ಒಟ್ಟು 1576 ಕಡೆಗಳಲ್ಲಿ , 102 ದಾಸರು , 1214 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಣದೆ ಸುಳ್ಳೆ ಬಡಿದಾಡ್ವಿರ್ಯಾಕಣ್ಣ ನಾನ್ಹೋಗತನ ನಿಮಗೆ ಮುಕ್ತಿಯಿಲ್ಲಣ್ಣ ಪ ಪ್ರಾಚೀನ ಹಿರಿಯರ ಸಾಕ್ಷಿಕೊಡುವೆ ನಿಮಗೆ ಜ್ಞಾನದಿಂ ಕೇಳಿ ತಿಳೀಬಹುದಣ್ಣ ಅ.ಪ ಘನವಂತ ಸತ್ಯವ್ರತ ಭೃಗು ಗಾರ್ಗೆಯರು ಇನಿಸುತಿಳಿಯದೆ ವಿಶ್ವಾಮಿತ್ರನು ಘನಶ್ರಮಬಟ್ಟರು ಮುನಿ ವರದನಾರದರು ದಿನದಿನ ತ್ರಿಣಿಯರು ದರ್ಶನಿದ್ದವರು ಜನಕ ರಾಜರ್ಷಿಯು ಮುನಿ ಅತ್ರಿಮಹಿಮರು ನಾನ್ಹೋಗತನ ಮುಕ್ತಿ ಸಿಗದೆ ಬಳಲಿದರು 1 ಸನಕಾದಿ ಸಾನಂದ ಮಹರ್ಷಿಗಳು ಮುನಿಶ್ರೇಷ್ಠ ಬಲ್ಲಿದ ವಾಲ್ಮೀಕಾದಿಗಳು ಶೌನಕಶುಕಭರದ್ವಾಜಮುನಿಗಳು ಗಣನೆಯಿಲ್ಲದ ಮಿಕ್ಕ ಪತಿತಮೋಕ್ಷಿಗಳು ಪುರಂದರ ಜ್ಞಾನಿಗಳಿವರ್ಗೆಲ್ಲ ನಾನ್ಹೋಗತನ ಮುಕ್ತಿ ಆಗಿಲ್ಲ ಕೇಳೋ 2 ನಾನ್ಹೋಗದದಕಜ ಕಳಕೊಂಡ ಶಿರವ ನಾನು ಹೋಗಿದ್ದರೆ ಅಳಿತಿದ್ದಿಲ್ಲೆಲವೋ ಖೂನವಿಲ್ಲದೆ ಕೂಗಿ ಕೆಡಬೇಡಿ ನೀವು ಭವ ಹೊಂದಿರಿ ಗೆಲವು ನಾನ್ಹೋದಮೇಲೆ ಜಾನಕಿ ಶ್ರೀರಾಮ ಮಾಣದೆ ಕೊಡುವನು ಮುಕ್ತಿ ಸಂಪದವ 3
--------------
ರಾಮದಾಸರು
ಕಾಂತೆ ದ್ರೌಪತಾದೇವಿಗೆಂತು ಮರುಳಾದಿರಿಭ್ರಾಂತಿ ಹಿಡಿತೇನೊ ಏ ಹೀನ ಎಂಥ ನ್ಯಾಯವಯ್ಯಈ ಮಾತಿಗಿನ್ನೆಂತು ನಕುಲರಾಯ ಪ. ಹೆಣ್ಣು ಮಕ್ಕಳು ಹೊಳೆವೋದುತಪ್ತ ಸುಣ್ಣದಂತೆ ತಿಳಿವೋದುಸಣ್ಣವರೆನೀವು ಅಣ್ಣನ ಮಡದಿಗೆ ಕಣ್ಣು ಹಾಕುವರೇನೊ ಏ ಹೀನಾ 1 ಜಾತಿ ಮಾಣಿಕ ಮಾಲೆ ಕೊಡಲು ತಂದು ಕೋತಿ ರಾಜನ ಕೈಲಿಚಾತುರ್ಯದ್ವಸ್ತವು ನೀತಿಲೆ ಹಿಡಕೊಂಡುಆತುರ ಮಾಡಿದಂತೆ ನಿಮ್ಮಂತೆ2 ನಕುಲರಾಯನೆ ಕೇಳೊಸುಂದರಿಯಲ್ಲೆ ಕಕುಲಾತÉ ಭಾಳೊಸುಖಚಂದ್ರವದನಳೆ ಸಕಲರು ಬೆರೆಯಲು ನಕಲಿ ಆಯಿತು ಕಾಣೊನಿನ್ನಾಣೆ 3 ಅದ್ಬುತ ಮಹಿಮಳೊ ಧರ್ಮರಾಯಗೆಮುದದಿಕೊಟ್ಟರು ಕೇಳೊಅದ ತಾಳಲಾರದೆ ಇದು ನಿಮಗೈವರುಸುದತಿಯ ಬೆರೆಯುವರೇನೊ ಏ ಹೀನ4 ಪತಿ ನಗುವನು ಭಾಳೆ ಏ ತಾಳೊ 5
--------------
ಗಲಗಲಿಅವ್ವನವರು
ಕಾಮಕೋಟಿ ಸುಂದರಾ | ತಿರುಪತಿಯಸ್ವಾಮಿ ತೀರ್ಥಮಂದಿರಾ ಪ ಕಾಮಜನಕ ಭಕ್ತಪ್ರೇಮಿ ಭವಾಟವಿಧೂಮಕೇತು ಹೃತ್ | ಧಾಮದಿ ನೆಲಿಸೋ ಅ.ಪ. ವೃಷಭಾಚಲಾ | ಸನ್ನಿಲಯನೆವೃಷಭಾ - ಬಲಾ ||ಒಸೆದು ಪರಿಕಿಸುತ || ಅಸುರನ ಸವರುತಅಸಮಗಿರಿಗೆ ನೀ | ಅಸುರನ ಪೆಸರಿತ್ತೆ 1 ಭಂಜನ ಶರದಿಜೆಕಂಜಜಾಕ್ಷಿ ಪ್ರಿಯ | ಅಂಜನಿವರದಾ 2 ಶೇಷಾ _ ಭೂಧರಾ | ಮನಸಿನ ಬಹುಕ್ಲೇಶಾ _ ಅಪಹರ ||ಶೇಷದೇವ ಮದ | ಲೇಸು ಹರಿಸಿ ಅವನಾಶೆ ಸಲಿಸಿ ಹರಿ | ಶೇಷಾಚಲನಾದೇ 3 ವೆಂಕಟಾಚಲಾ | ಮಾಧವನಾಸಂಕಟಾಗಳಾ ||ಅಂಕುರಿಸದೆ ನಿ | ಷ್ಪಂಕನೆಂದೆನಿಸಿಕಿಂಕರ ತನಯಳ | ಕಂಕಣ ಕಟ್ಟಿದೆ 4 ಶ್ರೀವರ - ಭೂವರಾ | ಪೊರೆಯುವೆ ನೀಜೀವರಾ - ಅಂತರಾ ||ಜೀವನಾಮಕನಾಗಿ | ಜೀವ ಭಿನ್ನ ಹರಿಕೈವಲ್ಯದ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಕಾಮನ ಪಿತ ಕೃಷ್ಣ ಕಾಮಿನಿಯಾದನು ಕಾಮನ ಪಿತ ಕೃಷ್ಣ ಕಾಮಿನಿ ಆಗುವೊ ಕಾರಣ ಕೇಳಿರಿ ಕಾಮಿಸಿ ಶ್ರೀಹರಿ ಆ ಮಹಾಸುರರಿಗೆ ಸುಧೆಯನ್ಹಂಚುಣಿಸಲು ಶ್ರೀ ಮಾಯಾಪತಿಯು ತಾ ಸ್ತ್ರೀಯಾದ ಚೆಲುವಿಕೆ ಪ ರುಳಿ ಲುಲ್ಲು ಗೆಜ್ಜೆ ಪೈಜಣ ಪಾಗಡವನಿಟ್ಟು ಚರಣದಿ ಕಾಲುಂಗರ ಪಿಲ್ಯ ಮೆಂಟಿಕೆ ಝಣ ಝಣ ನಾದ ಕಾಳಿಯ ಫಣ ತುಳಿದಂಥ ಖಳರ ಮರ್ದನ ದಿವ್ಯ ತರುಣಿ ತಾನಾದನು 1 ಸೆರಗು ನಿರಿಯು ಜರತಾರಿ ಪೀತಾಂಬರ ಬಿಡಿ ಮುತ್ತಿನುಡಿಗಂಟೆ ನಡುವಿನ್ವೊಡ್ಯಾಣ ಸಡಗರದಿಂದ್ವೊಪ್ಪೊ ತಾಳಿ ಪದಕವಿಟ್ಟು ಮೃಡನ ಪ್ರಿಯನು ಮುದ್ದು ಮಡದಿ ತಾನಾದನು 2 ಕಂಚುಕ ತೋಳಿನಲ್ವಂಕಿ ಬÁಜುಬಂದು ಮಿಂಚಿನಂದದಿ ನಲಿದಾಡುತ ಗೊಂಡ್ಯವು ಕಂಕಣ ತೋಡ್ಯ ವಜ್ರದ್ವಾರ್ಯ ಹರಡಿಯು ಪಂಚ ಬೆರಳಿನಲ್ಲುಂಗುರವನಿಟ್ಟು ಸೊಬಗಲಿ 3 ಚಿಂತಾಕು ಸರಿಗೆ ಚಿನ್ನದ ಗುಂಡು ಹವಳವು ಕೆಂಪು ಏಕಾವಳಿ ಮಲಕು ತಾಯಿತ ಮುತ್ತು ಮಿಂಚುವೋ ಪದಕ ಮುತ್ತಿನ ಕಟ್ಟಾಣಿಯು ಪಂಚರತ್ನದ ಹಾರ ಪರಮಾತ್ಮಗಲೆಯುತ4 ಉಂಗುರ ಕೂದಲು ಶೃಂಗಾರ ಕ್ಯಾದಿಗೆ ಚಂದ್ರ ಚೌರಿ ಜಡೆಬಂಗಾರ ರಾಗಟೆ ಮುಂದೆ ಮುತ್ತಿನದಂಡೆ ಮುಡಿಯಲ್ಲೆ ಒಪ್ಪಿದ ದುಂಡು ಮಲ್ಲಿಗೆ ದÉೂೀಷದೂರನಿಗಲೆವುತ 5 ವಾಲೆ ಬುಗುಡಿ ಬಾಳ್ಯ ಚಳತುಂಬು ಚಂದ್ರ ಮುರುವು ಚಿನ್ನದ ಕಡ್ಡಿ ಕಿವಿಯಲ್ಲಿ ಕುಂದಣ ಕುಸುರು ವಜ್ರಗಳು ಕೆಂಪ್ಹೊಳೆವಂಥ ದುಂಡು ಮುತ್ತಿನ ಮುಕುರ್ಯವ ಮೂಗಿನಲ್ಲಿಟ್ಟು 6 ಅಚ್ಚ ಮುತ್ತಿನ ದಂಡೆ ಕುಚ್ಚು ತೊಂಡಿಲುಗಳು ಹಚ್ಚೆಯ ಬೊಟ್ಟು ಕಸ್ತೂರಿ ಕುಂಕುಮನಿಟ್ಟು ಪಚ್ಚೆ ಮಾಣಿಕ್ಯದರಳೆಲೆ ಚಂದ್ರ ಸೂರ್ಯರು ನಿತ್ಯ ತೃಪ್ತನು ನೀಲವರ್ಣದಂತ್ಹೊಳೆಯುತ 7 ಆ ಮಹಾವೈಕುಂಠಪುರದರಸಾದ ಈ ಮಹಾ ರಜತ- ಪೀಠ ಪುರದಲಿ ಬಂದು ಪ್ರೇಮದಿ ನಿಂತು ನೋಡುತ ಬಂದ ಜನರಿಗೆ ಕಾಮಿತ ಫÀಲ ಮುಕ್ತಿ ಕೊಡುವ ಕಮಲಾಪತಿ 8 ಅಷ್ಟಯತಿಗಳಿಂದಲಿ ಪೂಜೆಯಗೊಂಬೊ ಲಕ್ಷ್ಮಿಯ ಪತಿಯು ಸ್ತ್ರೀರೂಪವ ಧರಿಸಿರೆ ದೃಷ್ಟಿಂದೆ ನೋಡದಿನ್ನಿರುವೋರೆ ಭೀಮೇಶ- ಕೃಷ್ಣ ನಿನ್ನ ಮನದಲ್ಲಿಟ್ಟು ಸ್ತುತಿಸುವೆನು 9
--------------
ಹರಪನಹಳ್ಳಿಭೀಮವ್ವ
ಕಾಮನ ಪೆತ್ತನ ಕೋಲೆ ನಿ- ಸ್ಸೀಮ ಚರಿತ್ರನ ಕೋಲೆ ಶ್ಯಾಮಲ ಗಾತ್ರನ ಕೋಲೆ ನಮ್ಮ ಕಾಮಿತವಿತ್ತನ ಕೋಲೆ ಪ. ಕಂಜಜ ತಾತನ ಕೋಲೆ ಧ sನಂಜಯ ಸೂತನ ಕೋಲೆ ಕುಂಜರ ಗೀತನ ಕೋಲೆ ಸುರ- ಪುಂಜ ವಿಖ್ಯಾತನ ಕೋಲೆ 1 ಶ್ರುತಿಗಳ ತಂದನ ಕೋಲೆ ಬಲು ಮಥನಕೊದಗಿದನ ಕೋಲೆ ಕ್ಷಿತಿಯನೆತ್ತಿದವನ ಕೋಲೆ ಭಕ್ತ ಹಿತಕಾಗಿ ಬಂದನÀ ಕೋಲೆ 2 ಪೃಥ್ವಿಯಳದನ ಕೋಲೆ ಅಲ್ಲಿ ಸುತ್ತ ಸುಳಿದನ ಕೋಲೆ ಅರ್ಥಿಗÀಳದನ ಕೋಲೆ ದ್ವಾರಾ- ವತ್ತಿಯಾಳಿದನ ಕೋಲೆ 3 ಮುಕ್ತಾಮುಕ್ತ ಜಗತ್ತ ತನ್ನ ವಿತ್ತ ಸಂಪತ್ತ ಕಲಿ- ವೊತ್ತಿ ಮಾಡಿತ್ತನ ಕೋಲೆ4 ಜಗತಿಧನ್ಯನ ಕೋಲೆ ನಿಗಮೋಕ್ತ್ತ ವಣ್ರ್ಯನ ಕೋಲೆ ಅಘಲೇಶಶೂನ್ಯನ ಕೋಲೆ ಸರ್ವ ಸುಗುಣಾಬ್ಧಿಪೂರ್ಣನ ಕೋಲೆ 5 ಸಿರಿಹಯವದನನ ಕೋಲೆ ಸುಖ ಕರ ಸಿಂಧುಮಥನನ ಕೋಲೆ ಹರಮಾನ್ಯಸದÀನನ ಕೋಲೆ ಗೋಪಿ- ಯರ ಕಣ್ಗೆ ಮದನನ ಕೊಲೆ 6
--------------
ವಾದಿರಾಜ
ಕಾಮಹರ ಒಬ್ಬ ತಾನೆ ಬಲ್ಲಾ | ರಾಮ ರಾಮ ಸೀತಾರಾಮ ರಾಮನಲ್ಲದಿಲ್ಲವೆಂದು ಪ ಕೈಯಲಿ ಕಿನ್ನರಿ ಧರಿಸಿ ಸಿರಿಮೊಗದಿಂದ | ಕೈಲಾಸಗಿರಿಯಲ್ಲಿ ಪಾರ್ವತಿ ಕೂಡ ಜಗ ದಯ್ಯನಯ್ಯ ಜಗದೊಡಿಯ ರಾಮನಲ್ಲದಿಲ್ಲೆಂದು 1 ಫಣಿಯಾಭರಣವು ಪೆಡೆಯೆತ್ತಿ ಇರಲು | ಮಣಿ ರುಂಡಮಾಲೆ ತೂಗಾಡಲು | ಕುಣಿದು ಕಣಕಾಲಿಂದ ಥಕ್ ಥಕ್ ಥೈ ರು ಪತಿ ಸರ್ವೋತ್ತಮ ರಾಮನಲ್ಲದಿಲ್ಲವೆಂದು 2 ಕಾಳಕೂಟದ ವಿಷಬಿಂದು ಮಾತುರನುಂಗೆ | ತಾಳಲಾರದೆ ತಳಮಳವಗೊಂಡು | ಕಾಳಿಮರ್ದನ ಕಮಲಾಯತಾಕ್ಷ ಎನ್ನ | ಪಾಲಿಸಿದ ಪರಮಾತ್ಮ ರಾಮನಲ್ಲದಿಲ್ಲವೆಂದು3 ಗಜಮುಖ ತಾಳವ ಪಿಡಿದು ತಥೈ ಎನ್ನಿ | ಅಜಸುತ ರಿಪು ಮದ್ದಳಿಯೆ ಮುಟ್ಟಿ | ಗಜ ಚರ್ಮಾಂಬರ ಗಾಯನವ ಮಾಡುತ-ತ್ರಿ | ಜಗಾಧಿಪತಿ | ವಿಷ್ಣು ರಾಮನಲ್ಲದಿಲ್ಲವೆಂದು 4 ಆರು ಮುಖದವ ಶಂಖವನ್ನು ಊದೆ | ಭೈರವ ನಾಗಸ್ವರವ ನುಡಿಸೆ | ಚಾರು ಪ್ರಥಮ ಭೂತ ತಲೆ ಚಪ್ಪಳಿಡೇ| ಧಾರಣಿಧರ ಸೀತಾರಾಮನಲ್ಲದಿಲ್ಲವೆಂದು 5 ಗೋರಾಜ ಸರಿಗಮಪದನಿಸ ಎಂದು ನಲಿಯೇ | ಉರಗಾದಿ ಮೂಷಕಾದಿ ಚಿಗಿದಾಡಲು | ವಾರಣದ ಗಂಗೆ ಸಿರದಲಿ ತುಳುಕಲು | ನಾರಾಯಣ ಪರದೈವ ರಾಮನಲ್ಲದಿಲ್ಲವೆಂದು 6 ತುಂಬುರನಾರಂದ ತಂದನ್ನಾತಾ ಎನ್ನೆ | ಅಂಬರದಿಂದ ಪೂಮಳೆಗೆರೆಯೆ | ಅಂಬುಜಪತಿ ಶಿರಿ ವಿಜಯವಿಠ್ಠಲ ವಿ ಶ್ವಂಭರಜಾಂಡಕರ್ತು ರಾಮನಲ್ಲದಿಲ್ಲವೆಂದು 7
--------------
ವಿಜಯದಾಸ
ಕಾಮಾನ ಜನನಿಯೆ ಸೋಮಾನ ಸೋದರಿ ಸಾಮಾಜ ವರದನ ಪ್ರೇಮವ ಕೊಡಿಸಮ್ಮ ಪ ನೇಮಾದಿಂದಲಿ ಹರಿ ನಾಮಾವ ನುಡಿಸುತ ತಾಮಾಸ ಓಡುವಂತೆ ನೀಮಾಡಬೇಕಮ್ಮ ಅ.ಪ ನಿತ್ಯ ತೃಪ್ತಳೆನಿನ್ನ ನಿತ್ಯದಿ ಬೇಡಿಕೊಂಬೆ ಭೃತ್ಯರೊಳಗೆ ಎನ್ನ ಎತ್ತಿ ಸೇರಿಸೆ ತಾಯೆ || ಮತ್ತನಾಗದೆ ಭವದಿ ಉತ್ತುಮನೆನಿಸುತ ಆತ್ಮದಿ ಹರಿ ತೋರಿ ಕೃತಕೃತ್ಯನೆನಿಸಮ್ಮ 1 ದೇಶಕಾಲದಿನೀನು ಶ್ರೀಶಗೆ ಸಮಳಮ್ಮ ನಾಶಮಾಡುತ ದೋಷ ದಾಸಾನು ಎನಿಸಮ್ಮ || ಶ್ವಾಸಾಶೇಷರನೆಲ್ಲ ಲೇಸಾಗಿ ಆಳುವಳೆ ವಾಸುದೇವನಲ್ಲಿ ಆಸೇಯ ನೀಡಮ್ಮ 2 ಶೃತಿಯಲ್ಲಿ ನೀನಿದ್ದು ಸ್ತುತಿಸೀ ಶ್ರೀಹರಿಯನ್ನ ಮತ್ತೆಸೃಜಿಸುವಂತೆ ಎತ್ತಿಗಾನವ ಮಾಳ್ವೆ || ಎತ್ತ ನೋಡಲು ಬಲು ಕತ್ತಲೆಕಣಿ ತಾಯೆ ಸತ್ಯವ ಬಿಡದಂತೆ ಹತ್ತೀಸೆ ಹರಿದಾರಿ3 ಹರಿಯಂತೆ ಅವತಾರ ನಿರುತನೀ ಮಾಡುತ ಪರಿ ರೂಪದಿಂದ ಪರಿಚರಿಯ ನೀಮಾಳ್ವೆ || ಸರ್ವೇಶ ಹರಿಯಿಂದ ಸರ್ವಕಾಲದಿ ಕೂಡಿ ಸರ್ವಕಾರ್ಯವ ಮಾಳ್ವೆ ಸರಿಯಾರೆ ನಿನಗಮ್ಮಾ 4 ಅಕ್ಷರ ರೂಪಳೆ ಈಕ್ಷಿಸುಕರುಣದಿಂದ ತ್ರ್ಯಕ್ಷೇಶ ವಿಧಿಮಾತೆ ಅಕ್ಷರನರ್ಧಾಂಗಿ || ಕುಕ್ಷೀಲಿ ಬ್ರಹ್ಮಾಂಡ ಲಕ್ಷ್ಯವಿಲ್ಲದೆ ಪಡೆದಿ ಅಕ್ಷಯ ಮಾಡಿ ಜ್ಞಾನ ಮೋಕ್ಷಾವ ಕೊಡಿಸಮ್ಮಾ5 ವಿಕಾರ ಶೂನ್ಯಳೆ ಪ್ರಕೃತಿಗೆ ಮಾನಿಯೆ ನೀಕಾರ್ಯ ಕಾರಣಕ್ಕೆ ಮುಖ್ಯ ಹೇತುವೆ ತಾಯೆ || ಪ್ರಕೃತಿ ಬಂಧವ ಬಿಡಿಸಿ ಸಾಕಾರ ಮೂರುತಿ ಲೋಕನಾಯಕ ಹರಿಯ ಏಕಾಂತದಲಿ ತೋರೆ6 ತ್ರಿಗುಣ ಕಾರ್ಯಗಳೆಲ್ಲ ಸುಗುಣಿ ನೀ ಮಾಡುತ ನಿತ್ಯ ಪೊಗಳಿ ಹಿಗ್ಗುವೆ ಮಾತೆ || ಜಗವೆಲ್ಲ ಕುಣಿಸುತ ನಗುತಲೀಲೆಯಿಂದ ನಿಗಮಾದಿಗಳ ಮೀರಿ ಬಗೆ ಬಗೆ ಲೀಲೆ ಕಾಂಬೆ 7 ನಿತ್ಯಾ ಮುಕ್ತಳು ನೀನು ಪ್ರೀತಿಲಿ ನಮಿಪೆನೆ ಮಾತುಲಾಲಿಸಿ ಎನ್ನ ನಿತ್ಯದಿ ಸಲಹೆಮ್ಮ || ಹೆತ್ತ ತಾಯಿಯು ನೀನು ಎತ್ತಿ ಪೊರೆಯದಿರೆ ಎತ್ತ ಪೋಗಲಿ ನಾನು ಉತ್ತುಮರಮೆ ಹೇಳೆ 8 ಸಾಗರನ ಮಗಳೆ ಆಗಮರೂಪಳೆ ಹೋಗೀಸುಲಿಂಗವ ಸಾಗಿಸಿಗುಣಕಾರ್ಯ || ಭಾಗ್ಯ ಸ್ವರೂಪಳೆ ಬಾಗಿ ನಮಿಸುವೆ ಆಗು ಮಾಡಿಸು ಹರಿ ಗೀತೆಗಳೆನ್ನಿಂದ 9 ಮರುತ ದೇವನ ಪಿತನ ಉರದಲಿ ವಾಸಿಪಳೆ ಹರಿಗುರು ಚರಣದಿ ನಿರುತ ಭಕ್ತಿಯ ಕೊಟ್ಟು || ವಾರಿಜನಾಭನಲ್ಲಿ ಧಾರೆ ಧಾರೆಯ ಭಕ್ತಿ ಸಾರಸ ದಳನಯನೇ 10 ಮಾತು ಮಾತಿಗೆ ನಮ್ಮ ಖ್ಯಾತಾಜಯತೀರ್ಥ ನವನೀತ ಧರಿಸೀಹ || ಶ್ರೀ ತಾಂಡವ ಕೃಷ್ಣ ವಿಠಲರಾಯನ ಸ್ಮರಣೆ ಆತ್ಮಾದೊಳಗೆ ನಿಂತು ಖ್ಯಾತೀಲಿನಡಿಸಮ್ಮಾ 11
--------------
ಕೃಷ್ಣವಿಠಲದಾಸರು
ಕಾಮಿತಾರ್ಥದಾಯಿನೇ | ತುಳಸಿ ಕಲ್ಯಾಣಿ ಶ್ಯಾಮಾ ವಿಶಾಲನಯನೇ ಪ ಹಸುರು ಕಂಚುಕಧರೆ ಆನಂದ ರಸಿಕೇ ಶಶಿ ಬಿಂಬಸಮ ಸುಂದರಮುಖೇ ಉಸಿರುಬಿಡದೆ ನಿನ್ನ ಕೊಸರುವೆ ವರಗಳ ಹಸನಾಗಿ ಕೊಡುವೆನೀ ಅತಿಶಯದಿಂದಲಿ 1 ಬಣ್ಣಾದ ಸರಪಳಿ ಹಾಕಿದ ಕೊರಳೇ ಬಟ್ಟ ಮುತ್ತಿನ ಹರಳೇ ಹುಣ್ಣಿಮೆ ಚಂದ್ರನಂತೆ ಸುಂದರಮುಖದವಳೇ ಪನ್ನಂಗ ಶಯನಗೆ ಮಾಡಿದೆ ಮರುಳೇ 2 ಬಡನಡುವಿಗೆ ಒಡ್ಯಾಣಾ | ರುಳಿ ಪೈಜಣ ಕಡಗಾ ಕಂಕಣ ಹೊಳಿಯುವ ಜಾಣೆ | ನಡೆದು ಬಾರೆ ಶ್ರೀ ನರಸಿಂಹವಿಠಲನ ಪಾದ ಬಿಡದೆ ಭಜಿಪೆನಮ್ಮ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ಕಾಮಿನಿಯರು ನೆರದೊಂದಾಗಿಪ್ರೇಮದಿ ಧವಳಾರವ ಪಾಡಲುಶ್ರೀ ಮಹಾಲಕ್ಷ್ಮಿ ಜಯವೆಂದುಜಯವೆಂದುಶ್ರೀಕೃಷ್ಣರಾಯಗೆಹೇಮದಾರತಿಯ ಬೆಳಗಿರೆ 1 ಸಿಂಧುರಗಮನೆಯರತಿ ಹರುಷದಲಿಚಂದದಿ ನಲಿದಾಡುತ ಪಾಡುತಇಂದಿರಾರಮಣ ಜಯವೆಂದುಜಯವೆಂದುಶ್ರೀ ಮಹಾಲಕ್ಷ್ಮಿಗೆಕುಂದಣದಾರತಿಯ ಬೆಳಗಿರೆ 2 ಕರದ ಕಂಕಣ ಝಣಝಣರೆನಲುಗುರುತು ಚವಲುಗಾಡಲು ಮುತ್ತಿನಕೊರಳಹಾರಗಳು ಹೊಳೆಯಲುಹೊಳೆಯಲುಶ್ರೀಕೃಷ್ಣರಾಯಗೆಕುರುಜಿನಾರತಿಯ ಬೆಳಗಿರಿ3 ಹಾರಪದಕ ಕಂಕಣದವರು ವೈ-ಯ್ಯಾರದ ಹೊಸ ಹರೆಯದಂಗನೆಯರುರಾರಾಜಿಪ ಚಂದ್ರಮುಖಿಯರುಮುಖಿಯರುಶ್ರೀ ಮಹಾಲಕ್ಷ್ಮಿಗೆಕುರುಜಿನಾರತಿಯ ಬೆಳಗಿರೆ 4 ಕಸ್ತೂರಿ ತಿಲಕದ ಸೊಬಗಿಯರು ಸು-ವೃತ್ತಸ್ತನತಟದ ಜವ್ವನೆಯರುಆರ್ತಿಯಿಂ ಪಾಡಿ ಪೊಗಳುತಪೊಗಳುತಶ್ರೀ ಕೃಷ್ಣರಾಯಗೆಮುತ್ತಿನಾರತಿಯ ಬೆಳಗಿರೆ5 ಬೆರಳುಂಗುರ ಥಳ ಥಳಥಳಿಸಿಸಿರಿಮೊಗದೊಳು ಕಿರಿಬೆಮರೊಗೆಯಲುಹರುಷದಿ ಪಾಡಿ ಪೊಗಳುತಪೊಗಳುತಲಿಶ್ರೀ ಮಹಾಲಕ್ಷ್ಮಿಗೇಸರಸಿಜದಾರರತಿಯ ಬೆಳಗಿರೆ 6 ಕನ್ನಡಿಗದಪಿನ ಚದುರೆಯರು ಚೊಕ್ಕಚಿನ್ನದ ಸರಪಣಿಯಿಟ್ಟಂಗನೆಯರುಚೆನ್ನಾಗಿ ಪಾಡಿ ಪೊಗಳುತಪೊಗಳುತಕೆಳದಿಯ ಶ್ರೀ ಕೃಷ್ಣಗೆರನ್ನದಾರತಿಯ ಬೆಳಗಿರೆ 7
--------------
ಕೆಳದಿ ವೆಂಕಣ್ಣ ಕವಿ
ಕಾಯವ ನೆರೆನಂಬಿ ಕೆಡದಿರು ಮಾಯೆಯ ತಿಳಿದೇಳು ಪ. ನ್ಯಾಯವನರಿಯದೆ ನೀ ಮಾಯಾಮೋಹವೆ ಹೇಯಕಾರ್ಯರಿದೊಳಪಾಯದಿ ನರಳುವ ಅ.ಪ. ತನುಮನಕನಕವಿದು ನಿತ್ಯದಿ ತನದಾಗಿಹುದೆಂದು ಹೊನ್ನು ಮಣ್ಣು ಹೆಣ್ಣೆಂಬೀ ಮೂರರ ಬಣ್ಣದೆ ಬಗೆಗೆಟ್ಟು ಕಣ್ಣು ಕಾಣದೆ ಮುಂಬರುತಿಹ ಭಿನ್ನವನೆಣಿಸದೆಯೆ ಸಣ್ಣತನದಿ ಜೀವನ ವ್ಯರ್ಥವೆನಿಸುವ 1 ಸುಜನರ ಸಂಗತಿ ತ್ಯಜಿಸಿ ಮದದಲಿ ಕುಜನರ ಕೂಟವ ಬಯಸಿ ಋಜುಮಾರ್ಗವ ತೊರೆದು ಕಾಲವ ಅಜಗರನಂದದಿ ಕಳೆದು ಗಜಪತಿ ವರದನ ಪದಪಂಕಜ ಮಹಿಮೆಯ ನಿಜವರಿಯದೆ ದುರ್ಜೀವನವೆನಿಸುವ 2 ನೀರಗುಳ್ಳೆಯ ತೆರದಿ ಕರಗುವ ಸಾರವಿಲ್ಲದ ಭವದಿ ಮೂರುದಿನದ ಬಾಳೆಂದು ನೆನೆಯದೆ ಹಾರಾಡುವರೇ ನಿಂದು ಮಾರಪಿತನ ಪದಸಾರಸವನು ನೆನೆ [ನೆನೆದು] ನೀರ ಶೇಷಗಿರಿವರನೆÀ ಗತಿಯೆನೆ 3
--------------
ನಂಜನಗೂಡು ತಿರುಮಲಾಂಬಾ
ಕಾಯೊ ಕರುಣಾನಂದ ಶ್ರೀಗುರು ಕೃಪಾನಿಧೆ ಕಾಯೊ ಕರುಣಿಸಿ ಎನ್ನ ಪೂರ್ಣ ನೀ ಕಾಯೊ ಪರಮದಯಾನಿಧೆ ಧ್ರುವ ತೊಡಿಸಿ ಕರುಣಾನಂದ ಕವಚವ ಇಡಿಸೊ ಭಗುತಿ ವೈರಾಗ್ಯವ ದೃಢಗೊಳಿಸುವ ಙÁ್ಞನಪೂರ್ಣ ನೀ ಕಡಿಸೊ ಕಾಮಕ್ರೋಧವ ನಡೆಸಿ ನಿತ್ಯವಿವೇಕ ಪಥದಲಿ ಕೂಡಿಸೊ ನಿಜಸುಬೋಧವ ಬಿಡಿಸೊ ಭವಭವ ಮೂಲದಿಂದಲಿ ಬಡಿಸೊ ಹರುಷಾನಂದವ 1 ಬಟ್ಟೆ ಕೊಟ್ಟು ಕಾಯೊ ಸತ್ಸಂಗವ ಮುಟ್ಟಿಮುದ್ರಿಸೊದೃಷ್ಟಾಂತವ ಸಟೆಯ ಮಾಡೊ ಅವಿದ್ಯವ ನಿಷ್ಠತನ ನೆಲೆಗೊಳಿಸಿ ಕಾಯೊ ನೀ ಇಟ್ಟು ಶಿರದಲಿ ಅಭಯವ 2 ಭಿನ್ನವಿಲ್ಲದೆ ನೋಡಿ ಎನ್ನನು ಧನ್ಯಗೈಸೊ ನೀ ಪ್ರಾಣವ ಕಣ್ದೆರಿಸಿ ಅಣುರೇಣುದಲಿ ಪೂರ್ಣಖೂನದೋರೊ ಸಾಕ್ಷಾತವ ಎನ್ನೊಳಗೆ ನಿಜಾನಂದ ಸುಖದೋರಿ ಪುಣ್ಯಗೈಸೊ ನೀ ಜೀವನ ಚಿಣ್ಣಕಿಂಕರ ದಾಸ ಮಹಿಪತಿ ರಕ್ಷಿಸೊ ಸಂತತವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಕಾಮಿತ ಫಲದ ಕಾಯೊ ಕಾಯೊ ಪ ಕಾಯೊ ಕಾಯೊ ಎನ್ನ ಕಾಯಜನಯ್ಯನೆ ಕಾಯದಿದ್ದರೆನ್ನ ಕಾವವರಾರೊ ಅ.ಪ ಎಂದೆಂದಿನ ಕರ್ಮಗಳನೆಣಿಸುತಲಿ ಕಂದಿಸಿ ಕುಂದಿಸಿ ಬಂಧಿಪರೇನೋ 1 ತಾಳಲಾರೆ ಈ ಕಾಲನ ಬಾಧೆಯು ಬೇಳುವೆ ನಿನ್ನಯ ಕಾಲಿಗೆ ಸ್ವಾಮಿ 2 ಆಲಸ ಮಾಡದೆ ಆರ್ತಿಗಳೋಡಿಸಿ ಪಾಲಿಪುದೆನ್ನನು ಪಾವನ ಮೂರ್ತೆ3 ಮಾಡಿದ ಪಾಪಗಳೋಡಿಸಿ ಸುಖದಿಂ ದಾಡಿಸು ಕಣ್ಣಿಗೆ ಕಾಣಿಸಿಕೊಂಡು 4 ವಾಸುದೇವವಿಟ್ಠಲ ನೀ ಎನಗಿನ್ನು ವಾಸಿ ಮಾಡಿಸಿ ಕೀರ್ತಿಯ ಪಡೆಯೊ 5
--------------
ವ್ಯಾಸತತ್ವಜ್ಞದಾಸರು
ಕಾಲ ಬಂದಿತೋ ಬಂದ ಭವದೊಳು ಚಿಂತೆಯೊಳಗೆ ದಿನ ಸಂದಿತು ಪ ತುಪ್ಪ ಪಣಕೆ ಸೇರು ಉಪ್ಪೆಂಟು ಸಿದ್ದೆಯು ಮುಪ್ಪಾಗ ಕೊಂದೆ ಕೊಳಗಬತ್ತ ಸೊಪ್ಪ ಪಣಕೆ ಮಾರುವುದು ಅಚ್ಚೇರು 1 ವ್ಯಾಪಾರ ಸಾಪಾರ ತುಟ್ಟಿಸಿದರು ಕೊಳ್ಳ ಲಾಪರೆ ಫಣವೊಂದೆ ಕಟ್ಟಿಲ್ಲ ರೂಪಾಯಿ ಕೊಡೆ ಪುಲಿಚರಮ ಪಾಪವು ಸುಲತಾಗಿ ಪಣವ ಕೊಡೆಂಬರು 2 ದುಡ್ಡು ಕೊಡಲು ಬೇಡ ಬೈಯುತ ಆನೆ ಗೂಡಿನ (ಆನೆಗೊಂದಿ) ದುಡ್ಡತಾರೆಂಬರು ದೊಡ್ಡ ಮೊಳೆ ಪಣವಿದು ಸಣ್ಣ ಮೊಳೆಯಿಂಗಿ ? ಹೆಡ್ಡ ಹೋಗೆಂದದ್ದ ಬಿಸುಟರು ಫಣವ 3 ತಪ್ಪಿ ಹೇಳುವೆನೆ ನಮ್ಮಪ್ಪ ದುರ್ಭಿಕ್ಷವು ಎಪ್ಪತ್ತು ವರುಷ ಕೊದಗಿ ಬಂತು ಇಪ್ಪತ್ತು ವರುಷಕೀಕಾಲ ಬಂದಿದ್ದರೆ ಕನಿಷ್ಟಕ್ಕೆ ಗಣಿಸಿ ಸುಕ್ಷಾಮವ ಮರೆವೆನು 4 ಧಾರಣೆ ಪಾರಣೆ ಶಿವರಾತ್ರಿ ಹರಿದಿನ ಓರಂತೆ ಬಡವಗೆ ನೆಲೆಯಾಯಿತು ಕ್ಷೀರಾಬ್ದಿ ಶಯನ ಲಕ್ಷ್ಮೀನಾರಾಯಣನು ತನ್ನ ಸೇರಿದ ಜನರ ಕಣ್ಣಲಿ ನೋಡುತೊಲಿದ 5
--------------
ಕವಿ ಪರಮದೇವದಾಸರು
ಕಾಲ ಕಳೆಯಬೇಡ ಮನವೇ ಮೂಳನಾಗಬೇಡ ಪ ಕಾಳು ಕತ್ತಲೆಂಬ ಹಾಳು ಸಂಸಾರ ಮಾಯಾ ಜಾಲ ಮೋಹಿಸಿ ಹೊತ್ತು ಹಾಳುಮಾಡಿಕೊಂಡು ಅ.ಪ ನಿನ್ನೊಳು ಹುಡುಕಾಡಿ ಹರಿಯ ಉನ್ನತಕೃಪೆ ಪಡಿ ಕಣ್ಣುಮುಚ್ಚಿ ಪರರ್ಹೆಣ್ಣಿನ ಹೊಲೆಮೈ ಬಣ್ಣಕೆ ಮನಸೋತು ಠೊಣ್ಯನೆನಿಸಿಕೊಂಡು 1 ನೋಡಿ ತಿಳಿದು ಭವಮೂಲ ಹುಡುಕಾಡಿ ಹಿಡಿಯೋ ನಿಜವ ರೂಢಿಸುಖಕೆ ಮನನೀಡಿ ಸನ್ಮಾರ್ಗದ ಜಾಡು ತಿಳಿಯದೆಮತಾಡಣೆಗೊಳಪಟ್ಟು 2 ಅರಿತು ಶ್ರೀರಾಮಚರಣ ನಿರುತದಿ ಗುರುತು ಹಿಡಿಯೋ ಜಾಣ ಪರಲೋಕ ಸಾಧನ ಸುರತು ಷರತು ಮಾಡಿಕೊಂಡು ಪರಕೆ ಪರಮ ಪರತರ ಮುಕ್ತಿ ಸುಖ ಸುರಿ 3
--------------
ರಾಮದಾಸರು
ಕಾಲ ಮೃತ್ಯುವು ಸ್ತ್ರೀಯಲ್ಲದಲೆ ಕಾಯುವವಳು ತಾನಲ್ಲಣ್ಣ ಕಾಳಕವೀಶ್ವರ ಬಲ್ಲನು ತಾನೇನ ಕಾಳ ಕಿಚ್ಚಿನ ಕುಂಡವಣ್ಣ ಪ ಮಲ ಮೂತ್ರವು ಮಜ್ಜೆಯು ಮೇದಸ್ಸು ಮೇಲೆ ಚರ್ಮ ಹೊದ್ದಿಹೆವಣ್ಣಎಲುಬುಗಳಡಕಲಿ ನರಗಳ ಬಿಗಿವು ಎಡದೆರ ಅಪಿಲ್ಲದೆ ಇಹುದಣ್ಣ ಬಲು ಹೊಲಸಿನ ಮಡುವದು ಮತ್ತೆ ಬಗೆಬಗೆಯ ಕ್ರಿಮಿಗಳು ಮನೆಯೊಳಣ್ಣ ಹೊಲೆಮಯವಿರುವ ಸ್ತ್ರೀಯ ವರ್ಣಿಪೆನು ಹೇವ ಮಾರಿಯು ಕಾಣಣ್ಣ 1 ಕಳಸ ಕುಚವು ಎದೆಎಂಬನ ಬಾಯಲಿ ಕರಿಯ ಮಣ್ಣನೆ ಹಾಕಣ್ಣ ಹೊಳೆವ ಕಂಗಳು ಎಂಬನ ಮೋರೆಗೆ ಹುಡಿಯನೀಗಲೆ ಚೆಲ್ಲಣ್ಣಬಳಕು ನಡೆಯಂತೆಂದು ಬೊಗಳುವನ ನಿಲಿಸದೆ ಅಲ್ಲಿಂದಟ್ಟಣ್ಣಚೆಲುವಿನ ಸುಂದರ ಚೇಷ್ಟೆಗೆ ನಲಿವನ ಚಪ್ಪಲಿಯಿಂದಲಿ ಕುಟ್ಟಣ್ಣ 2 ಬ್ರಹ್ಮಧ್ಯಾನವ ಮಾಡುವುದಕ್ಕೆ ಬ್ರಹ್ಮರಾಕ್ಷಸವು ಇದು ಅಣ್ಣಹಮ್ಮಳಿದು ಯೋಗಾಭ್ಯಾಸದಲಿರೆ ಹೃದಯದಲಿ ಹರಿದಾಡುವುದಣ್ಣಬ್ರಹ್ಮೇತಿಯು ತಾನಿವನ ಸಂಗದಿ ಭವಭವತಿರುಗುವುದ ಬಿಡದಣ್ಣಸಮ್ಮತದಲಿ ಚಿದಾನಂದ ಹೊಂದಿಯೆ ಸೀಮಂತಿನಿಯ ಬಿಡಬೇಕಣ್ಣ 3
--------------
ಚಿದಾನಂದ ಅವಧೂತರು