ಒಟ್ಟು 876 ಕಡೆಗಳಲ್ಲಿ , 90 ದಾಸರು , 752 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀ ಎನ್ನ ಕಾಯಲಿ ಬೇಕೊ - ಘನ್ನ ಮಹಿಮಾ ಪ ಬನ್ನ ಬಡಿಸುವದು ಅನ್ಯಾಯ ನಿನಗಿದಾಪನ್ನಪಾಲ ಅ.ಪ ಘನ್ನ ಮಹಿಮೆಯತೋರಿ - ಎನ್ನ ಕಾಯಲಿ ಬೇಕು ನಿನ್ಹೊರತು ಗತಿ ಎನಗೆ - ಮುನ್ನಾರು ಗುರುವೆ 1 ಎನ್ನ ಮಾತನು ನೀನು - ಚನ್ನಾಗಿ ಚಿತ್ತೈಸಿ ಅನ್ಯಜನರಾಬಾಧೆ - ಮುನ್ನ ಕಳೆಯ ಬೇಕೊ 2 ಘನ್ನ ಶಿರಿ ಕೃಷ್ಣನು ತನ್ನ ಸಖನಿಗೆ ಮಹಾ ಉನ್ನ ತೈಶ್ವರ್ಯವಿತ್ತವ - ನನ್ನ ಕಾಯ್ದ ತೆರದಿ 3 ಇನ್ನು ಪೇಳುವುದೇನೊ ಗುರು - ರನ್ನ ಭವದಾಶ್ರಮವು ಇನ್ನು ತಿಳಿಯದೆ ನಿನಗೆ -ಘನ್ನ ಸರ್ವಙ್ಞರಾಯಾ 4 ಸನ್ನುತಜನಪ್ರೀಯ - ನಿನಗೆ ಮೊರೆಯಿಡುವೆ ಘನ್ನ ಗುರು ಜಗನ್ನಾಥ ವಿಠಲ ದೂತಾ ದಾತಾ 5
--------------
ಗುರುಜಗನ್ನಾಥದಾಸರು
ನೀ ಕೃಪೆ ಮಾಡೋ ಹರಿಯೇ ಲೋಕವಿನುತ ಸಿರಿಯೇ ಪ ಶ್ರೀಕರ ಭಾಸ್ವರಾ ಭಕ್ತಸುಧಾಕರ ಶೋಕಹರಣಾ ನೀ ಶೂರಾ ಅ.ಪ ನಡು ನೀರೋಳೆನ್ನ ಕೈಯ ಬಿಡಬೇಡ ಮಾರನಯ್ಯ ಅಡಿಗೆರಗುವೆನಯ್ಯ ಕೊಡು ನಿನ್ನ ನಾಮಾವಳಿಯ ದೃಢದೆ ಭಜಿಪೆನಯ್ಯ ಮೃಡನುತಾನೇ ಗೋವಿಂದಯ್ಯ 1 ಕಳೆದ ದುರಿತಾವೃತ ಉಳಿದುದು ವೋವರಾ ಅಳಿವ ಕಾಲವಿದಿನ್ನು ಬಳಲಿಸೋಲುವೆ[ನಯ್ಯ] ಘಳಿಲನೆ ನಿನ್ನ ನಾಮಾವಳಿಯ ಸ್ಮರಣೆಯ 2 ಅನ್ಯರ ಭಜಿಸೆನು ಅನ್ಯರ ನುತಿಸೆನು ಅನ್ಯರಿಗೆರಗೆನು ಅನ್ಯರ [ಪೂಜಿ]ಸೆನು [ಅ ನನ್ಯ ಶರಣನೆ ಮನ್ನಿಸೊ ಶರಣುಬಂದಿಹೆನು] 3 ಕಾವಧೀರನು ಇನ್ನು ಅವನೇ ಶ್ರೀಹರಿ ಸೇವಕರಿಗೆ ನಾನು ಸೇವಕನೆನ್ನುತಾ ಭಾವಿಸೋ ದೇವದೇವಾ ಮಾವಿನಾಕೆರೆರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀ ಕೈಯ ಬಿಡಬೇಡವೋ ನರಹರಿ ಪ ನೀ ಕೈಯ ಬಿಡಬೇಡ ನಾಕೆಟ್ಟರೂ ಬೇಡ ನೀ ಕೊಟ್ಟ ಫಲವಿನ್ನು ಸಾಕೋ ಮಾಂಗಿರಿರಂಗ ಅ.ಪ ನನ್ನ ಕಾಯುವ ಭಾಗ ನಿನ್ನದಾಗಿರಲಯ್ಯ ಇನ್ನಾವುದನು ಕೇಳ್ವುದೆನ್ನ ಭಾವದೊಳಿಲ್ಲ ಸನ್ನುತಾಂಗ ಕೃಷ್ಣ ಪನ್ನಗಶಯನ [ಉನ್ನತದಿ ಸದಾ ಭಜಿಸುವೆನು ನಿನ್ನ] 1 ಆಡುವಾ ನುಡಿಗಳು ನೋಡುವಾ ನೋಟವು ಮಾಡುವ ಕಾರ್ಯವು ನಿನ್ನದಾಗಿರಲು ಮೂಡಿಸು ಮನದಲ್ಲಿ ತವಪಾದಭಕ್ತಿಯ ಜೋಡಿಸಿ ಕೈಗಳ ಮುಗಿವೆನೋ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀಚಮತಿ ಎಲೆ ನೀಚಮತಿ ಊಚನೆನಿಸಿಕೊಂಬ ಯೋಚನೆ ಬಿಡುಕಂಡ್ಯ ಪ ತರಿಯದೆ ಕುಟಿಲತ್ವ ಮರೆಯದೆ ದುಶ್ಚಟ ಧರೆಯ ಭೋಗವ ನೆಚ್ಚಿ ಶರಣರ್ವೇಷÀವÀ ತಾಳಿ ಮರವೆ ಮಾಯದಿ ಬಿದ್ದು ಒರಲುವ ನರರಿಗೆ ಬರಿದೆ ಬೋಧಿಪೆನೆಂಬ ಭ್ರಮೆಯಿಂದ ಫಲವೆ 1 ಮಾಯಮೋಹಿಗಳ ಉಪಾಯದಿ ಕೂಡಿಸಿ ಸೇವಿಸದಾಹಾರ ಸೇವಿಸುತನುದಿನ ಕಾಯಬಲಿಸಿ ಕುಣಿವ ಮಾಯಮೋಹಿಯ ಬರಿ ಬಾಯ ಬ್ರಹ್ಮತ್ಯಬಂಧ ಬಯಲಪ್ಪುದೇನೆಲೆ 2 ಧರಿಸಿದ ಲಾಂಛನ ಅರಿಯದೆ ಮೇಲೆ ನೀ ಬರಿದೆ ಕಾವಿಯನ್ಹೊದ್ದು ಕರದಿ ಕಮಂಡಲ ಧರಿಸಿ ಮರುಳರಿಗೆಲ್ಲ ಪರತತ್ತ್ವವರಿಯಲು ಜರೆಮರಣದು:ಖವು ಪರಹಾರಮೆಂತೆಲೆ 3 ಭವಭವದಲಿ ಬಟ್ಟಬವಣೆಯ ಸ್ಮರಿಸಿದೆ ಭವಗೆಲಿಸುವ ಅನುಭವ ತಿಳಿಯದೆ ಸ ದ್ಭವಿಗಳ ನೆರೆಯಿಸಿ ಕವಿತೆ ಬಿಡಿಸಿ ಬಹು ಸವಿಮಾತ್ಹೇಳಲು ಮೂಲಭವಭೀಜಳಿಯುವುದೆ 4 ತನ್ನ ತನ್ನದುಯೆಂಬ ಭಿನ್ನವಿಲ್ಲದೆಸದಾ ತನ್ನ ಸ್ವರೂಪ ಪರರನ್ನು ಬಗೆದು ನಿತ್ಯ ಸನ್ನುತ ಶ್ರೀರಾಮನುನ್ನತಂಘ್ರಿಗೆ ಪೊಂದಿ ಧನ್ಯರಾಗದೆ ನರಕುನ್ನಿಯೆನಿಸುವರೇನೋ5
--------------
ರಾಮದಾಸರು
ನೀನಲ್ಲದನ್ಯವೆನಗಿಲ್ಲ ನಾರದ ವರದಏನೆಂಬೆ ಸರ್ವರಿಗು ನೀನೆಯಹುದಾದಡೆಯು ಪಧನದ ಬಲವುಳ್ಳವರು ಧರ್ಮಗಳ ಮಾಡುವರುಮನದ ಮೇಧಾವಿಗಳು ಮಂತ್ರಿಸುವರು ತನುವಿನಲಿ ತ್ರಾಣಿಗಳು ತೀರ್ಥಗಳ ಪಡೆಯುವರುಅನುವದಿಸಿ ವೇದಗಳನವರಾಢ್ಯರಹರು 1ತನುವ ದಂಡಿಸಿ ಪೂಜ್ಯ ತನುವಾದರವರ್ಗುಂಟುಧನದ ತ್ಯಾಗದಿ ಮುಂದೆ ದೈನ್ಯ ಹರವುಮನವ ನಿಗ್ರಹಿಸಿದರೆ ಮುಖ್ಯ ಜ್ಞಾನವುಬಹುದುಇನಿತಾದರವರ್ಗಿರುವದೇನುಂಟು ನನಗೆ 2ಇತರ ಮಾತುಗಳಾಡದೀ ವಾಕನೊಳಗಿರಿಸಿಮಿತವಾಗಿ ಸತ್ಯಯುತಮಾಗಿ ನುಡಿಸಿಅತಿದೋಷಗಳು ಹೋಗಿಯವರ್ಗೆ ಮುಂದಣ ಭವದಿವಿತತವಾಹದವಿದ್ಯೆ ವಿವರಿಸಲಿದುಂಟೆ 3ಸತತವೂ ಧನವಿಲ್ಲ ಸಾಧು ಸಮ ತನುವಿಲ್ಲವ್ರತತೀರ್ಥಗಳಲಾಡಿದೊಡಲಿದಲ್ಲಮತಿಯಲ್ಲಿ ನೋಡಿದರೆ ಮಂತ್ರ ಮನನಗಳಿಲ್ಲಸ್ತುತಿ ಮಾಳ್ಪ ಸೂಕ್ತಗಳ ಸೊಲ್ಲು ತಾನಿಲ್ಲ 4ಹಿಂದಾದ ಮುಂದೆ ಬಹ ಹೊಂದಿದೀ ಭವ ಸಹಿತತಂದೆ ಕಣ್ದೆರಪಾಗಿ ತಾ ತೋರಿತುಬಿಂದು ಸಾಧನವಿಲ್ಲದೊಡಲೊಂದು ಲಭಿಸಿರಲುಬಂಧವನು ಬಿಡಿಸುವರೆ ಬಂದೆ ಗುರುವಾಗಿ 5ಪರಮ ಕರುಣಾಸಿಂಧು ಪತಿತ ಪಾವನ ಶೀಲದುರಿತಾಂಧಕಾರಕ್ಕೆ ದಿವಸಕರನುಹರಿ ದೀನವತ್ಸಲನು ಹಾಗನಾಥರ ತಾನುಹೊರೆವನೆಂಬೀ ಮಾತು ಹುಸಿಯಾಗಲಿಲ್ಲ 6ನನ್ನನೀಪರಿಯಲ್ಲಿ ನೋಡಿ ಸಲಹಿದ ಮೇಲೆುನ್ನೇಕೆ ಸಂದೇಹವಿದೆ ಚೋದ್ಯವುಸನ್ನುತನೆ ತಿರುಪತಿಯ ಸ್ವಾಮಿ ವೆಂಕಟರಮಣನಿನ್ನಡಿಯ ಸ್ಮರಣೆಯನು ನನಗಿತ್ತೆಯಾಗಿ 7ಕಂ|| ಭೃಗುವಾರದರ್ಚನೆಯನಿದಭೃಗುಸುತೆ ಸಹ ನೀನು ಕೊಳುತೆ ರಕ್ಷಿಸುಯೆನ್ನಂಹೊಗಲಾರೆನು ಭವಸಿಂಧುವನಿಗಮಾರಾಧಿತನೆ ದೇವ ವೆಂಕಟರಮಣಾಓಂ ಯಜ್ಞ ಭೋಕ್ತ್ರೇ ನಮಃ
--------------
ತಿಮ್ಮಪ್ಪದಾಸರು
ನೀನುಪೇಕ್ಷೆಯ ಮಾಡೆ ಬೇರೆ ಗತಿಯಾರೆನಗೆನಿಗಮಗೋಚರ ಮುಕುಂದ ಪ ಗಾನರಸಲೋಲ ಆಗಮಶೀಲ ಭಕ್ತಪರಿಪಾಲಸನ್ನುತ ಗೋಪಾಲ ಬಾಲ ಅ ಸಿರಿನಲ್ಲ 1 ದಿವಿಜ ಮುನಿವಂದ್ಯ ಅಭಿಮಾನಿ ಎನ್ನನೂ ಸಲಹದೆ - ಬರಿದೆ 2 ಈಶಣತ್ರಯದ ಬಯಲಾಸೆಯಲಿ ಭ್ರಮೆಗೊಂಡುಬೇಸರದಿ ಮನದಿ ನೊಂದುಹೇಸಿಗೆಯ ಸಂಸಾರ ಮಾಯಕ್ಕೆ ಸಿಲುಕಿ ನಾಘಾಸಿ ಪಡಲಾರೆನಿಂದುವಾಸುದೇವನೆ ನಿನ್ನ ಪೊಂದಿ ಬದುಕುವೆನೆಂದುಆಸೆ ಪಡುತಿಹೆನು ಇಂದುದಾಸನೆಂದೆನಿಸಿ ಡಂಗುರ ಹೊಯ್ಸಿ ಬಡದಾದಿಕೇಶವನೆ ಕರುಣಿಸಯ್ಯಾ ಬಂದು3
--------------
ಕನಕದಾಸ
ನೀನೆ ಅನಾಥ ರಕ್ಷಕ ಪ ನಿಖಿಲ ದ್ವೈತ್ಯ ಶಿಕ್ಷಕ ಅ.ಪ ವಿಧಿ ಸೃಷ್ಟಿಯೊಳಿಲ್ಲದ ರೂಪದಿ ದಿತಿ ಸುತನುದರ ಬಗೆದು ಭೇದಿಸಸುರನ ಮೋದದಲಿ ಕರುಳನು ಧರಿಸಿದೆ 1 ಶರಣಸುರರ್ತನಗೆನ್ನುತ ಹರಶರಭಾಕೃತಿಯಂಬತಿ ಘೋರ ಯುದ್ಧದಿ ಧಾರುಣಿಯೊಳಗೆ ಕೆಡಹಿ ತುಳಿದೆ 2 ಅಷ್ಟಮುಖಭೇರುಂಡನೆಂದು ಸೃಷ್ಟಿಯೊಳ್ ಪ್ರಸಿದ್ಧವಾಯ್ತು ದಿಟ್ಟಗುರುರಾಮ ವಿಠ್ಠಲ ಪ್ರಹ್ಲಾದವರದ 3
--------------
ಗುರುರಾಮವಿಠಲ
ನೀನೆ ಕೃಪಾಳು ಶ್ರೀ ಚನ್ನಕೇಶವನೇ ಜ್ಞಾನಿಗಳನ್ನು ಕಾವ ಸನಕವಂದಿತನೆ ಪ ಶರಣರ ಪೊರೆಯುವ ಪ್ರಣವ ಸ್ವರೂಪನೆ ಸ್ಮರಿಸುವ ದಾಸರ ಮರೆಯ ಬೇಡಯ್ಯ ಅ.ಪ. ದೀನರ ಸಲಹುವ ಭಕ್ರವತ್ಸಲನೇ ಮಾನಿನಿ ದ್ರೌಪದಿ ಮಾನ ಕಾಯ್ದವನೇ ಮೌನದಿಂದಲಿ ನಿಂನ ಧ್ಯಾನ ತತ್ವರನಾದೇ ಪನ್ನಗಶಯನನೇ ಸಲಹೊ ಕರುಣದಲೀ1 ಸನ್ನುತ ಹರಿ ನಿಂನ ಕೀರ್ತನೆ ಪಾಡುವೆ ಜಾನ್ಹಕಿ ರಮಣ ಶ್ರೀ ಕಾಕುತ್ಸ್ಥರಾಮಾ ಹೀನನ ಮಾತನ್ನು ನಲಿಯುತ್ತ ಕೇಳಿ ನೀ ಸಾನುರಾಗದಿ ಕಾಯಾ ಧೇನು ಪಾಲಕನೇ2 ಪಂಕಜನೇತ್ರ ಶ್ರೀ ಪರಮ ಪಾವನನೇ ಲಂಕೇಶನಿಗೆ ಯಮನಾದ ಶ್ರೀಧರನೇ ಶಂಕೆಯಿಲ್ಲದೆ ಕಾಯೊ ದೂರ್ವಾಪುರೇಶನೆ ಅಮಿತ ಸದ್ಗುಣಿಯೇ 3
--------------
ಕರ್ಕಿ ಕೇಶವದಾಸ
ನೀರಜನೇತ್ರ ನೀಲಾಂಬುದ ಗಾತ್ರ ವಾರಿಜಸಂಭವ ಸನ್ನುತಿ ಪಾತ್ರ ಪ ನಾರದ ವಂದಿತ ಭೂಸುರ ಗಾತ್ರ ಸೂತ್ರ ಅ.ಪ ಮಂಗಳದಾತಾ ಧನಂಜಯ ಸೂತ್ರ ಅಂಗಜತಾತ ವಿಹಂಗಮ ರುಂದ್ರ ಮಾಂಗಿರಿನಾಥ | ಚರಾಚರ ಭರಿತ ತುಂಗ ಕೃಪಾಯುತ | ಪಾವನ ಚರಿತಾ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀರಜಾಕ್ಷ ರಾಮ ಲೋಕಾಭಿರಾಮ ಪ ನೀರದನಿಭಶ್ಯಾಮ ನಿತ್ಯಮಂಗಳ ನಾಮ ಅ.ಪ. ನಿನ್ನ ಬಿಟ್ಟು ನಾನು ಅನಾಥನು ಸನ್ನುತ ಗುಣರನ್ನ ಸತ್ಕೀರ್ತಿ ಸಂಪನ್ನ 1 ದೇಶಕೊಡೆಯ ನೀನು ದಾಸ ನಿನಗೆ ನಾನು ಕೌಸಲ್ಯವರಪುತ್ರ ಕೋಮಲ ಶುಭಗಾತ್ರÀ 2 ನಿನ್ನ ಸನ್ನಿಧಿವಾಸ ಪುಣ್ಯಫಲವಿಶೇಷ ಘನ್ನ ಕರಿಗಿರೀಶ ಗಂಭೀರ ಗುಣಭೂಷ 3
--------------
ವರಾವಾಣಿರಾಮರಾಯದಾಸರು
ನೀರೇರುಹಾನಯನ | ವಾರನಿಧಿ ನಡುಶಯನತೋರೆನಗೆ ತವ ಚರಣ | ಸುಗುಣ ಗಣ ಪೂರ್ಣ ಪ ಅಮಿತ ಕ್ಲೇಶ ಗೊಳಿಸದಂತೆನೀ ಸಲಹೋ ಎನ್ನ | ಶೇಷಾದ್ರಿ ವಾಸಾ ಪರೇಶಾ1 ಭವ | ಸಂಗದೊಳಗಿರಿಸೀಭಂಗ ಪಡಿಸುವಿ ದೊರೆಯೆ | ಶೃಂಗಾರ ನಿಧಿಯೇ |ಸಂಗ ವಿಷಯದಿ ಹರಿಸಿ ನಿ | ಸ್ಸಂಗನೆಂದೆನಿಸಿಲಿಂಗಾಂಗ ಕಳೆಯೊ ಹರಿ | ರಂಗ ಭವಹಾರಿ2 ಸಾಮಸನ್ನುತ ಚರಣ | ಭೂಮಗುಣಿ ಸುಸ್ತವನಪ್ರೇಮದಲಿ ಗೈವ ಮನ | ನೇಮವೀಯೆಲೊ ವಾಮನ |ಈ ಮಹಾ ಕಲಿಯುಗದಿ | ನಾಮ ನಿಸನ್ನದೆ ಗತಿಯೆಶ್ರೀಮಹೀ ಸೇವಿತನೆ | ರಾಮ ಗುಣಧಾಮ 3 ಭವ | ರೋಗ ವೈದ್ಯನೆ ಎನ್ನರೋಗ ಹರಿಸುವುದರಿದೆ | ಇದು ನಿನ್ನ ಬಿರುದೇ4 ನಿರವದ್ಯ ಆದ್ಯಾಅರುಹಲೇನಿಹುದಿನ್ನು | ಸರ್ವಜ್ಞ ನೀನಿನ್ನು ಒರೆವೆನೆಂಬಪರಾಧ | ಮರೆದು ಪಾಲಿಸು ಶ್ರೀಶ 5
--------------
ಗುರುಗೋವಿಂದವಿಠಲರು
ನೀಲಮೇಘಶ್ಯಾಮಾ ಬಾರೊ ನೀವೊಂದು ಮುತ್ತ ತಾರೋ ಪ. ನೀರಜಾಕ್ಷ ನಲಿದು ಬಾರೊ ನಗೆಮೊಗವನ್ನೆ ತೋರೊ ಅ.ಪ. ನಿನ್ನ ಸಮರ್ಯಾರೊ ಕೃಷ್ಣಾ ಸನ್ನುತಾಂಗ ಓಡಿ ಬಾರೋ ಬೆಣ್ಣೆಕೋಲು ಬೆಂಡು ಬುಗುರಿ ಚಿನ್ನ ರನ್ನ ಕೊಡುವೆ ಬಾರೋ 1 ಮುತ್ತಿನಂಗಿ ಕೊಡಿಸುವೇನೂ ರತ್ನತಿಲಕವಿಡುವೆ ಬಾರೋ ವತ್ತಿ ನಿನ್ನ ಬಾಯೊಳೂದೆ ರತ್ನ ಕೊಳಲ ಕೊಡುವೆ ಬಾರೋ 2 ಸ್ವರ್ಣಮಯೂರಂಗವ ತೋರೊ ನೀಲವರ್ಣಾ ಚಂದ್ರಬಿಂಬ ಬಾರೋ 3 ಭಕ್ತಿ ಸುರಧೇನುಬಾರೊ ಮುಕ್ತಿದಾತ ಶ್ರೀ ಶ್ರೀನಿವಾಸ ಮಾಧವ ಬಾರೋ 4
--------------
ಸರಸ್ವತಿ ಬಾಯಿ
ನೆನೆದು ಬದುಕಿರೋ ಸತತ ನೆನೆದು ಬದುಕಿರೋ ಪ ನೆನೆದು ಬದುಕಿ ಸುಜನರೆಲ್ಲಘನಗುಣಾಂಬುಧಿ ಶ್ರೀಪಾದರಾಯರ ಅ.ಪ ಇತರ ಧ್ಯಾನವೆಲ್ಲವನುಳಿದುಅತಿಶಯದ ವಿರಕ್ತಿ ಬಲಿದುಮತಿ ವಿಶೇಷವೆನಿಪ ಮಧ್ವಮತಾಂಬುನಿಧಿಗೆ ಪೂರ್ಣಚಂದ್ರನ 1 ದುರಿತ ದೂರನಶಮದಮಾದಿ ಗುಣಸಮುದ್ರನ2 ಶುಭ ಚರಿತನ 3 ವಾದಿಕುಂಜರ ಪಂಚಮುಖನಸಾಧು ಸಜ್ಜನ ಕಲ್ಪವೃಕ್ಷನವೇದ ಶಾಸ್ತ್ರ ಪುರಾಣದಲಿಆದಿಶೇಷನ ಪೋಲ್ವ ಮುನಿಯ 4 ಸನ್ನುತ ಪರಮವನಧಿ ಗಂಭೀರ ಶ್ರೀಪಾದರಾಯರ 5
--------------
ವ್ಯಾಸರಾಯರು
ನೆಲಿಗೆ ಬಾರದು ಗುರುವೇ ಮನವಿದು ಪ ಒಳ್ಳೆಯವರಾ ನಡೆ ಕಂಡು | ಎಳ್ಳನಿತು ನಾಚದು | ಖುಳ್ಳರ ಮನದಲ್ಲಿ ಬೆರೆಸುವದು 1 ಚರಟ ಮಾತುಗಳಲ್ಲಿ ಹರುಷವ ಬಡುವರು | ಪರಮ ಸದ್ಭೋಧದಲ್ಲಿ ತೊಳಗುವದು 2 ಏನ ಹೇಳಿದರೇನು ಜ್ಞಾನವ ಕೊಳ್ಳದು | ತಾನೆ ತನ್ನಿಚ್ಛೆಯಲಿ ತಿರುಗುವದು 3 ಸ್ಥಿರವಾಗುವ ಪರಿಯಲಿ ಕರುಣವ ಮಾಡುವುದು | ಸರಣೆ ಸರಪಳಿ ನಿಕ್ಕಿ ನಿಲಿಸುವುದು 4 ಸನ್ನುತ ಮಹಿಪತಿ ಚಿನ್ನನ ಹೊರೆವದು | ಧನ್ಯಗೈಸಲು ಮನವ ತಿದ್ದುವದು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಯ್ಯ ನಿನ್ನ ದಾಸರ ಮೇಲೆ ಕೃಪೆಗಳನುಮಾಡಯ್ಯ ಮನ್ಮನಕೆ ಸಂತಸವನುತೀಡಯ್ಯ ಭವಭಯದ ಪಾತಕಂಗಳ ದಾನವಾಡ ಗುಡ್ಡದ ತಿರುಮಲೇಶ ಸರ್ವೇಶ ಪ ಆದಿಯಲಿ ವೇದಗಳ ಕದ್ದುಕೊಂಡೊಯ್ದವನಸಾಧನಂಗೆಯ್ವೆನೆಂದಾಕ್ಷಣದೊಳುಪೋದನೆಲ್ಲೆನುತ ಶರನಿಧಿಯೊಳಗೆ ಪೊಕ್ಕ ಮ-ತ್ತಾ ದಿತ್ಯನಂ ಕೊಂದು ತಿಕ್ಕಿಮುಕ್ಕೆನೀ ದಯಾ ಪಾತ್ರನೆಂಬುದ ಕೇಳಿ ನಾನರಿತೆಭೂ ಧರೆಯ ಸುರರ ನೀ ಸಲುಹಲಾಗಪೋದ ನಿಗಮಂಗಳನು ತಂದು ಸಲೆ ರಕ್ಷಿಸಿದೆಆದಿ ಮತ್ಸ್ಯವತಾರ ಶರಣೆಂಬೆನು 1 ಮೂರ್ತಿ ನೀನಂದು ಬೇರೆಸುಮತವನು ಬೆನ್ನಲ್ಲಿ ಸಲೆ ಆತು ರಕ್ಷಿಸಿದೆಕಮಠಮೂರುತಿ ನಿನಗೆ ಶರಣೆಂಬೆನು 2 ಚಿನ್ನಗಣ್ಣವನೆಂಬನೊರ್ವ ಖಳ ಭೂದೇವಿಕನ್ನಿಕೆಯನೊಯ್ಯುತಿರೆ ಕನಲಿ ಮನದಿಇನ್ನು ಅವನನು ಸೆಣಸಿ ಜಯಿಸುವವರನು ಕಾಣೆನೆನ್ನುತಲಿ ರೋಮಗಳನುಬ್ಬೆತ್ತುತತನ್ನ ಮುಂಗೋರೆಗಳ ಮಸೆದೊಡನೆ ರಕ್ಕಸನಬೆನ್ನಟ್ಟಿ ಬರಸೆಳೆದು ಸದೆದೊರಗಿಸಿಚೆನ್ನಾಗಿ ಧರಣಿಯನು ತಂದು ಸಲೆ ರಕ್ಷಿಸಿದೆಹನ್ನೆರಡು ಪೆಸರವನೆ ಶರಣೆಂಬೆನು3 ಹೇಮಕಶ್ಯಪನೆಂಬ ನಾಮಜನ ಸುತನೊರ್ವನಾ ಮಹಾಘನವೆಂದು ನೆನೆಯುತಿರಲುತಾಮಸದ ಖಳ ತನ್ನ ತನುಜನನು ಮಥಿಸುತಿರೆರಾಮನನು ತೋರೆಂದು ಬಾಧಿಸುತಿರೆಧೂಮಜ್ವಾಲೆಗಳೊಡನೆ ಭುಗುಭುಗಿಲು ಛಿಟಿಲೆನುತಆ ಮಹಾ ರಕ್ಕಸನ ಪೊಡೆಯ ಸೀಳಿಪ್ರೇಮದಲಿ ಪ್ರಹ್ಲಾದಗೊಲಿದು ಪಟ್ಟವನಿತ್ತೆಸಾಮಜಾರಿಯ ವದನ ಶರಣೆಂಬೆನು 4 ಬಲಿಯಧ್ವರದ ಸಾಲೆಗೊಂದು ವೇಷವನಾಂತುಸಲೆ ಬಂದು ಧರೆಯ ಮೂರಡಿಯ ಬೇಡೆಒಲಿದು ಇತ್ತಪೆನೆನಲು ಧಾರೆಯನೆರೆಯಲಸುರಕುಲಗುರುವು ಜುಳಿಗೆಯೊಳು ತಡೆದು ನಿಲಲುಸಲಿಲ ವರ್ಜಿತ ನಯನನನು ಮಾಡಿ ಆಕಾಶನೆಲವೆರಡು ಪಾದವನ್ನಳೆದ ಬಳಿಕತಲೆ ಮೇಲೆ ಇರಿಸೆನಲು ತಳಕಿಳಿಸಿ ಅವನ ಬಾ-ಗಿಲ ಕಾಯ್ದ ವಾಮನನೆ ಶರಣೆಂಬೆನು 5 ರೇಣುಕೆಯ ಬಸುರಿನಲಿ ಜನಿಸಿ ಪಿತನಾಜ್ಞೆಯನುಮಾಣಬಾರದು ಎಂಬ ಮತವ ಪಿಡಿದುಕ್ಷೂಣವಿಲ್ಲದೆ ತಾಯ ಶಿರವರಿದು ತಂದೆಯನುಪ್ರಾಣಹತ್ಯವ ಮಾಡಿದರ ಕುಲವನುಕ್ಷೋಣಿಗೆರಗಿಸಿ ಕಾರ್ತವೀರ್ಯಾರ್ಜುನನ ಮಡುಹಿಜಾಣತನದಲ್ಲಿ ಭೂದಾನಗಳ ಭೂಸುರರಕಾಣುತಲೆ ಕರೆಕರೆದು ಕೊಟ್ಟೆಯೈ ನೀನು ಪೂಬಾಣಜನಕನೆ ರಾಮ ಶರಣೆಂಬೆನು 6 ಸೀತೆಯನು ಕದ್ದು ಒಯ್ದವನ ಕೊಲ್ಲುವ ಭರದಿಭೂತಳದ ಕಪಿಗಳನು ಕೂಡಿಕೊಂಡುಸೇತುವೆಯ ಕಟ್ಟಿ ಶರನಿಧಿ ದಾಟಿ ಬರಲಾಗಭೂತಗಣ ಸಂತತಿಯು ನಡುನಡುಗುತಿರಲುಚೇತನದ ರಾವಣೇಶ್ವರ ಕುಂಭಕರ್ಣ ಸ-ತ್ತ್ವಾತಿಶಯ ರಕ್ಕಸರ ಇರಿದೊರಗಿಸಿಮಾತು ಲಾಲಿಸಿ ವಿಭೀಷಣಗೆ ಪಟ್ಟವನಿತ್ತದಾತ ರಘುನಾಥನೇ ಶರಣೆಂಬೆನು 7 ಶಕಟ ಕುಕ್ಕುಟ ಧೇನುಕಾಸುರರ ಪೂತನಿಯಬಕ ವತ್ಸಹಕ ವೃಷಾಸುರ ಮುಖ್ಯರಪ್ರಕಟದಿಂದರಿದು ಕರಿಯನು ಸೀಳಿ ತನಗೆ ಸಂ-ಮುಖರಾದ ಮಲ್ಲರನು ಇರಿದೊರಗಿಸಿಮುಕುರ ದಂತ್ಯದ ಹಮ್ರ್ಯದೊಳಗಿಂದ ಕಂಸನಪುಕಪುಕನೆ ತಿವಿದವನನಿರಿದೊರಗಿಸಿಸಕಲವೆಸೆದಿರ್ದ ಮಧುರಾಪುರವ ಉಗ್ರಸೇನಕಗಿತ್ತ ಕೃಷ್ಣನೇ ಶರಣೆಂಬೆನು 8 ಮೂರು ಪುರದಬಲೆಯರ ವ್ರತಗಳನೆ ಕೆಡಿಸಲಿಕೆಬೇರೊಂದು ಅಶ್ವತ್ಥ ವೃಕ್ಷವಾಗಿನಾರಿಯರ ವ್ರತಭಂಗಗೆಯ್ಯಲಾ ದೆಸೆಯಿಂದಊರುತ್ರಯವದು ತಿರುಗುವುದು ನಿಲ್ಲಲಾಗನೀರ ಮಸ್ತಕದಲ್ಲಿ ಧರಿಸಿದನ ಕರವಿಲ್ಲನಾರಿಯೊಳು ನಾರಾಯಣಾಸ್ತ್ರವಾಗಿಘೋರತನವೆತ್ತ ತ್ರಿಪುರದ ಕೀಲ ಪರಿದ ಮದನಾರಿ ಸಖ ಬುದ್ಧನೇ ಶರಣೆಂಬೆನು 9 ಮದವೆತ್ತ ರಕ್ಕಸರು ಮಹಿಯೊಳಗೆ ಹೆಚ್ಚಲುತ್ರಿದಶಾಂತ ನಡನಡನೆ ನಡುಗುತಿರಲುಬೆದರಬೇಡೆನುತ ಅಭಯವನಿತ್ತು ಮುದದಿಂದಸುಧೆಯೊಳಗೆ ಬಂದು ಜನಿಸಿಕುದುರೆವಾಹನನಾಗಿ ಕುಂಭಿನಿಯ ಮೇಲೆ ತನಗಿದಿರಾದ ರಾವುತರನಿರಿದೊರಗಿಸಿಮೊದಲ ಭಾಷೆಯನು ದಿವಜರಿಗಿತ್ತೆ ಬೇಗದಲಿಚದುರ ಕಲ್ಕ್ಯವತಾರ ಶರಣೆಂಬೆನು10 ಇಂತು ದಶ ಅವತಾರಗಳನೆತ್ತಿ ರಕ್ಕಸರಸಂತತಿಯನೊರಸಿ ಭೂಭಾರವಿಳುಹಿಕಂತುಪಿತ ತಿರುವೆಂಗಳೇಶ ತಿರುಮಲೆಯೊಳಗೆಚಿಂತಿಸುವ ಭಕ್ತರನು ಪಾಲಿಸುತಲಿದಂತಿರಾಜನ ಪೊರೆದು ದಾನವಾಡಿಗೆ ಬಂದುನಿಂತಾದಿಕೇಶವನೆ ಶರಣೆಂಬೆನು 11
--------------
ಕನಕದಾಸ