ಒಟ್ಟು 5051 ಕಡೆಗಳಲ್ಲಿ , 129 ದಾಸರು , 3317 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೈ ರಂಗ ಬಾರೈ ಕೃಷ್ಣ ಬಾರೈ ದೇವ ಕೃಷ್ಣತೋರೈ ನಿನ್ನಯ ಚಾರುಚರಣವತೋಯಜಾಕ್ಷಪಘಲು ಘಲುರೆನ್ನುತ ರುಳಿಗೆಜ್ಜೆಯನಿಟ್ಟು ಬಾರೈ ದೇವ ಕೃಷ್ಣಕುಣಿಕುಣಿಯುತ ಬಾ ಕುಂತಿಸುತರಪ್ರಿಯ ಬಾರೈ ದೇವ ಕೃಷ್ಣಥಳಥಳಿಸುವ ಪೀತಾಂಬರ ಹೊಳೆಯುತ ಬಾರೈ ದೇವ ಕೃಷ್ಣನಡುವಿಲಿ ಹೊಳೆಯುತ ಪಟ್ಟೆವಲ್ಲಿಯು ಬಾರೈ ದೇವ ಕೃಷ್ಣ 1ಕಂಕಣ ಕರಭೂಷಣಗಳು ಹೊಳೆಯುತ ಬಾರೈ ದೇವ ಕೃಷ್ಣಪಂಕಜನಾಭಪಾರ್ಥಸಖನೆ ಕೃಷ್ಣ ಬಾರೈ ದೇವ ಕೃಷ್ಣಶಂಖ ಚಕ್ರಗಳ ಧರಿಸುತ ಮುದದಲಿ ಬಾರೈ ದೇವ ಕೃಷ್ಣಶಂಕಿಸದೆಲೆ ಬಾ ಬಿಂಕವ ತೊರೆದು ಬಾರೈ ದೇವ ಕೃಷ್ಣ 2ಮುಂಗುರುಳಲಿ ಮುತ್ತಿನರಳೆಲೆ ಹೊಳೆಯುತಬಾರೈ ದೇವ ಕೃಷ್ಣಶೃಂಗಾರದ ಕಿರೀಟವು ಹೊಳೆಯುತಬಾರೈ ದೇವ ಕೃಷ್ಣಸುಂದರ ಕಸ್ತೂರಿ ತಿಲಕವು ಹೊಳೆಯುತಬಾರೈ ದೇವ ಕೃಷ್ಣಕಂಧರದಲಿ ಶೋಭಿಪ ಪದಕಗಳಿಂದಬಾರೈ ದೇವ ಕೃಷ್ಣ 3ಪೊಂಗೊಳಲೂದುತ ಹೆಂಗಳರೊಡನೆಬಾರೈ ದೇವ ಕೃಷ್ಣಮಂಗಳ ಮಹಿಮ ವಿಹಂಗವಾಹನ ಕೃಷ್ಣಬಾರೈ ದೇವ ಕೃಷ್ಣಅಂಗಳದೊಳಗಾಡುತ ನಲಿಯುತ ಬಲು ಚಂದದಿಬಾರೈ ದೇವ ಕೃಷ್ಣಇಂದಿರೆಯರಸನೆ ವಂದಿಸಿ ಬೇಡುವೆ ಬಾರೈ ದೇವ ಕೃಷ್ಣ 4ಕಿಲಿಕಿಲಿನಗುತಲಿ ಕುಣಿಕುಣಿಯುತಬೇಗ ಬಾರೈ ದೇವ ಕೃಷ್ಣಕನಕಾಭರಣಗಳಿಂದೊಪ್ಪುತ ಬೇಗ ಬಾರೈದೇವ ಕೃಷ್ಣನಲಿನಲಿಯುತ ಬಾ ಮಣಿಯುತ ಬೇಡುವೆಬಾರೈ ದೇವ ಕೃಷ್ಣದಣಿಸದೆ ಕಮಲನಾಭವಿಠ್ಠಲ ಬೇಗ ಬಾರೈ ದೇವ ಕೃಷ್ಣ 5
--------------
ನಿಡಗುರುಕಿ ಜೀವೂಬಾಯಿ
ಬಾರೋ ಗೋಪಾಲ ಬಾಲ ಸುಶೀಲದೇವಕಿ ಬಾಲಕಂಸಾರಿಶ್ರೀಲೋಲಪಗುರುಳು ಕೂದಲು ಹೊಸ ಅರಳೆಲೆಹೊಳಪುಕೊರಳ ಕೌಸ್ತುಭಹಾರ ಸರಗಳ ಝಳಪು 1ಮುದ್ದು ಬಾಲನೆ ಹೊಸ ಬೆಣ್ಣೆಮುದ್ದೆಯ ನೀವೆಸದ್ದು ಮಾಡದೆ ಬಾರೊ ಉದ್ಧವÀಸಖನೆ 2ಕಂಠದೊಳಸಲಿ ವೈಕುಂಠ ಶ್ರೀಪತಿಗೆಸೊಂಟಗೆಜ್ಜೆಯು ಕಿರುಗಂಟಿಗಳೊಲಿಯೆ 3ಭಕ್ತಿಯಿಂದಲಿ ಕರವೆತ್ತಿ ಪ್ರಾರ್ಥಿಸುವೆನುಅಪ್ರಮೇಯನೆ ಪುರುಷೋತ್ತಮ ನಮಿಪೆ 4ಕರುಣದಿಂದಲಿ ಬಾರೊಕಮಲಸಂಭವನಯ್ಯಕಮಲನಾಭ ವಿಠ್ಠಲ ನಮಿಸುವೆ ಸತತ 5
--------------
ನಿಡಗುರುಕಿ ಜೀವೂಬಾಯಿ
ಬಾರೋ ದೇವ ದೇವನೇ ಭಾವಜಾರಿಪ್ರಿಯನೆಬಾರೊ ಮನೆಗೆ ಶ್ರೀನಿವಾಸನೆ ಪಬಾರೊ ಭಾಮೆ ರುಕ್ಮಿಣೀಶಬಾರೋಯೋಗಿಹೃದಯವಾಸಬಾರೊ ಭಕ್ತಜನರ ಪೋಷನೇ 1ನಂದ ಗೋಪ ತನಯಗೋಪ-ವೃಂದದೊಳಗೆ ಕುಣಿದು ಮೆರೆದುಮಂದರೋದ್ಧರಮದನಜನಕನೇ2ಅಂದಿಗೆ ಕಾಲ್ಗೆಜ್ಜೆ ನಾದ-ದಿಂದ ಕುಣಿದು ನೆರೆದು ನಲಿದುಸುಂದರಾಂಗ ಶುಭಕರಾಂಗನೇ 3ಸರಿಗೆ ನಾಗಮುರಿಗೆ ಮುತ್ತಿನಸರಗಳ್ಹೊಳಯೆ ಉರದಿ ಲಕ್ಷ್ಮಿಜರಿಪೀತಾಂಬರ ಧಾರಿ ಶೌರಿಯೇ 4ಕೋಟಿ ಸೂರ್ಯಕಾಂತಿ ಮುಖಲ-ಲಾಟ ಕಸ್ತೂರಿ ತಿಲಕ ಶಿರದಿ ಕಿ-ರೀಟ ಧರಿಸಿ ಮೆರೆವ ದೇವನೇ 5ಮುರಳಿ ನುಡಿಸಿ ತರುಣಿಯರನುಮರುಳು ಮಾಡಿ ತುರುಕರುಗಳಪೊರೆದಕಮಲನಾಭವಿಠ್ಠಲನೆ6
--------------
ನಿಡಗುರುಕಿ ಜೀವೂಬಾಯಿ
ಬಾರೋ ನಮ್ಮ ಮನೆಗೆ ಬೇಗನೆ ಗೋಪಾಲಕೃಷ್ಣಬಾರೋ ಶ್ಯಾಮ ಸುಂದರಾಂಗನೆ ಪಬಾರೊ ಭಾಮೆ ರುಕ್ಮಿಣೀಶ ಬಾರೊಯೋಗಿಹೃದಯವಾಸಬಾರೊ ದ್ವಾರಕಾಪುರೀಶ ಬಾರೊ ಭಕ್ತಜನರ ಪೋಷ ಅ.ಪಅಂದಿಗೆ ಕಾಲ್ಗೆಜ್ಜೆ ಸರಪಣಿ ಪಾಡಗರುಳಿಯುಕೆಂದಾವರೆಯು ಪೋಲ್ವಪಾದದಿನಂದಗೋಪತನಯಗೋಪವೃಂದದೊಳಗೆ ಕುಣಿದು ನಲಿದುಇಂದಿರೇಶ ಶ್ರೀಶನೆ ಬಂದೊಂದುಹೆಜ್ಜೆನಿಡುತ ಮುದದಿ 1ಉಟ್ಟದಟ್ಟಿಯು ಪಟ್ಟೆಚಲ್ಲಣ ಹವಳಕಟ್ಟುಗಟ್ಟಿ ಸರಪಣಿ ಕಿರುಗಂಟೆಯುಕಟ್ಟಿದ ಉಡುದಾರಗೆಜ್ಜೆಶ್ರೇಷ್ಠತನದಿ ಮೆರೆಯುತಿರಲುಪುಟ್ಟಬಾಲರೊಡನೆ ಪುಟ್ಟಪುಟ್ಟ ಹೆಜ್ಜೆನಿಡುತ ನಲಿದು 2ದುಂಡು ಕರಕೆ ಗುಂಡು ಬಿಂದಲಿ ಮುಂಗೈಮುರಿಗೆಉಂಗುರಗಳು ಶೋಭಿಸುತಲಿಬಂದಿ ಬಾಪುರಿಗಳು ತೋಳಬಂದಿ ನಾಗಮುರಿಗಿ ಕರದಿಚಂದ್ರನನ್ನು ಪಿಡಿದು ನಲಿದಸುಂದರಾಂಗ ಚೆಲುವ ಕೃಷ್ಣ 3ಪದಕ ಮುತ್ತಿನ ಸರಗಳ್ಹೊಳೆಯುತವೈಜಯಂತಿಮಾಲೆಸರಿಗೆ ಏಕಾವಳಿಗಳೊಲಿಯುತಪದುಮನಾಭ ನಿನಗೆ ದಿವ್ಯಮುದದಿಕೌಸ್ತುಭಮಾಲೆ ಹೊಳೆಯೆಯದುಕುಲೇಶ ಉಡುಪಿವಾಸಉದದಿ ಶ್ರೀಶಉದ್ಧವಸಖನೆ4ಸೋಮಸೂರ್ಯರ ಕಾಂತಿ ಸೋಲಿಪ ಮುಂಗುರುಳು ಮುಖವುಕಾಮಜನಕ ಕಮಲಲೋಚನಹೇಮಮಣಿ ಕಿರೀಟಕುಂಡಲಪ್ರೇಮತೋರ್ವ ಫಣಿಯ ತಿಲಕಶ್ರೀ ಮಹೀಶ ಶ್ರೀಶನೆ ಶ್ರೀ-ಕಮಲನಾಭ ವಿಠ್ಠಲ ಒಲಿವ 5
--------------
ನಿಡಗುರುಕಿ ಜೀವೂಬಾಯಿ
ಬಾರೋ ಬಾ ಮನೆಗೇ ರಂಗಯ್ಯ ನೀ |ತೋರೋ ಮುಖವೆನಗೆ ಪಘೋರಶರೀರ ಸುಂ |ದರಸೂಕ್ಷ್ಮಾಕಾರನೆ |ಕ್ರೂರ ದಯಾಕರ ಧೀರ ಉದಾರಿಯೆ ಅ.ಪನೀಲಮೇಘ ಶ್ಯಾಮ ನಿರ್ಮಲವನ | ಮಾಲ ಪೂರ್ಣಕಾಮ |ಕಾಲಭಯ ವಿದೂರ | ಫಾಳನೇತ್ರನಮಿತ್ರ|ಪಾಲಾಬ್ಧಿವಾಸ ಶ್ರೀಲೋಲ ಗೋಪಾಲನೇ 1ಶೇಷಶಯನ ದೇವಾ | ಭಕ್ತರಭವ|ದೋಷಹರ ಸಂಜೀವಾ |ನಾಶರಹಿತ ಸರ್ವ | ಆಶವಿನಾಶನ |ಭಾಸುರಾಂಗನೆ ಜಗ | ದೀಶ ಕೇಶವಮೂರ್ತಿ 2ಕಾಲೊಳಂದುಗೆಯೂ | ಪೀತಾಂಬರ |ಶಾಲುಮುದ್ರಿಕೆಯೂ | ತೋಳ ಸರಿಗೆ ಬಳೆ |ವೈಜಯಂತಿಯ ಮಾಲೇ ಮೇಲಾದರತ್ನಕಿರೀಟಕುಂಡಲಧಾರೀ | ಗರುಡನ ಏರಿ 3ಶಂಕೆಯಿಲ್ಲದ ಭಕ್ತರೂ | ನಿನ್ನಯ ಸದೃ-ಶಾಂಕದಿ ಸೇವಿಪರೂ | ಶಂಖಚಕ್ರಗದಾ |ಪದ್ಮವ ಧರಿಸಿದ | ಪಂಕಜನೇತ್ರವೈ- |ಕುಂಠ ವೆಂಕಟಪತೇ 4ಧಾರುಣಿ ಭಾರವನೇ | ಇಳುಹಲವ |ತಾರಗಳೆತ್ತುವನೆ |ಚಾರುಭುಜಾನ್ವಿತ |ಕೌಸ್ತುಭಮಣಿಹಾರ | ವಾರಿಜನಾx
--------------
ಗೋವಿಂದದಾಸ
ಬಾರೋ ಬಾರೋ ಭಯನಿವಾರಣ ಕೃಷ್ಣ |ಬಾರೋ ಬಾರೋ ದಯಸಾಗರನೇ ದೇವಾ ಪನಳಿನೋದರ ಮೋಹನ ಕಾಮಿತರೂಪ |ನಳಿನದಳಾಯತ ನಯನ ಗೋವಳರಾಯ 1ನಿತ್ಯಾನಂದ ನೀಲಾಂಗ ನಿರ್ಮಲಚಿತ್ತ |ಧಾತ್ರಿಜಾಂತಕವಾಸುದೇವದೇವಕಿ ಪುತ್ರ 2ನಂದಾನಂದ ಮುಕುಂದ ಸುಂದರಕಾಯ|ಇಂದಿರೆಯರಸಗೋವಿಂದದಾಸನ ಪ್ರೀಯ 3
--------------
ಗೋವಿಂದದಾಸ
ಬಾರೋ ಮಗನೆ ಬಳಲಿದೆಯಾಡಿಬಾರೊ ಮಗನೆ ಪ.ಎಲ್ಲಿಗೆ ಹೋಗಿದ್ಯೊ ಎನ್ನೆದೆಝಲ್ಲು ಝಲ್ಲು ಎನುತಲಿದೆಮೆಲ್ಲೆದೆಗಾರ್ತಿ ಗೊಲ್ಲತೀರು ನಿನ್ನಗಲ್ಲ ಕಚ್ಚಿಹರಲ್ಲೊ ಹಸುಳೆ 1ಬಾಡಿತೊವದನಇಂದಾರೊಳುಮಾಡಿದ್ಯೊಕದನಕಾಡುವ ಬಾಲ ಪ್ರೌಢಿಯರ ತೋರಿಸುನಾಡ ಬಿಟ್ಟವರನೋಡಿಸುವೆ ನಡೆ 2ಕೂಸಿನಾಟವಲ್ಲೊ ಜಟ್ಟಿಗನವಿೂಸಲಂಜಿಕಿಲ್ಲೊಹೇಸದೆ ಬೆಣ್ಣೆಯ ಸವಿದು ನಿರ್ದೋಷ ಕೃಷ್ಣ ನೀ ಘಾಸಿಯಾದೆ 3ಕೋಮಲಾಂಗವಿದು ಕಲ್ಲೆದೆಕಾಮಿನಿಯರೊಯಿದುಕಾಮುಕಿಯರತಿ ಪ್ರೇಮದಲಪ್ಪಪ್ಪಿದಾಮಸಡಿಲ್ಯದೆ ಶ್ರೀಮುರಾರಿ4ಮುದ್ದಿನಾಮೃತೆ ಬಾ ಪೊಂದೊಟ್ಟಿಲೊಳ್ನಿದ್ರೆಗೈಯಲಿಲ್ಲ ಎದೆಗದ್ದಿಗೆಲಿದ್ದು ನಲಿದಾಡೊ ಪೂರ್ಣಶುದ್ಧ ಪ್ರಸನ್ವೆಂಕಟ ಶ್ರೀಕೃಷ್ಣ 5
--------------
ಪ್ರಸನ್ನವೆಂಕಟದಾಸರು
ಬಾರೋ ವೆಂಕಟಗಿರಿನಾಥ| ದಯ-ದೋರೈ ಭಕುತರ ಪ್ರೀತ ಪ.ಮಾರಪಿತ ಗುಣಹಾರ ಮಂದರ-ಧಾರ ದೈತ್ಯಸಂಹಾರ ಸುಜನೋದ್ಧಾರ ಮಮಹೃದಯಾರವಿಂದಕೆಬಾರೋ ಕೃಪೆದೋರೋ ವೆಂಕಟ ಅ.ಪ.ವೃಷಭಾಸುರನೊಳು ಕಾದಿ ಸಾ-ಹಸವ ಮೆರೆಸಿದ ವಿನೋದಿವಶಗೈದು ದೈತ್ಯನ ಶಿರವ ಕತ್ತ-ರಿಸುತಲಿ ನೀನಿತ್ತೆ ವರವವಸುಧೆಯೊಳಗಿಹ ಸುಜನರನು ಮ-ನ್ನಿಸುತಲಿಷ್ಟವನಿತ್ತು ಕರುಣಾ-ರಸದಿ ಸಲಹುವ ಬಿಸಜನಾಭ ಶ್ರೀ-ವೃಷಭಾಚಲವೊಡೆಯ ವೆಂಕಟ 1ಅಂಜನೆಯೆಂಬಳ ತಪಕೆ ಭಕ್ತ-ಸಂಜೀವನೆಂಬ ಶಪಥಕೆರಂಜಿಪ ಪದವಿತ್ತೆ ಮುದದಿ ಖಿಲ-ಭಂಜನಮೂರ್ತಿ ಕರುಣದಿ|ಮಂಜುಳಾಂಗ ಶ್ರೀರಂಗ ಸುರವರಕಂಜಭವವಿನುತಾದಿ ಮಾಯಾ-ರಂಜಿತಾಂಘ್ರಿ ಸರೋರುಹದ್ವಯಅಂಜನಾಚಲವೊಡೆಯ ವೆಂಕಟ 2ಶೇಷನ ಮೊರೆಯ ತಾಕೇಳಿಬಲುತೋಷವ ಮನಸಿನೊಳ್ತಾಳಿದೋಷರಹಿತನೆಂದೆನಿಸಿ ಕರು-ಣಾಶರಧಿಯ ತಾನೆ ಧರಿಸಿಶ್ರೀಶಹರಿಸರ್ವೇಶ ನತಜನ-ಪೋಷ ದುರ್ಜನನಾಶ ರವಿಶತ-ಭಾಸ ಕೌಸ್ತುಭಭೂಷವರಶ್ರೀ-ಶೇಷಾಚಲವಾಸ ವೆಂಕಟ 3ಮಾಧವವಿಪ್ರ ವಿರಹದಿ ಭ್ರಷ್ಟಹೊಲತಿಗಳನು ಸೇರ್ದ ಮುದದಿಸಾದರದಲಿ ನಿನ್ನ ಬಳಿಗೆ ಬರೆನೀ ದಯಾನಿಧಿ ಕಂಡು ಅವಗೆಶೋಧಿಸುತ ಪಾಪಗಳೆಲ್ಲವಛೇದಿ ಬಿಸುಡುತನಿಂದುವೆಂಕಟ-ಭೂಧರದ ನೆಲೆಯಾದ ನಾದವಿ-ಭೇದಬಿಂದು ಕಲಾದಿಮೂರುತಿ 4ಧನಪತಿಯೊಳು ತಾನು ಸಾಲಕೊಂಡಘನಕೀರ್ತಿಯಿಂದ ಶ್ರೀಲೋಲವನಿತೆ ಪದ್ಮಾವತಿಪ್ರೀತ ಭಕ್ತ-ಜನಸುರಧೇನು ಶ್ರೀನಾಥವನಧಿಶಯನ ಮುರಾರಿಹರಿಚಿ-ಧ್ವನಿನಿಭಾಂಗ ಸುಶೀಲ ಕೋಮಲವನಜನಾಭನೀಯೆನ್ನ ಕೃಪೆಯೊಳ-ಗನುದಿನದಿ ಕಾಯೊ ಕೃಪಾಕರ 5ಛಪ್ಪನ್ನೈವತ್ತಾರು ದೇಶದಿಂದಕಪ್ಪವಗೊಂಬ ಸರ್ವೇಶಅಪ್ಪ ಹೋಳಿಗೆಯನ್ನುಮಾರಿಹಣ-ಒಪ್ಪಿಸಿಕೊಂಬ ಉದಾರಿಸರ್ಪಶಯನ ಕಂದರ್ಪಪಿತ ಭಜಿ-ಸಿರ್ಪವರ ಸಲಹಿರ್ಪ ಕುಜನರದರ್ಪಹರಿಸುತ ಕಪ್ಪಕಾಣಿಕೆಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6ಚಾರುಚರಣತೀರ್ಥವೀಂಟಿ ನಿನ್ನೊ-ಳ್ಸಾರಿ ಬರುವ ಪುಣ್ಯಕೋಟಿಸೇರಿದೆ ಕೊಡು ಮನೋರಥವ ಲಕ್ಷ್ಮೀ-ನಾರಾಯಣನೆನ್ನೊಳ್ದಯವತೋರುನಿರತಸಮೀರಭವ ವರ-ದಾರವಿಂದದಳಾಕ್ಷ ತಿರುಪತಿವೀರ ವೆಂಕಟರಮಣ ಮದ್ಬಹು-ಭಾರನಿನ್ನದು ಪಾಲಿಸೆನ್ನನು7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಾಲನ ನೋಡಿರೆನಿವಾಳಿಸಿಆಡಿರೆಕಾಲಅಂದುಗೆಕೈ ಕುಣಿಸದೆ ಸವಿಮಾತಾಲಿಪನ ನಮ್ಮಪ್ಪನ ಪ.ಬಾಲಕರನ್ನನ ಉಂಗುರುಗುರುಳಿನ ಸುಳಿಯೊಭೃಂಗಾವಳಿಯೊ ಶ್ರೀಲೋಲನ ವಿಸ್ತರ ಬಾಳವು ಕಳೆಗೇಡಿಯೊಪೊಂಗನ್ನಡಿಯೊಪಾಲ್ಗಡಲ ಪ್ರಭುವಿನೀ ಬಟ್ಟಗಲ್ಲಗಳೊಮರಿಯಾವಿಗಳೊಶೂಲಿಯ ಮುತ್ತಿದ ತಿದ್ದಿದ ಹುಬ್ಬಿನ ಹೊಳವೊನಿಂಬ ಸುದಳವೊ 1ಯದುಕುಲ ತಿಲಕನ ಢಾಳಿಪ ಕಂಗಳ ಠಾವೊತಾವರೆ ಹೂವೊಮದನನಯ್ಯನ ಮೀಟಿದ ಮೂಗಿನ ಕೊನೆಯೊಸಂಪಿಗೆ ನನೆಯೊಸದಮಲ ಲೀಲನ ಸೊಬಗಿನ ನಾಸಾಪುಟವೊಮುತ್ತಿನ ಬಟುವೊವಿಧುವಂಶೇಂದ್ರನ ವೃತ್ತ ಮನೋಹರ ವದನೊಮೋಹದ ಸದನೊ 2ಸುರರುಪಕಾರಿಯ ಎಳೆದುಟಿಯ ಕೆಂಬೊಳವೊಬಿಂಬದ ಫಲವೊಗರುಡಾರೂಢನ ಮೊಳೆವಲ್ಲುಗಳ ಬಿಳುಪೊಕುಂದಕುಟ್ಮಳವೊಕರುಣಾಂಬುಧಿಯ ಕಿವಿ ಶುಕ್ತಿಯೊ ಗದ್ದೊಮುದ್ದಿನ ಮುದ್ದೊಶರಣರ ಪ್ರಿಯನ ತ್ರಿರೇಖೆಯ ಕಂದರವೊ ಸುಂದರದರವೊ 3ದೇವಕಿತನಯನ ಪುಷ್ಟಯುಗಳದೋರ್ದಂಡೊಕಲಭದ ಶುಂಡೊದೇವವರೇಣ್ಯನ ಕರತಳದಂಗುಲಿ ಸರಳೊಕೆಮ್ಮಾಂದಳಿಲೊಭಾವಿಕ ಜನಜೀವನ ಪೀನೋನ್ನತ ಉರವೊವಜ್ರದ ಭರವೊಸೇವಕಪಕ್ಷನ ಉದರದವಲ್ಲಿತ್ರಿವಳಿಯೊ ಅಮರರಹೊಳಿಯೊ 4ಅಜನಯ್ಯನ ಅಚ್ಯುತನ ನಾಭಿಯ ಸುಳಿಯೊಅಮೃತದೊಕ್ಕುಳಿಯೊತ್ರಿಜಗದ ಗರ್ಭ ವಿನೋದಿಗಳರಸನ ಮಣಿಯೊಪಚ್ಚದ ಮಣಿಯೊಸುಜನರ ಮಾನಿಯ ಬಟ್ಟದೊಡೆಯ ಸಂರಂಭೋಎಳೆವಾಳೆಯ ಕಂಭೋಗಜವರದನ ಗೋವಿಂದನ ಜಾನುಗಳ ಪೊಗರ್ವೊಹರಿಮಣಿಯ ಪೊಗರ್ವೊ 5ತ್ರಿಗುಣಾತೀತನಂತನ ಜಂಘಗಳಿಳಿಕ್ಯೊ ಶರಬತ್ತಳಿಕ್ಯೊನಿಗಮಾಗಮ್ಯನ ಚರಣಯುಗಂಗಳ ನಿಜವೊಅರುಣಾಂಬುಜವೊಮೃಗನರರೂಪನ ಅನುಪಮ ನಖಗಣ ಮಣಿಯೊಬಾಲಖಮಣಿಯೊಸುಗಮನ ಪದತಳದಂಕುಶ ಧ್ವಜಾಂಬುರೇಖೆÉ್ಯೂೀವಿದ್ಯುರ್ಲೇಖೆÉ್ಯೂ 6ಆಭರಣಗಳಿಗೆ ಆಭರಣವೆ ಎಳೆಗರುವೆ ಕಲ್ಪತರುವೆಸೌಭಾಗ್ಯದ ಶುಭಖಣಿಯೆ ನಂದಾಗ್ರಣಿಯೆ ಚಿಂತಾಮಣಿಯೆ ನಿನ್ನ ಬಿಗಿದಪ್ಪುವ ಭಾಗ್ಯವಿನ್ನೆಂತೊಉಮ್ಮುಕೊಡು ನಮ್ಮಮ್ಮಶ್ರೀಭೃತ ಪ್ರಸನ್ವೆಂಕಟ ಕೃಷ್ಣ ತಮ್ಮ ಬಾ ಪರಬೊಮ್ಮ 7
--------------
ಪ್ರಸನ್ನವೆಂಕಟದಾಸರು
ಬಿಟ್ಟು ಹೋಗುವರೇನೊ ಕೃಷ್ಣಕೋಮಲೆಯರವೃಷ್ಟಿವÀರ್ಯ ಸಕಲ ಇಷ್ಟದ ಬಾಲೆಯರ ಪ.ಮಿತ್ರೆಯರ ಕೂಡಿ ರಮಣ ಚಿತ್ತದಿ ಚಿಂತಿಸಿರಾತ್ರಿ ಕೊಳಲು ವಿಚಿತ್ರದಿಂದ ಊದಿದಿ 1ಎಲ್ಲ ವಿಷಯ ಬಿಟ್ಟು ನಿಲ್ಲದೆ ಬಂದರುಒಲ್ಲದೆ ಅಡಗಿದಿ ಕಲ್ಲೆದೆ ಅಂದ ಪಾರ್ಥ 2ಇಟ್ಟು ನಿನ್ನಲೆ ಮನ ಬಿಟ್ಟು ವಿಷಯ ಸುಖಗಟ್ಯಾಗಿ ರಾತ್ರಿಲೆ ಬಂದು ಎಷ್ಟು ನಂಬಿದ್ದಾರಲ್ಲೊ 3ಇಂಥ ವಂಚಕನೆಂದು ಕಾಂತೆಯರು ಅರಿಯರುಭ್ರಾಂತಿಯ ಗೈಸಿದಿ ಎಂತು ಅರ್ಜುನ ನುಡಿದ 4ಹಸಿದವಗೊಂದೆÉ ತುತ್ತು ಅಶನವÀ ಕೊಟ್ಟು ಅನ್ನವ್ಯಸನವ ಹಚ್ಚಿದಂತೆ ಕುಸುಮನಾಭ ಮಾಡಿದ 5ಬೆಂದು ಬಿಸಲೆÉೂಳು ಬಹಳ ಬಂದ ಪುರುಷಗೆಉದಕಒಂದು ಗುಟುಕುಕೊಟ್ಟು ಆನಂದವ ಮಾಡಿದೆ 6ಕಂದಗೆ ಸ್ತನ ಕೊಟ್ಟುಬಿಂದು ಬಾಯೊಳಗೆ ಇಟ್ಟುಹಿಂದಕ್ಕೆ ಸರೆಯದಂತೆ ತಂದೆ ರಾಮೇಶ ಮಾಡಿದ 7
--------------
ಗಲಗಲಿಅವ್ವನವರು
ಬಿಡೆ ನಿನ್ನ ಚರಣವಉಡುಪಿಕೃಷ್ಣನೆಭವಕಡಲ ದಾಟಿಸು ಕೈಯವಿಡಿದು ಪಾಲಿಸು ತಂದೆ ಪ.ಧÀ್ರುವಶುಕಪ್ರÀಹ್ಲಾದಬಲಿಅಜಾಮಿಳನುದ್ಧವ ಅಂಬರೀಷ ವಿದುರ ಮುಖ್ಯರುತವ ಪಾದವಿಡಿಯಲವರಿಗಿಂಬು ನೀಡ್ದಹವಣವ ಬಲ್ಲೆ ನಾನೇನ ಮಾಡಿದರೇನ 1ಪಾಂಚಾಲಿಮಾನವಕಾಯ್ದೆ ಪೆರರಿಗಂದುಅಚ್ಯುತನಿನ್ನಂಗುಟವು ಸೋಂಕಲುನಿಚ್ಚಳ ಸತಿಯಾದಳೆಂಬ ಸಾಹಸಕೇಳಿಮುಚ್ಚು ಮರೆಯ ಮಾಡಿದರೆ ನಿಮ್ಮ ಮರೆಯೆನು 2ನಿನ್ನ ಪಾದಾಂಬುಜ ಧ್ಯಾನ ಮರೆಯದಂತೆಎನ್ನ ಮನದ ವಕ್ರಗತಿಯ ತಿರ್ದುಮನ್ನಿಸು ತಂದೆ ಪ್ರಸನ್ನವೆಂಕಟ ಕೃಷ್ಣಪೂರ್ಣಪ್ರಜ್ಞಾರ್ಚಿತ ಚರಣಕಮಲನೆ 3
--------------
ಪ್ರಸನ್ನವೆಂಕಟದಾಸರು
ಬಿಂದುಮಾಧವರಮಾಧವಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಬಿಂದುಮಾಧವಸುಬಂಧು ದೀನಭವ|ಬಂಧತರಣ ಗೋವಿಂದ ಶ್ರೀ ಕೃಷ್ಣ1ಮಂದರಾದ್ರಿಧರಕುಂದರದನಮಹಾ |ಸುಂದರಸಿರಿಹೃನ್ಮಂದಿರ ವಾಸಾ2ಕದ್ದಿಕಾರ ಸುರವೃಂದ ಸುಪೂಜಿತ |ಇದ್ದಿ ದೇವ ಕಚವೃಂದ ಸಮೇತಾ3ನಂದ ನಂದನ ಸುಸಿಂಧುರ ವರದ ಮು-ಕುಂದಗೋಪಿಕಾ ವೃಂದ ವಿಹಾರಾ4ಮಲ್ಲಿಖೇಡ ಸ್ಥಳ ಹೊಳೆ ಕಾಗಿಣಿ ಥಡಿಬಳಿಗೆ ರಾಯರು ಕುಳಿತಲ್ಲಿರುವ5ಪಂಕಜಾಕ್ಷ ಮೀನಕೇತು ಜನಕ ಗರು-ಡಾಂಕಶಶಿಧ್ವಜ ಶಂಕರಪ್ರಿಯ ಹರಿ6
--------------
ಜಕ್ಕಪ್ಪಯ್ಯನವರು
ಬಿಲ್ವೊದೇಶ್ವರ ಶ್ರೀ ಮದುಮಾವಲ್ಲಭಸಂತತ ಪಾಲಯಮಾಂಪ.ನಾಕಪವಂದ್ಯ ಕೃಪಾಕರ ಪಾಪನೇಕ ನಿವಾರಕ ಮೂಕಹರಲೋಕೇಶೇಶ ನಿಶಾಕರ ಶೇಖರಶ್ರೀಕರಕಾಯ ಪಿನಾಕಧರ 1ಭುಜಗಾಭರಣ ಗಜಮದಹರಣಗಜಚರ್ಮಾಂಬರ ಸುಜನವರದ್ವಿಜರವಿ ವೃಷಧ್ವಜಾಸಮಲೋಚನರಜನೀಚರ ತ್ರಿಪುರಜಮಥನ 2ದುರ್ಧರ್ಷಾಂಧಕ ಮದರ್Àಕ ಶಂಭೊನಿರ್ದೋಷ ಶ್ವೇತಾದ್ರಿ ಪ್ರಭೊಸ್ವರ್ಧುನಿಸಹಿತ ಕಪರ್ದಿನ್ ಶಿವಶಿವಊಧ್ರ್ವ ಪಟಾರ್ಚಕವದನಭೋ3ಗರಕಂಧರ ವೃಷಚರ ಅದ್ಭುತ ನಿಕರಪರಿಚರ ಪಾಂಡುರಗಾತ್ರಶಿರಮಾಲಾನ್ವಿತ ಸ್ಫುರತ್ಕಪಾಲಿನ್ಹರಹರಭವಸುಖಕರ ಮೂರ್ತೆ4ಶಂಕರ ಸುಗುಣಾಲಂಕೃತ ಭಕ್ತಾತಂಕವಿದೂರಕ ಶಂಖ ರಥಾಂಗಾಂಕಿತ ಪ್ರಸನ್ವೆಂಕಟನಾಯಕಕಿಂಕರಜನಪ್ರಿಯ ತ್ವಂ ಕೃಪಯಾ5
--------------
ಪ್ರಸನ್ನವೆಂಕಟದಾಸರು
ಬುತ್ತಿಯ ಕಟ್ಟೊ - ಮನುಜಾ ||ಬುತ್ತಿಯ ಕಟ್ಟೊ ಪ.ಬುತ್ತಿಯನ್ನು ಕಟ್ಟಿದರೆ |ಎತ್ತಲಾದರುಣ್ಣಬಹುದು ಅಪಧರ್ಮವೆಂಬ ಮಡಿಕೆಯಲ್ಲಿ |ನಿರ್ಮಲ ಗಂಗೆಯನುತುಂಬಿ ||ಸುಮ್ಮಾನದಿಂದಲಿ ಬೇಗ |ಒಮ್ಮನಕ್ಕಿಯ ಅನ್ನಬಾಗಿ 1ಅರಿವು ಎಂಬ ಅರಿವೆಯ ಹಾಸಿ |ಗರಿಮೆ ಹಾಲ - ಮೊಸರ ತಳಿದು ||ಪರಮವೈರಾಗ್ಯದಿಂದ |ಸಿರಿಹರಿಗರ್ಪಿತವೆಂದು 2ಕರ್ತು ಪುರಂದರವಿಠಲನ |ತತ್ತ್ವವೆಂಬ ಬುತ್ತಿಯನ್ನು ||ಹತ್ತಿರ ತಂದಿಟ್ಟುಕೊಂಡು |ನಿತ್ಯವುಂಡು ತೃಪ್ತಿಪಡೆಯೊ 3
--------------
ಪುರಂದರದಾಸರು
ಬೇಡವೆನ್ನೆ ನೀನು ಗೋಪಮ್ಮ ಪಕಾಡುವ ಕೃಷ್ಣಗೆ ಕರೆದು ಬುದ್ಧಿಯ ಹೇಳೆ ಅ.ಪಎಣ್ಣೆ ಮಂಡೆಯಲಿ ಬಣ್ಣದ ಬಚ್ಚಲೊಳಗಿರೆ |ಬಣ್ಣಿಸಿ ಆಟಕಾಳಿ ಹಚ್ಚುವೆನೆನುತಲಿ ||ಬೆನ್ನು ಒರಸಲು ಬಂದ-ಬೆದರೇಳ್ವರ |ಮುನ್ನ ತಕೈಸಿಕೊಂಡ-ಗೋಪಮ್ಮ ನಿನ್ನ |ಚಿಣ್ಣಸಿರಿಗೇಡಿಯು ಎನ್ನ ನಾಚಿಕೆಗೊಂಡ1ನೆಲುವಿಗೆ ಹಾಲ ಏರಿಸುವಳ ಕೈವಿಡಿದು |ಕಿಲಿಕಿಲಿ ಕಿವಿಮಾತ ಹೇಳುವೆ ಎನುತಲಿ ||ಕಲೆಯನಿಕ್ಕಿದ ಗಲ್ಲಕೆ-ಮೇಲ್ಮಲಕಿನ |ತಳಕಿಕ್ಕಿ ಕೆಡಹಲಿಕೆ-ಕೆಳಗೆ ಬಿದ್ದು |ಬಳಲಿ ಬಂದೆವೆ ನಿಮ್ಮ ಬಳಿಗೆ ಗೋಪಮ್ಮ 2ಮನೆಮನೆಯೊಳು ದಂಪತಿಗಳಿದ್ದ ಮಂಚ-|ವನು ನಡು ಬೀದಿಯೊಳ್ ಹಾಕಿ ಕಲೆವನೆ ಕೃಷ್ಣ ||ಮನು ಮಥನಯ್ಯ ಕಾಣೆ-ಈತನು ಮಹಾ |ಮುನಿಗಳ ಮನಕೆ ನಿಲುಕದಿಪ್ಪಗೆ-ಮೂಲೋಕಕೆ |ಘನಮಹಿಮ ನಮ್ಮ ಶ್ರೀ ಪುರಂದರವಿಠಲಗೆ 3
--------------
ಪುರಂದರದಾಸರು