ಒಟ್ಟು 4449 ಕಡೆಗಳಲ್ಲಿ , 130 ದಾಸರು , 3245 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತವನಲ್ಲೊ ಮುರಾರಿ ನಿನಗೆ ನಾಮತ್ತವನಲ್ಲೊ ಮುರಾರಿ ನಿನ್ನಭೃತ್ಯರ ಭೃತ್ಯರ ಭೃತ್ಯರ ಭೃತ್ಯನಿಗೆತ್ತಣ ಸ್ವಾತಂತ್ರ್ಯ ಸಲಹಯ್ಯಶೌರಿಪ.ರಂಗಾ ನೀ ಕೊಳ್ಳದ ಬಂಗಾರ ತಳಿಗ್ಯೂಟನುಂಗುವ ಮತ್ತವನಲ್ಲೊರಂಗಾ ನಿನ್ನ ಮರೆದಂಗನೆಯರನಾಲಂಗಿಸಿ ಮತ್ತವನಲ್ಲೊರಂಗಾ ನಿನ್ನೊಲುಮೆಯ ಡಿಂಗರರಂಘ್ರಿಗೆರಂಗದೆ ಮತ್ತವನಲ್ಲೊರಂಗಾ ನಿನ್ನೆಂಜಲೆನ್ನಂಗೈಯೊಳುಂಡು ರಾಜಂಗಳನುಡುಗುವ ಬಡವ ನಾನಲ್ಲದೆ 1ನಾಥನೆ ನಾನೆಂದು ಮಾತು ಕಲಿತುಖಳವ್ರಾತಸಂಗದಿ ಮತ್ತವನಲ್ಲೊನಾಥ ನಿನ್ನ ಮೀರಿದಾತನುಂಟೆಂದು ನಿರ್ಭೀತಿಲಿ ಮತ್ತವನಲ್ಲೊನಾಥ ನಿನ್ನ ಗುಣಖ್ಯಾತಿ ಹೊಗಳದನ್ಯಸ್ತೌತ್ಯದಿ ಮತ್ತವನಲ್ಲೊನಾಥ ನಿನ್ನಡಿಯ ತೀರಥವೆ ಗತಿಯೆಂದುಯಾತನೆಗಂಜುವ ಬೆದರುಗುಳಿಯಲ್ಲದೆ 2ತಂದೆ ನೀ ಮಾರಿದರೊಂದೊಪ್ಪು ಕೊಂದರೊಪ್ಪೆಂದಿಗೆ ಮತ್ತವನಲ್ಲೊತಂದೆ ನಿನ್ನ ಮನೆ ಹೊಂದಿದಟ್ಟಣೆಗೈದಿಬಂಧಿಸು ಮತ್ತವನಲ್ಲೊತಂದೆ ನಿನ್ನಾಯುಧ ಸಂದು ಸಂದಿಗೆ ಕಾಸಿತಂದಿಡು ಮತ್ತವನಲ್ಲೊತಂದೆ ಪ್ರಸನ್ನವೆಂಕಟಿಂದಿರೇಶನೊಬ್ಬ ಅಹುದೆಂದ ಸೊಕ್ಕೊಂದುಳ್ಳವನಲ್ಲದೆ 3
--------------
ಪ್ರಸನ್ನವೆಂಕಟದಾಸರು
ಮಂದಮತಿಯೈ ನಾನುಮದನಜನಕನು ನೀನುಕುಂದುಗಳನೆಣಿಸದಲೆ ದಯೆ ಮಾಡಿ ಸಲಹೋ ಪಪಾಪಕರ್ತನು ನಾನು ಪಾಪನಾಶಕ ನೀನುಕೋಪ ಮದ ಮತ್ಸರದಿ ಸುಳಿವೆ ನಾನು ||ತಾಪವನು ತರೆದು ನಿರ್ಭಯವ ಮಾಡುವೆ ನೀನುರೂಪಛಾಯಕೆ ಮರುಳುಗೊಂಬೆನೈ ನಾನು 1ಶರಣ ಶಿಕ್ಷಕ ನೀನುಪರಮಪಾತಕಿನಾನುದುರಿತಪರ್ವತವ ಪರಿಹರಿಪೆ ನೀನು ||ಮರುಳುಗೊಂಬನು ನಾನು ಅರಿತು ರಕ್ಷಿಪೆ ನೀನುಗರುವಮತಿಯೈ ನಾನಗಮ್ಯ ನೀನು 2ಮಂದಭಾಗ್ಯನು ನಾನು ಇಂದಿರಾಪತಿ ನೀನುಹಿಂದು ಮುಂದಿನ ಸುದ್ದಿ ಅರಿಯದವ ನಾನು ||ತಂದೆ ಶ್ರೀ ಪುರಂದರವಿಠಲ ರಾಯನೆ ದೇವಎಂದೆಂದು ಭಕ್ತರನು ಸಲಹುವೆಯೋ ನೀನು 3
--------------
ಪುರಂದರದಾಸರು
ಮಂದರಧರ ದೇವ ಮೊರೆಹೊಕ್ಕವರ ಕಾಯ್ವಪಮಂದಾಕಿನಿಯ ಪಿತ ಮಾವ ಕಂಸನ ಹೃತ |ಸುಂದರ ಶಶಿವದನ ರಂಗಯ್ಯ ಅ.ಪಕಣ್ಣು ನೋಟದಿ ಚೆಲುವ, ಕಮಠರೂಪದಿ ನಲಿವ |ಹೆಣ್ಣ ಮೊರೆಯಕೇಳಿ ಹಿರಣ್ಯನುದರ ಸೀಳಿ ||ಮಣ್ಣು ಬೇಡಿ ಬೆಳೆದೆ - ಕೃಷ್ಣಯ್ಯ ||ಹೊನ್ನ ಕೊಡಲಿಯ ಪಿಡಿದು ಹತ್ತು ಗ್ರೀವನ ಕಡಿದು |ಚಿಣ್ಣರ ಒಡಗೂಡಿ ಚಪಲೆಯರ ವ್ರತಗೆಡಿಸಿ |ಚೆನ್ನರಾವುತನಾದೆಯೊ - ರಂಗಯ್ಯ 1ಗೋಚರನಂದದಲಿ - ಗಿರಿಯ ತಾಳಿದೆ ಬೆನ್ನಿನಲಿ |ಭೂಚೋರನ ಕೊಂದು ಬಾಲ ಕರೆಯಲು ಬಂದು |ಯಾಚಕ ನೀನಾದೆ - ರಂಗಯ್ಯ ||ಸೂಚತನ ಸುತಗೊಲಿದು ಶರಧಿಯಕಟ್ಟಿ ಮೆರೆದೆ |ಕೀಚಕಹತಪೋಷ ಖೇಚರಪುರವಾಸ |ನೀಚಜನರ ತರಿದೆ - ರಂಗಯ್ಯ 2ವನವನಲೆದು ಬಂದ - ವನಿತೆರತ್ನವ ತಂದ |ಘನಕಂಭದಿಂದ ಬಂದುಗರುವ ಮುರಿದು ಬಲಿಯ |ಜನನಿಯ ಶಿರವರಿದೆ - ರಂಗಯ್ಯ ||ಹನುಮವಂದಿತಪಾದ ಹರುಷ ಪಾಂಡುವವರದ |ಮನಸಿಜ ವೈರಿಗೊಲಿದು ಮಹಾಕಲಿಕಿಯಾದೆ |ಘನಪುರಂದರ ವಿಠಲ - ರಂಗಯ್ಯ 3
--------------
ಪುರಂದರದಾಸರು
ಮಂದಿಯಗೊಡವೆ ಇನ್ನೇನು ಮಗಳೆ |ಮುಂದೆ ನೋಡಿ ಹಂಜಿ ನೂಲವ್ವ............ ಪ.ಕಣ್ಣ ಮುಂದಿನ ಕಸವನು ತೆಗೆದು |ಸಣ್ಣಗೆ ನೀ ನೂಲವ್ವ............... ಅಪವಸುಧೆಯ ದೊಡ್ಡ ಮಣೆಯಮಾಡಿ |ಶಶಿರವಿಗಳೆರಡು ಕಂಬವ ಹೂಡಿ ||ಆ ಸಿರಿರಂಗರ ಎರಡು ಚಕ್ರವ ಮಾಡಿ |ದರ್ಶನವೆಂಬುವ ನುಲಿಯನು ಬಿಗಿದು 1ಪರಬ್ರಹ್ಮನಅಳವು ಮಾಡಿ |ಕುರುಡು ನಾಶಿಕ ಬೆನಕದಿ ತಿಕ್ಕಿ ||ಹರಿ ನೀನೆ ಎಂಬ ದಾರವಕಟ್ಟಿ |ವಿರತಿವಿಚಾರದ ಬೆಲ್ಲಗಳಿಕ್ಕಿ2ಜಾÕನವೆಂಬುವ ಕದರನ್ನಿಕ್ಕಿ |ಮಾನಮದವೆಂಬ ಹಂಜಿಯ ಹಿಡಿದು ||ಧ್ಯಾನವೆಂಬ ಎಳೆಯನು ತೆಗೆದು |ಮೌನದಿಂದಲಿ ನೂಲವ್ವ 3ಕಕ್ಕುಲಾತಿ ಕಾಂಕ್ಷೆಗಳೆಂಬ |ಸಿಕ್ಕುದೊಡಕುಗಳನೆ ಬಿಡಿಸಿ ||ಒಕ್ಕುಡಿತೆಯ ಮಾಡಿದ ಮನದಿ |ಕುಕ್ಕಡಿನೂಲು ಕೂಡಿ ಹಾಕಮ್ಮ 4ಇಪ್ಪತ್ತೊಂದು ಸಾವಿರದ ಮೇ -ಲಿಪ್ಪ ನೂರು ಎಳೆಯನು ಹೊಡೆದು ||ತಪ್ಪದೆ ಹುಂಜವಕಟ್ಟಿ ನೀನು |ಒಪ್ಪದಿ ಸೀಳು ಇಳುವಮ್ಮ 5ಸದ್ಯದಿ ನೀ ಜಾಡರಲ್ಲಿ |ಸಿದ್ಧಬದ್ಧ ಸೀಳುಗಳ ಹಾಕಿ ||ವಿದ್ಯೆಯೆಂಬುವ ಹಚ್ಚಡವನ್ನು |ಬುದ್ಧಿಯಿಂದಲಿ ನೇಯಿಸಮ್ಮ 6ಒಪ್ಪುವಾತ್ಮ ಪರಮಾತ್ಮನೆಂಬ |ಒಪ್ಪ ಎರಡು ಹೋಳುಗಳಹಚ್ಚಿ ||ತಪ್ಪದೆ ಪುರಂದರವಿಠಲನ ಪಾದಕೆ |ಒಪ್ಪಿಸಿ ಕಾಲವ ಕಳೆಯಮ್ಮ 7
--------------
ಪುರಂದರದಾಸರು
ಮಧ್ವಮತಕಿನ್ನು ಸರಿಯುಂಟೆ - ಪ್ರ - |ಸಿದ್ಧ ವೈಕುಂಠಕಿಂತಧಿಕ ಮತ್ತುಂಟೆ ? ಪ.ವೃಕ್ಷದೊಳಗೆ ತುಳಸಿ ವೃಕ್ಷಕಧಿಕವಿಲ್ಲ |ಪಕ್ಷಿಯೊಳಗೆ ಗರುಡ ಪಕ್ಷಿಗಿಂತ ಮಿಗಿಲಿಲ್ಲ ||ದಕ್ಷ ಹನುಮಂತನಂತೆ ಲೋಕದೊಳು ಬಂಟರಿಲ್ಲ |ಲಕ್ಷ್ಮಿಗೆ ಸರಿಯಾದ ಸ್ತ್ರೀಯರಿಲ್ಲ - ನೀ ಕೇಳೊ |ಪಕ್ಷಿವಾಹನನೆನಿಪ ದೇವ ತಾ ಬಲ್ಲ 1ಸಕಲ ಮಣಿಗಳಲಿ ಚಿಂತಾಮಣಿಗೆ ಸರಿಯಿಲ್ಲ |ಮಿಕ್ಕ ರತ್ನಮೊಳಗೆ ಮಾಣಿಕತೆ ಮಿಗಿಲಿಲ್ಲ ||ಭಕುತರೊಳಗೆಲ್ಲ ಚಂದ್ರಶೇಖರಗೆ ಸರಿಯಿಲ್ಲ |ಮುಕುತಿ ಸುಖಗಳಿಗೆಣೆಯಿಲ್ಲ - ನೀ ಕೇಳೊ |ಅಖಿಳಬ್ರಹ್ಮಾಂಡನಾಯಕ ತಾ ಬಲ್ಲ2ಪ್ರಥಮಯುಗದಲಿ ಹನುಮ , ದ್ವಿತಿಯ ಯುಗದಲಿ ಭೀಮ |ತೃತಿಯ ಯುಗದಲಿ ಮಧ್ವಾಚಾರ್ಯರೆಂದೆನಿಸಿ ||ಸತುಶಾಸ್ತ್ರ ಕಿದಿರಿಲ್ಲಅಮೃತಕಿಂತಧಿಕವಿಲ್ಲ |ರತಿಪತಿಗಿಂತ ಚೆಲುವರಿಲ್ಲ - ನೀ ಕೇಳೊ |ಕಥೆಯನು ಪುರಂದರವಿಠಲ ತಾ ಬಲ್ಲ 3
--------------
ಪುರಂದರದಾಸರು
ಮನವೆ ಮಾಧವನ ಮರೆಯದಿರೆಂದೆ ದಣುವಾಯಿತು ಹಿಂದೆಕ್ಷಣವೊಂದು ಬಿಡದಿರು ಕೃಷ್ಣನ ಮುಂದೆ ಪ.ಘನವಿಷಯಂಗಳ ನೆನವಿಲಿ ಪುನ:ಪುನ:ತನುವ ವಹಿಸಿಭವವನವನ ಚರಿಸದೆಅ.ಪ.ಹರಿವಾರ್ತೆಯನು ಕೇಳು ಕೇಳಿದ್ದೆ ಕೇಳು ಅರಿಅರುವರನಾಳುಅರಿವಿಂದ ಗರುವದ ಮೂಲವ ಕೀಳುಹೆರವರ ಹರಟೆಗೆ ಪರವಶನಾಗದೆಕರಿವರವರದನ ವರವನೆ ಬಯಸು 1ಹರಿಗುರುವಿಗೆರಗು ಅರಿತರಿತೆರಗು ತಪವೆರಡಲಿ ಸೊರಗುಸೊರಗಿದವರ ಕಂಡು ಕರಗು ಮರುಗುತಿರುಗ್ಯೊಡಲುರಿಗೆ ಮುಳ್ಳ್ಹೊರೆಗೆ ಸ್ಮರಾಸ್ತ್ತ್ರಕೆಗುರಿಯಾಗದೆ ಹರಿಸೆರಗ ಬಿಡದಿರು 2ಹರಿವಿಗ್ರಹನೋಡುನೋಡಿದ್ದೆನೋಡುಮಮಕಾರವೀಡಾಡುಸ್ಥಿರವೊಂದನೆ ಬೇಡಸ್ಥಿರವ ಬಿಸಾಡುಸಿರಿವಂತರಸಿರಿಪರವಧುಗಳ ಸಿಂಗರವೆಣಿಸದೆ ಸಿರಿವರನ್ನೆನೋಡು3ಹರಿಪ್ರಸಾದವನುಣ್ಣು ನೆನೆನೆನೆದುಣ್ಣು ಶ್ರೀಹರಿ ಪ್ರೀತ್ಯೆನ್ನುಹರಿಪ್ರೇರಕ ನೇಮಕ ಸಾಕ್ಷಿಕನೆನ್ನುಹರಿಪ್ರಿಯವಲ್ಲದನರುಪಿತ ಪರಿಪರಿಚರುಪವ ಚರಿಸದೆ ಹರಿಯಚರಿಸು4ಹರಿಯಂಘ್ರಿ ಪರಾಗವ ಗ್ರ್ರಹಿಸಾಘ್ರಾಣಿಸು ಹರಿಯವರಿಗೆ ಉಣಿಸುಹರಿಭಕ್ತಿ ಜ್ಞಾನ ವೈರಾಗ್ಯವ ಗಳಿಸುಹರಿಪ್ರಿಯ ಪ್ರಭು ಮಧ್ವಾಚಾರ್ಯರ ಪ್ರಿಯ ಮೇಲ್ಗಿರಿ ಪ್ರಸನ್ವೆಂಕಟ ದೊರೆಯನೆ ನಂಬು 5
--------------
ಪ್ರಸನ್ನವೆಂಕಟದಾಸರು
ಮರವನೇರಿ ಮಡುವದು ಮುಂದಾ ಶ್ರೀ ಕೃಷ್ಣ ಕಾಳಿಶಿರವನೇರಿ ತಾಂಡವವಾಡಿದಾಸ್ಮರಿಸಲವನ ತರುಣಿಯರಿಗೆ ವರವ ಪ್ರಾಣವಿರಿಸಿ ಕೊಟ್ಟುಶಿರದಿಚರಣಗುರುತನಿರಿಸಿ ಪೊರೆದ ಕಾಳಿಂಗನನು ಕೃಷ್ಣ 1ರಜತಗಿರಿಗೆ ಸದೃಶವೆನಿಸಿದ ಶ್ರೀಕೃಷ್ಣ ಯಮ-ಳಾರ್ಜುನವೆಂಬ ಮರವ ಕೆಡಹಿದಅಜಗರನ ನಿಜ ಉರಕೆ ಬಿಜಯಂಗೈದು ಸುಜನೋದ್ಭಾರಿಭಜಿಸೆ ಗೋವ್ರಜವ ಕಾಯ್ದ ಅಜಗರನ ಸೀಳಿ ಕೃಷ್ಣ 2ಚಂದ್ರಮುಖಿಯರುಡುವ ಶೀರೆಯ ಶ್ರೀಕೃಷ್ಣನು ಮರದಿಬಂಧಿಸಿಟ್ಟು ಮಾನಗಳೆವೆಯಾನಂದನನ್ನು ಬಂದು ತುಡುಕಿದಂದು ಫಣಿಯ ಹೊಂದಿಸಿದೆನಂದಗೋಪಿ ಕಂದ ಗೋವಿಂದದಾಸವಂದ್ಯ 3
--------------
ಗೋವಿಂದದಾಸ
ಮರವೆ ಎಂಬುದು ಎಲ್ಲಿಹುದೋ ಯೋಗಿಗೆಮರವೆ ಎಂಬುದು ಎಲ್ಲಿಹುದೋಅರಿತು ಸರ್ವವ ಸರ್ವದಲಿ ಆತ್ಮ ತಾನಾಗಿರ್ದುನಿರುತ ಕಾಲದಿ ಮುಕ್ತಗೆ ಅವಗೆಪನಿರ್ವಿಕಲ್ಪಸಮಾಧಿನಿತ್ಯನಿತ್ಯಳವಟ್ಟುದುರ್ವಿಘ್ನಗಳೆಜರಿದುಗರ್ವದೂರವಾಗಿ ಗಾಢ ತೂರ್ಯದೊಳಿದ್ದುನಿರ್ವಹಿಸಿ ನಿಜಸುಖವನುಪರ್ವಿಪಸರಿಸಿ ತನಗೆ ಪ್ರತಿಗಾಣುತಿರುತಿಪ್ಪಸರ್ವಸಾಕ್ಷಿ ತಾನಾದವಗೆ1ನಾದದೊಳು ಕಿವಿಯಿಟ್ಟು ನಾಸ್ತಿಮನವಸಿಮಾಡಿಬೋಧೆ ಬಲಿದಾ ಲಹರಿಯಹಾದಿಯಂತುಟೋ ಅಂತು ಹರಿದಾಡುತಲಿ ತಾಭೇದಾ ಭೇದಗಳನುಳಿದುಸಾಧು ಸಂಗವ ಕೂಡಿ ಸಂತುಷ್ಟನಾಗಿಪ್ಪನಾದ ಮೂರುತಿಯಾಗೆ2ಪರಮಸಾರವ ತಿಳಿದು ಪರಿಪೂರ್ಣನಾಗಿರುತವರಚಿದಾನಂದ ಗುರುವೆಚರಣಸ್ಮರಣೆಯ ಮನದಿ ಚಲಿಸದಂತಾವಾಗಹಿಡಿದು ನಾಲಗೆಯೊಳಿರಿಸಿಗುರುವೆ ಗುರುವೆ ಎಂದು ತಾನಾಗಿರ್ದುನಿರತಿಶಯದ ಪರಮಗೆ3
--------------
ಚಿದಾನಂದ ಅವಧೂತರು
ಮರುಳಾಟವೇಕೊ - ಮನುಜಾ |ಮರುಳಾಟವೇಕೊ? ಪ.ಊಧ್ರ್ವ ಪುಂಢ್ರವಿಲ್ಲದ ಮುಖವ ತಿದ್ದಿ ನೋಡಲೇಕೊ |ಶುದ್ದ ಸಾತ್ತ್ವಿಕವಿಲ್ಲದನ ಬುಧ್ಧಿ ಏತಕೊ ||ಕದ್ದು ಹೊಟ್ಟೆಹೊರಕೊಂಬುವಗೆ ಶುದ್ಧ ಶೀಲವೇಕೊ |ಮಧ್ವಶಾಸ್ತ್ರ ಓದದವನವಿದ್ಯೆಏತಕೊ - ಮನುಜಾ1ಮೃತ್ತಿಕೆ ಶೌಚವಿಲ್ಲದವಗೆ ಮತ್ತೆ ಸ್ನಾನ - ಜಪವೇಕೊ |ಹಸ್ತಕಟ್ಟಲರಿಯದವಗೆ ಅಗ್ನಿಹೋತ್ರವೇತಕೊ ||ತೊತ್ತು ಹೋಗುವವಗೆ ಪರತತ್ತ್ವವಿಚಾರವೇಕೋ |ಕರ್ತೃ ಕೃಷ್ಣನ ನೆನೆಯದವನ ಉತ್ತಮತನವೇಕೊ 2ಹಸಿವೆ ತೃಷೆಯ ತಾಳದವನ ಹುಸಿಯ ವೈರಾಗ್ಯವೇಕೊ |ವಿಷಯ ಮೆಚ್ಚಿದವಗೆ ಪರದ ಕುಶಲವೇತಕೊ ||ಹುಸಿಜಪಗಳ ಮಾಡುವವಗೆ ಮುಸುಕಿನ ಡಂಬಕವೇಕೊ |ಕುಸುಮನಾಭಗರ್ಪಿಸದ ಅಶನವೇತಕೊ - ಮನುಜಾ 3ಸೂಳೆಗಾರನಿಗೆ ತುಳಸಿ ಮಾಲೆಯ ಶೃಂಗಾರವೇಕೊ ||ಶ್ರೀಲೋಲನ ನೆನೆಯದವನ ಬಾಳುವೆಯೇತಕೊ |ಮೂಲಮಂತ್ರವರಿಯದವಗೆ ಮೇಲೆ ದೇವತಾರ್ಚನೆ ಏಕೊ |ಸಾಲಗ್ರಾಮದಭಿಷೇಕವಿಲ್ಲದ ತೀರ್ಥವೇತಕೊ ಮನುಜಾ 4ಕಂಡ ನಾರಿಯೀಕ್ಷಿಸುವ ಲಂಡಗೆ ಪುರಾಣವೇತಕೋ |ಭಂಡ ಮಾತನಾಡುವನ ಪಾಂಡಿತ್ಯವೇತಕೊ |ಪುಂಡರೀಕವರದ ಶ್ರೀ ಪುರಂದರವಿಠಲನ |ಕಂಡು ಭಜಿಸಲರಿಯದವನವಿತಂಡಬುಧ್ಧಿಯೇತಕೋ5
--------------
ಪುರಂದರದಾಸರು
ಮರುಳಾಟವ್ಯಾಕೆ ಮನುಜಗೆ ಮರುಳಾಟವ್ಯಾಕೆಹರಿಭಕ್ತನಲ್ಲದವಗೆ ಹಲವಂಗವ್ಯಾಕೆ ಪ.ಮೃತ್ತಿಕಾಶೌಚವಿಲ್ಲದೆ ಮತ್ತೆ ಸ್ನಾನ ಜಪವ್ಯಾಕೆಹತ್ತು ಕಟ್ಟದವಗೆ ಅಗ್ನಿಹೋತ್ರವ್ಯಾತಕೆತೊತ್ತುಬಡಕಗೆ ಬಹು ತತ್ವವಿಚಾರವ್ಯಾಕೆಕರ್ತಕೃಷ್ಣನ್ನೊಪ್ಪದ ವಿದ್ವತ್ತವ್ಯಾತಕೆ1ಹಸಿವೆತೃಷೆತಾಳದವಗೆಹುಸಿವೈರಾಗ್ಯವ್ಯಾತಕೆವಿಷಮ ಚಿತ್ತಗೆ ಪರರ ಕುಶಲ ಬಯಕ್ಯಾಕೆದಶ ಜಪ ಮಾಡಲಾರ ಮುಸುಕಿನ ಡಂಬವ್ಯಾಕೆಕುಶಶಾಯಿಗರ್ಪಿಸದ ಅಶನವ್ಯಾತಕೆ 2ಮೂಲಮಂತ್ರವರಿಯದ ಮೇಲೆ ದೇವಾರ್ಚನೆ ಯಾಕೆಸಾಲಿಗ್ರಾಮವಿಲ್ಲದ ತೀರ್ಥವ್ಯಾತಕೆಸೂಳೆಗಾರಗೆ ತುಳಸಿಮಾಲೆ ಶೃಂಗಾರವ್ಯಾಕೆಮೇಲೆ ಮೇಲೆ ಹರಿಯೆನ್ನದ ನಾಲಿಗ್ಯಾತಕೆ 3ಊಧ್ರ್ವಪುಂಡ್ರಿಲ್ಲದಾಸ್ಯ ತಿದ್ದಿನೋಡಬೇಕ್ಯಾಕೆಶುದ್ಧ ಸಾತ್ವಿಕವಲ್ಲದ ಬುದ್ಧಿ ಯಾತಕೆಕದ್ದು ಹೊಟ್ಟೆ ಹೊರೆವವಗೆ ಸಿದ್ಧ ಶೀಲವೃತ್ತಿಯಾತಕೆಮಧ್ವ ಮತವÀ ಬಿಟ್ಟಿತರ ಪದ್ಧತ್ಯಾತಕೆ 4ಕಂಡ ನಾರೇರಿಚ್ಛೈಸುವ ಲೆಂಡಗೆ ಪುರಾಣವ್ಯಾಕೆಭಂಡು ಮಾತಿನ ಕವಿತ್ವ ಪಾಂಡಿತ್ಯಾತಕೆಕುಂಡಲಿಪ್ರಸನ್ವೆಂಕಟ ಮಂಡಲೇಶನ ಶ್ರೀಪಾದಪುಂಡರೀಕಬಿಟ್ಟವನ ವಿತಂಡವ್ಯಾತಕೆ5
--------------
ಪ್ರಸನ್ನವೆಂಕಟದಾಸರು
ಮರುಳುಮಾಯಾಗರಳಾಸಾಗರದೊಳು ಬಿ -ಪರಿಪರಿ ಸ್ತುತಿಸುವಂಥ ಭಾಗ್ಯಭಾರತಿನೀಡೇ
--------------
ಗುರುಜಗನ್ನಾಥದಾಸರು
ಮರೆತೆಯೇನೋ ರಂಗ-ಮಂಗಳಾಂಗ ಪಕೋಲು ಕೈಯಲಿ ಕೊಳಲು, ಜೋಲುಗಂಬಳಿ ಹೆಗಲ |ಮೇಲೆ ಕಲ್ಲಿಯ ಚೀಲ ಕಂಕುಳಲಿ ||ಕಾಲಿಗೆ ಕಡಗವು ಕಾಯುತ ಹಸು ಹಿಂಡ |ಬಾಲಕರ ಮೇಳದಿ ಇದ್ದೆಯೊ ರಂಗ 1ಕಲ್ಲುಮಣಿ ಕವಡಿ ಚೆನ್ನೆ ಗುಳ್ಳೆಗುಂಜಿ ಒಡವೆ |ಎಲ್ಲವು ನಿನ್ನ ಸರ್ವಾಂಗದಲಿ ||ಅಲ್ಲಲ್ಲಿಗಳವಟ್ಟು ನವಿಲುಗರಿಯ ದಂಡೆ |ಗೊಲ್ಲ ಮಕ್ಕಳ ಕೂಡೆ ಸಲ್ಲಾಪವಾಡುತೆ 2ಸಿರಿದೇವಿ ಬಂದು ಸೇರಿದ ಬಳಿಕ ಲೋಕದೊಳಗೆ |ಸಿರಿಯರಸನೆಂಬುವರು ||ವರಮುಖ್ಯ ಪ್ರಾಣವಂದಿತ ಉಡುಪಿಯ |ಸಿರಿಪುರಂದರವಿಠಲ ಶ್ರೀ ಕೃಷ್ಣ* 3
--------------
ಪುರಂದರದಾಸರು
ಮರೆಯದಿರು ಮರೆಯದಿರು ಗುರುರಾಯನ |ಲೋಕ ಪರಿಪಾಲಿಸುವಗುರುಸಾರ್ವಭೌಮನ್ನಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮೇಶ್ವರನು ತಾನೆಪರಮಪ್ರೇಮದಿಂದಗುರುರೂಪವನುಧರಿಸಿ ಧರೆಗೆ ಬಂದು, ತ್ವರದಿಂದ ಮಾನವರ ಮರವೆಯನುಪರಿಹರಿಸಿ | ಸ್ಥಿರ ಮುಕ್ತಿ ಸುಖವಿತ್ತು ಪೊರೆವ ಗುರುವರನ1ಕರುಣದಿಂ ಜನರ ರಕ್ಷಿಸುವ ಸದ್ಗುರುವರನ | ಶರಣು ಪೊಕ್ಕರೆಕೃಪಾ ಸುಧೆಗರೆವನ | ನಿರುತದಲಿ ಭಕುತರಿಗೆ |ನಿರತಿಶಯಸೌಖ್ಯವನು ಸರಿದಂತೆ ವರವಿತ್ತು | ಮೆರೆವ ದೇಶಿಕನ2ಕುವರ ಬಾರೆಂದಭಯಕರವಶಿರದಲ್ಲಿರಿಸಿ |ನೆರೆಸುಬೋಧೆಯಗೈದು ನರಭಾವ ಕಳೆದು |ಮರಣ ಭಯ ಹರಸಿ | ಬಹು ಹರುಷದಿಂದಿರುಎಂದ ಚಿರ ಸಿಂಧುಗಿಯವಾಸ |ಗುರುಶಂಕರನಪಾದ3
--------------
ಜಕ್ಕಪ್ಪಯ್ಯನವರು
ಮರೆಯಲಿನ್ನೆಂತುಪಕಾರ ಮಾರುತಿಮರೆಯಲಿನ್ನೆಂತುಪಕಾರ ಪ.ವಿಧಿಮುಂತಾದ ತ್ರಿದಶರಿಂದೆನ್ನಯಸದಮಲಪ್ರಾಣಾಧಾರ 1ಬ್ರಹ್ಮಚರ್ಯವ್ರತಧರ್ಮನಿಯಾಮಕನಿರ್ಮಲ ವಜ್ರಶರೀರ 2ದಾಸವರ್ಯ ಗುಣರಾಶಿ ತ್ವದೀಯ ವಿ-ಶ್ವಾಸವಿನ್ನೆಷ್ಟೊಗಭೀರ3ವ್ಯಾಪ್ತಮಾದಾಪದಕಾಪ್ತ ನಿನ್ನುಪಕೃತಿಸಪ್ತಸಾಗರದಿಂದಪಾರ 4ಶ್ರೀಲಕ್ಷ್ಮೀನಾರಾಯಣನು ಹನುಮನಆಲಿಂಗಿಸಿದನುದಾರ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮರೆಹೋಗಿ ಬುಧರೀ ತಾತನ್ನ ವರಗುರು ಸತ್ಯನಾಥನ್ನ ಪ.ಇಂದ್ರಿಯಜಿತ ಸುಜನೌಘ ಚಕೋರಕೆ ಚಂದ್ರನ್ನಮುದಸಾಂದ್ರನ್ನಮಂದರಧರಜಾನಕಿಪತಿ ರಾಮಚಂದ್ರನ ಪ್ರಿಯ ಮುನೀಂದ್ರನ್ನ1ಅಮಲಸುಖತೀರ್ಥ ಪ್ರಮೇಯಸಾಕಲ್ಯನಿರ್ಣಯ ಬಲ್ಲನ್ನಎಲ್ಲಾ ಬಲ್ಲೆಂಬೋ ಮಾಯಿಮತದಲ್ಲಣನ ಪಟುಮಲ್ಲನ 2ರುಕ್ಷಮಾಯಿಗಳ ಶಿಕ್ಷಿಪನ ಸಪಕ್ಷನ್ನ ಕರುಣಾಕ್ಷನ್ನಪಕ್ಷ್ಷಿಗಮನನ ದೀಕ್ಷೆಲಿ ಪೂಜಿಪ ದಕ್ಷನ್ನ ಸುರಪಕ್ಷನ್ನ 3ಶಂಕರನ ಗರ್ವ ಮುರಿದು ಬಿರುದಾಂಕನ್ನ ನಿಶ್ಯಂಕನ್ನಕಿಂಕರಜನಸÀುರಭೂರುಹ ಸುಗುಣಗಣಾಂಕನ್ನ ಶಶಿಗಧಿಕನ್ನ 4ಮರುತಮತಾಗ್ರಣಿಗುರುಸತ್ಯಾಧಿಸುತ ವಿರತನ್ನಾಮಲ ಚರಿತನ್ನಕರ್ತಪ್ರಸನ್ನವೆಂಕಟಪತಿಪದನಿರತನ್ನ ಶುಭಕರತನ್ನ5
--------------
ಪ್ರಸನ್ನವೆಂಕಟದಾಸರು