ಒಟ್ಟು 5111 ಕಡೆಗಳಲ್ಲಿ , 126 ದಾಸರು , 3233 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯೋಗಧರತಾತಕಘ ಲೋಕಪತಿ ದೇವಸಿರಿ|ಯೋಗ ನಿನ ಪದಕೆ ಶರಣೆಂಬುವೆನೊ ಕಾಯೋ ಪಯೋಗಾಂಡದೊಳ ಹೊರಗೆ ವ್ಯಾಪ್ತನೆ ಗುಣರಹಿತನೆ |ಯೋಗಾಂಬರ ಧರ ಘ-ಮುಖ ಜನಕ ||ಯೋಗಗಾತ್ರಷ ದೂರ ವರ್ಗದ್ವಯ ಅವತಾರ |ಯೋಗ ಪಾಣೀ ಸುತ ಪ್ರಿಯ ಸುಮತಿ ಕೊಡು ಜೀಯ 1ಯೋಗರಾಯಗೆ ಅದೇಪದವಿಕರುಣಿಸಿ ಕೊಟ್ಟೆ |ಯೋಗೇಶಣಾಸ್ತ್ರ ಪಿತದಂತಿವರದ||ಯೋಗದಲಿ ಮನಸು ನಿಶ್ಚೈಸೊ ಹಾ ಕರ್ತೃತ್ವ |ಯೋಗಫಲ ಸ್ವೀಕರಿಸುತಿಹ ಕಂಜನಾಭ 2ಯೋಗನಾಗೆಯೋ ದುರ್ಮತಿಗಳಿಗೆಂದಿಗೂ ನೀನು |ಯೋಗಿಜನ ವಂದ್ಯ ಹಾ ನಾರೀಪತಿ ನಿನ್ನ ||ಯೋಗ ಸೇವಕರೊಳಿಡೋ ಪ್ರಾಣೇಶ ವಿಠ್ಠಲನೇ |ಯೋಗ ಹ್ರಾಸ ವಿವರ್ಜ ಘಟಜ ಕರಪೂಜ್ಯ 3
--------------
ಪ್ರಾಣೇಶದಾಸರು
ಯೋಗಿಗೆ ಸೃಷ್ಟಿ ಬರುವುದೆಂತು ವಿದ್ಯದಲಲ್ಲದೆಯೋಗ ವಿದ್ಯೆದಲ್ಲಿ ಎಂತು ಅನ್ನಬಹುದೆ ಇಂತುಯೋಗಿಯೆ ಈಶ್ವರ ತಾನೀಗೇಕೆಯೋಗಿಯು ಈಶ್ವರ ಬೇರೆ ಎನೆ ನರಕವುಪಆಲಿಯು ನಿಂತೆ ಆಲಿಯ ಗೊಂಬೆಯು ತಿರುಗದಲಿರಬೇಕುಆಲಿಯು ಮುಚ್ಚದೆ ಆಲಿಯು ರೆಪ್ಪೆಯು ಬಡಿಯದಲಿರಬೇಕು1ಆನಿಮಿಷ ದೃಷ್ಟಿಯಂದಲಿ ಬ್ರಹ್ಮವ ಆಲಿಸುತಿರಬೇಕುಅನಿಮಿಷದಂದದಿ ಕಣ್ಣಿನ ಗುಡ್ಡೆ ತಿರುಗದಲಿರಬೇಕು2ದೃಷ್ಟಿಯು ಕುಳಿತಾ ದೃಷ್ಟಿಯು ಮುಂದಕೆ ಸಾಗಲಿರಬೇಕುದೃಷ್ಟಿಯು ತಾನೆಡಬಲಕೆ ನಲಿಯದೆ ದೃಷ್ಟಿಯು ಇರಬೇಕು3ಕುಳಿತಾ ಸ್ಥಳವು ತಪ್ಪಲು ಮೆತ್ತೆಯು ಕುಳಿತುಕೊಳ್ಳಬೇಕುಥಳಥಳ ಹೊಳೆಯುತ ಬೆಳಗದ ಪಸರಿಸಿ ಗೂಢನಿರಲುಬೇಕು4ಉದಯಾಸ್ತಮಾನವು ದಿವರಾತ್ರಿಯುಡಗಿ ಇರಬೇಕುಚಿದಾನಂದ ಸದ್ಗುರು ತಾನಾಗಿಯೆ ತಾನೆ ಇರಬೇಕು5
--------------
ಚಿದಾನಂದ ಅವಧೂತರು
ರಂಗ ಕೊಳಲನೂದಲಾಗ |ಮಂಗಳಮಯವಾಯ್ತುಧರೆ-ಜ -ಪನಂಗಳು ಚೈತನ್ಯ ಮರೆದು |ರಂಗಧ್ಯಾನಪರರಾದರು ಅ.ಪಬಾಡಿದ ಮಾಮರಗಳು ಗೊನೆಯೊಡೆದವು |ತೀಡುತ ಮಾರುತ ಮಂದಗತಿಗೊಯ್ಯೆ ||ಬಾಡಿದ ಬರಲು ಫಲದ ಗೊಂಚಲು |ಪಾಡಲೊಲ್ಲವಳಿಕುಲಗಳು ||ಹೇಡಿಗೊಂಡವು ಜಕ್ಕವಕ್ಕಿ ಗಿಳಿ ಮಾ-|ತಾಡದೆ ಕಳೆಗುಂದಿದವು ಕೋಗಿಲೆ ||ಓಡಾಟ ವೈರಾಟ ಬಿಟ್ಟು ಖಗಮೃಗ |ಗಾಢ ನಿದ್ರಾವಶವಾದವು 1ಕೆಳಗಿನುದಕ ಉಬ್ಬೇರಿ ಬಂದುವು |ತುಳುಕಿ ಚೆಲ್ಲಾಡಿ ನಿಂದಳು ಯಮುನೆ ||ಮಳೆಯ ಮೋಡೊಡ್ಡಿ ಮೇಘಾಳಿ ಧಾರಿಟ್ಟುವು |ಕಲುಕರಗಿ ಕರಗಿ ನೀರಾದುವು ||ನಳಿನಚಂಪಕನಾಗಪುನ್ನಾಗಪಾ-|ಟಲ ಸೇವಂತಿಗೆ ಕುಂದ-ಮೊಲ್ಲೆ ಮಲ್ಲಿಗೆ ಬ-||ಕುಲ ಮಾಲತಿ ಜಾಜಿ ಪರಿಮಳಗೂಡಿ |ನೀಲಾಂಗನಂಘ್ರಿಗೆ ನೆರೆದುವು 2ಕೆಚ್ಚಲು ಬಿಗಿದು ತೊರೆದ ಮೊಲೆಯೊಳು |ವತ್ಸದೊಡಲಾಸೆಜರಿದುಎಳೆಹಲ್ಲ||ಕಚ್ಚದಲ್ಲಿಗಲ್ಲಿ ನಿಂದುವು ತಮ್ಮಯ |ಪುಚ್ಚವ ನೆಗಹಿ ನೀಂಟಿಸಿ ||ಅಚ್ಯುತನಾಕೃತಿ ನೋಡಲು ಸುರರಿಗೆ |ಅಚ್ಚರಿಯಾಯಿತು ಆವು ಕಂಡಾನಂದ ||ಪೆಚ್ಚಿ ಮುಕುಂದನ ಲೀಲಾವಿನೋದಕೆ |ಮೆಚ್ಚಿ ಕುಸುಮವ ಸುರಿದರು 3ಮುದ್ದು ಮೋಹನನ ಮಂಜುಳ ಸಂಗೀತ |ಸದ್ದನಾಲಿಸಿ ಗೋಪಾಂಗನೆಯರೆಲ್ಲ ||ಬುದ್ಧಿ ಸೂರಾಡಿ ತಮ್ಮಾಲಯವನೆ ಬಿಟ್ಟು |ಎದ್ದು ಪರವಶರಾದರು ||ಸಿದ್ದ ಮುನಿಜನರಿದ್ದ ಸಮಾಧಿಯಿಂ-|ದೆದ್ದೆದ್ದು ಕುಣಿದೆದ್ದರು ಎದುರಾಗಿ ||ಗದ್ದುಗೆಯರಸನ ಒಲಿಸಿಕೊಂಡರು |ಗೆದ್ದರು ಭವದ ಸಮುದ್ರವನು 4ಶ್ರೀಮನೋಹರ ಗೋಪಾಲ ಮೂರುತಿ |ಆ ಮಧು ಕುಂಜ ವನದಿ ತ್ರಿಭಂಗಿಯಲಿ ||ಹೇಮಾಂಬರವುಟ್ಟು ಗೀರುಗಂಧ ಕಸ್ತೂರಿ |ನಾಮ ಮುಕುಟದ ಬೆಳಕಿನಲಿ ||ದಾಮವನಮಾಲೆ ಶ್ರೀವತ್ಸಕೌಸ್ತುಭ|ಸ್ವಾಮಿ ಪುರಂದರವಿಠಲರಾಯನ |ರಾಮಶ್ರಿ-ಗುಂಡಶ್ರಿ ಮೇಘರಂಜನೆ ಪಾಡಿ |ಸಾಮಗಾನಪ್ರಿಯ ನಮೊ ಎಂದರು 5
--------------
ಪುರಂದರದಾಸರು
ರಂಗ ಕೊಳಲನೂದುವ ಮಂಗಳಸ್ವರಕೆ ಮೂಜ-ಗಂಗಳೂ ಮೋಹಿಸುತಿಹವಲ್ಲೇ ನೋಡೆ ಏ ಸಖಿ ಪಗೋಕುಲದಂಗನೆಯರು ಮೈಮರೆದು ತಮ್ಮ ಮನೆ ಕದ |ಹಾಕದೇ ಹರಿಯೆಲ್ಲಿಹನೆಂದರಸುತ ಬಂದರು ||ಗೋ ಕರುವೇನೆಂದೊಬ್ಬಳು ಹಾಕುವಳೆತ್ತಿಗೆ ದಾಳಿ |ನೂಕು ನೂಕಾಗುತ್ತ ಹಲವಂಗನೆರೋಡಿದರು 1ಕಣ್ಣಿಗೆ ಕುಂಕುಮ ಫಣಿಯಲ್ಲಿ ಕಾಡಿಗೆ ಕೆಲವರು |ಬಣ್ಣದ ಸೀರೆಯ ಮಂಡೆಗೆ ಸುತ್ತುತ್ತ ಕೆಲವರು ||ಚಿನ್ನಗೆ ಹಾಲೆರೆವೆವೆಂದು ಗಂಡರ ಪಿಡಿದು ಒಲ್ಲೆ- |ನೆನ್ನೆ ಕೇಳದಲೆ ನೆಲಕಿಕ್ಕುವರು ಕೆಲವರು 2ಹರಿಯ ನೋಡುವ ಭರದಿಂದ ಆಕಳಿವೇಯೆಂದು |ಹರದೇರು ಅತ್ತೇರಿಗೆ ಕುಟ್ಟಿ ಕಣ್ಣಿಯಿಕ್ಕೊರು ||ಒರಲಿದರೆ ನಾವಾಕಳಲ್ಲವೆಂದು ಕೇಳದಲೆ |ತ್ವರದಿ ಮಾಧವನ ನೋಡಬೇಕೆಂದೋಡಿದರು 3ಕಾಲಿಕೆಕಟ್ಟಾಣಿಆಣಿಮೆಂಟು ಪಿಲ್ಯಾ ಸರ ಮಾಡಿ |ಮಾಲೆಯೆಂದು ಹಾಕುವರು ಕೊರಳಿಗೆ ಕೆಲವರು ||ಹಾಲಿಗೆ ಮೂಗುತಿ ಕಾನ ಬಾವುಲಿ ಮೂಗಿಗೆ ತಮ್ಮ |ಬಾಲೆರೆಂದಾಕಳ ಕರುವೆತ್ತಿಕೊಂಡೋಡುವರು 4ಹೇಳಿದರೆ ಮಾತುಕೇಳಿಕಳ್ಳ ಕೃಷ್ಣಾ ಸಿಕ್ಕೆಂದು ಮೈ |ಘಾಳಿಗೊಂಡಾಳುವರಾ ಕೈ ಕಂಭಕೆ ಕಟ್ಟುವರು ||ಕೀಲ ಕಂಕಣ ಬಾಗಿಲ ಬೀಗವೆಂಜೋಡಿಸಿ ಲಕ್ಷ್ಮೀ |ಲೋಲನಂಘ್ರಿಯ ಕಾಣಬೇಕೆಂದೆಲ್ಲರು ಓಡಿದರು 5ಎಲೆ ಯಶೋದೆಯಮ್ಮ ನಿನ್ನ ಮಗ ಮೊನ್ನೆ ನಿಶಿಯಲ್ಲಿ |ಮಲಗಂಟು ಬಿಚ್ಚಿ ಒಲ್ಲೆನೆನ್ನೆ ಕೇಳಾ ಥರವೆ ||ಬಲು ಶಬ್ದೆನೆಂದು ಕೇಳಲತ್ತೆಗೊಂದು ಪರಿಯಿಂದ |ತಿಳಿಸಿದೆನೆಂದೊಬ್ಬಳು ಅತ್ತೆಯ ಮುಂದೆ ಹೇಳುವಳು 6ಬೀದಿಯೊಳ್ ಹೇಳಿದಂತೆ ನಮ್ಮನಿಗೆ ಬಾಯೆಂದೊಬ್ಬಳು |ಮಾಧವನಿವನೆಂದು ತನ್ನ ಪುರುಷಘೇಳುವಳು ||ಆ ದಿನ ನಾವೇಕತ್ರದಲ್ಲಿರೆಗಂಡಬರಲು ಸ್ತ್ರೀ |-ಯಾದಿ ಸೈ ಸೈಯೆಂದೊಬ್ಬಳು ಪತಿಗೇ ಪೇಳುವಳು7ಬತ್ತಲೆ ಕೆಲವರು ಸೀರ್ಯುಟ್ಟವರ್ಕೆಲವರು ಉ- |ನ್ಮತ್ತರು ಕೆಲವರು ಪಾಡುತ್ತಲಿ ಕೆಲವರು ||ನೆತ್ತಿಹಿಕ್ಕುವರು ಕೆಲವರು ಹೂಸಿಕೊಂಡವರು |ತುತ್ತು ಬಾಯೊಳಿಟ್ಟವರೂ ತ್ವರದಿ ಓಡಿದರು 8ಒಂದಾಡುತೊಂದಾಡುವರುನಿಂದುನಿಂದಾಲಿಸುವರು |ಮಂದಿಗಂಜದಲೆ ಹರಿದು ಹರಿದು ಹೋಗುವರು ||ಕಂದಗಳೆತ್ತಿದವರು ಕರುಗಳೆತ್ತಿದವರು |ಚಂದಿರ ವದನೆಯರು ತವಕದಿ ಓಡುವರು 9ಹೆಂಣುಗಳಾ ಆವಾವ ಕೆಲಸದೊಳಿದ್ದಿರ್ಯಾ ಹ್ಯಾಂಗೆ |ಬನ್ನಿರೆನ್ನ ಬಳಿಗೆಂಬಂತೆವೇಣುಕೇಳಿಸುವುದು ||ಪನ್ನಗಶಯನನಾಜೆÕಯಂತೆ ಪ್ರವರ್ತಿಸಿದ ಮೇಲೆ |ಅನ್ಯಾಯವೇ ಸತಿಯರದು ಕೇಳಿರಿ ಕವಿಗಳು 10ಕರಿಸಿಂಹಗಳು ಹುಲಿತುರುತುರುಗಮಹಿಷಿ|ಮರೆದು ವೈರತ್ವ ಹರಿಸ್ವರ ಕೇಳುತಿಹವು ||ಕರಗುತಿಹವು ಕಲ್ಲು, ಸುರರಾಕಾಶದಿ ಪುಷ್ಪ |ಸುರಿಸುತಿಹರು, ಗಂಧರ್ವರು ಪಾಡುತಿಹರು11ಅಂಬುಜಾಕ್ಷಗೆ ಕೆಲವಂಗನೆರು ಆಲಿಂಗಿಸುವರು |ಚುಂಬಿಸುವರು ಕೆಲವರುನಿಂದುಪ್ರಾರ್ಥಿಸುವರು ||ಶಂಬುಪಾಣಿ ಕರುಣಿಸಿ ಇಬ್ಬರಿಗೊಬ್ಬೊಬ್ಬನಾಗಿ |ಹಂಬಲ ಪೂರೈಸುವಂತೆ ರಾಸಕ್ರೀಡೆಯಾಡಲು 12ಕಾಮನಾ ಪೂರ್ತಿ ಮಾಡುತಿರೆ ಹೆಂಗಳೆರು ಇಂಥ |ಸ್ವಾಮಿಯಮ್ಮ ಕೈ ಸೇರಿದ ನೋಡಿರೆಂದ್ಯೋಚಿಸಲು ||ಭಾಮಿನಿಯರಹಂಕಾರ ತಿಳಿದಾಕ್ಷಣವೊಬ್ಬಳ |ಪ್ರೇಮದಿ ಕೊಂಡೊಯ್ದು ಎಲ್ಲರಿಗೆ ಮಾಯವಾದನು13ಬಹುರೂಪದೊಳೊಮ್ಮಿಂದ ಒಮ್ಮೆ ಬಂದೂ ರೂಪವಿಲ್ಲ |ಮಹೀಪಾಲನೇನಾದನೋ ಆವಳನ ಕೊಂಡೊಯ್ದನು ||ಅಹಿವೇಣಿಯರೇ ನಿಮ್ಮ ನಿಮ್ಮ ಗುಂಪಿನೊಳಗೆ ಎ- |ಷ್ಟಿಹಿರೊ ನಾರೆರು ಎಣಿಸಿರೆ ಯಂದಾಳೊಬ್ಬಳು 14ಒಂದೆರಡು ನೂರಿನ್ನೂರೈನೂರು ಸಾವಿರೆಂದೆಣಿಸಿ |ಮಂದಗಮನೆಯೊಬ್ಬಳಿಲ್ಲವಮ್ಮ ನಮ್ಮೊಳೆಂದರು ||ಇಂದ್ರಜಾಲದವಳೇ ಆವನು ಅಂಥ ವಂಚಕನೆ |ಸಂಧಿಸಿತಿಬ್ಬರಿಗೆ ಮುಂದೇನುಪಾಯವೆಂದರು 15ಹರಿಹೋದಕಷ್ಟೊಂದು ಅವಳ ನಾ ವೈದ ದುಃಖೊಂದು |ಸ್ಮರಣೆದಪ್ಪಿ ಗಂಡರೊಡನೆ ಆಡಿದ್ದೊಂದು ||ಸ್ಮರನ ಬಾಣ ಬಾಧೆಯೊಂದು ಬೆರದಿತಿನಿತುಕ್ಲೇಶ|ಹರದೆರಚ್ಯುತನರಸುತವನಹೊಕ್ಕರು 16ಹರಿಒಬ್ಬಳ ಒಯ್ದನು ಕಂಡಿರಾ ಯಿದ್ದಿರ್ಯಾ ಎಂದು |ನರರೆಂಬೊ ಭ್ರಾಂತಿಯಿಂದ ಮರನ ಕೇಳುವರು ||ಸ್ಮರಣೆ ಬಂದಾಗ ವಮ್ಮೆ ಗಿಡ ಕೇಳುತಿಹವೆಲ್ಲೆ |ಹರಿಹರಿ! ಜೀವಿಸುವದೆಂತು ಹೇಳಿರೆಂಬೊರು 17ಅತ್ತ ಎಲ್ಲರ ವಂಚಿಸಿ ಯನ್ನ ರೂಪಾಧಿಕ ನೋಡಿ |ಎತ್ತಿಕೊಂಡು ಬಂದ ರಂಗನೆಂಬೊಳಾಕಿ ಮುದದಿ ||ಸತ್ಯ ಸಂಕಲ್ಪವಳ ಮನತಿಳಿದು ತಿಳಿಯದಂತೆ |ತೊತ್ತಿಗ ನಂದದಿ ಹೆಗಲೊಳಗಿಟ್ಟು ಪೋಗಲು 18ದಣಿದೆ ಹಸಿದೆ ನೀರಡಸಿದೆನೆಂದರವಳ |ಅಣುಗನಂದದಿಂದಿಳಿಸೇರಿಸಿ ಕೊಂಬುವನು ||ಗೊನೆ ಹಣ್ಣು ನಿಲಕದೆಂದರೆ ನೀಡಿ ಕೊಡುತಲಿ |ಘನಸುಖ ಬಡಿಸುತ ದಕ್ಕಿದಂತಿರುವನು 19ಸಾವಿರ ಪ್ರಕಾರಾ ಘೋರಿಸಿದರೂ ನಗುತಲೆ ಇಹ |ಕೇವಲ ದಕ್ಕಿದನೆಂದು ನಿಶ್ಚಯ ತಿಳಿದಳು ||ಮಾವಿರಿಂಚೇಶ ಜಂಭಾರಿಗಳನು ವಂಚಿಸುವಂಥ |ದೇವನು ಈ ನಾರಿ ಅಹಂಕಾರವ ತಾಳುವನೆ20ಸೊಕ್ಕು ಬಂತಿವಳಿಗಿನ್ನು ಶೀಘ್ರ ತಗ್ಗಿಸಬೇಕೆಂದು |ಚೊಕ್ಕ ಮಾವು ಪಿಡಿಸಿ ಅಪ್ರತ್ಯಕ್ಷವಾಗಲಿತ್ತಲು ||ತುಕ್ಕಿ ತುಕ್ಕ್ಯಾರಂಣ್ಯಾ ಹೆಜ್ಜೆ ಪಿಡಿದಿಲ್ಲಿಹ ಅಲ್ಲಿಹ |ರಕ್ಕಸಾರೆನುತ ಬಂದೆಲ್ಲರವಳನು ಕಂಡರು 21ಜಾರೆ ಚೋರೆ ಕುಲ್ಲೆ ಖೂಳೆ ಕುಲಕಂಟಿಕೆನವನೀತ|ಚೋರನೆಲ್ಲಡಗಿಸಿದ್ದೆ ತೋರೆಲೆ ತೋರೆಂದರು ||ಘೋರಪಾತಕಿಯ ಕುಟ್ಟಿರೆಂದು ಕೆನ್ನಿ ಕುಟ್ಟುವರು |ಗಾರುಮಾಡಿದರೆ ಬಟ್ಟಬವಣೆಹೇಳಿದಳು22ಸಮದುಃಖಿಗಳಾಗಿಹರಿಹರಿಯೆಂದೊದರಲು ಈ |ಶ್ರಮ ನೋಡಿ ಪ್ರಾಣೇಶ ವಿಠಲ ಬಂದಾಲಿಂಗಿಸಿ ||ಸುಮನಗಂಧಿಯರೆ ನಿಮ್ಮಹಂಕಾರ ಬಿಡಿರೆಂದು |ಅಮರೇಶಮುಂಚಿನಂತೆಲ್ಲರೊಳಾಡಿದನು 23
--------------
ಪ್ರಾಣೇಶದಾಸರು
ರಂಗ ಬಾ ಮೋಹನಾಂಗ ಬಾ ದೇವೋತ್ತುಂಗ ಬಾರೆಂದು ಕರೆದಳುಗೋಪಿಪ.ಚೀರುತ ಬಂದ ಚಿನ್ನ ಹಸಿದನೆಂದುಘೃತಕ್ಷೀರವೆರೆಸಿ ಕೊಟ್ಟರೆ ಒಲ್ಲದೆಚೋರತನಕೆ ಮೆಚ್ಚಿ ಪೋಗುವೆ ನಿನ್ನನುದೂರುತ ನಿರುತ ಬಾಹರು ಗೋವಳೆಯರು 1ತುರುಗಾವೊ ನೆವದಲಿ ಪೋಗಿ ಗೋಪಾಲರಕುರುಳಿಗೆ ತುರದ ಬಾಲಕೆ ಗಂಟಿಕ್ಕಿದÀುರುಳತನಗಳನ್ನು ಮಾಡಿ ಮಾಡಿ ಮತ್ತ್ತೆಅರಿಯದಂತೆ ಬಿಕ್ಕಿ ಬಿರಿಯಬೇಡೆಲೆ ಕಂದ 2ಚೆಲ್ಲೆಗಂಗಳೆಯರ ಶಯನಕೆ ಪೊಂದಿಹನಲ್ಲರ ಬಡಿದೋಡಿ ಬರುತಲಿಹೆಸಲ್ಲದು ನಿನಗಿದು ಬಾಲಕತನದೊಳುಫುಲ್ಲಲೋಚನ ಮುದ್ದು ಗೋಪಾಲಕೃಷ್ಣ 3ಶಕಟ ಪೂತನಿತೃಣಾವರ್ತಮೊದಲಾದಶಕುತ ದನುಜರ ಮರ್ದನ ಕೃಷ್ಣಯ್ಯಭಕುತರ ಬವಣೆಯನಳಿಯದಿದ್ದರೆ ಗಡಸಕಲರುಜಾರಚೋರೆಂದು ಸಾರುವರೊ4ಎನ್ನ ಬೇಡು ನೀ ಮನದಣಿ ನೀಡುವೆಅನ್ಯರ ಮನೆಗೆ ಪೋಗಲಿ ಬೇಡವೊಚಿನ್ಮಯ ಮೂರುತಿ ಪ್ರಸನ್ವೆಂಕಟ ಕೃಷ್ಣನನ್ನಾಣೆ ಮನೆಯ ಬಿಟ್ಟಗಲದಿರೊ 5
--------------
ಪ್ರಸನ್ನವೆಂಕಟದಾಸರು
ರಂಗ ರಂಗ ಎಂಬ ನಾಮವ ನೆನೆವರ |ಸಂಗದೊಳಿರಿಸು ಎನ್ನ ಪಅಂಗದೊಳ್ಲೆವರು ದೆಸೆದಸೆಗೆಳೆಯುವ |ಭಂಗವ ಬಿಡಿಸೊ ಹರಿಯೆ-ಸ್ವಾಮಿ ಅ.ಪಹರೆಕೃಷ್ಣ ಎಂದೆಂಬೆಜಿಹ್ವೆತಾನಿರುತಿರೆ |ಬರಿಯೆ ಮಾತಾಡುವೆ ನಾ ||ಗುರು-ಹಿರಿಯರ ವಂದನೆಗೆ ಕರ-ಶಿರವಿರೆ |ಗುರುವಹಂಕಾರತನ ||ಪರಿಪರಿ ಪುಷ್ಪದಲಿ ಪೂಜಿಸದೆ ಅಚ್ಯುತನ |ಮರೆತಿಹೆ ನಾನನುದಿನ |ಅರಿವ ನೋಡಿದರೆ ಎನ್ನಲಿ ಕಾಣೆನೈ ದೇವ |ಮೊರೆಹೊಕ್ಕೆ ಸಲಹೊ ಎನ್ನ-ಸ್ವಾಮಿ 1ವೇದ ಶಾಸ್ತ್ರ ಪುರಾಣ ನಾಮವ ನೆನೆವರ |ಚೋದ್ಯವ ನಾನರಿಯೆನು ||ಹಾದಿಬೀದಿ ತಿರುಗುವ ಜಾರಸ್ತ್ರೀಯಳ ಕಂಡು-ವಿ-|ನೋದಗಳ ಮಾಡುತಿಹೆನು ||ಮಾಧವಗೋವಿಂದ ಎನ್ನದೆ ಕಾಲನ |ಬಾಧೆಗಳಿಗೊಳಗಾದೆನೊ ||ಈ ಧರೆಯೊಳಗೆನ್ನ ರಕ್ಷಿಸುವವರ ಕಾಣೆ |ಶ್ರೀಧರ ನೀನೆ ಸಲಹೊ-ಸ್ವಾಮಿ 2ಮಡದಿ-ಮಕ್ಕಳಿಗೆಲ್ಲ ಒಡವೆ ಬೇಕೆಂಬುವ |ಕಡುಲೋಭತನವ ಬಿಡಿಸೊ ||ಅಡಿಗೆ ಅಡಿಗೆ ನಾರಾಯಣನೆಂಬ ನಾಮವನು |ನುಡಿವ ನಾಲಗೆಗಿರಿಸೊ ||ಪೊಡವಿಯೊಳುಪುರಂದರವಿಠಲರಾಯನೆ ನಿನ್ನ |ಅಡಿಯದಾಸನೆನಿಸೊ-ಸ್ವಾಮಿ 3
--------------
ಪುರಂದರದಾಸರು
ರಂಗ ರಥವನೇರಿದನಕ್ಕ- ಮೋಹ- |ನಾಂಗ ನಮ್ಮ ಸೇರದೆ ಪೋಗುವನಕ್ಕ ಪಮಾತುಳಮಥರೆಯೊಳಿಹನಂತೆ - ಅಲ್ಲಿ |ಮಾತಾಪಿತರಿಗೆ ಬಂಧನವಂತೆ, ಇವರು |ನೂತನ ಬಿಲ್ಲಿನ ಅರ್ಥಿಗಳಂತೆ ||ಪೀತಾಂಬರಧರನ ಪೂಜೆ ನೋಡುವೆನೆಂಬ |ಆತುರದಿಂದಿರೆ ಅಕ್ರೂರನೊಡನೆ ಈಗ 1ಬಲರಾಮ ಬಂಧುವಿನೊಡಗೂಡಿ ನಂದ-|ನಡಿಗೆ ಯಶೋದೆಗೆ ವಂದನೆ ಮಾಡಿ-ತಾವು |ಬಿಡಲಾರೆವೆಂದು ಭಾಷೆಯ ನೀಡಿ ||ತಡೆಯೆನೆನುತ ತಾಯಿಗೆ ಭರವಸೆಯಿತ್ತು |ಕಡಲಶಯನನು ಕಾತರದಿಂದಲಿ ಈಗ 2ಮಧುರಾ ಪಟ್ಟಣದ ಮಾನಿನಿಯರು ಅತಿ |ಚದುರೆ ಚೆಂಚಲೆ ಚಾಪಲತೆಯರು-ನಮ್ಮ |ಮದನನಯ್ಯನ ಮೋಹಿಸುತಿಹರು ||ಕಧಿಜನಾಭ ನಮ್ಮ ಪುರಂದರವಿಠಲ |ಪದುಮನಾಭನ ಪಯಣವ ನಿಲ್ಲಿಸಕ್ಕ 3
--------------
ಪುರಂದರದಾಸರು
ರಂಗನ ತಂಗಿಯರ ಮಾನಭಂಗ ಮಾಡಿಹರುಷದಿಂದ ತಂಗಿಯರುಕೋಲಹಾಕುತಾರೆ ಬಾರೆ ದ್ರೌಪತಿಪ.ದೊರೆಯರ ಮಗಳೆಂದುಬಹಳೆ ಗರವಿಲಿಂದ ಆಣಿನಿಟ್ಟುಒಳಗೆ ಹೋಗಿಸೇರಿದ್ಯಾಕ ಬಾರೆ ದ್ರೌಪತಿ 1ಒಳ್ಳೆಯವರ ಮಗಳು ನೀನುಭಾಳಮಾತನಾಡಿಗೈಯ್ಯಾಳಿ ತನವತೋರಿಕೊಂಡಿ ಬಾರೆ ದ್ರೌಪತಿ 2ಗುಡ್ಡದಷ್ಟು ರಾಗ ಮಾಡಿಅಡ್ಡಾದಿಡ್ಡಿ ಮಾತನಾಡಿಧಡ್ಡ ತನವ ತೋರಿಕೊಂಡೆಬಾರೆ ದ್ರೌಪತಿ 3ಸರ್ಪನ ಎದುರಿಗೆ ಕಪ್ಪೆದರ್ಪತೋರುವದು ಉಂಟೇನಅರಿಪುರೆಲ್ಲ ನಿನ್ನ ಬುದ್ಧಿಬಾರೆ ದ್ರೌಪತಿ 4ಬರಿಯ ಮಾತಿನ ಜಾಣೆನಿಮ್ಮನ ಕರೆಯ ಬರಲಿಲ್ಲವೆಂದುಕುರಿಯಂತೆ ಕೂಗಿದೆಲ್ಲಬಾರೆ ದ್ರೌಪತಿ 5ನರಿಯ ಸಿಂಹನ ಮರಿಗೆನೀನು ಸರಿ ಗಟ್ಟಿದಂತೆಅದರ ಪರಿಯತಿಳಕೊಳ್ಳಬಾರೆ ದ್ರೌಪತಿ 6ಅಕ್ಕ ರುಕ್ಮಿಣಿಗೆಭಾಳಸೊಕ್ಕಿಲಿಂದ ಆಣಿನಿಟ್ಟೆಬೆಕ್ಕಿನಾಂಗ ಸೇರಿದ್ಯಾಕಬಾರೆ ದ್ರೌಪತಿ 7ನಳಿನಾಕ್ಷಿ ರಾಮೇಶ ನರಸಿಯರಿಗೆತಿಳಿಯದೆ ಆಣಿಯನಿಟ್ಟುಮಾನವಎಂತು ಕಳೆದು ಕೊಂಡೆಬಾರೆ ದ್ರೌಪತಿ 8
--------------
ಗಲಗಲಿಅವ್ವನವರು
ರಾಘವನಾಡಿದ ಮಾತಿಗಾಂಜನೇಯ ಬಿನ್ನವಿಸುವದು |ಈಗ ಪೇಳುವೆ ಸಜ್ಜನರಾಲಿಸುವದು ಪಆ ರವಿನಂದನನು ತಾ ಮೇರೆ ಮಾಡಿ ಅಟ್ಟಿದನು |ವಾನರರುಗಳನು ತಿಂಗಳು ಮೀರಿತಿಂದಿಗೆ ||ಮಾರುತಿ ಕೇಳೀ ಮಾತು ಇನ್ನಾರ ಕಾಣೆ ಬಲ್ಲಿದರ |ನಾರಿಯೆಲ್ಲಿಹಳೋ ವಾರ್ತೆ ತಾರೋ ನೀ ಪೋಗಿ 1ಸ್ವಾಮಿ ಪಾಲಿಸೊ ಅಪ್ಪಣೆ ನಾ ಮುಂಚೆ ಪೋಗುವೆ |ತಡವ ಮಾಡದೆ ಎಲ್ಲೀಗೆನ್ನ ಭೂಮಿಜಾ ರಮಣ ||ಈ ಮುದ್ರೆ ಕೊಂಡು ಪೋಗೋ ಶಾಮಲಾಪತಿ ದಿಕ್ಕಿಗೆ |ಸಮುದ್ರ ದಾಟಿ ವೇಗಪಾವಮಾನಿಕೇಳೋ 2ಭೂತಲಾಕಾಶ ಲೋಕಾದಿ ಪಾತಾಳದೊಳಗಿರಲಿ |ನಾ ತರುವೇನು ವಾರ್ತೆ ಜಗನ್ನಾಥಪರಾಕು||ಹೇತರಳತ್ರಿಲೋಕ ವಿಖ್ಯಾತನಾಗಿಹ ರಾವಣ |ಪಾತಕಕೊಂಡು ಪೋಗಿಹ ಸೀತೆಯ ಕೇಳು 3ಬುದ್ಧಿದೇವ ನೀ ಕೊಟ್ಟಂಥ ಬುದ್ಧಿಯಿಂದಲೇ ಅವನ |ಗುದ್ದಿ ಸರ್ವ ಬಲವನ್ನೂ ಒದ್ದು ಬರುವೆನೊ ||ಮುದ್ದು ಕಂದ ರಕ್ಕಸರವಧ್ಯರೋವರಪಡೆದು |ರುದ್ರನಿಂದ ಮಾಡದಿರೊ ಗದ್ದಲ ಕೇಳೋ 4ತಂದೆ ರಾಮಾ ನಿನ್ನ ದಯೆಯಿಂದ ಈಡಲ್ಲವೊ ಯನಗೆ |ನಂದಿಧ್ವಜಾ ಈ ರಕ್ಕಸರೊಂದು ತೃಣವೋ ||ಕಂದ ಈ ವೇಳೆಯೊಳೇನು ಬಂದುದನು ಭೋಗಿಸಿ ನಾನು |ಕೊಂದು ಹಾಕುವ ದಿನವೂ ಮುಂದುಂಟು ಕೇಳೋ5ದೇವಿಯ ನೋಡಿ ಬರುವಾಗ ತಾವಂತು ಕೆಣಕಲು ದಾ- |ನವರು ಸುಮ್ಮನಿರಲೇನು ದೇವದೇವೇಶ ||ಕೋವಿದಾಗ್ರೇಶನೆ ನೀನು ಸಾವಿರಾಳಿಗೆ ಒಬ್ಬನೇ |ಆ ವಿಚಾರ ಮನಕೆ ತರುವದೇ ಕೇಳೋ 6ಹೇಳಿದ ಮಾತು ಕಟ್ಟಿದ ಕೂಳು ನಿಲ್ಲವೊ | ಆ ವನ-ದೊಳೇನಹದೊ ಬಲ್ಲೆನೇ ಪ್ರಾಣೇಶ ವಿಠಲಾ ||ಬಾಲಕ ಹನುಮಂತ ನಿನ್ನೊಳಗೆನ್ನಾ ರಾಣಿಯಲ್ಲಿ- |ಹಳೋ ನೋಡಿ ಬರುವುದಕಾಲಸ್ಯ ಕೇಳೋ 7
--------------
ಪ್ರಾಣೇಶದಾಸರು
ರಾಜ ರಾಜ ಮಹಾರಾಜ ಶ್ರೀಧವಾಗೋವಿಂದರಾಜ ಅಚರಾಚರ ಸಬೀಜಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಯುಗದಿಮತ್ಸ್ಯಕೂರ್ಮ- |ನಾದಿವರಾಹನರಸಿಂಹ- |ನಾದಿಹಿರಣ್ಯಕಶ್ಯಪನ |ಛೇದ ಮಾಡಿ ರಕ್ತ ಕುಡಿದಿ1ದ್ವಿತೀಯಯುಗದಿ ವಾಮನದ್ವಿತೀಯಉದರದಲಿ ಬಂದು | ಮಥಿಸಿ ಬಲಿಯ ಕ್ರೋಧದಿಂದ |ಸುತಳಕ್ಕೊತ್ತಿ ಬಿಟ್ಟೆಯಾ2ಪರಶುರಾಮ ರೇಣುಕಿಯ |ವರಸುಪುತ್ರನಾಗಿಜನಿಸಿ | ವೀರಸದಿಂದ ಕ್ಷತ್ರಿ (ಯರ)ನಿರಸ ಮಾಡಿ ಬಿಟ್ಟಿ3ರಾಮಚಂದ್ರ ದಾಶರಥಿಯ |ಶ್ಯಾಮನೀಲಮೇಘವರ್ಣ |ಸ್ತೋಮರಾವಣನ ಉದ್ದಾಮನವರ ವಂಶ ತರಿದಿ4ದ್ವಿತೀಯದ್ವಾಪರದಲ್ಲಿ | ಮಥಿಸಿ ಕಂಸ ಪೂತನೆಯ |ಕಾತರ ಮಾಡಿ ಕೌರವನು |ಪಥಕೆ ಹೊಂದಿಸಿ ಬಿಟ್ಟ ಕೃಷ್ಣ5ಕಲಿಯುಗ ಬರಲು ಬೌದ್ಧನಾಗಿ |ಛಲ ದ್ವೇಷಖಲಜನರ ಕಲಹ ಹೆಚ್ಚಲಾಗುತಿರೆ |ಕಲ್ಕಿ ಹಯಗ್ರೀವನಾದಾ6ಮೂರು ತಾಪದಿಂದ ಬೆಂದ |ಘೋರದುರಿತಭವದಮೂಲ ಬೇರ ಕಿತ್ತಿ ಬಿಸುಟಿದ ಶ್ರೀಶಪಾಲ ಶಂಕರೇಶ7
--------------
ಜಕ್ಕಪ್ಪಯ್ಯನವರು
ರಾಮ ಗೋವಿಂದ ಸೀತಾ - ರಾಮ ಗೋವಿಂದ ಪ.ತೃಪ್ತಿಯಹುದೆ ಹೆತ್ತ ತಾಯಿ ಇಕ್ಕದನಕಭಕ್ತಿಯಹುದೆ ಭಕ್ತಜನರ ಸಲಹದನಕಮುಕ್ತಿಯಹುದೆ ಭಾವಶುದ್ದಿ ಇಲ್ಲದನಕಚಿತ್ತಶುಧ್ಧಿ ಆತ್ಮನಿಜವು ತಿಳಿಯದನಕ 1ಓದಲೇಕೊ ಮನದಿ ಜ್ಞಾನವಿಲ್ಲದನಕಭೇದವೇಕೊ ಗತಿಯುಗಮನ ತಿಳಿಯದನಕಕಾದಲೇಕೊ ಭುಜದಿ ಶಕ್ತಿಯಿಲ್ಲದನಕವಾದವೇಕೊಶ್ರುತಿ- ಶಾಸ್ತ್ರ ತಿಳಿಯದನಕ2ನಳನವಿದ್ದರೇನು ತುಂಬಿಯೊದಗದನಕದಳವು ಇದ್ದರೇನು ಧೈರ್ಯಕೊಡದನಕಲಲನೆಯಿದ್ದರೇನು ಪುತ್ರರಿಲ್ಲದನಕಚೆಲುವನಾದರೇನುವಿದ್ಯೆಕಲಿಯದನಕ3ಮನವಿದ್ದೇಕೊಶುಕ - ಪಿಕವಿಲ್ಲದನಕತನುವಿದ್ದೇಕೊ ಪರಹಿತಕೆ ಬಾರದನಕಮನೆಯಿದ್ದೇಕೊ ಅತಿಥಿಯೊಬ್ಬರಿಲ್ಲದನಕಧನವಿದ್ದರೇನು ದಾನ - ಧರ್ಮಕ್ಕೊದಗದನಕ 4ಹರಿಯ ಚಿಂತೆಯಿರಲು ಅನ್ಯ ಚಿಂತೆಯೇತಕೊಹರಿಯ ಧ್ಯಾನವಿರಲು ಅನ್ಯ ಧ್ಯಾನವೇತಕೊಸಿರಿ ಪುರಂದರವಿಠಲನಿರಲು ಭಯವು ಏತಕೊಹರಿಯ ಒಲಿದ ಮನುಜನಿಗೆ ದೈನ್ಯವೇತಕೊ 5
--------------
ಪುರಂದರದಾಸರು
ರಾಮ ರಾಮ ರಾಮ ಸೀತಾ ರಾಮ ಎನ್ನಿರೋ ಪ.ಇಂದ್ರಿಯಂಗಳೆಲ್ಲ ಕೂಡಿಬಂದು ತನುವ ಮುಸುಕಲುಸಿಂಧು ಸುತೆಯ ಪತಿಯಧ್ಯಾನಎಂದಿಗಲ್ಲಿ ದೊರೆಯದೊ 1ಭರದಿ ಯಮನ ಭಟರಾಗಲೆಹೊರಡು ಎಂದು ಮೆಟ್ಟಿ ತುಳಿಯೆಕೊರಳಿಗಾತ್ಮ ಸೇರಿದಾಗಹರಿಯ ಧ್ಯಾನ ದೊರೆಯದೊ 2ದೋಷಕ್ಲೇಶ - ದುಃಖವೆಂಬಶ್ಲೇಷ್ಮದಲ್ಲಿ ಸಿಕ್ಕಿ ಇರಲುವಾಸುದೇವ ಕೃಷ್ಣನೆಂಬುದಾಸಮಯಕ್ಕೆ ದೊರೆಯದೊ 3ಸಿಂಗಾರವಾದ ದೇಹವೆಲ್ಲಅಂಗವಳಿದು ಮುರಿದು ಬೀಳೆ ||ಅಂಗಳಿಗಾತ್ಮ ಸೇರಿದಾಗರಂಗನ ಧ್ಯಾನವು ದೊರೆಯದೊ 4ಕೆಟ್ಟ ಕೆಟ್ಟರಲ್ಲೊ ಬರಿದೆಕಟ್ಟ ಕಡೆಯಲ್ಲಿಕಾಯಬಿಟ್ಟು ಹೋಗುವಾಗಪುರಂದರವಿಠಲ ಧ್ಯಾನ ದೊರೆಯದೊ 5
--------------
ಪುರಂದರದಾಸರು
ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊ ಪ.ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲುಭಂಗವ ಪಡುವುದ್ಯಾಕೆಮಂಗಲದಾತ ನರಸಿಂಗನ ನಾಮವಹಿಂಗದೆ ನೆನೆದರಿಷ್ಟಂಗಳ ಕೊಡುವ 1ಉಪವಾಸ ಮಾಡಲ್ಯಾಕೆ ಕಪಟದೊಳುಗುಪಿತದಿ ಕುಳ್ಳಲ್ಯಾಕೆಉಪಮೆರಹಿತ ಶ್ರೀಪತಿ ಕೃಷ್ಣರಾಯನಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ 2ಧ್ರುವನು ಸದ್ಗತಿ ಪಡೆದ ಕರುಣದಿಂದಪವಮಾನಿಗೆ ಒಲಿದಭುವನಈರಡಿಮಾಡಿ ಬಲಿಯನ್ನು ಸಲಹಿದಬವರದೊಳಗೆ ದಾನವರನ್ನು ಮಡುಹಿದ 3ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತುತೀರ್ಥಸ್ನಾನಗಳ್ಯಾತಕೋಕರ್ತುಮಾಧವಶತಪತ್ರನಾಭನ ಸಂ-ಕೀರ್ತನಾದಿಗಳೆ ಪರತ್ರಸಾಧನವಲ್ಲೊ 4ಭೂರಿಯಾಯಾಸವ್ಯಾಕೋ ಬರಿದೆ ಸಂ-ಸಾರವ ನಂಬಲ್ಯಾಕೋಮಾರಾರಿಸಖ ಲಕ್ಷ್ಮೀನಾರಾಯಣನನ್ನುಸೇರಿ ಭಜಿಪರ ಉದ್ಧಾರಮಾಡುವ ಶ್ರೀ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಾಮ ಶ್ರೀರಾಮ ಸೀತಾರಾಮ ಶ್ರೀರಾಮರಾಮನೆ ರವಿಕುಲಸೋಮಶ್ರೀರಾಮಪರಾಮ ರಾಮ ರಘುರಾಮನೆ ದಶರಥರಾಮನೆ ಗುಣಗಣಧಾಮನೆ ಶ್ರೀರಘು ಅ.ಪಕೌಸಲ್ಯಾದೇವಿಯ ಕಂದನೆ ರಾಮಕೌಶಿಕಯಜÕವ ಕಾಯ್ದ ಶ್ರೀರಾಮಹಿಂಸಿಸಿದ ತಾಟಕಿಯನು ಕೊಂದರಾಮಧ್ವಂಸಮಾಡಿದೆ ಶಿವಧನು ಮುರಿದುರಾಮಸಂಶಯವಿಲ್ಲದೆ ಸೀತೆಕರವಪಿಡಿದುತನ್ನಂಶದ ಪರಶುರಾಮನಿಗೊಲಿದನೆ ಶ್ರೀ 1ದಶರಥರಾಮ ನೀನರಸನಾಗೆನಲುಅಸುರಾವೇಶದಿ ಕೈಕೆ ವರವ ಯಾಚಿಸಲುಎಸೆವ ಸಿಂಹಾಸನ ತೊರೆದು ಪೊರಮಾಡಲುಶಶಿಮುಖಿಸೀತಾಲಕ್ಷ್ಮಣರ ಕೂಡಿ ಬರಲುಭರತಗೆ ಪಾದುಕೆ ಕೊಡುತಲಿ ಕಳುಹಿಸಿಗುಹನ ಮನ್ನಿಸಿ ವನರಾಜ್ಯದೊಳ್ ಮೆರೆದೆ 2ವನದೊಳುಮಾಯಾಮೃಗವ ಕಂಡು ಸತಿಯುಮನದಿ ಚಿಂತಿಸಿರಾಮ ತೆರಳೆ ರಕ್ಕಸನುವನಜಾಕ್ಷಿ ಸೀತೆಯ ಕಳವಿನಿಂ ತರಲುವನವನಚರಿಸಿ ಪುಡುಕೆ ಕಂಡು ಕಪಿವರನುಶರಧಿಲಂಘಿಸಿ ಸೀತೆಯನು ಕಂಡು ಹನುಮನುಕುರುಹು ಪಡೆದು ಲಂಕೆ ದಹಿಸುತ ಬರಲು 3ಸೇತುಬಂಧನ ಮಾಡಿ ಕಪಿಗಳ ಕೂಡಿನೀತಿ ಪೇಳಿದ ವಿಭೀಷಣಗಭಯ ನೀಡಿಭೂತ ರಾವಣನ ದಶಶಿರವ ಚಂಡಾಡಿಸೀತಾಸಹಿತ ರಾಮ ಪುಷ್ಪಕವನೇರಿಆತುರದಿಂದಿಹ ಭರತನಿಗ್ವಾರ್ತೆಯಪ್ರೀತಿಲಿ ಕಳುಹಿದ ಶ್ರಿ ರಘುರಾಮ 4ಬಂದ ಶ್ರೀರಾಮಚಂದ್ರ ಬಹುಪ್ರೀತಿಯಿಂದಛಂದದಿಂ ಭರತನ ಮನ್ನಿಸಿ ಮುದದಿಂದಕುಂದಣಮಯದ ಸಿಂಹಾಸನ ಚಂದ-ದಿಂದಲೇರುತ ರಾಮ ನಸುನಗೆಯಿಂದಇಂದಿರಾಸೀತಾ ಸಹಿತ ಅಯೋಧ್ಯದಿಬಂದು ಪೊರೆವ ಕಮಲನಾಭ ವಿಠ್ಠಲನು 5
--------------
ನಿಡಗುರುಕಿ ಜೀವೂಬಾಯಿ
ರಾಮನ ನೋಡಿರೈ ರಘುಕುಲಸೋಮನ ಪಾಡಿರೈ ಪ.ಜೀಮೂತಶ್ಯಾಮಲಕಾಯ ಜನಕಜಾಮಾತಸೀತಾಕಾಂತಅ.ಪ.ಕೋಟಿದಿವಾಕರನಿಭ ಮಕುಟದ ಮಸ್ತಕದ ಮುದ್ದಿನ ಮುಖದನೀಟಹ ಪಣೆಯಲಿಮೃಗಮದಪುಂಡ್ರತಿಲಕದ ನೀಲಾಳಕದಮಾಟಕ ಮದನನ ಬಿಲ್ಲ ಹಳಿವ ಹುಬ್ಬುಗಳ ಇತ್ತಂಡಗಳನೋಟದಿ ದಯಾರಸ ಸೂಸುವ ಕಮಲದಳಗಳ ಸಮನಯನಗಳ 1ಎಸೆವ ಸುನಾಸಿಕ ಜ್ವಲಿತಕುಂಡಲಸ್ಮಿತವದನ ಶಶಿಸಮರದನಹೊಸ ತುಲಸಿಯ ಮಂಜರಿ ವನಮಾಲಾಧರನ ಸತ್ಕಂಧರನಮಿಸುನಿಯವೈಜಯಂತಿತ್ರಿಸರವು ದಿವ್ಯಪದಕಗಳ ಝಳ ಝಳಪುಗಳಲಸತ್ ಶ್ರೀವತ್ಸ ವಕ್ಷದಿ ಕುಂಕುಮ ಚಂದನದ ಗುಣಗಣಘನದ 2ಮರಕತಸ್ತಂಭಗಳಿಗೆ ಪೋಲ್ವೆಡೆಬಾಹುಗಳ ಅಂಗದಯುಗಳಕರವಲಯಾಂಗುಲಿಮುದ್ರಿಕೆ ಧೃತಕೋದಂಡ ದಂಡಕದಂಡಸಿರಿಜಠರತ್ರಿವಳಿಗಂಭೀರನಾಭ ನಿರ್ಜರನಾಭವರಪಿಂಗಳ ಕೌಶೇಯಾಂಬರಕಟಿಸೂತ್ರಶ್ರೀ ಬ್ರಹ್ಮಸೂತ್ರ3ಬಟ್ಟದೊಡೆಜಾನುಘಟ್ಟಿದಂತೋಪಮ ಜಂಘ ಸಂವೃತ ಜಂಘಾಕುಟಿಲ ನೀ ರಾಕ್ಷಸದಲ್ಲಣ ಪೆಂಡೆಯದ ಚೆಲುವಾ ಜನಜನಿಗೊಲಿವಕಠಿಣತರ ಪದತಳದೆಡೆ ಧ್ವಜಾಂಕುಶಾಂಬುಜ ಹೃತ್ಕಲುಷಾನಿಟಿಲನಯನ ವಿಧಿಸುರ ಋಷಿವಂದಿತಚರಣನೂಪುರಾಭರಣ4ಸುಖಮುನಿ ಮುಖ್ಯಮುನಿ ಪೂಜಿತ ವಿಗ್ರಹ ವಾರಾಪಾರವಿಹಾರನಿಖಿಲ ಗುಣಾರ್ಣವ ನಿತ್ಯದಯಾರ್ಣವ ರಾಜ ರಾಜಾಧಿರಾಜಸಕಲ ಸಂಯಮಿಕುಲಮೌಳಿರತುನ ಸತ್ಯಪೂರ್ಣ
--------------
ಪ್ರಸನ್ನವೆಂಕಟದಾಸರು