ಒಟ್ಟು 8857 ಕಡೆಗಳಲ್ಲಿ , 132 ದಾಸರು , 5049 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಂಜಾನೆ ಎದ್ದು ಮುರಹರನ ಸ್ಮರಿಸೆಲೆ ಮನವೆ ಅಂಜುವ ಭವದುರಿತ ಹಿಂಗಿಸುವನು ಧ್ರುವ ಕ್ಲೇಶ ಪರಿಹರಿಸುವನು ಭವ ನಾರಾಯಣೆನಲು ಮೀಸಲು ಮನದಲೊಮ್ಮೊ ಮಾಧವೆಂದೆನಲು ತಾ ಭಾವಿಸುವ ಹೃದಯದೊಳು ಗೋವಿಂದನು ವಾಸನೆಯ ಪೂರಿಸುವ ವಿಷ್ಣು ಯೆಂದೆನಲು ತಾ ದೋಷ ಛೇದಿಸುವ ಮಧುಸೂದನೆನಲು ಲೇಸುಗೈಸುವ ಜನುಮ ವಾಮನೆನಲು 1 ಸಿರಿ ಸಕಲ ಪದವೀವ ಶ್ರೀಧರಂದೆನಲು ತಾ ಹರುಷಗತಿನೀವ ಹೃಷೀ ಕೇಶನೆನಲು ಪಾತಕ ದೂರ ಪದ್ಮಾನಾಭೆಂದೆನಲು ಭಂಜನ ದಾಮೋದರೆನಲು ಸುರಿಸುವ ಅಮೃತವ ಸಂಕರುಷಣೆಂದೆನಲು ಹೊರೆವ ಧರೆಯೊಳು ವಾಸುದೇವೆನಲು ಪರಿಪರಿಯ ಸಲುಹುವ ಪ್ರದ್ಯುಮ್ನನೆಂದೆನಲು ಅರಹುಗತಿನೀವ ಅನಿರುದ್ದನೆನಲು 2 ಪೂರಿಸುವ ಭಾವ ಪರುಷೋತ್ತಮೆಂದೆನಲು ತಾ ತಾರಿಸುವ ಜನುಮ ಅಧೋಕ್ಷಜೆನಲು ನರಜನ್ಮುದ್ಧರಿಸುವ ನಾರಸಿಂಹೆಂದೆನಲು ಕರುಣ ದಯ ಬೀರುವ ಅಚ್ಯುತನೆನಲು ಜರಿಸುವ ದುವ್ರ್ಯಸನ ಜನಾರ್ದನೆನಲು ಊರ್ಜಿತಾಗುವುದು ಉಪೇಂದ್ರ ಎನಲು ತರಳ ಮಹಿಪತಿ ಪ್ರಾಣದೊಡೆಯ ಶ್ರೀಹರಿಯೆನಲು ಕರುಣದಿಂದದೊಗುವ ಗುರುಕೃಷ್ಣನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮುಟ್ಟದಿರಿಗೋಪವನಿತೆಯರು ಗಲಭೆಯದೇನುತೊಲಗಿರೇ ತೊಟ್ಟಿಲಂ ತೂಗದಿರಿ ಕೃಷ್ಣನೆದ್ದರೆ ಕಾಡದಿರನೆನ್ನಾ ಪ ಮಿಸುನಿದೊಟ್ಟಿಲೊಳಂತೆ ದುಪ್ಪದುಪ್ಪಳಿನ ಹಾಸಿನಲಿ ಮಂದಾರ ಕುಸುಮಗಳ ಜಾಜಿ ಮಲ್ಲಿಗೆ ಸೇವಂತಿಗೆ ಪಂಕೇರುಹದಾ ಎಸಳುಗಳ ಪಸರಿಸಿಯೆ ಮಲಗಿಸಿದೆ ಪಾಲೆರದು ಮೊಲೆಯೂಡಿ ಪೀತಾಂಬರವನೆ ಹೊದ್ದಿಸೀ | ಹಸುಳೆಯನಮಲ ಕೋಮಲಾಂಗನನಂಗಕೋಟಿಗಳ ನಾ ಚಿಸಿ ಚಿತ್ತಿನ ಪುತ್ಥಳಿಯ ಸಚ್ಚಿದಾನಂದ ಮೂರುತಿಯಾ ಬಿಸಜಾಕ್ಷನಂ ಕೃಷ್ಣನಂ ಬಲದೇವಸಹಜಾತನಂ ಕುಸುಮನಾಭನಂ ಜಲದನೀಲನಂ ದಿವಿಜಪಾಲನಂ 1 ಬಿಡದೊತ್ತಿಯಪ್ಪಿ ಪರಮಾನಂದ ಜಲಧಿಯೊಳಗೋಲಾಡಿ ಸಂತುಷ್ಟಿಯಿಲ್ಲವಲ್ಲಾ ಒಡೆಯನೋ [ಇವ]ಯೆಮ್ಮೊಡನೆ ಪೊಡವಿಗೆ ಜೀವಂಗಳಿಗೆ ಒಡೆಯನೆಂಬಿರಿ ಪರಲೋಕದಾನಂದಕ್ಕೆ ಒಡೆಯನೇ ನಿಮಗೆನ್ನ ಕಂದ ಮುದ್ದು ಭಾಗ್ಯದ ಬೆಳಸು ಮಡಗಿ ತೊಟ್ಟಿಲೊಳಚ್ಯುತನನಂತನಂ ಮುಕುಂದನ 2 ನೋಡಲಿಹೆವೆಂತು ಲಾವಣ್ಯಸಿಂಧುವನೊಲಿದು ಸರವೆತ್ತಿ ನಾಡ ಹೆಂಗಳ ದೃಷ್ಟಿದೋಷದಿಂ ಪಾಲ್ಗುಡಿದು ನಲವಿಂದ ಲಾಡಲೊಲ್ಲನು ವಸುಂಧರೆಯ ತೊಟ್ಟಿಲಶಿಶುಗಳಂದದಿ ಮೊಲೆಯ ನೂಡಿದರೆ ಬಾಯ್ದೆರೆಯಲೊಲ್ಲ ಮಂತ್ರದಿಯಂತ್ರದಿಂದೊಮ್ಮೆ ಯೂಡಿ ಮಲಗಿಸಿದೆ ವಿಶ್ವನಂ ತ್ರೈಜಗಪ್ರಾಜ್ಞಮೂರುತಿಯಂ3 ರವಿಯಹುದು ಬಿಸಿಗದಿರದೆಲ್ಲಿ ಚಂದಿರನಹುದು ಹಿಮವೆಲ್ಲಿ ನವದೆಲ್ಲಿ ಇಂದುಧರನಹುದು ಫಣೆಗಣ್ಣೆಲ್ಲಿಯೆಂದು ಬರಿದೇಕೆ ಮರುಳಾಗುವಿರಿ ಅವಿರಳನದ್ವಯನನಾದಿಮಧ್ಯಾಂತರಹಿತನ ಧರ್ಮಸ್ಥಾಪನಾಚಾರ್ಯ ನ[ವಂ] ಮಹೀಭಾರವ ತವಿಸಲೆಂದವÀತರಿಸೆ ಜನನವಂ ಪಡೆದ ತಂದೆಯಂ ಭುವನಪಾವನ ಸುಪ್ರಗಧಾಮೂರ್ತಿಯಂ ಶ್ರವಣಮಂಗಳಸತ್ಕೀರ್ತಿಯಂ4 ನಿಗಮವೀ ಹರಿಯ ಮಹಿಮಾ ಸಮುದ್ರದ ತಡಿಯ ತೆರೆಗಳಲಿ ಮಿಗೆ ಸಿಲುಕಿ ಮುಳುಗಲರಿಯದೆ ಬೀಳುತೇಳುತಾಳುತಲಿವೇಕೋ ಮೊಗನಾಲ್ಕನಯ್ಯನ ಸಾಸಿರದೈವವಂ ಪಡೆದ ತಂದೆಯಂಅದೆಂತಲೆಂದಾರರಿವರೂ ಸುಗುಣ ಸರ್ವಜ್ಞನಂ ಸರ್ವಭೂತರಾತ್ಮಕನಂ ಜಗದೊಳ್ ಹೊರಗೆ ಪೂರ್ಣನಾಗಿ ಭುವನವ ಜಠರದೊಳಗಿಟ್ಟ ಅಗಣಿತನ ವೈಕುಂಠ ಪತಿಯ ಘನತೆಯನರಿತು ಪೊಗಳುವರೇ ಮುಗುದೆಯರು ನೀವೆತ್ತ ಮಾಯೆಯ ಕುಣಿಸಿ ನಗುವ ಹರಿಯೆತ್ತಾ 5
--------------
ಬೇಲೂರು ವೈಕುಂಠದಾಸರು
ಮುಟ್ಟಬೇಡ ಮುಟ್ಟಬೇಡ ಮುರಹರನ ದಾಸರನು ಪ ಕಟ್ಟು ಮಾಡಿದ ಯಮನು ತನ್ನ ದೂತರಿಗೆಅ ತಿರುಮಣಿ ತಿರುಚೂರ್ಣ ಶೃಂಗಾರ ಧರಿಸುವರಸಿರಿತುಳಸಿ ವನಮಾಲೆಯಿಂದೊಪ್ಪುವವರತಿರುಮಂತ್ರ ತೀರ್ಥಪ್ರಸಾದಕೊಳಗಾದವರತಿರುಪತಿ ಯಾತ್ರೆಯನು ಮಾಡುವ ಮಹಾತ್ಮರ 1 ಬಡವರಾಗಲಿ ಭಾಗ್ಯವಂತರಾಗಲಿ ಅವರುಕಡು ಕರ್ಮಿ ಘೋರಪಾತಕರಾಗಲಿನಡೆನುಡಿಗೆ ಮಾಧವನ ಬಿಡದೆ ಕೊಂಡಾಡುವರಗೊಡವೆ ಬೇಡೆಂದು ಯಮಧರ್ಮ ಸಾರಿದನು 2 ವಾಸುದೇವನ ವಾಸರವನಾಚರಿಸುವವರಬೇಸರಿಸದೆ ಹರಿಪ್ರಸಂಗ ಮಾಳ್ಪವರಶೇಷಶಯನ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸರಾದವರ3
--------------
ಕನಕದಾಸ
ಮುತ್ತಿನಾರತೀ ತಂದೆತ್ತಿಪಾಡುವೆ ಚಿತ್ತಜಾತ ಜನಕ ರಂಗನಾಥದೇವಗೆ ಪ. ಭೂಮಿಪಾಲಗೆ ಶ್ರೀ ಭಾಮೆಯರಸಗೆ ದಾತ ಮನೋ ಮೋಹನಾಂಗಗೆ 1 ಕಾಳೀಮಡುವನು ಕಲಕಿ ಬಂದಗೆ ಬಾಲನಾಗಿ ಗೋವುಗಳನು ಕಾಯ್ದ ಗೊಲ್ಲಗೆ 2 ಮುರವಿರೋಧಿಗೆ ಕರುಣವಾರ್ಧಿಗೆ ತರಳ ಧ್ರುವನಿಗೊಲಿದು ಬಂದ ವರದರಾಜಗೆ 3 ಶರಣರಕ್ಷಣೆ ಸರಸಿಜಾಕ್ಷಗೆ ಪರಮ ಪಾವನ ಶೇಷಶೈಲ ಶಿಖರ ಧಾಮಗೆ 4
--------------
ನಂಜನಗೂಡು ತಿರುಮಲಾಂಬಾ
ಮುತ್ತು ಕೊಳ್ಳಿರೋ ಉತ್ತುಮರೆಲ್ಲ ಧ್ರುವ ಜ್ಞಾನ ಸಮುದ್ರಲಿನ್ನು ಧ್ಯಾನವೆಂಬ ಸಿಂಪಿನೊಳು ಘನಗುರುಕರುಣದ ಮಳಿಯಾದ ಮುತ್ತು ಕೊಳ್ಳಿರೋ 1 ಪಿಂಡ ಬ್ರಹ್ಮಾಂಡವೆಂಬ ಗಡ್ಡೆಯೊಳಿನ್ನು ಪುಟ್ಟಿ ಭಕ್ತಿಭಾವ ಹಡಗದೊಳು ಬಂದ ಮುತ್ತು ಕೊಳ್ಳಿರೋ 2 ಸಾಧುಸಜ್ಜನರೆಂಬ ಮುತ್ತಿನ ಜೋಹರೇರ ಕೈಯ ನಿಜಹಸ್ತಸ್ಪರ್ಶವಾದು ನೀವು ಮುತ್ತು ಕೊಳ್ಳಿರೋ 3 ಅತ್ತಲಿತ್ತಲಾಗದೆ ಈ ಮುತ್ತು ಜತನಮಾಡಿ ನಿಮ್ಮ ಚಿತ್ತ ಮನದೊಳು ಇಟ್ಟುಕೊಳ್ಳಿರೋ 4 ತನುಮನಧನವನರ್ಪಿಸಿಕೊಂಡಿಹ ಮುತ್ತು ಮಹಿಪತಿ ಇಹರಪವಸ್ತು ಮುತ್ತು ಕೊಳ್ಳಿರೋ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮುತ್ತೂರೇಶ ಶ್ರೀ ಮರ್ಕಟಾ ತುಲಸÀದಲಾಯತಾಕ್ಷ ಶ್ರೀರಾಮದೂತಾ ಪ ಎತ್ತ ಚಲಿಸದಂತೆನ್ನ ಮನವ ತವ ಪಾದ ಸರೋಜದೊಳಿಟ್ಟು ಪತ್ತು ತಲೆಯನರಿಯಡಿದಾವರೆಯನು ನಿತ್ಯ ಭಜಿಸುವಂದದಿ ಮಾಡಯ್ಯ 1 ಆಂಜನೇಯಾ ಭೀಕರ ರೂಪಾ ದಾನವ ಘಾತಕರಾ ಸತಿ ಮೇದಿನಿ ಸುತೆಯಳ ಮಂಜುಮಾಡಿ ಖಲ ರಾವಣನೊಯ್ಯಲು ಅಂಜದಿರೆಂದವನಿಪ- ನಿಗಭಯವಿತ್ತು ಮಂಜುಂ ಕಾರ್ಯವ ನೆರೆದಪೆನೆಂದೀ 2 ಭಾರತೀಯ ಪವÀನತನಯ ಘನತರ ಕಾರ್ಯಕರ್ತಾ ಶ್ರೀರಾಮದೂತಾ ಘೋರತರದ ಅಪರಾರ್ಣವನು ಹಾರಿ ದಾಂಟಿ ಲಘು ದಶಮುಖಪುರವನು ವೀರರಾಘವನಂಘ್ರಿಗೆ ಎರಗಿದಿ ನೀ 3 ದಾನವನಾಶಾ ಜಾನಕೀತ್ರಾತ ದಶರಥಸುತ ಭಜಕಾ ಆನಂದತೀರ್ಥ ದಾನವ ಕೋಟಿಯ ನಡೆದು ಜವದಿ ನೀ ಮೌನಿ ಹರಿಗೆ ಸಹಾಯಾಗ್ರಣಿಯಾಗಿ ಹೀನ ರಕ್ಕಸ ದಶ- ಶಿರವನರಿಸಿ ನೀ ನರಸಿಂಹವಿಠಲನ ದಾಸನೆನಿಸಿದೀ 4
--------------
ನರಸಿಂಹವಿಠಲರು
ಮುತ್ತೈದೆ ಜಯ ಜಯ ಮುತ್ತೈದೆ ಜಯ ಜಯ ಮುತ್ತೈದೆಯರು ಪಾಡುತ ಜಯ ಜಯ ಮುತ್ತಿನಾರತಿ ಎತ್ತುತಾ ಪ ಪೃಥ್ವಿಗೊಡೆಯ ಪುರುಷೋತ್ತಮ ಹರಿಗೀಗ ಮುತ್ತಿನಾರತಿ ಎತ್ತುತಾ ಜಯ ಜಯ ಮುತ್ತೈದೆಯರು ಪಾಡುತಾ 1 ಮಿತ್ರೆ ರುಕ್ಮಿಣಿ ಸತ್ಯಭಾಮೆಯರರಸಗೆ ರತ್ನದಾರತಿ ಎತ್ತುತಾ ಜಯ ಜಯ ಮುತ್ತೈದೆಯರು ಪಾಡುತಾ 2 ಮಮತೆಯಿಂದಲಿ ಕಮಲನಾಭ ವಿಠ್ಠಲನಿಗೆ ಕನಕದಾರತಿ ಎತ್ತುತಾ ಜಯ ಜಯ ಮುತ್ತೈದೆಯರು ಪಾಡುತಾ3
--------------
ನಿಡಗುರುಕಿ ಜೀವೂಬಾಯಿ
ಮುದದಿ ಹರಿಯ ಧ್ಯಾನ ಮಾಡಿ ಸಾಧಿಸೊ ಸದಯ ಹೃದಯರಾದ ಸಂಗದೊಳಗೆ ನೀನು ಬೆರೆದು ಪ --ಕರ್ತನಾದ ದೇವ ಸದ್ಪಿಲಾಸನಾ ನಿಖರವಾಗಿ ಹೃದಯದಲ್ಲಿ ನಿಲ್ಲಿಸುವೆನಾ ಪ್ರಕಟಮಾಡಿ ಸ್ತುತಿಸುತಿರುವ ಬಿಡದೆ ಅನುದಿನ ಭಕುತಿಯಿಂದ ಕ--------ಭಕ್ತ ಜನರಕೂಡಿ 1 ಯೋಗಿಜನರ ಹೃದಯದೊಳು ನಿಖರವಾಗಿಇರುವ ಭೋಗಿಶಯನನಾಗಿ ಇರುವ ಪುಣ್ಯ ಪುರುಷನಾ ಸಾಗರಾನಸುತಿಯರಾಳ್ವ ಸಾರ್ವಭೌಮನ ಬೇಗ ಭಜಿಸಿ ಗತಿಯು ಕಾಣ್ವ ಭಾಗವತರ ಸಂಗದಲ್ಲಿ 2 ದುಷ್ಟ ಜನರ ಸಂಗವೆಂಬುದು ದೂರಮಾಡೋ ನೀ ಶಿಷ್ಟ ಜನರ ಪಾದ----------ಯಾಗೋ ನೀ ಇಷ್ಟದಿಂದ ವಿಷ್ಣು ಚಿಂತನೆ ಹಿತದಿ ಮನದಿ ನೀ ನಿಷ್ಠೆಯುಳ್ಳವನು ಆಗಿ ಕೃಷ್ಣ ಹೊನ್ನ ವಿಠ್ಠಲರಾಯನಾ 3
--------------
ಹೆನ್ನೆರಂಗದಾಸರು
ಮುಂದೆ ಗಾಣದೆ ದಾರಿ ಮುದಿಗೆ ಬಿದ್ದು | ಹಿಂದು ನೋಡದೆಬಂದದ್ದು ಬರಲೆಂದು ತಾಳದೊ ಕಂದಗಳ ಪ್ಯಾಡುತಲಿದಿನ ಸುಖವೆಂದೆಂದಿಗೂ ಬೇಕೆಂದು ಬೆಂದ ಭವದಂದದಿಗೆ ನಾ ಕುಂದದೆ ನೊಂದೆ ನಿನಗೆ ವಂದಿಸದೆ 1 ದೇವ ಕಾಯಯ್ಯ ಆವ ದೈವಕ ಬಾಹದೆ | ದಯಾಭಾವಿಸಲ್ಯಾಕ ಭಾವಜಾನಯ್ಯ | ಕಾಮನ ಕಾಟಿಗೆ ಕಂಗೆಡಿಸುವದುರ್ಭಾವಗಳನು ಪರಿಹರಿಸೈ | ಹಾವಿನ ಹಗಿಹಗಳಲಿವಿಹರಿಸುತಿಹ ಜೀವದ ಜೀವನದೊಡೆಯ 2 ಕರ ವಿಡಿದಿಂದುದ್ಫಸದಿಹದು ಬಾಹಳರದು 3
--------------
ರುಕ್ಮಾಂಗದರು
ಮುಂದೆ ನಡಿ ಬೇಗ ಬೇಗನೆ ಪ ಮುಂದೆ ನಡಿ ಬೇಗ ಬೇಗನೆ ನಂದತನಯ ನಾರಿ ಪತಸಿಇಂದು ನಿನ್ನ ಬೇಡಿಕೊಂಬೆ ಸುಂದರಾಂಗ ಸಣ್ಣ ಕೂಸೆ ಅ.ಪ ಕಾಲಿನೊಳಗೆ ರುಳಿಯ ಗೆಜ್ಜೆ ಬಹಳ ಭಾರವಾಯಿತೇನೋನೀಲವಾಲೆಗಳನು ಮುಖದ ಮೇಲೆ ಮಾಡಿಕೊಂಡು ನಡೆಯೊ 1 ಗೋಪಿ ಮುತ್ತಿನಂಥ ಮುದ್ದು ಕೂಸ2 ಮೆಲ್ಲಮೆಲ್ಲನ್ಹೀಗೆ ಪೋದರೆ ಇಲ್ಲೆ ಕತ್ತಲಾಯಿತಯ್ಯಗೊಲ್ಲರ್ಹುಡುಗ ಇಂದಿರೇಶ ಇಲ್ಲೆ ನಿಲ್ಲೊ ಎತ್ತಿಕೊಂಬೆ 3
--------------
ಇಂದಿರೇಶರು
ಮುದ್ದು ಮೋಹನ ಗುರುಗಳಂಘ್ರಿ | ಶ್ರದ್ಧಾ ಭಕುತೀಲಿಬುದ್ಧಿ ಪೂರ್ವಕ ಭಜಿಪ ಜನರ | ನ್ನುದ್ಧರೀಸುವಾ ಪ ಕರ್ಮ ನಿಷ್ಠಾತೃಸುಮ್ಮನಸ ವಿಜಯಗುರವ | ನಮ್ಮಿತುತಿಸುವ 1 ತೀರ್ಥಕ್ಷೇತ್ರ ಚರಿಸೂತ | ಮೂರ್ತಿದರ್ಶನಾಸಾರ್ಥಕವ ಮಾಡಿಕೊಂಡ | ತೀರ್ಥಪಾವನಾ |ಕಾರ್ತಸ್ವರೇತ್ಯಾದಿವಿತ್ತ | ಪಾರ್ಥಿವಸಮಾಶಾಸ್ತ್ರ ಪ್ರಾಕೃತಾದಿ ತಿಳಿಪ | ಹರಿ ಸರ್ವೋತ್ತಮ 2 ಶ್ರೀ ವರರಿಂದುಪದಿಷ್ಟ | ವಿಠಲ ಪ್ರತಿಷ್ಟಓ ವಿಸಾಧೀಸಲು ಹರಿಯೊಳ್ | ಪ್ರಾಯೋಪವಿಷ್ಟ |ಭಾವಿ ಬ್ರಹ್ಮನಲ್ಲಿ ಗುರು ಗೋವಿಂದ ವಿಠಲನಭಾವ ಅಷ್ಟ ಕುಸುಮದಿ | ಸೇವಿಸೀದನ 3
--------------
ಗುರುಗೋವಿಂದವಿಠಲರು
ಮುದ್ದು ಮೋಹನ ದಾಸರೇ ನಿಮ್ಮ | ಶುದ್ಧ ಪಾದವ ನಂಬಿದೇತಿದ್ದಿಯೆನ್ನಯನಾದ್ಯ ವಿದ್ಯೆಯ | ಬುದ್ಧಿ ನಿಲಿಸಿರಿ ಹರಿಯಲೀ ಪ ನಡುಮನೆ ದ್ವಿಜನೆಂಬನಾ | ವಡ್ಡಲೊಳು ಉದಿಸೀದನಾ |ಆಡ್ಯಮತವನುಕರಿಸಿದಾ | ದೊಡ್ಡ ಬಳ್ಳಾಪುರದಲೀ1 ವಿಕೃತಿ ಸಂವತ್ಸರದಲೀ | ಪ್ರಕೃತ ಜನ್ಮವ ಪಡೆದನಾಸುಕೃತ ಪೊಗಳುವ ಜನರ ದು | ಷ್ಕøತವ ನೀ ಪರಿಹರಿಸುವೀ 2 ಚಿಪ್ಪಗಿರಿ ಸುಕ್ಷೇತ್ರದೀ | ಗೊಪ್ಪ ಶ್ರೀ ಅಂಕಿತವನೂ ಅಪ್ಪ ಶ್ರೀ ವರರಿಂದಲೀ | ವಪ್ಪಿ ನೀ ಕೈಗೊಂಡೆಯೋ 3 ಮೂರೊಂದು ಸಲ ಶ್ರೀಕಾಶಿಗೇ | ಭೂರಿಸಲ ಶ್ರೀ ಉಡುಪಿಗೇಸಾರಿ ವೆಂಕಟ ಪತಿಯನೂ | ಬಾರಿ ಬಾರಿಗೆ ನೋಡಿದೇ4 ದಾಸ ಪೀಳಿಗೆ ಬೆಳೆಸಲೂ | ಶೇಷನಾಮಕ ದಿವಿಜಗೇಭಾಸಿಸುವ ಅಂಕಿತವನಿತ್ತೂ | ಪೋಷಿಸಿದೆ ಸದ್ವೈಷ್ಣವತತ್ವ 5 ಸುಜನ ಜನ ಸಂಸೇವಿಸೆ | ವಿಜಯ ವಿಠಲನ ಸ್ಥಾಪಿಸೇಭಜನೆ ಗೈಯುತ ಮೆರೆದೆಯೊ | ನಿಜಪುರದಿ ನೀ ನಿಲ್ಲುತಾ 6 ಸಿರಿಯಧರಿಸಿ ಮೆರೆಯುವ ಗುರು | ಗೋವಿಂದ ವಿಠಲನ ಭಜಿಸುವಾಪರಮ ಗುರುಗಳೆ ನಿಮ್ಮ ಚರಣವ | ಪರಿಪರೀಯಲಿ ಪೂಜಿಪೆ 7
--------------
ಗುರುಗೋವಿಂದವಿಠಲರು
ಮುದ್ದು ಮೋಹನದಾಸರೆ | ಎನ್ನನು ಬೇಗ ಉದ್ಧರಿಸಿರಿ ಪ್ರೀತರೆ ಪ. ಬಿದ್ದಿಹೆ ದುರ್ವಿಷಯಾಂಧ ಕೂಪದೊಳೀಗ ಶುದ್ಧ ಜ್ಞಾನವನಿತ್ತು ಪದ್ಮನಾಭನ ತೋರಿ ಅ.ಪ. ಪರಮಯತಿಚರ್ಯರೆ | ಈ ಜಗದೊಳು ವರ ಭಕ್ತಿವೆಗ್ಗಳರೆ ತರಳತನದಲಿ ಪಾದಚಾರಿಗಳಾಗಿ ಧರೆಯ ಕ್ಷೇತ್ರವನೆಲ್ಲ ಚರಿಸಿರ್ಪ ವಶಗೈದು ಹರಿಯ ಮೆಚ್ಚಿಸಿ ದಾಸಭಾವದಿ ಪರಿಪರಿಯ ಅಂಕಿತದಿ ಶಿಷ್ಯರ ಪರಮ ಸಂಭ್ರಮಗೊಳಿಸಿ ಮೆರೆಯುತ ಸಿರಿವರನ ಪದಸಾರಿದಂಥ 1 ಶೀಲವಂತರೆ ನಿಮ್ಮನು | ಕೊಂಡಾಡೆ ಈ ಸ್ಥೂಲಮತಿಗೆ ಸಾಧ್ಯವೆ ಕಾಲಕಾಲದಿ ಹರಿಲೀಲೆಯ ಪಾಡುತ ನೀಲವರ್ಣನ ಹೃದಯಾಲಯದಿ ಕಂಡು ಮೂಲರೂಪಿಯ ಪಾದಕಮಲದಿ ಲೋಲುಪಡುತಲಿ ಓಲ್ಯಾಡಿದ ಬಹು ಶೀಲಗುಣಗಣಪಾಲರೆ ಎನ್ನ ಪಾಲಿಸಿರಿ ಸಿರಿಲೋಲನ ತೋರಿ 2 ಸಂದೇಹವಿನ್ಯಾತಕೆ | ಮಂತ್ರದ ಮನೆ ಮಂದಿರದೊಳಗಿರೆ ಬಂದಿರಿ ದಾಸತ್ವದಿಂದ ಧರೆಯೊಳು ನಂದಕಂದನ ಲೀಲೆ ಅಂದ ಪಾಡುತಲಿ ಅಂದು ಗ್ರಂಥಗಳನೋದಿ ಪದವನು ಒಂದು ರಚಿಸಿ ಸಾಲದೆ ಮು- ಕುಂದನಾ ಗುಣವೃಂದ ಪೊಗಳಲು ಚಂದದಿಂದ ವಸುಂಧರೆಯೊಳು 3 ವರತತ್ವ ಅಂಶದಲಿ | ಶ್ರೀ ಗುರುವಿಗೆ ತಾರಕರೆನಿಸಿದಿರಿ ಸಾರಿರೆ ನಿಮ್ಮ ಪದ ಸ್ವಪ್ನದೊಳು ತೋರಿ ತೀರುಥವನೆ ಕೊಟ್ಟು ಸುಮ್ಮನಿರಲು ಗುರು ಸಾರಿ ಬಂದು ಬದಿಯಲಿ ನಿಂದು ಭೂರಿ ಕರುಣವ ಮಾಡಬೇಕೆಂದು ತೋರಿ ಪೇಳಲು ಹರಿ ನಿರ್ಮಾಲ್ಯ ಅಪಾರ ಕರುಣದಿ ಕೊಟ್ಟು ಪೊರೆದಿರಿ 4 ಸ್ತುತಿಸಲಳವೆ ನಿಮ್ಮನು | ಈ ಜಡಮತಿ ಕೃತಕವಲ್ಲವು ಇದಿನ್ನು ಅತಿಪ್ರೇಮ ಗುರುಗಳ ಹಿತದಿಂದ ನುಡಿದುದು ಚ್ಯುತದೂರ ಗೋಪಾಲಕೃಷ್ಣವಿಠ್ಠಲನ ಸತತ ಸ್ತುತಿಸುವ ಮತಿಯ ಪಾಲಿಸಿ ಪಥವ ತೋರಿರಿ ಕರ್ಮಜರೆ ಬೇಗ ಸತತ ಶ್ರೀ ಗುರು ವ್ರತವ ಪಾಲಿಪ ಮತಿಯ ದೃಢದಲಿ ಹಿತದಿ ಕರುಣಿಸಿ 5
--------------
ಅಂಬಾಬಾಯಿ
ಮುದ್ದು ವೆಂಕಟ ವಿಠಲ | ಬುದ್ಧಿ ಪ್ರೇರಕನೇ ಪ ಉದ್ವೇಗ ಕಳೆದು ಸ | ದ್ವಿದ್ಯ ಪ್ರದನಾಗೋ ಅ.ಪ. ಭವ ಕೂಪದಿಂದೆತ್ತಿಓದಿ ಕರೆದ್ಯೊದುದನ | ಭಾವುಕಗೆ ತಿಳಿಪೇ 1 ಮಾನವ ಮನದಿ | ಶಂಕಿಸುತ್ತಿರಲೂಕೊಂಕುಗಳ ಪರಿಹರಿಪ | ವೆಂಕಟೇಶ ನಾನುಅಂಕನವ ದಯೆಗೈಸಿ | ಸಂಕಟವ ಕಳೆದಾ 2 ಸೃಷ್ಟಿ ಸ್ಥಿತಿ ಸಂಹಾರ | ಅಷ್ಟ ಕರ್ತೃಕ ಹರಿಯೆಪುಷ್ಠತವ ಮಹಿಮೆಗಳ | ಶಿಷ್ಟನಿಗೆ ತೋರೀಕಷ್ಟಗಳ ಪರಿಹರಿಸಿ | ಸುಷ್ಠು ಪಾಲಿಪುದಿವನಜಿಷ್ಣು ಸಖ ಭ್ರಾಜಿಷ್ಣು | ಕೃಷ್ಣ ಮೂರುತಿಯೇ 3 ಭವ ಬಂಧ ಕಳೆಯೋಮಧ್ವಶಾಸ್ತ್ರದಿ ಮನವು | ಸುವಿಚಾರಗೈವ ಪರಿಶ್ರೀ ವರನೆ ಕೃಪೆಗೈದು | ತತ್ವಗಳ ತಿಳಿಸೋ 4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮುದ್ದು ಸುರಿಯುತಾನೆ ನೋಡಿ ಕೃಷ್ಣ ಪ ಮುದ್ದು ಸುರಿಯುತಾನೆ ಸಿದ್ಧ ಜನರ ವಂದ್ಯ ಮಧ್ವವಲ್ಲಭ ಕೃಷ್ಣ ಹೃದ್ವನಜದಲಿ ಬಲ್ ಅ.ಪ ತ್ರಿವಂಗಿ ಭಾವದಿ ಶ್ರೀ ವೇಣುಪಿಡಿದು ತಾ ಸಾವೇರಿ ಮೊದಲಾದ ರಾಗವ ಪಾಡುತ1 ಬಲದ ಪಾದದಿ ಚೆಲುವ ಎಡದ ಪಾದವನಿಟ್ಟು ನಳಿನಮುಖಿ ರುಕ್ಮಿಣಿ ಬಲ ಸತ್ಯಭಾಮೇರಿಂದ 2 ಧ್ವಜ ವಜ್ರಾಂಕುಶ ಚಕ್ರ ಕಂಜಚಿನ್ಹೆಗಳಿಂದ ತೇಜ ಮುಕುಟ ಶಿರಶ್ಚಕ್ರ ಶೋಭಿತಮುಖ 3 ಶ್ರೀ ಪಾದರಾಯರಿಗೆ ಸ್ವಪ್ನಲಬ್ಧನಾಗಿ ಶ್ರೀ ಪದ್ಮಭವಂದ್ಯ ಪ್ರತ್ಯಕ್ಷ ವ್ಯಾಸಮುನಿಗೆ 4 ಶ್ರೀ ನರಹರಿಯು ತಾ ನೆನೆಯುವರಿಗೆ ಭವ ಕಾನನದ ಭಯದ ಮನ ಶಂಕಿಸದಿರೆಂದು5
--------------
ಪ್ರದ್ಯುಮ್ನತೀರ್ಥರು