ಒಟ್ಟು 5079 ಕಡೆಗಳಲ್ಲಿ , 129 ದಾಸರು , 3553 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಗಮವ ತಮನೊಯ್ಯೆ | ಅವನ ಪಾತಾಳದಲಿ |ತಾಗಿದಲೆವರಿದು ವೇದಾವಳಿಗಳಾ |ಆಗ ತಂದ್ದತ್ತ ಮಚ್ಛಾಮಾರನೆ ವುದಯವಾಗುತಿದೆವುಪ್ಪುವಡಿಸೊ ಪಹರಿಯ ಭಾಗೀರಥಿ ಪಿತನೆ |ಭಾಗವತ ಜನಪ್ರಿಯನೆ |ಯೊಗಧೆಯ ವಪ್ಪುವಡಿಸೊ ಹರಿಯೆ | ಭಾಗೀರಥಿ ಪಿತನೆ 1ದೇವಾಸುರರು ಶಿಂದ್ಧು | ಮಥನದಲಿ ಗಿರಿ ಮುಳುಗೆ |ದೆವಾ ರಾಕ್ಷಿಸುತಾ ಕ್ಷಿಶನ ಉಳಿದೂ |ಆನೊಯಲು ವಾಗಿರಿಯ | ನಂತ ಕೂರ್ಮನೆ ವುದಯವಾಗುತಿದೆವಪ್ಪುವಡಿಸೊ ಹರಿಯೆ 2ಭೂತಳವ ಕಾದ್ದೊಯಿದ | ಹರಂಣ್ಯಕ್ಷನೆಂಬ ನರಪಾತಳದ |ಲೊರಶಿನಿಲಿಶಿದ ಜಗಂಗಳಾ | ಖ್ಯಾತಿ ಪಡೆದ ಪ್ರತಿಮ |ವರಹಾರೂಶಪನೆ ಸುಪ್ರಭಾತದಲಿವುಪ್ಪವಡಿಸೊ ಹರಿಯೇ 3ಭೂದೇವದೆವರನು | ಭಾಜಿಸುವ ಶಿವುವ ಪ್ರಹ್ಲಾದಗಾ | ಗಾಹವನುಕವಲುಗಿಶಿ ಉಗದೆ | ತೂದ ಕರುಳಿನಮಾಲೆ |ಯಪ್ಪನರಶಿಂಹ ಕಾರುಣೋದಯದೊ ವಪ್ಪವಡಿಸೊ ಹರಿಯೆ 4ಬರಿ ಭಕತಿಯಿಂದ ಮೊರಡಿನೆಲನ ಮಾತು ಕೂಡೆ |ನೆಲ ನಭನೆ ನೀರಡಿಯ ಮಾಡಿ ಬೆಳೆದೆ |ನಳಿನ ಜಾಂಡವನೊಡದೆ | ವಾಮನ ತ್ರಿವಿಕ್ರಮನೆಬೆಳಗಾಯಿತುಪ್ಪವಡಿಸೋಹರಿಯೆ 5ಕಾತ್ರ್ತವಿಯ್ರ್ಯಾರ್ಜುನನ ಕಡಿದು ಕ್ಷತ್ರಿಯ ಕುಮುದು |ಮಾತ್ರ್ತಂಡನಾದೆ ಮಾತೆಯ ಮಾತಿಗೆ ಆತ್ರ್ತಜನಬಂಧುವೆ | ಪರಶುರಾಮನೆ ಬ್ರಾಹ್ಮಿ ಮೂಹೋರ್ತದಲ್ಲಿವುಪ್ಪವಡಿಸೊ ಹರಿಯೆ 6ಪಂಪಾದಿಪನವರದ | ಅಮರಪತಿಯಾದ ಷ್ಕಂಪ್ಪರಾವಣನಗೆಲಿದವನನುಜಗೆ ಸಂತ್ಪಾರಂಪರೆಯಯಿತ್ತರಘುರಾಮದೆಶೆ | ಕೆಂಪಾಯಿತುಪ್ಪ ವಡಿಸೊಹರಿಯೆ 7ಯಿಂದು ರವಿಕುಲಗಳಲಿ | ಜನಿಶಿದಮಜರಾಜ| ಬೃಂದಾರಿಯಾಗಿಭೂಭರವಿಳಿಪಿದೆ | ನಂದನಂದನ ಕೃಷ್ಣ |ಆಂಗಯಗರಗಾಣ ಬಂದವಿದವುಪ್ಪ ವಡಿಸೊ ಹರಿಯೇ 8ತ್ರಿಪುರದಮಕಾರಿಗಳ | ಸತಿಯರಿಗೆವುಪಸತಿಗಳುಪದೆಶಗಳ ತೊಟ್ಟುಭ್ರಮಗೊಳಿಶಿದುತ್ರಿಪುರ ಹತಗಂಬಾದೆ |ತ್ರಿಪುರ ಸಾಧಕ ಜಾದ್ಕ ತಪ ನವಿದೆವುಪ್ಪವಡಿಸೊ ಹರಿಯೆ9ಆಶಿ ಖಾಡವಿಡಿದಾಶ್ವವೇರಿ ಕೋಪದಿ ವಿಷ್ಣು |ಯಶಶಿನಲಿ ಕಲ್ಕ್ಯಾವ | ತಾರನಾದೆ |ಕುಶಿರಿದರಿದಶಸುವೇಪದಶ್ಯೂಗಳಗೆಲಿದೆ | ಬಿಶಿಲಾಯಿತುಪ್ಪವಡಿಸೊ ಹರಿಯೆ 10ಯಿಂದ ಚಂದ್ದ್ರ್ಯಾದಿಗಳ್ ಬ್ರಹ್ಮ ರುದ್ದ್ರಾದಿಗಳುಪೇಂದ್ರಜಯ |ಜಯಯೆನುತ ಬಂದೈಧರೆ | ವೀಂದ್ದ್ರವಾಹನ ಪುರಂದರವಿಠಲಸೌಭಾಗ್ಯ ಸಾಂದ್ದ್ರನಿಧಿ ವುಪ್ಪವಡಿಸೊ ಹರಿಯೆ 11
--------------
ಪುರಂದರದಾಸರು
ಆರ ಮುಂಧೇಳಲಿ ಕರಕರಿಯ ಈ |ಪೋರನು ಕೊಡವಲ್ಲನಲ್ಲೇ ಸೀರೆಯ ಪದಾರಿಯೊಳ್ಹೋಗಿ ಬಹರ್ಯಾರೆನ್ನ ಕಂಡರೆ |ಊರೆಲ್ಲ ಹೋಗಿ ದೂರರೇನೆ1ಸಂತಿಗೆ ಹೋಗ್ಯಾಕೆ ನಿಂತರೆಂದುಡುಕುತ |ಕಾಂತನೇ ಬಂದರೇನಂತ ಹೇಳುವಾ 2ಬತ್ತಲಾರಾಗಿ ಜಲ ಮತ್ತೀಗ ಸೇರುವಾಗಿ |ಮೃತ್ಯು ಬಂದನಂಬುದರ್ತಿವೇನೆ 3ನೀರ ಹಾವುಗಳೆಲ್ಲ ಶರೀರವ ಸುತ್ತುತಿವೆ |ಗಾರಾದೆವಲ್ಲೆ ವಾರಿಜಾಸ್ಯೆ 4ಮುಳ್ಳು ತೆಪ್ಪವು ಮೋರೆಗೆಲ್ಲ ಮುಚ್ಚುತಲಿವೆ |ಖುಲ್ಲಪೋರಗೆ ದಯೆಯಿಲ್ಲವಲ್ಲೇ 5ಜಲ ಜಂತುಗಳೆಲ್ಲ ಗುಳು ಗುಳು ಮಾಡುತವೆ |ಜಲಜಾಕ್ಷಗ್ಯೇತಕೆ ತಿಳಿಯದಮ್ಮ 6ಮೀನಾಗಳಲ್ಲಿ ಹತ್ತಿ ಏನೇನೋ ಮಾಡುತವೆ |ಏಣಾಕ್ಷಿ ನಮಗೇ ಏನು ಬಂತೇ 7ಹಿಂದತ್ತ ಹೋದರೆ ಕಂಧರದುದ್ದ ನೀರು |ಮುಂದತ್ತ ಬರೆ ಎದೆಗಿಂದ ಕೆಳಗೆ 8ಏಡಿಗಳೆಲ್ಲ ಕಾಲು ನೋಡಿ ಕಚ್ಚುತಲಿವೆ |ಮಾಡಲಿನೆ ಮೋರೆ ಬಾಡಿತಲ್ಲೆ 9ಮೂಗುತಿ ಮಣಿಯೆಲ್ಲ ಹೇಗೋ ಎಲ್ಲ್ಯೋ ಎನಲು |ಈ ಗತಿಯಾಗೆ ಮನೆಗೆ ಹೋಗೋದ್ಹ್ಯಾಂಗೆ 10ಏನಾದರಾಗಲಿ ಪ್ರಾಣೇಶ ವಿಠಲಗೆ |ನೀನೇ ಗತಿಯೋ ಕಾಯೊ ಎನ್ನಬೇಕೇ 11
--------------
ಪ್ರಾಣೇಶದಾಸರು
ಆರಿಗಾದರು ಪೂರ್ವಕಲ್ಪನೆ ತಪ್ಪದು ಪಬೇರೆ ಬಯಸಿದರೆ ಬರಲರಿಯದಯ್ಯ ಅರಾಮಚಂದ್ರನ ಸೇವೆ ಮಾಡಿ ಮೆಚ್ಚಿಸಿ ಮಹಾತಾಮಸನ ಗರ್ವವನು ಮುರಿದು ಬಂದರೋಮಕೋಟಿ ಲಿಂಗನೆನಿಸಿದ ಹುನುಮನಿಗೆ ಹೊರಗೆಗ್ರಾಮಗಳ ಕಾಯ್ದುಕೊಂಡಿಹುದೆ ಮನೆಯಾಯ್ತು1ಸುರಪತಿಯ ಗೆದ್ದು ಸುಧೆಯನು ತಂದು ಮಾತೆಯಸೆರೆಯ ಪರಿಹರಿಸಿ ಬಹು ಭಕ್ತನೆನಿಸಿಹರಿಗೆ ವಾಹನನಾಗಿ ಹದಿನಾಲ್ಕು ಲೋಕವನುಚರಿಸಿದ ಗರುಡನಿಗೆ ಮನೆ ಮರದ ಮೇಲಾಯ್ತು2ಪೊಡವಿ ಭಾರವ ಪೊತ್ತು ಮೃಡಗೆ ಭೂಷಣನಾಗಿಹೆಡೆಯೊಳಗೆ ಮಾಣಿಕ್ಯವಿಟ್ಟುಕೊಂಡುಬಿಡದೆ ಶ್ರೀಹರಿಗೆ ಹಾಸಿಗೆಯಾದ ಫಣಿಪತಿಗೆಅಡವಿಯೊಳಗಣ ಹುತ್ತು ಮನೆಯಾಯಿತಯ್ಯ3ಮೂರು ಲೋಕದ ಒಡೆಯ ಮುಕ್ಕಣ್ಣನೆಂಬಾತಸಾರುತಿದೆ ಸಟೆಯಲ್ಲ ವೇದವಾಕ್ಯಪಾರ್ವತೀ ಪತಿಯಾದ ಕೈಲಾಸದೊಡೆಯನಿಗೆಊರ ಹೊರಗಣ ಮಸಣ ಮನೆಯಾಯಿತಯ್ಯ4ಮೀರಲಳವಲ್ಲವೋ ಮುನ್ನ ಮಾಡಿದ್ದುದನುಯಾರು ಪರಿಹರಿಸಿಕೊಂಬವರಿಲ್ಲವೊಮಾರಪಿತ ಕಾಗಿನೆಲೆಯಾದಿಕೇಶವರಾಯಕಾರಣಕೆಕರ್ತನೀ ಕಡೆ ಹಾಯಿಸಯ್ಯ5
--------------
ಕನಕದಾಸ
ಆರುಮುನಿದರು ಮುನಿಯಲಿ ಎನ್ನಪಾರು ಮಾಡುವಹರಿನಿನ್ನ ದಯವಿರಲಿಪವಾರಿಜಾಕ್ಷನೆ ನಿನ್ನ ಕರುಣವೆಂಬಾಲಯಸೇರಿ ಕೊಂಡವರಿಗೆ ಆರಂಜಿಕಿನ್ನೇನು ಅ.ಪಬಿರುಗಾಳಿ ಭರದಿಂದ ಬೀಸೆ ಮಹಗಿರಿಯು ನಡುಗಿ ಅದರಿಂದಾಗ್ವುದೆಘಾಸಿನರಿಗಂಜಿ ಹುಲಿ ಸ್ಥಳ ತ್ಯಜಿಸಿಮರೆಯಾಗೋಡುವದೇನರಹರಿ ತವಪಾದ ಸ್ಮರಿಪ ದಾಸರುನರಗುರಿಗಳಿಗ್ಹೆದರುವರೇನು 1ದಿನಕರನಿಗೆ ಕುಂದ್ಹೊರಿಸಿ ಇಂಥಬಿನುಗರು ಜರೆದರೆ ಆಗುವನೆ ಮಸಿವನಜಾಕ್ಷನೊಳು ಮನ ನಿಲಿಸಿದಿನ ದಿನ ಘನವಾಗಿ ನೆನೆವ ಭಕ್ತರಮನ ಮಣಿಯುವುದೇನಯ್ಯಬಿನುಗರ ಕೃತಿಗಿನ್ನು 2ಬರುವುದೆಲ್ಲವು ಬಂದು ಬಿಡಲಿ ಎನ್ನಸರುವರು ಪರಿಪರಿ ಜರಿದುನೋಡಲಿಸಿರಿವರ ನಿನ್ನ ದಯವಿರಲಿಮರಿಯಾದ್ಹಾಳಾಗಲಿ ಸ್ಥಿರಸುಖ ಪ್ರಾಪ್ತಿಸಲಿವರದ ಶ್ರೀರಾಮ ನಿನ್ನಸ್ಮರಣೆಯೊಂದೆನಗಿರಲಿ 3
--------------
ರಾಮದಾಸರು
ಆರೇನ ಮಾಡುವರು ಭುವನದೊಳಗೆ |ಪೂರ್ವಜನ್ಮದಕರ್ಮ ಪಣೆಯಲ್ಲಿ ಬರೆದುದಕೆಪಮಾಡಿದಡಿಗೆಯದು ಕೆಡಲು ಮನೆಯ ಗಂಡನು ಬಿಡಲು |ಕೊಡಿ ಇದ್ದಾಸತಿಯ ಕುಣಿಸಾಡಲು ||ಗೋಡೆಯಲಿ ಬರೆದ ಹುಲಿ ಘುಡುಘುಡಿಸಿ ತಿನಬರಲು |ಆಡದಂತಹ ಮಾತ ಅಖಿಳರೂ ನಿಜವೆನಲು 1ಹೆತ್ತಾತಾಯ್ ಕರೆದು ಮಕ್ಕಳಿಗೆ ವಿಷ ಹಾಕಿದರೆ |ಮತ್ತೆ ತಂದೆಯ ಕರೆದು ಹೊರಗೆ ಮಾರಿದರೆ ||ತೊತ್ತು ಅರಸಿಗೆಪ್ರತಿ - ಉತ್ತರವ ನಡೆಸಿದರೆ |ಕತ್ತಲೆ ಕರಡಿಯಾಗಿ ಬೆನ್ನಟ್ಟಿ ಕಟ್ಟಿದರೆ 2ಹೊಲಬೇಲಿ ಮೇದರೆ - ಮೊಲ ಎದ್ದು ಇರಿದರೆತಲೆಗೆ ತನ್ನಯ ಕೈಯ ಪೆಟ್ಟು ತಾಗಿದರೆ ||ಹೆಳಲು ಹಾವಾದರೆ - ಗೆಳೆಯ ರಿಪುವಾದರೆ |ಕಲಿಸಿದ್ದ ಅವಲಕ್ಕಿ ಕಲಪರಟಿ ನುಂಗಿದರೆ 3ಕಣ್ಣೊಳಗಿನಾ ಬೊಂಬೆ ಕಚ್ಚಾಡ ಬಂದರೆ |ಹೆಣ್ಣಿನಾ ಹೋರಾಟ ಹೆಚ್ಚಾದರೆ ||ಅನ್ನ ಉಣ್ಣದ ಮನುಜಗಜೀರ್ಣವಾದರೆ |ಪುಣ್ಯತೀರ್ಥಂಗಳಲಿ ಪಾಪ ಘಟಿಸಿದರೆ 4ಏರಿ ಕುಳಿತಾ ಕುಂಬೆ ಎರಡಾಗಿ ಬಿಚ್ಚಿದರೆ |ವಾರಿಧಿಗಳು ಉಕ್ಕಿ ಮೇರೆ ಮೀರಿದರೆ ||ಆರಿದಾ ಇದ್ದಲಿಯು ಅಗ್ನಿಯಾಗುರಿದರೆ |ಧೀರಪುರಂದರ ವಿಠಲನ ದಯವು ತಪ್ಪಿದರೆ5
--------------
ಪುರಂದರದಾಸರು
ಆರೋಗಣೆಯ ಮಾಡೋ ಎನ್ನಯ್ಯಆರೋಗಣೆಯ ಮಾಡೋ ಪ.ನಾರದಾರ್ಚಿತಪಾದ ನಾರಾಯಣ ಸ್ವಾಮೀ ಅ.ಪಸರಸಿಜಾಲಯೆ ಲಕ್ಷ್ಮಿ ಸರಸ್ವತಿಭಾರತಿಪರಿಪರಿ ಅಡಿಗೆಯ ಸಿದ್ದ ಮಾಡಿಹರೊ ||ಪರಿಮಿತಿಯಿಲ್ಲದ ರುಚಿಯ ಪದಾರ್ಥವಪರಮಪುರುಷ ಉಂಡು ದಯ ಮಾಡೋ ಸ್ವಾಮಿ1ಅಂಬುಜಮುಖಿ ಲಕ್ಷ್ಮಿ ತಾಂಬೂಲ ಕೊಡುವಳುಕಂಬುಕಂಧರನೇ ನೀ ಕೈಕೊಳು ಬೇಗ ||ರಂಭೆ ಊರ್ವಸಿ ಮೇನಕೆ ಮೊದಲಾದವರುಸಂಭ್ರಮದಿ ಬಂದು ನಾಟ್ಯಕೆ ಕಾದಿಹರೊ ಸ್ವಾಮಿ 2ಸರಸಿಜಭವನಯ್ಯ ಪುರಂದರವಿಠಲಸರುವಭೋಗಭುಂಜಿಪ ನರರ ಪಾಲಿಸೊ ದೇವಾ3
--------------
ಪುರಂದರದಾಸರು
ಆವ ಪುಣ್ಯವೊ ಗೋಪಿಗಾವ ಪುಣ್ಯವೊ ಪ.ಆವ ಪರಬೊಮ್ಮನಾವಾವ ಪರಿಯಲಾಡಿಸುವ ಅ.ಪ.ಮಾರನನ್ನ ಪೆತ್ತನ ಕುಮಾರನೆಂದು ಕರೆದು ತನ್ನಮಾರಬೀಸಿ ಬಿಗಿದಪ್ಪಿ ಮೋರೆ ನೋಡಿ ಮೊಲೆಯ ಕೊಡುವ1ಕಾಲನಾಗಿ ಜಗವ ತತ್ಕಾಲದಲ್ಲಿ ನುಂಗುವಂಗೆಕಾಲಮೇಲೆ ಮಲಗಿಸಿ ತ್ರಿಕಾಲದಲ್ಲಿ ಹಾಲನೆರೆವ2ನೀತ ಪ್ರಭು ವಿಶ್ವಕೆ ವಿನೀತನಾಗಿ ಕೈಯ ಒಡ್ಡೆನೀತಿ ಹೇಳಿ ನವನವನೀತವಿತ್ತು ರಂಜಿಸುವ 3ಆನೆಗೊಲಿದು ಎಂಟುದಿಕ್ಕಿನಾನೆಯಾಳ್ದ ಅಪ್ರತಿಮ ದಯಾನಿಧಿಯ ಕುಳ್ಳಿರಿಸಿ ಆನೆ ಬಂತಂತಾನೆಯೆಂಬ 4ತೋಳನೋಡುಧೈರ್ಯದೀರ್ಹತ್ತು ತೋಳಿನವನ ಹೋರುವ ನಳಿತೋಳವಿಡಿದು ವಾರಂವಾರ ತೋಳನ್ನಾಡೊ ಮಗನೆ ಎಂಬ 5ತಾರಕೋಪದೇಶಕಗೆತಾರಕರಂಗನಳಲುತಾರಕಪತಿಯ ತೋರಿ ತಾರಕ್ಕ ಬಿಂದಿಗೆಯೆಂಬ 6ದಟ್ಟವಾದ ಜೀವಜಾಲದಅಟ್ಟುಳಿನಿವಾರಣಂಗೆದಟ್ಟು ದಟ್ಟು ಎಂದು ರಂಗನ ದಟ್ಟ ಸಾಲನಿಕ್ಕಿಸುವ 7ಚಿನ್ಮಯಾತ್ಮ ಮುಕ್ತಾಮುಕ್ತ ಚಿನ್ನರನಾಡಿಸುವಂಗೆಚಿನ್ನ ತಾ ಹೊನ್ನ ಗುಬ್ಬಿ ಚಿನ್ನ ಗುಬ್ಬಿಯಾಡಿಸುವ 8ದೃಷ್ಟಾದೃಷ್ಟದೇಹಿಗಳದೃಷ್ಟ ನಿಯಾಮಕಂಗೆದೃಷ್ಟಿ ತಾಕಿತೆಂದು ತೆಗೆದು ದೃಷ್ಟಿ ದಣಿಯೆತುಷ್ಟಿಬಡುವ9ಅನ್ನಮಯನು ಬ್ರಹ್ಮಾದ್ಯರಿಗೆ ಅನ್ನಕಲ್ಪತರುಪರಮಾನ್ನ ಚಿನ್ನಿಪಾಲಿನಿಂದ ಅನ್ನಪ್ರಾಶನ ಮಾಡಿಸುವ 10ನಿತ್ಯತೃಪ್ತ ನಿತ್ಯಾನಂದ ನಿತ್ಯಭೋಗಿ ನಿತ್ಯತಂತ್ರನಿತ್ಯಕರ್ಮನ್ನೆತ್ತಿಕೊಂಡುನೆತ್ತಿಮೂಸಿ ಮುದ್ದಿಸುವ11ಆ ಲಯದಲ್ಲಾಲದೆಲೆ ಆಲಯಗೆ ತೊಟ್ಟಿಲು ಉಯ್ಯಾಲೆಯಿಟ್ಟು ಮುದ್ದು ಮಾತನಾಲಿಸಿ ಜೋಗುಳವ ಪಾಡುವ 12ಅಂಜಲಿಪುಟದಿ ಸುರರಂಜಿಕೆಯ ಬಿಡಿಸುವ ನಿರÀಂಜನಗಭ್ಯಂಜನಿಸಿ ಅಂಜನಿಟ್ಟುಅಮ್ಮೆಕೊಡುವ13ಸಪ್ತ ಸಪ್ತಭುವನಜನಕೆಸುಪ್ತಿಎಚ್ಚರೀವನಿಗೆಸುಪ್ತಿಕಾಲವೆಂದು ತಾನು ಸುಪ್ತಳಾಗಿ ಸ್ತನವ ಕೊಡುವ14ತನ್ನ ಮಗನ ನಡೆಯ ನುಡಿಯ ತನ್ನ ಪತಿಗೆ ಹೇಳಿ ಹಿಗ್ಗಿತನ್ನ ಭಾಗ್ಯ ಲಕ್ಷ್ಮೀಶ ಪ್ರಸನ್ನವೆಂಕಟ ಕೃಷ್ಣಯೆಂಬ 15
--------------
ಪ್ರಸನ್ನವೆಂಕಟದಾಸರು
ಇಂತಿರುವುದೇನು ಬಗೆ ರಾಮಾ |ಹರಿಸ್ವ-ತಂತ್ರ ಶ್ರೀನಿಧಿಯೆಂದು ಪೊಗಳುತಿವೆ ವೇದ ಪವಿಧಿಗೆ ಪದವಿತ್ತವನೇ ವನವ ಚರಿಸುವದೇನೋ |ಪದುಮ ಸದನೆಯ ರಮಣ ಬಡವನಾಗಿಹದೇನೋ ||ಮದನಜನಕನೆ ಋಷಿಗಳಂತೆ ಆಗುವದೇನೋ |ಉದರದೊಳು ಬಹು ಜಗಂಗಳಿರಲೂ ಪತ್ರ ಸದನವಾಶ್ರಯಿಸಿ-ಕೊಂಡಿರುವಿ ಇದು ಏನೋ 1ನಿತ್ಯತೃಪ್ತನೆ ಶಬರಿಯೆಂಜಲುಂಬುವದೇನೋ |ಉತ್ತಮ ವಿಹಗವಿರಲು ಕಾಲ್ನಡಿಗೆಯಿದೇನೋ ||ಭೃತ್ಯರುದಿವಿಜರುನೀಂ ಚಾಪವ ಹೊರುವದೇನೋ |ನಿತ್ಯಶ್ರೀ ಹೃದಯದೊಳಗಿರಲು ನಿನ್ನ ಪತ್ನಿ ಹೋದಳೆಂದುಚಿಂತಿಸುವದೇನೋ2ಸ್ವಾಮಿ ಅಹಿಶಯನ ತೃಣಶಾಯಿಯಾಗುವದೇನೋ |ಭೂಮಿ ನಿನ್ನೊಂದಂಘ್ರಿ ಸೇತು ಕಟ್ಟುವದೇನೋ ||ಈ ಮರುಳು ರಕ್ಕಸರು ನಿನಗೊಂದೀದೇನೋ |ತಾಮಸರ ಮೋಹಿಸುವದಕೆ, ಭಕ್ತ ಪ್ರೇಮ ಪ್ರಾಣೇಶ ವಿಠ್ಠಲನೆಲೀಲೆಯೇನೋ3
--------------
ಪ್ರಾಣೇಶದಾಸರು
ಇದರೆನ್ನಧಿಕ ಸುಖವೊಂದವೊಲ್ಲೆಪದುಮನಾಭನೆ ನಿನ್ನ ಪಾದಯುಗ್ಮವೆ ಸಾಕ್ಷಿ ಪಮಧ್ವ ಮತದೊಳಗೆ ಜನಿಸಿ ದ್ವಾದಶನಾಮ |ಮುದ್ರೆ ಶ್ರೀ ತುಲಸಿ ಅಕ್ಷಮಾಲೆ ಧರಿಸಿ ||ಶುದ್ಧ ಗ್ರಂಥವನೋದಿ ಅದ್ವೈತರನು ಹಳಿದು |ಸದ್ವೈಷ್ಣವನೆಂದೆನ್ನಿಸಿಕೊಂಡರೆ ಸಾಕು 1ಹಿರಿಯರಾದವರಿಗೆ ಬಾಗಿ, ದಾನವ ಮಾಡಿ |ನಿರುತ ಸತ್ಕಥೆಗಳ ಕೇಳುತಲಿ ||ವರಮಂತ್ರ ಜಪಿಸುತ ಪಂಚಯಜÕವ ಮಾಡಿ |ಹರಿದಿನ ವ್ರತವನು ನಡೆಸುತಿಪ್ಪುದೆ ಸಾಕು 2ಪ್ರಾಣೇಶ ವಿಠಲ ನೀನೇ ಸರ್ವೋತ್ತಮ, ಬ್ರಹ್ಮ- |ಪ್ರಾಣಾದಿಗಳು ನಿನ್ನ ದಾಸರೆಂಬ ||ಜ್ಞಾನವೆ ಗಳಿಸಿ ವೈಷ್ಣವರ ಮನೆಯ ಬಾಗಿ - |ಲನು ನಿರುತ ಕಾಯ್ದು ಜೀವಿಸುವದೇ ಸಾಕು 3
--------------
ಪ್ರಾಣೇಶದಾಸರು
ಇದಿರಾರೊ-ಗುರುವೆ-ಸಮರಾರೊ ಪಮದನಜನಕಪ್ರಿಯ ಗುರುಮಧ್ವರಾಯಅ.ಪಸನ್ನುತಮಹಿಮ ಪ್ರಸನ್ನವದನ ನಿನ-ಗನ್ಯನಲ್ಲವೊ ನೀಯೆನ್ನ ರಕ್ಷಿಸಬೇಕೋ ||ನಿನ್ನ ನೋಡಿದವರ್ಧನ್ಯರಾಗುವರುಎನ್ನ ದಯಾಮೂರ್ತಿ ಮನ್ನಿಸಿ ನೋಡೋ 1ದುರ್ಜನರನು ಗರ್ಜೆನೆಯಿಂದ ಓಡಿಸಿಸಜ್ಜನರನು ಸಂರಕ್ಷಿಸಿದಾತನೆ |ಈ ಜಗದಲಿ ಮಧ್ಯಗೇಹರ ಪತ್ನಿಯಪೂಜ್ಯ ಜಠರದಲಿ ಜನಿಸಿದ ಧೀರ 2ವೇದಶಾಸ್ತ್ರಗಳಿಂದ ಮಾಯಿಗಳ ಖಂಡಿಸಿಸಾಧಿಸಿ ಹರಿಯೆ ಸರ್ವೋತ್ತಮನೆಂದು ||ಮೋದಭರಿತವಾದ ದಿವ್ಯಶಾಸ್ತ್ರವ ಗೈದಮೋದತೀರ್ಥ-ಪುರಂದರವಿಠಲದಾಸ3
--------------
ಪುರಂದರದಾಸರು
ಇಂದೆ ಕಂಡೆವು ಗುರುರಾಯನ ನಮ್ಮತÀಂದೆ ಸತ್ಯಾಭಿನವತೀರ್ಥನ ಫಲಿಸಬಂದೊದಗಿತು ನಮ್ಮಸುಕೃತಆನಂದರಸಾಬ್ಧಿ ಉಕ್ಕೇರಿತು ಪ.ಇದೀಗೆ ಕಲ್ಪದ್ರುಮ ಕಾಣಿರೈ ಅಹುದಿದೀಗೆ ಚಿಂತಾಮಣಿ ನೋಡಿರೈ ಮತ್ತಿದಿದೀಗೆಸುರಭಿಬಂದಿತೆನ್ನಿರೈ ತಮ್ಮಮುದದಿಂದ ಯತಿರೂಪವಾಯಿತೈ 1ಬಡವರ ದೊರೆ ನಮ್ಮ ಗುರುರಾಯ ಈಪೊಡವಿಲಿ ಯಾಚಕರಾಶ್ರಯ ಆಪ್ತಹಡೆದ ತಾಯಿತಂದೇರ ಮರೆಸಿದ ಎಮ್ಮೊಡೆಯ ಭಕ್ತಿ ಭಾಸವ ಬೆಳೆಸಿದ 2ಭಕ್ತಿ ಪಥವ ನೋಡಿ ನಡೆವನು ಯತಿಮುಕುಟಮಣಿಗೆ ಸರಿಗಾಣೆನು ಜ್ಞಾನಸುಖದ ಬಳ್ಳಿಯ ಬೆಳೆ ಬೆಳೆಸಿದ ಸಲೆಮುಕ್ತಿ ಮಂದಿರ ವಾತ್ರ್ಯರುಹಿಸಿದಒಂದೊಂದು ಗುಣಗಳ ಮಹಿಮೆಯು ಮತ್ತೆಂದಿಗೆ ಹೊಗಳಲಿ ತೀರವುಹಿಂದಾದ ಪೂತರು ಅಹರು ಯತೀಂದ್ರನ ಸಾಮ್ಯಕೆ ಸರಿಯಾರು 4ಗುರುಭಕ್ತಿನೆಲೆಕಳೆಮರೆಯದೆ ಶ್ರೀಧರಜೆ ರಾಘವಪಾದ ಜರಿಯದೆ ದೇವವರವೇದವ್ಯಾಸನ ಸೇವೆಗೆ ಒಂದರಘಳಿಗ್ಯಲಸ ತಾನೆಂದಿಗೆ 5ಹೊನ್ನ ತೃಣದೊಲು ಸೂರ್ಯಾಡಿದ ವಿದ್ಯೋನ್ನತರ ತವರುಮನೆಯಾದಮನ್ನಿಪ ಸುಜನಚಕೋರವ ಹೊರವಪೂರ್ಣ ಚಂದಿರನಂತಲ್ಲೊಪ್ಪುವ 6ತಪ್ತಲಾಂಛನ ತೀರ್ಥವೀವಾಗಭೃತ್ಯರುಪಟಳಕೊಲಿದು ನಲಿವನಾಗಕಪಟವ ಲೇಶಮಾತ್ರರಿಯನು ಇಂಥಗುಪ್ತ ಮಹಿಮಗೆಣೆಗಾಣೆನು 7ಸಕಳ ಪುರಾಣೋಕ್ತ ದಾನವ ಬಿಡದಖಿಳ ಧರ್ಮವನೆಲ್ಲ ಮಾಡುವನಿಖಿಳತತ್ವವನೊರೆದು ಹೇಳುವ ಈಅಕಳಂಕನೆಂದೂ ನಮ್ಮನುಕಾವ8ಕಷ್ಟ ಮೌನದಿ ವಾರಣಾಸಿಯ ಬಹುಶಿಷ್ಟರ ಸಲಹುತ ಯಾತ್ರೆಯ ಮಾಡಿತುಷ್ಟಿಬಡಿಸಿದಲ್ಲಿವಾಸರಬೇಡಿದಿಷ್ಟಾರ್ಥವನೀವನು ದಾಸರ 9ಪ್ರತಿದಿನ ಗುರುಪಾದುಕೆಯನಿಟ್ಟು ಮೇಲೆನೂತನವಸನಹೊನ್ನಾರ್ಚನೆಗಿಟ್ಟು ಮುಂದೆನುತಿಸಿಹಿಗ್ಗುವ ನವಭಕುತಿಂದ ಈವ್ರತಕಾಗಲಿಲ್ಲ ಒಂದಿನಕುಂದು10ಶ್ರೀಭಾಗವತಶಾಸ್ತ್ರ ಟೀಕನುಹರಿಗಾಭರಣವ ಮಾಡಿಟ್ಟನುಈ ಭೂಮಿಲಿಹ ಶಿಷ್ಯ ಜನರನು ತತ್ವಶೋಭಿತರನು ಮಾಡಿ ಹೊರೆದನು 11ಬಲುಹಿಂದ ಯವನನ ಬಲದಲ್ಲಿ ಕೃಷ್ಣಒಳಪೊಕ್ಕು ಸದೆದ ಪರಿಯಲ್ಲಿಕಲಿನೃಪ ಮ್ಲೇಚ್ಛನ ಬಂಧನ ತಪೋಬಲದಿಂದ ಗುರುರಾಯ ಗೆಲಿದನು 12ಭಕ್ತಿವಿರತಿಜ್ಞಾನಪೂರ್ಣನು ಸೇವಕ ಜನರಿಗೆ ಪ್ರಾಣಪ್ರಿಯನುಪ್ರಕಟಿಸಿದನು ನಿಜಕೀರ್ತಿಯನಿತ್ಯಸಕಲ ಸದ್ಗುಣಗಳ ವಾರ್ತೆಯ 13ಈಪರಿಬಹು ಪಟ್ಟವಾಳುತ ದಿವ್ಯಶ್ರೀಪಾದವ್ರತ ಪೂರ್ಣ ತಾಳುತಸ್ಥಾಪಿಸಿದನು ಮಧ್ವಸಿದ್ಧಾಂತ ದುಷ್ಟಕಾಪುರುಷರ ಮೊತ್ತ ಗೆದ್ದಾತ 14ಹರಿಗುಣ ಜಿಜ್ಞಾಸೆಯಿಂದ ಶ್ರೀಹರಿಮೂರ್ತಿ ಧ್ಯಾನ ಚಿಂತನೆಯಿಂದ ಶ್ರೀಹರಿನಾಮ ಸ್ಮರಣಶ್ರವಣದಿಂದ ಶ್ರೀಹರಿಪ್ರೀತಿಬಡಿಸಿದ ನಲವಿಂದ15ನಿರುತ ಉದಯಸ್ನಾನ ಮೌನವ ಶ್ರೀಗುರುಮಧ್ವಶಾಸ್ತ್ರವ್ಯಾಖ್ಯಾನವ ಮಹಾಗೀರ್ವಾಣ ವಾಕ್ಯದಿಂದ ಪೇಳುವ ಆತ್ಮಗುರುಗಳ ಸ್ಮರಣೆಯ ಮಾಡುವ 16ಗುರುಸತ್ಯನಾಥರ ತಂದನು ನಿಜಗುರುಪದವೇ ಗತಿಯೆಂದನು ತನ್ನಸ್ಮರಣೇಲಿ ಇಹರ ಕಾವನು ಬೇಡಿದರೆ ಅಭೀಷ್ಟಾರ್ಥವನೀವನು 17ಗುರುಸತ್ಯನಾಥಾಬ್ಧಿ ಸಂಜಾತ ಸಜ್ಜನರಹೃತ್ಕುಮುದತಾಪಸಂಹರ್ತಸರಸ ಸುಧಾಂಶು ವಾಕ್ಯಾನ್ವಿತ ಸಿತಕರನಹುದಹುದಯ್ಯ ಧರೆಗೀತ 18ಆವ ಪ್ರಾಣಿಯು ಗುರುಮಹಿಮೆಯ ಸದ್ಭಾವದಿ ನೆನೆಯಲು ಸುಖಿಯಾದದೇವ ಪ್ರಸನ್ವೆಂಕಟಾದ್ರೀಶ ಅವಗಾವಗೆ ಪಾಲಿಪ ಮಧ್ವೇಶ 19
--------------
ಪ್ರಸನ್ನವೆಂಕಟದಾಸರು
ಇನ್ನು ಪುಟ್ಟಿಸದಿರಯ್ಯ ಪುಟ್ಟಿಸಿದಕೆ ಪಾಲಿಸಯ್ಯಎನ್ನ ದಯದಿ ಪಾಲಿಸಯ್ಯ ಪನಿನ್ನ ಚರಣಾಂಬುಜವ ನಂಬಿದೆನೊ ಶ್ರೀ ಹರಿಯೆಬನ್ನು ಬಿದ್ದೆನು ಭವಬಂಧನವ ಬಿಡಿಸಯ್ಯ ಅ.ಪಅಮರೇಂದ್ರವಂದಿತನೆ ಅನಂತಮಹಿಮನೆಕಮಲಸಖಾನಂತಕರನೆ ||ಕಮಲಾಯತಾಂಬಕನೆ ಕಾಮಿತದಾಯಕನೆವಿಮಲಗುಣ ವಿಭೀಷಣಗೆ ಒಲಿದ ದಯದಿಂದಲೆನ್ನ1ಅಜಮಿಳ ಅಂಬರೀಷ ಅಕ್ರೂರ ವಿದುರಗೆಗಜರಾಜ ಗಿರಿಜೇಶಗೆ ||ನಿಜಭಕ್ತ ಪ್ರಹ್ಲಾದಅಜ ಧ್ರುವ ಅರ್ಜುನಗೆದ್ವಿಜ ಸುತ ರುಕ್ಮಾಂಗದರಿಗೊಲಿದ ದಯದಿಂದಲೆನ್ನ2ಅವರಂತೆ ನಾನಲ್ಲಅವರ ದಾಸರ ದಾಸಸವರಿ ಬಿಸುಟೆನ್ನ ದೋಷ ||ಪವಿತ್ರನ್ನ ಮಾಡಯ್ಯ ಪುಂಡಲೀಕ ವರದನೆಅವಸರಕೆ ದ್ರೌಪದಿಗೆ ಒಲಿದ ದಯದಿಂದಲೆನ್ನ 3ಎಂದೆಂದು ನಿನ್ನ ಪಾದವೆನಗೆ ನೆಲೆಯಾಯಿತುಎಂದೆಂದು ನಿನ್ನ ನಾಮಭಜನೆ ||ಎಂದೆಂದು ನೀಯೆನ್ನ ಬಿಡದೆ ಪಾಲಿಸೊ ಸ್ವಾಮಿಅಂದು ಅಂಜನೆಕಂದನಿಗೆ ಒಲಿದ ದಯದಿಂದಲೆನ್ನ 4ಅಂತರಂಗದುಬ್ಬಸವ ಅಯ್ಯೋ ನಿನಗುಸಿರುವೆನುಚಿಂತೆಗಳ ಪರಿಹರಿಸೊ ||ಸಂತತ ಪಾಲಿಸೊಪುರಂದರ ವಿಠಲನೆಚಿಂತಿಪ ಗೌತಮನ ಸತಿಗೆ ಒಲಿದ ದಯದಿಂದಲೆನ್ನ 5
--------------
ಪುರಂದರದಾಸರು
ಇನ್ನೂ ದಯ ಬಾರದೇ-ದಾಸನ ಮೇಲೆ-ಇನ್ನೂ ದಯ ಬಾರದೇ ಪಮುನ್ನ ಮಾಡಿದ ದುಷ್ಕರ್ಮಗಳೆಲ್ಲವಮನ್ನಿಸಿ ಕಳೆವುದು ಇಂದಿರೆಯ ರಮಣಾ ಅ.ಪನಾನಾ ಜನ್ಮಗಳಲಿ ನಾನಾ ಜಾತಿಗಳಲಿನಾನಾ ಯೋನಿಗಳಲಿ ಜನಸಿ ಜನಿಸಿ ದೇವಾ ||ನಾನು ನನ್ನದು ಎಂದು ನರಕದೊಳಗೆ ಬಿದ್ದುನೀನೆ ಗತಿಯೆಂದು ಸ್ಮರಣೆ ಮಾಡಿದ ಮೇಲೆ 1ಕಾಮಾದಿ ಷಡುವರ್ಗ ಗಾಢಾಂಧಕಾರದಿಪಾಮರನಾಗಿ ಇದ್ದಂಥ ಪಾತಕನ ||ರಮಾಮನೋಹರಹರಿನೀನೇ ಗತಿಯೆಂದುನಾಮಾಮೃತವನು ಪಾನ ಮಾಡಿದ ಮೇಲೆ 2ಏನ ಓದಿದರೇನು ಏನ ಕೇಳಿದರೇನುಈ ನಾಮ ಸ್ಮರಣೆಗೆ ಸರಿಬಾರದು ||ಙ್ಞÕನಹೀನನ ಮೇಲೆ ದಯವಿಟ್ಟು ಪಾಲಿಸುದೀನ ದಯಾಕರಪುರಂದರವಿಠಲನೆ3
--------------
ಪುರಂದರದಾಸರು
ಇರಬೇಕು - ಹರಿದಾಸರ ಸಂಗವರಜ್ಞಾನಿಗಳ ದಯ ಸಂಪಾದಿಸಬೇಕು ಪ.ಅತಿಜ್ಞಾನಿಯಾಗಿ ಹರಿಕಥೆಯ ಕೇಳಬೇಕುಯತಿಗಳ ಪಾದಕ್ಕೆ ಎರಗಬೇಕುಸತಿ ಸುತರಿದ್ದು ಮಮತೆಯನು ಬಿಡಬೇಕುಗತಿಯೆಂದು ಬಿಡದೆ ಹರಿಯ ಪೋಪರಸಂಗ 1ನಡೆ ಯಾತ್ರಿಯನಬೇಕು ನುಡಿ ನೇಮವಿರಬೇಕುಬಿಡದೆ ಹರಿಯ ಪೂಜೆಯ ಮಾಡಬೇಕುಅಡಿಗಡಿಗೆ ಬಂದು ಹರಿಗಡ್ಡ ಬೀಳಬೇಕುಬಿಡದೆ ಹರಿಭಜನೆಯ ಮಾಡುವರ ಸಂಗ 2ಹರಿ - ಹರ -ವಿರಂಚಿಯರ ಪರಿಯ ತಿಳಿಯಬೇಕುತರತಮದಿ ರುದ್ರ - ಇಂದ್ರಾದಿಗಳಅರಿಯದಿದ್ದರೆ ಗುರುಹಿರಿಯರ ಕೇಳಬೇಕುಪರಮಾನಂದದಲಿ ಓಲಾಡುವರ ಸಂಗ 3ಷಟ್ಕರ್ಮ ಮಾಡಬೇಕು ವೈಷ್ಣವನೊಲಿಸಬೇಕು ಉ -ತ್ಕಷ್ಟ ವೈರಾಗ್ಯಬೇಕು ದುಷ್ಟಸಂಗ ಬಿಡಬೇಕುವಿಷ್ಣುವಿನ ದಾಸರ ದಾಸನಾಗಲುಬೇಕುಎಷ್ಟು ಕಷ್ಟಬಂದರೂ ಹರಿಯ ಭಜಿಪರ ಸಂಗ 4ಏಕಾಂತ ಕುಳ್ಳಿರಬೇಕು ಲೋಕವಾರ್ತೆ ಬಿಡಬೇಕುಲೋಕೈಕನಾಥನ ಭಜಿಸಬೇಕುಸಾಕು ಸಂಸಾರವೆಂದುಕಕ್ಕುಲತೆ ಬೀಡಬೇಕುಶ್ರೀಕಾಂತಪುರಂದರವಿಠಲರಾಯನ ಸಂಗ5
--------------
ಪುರಂದರದಾಸರು
ಈ ಜೀವನಿಂದು ಫಲವೇನು |ರಾಜೀವಲೋಚನನ ಮರೆದಿಹ ತನುವಿನಲಿ ಪ.ಅರುಣನುದಯಲೆದ್ದು ಹರಿಸ್ಮರಣೆಯ ಮಾಡಿ |ಗುರು - ಹಿರಿಯರ ಚರಣಕಮಲಕೆರಗಿ ||ಪರಮಶುಚಿಯಾಗಿ ನದಿಯಲಿ ಮಿಂದು ರವಿಗಘ್ಯ |ವೆರೆಯದೆ ಮರೆಹ ಈ ಪಾಪಿತನುವಿನಲಿ 1ಹೊನ್ನಗಿಂಡಿಯಲಿ ಅಗ್ರೋದಕವನೆ ತಂದು |ಚೆನ್ನಾಗಿ ಹರಿಗೆ ಅಭಿಷೇಕ ಮಾಡಿ ||ರನ್ನದುಡಿಗೆಯುಡಿಸಿ ರತುನಗಳಳವಡಿಸಿ |ಕಣ್ಣಿರಲು ನೋಡಲರಿಯದ ಪಾಪಿತನುವಿನಲಿ 2ನಳನಳಿಸುವ ನಾನಾ ಪುಷ್ಪಗಳು ಶ್ರೀತುಳಸಿ |ಹೊಳೆವ ಕಿರೀಟ ಕೊರಳಲಿ ಪದಕ ||ನಳಿನಾಕ್ಷನಿಗೆ ಕರ್ಪುರದಾರತಿಯನೆತ್ತಿ |ಕಳೆಯ ನೋಡಲರಿಯದ ಪಾಪಿತನುವಿನಲಿ 3ವರಭಕ್ಷ್ಯಗಳುಪರಮಾನ್ನ ಶಾಲ್ಯನ್ನವು |ವರವಾದ ಮಧುಘೃತ ಕ್ಷೀರವನ್ನು ||ಸಿರಿನಾರಾಯಣಗೆ ಸಮರ್ಪಣೆ ಮಾಡಿ ತಾ - |ಎರಡು ಕೈಮುಗಿಯದ ಪಾಪಿತನುವಿನಲಿ 4ಉರಗಾದ್ರಿ - ಸ್ವಾಮಿಪುಷ್ಕರಣಿಗಳು ಮೊದಲಾದ |ಪರಿಪರಿ ತೀರ್ಥಗಳನೆಲ್ಲ ಮಿಂದು ||ತಿರುವೆಂಗಳಪ್ಪ ಶ್ರೀ ಪುರಂದರವಿಠಲನ |ಚರಣವನು ಭಜಿಸಲಯದ ಪಾಪಿತನುವಿನಲಿ 5
--------------
ಪುರಂದರದಾಸರು