ಒಟ್ಟು 726 ಕಡೆಗಳಲ್ಲಿ , 89 ದಾಸರು , 652 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದದೆ ಎನಗೆ ಬರಿದೆ ದೂರು ಬಂದೊಂದು ಅವಗುಣದವನೆಂಬೊ ಮಾತು ಪ ಕಾಮಕ್ರೋಧಂಗಳು ಹೆಚ್ಚಿಸಿ ಮನದೊಳು ತಾಮಸ ಬುದ್ಧಿ ವಿಶೇಷವಾಗಿ ಕಾಮುಕವಾಗಿ ನಡವಳಿ ನಡಸಿದ ಈ ಮನದ ಅಧಿಕಾರಿ ಶ್ರೀಕೃಷ್ಣನೊ ನಾನೊ 1 ಅನ್ಯಾಯ ಅನ್ಯಾಯ ಅಸಡ್ಡಾಳ ಅಪದ್ಧ ನನ್ನ ನಿನ್ನದು ಎಂಬೊ ಬಡದಾಟವು ತನ್ನ ಸ್ಮರಣಿ ತಪ್ಪಿ ವಿಷಯಕ್ಕೆ ಎರಗಿಸಿ ಮುನ್ನ ಮನದ ದಾತಾ ಶ್ರೀಕೃಷ್ಣನೊ ನಾನೊ 2 ಮನೆ ಮನೆಗಳ ಪೊಕ್ಕು ಮಕ್ಕಳಾಟಿಕೆಯಿಂದ ವನುರುತರ ರೂಪಿಗೆ ಸೋತು ಆತು ಕನಿಕರಿಸಿ ಕ್ರಮಗೆಟ್ಟು ತಿರುಗಿಸುವ ತನವು ಮಾಡಿದಾತಾ ಕೃಷ್ಣನೊ ನಾನೊ 3 ನೀತಿ ನಿರ್ಣಯ ಮರೆದು ಪಾತಕದೊಳು ಬಿದ್ದು ಪ್ರೀತಿಯಲಿ ಅತಿಥಿಗಳ ವಂದಿಸದೆ ಯಾತಕ್ಕೆ ಬಾರದಾ ಚರಿತೆ ನಡೆವಂಥ ಚೇತನ ಕಲ್ಪಿಸಿದ ಕೃಷ್ಣನೊ ನಾನೊ 4 ಆವಾವ ದುಷ್ಕರ್ಮಗಳ ಮಾಡಿ ಉತ್ತಮ ದೇವ ಬ್ರಾಹ್ಮಣರ ಪೂಜಿಸಲಿಲ್ಲವು ಶ್ರೀ ವಿಜಯವಿಠ್ಠಲ ವೆಂಕಟಗಲ್ಲದ ಜೀವ ಪುಟ್ಟಿಸಿದಾತ ಕೃಷ್ಣನೋ ನಾನೊ 5
--------------
ವಿಜಯದಾಸ
ಬಂದು ಪಾಲಿಸೆನ್ನ ರಮಾಸಿಂಧುಜೆ ಶ್ರೀರಾಮ ಇಂದು ಭಜಿಪೆ ನಿಮ್ಮ ಪ ಕಂದನೆಂದು ಮನಕೆ ತಾರದಿರಲು ನೊಂದೋಯ್ತು ನೀ ಬೇಗ 1 ಧೀಮಣಿ ಭಕ್ತಚಿಂತಾಮಣಿ ನೀ ಬೇಗ 2 ನಿಮ್ಮ ಕಂದನಾಶ್ರಯಿಸಲು ಸುಮ್ಮನಿರುವದೇನುಚಿತವೇ ನೀ ಮೊಖ [ತೋರಿ] ಬೇಗ 3
--------------
ಚನ್ನಪಟ್ಟಣದ ಅಹೋಬಲದಾಸರು
ಬಲು ರಮ್ಯವಾಗಿದೆ ಹರಿಯ ಮಂಚ ಪ ಎಲರುಣಿಕುಲ ರಾಜ ರಾಜೇಶ್ವರನ ಮಂಚಅ.ಪ. ಪವನತನಯನ ಮಂಚ ಪಾವನತರ ಮಂಚ ಭುವನತ್ರಯನ ಪೊತ್ತ ಭಾರಿಮಂಚ ಕಿವಿಗಳಿಲ್ಲದ ಮಂಚ ಶ್ರೀನಿಕೇತನ ಮಂಚ ಶಿವರೂಪದಲಿ ಹಿಂದೆ ಹರಿಯನೊಲಿಸಿದ ಮಂಚ 1 ನೀಲಾಂಬರವನುಟ್ಟು ನಳನಳಿಸುವ ಮಂಚ ನಾಲಗೆ ಎರಡುಳ್ಳ ನೈಜಮಂಚ ನಾಲ್ವತ್ತು ಕಲ್ಪದಿ ತಪವ ಮಡಿದ ಮಂಚ ತಾಲ ಮುಸಲ ಹಲವ ಪಿಡಿದಿರುವ ಮಂಚ 2 ರಾಮನನುಜನಾಗಿ ರಣವ ಜಯಿಸಿದ ಮಂಚ ತಾಮಸ ರುದ್ರನನು ಪಡೆದ ಮಂಚ ಭಿಮಾವರಜನೊಳು ಆವೇಶಿಸಿದ ಮಂಚ ಜೀಮೂತ ಮಂಡಲವ ತಡೆಗಟ್ಟಿದ ಮಂಚ 3 ಜೀವನಾಮಕನೆನಿಸಿ ವ್ಯಾಪ್ತನಾದ ಹರಿಯ ಸೇವಿಸಿ ಸುಖಿಸುವ ದಿವ್ಯ ಮಂಚ ಸಾವಿರ ಮುಖದಿಂದ ತುತ್ತಿಸಿ ಹಿಗ್ಗುವ ಮಂಚ ದೇವಕೀಜಠರದಿ ಜನಿಸಿದ ಮಂಚ4 ವಾರುಣೀ ದೇವಿ ವರನೆನಿಸಿದ ಮಂಚ ಸಾರುವ ಭಕುತರ ಸಲಹೊ ಮಂಚ ಕಾರುಣ್ಯನಿಧಿ ಜಗನ್ನಾಥ ವಿಠಲನ ವಿ ಹಾರಕ್ಕೆ ಯೋಗ್ಯವಾದ ವಿಮಲ ಶೇಷ ಮಂಚ5
--------------
ಜಗನ್ನಾಥದಾಸರು
ಬಾರಕ್ಕಾ ನಾವಿಬ್ಬರಾಡುವಾ ಯೋಗ ಸಾಧನವೆಂಬುದು ಮಾಡುವಾ ತಾಮಸ ತನುಗುಣಗಳ ಬಿಟ್ಟು ಸುಜ್ಞಾನ ಕ್ಷೀರ ಸಾಗರದೊಲಗಾಡುವಾ ಪ ಕಳೆಗೂಡಿ ಒಳನೋಟ ನೋಡುವಾ ಅಲ್ಲಿ ಒಳಸಭೆ ಪ್ರಭೆಯೊಳಗಾಡುವಾ ಥಳಥಳಿಸುವ ಮೆರೆವ ಚಿದಾತ್ಮನ ಬೆಳಕಿನೊಳ್ ಬೆಳಕಾಗಿ ಪರವಶವಾಗುವಾ 1 ಅಂಬಾ ಚಂದನ ಗಂಧಿಯೇ ಶಾರ ದಾಂಬಾ ಸುಪ್ರದವೇಣಿಯೇ ಶಂಭು ಸದ್ಗುರು ಎನ್ನೊಳು ಕಡೆನೋಡೆ ಕಂಬುಕಂಠಿನಿ ಚಲ್ವ ಕಮಲದಳಾಕ್ಷಿ 2 ಎಂಟೆರಡು ಕದಗಳ ಕಟ್ಟುವಾ ಅಲ್ಲಿ ಬಂಟರ ತಡೆಗಳ ಅಟ್ಟುವಾ ಮಂಟಪವೆಂಬುದು ಮಹಾಲಿಂಗನದೆಡೆ ಅಂತರಂಗದ ಕಾಂತೆಗಾಡುವಾ 3 ಮಂದರ ಗಿರಿಯಂತೆ ಅಲ್ಲಿ ಭೋರೈಸುವ ಘಂಟಾ ಧ್ವನಿಯಂತೆ ಸಾರ ಅಮೃತವುಂಡು ಕ್ಷೀರಸಾಗರಮಿಂದು ತೋರುವ ಗುರು ವಿಮಲಾನಂದಾ 4
--------------
ಭಟಕಳ ಅಪ್ಪಯ್ಯ
ಬಾರಮ್ಮ ಸರಸ್ವತಿ ಬಾ ದ್ರುಹಿಣಯುವತಿ ಬಾ ನಿರ್ಮಲಮತಿ ತೋರಿ ಭಾರತಿ ಪ. ಭುಜಗ ಸದೃಶ ವೇಣಿ ಭಜಕರ ಚಿಂತಾಮಣಿ ಕೀರವಾಣಿ 1 ವೇದಾಂತರಂಗಿಣಿ ನಾದಸ್ವರೂಪಿಣಿ ಪ್ರಾದುರ್ಭವಳಾಗು ಸಾಧ್ವೀಕಲ್ಯಾಣಿ 2 ಅಕ್ಷಯ ಸುಖಭಾಷೆ ಆಶ್ರಿತಕಜನಪೋಷೆ ಲಕ್ಷ್ಮೀನಾರಾಯಣನ ಸೊಸೆ ಸುವಿಲಾಸೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರಯ್ಯ ಎನ್ನ ಮನ ಮಂದಿರಕೆ ಪ ಬೇರೊಂದು ಯೋಚನೆ ಮಾಡದೆ ಸಿರಿಪತಿಅ.ಪ ಸೋನೆ ಸೊರಗುವುದೆವಾರ ವಾರಕೆ ಮೇಘವಾರಿಯ ಕರೆದರೆಧಾರುಣಿಗೆ ಕ್ಷಾಮ ಬರುವುದೆ ಕೃಷ್ಣ1 ತಾಮಸ ಬುದ್ಧಿಯೆಂಬಿಯ ನಿನ್ನಶ್ರೀಮೂರ್ತಿ ಹೊಳೆದರೆ ತಮವಡಗದೆಶ್ರೀ ಮನೋಹರನೆ ಭಾನು ಉದಿಸಿದರೆತಾಮಸವಡಗದೆ ಜಗದೊಳು ಕೃಷ್ಣ 2 ನಾ ದೋಷಿ ಕಠಿಣನೆಂತೆಂಬೆಯ ನಿನ್ನಪಾದಪದುಮ ಪಾಪಹರವಲ್ಲವೆಆ ದುಷ್ಟ ಶಿಲೆ ಸೋಕೆ ಋಷಿಪತ್ನಿಯಾದಳುನೀ ದಯಮಾಡೆ ನಾ ನೀಚನೆ ಸಿರಿಕೃಷ್ಣ 3
--------------
ವ್ಯಾಸರಾಯರು
ಬಾರೋ ಮನೆಗೆ ಭಾಗವತರ ಭಾಗದೇಯನೆ ಚಾರುವದನ ತಾಮರಸವ ತೋರು ಪ್ರೀಯನೆ ಪ ಹಗಲು ಇರುಳು ನೆನಹು ಬಿಡದು ಸುಗುಣ ಸುಂದರ ಬಗೆಯೊಳಿನ್ನ ಮರೆಯಬಹುದೆ ನಿಗಮಗೋಚರ 1 ಕಣ್ಣಿನಿಂದ ನಿನ್ನ ನೋಡಿ ಧನ್ಯನಾಗುವೆ ನಿನ್ನ ಚರಣಕೆನ್ನ ಶಿರದಿ ಮುನ್ನಬಾಗುವೆ 2 ನಿತ್ಯತೃಪ್ತನಿನಗೆ ನಾನೇ ಭೃತ್ಯನಾಗುವೆ ನೃತ್ಯಗೈದು ಪಾಡಿ ಕೃತಕೃತ್ಯನಾಗುವೆ 3 ಶ್ರೀನಿವಾಸ ನಿನ್ನ ದಾಸ ನಾನೇನಲ್ಲವೆ ಮಾನಪ್ರಾಣಗಳಿಗೆ ದೊರೆಯು ನೀನೆಯಲ್ಲವೆ 4 ಶರಣ ಜನರ ಭರಣಗೈವ ಕರುಣಿಯಾರೆಲಾ ಹರಣ ಹರಧರದೊಳಿರುವ ವರದ ವಿಠಲಾ 5
--------------
ವೆಂಕಟವರದಾರ್ಯರು
ಬಾರೋ ವೆಂಕಟೇಶ ನಮ್ಮ ಭಾಗ್ಯನಿಧಿಯೆ ಪ ಸಾರಿಸಾರಿ ಶಿರಬಾಗಿ ಬೇಡುವೆ ನಾ ಅ.ಪ ವದ್ದಾ ವಿಪ್ರನ ಪೂಜಿಸಿದೀ ಶುದ್ಧಸತ್ವಗುಣಾಂಬೋಧಿ ಪದ್ಮಾವತಿ ರಮಣ ಭಕ್ತ ಪಾಲನೀನೆ 1 ಆಪದ್ಟಂಧುಯೆಂಬುವನೀನಲ್ಲವೇ ಸ್ವಾಮಿ 2 ನಾಮಧಾರಿದಾಸರಿಗೆ ಕ್ಷೇಮವ ಕೊಡುವಿ ಕೊನೆಗೆ ತಾಮರಸನೇತ್ರಾ ಗುರುರಾಮವಿಠ್ಠಲ 3
--------------
ಗುರುರಾಮವಿಠಲ
ಬಾರೋಮನೆಗೆ ಭಾಗವತರ ಭಾಗದೇಯನೆ ಚಾರುವದನ ತಾಮರಸವ ತೋರು ಪ್ರೀಯನೆ ಪ ಹಗಲುಯಿರಳು ನೆನಹುಬಿಡದು ಸುಗುಣಸುಂದರ ಬಗೆಯೊಳೆನ್ನ ಮರೆಯಬಹುದೆ ನಿಗಮಗೋಚರ 1 ಕಣ್ಣಿನಿಂದ ನಿನ್ನ ನೊಡಿಧನ್ಯನಾಗುವೆ ನಿನ್ನ ಚರಣಕೆನ್ನ ಶಿರದಿ ಮುನ್ನಬಾಗುವೆ 2 ನಿತ್ಯ ತೃಪ್ತನಿನಗೆ ನಾನೇ ಭೃತ್ಯನಾಗುವೆ ನೃತ್ಯಗೈದು ಪಾಡಿಕೃತಕೃತ್ಯನಾಗುವೆ 3 ಶ್ರೀನಿವಾಸ ನಿನ್ನ ದಾಸನಾನೇನಲ್ಲವೆ ಮಾನಪ್ರಾಣಗಳಿಗೆ ಧೊರೆಯು ನೀನೇಯಲ್ಲವೆ 4 ಶರಣ ಜನರ ಭರಣಗೈವ ಕರುಣಿಯಾರೆಲಾ ಹರಿಣಹರಧರದೊಳಿರುವ ವರದವಿಠಲಾ 5
--------------
ಸರಗೂರು ವೆಂಕಟವರದಾರ್ಯರು
ಬಾಲಗೆ ಪಟ್ಟಗಟ್ಟಿಸು ಪರಿವಾರವ ಬಾಳಿಸು ಮುನ್ನಿನಂದದಲಿ ಸುತನ ಮುಂದಿಟ್ಟು 151 ಇಕ್ಷ್ವಾಕುಕುಲತಿಲಕನೆ ನಿನ್ನ ರಾಜ್ಯವ ಒಪ್ಪಿಸಿಕೊಳಲೆನಗಳವೆ ಪುತ್ರಗೆ ಪಟ್ಟವ ಕಟ್ಟುವುದೇನು ಕಾರಣ ವಿಸ್ತಾರವಾಗಿ ಹೇಳೆಂದ 152 ಕೇಳಿದೆ ಕರ್ಣದಿ ಹೀನದ ವಾಕ್ಯವ ಜಾರತ್ವ ಬಂದಿತಾತ್ಮಜೆಗೆ ಮಾಡುವೆನು 153 ಅಮರಲೋಕಕ್ಕೆ ವಶವಹರು ಭಾಧೆಗೆ ಗುರಿಯಾಗಿ 154 ವ್ಯರ್ಥವಾಯಿತು ಎನ್ನ ಬದುಕು ಮಾಡಿಕೊಂಬೆನೆಂದ 155 ಕಥೆಯ ಕೇಳರಿಯಾ ಕುಂದನೊದ್ದವರಾರು ಜಗದಿ 156 ಮೀರಿದರಾರೊ ಕಲ್ಪನೆಯ 157 ಸರ್ವಾಂಗದಿಂದ ಸುಂದರಿಯು ಸತಿ ಲಾಂಛನೆಯ ತಾಳಿದನು 158 ಸೆರೆತಂದ ತಾರಾದೇವಿಯನು ಪಾಡೇನು ಭೂಪಾಲ 159 ಕುಮಾರತಿಯ ಮಂದಿರಕೆ ಅರುಹಿದರಾರು ನಿನ್ನೊಡನೆ 160 ನಿಲ್ಲಿಸಿದ ಪ್ರಧಾನಿ ನಡೆತಂದ ಸೆಜ್ಜೆವಾಹರಿಗೆ 161 ಮಲಿನವನುಟ್ಟ ಮಾನಿನಿಯ ಸೆಳೆವಿಡಿದೆತ್ತಿದ ರಾಯ 162 ಮಾಜುವದೇಕೆ ಎನ್ನೊಡನೆ ಬ್ರಾಹ್ಮರು ಮೆಚ್ಚುವಂತೆ 163 ಸುರರೊ ನರರೊ ಕಿನ್ನರರೊ ಗಿರಿಜೇಶನಾಣೆ ಹೇಳೆಂದ 164 ವಿಶ್ವಲೋಚನನಂಘ್ರಿಯಾಣೆ 165 ಸರಿಯ ನಾರಿಯರು ಉರಿವ ಪಾವಕನ 166 ಬ್ರಾಹ್ಮರಿಗ್ಯೊಗ್ಯವಹುದೆ ಬರುವುದು ನಿಮ್ಮ ಕುಲಕೆ 167 ಪಾತಕಿಯೆಂದು ತಿಳಿದು ಬರುವುದೆ ಉಚಿತವು 168 ಮುನಿದು ಅರಣ್ಯಕ್ಹೋಗುವರೆ ವರಿಸು ನಿನಗೆ ಉತ್ತುಮವುಳ್ಳ ಪುರಷಗೆ ಧಾರೆಯನೆರೆವೆನು 169 ಪಾತಕ ಬರಿದೆ ನಿಂದ್ಯವನು (ಅ) ಬಂದೊದಗಿದ ಮೇಲೆ 170 ತೂಪಿರಿದು ಮಂತರಿಸಿ ಘೋರ ಕಾನನಕೆ 171 ಗುರಿಮಾಡಿ ನಾರಿ ಕಂಬನಿದುಂಬಿದಳು 172 ವಶವಲ್ಲದಂಥ ಮೂಗುತಿಯ ಬಿಸುಸುಯ್ವದೇತಕೆ ತಾಯೆ 173 ಕುಮಾರಿಯ ಮೇಲೆ ಸ್ನೇಹದಲಿ ವಿಧಿಯೆಂದ್ಹೊರಳಿದಳು 174 ಅಳುವುದೇತಕೆ ತಾಯೆ ನೀನು ಕಲ್ಮಾಡು ನಿನ್ನ ದೇಹವನು 175 ಹೇಳಿದನೇಕಾಂತದಲಿ ಉದಯಕೆ ಬನ್ನಿರೆಂದ 176 ಕರೆಸಿದನಾಗ ಕಿಂಕರರ ಪ್ರಧಾನಿಯು ತರಿಸಿದನೊಜ್ರದಂದಣವ ಬನ್ನಿರಿ ಶೀಘ್ರದಿಂದ 177 ಮಾಡಿರಿಮನಕೆ ಬಂದುದನು ನಾನಿಡುವೆ ರಾಯನ ಮುಂದೆ 178 ಮೇಲೆ ಪನ್ನಂಗ ಕವಿದವು ಶೀಘ್ರದಿ ಪೊತ್ತು ನಡೆದರು 179 ಬಸವಳಿದಳು ಶ್ರೀ ಹರಿಯ ಸ್ತುತಿಸುತಿರ್ದಳೆ ತನ್ನ ಮನದಿ 180 ಕಾಲನ ವಶಕೆÉ ಒಪ್ಪಿಸದೆ ಪಾದಾರವಿಂದೊಳಿರಿಸು 181 ಭಾರವನ್ಹೊತ್ತು ಬಳಲಿ ಬಾಯಾರುತ್ತ ಏರುತ್ತ ಘಟ್ಟ ಬೆಟ್ಟಗಳ ಬಾಲೆಯ ತಂದಿಳುಹಿದರು 182 ಬಾ ಬಳಲಿದೆಯೆನುತ ರಂಭೆಯನುಪಚರಿಸಿದರು 183 ತೊಪ್ಪಲ ಮೇಲ್ಹರಹಿದರು ಕತ್ತಿಗೆ ಮಯ್ಯನಿಕ್ಕಿದಳು 184 ಕಂಬುಚಕ್ರಧಾರಿ ವೈಕುಂಠವಾಸಗೆ ವಂದಿಸಿದಳು ತನ್ನ ಮನದಿ ಸ್ತುತಿಯ ಮಾಡಿದಳು 185 ಅರಣ್ಯದಲ್ಲಿ ತನ್ನ ನೆನೆವ ಕುಮಾರಿಗೆ ಕಾರುಣ್ಯದಿಂದೊದಗಿದನು ನಿದ್ರೆ ಕವಿದವು 186 ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಭಕ್ತರಿಗೊಜ್ರಪಂಜರನೆ ದೂತರ ಮನವ 187 ಯೋಚಿಸಿ ತಮ್ಮ ಮನದಿ ಪಾತಕ ಎತ್ತಿದಾಯುಧವನಿಳುಹಿದರು 188 ಒಬ್ಬರೊಬ್ಬರು ಮಾತನಾಡಿ ಉರ್ವೀಶಗೊಯ್ದು ಒಪ್ಪಿಸುವ 189 ವಾರಿಜಗಂಧಿಯ ಬಿಟ್ಟು ರಾಯಗೆ ಗುರುತ ತೋರಿದರು 190 ತಪ್ಪದೆ ರಾಯನೋಲಗಕೆ ಚಿತ್ತೈಸು ಜೀಯವಧಾನ 191 ತಂದೆವು ಮುದ್ರೆಯುಂಗುರವ ಮನದಲಿ ಮರುಗಿದನು 192 ಅಂಜೂರ ಕೊಯ್ದು ಕೊಟ್ಟಂತೆ ಬೆಂದೊಡಲನೆಂತು ಪೊರೆಯಲಿ 193 ಕೆಂಡದೊಳಾಜ್ಯ ಬಿದ್ದಂತೆ ಬೆಂದರು ಶೋಕಾಗ್ನಿಯಿಂದ 194 ಮೇಲೆ ಸ್ನೇಹದಲಿ ತಲೆಯೆತ್ತಿದವಬ್ಜ ಬಂಧುಗಳು 195 ಹಸಿದ ಹೆಬ್ಬುಲಿಗೆ 196 ಬೆದರುವಳು ವ್ಯಾಘ್ರದಟ್ಟುಳಿಗೆ ಮರಳಿ ಧೈರ್ಯವನೆ ಮಾಡುವಳು 197 ಮಾಯಪಾಶಕೆ ಗುರಿಮಾಡಿ ಮುಕ್ತಿ ಸಾಧನವು 198
--------------
ಹೆಳವನಕಟ್ಟೆ ಗಿರಿಯಮ್ಮ
ಬಾಳು ಬಾಳು ಹರಿ ಪೂಜಾಲೋಲುಪÁಳೊ ಬಾಳೊ ಮುನಿವಾದಿರಾಜಬಾಳೆಂದಕ್ಷತಿನಿಟ್ಟು ದೇವಕ್ಕಳೆಲ್ಲಬಲು ಕೃಪೆಯಲಿ ಹರಸಿದರೊಪ. ಮಕ್ಕಳ ಮ್ಯಾಲೆಂದೆಂದು ಬಲುಅಕ್ಕರುಳ್ಳ ತಾಯಿ ಬಳಗಅಕ್ಷತಿನಿಕ್ಕಿ ಹರಸುವಂದದಿ ದೇ-ವಕ್ಕಳೆನ್ನ ಹರಸಿದರೊ 1 ಸಾಲಿಗ್ರಾಮ ತೀರ್ಥವನು ಮ್ಯಾಲೆಫಲವೀವ ಕ್ಷೇತ್ರವನುಕಾಲಕಾಲದಿ ಹರಿಸ್ಮರಣೆಯ ಬಿಡದಿರುಕೀಳು ಭವವೆಂಬ ಶತ್ರುವನು 2 ತುಲಸಿ ಪದ್ಮಾಕ್ಷಿಯ ಸರವ ನಿನ್ನಕೊರಳ ರವದಲ್ಲಿ ಮೆರೆವಅಲಸದೆ ಹರಿವಾಸರವನೆ ಬಿಡದಿರುಸುಲಭದಿ ಹರಿ ನಿನ್ನ ಪೊರೆವ 3 ಭ್ರಾಮಕರೊಡನಾಡದಿರು ಕಂಡಕಾಮಿನಿಯರ ಕೂಡದಿರುನೇಮನಿಷ್ಠೆಗಳನ್ನು ಬಿಡದಿರು ಎಂದೆಂದುತಾಮಸನಾಗಿ ಕೆಡದಿರು 4 ಹಯವದನಗೆ ನಮಿಸುತಿರು ನಿ-ರ್ಣಯದ ಶ್ರುತಿಯಸೇವಿಸುತಿರುಪ್ರಿಯ ಪುರಾಣಗಳ ಕೇಳುತಿರು ನಿ-ರ್ಭಯದಿಂದವನ ಪೊಗಳುತಿರು 5 ಹರಿಭಕುತರೊಳೆಂದೆಂದಾಡಿರೊ ನರ-ಹರಿಯ ನಾಮಗಳನು ಪಾಡಿರೊ ಹರಿ ಅರ್ಚನೆಯನು ಮಾಡಿರೊ ಶ್ರೀಹರಿಯ ಮೂರುತಿಯನು ನೋಡಿರೊ 6 ದೂರಕ್ಕೆ ದೂರನು ದಾವನ ಹ-ತ್ತಿರ ಬಂದ ಭಕುತರ ಕಾವನಆರಾಧಿಸಲು ಫಲವೀವನ ಹ-ತ್ತಿರ ಸೇರುವ ಭಾವ ದಾವನ 7 ಕಾಮದೇವನ ಪೆತ್ತ ಕರುಣಿಯ ಸುತ್ತಸೇವಿಪರಘತಮ ತರಣಿಯ- - - - - - - - - - -- - - - - - - - - - -8 ಜಯಿಸಿ ಕಂಸನೆಂಬ ಮಾವನ ಆಶಯವಿತ್ತು ಭಕುತ ಸಂಜೀವನಹಯವದನನಾಗಿ ಪಾವನ ಶ್ರು-ತಿಯ ತಂದ ದೇವರದೇವನ9
--------------
ವಾದಿರಾಜ
ಬೆಂಕಿಗಿರುವೆಗಳ ಕಾಟುಂಟೇ ಹರಿ ಭವ ಭಯಮುಂಟೆ ಪ ಪಂಕಜಸಖನಿಗೆ ಕತ್ತಲಂಜಿಕೆಯುಂಟೆ ಪಂಕಜಾಕ್ಷನ ಧ್ಯಾನಕ್ಕೆಣೆಯುಂಟೆ ಅ.ಪ ವಜ್ರಾಯುಧಕೆ ಗಿರಿ ಉಳಿಯಲುಂಟೆ ಗಂಗೆ ಮಜ್ಜನದಿಂ ಮೈಲಿಗೆಯಿರುಲುಂಟೆ ಸಜ್ಜನರಿಂಗೂಡಿ ನಿರ್ಜರೇಶನ ಭಜ ನ್ಹೆಜ್ಜೆಜ್ಜ್ಹಿಗಿರೆ ಜನ್ಮ ಬರಲುಂಟೆ 1 ಮೌನಧಾರಿಗೆ ಅಭಿಮಾನ ಉಂಟೆ ನಿಜ ಧ್ಯಾನಿಕರಿಗೆ ಹೀನ ಬವಣೆಯುಂಟೆ ಜ್ಞಾನದೊಳೊಡಗೂಡಿ ಗಾನಲೋಲನ ಪಾದ ಆನಂದಕರಿಗಿಹ್ಯಸ್ಮರಣುಂಟೆ 2 ತಾಮಸ್ಹೋಗಲು ಕ್ಷೇಮ ಬೇರುಂಟೆ ದು ಷ್ಕಾಮಿ ತಳೆಯಲು ಮುಕ್ತಿದೂರುಂಟೆ ಭೂಮಿಗಧಿಕ ನಮ್ಮ ಸ್ವಾಮಿ ಶ್ರೀರಾಮನ ಪ್ರೇಮಪಡೆದ ಮೇಲೆ ಬಂಧ ಉಂಟೆ 3
--------------
ರಾಮದಾಸರು
ಬೇಡಿಕೊಂಬೆನೊ ಶ್ರೀಹರಿಯೆ ನಿಮ್ಮ ಅಡಿಯ ಮರೆಯೆನೊ ಪ ಬೇಡಿಕೊಂಬೆನಯ್ಯ ನಿಮ್ಮ ಅಡಿಯಪಿಡಿದು ಬಿಡದೆ ನಾನು ಗಡನೆ ಎನ್ನ ಕಡುದಾರಿದ್ರ್ಯ ಕಡಿದು ಬಯಲು ಮಾಡಿ ಹರಿಯೇ ಅ.ಪ ದೈತ್ಯಶಿಕ್ಷಕ ಚಿತ್ತಜತಾತ ಭಕ್ತರಕ್ಷಕ ಅ ನಾಥ ಪ್ರೀತ ಮುಕ್ತಿದಾಯಕ ಸತ್ಯಸಂಧನನ್ನು ಮಾಡಿ ಮತ್ರ್ಯಭೋಗದಾಸೆಬಿಡಿಸಿ ನಿತ್ಯನಿರ್ಮಲಾತ್ಮ ನಿಮ್ಮ ಭಕ್ತಿಯಿತ್ತು ಸಲಹೊ ಹರಿಯೆ 1 ಶ್ಯಾಮಸುಂದರ ಸ್ವಾಮಿ ಭಕ್ತಪ್ರೇಮ ಮಂದಿರ ರಮಾ ಸತ್ಯಭಾಮಾ ಮನೋಹರ ಪಾಮರತ್ವ ತಾಮಸ ದುಷ್ಕಾಮಿತಂಗಳ್ಹರಿಸಿ ನಿಮ್ಮ ನಾಮಜಪವು ತಪದೊಳಿರಿಸಿ ಪ್ರೇಮದಿಂದ ಸಲಹೊ ಹರಿಯೆ2 ಪದುಮನಾಭನೆ ಸದಮಲಾಂಗ ಒದಗುಬೇಗನೆ ಈ ವಿಧದಿ ಬೇಡ್ವೆ ಸುದಯವಂತನೆ ಸುದತಿ ಮಾಡಿದಂಥ ಪದದ ಕೃಪೆಯನಿತ್ತು ಎನ್ನ ಮುದದಿ ಸಲಹು ಸಿರಿಯರಾಮ 3
--------------
ರಾಮದಾಸರು
ಬೋಧ ಸದ್ಗುರು ಜಿತಮದನ ಪ ಬಾದರಾಯಣ ವೈದೇಹಿ ಚರಣಾಬ್ಜಾ ರಾಧಕ ನಮಿಪೆ ಸನ್ಮೋದವಿತ್ತು ಕಾಯೊ ಅ.ಪ. ಶ್ರೀ ಮಧ್ವ ಮತವಾರಿಧಿ ಸೋಮ | ದ್ವಿ ಜ ಸನ್ನುತ ಗುಣಧಾಮಾ ಕಾಮಿತಜನ ಕಲ್ಪಭೂಜ ವಿಬುಧ ಸು ಪ್ರೇಮ ಸಂಯಮಿಕುಲೋದ್ಧಾಮ ದಯಾಂಬುಧೇ ಗೋಮಿನೀವಲ್ಲಭನ ಪದಯುಗ ತಾಮರರಸಗಳನನುದಿನದಿ ಬಿಡ ದೇ ಮನಾಬ್ಜದಿ ಭಜಿಸುತಿಪ್ಪಮ ಹಾ ಮಹಿಮ ತುತಿಸಿಬಲ್ಲನೆ 1 ದೀನಜನರ ಬಂಧು ನಿನ್ನಾ | ಪಾದ ಕಾನೆರಗುವೆ ಸುಪ್ರಸನ್ನಾ ದಾನ ಮಾನಗಳಿಂದ ಜ್ಞಾನಿಜನರಿಗೆ ಮ ಹಾನಂದ ಬಡಿಸುತ ಸಾನುರಾಗದಿ ನಿತ್ಯಾ ಶ್ರೀ ನಿಕೇತನ ಪರಮ ಕಾರು ಣ್ಯ ನಿವಾಸ ಸ್ಥಾನನೆನಿಪ ಮ ಹಾನು ಭಾವ ಭಗವತ್ಪದಾಂಭೋ ಜಾನುಗರೊಳೆನ್ನೆಣಿಸಿ ಪಾಲಿಸು 2 ಸತ್ಯಪ್ರಿಯರ ಕರಕಮಲ | ಜಾತ ನಿತ್ಯ ನಿರ್ಜಿತ ಘೋರ ಶಮಲಾ ಚಿತ್ತಜಪಿತ ಜಗನ್ನಾಥ ವಿಠಲನ ಚಿತ್ತಾನುವರ್ತಿಗಳಾಗಿ ಸಂಚರಿಸುತಾ ಅತ್ಯಧಿಕ ಸಂತೋಷದಲಿ ಪ್ರತ್ಯರ್ಥಿಗಳಿಗುತ್ತರಿಸಿ ಮಿಗೆ ಪುರು ಷೋತ್ತಮನೆ ಪರನೆಂದು ಡಂಗುರ ವೆತ್ತಿ ಹೊಯ್ಸಿ ಕೃತಾರ್ಥನೆನಿಸಿದ 3
--------------
ಜಗನ್ನಾಥದಾಸರು
ಬೋಧರ ನೋಡಿರೈ ಸತ್ಯಬೋಧರ ಪಾಡಿರೈ ಪ ಚಂದ್ರಾ ಸದ್ಗುಣ ಸಾಂದ್ರಾ ಅ.ಪ. ಜವನೋಧರ್ಮ ಪ್ರಸ್ರವನೋ ಯತಿ ಪುಂಗವನೋ ರಾಮಾರ್ಚನ ಕೃತ ಪೂತ ಹಸ್ತ ಪಲ್ಲವನೋ ವಿದ್ವದ್ಧವನೋ ಕಾಮಿತೇಷ್ಟ ಪ್ರದ ಚಿಂತಾಮಣಿಗುಣಯುತನೋ ಜತಸನ್ನುತನೊ 1 ಪಚ್ಚದ್ಯತಿಯೋ ಸಜ್ಜನ ಕುನರೂಪ ಪ್ರೋನ್ನತಿಯೋ ಕವಿಜನ ಹರಿಸಮ್ಮತವೋ 2 ಹರಿಜನಧನವೋ ಅಭಯ ಸುಮನವೋ ಮದಮರ್ದನವೋ ದಾಸರ ವಶವೊ 3
--------------
ನರಸಿಂಹವಿಠಲರು