ಒಟ್ಟು 1291 ಕಡೆಗಳಲ್ಲಿ , 99 ದಾಸರು , 1017 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೋರು ನಿಜಜ್ಞಾನ ಸುಖವ ಮಾರನಯ್ಯ ಮರೆಯ ಬಿದ್ದೆ ಪ ಪಾರಮಾರ್ಥ ಪರಮ ಸವಿ ಚಾರಮೆನಿಪ ಪಾವನ ಸುಪಥ ಅ.ಪ ತೀರದಂಥ ಅಪಾರಭವದ ವಾರಧಿ ಈಸಿ ಘೋರಬಡುವೆ ನೀರಜಾಕ್ಷ ನಿಗಮವಿನುತ ಪಾರುಮಾಡು ಕಾರುಣ್ಯಶರಧಿ 1 ವಿಷಯಲಂಪಟ ಮುಸುಕು ಮುಸುಕಿ ವ್ಯಸನಚಿತೆಯೋಳ್ ಬಸವಳಿದೆ ಅಸಮಹಿಮ ತವಪಾದ ಕುಸುಮ ಮರೆದು ಕೆಟ್ಟೆನಭವ 2 ನಾಶಮತಿಯಿಂದಾಸೆಗೈದ ದೋಷಗಳನ್ನು ಕ್ಷಮಿಸಿ ಬೇಗ ಪೋಷಿಸಿಭವ ಶ್ರೀಶ ಶ್ರೀರಾಮ ದಾಸಜನರುಲ್ಲಾಸ ಪ್ರಭು 3
--------------
ರಾಮದಾಸರು
ತೋರೊ ನಿನ್ನಯ ಮೂರ್ತಿಯ ಮೂರ್ತಿ ಬೀರೊ ಹೃದಯವೆಂಬೊ ನೀರಜಹಾದೊಳಗೆ ಸಾರೋ ಸಾರಿ ಸಾರಿಗೆ ಸೇರೊ ಬಾರೊ ಬಾರೊ ಪರಿವಾರದೊಡನೆ ಮನಸೂರೆಗೊಡುವೆ ಕಂ ಸಾರಿ ಮುರಾರಿ ಪ ತುಂಬೆ ವಿಶ್ವಮಾಯಾದ ಬೊಂಬೆ ನಾಮ ಪೀಯೂಷ ಉಂಬೆ ಸೇವೆಯ ಕೈಕೊಂಬೆ ಅನ್ಯರ ನಂಬೆ ಕಾಂಬೆ ನಮಿಸಿ ಪಾಲಿಸೆಂಬೆ ಕಾಲಿಗೆ ಮನ ದುಂಬೆ ದಂತೆ ಎರಗಿ ಅಂಬೆ ಪಿಡಿವಾಕೊಂಬೆ ಅಂಬುಜಾಕ್ಷ ನೀ ನೆಂಬದು ಸುರನಿಕರಂಬ ಹಂಬಲಿಸಲು ದಿಂಬಾಗಿ ಕರ್ಣಾವಲಂಬನವಾಯಿತು ಇಂಬಿಡು ಪ್ರಾಙ್ಞನೆಂದೆಂಬ ಮೂರುತಿಯಾ1 ಸ್ನಾನ ಪ್ರಣಮ ವಾಚಾ ಮಾನದಿಂದಲಿ ಬಲು ಮೌನವಾಗಿದ್ದು ಮಾಳ್ಪ ಧ್ಯಾನವು ಇತ್ತು ಮಾಜ್ಞಾನಾ ನಾನಾ ಪ್ರಕಾರದಿಂದ ದಾನಧರ್ಮಂಗಳ ನಿ ದಾನ ಕೊಂಡಡಲಾಮೇಲೆ ನೆನೆವೆನನುದಿನ ಮಾನವನ ಹೀನವ ನಾಡದೆ ನೀನೆನಿಸದೆ ಸುಮ್ಮನದಿಂದಲಿ ನೋಡೊ ದಾನವನ ವಡಲನು ಬಗದು ಕರುಳನು ವನಮಾಲೆ ಹಾಕಿದ ಶ್ರೀನಿಕೇತನ 2 ಇಂದು ಮಾಡುವದೇನು ಚಂದ ಭಕ್ತರಿಗತಿ ಬಂಧವನೆ ಯಾಕೆಂದಾ ಅಂದ ರಕ್ಕಸನಾಗಿ ಕೊಂದಾವರದ ಮುಕ್ಕುಂದಾ ವಂದಿತ ಮರ ವೃಂದಾ ಕರುಣದಿಂದಾ ಎಂದಿಗೆಂದಿಗೆ ಎನ್ನಿಂದಗಲದೆ ಗೋ ವಿಂದ ಇಂದಿರಾಪತಿ ಸುಂದರ ವಿಗ್ರಹ ಮಂದಿರದೊಳು ಸುಮದಾಸನದಲ್ಲಿ ಬಂದು ವಿಜಯವಿಠ್ಠಲೆಂದು ನೀನಿಂದು3
--------------
ವಿಜಯದಾಸ
ದಧಿವಾಮನ ವಿಠಲ ಉದ್ಧರಿಸೊ ಇವನ ಪ ಅಧಿ ಭೂತ ಅಧ್ಯಾತ್ಮ ಅಧಿದೈವಗತ ದೇವವಿಧಿ ಜನಕ ವಿಶ್ವಾತ್ಮ ಮಧು ಮಥನ ಹರಿಯೆ ಅ.ಪ. ವಿದ್ಯಾಯುಗಳನಿತ್ತು ಮಧ್ವಮತ ದೀಕ್ಷೆಯಲಿಶ್ರದ್ಧೆ ಬುದ್ಧಿಯ ನೀಯೊ ಮಧ್ವಾಂತರಾತ್ಮಾ |ಕೃದ್ಧಖಳರ್ಹಾವಳಿಯ ಒದ್ದು ಪೋಷಿಸುತಿಪನಶುದ್ಧಗೈವುದು ಮನವ ಸಿದ್ಧಜನ ವಂದ್ಯಾ 1 ತಾರತಮ್ಯ ಜ್ಞಾನ ಮೂರೆರಡು ಭೇದಗಳವಾರ ವಾರಕೆ ತಿಳಿಸಿ ಪೊರೆಯಬೇಕೋ |ಸಾರತಮ ನಿನ್ಹೊರತು ಆರು ಕಾಯುವರಯ್ಯಪೋರಗಿಹ ದುರಿತಾಳಿ ಪಾರುಮಾಡೈದೇವ 2 ಕಾರಣಿಕ ಕರುಣಾಬ್ಧಿ ತಾರೇಶ ಶ್ರೀ ಹರಿಯೆನೀರ ಜಾಸನವಂದ್ಯ ನೀರಜಾಕ್ಷಾ |ತಾರಕನು ಕುಭವ ಕೂಪಾರ ದಾಟಿಸಲುಧೀರ ಗುರು ಗೋವಿಂದ ವಿಠಲ ಪ್ರಾರ್ಥಿಸುವೇ 3
--------------
ಗುರುಗೋವಿಂದವಿಠಲರು
ದನವ ಕಾಯ್ವೊನೆ ದೈನ್ಯ ಬಡುವವನೆ ವನಜಭವಾಂಡಕೆ ಒಡೆಯನಾಗೆಂದರೆಒಲ್ಲದೆ ವನವನ ತಿರುಗಿದನಮ್ಮ ನೋಡಮ್ಮಯ್ಯ ಪ. ದನಗಾಹಿ ಎಂದರೆ ಎನಗೇನು ಸಂಶಯವಿಲ್ಲಜನರೆಲ್ಲ ಬಲ್ಲರು ಈ ಮಾತು ಜನರೆಲ್ಲ ಬಲ್ಲರು ಈ ಮಾತು ಭಾವಯ್ಯನೆನಪಿಸಿ ಕೊಟ್ಟೆಲ್ಲೊ ಮರೆತಿದ್ದೆ 1 ಗೋಪಾಲ ಶಬ್ದಾರ್ಥ ನೀ ಕೇಳಿಶ್ರೀ ಕೃಷ್ಣ ಕೋಪವಿನ್ಯಾಕೊ ಎನಮ್ಯಾಲೆ ಕೋಪ ವಿನ್ಯಾಕೊ ಎನ ಮ್ಯಾಲೆ ಭಾವಯ್ಯನೀ ಪೇಳಿಕೊಂಡ್ಯೊ ನಿಷ್ಕಪಟಿ 2 ಕುದುರೆಯ ಮಾರಿಯ ಹೂವು ಗಣ್ಣಿನ ವರನಿಗೆ ಮದಗಜಗಮನೆ ಮನಸೋತುಮದಗಜಗಮನೆ ಮನಸೋತು ಮ್ಯಾಲಿನ್ನುಬದಲು ಮಾತಾಡಿ ಫಲವೇನೊ3 ನಾರುವ ಮೈಯವ ನೀರೊಳು ಅಡಗಿದ ಹಂದಿ ಮೈಯವನೆ ಮಹಾಕೋಪಿಹಂದಿ ಮೈಯವನೆ ಮಹಾಕೋಪಿ ತಿರುತಿಂಬೊಹಾರುವನ ಗೊಡವೆ ನಮಗ್ಯಾಕೊ 4 ಕೊಡಲಿಯ ಪಿಡಕೊಂಡ ಪಡೆದಮಾತೆಯಕೊಂದೆ ಒಡಲಿಗಿಕ್ಕದಲೆ ಮಡದಿಯಒಡಲಿಗಿಕ್ಕದಲೆ ಮಡದಿಯ ಕೊಂಡೊಯ್ದುಅಡವಿಗಟ್ಟಿದ ಮಹಾ ಮಹಿಮನೆ5 ಜಾರ ಚೋರನೆಂದು ಜಗದೊಳು ಹೆಸರಾದಿಅಪಾರವಾದ ವನಿತೆಯರುಅಪಾರವಾದ ವನಿತೆಯರ ಒಗೆತನಕೆನೀರು ತಂದಿದ್ದ ಮಹಾಮಹಿಮನೆ 6 ಭಂಡ ಗಾರನಂತೆ ದೇಹ ಕಂಡಜನಕೆಲ್ಲತೋರಿ ಪುಂಡಗಾರನಂತೆ ಹಯವೇರಿಪುಂಡಗಾರನಂತೆ ಹಯವೇರಿ ಹಾರಿಸುವ ಲೆಂಡ ರಾಮೇಶನ ಅರಿವೆನೊ7
--------------
ಗಲಗಲಿಅವ್ವನವರು
ದಯದಿ ಎಮ್ಮನು ಸಲಹ ಬೇಕಯ್ಯ | ಮಳಖೇಡ ನಿಲಯ ದಯದಿ ಎಮ್ಮನು ಸಲಹ ಬೇಕಯ್ಯ ಪ ದಯದಿ ಎಮ್ಮನು ಸಲಹ ಬೇಕೈ | ವಿಯದಧಿಪ ಸದ್ದಂಶ ಸಂಭವ ಭಯ ವಿದೂರನ ತೋರು ಎನುತಲಿ | ಜಯ ಮುನೀಂದ್ರನೆ ಬೇಡ್ವೆ ನಿನ್ನನು ಅ.ಪ. `ಇಂದ್ರಸ್ಯನು ವೀರ್ಯಾಣ’ ಎಂದೆನುತ | ಇತ್ಯಾದಿಋಕ್ಕುಗಳಿಂದ ಬಹುತೆರೆ ನೀನು ಪ್ರತಿಪಾದ್ಯ ||ಅಂದು ಮೇಘದ ಜಲವು ಬೀಳದೆ | ಬಂಧಗೈದಹಿನಾಮ ದೈತ್ಯನಕೊಂದು ಉದ್ಧರಿಸಿರುವ ಪರಿಯಲಿ | ಮುಂದೆ ದುರ್ವಾದಿಗಳ ಖಂಡಿಪೆ 1 ವಾಲಿಯಂದದಿ ದೃಷ್ಟಿಮಾತ್ರದಲಿ | ಶತೃಗತಬಲಲೀಲೆಯಿಂದಪಹರಿಪೆ ನಿಮಿಷದಲಿ ||ಕಾಲ ತ್ರೇತೆಯಲಂದು ದುಷ್ಟರ | ವಾಲಿರೂಪದಿ ವಾರಿಸಿದ ಪರಿಕಾಲ ದ್ವಾಪರದಲ್ಲಿ ಪ್ರಾರ್ಥನೆ | ಲೀಲೆ ರೂಪಿಯು ಕೃಷ್ಣಸೇವಕ 2 ದೃಷ್ಟಿ ಮಾತ್ರದಿ ಕರ್ಣಗತ ಬಲವ | ಅಪಹರಿಸಿ ನೀನುಕ್ಲಿಷ್ಟ ಯುದ್ಧದಿ ಗಳಿಸಿ ನೀ ಜಯವ ||ಶ್ರೇಷ್ಠ ಕರ್ಣನ ಅಸುವ ಕೊಳ್ಳುತ | ಸುಷ್ಠು ಅರಿಬಲ ನಾಶಮಾಡುತಭ್ರಷ್ಟ ಕೌರವನೀಗೆ ದುಃಖದ | ಕೃಷ್ಣಗರ್ಪಿಸಿ ಕೈಯ್ಯ ಮುಗಿದೆಯೊ 3 ಕಾಲ ಕಲಿಯುಗದಲ್ಲಿ ಬಲ ಭೀಮ | ಮಧ್ವಾಭಿಧಾನದಿಮೂಲ ಮೂವತ್ತೇಳು ಸೂನಾಮ ||ಭಾಳ ಗ್ರಂಥಗಳನ್ನೆರಚಿಸೀ | ಕಾಲಟಿಜಕೃತಮಾಯಿ ಮತವನುಲೀಲೆಯಿಂದಲಿ ಖಂಡಿಸುತ್ತ | ಪಾಲಿಸುತ್ತಿರೆ ಸುಜನರನ್ನು 4 `ವೃಷಾಯ ಮಾಣೆಂಬ` ಋಕ್ಕಿನಲಿ ದೇವ ಇಂದ್ರಗೆವೃಷಭದಾಕೃತಿ ಪೇಳಿಹುದು ಅಲ್ಲಿ ||ವೃಷಭ ನೀನಾಗಂತೆ ಕಲಿಯಲಿ | ಎಸೆವ ಶ್ರೀ ಮನ್ಮಧ್ವ ಗ್ರಂಥದಹಸಿಬೆ ಚೀಲವ ಹೊತ್ತು ತಿರುಗುತ | ಅಸುಪತಿಯ ಸೇವಿಸಿದ ಮಹಿಮ5 ಅಗಸ್ತ್ಯ ಮುನಿ ಸಕಲ ತೀರ್ಥಗಳ | ಸಂಗ್ರಹಿಸಿ ಕರದಿಸಾಗಿ ಗಿರ್ಯಾನಂತ ಕಮಂಡೂಲ ||ವೇಗ ಕೆಳಗಿಟ್ಟಾಚಮನ ಅಲ್ಪ | ಕಾಗಿ ಸ್ವಲ್ಪವುದೂರ ಪೋಗಲುಕಾಗೆ ರೂಪದಿ ಬಂದು ಇಂದ್ರನು | ವೇಗ ಉರುಳಿಸೆ ಜಲವು ಹರಿಯಿತು 6 ದೆವರಾಜನು ಕಾಣಿಸಿ ಕೊಳಲು | ಮುನಿಯು ಆಕ್ಷಣದೇವ ಕಾರ್ಯದ ಭಾವ ತಿಳಿಯಲು ||ಓವಿ ತತ್ಕಾಗಿಣಿಯ ನಾಮದಿ | ಭೂವಲಯದೊಳ್ಬಾತಿಸಲಿ ಎನೆತೀವರಾಶೀರ್ವಾದ ದಿಂದಲಿ | ಪಾವನವು ತತ್ ಕ್ಷೇತ್ರ ವಾಯಿತು 7 ಪಾಂಡು ಮಧ್ಯಮನಾದ ಅರ್ಜುನನು | ಇಲ್ಯುದಿಸಿ ಪೊತ್ತಧೋಂಡು ರಘುನಾಥ ಪೆಸರನ್ನು || ಗೊಂಡು ನಾಯಕ ತನವ ಅಶ್ವಕೆ | ಅಂಡಲೆದು ಬರುತಿಲ್ಲಿ ಬಿಸಿಲಲಿ ಉಂಡು ಉಂಬುದ ಜಲವ ಪಶುಪರಿ | ಕಂಡು ಮುನಿ ಅಕ್ಷೋಭ್ಯ ಬೆಸಸಿದ 8 ಸ್ವಪ್ನ ಸೂಚಿಸಿದಂತೆ ಮುನಿಶ್ರೇಷ್ಠ | ನೀರ್ಗುಡಿದವ ನರೆ ಬಪ್ಪುವನು ತಮ ಪೀಠಕೆನ್ನುತ್ತ || ಸ್ವಲ್ಪ ಹಾಸ್ಯದಿ ಪಶುವು ಪೂರ್ವದಿ | ಒಪ್ಪುವೆಯಾ ನೀನೆನ್ನ ಸಾದಿಗೆ ನೆಪ್ಪು ಬಂದುದು ವೃಷಭ ಜನ್ಮದಿ | ಕೃಪ್ಪೆಗೈದಿಹ ಮಧ್ವರನುಗ್ರಹ 9 ಸಾದಿ ಭೂಪನು ಕಳುಹಿ ತನ್ನ ಸೈನ್ಯ | ಅಕ್ಷೋಭ್ಯ ಮುನಿಪರ ಪಾದಕೆರಗುತ ಆಶ್ರಮವು ತುರ್ಯ ||ಮೋದದಿಂದ್ಯಾಚಿಸಲು ಮುನಿವರ | ಆದಿಯಿಂದಲಿ ಬಂದ ಪೀಠಕೆಸಾದರದಿ ಪಟ್ಟಾಭಿಷಕ್ತನ ಗೈದು ಆಶೀರ್ವಾದ ಮಾಡಿದ 10 ಸುತನು ತುರ್ಯಾಶ್ರಮವ ಪೊತ್ತುದನ | ಕೇಳುತ್ತ ತಂದೆಅತುಳ ಕೋಪದಿ ನಿಂದಿಸಿದ ಮುನಿವರನ |ಸುತನ ಗೃಹ ಕೆಳತಂದು ಪತ್ನಿಯ | ಜೊತೆಯಲಿಡೆ ಏಕಾಂತ ಗೃಹದಲಿಅತುಳ ಸರ್ಪಾ ಕೃತಿಯ ಕಾಣುತ | ಭೀತಿಯಲಿ ಚೀರಿದಳು ಕನ್ಯೆಯು11 ಸೋಜಿಗದ ತನಯನ್ನ ಕೊಳ್ಳುತ್ತ | ಮುನಿವರರ ಬಳಿಗೆ ಯೋಜಿಸೀದನು ಕ್ಷಮೆಯ ಬೇಡುತ್ತ ||ಆರ್ಜವದ ಮುನಿ ಕ್ಷಮಿಸಿ ತಂದೆಯ | ಮಾಜದಲೆ ತಮ್ಮ ಶಿಷ್ಯಭೂಪಗೆಯೋಜಿಸಿದರನ್ವರ್ಥನಾಮವ | ಶ್ರೀ ಜಯಾಭಿಧ ತೀರ್ಥರೆನ್ನುತ 12 ಪರ ಕರಿ ಹರ್ಯಕ್ಷರಾದಿರಿ 13 ಮಧ್ವಭಾಷ್ಯಕೆ ಟೀಕೆ ರಚಿಸುತ್ತ | ಯರಗೋಳ ಗುಹೆಯಲಿಶುದ್ಧ ಭಾವದಿ ಇರಲು ಮದಮತ್ತ ||ವಿದ್ಯ ಅರಣ್ಯಭಿಧ ನೋಡೀ | ಮಧ್ವಕೃತ ಸನ್ಮಾನ ಲಕ್ಷಣಬುದ್ಧಿಗೇ ನಿಲುಕದಲೆ ಟೀಕೆಯ | ಪದ್ಧತಿಯ ಕಂಢರ್ಷಪಟ್ಟನು 14 ಮಾಧ್ವಭಾಷ್ಯವ ನೇರಿಸಿ ಗಜವ | ತಟ್ಟೀಕೆ ಅಂತೆಯೆಅದ್ಧುರೀಯಲಿ ಗೈದು ಉತ್ಸವವ ||ವಿದ್ಯವನ ಮುನಿಪೋತ್ತುಮನು ಬಹು | ಶುದ್ಧಭಾವದಿ ಗೈದು ಸಂತಸಬುದ್ಧಿಯಲಿ ಪರಿವಾರ ಸಹಿತದಿ | ಸದ್ದುಯಿಲ್ಲದೆ ಪೋದನಂದಿನ 15 ಹತ್ತೆರಡು ಮತ್ತೊಂದು ಕುಭಾಷ್ಯ | ವಿಸ್ತರದಿ ಖಂಡಿಸೆಕೃತ್ಯವೂ ಮಧ್ವಕೃತವನುವ್ಯಾಖ್ಯಾ ||ಮತ್ತಿದಕೆ ಸೂಧಾಖ್ಯ ಟೀಕವ | ವಿಸ್ತøತವು ನಿಮ್ಮಿಂದ ಜಯಮುನಿಮೊತ್ತದಿಂಧ್ಹತ್ತೆಂಟು ಗ್ರಂಥಕೆ | ಕೃತ್ಯವಾಯಿತು ನಿಮ್ಮ ಟೀಕೆಯು16 ಪಾದ ಪಾದ ತೋರ್ವುದು ||
--------------
ಗುರುಗೋವಿಂದವಿಠಲರು
ದಯಮಾಡು ದಯಮಾಡು ಶಾರದಾಂಬೇ ನಯ ನೀತಿ ಕಲೆ ಭಾಗ್ಯ ಘನ ಕುಟುಂಬೇ ಪ ಜಯ ವಿಜಯ ಯಶಭೋಗ ಶ್ರೀಕರಾಂಬೇ ಭಯ ಭೀತಿ ಪರಿಹಾರೆ ವರಕದಂಬೆ ಅ.ಪ ಫಣಿ ಕಲ್ಯಾಣಿ ಸರಸಗುಣಿ ಗೀರ್ವಾಣಿ ವೀಣಾಪಾಣಿ 1 ಸಾರತರ ಶುಕವಾಣಿ ನೀರೇಜ ಮೃದುಪಾಣಿ ಭೂರಿದಯೆ ಸುಶ್ರೋಣಿ ದೇವಿ ಶುಭವಾಣಿ 2 ಸಕಲ ಲೋಕಖ್ಯಾತೆ ಸಕಲ ಜಗಸನ್ನುತೇ ಸಕಲ ಜಗವಂದಿತೇ ಸಕಲ ಶುಭಗೀತೇ ಸಕಲ ವೈಭವದಾತೇ ಸಕಲ ಸದ್ಗುಣ ಲಸಿತೇ ಸಕಲ ಸನ್ನುತೇ ಮಾಂಗಿರೀಶ ವಿನುತೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಶರಥರಾಮಹರೆ ಸೀತಾಪತೆ ದಶರಥರಾಮ ಸುಧಾಕರವದನ ¥ರಶುರಾಮ ಬಾಹುಪರಾಕ್ರಮ ಜಿತಶ್ರೀ ಪ ಸುರಮುನಿ ಸೇವಿತ ಶುಭಕರ ಚರಿತ ಕೌಸ್ತುಭ ಶೋಭಿತ ವರ ವಿಶ್ವಾಮಿತ್ರಾಧ್ವರ ಪರಿಪಾಲನ ಖರ ದೂಷಣ ರಾಕ್ಷಸ ಬಲ ಖಂಡನ 1 ವಾಲಿ ಮರ್ದನ ಭಕ್ತವತ್ಸಲ ಮಾಧವ ವಿನುತ ಪಾದ ಪದ್ಮ ನೀಲ ನೀರದ ಸನ್ನಿಭಗಾತ್ರ ಪರಮ ದಯಾಳು ನಾರಾಯಣ ಲೀಲಾ ಮಾನುಷ ವೇಷ 2 ಸಿಂಧು ಬಂಧನ ಪಂಕ್ತಿ ಕಂಧರಾಂತಕ ಗೋವಿಂದ ಮುಕುಂದಾರ ವಿಂದೋದರ ಇಂದಿರಾಧಿಪ ಶ್ರೀ ಹೆನ್ನೆಪುರ ನಿಲಯಾ ನಂದ ವಿಗ್ರಹ ಜಗದ್ವಂದ್ಯ ಮಂದಹಾಸ 3
--------------
ಹೆನ್ನೆರಂಗದಾಸರು
ದಶಾವತಾರ ನೀರೊಳಗೆ ನಿಂತು ನಡುಗಿ ನಾರುವಂಗೆ ಗಂಬೂರಿಕಸ್ತೂರಿ ಲೇಪನದ ಮದುವೆಭಾರ ನಿನ್ನಲಿ ಪೊಳಲು ಕಲ್ಲು ಕೈ ಮುಸುಡಿದಂಗೆಧೀರ ಶೇಷನ ಶಯನದ ಮದವೋಮೋರೆಯಲ್ಲಿ ಯಲ್ಲಾ ಕೆದರಿ ಬೇರು ಮೆಲುವನಿಗೆಸಾರಷಡ್ರಸನ್ನ ಭೋಜನದ ಮದವೋಕರುಳ ವನಮಾಲೆ ಹಾಕಿದವಂಗೆ ಹಾರಪದಕ ಹಾಕಿದ ಮದವೋಮೂರಡಿಯ ಭೂದಾನ ಬೇಡಿದವನಿಗೆ ಸಾರಿದವಂಗಭೀಷ್ಟಗಳ ಪೂರೈಪ ಮದವೋಧರಣಿ ವಿಪ್ರರಿಗಿತ್ತು ಕುಳಿಪುದಕೆ ಸ್ಥಳವಿಲ್ಲವಗೆ ಭುವನಕೀಳುವ ಮದವೋಊರ ಬಿಟ್ಟು ವನ ಚರಿಸುವಂಗೆ ಮೂರು ಧಾಮದಮನೆಯ ಭೋಗದ ಮದವೋಪುರನಾರಿಯ ಬಯಸಿ ಕೊಂಬುವಂಗೆ ವಾರಿಜಭವ ಸುರರವಂದ್ಯಾನೆ ಮದವೋಘೋರ ತುರಗವನೇರಿ ಹಾರಿಸ್ಯಾಡುವಂಗೆ ವೀರಸಿಂಹಾಸನದಲ್ಲಿಕುಳಿತ ಮದವೋಮೂರು ದಿನ ಅರಸುತನ ಸ್ಥಿರವೆಂದು ನೆಚ್ಚಿ ಸಾರಿದವನ್ನಮರೆವದುಚಿತವೆಬಾರದೆ ತಪ್ಪದು ಹಿಂದಿನ ಭವಣೆ ನಿನಗೆ ದೂರ ವಿಚಾರಿಸಿನೋಡೊ ಕರುಣಾ ನಿಧಿಶ್ರೀರಂಗ ರಾಜಗೋಪಾಲ ವಿಠಲ ನಿನ್ನ ಪಾರಿದವರ ಪೊರೆದು ಕೀರ್ತಿಪಡಿಯೊ
--------------
ರಾಜಗೋಪಾಲದಾಸರು
ದಾತ ಅಂಬುಜಾಸನ ತಾತ ಕುಂಭಿಣಿಯೊಳು ಪುಟ್ಟಿ ಜನನಿಯ ಮೊಲೆ ಪಾಲು ಉಂಬೋದು ಬಿಡಿಸೊ ಜನನವ ಕೆಡಿಸೊ ಪ ರಸಿಕೆ ಮುಹಕದಲಿ ನಿಶಿದಿನದಲಿ ಹೊರಳಿ ಅಸುರುಸುರೆನುತಲಿ ಹಸಗೇಡಿಯಾದೆನೊ ಪರಿ ನೊಂದು 1 ಹಲವು ಲಂಪಟದೊಳು ಹಲುಬಿ ಹಕ್ಕಲನಾದೆ ಬಲೆಯೊಳಗಿದ್ದ ಎರಳೆಯಂತೆ ಮಿಡುಕುತ ಮಲಮೂತ್ರದೊಳು ಬಳಲಿದೆ ಕೇಳೊ 2 ಎಳ್ಳನಿತು ಸತ್ಕರ್ಮವುಳ್ಳದ್ದು ಚರಿಸಿದೆ ಬಲಿಷ್ಠ ನಾನೆಂದು ಬಲು ದುರ್ಮತಿಯಿಂದ ಎಲ್ಲರ ಜರಿದೆ ಧರ್ಮವ ಮರೆದೆ 3 ಚಾರುವಾಕರಗೂಡಿ ಮೂರೆ ವಿಕಾರದಲ್ಲಿ ನೀರೇರ ಒಡಗೂಡಿ ನೀತಿ ನಿರ್ಣಯ ತೊರೆದು ಬಟ್ಟೆ 4 ಎಲ್ಲಿರಲು ನಿನ್ನವನೋ ಅಲ್ಲವೆಂದೆನಿಸದೆ ಬಲ್ಲಿದರೊಡಿಯ ವಿಜಯವಿಠ್ಠಲ ನಿ ನ್ನಲ್ಲಿ ಸೇರಿಸಿ ಎನ್ನ ಪೊರೆಯೋ ಪ್ರಸನ್ನಾ 5
--------------
ವಿಜಯದಾಸ
ದಾನವಕುಲ ದಮನಾ ಕೇಶವ ದೀನಪಾಲ ಗಾನಲೋಲ ಶ್ರೀಜನಾರ್ದನ ಪ ವಾನರಪತಿಸದನಾ ಸನಕಾದಿ ಸೇವಿತ [ದೀನ] ಶರಣ್ಯ ಸಾರಸಾಕ್ಷ ಲೋಕ ಮೋಹನ ಅ.ಪ ಶ್ರೀ ರಮಣೀ ಸೇವಿತ ಚರಣಾಬ್ಜ ವಾರಿಧಿ ಶಯನಾ ನಾರದನುತ ಚರಣಾ | ಸುರರಾಜ ಪೂಜಿತ ನೀರಜಾಕ್ಷ ಮಾಂಗಿರೀಶ ವಾರಿಜಾಸನಾ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾರಿ ತೋಚದಲ್ಲಾ ನನಗೆ ಏನು ಪ ನೀರಜಾಕ್ಷ ನಿನ್ನ ನೊಲಿಸುವ ಅ.ಪ ವಿಧಿ ಸಾಧಿಸುತ ವೇದವ್ಯಾಸ ನಿನ್ನ ಪ್ರೀತಿ ಸಾಧಿಸಲು ಮೂಢನಾನು 1 ದಂಡಕಾಲ ಕಳೆದುದಯ್ತು ಮಂಡೆಗೀಗ ಹತ್ತದವು ಫಂಡರೀಶ ಕೃಪೆಯಮಾಡೊ 2 ಹಾಡಿಪಾಡಿ ವಲಿಸಾಲು ರಾಗ ಈ ಭಾವ ತಾಳ ಕಾಣೆ ಕಾಡು ಕೋಣನಂತೆ ಇರ್ಪೆ ನೀಡಿ ಸಲಹೊ ಸರ್ವ ಶಕ್ತಿ 3 ದಾನಧರ್ಮತೀರ್ಥಯಾತ್ರೆ ನಾನು ಮಾಡೆ ಹುಟ್ಟು ಬಡವ ಶ್ವಾನನಂತೆ ತಿರಿದು ಉಂಬೆ ಸಾಧ್ಯವೇನು ನೀನೇ ನುಡಿಯೊ4 ನೆಂಟರಿಷ್ಟರೆಲ್ಲ ಎನ್ನ ಕೈಯ ಬಿಟ್ಟು ಹೋದರೈಯ ಒಂಟಿಯಾಗಿ ಅಲೆದು ಅಲವೆ ಭಂಟನೆನಿಸಿ ಕಾಯಬೇಕೊ 5 ದಾಸನಾಗಿ ಬಾಳೋದಕ್ಕೆ ಆಶೆಯಿನ್ನು ತೊಲಗಲಿಲ್ಲ ಮೊಸವೇನೆ ಬರಿಯ ವೇಷ ದೋಷದೂರ ಶ್ರೀಶವಲಿಯೊ 6 ಹಿಂದಿನವರ ಕಾಯ್ದಬಗೆಯು ಇಂದಿನವರಿಗೆ ಬರಿಯ ಕಥೆಯು ಮಂದನೆನ್ನ ಈಗ ಪಿಡಿದು ಮುಂದು ಮಾಡೊ ನಿನ್ನ ಖ್ಯಾತಿ7 ಶರಣ ಜನರ ಬಿಡನು ಎಂಬ ಖರೆಯಬಿರುದು ನಿನ್ನದೆಂದು ಹಿರಿಯರಿಂದ ಅರಿತುಬಂದೆ ಪರಮ ಕರುಣಿ ಕೈಯ ಪಿಡಿಯೊ8 ನಿನಗೆ ಯೆನ್ನ ಪೊರೆಯೆ ಕ್ಷಮಿಸಿ ದೋಷ ಪೊರೆಯೊ ಬೇಗ ನಮಿಪೆ ನಂಬಿ ನಿನ್ನನೀಗ 9
--------------
ಕೃಷ್ಣವಿಠಲದಾಸರು
ದಾಶರಥೇ ದಯಮಾಡು ನಿನ್ನ ದಾಸದಾಸನ ನೋಡುದಾಸದಾಸನ ನೋಡು ಮುದ್ದು ದಾಶರಥೇ ದಯ ಮಾಡು ಪ ನೀರಜಾಕ್ಷ ನಿಜ ಮಾಯ ಮಮತೆ ಸಂಸಾರ ಶರಧಿಯೊಳು ಬಿದ್ದುಪಾರುಗಾಣದೆ ಬರಿದೆ ಪೋಗುವಾ ತಾರಕ ಬ್ರಹ್ಮ ನೀನೆಂದೂ 1 ವಿಶ್ವ ಕುಟುಂಬನೆ ಎನಗಾ ಇಂಗುಗೊಡದೆಯೆಲ್ಲರ್ಗಲ್ಲಿ 2 ಇಂದಿರೇಶ ಮುಚುಕುಂದ ವರದ ಮುನಿ ವಂದ್ಯನೆ ದಶರಥ ಕಂದಾಚಂದದಿ ನಿನ್ನ ಪದದ್ವಂದ್ವಗಳನುದಿನ ವಂದಿಸುವೆನುಮುದದಿಂದಾ3
--------------
ಇಂದಿರೇಶರು
ದಾಶರಥೇ ದಯಮಾಡೊ ನಿನ್ನ ದಾಸರ ದಾಸನ ನೋಡೋ ಪ ನೀರಜಾಕ್ಷ ನಿಜಮಾಯಾ ಮಮತೆ ಸಂ- ಸಾರಶರಧಿಯೊಳು ಬಿದ್ದು ಪಾರಗಾಣದೆ ಪರಿದು ಪೋಗುವೆನು ತಾರಕ ನೀನೆನಗಿದ್ದು ಹರಿ ಹರಿ 1 ತುಂಬಿದ ಭಂಡಿಗೆ ಮೊರ ಭಾರವೆ ಎನ- ಗಿಂಬಿಲ್ಲವೆ ನಿನ್ನಲಿ ನಂಬಿದ ಭಕ್ತರ ಸಲಹುವ ವಿಶ್ವಕು- ಟುಂಬಿ ಎನಿಸಿಕೊಳುವಲ್ಲಿ ಹರಿ 2 ಬಲ್ಲಿದರೊಳು ಬಡವರಿಗಾಶ್ರಯ ನೀ ಬಲ್ಲೆ ಮತ್ತೆ ಎನಗೀಗ ಎಲ್ಲಿದ್ದರು ಶ್ರೀದವಿಠಲ ಬಿಡ ದಲ್ಲೂ ನಿನ್ನ ದಯ ಬೇಗ 3
--------------
ಶ್ರೀದವಿಠಲರು
ದಿವಿಜ ಪ ಓ ಗುರುಮಾನ್ಯ ಕಾಮಿತ ನೀರಜ ತ್ಯಾಗಿ ಶುಭಾಂಗ ಭಾಸ್ಕರತೇಜ ಅ.ಪ ಕಂಗಳ ನೀಡಿದೆ ಚರಣವ ತೋರಿದೆ ಬಂಗಾರವ ನೀ ಪಡೆದೆ | ಪಂಗುತಾ ನಡೆಯಲಾದ ಮಂಗನ ಸಿಂಗಗೈದೆ | ಇಂಗಿತಜ್ಞನೀನೆಲೆ ಮಾಂಗಿರಿರಂಗನ ಪ್ರೇಮದಿಂದರ್ಚಿಸುವ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೀನಶರಣ ಮಾಮನೋಹರಾ ಕೃಪಾಪೂರಾ ಪ ಗಾನಲೋಲ ತರಣಿರುಚಿರ ನೀಲಗಾತ್ರ ಅ.ಪ ನೀರಜಾಕ್ಷ ನೀರಜಭವ ನಾರದಾದಿನುತಚರಣಾ ಚಾರುಚರಿತಾ ನಿಗಮವಿದಿತಾ | ವಾರಣೀಶನಮಿತಾ 1 ಸುಗುಣ ಭರಿತ ಮಾಂಗಿರೀಶ ಪಾರ್ಥಸೂತ್ರ [ಅಗಣಿತಗುಣಚರಿತ ಕಾಯೋ ನಾ ಶರಣಾಗತ] 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್