದಿ ಕುರುಪ ಸಭೆಯಲಿ ದ್ರೌಪದಿ ಮೊರೆಯನಿಡಲಾಕೆಮಾನವ ಕಾಯ್ದಿ 1 ನರಗೆ ಸಹಯನಾಗಿ ಸಾರ ಧರೆಯ ಗೆಲಿಸಿದಿ ನಿರುತದಿ ಕರವ ಪಿಡಿದಿ ಪರಮ ಪ್ರೇಮದಿ ಒರೆದೆಲೊ 2 ಇಂದು ಎನಗೆ ಸಂಧಿಸಿದ ಮಹ ಬಂಧನವ ನಿವಾರಿಸೈ ಪಾದ ನಂಬಿದೆ ಕಂದನನು ಪೊರೆ ಶ್ರೀರಾಮ3
--------------
ರಾಮದಾಸರು
ಲಕ್ಷ್ಮೀಲೋಲ ವಿಠಲ ರಕ್ಷಿಸಲಿ ಬೇಕು ಹರಿಯೇಪಕ್ಷ್ಮಗಳು ಅಕ್ಷಿಗಳ ಅಗಲದಿಪ್ಪಂತಿವನಾ ಪ ದಾಸತ್ವ ದೀಕ್ಷೆಯಲಿ ಕಾಂಕ್ಷೆಯನು ತೋರ್ದವಗೆಮೀಸಲಿಂದಿದ್ದೆನ್ನ ಮನದಿ ತೈಜಸನೇಲೇಸು ಹರಿಕಥೆ ಸುಧೆಯ ಸಾರವನು ನೋಡೆಂದುಶ್ರೀಶತವ ಕ್ರೀಡಾ ವಿಲಾಸದಿ ಮಾರ್ಗ ತೋರೋ 1 ಕಂಕಣಾಕಾರೇಶ ಅಂಕಿತವ ನಿತ್ತಿಹೆನುಕೊಂಕುಗಳ ತಿದ್ದುತಲಿ ಕಿಂಕರನ ಸಲಹೊ |ಪಂಕಜ ಸುರರೆಲ್ಲ ಕಿಂಕರನು ನಿನಗೆಂಬಶಂಕೆ ವಿರಹಿತ ಜ್ಞಾನ ತರತಮವ ತಿಳಿಸೊ 2 ಹಿಂದಿನ ಸುಸಂಸ್ಕಾರದಿಂದಿವನ ಸಂದೋಹಬಂದುದನೆ ರಕ್ಷಿಸ್ಯಾನಂದಕರ ಮತದಲೀ |ಬಂಧು ಬಳಗವು ನೀನೆ | ತಂದೆ ತಾಯಿಯು ನೀನೆಎಂದೆಂಬ ಸುಜ್ಞಾನ ಕರುಣಿಸೈ ಹರಿಯೇ 3 ಕರ್ಮ ವೈದೀಕ ವೆನಿಸುತ್ತಕರುಣಿಸೋ ತವರೂಪ ಹೃತ್ಕಂಜದೊಳಗೇ 4 ಸರ್ವಜ್ಷ ಸರ್ವೇಶ ಸರ್ವಾಂತರಾತ್ಮಕನೆಶರ್ವವಂದ್ಯನೆ ಹರಿಯೆ ನಾಪೇಳ್ವುದೇನೋದುರ್ವಿಭಾವ್ಯನೆ ಗುರು ಗೋವಿಂದ ವಿಠ್ಠಲನೆದರ್ವಿಜೀವನು ಗೈವ ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ಲಕ್ಷ್ಮೀವಲ್ಲಭ ವಿಠಲ | ಪೊರೆಯ ಬೇಕಿವಳಾ ಪ ಅಕ್ಷಯ್ಯ ಫಲದ ಕೃ | ಪೇಕ್ಷಣದಿ ನೋಡಿಅ.ಪ. ಸಂಸಾರ ವಿರಸತರ | ಅಂಶವನೆ ತಿಳಿಸೊ ಹರಿಕಂಸಾರಿ ನಿನ್ನ ಪದ | ಪಾಂಸು ಭಜಿಸುತ್ತಾ ಸಂಶಯ ರಹಿತ ಹರಿ | ಹಂಸನಾಮಕ ಸೇವೆಶಂಸಾರ್ಯ ಸರ್ವಧಿಕ | ಸವೋತ್ತಮೆನುತಾ 1 ಹರಿನಾಮ ಕವಚವನು | ಸರ್ವದಾ ಧರಿಸುತ್ತಾದುರಿತನಾಳುಟ್ಟಳಿಯ | ಪರಿಹಾರ ಮಾರ್ಗಅರಿವಿನಿಂದಲಿ ಹರಿಯ | ವರನಾಮ ಸ್ಮರಿಸುತ್ತಕರಗತವು ಆಗಲಿಯೊ | ವರಮುಕ್ತಿಪಥವು 2 ಎರಡು ಮಾರ್ಭೇದಗಳು | ಅರಿವಾಗಲೀಕೆಗೇತರತಮಂಗಳು ಮನಕೆ | ಬರುತಿರಲಿ ಸರ್ವದಾಸಿರಿವಾಯು ಮತ ದೀಕ್ಷೆ | ಗೆರಗಲೀಕೆಯ ಮನಸುಹರಿಯ ಮಮ ಕುಲದೈವ | ಉದ್ದರಿಸೊ ಇವಳಾ 3 ಸಾಧನಕೆ ಸತ್ಸಂಗ | ನೀದಯದಿ ಕೊಟ್ಟಿವಳಮೋದ ಬಡಿಪದು ದೇವ | ಆದಿ ಮೂರುತಿಯೇ |ಮಾಧವನೆ ಬಿನೈಸೆ | ಆದರಿಸುತಿವಳೀಗೆಕಾದುಕೊ ಬಿಡದಲೆ | ಹೇ ದಯಾ ಪೂರ್ಣ 4 ದೇವದೇವೊತ್ತಮನೆ | ಕಾವದೇವನೆ ಹರಿಯಭಾವದಲಿ ಮೈದೋರಿ | ಪೊರೆಯೊ ಇವಳಾಕಾವ ಕರುಣೆಯ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಿಲ್ಲ | ಈ ವಾಣಿ ಬಲುಸತ್ಯ 5
--------------
ಗುರುಗೋವಿಂದವಿಠಲರು
ಲಂಬೋದರನ ಸಹೋದರನೆ ಪ ಶಂಭುಜಕರುಣಾಸಾಗರನೆ ಅ.ಪ ಶೂರಪದ್ಮನ ಎದೆ ಸೀಳಿದನೆ ಮಾರನ ಪೋಲುವ ಸುಂದರನೆ ಧೀರ ಹಿರಣ್ಯಕನಾರಾಧನೆಗೆ ಮೆಚ್ಚಿ ಸೂರೆಯ ಮುಕ್ತಿಯನಿತ್ತವನೆ 1 ವರವಜ್ರ ಶಕ್ತ್ಯಾಯುಧ ಧರನೆ ಸುರಮುನಿ ನಮಿತ ಸರ್ವೇಶ್ವರನೆ ಸುರುಚಿರ ರತ್ನಾಭರಣ ವಿಭೂಷಣನೆ ಶರಣ ರಕ್ಷ ಕುಮಾರಕನೆ2 ದಾಸ ಜನರ ಮನತೋಷಕನೆ ವಾಸುದೇವನ ಸಖ ಷಟ್ಶಿರನೆ ದೋಷವಿನಾಶನೆ ನಾಶರಹಿತ ಪಾವಂಜೇಶನೆ ಕಾರ್ತಿಕೇಯನೆ ಸ್ಕಂದನೆ 3
--------------
ಬೆಳ್ಳೆ ದಾಸಪ್ಪಯ್ಯ
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ
ಲಾಲಿ ಗೋವಿಂದ ಲಾಲಿ ಕೌಸಲ್ಯಬಾಲ ಶ್ರೀರಾಮ ಲಾಲಿ ಪ ಲಾಲಿ ಮುನಿವಂದ್ಯ ಲಾಲಿ ಜಾನಕಿ-ರಮಣ ಶ್ರೀರಾಮ ಲಾಲಿ ಅ.ಪ. ಕನಕರತ್ನಗÀಳಲ್ಲಿ ಕಾಲ್ಗಳನೆ ಹೂಡಿನಾಲ್ಕು ವೇದಗಳನ್ನು ಸರಪಣಿಯ ಮಾಡಿಅನೇಕ ಭೂಮಂಡಲವ ಹಗೆಯನು ಮಾಡಿಶ್ರೀಕಾಂತನುಯ್ಯಾಲೆಯನು ವಿರಚಿಸಿದರು1 ಆಶ್ಚರ್ಯಜನಕವಾಗಿ ನಿರ್ಮಿಸಿದಪಚ್ಚೆಯ ತೊಟ್ಟಿಲಲ್ಲಿಅಚ್ಚುತಾನಂತನಿರಲು ತೂಗಿದರುಮತ್ಸ್ಯಾವತಾರ ಹರಿಯ 2 ಧರ್ಮಸ್ಥಾಪಕನು ಎಂದು ನಿರವಧಿಕನಿರ್ಮಲ ಚರಿತ್ರನೆಂದುಮರ್ಮ ಕರ್ಮಗಳ ಪಾಡಿ ತೂಗಿದರುಕೂರ್ಮಾವತಾರ ಹರಿಯ 3 ಸರಸಿಜಾಕ್ಷಿಯರೆಲ್ಲರು ಜನವಶೀಕರ ದಿವ್ಯರೂಪನೆಂದುಪರಮ ಹರುಷದಲಿ ಪಾಡಿ ತೂಗಿದರುವರಹಾವತಾರ ಹರಿಯ4 ಕರಿಕುಂಭಗಳ ಪೋಲುವ ಕುಚದಲ್ಲಿಹಾರ ಪದಕವು ಹೊಳೆಯಲುವರ ವರ್ಣಿನಿಯರು ಪಾಡಿ ತೂಗಿದರುನರಸಿಂಹಾವತಾರ ಹರಿಯ 5 ಭಾನುಮಣಿಯರೆಲ್ಲರು ಯದುವಂಶಸೋಮನಿವನೆಂದು ಪೊಗಳಿನೇಮದಿಂದಲಿ ಪಾಡಿ ತೂಗಿದರುವಾಮನಾವತಾರ ಹರಿಯ6 ಸಾಮಜವರದನೆಂದು ಅತುಳ ಭೃಗು ರಾಮಾವತಾರವೆಂದುಶ್ರೀಮದಾನಂದ ಹರಿಯ ತೂಗಿದರುಪ್ರೇಮಾತಿರೇಕದಿಂದ7 ಕಾಮನಿಗೆ ಕಾಮನೆಂದು ಸುರಸಾರ್ವಭೌಮ ಗುಣಧಾಮನೆಂದುವಾಮನೇತ್ರೆಯರು ಪಾಡಿ ತೂಗಿದರುರಾಮಾವತಾರ ಹರಿಯ8 ಸೃಷ್ಟಿಯ ಕರ್ತ ನೆಂದು ಜಗದೊಳಗೆಶಿಷ್ಟ ಸಂತುಷ್ಟನೆಂದುದೃಷ್ಟಾಂತರಹಿತನೆಂದು ತೂಗಿದರುಕೃಷ್ಣಾವತಾರ ಹರಿಯ 9 ವೃದ್ಧನಾರಿಯರೆಲ್ಲರು ಜಗದೊಳಗೆ ಪ್ರಸಿದ್ಧನಿವನೆಂದು ಪೊಗಳಿಬದ್ಧಾನುರಾಗದಿಂದ ತೂಗಿದರು ಬೌದ್ಧಾವತಾರ ಹರಿಯ 10 ಥಳಥಳಾತ್ಕಾರದಿಂದ ರಂಜಿಸುವಮಲಯಜಲೇಪದಿಂದಜಲಗಂಧಿಯರು ಪಾಡಿ ತೂಗಿದರುಕಲ್ಕ್ಯಾವತಾರ ಹರಿಯ 11 ಕನಕಮಯ ಖಚಿತವಾದ ತಲ್ಪದಲಿವನಜಭವ ಜನಕನಿರಲುವನಜನಾಭನ್ನ ಪಾಡಿ ತೂಗಿದರುವನಿತಾಮಣಿಯರೆಲ್ಲರು 12 ಪದ್ಮರಾಗವ ಪೋಲುವ ಹರಿಪಾದಪದ್ಮವನು ತಮ್ಮ ಹೃದಯಪದ್ಮದಲಿ ನಿಲಿಸಿ ಪಾಡಿ ತೂಗಿದರುಪದ್ಮಿನೀ ಭಾಮಿನಿಯರು 13 ಹಸ್ತಭೂಷಣ ಮೆರೆಯಲು ದಿವ್ಯತರಹಸ್ತಲಾಘವಗಳಿಂದಹಸ್ತಗಳ ಪಿಡಿದುಕೊಂಡು ತೂಗಿದರುಹಸ್ತಿನೀ ಭಾಮಿನಿಯರು14 ಮತ್ತಗಜಗಾಮಿನಿಯರು ದಿವ್ಯತರಚಿತ್ರವಸ್ತ್ರಗಳನುಟ್ಟುಚಿತ್ತಸಂತೋಷದಿಂದ ತೂಗಿದರುಚಿತ್ತಿನೀ ಭಾಮಿನಿಯರು 15 ಕಂಕಣಧ್ವನಿಗಳಿಂದ ರಂಜಿಸುವಕಿಂಕಿಣೀಸ್ವರಗಳಿಂದಪಂಕಜಾಕ್ಷಿಯರು ಪಾಡಿ ತೂಗಿದರುಶಂಕಿನೀ ಭಾಮಿನಿಯರು 16 ಚೊಕ್ಕ ಕಸ್ತೂರಿ ಪಂಕದಿಂ ರಂಜಿಸುವಮಕರಿಕಾಪತ್ರ ಬರೆದುಲಿಕುಚಸ್ತನಿಯರು ಪಾಡಿ ತೂಗಿದರುಅಕಳಂಕಚರಿತ ಹರಿಯ17 ಆನಂದಸÀದನದೊಳಗೆ ಗೋಪಿಯರುಆ ನಂದಸುತನ ಕಂಡುಆನಂದ ಭರಿತರಾಗಿ ತೂಗಿದರುಆನಂದ ಭೈರವಿಯಿಂದ 19 ದೇವಾಧಿದೇವನೆಂದು ಈ ಶಿಶುವುಭಾವನಾತೀತನೆಂದುದೇವಗಂಧರ್ವರ್ಪಾಡಿ ತೂಗಿದರುದೇವ ಗಾಂಧಾರದಿಂದ 20 ನೀಲ ಕರುಣಾಲವಾಲ ಶ್ರೀಕೃಷ್ಣ ಜೋ ಜೋಲೀಲಾವತಾರ ಜೋ ಜೋ ಪರಮಾತ್ಮಬಾಲಗೋಪಾಲ ಜೋ ಜೋ 21 ಇಂದುಧರಮಿತ್ರ ಜೋ ಜೋ ಶ್ರೀಕೃಷ್ಣಇಂದು ರವಿ ನೇತ್ರ ಜೋ ಜೋಇಂದುಕುಲ ಪುತ್ರ ಜೋ ಜೋ ಪರಮಾತ್ಮಇಂದಿರಾರಮಣ ಜೋ ಜೋ 22 ತುಂಗ ಭವಭಂಗ ಜೋ ಜೋ ಪರಮಾತ್ಮರಂಗ ಕೃಪಾಂಗ ಜೋ ಜೋಮಂಗಳಾಪಾಂಗ ಜೋ ಜೋ ಮೋಹನಾಂಗರಂಗವಿಠಲನೆ ಜೋ ಜೋ 23
--------------
ಶ್ರೀಪಾದರಾಜರು
ಲಾಲಿ ನಿತ್ಯಾನಂದ ಲಾವಣ್ಯ ಕಂದ ಲಾಲಿ ಭೃತ್ಯಾರ್ತಿ ವಾರಣನೆ ಗೋವಿಂದ ಲಾಲಿ ಜೀಯಾ ಪ್ರತ್ಯಗಾತ್ಮ ಮುಕುಂದ ಲಾಲಿ ರಮಾಧೃತ ಚರಣಾರವಿಂದ ಲಾಲಿ ಪ. ಆದಿ ಮಧ್ಯಾಂತ ವಿದೂರನಾಗಿಹನ ವೇದಾಂತ ವೇದ್ಯ ವೈಭವ ಪಕ್ಷಿಗಮನ ತಾಪ ಕಳಿವವನ ಮೋದದಿ ಪಾಡಿ ತೂಗುವೆನು ಮಾಧವನ 1 ಈರಾರು ದಿಗ್ಗಜವೆಂಟು ಕಾಲುಗಳು ಪಾರಾವಾರಗಳೆಂಬ ಪೊಳೆವ ಪೊಟ್ಟಿಗಳು ಧಾರಾರೂಪ ಭಾಗೀರಥಿ ಸರಪಣಿ ಸೇರಿಸಿ ಡೋಲ ಶೃಂಗಾರ ಗೈಯುವೆನು 2 ನಿರ್ಮಲವಾದೇಳು ಹಲಿಗೆಗಳಿರುವ ಭರ್ಮಗಿರಿಯೆ ಸಿಂಹಾಸನವನಿಟ್ಟಿರುವ ಧರ್ಮಾರ್ಥ ಕಾಮ ಮೋಕ್ಷಗಳೆಂಬ ಫಲವ ಮರ್ಮವನರಿತು ಕಟ್ಟುವೆ ಒಳ್ಳೆಯ ರಥವ 3 ಸೂರ್ಯ ಚಂದ್ರಮರೆಂಬ ಧಾರಾದೀಪಗಳು ತಾರಕಿಗಳು ಸುತ್ತಲಿರುವ ಚಿನ್ಹೆಗಳು ಭವ ಜಯ ಜಯವೆಂಬ ಭರವು ನೀರಜಾಲಯೆ ಕೂಡಿ ಪಾಡುವ ಸ್ವರವು 4 ಕೋಟಿ ಭಾಸ್ಕರ ರಾಭ ಕೋಟೀರ ಕುಂಡಲ ಪಾಟಲಾಧರ ಮುಕುರರಾಭ ಕಪೋಲ ನಳಿನ ಪತ್ರ ನೇತ್ರ ಜ- ಚಾಪ ಧಾಟಿ ಭ್ರೂಯುಗಳ 5 ಪೂರ್ಣ ಮಾಲಾನಂತ ಪೌರ್ಣಮಿಯ ವಿಧು ವರ್ಣ ಮುಖಾಬ್ಜಸುಪರ್ಣವರೋಹ ಕರ್ಣ ಹೀನ ಕಶಿಪೂ ಪರಿಶಯನ ದು- ಗ್ಧಾರ್ಣವ ಮಂದಿರ ಸ್ವರ್ಣ ನಿಭಾಂಗ 6 ಕಂಬು ಸುಗ್ರೀವ ವಿಲಂಬಿತ ವನಮಾಲ ಅಂಬುಜ ಚಕ್ರ ಗದಾಕರ ಹಸ್ತ ಕೌಸ್ತುಭ ಜಗ- ನಾಭ 7 ವಿತತ ರೇಖಾತ್ರಯಯುತಮೃದುದರ ಮಧ್ಯ ಗತ ಕಿಂಕಿಣೀ ಜಾಲ ಕಾಂಚಿ ಕಲಾಪ ಪೀವರೋರು ಸಂ- ಮೂರ್ತಿ 8 ಸಿಂಜನ ಜೀರ ರಂಜಿತ ಚರಣ ಕಂಜಾಂಕುಶಕೇತು ರೇಖಾಲಂಕರಣ ಮಂಜುಳ ಮೃದು ಪಾದತಳ ಮುಕ್ತಾಭರಣ ಸಂಜೀವನ ರಾಜ ಸಂಪ್ರೀತಿ ಕರಣ 9 ಔತ್ತಾನಪಾದಿಯನಾಧಾರಗೊಂಡು ನಿತ್ಯ ತೂಗಾಡುವ ತೊಟ್ಟಿಲ ಕಂಡು ಹಿಂಡು ಬಹು ತೋಷಗೊಂಡು ಸತ್ಯಭಾಮೆಯ ಕಾಂತನಾಡುವ ಚೆಂಡು 10 ಪತಿತ ಪಾವನ ಪರಮಾನಂದ ರೂಪ ಸತತ ತಾನೆ ಪರಿಹರಿಸುವ ತಾಪ ವಿತತ ಮಹಿಮ ವೆಂಕಟಾಚಲ ಭೂ ಗತಿಯಾಗಿ ತೋರುವ ತನ್ನ ಪ್ರತಾಪ 11
--------------
ತುಪಾಕಿ ವೆಂಕಟರಮಣಾಚಾರ್ಯ