ಒಟ್ಟು 473 ಕಡೆಗಳಲ್ಲಿ , 81 ದಾಸರು , 415 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಶ ವೇದವ್ಯಾಸನಾದನು ಪ ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ಅ.ಪ. ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ 1 ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ- ನಂದ ಬಡಿಸಿ ಪೋಗೆಂದು ಪೇಳೆ ಅಂದು ಸುಯೋಜನಗಂಧಿ ಗರ್ಭದಲ್ಲಿ ನಿಂದವತರಿಸುತ ಪೊಂದಿದ ಅಜ್ಞಾನ ಅಂಧಕಾರವೆಲ್ಲ ಹಿಂದು ಮಾಡಿ ಸುರ- ಸಂದಣಿ ಪಾಲಿಸಿ ನಿಂದ ದೇವ 2 ಕೆಂಜೆಡೆವೊಪ್ಪ ಕೃಷ್ಣಾಜಿನ ಹಾಸಿಕೆ ಕಂಜಾಪ್ತನಂದನದಿ ರಂಜಿಸುವ ಕಾಯ ಮಂಜುಳ ಸುಜ್ಞಾನ ಪುಂಜನು ವಜ್ಜರ- ನಿತ್ಯ ಅಂಜಿದಗೆ ಸಂಜೆಯ ತೋರಿ ಧನಂಜಯ ಶಿಷ್ಯ ನೀ- ಗಂಜದಂತೆ ಕರಕಂಜವ ತಿರುಹಿ ನಿರಂಜನ ಪೇಳಿದ ಕುಂಜರ ವೈರಿಯ ಭಂಜನನು 3 ಗಂಗಾತೀರದಲಿ ಶೃಂಗಾರ ಉಪವ- ನಂಗಳದರೊಳು ಶಿಂಗಗೋಮಾಯು ಭು ಮೂಷಕ ಮಾತಂಗ ಸಾರಮೇಯ ಕೊಂಗಹಂಗ ಸರ್ವಾಂಗ ರೋಮ ಶರಭ ವಿಹಂಗ ಶಾರ್ದೂಲ ಸಾ- ರಂಗ ಕುರಂಗ ಕುಳಿಂಗ ಪಾಳಿಂಗ ಪ್ಲ ವಂಗ ತುರಂಗ ಪತಂಗ ಭೃಂಗಾದಿ ತು- ರಂಗವು ತುಂಬಿರೆ ಮಂಗಳಾಂಗ 4 ಬದರಿ ಬೇಲವು ಕಾದರಿ ಕಾಮರಿ ಮಧುಮದಾವಳಿ ಅದುಭುತ ತೆಂಗು ಕದಳಿ ತಪಸಿ ಮದಕದಂಬ ಚೂ- ತದಾರು ದ್ರಾಕ್ಷಿಯು ಮೃದು ಜಂಬೀರವು ಬಿದಿರು ಖರ್ಜೂರ ಮೋದದಿ ದಾಳಿಂಬ ತುದಿ ಮೊದಲು ಫ ಲದ ನಾನಾವೃಕ್ಷ ಪದಲತೆಯ ಪೊದೆಯು ಫಲ್ಲಸೈ ಇದೆ ಆರು ಋತು ಸದಾನಂದ 5 ವನದ ನಡುವೆ ಮುನಿಗಳೊಡೆಯ ಕಾನನ ಸುತ್ತಲು ಆ- ನನ ತೂಗುತ್ತ ಧ್ವನಿಯೆತ್ತಿ ಬಲು- ಗಾನ ಪಾಡಿದವು ಗುಣದಲ್ಲಿ ಕುಣಿದು ಖಗಾದಿ ಗಣಾನಂದದಿಂದಿರೆ ವನನಿಕರ ಮೆಲ್ಲನೆ ಮಣಿದು ನೆ- ಲನ ಮುಟ್ಟುತಿರೆ ಅನಿಮಿಷರು ನೋ ಡನಿತಚ್ಚರಿಯನು ಪೇಳೆ 6 ಮೌನಿ ನಾರದನು ವೀಣೆ ಕೆಳಗಿಟ್ಟು ಮೌನವಾದನು ಬ್ರಹ್ಮಾಣಿ ತಲೆದೂಗಿ ಗೀರ್ವಾಣ ಗಂಧರ್ವರು ಗಾನ ಮರೆದು ಇದೇನೆನುತ ಮೇನಕೆ ಊರ್ವಸಿ ಜಾಣೀರು ತಮ್ಮಯ ವಾಣಿ ತಗ್ಗಿಸಿ ನರ್ತನೆಯ ನಿಲ್ಲಿಸಿ ದೀನರಾದರು ನಿಧಾನಿಸಿ ಈಕ್ಷಿಸಿ ಎಣಿಸುತ್ತಿದ್ದರು ಶ್ರೀನಾಥನ 7 ನಮೋ ನಮೋಯೆಂದು ಹಸ್ತ- ಕಮಲ ಮುಗಿದು ನಮಗೆ ನಿಮ್ಮಯ ಅಮಲಗುಣ ನಿಗಮದಿಂದೆಣಿಸೆ ಕ್ರಮಗಾಣೆವು ಉತ್ತಮ ದೇವ ಕೂರ್ಮ ಖಗಮೃಗ ಸಮವೆನಿಸಿ ಅ- ಚಮತ್ಕಾರದಲ್ಲಿ ನಾಮಸುಧೆಯಿತ್ತ ರಮೆಯರಸ ಆಗಮನತ8 ಇದನು ಪಠಿಸೆ ಸದಾ ಭಾಗ್ಯವಕ್ಕು ಮದವಳಿ ದಘವುದದಿ ಬತ್ತೋದು ಸಾಧನದಲ್ಲಿಯೆ ಮದುವೆ ಮುಂಜಿ ಬಿಡದಲ್ಲಾಗೋದು ಶುಭದಲ್ಲಿ ಪದೆಪದೆಗೆ ಸಂಪದವಿಗೆ ಜ್ಞಾನ- ನಿಧಿ ಪೆಚ್ಚುವುದು ಹೃದಯ ನಿರ್ಮಲ ಬದರಿನಿವಾಸ ವಿಜಯವಿಠ್ಠಲ ಬದಿಯಲ್ಲೆ ಬಂದೊದಗುವ 9
--------------
ವಿಜಯದಾಸ
ಶ್ರೀಹರಿ ಮೂಜಗದೊಳು ನೀನು ತೇಜವುಳ್ಳವನಾಗಿ ಪ ಕಾಲದಿ ನಿನ್ನಯ ಮೇಲಿಹ ನಿರ್ಮಾಲ್ಯ ಮಾಲೆಯನೆಲ್ಲ ವಿಸರ್ಜಿಸಿ ತೊಳೆದು ನೀಲಮಾಣಿಕ ವಜ್ರಮಯವಾದ ಪೀಠದ ಮೇಲೆ ವಾಲಗವಾಗಿ ಲೀಲೆಯ ತೋರುತ1 ಮೊದಲು ಸಂಕಲ್ಪಿಸಿ ತುಳಸಿ ಶ್ರೀಗಂಧದಿ ಉದಕ ಶುದ್ಧವ ಮಾಡಿ ಅದರೊಳು ಬಳಿಕ ವಿಧಿಸಿಯೆ ಮತ್ತೇಳು ನದಿಯನುಚ್ಚರಿಸಲು ಒದಗಿ ಬಾರೆಲೊ ಕರಚರಣ ಮಜ್ಜನಕೀಗ 2 ಮಾನಸದಘ್ರ್ಯವು ಆಚಮನಗಳು ನಾನಾ ಪಂಚಾಮೃತ ಫಲವಭಿಷೇಕವು ಗಾನ ಸೂಕ್ತಗಳಿಂದ ಮಧುಪರ್ಕಾದಿಗಳು 3 ವಸ್ತ್ರವಾಭರಣವು ಯಜ್ಞಸೂತ್ರವ ತೊಡಿಸಿ ಚಿತ್ರವಾಗಿಹ ಗಂಧ ಅಕ್ಷತೆವಿಡಿಸಿ ಪತ್ರಪುಷ್ಪವು ಶ್ರೀತುಳಸಿ ಮಾಲೆಗಳಿಂದ ಸ್ತೋತ್ರವು ಸಾಹಸ್ರನಾಮಗಳಾಯಿತು 4 ಧೂಪಮಾಧ್ರೂಪಯ ದೀಪದ ದರುಶನವು ಆದಷ್ಟು ಸರ್ವೋಪಚಾರಗಳು ಕದಳಿ ನಾರಿಕೇಳÀವು ಪರಿ ನೈವೇದ್ಯ ದಯಾಪರಮೂರ್ತಿ 5 ಆಗರದೊಳು ಬೆಳೆದ ನಾಗವಲ್ಲಿಯ ದಳ ಪೂಗಿಯಫಲ ಸಹ ನಾಗಶಯನಗಿಟ್ಟು ಬೇಗದಿ ಮಂಗಳ ಪದಗಳ ಹೇಳಿ ಲೇ ಸಾಗಿ ಎತ್ತುವ ಅಮೋಘದಾರತಿಗಳ 6 ಮಾಡಿದ ಪೂಜೆಯ ನೋಡಿ ಕರುಣದಿಂದ ಬೇಡಿದಿಷ್ಟವನೀಯೊ ರೂಢಿಯ ಒಡೆಯ ಪಾಡಿ ಪೊಗಳುವೆ ನಿನ್ನ ಪಂಥ ಬೇಡೆನ್ನೊಳು ಅನುದಿನ ವರಾಹ ತಿಮ್ಮಪ್ಪ 7
--------------
ವರಹತಿಮ್ಮಪ್ಪ
ಶ್ರೀಹರಿಯ ಸ್ತುತಿ ಕಡಲಶಾಯಿ ಪ ರುಧಿರ ಮೂಲ ಸಾಸ್ಥಿಯ ಕಾಯಾ ಒಳ್ಳೆ ಮೃದು ನರ ಜಾಲಗಳ ಸುತ್ತಿಹ ಮೈಯಾ ಅದರೊಳು ನಿನ್ನಾದಿ ಕಾರ್ಯಾ ಮತ್ತೆ ಸದಮಲ ಪ್ರಾಣೇಶ ನಿನಗೆ ತಾ ಸಹಾಯ 1 ಸಂತತ ಹರಿಯ ಕೊಂಡಾಡಿ ಮಧ್ವ ಪಂಥವ ಪಿಡಿದು ದುವ್ರ್ಯಸನವನೀಡಾಡಿ ಕಂತುಪಿತನ ನಾಮಾ ಪಾಡಿ ಎನ್ನ ಚಿಂತೆ ತಾರಕನೆಂದು ನಂಬಿದೆ ಕೂಡಿ 2 ನರದೇಹ ಕೊಡುವವನು ನೀನು ನಿನ್ನ ಮರೆದಧಮದ ಶಾಸನ ಕರ್ತಾ ನಾನು ನರಸಿಂಹವಿಠಲನು ನೀನು ನಿನ್ನ ಕರುಣೆ ತಪ್ಪಿದ ಮೇಲೆ ಜೀವನವೇನು 3
--------------
ನರಸಿಂಹವಿಠಲರು
ಶ್ರೀಹರಿಸ್ತುತಿಗಳು ಇಂದಿರಾಪತಿ ನಂದಕಂದನು ಬಂದ ನೋಡುವ ಬಾ ಪ ಸುಂದರಮಂದರಧರ ಮುಕುಂದನ ಅ.ಪ ನಿರುತಮವನ ಸನ್ನಿಧಿಯಲಿಬೆರೆತು ಪಾಡುವ 1 ಪಾದ ಒದಗಲೆಂದು ನಮಿಸಿನಾವು ಪಾಡಿ ಪೊಗಳುತ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಷಷ್ಠಿಯ ದಿವಸ (ಶ್ರೀ ವೆಂಕಟೇಶನ ಅವಭೃಥ ಸ್ನಾನ) ರಂಭೆ :ಸಖಿಯೆ ಕೇಳೀಗ ಸಲುಗೆವಂತಳೆ ಮುಕುತಿದಾಯಕ ಮೂಲಪುರುಷಗೆ1 ಭೇರಿಶಬ್ದವು ನಗಾರಿಘರ್ಜನೆ ಮೌರಿತಾಳವು ಮೃದಂಗಶಬ್ದವು 2 ಉದಯಕಾಲದಿ ಒದಗಿ ಭಕುತರು ಪದುಮನಾಭನ ಪಾಡಿ ಪೊಗಳ್ವರು3 ಭೂರಿಮಂಗಲಕರದ ಶಬ್ದವು ಸೇರಿ ಕಿವಿಯೊಳು ತೋರುವುದಲ್ಲೆ4 ನಿದ್ದೆಬಾರದು ನಿಮಿಷಮಾತ್ರಕೆ ಎದ್ದು ಪೇಳೆಲೆ ಏಣಲೋಚನೆ5 ಸುಮ್ಮನೀನಿರು ಸುಳಿಯಬೇಡೆಲೆ ಎಮ್ಮುವುದು ನಿದ್ರೆ ಏನ ಪೇಳಲಿ6 ಬೊಮ್ಮಸುರರಿಗು ಪೊಗಳತೀರದು ತಿಮ್ಮರಾಯನ ಮಹಿಮೆ ದೊಡ್ಡಿತು7 ನಿನ್ನೆ ದಿವಸದ ನಿದ್ರೆವಿಹುದೆಲೆ ಕಣ್ಣಿಗಾಲಸ್ಯ ಕಾಂಬುವದಲ್ಲೇ8 ಬಣ್ಣಿಸುವದೆಲೆ ಬಹಳವಿಹುದಲೆ ಪನ್ನಗವೇಣಿ ಪವಡಿಸೆ ನೀನು9 ಏಳು ಏಳಮ್ಮ ಅಲಸ್ಯವ್ಯಾತಕೆ ಕಾಲಿಗೆರಗುವೆ ಹೇಳಬೇಕಮ್ಮ10 ಜಯಜಯ ವಾಧಿಶಯನ ಜಯಜಯ ದೈತ್ಯವಿನಾಶ ಜಯಜಯ ಶ್ರೀನಿವಾಸ1 ಗಂಧಕಸ್ತೂರಿಪುಣುಗಚಂದನಪನ್ನೀರುಗಳ ಹೊಂದಿಸಿ ತೋಷದಿ ಮಂದರಧರಗೆ2 ಆಕಾಶರಾಯನ ಮಗಳು ಹರುಷದಿಂದೊಡಗೂಡಿ ಶ್ರೀಕರ ವೆಂಕಟಪತಿಯು ಸರಸವಾಡಿ3 ಮಾಧವ ಸಹಿತಲಿ ಸಾದರದಿಂದಲಿ ಸರಸವಾಡಿ4 ಬಡನಡು ಬಳುಕುತಲಿ ಎಡಬಲದಲಿ ಸುಳಿದು ಕಡಲೊಡೆಯಗೆ ಲಕ್ಷ್ಮಿ ಚೆಲ್ಲಿದಳಾಗ5 ಛಲದಿ ಪದ್ಮಾವತಿಯು ಜಲಜನಾಭನ ಮೇಲೆ ಒಲವಿನಿಂದಲಿ ಬಂದು ಚೆಲ್ಲಿದಳಾಗ6 ಭರದಿ ಶ್ರೀದೇವಿಯು ಸರಸಿಜಮುಖದಲ್ಲಿ ಪರಮ ಸುಸ್ನೇಹದಿ ಬೆರಸಿದಳಾಗ7 ಭೂದೇವಿ ಭುಲ್ಲವಿಸಿ ಮಾಧವನ ಮುಖದೊಳಗೆ ಮೋದದಿಂದಲಿ ಬಂದು ಚೆಲ್ಲಿದಳಾಗ8 ಸುತ್ತುಮುತ್ತಲು ಇವರ ಆರ್ತಿಯಿಂದಲಿ ಹರಿಯು ವೃತ್ತಕುಚವ ನೋಡಿ ಚೆಲ್ಲಿದನಾಗ 9 ಝಣಝಣಾಕೃತಿಯಿಂದ ಮಿನುಗುವಾಭರಣದ ಧ್ವನಿಯ ತೋರುತ ಬಲು ಸರಸವಾಡಿ10 ಓಕುಳಿಯಾಡಿದ ನೀರಾನೇಕಭಕ್ತರು ಮಿಂದು ಏಕಮಾನಸರಾಗಿ ಪೊರಟರು ಕಾಣೆ11 * * * ಆಡಿದರೋಕುಳಿಯ ಶರಣರೆಲ ಆಡಿದರೋಕುಳಿಯಪ. ಕಾಡುವ ಪಾಪವ ಓಜಿಸಿ ಹರಿಯೊಳ- ಗಾಡಿ ನಿತ್ಯಸುಖ ಬೀಡಿನ ಮಧ್ಯದಿ1 ಅಬ್ಬರದಿಂದಲಿ ಉಬ್ಬಿ ಸಂತೋಷದಿ ಒಬ್ಬರ ಮೈಗಿನ್ನೊಬ್ಬರು ಚೆಲ್ಲುತ 2 ಚೆಂಡು ಬುಗರಿನೀರುಂಡೆಗಳಿಂದಲಿ ಹಿಂಡು ಕೂಡಿ ಮುಂಕೊಂಡು ಪಿಡಿಯುವರು3 ಸುತ್ತುಮುತ್ತ ಒತ್ತೊತ್ತಿ ಮುತ್ತಿ ಜಲ- ವೆತ್ತಿ ಚಿತ್ತತನುನೆತ್ತಿಗೆ ಸೂಸುತ್ತ4 ರಂಭೆ : ನಾರಿ ಕೇಳೀಗ ಭೂರಿಭಕುತರು ಶ್ರೀರಮಾಧವ ಸಹಿತ ಬಂದರು1 ಭಾವ ಶ್ರೀಹರಿ ಪ್ರತಿರೂಪದೋರುತ ದೇವ ತಾನೆ ನಿದ್ರ್ವಂದ್ವನೆನ್ನುತ 2 ಹೇಮಖಚಿತವಾದಂದಣವೇರಿ ಪ್ರೇಮಿಯಾಗುತ ಪೊರಟು ಬರುವನು 3 ವಲ್ಲಭೆಯರ ಕೂಡಿ ಈ ದಿನ ಫುಲ್ಲನಾಭನು ಪೊರಟನೆತ್ತಲು4 ಊರ್ವಶಿ : ನಾರಿ ನೀ ಕೇಳಿದರಿಂದ ಈಗ ಭೂರಿಭಕುತರಾನಂದ ಶ್ರೀರಮಾಧವ ಮಿಂದ ನೀರಿನೊಳಾಡುತ್ತ ಓರಂತೆ ತುಳಸಿಮಾಲೆಯ ಧರಿಸುತ್ತ ಭೇರಿಡಂಕನಗಾರಿಶಬ್ದ ಗಂ- ಭೀರದೆಸಕವ ತೋರಿಸುತ್ತ ವೈ- ಯಾರದಿಂದಲಿ ರಾಮವಾರ್ಧಿಯ ತೀರದೆಡೆಗೆಲೆ ಸಾರಿ ಬಂದರು1 ವರದಭಿಷೇಕವ ರಚಿಸಿ ಬಕು- ತರ ಸ್ನಾನವನನುಕರಿಸಿ ಭರದಿಂದ ಪೂಜಾಸತ್ಕಾರ ಸೇವೆ ಕೈಗೊಂಡು ತ್ವರಿತದಿ ನಗರಾಂತರಕನುವಾದನು ಬರುತ ದಿವ್ಯಾರತಿಗೊಳ್ಳುತ ಚರಣ ಸೇರಿದ ಭಕ್ತರಿಷ್ಟವ ನಿರುತ ಪಾಲಿಸಿ ಮೆರೆವ ಕರುಣಾ- ಕರ ಮನೋಹರ ಗರುಡವಾಹನ2 ರಂಭೆ : ಸರಸಿಜಾನನೆ ಈ ಸೊಲ್ಲ ಲಾಲಿಸೆ ಕರವ ಮುಗಿಯುತ್ತಕೈಯ ತೋರುತ1 ಪರಮಪುರುಷ ಗೋವಿಂದ ಎನುತಲಿ ಹೊರಳುತುರಳುತ ಬರುವದೇನಿದು2 ಊರ್ವಶಿ :ಅಂಗದಾಯಾಸವೆಲ್ಲವನು ಪರಿ- ಭಂಗಿಪ ಸೇವೆಯೆಂಬುದನು ಅಂಗಜಪಿತಚರಣಂಗಳ ರಜದಲಿ1 ಹೊಂಗಿ ಧರಿಸಿ ಲೋಟಾಂಗಣ ಎಂಬರು ರಂಗನಾಥನ ಸೇವೆಗೈದ ಜ- ನಂಗಳಿಗೆ ಭಯವಿಲ್ಲವದರಿಂ- ದಂಗವಿಪ ಲೋಲೋಪ್ತಿ ಕೋಲಾ- ಟಂಗಳನು ನೀ ನೋಡು ಸುಮನದಿ2 ಕೋಲು ಕೋಲೆನ್ನಿರೊ ರನ್ನದ ಕೋಲು ಕೋಲೆನ್ನಿರೊಪ. ಪಾಲಾಬ್ಧಿಶಯನ ನಮ್ಮಾಲಯಕೆದ್ದು ಬಂದ ಲೀಲೆಗಳಿಂದ ಜನಜಾಲಗಳೆಲ್ಲರು1 ಗುಂಗಾಡಿತಮನನ್ನು ಕೊಂದು ವೇದವ ತಂದು ಬಂಗಾರದೊಡಲನಿಗಿಟ್ಟನು ನಮ್ಮ ದೇವ2 ಅಡ್ಡಿಮಾಡದೆ ಸುರವಡ್ಡಿಗೆ ಸುಧೆಯಿತ್ತು ಗುಡ್ಡೆಯ ಬೆನ್ನಿಲಿ ಧರಿಸಿದ ನಮ್ಮ ದೇವ3 ರೂಢಿಯ ಕದ್ದನ ಓಡಿಸಿ ತನ್ನಯ ದಾಡೆಯಿಂದಲೆ ಸೀಳ್ದ ಕಾಡವರಾಹನಮ್ಮ4 ಸಿಂಗನ ರೂಪತಾಳಿ ಹೊಂಗಿ ಕಂಬದಿ ಬಂದು ಬಂಗಾರಕಶ್ಯಪುವಂಗವ ಕೆಡಹಿದ5 ಗಿಡ್ಡನಾಗುತ ಕೈಯೊಡ್ಡಿ ದಾನಕೆ ಮನ- ಸಡ್ಡಿಮಾಡದೆ ಮೇಣು ದೊಡ್ಡವನಾದನಮ್ಮ6 ಕಾಮಧೇನುವಿಗಾಗಿ ಕಾರ್ತವೀರ್ಯನ ಕೊಂದು ಭೂಮಿಯ ಬುಧರಿಗೆ ಪ್ರೇಮದಿನಿತ್ತನಮ್ಮ7
--------------
ತುಪಾಕಿ ವೆಂಕಟರಮಣಾಚಾರ್ಯ
ಸಂತರ ನೋಡಿರೈ ಅನಂತನ ಪಾಡಿರೈ | ತಂತುವಿಡಿದು ನಿಶ್ಚಂತದಿ ಮುಕ್ತಿಯ | ಪಡೆದವರಾ ನಿಂದವರಾ ಪ ದ್ವಿತಿಯೋ ಭಾಗೀರಥಿಯೋ | ಹರಿಪ್ರಸಾದವಕೊಂಬುವ ಸಂತರ | ಉದರೋ ಶ್ರೀ ಕೇದಾರೋ | ಹೃದಯೋ ವೇದದ್ಭುಧವೋ | ಕಂಠೋ ಭೂವೈಕುಂಠೋ ಮ 1 ಕರವೋ ಕಾಶಿಪುರವೋ | ವರವೋ ರಾಮೇಶ್ವರವೋ | ಕಿವಿಯೋ ಶಾಸ್ತ್ರದ ಗವಿಯೋ | ಅಮೃತ ಸದನೋ 2 ಹರಿಪದಧ್ಯಾಯಿಸಿ ನೋಡುವ ಸಂತರ | ನಯನೋ ಸ್ವಸುಖದಯನೋ | ಹರಿನಿರ್ಮಾಲ್ಯವನಾಘ್ರಾಣಿಪನಾ | ಶಿಕವೋ ಆವಂತಿಕವೋ | ಧರೆಯೊಳು ಮತ್ತೊಂದನ್ಯಕ ಯರಗದ | ಹಣಿಯೋ ಮುತ್ತಿನ ಮಣಿಯೋ | ಶಿರವೋ ಕಂಚಿಪುರವೋ 3 ಪರರುಪಕಾರ ಬಾಳುವ ಸಂತರ | ಇರವೋ ಕಲ್ಪತರುವೋ | ಧರೆಯೊಳು ಮಾಡುವ ಸಂತರ ವ್ಯವಹಾ | ರಗಳೋ ಹರಿಶೇವೆಗಳೋ | ನುಡಿಯೋಭವದಿಕ್ಕೆಡಿಯೋ | ಹರಿಪ್ರೇಮದಿ ತುಳಕ್ಯಾಡುವ ಜಲಬಿಂ | ದುಗಳೋ ಭಕ್ತಿಯ ಮುಗಳೋ 4 ನುಡಿಯೋ ಸದ್ಗತಿಯಡಿಯೋ | ಭ್ರಮವಿಷಯಕ ಹಚ್ಚದೆ ಕುಂದದಲಿಹ | ಮನವೋ ನಂದನವನವೋ | ಕಮಲಾಕ್ಷನು ಸಂತರ ಆಜ್ಞಾ | ಧಾರಕನೋ ನೆರೆಪಾಲಕನೋ | ಕ್ರಮವರುಹಿದ ಗುರುಮಹಿಪತಿ ನಂದನ | ಪ್ರಿಯನೋ ಕರುಣಾಲಯನೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸದ್ದು ಮಾಡಲು ಬೇಡವೋ-ನಿನ್ನ ಕಾಲಿಗೆಬಿದ್ದು ನಾ ಬೇಡಿಕೊಂಬೆ ಪ ನಿದ್ದೆಗೆಯ್ಯುವರೆಲ್ಲ ಎದ್ದರೆ ನೀನು ಬಂದಿದ್ದದ್ದು ಕಂಡರೇನೆಂಬುವರೋ ರಂಗಅ.ಪ. ಬಳೆ ಘಲ್ಲುಕೆನ್ನದೇನೋ-ಕೈಯ ಪಿಡಿದುಎಳೆಯದಿರೋ ಸುಮ್ಮನೆಮೊಲೆಗಳ ಮೇಲಿನ ಸೆರೆಗನೆಳೆಯಲು ಕೊ-ರಳ ಪದಕಗಳು ಧ್ವನಿಗೆಯ್ಯುವವೊ ರಂಗ 1 ನಿರುಗೆಯ ಪಿಡಿಯದಿರೊ-ಕಾಂಚಿಯ ದಾಮಕಿರುಗಂಟೆ ಧ್ವನಿಗೆಯ್ಯದೆಕಿರುದುಟಿಗಳ ನೀನು ಸವಿದು ಚಪ್ಪರಿಸಲುತರವಲ್ಲ ಗಂಡ ಮತ್ಸರವ ತಾಳುವನಲ್ಲ 2 ನಾಡಮಾತುಗಳೇತಕೊ-ಸಂಗೀತವಪಾಡುವ ಸಮಯವೇನೊಗಾಡಿಕಾರ ಶ್ರೀ ರಂಗವಿಠಲನಪಾಡಿಪಂಥಗಳೊಡಗೂಡುವ ಸಮಯದಿ 3
--------------
ಶ್ರೀಪಾದರಾಜರು
ಸದ್ಭಾವದಿಂದ ಗುರುವೇ ಗುರುವೆಂದು ಬಾಗಿ ಸದ್ಭಕ್ತನಾಗಿ ಮರಿಯಾ ಮರಿಯಾದೆ ಹೋಗಿ ಸದ್ಭೋಧಸಾರ ಗರವಾ ಗರವಾಮೃತಾದಾ ಚಿದ್ಭಾನುದೋರಿ ಹೊರೆವಾ ಹರಿವಾಭವಾಂಧಾ 1 ಗುರುಪಾದ ಕಾಣದನಕಾದನ ಕಾವನಾಗೀ ಮರದೆನ್ನ ತನ್ನದೆನುತಾದೆನುತಾಂನರಾಗಿ ಅರಿತೀಗ ಮಾಡಿ ಗುರುತಾಗುರು ತಾತನಂಘ್ರಿ ಪರಮಾರ್ಥವಸ್ತು ವರ ದೇವರ ದೇಶಸಾರಿ 2 ಗುರುಮಾರ್ಗ ಬಿಟ್ಟು ಬರುದೇ ಬರುದೇನೊ ಪ್ರಾಣಿ ಅರತೇನುಶಾಸ್ತ್ರ ಪರಮಾಪರಮಾರ್ಥಗಣೀ ಇಂದು 3 ಗುರುಹಸ್ತಮಸ್ತಕದಲೀ ಕದಲೀತೆ ಕ್ಲೇಶಾ ದೊರವನು ಹೃತ್ಕಮಲದಾಮಲದಾತ್ಮ ಈಶಾ ಗುರುಮಿತ್ರ ಮಾತೃ ಜಕನಕಾಜನಕಾರ್ತಬಂಧು ಶರಣ್ಹೋಕ್ಕು ನೋಡಿ ಸುಖವಾ ಸುಖವಾಗದೆಂದು4 ಇರುತಿಪ್ಪನೆಲ್ಲಿ ಗುರುತಾ ಗುರುತಾದ ಕಾಶೀ ನೆರೆಗಂಗಿ ಪಾದತೀರ್ಥತೀರಥಾಧರಾಶಿ ಗುರು ವಿಶ್ವನಾಥನೆನುವಾನೆನುವಾವನೆಲ್ಲಿ ನರರೋಳು ಧನ್ಯ ತಮನುತ್ತ ಮನೊರ್ವಿಯಲ್ಲಿ5 ಕಾಣದೆ ಕಂಗಳಲಿತಾ ಲಲಿತಾದ ನೋಟಾ ಜಾಣೀಸಿ ಕೋಟಿ ತರಣೀ ತರುಣೀಯ ಕೂಟಾ ಕಾಣೀಸಿ ಉನ್ನಮನೆಯಾ ಮನಿಯಾವೆ ನೋಡಿ ಪ್ರಾಣವಕಾವ ಗುರುವೀ ಗುರುವೀನ ಪಾಡಿ 6 ಮನಮುಟ್ಟಿಮುದ್ರಿ ಸಲಿತಾಸತಿತಾಳಭೇರಿ ಅನುಹಾತ ಘೋಷಶ್ರವಣಾಶ್ರವಣಕ್ಕೆ ಬೀರಿ ತನುಭಾವವನ್ನು ಮರಸೀ ಮೆರಸೀದನೆಂದು ನೆನಿಬೇಕು ಸದ್ಗುರುವಿನಾರೂವ್ಹಿನಾಗತಂದು 7 ಗುರುಮೂರ್ತಿಗೆಂದನರನೇ ನರನೇವನವನು ಗುರುಭಕ್ತಿ ಗಳ್ಳಕುಶಲಾಕುಶಲಾದವನು ಗುರುನಾಮ ಕೂಗದವನೈದುವನೇ ಗತಿಯಾ ಗುರುಪಾದಪೂಜಿಮರತಾ ಮರತಾವನೀಯಾ 8 ಗುರುಅಷ್ಟಕದ ಮಹಿಮಾ ಮಹಿಮಗೇಬಲಾ ಸ್ಮರಿಸೀದನ್ನು ಭಕುತೀಭಕುತೀವದೆಲ್ಲಾ ಗುರು ಮಹೀಪತಿ ಕರುಣಾ ಕರುಣ ನುಪಾಡೀ ಕರಕೊಂಡುಜ್ಞಾನಸುಧೆಯಾ ಸುಧಿಯಾದೆ ನೋಡಿ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂಪ್ರದಾಯದ ಹಾಡು ವೆಂಕಟೇಶನ ಉರುಟಣೆಯ ಹಾಡು ಭಾರ್ಗವಿ ರಮಣಾ | ಜಗದಾಭಿ ರಮಣಾ ಪ ಲೋಕನಾಯಕ ಸ್ವಾಮಿ | ವೈಕುಂಠಾದಿಂದ ಬಂದೂಏಕಾಂತವಾನಾಡಿದಾ | ಲಕ್ಷೀಯರೊಡನೆ 1 ಧರೆಗೆ ವೈಕುಂಠಾದ | ಚರ್ಯವ ತೋರುವೆನೆಂದುಶಿರಿ ಮಹಾಲಕ್ಷೀಯೊಡನೆ | ಸಂಧಿಸಿದಾನೂ 2 ಸ್ವಾಮಿ ಕಾಸಾರದಲೀ | ಧಾಮಾವ ರಚಿಸೂವೆಆ ಮಹಾ ವೈಕುಂಠಾವ | ಅಗಲೀ ಬಂದೂ 3 ವತ್ಸರ ಕಾಲದಲೊಂದು | ಉತ್ಸವ ಮಾಡುವೆನೆಂದುಇಚ್ಛೆ ಮಾಡಿದನೂ ವೆಂಕಟ ಇಂದಿರೆಗೂಡಿ 4 ನವರಾತ್ರಿ ದಿವಸದಲೀ | ವಿವಾಹ ಲಗ್ನವ ರಚಿಸೀಅವನಿಯೊಳು ಡಂಗುರವನ್ನು ಹೊಯಿಸೀದ ಸ್ವಾಮೀ 5 ಕಾಶಿ ಕರ್ನಾಟಕದ | ದೇಶಾ ದೇಶದ ಜನರುಶ್ರೀಶಾನುತ್ಸವಕೇ ಜನರು ಒದಗೀದರಾಗಾ 6 ಹದಿನಾಲ್ಕು ಲೋಕಾದ | ಪದುಮಜಾದಿಗಳೆಲ್ಲಾ ಮದುವೆಯಾ ದಿಬ್ಬಣದಾ | ಜನರು ಬಂದರಾಗಾ 7 ಗರುಡಾ ಕಂಬದ ಸುತ್ತಾ | ಪರಿಪರಿ ವೈಭವದಿಂದಗಿರಿಯಾ ವೆಂಕಟಗೇ | ಕಂಕಣ ಕಟ್ಟಿದರಾಗಾ 8 ಆಗಮಾ ಪುರಾಣ | ರಾಗ ಮದ್ದಳೆ ತಾಳಭಾಗವತರೂ ಸುತ್ತ ಮಾಡುತಿರಲೂ 9 ತಾಳ ತಮ್ಮಟೆ ಕಾಳೆ | ಭೋರೆಂಬೋ ವಾದ್ಯಗಳೂವರ ನಾರಿಯರು ಸುತ್ತಾಗ್ಹಾಡುತಿರಲೂ 10 ಚಿನ್ನದ ಕರಿಮಣಿ | ರನ್ನ ಮಂಗಳಸೂತ್ರಹಿರಿಯಾ ವೆಂಕಟನೂ ಲಕ್ಷ್ಮೀಗೆ ಕಟ್ಟಿದ ನಗುತಾ 11 ಮುತ್ತಿನಾ ಕರಿಮಣಿ | ರತ್ನ ಮಂಗಳಸೂತ್ರಾಸ್ವಾಮಿ ವೆಂಕಟ ಲಕ್ಷ್ಮೀಗೆ ಕಟ್ಟಿದ ನಗುತಾ 12 ಅಂತರಾ ಮಾರ್ಗದೊಳೂ | ನಿಂತು ದೇವತೆಗಾಳು ಸಂತೋಷದಿಂದಲಿ ಜಯ ಜಯವೆಂದು ಪಾಡಿದರಾಗ 13 ಅಂಗಾನೆ ಶ್ರೀ ಭೂಮಿ | ರಂಗಾಮಂಟಪದೊಳಗೆಬಂಗಾರ ಗಿರಿಯಾ ವೆಂಕಟ ಒಪ್ಪಿದ ಸ್ವಾಮೀ 14 ಅತಿರಸಾ ಮನೋಹರ | ಮಿತಿಯಿಲ್ಲದ ಪದಾರ್ಥಗಳೂಸತಿಯರೆಲ್ಲರು ಭೂಮಕೆ ತಂದು ಬಡಿಸಿದರಾಗ 15 ಬೆರದ ನಾರಿಯರೆಲ್ಲ | ಹರಿಭೂಮಾ ನಂತರದೀಭರದಿ ಉರುಟಣಿಗೆ ಅಣಿ ಮಾಡಿದರಾಗಾ 16 ಮಿತ್ರೆ ಲಕ್ಷ್ಮೀಗೆ ತಕ್ಕ | ಹಿರಿಯರು ಪೇಳಲುಛಂದದಿಂದಲಿ ಅರಿಷಿನ ಕಲಸಿ ನಿಂತಳಾಗ 17 ಪನ್ನಗ ನಗವಾ | ಸೇರಿದ ಮಹರಾಯದುಡ್ಡು ದುಡ್ಡಿಗೆ ಬಡ್ಡಿಯನ್ನು ದುಡಿವಾ ಲೋಭಿ 18 ವಂಚಿಸಿ ಜನರನ್ನು | ಲಂಚಾ ಲಾವಣಿ ತೆಗೆದುಹಿಂಚಾಸಿ ವರ ಕೊಡುವಾ ಹಿತದಾ ದೇವಾ 19 ಬಡವಾ ಬಲ್ಲಿದರೆಂದು | ಬಿಡದಾಲೆ ಅವರಿಂದಮುಡುಪು ಹಾಕಿಸಿಕೊಂಡು (ಮುಂದಕೆ) ಬಿಡುವೋ ದೇವಾ 20 ಅನ್ನವೆಲ್ಲವ ಮಾರಿ | ಹೊನ್ನು ಕಟ್ಟುವೆಯಲ್ಲೊಅನ್ನದಾನವ ಮಾಡಲೊಲ್ಲಿ ಅನ್ಯಾಕಾರಿ 21 ಹೊನ್ನು ಸಾಲವ ತೆಗೆದು | ಎನ್ನಾ ಕಟ್ಟಿಕೊಂಡುಮನೆ ಮನೆಗೆ ಭಿಕ್ಷವ ಬೇಡುವ ಮಾನವಂತಾ 22 ಹೊನ್ನು ಸಾಲದು ಎಂದು | ಎನ್ನ ಸಾಕುವೆ ಹೇಗೋನಿನ್ನಾ ಕೃಪಣತನಕೆ ನಾನು ಎಣೆಗಾಣೆನೋ 23 ಇಪ್ಪತ್ತು ದುಡ್ಡೀಗೆ | ಸೇರು ತೀರ್ಥವ ಮಾರಿದುಡ್ಡು ಕಟ್ಟಿ ಜಾಳಿಗೆ ಗಳಿಸುವ ಜಾಣ ನೀನೂ 24 ಅಟ್ಟಾ ಮಡಿಕೆಯಲ್ಲಾ | ಕುಟ್ಟಿ ನಾಮವ ಮಾಡಿಗಟ್ಟಿಯಾಗಿ ಗಂಟು ಗಳಿಸುವ ಘನವಂತಾ 25 ದೇಶದೊಳು ನಿಮ್ಮಂಥಾ | ಆಸೆ ಉಳ್ಳವರಿಲ್ಲಕಾಸು ಕಟ್ಟಿ ಕವಡೆ ಗಂಟು ದುಡಿವ ಲೋಭಿ 26 ಮಡದಿ ನಾನಿರಲಿಕ್ಕೆ | ಕಡಿಮೆ ಏನಾಗೋದುಬಡತನ ನಿನಗೆ ಯಾತಕೆ ಬಂತೂ ಸ್ವಾಮೀ 27 ನಾರೀಯಾ ನುಡಿ ಕೇಳಿ | ವಾರೆ ನೋಟದಿ ನೋಡಿಮೋರೆ ತಗ್ಗಿಸಿ ವೆಂಕಟ ಮುನಿದು ನಿಂತಾ 28 ಕಡುಕೋಪಾ ಮಾಡುವರೆ | ಹುಡುಗನಂತಾಡುವರೆಕೊಡಲೀಯ ಪಿಡಿವಾರೆ ನಾನು ನುಡಿದಾ ನುಡಿಗೇ 29 ಕಣ್ಣಾನೆ ಬಿಡಬ್ಯಾಡ | ಬೆನ್ನ ತೋರಲಿ ಬ್ಯಾಡಾಇನ್ನು ಮುಖವಾ | ತಗ್ಗಿಸಬ್ಯಾಡ ಇತ್ತ ನೋಡೂ 30 ಎನ್ನರಸಾ ಹೊನ್ನರಸಾ | ಚೆನ್ನಿಗ ವೆಂಕಟರಾಯಾನಿನ್ನ ಪೋಲುವರ್ಯಾರೊ | ಜಗದೊಳು ನೀಲಗಾತ್ರಾ 31 ಎನ್ನರಸಾ ಚೆನ್ನರಸಾ | ಚೆನ್ನಿಗ ವೆಂಕಟರಮಣಾನಿನ್ನ ಮುದ್ದು ಮುಖವ ತೋರೊ ಅರಿಷಿಣ ಹಚ್ಚೇನು 31 ಎನ್ನುತ ಅರಿಷಿಣ | ಹಚ್ಚಿ ಕುಂಕುಮವಿಟ್ಟುರನ್ನ ಹಾರವ ಹಾಕಿ ತಾನು ಕುಳಿತಾಳಾಗ 33 ಮಂದರಧರ ತಾನೂ | ಛಂದದರಿಶಿನ ಪಿಡಿದೂಇಂದಿರಾದೇವಿಯನ್ನು ಮಾತನಾಡಿಸಿದಾ 34 ಎನ್ನರಸಿ ಹೊನ್ನರಸಿ | ಚೆನ್ನಿಗ ಮಾಯಾದೇವಿನಿನ್ನ ಮುದ್ದು ಮೊಗವಾನೆ ತೋರು ಅರಿಷಿನ ಹಚ್ಚೇನು 35 ಭಿಡೆಯಾ ನೋಡದೆ ಇಂಥಾ | ನುಡಿಗಳಾಡಿದ ಮ್ಯಾಲೆನಡುಗಿ ಮೋರೆಯ ತಗ್ಗಿಸಲಿಹುದೆ ನಾಚಿಕೆ ಯಾಕೆ 36 ಭಾಗ್ಯಾದ ಮೊಬ್ಬಿಲಿ | ಬಾಗಿ ನೀ ನಡೆಯಾದೇಅಗ್ಗಳಿಕೆ ಮಾತುಗಳನ್ನು ಆಡಿದೆಯಲ್ಲೇ 37 ಮಿಂಚಿನಂದದಿ ಬಹಳಾ | ಚಂಚಲ ಬುದ್ಧ್ಯವಳೇವಂಚಿಸೂವಳೆ ಜಗವಾ ವಾರಿಜಾಕ್ಷೀ 38 ಬಂಗಾರಾ ಮುಡುಪಿಗೆ | ಎನ್ನ ಕಂಗೊಳಿಸೀಗಾ ಹಿಂಗಾದೆ ಮಂಕು ಮಾನವರ ಮಾಡುವುದರಿದೇ 39 ಕಂಚುಕ ವೆಂಕಟ ಬಿಗಿದಾ ನಗುತಾ 40 ತಾಂಬೂಲವನೆ ಮೆದ್ದು | ಮಡದಿಯಾ ಮುಖ ಸೂಸೆಇಂಬೀಲ್ಹಚ್ಚೆ ಬರೆದರಾಗ ಅತಿ ಸಂಭ್ರಮದೀ 41 ತಿರುಮಲೇಶನು ತನ್ನ | ಮಡದೀಯನು ಎತ್ತಿಭರದಿಂದಾ ತನ್ನರಮನೆಗಾಗಿ ತೆರಳಿದಾನು 42 ದ್ವಾರದಾದಡಿಯಲ್ಲಿ | ನಾರೇರೆಲ್ಲರು ನಿಂತುವಾರಿಜಾಕ್ಷಿ ಪತಿಯ ಹೆಸರಾ ಹೇಳೆಂದರು 43 ಕಿರುನಗೆಯಿಂದ ಲಕ್ಷ್ಮೀ | ಗಿರಿಯಾ ವೆಂಕಟನೆನಲೂಹರಿಯೆ ನಿನ್ನ ರಮಣಿ ಹೆಸರಾ ಹೇಳೆಂದರೂ 44 ಜಾತಿ ನಾಚಿಕೆ ತೊರೆದು | ಶ್ರೀ ತರುಣಿ ಎನುತಾಲೆಪ್ರೀತಿಯಿಂದಲಿ ಸಿಂಹಾಸನದಿ ಕುಳಿತರಾಗಾ 45 ಮತ್ತೆ ನಾರಿಯರೆಲ್ಲಾ | ಮುತ್ತಿನಾರತಿ ಪಿಡಿದೂಸತ್ಯಾಭಾಮೆಗೆ ಜಯ ಜಯವೆಂದರಾಗ 46 ವಿಭುವಿನ ಗುಣವನ್ನು ವಿಸ್ತರ ಪೇಳಿದ ಜನಕೆಸಮಯದಂಥ ಭಾಗ್ಯವನಿತ್ತು ಸಲಹುವ ಸ್ವಾಮಿ 47 ಮಂಗಳ ವೆಂಕಟರಾಯಾ | ಮಂಗಳ ಮಾಧವರಾಯಾಮಂಗಳ ಮಾನಸಗೇಯಾ | ಮಂಗಳ ಮಾಧವರಾಯಾ 48 ಧರೆಯೊಳಧಿಕನಾದ | ದೊರೆ ವ್ಯಾಸವಿಠಲಾನುಪರಮ ಭಕ್ತಿ ಸುಜ್ಞಾನವನು ಪಾಲಿಸೂವಾ 49
--------------
ವ್ಯಾಸವಿಠ್ಠಲರು
ಸಂಪ್ರದಾಯದ ಹಾಡುಗಳು (ಗುರುವಾರದ ಶುಭದಿನದಂದು) ಅಂಗಿರಾವುತನನ್ನು ನೋಡಿರೊ ನಿತ್ಯ ಮಂಗಳ ಮಹಿಮೆಯ ಪಾಡಿರೊ ಪ. ಗುರುವಾಸರ ಬಂದು ಒದಗಲು ನಾನಾ ಪರಿಯ ಪುಷ್ಪಗಳ ತಂದಿರಿಸಲು ದೊರೆಯು ಗೌರಾಂಗಿಯ ಧರಿಸಲು ನೋಡೆ ದುರಿತ ರಾಶಿಗಳ ಪರಿಹರಿಸಲು 1 ಶಂಖ ಚಕ್ರ ಗದಾಬ್ಜ ಗದೆಗಳನು ನಿಃ- ಶಂಕೆಯಿಂದ ಧರಿಸಿರುವನು ಮಂಕು ಮನುಜರಿಗೆ ದೊರಕುವಾ- ತಂಕಗಳೆಲ್ಲ ಪರಿಹರಿಪನಾ 2 ಇಂದಿರೆಯನು ಮೋಹಗೊಳಿಸುವ ಪೂರ್ಣಾ ನಂದ ವೆಂಕಟರಾಜನಿರುತಿಹ ಚಂದವ ನೆನೆವುತ್ತ ಸ್ತುತಿಸುವ ಭವ ಬಂಧಗಳೆಲ್ಲ ಕತ್ತರಿಸುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಂಪ್ರದಾಯದ ಹಾಡುಗಳು ಆರತಿಯೆತ್ತಿರೆ ನಾರಿಯರೆಲ್ಲರು ಶಾರದದೇವಿಗೆ ಭೂರಿಸಂಭ್ರಮದೆ ಪ. ಬೊಮ್ಮನ ರಾಣಿಯ ನೆಮ್ಮಿಭಜಿಸುವ ಸುಮ್ಮಾನದಿಂ ಪರಬೊಮ್ಮನ ಪಾಡುವ 1 ಕರಗಳ ಜೋಡಿಸಿ ಶಿರವನು ಬಾಗಿಸಿ ಸರಸತಿಗೊಂದಿಸಿ ಪರಮನ ಧ್ಯಾನಿಸಿ 2 ಪರಮೇಷ್ಟಿದಯಿತೆಗೆ ವರಗುಣಭರಿತೆಗೆ ಸುರಮುನಿ ಮಾತೆಗೆ ಶರಣಸಂಪ್ರೀತೆಗೆ 3 ಪಾಡಿರಿ ಗುಣಗಳ ಮೂಡಿದ ಭಕ್ತಿಯಿಂ ನೋಡಿರಿ ದೇವಿಯ ಬೇಡಿರಿ ವರಮಂ 4 ವರಶೇಷಗಿರೀಶನ ಹಿರಿಯಸೊಸೆಗಿಂದು ಮರಕತದಾರತಿ ಹರುಷದಿಂದೆತ್ತಿ 5
--------------
ನಂಜನಗೂಡು ತಿರುಮಲಾಂಬಾ
ಸಮೀರನ ಮಹಿಮೆ ಪೇಳುವೆವಾಸುದೇವ ವಿಧೀರ ಮುಖಸುರರಾಶಿತಸ್ತ್ರೀ ಮುನಿಯತೀಶ ಸು-ದಾಸರಭಿ ನಮಿಪೆ ಪ ವಾರಿಧಿಯನು ದಾಟುಲೋಸುಗಶ್ರೀ ರಮೇಶನ ನಮಿಸಿ ಗಿರಿಯನುಚಾರು ಚರಣದಿ ಮೆಚ್ಚಿ ಮೇಲಕೆ ಹಾರಿದನು ಹನುಮಾ 1 ಹರಿಯ ಬಲವನು ಸರಿಸಿ ಪೋದುವುತರುಗಳಬ್ಧಿಯು ಯಾದಸಂಗಳುಶರಧಿ ತಳಗತ ಕಪಿಯಗೋಸುಗಗಿರಿಯು ಎದ್ದಿಹನು 2 ಧರಣಿಧರ ಪಕ ನಾಶ ಕಾಲದಿಮರುತ ರಕ್ಷಿತ ಪಕ್ಷ ಹೈಮನುಶರಧಿ ಭೇದಿಸಿ ಹನುಮ ವಿಹೃತಿಗೆತ್ವರದಿ ಬಂದಿಹನು 3 ಪರಮ ಪೌರುಷ ಬ ಲನು ಕಪಿವರಚರಿಸದಲೆ ವಿಶ್ರಮವನದರೊಳುಹರುಷದಿಂದಪ್ಯವನ ಕಂಡನುಉರಗ ಮಾತೆಯನು 4 ಸುರಸೆಯೆಂಬುವ ನಾಗಮಾತೆಗೆವರವ ನೀಡುತ ಕಪಿಯ ಬಲವನುಅರಿಯಲೋಸುಗ ಕಳುಹಿಸೀದರುಸುರರು ಶರಧಿಯಲಿ 5 ಯಾವ ವಸ್ತುವ ತಿನ್ನೋ ಇಚ್ಛೆಯು ೀವಿ ನಿನಗಾಗುವದೊ ಅದು ತವಬಾಯಿಗನ್ನಾಗಿರಲಿ ಎಂದರುದೇವತೋತ್ತುಮರು 6 ಸುರರ ವರವನು ಕಾಯೊಗೋಸುಗಸುರಸೆ ಮುಖದೊಳು ಹೊಕ್ಕು ಹೊರಡುತಪರಮಮಣು ರೂಪದಲಿ ದಿವಿಜರಹರುಷ ಬಡಿಸಿದನು 7 ಅಸುವರಾತ್ಮಜನುರು ಪರಾಕ್ರಮಹೃಷಿತರಾಗುತ ನೋಡಿ ದಿವಿಜರುಕುಸುಮವೃಷ್ಟಿಯ ಮಾಡುತವನಲಿಯಶಸು ಪಾಡಿದರು 8 ಛಾಯಾ ಪ್ರಾಣಿಗಳನ್ನು ಹಿಡಿಯುವಮಾಯಾ ಸಿಂಹಕೆ ನಾಮ ಕಸುರಿಯವಾಯುಸುತ ನೋಡಿದನು ಎದುರೆ ವಿಹಾಯ ಮಾರ್ಗದಲಿ 9 ವಿಧಿಯು ಲಂಕೆಯ ಕಾಯಲೋಸುಗಸುತಿಗ್ವರಗಳನಿತ್ತು ಕಾದಿಹಾಮದದಿ ಅಸುರಿಯು ತನ್ನ ಛಾಯವವದಗಿ ಪಿಡಿದಿಹಳು 10 ಆಗ ಆಕೆಯ ಪೊಕ್ಕು ಪೊಟ್ಟೆಯಯೋಗದಿಂದಲಿ ಪಾವಮಾನಿಯುಬೇಗ ಬಂದನು ಹೊರಗೆ ತತ್ತನುಭಾಗ ಮಾಡುತಲೆ 11 ಆತ್ಮಬಲವಮಿತೆಂದು ತೋರಿವಿಧಾತೃ ವರವುಳ್ಳವಳ ಕೊಲ್ಲುತವಾತನಂತೆ ತ್ರಿಕೂಟ ಪರ್ವತಕೀತ ಹಾರಿದನು 12 ಬೆಕ್ಕಿನಂದದಿ ಹನುಮ ತನ್ನಯಚಿಕ್ಕ ರೂಪವ ಮಾಡಿ ಲಂಕೆಯಪೊಕ್ಕು ನಿಶಿಯಲಿ ಮಧ್ಯಮಾರ್ಗದಿರಕ್ಕಸಿಯ ಕಂಡಾ 13 ಬಟ್ಟಿಯಲಿ ಬಂದಡ್ಡಗಟ್ಟುವದುಷ್ಟ ರಾಕ್ಷಸೀಯನ್ನು ಗೆಲ್ಲುತಮುಷ್ಟಿಯಿಂದಲಿ ಹೊಡೆದು ಲಂಕಾಪಟ್ಟಣವ ಪೊಕ್ಕಾ 14 ಪುರದ ಹೊರಗೊಳಗ್ಹೊಕ್ಕು ರಾಮನತರುಳೆ ಕಾಣದೆ ಹನುಮ ಶಿಂಶುಪತರುನ ಮೂಲದಿ ಕಂಡ ಸೀತೆಯಉರುತರಾಕೃತಿಯಾ 15 ನರಜನಂಗಳ ಮೋಹ ಮಾಡುವಪರಮ ಪುರುಷನ ಚೇಷ್ಟೆಗಳನನುಸರಿಸಿ ನಡೆಯುವ ದೇವಿ ಚರಿಯನುಸರಿಸಿ ಚೇಷ್ಟಿಸಿದಾ 16 ರಾಮನಿಂದಲಿ ಅಂಗುಲಿಯನುಪ್ರೇಮದಿಂದಲಿ ಕೇಸರಿಯ ಸುತಾಭೂಮಿ ಜಾತೆಗೆ ಕೊಟ್ಟು ಸುಖಿಸಿದಾನಾಮ ಹದ್ದನದಿ 17 ರುಚಿ ನೀಡಿದವು ರಾವಣನ್ಹರಣ ಕಾಲದಲಿ 18 ಧರಣಿದೇವಿಯ ಸುತೆಯ ತನ್ನಯಪರಮ ಚೂಡಾಮಣಿಯನಿತ್ತಳುಗುರುತು ತೋರಿಸು ರಾಮದೇವಗೆಮರುತಾ ಸುತನೆಂದು 19 ಸೀತೆ ಹನುಮರದೀ ವಿಡಂಬನಯಾತು ಧಾನರಿಗಲ್ಲಾ ನಾಕಗಭೂತ ವಿಡಂಬನ ಧೈತ್ಯವಂಚನಹೇತು ಆಗುವದು 20 ಇಂಥ ಕಾರ್ಯವ ಮಾಡಿ ತನ್ನಯಾನಂಥ ಪೌರುಷ ಪ್ರಕಟ ಮಾಡುವದಿಂತು ಮನವನು ಮಾಡಿದನು ಮತಿವಂತ ವಾನರನು 21 ಚಾರು ಶಿಂಶುಪ ಬಿಟ್ಟು ರಾಕ್ಷಸವಾರ ವಳಿಸುವ ಮನದಿ ಹನುಮನುಭೂರಿವನವನು ಮುರಿದು ಲಂಕೆಯತೋರಣೇರಿದನು 22 ಭೃತ್ಯ ಜನರಿಗೆಕಟ್ಟಿ ಹಾಕಿರಿ ಕಪಿಯನೆಂದನುರುಷ್ಟನಾಗುತಲೆ 23 ಹರನ ವರದಲಿ ಮರಣ ವರ್ಜಿತಸರವ ಭೃತ್ಯರು ರಾಕ್ಷಸೇಶನಮರುತ ಸೂನುನ ಮೇಲೆ ಬಂದರುಪರಮ ವೇಗದಲಿ 24 ಹತ್ತು ಒಂದು ಕೋಟಿ ಯೂಥವತತ್ಸಮಾನ ಪುರಃ ಸರಾನ್ವಿತಎತ್ತಿ ಆಯುಧ ಸೈನ್ಯ ಹನುಮನಸುತ್ತಿಕೊಂಡಿಹುದು 25 ಹಿಡಿದು ಕರದಲಿ ಆಯುಧಂಗಳಹೊಡೆವ ಸೈನ್ಯವ ನೋಡಿ ಹನುಮನುಹೊಡೆದು ಕರತಳದಿಂದಲೆಲ್ಲರಪುಡಿಯ ಮಾಡಿದನು 26 ನೀಲಕಂಠನ ವರಗಿರಿಪ್ರಭಏಳುಮಂದಿಯ ಮಂದಿ ಪುತ್ರರಕಾಲಿನಿಂದಲಿ ಒದ್ದು ಕೆಡಹಿದನಾಳು ಮಾಧವನಾ 27 ಧುರದಿ ಮುಂಭಾಗದಲಿ ಪೋಗುವಗರುವ ಮಾಡುವ ರಾಕ್ಷಸಂಗಳಮುರಿದು ಸೈನ್ಯದ ತೃತೀಯ ಭಾಗವಹರಿಯು ಕೊಂದಿಹನು 28 ಪೋರ ಬಲವನು ಕೇಳಿ ಹನುಮನಚಾರ ಮುಖದಲಿ ಸ್ವಾತ್ಮ ಸದೃಶರುಮಾರ ಕಾಕ್ಷಾಭಿಧನ ಕಳುಹಿದ ವೀರ ರಾವಣನು 29 ಉತ್ತುಮಾಸ್ತ್ರಗಳಿಂದ ಮಂತ್ರಿತವೆತ್ತಿ ಬಾಣಗಳ್ಹೊಡೆದು ಹನುಮನಕೆತ್ತಿ ಹಾಕಲು ಅಕ್ಷ ಸಾಲದೆಶಕ್ತಿ ನಿಂತಿಹನು 30 ಮಂಡ ಮಧ್ಯೆಯ ತನಯ ಅಕ್ಷನುಪುಂಡ ರಾವಣ ಸಮನು ಸೈನ್ಯದಹಿಂಡಿನೊಳು ತೃತೀಯಾಂಶ ಯಂದುದ್ದಂಡ ಚಿಂತಿಸಿದಾ 31 ಹತ್ತು ತಲೆಯವನನ್ನೆ ಕೊಲ್ಲುವದುತ್ತಮಾತ್ಮವು ಆದರೀತನುತುತ್ತು ರಾಮಗೆ ಕಾರಣಿಂಥಾಕೃತ್ಯ ಥರವಲ್ಲಾ 32 ಇಂದ್ರಜಿತನನು ನಾನು ಈಗಲೆಕೊಂದು ಹಾಕಿದರಿವನ ಕೃತಿಗಳಛಂದ ನೋಡುವುದಿಲ್ಲಾ ಕಪಿಗಳವೃಂದ ಯುದ್ಧದಲಿ 33 ತತ್ಸಮಾಗಿಹ ಮೂರನೆಯವನ್ಹತ್ಯೆ ಮಾಡುವೆನೆಂದು ಹನುಮನುಚಿತ್ತದಲಿ ಚಿಂತಿಸುತ ತತ್ವದ ವೆತ್ತಿ ಹಾರಿದನು 34 ತಿರುಹಿ ಚಕ್ರದ ತೆರನೆ ರಾಕ್ಷಸರರಸೀನಾತ್ಮಜನನ್ನು ಕ್ಷಣದಲಿಧರಿಯ ಮೇಲಪ್ಪಳಿಸಿ ಒಗೆದನುಮರುತನಾತ್ಮಜನು 35 ಹನುಮನಿಂದಲಿ ತನ್ನ ಕುವರನುಹನನ ಪೊಂದಲು ನೋಡಿ ರಾವಣಮನದಿ ಶೋಕಿಸುತಾತನಣ್ಣನರಣಕೆ ಕಳುಹಿದನು36 ಇಂದ್ರಜಿತು ಪರಮಾಸ್ತ್ರಯುತ ಶರವೃಂದದಲಿ ಹೊಡೆದು ಹನುಮನಹಿಂದಕಟ್ಟಲು ಶಕ್ತಿ ಸಾಲದೆನಿಂದು ಚಿಂತಿಸಿದಾ 37 ಸರವ ದುಃಸಹವಾದ ಬ್ರಹ್ಮನಪರಮಮಸ್ತ್ರವ ಬಿಡಲು ರಾವಣಿಹರಿಯು ವ್ಯಾಕುಲನಾಗದಲೆ ಈಪರಿಯ ಚಿಂತಿಸಿದಾ 38 ವಾಣಿನಾಥನ ಎಷ್ಟೊ ವರಗಳನಾನು ಮೀರಿದೆ ದುಷ್ಟ ಜನದಲಿಮಾನಿನೀಯನು ಕಾರಣಾತನಮಾನ ಮಾಡುವೆನು 39 ದುಷ್ಟ ರಾಕ್ಷಸರೆಲ್ಲ ಎನ್ನನುಕಟ್ಟಿ ಮಾಡುವದೇನು ಪುರಿವಳಗಿಷ್ಟು ಪೋಗಲು ರಾಕ್ಷಸೇಶನಭೆಟ್ಟಿಯಾಗುವದು 40 ಹೀಗೆ ಚಿಂತಿಸಿ ಹನುಮನಸ್ತ್ರಕೆಬಾಗಿ ನಿಲ್ಲಲು ಅನ್ಯ ಪಾಶಗಳಾಗೆ ಬಿಗಿದರು ಬ್ರಹ್ಮನಸ್ತ್ರವುಸಾಗಿತಾಕ್ಷಣದಿ 41 ಕಟ್ಟಿ ಕಪಿಯನು ರಾಕ್ಷಸೇಶನ ಭೆಟ್ಟಿಗೊಯ್ಯಲು ಆತನೀತನದೃಷ್ಟಿಯಿಂದಲೆ ನೋಡಿ ಪ್ರಶವನೆಷ್ಟೊ ಮಾಡಿದನು 42 ಕಪಿಯೆ ನೀನು ಕುತೋಸಿ ಕಸ್ಯವಾಕೃತಿಯ ಮಾಡಿದಿ ಯಾತಕೀಪರಿಕಿತವ ಕೇಳಲು ರಾಮನೊಂದಿಸಿ ಚತುರ ನುಡಿದಿಹನು 43 ಹೀನ ರಾವಣ ತಿಳಿಯೇ ಎನ್ನನು ಮಾನವೇಶ್ವರ ರಾಮದೂತನುಹಾನಿಮಾಡಲು ನಿನ್ನ ಕುಲವನುನಾನು ಬಂದಿಹೆನು 44 ಜಾನಕೀಯನು ರಾಮದೇವಗೆಮಾನದಿಂದಲಿ ಕೊಡದೆ ಹೋದರೆಹಾನಿ ಪೊಂದುವಿ ಕೇಳೊ ನೀ ನಿಜಮಾನವರ ನೀ ಕೂಡಿ 45 ಶಕ್ತರಾಗರು ಸರ್ವ ದಿವಿಜರುಮತ್ರ್ಯನಾತನ ಬಾಣ ಧರಿಸಲುಎತ್ತೋ ನಿನಗಿವಗಿನ್ನು ಧರಿಸಲುಹತ್ತು ತಲೆಯವನೆ 46 ಸಿಟ್ಟು ಬಂದರೆ ಆತನೆದುರಿಲಿಘಟ್ಟಿನಿಲ್ಲುವನಾವ ರಾಕ್ಷಸಇಷ್ಟು ಸುರದಾನವರೊಳಾತನದೃಷ್ಟಿಸಲು ಕಾಣೆ 47 ಇಂಥಾ ಮಾತನು ಕೇಳುತಾತನಅಂತ ಮಾಡಿರಿಯನ್ನೆ ವಿಭೀಷಣಶಾಂತ ಮಾಡಲು ಪುಚ್ಛ ದಹಿಸಿರಿಯಂತ ನುಡಿದಿಹನು 48 ಅರಿವೆಯಿಂದಲಿ ಸುತ್ತಿ ಬಾಲಕೆಉರಿಯನ್ಹಚ್ಚಲು ಯಾತುಧಾನರುಮರುತ ಮಿತ್ರನು ಸುಡದೆ ಹನುಮಗೆಹರುಷ ನೀಡಿದನು 49 ಯಾತುಧಾನರು ಮಾಡಿದಂಥಪಘಾತವೆಲ್ಲವ ಸಹನ ಮಾಡಿದವಾತಪೋತನು ಲಂಕೆ ದಹಿಸುವಕೌತುಕಾತ್ಮದಲಿ 50 ತನ್ನ ತೇಜದಿ ವಿಶ್ವಕರ್ಮಜಘನ್ನಪುರಿಯನು ಸುಟ್ಟು ಬಾಲಗವನ್ಹಿಯಿಂದಲೆ ಸರ್ವತಃ ಕಪಿಧನ್ಯ ಚರಿಸುತಲೆ 51 ಹೇಮರತ್ನಗಳಿಂದ ನಿರ್ಮಿಸಿದಾಮಹಾ ಪುರಿಯನ್ನು ರಾಕ್ಷಸಸ್ತೋಮದಿಂದಲಿ ಸಹಿತ ಸುಟ್ಟುಸುಧಾಮ ಗರ್ಜಿಸಿದಾ 52 ಹನುಮಸಾತ್ಮಜ ರಾಕ್ಷಶೇಶನತೃಣ ಸಮಾನವ ಮಾಡಿ ನೋಡಲುದನುಜರೆಲ್ಲರ ಭಸ್ಮ ಮಾಡುತಕ್ಷಣದಿ ಹಾರಿದನು 53 ಕಡಲ ದಾಟುತ ಕಪಿಗಳಿಂದಲಿಧಡದಿ ಪೂಜಿತನಾಗಿ ಮಧುವನುಕುಡಿದು ರವಿಜನ ವನದಿ ರಾಘವನಡಿಗೆ ಬಂದಿಹನು 54 ಸೀತೆ ನೀಡಿದ ಚೂಡಾರತ್ನವನಾಥನಂಘ್ರಿಯೊಳಿತ್ತು ಸರ್ವಶಗಾತ್ರದಿಂದಲಿ ನಮಿಸಿ ರಾಮಗೆಶಾತ ನೀಡಿದನು 55 ರಾಮನಾದರು ಇವಗೆ ನೀಡುವಕಾಮ ನೋಡದೆ ಭಕ್ತಿಭರಿತಗೆಪ್ರೇಮದಿಂದಲಿ ಅಪ್ಪಿಕೊಂಡನುಶ್ರೀ ಮನೋಹರನು 56 ಇಂದಿರೇಶನೆ ಎನ್ನ ಚಿತ್ತದಿನಿಂದುಮಾಡಿದ ನೀಸುಕವನವನಿಂದು ಭಕ್ತಿಲಿ ತತ್ಪುದಾಂಬುಜದ್ವಂದ್ವಕರ್ಪಿಸುವೆ 57 ಇತಿ ಶ್ರೀ ಸುಂದರ ಕಾಂಡಃ ಸಮಾಪ್ತಃ (ಪ್ರಾಕೃತ)ಶ್ರೀ ಗುರುವರದ ಇಂದಿರೇಶಾರ್ಪಣಮಸ್ತು ನೋಡುವೆನು ನೋಡುವೆನು ತೋರಿಸುನಿಮ್ಮ ನೋಡುವೆ ಪ ನೋಡುವೆ ಮಾಡು ದಯ ಎನ್ನೊಳುರೂಢಿಯೊಳಗೆ ನಿಮ್ಮ ಪಾಡುತ ಮಹಿಮೆ ಅ.ಪ. ಮದನ ಜನಕನೊಳು ಕದನ ಮಾಡಿದ ದು-ರ್ಯೋಧನನ ಶಿರದೊಳಿಟ್ಟ ಪದುಮ ಪಾದಗಳನು 1 ನೂರುಗಾವುದ ಜಲ ಹಾರುವಾಗಲೆ ದಿವ್ಯಭೂರುಹ ಕೆಡದಿಹ ಊರುಗಳನ್ನು ಸ್ವಾಮಿ 2 ಕೆಟ್ಟ ಬಕನ ಕೊಂದು ಅಷ್ಟು ಅನ್ನವನುಂಡಹೊಟ್ಟಿ ನೋಡುವೆ ದಿವ್ಯ ದೃಷ್ಟಿ ನೀಡಿರಿ ಸ್ವಾಮಿ 3 ಭೂಮಿ ಸುತೆಯ ವಾರ್ತೆ ರಾಮನು ಕೇಳಿದಾಪ್ರೇಮಾಲಿಂಗನವಿತ್ತ ಆ ಮಹಾವುರವನ್ನೆ 4 ಮದಗಜಗಳ ಕೂಡ ಕದನ ಮಾಡಿದ ದಿವ್ಯಗದೆಯ ಪಿಡಿದ ಕರವದು ಮಗಳನು ಸ್ವಾಮಿ 5 ಅಜಗರ ನಹುಷನ ವಿಜಯ ಸಹೋದರ ಪದುಮನಾಭನ ಗುಣಮುದದಿ ಸಾರುತ ದೈತ್ಯ ಕದನಗೆಳೆದ ನಿನ್ನ ವದನಕಮಲವನ್ನು 6 ವೇದ ಶಾಸ್ತ್ರಗಳನ್ನು ಓದಿ ಹೇಳುತ ಶಿಷ್ಯಮೋದಗರೆವ ನಿನ್ನ ವಾಣಿ ಸ್ವಾದು ಕೇಳುವೆ ನಿನ್ನ 7 ಇಂದಿರೇಶನ ದಯದಿಂದ ಗೆಲಿದಿ ಇಪ್ಪ-ತ್ತೊಂದು ಮತವ ಆನಂದ ತೀರ್ಥರೆ ನಿಮ್ಮ 8
--------------
ಇಂದಿರೇಶರು
ಸರಸಿಜಾಕ್ಷಿಯರೆಲ್ಲ ಹರುಷದಿ ಬೆಳಗಿರೆಕರ್ಮಾಭಿಮಾನಿ ಪುಷ್ಕರನಿಗಾರುತಿಯಾ ಪ ಮಾಡಿದ ಕರ್ಮವ ನೀಡಿ ಹರಿಗೆ ಅಂಗಗೂಡು ತೊಪ್ಪಿಸೋ ನಿನ್ನ ಪಾಡಿ ಪೊಗಳುವೆ 1 ನಿತ್ಯ ಮಾಡುತ ಹರಿಇಚ್ಛಿತ ಕರ್ಮವ ಪಠ್ಯ ಸಾಧಿಸಿದೆ 2 ಏಸು ಜನುಮದಿ ನಾನು ಮೋಸ ಹೋದೆನೊ ಇಂದಿ-ರೇಶಗರ್ಪಿಸೋ ಕೃಪಾಧೀಶ ಮರಿಯದೆ 3
--------------
ಇಂದಿರೇಶರು
ಸಲಹೊ ನಿನ್ನವನೀತನೆಂದೆಲ್ಲ ಕಾಲ ಹೃತ್ಕಮಲದಲ್ಲಿ ನಿಲ್ಲೋ ಪ ಸೊಲ್ಲುಸೊಲ್ಲಿಗೆ ಶ್ರೀ ವೇಣುಗೋಪಾಲನೆಂದೆಲ್ಲ ಕಾಲದಿ ನುಡಿಸೊ ನಲಿಸೊಅ.ಪ ಕರಣತ್ರಯಗಳಿಂದ ಮಾಡಿದ ಕಾರ್ಯವು ಕರುಣಾಕರ ನಿನ್ನದೊ ಕರಣನಿಯಾಮಕ ನೀನಲ್ಲದಿಲ್ಲವೊ ಕರುಣಿಸೋ ಸತತ ಶ್ರೀಹರಿಗುರುಭಕುತಿಯ 1 ಪಂಚಭೇದ ತಾರತಮ್ಯ ತಿಳಿದು ಜ್ಞಾನ ಪಂಚಕಗಳಿಂದಲಿ ಪಂಚಾತ್ಮಕ ವಿ- ರಿಂಚಿ ಪವನರೊಳು ನಿರ್ವಂಚನೆ ಭಕುತಿಯಾ ಕಿಂಚಿತ್ತಾದರು ಕೆಡದೆ 2 ಮಾ ಕಳತ್ರನೆ ನಿನ್ನ ಅ- ನೇಕ ಮಹಿಮನೆಂದು ಏಕಮನಸಿನಿಂದ- ಅ ನೇಕ ಕಾಲವು ಪಾಡಿ ದಾಸನೆಂದೆನಿಸಿ ಸ್ವೀಕರಿಸುವುದು ಈಗ ಶ್ರೀ ವೇಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು
ಸಾಗಿ ಬಾರೋ ಲೇಸಾಗಿ ಬಾರೋ ಘನತ್ಯಾಗಿ ಬಾರೋ ಬಾಗಿ ನಮಿಪೆ ಜಗನ್ನಾಥಾರ್ಯ ರಥವೇರಿ ಪ ಜಂಭಾರಿ ಕುಜದಂತೆ ಹಂಬಲವನ್ನು ತುಂಬಿಕೊಂಡಿರುವಂಥ | ಗುರುಕರು ಣಾಂಬುಧಿ ಸ್ತಂಭದಿ ಪೊರೆಮಟ್ಟು ಸಂಭ್ರಮದಿ 1 ಭಾಗವತರು ಮುಂಭಾಗದಲಿ | ಕುಣಿಯುತಲಿ ರಾಗಾಲಾಪಗಳಿಂದ ಹರಿನಾಮ ಪಾಡುತಲಿ ಪಥ ಕಾಯುವರು 2 ಪೊಡವಿ ಸುರರ ಕೂಡಿ ಎಡಬಲದಿ ಸಡಗರದಿ ಬಿಡದೆ ವೇದಂಗಳ ಪಠಿಸುತ ಭಕ್ತಿಯಲಿ ಒಡೆಯ ನಿನ್ನಾಗಮನ ನೋಡುವರು | ಗತಿ ಬೇಡುವರು 3 ಪಾಡಿ ಪೊಗಳುವರ ಕಾಯುವ | ಮೂಢರನು ಓಡಿಸುವಲ್ಲಿ ನಿನಗೀಡ್ಯಾರೋ ರೂಢಿಯೊಳು ನೋಡಿ ದಯದಿಂದ ನೀ ನೋಡಿ ಗುರುರಾಯ 4 ಭೂಮಿ ವಿಬುಧರಿಗೆ ನೀ ಮಾಡಿದುಪಕಾರ ನಾ ಮರೆಯಲಾರೆನು ಎಂದೆಂದು | ಗುರುರಾಯ ನಾ ಮರೆಯ ಲಾರೆನು ಎಂದೆಂದು ಜಗದೊಳಗೆ ಶಾಮಸುಂದರನ ಪ್ರಿಯದಾಸ | ರಥವೇರಿ 5
--------------
ಶಾಮಸುಂದರ ವಿಠಲ