ಒಟ್ಟು 1106 ಕಡೆಗಳಲ್ಲಿ , 99 ದಾಸರು , 918 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಣಾಧೀಶ ಗೌರೀಶ್ ವಾಗೀಶ ಶ್ರೀಶಾನ'ುಸಿ ಬೇಡುವ ಪ್ರಸಾದವನು ಜಗದೀಶಾನೆಲಸಿ ಹೃದಯದಿ ಬಂದು ನುಡಿಸು ದಯದಿಂದಾನೀ ನುಡಿಸಿದಂತೆ ನುಡಿಯುವೆ ಸ್ಪೂರ್ತಿುಂದಾ 1ದೇಹ ದೇವಾಲಯವು ದೇವರೊಳಗಿಹನುಮನದ ಗರ್ಭಾಲಯದಿ ಮಲಗಿಕೊಂಡಿಹನುನಾಲಿಗೆಯ ನಾಮಗರ್ಜನೆಯ ಬಲದಿಂದಾಮನದ ಕದ ತೆಗೆಯೆ ಕಾಣುನನು ಗೋ'ಂದಾ 2ಮನವೆ ಕಾರಣವು ಬಂಧಮೋಕ್ಷಗಳಿಗೆಮನವೆ ಕಾರಣ'ಲ್ಲಿ ಸುಖದುಃಖಗಳಿಗೆಮನಸು ಬಿಗಿ'ಡಿದ್ಹಿಡಿದು 'ಷಯಗಳ ತ್ಯಜಿಸುಮನತು ನಾಮಸ್ಮರಣೆಯೊಳು ಸದಾ ಇರಿಸು 3ಯಾವಾಗಲೂ ರಾಮ ನಿನ್ನೊಳಗೆ ಇರುವಾಭಾವದಿಂದಲಿ ಕರೆಯೆ 'ಒ' ಎಂದು ಬರುವಾದೇವರನು ನಂಬಿದರೆ ಸರ್ವದಾ ಕಾವಾಯಾವ ಅಂಜಿಕೆಯು ನಿನಗಿಲ್ಲ ತಿಳಿ ಜೀವಾ 4ನಿನ್ನೊಳಗೆ ನೀ ನಿನ್ನ ರಾಮನನು ನೋಡುನಿನ್ನ ಬೇಡಿಕೆಗಳನು ರಾಮನಲಿ ಬೇಡುಅನ್ಯರನು ಅಲಕ್ಷಿಸದೆ ಭಜನೆಯನು ಮಾಡುಪುಣ್ಯವಂತರ ಸಂಗದೊಳು ಸದಾ ಕೂಡು 5ಶ್ರವಣ ಭಕ್ತಿಯು ಬೇಕು ಮೊದಲು ಚೆನ್ನಾಗಿಶ್ರವಣವಾಗುವವರೆಗೆ ನಾದತಾನಾಗಿಭವ ಸಮುದ್ರವನು ದಾಟುವಡೆ ಸುಖವಾಗಿಶ್ರವಣವೇ ಮುಖ್ಯ ಸಾಧನವು ನಿಜವಾಗಿ 6ನಾದ ಹುಟ್ಟಿದ ಮೇಲೆ ನಾಮ ಕೀರ್ತನವುನಾಮ ಕೀರ್ತನದಿ ಅಸ್ಪಷ್ಟ ದರುಶನವುನೇಮ ಹೆಚ್ಚಾದಂತೆ ಸ್ಮರಣೆ ಶಾಶ್ವತವುಸ್ಮರಣೆಯೊಳು ಸಂಪೂರ್ಣ ವಸ್ತುದರುಶನವು 7ಅನನ್ಯ ಭಕ್ತಿಯ ಬಲವ ಬಣ್ಣಿಸುವದೇನುಕಣ್ಮುಂದೆ ಸರ್ವದಾ ಹರಿಯು ಕುಣಿಯುವನುಕಣ್ಣು ಮುಚ್ಚಣಿಕೆಯಾಟವನು ಆಡುವನುಅಣುರೇಣು ಪರಿಪೂರ್ಣನಾಗಿ ತೋರುವನು 8ಕುಣಿಯುವನು ಕುಣಿಸುವನು ನಗುತ ನಲಿಸುವನುದಣಿಯುವನು ದಣಿಸುವನು ಉಣುತ ಉಣಿಸುವನುಜನರಿಗದ್ಭುತ ಚಮತ್ಕಾರ ತೋರುವನುಕ್ಷಣ ಬಿಡದೆ ಕೆಳಗಿಳಿಯದಂತೆ ಕಾಯುವನು 9ದೇವರನು ನಂಬಿ ಕೆಡಕಾದವರು ಇಲ್ಲಜದೇವರನು ಬಿಟ್ಟು ಸುಖಹೊಂದಿದವರಿಲ್ಲಾದೇವರನು ಒಲಿಸುವೆಡೆ ಭಾವ'ರಬೇಕುಭಾವ'ಲ್ಲದ ಢೋಂಗಿನರ್ಚನೆಯು ಸಾಕು 10ಚಿನ್ನ ಬೆಳ್ಳಿಗಳ ಮಂಚಪವು ಬೇಕಿಲ್ಲಾಸಣ್ಣಕ್ಕಿ ಅನ್ನ ಪಕ್ವಾನ್ನ ಬೇಕಿಲ್ಲಮಣ್ಣು ಕುಳ್ಳಿಯೊಳು ಒಣ ಅಂಬಲಿಯು ಸಾಕುಘನ್ನ ಮ'ಮನಿಗೆ ನಿರ್ಮಲ ಭಕುತಿ ಬೇಕು 11ಶ್ರವಣ ಭಕ್ತಿಯ ದಾಟದವನು 'ಸಾಧಕ' ನುಪಾದಸೇವನದಿಂದ 'ಸಾಧು' ಆಗುವನುದಾಸ್ಯ ಭಕ್ತಿಯ ಮುಂದೆ 'ಸಿದ್ಧ' ನಾಗುವನುಸಖ್ಯಭಕ್ತಿಯ ಮುಂದೆ 'ಗುರು'ವು ಆಗುವನು 12ಭಕ್ತಿ ಮಾರ್ಗವು ಬಹಳ ಸುಲಭ ಸಾಧನವುಭಕ್ತಿ ಸರ್ವರಿಗೆ 'ಷಯದೊಳು ಪರಿಚಿತವು'ಷಯದೊಳಗಿನ ಪ್ರೀತಿ ಎಳೆದೆಳೆದು ತೆಗೆದುಪರಮಾತ್ಮನೊಳು ಇಡಲು ಭಕ್ತಿಯಾಗುವದು 13ಉಂಡದ್ದು ಶ್ರೀ ಹರಿಗೆ ನೈವೇದ್ಯವೆನ್ನುಕಂಡದ್ದು ಶ್ರೀ ಹರಿಯ ಪ್ರತಿರೂಪವೆನ್ನುಮಲಗಿದ್ದು ಶ್ರೀ ಹರಿಗೆ ಸಾಷ್ಟಾಂಗವೆನ್ನುಸುಲಭ ಪೂಜೆಯ ಮರ್ಮವೆನು ತಿಳಿದು ನೀನು 14ಸಾಲವನು ಮಾಡಿ ಹೋಳಿಗೆ ಹೊಡಿಯಬೇಡಾಜೇಲಿಗಂಜುತ ದೇಶಕಾರ್ಯ ಬಿಡಬೇಡಾಆಲಸ್ಯದಲಿ ಕಾಲವನು ಕಳಿಯಬೇಡಾಕೆಲಸದಲಿ ಕೀಳು ಮೇಲೆಂದು ಅನಬೇಡಾ 15ಸ್ವಚ್ಛ'ರಬೇಕು ಮನಬುದ್ಧಿ ದೇಹದೊಳುಅಚ್ಚುಕಟ್ಟಿರಬೇಕು ಸರ್ವಕಾರ್ಯದೊಳುಎಚ್ಚರಿರಬೇಕು ಜನಪಾತ್ರೆ ರಾತ್ರಿಯೊಳುಬಿಚ್ಚು ಮನ'ರಬೇಕು ಸ್ವಜನ 'ುತ್ರರೊಳು 16ಬಡತನವು ಬಂದಾಗ ಧೈರ್ಯ ಬಿಡಬೇಡ'ಡಿದು ನೆಂಟರ ಮನೆಯ ನೀ ಕೂಡಬೇಡದುಡಿದು ತಿನ್ನಲು ಸ್ವಲ್ಪ ಸಹ ನಾಚಬೇಡಮಡದಿ ಹುಟ್ಟಿದ ಮನೆಯ ನೀ ಸೇರಬೇಡಾ 17ಗಾಜಕಾರಣದೊಳು ' ಮುಚ್ಚುಮನ' ಬೇಕುಧರ್ಮಕಾರಣದೊಳಗೆ 'ಸ್ವಚ್ಛಮನ' ಬೇಕುಅರ್ಥಕಾರಣದೊಳಗೆ ' ಮೆಚ್ಚುಮನ'' ಬೇಕುಕಚ್ಚೆಕೈಗಳು ಸದಾ ಸ್ವಚ್ಛ'ರಬೇಕು 18ಸಂಸಾರ ಮಾಡುವಡೆ ಧನವ ಸಂಗ್ರ'ಸುಸನ್ಯಾಸಿಯಾಗುವೆಡೆ ವೈರಾಗ್ಯ ಬೆಳೆಸುಸರ್ವಕರ್ಮಗಳಲ್ಲಿ ಶ್ರೀಹರಿಯ ಸ್ಮರಿಸುಸರ್ವದಾ ಸಂತ ಸಂಗದೊಳು ಸಂಚರಿಸು19ಸಂತ ಸಂಗದೊಳು ಸಂಚರಿಸುವುದು ಸ್ನಾನಾಸಂತ ವಚನಾಮ್ರತದ ಪಾನವೇ ಸ್ನಾನಾಸಂತರನು ಸಂತೋಷಪಡಿಸುವುದು ಸ್ನಾನಾಶಾಂತಮನದಿಂ ಹರಿಯ ಚಿಂತಿಪುದ ಸ್ನಾನಾ 20ಬಾಲ್ಯದಲಿ ಬ್ರಹ್ಮಚರ್ಯದಿ ಬಲವ ಬೆಳೆಸುತಾರುಣ್ಯದಲಿ ದುಡಿದು ಧನವ ನೀ ಗಳಿಸುವೃದ್ಧಾಪ್ಯದೊಳು ಸದಾ ಶ್ರೀಹರಿಯ ಸ್ಮರಿಸುಶ್ರೀಹರಿಯ ಸ್ಮರಣೆಯೊಳು ಆಯುಷ್ಯ ಸವೆಸು 21ಮೊದಲು ನಿನ್ನ ಪ್ರಯತ್ನ ತಪ್ಪದೆಲೆ ಮಾಡುಅದು ನೀಗದಿರೆ ಮುಂದೆ ದೈವವನು ನೋಡುಮದುವೆಯಾಗುವ ಮೊದಲು ತಿಳಿತಿಳಿದು ನೋಡುದುಡಿದು ಧನ ಗಳಿಸಿ ಸುಖದಿಂದ ಬಾಳುವೆ ಮಡು 22ಧನ'ಲ್ಲದವನ ಸಂಸಾರ ಸುಖವಲ್ಲಾಮನೆಯೊಳಗೆ ನಿತ್ಯ ಕಿರಿಕಿರಿಯು ತರವಲ್ಲಾದನದಂತೆ ಹೆಣ್ಣು ನುಡಿಯುವುದು ಸರಿಯಲ್ಲಾಎಣಿಕೆುಲ್ಲದೆ ಮಕ್ಕಳಾಗುವುದು ಸಲ್ಲಾ23ನೆಂಟರೊಳು ಬಹುದಿನ ಕೆಳಗಿರಬೇಡಾ'ಫ್ರಂಟಸೀಟಿ'ನ ಮೇಲೆ ನೀ ಕೂಡಬೇಡಾಒಂಟಿಯಲಿ ಹೆಂಡತಿಯ ಬಿಟ್ಟು ಇರಬೇಡಾಗಂಟು ಒಬ್ಬರ ಕೈಗೆ ಕೊಟ್ಟು ಆಳಬೇಡಾ 24ನಿನ್ನಂತೆ ತಿಳಿ ಪರರ ಸುಖ ದುಃಖಗಳನುಅನ್ಯಥಾ ನೋಡದಿರು ಅಣ್ಣ ತಮ್ಮರನುಸರ್ವಥಾ ಸ'ಸದಿರು ಅನ್ಯಾಯಗಳನುತಿಳಿಯದೇ ಹಳಿಯದಿರು ಭಿನ್ನ ಮತಗಳನು 25ಅತಿ ಮತುಗಳು ಬೇಡ ಅತಿ ಮೌನ ಬೇಡಾಅತಿ ತಿನಸು ಬೇಡ ಅತಿ ಉಪವಾಸ ಬೇಡಾಅತಿ 'ಹಾರವು ಬೇಡ ಅತಿ 'ನಯ ಬೇಡಾಅತಿ ಉದಾರತೆ ಬೇಡ ಜೀನತನ ಬೇಡಾ 26ಭೂ'ುಂಗೆ ಭಾರವಾಗುತ ತಿರುಗಬೇಡಾಕೂಳಿಂಗೆ ಕಾಳಾಗಿ ನೀ ಕೂಡಬೇಡಸಾಲ ಸಿಗುವಾಗ ಸಂತೋಷ ಪಡಬೇಡಾಸಾಲವೇ ಶೂಲವೆಂಬುದು ಮರೆಯಬೇಡಾ 27ಹನಿಗೆ ಹನಿ ಕೂಡಿದರೆ ಹಳ್ಳದಾಗುವುದುತೆನಿಗೆ ತೆನಿ ಕೂಡಿದರೆ ರಾಶಿಯಾಗುವುದುಕ್ಷಣಬಿಡದೆ ಕಂಡಲ್ಲಿ 'ದ್ಯೆಯನು ಗಳಿಸುಕಣಬಿಡದೆ ಧನ ಧಾನ್ಯಗಳನು ಸಂಗ್ರ'ಸು 28ಮಾತು ಕೃತಿಗಳಿಗೆ ಬಲು ಮೇಳ'ರಬೇಕುನೀತಿಯೊಳು ತನ್ನ ಮನಸಾಕ್ಷಿ ಇರಬೇಕುಮಾತು ಬಲು ಸ'ುದ್ದು ಸತ್ಯ'ರಬೇಕುಸತ್ಯ'ಲ್ಲದ ಸುಳ್ಳು ಸ' ಮಾತು ಸಾಕು 29ಐಕ್ಯ'ದ್ದರೆ ಸೌಖ್ಯ ಭೇದದೊಳು ಬೇದಾಐಕ್ಯ'ದ್ದರೆ ಬಲವು ಕ್ಷಯಬೇನೆ ಭೇದಾಐಕ್ಯ'ದ್ದರೆ 'ಗ್ಗು ಭೇದದೊಳು ಕುಗ್ಗುಐಕ್ಯದಿಂದ ಸ್ವಾತಂತ್ರ್ಯ ರಥವನ್ನು ಜಗ್ಗು 30ತನ್ನ ಅಭಿಮಾನ ತನ್ನವರ ಅಭಿಮಾನತನ್ನ ಕುಲಗೋತ್ರ ಜಾತಿಯ ಸ್ವಾಭಿಮಾನತನ್ನ ಭಾಷಾರಾಷ್ಟ್ರ ಧರ್ಮಾಭಿಮಾನಮಾನವನಿಗಿರಬೇಕು ಇಲ್ಲದವ 'ಶ್ವಾನಾ' 31ತನ್ನತನ ಬಿಡಬೇಕು ತನ್ನವರಿಗಾಗಿತನ್ನವರ ಕುಲಗೋತ್ರ ಜಾತಿಗಳಿಗಾಗಿ ಕುಲಗೋತ್ರ ಜಾತಿಗಳ ತಾಯ್ನಾಡಿಗಾಗಿತಾಯ್ನಾಡು ನುಡಿಧರ್ಮ ಪರಮಾತ್ಮಗಾಗಿ 32ತನ್ನ ಉದ್ಯೋಗ ಮನಮುಟ್ಟಿ ಮಾಡುವರುಉಣಲು ಅಧಿಕಾರ ಆಮೇಲೆ ದೊರಕುವದುಉಣುವಾಗ ಶ್ರೀಹರಿಯ ಸ್ಮರಣೆ ಮಾಡುವದುಮನೆಯೊಳಗೆ ಶಿಸ್ತು ಶಾಂತಿಗಳ ಕಾಯುವದು33ಹರಿಕಥಾ ಕೀರ್ತನ ಪುರಾಣ ಪಠಿಸುವದುಸರಸ ವಾಙ್ಮಯದ ಅಭ್ಯಾಸ ಮಡುವದುತರು ಬರುವ ತನ್ನ ವ್ಯವಹಾರ ನೋಡುವದುಪರ ಪರಿಸ್ಥಿತಿಗಳನು ತೂಗಿ ನೋಡುವದು 34'ಶ್ರಾಂತಿ ಅಭ್ಯಾಸಿ ಸರಸ ಸಲ್ಲಾಪನಿಶ್ಚಿಂತೆುಂದ ನಿದ್ರೆಯು ಸೌಖ್ಯರೂಪನಿತ್ಯ ಮಾನವನ ದಿನಚರಿಯ ಈ ರೂಫನಿಶ್ರೇಯಸಕೆ ಸುಲಭ ಸಾಧನವು ಭೂಪಾ 35ಸ್ವಚ್ಛ ಹವೆ ನೀರು ವ್ಯಾಯಾಮ 'ಶ್ರಾಂತಿಸಾತ್ವಿಕ ಸಸತ್ವಾನ್ನ ಪಾನಗಳ ಪ್ರೀತಿಉಚ್ಚತಮ ಧ್ಯೇಯ ಆಚರಣೆಗಳ ರೀತಿಮೋಕ್ಷಕ್ಕೆ ಸಾಧನವು ಇಹದಿ ಸಂತೃಪ್ತಿ 36ದೇಹ ಬಿದ್ದರೆ 'ಂದೆ ಕೀರ್ತಿುರಬೇಕುಕೀರ್ತಿ ಬರುವಂಥ ಕಾರ್ಯವ ಮಾಡಬೇಕುಕಾರ್ಯದೊಳು ಕುಶಲತನ ದಕ್ಷತೆಯು ಇರಬೇಕುಫಲವು ಪರಮಾತ್ಮನಾಧೀನವೆನಬೇಕು 37ಸರ್ವದಾ ಸುಖವೆ ಇದ್ದವರು ಯಾರುಂಟುಅವರವರ ಕರ್ಮ ಫಲವೇ ಅವರ ಗಂಟುಬೆಳತು ಕತ್ತಲೆಯಂತೆ ಚಕ್ರ ಆರುಗುವದುಸುಖ ದುಃಖ ಬರುವಾಗ ಬಂದು ಹೋಗುವುದು 38ಅನುಭವದಿ ಹೆಚ್ಚು ಸಾಧನ ಬೆಳೆಯಬೇಕುಅನುಭವದ ಮಾತುಗಳು ಬಚ್ಚಿಡಲು ಬೇಕುಅನುಭವವು ಬಂತೆಂದು ಗರ್ವ ಪಡಬೇಡಾಗರ್ವದಿಂದಲಿ ಮತ್ತೆ ಕೆಳಗಿಳಿಯ ಬೇಡಾ 39ಅಡಗಿ ಅಂಬಲಿ ಅರ' ಅಂಚಡಿಯ ಕಡೆಗೆಹುಡುಗರ ಬಲಾರೋಗ್ಯ ನಡೆನುಡಿಯ ಕಡೆಗೆಕಡು ಚಾಣ್ಮೆುಂದ ನೋಡುವದು ಸತಿ ಪತಿ ಕೆಲಸಾ 40ಪತಿುಂದಲೇ ಸತಿಯು ಸತಿುಂದ ಪತಿಯುಸತಿಪತಿಯ ಪ್ರೇಮದಿಂದಾತ್ಮದುನ್ನತಿಯುಪತಿಯ ಕೋಪದಿ ಕಲ್ಲು ಆಗುವಳು ಸತಿಯುಸತಿಯ ಶಾಪದಿ ಕತ್ತೆಯಾಗುವನು ಪತಿಯು 41ಸಾ'ಗಂಜಲು ಬೇಡ ಸಾ'ಗಳಬೇಡಾಸಾವು ಅಂದರೆ ಭಯಂಕರ ತಿಳಿಯಬೇಡಾದೇಹಕ್ಕೆ ಬಾಲ್ಯ ಯೌವನ ಮುಪ್ಪಿನಂತೆದೇಹಾಂತರ ಪ್ರಾಪ್ತಿಯೇ ಮರಣಗೀತೆ 42'ದ್ಯಾರ್ಥಿ ಬಡವನಿದ್ದರೆ ಭಿಕ್ಷೆನೀಡುಅಶನಾರ್ಥಿ ಟೊಣಪನಿದ್ದರೆ ದೂರ ಮಾಡುಹಸಿವೆ ಚೆನ್ನಾಗಿ ಇದ್ದರೆ ಊಟ ಮಾಡುಹಸಿಯು ಸಾಕಷ್ಟು ಇದ್ದರೆ ಬಿತ್ತಿನೋಡು43ಶುದ್ಧ ಆಚರೆಣೆುದ್ದರೆ ಮಾತನಾಡುಬುದ್ಧಿ ಬಲು ಚುರುಕು ಇದ್ದರೆ ವಾದ ಮಡುದುಡ್ಡು ರಗಡಿದ್ದರೆ ಘಡಾಮೋಡ ಮಾಡುಜಡ್ಡು ಇದ್ದರೆ ಪಥ್ಯದುಪವಾಸ ಮಾಡು 44ಹಾಳುಹರಟೆಯ ಬಿಟ್ಟು ಶ್ರೀ ಹರಿಯ ಸ್ಮರಿಸುಕಾಲುವನು ನೋಡಿ ಸತ್ಕರ್ಮ ಆಚರಿಸುನಾಳೆ ಮಾಡುವೆನೆಂಬ ಮಾತು ದೂರಿರಿಸುನಾಳೆ ಮಾಡುವ ಧರ್ಮ ಇಂದು ನೀ ಮುಗಿಸು 45ಮನ ಮುಟ್ಟಿ ಸ್ಮರಣೆ ಸಂತತ ಮಾಡಬೇಕುಮನಸು ಓಡಲು ಮತ್ತೆ ಜಗ್ಗಿ ತರಬೇಕುಅನುಭವವು ಬಂದಂತೆ ಮನಸು ಕರಗುವದುಮನಸು ಕರಗಿದರೆ ವಾಸನೆಯು ಅಳಿಯುವದು 46ಎಲ್ಲ ಕಡೆಯಲಿ ಇರುವನೊಬ್ಬನೇ ದೇವಎಲ್ಲ ನಾಮಗಳಿಂದಲೂ ಕರೆಸಿಕೊಳುವಾಯಾವ ಬೇಕಾದ ಹೆಸರಿನ ದೇವರನ್ನುಭಕ್ತಿುಂ ಭಜಿಸಿದರೆ ಬಂದು ಪೊರೆಯುವನು47ಧನಕನಕದಾಶೆಯನು ತೊರೆದವನು ಸಂತವನಿತೆಯರ ಬಲೆಯೊಳಗೆ ಸಿಗದವನು ಸಂತಮನದಿ ಮಹಾದೇವನನು ಕಂಡವನು ಸಂತಜನರೊಳು ಜನಾರ್ಧನನ ನೋಡುವನು ಸಂತ 48ಘೋರ ಯುದ್ಧದಿ ನರನ ರಥವ ನಡೆಸಿಹನುಸೀರೆಯಾಗುತ ಸತಿಯ ಮಾನ ಉಳಿಸಿದನುನೀರಿನವನಾಗಿ ಎಂಜಲವ ಬಳಿದಿಹನುಪರಮ ಪುರುಷನ ಕರುಣೆಗೆಣಿಯು ಉಂಟೇನು 49ಹೃದಯ ದೊಳಗಿದ್ದ ಶ್ರೀಹರಿಯ ಮರೇತುಕಡುದ್ಯೆನ್ಯ ಬಿಡಬೇಡ 'ಷಯದೊಳು ಬೆರೆತುಕಾಮಧೇನು'ನ ಕೆಚ್ಚಲೊಳಿದ್ದ ನೀನುಅಮೃತವನು ಬಿಟ್ಟು ರತ್ನವನು ಕುಡಿವೆಯೇನು 50ಸರ್ವ ದುಃಖಗಳು ನಿರ್ಮೂಲವಾಗುವದುಸಂಸಾರ ಪರಮಾರ್ಥ ಕೂಡಿ ನಡೆಯುವವುಪ್ರಭು ರಾಮಚಂದ್ರನ ಪ್ರಸಾದ ಮ'ಮೆಯನುಪಠಿಸಿ ಆಚರಿಸಿದರೆ ಸುಖದಿ ಬಾಳುವನು 51ಜಯಜಯತು ಆರ್ಯ ಭೂಮತೆ 'ಖ್ಯಾತೆಜಯತು ಭಾರತಮಾತೆ ಸರ್ವಜನ ತ್ರಾತೆಜಯಜಯತು ಜಯ'ಂದ ಜನನಿ ಕಡು ಕರುಣಿಜಯ ಜಯತು ಸರ್ವ ಸಂಸ್ಕøತಿಯ ಮುಕುಟಮಣಿ 52ಅತಿಥಿ ಬಂದರೆ ಮನ ದೊಡ್ಡದಿರಲಿಒಣಹೆಮ್ಮೆ ಬೇಡ ಆದರದ ಮಾತಿರಲಿಮಾತು ಕೃತಿ ನಿಜ ಪ್ರೇಮ ತುಂಬಿರಲಿಊಟ ಉಪಚಾರದಿಂದ ಸಂತೋಷಗೊಳಲಿ 53ಗುಡಿಯೇಕೆ ಬೇಕು ಮನದೊಳಗೆ ಹರಿಯುಂಟುಅದರ ಕದ ತೆಗೆಯ ಪ್ರತಿಬಂಧವೇನುಂಟುಗುಡಿಯೊಳಗೆ ಹೊಗಿಸಬೇಕೆಂಬುವುದು ಛಲವುಛಲ 'ದ್ದರೇನದಕೆ ಆಧ್ಯಾತ್ಮ ಬೆಲೆಯು54ಮನ ಪ'ತ್ರ'ದ್ದರೆ ದೇವ ಒಲಿವಾಮನಸು ಅಪ'ತ್ರ'ದ್ದರೆ ದೇವ ಕುದಿವಾಮನ ಸುಪ್ರಸನ್ನ'ದ್ದರೆ ದೇವ ಒಲಿವಾಮನಸು ಧುಸುಮುಸು ಇದ್ದರೆ ದೇವ ಕುದಿವಾ 55ಮನಸು ನಿರ್ಭಯ'ದ್ದರಾ ದೇವ ಒಲಿವಾಮನಸು ನಿರ್ಮಲ'ದ್ದರಾ ದೇವ ಒಲಿವಾಮನಸು ನಿರಹಂಕಾರವಾದಾಗ ಬರುವಾಮನಸು ನಿಷ್ಕಪಟವಾದರೆ ಬಂದು ಪೊರೆವಾ 56ಅನ್ಯರಿಗೆ ನಿನ್ನ ಭಾರವ ಹಾಕಬೇಢನಿನ್ನ ಯೋಗ್ಯತೆ'ುೀರಿ ಭಾರ ಹೊರಬೇಡನಿನ್ನ ಮನೆತನದ ಜಗಳ ಬೈಲಿಗಿಡಬೇಡಹೆಣ್ಣು ಮಕ್ಕಳ ಮೇಲೆ ಕ್ಕೆ-ಎತ್ತಬೇಡ 57ನಿನ್ನ 'ರಿಮೆಯನು ನೀ ಹೇಳಬೇಡಅನ್ಯರನು ಕೀಳೆಣಿಸಿ ಮಾತಾಡಬೇಡಕಣ್ಮುಚ್ಚಿ ಇನ್ನೊಬ್ಬರನುಕರಣೆ ಬೇಡನಿನ್ನ ಸಂಸ್ಕøತಿಯ ವೈಶಿಷ್ಟ್ಯ ಬಿಡಬೇಡ 58ಸು'ಚಾರದಿಂದ ಧ್ಯೇಯವ ಗೊತ್ತುಪಡಿಸುಗೊತ್ತುಪಡಿಸಿದ ಧ್ಯೇಯವನ್ನು ನಿತ್ಯಸ್ಮರಿಸುಮುಟ್ಟಲಾ ಧ್ಯೇಯವನು ಶಕ್ತಿ ಸಂಗ್ರ'ಸುಶಕ್ತಿಯನು ಚಾತುರ್ಯದಿಂದ ನೀ ಬಳಿಸು 59ಸಮಯ ಪ್ರತಿಕೂಲ'ರೆ ವೈರಿಗಳ ನ'ುಸುನ'ುಸಿ ಒಳಹೊಕ್ಕವರ ಬಲವ ಹದಗೆಡಿಸುಶ್ರಮಪಟ್ಟು ಅ'ುತಬಲ ಗುಪಿತದಿಂ ಬೆಳಿಸುಸಮಯ ಸಾಧಿಸಿ ದುಷ್ಟಜನರನು ಸಂಹರಿಸು60ದೇಹದೊಳು ನೀನುಂಟು ದೇಹ ನೀನಲ್ಲನಾ ಎಂಬ ಜ್ಞಾನ ನಿನಗುಂಟು ಆದಕಿಲ್ಲನೀನು ಈ ದೇಹದಿಂದ ಹೊರಬೀಳಲಾಗಹೆಣವೆಂದು ಕರೆಯುವರು ದೇಹವನು ಬೇಗ 61ಹುಟ್ಟುವವ ನೀನಲ್ಲ ಹುಟ್ಟುವದು ದೇಹಬೆಳೆಯುವವ ನೀನಲ್ಲ ಬೆಳೆಯುವದು ದೇಹಸಾಯುವವ ನೀನಲ್ಲ ಸಾಯುವದು ದೇಹರೂಢಿಯೊಳು ನಿನಗಿದನು ಹಚ್ಚುವದು ಮೋಹ62ಖೋಡಿ ಮನವನು 'ಡಿದು ಸಾಧು ಮಡುವದುಸಾಧು ಮಾಡುತ ನಾಮ - ಘೋಷ ಹಚ್ಚುವದುಓಡಿ ಹೋಗಲು ಮತ್ತೆ ಎಳೆದೆಳೆದು ತಂದುಬೋಧಿಸುತ ನಾಮ ಜಪದೊಳು ಸೇರಿಸೆಂದು 63ಒಮ್ಮೆ ಹರಿನಾಮದೊಳು ಮನಸು ಸೇರಿದರೆಅದಕೆ ಆಗುವ ಸುಖವು ಆ ರುಚಿಯು ಬೇರೆಆ ರುಚಿಯ ಆ ಸುಖವು ಹತ್ತಿದರೆ ಮನಕೆತಿರುಗಿ ಎಂದಿಗೂ ಅದು ಹೋಗದದು 'ಷಯಸುಖಕೆ64ಚಿತ್ತ ಸ್ಥಿರ'ಲ್ಲದಿರೆ ಬುದ್ಧಿ ಸ್ಥಿರ'ಲ್ಲಬುದ್ಧಿ ಸ್ಥಿರ'ಲ್ಲದಿರೆ ಭಾವನೆಯು ಇಲ್ಲಭಾವನೆಯು ಇಲ್ಲದಿದ್ದರೆ ಶಾಂತಿುಲ್ಲ ಶಾಂತಿಯೇ ಇಲ್ಲದವ ಸುಖವೇನು ಬಲ್ಲ 65ಅನುಕೂಲ ಮತ ಮಾತ್ರ ನೀ ಎಣಿಸಬೇಡಪ್ರತಿಕೂಲ ಮತ ಉಪೇಕ್ಷೆಯ ಮಾಡಬೇಡಅನುಕೂಲ ಪ್ರತಿಕೂಲಗಳನು ತಿಳಿ ತಿಳಿದುಏನಾದರೊಂದು ಸಾಹಸ ಕಾರ್ಯ ಮಾಡು 66ಉದ್ಯೋಗದೊಳು ಸದಾ ಆನಂದ ಉಂಟುಉದ್ಯೋಗದೊಳಗೆ ಲಕ್ಷ್ಮಿಯ ವಾಸವುಂಟುಉದ್ಯೋಗವನು ಮಾಡಿ ದೇವರನು ಬೇಡುಉದ್ಯೋಗ ಬಿಟ್ಟು ಕುಳಿತರೆ ನಿನಗೆ ಕೇಡು 67ದೀರ್ಘ ಯೋಚನೆಯ ಮಾಡುತ ನೀ ಕೂಡಬೇಡಯೋಗ್ಯ ಮುಂಬೆಳಕು ಇಲ್ಲದೆ ಧುಮುಕಬೇಡ'ಗ್ಗಿ ಮೈಮರೆಯದಿರು ದೈವ ತೆರೆದಾಗಕುಗ್ಗಿ ಎದೆ ಒಡೆಯದಿರು 'ಧಿ ಕಾಡುವಾಗ 68ದೈವವನಕೂಲ'ದ್ದಾಗ ಎಚ್ಚರಿಕೆಗರ್ವ ಸೇರುವದು ತಿಳಿಯದಲೆ ಎಚ್ಚರಿಕೆಗರ್ವದಿ ಸ್ಮøತಿಗೆ ಸಮ್ಮೋಹವೆಚ್ಚರಿಕೆಸಮ್ಮೋಹದಿಂದ ಸರ್ವನಾಶ ಎಚ್ಚರಿಕೆ 69ದೈವ ಯತ್ನಗಳ ಗತಿ ಗಹನವಾಗಿಹುದುಒಬ್ಬೊಬ್ಬರನುಭವವು ಒಂದೊಂದು ಇಹುದುವಾದದಿಂ ಬಗೆಹರಿಯದಂಥ 'ಷಯ'ದುಇದರ ಹದ ತಿಳಿದು ಯತ್ನವಂ ಮಾಡುವದು 70ಜೋಲು ಮೋರೆಯ ಹಾಕಿ ನೀ ಕೂಡಬೇಡಕಾಲು ಅಪ್ಪಳಿಸಿ ಕೆಲಸಕೆ ಹತ್ತಬೇಡಸ್ಟೈಲು ಉಡುಗೆಯ ಉಟ್ಟುಕೊಂಡೋಡಬೇಡಮೈಲಿಗೆಯ ಮನದಿಂದ ಜಪ-ಮಾಡಬೇಡ 71ಕಾರ್ಯ ಮಾಡುವ ಜನಕೆ ಮರ್ಯಾದೆ ಮಡುಬಾಯಬಡುಕ ಜನರ ಕೃತಿಯನು ತಿಳಿದು ನೋಡುಧೈರ್ಯದಿಂ ದುರ್ಜನರ ಕೂಡ ಹೋರಾಡುಆರ್ಯ ಸಂಸ್ಕøತಿಯ ಸಂರಕ್ಷಣೆಯ ಮಾತು 72ಗುಣ ಕರ್ಮಗಳ ನೋಡಿ ಮಾನವನು ಮಾಡುಒಣ ಜನ್ಮ ಜಾತಿ ತುಸು ದುರ್ಲಕ್ಷ ಮಾಡುಗುಣ ಕರ್ಮದಿಂದ ಅತಿ ನೀಚನಾದವನುಜನುಮ ಮಾತ್ರದಿ ಹೇಗೆ ಶ್ರೇಷ್ಠನಾಗುವನು73ತಪ್ಪು ಇಲ್ಲದೆ ಕ್ಷಮೆಯ ಬೇಡುವವ ಮೂರ್ಖತಪ್ಪಿದರು ಒಪ್ಪಿದವನು ಕಡುಮೂರ್ಖತಪ್ಪು ಆಗುವದು ಮಾನವನ ಸಹಜಗುಣತಪ್ಪು ಒಪ್ಪುತ ತಿದ್ದಿಕೊಳ್ಳುವದು ಸುಗುಣ 74ನಿನ್ನ ಬಂಧುಗಳೆ ನಿನಗಾಗುವರು ಕೊನರೆಗೆಅನ್ಯರಿಗೆ ಆ ಕರುಳು ಬರುವದು ಹೇಗೆನಿನ್ನ ಬಂಧುಗಳೆಲ್ಲ ಮೂರ್ಖರೆನಬೇಡಅನ್ಯರಿಂದ ನೀ ಮೂರ್ಖನೆನಿಸಿಕೊಳಬೇಡ 75ಜನರ ಮನೆಗಳು ಬಹಳ ದಿವಸ ಇರಬೇಡಇರುವದೇ ಆದರವರಿಗೆ ಭಾರ ಬೇಡಅರಿತವರ ಕೆಲಸಗಳ ಮನೆಯಂತೆಮಡುಗೃಹದ ರೀತಿರಿವಾಜು ಕೆಡದಂತೆ ನೋಡು 76ದುಡ್ಡು ಇದ್ದಾಗ ಎಲ್ಲರ ಪ್ರೀತಿಯುಂಟುದುಡ್ಡು ಕಳಕೊಂಡು ಹೋದರೆ ಮೋರೆಗಂಟುದುಡ್ಡಿನಿಂದಲೆ ಜನರ ಬೆಲೆ ಕಟ್ಟಬೇಡದೊಡ್ಡ ಗುಣಗಳನರಿತು ನ'ುಸದಿರಬೇಡ 77ಧನದ 'ಷಯದಿ ಖಂಡ ತುಂಡ ಇರಬೇಕುಮನಬಿಚ್ಚಿ ಮೊದಲಿಗೆ ಮಾತಾಡಬೇಕುಒಣ ಮಬ್ಬುತನ ಮನದಮಂಡಿಗೆಯು ಬೇಡಕೊನೆಗೆ ಗುಣಗುಟ್ಟುತಲಿ ಹಳಹಳಿಸಬೇಡ 78ಯಂತ್ರಮಯ ಜೀವನದ ಯುಗವು ನಡೆದಿಹುದುಸ್ವಾತಂತ್ರ್ಯವೆಲ್ಲಿ ಬಡವರಿಗೆ ಉಳಿದಿಹುದುದ್ರವ್ಯಮಯವಾದ ವ್ಯವಹರ ಸಾಗಿಹುದುದೇವ ಧರ್ಮಕೆ ಅರ್ಧಚಂದ್ರ ಬಂದಿಹುದು 79ತಾಯ್ತನದ ಸುಖಕೆ ಸರಿಯಾದ ಸುಖ'ಲ್ಲತಾಯ್ತನದ ಕರುಳಿಂಗೆ ಬೆಲೆಯಂಬುದಿಲ್ಲತಾುಗಿಂದಧಿಕ ದೈವತವು ಬೇರಿಲ್ಲತಾಯ್ - ಸೇವೆಗಿಂದಧಿಕ ಪುಣ್ಯಾವೆ ಇಲ್ಲ 80ಚನ್ನಾಗಿ ಸಂಸಾರ ಮಾಡಬಲ್ಲವನುಸುಲಭದಿಂ ಪರಮಾರ್ಥವನು ಸಾಧಿಸುವನುಸಂಸಾರದೊಳಗಿದ್ದು ಸನ್ಯಾಸಿಯೆನಿಸುಸನ್ಯಾಸಿಯಾಗಿ ಸಂಸಾರದೊಳು ಈಸು81ಮನೆಯಲ್ಲಿಯೇ ಸ್ವರ್ಗ ಮನೆಯಲ್ಲಿಯೇ ನರಕಜಾಣರಿಗೆ ತಿಳಿಯುವದು ನೋಡಿದರೆ ಗಮಕಜಾಣ ಪ್ರೇಮಳ ಪತಿಯಮನೆ ಸತಿಗೆ ಸ್ವರ್ಗಕೋಣ ಕರ್ದಮ ಕಟುಕ ಪತಿುರಲು ನರಕ 82ಪತಿಯ ಮನ ಒಲಿಸಿ ಕೋತಿಯ ತೆರದಿ ಕುಣಿಸಿಅತ್ತೆ ಮಾವರು ಬಂಧುಬಳಗವನು ಹೊರನುಗಿಸಿಸ್ವೇಚ್ಛೆುಂ ಎದೆಮೆಟ್ಟಿ ಬೇರಿರುವ ಸೊಸೆಸೊಸೆಯಲ್ಲ ರಕ್ಕಸಿಯು ಕಿ'ಹೊಕ್ಕ ತೊಣಸಿ83ಸರ್ವದಾ ಸತ್ವಗುಣಿ ಶಾಂತ ನಿರುತಿಹನುರಾಜಸನ ಶಾಂತಿುಂ ಧಡಪಡಿಸುತಿಹನುಕಿರಿಕಿರಿಯು ತಾಮಸಿಗೆ ಬಿಟ್ಟುರುವದಿಲ್ಲಾತ್ರಿಗುಣಗಳ ದಾಟದಿದ್ದರೆ ಮೋಕ್ಷ'ಲ್ಲಾ 84ಅನ್ನದೊಳು ಮುಖ್ಯ ಸಾತ್ವಿಕ ಗುಣವು ಬೇಕುಸಂಪಾದನೆಯ ಮಾರ್ಗ ಸರಳ'ರಬೇಕುಸಂಸರ್ಗ ಸಂಸ್ಕಾರ ಸುಷ್ಟ'ರಬೇಕುಸಾತ್ವಿಕಾನಂದ ಮನದಿಂದ ಉಣಬೇಕು 85ಮೂಲ ಮನ'ಹುದು ಮೂರರೊಳೊಂದು ಪಾಲುಸನ್ನಿವೇಶಗಳಿಂದ ಮತ್ತೊಂದು ಪಾಲುತಿನ್ನುವಾ ಅನ್ನದಿಂದ ಉಳಿದೊಂದು ಪಾಲುಮೂರು ಕೂಡಿದ ಮನವೆ ನಿನಗೆ ಹರಿಗೋಲು86ಪ್ರಾರಬ್ಧವನುಭ'ಸಿ ತೀರಿಸಲು ಬೇಕುಅಪರೋಕ್ಷದಿಂದ ಸಂಚಿತ ಕಳಿಯಬೇಕುಸರ್ವದಾ ನಿರಪೇಕ್ಷ ಸತ್ಕರ್ಮ ಬೇಕುನಿರಭಿಮಾನದಿ ಕರ್ಮದ ಬೀಜ ಸುಡಬೇಕು87ದಯೆಯು ಧರ್ಮದಮೂಲ ದಯವಂತನಾಗುಭಯವು ದುಃಖದಮೂಲ ನಿರ್ಭಯನು ಆಗುಲೋಭ ಪಾಪದ ಮೂಲ ನಿರ್ಲೋಭಿಯಾಗುತ್ಯಾಗ ಪುಣ್ಯದ ಮೂಲ ತ್ಯಾಗಿ ನೀನಾಗು 88ನಿನ್ನ ಉದ್ಧಾರವನು ನೀ ಮೊದಲ ಮಾಡುಮನೆತನದ ಉನ್ನತಿಯಕಡೆಗೆ ನೀ ನೋಡುನಿನ್ನ ನೆರೆಹೊರೆ ಜನರ ಕಲ್ಯಾಣಮಾಡುಆಮೇಲೆ 'ಶ್ವದದ್ಧಾರ ಮಾತಾಡು 89ಹಳೆಯದಿದ್ದರೆ ಎಲ್ಲ ಒಳಿತು ಎನಬೇಡಹೊಸದೆಂಬ ಮಾತ್ರದಿಂದಲೆ ಹಳಿಯಬೇಡಒಳಿತು ಕೆಡಕುಗಳು ಎಲ್ಲದರಲ್ಲಿ ಇಹವುತಿಳಿದು ಉಪಯೋಗಿಸಿದರದು ಜಾಣತನವು 90ಕಾಲಮ'ಮೆಯ ಕಷ್ಟ ಬಂದಿತೆನಬೇಡಕಾಲಕ್ಕೆ ಹೆಚ್ಚಿನ ಮಹತ್ವ ಕೊಡಬೇಡಕಾಲ ನಿರ್ಮಾಣ 'ರಿಯರ ಕೈಯ್ಯೊಳಿಹುದುಎಂಥ 'ರಿಯರು ಅಂಥ ಕಾಲ ಬರುತಿಹುದು 91'ರಿಯರಾಚರಣಿಯಂ ಮನೆತನದ ಬೆಳಕು'ರಿಯರಾಚರಣೆುಂ ಮನೆತನಕೆ ಹುಳುಕು'ರಿಯರೇ ಕಾರಣರು ಮನೆಯ ಸುಸ್ಥಿತಿಗೆ'ರಿಯರೇ ಕಾರಣರು ಮನೆಯ ದುಸ್ಥಿತಿಗೆ 92ದೇಹವೇ ರಥವು ಸಾರಥಿಯು ಪರಮಾತ್ಮಜೀವ ಅರ್ಜುನ ಧರ್ಮ ಸಮ್ಮೂಡ ಆತ್ಮಸರ್ವ ಭಾವದಿ ಶರಣುಹೊಗು ಸಾರಥಿಗೆಸಾರಧಿಯು ಮುಟ್ಟಿಸುವ ನಿನ್ನ ಸದ್ಗತಿಗೆ 93ಜ್ಞಾನಪೂರ್ವಕ ''ತ ಕರ್ಮಗಳ ಮಾಡುಚಿತ್ತಶುದ್ಧಿಗೆ ಕರ್ಮಸಾಧನವು ನೋಡುಉದ್ದೇಶ ಪರಿಣಾಮಗಳ ತೂಕ ಮಾಡುಮೂಢತನ ರೂಢಿಗಳನರಿತು ಬಿಟ್ಟುಬಿಡು 94ಬಾಲಭಾವದಿ ದೇವರೊಳು ಹಟವಮಾಡುಬಾಲಭಾವದಿ ದೇವರೊಳು ಮಮತೆಮಾಡುಬಾಲಭಾವದಿ ದೇವರಿಗೆ ಬೇಡಿಕಾಡುಬಾಲಭಾವದಿ ನಿನ್ನ ಸರ್ವಸ್ವ ನೀಡು 95ಮಾತೃಭಾವದಿ ಅವನ ತೊಡೆಯ ಮೇಲಾಡುಮಾತೃಭಾವದಿ ನೀನು ವಾತ್ಸಲ್ಯ ಮಾಡುಮತೃಭಾವದಿ ತೂಗಿ ತೊಟ್ಟಿ ಮುದ್ದಾಡುಮಾತೃಭಾವದಿ ಬಿದ್ದು ಕಿರಿಕಿರಿಯಮಾಡು 96ಸಖ್ಯಭಾವದಿ ಹಾಲು ಮೊಸರೆರೆಯ ಬೇಕುಸಖ್ಯಭಾವದಿ ಬೆಣ್ಣೆ ಬಾಯ್ತುಂಬ ಬೇಕುಸಖ್ಯಭಾವದಿ ಕೊಳಲಿನೊಳು ಕುಣಿಯಬೇಕುಸಖನೆಂದು ಗೋಪಿಯಂದದಿ ಕುಣಿಸಬೇಕು 97ನಿನ್ನೊಳಗೆ ಆತನನು ನೀ ನೋಡಬೇಕುಅವನೊಳಗೆ ಸರ್ವವನು ನೀ ಕಾಣಬೇಕುತನ್ನತನ ಮರೆತು ಅವನೊಳು ಬೆರೆಯಬೇಕುಅವನ ಸೂತ್ರದ ಬೊಂಬೆ ನೀನಾಗಬೇಕು 98'ುೀನನಾದರೆ ಅವನ ಕಣ್ಣು ನೀನಾಗು ಕೂರ್ಮನಾದಾಗವನ ಬೆನ್ನು ನೀನಾಗುವರಾಹರೂಪದ ಹರಿಯ ಕೋರೆ ನೀನಾಗುನರಹರಿಗೆ ನೀ ಹದನವಾದ ನಖವಾಗು 100ವಟುವಾಮನಗೆ ಪಾದರಕ್ಷೆ ನೀನಾಗುದುಷ್ಟ ಸಂಹಾರಕನ ಪರಶು ನೀನಾಗುಅಟ'ವಾಸಗೆ ಬಿಲ್ಲುಬಾಣ ನೀನಾಗುದಿಟ್ಟ ಗೊಲ್ಲನ ಕರೆದ ಕೊಳಲು ನೀ ನಾಗು 101ಬುದ್ಧನಾದರೆ ಬುದ್ಧಿವಂತ ನೀನಾಗುಕಲ್ಕಿಯಾದರೆ ಚಲುವ ಕುದುರೆ ನೀನಾಗುಎಲ್ಲಿದ್ದರೂ ಅವನ ನೆರಳು ನೀನಾಗುಪ್ರಹ್ಲಾದ ದ್ರುವ ಅಂಬರೀಷ ನೀನಾಗು 102ಧನದೊಳಗೆ ಧನ ತವೋಧನನು ನೀನಾಗುಭಾಗ್ಯದೊಳು ವೈರಾಗ್ಯ ಭಾಗ್ಯವಂತನಾಗುಇಂದ್ರಿಯಂಗಳ ಜಯದಿ ನೀ ಶೂರನಾಗುಪಂಡಿತನು ತತ್ವದಾಚರಣೆಯೊಳು ಆಗು103ಸ್ವಾತಂತ್ರವೇ ಸ್ವರ್ಗ ಪರತಂತ್ರ ನರಕಮಾತೃಭೂ'ುಯ ಸೇವೆ ಮಡದವ ಶುನಕಪತಿತರುದ್ಧಾರ ಮಾಡುವದು ಸದ್ಧರ್ಮಪತಿತರನು ತುಳಿಯುವದು ಸೈತಾನಕರ್ಮ 104ಸಂಸಾರ ಸಾಗರವ ದಾಟಿಸಲು
--------------
ಭೂಪತಿ ವಿಠಲರು
ಗಣೇಶ ಪ್ರಾರ್ಥನೆ ಸಿಂದೂರ ವದನ ಕೊಡುವರ ಸಿಂದೂರ ವದನ ಪ ಇಂದುಧರಾತ್ಮಜ ವಂದಿಸುವೆನಾ ಅ.ಪ ಮುದಮುನಿ ಮತಾಂಬುಧಿಚಂದಿರ ಬುಧಜನ ಪ್ರಸಂಗದಿ ಭವಹರ ಮಧು ವಿರೋಧಿಯ ಕಥಾಮೃತಶ್ರವಣದಿ ಒದಗಿಸು ಮಮ ಸುಜ್ಞಾನ ಮಾನಸದಿ 1 ಭಜಕರ ಮನೋರಥ ಪೂರಕ ಸುಜನರ ಭವಾಂಬುದಿ ತಾರಕ ವಿಜಯ ಸಾರಥಿಯ ಭಜನೆಯ ಮಾಡಿಸೋ ವಾರಿಧಿ ಕುಂಭ ಸಂಭವ 2 ಗಿರಿಜೆಯ ಕುಮಾರ ಕೃಪಾಕರ ಶರಧಿಜೆ ಮನೋಹರ ಕಾರ್ಪರ ನರಮೃಗೇಂದ್ರ ಚರಣಾಂಬುಜ ಮಧುಕರ ಕರುಣೆಸೆನಗೆ ಸಿದ್ಧಿಯನು ಕಾರ್ಯದಲಿ 3
--------------
ಕಾರ್ಪರ ನರಹರಿದಾಸರು
ಗುಡಿಯ ತುಂಬ ದೇವರ ಕಂಡೆ | ಅಡಿಯಿಡಗೊಡದೆನ್ನ ಹಿಡಿಕೊಂಡಿತಕ್ಕ ಪ ಕೈಯಿಲ್ಲ ಕಾಲಿಲ್ಲ ಮೂಗಿಲ್ಲ ಮಾರಿಲ್ಲ | ಮೈಯೆಲ್ಲ ನೋಡಲು ಮರಿಯಾದೆ ಇಲ್ಲ | ಸೈಯೆನಿಸಿ ಜಗಕೆಲ್ಲಕೆ ಮಿಗಿಲಾದ ದೇವರು | ವೈಯಾರ ಇಲ್ಲದೆ ಸಿಕ್ಕಿತಕ್ಕ 1 ಹೆಣ್ಣಲ್ಲ ಗಂಡಲ್ಲ ಹಣ್ಣಲ್ಲ ಕಾಯಲ್ಲ | ಹೂವಿಲ್ಲದೆ ಪೂಜೆಗೊಂಡಿಹುದಕ್ಕ | ಪೂಜೆಯ ಮಾಡುವ ಪೂಜಾರಿಯ ನುಂಗಿತು | ಮೂಜಗದೊಳು ಇದು ಸೋಜಿಗವೆನ್ನಿ 2 ಅರಿತು ನೋಡಲು ಬೆರೆತು ನಿಂತಿಹುದಲ್ಲ | ಮರೆತು ಹೋಯಿತು ನಾನೆಂಬುವದೆಲ್ಲ | ಗುರುತವ ಬಲ್ಲದು ಗುರು ಭವತಾರಕ | ಭಜಕರ ಹೊರತು ತಿಳಿಯದು ಜನಕೆ 3
--------------
ಭಾವತರಕರು
ಗುಡುಗುಡಿ ಭಾರಿ ಗುಡುಗುಡಿಗುಡುಗುಡಿ ಪಡೆಯಿರಿ ಗುರುಪುತ್ರರಾದವರು ಪ ಕಾಯ ಮಾಡಿಭಾಸುರ ಭಕ್ತಿ ಎಂದೆಂಬ ನೀರನೆ ಹೊಯ್ದುಸುಷುಮ್ನವೆಂಬ ಸೂಲಂಗಿಯನೆ ಹಾಕಿ 1 ತ್ರಿವಿಧ ಮೂಲೆಯ ಚೊಂಗೆಭೂತಲದ ಹಮ್ಮೆಂಬ ತೊಪ್ಪಲುಸಾಕಾರ ಗುರುವೆಂಬ ಬೆಂಕಿಯನೆ ಹಾಕಿಏಕಚಿತ್ತವೆಂಬ ಮುಚ್ಚಳವನೆ ಮುಚ್ಚಿ 2 ಸೋಹಂ ಎಂದೆಂಬ ಕೊಳವೆಯನೆ ಹಚ್ಚಿಬಹ ಪೂರಕ ಸೂರಿಯನೆ ಸೇದುತಆಹ ರೇಚಕವೆಂಬ ಹೊಗೆಯನೆ ಬಿಡುತಮಹಾ ಕುಂಭಕವೆಂಬ ಉಸುರನೆ ಹಿಡಿಯುತ 3 ಘುಡು ಘುಡು ಎಂದೆಂಬ ಮೇಘದ ನಾದವನು ನುಡಿಸೆಸುಡು ಮಾಯೆಯೆಂದು ಥೂ ಎಂದು ಉಗುಳುತಬಿಡಬಾರದು ಇದು ನಿತ್ಯವೆಂದೆನುತಅಡಿಗಡಿಗೆ ಊದುತ್ತ ಉರಿಯ ಎಬ್ಬಿಸುತ 4 ಹಾರಿತು ಬ್ರಹ್ಮಾನಂದವೆಂದೆಂಬ ಹರಳುಏರಿತು ಪೂರ್ಣಾನಂದದ ಲಹರಿಜಾರಿತು ತನುಮನವೆಲ್ಲ ಮರೆತು ಚಿತ್ತಸೇರಿತು ಚಿದಾನಂದನೊಳಗೆ ಲಯಿಸಿ ಕೂಡಿ5
--------------
ಚಿದಾನಂದ ಅವಧೂತರು
ಗುಣಿಸುವೆ ಗಣನಾಥಾ ಪ ಗುಣಗಣ ಚರಿತನೆ ಗುಣದೊಳು ಮೊದಲಿಗನೆಂದು ಸಾರಿ ಸಾರಿ ನಿನ್ನ ಅ.ಪ. ಎಂದಿಗು ನಿನ್ನ ಪದದ್ವಂದ್ವ ನಂಬಿದ ಕಂದನ ಮಾತ ಲಾಲಿಸೊಇಂದುವರಿಯ ಎನ್ನ ಮಂದಿರದೊಳು ಬಂದು ತಂದೆ ಕರುಣದಿ ಪಾಲಿಸೊ 1 ಮಾರ ತಾಪಕೆ ಶಿಲುಕಿ ಮಾರಿ ಮೋರೆಯ ನೋಡಿ ಮರುಳಾದೆನೊಮಾರನನುಜನೆ ಎನ್ನ ಗಾರುಮಾಡದೆ ಪೊರೆಯೊ ನಿನ್ನ ಪಾದಕೆರಗಿದೆನಯ್ಯ 2 ಉಜ್ಜಿ ಕೂಪವ ನೋಡಿ ಮೆಚ್ಚಿ ಬಲುಪರಿ ಹುಚ್ಚನಾದೆನೊ ದೇವಾ ಇಚ್ಛೆ ಪೂರೈಸೊ ನಮ್ಮಸ್ವಚ್ಛ ತಂದೆವರದಗೋಪಾಲವಿಠಲನರ್ಚಕ 3
--------------
ತಂದೆವರದಗೋಪಾಲವಿಠಲರು
ಗುರು ಪ್ರಜ್ಞಾನಿಧಿ ತೀರ್ಥ ಚರಣಾಬ್ಜ ಸೇವೆಯ ನಿರುತ ನೀಡಯ್ಯ ಯತಿವರ್ಯ ಯತಿವರ್ಯ ಪೂರ್ಣಪ್ರಜ್ಞಾರ್ಯರ ತತ್ತ್ವವರುಹಯ್ಯ ಅರುಹಯ್ಯ 1 ಕರುಣಾನಿಧಿಯೆ ನಿನ್ನ ಕಾರುಣ್ಯಕೆಣೆಯೆ ಶ್ರೀ ಕಾರುಣ್ಯ ವಿಠಲನಾ ದಯಾಪಾತ್ರ ದಯಾಪಾತ್ರ ಎನ್ನ ತಾಪತ್ರಯವ ಎನ್ನ ತಾಪತ್ರಯವ ಹರಿಸಿ ಸಲಹಯ್ಯ 2 ಶರಧಿ ದಾಟಿದ ಧೀರಾ ಗುರುತೂರ್ಯ ಶ್ರಮವಹಿಸಿ ಮೆರೆಯುವೆ ಮೆರೆಯುವೆ 3 ಮಾರ್ಗದೊಳು ಬರುತಿಹ ದುರ್ಮಾರ್ಗವನು ಜರಿದು ಸ ಯತಿವರ್ಯ ಎನ್ನ ಭವ ದುರ್ಗವನೆ ಹರಿಸಿ ಸಲಹಯ್ಯ ಸಲಹಯ್ಯ 4 ಗುರುವೆ ನಿನ್ನಯ ಕರುಣ ಕವಚವನೆ ತೊಡಿಸಯ್ಯ ಕಾರುಣ್ಯ ವಿಠಲನ ಅರ್ಚಿಪೆ ಅರ್ಚಿಪಾ ನಿನ್ನೊಳು ಕರುಣಾರಸಕೆ ಕುಂದುಂಟೆ ಕುಂದುಂಟೆ 5 ಹಿಂದಿಲ್ಲ ಮುಂದಿಲ್ಲ ಒಂದು ಬೋಧಿಪೋರಿಲ್ಲ ಮುಂದೆ ಬಾ ಎನ್ನುವರು ಮೊದಲಿಲ್ಲ ಮೊದಲಿಲ್ಲ ಇಂದು ನಾ ಮಂದನಾಗಿಹೆ ಎನ್ನ ಕರುಣಿಸೋ ಕರುಣಿಸೋ 6 ಬಂದುದಾಯಿತು ಜನ್ಮ ಸಂದು ಹೋಯಿತು ಆಯು ಕುಂದಿತೆನ್ನಯ ಕರಣ ಇಂದಿನಾ ಇಂದಿನಾ ಪರಿ ಪಥವೆನಗೆ ತೋರಯ್ಯ ತೋರಯ್ಯ7 ಮಂಕು ಮಾನವನ ಮನ ಡೊಂಕವನೆ ತಿದ್ದಿ ಶ್ರೀ ವೇಂಕಟೇಶನ ಭಕ್ತನೆನಿಸಯ್ಯ ಎನಿಸಯ್ಯ ನಿನ್ನಾ ಕಿಂಕರೊಳಗೆ ಕಿಂಕರನೆನಿಸಯ್ಯ 8 ಕಾರುಣ್ಯವಿಠಲಾಭಿನ್ನ ಶ್ರೀ ಉರಗಾದ್ರಿವಾಸವಿಠಲನ ನಿಜದಾಸ ನಿಜದಾಸ ನೀ ಪರಮೋದಾರ ಗುರುವರ್ಯ ಯತಿವರ್ಯ 9
--------------
ಉರಗಾದ್ರಿವಾಸವಿಠಲದಾಸರು
ಗುರು ಸಂಕೀರ್ತನೆ 49 ಅರಿತ ಗುರುವಿನ ಪಾದ ಇಂದು ನರಕ ಮುಂದು ಪ ಒಳ್ಳೆ ನಾವೆಯೊಳು ಕಲ್ಲು ಹಾಕಿಸಿಡು ಅದು ದಾಟಿಸುವುದುಕಲ್ಲಿಗೆ ಕಲ್ಲು ಕಟ್ಟಿದರಲ್ಲೆ ಮುಳುಗುವುದು ಅದು ಮುಂದಕೆ ಹೋಗದು1 ಜಾರುವವನ ಕೈಯ ಹಿಡಿದರೆ ತಾನು ಜಾರುವ ಮೇಲೆ ಜಾರಿ ಬೀಳುವಘೋರ ಗುರುವಿನ ಸಂಗ ಹಿಡಿದು ಭ್ರಷ್ಟನಾಗುವ ಮುಂದೆ ಕೆಟ್ಟು ಹೋಗುವ 2 ತಾನು ಮೂರ್ಖ ಅವನು ಮೂರ್ಖ ಕೂಡಲೆಂದು ಮತ್ತೂ ಕೇಡು ಇಂದುಜ್ಞಾನಿ ಚಿದಾನಂದನ ಪಾದ ಇಂದು 3
--------------
ಚಿದಾನಂದ ಅವಧೂತರು
ಗುರುರಾಜ ಕರುಣದಿ ನೋಡಯ್ಯ ಪ ಸುರಗಣ ಒಡೆಯನೆ ಕರವೆತ್ತಿ ಮುಗಿಯುವೆ ಕರೆಕರೆ ಮಾಡದೆ ಚರಣವ ತೋರಿಸು ಅ.ಪ. ಭವ ಮೋಚಕನ ಬಿಟ್ಟು ಭವಣೇಗಳನೆಪಟ್ಟು ನಾ ಒದ್ದಾಡುವೆ ಇಂದು ಅವನಿಯ ಜನರೊಳು ಅವಗುಣ ಪ್ರತಿಮೆಯ ತವಕದಿ ಪೊರೆಯದೆ ಜವನಡಿಕಳಿಸೊದೇ 1 ಅನುದಿನದೀ ನಾನು ಅನುಮಾನದಿಂದಲಿ ನೊಂದೆ ಅನಿಲನ ಹಾದಿಯ ಬಿಟ್ಟು ಅನ್ಯರಾನಂಬೀ ಕೆಟ್ಟೆ ತನುಮನ ನಿನ್ನಡಿ ಅರ್ಪಿಸಿನಂಬಿದೆ ದಿನದಿನ ದಯದಿಂ ನಿನ್ನವರೊಳು ಸೇರಿಸೊ 2 ಕಾಮಕೇಳಿಯಲಿ ಮುಳುಗಿ ಕಾಮಿನಿಯರ ಬರೆದೆ ಕಾಮಜನಕನ ಮರೆತೆ ಸೋಮಶೇಖರ ಪ್ರಿಯನೆ ಶಮದಮಪಾಲಿಸಿ ತಾಮಸ ಓಡಿಸಿ ಸಾಮಜವರದನ ಪ್ರೇಮವ ಕೊಡಿಸೋ 3 ಜ್ಞಾನಶೂನ್ಯನು ಆಗಿ ಶ್ವಾನಂದದಿ ಇರುವೆ ಮಾನಾಭಿಮಾನವನ್ನು ನಿನಗೆ ಅರ್ಪಿಸಿದೆನೊ ಅನಿಲನಶಾಸ್ತ್ರದಿ ಜ್ಞಾನವ ನೀ ನೀಡಿ ಮನದಲಿ ನಲಿನಲಿ ಮುನಿಗಳ ಒಡೆಯಾ 4 ವಿಧವಿಧ ಟೀಕೆಗಳನು ಮುದದಿಂದಲಿ ಮಾಡಿ ಮೋದವಂತದ ತತ್ವಗಳ ಮುಂದಕ್ಕೆ ತಂದೆಯೋ ಸದಯದಿ ಜಯಮುನಿ ವಾಯ್ವಾಂತರ್ಗತ ಮಾಧವ ಕೃಷ್ಣವಿಠಲನ ತೋರುತ 5
--------------
ಕೃಷ್ಣವಿಠಲದಾಸರು
ಗುರುರಾಜಾ ಗುರು ಸಾರ್ವಭೌಮ ಪ ಗುರುರಾಜಾ ಗುರಸಾರ್ವಭೌಮ ನಿನ್ನಯ ಪಾದ ಸರಸಿಜಯುಗಕಭಿ ನಮಿಸುವೇ ಅ.ಪ ಕರುಣ ಸಾಗರನೆಂದು ಚರಣವ ನಂಬಿದೆ ಶರಣನ ಪಾಲಿಸು ಕರುಣಿಯೇ 1 ಅನ್ಯರ ಭಜಿಸದೆ ನಿನ್ನನ್ನೆ ಭಜಿಸುವೆ ಎನ್ನ ಮರೆವೊದಿದು ನ್ಯಾಯವೇ 2 ಪರಮ ಪುರುಷನೆ ನಿನ್ನನು ಚರನೆನಿಸಿ ಧರೆಯೋಳು ನರರÀನ್ನ ಬೇಡೊದು ಘನತೆಯೆ 3 ಸುರನು ಮನೆಯಲ್ಲಿ ಸ್ಥಿರವಾಗಿ ಇರಲಿನು ತಿರಕ ತಕ್ರಕೆ ಬಾಯಿ ತೆರೆವೋರೇ 4 ಬೇಡಿದ ಮನೋರಥ ನೀಡುವ - ನೀನಿರೆ ಬೇಡೆನೆ ನರರನ್ನ ನೀಡೆಂದೂ 5 ಸಂತತ ಎನ ಕಾರ್ಯ ವಂತರಿಲ್ಲದೆ ನೀ - ನಿಂತು ಮಾಡುವದು ಪುಶಿಯಲ್ಲ 6 ಕಾಲಕ್ಕೆ ಸುಖದುಃಖ - ಮೇಲಾಗಿ ಬರುತಿರೆ ಪೇಳಿ ಎನ್ನನು ನೀ ಪಾಲಿಸುವಿ 7 ನಿನ್ನ ಸೇವಿಪರಿಗೆ ಇನ್ನುಂಟೆ ಭಯ ಶೋಕ ಉನ್ನತ ಸುಖದೊಳಗಿರುವರೋ 8 ಭವ ಬನ್ನ ಬಡುವದಿದು ಎನ್ನಪರಾಧವದೇನಯ್ಯಾ 9 ಕುಚ್ಛಿತ ಜನರನ್ನ - ತುಚ್ಛ ಮಾಡದÀಲವರ ಇಚ್ಛೆಕಾರ್ಯವ ಮಾಡಿ ಸಲಿಸುವಿ 10 ಜನನಿ ಪುತ್ರಗೆ ವಿಷsÀ - ವಿನಯದಿ ನೀಡಲು ಜನಕ ತನಯನ ತಾ ಮಾರಲು 11 ವಸುಧೀಶ ವೃತ್ತಿಯ - ಕಸಕೊಂಡ ವಾರ್ತೆಯ ವ್ಯಸನದಿ ಆರಿಗೆ ಉಸರೋದೋ12 ಇದರಂತೆ ನೀ ಮಾಡು - ವದು ಏನು ನ್ಯಾಯವೊ ಪದುಮನಾಭನ ಪ್ರಿಯ ಗುರುರಾಯ 13 ಮೂಕ ಬಧಿರ ಕುರುಡಾ - ನೇಕ ಜನಕೆ ಕಾರ್ಯವಿ - ವೇಕ ಮಾಡಿ ನೀ ಸಲಹಿದಿ 14 ಬಂದು ಬೇಡಿದ - ಮಹ - ವಂಧ್ಯಜನರಿಗೆ ಸು - ಕಂದರ ನೀನಿತ್ತು ಸಲಹುವೀ 15 ಭೂತಾದಿ ಬಾಧವ - ನೀತರಿದು ಸುಖಗಳ ವ್ರಾತವ ಸಲಿಸೀ ಪಾಲಿಸುವಿ 16 ಹಿಂದಿನ ಮಹಿಮ - ದಿಂದೇನು ಎನಗಯ್ಯ ಇಂದು ಮಹಾ ಮಹಿಮೆ - ತೋರಿಸೋ 17 ಯಾತಕೆ ಈ ತೆರ ಮಾಡಿದೀ 18 ಎಲ್ಲೆಲ್ಲಿ ನಾ ಪೋದ - ರಲ್ಲಲ್ಲೆ ನೀ ಬಂದು ಎಲ್ಲ ಕಾರ್ಯಗಳನ್ನು ಮಾಡಿದೀ 19 ಇತರರಿಗಸಾಧ್ಯ ಅತಿಶಯ ಚರ್ಯವ ಯತನಿಲ್ಲದಲೆ ನೀ ಮಾಡಿದಿ 20 ಪೇಳಲೆನ್ನೋಶವಲ್ಲ ಭಾಳ - ನಿನ್ನಯ ಚರ್ಯ ಕೀಳುಮಾನವ ನಾ ಬಲ್ಲೇನೆ 21 ಜ್ಞಾನಿಗಳರಸನೆ ಮೌನಿ ಶಿರೋಮಣಿ ಧ್ಯಾನವ ಸಂತತ ನೀಡಯ್ಯಾ 22 ಸಂತತ ಎನ ಮನೊ - ಅಂತರದಲಿ ನೀ ನಿಂತು ಪಾಲಿಸೊ ಎನ್ನ ಮಹರಾಯಾ 23 ಎಂತೆಂಥ ಭಯ - ಬರೆ - ನಿಂತು ತಳೆದ್ಯೊ ದಯ - ವಂತ ನಿನಗೆಣೆಗಾಣೆನಯ್ಯಾ 24 ನಿನ್ನಲ್ಲಿ ಹರಿ ದಯ - ಉನ್ನತ ಇರಲಿನ್ನು ಎನ್ನಲ್ಲಿ ನಿನ ದಯ ಇರಲಯ್ಯ 25 ದಾತಗುರು ಜಗನ್ನಾಥ ವಿಠಲ ನಿನ್ನ ಮಾತು ಲಾಲಿಸಿದಂತೆ ಪೊರೆ ಎನ್ನಾ 26
--------------
ಗುರುಜಗನ್ನಾಥದಾಸರು
ಗುರುವಿನರಿಯದಾರಂಭ ತೋರುವುದ್ಯಾತಕೆ ಡಂಭ ಸುರಮುನಿಗಳಿಗಿದು ಗುಂಭ ಗುರುಮಾರ್ಗವಾಗಿರಾಲಂಬ 1 ಹೃದಯದೊಳಿರಲಙÁ್ಞನ ತುದಿನಾಲಗಿಲ್ಯಾತಕ ಙÁ್ಞನ ಇದು ನಿಜ ಮೋಹಿಸು ಖೂನ ಸಾಧಿಸುದಲ್ಲ ನಿಧಾನ 2 ಅಳಿಯದೆ ಕಾಮಕ್ರೋಧ ಹೊಳುವದ್ಯಾತಕೆ ಬೋಧ ತಿಳಿಯದೆ ಶ್ರೀಗುರುಪಾದ ಬೆಳಿಸುವದ್ಯಾತಕೆ ವಿವಾದ 3 ತತ್ವನರಿಯದ ಕವಿತ್ವ ಯಾತಕಿದು ಅಹಮತ್ವ ಸತ್ವದೊಳಾಗದೆ ಕವಿತ್ವ ಮಿಥ್ಯವಿದ್ಯಾತಕೆ ಮಹತ್ವ 4 ಆಶಿಯನಳಿದರೆ ಸಾಕು ವೇಷದೋರುದ್ಯಾತಕೆ ಬೇಕು ಹಸನಾದರ ರಸಬೇಕು ಭಾಸುದು ಮಹಿಪತಿ ಘನಥೋಕು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗೋಪಿ | ತೋರಿಸೇ || ಅವನ ದೂರಿಂದ ಸಾಕಾರ | ನೋಡುವೆ ಜೋಗಿಯಾ ಪ ಚಿಕ್ಕ ಮಕ್ಕಳು ಅಂಜಿ | ಪಕ್ಕನೆ ಒಳಮನೆ || ಪೊಕ್ಕರು ನೋಡುತಾ || ಮುಕ್ಕಣ್ಣಿನವನ 1 ಎಂದ ಮುದ್ದಿನ ನುಡಿ | ಚೆಂದದಿ ಕೇಳುತ || ಕಂದನೆತ್ತಿಕೊಂಡು | ಬಂದಳೆಶೋದಾ 2 ಇಂದು ಮೌಳಿಯ ನೋಡಿ | ಮಂದಹಾಸದಲಿಂದಾ | ನಂದವ ನಿತ್ತನು | ಬಂದ ಮಹೇಶಗೆ || 3 ಶುಭ | ಚರಣಕೆ ಎರಗುತ || ತೆರಳಿದ ಸಾಂಬನು | ಹರಷದಲಿಂದ 4 ಅನುದಿನ | ಧರೆಯೊಳು ಕಾಂಬುವರ | ಸುಕ್ರತವೆಂತೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗೋಪಿದೇವಿ ಎಂತು ಪೇಳಲೆ ನಾನೆಂತು ತಾಳಲೆ ಪ ಶ್ರೀಪತಿ ಬಂದು ನಿಂದು ಏಕಾಂತವನ್ನ ಆಡುತಾನೆ | ಪಾಪ ಇಂಥಾದುಂಟೇನೆ ಕೇಳೆ ಲಕ್ಷ್ಮೀಕಾಂತನೀತನೆ || ಮಂಥನ ಮಾಡುವಲ್ಲಿ ಮಂಥಣಿಯ ಒಡೆದನು | ಕುಂತಳವ ಪಿಡಿದು ಎನ್ನ ಕುಳ್ಳಿರಿಸಿದಾ ಕಿರಿಬೆವರನೊರಸಿದಾ 1 ಚಿಕ್ಕಮಕ್ಕಳ ಕೂಡಿ ಚಕ್ಕನೆ ತಾ ಬಂದು ಬೇಗ | ಬೆಕ್ಕು ಕುನ್ನಿ ಮರ್ಕಟವ ತಂದನಮ್ಮಾ ಇದು ಚಂದವೇನಮ್ಮ || ಉಕ್ಕುತಿಹ ಪಾಲ್ಗೊಡಗಳ ಉರುಳಿಸಿದಾ ಸುಮ್ಮನೆ | ಚೊಕ್ಕವೇನೆ ಸುಮ್ಮನೆ ಮೊಸರ ಸುರಿದಾ ಮೀಸಲು ಮುರಿದಾ 2 ರಕ್ಕಸರ ಗಂಡ ನಮ್ಮ ರಾಜ್ಯದೊಳಗಿವಗಿನ್ನು | ತಕ್ಕ ಬುದ್ದಿಯ ಪೇಳುವರದಾರು ಮೀರಿದ ಗೋಪಗೆ || ಸಿಕ್ಕ ಪಿಡಿದೇವೆಂದರೆ ಸಿಕ್ಕನಮ್ಮ ಇವ ಗುಡಿವಡ್ಡಿ ಬೇಡವೇ | ಕಕ್ಕಸದಲಿ ಬಲು ಕಕ್ಕಲಾತಿಯಲಿ 3 ಬಿರಬಿರನೆ ತಾ ಬಂದು ಬೆದರಿ ಎನಗಂದು | ಹರವಿಯ ಹಾಲು ಕುಡಿದಾ ತಾ ಎತ್ತ ಓಡಿದನೆ || ವಾರಿಗಣ್ಣಿನಿಂದಲಿ ನೋಡಿ ಒದಗಿ ಬಳಿಗೆ ಬಂದು | ತೋರವಾದ ಕುಚಗಳ ಪಿಡಿದಾನೆ ಬಲಿದನೇನೆ 4 ಹಾರ ಪದಕವು ಹಿಡಿ ಹಿಡಿ ಎಂದು ಎನ್ನ ಕೂಡ | ಸರಸವನಾಡಲಿಕ್ಕೆ ಅರಸನೇನೆ ನಮಗೆ ಪುರುಷನೇನೆ || ಪುರುಷರು ಕಂಡರೆನ್ನ ಪರಿಪರಿ ಬಾಧಿಸ್ಯಾರು | ತರಳನ ಕರೆದ್ಹೇಳು ತಿದ್ದಿ ನೀನು ಇವಗೆ ಬುದ್ಧಿ5 ಚಂಡನಾಡುತಲಿ ಚಿಕ್ಕ ಮಿಂಡಿಯರ ಕಂಡು ತಾನು | ಚಂಡು ಅಂತ ಕುಚಗಳ ಪಿಡಿದಾನೆ ಇಂಥದುಂಟೇನೆ || ಭಂಡು ಮಾಡತಾನೆ ಭಂಡಿಯ ಗೋವಳಗಿಂದು | ದಂಡಿಸವ್ವಾ ದಂಡವನು ಕೊಡು ನೀನು 6 ಚಂಡ ಪ್ರಚಂಡನಿವನು ಗೋಪಿಕೆಯರಿಗೆಲ್ಲ | ಉದ್ದಂಡನಿವನು ತಂಡ ತಂಡದಲಿ ತುರು- || ಹಿಂಡುಗಳ ಕಾಯುವ ಗೊಲ್ಲಬಾಲಕನಮ್ಮಾ |ಪಾಂಡುರಂಗ ವಿಜಯವಿಠ್ಠಲರಾಯ ಬಲು ದಿಟ್ಟನಿವನು7
--------------
ವಿಜಯದಾಸ
ಗೋವಿಂದ ಗೋಪಾಲ ಗೋಪಿಕಾವಲ್ಲಭÉೂೀವರ್ಧನೋದ್ಧಾರಕಪ. ಶೌರಿ ಹರಿವಾರಿಜೋದ್ಭವವಂದ್ಯ ವಂದಿತ ಚರಿತ್ರಪುರಮರ್ದನಮಿತ್ರ ಪರಮಪವಿತ್ರ 1 ಗರುಡತುರಗಗಮನ ಕಲ್ಯಾಣಗುಣಗಣನಿರುಪಮಲಾವಣ್ಯನಿರ್ಮಲಶರಣ್ಯ ಪರಮಮುನಿವರೇಣ್ಯಭಕ್ತಲೋಕಕಾರುಣ್ಯ 2 ಇನಶಶಿಲೋಚನ ಇಂದುನಿಭಾನನಎನುತ ಕುಂಡಲನಾದನಕನಕಮಯವಾಸನ ಘನ ಪಾಪನಾಶನಎನುತ ಕುಂಡಲನಾದ ವೇಣುನಾದ ಹಯವದನ 3
--------------
ವಾದಿರಾಜ
ಚಂಡನಾಡಿದ ರಘುಕುಲ ನಂದನಾಶ್ರಿತವತ್ಸಲ ಪ ಇಂದುಮುಖಿ ಸೀತಾದೇವಿ ಸುಂದರ ಕರಕಮಲಾರ್ಪಿತಮಾದ ಅ.ಪ. ಸೇವಂತಿ ಪರಿಚಿತಮಾದ ಮಾಲ ವಿರಚಿತ ಮಾದ 1 ಪಂಕಜನೇತ್ರಿಯು ಶಂಕಿಸದಿರಲು ಪೊಗಳಲು ಚಂಪಕ ದರಳಿÀನ 2 ಸುರಜಾಲ ಜಯ ಜಯವೆನ್ನಲು ಧೇನುನಗರ ಶ್ರೀ ರಾಮನು ಮುದದಿ 3
--------------
ಬೇಟೆರಾಯ ದೀಕ್ಷಿತರು
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ