ಒಟ್ಟು 3932 ಕಡೆಗಳಲ್ಲಿ , 84 ದಾಸರು , 3314 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರಕವಿಗಳಿದ್ದಲ್ಲಿ ನರಕವಿಗಳ ಕೊಂಡಾಡಬಾರದು - ಇಂಥಾಧರಣಿಯ ಕಲ್ಲಿಗೆ ಸ್ಥೀರವೆಂದು ಪೂಜೆಯಮಾಡಬಾರದು ಪ.ಆಡಿಗೋದ ಮಡಕಿಗೆ ಜೋಡಿಸಿ ಒಲೆಗುಂಡ ಹೂಡಬಾರದುಬಡತನ ಬಂದರೆ ನಂಟರ ಬಾಗಿಲ ಸೇರಬಾರದು 1ಮಡದಿಯ ನುಡಿಕೇಳಿ ಬಡವರ ಜಗಳಕೆಹೋಗಬಾರದು - ಬಹಳಬಡತನ ಬಂದವಳ ಕೈಯಿಂದ ಅಡಿಗೆಯ ಉಣ್ಣಬಾರದು 2ಪಾಪಿಗಳಿದ್ದಲ್ಲಿ ರೂಪದ ಒಡವೆಯ ತೋರಬಾರದು - ಕಡುಕೋಪಿಗಳಿದ್ದಲ್ಲಿ ಅನುಕೂಲಗೋಷ್ಠಿಮಾಡಬಾರದು3ಪರರ ನಿಂದಿಸಿ ಪರಬ್ರಹ್ಮ ರೂಪೇಂದ್ರನ ಜರೆಯಬಾರದುವರದ ಶ್ರೀ ಪುರಂದರವಿಠಲನ ಸ್ಮರಣೆಯ ಮರೆಯಬಾರದು 4
--------------
ಪುರಂದರದಾಸರು
ವರುಷ ಕಾರಣವಿಲ್ಲ ಹರಿಭಜನೆಗೆ |ಅರಿತ ಸಜ್ಜನರೆಲ್ಲಕೇಳಿಸಮ್ಮುದದಿಪ.ತರಳತನದಲಿ ಕಂಡ ಹರಿಯ ಧ್ರುವರಾಯನು |ಹಿರಿಯ ತಾನವನಯ್ಯ ಕಂಡನೇನೂ ? ||ತರಳ ಪ್ರಹ್ಲಾದ ನರಹರಿಯನು ತಾ ಕಂಡ |ಹಿರಿಯನವನಪ್ಪ ತಾ ಮರೆಯಲಿಲ್ಲವೇನೊ ? 1ಹಿರಿದಾಗಿ ಬಹುಕಾಲ ಮರದ ಮೇಲ್ಬಾಳುವ |ಇರುಳು ಗಣ್ಣಿನ ಗೂಗೆ ತಾ ದೊಡ್ಡದೆ ? ||ಮರೆಯಾದ ಅರಗಿಣಿ ಹರಿಕೃಷ್ಣ ಎಂದೊದರೆ |ಮರಿ ದೊಡ್ಡದೆಂತೆಂದು ಪೇಳುವರು ಬುಧರು 2ಸುರುವದಾ ಒದರುವರು ಅರಣ್ಯವಾಸಿಗಳು |ಮರದಡಿಗೆ ಬಿದ್ದ ಎಲೆಗಳ ತಿನ್ನುತ ||ಪರಮಪಾತಕಿ ಅಜಾಮಿಳನು ನಾರಗ ಎನಲು |ಭರದಿಂದ ಸಲುಹಿದನು ಪುರಂದರವಿಠಲ 3
--------------
ಪುರಂದರದಾಸರು
ವಾದಿರಾಜ ಮುನಿಪ ಹಯಮುಖನೀ ದಯದಲಿ ತವ ಪಾದಧ್ಯಾನವನುಮೂಷಕಬಿಲದಿಂದ ಉದರ ಪೋಷಕ ಬರಲಂದುಮುಂದೆ ಭೂತನರನ ಪ್ರೇರಿಸಿ ಹಿಂದೆ ಒಬ್ಬ ನರನಶಾಸ್ತ್ರ ಪ್ರಸಂಗದಲಿ ನಾರಾಯಣಭೂತರ ಗೆಲಿದಲ್ಲೆತುರಗವದನಪಾದಭುಜ(ದಲಿ)ಗಳಲಿಆ ಮಹಾ ಗೋಪಾಲವಿಠಲ ತಾಮರಸದಳಗಳ
--------------
ಗೋಪಾಲದಾಸರು
ವಾದಿರಾಜಸುರರಾಜತಾನಾದರೆxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಮೇದಿನಿಯೊಳಗಿಹನ್ಯಾಕೆ ? ಪಮೇದಿನಿಸುರರಿಗೆಮೋದಕೊಡೋದಕೆಸ್ವಾದಿಯೊಳಗೆ ನಿಂತಿಹನದಕೇ ಅ.ಪಅಜನ ಪದ ತಾ ಸೇರೋದಕೆ 1ಸುರತತಿಸನ್ನುತಸರಸಿಜಭವ ಪದ-ಪರಿಪರಿ ಮಹಿಮೆಯ ತೋರಿಸಿದ 2ವೀತಭಯನು ತಾನೀತೆರ ಜಗದಿದಾತಗುರುಜಗನ್ನಾಥ ವಿಠಲಗುಣಖ್ಯಾತಿಯ ತಾಮಾಡಿದ 3
--------------
ಗುರುಜಗನ್ನಾಥದಾಸರು
ವಾದಿರಾಜಾ ಪಾಲಿಸು ಎನ್ನ ಪಮೋದಪರಾಗವಸಾದರನೀಡಿಅ.ಪಪಾದವ ನಂಬಿದೆ ನೀ ದಯದಲಿ 1ವಾರ್ತದಿ ಬಂದವನಾರ್ತಿಯ ಬಿಡಿಸೋ 2ಬಲ್ಲಿದನೆಂಬೊದು ಬಲ್ಲೆ ಬಲ್ಲೆನು 3ಮರ್ತರೆ ಅನ್ಯ ಸಮರ್ಥರ ಕಾಣೆ 4ಕಾಮಿತನೀಡೈ ಸುರತರುವೇ 5ವೀಕ್ಷಿಸಿ ಮನದಾಪೇಕ್ಷವ ಸಲಿಸೋ 6ನೀತ ಗುರುಜಗನ್ನಾಥವಿಠಲ ದೂತ 7
--------------
ಗುರುಜಗನ್ನಾಥದಾಸರು
ವಾಮನಭಾರ್ಗವಬಾರೋ ರಾಮಕೃಷ್ಣನೆ ಬಾರೋಪ್ರೇಮದ ಬುದ್ಧನೆ ಬಾರೋ ಸ್ವಾಮಿ ಕಲ್ಕಿಯೆ ಬಾರೋ 2ಅರವಿಂದನಾಭಬಾರೋ ಸುರರ ಪ್ರಭುವೆ ಬಾರೋಪುರುಹೂತವಂದ್ಯ ಬಾರೋಪುರಂದರವಿಠಲ ಬಾರೋ3
--------------
ಪುರಂದರದಾಸರು
ವಾಯು ದೇವರುಮುದದಿ ಪಾಲಿಸೊ ಮುದತೀರಥ ರಾಯಾಸದ್ಬುಧ ಜನ ಗೇಯಾ ಪಪದುಮನಾಭ ಪದ ಪದುಮ ಮುದುಪ ಸದಯಾಸದಮಲಶುಭಕಾಯಾ ಅ.ಪ.ವದಗಿರಾಮ ಕಾರ್ಯದಿ ನೀ ಮನಸಿಟ್ಟಿಲಂಕಾಪುರ ಮೆಟ್ಟಿಹೆದರದೆ ದಿತಿಜರನೆಲ್ಲ ಕೊಂದು ಬಿಟ್ಟೆಪುಚ್ಚದಿಪುರ ಸುಟ್ಟಕದನದಿ ಭೀಮವೃಕೋದರ ಜಗಜಟ್ಟಿಸಂನ್ಯಾಸ ತೊಟ್ಟಿ 1ಸೀತಾಶೋಕವಿನಾಶನ ಮಹಂತಾಮಹಬಲಿ ಹನುಮಂತದಾತಜವಾರಿಜಜಾತನಾಗುವಂತಾಖ್ಯಾತಿಯುಳ್ಳವಂಥಾಕೋತಿರೂಪಿಧರ್ಮಾನುಜಜಯವಂತಯತಿನಾಥನೆ ಶಾಂತಾ 2ಶಿರಿಗೋವಿಂದ ವಿಠಲನ ಪ್ರೀತಿ ಕಂದಾಭೀಮನೆ ಆನಂದಾಗರಿದು ಮುರಿದು ಪರಮತವನೆಆನಂದಾ ಮುನಿ ರೂಪದಲಿಂದ ಶಿರಿರಾಮನಸುತರ ಪ್ರೀಯ ಭರದಿಂದಾಬದರಿಗೆ ನಡೆ ತಂದಾ 3
--------------
ಸಿರಿಗೋವಿಂದವಿಠಲ
ವಾಯುಕುಮಾರಗೆ ಮಂಗಳ - ರಘು - |ರಾಯಸೇವಕಗೆ ಮಂಗಳ ಪ.ಅಂಜನಿಗರ್ಭಸಂಜಾತಗೆ ಮಂಗಳ |ರಂಜಿತ ದಿವ್ಯ ಮೂರ್ತಿಗೆ ಮಂಗಳ ||ಮಂಜುಳ ಕೀರ್ತಿ ಮಾಹತ್ಮ್ಯಗೆ ಮಂಗಳ |ಸಂಜೀವರಾಯಗೆ ಮಂಗಳ 1ದನುಜನಿಕರ ಸಂಹಾರಗೆ ಮಂಗಳ |ಜಾನಕಿಶೋಕ ವಿನಾಶಗೆ ಮಂಗಳ ||ವನಧಿ ವಿರೋಧಿಗೆ ಮಂಗಳ ಜಯ |ಹನುಮವಿಲಾಸಗೆ ಮಂಗಳ 2ಸೇತುವೆಗಟ್ಟಿದಾತಗೆ ಮಂಗಳ |ಸೀತೆಯ ತಂದ ಬಂಟಗೆ ಮಂಗಳ ||ಖ್ಯಾತ ಪುರಂದರವಿಠಲನ ಕರುಣೆಗೆ |ಪಾತ್ರನಾದ ಭಕುತೆಗೆ ಮಂಗಳ 3
--------------
ಪುರಂದರದಾಸರು
ವಾವಿಯೀ ಪರಮಾತ್ಮಗೊಂದೂ ಇಲ್ಲ |ಶ್ರೀ ವರನೆ ಇದು ಅಲ್ಲವೆಂಬರಿಲ್ಲ ಪಮೊಮ್ಮಕ್ಕಳನ್ನು ವಂಚಿಸಿ ತಾನೆ ಕೊಲ್ಲಿಸಿದ |ಮೊಮ್ಮಗಗೆ ತನ್ನ ತಂಗಿಯನು ಕೊಟ್ಟ ||ಮೊಮ್ಮಗನ ನಾದಿನಿಯರಲ್ಲಿ ಮಕ್ಕಳ ಪಡೆದ |ಮೊಮ್ಮಗನ ವಹಿಸಿ ಪುತ್ರನ್ನ ಅಳಿದ 1ಒಬ್ಬ ಮಾವನ ನೋಡ ನೋಡ ಪ್ರಾಣವಕೊಂಡ|ಒಬ್ಬ ಮಾವನ ಕೂಡ ಕಡಿದಾಡಿದ ||ಒಬ್ಬ ಮಾವನ ಮೇಲೆ ಬಾಣವನ್ನೇರಿಸಿದ |ಒಬ್ಬ ಮಾವನ ಮಗನಮಾನಕಳೆದ2ಒಬ್ಬ ಅತ್ತೆಗೆ ತಾನೆ ತಂದೆಯನ್ನಿಸಿಕೊಂಬ |ಒಬ್ಬ ಅತ್ತೆಗೆ ಗಂಡನಾದನಿವನು |ಒಬ್ಬ ಅತ್ತೆಗೆ ಮಾವನಾದನೀ ಕೇಶವನು |ಒಬ್ಬ ಅತ್ತೆಯ ಬಹಳ ಶ್ರಮ ಬಡಿಸಿದ 3ಒಬ್ಬ ಮಗಳನು ತನ್ನ ಹಿರಿಯ ಮಗನಿಗೆ ಕೊಟ್ಟ |ಒಬ್ಬ ಮಗಳನು ತಾನೇ ಮದುವೆಯಾದ ||ಒಬ್ಬ ಮಗಳಿಗೆ ಒಂದು ರೀತಿಯಲಿ ಮಗನಾದ |ಒಬ್ಬ ಮಗಳನು ಹಲವರಲ್ಲಿರಿಸುವ 4ಇವನ ನಿಜ ಭಕ್ತನೆಂಬವನು ತನ್ನ ಸತಿಯನು |ಸವಿಯಾಗಿ ನಾಲ್ವರಿಗೆಹಂಚಿಕೊಟ್ಟ ||ಭುವನದೊಳಗೆ ಪ್ರಾಣೇಶ ವಿಠಲನ ಮನೆ ನಡತೆಯಿದು |ಕವಿಗಳೆಲ್ಲರು ತಿಳಿದು ಪೂಜಿಸುತಿಹರು ಮುದದೀ 5
--------------
ಪ್ರಾಣೇಶದಾಸರು
ವಾವೆಯೆಲ್ಲಿಹುದಯ್ಯ ವೈಕುಂಠಪತಿಗೆ |ದೇವಭಾರ್ಗವನಾಗಿ ಮಾತೆಯ ಶಿರವ ಕಡಿದ ಪಒಬ್ಬ ಮಾವನ ಕೊಂದ, ಒಬ್ಬ ಮಾವನನೆಸೆದ |ಒಬ್ಬ ಮಾವನ ಕೂಡೆ ಕಡಿದಾಡಿದ ||ಒಬ್ಬ ಭಾವನ ಹಿಡಿದು ಹೆಡಗೈಯ ಕಟ್ಟಿದನು |ಒಬ್ಬ ಭಾವಗೆ ಬಂಡಿ ಬೋವನಾದ 1ಕುಂಭಿನಿಗೆ ಪತಿಯಾದ ಕುಂಭಿನಿಗಳಿಯನಾದ |ಕುಂಭಿನೀಪತಿಯ ಸಂಹಾರ ಮಾಡಿದ ||ಅಂಬುಧಿಗೆ ಪಿತನಾದ ಅಂಬುಜೆಗೆ ಪತಿಯಾದ |ಅಂಬುಜಾಸನಗೆ ತಾ ಸ್ವಾಮಿಯಾದ 2ಮೊಮ್ಮನನು ಮಲಗಿಸಿದ ಅವನ ಹೆಮ್ಮಕ್ಕಳನು |ಇಮ್ಮೆಯ್ಯವರಿತು ಸಂಹಾರ ಮಾಡಿದ- ||ರಮ್ಯ ಮೂರುತಿ ಪುರಂದರವಿಠಲ ದೇವೇಶ |ಬೊಮ್ಮಮೂರುತಿಗೆಲ್ಲಿ ಬಂಧು ಬಳಗ 3
--------------
ಪುರಂದರದಾಸರು
ವಾಸುದೇವ ನಿನ್ನವರ್ಮ ಕರ್ಮಂಗಳದೇಶ ದೇಶದೊಳು ಹೇಳಲೆ ? ಪಬೇಸರಿಯದೆ ಎನ್ನ ಹೃದಯ ಕಮಲದಲ್ಲಿವಾಸವಾಗಿ ಸುಮ್ಮನಿರುವೆಯೊ ? ಅ.ಪಮತ್ಸರೂಪನಾಗಿ ಮನಸು ಕಾಣಿಸಿಕೊಂಡು ಮಕ್ಕಳತಿದ್ದಿದ್ದು ಹೇಳಲೆ ?ಉತ್ಸಾಹದಿಂದ ನಿಗಮವ ತಂದು ಬ್ರಹ್ಮಗೆ ಮೆಚ್ಚಿಕೊಟ್ಟದ್ದು ನಾ ಹೇಳಲೆ 1ಕಡಗೋಲು ಮಂಡೆಯಂದದಿ ಕೈಕಾಲು ಮುದುಡಿಕೊಂಡದ್ದು ನಾ ಹೇಳಲೆ ?ಕಡಲೊಳಗಿಂದ ಪಾತಾಳಕೆ ಇಳಿದಿಳೆ ಪಡೆದಾತನ ಸುದ್ದಿ ಹೇಳಲೆ 2ಹುಚ್ಚುಮನಸುಮಾಡಿ ಕಚ್ಚುತ ಕೆದರುತ ರಚ್ಚೆಯಿಕ್ಕಿದಸುದ್ದಿ ಹೇಳಲೆ ?ಮುಚ್ಚಿದ ಭೂಮಿಯ ಹಲ್ಲಿಂದ ಕಿತ್ತಿದ ಹೆಚ್ಚುತನವ ನಾನು ಹೇಳಲೆ 3ಕಂದನ ಮಾತಿಗೆ ಕಡುಕೋಪದಿಂ ಬಂದು ಕಂಬವನೊಡೆದದ್ದು ಹೇಳಲೆ ?ಕುಂದದೆ ಹಿರಣ್ಯಕಶಿಪುವಿನುದರ ಸೀಳಿ ಕರುಳ್ಮಾಲೆಧರಿಸಿದ್ದು ಹೇಳಲೆ 4ಬಾಲನಾಗಿ ಬ್ರಹ್ಮಚಾರಿ ವೇಷವ ತೋರಿ ಬಲಿಯ ಬೇಡಿದುದನು ಹೇಳಲೆ ?ಲೀಲೆಯಿಂದಲಿ ಧರೆಯಈರಡಿ ಮಾಡಿದ ಜಾಲತನ್ವನುನಾನು ಹೇಳಲೆ5ಹೆಸರಿಲ್ಲದೆ ಹೋಗಿ ಹೆತ್ತತಾಯ್ ತಲೆಕುಟ್ಟಿ ಕೊಡಲಿಯ ಪಿಡಿದದ್ದು ಹೇಳಲೆ ?ಸೋಸಿ ದೈತ್ಯರನೆಲ್ಲ ರೋಸಿ ಪ್ರಾಣವ ಕೊಂಡ ದೋಷತನವ ನಾನು ಹೇಳಲೆ 6ತಾಯ ಮಾತನೆಕೇಳಿ ತಮ್ಮನ ಒಡಗೂಡಿಅಡವಿಯೊಳಿದ್ದುದು ಹೇಳಲೆ ?ಮಾಯಾಸೀತೆಗಾಗಿ ರಾವಣನನು ಕೊಂದು ಮಹಿಮೆಯ ನೆರೆದದ್ದು ಹೇಳಲೆ ? 7ತರಳತನದಲಿ ದುರುಳನಾಗಿ ಬಂದ ಒರಳೆಳೆತಂದದ್ದು ಹೇಳಲೆ(ಬೆರಳಿಂದ ಗಿರಿಯೆತ್ತಿ ಕಂಸನ ಕೊಂದ ಆ ) ದುರುಳತನದ ಸುದ್ದಿ ಹೇಳಲೆ 8.............................................................................................................................................................................. 9ರಾಯ ರಾವುತನಾಗಿ ರಾಯರ ಮನೆ ಪೊಕ್ಕು ಕಡುಗವ ಪಿಡಿದದ್ದು ಹೇಳಲೆ ?ಆಯತದಿಂದ ಕಲಿಯಲಿದ್ದು ಮನುಜರ ಮಾಯವ ತೋರಿದ್ದು ಹೇಳಲೆ 10ಧರೆಯೊಳಗಧಿಕವಾದ ಉರಗಗಿರಿಯಲ್ಲಿ ಸ್ಥಿರಿವಾಗಿನಿಂತದ್ದು ಹೇಳಲೆ ?ಕರುಣದಿಂ ಭಕುತರ ಪುರಂದರವಿಠಲನೆಂದು ನಾ ಹೇಳಲೆ 11 *
--------------
ಪುರಂದರದಾಸರು
ವಾಸೂಕಿ ಶಯನ ಅಶೋಕ ಪರಾಕೂ |ವಾಸುದೇವಾನಿರುದ್ಧ ಶ್ರೀ ಕೃಷ್ಣ ಪರಾಕೂ ||ಸಾಸಿರನಾಮದ ಹರಿಯೆ ಪರಾಕೂ |ದೋಷರಹಿತ ರಘುಪತಿಯೆ ಪರಾಕೆಂದು ||ಮೀಸಲಾರುತಿಯಾ ಬೆಳಗೀರೆ ಪವೃಂದಾವನದೊಳಗಿಹನೆ ಪರಾಕೂ |ತಂದಿ ತಾಯ್ಗಳ ಬಿಡಿಸಿಹನೆ ಪರಾಕೂ ||ಸಿಂಧುರವರದ ಗೋಪಾಲ ಪರಾಕೂ ||ಸಿಂಧುಶಯನಪದ್ಮನಾಭಪರಾಕೆಂದು ||ಛಂದದಲಾರುತಿಯಾ ಬೆಳಗೀರೆ1ಸತ್ಯಾಭಾಮಿ ರುಗ್ಮಿಣಿ ರಮಣಾ ಪರಾಕೂ |ಮುತ್ಯಗ ಪಟ್ಟಗಟ್ಟಿದವನೆ ಪರಾಕೂ ||ಭಕ್ತ ಪೋಷಕ ತ್ರಿವಿಕ್ರಮನೆ ಪರಾಕೂ |ಸತ್ಯಸಂಕಲ್ಪಹೃಷಿಕೇಶ ಪರಾಕೆಂದು ||ಮುತ್ತಿನಾರುತಿಯಾ ಬೆಳಗೀರೆ 2ಮಾಧವಖರ ದೂಷಣಾರಿ ಪರಾಕೂ |ಬಾದರಾಯಣಪುರುಷೋತ್ತಮ ಪರಾಕೂ ||ಯಾದವರೊಳು ಪುಟ್ಟಿದನೆ ಪರಾಕೂ |ವೇದ ಉದ್ಧರ ಮತ್ಸ್ಯರೂಪಿ ಪರಾಕೆಂದು ||ಮೋದದಲಾರುತಿಯಾ ಬೆಳಗೀರೆ3ಇಂದ್ರ ಬಲಿಯನುಂಡಾ ಧೀರ ಪರಕೂ |ಕಂದಗೊಲಿದ ನರಸಿಂಹ ಪರಾಕೂ ||ನಂದನಂದನಶೌರಿಪರಾಕೂ |ಮಂದರಪರ್ವತ ಧರನೆ ಪರಾಕೆಂದು ||ಕುಂದಣದಾರುತಿಯಾ ಬೆಳಗೀರೆ 4ಜಟ್ಟೇರ ಹುಡಿಗುಟ್ಟೀದವನೆ ಪರಾಕೂ |ದುಷ್ಟ ಕಂಸನ ತರಿದವನೆ ಪರಾಕೂ ||ಕೆಟ್ಟಾಜಾಮಿಳಗೊಲಿದವನೆ ಪರಾಕೂ |ಅಷ್ಟು ಲೋಕವ ಸಲಹುವನೆ ಪರಾಕೆಂದು ||ತಟ್ಟಿಯೊಳಾರುತಿಯಾ ಬೆಳಗೀರೆ5ಮಾರನಯ್ಯಾ ಪ್ರಾಣೇಶ ವಿಠಲ ಪರಾಕೂ |ನೀರಜಾಂಬಕ ಶ್ರೀನಿವಾಸ ಪರಾಕೂ ||ದ್ವಾರಕಿನಿಲಯಮುರಾರೆ ಪರಾಕೂ |ಕ್ಷೀರಾಬ್ಧಿ ಸುತಿಯ ವಲ್ಲಭನೆ ಪರಾಕೆಂದು ||ನಾರಿಯರಾರುತಿಯಾ ಬೆಳಗೀರೆ 6
--------------
ಪ್ರಾಣೇಶದಾಸರು
ವಿಜಯನ ಸತಿಯಿಂದ ಫಲವಾಯ್ತು-ಅದು |ಗಜೇಂದ್ರನಿಂದ ದೋರೆ ಹಣ್ಣಾಯ್ತು ||ದ್ವಿಜಶುಕಮುನಿಯಿಂದೆ ಫಲ ಪಕ್ವವಾಯಿತು |ಅಜಾಮಿಳ ತಾನುಂಡು ರಸ ಸವಿದ 2ಕಾಮಿತ ಫಲವೀವ ನಾಮವೊಂದಿರಲಾಗಿ |ಹೋಮ ನೇಮ ಜಪತಪವೇಕೆ ||ಸ್ವಾಮಿ ಶ್ರೀ ಪುರಂದರವಿಠಲ ರಾಯನ |ನೇಮದಿಂದಲಿ ನೀ ನೆನೆ ಮನವೆ 3
--------------
ಪುರಂದರದಾಸರು
ವಿಠಲ ಎನ್ನನು ಕಾಯೊ ವಿಠಲ ಪಂಢರಿರಾಯವಿಠಲ ಭಕ್ತವತ್ಸಲ ವಿಠಲಹರಿವಿಠಲಪ.ದಿಟ್ಟ ಪುಂಡಲೀಕ ತನ್ನ ಪುಟ್ಟಿಸಿದವರ ಮನಮುಟ್ಟಿ ಪೂಜಿಸಲು ಚಿತ್ತಗೊಟ್ಟು ಬಂದೆಯೊ ವಿಠಲಬಿಟ್ಟು ಬರದಲೆ ಒಡನಿಟ್ಟಿ ನೀಡಲು ಚೆಲುವಇಟ್ಟಂಗಿ ಮ್ಯಾಲಂಘ್ರಿಪದ್ಮವಿಟ್ಟು ನಿಂತ್ಯಯ್ಯ ವಿಠಲ 1ಕೊಟ್ಟ ಭಾಷೆಗೆ ಭಕ್ತರ ಕಟ್ಟಲಿ ಸಿಲುಕಿದೆಯೊ ಕಂಗೆಟ್ಟೆನೊ ಭವದಿ ನಿನ್ನಗುಟ್ಟುತೋರಯ್ಯ ವಿಠಲಪಟ್ಟಗಟ್ಟ್ಟ್ಯಜಭವರ ಕಟ್ಟಿಲೆ ಇದ್ದ ವೈಕುಂಠಪಟ್ಟಣ ಭೀಮಾತೀರದಿ ನಟ್ಟು ನಿಂತ್ಯಯ್ಯ ವಿಠಲ 2ನೆಟ್ಟನೆ ವೇದವ ತಂದು ಬೆಟ್ಟವೆತ್ತಿ ಇಳೆಯ ಪೊತ್ತಿಸಿಟ್ಟು ತಾಳ್ದೆವಟುಖಳರೊಟ್ಟಿಲೊದ್ಯೈಯ್ಯ ವಿಠಲಕಟ್ಟಿದೆ ಕಡಲ ಜಗಜಟ್ಟಿ ಗೋಪ ಬೌದ್ಧ ಕಲಿಯಮೆಟ್ಟಿ ಆಳ್ದೆ ಪ್ರಸನ್ವೆಂಕಟ ಕೃಷ್ಣಯ್ಯ ವಿಠಲ 3
--------------
ಪ್ರಸನ್ನವೆಂಕಟದಾಸರು
ವಿಠಲಯ್ಯ ವಿಠಲಯ್ಯ |ವಟಪತ್ರ ಶಯನವಟುಶ್ರೀ ಪ್ರಾಣೇಶ ಪಗಂಗಾಜನಕವಿಹಂಗವಾಹನ ವಿಧು-ಪಿಂಗಳ ಕೋಟಿ ನಿಭಾಂಗನೆ ಪ್ರಾಣೇಶ 1ನಂದನವನದಿಸಂಕ್ರಂದನಮದಹರಇಂದಿರಾದಶಮತಿಮಂದಿರ ಶ್ರೀ ಪ್ರಾಣೇಶ 2ಕಾದುಕೋ ಶರಣರ ವೇದವಿನುತಮಧುಸೂದನ ನತಸುರ ಪಾದಪ ಪ್ರಾಣೇಶ3
--------------
ಪ್ರಾಣೇಶದಾಸರು