ಒಟ್ಟು 526 ಕಡೆಗಳಲ್ಲಿ , 86 ದಾಸರು , 470 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯತಿಗಳು ಶ್ರೀಜಯತೀರ್ಥರು ಕರುಣಿಸೊ ಜಯರಾಯಾ ಗುರುವರ್ಯ ಚರಣವೆ ಗತಿಯಯ್ಯ ಹೇ ಜಿಯಾ ಪ ರಘುನಾಥನ ಪುತ್ರ ಪವಿತ್ರ ರಾಘವನ ಪ್ರೀತಪ್ರಾತ್ರ ಚರಿತ್ರ ಮಘವನಾ ನೀ ನಘದೂರ ಶ್ರೀ ರಘುರಾಮನ ಕಿಂಕರನ ಅಮೋಘ ಸೇವಕನೊ 1 ಕುಕರ್ವಿಣಿಯ ತೀರಾ ಘೋರಕುವಾದಿಗಳ ಕು ಲಕುಠಾರ ಗಂಭೀರ ಸಕಲಶಾಸ್ತ್ರಸತ್ಸಾರ ಟೀಕಕರ ಕುಕವಿಶೃಗಾಲಕುಲಕಾಲಭಯಂಕರ 2 ಎರಗೋಳಾದ್ರಿಯೊಳು ಗುಹೆಯೊಳು ನಿರುತ ಪ್ರವಚನಗಳು ನಿತ್ಯದೊಳು ಮರುತಮತಾಂಬುಧಿಚಂದಿರ ಸುಂದರ ವರಸುಜ್ಞಾನಮಣಿಕಿರಣವ ತೋರಿದೆ 3 ಗುರು ಮಧ್ವಮುನಿ ತತ್ತ್ವಗ್ರಂಥದ ಕ್ಷೀರಶರಧಿಗೆ ಮಂಥಾ ವುನ್ನಂಥಾ ಮರುತನನುಗ್ರಹ ಪ್ರಗ್ರಹದಿಂದಲಿ ವರಮಥನದಿ ಇತ್ತೆ ಅಮೋಘವಸ್ತುಗಳೆಲ್ಲಾ4 ಉತ್ತಮ ಗ್ರಂಥವನಧೀ ಮಥನದಿ ಉತ್ತಮ ವಸ್ತುಗಳನಿತ್ತೆಯೊ ತತ್ತ್ವಪ್ರಕಾಶಿಕಾ ಮಹಾಲಕುಮಿಯು ಚಂದಿರನೇ ಪ್ರಮೇಯದೀಪಿಕಾ ಸುಧೆಯೇ ನ್ಯಾಯಸುಧಾಗ್ರಂಥ ಶ್ರೀ ಕೌಸ್ತುಭದಂತಿಹ ನ್ಯಾಯದೀಪಿಕಾ 5 ದುರುಳ ಮಾಯಾಖಂಡ ನಾಯುಧವೂ ಸರ್ವಜೀಯನೆ ಐರಾವತದಂತೆ ಋ ಗ್ಭಾಷ್ಯಟೀಕಾ ನ್ಯಾಯವಿವರಣವು ಉಚ್ಛೈಶ್ರವಸ್ಸು 6 ಕರ್ಮನಿರ್ಣಯ ಟೀಕಾ ವಜ್ರಾಯುಧ ಆ ಮಹಾಪಾರಿಜಾತ ವಿಖ್ಯಾತಾ ಶ್ರೀಮದ್ವಿಷ್ಣು ತತ್ತ್ವ ನಿರ್ಣಯ ಟೀಕೆಯು ಕಲ್ಪವು ಉಪನಿಷತ್ ಭಾಷ್ಯ ಟೀಕೆಯು 7 ಈಶಾವಾಸ್ಯ ಭಾಷ್ಯ ಟೀಕಾ ಸಂತಾನವೆಂಬೋ ಮಹಾವೃಕ್ಷಾ ಪ್ರ ಬಿಸಜ ಮಂದಾರ ಪ್ರಮಾಣ ಪದ್ಧÀ್ದತಿ ಹರಿಚಂದನಕೆ ಸಮನಾದ ವಾದಾವಳಿ 8 ಪಾಕಶಾಸನಾಂಶಾ ಕರುಣಿಸು ಶ್ರೀಕರಪದಪಾಂಸ ಯತೀಶಾ ನಾರ ಪತಿಯೆ ಶ್ರೀಕಾಗಿನೀ ತೀರದಿ ಏಕಾಂತದಿ ನಿಂದೆ ಲೋಕ ವಂದಿತ ದೇವಾ 9 ಮಂದಭಾಗ್ಯಜನರಾ ಪರಮಾ ನಂದದಿಂದಲಿ ನೋಡಿ ದಯಮಾಡಿ ತಂದೆಯಂದದಿ ಕಾಯ್ದಾನಂದವೀವೆ ನಿತ್ಯಾ10 ಪರಮಪಾತಕಿ ನಾನು ಗುರುವೆ ತವ ಪಾ ದ ರಕ್ಷಕವಚವ ತೊಡಿಸೊ ಉಳಿಸೋ ನಿರುತ ಶರಣರ ಕಾಯ್ವ ಶ್ರೀ ವೆಂಕಟೇಶನ ಪ್ರೀಯಾಉರಗಾದ್ರಿವಾಸವಿಠಲನ ದಾಸಾ 11
--------------
ಉರಗಾದ್ರಿವಾಸವಿಠಲದಾಸರು
ಯಂತ್ರೋದ್ಧಾರಕ ರಾಯರ ಸ್ಮರಣೆಯ ಮಾಡಿ ಅಂತರಾತ್ಮನ ದಾಸರ ಪ ಸಂತತ ಮನದಿ ನಿಶ್ಚಿಂತೆಯೊಳ್ ಸ್ಮರಿಸಲು ಸಂತಾಪಗಳ ಕಳೆದು ಚಿಂತಿತಾರ್ಥವನೀವ ಅ.ಪ ಶರಧಿಯ ನೆರೆದಾಟಿದ ಕಾಲುವೆಯಂತೆ ನಲಿದು ಲಂಕೆಯ ಸಾರಿದ ಬಲಶಾಲಿ ಲಂಕಿಣಿಯು ಪುರವ ಕಾಯುವ ಶ್ರಮ ಹರಿಸಿ ಸೂಕ್ಷ್ಮದ ರೂಪ ಧರಿಸಿ ಪುರವ ಪೊಕ್ಕು ಪರಿಪರಿ ಕೋಟೆಗಳಿರವನೆ ಕಾಣುತ ಕರಿ ಹಯ ರಥ ಶಾಲೆಗಳ ಪರಿಕಿಸುತ ಖಳನರಮನೆ ಪೊಕ್ಕರು ಫಲವಿಲ್ಲದೆ ಕಡೆಗೆ ಅಶೋಕ ವನದೊಳು ಚರಿಸಿದ1 ವನದ ಮಧ್ಯದೊಳಿರಲು ರಕ್ಕಸ ಬಹು ಘನತೆಯಿಂದಲಿ ಬರಲು ಬಣಗು ದೈತ್ಯನ ತೃಣಕೆಣೆಮಾಡಿ ನುಡಿಯಲು ಪವನ ತನಯ ನೋಡಿ ಮನದಿ ಸ್ತೋತ್ರವ ಮಾಡಿ ಮನದೊಳು ಶ್ರೀ ರಘುವರನನು ಧ್ಯಾನಿಸಿ ಘನ ಮುದ್ರಿಕೆ ಮುಂದಿಡಲಾ ಜಾನಕಿ ನಯನಂಗಳ ಕಂಬನಿಗರೆಯುತ ಮುಂದಿಹ ಹನುಮನೊಳಿಂತೆನೆ ಲಾಲಿಸಿದ 2 ಯಾವ ರಾಯರ ದೂತನೋ ಪೇಳಯ್ಯ ಬಲು ಸಾವಧಾನದಿ ಮಾತನು ಶ್ರೀರಾಮಚಂದ್ರ ನಿನ್ನ ಸೇರಿ ಮಿತ್ರತ್ವಮಾಡೆ ಕಾರಣವೇನುಂಟು ಸಾವಧಾನದಿ ಪೇಳು ಯಾರನುಮತಿಯಿಂದೀ ಪುರ ಪೊಕ್ಕೆಯೊ ಯಾರಿಗಾಗಿ ಈ ವಾನರ ರೂಪವು ಪೋರನಂತೆ ಕಾಣುವಿ ನಿನ್ನ ವಚನವು ಬಾರದು ಮನಕೆಂದೆನಲು ಮಾತಾಡಿದ 3 ಜನಕ ಜಾತೆಯೆ ಲಾಲಿಸು ದೈತ್ಯರ ಸದೆ ಬಡಿಯುವನೆಂದು ಭಾವಿಸು ಇನಕುಲ ತಿಲಕನ ಚರಣಸೇವೆಯು ಮಾಡೆ ಜಲಜಾಕ್ಷನಾಜ್ಞದಿಂದ ಭುವಿಯೊಳು ವಾನರ- ಕುಲದೊಳಗವತರಿಸುವ ಶತ ಸಂಖ್ಯೆಯೊಳಿರುತಿರೆ ಗಿರಿವನಚರಿಸುವ ಸಮಯದಿ ಜಲಜಾಕ್ಷಿಯನರಸುತ ರಾಘವಬರೆ ಚರಣಾಂಬುಜಗಳಿಗೆರಗಿದೆವೆಂದೆನಲು 4 ಜಲಜಾಕ್ಷಿ ನಿಮ್ಮ ಕಾಣದೆ ಮನದೊಳಗೊಂದು ಘನವಾದ ಚಿಂತೆ ತಾಳಿದೆ ಜನಕ ಜಾತೆಯ ಪಾದಾಂಬುಜವ ಕಾಣದೆ ಮರಳಿ ಪುರವ ಸಾರುವದೆಂತು ರವಿಸುತನಾಜ್ಞೆ ಮೀರ- ಲರಿಯದೆ ಈ ಉಪವನದೊಳಗರಸುವ ಸಮಯದಿ ಶ್ರೀವರನಿಯಮಿಸಿ ಪೇಳಿದ ಪರಿಯನು ತಿಳಿಯುತ ಪರಮಾನಂದದಿ ರಘುವರನ್ವಾರ್ತೆಯ ಲಗುಬಗೆ ಪೇಳಿದ 5 ಕುರುಹು ಕೊಡಮ್ಮ ಜಾನಕಿ ಮನಸಿನ ಚಿಂತೆ ಬಿಡುಬೇಗ ಭದ್ರದಾಯಕಿ ಕ್ಷಣದೊಳ್ ಶ್ರೀರಾಮನೊಳು ಇನಿತೆಲ್ಲವನು ಪೇಳಿ ಕ್ಷಣದಿ ರಕ್ಕಸರನೆಲ್ಲ ನೆಲಸಮ ಮಾಳ್ಪೆನೆಂಬೀ ಅಣುಗನಿಗಪ್ಪಣೆಯನು ಪಾಲಿಸೆನಲು ಅನುಮತಿನೀಡಿದ ಅವನಿಜೆಗೊಂದಿಸಿ ಕ್ಷಣದೊಳು ವನಭಂಗವ ಮಾಡಿದ ನುಡಿ ಕೇ- ಳಿದ ರಾವಣನ ಪುರವ ಅನಲನಿಗಾಹುತಿ ಇತ್ತ 6 ಜಯ ಜಯ ಜಯ ಹನುಮಂತ ಜಯ ಜಯ ಬಲವಂತ ಜಯ ಶ್ರೀರಾಮರ ಪ್ರಿಯದೂತ ಜಯ ಜಯ ಜಯವೆಂದು ಸನಕಾದಿಗಳು ಪೊಗಳೆ ಅನಲ ಸಖನ ಸೂನುವನು ಸ್ತೋತ್ರದಿಂದ ಪಾಡೆ ಕಮಲಜಾದಿ ಸುರಗಣ ತಲೆದೂಗೆ ಶ್ರೀ ಕಮಲನಾಭ ವಿಠ್ಠಲನನು ಪಾಡುತ ಅಮಿತ ಪರಾಕ್ರಮವಂತನ ಪೊಗಳುತ ನಮಿಸಿ ಶ್ರೀರಾಮರ ಗುಣಗಳ ಪೊಗಳುವ 7
--------------
ನಿಡಗುರುಕಿ ಜೀವೂಬಾಯಿ
ಯಾಕೆ ಸುಮ್ಮನೆ ಪೇರಿ ಹೊಡೆಯುವಿ ಕಾಕು ದುರ್ಭವ ಚಕ್ರದಿ ಪ ಲೋಕದಿರುವು ನಿನಗೇನು ಸ್ಥಿರವೆಲೋ ಕಾಕುಜೀವ ವಿಚಾರ ಮಾಡದೆ ಅ.ಪ ಕಾಕುಸಿರಿಗೆ ಕೈಹಾಕಿ ಬಲು ಬಲು ಶೋಕದಬ್ಧಿಲಿ ಮುಳುಗಿದ್ಯೊ ನೂಕಿ ಯಮನರೊದೆದು ಎಳೆವಾಗ ಲೋಕಸಂಪದ ನಿನ್ನ್ಹಿಂದೆ ಬರುವುದೆ 1 ನಾನು ಯಾರೆಂದೆಂಬ ಖೂನ ಸು ಜ್ಞಾನ ವಿಡಿದು ತಿಳಿಯದೆ ಶ್ವಾನಸೂಕನಂದದಿ ಮಹ ಹೀನ ಬವಣೆಯೊಳ್ಬೀಳುತ 2 ಗೋತಗೋಜಲಕುಣಿ ಈ ಸಂಸಾರ ರೋತಿ ಹೊಲಸಿಕ್ಕಿ ನಾರುವ ನೀತಿಗೆಟ್ಟದರೊಳಗೆ ಬಿದ್ದೆಮ ಭೀತಿಯಿಂ ಬಳಲುವುದೇನೆಲೊ 3 ಪೂರ್ವಪುಣ್ಯದಿಂ ಸಿಕ್ಕ ಈ ಮಹ ಪರ್ವಕಾಲ ಸಮಯರಿಯದೆ ದುರ್ವಿಕಾರದಿಂ ಸರ್ವ ಕಳೆಯಲು ದೊರೆವುದೇ ಪುನ:ಬಯಸಲು 4 ತೋರಿ ಇಂದ್ರಜಾಲದಂದದಿ ಹಾರಿಹೋಗುವ ಮಾಯ ನೆಚ್ಚಿ ಸಾರತರ ಮೋಕ್ಷವನು ಕರುಣಿಪ ಶ್ರೀರಾಮನ ನಂಬದೆ 5
--------------
ರಾಮದಾಸರು
ಯಾಕೋ ಕೋಪ ಕೃಷ್ಣಾ ನಿನಗೆ ಎನ್ನ ಮೇಲೆ ಎಲ್ಲ ಸಾಕಬೇಕು ಎಂಬ ನಿಜವಾ ಪ ಲೋಕನಾಯಕನಾದ ಲಕ್ಷ್ಮೀಲೋಲಗೋವಿಂದ ಅನೇಕ ಅವತಾರಗಳೆತ್ತಿದ ಹರಿಯೆ ಮುಕುಂದಾ -------ಜನರೊಳಗಿನ್ನು ಹೀನನ ಮಾಡಿ ಬಿಡಿಸಿ ------------------------------ 1 ತಂದೆತಾಯಿ ಬಂಧು ಬಳಗ ದೈವ ನೀನೆಂದು ಇನ್ನು ಎಂದೆಂದು ಭಕ್ತರ ಸಲಹೊ ಇಂದು ನಿನ್ನ ದ್ವಂದ್ವ ಚರಣಾನಂದದಿಂದ ಹೊಂದಿದವನು ಕಂದನೆಂದು--------- ಅಂದದಿಂದ ಪೊರೆಯದಿರುವದು ಹೇಗೊ 2 ಅಷ್ಟು ಜಗಕಾಧ್ಯಕ್ಷನಾದ ಆದಿಮೂರುತಿ ನಿಷ್ಟ ನೀನು ಶಿಷ್ಟ ಜನರ ಹೃದಯದಿರುತಿ ಇಷ್ಟು ಕಷ್ಟ ಬಡುತ ನಾನು ಇಷ್ಟದಿಂದ ಮೊರೆಯ ಹೊಕ್ಕರೆಸೃಷ್ಟಿಗೊಡೆಯನಾದ 'ಹೊನ್ನವಿಠ್ಠಲ’ ನಿನ್ನ ಇಷ್ಟ ಇಲ್ಲದೆಲ್ಲಾ 3
--------------
ಹೆನ್ನೆರಂಗದಾಸರು
ರಕ್ಷಿಸೋ ಪವಮಾನ ಸದ್ಗುರುವರಾ ಪ ಜೀವರ ಬಂಧಗಳಿಂದ ಎಲ್ಲ ಪಾವನ ಮಾಳ್ಪದರಿಂದ ದೇವ ಪಾವನಮೂರ್ತಿಯು ನಿನ್ನ ಮುಖದಿ ಜಗ ತ್ಪಾವನ ಮಾಳ್ಪುದರಿಂದ ಪವನನೆಂಬೋರೆ ನಿನ್ನ ಅ.ಪ ಜ್ಞಾನೈಶ್ವರ್ಯ ವೈರಾಗ್ಯ ನಿನಗೆ ನಿನ್ನ ಸ್ವರೂಪ ಸ್ವಭಾವಕೆ ಯೋಗ್ಯ ನಿಜ ಘನ್ನ ಮಹಿಮ ನಿನ್ನ ಭಾಗ್ಯ | ಆಹಾ ತನು ಚತುಷ್ಟಯದೊಳಗನವರತ ವ್ಯಾಪ್ತನೋ ಇನ್ನೂ ಮುನ್ನೂ ಜಗತ್ಕಾರ್ಯ ನಿನ್ನದೋ ದೇವಾ1 ಬೃಹತಿನಾಮಕ ಕರುಣಾಳು ನಿನ್ನ ದೇಹದಿ ಭಗವದ್ರೂಪಗಳೂ ನಿತ್ಯನೋಡುತ ಅನೇಕಂಗಳು | ಆಹಾ ಬೃಹತಿ ಛಂದಸ್ಸು ಅನ್ನವು ಶ್ರೀಹರಿಗೆ ಛಂದಸ್ಸಿನಿಂದಾಚ್ಛಾದಿತ ತ್ವದ್ಗಾತ್ರನೊ2 ಪ್ರಾಣಾಪಾನ ವ್ಯಾನೋದಾನ ಸಮಾನಾದಿ ಪಂಚಪ್ರಾಣ ಜೀವ ಶ್ರೇಣಿಗಳೊಳಗೆ ನೀ ಪ್ರವೀಣ ಜಗತ್ರಾಣ ನೀನಹುದೋ ಸದ್ಗುಣ |ಆಹಾ ಪ್ರಾಣಾಪಾನದಿಂದ ದೇಹದ ಸ್ಥಿತಿ ಕಾರ್ಯಕ್ಷಣ ತಪ್ಪಲು ಕುಣಪನೆಂದಪರೋ ಈ ದೇಹಕೆ3 ಇಪ್ಪತ್ತೊಂದು ಸಾವಿರದಾರುನೂರು ಶ್ವಾಸ ತಪ್ಪದೆ ಜೀವರು ಮಾಡಿ ಅಹರ್ನಿಶಿ ದೇಹವ ಧರಿಪರೋ ನಿನ್ನ ಒಪ್ಪಿಗೆಯಂತೆ ಸಾಧಿಪರೋ | ಹಾ ಅಹೋರಾತ್ರಿ ಶ್ವಾಸನಿಯಾಮಕ ಜೀವರ್ಗೆ ಅಯುಮಾನವ ನೀವ ಮಾತರಿಶ್ವದೇವಾ 4 ನಿನ್ನಂತರದಿ ಇಟ್ಟು ಅವಸ್ಥಾಭೋಗ್ಯವನಿತ್ತು ತ್ವರದಿ | ಆಹಾ ಪಾವನ ಮೂರ್ತಿಗೆ ಅರ್ಪಿಸುತ್ತ ಶ್ರೀಪತಿ ಕರವ ಮುಗಿದು ನಿಂದಿಹೆ 5 ಪರಿಶುದ್ದ ಸತ್ವಾತ್ಮಕವಾಗಿ ಇನ್ನು ನಿರುತ ಪೂರ್ಣಪ್ರಜ್ಞನಾಗೀ ಜೀವ ಸ ರ್ವರೊಳು ಶುಚಿತಮನಾಗಿ ಇರ್ಪ ಮಾರುತ ನಿನ್ನೊಳು ಅನುವಾಗಿ |ಆಹಾ ಹರಿಯು ನಿನ್ನ ಶುಚಿ ತನುವಿನೊಳಿದ್ದು ಶುಚಿಹೃತ್ ಎಂದು ತಾ ನಿಂದು ನಲಿವನಯ್ಯ6 ಅಂಡಾವರಣದ ಗುಣತ್ರಯ ಕಂಡಿಹೆ ವ್ಯಾಪ್ತಸದ್ಗುಣ ಉ ದ್ದಂಡ ಮಹದ್ರೂಪನೆ ಮಹಘನ್ನ ಇನ್ನು ಮೃಡನಾಪೇಕ್ಷ ಶತಗುಣ | ಆಹಾ ತನುರೂಪದೊಳೆಲ್ಲ ಅಣುರೂಪವಾಗಿಹೆ ತೃಣಮೊದಲು ಸರ್ವಜೀವರೊಳು ವ್ಯಾಪ್ತನೊ7 ಅಂದು ತ್ರಿಕೋಟಿರೂಪದಲಿ ನಿಂತು ನಿಂದ ತ್ರಿವಿಕ್ರಮಾವತಾರದಲೀ ಸೇವೇ ಆ ನಂದದಿ ಸಲಿಸುತ್ತಲಲ್ಲಿ ಇನ್ನು ನಿಂದು ಅಂ ಡದ ಬಹಿರ್ಭಾಗದಲಿ |ಆಹಾ ಅಂಡ ಖರ್ಪರ ಉದ್ದಂಡ ಮೂರುತಿಯೊ 8 ವಾಯುಕೂರ್ಮನಾಗಿ ನಿಂದೇ ಜಗದಾದ್ಯಭಾರವು ಎಲ್ಲ ನಿನ್ನಿಂದೇ ಎಂದು ಕಾಯಜಪಿತ ತರುವ ಮುಂದೇ ನಿನ್ನ ಗಾಯತ್ರೀಪತಿಯ ಪಟ್ಟಕೆಂದೇ | ಆಹಾ ಶ್ರೀಯರಸಾ ಶ್ರೀ ವೇಂಕಟೇಶಾತ್ಮಕ ಉರಗಾದ್ರಿವಾಸವಿಠಲನ ನಿಜದಾಸ 9
--------------
ಉರಗಾದ್ರಿವಾಸವಿಠಲದಾಸರು
ರಂಗ ಬಾರ ಬಾಲೆ ಕುರಂಗನಯನೆ ಕೇಳೆ ಪ ಹೀಂಗಿರಲಾರೆ ಶ್ರೀಹರಿಯ ಸಂಗ ಬಿಟ್ಟಮೇಲೆಈ ತಂಗಾಳಿಯ ದಾಳೆ ಬೆಳದಿಂಗಳಿÀನ ಢಾಳೆಗಿಳಿ ಭೃಂಗನ ಸ್ವರಗಳೆ ದೇವಾಂಗನಾ ಗಾಯನಗಳೆಅನಂಗಗಿದು ಪೇಳೆಅ.ಪ. ಪರ ಹೆಣ್ಣುಗಳನೆ ಕೂಡಿಬಲು ಬಣ್ಣಗೆಟ್ಟೋಡ್ಯಾಡಿ ಕಲಿಯನ್ನು ಸಂಹಾರಮಾಡಿ 1 ಯುಗಳಸ್ತನಗಳ ಮೇಲೆ ಒಳ್ಳೆ ಮುಗುಳು ಮಲ್ಲಿಗೆ ಮಾಲೆಬಗೆ ಬಗೆ ಅಲಂಕಾರದಿ ಸೊಗಸಿಲಿದ್ದ ವೇಳೆಖಗವಾಹನನು ಬಂದ ಎನ್ನ ಬಿಗಿದಪ್ಪುವೆನೆಂದನಗುತ ಮಾತನಾಡಳಿವಳು ಸುಗುಣೆಯಲ್ಲವೆಂದನಿಗಮ ಚೋರನ ಕೊಂದ ನಗವ ಬೆನ್ನಿಲಿ ತಂದಜಗವ ನೆಗಹುವೆನೆಂದ ಜಿಗಿದು ಕಂಭದಿ ಬಂದಮಗುವಿನಂದದಿ ನಿಂದ ಯಾತ್ರೆಗಳ ಮಾಡುವೆನೆಂದಅನ್ನಗಳ ಒಲ್ಲೆನೆಂದ ಬೆಣ್ಣೆಗಳ ಕದ್ದುತಿಂದನಗುತ ಬತ್ತಲೆನಿಂದ ತಾ ಸಿಗದೆ ಓಡುವೆನೆಂದ 2 ನಾರಿ ಈಗ ನಾನು ಮುರಾರಿಯ ಕಂಡೆನುವಾರಿಜಾಕ್ಷ ಬಾಯೆನ್ನಲು ಶಿರವ ಬಾಗಿದೆನೆಮಾರನಯ್ಯನು ಜಾಣೆ ಎನ್ನ ಮೋರೆಯ ನೋಡಿದನೆಜಾರನಾರಿ ಇವಳೆಂದು ಸೇರದೆ ಪೋದನೆನೀರೊಳಡಗಿದನೆ ಮೋರೆ ಮುಚ್ಚಿದನೆಕೋರೆ ತೋರಿದನೆ ಆ ಘೋರ ರೂಪಾದನೆಬ್ರಹ್ಮ-ಚಾರಿಯೆಂತೆಂದನೆ ಕ್ಷತ್ರಿಯರ ಸವರಿದನೆವಾರಿಧಿಯ ದಾಟಿದನೆ ಬಹುಜಾರನೆನಿಸಿದನೆನಾರೇರ ವ್ರತವಳಿದನೆ ಕುದುರೆ ಏರಿದ ಶ್ರೀಕೃಷ್ಣನೆ 3
--------------
ವ್ಯಾಸರಾಯರು
ರಂಗಯ್ಯ ನಿನಗ್ಯಾತಕೋ | ಹೇಳುವದು ಥರವೆ ಅಲ್ಲಾ ಪೂತನಿ ಮೊಲೆ ಉಂಡ ಪುಂಡಗೋವಿಂದ ಪ ನೆರೆಹೊರೆ ಮನಿಗಳಿಗ್ಹೋಗಿ | ಅವರ ನೆಲವಿಗಳಿಗೆ ನೀನು ಹುದಗಿ | ಮೇಲಿರುವಂಥ ಪಾಲು ಬೆಣ್ಣೆಗಾಗಿ | ಎರಡು ಕರದಿತ್ವರದಿ ನೀನು ಬಾಗಿ | ಇಂಥ ಪರಿಚೇಷ್ಟಿಗಳಲ್ಲಿ ಬಡವರಾಲಯ ಪೊಕ್ಕು | ದುರುಳತನವ ಮಾಡಿ ದೂರುತರುವರೇನೊ 1 ಮಂದಗಮನಿಯಳ ಕರವನ್ನು | ಹಿಡಿದು ಮಾನಭಂಗವ ಮಾಡುವದೇನು | ಇದು ಚಂದವೆ ಬುದ್ಧಿ ನಿಮಗಿನ್ನು | ಇಂಥಾ ಚಾಳಕತನ ಬಿಡಿಸುವೆನು | ಶ್ರೀ ಮಂದರೋದ್ಹರ ಮಹಾಮಹಿಮ ಪ್ರಕಾಶನೆ ನಂದದಿ----------------- 2 ಧರೆಯೊಳ್ಹೆನ್ನೆಯ ಪುರವಾಸ | ಧೊರಿ ಹೆನ್ನೆ ವಿಠಲನ ಈಶ | ಭಕ್ತರನ್ನ ಪೊರೆವ ಜಗದೀಶ | ತಾರಕನಾದ ಸರ್ವೇಶ | ಇನ್ನು ಪರಿಯಾದದಲ್ಲಿ ಮೊರೆಯದ ಕಾರಣ ನೀನಗೀಗ ಚನ್ನಾಗಿ ಬುದ್ಧಿಯಪೇಳ್ವೆನು3
--------------
ಹೆನ್ನೆರಂಗದಾಸರು
ರಂಗವಾಲಿಯನಿಡು ತಂಗಿ ನಿನ್ನಂತರಂಗ ದಂಗಳ ಸಾರಿಸಿ ರಂಗಗರ್ಪಿತವೆಂದು ಪ. ಮಂಗಳಮಹಿಮ ಶ್ರೀ ಕೃಷ್ಣ ತನ್ವಲಿವ ಎಂದಂಗನೆ ಸುಭದ್ರೆಗೆ ರಂಗಹೇಳಿದ ಅ.ಪ. ಅರಿಷಡ್ವರ್ಗಹಂಕಾರ ಮದಗಳೆಂಬ ಮಮಕಾರವ ಬಿಟ್ಟು ಮುನ್ನ ತೊಡರಬಿಡಿಸಿ ನಿನ್ನ ಕಡೆಹಾಯಿಸುವ ಪಥ ದೊಡೆಯ ಶ್ರೀಧರಪಾದವದರೊಳು ನಿಲುವಂತೆ 1 ಶ್ವೇತ ಕಲ್ಲನೆ ಕುಟ್ಟಿ ಅಚ್ಚುತನಾಮ ಪವಳ ಬೆರಸಿ ಸ್ವಚ್ಛ ಮುತ್ತುಗಳೆಂಬಂಥ ಶೀಲತೆಯಿಂದ ಅಚ್ಚ ಶ್ರೀ ತುಳಸಿಯ ಕಟ್ಟೆಯ ಬೆಳಗುವಂಥ2 ಹರಿನಾಮದರಿಶಿನವದರ ಮಧ್ಯದಿ ತುಂಬಿ ಅರಿಗಳ ಕಡಿವಂಥ ಕುಂಕುಮವ ಪರಮಾನಂದದಿನೆಲ್ಲಿ ಕರಿಯ ಬಣ್ಣ ಹರುಷದಗಸೆ ಹಸುರ ಬೆರಸಿ ಶ್ರೀ ಶ್ರೀನಿವಾಸಗೆ 3
--------------
ಸರಸ್ವತಿ ಬಾಯಿ
ರಜತ ಪೀಠದ ಯಾತ್ರೆ ರಜೋತಮ ಗುಣವುಳ್ಳ | ಪ್ರಜರಿಗೆ ದೊರಕುವದೆ | ತ್ರಿಜಗದೊಳಗೆ ಮುಂದೆ | ಅಜನಾಗಿ ಬಪ್ಪಗೆ | ಭಜನೆ ಮಾಡುವಂಥ ಸುಜನರಿಗಲ್ಲದೆ ಪ ಮಂದಾಕಿನಿ ಮಿಕ್ಕಾದ ನದಿಗಳಲ್ಲಿಗೆ ಪೋಗೆ | ಮಿಂದು ನಾನಾ ಕ್ಷೇತ್ರವ ಬಂದೂ ಬಿಡದೆ ತಿರುಗಿ ವೇದ ಶಾಸ್ತ್ರಗಳು | ಚಂದದಿ ಓದಿಕೊಂಡು | ಕುಂದದೆ ವ್ರತ ಯಾಗ ಯೋಗ ಮಾಡಲೇನು | ಬಿಂದು ಮಾತ್ರ ಫಲವಿಲ್ಲ | ಸುರರು ಒಂದಾಗಿ ಒಂದಿನ | ಅಂದು ಪೀಯೂಷವ ಕರೆಯೆ ಉಂಡವರಾರು 1 ಮಾನವ | ನಾಡೊಳು ಉಡುಪಿ ಯಾತ್ರೆ ಮಾಡಿದರವಗೇನು ಲೇಶ ಸತ್ಕರ್ಮವು | ಕೂಡದು ಕೂಡದಯ್ಯಾ | ಬಿಡಾಲನಂದದಿ ತಿರುಗಿದಂತಾಗುವದು | ಕೇಡಿಗೆ ಗುರಿಯಾಗುವಾ | ಜೋಡು ಇಲ್ಲಿಗೆ ಬಂದು ತಿರುಗಿ ಪೋದರೆಯೇನು | ಆಡಲೇನದಕೆ ತಿಲಾಂಶ ಸುಖವುಂಟೆ 2 ತಮೋ ಯೋಗ್ಯ ಉಡುಪಿನ ಯಾತ್ರೆ ಮಾಡಲು | ಅಮಿತ ಬಲವಂತನಾಗಿ ಪುಟ್ಟಿ ಆಕ್ರಮಿಸಿ ಪುಣ್ಯವನೆ ಕೆಡಿಸಿ ತಮಕೆ ಸಾಧನವಾದ ಸುಖಬಟ್ಟು ಬಹುಕಾಲ | ರಮಣಿ ಮಕ್ಕಳು ಸಹಿತದಿ | ನಿತ್ಯ | ತಮಸಿನೊಳಗೆ ವಾಸಫಲ ವ್ಯರ್ಥವಾಗದು 3 ರಾಜಸ ಗುಣದಲ್ಲಿ ಈ ಯಾತ್ರೆ ಮಾಡಲು | ಭೂಷಣವನೆ ಯಿಟ್ಟು | ವಾಜಿ ಗಜವಾಗಿ ಸೌಖ್ಯ ಈ ಜಗದೊಳು ಒಟ್ಟು ಪೋಗೋದಲ್ಲದೆ ವಿ | ರಾಜಿಸುವದು ಬಲ್ಲದೇ | ರಾಜಮಂದಿರಕೆ ನವರತ್ನ ತೆತ್ತಿಸಿದಂತೆ | ಈ ಜನದ ಸುಖದ ಫಲ ವ್ಯರ್ಥವಾಗುವದು4 ಮುಕ್ತಿಯೋಗ್ಯನು ಬಂದು ಯಾತ್ರೆಯ ಮಾಡಲು | ಮುಕ್ತಿ ಉತ್ತಮ ಕುಲದಲ್ಲಿ | ವ್ಯಕ್ತನಾಗೀ | ದಿವ್ಯ ಮನದಲ್ಲಿ ವಿರುಕುತಿ | ಭಕ್ತಿಜ್ಞಾನದಲಿ ಬಾಳಿ | ಶಕ್ತನೆಂದೆನೆ ಸತತ ಶ್ರೀಮದಾರ್ಯರ | ಭಕ್ತಿಲಿ ಲೋಲಾಡುತ | ಭಕ್ತವತ್ಸಲ ವಿಜಯವಿಠ್ಠಲ ಕೃಷ್ಣಸಾರ | ಭೋಕ್ತನಲ್ಲಿಪ್ಪನು ಫಲ ವ್ಯರ್ಥವಾಗದು 5
--------------
ವಿಜಯದಾಸ
ರತುನ ದೊರಕಿತಲ್ಲ | ಎನಗೆ ದಿವ್ಯ ರತುನ ದೊರಕಿತಲ್ಲ ಪ ರತುನ ದೊರಕಿತು ಎನ್ನ ಜನುಮ ಪ ವಿತರವಾಯಿತು ಈ ದಿನದಿ ನಾ ಯತನ ಗೈಯುತ ಬರುತಿರಲು ಪ್ರ ಯತನವಿಲ್ಲದೆ ವಿಜಯರಾಯರೆಂಬೊ ಅ.ಪ. ಪಥದಿ ನಾ ಬರುತಿರಲು ಥಳಥಳವೆಂದು ಅತಿ ಕಾಂತಿ ಝಳಪಿಸಲು ಬೆರಗಾಗುತ್ತ ಅತಿ ಚೋದ್ಯವ ಕಾಣಲು ಸೇವಿಸುತಿರೆ ಸತತ ಕರಪಿಡಿದಾದರಿಸಿ ಮನೋ ರಥವ ಪೂರೈಸುತಲಿ ದಿವ್ಯ | ಸ ನ್ಮತಿಯ ಪಾಲಿಸಿ ಮೋಕ್ಷ ಸುಪಥವ ಅತಿಶಯದಿ ತೋರುತ್ತ ಪೊರೆದ 1 ಪುತ್ಥಳಿ ಕಂಬಿಯಲ್ಲಿ ಸುಕೃತ ಮಾಲಾ ನಾನಾವಿಧ ಹವಳದಲಿ ಸೇರಿಸುತಲಿ ಪ್ರಾಣ ಪದಕವೆಂಬ ಮಾಲೆಯನು ಅನು ಮಾನವಿಲ್ಲದೆ ಕೊರಳಿಗ್ಹಾಕುತ ಗಾನದಿಂ ಕುಣಿಯುತ್ತ ಪಾಡುತ್ತ ದೀನ ಜನರುದ್ಧಾರ ಗೈಯುವ 2 ಶೋಧಿಸಿ ಗ್ರಂಥಗಳ - ಸುಳಾದಿಯ ಮೋದದಿಂದಲಿ ಬಹಳ ಕವಿತೆ ಮಾಡಿ ಸಾಧುಜನಕೆ ಸಕಾಲ ಆನಂದ ವಿತ್ತು ವಾದಿಜನರನು ಗೆದ್ದು ಬೋಧಿಸಿ ಮಾಧವ ಜಗನ್ನಾಥ ವಿಠಲನ ಪಾದ ಕಮಲಕೆ ಮಧು ಪನಂದದಿ ಸಾದರದಿ ತೋರುತ್ತ ಮೆರೆಯುವ 3
--------------
ಜಗನ್ನಾಥದಾಸರು
ರಾಘವದೇವ ಬಿಡಬೇಡ ಕೈಬಿಡಬೇಡ ಪ ಆಗಮಾರ್ಚಿತ ಪಾದಪದ್ಮಪಿಡಿದೆ ಬಿಡಬೇಡ ಕೈಬಿಡಬೇಡ ಅ.ಪ ಸೀತಾಕಾಂತನೆ ನಿನ್ನ ಭ್ರಾತಲಕ್ಷ್ಮಣನಂತೆ ಪ್ರೀತಿಸುತೆನ್ನ ಸನಾಥನೆನಿಸು 1 ನಂಬಿಬಂದ ವಿಭೀಷಣನನು ಬಲು ಸಂಭ್ರಮದೊಳು ಲಂಕಾರಾಜನ ಗೈದ2 ಹನುಮನಂದದಿ ಸೇವೆಮಾಡಿ ಮೆಚ್ಚಿಸಲಾರೆ ಕನಿಕರದೆನ್ನೊಳು ಘನಮನ ಮಾಡು 3 ದುಷ್ಟಜನಕೆ ಭಯ ಶಿಷ್ಟಜನಕೆ ಜಯ ಕೊಟ್ಟು ಭಕ್ತರಕಾವ ದಿಟ್ಟಹೆಜ್ಜಾಜೀಶ 4
--------------
ಶಾಮಶರ್ಮರು
ರಾಘವೇಂದ್ರರ ಸ್ತೋತ್ರ ಬಂದರಾ ರಾಘವೇಂದ್ರರಾಯರು ಮಂತ್ರ ಮಂದಿರ ವೆಂಬೀ ಸ್ಥಳಕೆ ವಿಭವದಿ ಪ ಇಂದು ಭಜಕ ದ್ವಿಜ ವೃಂದಕೆ ಪರಮಾ ನಂದ ಗರಿಯಲು ಶ್ಯಂದನವೇರಿ ಅ.ಪ ಶ್ಯಂದನವೇರಿ ಧಣಂ ಧಣ ವಾದ್ಯದಲಿ ಪೌರಜನ ಸಂದಣಿಸಿತು ಆನಂದದಿ ನೋಡುತಲಿ ಪ್ರಾರ್ಥಿಪರು ಮುಗಿಯುತಲಿಕೈಯಾ ಕವಿಗೇಯಾ ಶುಭಕಾಯಾ ಸುಧೀಂದ್ರರ ತನಯಾ ಗುರುವರಮಧ್ವ ಮು- ನೀಂದ್ರರಾ ಸುಮತಾಂಬುಧಿ ಚಂದಿರ ಅತಿ ಸುಂದರ ವೃಂದಾವನದಲಿ ನಿಂದಿಹರೆಂದರಿದೊಂದಿಪರಿಗೆ ಭವ ಬಂಧವ ಬಿಡಿಸಲು 1 ಸಡಗರದಲಿ ಬಿಳಿಗೊಡೆ ಚಾಮರ ವ್ಯಜನಾದಿಗಳನು ಪಿಡಿದು ಸೇವಿಸುವ ಎಡಬಲದಲಿ ಸುಜನಾ ಸಚ್ಛಾಸ್ತ್ರ ವೇದ ಪುರಾಣ ಪ್ರವಚನ ಪಾವನ್ನ ಗುರುಗಳ ಗುಣಸ್ತವನ ಮಾಡುವಾ ವರಗಳ ಬೇಡುವಾ ಕುಣಿಕುಣಿದಾಡುವಾ ಪಾಡುವಾ ಪೊಡವಿ ನಿರ್ಜರರ ಕಡು ವೈಭವದಲಿ 2 ಮಣಿ ಮುಕುಟ ದಿಂದ ದಿ- ಗ್ವಲಯ ಬೆಳಗುತಿಹ ಚಲುವ ಮುಖದ ಮಾಟಾ ಗಳದಲ್ಲಿ ಮೌಕ್ತಿಕದ ಹಾರ ಕೇಯೂರ ನೂಪರ ಸ- ಪೊಳೆಯುತ ಭಜಕರ ಕ- ಲುಷಾಭ್ರಕೆ ಮಾರುvರೆÀನಿಸುತ ಇಳೆಯೊಳು ಪಂಡಿತ ಯಳೆಮೇಲಾರ್ಯಗೊಲಿದು ಭಕುತ ವತ್ಸಲರೆಂದೆ ನಿಸುತ3 ಮಂಗಳ ತುಂಗ ತರಂಗಿಣಿ ತೀರದಲಿ ಭಕುತ ಜ- ನಂಗಳಿಗೆ ನಿಖಿಲಾರ್ಧಂಗಳ ಸಲಿಸುತಲೀ ಪಾಲಿಸುವ ದೇವ ಸ್ವಭಾವ ಶರಣ ಸಂಜೀವ ಕರದಲ್ಲಿಗೆ ಬರುವ ಎನ್ನುತ ತುತಿಪರು ದೃಗ್ಭಾಷ್ಪವ ಸುರಿಸುತ ಮೈಮರೆಯುತ ಬಲು ನಿರ್ಮಲ ಅಂತರಂಗದಿತವ ಪದಂಗಳ ಸ್ಮರಿಪರ ಸಂಘಕೆ ಸತತ ಸುಮಂಗಳವೀಯಲು 4 ಪುರದರಸನು ತನ್ನ ಸಿರಿಪರಿವಾರದಲಿ ಚರಿಸುತ ಬರುತ ಕಾಣುತಲೆ ಗುರುವರ ಚರಣದಲಿ ಕಾಣಕೆಯನ್ನಿತ್ತು ಶಿರಬಾಗಿ ಚನ್ನಾಗಿ ಆರುತಿಯ ಬೆಳಗಿ ಬರುತಿರೆ ರಥಸಾಗಿ ತೋರುವಾ ನೋಳ್ಪರ ನಯನಕ್ಕೆ ಪರಮೋತ್ಸವಾ ಶರಣರ ವಾಂಛಿüತಗಳ ಗರಿಯುವಾ ಪೊರೆಯುವ ಧರೆಯೊಳು ಮೆರೆಯುವ 'ಶಿರಿ ಕಾರ್ಪರ ನರಹರಿಯ' ನೊಲಿಸಿರುವ ಗುರು ಪ್ರಹ್ಲಾದರು 5
--------------
ಕಾರ್ಪರ ನರಹರಿದಾಸರು
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರಾಮ ನಿಮ್ಮ ನಾಮಧ್ಯಾನ ಜಿಹ್ವೆ ಮೇಲೆ ನಿಲಿಸು ಪ ಜಗದಭಿಮಾನ ಬಿಡಿಸಿ ಸುಗುಣ ಸಂತಸಂಗ ಪಾಲಿಸಿ ಸುಗುಣಾಂತರಂಗ ನಿನ್ನ ಸಗುಣ ಪೊಗಳಿಸೆನ್ನ ಮುಖದಿ 1 ಮದಮತ್ಸರಗಳನು ಬಿಡಿಸಿ ಸದಮಲ ಜ್ಞಾನಾನಂದದಿರಿಸಿ ಸದಮಲಾತ್ಮ ನಿಮ್ಮ ಮೂರ್ತಿ ಸದಾಯೆನ್ನ ನೇತ್ರದೊಳ್ನಿಲಿಸು 2 ಕಾಮಿತಂಗಳ ಕಡೆಹಾಯ್ಸಿ ಭೂಮಿ ಸೀಮೆ ಮೋಹ ತೊರೆಸಿ ಸ್ವಾಮಿ ಮಮಪ್ರಾಣದಾರ್ಯ ಶ್ರೀ ರಾಮದಾಸನೆನಿಸು ಒಲಿದು 3
--------------
ರಾಮದಾಸರು
ರಾಮ ಬಂದನೇನೆ | ಶ್ರೀ ರಘು ರಾಮ ಬಂದನೇನೆ|| ಪ್ರೇಮಿಕ ಜನರನು ಪೊರೆಯಲಾಗಿ|ಶ್ರೀರಘು ಪ ಜಾನಕಿ ಸಹಿತ ಲಕ್ಷಣರೊಡಗೂಡಿ | ಸ್ವಾನಂದದಿ ದಿಗ್ವಿಜಯಮಾಡಿ | 1 ಈರೇಳು ವರುಷಕೆ ಬರುವೆನೆಂದು ಮುನ್ನ | ಸಾರಿದ ನುಡಿ ಸತ್ಯಮಾಡಿ ದೋರಲು 2 ಹಾರೈಸಿ ನೋಡಲು ಕಣ್ಣಿಗೆ ಹಬ್ಬ | ದೋರಲು ಮೋಹದ ಮುದ್ದು ಮೊಗದಾ3 ಅವಧಿಯ ಮೀರಲು ಅಸುವ ತೊರೆವೆಸಿಂದು | ತವಕದಿ ಭರತನ ಪಾಲಿಸಲಿಕ್ಕೆ 4 ಸಾಕೇತ ಪುರಪತಿ ಸಾಮ್ರಾಜ್ಯಲೋಲನಾಗಿ | ಸಾಕುವ ಜಗಂಗುರು ಮಹೀಪತಿ ಪ್ರಭು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು