ಒಟ್ಟು 8186 ಕಡೆಗಳಲ್ಲಿ , 130 ದಾಸರು , 4775 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆ ನಿನಗೆ ಮನವೆ ವ್ಯಥೆಯು ಎಷ್ಟು ಲೋಕನಾಯಕ ಶ್ರೀಲೋಲ ಲಕ್ಷ್ಮಯ್ಯಾ ರಮಣ ಶ್ರೀಕಪರೇಯಾ ನಿನ್ನನ್ನೇ ಸ್ಮರಿಸುವುದು ಬಿಟ್ಟೂ ಪ ಹಲವು ಹಂಬಲಿಸಿದರೇನು ಫಲಾ ವ್ಯರ್ಥಾ ಬಳಲುವದೊಂದೇ ಅಲ್ಲದೆ ಬಾಧೆಯಿಂದಾ ಅಜ ಬ್ರಹ್ಮಾಂಬರದ ವರ-----ಆರಾರಿಗ್ವಶನಲ್ಲಾ ನಳಿನಾನಾಭನಾ ದಿವ್ಯನಾಮಾ ಭಜನೆಯ ತೊರೆದು 1 ಹರಿಶ್ಚಂದ್ರಾ ನಳರಾಜಾ-------ದಶರಥ ಮೊದಲು ಪುರಾಕೃತ ಕರ್ಮಾದಿ ಭಂಗಾ ಬಡಲಿಲ್ಲೇನೋ ಅರಿತೂನೀ ಹೃದಯಾದಿ ಅನ್ಯಚಿಂತನೆ ಹಿಡಿದು ಪರಮಾತ್ಮ ಪರಬ್ರಹ್ಮನ ಪಾದಧ್ಯಾನವೇ ಬಿಟ್ಟು 2 ಧರೆಯೊಳಾಧಿಕನಾದ ಧೋರಿ 'ಹೊನ್ನವಿಠಲನ’ ಚರಣವೇ ಗತಿಯೆಂದು ಚಿತ್ತಾದಲೆ ಸ್ಥಿರವಾಗಿ ಪೂಜಿಸಿ ಸೇವೆಯನೆ ಮಾಡಿ ಪರಮಹರುಷದಿಂದ ಪಡೆಯಾದೆ ಹರಿಕರುಣಾ 3
--------------
ಹೆನ್ನೆರಂಗದಾಸರು
ಯಾಕೆ ನಿನಗೆ ಲೋಕದುಸಾಬರಿ ಜಗ ದೇಕನಾಥನಿಗೆ ಬೀಳು ಮೊರೆ ಪ ಸಾಕುಯೆಂದು ಲೋಕೈಕನ ಬೇಡಿ ನಡಿ ಏಕಚಿತ್ತದಿ ವೈಕುಂಠದಾರಿ ಅ.ಪ ಸತ್ಯಸಂಗವೆಂಬ ಛತ್ತರ್ಹಿಡಿ ಪಥ ಚಿತ್ತ ಶುದ್ಧಿಯಿಂದ ಗುರ್ತುಮಾಡಿ ಭಕ್ತವತ್ಸಲನ ಸತ್ಯ ಬಿರುದುಗಳ ಭಕ್ತಿಯಿಂ ಕೂಗುತ್ತ ನಿರ್ತ ತುರ್ತುನಡಿ 1 ವನಜನಾಭನ ಕಥೆ ಶ್ರವಣಮಾಡಿ ಬಿಡ ದನುಭವದೊಳು ನಿಜಮರ್ಮ ಹುಡುಕಾಡಿ ಮನಸಿಜ ಜನಕನ ಚರಣದಾಸರ ಕೂಡಿ ಪಡಿ 2 ಮಾನ ಅಭಿಮಾನವೆಲ್ಲ ಸಮ ನೋಡಿ ನಿನ್ನ ನಾನಾ ಕಲ್ಪನೆಗಳ ಕಡೆಮಾಡಿ ಜ್ಞಾನಜ್ಯೋತಿ ಹಚ್ಚಿ ಧ್ಯಾನದೃಷ್ಟಿ ಚಾಚಿ ಜಾಣ ಶ್ರೀರಾಮನ ಖೂನ ಹಿಡಿ 3
--------------
ರಾಮದಾಸರು
ಯಾಕೆ ನಿನ್ನವರೊಳು ದೂರದೃಷ್ಟಿ ಪ್ರಭುವೆ ಲೋಕಬಂಧು ದಯಾಸಿಂಧು ದಾಸಜನರರಸ ಪ ಭ್ರಷ್ಟನಿವ ನಿತ್ಯದಲಿ ಮುಟ್ಟಿ ಸ್ನಾನಗೈಯನೆಂದು ಬಿಟ್ಟಿ ಬೇಸರ ಮಾಡಿ ಸಿಟ್ಟಗೆದ್ದಿರುವ್ಯೋ ಪುಟ್ಟಿ ಜತೆಗೂಡಿಲ್ಲೆ ಬಿಟ್ಟು ಅಗಲುವ ದೇಹ ಎಷ್ಟು ತೊಳೆದರೇನೆಂದು ಗಟ್ಟಿಮಾಡಿಬಿಟ್ಟೆ 1 ಕಡುಹೀನ ಕುಲಯೋಗ್ಯ ಮಡಿ ಅರಿಯ ಇವನೆಂದು ಕಡುಗೋಪದಿಂದೆನ್ನ ನುಡಿಕೇಳದಿರುವ್ಯೋ ಮುಡಿಚೆಟ್ಟಿನಲಿ ಬಂದು ಕಡುಹೊಲಸು ತುಂಬಿರ್ದ ಜಡದೇಹಕ್ಯಾತರ ಮಡಿಯೆಂದು ಬಿಟ್ಟೆ 2 ನಿತ್ಯನೇಮವರಿಯದ ಅತ್ಯನಾಚಾರಿಯೆಂದು ನಿತ್ತರಿಸದೆನ್ನ ಮುಖವೆತ್ತಿ ನೋಡದಿರುವ್ಯೋ ಪಿತ್ತ ರಕ್ತ ಮಜ್ಜ ಮಾಂಸ ಮತ್ತೆ ಮಲ ಮೂತ್ರ ಕ್ರಿಮಿ ಹೊತ್ತ ಭಾಂಡಿದೆಂದರಿತು ನಿತ್ಯನೇಮ ಬಿಟ್ಟೆ 3 ಸತ್ಯಕರ್ಮದ ಮಹಿಮೆ ಗೊತ್ತಿಲ್ಲದಧಮ ಮಹ ಧೂರ್ತ ಪಾತಕಿಯೆಂದು ಮರ್ತೆನ್ನಬಿಟ್ಟ್ಯೋ ಎತ್ತನೋಡಲು ನೀನೆ ಸುತ್ತಿ ವ್ಯಾಪಿಸಿ ಜಗವ ಹೊತ್ತು ಆಳುವುದರಿತು ಸತ್ಕರ್ಮ ಬಿಟ್ಟೆ 4 ನೀನೆ ನಿರ್ಮಿಸಿದಭವ ನಾನಾಲೋಕ ವೇದಶರ್ಮ ನೀನೆ ವಿಶ್ವಾತ್ಮಕನೈ ನೀನೆ ಸೂತ್ರಧಾರಿ ಧ್ಯಾನದಾಯಕ ಮಮಪ್ರಾಣ ಶ್ರೀರಾಮ ನಿನ್ನ ಧ್ಯಾನವೊಂದೆ ಅಧಿಕೆಂದು ನಾನಾಕರ್ಮ ಮರೆದೆ 5
--------------
ರಾಮದಾಸರು
ಯಾಕೆ ನಿರ್ದಯ ಮಾಡಿದೆ ರಂಗಯ್ಯ ನೀನ್ಯಾಕೆ ನಿರ್ದಯ ಮಾಡಿದೆ ಪ ವ್ಯಾಕುಲ ಪಡಲಾರೆ ನಿಮ್ಮ ಲೋಕವ ಸೇರಿಸು ಅ.ಪ ದುಷ್ಟರ ಮಧ್ಯದಲ್ಲಿ ನಾನಿರಲಾರೆ ಸೃಷ್ಟಿಗೀಶ್ವರನೆ ಕೇಳು ಮುಟ್ಟಿ ಭಜಸಿ ನಿಮ್ಮ ಪಾದಪದ್ಮದ ಭಕ್ತಿಯಿಟ್ಟೇನೆಂದರೆ ದುಷ್ಟ ಇಂದ್ರಿಯ ಬಿಡದೆನ್ನ 1 ಪಂಚೇಂದ್ರಿಯಗಳೆನ್ನ ಬಹುಬೇಗ ವಂಚನೆ ಮಾಡುತಿದೆ ಪಂಚಬಾಣನ ಪಿತ ಪರಮಪುರುಷ ರಂಗ ಅ ಕಿಂಚನಾದೆ ನಿನ್ನಂಘ್ರಿಯ ಸೇರಿಸು 2 ಸಂಸಾರವೆಂಬ ಸರ್ಪ ಕಚ್ಚಿ ವಿಷ ಕ್ಷಣದಲ್ಲಿ ತಲೆಗೇರಿತು ಪರಮ ಹಂಸರ ಸಂಗದೊಳಗೆಯಿರಿಸಿ ಎನಗೆ ಭರದಿಂದೇರಿದ ವಿಷ ತಿರುಗೆಸೋ ಶ್ರೀಹರಿ 3 ಸರ್ಪ ತುಂಬಿದ ಕೂಪದಿ ಬಿದ್ದಿಹೆನು ಎನ್ನಪ್ಪ ರಕ್ಷಿಸೊ ಬೇಗದಿ ಸರ್ಪಶಯನ ಶ್ರೀಅಪ್ರಮೇಯ ರಂಗ ಇನ್ನು ಕ್ಷಿಪ್ರದಿಂ ಮುಕ್ತಿಯ ಒಲಿದು ಪಾಲಿಸು ರಂಗ 4 ಅಮ್ಬುಜನಾಭನೆ ನಿಮ್ಮ ಪಾದದಧ್ಯಾನ ಒಂದು ನಿಮಿಷವಾದರು ಮಾಡಲೀಸದು 5 ಹಿಂದಿನ ಕರ್ಮಂಗಳು ಇಂದಿರೇಶ ನಿಂದಕರ ವಶವಾಯಿತು ಇಂದು ಧರ್ಮದಲಿರ್ದೆ ಬಂಧುಗಳ ವಶವಾಯ್ತು ಇನ್ನು ಬಂಧನವೇನಯ್ಯ ಮುಕ್ತ್ಯಾನಂದ ತೋರುವುದಕ್ಕೆ 6 ಎಂದಿಗಾದರೂ ಮುಕ್ತಿಯ ಕೊಡುವೆಯೆಂದಾನಂದ ಇಂದು ಈ ಸಂಸಾರ ಬಂಧನದೊಳಗೆ ನಾ ಒಂದು ನಿಮಿಷ ಜೀವಿಸಲಾರೆನು ರಂಗ 7 ಅಂದು ದ್ರೌಪದಿ ಧ್ರುವÀ ಗಜೇಂದ್ರನ ರಕ್ಷಿಸಲಿಲ್ಲವೆ ಬಂದು ಅಂಬರೀಷ ಅಜಾಮಿಳರ ಪ್ರಹ್ಲಾದನ ಕಂಬದಿಂದಲೆ ಬಂದು ಕಾಯ್ದ ಗೋವಿಂದ 8 ಭಕ್ತವತ್ಸಲನೆಂತೆಂಬೊ ಬಿರುದು ಈಗ ವ್ಯರ್ಥವಾಯಿತೆ ಶ್ರೀರಂಗ ಉತ್ತಮ ಗುರುಗಳು ಶ್ರೇಯೋನಿಧಿಗಳ ವಾಕ್ಯ ಸತ್ಯವ ಮಾಡಿ ಮುಕ್ತ್ಯಾನಂದ ಪಾಲಿಸು 9 ರಂಗನಾಥ ನೀ ಕೈ ಬಿಟ್ಟರೆ ಎನ್ನ ಲೋಕಮಾತೆ ಬಿಡುವಳೆ ಬೇಗ ಮುಕ್ತಿಪಥವ ಪಾಲಿಸುವಳು 10 ಮಾಡಬಾರದ ಮಾಡಿದೆ ಈ ಸಂಸಾರದೆ ನೋಡಬಾರದ ನೋಡಿದೆ ಆಡಬಾರದ ವಾರ್ತೆಗಳನಾಡಿದೆ ಇನ್ನು ಗಾಡನೆ ಮುಕ್ತಿಯ ನೀಡೊ ವೆಂಕಟರಮಣ 11
--------------
ಯದುಗಿರಿಯಮ್ಮ
ಯಾಕೆ ನಿರ್ದಯನಾದೆ ಲೋಕೇಶ ಪ್ರಭುವೆ ಸಾಕಲಾರದೆ ಎನ್ನ ನೂಕಿ ಭವದೊಳಗೆ ಪ ನಿನ್ನ ನಾಮಸ್ಮರಣೆ ಮಾಡದಲೆ ಹಗಲಿರುಳು ಅನ್ಯ ವಿಷಯಗಳಿಂದ ನೊಂದು ಬಳಲಿದೆನೊ ನಿನ್ನ ಧ್ಯಾನವ ಮಾಳ್ಪಚ್ಛಿನ್ನ ಭಕ್ತರೊಳಿರಿಸಿ ಚನ್ನಾಗಿ ಸಲಹೊ ಪ್ರಸನ್ನ ಮಾಧವನೆ 1 ಆಪನ್ನ ಜನರನು ಪೊರೆದೆ ಸನ್ನುತಾಂಗನೆ ದೇವ ಸರ್ವವ್ಯಾಪಕನೆ ಪನ್ನ ಗಾರಿವಾಹನ ಪ್ರಸನ್ನ ಶ್ರೀಹರಿ ಶೌರಿ ಎನ್ನ ಕಡೆಹಾಯಿಸಯ್ಯ ಜೀಯ 2 ಅಕ್ಷಯ ಫಲಪ್ರದ ಪಕ್ಷಿವಾಹನ ಕೃಷ್ಣ ಕುಕ್ಷಿಯೊಳು ಜಗವನಿಂಬಿಟ್ಟ ಶ್ರೀ ಹರಿಯೆ ರಕ್ಷ ಶಿಕ್ಷಕ ಜಗದ್ರಕ್ಷ ಪಾಂಡವ ಪಕ್ಷ ಈಕ್ಷಿಸಿ ಎನ್ನನುದ್ಧರಿಸಿ ಸಲಹದಲೆ3 ಪರಿಪರಿಯ ಕಷ್ಟಗಳ ಪರಿಹರಿಸಿ ಭವದೊಳಗೆ ದುರಿತದೂರನೆ ಕಾಯೊ ಶರಣ ಜನರ ಪರಿಸರನೊಡೆಯ ನಳನಾಮ ಸಂವತ್ಸರದಿ ಕರೆಕರೆಯ ಕಷ್ಟಗಳ ಬಿಡಿಸಿ ಸಲಹದಲೆ4 ಕನಕಗರ್ಭನ ಪಿತನೆ ಕಮಲನಾಭ ವಿಠ್ಠಲ ಮಿನಗುತಿಹ ದಿವ್ಯ ಸೌಂದರ್ಯ ಮೂರುತಿಯೆ ಸನಕಾದಿ ಮುನಿವಂದ್ಯ ಕ್ಷಣ ಬಿಡದೆ ಸ್ಮರಿಸುವರ ಇನಕುಲೇಂದ್ರನೆ ದೇವ ಬಿಡದೆ ಸಲಹದಲೆ5
--------------
ನಿಡಗುರುಕಿ ಜೀವೂಬಾಯಿ
ಯಾಕೆ ನೀನು ಹೀಗೆ ಮಾಡುವಿ ವೀರ ಹನುಮ ಯಾಕೆ ನೀನು ಹೀಗೆ ಮಾಡುವಿ ಪ. ಯಾಕೆ ನೀನು ಹೀಗೆ ಮಾಡುವಿ ಜೋಕೆಯಿಂದ ಸಲಹೊ ಎಂಬ ವಾಕು ಕೇಳದೇನೋ ನಿನಗೆ ಬಿಂಕ ಅ.ಪ. ಸತ್ಯವಂತನೆಂಬ ವಾಕು ಎತ್ತ ಪೋಯಿತೀಗ ಬಿರುದು ಒತ್ತಿ ಒತ್ತಿ ಕೇಳಿದರೂ ಉತ್ತರವÀ ಕಾಣೆನಲ್ಲೊ 1 ಒಡೆಯ ರಾಮಭಂಟನೆನಿಸಿ ಒಡವೆ ವಸ್ತು ಇಟ್ಟುಕೊಂಡು ಬಡಿವಾರದಲಿ ನಿಂತರೀಗ ಬಡವರೆಮ್ಮ ಗತಿಯದೇನೊ 2 ವೀರ ಉಡುಪು ಧರಿಸಿಕೊಂಡು ವೀರ ಭೀಮನೆನಿಸಿಕೊಂಡು ಮೋರೆ ಎತ್ತಿ ನೋಡದಿರಲು ದಾರಿಯಾವುದೆಮಗೆ ಪೇಳು 3 ಮುನಿಯ ರೂಪ ತಾಳಿ ಮತ್ತೆ ಮೌನಧರಿಸಿ ನಿಂತರೀಗ ಮಾನತನದಿ ತುತಿಸುವೆಮಗೆ ಏನು ಮುಂದೆ ಗತಿಯು ಇನ್ನು 4 ಬೇಡಲಿಲ್ಲೊ ನಿನ್ನ ಒಡವೆ ಬೇಡಲಿಲ್ಲೊ ನಿನ್ನ ಭಾಗ್ಯ ಆಡೊ ಒಂದು ಮಾತು ಎನಲು ಮಾಡಿರುವೆ ಮನವ ಕಲ್ಲು 5 ಏನು ಸೇವೆ ಮಾಡಲೀಗ ಏನು ನಿನ್ನ ಸ್ತುತಿಸಲೀಗ ಏನು ಧ್ಯಾನ ಮಾಡಲೀಗ ಏನು ತಿಳಿಯದಲ್ಲೊ ಎನಗೆ 6 ಶುದ್ಧವಾದ ನಿನ್ನ ಒಂದು ಮುದ್ದು ಮಾತು ಕೇಳೆನೆಂದು ಒದ್ದಾಡುವೆನೊ ಮನದಿ ಬಹಳ ಇದ್ದಿಯಾಕೊ ಸುಮ್ಮನಿನ್ನು 7 ಮನದಿ ಎನಗೆ ದೃಢವು ಇಲ್ಲ ಹನುಮ ನಿನಗೆ ದಯವು ಇಲ್ಲ ಮುನಿಸು ಮಾಡೆ ನೀನು ಸಲ್ಲ ಘನವೆ ನಿನಗೆ ಪೇಳೊ ಸೊಲ್ಲ 8 ನಿನ್ನ ಹೊರತು ಪೊರೆವರಿಲ್ಲ ಮನ್ನಿಸಿನ್ನು ಕಾಳಿನಲ್ಲ ನಿನ್ನ ಕೀರ್ತಿ ಜಗದಿ ಬಹಳ ಉನ್ನತದಲಿ ಮೆರೆಸೊ ಮಲ್ಲ 9 ಅನ್ನಕೊಡಿಸಿ ಇಟ್ಟುಕೊಂಡು ಮನ್ನಿಸುವೆನೆಂಬೋ ಇಂಥ ಭಿನ್ನನಾದ ನುಡಿಗೆ ನಾನು ಇನ್ನು ಒಪ್ಪಲಾರೆ ಕಂಡ್ಯ 10 ಕದರುಮಂಡಲಿಗಿ ಹನುಮ ಹೆದರಲಾರೆ ನಿನಗೆ ಇನ್ನು ಒದಗಿ ಪಾಲಿಸೆಂದು ಬೇಡೆ ಹೃದಯ ಕರಗದಲ್ಲೊ ನಿನಗೆ 11 ನಿರುತ ನಿನ್ನ ದಾಸಳೆನಿಸಿ ಚರಿಸುವಂಥ ಎನಗೆ ಒಲಿದು ಅರುಹದಿರಲು ಒಂದು ವಾಕು ಬಿರುದು ಉಳಿವುದೇನೊ ಇನ್ನು 12 ಇಷ್ಟ ಸಲಿಸದಿರೆ ಗೋಪಾಲ ಕೃಷ್ಣವಿಠ್ಠಲಗ್ಹೇಳಿ ನಾನು ಕಟ್ಟಿ ಹಾಕಿಸುವೆನೊ ಎನ್ನ ಮೂರ್ತಿ 13 ಗುರುಗಳಾಜ್ಞೆಯಿಂದ ನಾನು ಹರುಷದಿಂದ ಬಳಿಗೆ ಬರಲು ಗರುವದಿಂದ ನಿನ್ನ ನೇತ್ರ ತೆರದು ನೋಡದಿರುವರೇನೊ 14 ತಂದೆ ನೀನೆ ಸಲಹೊ ಎಂದು ಬಂದು ನಿನ್ನ ಅಡಿಗೆ ಎರಗೆ ಒಂದು ಮಾತನಾಡದಂಥ ಕುಂದು ಏನು ಪೇಳೊ ಇನ್ನು15 ಬೇಡ ಬೇಡ ಛಲವು ಇನ್ನು ಪಾಡಿಪೊಗಳುವಂತೆ ದಯವ ಮಾಡು ಎನ್ನ ಮೊರೆಯ ಕೇಳಿ 16
--------------
ಅಂಬಾಬಾಯಿ
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾಕೆ ಪುಟ್ಟಿಸಿದ್ಯೊ ಭೂಲೋಕದೊಳು ಎನ್ನಂಥ ಪಾಪಿಷ್ಠರ ಕಾಣೆನೋ ಕೃಷ್ಣಾ ಪ ಪಾತಗಳ ತರಿದು ಕೃಷ್ಣಾ ಅ.ಪ. ಬೆಳಸಿದದಕೆ ಕೃಷ್ಣಾ ಕಲಿಸಿದಕೆÉ ಕೃಷ್ಣಾ ಧನ ತರುವ ಕಾಲದಲಿ ವನಿತೆ ಸುತರಿಗೆ ಮೆಚ್ಚಿ ಜನನಿ ಜನಕರ ಬಿಟ್ಟೆನೋ ಕೃಷ್ಣಾ 1 ಮಾಡಿದ ಕೃಷ್ಣಾ ಬಾಳಿದೆ ಕೃಷ್ಣಾ ಬುದ್ಧಿ ಹೋಯಿತು ಎನಗೆ ಕದ್ದುಂಡು ಕಾಯವನು ಉದ್ದಾಗಿ ಬೆಳೆಸಿ ಮೆರೆದೆ ಕೃಷ್ಣಾ 2 ಕಡೆಯಾದೆನೋ ಕೃಷ್ಣಾ ಮಾಡಿದೆ ಕೃಷ್ಣಾ ಗಣನೆ ಇಲ್ಲದೆ ಪರರ ಹಣವನ್ನು ಅಪಹರಿಸಿ ಬಣಗ ಲೆಕ್ಕಸನಾದೆನೋ ಕೃಷ್ಣಾ 3 ಮಾಡಿಸಿದೆನೋ ಕೃಷ್ಣಾ ಸೃಷ್ಟೀಶನವತರಿಸಿದುತ್ಕøಷ್ಟ ದಿವಸಲಿ ಬಿಟ್ಟಿಬೇಸರ ಮಾಡಿದೆ ಕೃಷ್ಣಾ ಇಷ್ಟು ದಿನಗಳು ದುಷ್ಟಕೃತಿಯಲಿ ಮನಸ್ಹಾಕಿ ಪುಟ್ಟಿಸಿದ ನಿನ್ನ ಮರೆತೆ ಕೃಷ್ಣಾ 4 ನೀ ಪಾಲಿಸುವುದು ಕೃಷ್ಣಾ ತೋರಿಸುವುದು ಕೃಷ್ಣಾ ಬಂಧು ಬಳಗವು ನೀನೆ ಮುಂದಿನಾ ಗತಿ ನೀನೆ ತಂದೆ ಹನುಮೇಶವಿಠಲರಾ ಕೃಷ್ಣಾ 5
--------------
ಹನುಮೇಶವಿಠಲ
ಯಾಕೆ ಬಳಲಿಸುವಿ ಗುರುರಾಯಾ ಇನ್ನು ಸಾಕು ಮಾಡಿ ಸಲಹೋ ಕಡು ಬೇಗ ಜೀಯಾ ಭಕ್ತ ಕೇಳಿದರೆ ಕೊಡವಲ್ಲಿ ಉಪ- ಯುಕ್ತವಲ್ಲದ ಮಾಯವನು ಬಿಡಿಸಲೊಲ್ಲಿ ಶಕ್ತಿ ನಿನಗಿಹುದೋ ಕರದಲ್ಲಿ ವಿ- ರಕ್ತನೇ ಕೋಪವ್ಯಾತಕೋ ದಾಸನಲ್ಲಿ 1 ತ್ರಾಹಿ ತ್ರಾಹಿ ಗುರುರಾಯಾ ಈಗ ದೇಹಿ ಎಂಬಗೆ ನಾಸ್ತಿ ಎನಬ್ಯಾಡೋ ಜೀಯಾ ದೇಹ ನಿನಗೊಪ್ಪಿಸಿದೆನಯ್ಯಾ ಮುದ್ದು ಮೋಹದಾ ಹರಿಕಂದಾ ಪ್ರಹ್ಲಾದರಾಯಾ 2 ಇಷ್ಟಕ್ಕೆ ನಾ ಬಿಡುವುದಿಲ್ಲ ನೀನು ಥಟ್ಟನೆ ಕೊರಳ ಕೊಯ್ದರೆ ಯತ್ನವಿಲ್ಲಾ ಕೊಟ್ಟು ಕಾಯ್ದರೇ ಅಹಿತವಲ್ಲಾ ನಮ್ಮ ಧಿಟ್ಟ ಶ್ರೀ ಹನುಮೇಶವಿಠಲನ ಜಾಲಾ 3
--------------
ಹನುಮೇಶವಿಠಲ
ಯಾಕೆ ಬಾರನೇ ರಂಗಯ್ಯ ಯಾಕೆ ಬಾರನೇ | ಲೋಕವೀರೇಳು ವ್ಯಾಪಕ ಸುಖವವಿರಲು ಮನೆಗೆ ಧ್ರುವ ಸ್ಮರನ ಬಾಣದ ಮೊನಿಗೆ | ಗುರಿಯಮಾಡಿ ತಾಯೆನೆಗೆ | ಸಾರುವರೇ ಎನ್ನಗಲಿ ತರಳೆಯಂದರುವುತಲಿ 1 ಕಡೆಗೆ ಕರುಣಾಳು ನಮ್ಮ ವಡಿಯಾನೊಳೂ ತಪ್ಪಿಲ್ಲಮ್ಮಾ | ಪೊಡವಿಲೆ ಪೆಣ್ಣೊಡಲೆ ವಿಡಿಯಬಾರದು ಬಾಲೆ 2 ಎನ್ನ ಮನಾ ಎನೊಲ್ಲದು ಕಣ್ಣಿಗೆ ನಿದ್ರೆಬಾರದು | ಸನ್ನುತ ಮಹಿಪತಿ ಪ್ರೀಯಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯಾಕೆ ಬೇಕು ಜನ್ಮವಾದರು ಲೋಕನಾಥನೆ ಪ ಜೋಕೆ ಮಾಡುತಲೆನ್ನ ಕಾಯದ ನೌಕ ನಾಯಕ ನೀ ಕರುಣ ಬಿಡೆ 1 ಮಾತೆ ಕರುಣದೊಳಾತ್ಮಜಗೆ ಸ್ತನವಿತ್ತು ಪೊರೆವಂತೆ ಪ್ರೀತಿಯಲಿ ತವಜಾತನೆಂದು ಆತುರದಿ ನೀನಾದರಿಸದಿರೆ 2 ವಾರಿಧರ ನೆರೆ ಚಾತಕಗೆ ನೀರಬಿಂದುವೀವಂತೆ ಧೀರ ನರಸಿಂಹವಿಠಲನೆ ಕರುಣಾರಸವೆನಗೆ ಬೀರದಿರ್ದೊಡೆ 3
--------------
ನರಸಿಂಹವಿಠಲರು
ಯಾಕೆ ಮನದಲಿ ಶೋಕಿಸುತ್ತಿರುವೆ ಜಗ ದೇಕನಾಥನು ಸಾಕುತಿರುವನು ನೀ ತಿಳಿಯದಿರುವೆ ಪ ಲೋಕನಾಥನ ವಿವೇಕದಿ ಸ್ತುತಿಸದೆ ವ್ಯಾಕುಲದಿಂ ಮನ ಕಳವಳಗೊಳುತಲಿ ಅ.ಪ ಸೃಷ್ಟಿಕರ್ತನು ರಕ್ಷಿಸುತ್ತಿರುವ ದುರಿತಂಗಳ ರಾಸಿಯ ಬೆಟ್ಟಗಳ ತರಿದೊಟ್ಟು ತಿರುವ ಅದು ತಿಳಿಯದು ನೀ ಬಲು ಕಷ್ಟಗಳ ಪಡುತಿರ್ಪ ವಿಷಯಗಳ ನೋಡುತ ನಗುತಿರುವ ಇಷ್ಟು ಈತನ ಪ್ರಭಾವವು ತಿಳಿಯದೆ ಲಕ್ಷ್ಮಿರಮಣ ರಕ್ಷಿಸೆನ್ನುತ ಸ್ಮರಿಸದೆ 1 ನಾನು ನನ್ನದು ಎಂಬ ಅಭಿಮಾನ ಅದು ಪೋಗುವ ತನಕ ಜ್ಞಾನ ಮಾರ್ಗಕೆ ಇಲ್ಲ ಸಾಧನ- ವೆಂದರಿಯುತ ಮನದಲಿ ಧ್ಯಾನಿಸುತ್ತಿರು ಶ್ರೀನಿಧಿ ಗುಣಗಳನು ಹೀಗಿರುವುದೆ ಪ್ರಧಾನ ಧ್ಯಾನ ಗಾನ ಮೌನಾದಿ ವ್ರತಗಳನು ಶ್ರೀನಿಧಿಗರ್ಪಿಸಿ ಮನ ಹರುಷಿಸದಲೆ2 ತಂದೆ ಶ್ರೀ ವೆಂಕಟೇಶ ವಿಠ್ಠಲನು ಹರಿಭಕುತರ ಮೊರೆಯನು ಛಂದದಿಂದಲಿ ಕೇಳಿ ಪೋಷಿಪನು ಮುಕುಂದನಲಿ ಭಕುತಿ ಎಂದೆಂದಿಗೂ ತಪ್ಪದೆ ಉದ್ಧರಿಸುವನು ನಿಜವೆಂದರಿ ಇದನು ಮುಂದೆ ಕಮಲನಾಭ ವಿಠ್ಠಲ ಭಕುತರ ಸಂದಣಿ ಪೊರೆದು ಸಂತೈಸುತಲಿರೆ ವೃಥ 3
--------------
ನಿಡಗುರುಕಿ ಜೀವೂಬಾಯಿ
ಯಾಕೆ ಮರುಳಾದೆಮ್ಮ ಎಲೆ ಭಾರತೀ |ಸಾಕಲಾರದೆ ವಿವಿಧ ರೂಪ ತಾಳ್ದನಿಗೇ ಪ ಕಂಜಾಕ್ಷಿ ಸೀತೆಯನು | ಅರಸಲ್ಕೆ ಅಬ್ಧಿಯನುಅಂಜದಲೆ ಉತ್ತರಿಸಿ | ಶತ್ರು ಮಧ್ಯಾ |ಸಂಜೆಯಲಿ ಕಂಡು | ಕಂಜಾಕ್ಷಿ ಗುಂಗುರವಅಂಜದಲೆ ಇತ್ತಿಹ ಪ್ರ | ಭಂಜನಗೆ ನೀನು 1 ವಿಷದ ಲಡ್ಡಿಗೆಯನ್ನು | ಹಸನಾಗಿ ತಿಂದವನುವಿಷಧಿಯೊಳು ಮುಳುಗಿರಲು | ವಿಷಗಣವು ಕಡಿಯೇ |ವಿಷಗಣವು ಪಲ್ಮುರಿದು | ಅಸುವ ನೀಗಲು ಕ್ಷಣದಿವಿಷ ಮರೆದೆ ಕಲಕುತಲಿ | ವಸುಧೆಯಾಳ್ದನಿಗೇ 2 ವಿಪಿನ | ಪ್ರಧ್ವಂಸಕಾನಳಗೇ 3 ಖೇಚರನು ತಾನು ನೀ | ಶಾಚರರ ಸಂಹರಿಸಿಪಾಚಕನು ಮತ್ತಾಗಿ | ಕೀಚಕರ ಸವರೀ |ಯಾಚಿಸುತ ಭಿಕ್ಷಾನ್ನ | ವಾಚಿಸುತ ಸಚ್ಛಾಸ್ತ್ರಮೋಚಕನು ಆದವಗೆ | ಯೋಚಿಸಿಯು ಕೈಪಿಡಿದೇ4 ಎಂಜಲೆಡೆಯನು ಕೊಂಡು | ಅಂಜದಲೆ ಮರಕ್ಹಾರಿಸಂಜೆ ಚರಳೆರ ಕೊಂದಧ | ನಂಜಯ ನಿ ಗೊಲಿದ |ಕಂಜಾಕ್ಷನಾದ ಗುರು | ಗೋವಿಂದ ವಿಠಲ ಪದಕಂಜ ಭಜಿಸುವ ಭಾವಿ | ಕಂಜ ಸಂಭವಗೇ 5
--------------
ಗುರುಗೋವಿಂದವಿಠಲರು
ಯಾಕೆ ಮಲಗಿದೆಯೊ ಶ್ರೀಕಾಂತ ದ್ವಾರಕಾವಾಸ ಸೂರ್ಯ ಉದಯಾಯಿತು ಗೋಕುಲದೊಳಗಿದ್ದ ಗೋಮಕ್ಕಳೆಲ್ಲ ಧ್ವಜ- ರೇಖಾ ಚರಣಕಮಲಕೆರಗಿ ಕರೆಯುತಲಾಗ ಪ ಅಂಬುಧಿ ಒಳಗಾಡಿ ತಂದು ವೇದವನು ಕೊಡು ಮಂದರೋದ್ಧಾರ ಸುರರಿಗೆ ಸುಧೆಯ ನೀಡು ತಂದು ದಾಡಿಂದ ಧರೆಯನು ಹರವಿ ಧರಾಪತಿಯೆ ಕೊಂದು ರಕ್ಕಸನ ನಂದನಗೆ ದಯಮಾಡದಲೆ 1 ಬೇಡಿ ದಾನವ ಭುವನ ಮಾಡಿದೆಲೆ ಮೂರ್ಹೆಜ್ಜೆ ಆಡಿದ್ವಚÀನವ ನಡೆಸುತಾರಣ್ಯವಾಸದಲಿ ಆದಿಲಕ್ಷ್ಮಿಯನೆ ಕದ್ದಸುರನ್ನ ಸಂಹರನೆ 2 ಗೊಲ್ಲ ಸತಿಯರ ಕೂಡ ಸಲ್ಲಾಪ ಸಾಲದಲೆ ಎಲ್ಲ ತ್ರಿಪುರರ ಸತಿಯರಲ್ಲಿ ಪೋಗುವರೆ ಎಲ್ಲಿ ಓಡ್ಯಾಡಿದ್ಹೇಳಿಲ್ಲಿ ವಾರಿಧಿಶಯನ 3
--------------
ಹರಪನಹಳ್ಳಿಭೀಮವ್ವ
ಯಾಕೆ ಮೈದೋರೆ ಗುರುರಾಯಾ | ನಮ್ಮ | ಸಾಕಿಸಲಹುವಾ ಮಹಿಪತಿ ಭಕ್ತ ಪ್ರೀಯಾ ಪ ಶರಣರುಪಚಾರ ಭಕುತಿಯ ಮನಿಲಿ ಸಿಲುಕಿದೆಯೋ | ದುರಿತ ಪರಿಹರಿಸಲಿಕ್ಕೆ ತೊಡಗಿದೆಯೋ | ಬೋಧ ಕೇಳಿಸಿದೆಯೋ ಪೂರ್ವ | ಜರ ಮುಕುತಿಗಾಣಿಸಲು ಹೋಗಿ ಆಲಿಸಿದೆಯೊ 1 ಕಂಗೆಡುತಲಿವೇ ನಿಮ್ಮ ಕಾಣದೀ ನಯನಗಳು | ಭಂಗು ಬಡುತಿವೇ ನುಡಿಯ ಕೇಳದೆ ಶ್ರವಣಗಳು | ಅಂಗ ಸಂಗಕ ಸಿರಕರಗಳು ಮರುಗಿ \ ಮುಂಗಾಣ ವೆದೆಗೆಟ್ಟು ಕರಣ ವೃತ್ತಿಗಳು 2 ಮಂದ ಭಾಗ್ಯರಿಗೆ ನಿಧಾನ ಮರಿಯಾದಂತೆ | ಇಂದು ಮಾಡಲಿ ಬ್ಯಾಡಾ ನ್ಯೂ ನಾರಿಸುದುಚಿತವೇ | ನಂದನರ ಸಲಹು ದಯದಿಂದ ಮೋದಲಂತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು