ಒಟ್ಟು 862 ಕಡೆಗಳಲ್ಲಿ , 84 ದಾಸರು , 647 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮೇಶ್ವರ ಪೂರ್ಣ ತುಂಬ್ಯಾನ ಪರಾಮರಿಸಿ ನಿಮ್ಮೊಳಗೆ ಪರದೆ ಇಲ್ಲದೆ ಪರವಸ್ತುದೋರುವ ಕರುಣಿಸಿ ನಿಮಿಷದೊಳಗೆ ಸದ್ಗುರು ಜಗದೊಳಗೆ ಎರಡಿಲ್ಲದೆ ಗುರುಚರಣಕ ಮನಬೆರೆದನುಭವಿಸುವದಾವಾಗೆ ತ್ರಾಹಿ ತ್ರಾಹಿ 1 ನಿಜಮಾಡುವದೆಲ್ಲ ಡಾಂಭಿಕ ಮಾಡದು ತಾ ನಿಜಸುಖ ಕೂಡಲು ಪುಣ್ಯೊದಗ್ಯಾಗಲು ಗುರುಕೃಪೆ ನೋಡುದು ಕೌತುಕ ಗೂಡಿನೊಳನೇದಾ ತ್ರಾಹಿ ತ್ರಾಹಿ 2 ರಾಜಿಸುತಿಹ್ಯ ಶ್ರೀಪಾದ ಅನುದಿನ ತಾ ಸೇವಿಸಬೇಕು ಸುಬೋಧ ಮಾಜದೆ ಗುರುಚರಣಕ್ಕೆ ತನುಮನಧನ ಭಜಿಸಬೇಕು ಸರ್ವದಾ ರಾಜಯೋಗಪ್ರಸಾದ ತ್ರಾಹಿ ತ್ರಾಹಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರಾತ್ಮಾ ಶ್ರೀಶಿವಾನಂದಾ ಪ ನಮಿಸುವೇ ಪುಣ್ಯ ವಿಚಿತಾತ್ಮಾ ಮಹಾತ್ಮಾ ಸತ್ಯ ಸರ್ವಾತ್ಮಾ ಸ್ವರೂಪಾನಂದವಾ ಪಡೆವಾ ಸನ್ಮತಿಯಾ ನೀಡು ಗುರುದೇವಾ ಚರಣಕೆ ಎರಗುವೆನು ದೇವಾ 1 ಸದಾನಂದಾ ಮನೋಹರಾ ಹೃದಯದಾವಾಸ ನಿಜಸಾರಾ ಗುರುವರಾ ಶಂಕರಸ್ವರೂಪಾ ಕರುಣಿಸೈ ಬೋಧದಾನಂದಾ ಪರಾತ್ಮಾ ಶ್ರೀಶಿವಾನಂದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಪರಿ ಪೋಷಕ ತ್ವಂ ಪ ಮಾ ಕಮಲಾಸ ದಿವೌಕಸ ಪ್ರೇರಕ ಏಕಮೇವ ಜಗದಾಧಾರಕಾ 1 ಅನಿರುದ್ಧ ಮುಕುಂದಾ 2 ನಾಭಿ ಪದ್ಮ ಸುನಿಕೇತನ ಪ್ರದ್ಯುಮ್ನಾಭಿಧ ಷಣ್ಮಹಿಷಿಯರರಸಾ 3 ಅಷ್ಠ ದಳಗಳಲಿ ವಸುದಿಕ್ಷತಗಳಅಷ್ಟ ನಿಯಂತ ಸಂಕರುಷಣನೇ 4 ಎರಡು ದಶವು ದಳ ಸರಸಿವಾಸನೆಎರಡಾರರ್ಕರ ನಿಯಾಮಕ ಹರಿಯೆ 5 ಎರಡೆಂಟರ ದಳ ಇಂದ್ರ ಯೋನಿಯಲಿಉರಗೇಶಣ ನಾರಾಯಣನೇ 6 ಖಗ ವಾಹನನೇ 7 ಪದುಮ ಸಾಸಿರ ದಳ ವಸನೆ ಈಶಾಪದುಮಜ ಪೋಷಕ ವಾಸುದೇವಾ 8 ಸಪುತ ಚಕ್ರದಲಿ ವ್ಯಾಪಿಸಿ ಪೊರೆಯುವಖಪತಿಗಮನ ಗುರು ಗೋವಿಂದ ವಿಠಲಾ 9
--------------
ಗುರುಗೋವಿಂದವಿಠಲರು
ಪಾಂಡುರಂಗನ ಈಕ್ಷಿಸುವ ಸುಖವೇ ಸಾಕೂ ಅಪಾರ ಮಹಿಮ ಅನಂತಾನಂತ ರೂಪನಾ ಪ ನಖ ನಾಲ್ಬೆರಳು ಎರಡು ಜಾನು ಜಂಘೀ ಕಟಿ ನಾಭಿ ಉದರ ಉರುತರ ಕಂಠಾ ಕದಪು ಕರ್ಣ ನಯನಾ ನೊಸಲು ಶಿರ ಜಗವ ವ್ಯಾಪಿಸಿದ ರಕ್ಕಸ ಹರನಾ1 ಮಣಿ ಕುಂಡಲ ತಿಲಕ ಸರಿಗೆ ಕೌಸ್ತಭ ಕಮಲ ತುಲಸಿಹಾರ ಮುತ್ತಿನಸರ ಪ ದಕ ಅಂಗದ ಕಂಕಣ ಮುದ್ರೆ ಕಟಿಸೂತ್ರ ಸುಖದಂದಿಗೆ ಪೆಂಡೆಗೆಜ್ಜೆ ಸುಕುಮಾರನಾ 2 ಶ್ರುತಿ ತತಿಗೆ ದೂರ ಉನ್ನತ ಲೀಲ ಸಾಕಾರ ಅಪ್ರಾಕೃತ ಶರೀರ ಯತಿಗಳ ಮನೋಹರ ಮತಿಗೆ ಅಗೋಚರ ಸಿರಿ ಪತಿ ವಿಜಯವಿಠ್ಠಲನಾ 3
--------------
ವಿಜಯದಾಸ
ಪಾದ - ಮೋದದಿ ಭಜಿಸಿದ ಮನುಜನೆ ಬಲು ಧನ್ಯನೋ ಪ ಬೋಧ ಪಾದ ಸೇವಕರಾದ ಮಹಸುಸ್ವಾದಿ ಪುರದೊಳು | ವೇದ ವಿನುತನ ಸ್ತುತಿಸಿ ಮೋದಿಪ ಅ.ಪ. ವಾಗೀಶ ಮುನಿಪ ಸದಾಗಮಜ್ಞನ ವರ | ವೇಗದಿಂದಲಿ ಫಲಿಸಲುಜಾಗು ಮಾಡದೆ ಗೌರಿ ತತ್ಪತಿ | ರಾಗ ರಹಿತರು ನಿನ್ನನೊಪ್ಪಿಸೆ |ರೋಗಹರ ಹಯವದನ ಪದವನು | ರಾಗದಿಂದಲಿ ಭಜಿಪ ಯತಿ 1 ತಿಮಿರ ತಾಮರಸ ಬೋಧ ಶಾಸ್ತ್ರವ | ಪ್ರೇಮದಿಂದಲಿ ಪೇಳ್ದಯತಿವರ 2 ಮೂರ್ತಿ ಪ | ರಾಕ್ರಮನಿಂ ತರಿಸೀಚಕ್ರಿಯನೆ ನಿಲಿಸ್ಯುತ್ಸವದಿ ಸುರಪನ | ವಿಕ್ರಮದ ಆಳ್ಬಂದು ಕರೆಯಲು |ಉತ್ಕ್ರಮಣ ತೊರೆದವರ ಕಳುಹುತ | ವಿಕ್ರಮನ ಪದಕೆರಗಿನಿಂದ3 ನಿಗಮವೇದ್ಯನ ಬಗೆಬಗೆಯಲಿ ಸಂಸ್ಕøತ | ಮಿಗಿಲು ಪ್ರಾಕೃತ ಪದ್ಯದೀಸುಗುಣಮಣಿಮಯ ಮಾಲೆಗಳ ಪ | ನ್ನಗನಗೇಶನ ಕೊರಳೂಳರ್ಪಿಸಿ |ಚಿಗಿ ಚಿಗಿದು ಆನಂದದಿಂದಲಿ | ದೃಗು ಜಲದಿ ಹರಿಪದವ ತೊಳೆದ 4 ಸುರನದಿ ನದಿಧರರಾದಿ ಸ್ಥಾಪಿಸುತಲ್ಲಿ | ಎರಡೆರಡೊಂದು ವೃಂದಾವನವಾ | ಸ್ಥಿರಪಡಿಸಿ ಶ್ರೀವ್ಯಾಸ ಸಮ್ಮುಖ | ವರ ನರೇಯಣ ಭೂತಬಲದಲಿಇರಿಸಿ ಗುರು ಗೋವಿಂದ ವಿಠಲನ | ನಿರುತ ಧ್ಯಾನಾನಂದಮಗ್ನ5
--------------
ಗುರುಗೋವಿಂದವಿಠಲರು
ಪಾದ | ಲೇಸಾಗಿ ಭಜಿಸಲುಕೇಶವ ನೊಲುಮೆಗೆ ಅವಕಾಶವೊ ಪ ಆಸದಾಶಿವ ವಂದ್ಯ ಶ್ರೀಶನ ಪದ ಪದುಮಸೂಸಿ ಸೇವಿಸುವಂಥ ದೈಶಿಕರೊಡೆಯರ ಅ.ಪ. ಯತಿವರ ಬ್ರಹ್ಮಣ್ಯ ವರದಿಂದುದ್ಭವ ವಸುಮತಿಯ ಸ್ಪರ್ಶದ ಮುನ್ನ ಕನಕಪಾತ್ರ ಧೃತನೆ |ಮತಿವಂತನೆನಿಸುತಬ್ಬೂರೊಳು ನೆಲೆಸುತ್ತಯತಿಯಾಗಿ ಮೆರೆದೆ ಬ್ರಹ್ಮಣ್ಯರ ಕರಜನೆ 1 ಶ್ರೀಪಾದರಾಯರಲ್ಲೋದಿ ಸುಧಾದಿಯಆ ಪಂಪಾ ಕ್ಷೇತ್ರವ ಪ್ರಾಪಿಸಿ ನೆಲಿಸೀ |ತಾಪಸೀಗಳು ವಿಜಯೀಂದ್ರ ವಾದಿರಾಜಗಾಪಾರ ಮಹಿಮನ ತತ್ವಗಳೊರೆದಂಥ 2 ವಿದ್ಯಾನಗರಿಯ ಭವ್ಯ ಗದ್ದುಗೆಯನೆ ಯೇರ್ದತಿದ್ದೀದ ಪೃಥುವೀಪ ಕುಹುಯೋಗವಾ |ಮಧ್ವ ಸಮಯ ವರ ದುಗ್ದಾಭ್ಧಿ ಪೂರ್ಣೇಂದುಅದ್ವೈತ ತಮಸೂರ್ಯ ವರ ಚಂದ್ರಿಕಾಚಾರ್ಯ 3 ಮಾಯಾ ಸಮಯ ಮದಕರಿಗೆ ಕಂಠೀರವನ್ಯಾಯಾಮೃತವು ತರ್ಕ ತಾಂಡವ ರಚಿಸೀ |ಮಾಯಾ ಮತಂಗಳ ಛೇದಿಸಿ ಬಹುವಿಧರಾಯ ಕೃಷ್ಣನೆ ಪರಾತ್ಪರನೆಂದು ಪೇಳಿದ 4 ಮಾಸ ಫಾಲ್ಗುಣ ವದ್ಯಎರಡೆರಡನೆ ದಿನವು ಶನಿವಾರದೋಳ್ ವರ ಗುರು ಗೋವಿಂದ ವಿಠಲ ಧ್ಯಾನಾನಂದ ಪರನಾಗಿ ತನು ಕಳೆದ ನವ ವೃಂದಾವನದೊಳು 5
--------------
ಗುರುಗೋವಿಂದವಿಠಲರು
ಪಾದ ಮುಖ್ಯ ಪ್ರಾಣಾ ನಂಬಿದೇ ನಿನ್ನಯ ಪಾದಾ ಡಂಬರ ತೊಲಗಿಸಿ ಡಿಂಬದೊಳಗೆ ಹರಿಯ ಬಿಂಬ ಪೊಳೆವಂತೆ ಮಾಡೊ ಪ ಇಪ್ಪತ್ತು ಒಂದು ಸಾವಿರ ಐದೊಂದು ನೂರು ಅಪ್ರತಿಹಂಸಮಂತ್ರ ತಪ್ಪದೆ ದಿನದಿನ ಒಪ್ಪದಿಂದಲಿ ಭಜಿಸಿ ತಪ್ಪಿಸೋ ಭವವಾ ಸ ಮೀಪದ ಜೀವ ಕೊ ಅಪ್ಪನಂದದಿ ಪುಣ್ಯ ವಪ್ಪಂತೆ ಕರುಣಿಸೊ ಕಪ್ಪುವರ್ಣನ ಕೂಡಪ್ಪಿಸಿ ಪಾಲಿಸೋ 1 ಹತ್ತೇಳು ಎರಡಾಯುತ ನಾಡಿಯೊಳು ಉತ್ತರÀ ಪಾಲಿಸೋ ಉತ್ಕ್ರಮಣದಲ್ಲಿ ನೆತ್ತಿಯದ್ವಾರದಿಂದ ಎತ್ತಮರಿಯಲೀ ಸದದೆ ತತ್ತುವರೊಳು ಜೀವೋ ತ್ತಮನೆ ಸತ್ ಚಿತ್ ಎನಗೆ ಕೊಡು ಉತ್ತರ ಧರಿಸೋ 2 ಅಂತರಂಗದಿ ಉಸುರಾ ಹೊರಗೆ ಬಿಟ್ಟು ಅಂತರಂಗಕ್ಕೆ ಸೇರುವ ಪಂಥದೊಳು ನೀನೆ ನಿಂತು ನಾನಾಬಗೆ ತಂತು ನಡಿಸುವ ಹೊಂತಕಾರಿ ಗುಣವಂತ ಬಲಾಢ್ಯ 3 ಪಂಚಪರಣ ರೂಪನೆ ಸತ್ವ ಕಾಯಾ ಪಂಚೇಂದ್ರಿಯಗಳ ಲೋಪನೆ ಪರಮೇಷ್ಟಿ ಸಂಚಿತಾಗಾಮಿ ಬಿಡಿಸಿ ಕೊಂಚ ಮಾಡೋ ಪ್ರಾರಬ್ಧ ವಂಚನೆ ನೆನೆದೊ ಅಂಚಗಂಚಿಗೆ ಪರಪಂಚವೆ ಓಡಿಸಿ ಪಂಚವಕ್ತ್ರ ಹರಿ ಮಂಚದ ಗುರುವೇ 4 ಯೋಗಾಸನದೊಳಿಪ್ಪ ಯಂತ್ರೋದ್ಧಾರಾ ಭಾಗವತರಪ್ಪಾ ಯೋಗಿಗಳೀಶಾ ವ್ಯಾಸಾ ಯೋಗಿಗೊಲಿದ ವ್ಯಾಸಾ ಶ್ರೀ ತುಂಗಭದ್ರಾ ವಾಸಾ ಬಾಗುವೆ ಕೊಡು ಲೇಸಾ ಜಾಗರ ಮೂರುತಿ5
--------------
ವಿಜಯದಾಸ
ಪಾದ ಸೇವೆಯೊಳಿರುವಂತೆ ಕಾವುದೆನ್ನಯ ಮನ ಪಾವನ ಮೂರುತಿ ಹರಿಯೇ ಪ ಒಲವಿನ ಸಂಸಾರ ಸ್ಥಿರವೆಂದು ನಂಬುತ್ತ ಬರಿದೆ ಪೋಗದೆ ನಿಜದರಿಪಿನೋಳ್ ನಿಲಿಸೆನ್ನಾ ಹರಿಯೇ 1 ಎಂದು ಕುಂದದ ನಿತ್ಯಾನಂದವಾಗಿಹ ನಿಜ ಛಂದದೊಳಿರುವತ್ಯಾನಂದದೊಳ್ ನಿಲಿಸೆನ್ನಾ ಹರಿಯೇ 2 ಮರೆಯವೆ ಇರುವಂತೆ ಎರಕವಾಗಿಸೆನ್ನಾ ಹರಿಯೇ 3 ಆ ಸ್ವಪ್ರಕಾಶದಿ ಸೂಸದೆ ನಿಲುವಂತೆ ಭಾಸುರ ಘನಸುಖವಾಸದೊಳ್ ನಿಲಿಸೆನ್ನಾ ಹರಿಯೇ 4 ಭಾವಭಾವನೆಯಲ್ಲಿ ತೀವಿ ನಾರಾಯಣಾ ಪಾವನ ಗುರುಮೂರ್ತಿ ಸೇವೆ ಶಾಂತಿಯನೀಯೋ ಹರಿಯೇ 5
--------------
ಶಾಂತಿಬಾಯಿ
ಪಾದ ಕ್ಕೆರಗಿ ಯಾಚಿಸುತಲೆ ಮುಗಿವೆನು ಕೈಯ್ಯಾನೆರೆ ನಂಬಿದವರನು ಎರವು ಮಾಡಲು ನಿನಗೊಳತೇನಯ್ಯಾ ಪಿಡಿ ಬೇಗನೆ ಕೈಯ್ಯ ಕರದಶಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವೆಂಕಟ ಪ ಆಪಾರ ಮಹಿಮಾ ಆಪದ್ಬಂಧೋ ಆಪನ್ನರ ಪಾಲಿಪ ವ್ಯಾಪಾ ನಿನಗಲ್ಲದೆ ಮತ್ತೊಂದು ಕಾಣೆನೊ ಜಗದೀ ಭೂಪಾನೆ ಭೂಮ್ನ ಗುಣಗಣಸಿಂಧೋ ಸ್ವಾಮಿಯೆ ಎನಗಿಂದು ಪರಿಪಾಲಿಸು ಶ್ರೀಪತಿ ಅಂಜನ ಗಿರಿರಾಜ 1 ಕಲಿಯುಗದೊಳಗೀ ಪರ್ವತಕೆಲ್ಲಿ ಸರಿಗಾಣೆನು ಯೆಂದು ನೆಲಸಿದೀ ನೀನೆ ಈ ಸ್ಥಳದಲ್ಲಿ ವೈಕುಂಠಕಿಂತ ನೆಲೆಯು ವೆಗ್ಗಳವೆಂದು ನೀ ಬಲ್ಲೀ ಅದಕಾರಣ ಇಲ್ಲೀ ತಲೆಯಾಗುವರಯ್ಯಾ ಭಳಿರೆ ಕಾಂಚನ 2 ತರುಜಾತಿ ಮೃಗಪಕ್ಷಿಗಳಾಕಾರ ಮೊದಲಾದ ರೂಪದಿ | ನೂರಾರು ಕಿನ್ನರು ತಮ್ಮ ಪರಿವಾರ ಒಡಗೂಡಿ ನಿನ್ನ ಚರಣಾರಾಧನೆ ಮಾಡಿದ ವಿಸ್ತಾರ ಈ ಬಗೆ ಶೃಂಗಾರ ಸರಿಗಾಣೆನೊ ಹೇ ತಿರುಪತಿ ವೆಂಕಟ ಗಿರಿರಾಜ3 ಹದಿನಾಲ್ಕು ಲೋಕದ ಭಾಗ್ಯಗಳಲ್ಲಿ ಅಮರತತಿಗೆ ಕೊಟ್ಟ ವಿಧವೆಲ್ಲಾ ಪ್ರತ್ಯಕ್ಷವು ಪುಸಿಯಲ್ಲ ನಾನವರ ನೋಡೆ ಅಧಮಾಧಮನು ನೀನೆ ಬಲ್ಲೆಲ್ಲಾ ಎನ್ನ ಯೋಗ್ಯತಯ ಫಣಿ 4 ಸುವರ್ಣ ಮುಖರಿತೀರ ನಿವಾಸ ನವರಾತ್ರಿಯಲ್ಲೀ ಆವ ಬ್ರಹ್ಮೋತ್ಸವ ನೋಡಲು ಶ್ರೀಶ ಸಂಪದವನಿತ್ತು ಪೊ ರವಾನು ಕಲುಷದ ಭಯ ಬರಲೀಸ ಶ್ರೀನಿವಾಸ ಭೂದೇವರ ವರದ5
--------------
ವಿಜಯದಾಸ
ಪಾರಿಜಾತ ಶ್ಲೋಕ : ದ್ವಾರಾವತಿಯಲಿ ದÀನುಜದಲ್ಲಣ ಮುಕುಂದ ಸಾರೆ ರುಕ್ಮಿಣಿಸಹಿತ ಆನಂದದಿಂದ ವಾರಿಜಾಂಬಕ ವಾಲಗದೊಳು ಚಂದ ನಾರಂದಮುನಿ ತಾ ಪಾರಿಜಾತವ ತಂದ 1 ಪದ : ಬಲ್ಲಿದ ಮುನಿಯ ಕುಳ್ಳಿರಿಸಿದ ಸತ್ಕರಿಸಿದ ಪುಷ್ಪಯಾರಿಗೆ ಎಂದ ವಲ್ಲಭೆರುಕ್ಮಿಣಿಗಲ್ಲದೆ ಬ್ಯಾರೆ ಸಲ್ಲದು ಎಲ್ಲ ನೀನು ಬಲ್ಲದೆ ಇಂತೆಂದ ಈ ಸುದ್ದಿ ಸತ್ಯಭಾಮೆಗೆ ತಂದು ಹೇಳಿದರಂದು ಕೇಳಿದಳಾಕೆ ನಿಂದು ಮನದಲ್ಲಿ ಅತಿನೊಂದು 1 ಶ್ಲೋಕ : ಇಂದ್ರಲೋಕದ ಚಂದದ ಕುಸುಮವನ್ನು ಮಂದಗಮನೆಯ ಮುಡಿಗೆ ತಾ ಮುಡಿಸಿದನು ಎರವು ಇಲ್ಲವು ಕಾಣಿ ಇಂದು ಮಾಡಿದ ಕುಹಕವ ಕೃಷ್ಣ ತಾನು 2 ಇನ್ನಾರಿಗೆ ಪೇಳುವೆನು ರುಕ್ಮಿಣಿ ತನ್ನ ಜೀವ ಬಹುಪ್ರೀತಿ ಬಡಿಸಿದ ಠಕ್ಕುಠವಳಿಗಳಿಲ್ಲಿ 2 ಶ್ಲೋಕ : ಮೆಚ್ಚಿ ಬಂದೆನೆ ಮೋಹಕ್ಕೆ ಮರುಳಾದೆನೆ ಹಚ್ಚಿರೆ ಮಾತ ಹರಿಯು ತಾ ಕೇಳಿದನೆ ನೆಚ್ಚಿ ಇದ್ದೆನೆ ಎನ್ನೊಳು ವಂಚಿಸಿದನೆ ರಚ್ಚಿಗಿಕ್ಕಿದ ರಂಪು ಮಾಡಿದ ಕಾಣೆ 3 ಪದ : ಮಾರನಟ್ಟುಳಿ ತಾಳಲಾರೆನೆ ಮುಖದೋರನೆ ಇನ್ನೇನು ತೆರನೆ ಕಂತು ಕಮಲಜನಯ್ಯ ಏನೆಂದು ತಿಳಿಯದು ಬಹು ಪ್ರೀತಿ ಇದ್ದವ[ಳ] 3 ಶ್ಲೋಕ : ಮಳೆ ಇಲ್ಲದ ಮೇಘವಿದ್ಯಾತಕ್ಮಮ್ಮ ಬೆಳೆ ಇಲ್ಲದ ಭೂಮಿ ಮತ್ಯಾತಕಮ್ಮ ಗಿಳಿಇಲ್ಲದ ಗೂಡು ತಾನ್ಯಾತಕಮ್ಮ ತಾಳಲಾರೆನೊ ಶ್ರೀ ಕೃಷ್ಣನಿಲ್ಲದೆ ಎಮ್ಮ 4 ಮಾತೆನ್ನ್ಯಾಕ ಪಡೆದಳೊ ಕುಹಕ ಮೂರುಲೋಕ ಪ್ರಸಿದ್ಧ ಓಡಿ ತನಗ್ಯಾಕಿದು ಬ್ಯಾಡಿ 4 ಶ್ಲೋಕ : ಬಿಸಜಾಕ್ಷನ ಬಹಳ ನಂಬಿದ್ದೆ ನಾನು ವಶವಾದನೆ ಒಲಿದು ರುಕ್ಮಿಣಿಗೆ ತಾನು ಅಟ್ಟುಳಿ ಇದೇನು ಆಸೆಬಟ್ಟೆನೆ ಬಹಳ ವಸುದೇವ ಸುತಗೆ 5 ಎಲ್ಲರೊಡನೆ ಕೋಪಿಸುತ ಮನದೊಳು ಮರುಗುತ ಸುರಪಾರಿಜಾತವೆ 5 ಶ್ಲೋಕ :ದೇವಲೋಕದ ಹೂವ ತನಗಿಲ್ಲವಲ್ಲ ಭಾವೆ ಎನ್ನೊಳು ಮುನಿಯದೆ ಬಿಡುವಳಲ್ಲ ಆವ ಪರಿಯಲಿ ತಿಳಿದು ಹೇಳುವೆನು ಸೊಲ್ಲ ಜೀವದೊಲ್ಲಭೆಯೊಡನೆ ಪಂಥವು ಸಲ್ಲ 6 ಎನ್ನೊಡನೆ ನುಡಿಯಳೊ ಇಂದು ಅಪ್ರಬುದ್ಧನಾದರೆ ಕೋಪವನು ತಾಳುವಳೊ ಇಂ ಬಾಗಿಲೊಳು ನಿಂದನು 6 ಶ್ಲೋಕ :ಚಿತ್ತದೊಲ್ಲಭೆ ಚದÀುರೆ ಮೋಹನಾಕಾರೆ ಮುತ್ತುರತ್ನವ ಮನೆಯೊಳಗೆಲ್ಲ ಬೀರಿ ಎತ್ತ ಹೋದಳೊ ಎನ್ನ ಪ್ರಾಣದ ನಾರಿ ಸತ್ಯಭಾಮೆಯ ಸುಳುಹು ಕಾಣೆನು ತೋರಿ 7 ಕೋಕಿಲವಾಣಿಯ ಇನ್ನೆಲ್ಲಿ ಹೋದಳು ತೋರಿಸೆ ಹತ್ರ ಸೇರಿಸೆ ಬಂದೆನು ಹಾರೈಸಿ ನಿಂತವರು ಕಣ್ಣು ಮಾ[ತಾ]ಡಿ 7 ಶ್ಲೋಕ :ಹಾಸಿ ಮಲಗಿದ್ದ ಸತಿಯ ಕಂಡು ಬೀಸಣಿಕೆಯಲಿ ಬೀಸಿದ ಕೃಷ್ಣ ತಾನು ಸೂಸು ಪರಿಮಳ[ದ] ಪಾರಿಜಾತದ ಹೂವ ಹಾ- ರÉೈಸಿ ಕಂಗಳು ತೀರ[ವು] ನೋಡಿದಳು ಕಾಂತೆ 8 ಫಲ್ಗುಣನ ಸಾರಥಿಯ ಇದು ಏನು ಸೋಗೆಂದು ಹಿಂಡು ಸ್ತ್ರೀಯರ ಶಿರೋರನ್ನಳೆ ಮೋಹನ್ನಳೆ ಮುನಿಸ್ಯಾತಕೆನ್ನೊಡನೆ ಅಪರಾಧವ ಕ್ಷಮಿಸೆ 8 ಶ್ಲೋಕ :ಅಕ್ಕರಿಂದಲೆ ರುಕ್ಮಿಣಿಗೆ ಇತ್ತ ಹೂವ ಮಿಕ್ಕ ಸತಿಯರಿಗ್ಯಾತಕೆಂಬ ಭಾವ ಕಕ್ಕುಲಾತಿಯ ಕಂಡೆ ನಿನ್ನಲ್ಲಿ ಜೀವ ಸೊಕ್ಕಬ್ಯಾಡವೊ ಸಾಕು ಹೋಗೆಲೊ ಗೋವ 9 ಮನ್ನಿಸೆ ಕೃಪಾಸಿಂಧು ಕೋಕಿಲಸ್ವರಗಾನೆ ಕುಳ್ಳಿರಿಸಿದ ಹೆಳವನಕಟ್ಟೆಯ ರಂಗನು ಕೃಪಾಂಗನು ದೇವೋತ್ತುಂಗ ವಿಕ್ರಮನು 9
--------------
ಹೆಳವನಕಟ್ಟೆ ಗಿರಿಯಮ್ಮ
ಪಾಲಿಸಮ್ಮ ತುಳಸಿ ಹೂ ತಡವ ಮಾಡದೆ ನಿನ್ನ ವಾರಿ ತುರುಬಿನಲ್ಲಿ ಇರುವ ಪಾರಿಜಾತವಾ ಪ. ಒಂದೊಂದು ದಳದಲ್ಲಿ ಒಂದೊಂದು ಮೂರುತಿ ಒಂದನೇ ಕಾಲದಲ್ಲಿ ವರವ ಕೊಡುವಳು 1 ಎರಡೆರಡು ದಳದಲ್ಲಿ ಎರಡು ಮೂರುತಿ ಎರಡನೆ ಕಾಲದಲ್ಲಿ ವರವ ಕೊಡುವಳು 2 ಮೂರನೇ ಕಾಲದಲ್ಲಿ ಮೂರು ಮೂರುತಿ ಸಾರಿ ಶ್ರೀ ಶ್ರೀನಿವಾಸ ಸಲಹುವನೆ 3
--------------
ಸರಸ್ವತಿ ಬಾಯಿ
ಪಾಲಿಸೆನಗೀ ಜ್ಞಾನ ಪಾಲಸಾಗರಶಾಯಿ ಶ್ರೀ ಲೋಲ ನೀ ನಿತ್ಯದಿ ಪ. ಶೀಲಗುಣ ನಿನ್ನ ಏನು ಬೇಡುವುದಿಲ್ಲೊ ಕಾಲರೂಪನೆ ನಿನ್ನನು | ಇನ್ನು ಅ.ಪ. ಒಂದು ಅಸ್ವತಂತ್ರ ಒಂದು ಸರ್ವಸ್ವತಂತ್ರ ಒಂದು ಮನೆಯೊಳಗೆ ಇದ್ದು ಒಂದೆರಡು ಲೋಕಕ್ಕೆ ಒಂದೆ ದೈವನು ಎನಿಸಿ ಒಂದೊಂದರಲಿ ಇರುವ ಒಂದು ಅಪೇಕ್ಷಿಸದೆ ಒಂದೆರಡು ಗುಣದಿಂದ ಒಂದೆರಡು ಮಾಳ್ಪ ಜಗವ ಇಂದಿರೇಶನೆ ನಿನ್ನ ಈ ವಿಧದ ವ್ಯಾಪಾರ ಒಂದೊಂದು ಮನಕೆ ತೋರೋ | ಸ್ವಾಮಿ 1 ಎರಡು ಮಾರ್ಗಗಳಿಹವು ಎರಡು ಕರ್ಮಗಳಿಂದ ಎರಡು ವಿಧ ಸಮ ತಿಳಿದರೆ ಎರಡು ರೂಪಗಳನು ಒಂದಾಗಿ ಭಾವಿಸುತ ಎರಡೊಂದು ಜೀವ ತಿಳಿದು ಎರಡು ಫಲ ಅನುಭವಿಸಿ ಎರಡು ಹರಿಗರ್ಪಿಸುತ ಎರಡು ವಿಧ ಕರ್ತನೆಂದು ಎರಡು ಎಪ್ಪತ್ತು ಸಹಸ್ರನಾಡಿಗಳಲ್ಲಿ ಎರಡು ರೂಪದಲಿರುವ ಪೊರೆವ 2 ಮೂರು ಅವಸ್ಥೆಯಲಿ ಮೂರು ತಾಪವ ಸಹಿಸಿ ಮೂರು ಮಾರ್ಗದಲಿ ನಡೆದು ಮೂರೆಂಟು ಇಂದ್ರಿಯವ ಮೂಲರೂಪದಿ ಲಯಸಿ ಮೂರಾರು ವಿಧ ಭಕ್ತಿಯಲಿ ಮೂರೈದು ನುಗ್ಗೊತ್ತಿ ಮೂರು ಮೂರು ಅರಿಯ ಮೂರು ಶುದ್ಧಿಯಲಿ ಗೆದ್ದು ಮೂರಾರು ಎರಡೊಂದು ಖೋಡಿ ಮತಗಳ ಮುರಿಸಿ ಮಾರುತಿಯ ಮತದಿ ನೆಲಸಿ | ತಿಳಿಸಿ 3 ವಿೂನ ಕೂರ್ಮನೆ ವರಹ ಶ್ರೀ ನಾರಸಿಂಹನೆ ದಾನಯಾಚಕ ಭಾರ್ಗವ ವಾನರರಿಗೊಲಿದನೆ ವೇಣುಹಸ್ತರೂಪಿ ಮಾನವಿಲ್ಲದ ಕಲ್ಕಿಯೆ ಶ್ರೀನಿವಾಸನೆ ನಿನ್ನ ನಾನಾವಿಧ ರೂಪಗಳು ನಾನು ವರ್ಣಿಸಲು ಅಳವೆ ಮಾನಾಭಿಮಾನದೊಡೆಯನೆ ಕೃಷ್ಣ ಕೈಪಿಡಿಯೊ ಭಾನುಪ್ರಕಾಶ ಹರಿಯೆ | ಸಿರಿಯೆ 4 ಶಿರದಲ್ಲಿ ಕಿರೀಟ ಫಣೆಯಲ್ಲಿ ತಿಲುಕವು ಮೆರೆವ ಕುಂಡಲದ ಕದಪು ಕಿರುನಗೆಯ ಪಲ್ಗಳು ಕೊರಳಲ್ಲಿ ಹಾರಗಳು ಕರದಲ್ಲಿ ಆಯುಧಗಳು ಸಿರಿ ಭೂಮಿ ಎಡಬಲದಿ ಸುರನದಿಯ ಪೆತ್ತಪಾದ ಸಿರಿರಮಣ ಗೋಪಾಲಕೃಷ್ಣವಿಠ್ಠಲ ಎನಗೆ ಪರಿ ಪರಿಯ ರೂಪ ತೋರೊ ಸ್ವಾಮಿ 5
--------------
ಅಂಬಾಬಾಯಿ
ಪಾಲಿಸೊ ಪರಮ ಪಾವನ್ನ ಕಮ ಲಾಲಯ ನಂಬಿದೆ ನಿನ್ನ ಆಹ ನಖ ತೇಜ ಮೂರ್ಲೋಕದರಸೆ ನೀನಾಲಯ ಬಿಡದಲೆ ಅ.ಪ ಹಿಂದೆ ಪ್ರಹ್ಲಾದನ ಮೊರೆಯ ಕೇಳಿ ಬಂದು ಕಾಯಿದೆ ಭಕ್ತ ಪ್ರಿಯ ಸುಖ ಸಂದೋಹ ಮೂರುತಿ ಆಯ ತಾಕ್ಷ ಎಂದೆಂದು ಬಿಡದಿರು ಕೈಯ ಆಹ ವೃಂದಾರ ಕೇಂದ್ರಗೆ ಬಂದ ದುರಿತಂಗಳ ಹಿಂದೆ ಮಾಡಿ ಕಾಯ್ದೆ ಇಂದಿರಾರಮಣನೆ 1 ಹರಣದಲ್ಲಿ ನಿನ್ನ ರೂಪ ತೋರಿ ಪರಿಹರಿಸೊ ಎನ್ನ ಪಾಪ ದೂರ ದಿರದಿರು ಹರಿಸಪ್ತ ದ್ವೀಪಾಧಿಪ ಸಿರಿಪತಿ ಭಕ್ತ ಸಲ್ಲಾಪ ಆಹ ಕರಣಶುದ್ಧನ ಮಾಡಿ ಕರೆಯೊ ನಿನ್ನ ಬಳಿಗೆ ನರಕಂಠೀರವ ದೇವ ಚರಣ ಆಶ್ರೈಸಿದೆ 2 ಶರಣ ಪಾಲಕನೆಂಬೊ ಬಿರುದು ಕೇಳಿ ತ್ವರಿತದಿ ಬಂದೆನೊ ಅರಿದು ಇನ್ನು ಪರಿ ಅಪರಾಧ ಜರಿದು ಪರತರನೆ ನೋಡೆನ್ನ ಕಣ್ತೆರೆದು ಆಹ ಮರಣ ಜನನಂಗಳ ತರಿದು ಬಿಸುಟು ನಿನ್ನ ಶರಣರ ಸಂಗದಲ್ಲಿರಿಸಿ ಉದ್ಧರಿಸೆನ್ನ 3 ಸಂಸಾರ ಸಾಗರ ದೊಳಗೆ ಎನ್ನ ಹಿಂಸೆ ಮಾಡುವರೇನೊ ಹೀಂಗೆ ನಾನು ಕಂಸಾರಿ ಅನ್ಯರಿಗೆ ಬಾಗೆ ಮತ್ತೆ ಸಂಶಯವಿಲ್ಲ ಮಾತಿಗೆ ಆಹ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಶೌರಿ ಮೂರ್ತಿ ದಿವಸ ದಿವಸದಲ್ಲಿ 4 ಭವ ಶಕ್ರಾದ್ಯಮರ ಕೈಯ ನಿರುತ ತುತಿಸಿಕೊಂಬ ಧೀರ ಶುಭ ಪರಿಪೂರ್ಣ ಗುಣ ಪಾರಾವರ ಭಕ್ತ ವಾರಿನಿಧಿಗೆ ಚಂದಿರ ಆಹ ಸ್ಮರನ ಕಾಂತಿಯ ನಿರಾಕರಿಸುವ ತೇಜನೆ ಎರವು ಮಾಡದೆ ಹೃತ್ಸರಸಿಜದೊಳು ತೋರಿ 5 ಮೊದಲು ಮತ್ಸ್ಯಾವತಾರದಿ ವೇದ ವಿಧಿಗೆ ತಂದಿತ್ತ ವಿನೋದಿ ಶ ರಧಿಯೊಳು ಸುರರಿಗೋಸ್ಕರದಿ ನೀನು ಸುಧೆಯ ಸಾಧಿಸಿ ಉಣಿಸಿದೆ ಆಹ ಅದುಭೂತ ಭೂಮಿಯ ತೆಗೆದೊಯ್ದುವನ ಕೊಂಡು ಮುದದಿ ಹಿರಣ್ಯಕನುದರ ಬಗಿದ ಧೀರ 6 ಬಲಿಯ ಮನೆಗೆ ಪೋಗಿ ದಾನ ಬೇಡಿ ತುಳಿದೆ ಪಾತಾಳಕ್ಕೆ ಅವನ ಪೆತ್ತ ವಳ ಶಿರ ತರಿದ ಪ್ರವೀಣ ನಿನ್ನ ಬಲಕೆಣೆಗಾಣೆ ರಾವಣನ ಆಹ ತಲೆಯನಿಳುಹಿ ಯದುಕುಲದಿ ಜನಿಸಿ ನೀನು ಲಲನೇರ ವ್ರÀ್ರತವಳಿದಾಶ್ವಾರೂಢನೆ 7 ಮಾನಸ ಪೂಜೆಯ ನೀ ದಯದಿ ಇತ್ತು ಶ್ರೀನಾಥ ಕಳೆ ಭವವ್ಯಾಧಿ ಕಾಯೋ ಅನಾಥ ಬಂಧು ಸುಮೋದಿ ಚತುರಾ ನನಪಿತ ಕೃಪಾಂಬುಧಿ ಆಹ ತಾನೊಬ್ಬರನರಿಯೆ ದಾನ ವಿಲೋಲನೆ ಏನು ಮಾಡುವ ಸಾಧನ ನಿನ್ನದೊ ಹರಿ8 ನಿನ್ನ ಸಂಕಲ್ಪವಲ್ಲದೆ ಇನ್ನು ಅನ್ಯಥಾವಾಗಬಲ್ಲುದೆ ಹೀಂಗೆ ಚೆನ್ನಾಗಿ ನಾ ತಿಳಿಯದೆ ಮಂದ ಮಾನವನಾಗಿ ಬಾಳಿದೆ ಆಹ ಎನ್ನಪರಾಧವ ಇನ್ನು ನೀ ನೋಡದೆ ಮನ್ನಿಸಿ ಕಾಯೋ ಜಗನ್ನಾಥ ವಿಠಲ 9
--------------
ಜಗನ್ನಾಥದಾಸರು
ಪಾಲಿಸೊ ಶ್ರೀಹರಿ ಎನ್ನ ಪಾಲಿಸೊ ಪಾಲಿಸೊ ನಾ ನಿನ್ನ ಕಾಲಿಗೆ ಎರಗುವೆ ಶ್ರೀಲೋಲ ನೀ ಹೃದಯಾಲಯದೊಳು ಬಂದು ಪ ಪರಿ ನಾಮಾಮೃತವನ್ನು ಪರಮ ಔಷಧÀವೆಂದು ಸುರಿದು ಸುಖಿಸುವಂತೆ 1 ಸುಂದರ ಸುಗುಣನೊಂದೊಂದು ಗುಣದ ಮಾತ್ರೆ ಸಂದೇಹವಿಲ್ಲದಾನಂದದಿಂದರೆದ್ಹಾಕಿ 2 ಭವ ಬಂಧ ಬಿಡಿಸಿನ್ನು ಅನುಮಾನವ್ಯಾತಕಾನಂತ ಹಸ್ತಗಳಿಂದ 3 ಲಕ್ಕುಮಿರಮಣನೆ ಲೆಕ್ಕಿಸೊ ಎನ ಮಾತು ದುಷ್ಟ ಜ್ವರವ ನಿನ್ನ ಚಕ್ರದಿಂದ್ಹತಮಾಡಿ 4 ಭೀತಿ ಬಡುವೆನಯ್ಯ ಭೀಮೇಶಕೃಷ್ಣನೆ ಯಾತಕೆ ತಡವಿನ್ನು ಪ್ರೀತಿಮಾಡೆನ್ನಲ್ಲಿ ಪಾಲಿಸೊ 5
--------------
ಹರಪನಹಳ್ಳಿಭೀಮವ್ವ
ಪಾಲೀಸೆ ಕೃಷ್ಣ ರಮಣೀ | ರುಕ್ಮಿಣಿಪಾಲೀಸೆ ಕೃಷ್ಣ ರಮಣಿ ಪ ಭಂಜನ ಪ್ರೀತೆ | ಫಾಲಾಕ್ಷಪಿತ ಮಾತೆ ಅ.ಪ. ಚಾರು ಚರಣ ಸರೋರುಹ ಕೆರಗುವೆ | ಚಾರುಮತಿಯ ಕೊಡೆ 1 ಮೂರು ಗುಣಾಭಿಮಾನೀ | ಮಾಳ್ಪುದುಮೂರು ಗುಣಗಳ್ಹಾನೀ ||ವಾರೀಸಿ ತ್ರೈಗುಣ | ಪಾರು ಮಾಡಿಸು ಭವತಾರಕೆ ನೀ ನೆಂದು | ಬಾರಿ ಬಾರಿಗೆ ಪೇಳ್ವ 2 ಗುರು ಗೋವಿಂದ ವಿಠಲಾ | ನಿನ್ನೊಡವೆರಸಿ ಸೃಜಿಪ ಜಗಂಗಳಾ ||ಎರಡೆರಡು ವ್ಯೂಹಕಾಗಿ | ಎರಡೆರಡು ರೂಪ ತಾಳೆಎರಡೆರಡು ನೀನು ಆಗಿ | ಹರಿ ಕಾರ್ಯಕನುವಾದೆ 3
--------------
ಗುರುಗೋವಿಂದವಿಠಲರು