ಒಟ್ಟು 9343 ಕಡೆಗಳಲ್ಲಿ , 135 ದಾಸರು , 4870 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯೆಂದಿಗಾಹುದೋ ನಿನ್ನ ದರುಶನಾ | ಇಂದಿರೇಶ ಮುಕುಂದ ಕೇಶವಾ ಪ ಗಾನಲೋಲನೇ ದೀನ ವತ್ಸಲಾ || ಮಾನದಿಂದಲೀ ನೀನೆ ಪಾಲಿಸೋ 1 ಯಾರಿಗೆ ಮೊರೆಯಿಡುವೆ ಶ್ರೀ ಹರೀ || ಸಾರಿ ಬಂದು ನೀ ಈಗಲೇ ಪೊರೀ 2 ಗಜವ ಪಾಲಿಸೋ ಗರುವದಿಂದಲೀ || ಭುಜಗಶಯನ ಶ್ರೀ ವಿಜಯವಿಠಲಾ3
--------------
ವಿಜಯದಾಸ
ಯೆಂದಿಗೆ ಬರುತೀಯೆ ಸುಂದರ ಭಾರತಿ ಮಂದರೋದ್ಧರನ ತೋರಿಸೆಂದೆ ನಾ ಬಂದೆ ಪ. ಅಂಧಕಾರಣ್ಯದೊಳು ನಿಂದು ತತ್ತರಿಸುವೆನು ತಾಯೆ ಕುಂದುಗಳೆಣಿಸಾದಿರು ಆನಂದ ತೋರು ಅ.ಪ. ಹರಿಗೆ ಕಿರಿಯ ಸೊಸಿ ವಾತನಸತಿಯು ನೀನು ಪ್ರಖ್ಯಾತಿವಂತಳೇ ಏಕಾಂತ ಭಕ್ತಳೇ ತ್ರಿವಿಧ ಜೀವರೊಳಗೆ ನಿಂತು ತ್ರೀವಿಧ ಪ್ರೇರಣೆ ಮಾಡುವಿ ದೇನಿ ನಿನ್ನಾ ಮಹಿಮೆಗೆ ನಮೋ ಎಂಬೆ ಪುತ್ಥಳಿಯಾ ಬೊಂಬೆ 1 ಮಂದರೋದ್ಧರನ ಪಾದಸೇವಕಳೇ ನಿನಗೀಡೆ ನಲಿದಾಡೆ ಒಂದನಾದರೂ ಮಾತನಾಡೆ ವರಗಳ ನೀಡೆ ದಯಮಾಡಿ ನೋಡೆ ತವಪಾದವ ಕೊಡೆ ಕರವ ಜೋಡಿಸಿ ಬೇಡುವೆನಿಂದು ನಾ ಬಂದು 2 ಗರುಡ, ಶೇಷ ರುದ್ರಾದಿಗಳೊಡೆಯಳೇ ನೀನು ನಿನ್ನಡಿಗಳಿಗೆರಗುವೆ ನಾನು ತಡಮಾಡ ಬ್ಯಾಡಮ್ಮಾ ನಡೆದು ಬಾರಮ್ಮ ಭವ ಮಡುವಿನೊಳಗಿರುವೆನು ತೋರಿಸೋ ದಯಪಾಲಿಸೋ 3
--------------
ಕಳಸದ ಸುಂದರಮ್ಮ
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ಯೆಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲಾ | ಇಲ್ಲವೋ ಕಾಣೋ ಯೆಂದಿಗಾದರು ಮರುಳೆ ಪ ಹುಲಿ ಇಲಿಯಾಗುವದು ತೋಳ ಕೋಳ್ಯಾಗುವುದು | ಕಲಿ ಬಂದು ಹಿತ್ತಿಲನ್ನೀಗ ಬಳಿವಾ || ಮೂಲ ಮಹಾಚೋರ ಚೊಚ್ಚಿಲ ಗೌಡಿಮಗನಾವಾ | ಜಲಜಾಕ್ಷನ ಕೃಪೆಯ ಪಡೆದ ದಾಸರಿಗೆ 1 ಕರಡಿ ಕರು ಆಗುವದು ಉರಿ ಮಂಜು ಆಗುವದು | ಕರಿ ನಾಯಿ ಆಗುವದು ಕಂಡವರಿಗೆ || ಭರದಿಂದ ಸುರಿವ ಮಳೆ ನಿಲ್ಲೆನಲು ನಿಲುವದು | ನರಹರಿಯ ನಾಮಗಳ ನಂಬಿ ಪಠಿಪರಿಗೆ 2 ಘಣಿ ಸರವೆ ಆಗುವದು ದಣುವಾಗುತಿಹ ಮಾರ್ಗ ಕ್ಷಣದೊಳಗೆ ಪೋದಂತೆ ಕಾಣಿಸುವದು || ಘನ ಪಾಷಾಣಗಳು ತೃಣ ಸಮವು ಯೆನಿಸುವವು ವನಜಾಕ್ಷನ ಕೃಪೆಯ ಪಡದ ದಾಸರಿಗೆ 3 ಕ್ಷುಧೆ ತೃಷೆಯಾಗದು ಕ್ಷುದ್ರ ಸಂಗ ಬಾರದು | ಪದೇ ಪದೆಗೆ ರೋಗಗಳು ಬೆನ್ನಟ್ಟವು || ಉದಯಾಸ್ತಮಾನವೆಂಬೋ ಭಯವು ಸುಳಿಯದು | ಪದುಮನಾಭನ ಕೃಪೆಯ ಪಡೆದ ದಾಸರಿಗೆ4 ಬಾರವು ಭಯಗಳು ಬಂದರು ನಿಲ್ಲವು | ಹಾರಿ ಹೋಗುವವು ದಶದಿಶಗಳಿಗೆ || ಘೋರ ದುರಿತಾರಿ ಶ್ರೀ ವಿಜಯವಿಠಲನಂಘ್ರಿ | ಸೇರಿದಾ ಜನರಿಗೆ ಇನಿತಾಹುದುಂಟೇ 5
--------------
ವಿಜಯದಾಸ
ಯೇನೆಲವೊ ದೈವಾ ವೈಕುಂಠನಾಥ ನೀ ನಾರಿವೇಷವನು ಧರಿಸಿದ ಬಗೆಯೇನೊ ಪ ದೈತ್ಯರು ಎರಗಿ ದೇವತತಿಗಳು ತಲ್ಲಣಿಸೆ | ಮಿತ್ರಭಾವದಲಿವರು ಕೂಡಲಿಟ್ಟು | ಇತ್ತಂಡದ ನಡುವೆ ಸುಧೆಯ ಬಡಿಸುವೆನೆಂದು | ಮಿತ್ರವೇಷವ ಧರಿಸಿ ಸುರರ ಸಲಹಿದ ಬಗೆಯ 1 ಶಿವಗೆ ವೃಕಾಸುರನು ಬೆಂಬಿಡದೆ ತನ್ನುರಿ | ಕರವ ನೀಡುವೆನೆಂದು ಬರಲಾಗಲು || ಅವನೀಶ ಭವಹರ ಕೇಶವ ನೀನೆ ಗತಿಯೆನಲು | ಯುವತಿ ವೇಷವ ಧರಿಸಿ ಶಿವನ ಸಲಹಿದ ಬಗೆಯಾ 2 ಅಂದು ಮಾಡಿದ ಚರಿತೆ ಭಕ್ತಜನರು ಬಂದು | ಒಂದೊಂದನ ನುಡಿದರನ ಲೀಲೆಂದು | ಇಂದು ಸತಿವೇಷವನು ಧರಿಸಿ ತೋರಿದಿಯೋ ಪು ರಂದರ ದಾಸರಿಗೊಲಿದೆ ವಿಜಯವಿಠಲ ಚಲುವಾ3
--------------
ವಿಜಯದಾಸ
ಯೋಗನಿದ್ರೆಯ ಮಾಡುತಿಹನು ಕ್ಷೀರಸಾಗರಮಧ್ಯದಿ ಭೋಗಿಶಯನನು ಪಏಳು ಸುತ್ತಿನ ಪುರವಿದನೂ ಎಂಟುಪಾಲಾಗಿ ರಮಣಿ ತಾ ಕಾದಿರಲದನುಬಾಲಕನೊಬ್ಬ ಪಾಲಿಪನೂ ಮಂತ್ರಿನಾಲುವರೊಪ್ಪಿರೆ ಶ್ರೀಹರಿ ತಾನು 1ಕಾಲಜ್ಞಾನಿಗಳೈವರಿಹರೂ ಅವರೂಳಿಗಕೈವರು ಕಾದುಕೊಂಡಿಹರುವೇಳೆ ವೇಳೆಯ ಬಲ್ಲ ಭಟರು ತಮ್ಮಊಳಿಗವನು ಬಂದು ಪೇಳುತ್ತಲಿಹರು 2ಸಕಲ ಲೋಕಂಗಳ ಸೃಜಿಸಿ ಅಲ್ಲಿ ಸಕಲ ಲೋಕೇಶನು ತಾನೆ ವಿಶ್ರಮಿಸಿಸಕಲವ ತನ್ನೊಳಗಿರಿಸಿುೀಗಮುಕುತಿದಾಯಕ ವೆಂಕಟೇಶ ಶ್ರೀ ವೆರಸಿ 3ಕಂ||ಹರಿ ಪವಡಿಸೆ ಹರೆದೋಲಗಸುರರೆಲ್ಲರ್ ಸ್ಥಾನಕೈದಲಾನಂದಾಂಬುಧಿತೆರೆುಳಿದು ತಿರುಪತೀಶನಚರಣವೆ ತಾನಾಗಿ ನಿಂದುದೆನ್ನೆದೆಮನೆಯೊಳ್ ಓಂ ವೇದವೇದ್ಯಾಯ ನಮಃ
--------------
ತಿಮ್ಮಪ್ಪದಾಸರು
ಯೋಗಿ ಎಂಬ ಆನೆ ಬಂದಿತಯ್ಯಆನೆ ಬಂದಿತು ಪ್ರಪಂಚ ಪೇಟೆಯತಾನೆ ಕೀಳುತ ತಳಪಟ ಮಾಡುತ ಪ ಪಾಷಗಳೆಂದೆಂಬ ಸರಪಳಿ ಹರಿದುಈಷಣಗಳು ಎಂಬ ಸಂಕೋಲೆ ಮುರಿದುದ್ವೇಷವೆನಿಪ ಗಾಡಿಕಾರರನರೆದುಕ್ಲೇಷವೆನಿಪ ಕಾವಲವರ ಜಡಿದು 1 ದಶವಾಯುಗಳೆಂಬ ದನಗಳನೋಡಿಸಿವ್ಯಸನ ಕುದುರೆಗಳ ಸೀಳಿ ಸೀಳಿಕ್ಕಿಹಸಿವು ತೃಷೆಗಳನು ಕಾಲೊಳಿಕ್ಕಿಕಸೆಕಸೆ ಅಂಗಡಿಗಳನು ತೂರಿಕ್ಕಿ2 ಬಹುಮತಗಳು ಎಂಬ ಮನೆಯನೆ ಕೆಡಹಿಇಹಪರ ವಾಸನೆ ಕೊಟ್ಟಿಗೆ ಕೊಡಹಿಮಹಾ ಅಭಿಮಾನದ ನಾಯಿಗಳ ಮುಡುಹಿಬಹು ಕಲ್ಪನೆಯ ಕುರಿ ಕೋಳಿಗಳ ಉಡುಹಿ3 ಬೋಧ ಲಹರಿಯಲಿ ತೂಗುತಜ್ಞಾನ ಸೊಕ್ಕಿನಲಿ ಕೆಕ್ಕರಿಸಿ ನೋಡುತ ತಾನೆ ತಾನಾಗಿ ತನ್ನ ಮರೆಯುತ 4 ಬೆಳಗುವ ಸುಷುಮ್ನ ಬಾಜಾರವಿಡಿದುಗೆಲುವಿನಲಿ ಭ್ರೂಮಧ್ಯ ಜಾಡಿನಲಿನೆಡೆದುತಿಳಿಗೊಳ ಸಹಸ್ರಾರದ ನೀರ ಕುಡಿದುಬಲು ಚಿದಾನಂದವೆಂಬ ಆನೆಯು ನಡೆದು 5
--------------
ಚಿದಾನಂದ ಅವಧೂತರು
ಯೋಗಿ ವರ್ಯಾ ಪ ಯೋಗಿ ದಶಮತಿ ಬ್ರಾತೃ | ವಂಶ ಸಂಭೂತಾ ಅ.ಪ. ಭಾವಿ ವಾಯ್ದೆನಿಸಿದ್ದು | ಆವಿಪರು ಶೇಷಾದಿದೇವ ಸದ್ವಂದ್ಯರೆನೆ | ಶ್ರೀ ವಾದಿರಾಜಾ |ಆವ ವಂಶಾಬ್ದಿಯಲಿ | ದಿವ್ಯ ಸೋಮನು ಎನಿಸಿ |ದೈವ ವಿಭವದಿ ಮೆರೆವ | ವಿಶ್ವೋತ್ತಮಾಖ್ಯಾ 1 ವಿಭವ ನಾನೋಡ್ದೆ 2 ಸುಜನ | ವೃಂದದಲಿ ಭೋಧಿಸುತಇಂದಿಲ್ಲಿ ಸಿದ್ದಾರ್ಥಿ | ಸಂದ ಅಯ ನವಮೀ |ಮಂದಿರಕೆ ಬಂದುತವ | ನಂದ ಪದ ಪೂಜಿಸುವಸಂದು ಇತ್ತಿಹ ಗುರೂ | ಗೋವಿಂದ ಭಜಕಾ 3
--------------
ಗುರುಗೋವಿಂದವಿಠಲರು
ಯೋಗಿ ವ್ಯಾಸರಾಯರೆಂಬ ವಿಚಿತ್ರ ಮೇಘ ಬೇಗ ವಿಷ್ಣುಪದವ ತೋರುಸುತ್ತ ಬಂತಿದೆಕೊ ಪ ಮಾಯಿಮತವೆಂಬ ತಾರಾಮಂಡಲವ ಮುಸುಕುತ್ತ ವಾಯುಗತಿಯಂತೆ ಗಮಿಸುತಲಿ ಹೇಯ ಕಾಮಾದಿಗಳೆಂಬ ರಜವನಡಗಿಸುತ ನಾಯಕನುಪೇಂದ್ರನಾಜ್ಞೆಯ ಪಡೆದು 1 ಅಂಗಜನಯ್ಯನೆ ಪರನೆಂದು ಫುಡಿಫುಡಿಸುತ್ತ ಕಂಗಳೆಂಬ ಮಿಂಚನೆ ನೆರಹಿ ಲೋಕದಿ ಹಿಂಗದೆ ಪರಿವ ಅಜ್ಞಾನವೆಂಬ ಕತ್ತಲೆಯ ಭಂಗಿಸಿ ಸುರಪಥವ ತೋರಿಸುತ್ತ 2 ಸಿರಿಯರಸನ ಸಮ್ಯಕ್ಜ್ಞಾನವೆಂಬ ಪೈರಿಗೆ ಬೇರುಬಿಡಿಸಿ ಹರಿಕಥೆಯೆಂಬ ಮಳೆಗರೆದು ನೆರೆ ಶಿಷ್ಯಮನವೆಂಬ ಕೆರೆತುಂಬಿಸಿ ಕರಗಳೆಂಬ ಭರಕೋಡಿ ಹರಿಸುತ ವಿಜಯೀಂದ್ರನ ಗುರು 3
--------------
ವಿಜಯೀಂದ್ರತೀರ್ಥರು
ರಕ್ಷಿಸಿ ಪೊರೆಯೊ ದೇವನೆ ಪಕ್ಷಿವಾಹನನೆ ಸೂಕ್ಷ್ಮ ಸ್ಥೂಲದಿ ವ್ಯಾಪ್ತನೆ ಪ ಲಕ್ಷ್ಮಿರಮಣ ಪುರುಷೋತ್ತಮ ಪುರುಷನೆ ಕುಕ್ಷಿಯೊಳಗೆ ಜಗ ರಕ್ಷಿಸಿ ಪೊರೆವನೆ ಅಕ್ಷರೇಢ್ಯ ಕಮಲೇಕ್ಷಣ ಮಾಧವ ರಕ್ಷ ಶಿಕ್ಷಕ ಜಗದ್ರಕ್ಷಕ ಹರಿಯೆ ಅ.ಪ ವಿಶ್ವರೂಪನೆ ಶ್ರೀಹರಿ ವಿಶ್ವವ್ಯಾಪಕನೆ ವಿಶ್ವತೋ ಮುಖನೆ ಶ್ರೀಶನೆ ವಿಶ್ವನಾಟಕನೆ ದೇವನೆ ವಿಶ್ವೋದ್ಧಾರಕನೆ ವಿಶ್ವಮಯನೆ ಶ್ರೀ ವಿಶ್ವನೆ ವಿಶ್ವರೂಪ ತಾಯಿಗೆ ಬಾಯೊಳು ತೋದರ್À ವಿಶ್ವರೂಪ ಮೈದುನನಿಗೆ ತೋರಿದ ವಿಶ್ವರೂಪ ಸಭೆಯೊಳು ಭಕ್ತರಿಗೆ ತೋರ್ದ ವಿಶ್ವ ಮೂರುತಿಯೆ 1 ಹಿಂದಿನ ಕರ್ಮಫಲದಲಿ ಬಂದು ಈ ಭವದಿ ಕಂದಿ ಕುಂದಿದೆನೋ ವ್ಯಥೆಯಲಿ ಬಂಧ ಮೋಚಕನೆನುತಲಿ ಬಂದೆರಗುತಲಿ ತಂದೆ ನೀ ಪೊರೆಯಬೇಕೆನುತಲಿ ಮಂದರೋದ್ಧರ ಗೋವಿಂದ ನಿನ್ನಯ ಪಾದ ದ್ವಂದ್ವಕೆ ನಮಿಸುವೆ ಬಂಧನ ಬಿಡಿಸೆಂದು ಇಂದು ಮುಂದು ಎಂದೆಂದಿಗೂ ನೀ ಗತಿ ಇಂದಿರೆ ರಮಣ2 ಶ್ರಮವ ಪರಿಹರಿಸೊ ಶ್ರೀಶನೇ ಶ್ರೀನಿಕೇತನನೆ ಕಮಲ ಸಂಭವನ ತಾತನೆ ಕಮಲ ಲೋಚನನೆ ಕಮಲ ಪೊಕ್ಕಳಲಿ ಪಡೆದನೆ ಕಮಲ ಭವೇಂದ್ರಾದ್ಯಮರರು ಪೊಗಳಲು ಕಮಲನಾಭ ವಿಠ್ಠಲ ವಿಠ್ಠಲನೆಂದು ಕಮಲಪುಷ್ಪ ಮಾಲಾಲಂಕೃತ ಶೋಭಿತ ಕಮಲದಳಾಕ್ಷನೆ ಕಮನೀಯರೂಪ 3
--------------
ನಿಡಗುರುಕಿ ಜೀವೂಬಾಯಿ
ರಕ್ಷಿಸು ಎನ್ನನು ಪಕ್ಷಿವಾಹನ ಪಾಂಡು ಪಕ್ಷನೆ ತವ ಭಕ್ತಿಯಗಲಿಸದೆ ಲಕ್ಷಿಸಿ ಧ್ರುವನೊರೆದೆ ಲಕ್ಷ್ಮೀಶ ಮರೆಹೋದೆ ಪ ಕ್ಷಿತಿಯೊಳು ನಾಂ ಬಲು ಚತುರನೆನಿಪದು ರ್ಮತಿಯಿಂದ ಕಷ್ಟಕ್ಕೆ ಗುರಿಯಾದೆ ರತಿಪತಿಪಿತ ಎನ್ನ ಅತಿತಪ್ಪು ಮನ್ನಿಸಿ ಗತಿಗಾಣಿಸಿತ್ವಾಕ್ಯ ಅಖಿಲೇಶ ಯತಿನುತ ಸುರಪೋಷ ಹತಭವ ಗುಣಕೋಶ 1 ಮಂದಮತಿಯತನದಿಂದ ನಾ ಮಾಡಿದ ಹಿಂದಿನ ಅವಗುಣವೆಣಿಸದೆ ಪಾದ ಎಂದೆಂದು ಮರೆಯದೆ ಬಂಧುರಭಕ್ತಿಯ ವರ ನೀಡೊ ಕಂದನೊಳ್ದಯಮಾಡೊ ತಂದೆ ನೀ ಕಾಪಾಡೊ 2 ದುರುಲನೆನಿಸಿ ಬಲು ಧರಣಿಯೊಳ್ತಿರುಗುವ ಮರುಳುಗುಣವನೆನ್ನದೀಡ್ಯಾಡೊ ಹರಿಯ ದಾಸರ ಸಂಗ ಕರುಣದಿ ದೊರಕಿಸಿ ಪರಿಶುದ್ಧ ಮಾಡೆನ್ನ ಹೇಯ ಜನುಮ ಶರಣಜನರ ಪ್ರೇಮ ಕರುಣಿಯೆ ಶ್ರೀರಾಮ 3
--------------
ರಾಮದಾಸರು
ರಕ್ಷಿಸು ಕಮಲಾಕ್ಷ ಶ್ರೀ ವಕ್ಷ ಪ ರಕ್ಷಾ ಶಿಕ್ಷಾಶ್ರಿತಜನ ಸಂರಕ್ಷ ಅಕ್ಷಯ ಸುರಪಕ್ಷ ಅಧ್ಯಕ್ಷ ಅ.ಪ. ಪ್ರಾಚೀನ ಕರ್ಮಾಬ್ಧಿ ವೀಚಿಯೊಳಗೆ ಸಿಕ್ಕಿ ಪೇಚಾಡುತಲಿರೆ ತೋರದು ಯೋಚನೆ ಶ್ರೀ ಚರಣಕೆ ಶಿರಬಾಗುವೆ ಶ್ರೀಕರ ಸೂಚಿಸಿ ಘನ ಭಕ್ತಿ ವಿರಕ್ತಿ 1 ಆರ್ತ ಬಾಂಧವನೆಂದು ಕೀರ್ತಿ ಪೊತ್ತವನೆಂದು ಅರ್ತಿಯಿಂದಲಿ ಬಂದೆ ಸುತ್ತುತೆ ತಂದೆ ಕೀರ್ತಿಯ ಉಳುಹಿಕೊ ಕೀರ್ತಿಯ ತಂದುಕೊ ಭಕ್ತವತ್ಸಲ ಸ್ವಾಮಿ ಸುಪ್ರೇಮಿ 2 ಜನನಿ ಜನಕರು ಅನುಜಾ ತನುಜರು ಅನುವಾಗಿದ್ದರೆ ಎಲ್ಲ ನಮ್ಮವರೆ ಅನುವು ತಪ್ಪಿದರಾರು ಕಣ್ಣಲಿ ನೋಡರು ಅನಿಮಿತ್ತ ದಯವಂತ ಶ್ರೀಕಾಂತ 3
--------------
ಲಕ್ಷ್ಮೀನಾರಯಣರಾಯರು
ರಕ್ಷಿಸು ಶ್ರೀ ವೆಂಕಟೇಶಾ ನಿನ್ನ ನಂಬಿದೆನೈ ಶ್ರೇಷಗಿರಿವಾಸಾ ಪ ಶ್ರೀ ಹರಿ ಮಲಗಿರಲಂದೂ ತಾಡನೆ ಮಾಡಿದನೆಂದೂ 1 ಅದು ಕೇಳಿ ಸಿರಿದೇವಿ ಸೈರಿಸಲಾರದೆ ತಿಳಿದು ಹರಿಬೇಗಾ ಧರೆಗಿಳಿದನು ಆಗಾ 2 ಸುರಮುನಿವಂದ್ಯ ಶರಣು ಗೋವಿಂದಾ 3 ದೇಶದೇಶಗಳಿಂದಾ ಭಕ್ತಜನರು ಬಂದೂ ಮಹಾನುಭಾವಾ ಪಾಲಿಸುದೇವಾ 4 ಅಪ್ಪಲು ಅಕಿರಸಿ ಒಪ್ಪದಿಂದಲಿಮಾರಿ ಸರಿಯಾರಿಲ್ಲ ಕಂದ್ಯ5 ಮೋಸ ಹೋಗುವನಲ್ಲಾ ಭವಪಾಶ ಬಿಡಿಸಲು ಬಲ್ಲ ಇದಕೆ ಸಂಶಯವಿಲ್ಲ 6 ಬೇರೆ ದೈವಗಳನ್ನ ಬಯಸಲ್ಯಾತಕೆ ಹೇಳು ದೀನ ದಯಾಳೂ ಭಕ್ತಕೃಪಾಳೂ 7 ನಿನ್ನ ಹೊರತು ಪೊರೆವರನ್ಯರಕಾಣೆನು ಘನ್ನ ಮಹಿಮಾ ಮನಮಾಡೋ ಮೋಹನ್ನಾ 8 ಭಕ್ತ ವತ್ಸಲ ನೀನಭಯವಿತ್ತ ಮೇಲೆ ಭಯವ್ಯಾಕೊನಮಗಿನ್ನು ಭಕ್ತರಭಿಮಾನೀ ಸತ್ಯ ನಿನವಾಣೀ ನಿನ್ನ ಸಮರ್ಯಾರೊದಾನೀ 9 ಆದರದಿಂಧ ಪೊರೆವಾಪ್ರೇಮಸುಧೆಯ ಕರೆವಾ ಕನಕಾದ್ರಿಯೊಳಿರುವಾ ಕೀರ್ತಿಯೊಳ್ ಮೆರೆವಾ 10 ವೆಂಕಟವಿಠಲಾ ಕರುಣಾಲವಾಲಾ ಪದ್ಮಿನಿಲೋಲಾ 11
--------------
ರಾಧಾಬಾಯಿ
ರಕ್ಷಿಸುವ ತಾಯಿತಂದೆ ರಘುಕುಲೋತ್ತಮ ರಾಮಚಂದ್ರ ಅಕ್ಷಯ ವಿತ್ತು ಭಕ್ತಜನರುಪೇಕ್ಷೆ ಮಾಡದೆ ಪ ಕಂದನೆಂದು ಖಳರ ಅನುಜರಂದದಿ ಕಾಯ್ದದೇವ ಸಿಂಧುಶಯನ ಶ್ರೀನಿವಾಸ ಶ್ರೀಧರಾಚ್ಯುತಾ ಎಳಿವೊ ವ್ಯಾಳ್ಯದಲ್ಲಿ ಬಂದು ಮಾನ ರಕ್ಷಿಸಿದಂಥಾ ಪರಮಪುರುಷ ಭಕ್ತವತ್ಸಲ 1 ಮತ್ತ ಸಲಹಬೇಕಂತ ಬಿರುದುವುಳ್ಳ ಧೀರ ಭಾನುಕೋಟಿತೇಜನಾ ಕರಿಯು ಕರಿಯೋ ಕಾಲದಲ್ಲಿ ಗರುಡನೇರಿ ಬಂದು ಪೊರೆದ ಕರುಣಾಸಾಗರ------ನಾಮನಯ್ಯನಾದ ದೀನಾ 2 ಇಂದು ಇರುವರೆಲ್ಲಾ ಅಂದು -- ಕರುಣಾವಿಟ್ಟು ಅತಿಶಯಾದಲಿ ಕುಂದು ಇಲ್ಲದೆ ಪಾಲಿಸು ಸ್ವಚ್ಛಂದದಿಂದ ಚ್ಯುತಿಯಿಲ್ಲದೆ ಇಂದಿರೇಶ `ಹೊನ್ನವಿಠ್ಠಲ ' ವಿಶ್ವಕರ್ತಾ ಬುಧವಂದ್ಯಾ3
--------------
ಹೆನ್ನೆರಂಗದಾಸರು
ರಕ್ಷಿಸೆ ಏಕನಾಥೆ ತಾಯೆ ದಯದಿಂದ ಎನ್ನನು ಸೊಕ್ಕಿದ ದೈತ್ಯ ಸಂಹಾರೆ ಶರಣ ಜನೋದ್ಧಾರೆ ಪ. ದುರಿತ ದುಃಖ ನಿವಾರಿ ಶರಣರ ಸಲಹುವ ದಾತೆ ಖಳರೆದೆಗಂತೆ ನಿಡಿ ಗುರುಳ ಬಾಲೆ ಪಲ್ಲವಪಾಣಿ ಸುರರ ನಾಯಕಿ ಅಖಿಲದೇವಮಾತೆ ವಿಖ್ಯಾತೆ 1 ಅಳುವಾಡುವ ರಂಗನ ಅದೇನರಿತು ಭಂಗ ಬಾಳ ಬಡಿಸಿದೆಯವ್ವ ಭಕ್ತರುದ್ಧಾರಿ ಕಾಳಗದೊಳು ಕಂಠೀರವೆ ಕರೆದಭಯವನೀವೆ ಸುಕೃತ ಪಂಥಗಾರ್ತಿ 2 ಹಿಂಡು ಭೂತಂಗಳಿಗೆಲ್ಲ ಹೆಚ್ಚಿನ ಬಿರುದನೆ ತಾಳ್ದೆ ಚಂಡಿ ಚಾಮುಂಡಿ ತ್ರೈಲೋಕ್ಯನಾಥೇ ಕಂಡು ನಮಿಸುವರ ಕಾಯ್ವೆ ಕಾಮಿತದಾತೆ 3 ಇಂದ್ರಾದಿ ದಿಕ್ಪಾಲಕರು ವಂದಿಸಿ ಸ್ತುತಿಮಾಡಲವರ ಬಂಧನವ ಪರಿಹರಿಸಿದೆಯೆ ಚಂದ್ರಮುಖಿಯೆ ಇಂದು ಬಂದ ಬಂಧನವ ಬಿಡಿಸಿ ಎಂದೂ ಎನ್ನ ನೀ ಕಾಯೆ ತಾಯೆ 4 ಮಲೆತ ಮಹಿಷಾಸುರನ ಕೊಂದೆ ಮಲೆಬೆನ್ನೂರಿನಲಿ ನಿಂದೆ ಬಲುನೇಮವಂತೆ ಸಂತೆಹರವಿಲೆ ನಿಂತೆ ಪುಲ್ಲಲೋಚನೆ ಪ್ರಖ್ಯಾತೆ ಪರಶುರಾಮನ ಮಾತೆ ಹೆಳವನಕಟ್ಟೆ ರಂಗನ ಸಹೋದರಿ5
--------------
ಹೆಳವನಕಟ್ಟೆ ಗಿರಿಯಮ್ಮ