ಒಟ್ಟು 2922 ಕಡೆಗಳಲ್ಲಿ , 121 ದಾಸರು , 2167 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥಾ ಪಾವನ ಪಾದವೋ ಕೃಷ್ಣಯ್ಯಾ ಇ-ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ 3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ5 ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ 5
--------------
ವಾದಿರಾಜ
ಎಂಥಾ ಬಾಲಕನಿವನು ಎಷ್ಟೆಂದ್ಹೇಳಲಿ ನಾನು ಪಂಥಗಾರಿಕೆಯಂಗ ಪರಮ ಪುರುಷರಂಗ ಅಂತವ ತಿಳಿಗುಡನು ಗೋಪೆಮ್ಮಾ ಪ ನೋಟಾವೇಟದಿ ನಲುವಾ ನಡೆಯಾಲೊಲ್ಲದೆ ನಿಲುವಾ ಸ್ಫೋಟ ಹೃದಯವಾಗುವ ಪರಿಯಂಜಿಸುವ ಮಗು ನೀಟ ಘಾತಪಾತಕನಮ್ಮಾಗೋಪೆಮ್ಮ ನಿತ್ಯ ಬೆಣ್ಣೆಯ ಸವಿದು ಕಾಟಕಾರವೆ ಭಂಡಾ ತುರುಗಾವರೋಳು ಪುಂಡಾ ಆಟಕೆ ಗುಣವೇನ ಗೋಪೆಮ್ಮಾ 1 ನಯ ಮಾತಿಲಿ ಬರುವಾ ನೋಡಲು ಕಠಿಣಿರುವಾ ತಾಯಡಬಲ ನೋಡಾ ತರುಣಿಯರನ ಬಿಡಾ ಬಾಯಾದೆರೆದು ಬೇಡವಾ ಗೋಪೆಮ್ಮಾ ತಾಯಿಂಗಂಜನು ನಿನಗೆ ತಡೆದುರೋಗವ ಹೊರಗೆ ಮಾಯಾಗಾರನೆ ಗೋವಾ ಮತಿಯ ಕಡುವನಿವ ಸಾಯಸ ಕಲಿಯಮ್ಮ ಗೋಪೆಮ್ಮಾ 2 ಇದರೇರಿ ಚಿನ್ನವರಾ ಇಕ್ಕಿ ಅಂಗವ ತೋರಾ ಕಾಲ ಕೆದರಿ ಪೊರೆವ ಬಾಲಾ ಅದ್ಭುತ ವಿಕ್ರಮನೆ ಗೋಪೆಮ್ಮಾ ಉದ ಧಿಗಂಜನು ಧುಮುಕಿ ಉಲುವಾ ಬುದ್ದಿಯ ಸೊಕಿ ಮುದದಿ ವಾಜಿರಿಸೇ ಮಹಿಪತಿಸುತ ಪ್ರಭು ಬುಧ ಜನರೊಲುವಂತೆ ಗೋಪೆಮ್ಮಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾದ್ದು ರಾಮನ ರೂಪಿನ್ನೆಂಥಾದ್ದು ಪ ಎಂಥಾದ್ದು ಶ್ರೀರಾಮನ ರೂಪಾ ನಿಂತು ಭಜಿಪತ್ಯಾನಂದಗೊಳಿಪಾ ಸಂತ ಕುಮುದ ಮಿತ್ರನು ತಾನೆನಿಪಾ ಆಹಾ ಚಿಂತಿಪರ ಜಗತ್ರತ್ತಿವಾಸರು ನಿರುತದಿ ಅಂತರಂಗದ ಜ್ಞÁನ ಚಕ್ಷು ಗೋಚರ ರೂಪಿನ್ನೆಂಥದ್ದು1 ಸುಷ್ಟವಾದನಿಷ್ಟಗಳು ಎಷ್ಟು ಬಳಲಿಪವು ಪಗಲಿರುಳು ಕಷ್ಟಬಡುತಿಹವಷ್ಟಾಂಗಗಳು ಆಹಾ ದೃಷ್ಟಗೋಚರ ಸ್ವಾಮಿ ಕಷ್ಟಕಳೆದು ನಮ್ಮ ನಿಷ್ಟಪೊಯ್ದೋಡಿಸೆ ತುಷ್ಟಗೊಳಿಪ ರೂಪಿನ್ನೆಂಥಾದು 2 ಸ್ಥಿರಮೂರ್ತಿ ನೀನಹುದಲ್ಲೆ ಸುರವೃಂದಕೆ ನೀ ಚೆಂದನಲ್ಲೆ ಮರುಳು ಮನುಜ ನಾನು ಮರೆದು ಬಳಲಿಪೆನು ಕರವ ಮುಗಿವೆ ತೋರಂಥಾದು 3
--------------
ನರಸಿಂಹವಿಠಲರು
ಎಂದಿಗೆ ಕಾಂಬುವೆ ಇಂದಿರೇಶನೆ ನಿನ್ನ ಪಾದ ಕೃಪೆಯ ಪ ಒಂದರಲವ ನಿಂದು ಒಂದೇ ಮನದಿ ನಿನ್ನ ಮಂದ ಭಾಗ್ಯನು ನಾನು ಅ.ಪ ಎನ್ನ ಮನಸಿನ ಚೇಷ್ಟೆ ವರ್ಣಿಸಲಳವಲ್ಲ ಕ್ಷಣಕೊಂದು ಪರಿಯಪ್ಪುದು ಘನದೃಢ ಹರಿಪಾದ ನೆನೆಯುವುದು ನಿಮಿಷದಿ ಎಣಿಯಿಲ್ಲದೈಶ್ವರ್ಯವನು ಭೋಗಿಸುವುದು 1 ಗಳಿಗೆಯೊಳ್ದಶಲಕ್ಷ ಸುಲಭದಿಂ ಗಳಿಸರ್ಥ ಬಲವಾಗಿ ನಿಲಯದಿಟ್ಟು ಲಲನೆಯೊಳೊಡಗೂಡಿ ಬಲುಸೌಖ್ಯ ಬಡುಕೊಂಡು ಗಳಿಗೆಯೊಳ್ ದೇಶಾಂತರಕೆಳಸುವುದಭವ 2 ಅರಿಗಳಂ ಬಂಧಿಸಿ ಸೆರೆಯೊಳಿಟ್ಟರಲವದಿ ಶಿರವರಿಪೆನೆನುತಿಹ್ಯದು ಪರಮ ವೈರಾಗ್ಯದಿಂ ಚರಿಸುವುದರಲವದಿ ಪರಲೋಕ ಸಾಧನದಿರುತಿಹ್ಯದಕಟ3 ದೃಢದಿ ನಡೆವುದು ನಿಮಿಷ ಪೊಡವಿಜನಕೆ ಸತ್ಯ ನುಡಿಯು ಬೋಧಿಸುತಿಹ್ಯದು ದೃಢತರಬಲದಿ ತಾ ಕಡುಗಲಿಯೆನಿಸೊಂದೇ ಕೊಡೆಯಿಂದಲಾಳುವುದು ಪೊಡವಿಯಂ ಸಕಲ 4 ಕಾಮಿಸುತೀಪರಿ ಕಾಮಕೊಳಪಡಿಸೆನ್ನ ಪಾಮರನೆನಿಸುವುದು ಸ್ವಾಮಿ ಶ್ರೀರಾಮ ಎನ್ನ ಪಾಮರಮನಸಿನ ಕಾಮಿತವಳುಕಿಸಿ ಪ್ರೇಮದಿಂ ಸಲಹಯ್ಯ 5
--------------
ರಾಮದಾಸರು
ಎಂದಿಗೆ ದೊರಕುವನು ಶ್ರೀಗುರುವನ ಗೆಂದಗೆ ದೊರಕುವನು ಪ ಮಂದಮತಿಯ ಕಡೆಗ್ಹೊಂದಿಸಿ ಸಚ್ಚಿದಾ ನಂದ ಬ್ರಹ್ಮನ ಕೃಪೆಯಿಂದ ಪಾಲಿಸಿದಾತಾ ಅ.ಪ. ಕರುಣದಿ ಕರದು ತನ್ನಾ ತೊಡೆಯ ಮೇಲ್ಕು ಳ್ಳಿರಿಸಿ ಶರಧಿಯೊಳೀಡಾಡಿ ಈಶ್ವರನ ತೋರಿದ ಗುರು ಎಂದಿಗೆ 1 ತನ್ನ ತಾ ತಿಳಿವವೊಲು ತತ್ವನಸಾರ ವನ್ನು ಸಾಧುಗಳಿಂದಲಿ ಚೆನ್ನಾಗಿ ಅರಿತುಕೊಳ್ಳೆಂದು ಅಮೃತಪಾನವನ್ನು ಮಾಡಿಸಿದ ಪ್ರಸನ್ನವದನ ಗುರು ಎಂದಿಗೆ 2 ಹುಟ್ಟಿಸಾಯದಂದದಿ ವಾಕ್ಯದ ಮದ್ದು ಕೊಟ್ಟು ಜೀವನ್ಮುಕ್ತಿಯ ಪಟ್ಟವ ಗಟ್ಟಿ ಫಣಿಗೆ ಮಂಗಲಾಕ್ಷತೆ ಇಟ್ಟ ವಿಮಲಾನಂದ ಬಟ್ಟೆದೋರಿದ ಗುರು 3
--------------
ಭಟಕಳ ಅಪ್ಪಯ್ಯ
ಎಂದಿಗೆ ನಿಮ್ಮ ಪದ ಕಾಂಬೆನೊ | ಗುರು ಎಂದಿಗೆ ನಿಮ್ಮ ಪದ ಕಾಂಬೆನೊ ಪ. ಎಂದಿಗೆ ನಿಮ್ಮ ಕಾಂಬೆ ಅಂದಿಗೆ ಮುಕ್ತಳಹೆ ಅ.ಪ. ಸಕಲ ಶಾಸ್ತ್ರಗಳನೆ ಶೋಧಿಸಿ | ಬಹು ಅಕಳಂಕ ತತ್ವವ ಸಾಧಿಸಿ | ಬೇಗ ಮುಕುತಿ ಯೋಗ್ಯರಿಗೆಲ್ಲ ಸುಖವ ತೋರುವ ಗುರು 1 ಮನದಿ ನೆಲಸಿ ಲೀಲೆ ತೋರುತ | ದೃಢ ಮನದಿ ಮನಸಿಜನ ಗೆಲ್ಲುತ | ದೇವ ಮನಸಿಜನಯ್ಯನ ಮನಸಿನೊಳ್ ತೋರುತ 2 ಕಷ್ಟಪಡುವುದು ಕಾಣುತ | ಬಹು ತುಷ್ಟರಾಗಿ ಅಭಯ ನೀಡುತ | ಮನ ಮುಟ್ಟಿ ರಕ್ಷಿಪೆನೆಂದು ಇಷ್ಟು ಸಲಿಪ ಗುರು 3 ನರಹರಿ ಧ್ಯಾನಿಪ ಶ್ರೀ ಗುರು | ಬಹು ಕರುಣಾಳುವೆ ದೇವತರು | ನಿಮ್ಮ ಅರಘಳಿಗೆ ಬಿಟ್ಟು ಇರಲಾರೆ ಧರೆಯೊಳು 4 ಮುಕ್ತಿ ಸೌಭಾಗ್ಯವ ನೀಡುವ | ಬಹು ಶಕ್ತರಹುದು ನಿಮ್ಮ ಭಾವವ | ನಾನು ಎತ್ತ ಯೋಚಿಸೆ ಕಾಣೆ ಸತ್ಯವಚನವಿದು 5 ಆನಂದಪಡಿಸುವ ಶ್ರೀ ಗುರು | ನಿಮ್ಮ ಏನೆಂದು ಸ್ತುತಿಹಲಿ ಪಾಮರರು | ನಿಮ್ಮ ಕಾಣರು ಜಗದಲಿ ಏನೆಂಬೆ ಮಹಿಮೆಯ 6 ಗೋಪಾಲಕೃಷ್ಣವಿಠ್ಠಲನ | ಶುಭ ರೂಪವ ತೋರುವ ಕಾರುಣ್ಯ | ದೇವ ಪರಿ ನಿಮ್ಮ ಸ್ತುತಿಸಿ ನಾ ಪಾರು ಕಾಂಬೆನು 7
--------------
ಅಂಬಾಬಾಯಿ
ಎಂದಿಗೆ ಪಾಲಿಪೆ ಎನ್ನ ಗೋ- ಪ ವಿಂದ ಮುಕುಂದ ಆ- ನಂದ ಮೂರುತಿಅ.ಪ ಚರಣಸೇವೆಯ ಕೊಡಿಸಿ ಪರಮಭಕ್ತರೊಳಿರಿಸಿ ದುರಿತರಾಸಿಗಳ ಪರಿಹರಿಸಿ 1 ತಾರದೆ ಸಂತೋಷದಿ ಮಾರಜನಕ ನಿನ್ನ ಧೇನಿಸುವಂತ 2 ಗುರುರಾಮವಿಠ್ಠಲ ನಿನ್ನ ಹೊರತು ಅನ್ಯರಿಲ್ಲ ಸಿರಿನಲ್ಲ 3
--------------
ಗುರುರಾಮವಿಠಲ
ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ ಪ ಮುಂದರಿತು ಶ್ರೀಹರಿಯ ಭಜಿಸುವುದು ಲೇಸುಅ ಎಲುವುಗಳು ತೊಲೆಜಂತೆ ನರಗಳವು ಬಿಗಿದಂತೆಬಲಿದ ಚರ್ಮವು ಮೇಲು ಹೊದಿಕೆಯಂತೆಗಳಗಳನೆ ನುಡಿವ ನಾಲಗೆ ಗಂಟೆಯುಲಿಯಂತೆಕೆಲಕಾಲಕೀ ಕೊಂಪೆ ಕಡೆಗಾಹುದಂತೆ 1 ಕಂಡಿಗಳು ಒಂಬತ್ತು ಕಳಬಂಟರೈವರುಅಂಡಲೆವುದೊತ್ತಿನಲಿ ಷಡುವರ್ಗವುಮಂಡಲಕೆ ಹೊಸಪರಿಯ ಮನ್ಮಥನ ಠಾಣ್ಯವಿದುಮಂಡೆ ಹೋಗುವುದನ್ನು ಅರಿಯದೀ ಕೊಂಪೆ2 ಕೊಂಪೆಯಲಿ ಶೃಂಗಾರ ಕೊಂಡಾಡಲಳವಲ್ಲಕೆಂಪು ಬಣ್ಣಗಳಿಂದ ಚೆನ್ನಾಯಿತುಇಂಪಿನಲಿ ಕಾಗಿನೆಲೆಯಾದಿಕೇಶವನನ್ನುಸೊಂಪಿನಲಿ ನೆನೆನೆನೆದು ಸುಖಿಯಾಗು ಮನುಜಾ 3
--------------
ಕನಕದಾಸ
ಎಂದು ಕಾಂಬೆನು ಪಾಂಡುರಂಗ ಮೂರುತಿಯಾ ಇಂದು ಭಾಗನಿವಾಸ ನರನ ಸಾರಥಿಯ ಪ ಚಾರು ಚರಣಾಂಗುಲಿ ನಖರ ತರುಣೀಂದುಚ್ಛವಿ ತಿರಸ್ಕರಿಸುವ ಪ್ರಖರ ಕಿರುಗೆಜ್ಜೆ ಕಡಗ ನೂಪುರ ಪೆಂಡೆ ಶಫರ ತೆರಜಾನು ಜಂಘೆ ಭಾಸ್ಕರ ರತ್ನ ಮುಕುರ1 ರಂಭಾ ಪೋಲುವ ಊರು ಪೊಂಬಣ್ಣಾಂಬರವ ಕುಂಭೀ ಮಸ್ತಕದೊಲ್ ನಿತಂಬದಿ ಪೊಳೆವ ಕಂಬು ಮೇಖಳಕಂಜ ಗಂಭೀರ ನಾಭೀ ವಿಧಿ ಶಂಭು ಪೂಜಿತನ 2 ಲವಕುಕ್ಷಿತ್ರವಳಿ ಬಾರ್ಗವಿ ವಕ್ಷ ಉರವು ಕೌಸ್ತುಭ ವೈಜಯಂತಿಯ ಸುವಿಶಾಲ ವಕ್ಷದೊಳ್ ವಿವಿಧ ಹಾರಗಳು ನವನೀತ ಚೋರ ಶ್ರೀ ಪವಮಾನಾರ್ಚಿತನ 3 ಪದಕ ಸರಿಗೆಯ ಜಾಂಬೂನದ ಕಂಬುಕಂಠ ರದನೀಕರ ಬಾಹು ಚದುರ ಭುಜಕೀರ್ತಿ ಬದರ ಸಂಕಾಶಾ ಅಂಗದ ರತ್ನ ಕಟಕಾ ಪದಮಾರುಣ ಕರಯುಗ್ಮ ಕಟಿಯಲ್ಲಿಟ್ಟವನಾ4 ವಿಧುಬಿಂಬೋಪಮ ಚಲ್ವವದನ ಕೆಂದುಟಿಯಾ ಬಿದುರಾಭಾದಶನಾಲಿಂಗದನೊಳ್ ಕಿರುನಗೆಯಾ ಕದಪು ಕನ್ನಡಿ ನಾಸಾ ತುದಿ ಚಂಪಕ ತೆನೆಯಾ ಉದಕೇಜಾಯತ ನೇತ್ರಯದುವಂಶೋದ್ಭವನಾ 5 ಕುಂಡಲ ಕರ್ಣ ಸುಲಲಿತ ಭ್ರೂಯುಗಳ ಪೊಳೆವ ಬಾಲ ಶಶಾಂಕ ತಿಲಕಾಂಕಿತ ಫಾಲ ಅಳಿಬಾಲವೆನಿಪ ಕುಂತಳ ರತ್ನ ಚಕಿತ ಕಲಧೌತ ಮಕುಟ ದಿಗ್ವಲಯ ಬೆಳಗುವನ 6 ಮಾನವ ಹರಿಯಾ ವಟುಭಾರ್ಗವ ಕಾಕುಸ್ಥ ಶಠ ಕಂಸದ್ವಿಷನ ನಿಟೆಲಾಂಬಕ ಸಹಾಯ ಖಳಕಟಕಾರಿ ಭೀಮಾ ತಟವಾಸ ಜಗನ್ನಾಥವಿಠಲ ಮೂರುತಿಯ 7
--------------
ಜಗನ್ನಾಥದಾಸರು
ಎಂದು ಕಾಂಬೆನೊ ನಿನ್ನ ಹೇ ಶ್ರೀನಿವಾಸಾ ಪ ನಗೆಮೊಗದ ನತಜನ ಬಂಧು ಬಾಬಾರೆನ್ನ ಬಿ - ಟ್ಟಗಲದಲೆ ಮನ ಮಂದಿರದೊಳಿರು ಮುನ್ನಾದರು ಸುಪ್ರಸನ್ನ ಮುಂದೆ ಗತಿ ಏನಯ್ಯ ಮುಕುತರ ಹಿಂದುಳಿದವನಲ್ಲದಲೆ ತನು ಸಂ - ಬಂಧಿಗಳ ವಶನಾಗಿ ದುರ್ವಿಷ - ಯಾಂಧಕಾರದಿ ಮುಳುಗಿದೆನೊ ನಾ ಅ.ಪ. ಹಲವು ಜನ್ಮದ ನೋವಾ ನಾ ಹೇಳಿಕೊಳಲೇನೆಲವೊ ದೇವರ ದೇವಾ ನೀ - ನಲ್ಲದಲೆ ಭೂವಲಯದೊಳಿಗಿನ್ನಾವಾ ನಂಬಿದರ ಕಾವ ಸುಲಭರೊಳಗತಿ ಸುಲಭನೆಂಬುವ ಅಲವಬೋಧಮತಾನುಗರು ಎನ - ಗೊಲಿದು ಪೇಳಲು ಕೇಳಿ ನಿಶ್ಚಂ - ಚಲದಿ ನಿನ್ನನೆ ಧೇನಿಸುವೆ ನಾ ಕಲುಷ ಸಂಸ್ಕಾರಗಳ ವಶದಿಂ ಹೊಲಬುಗಾಣದೆ ಹರುಷಗುಂದುವೆ ಹೊಲೆ ಮನದ ಹರಿದಾಟ ತಪ್ಪಿಸಿ ನೆಲೆಗೆ ನಿಲ್ಲಿಸದಿರ್ದ ಬಳಿಕಿನ್ನೆಂದು 1 ಭಾರತೀಪತಿಪ್ರೀಯಾ ಎಂದೆಂದು ಭಕುತರ ಭಾರ ನಿನ್ನದೊ ಜೀಯಾ ಜಗವರಿಯೆ ಕರುಣಾ - ವಾರಿಧಿಯೆ ಪಿಡಿ ಕೈಯ್ಯಾ ಫಣಿರಾಜಶಯ್ಯಾ ತಾರಕನು ನೀನೆಂದು ತಿಳಿಯದ ಕಾರಣದಿ ಸುಖ ದುಃಖಮಯ ಸಂ - ಸಾರ ದುಸ್ತರ ಶರಧಿಯೊಳು ನಾ ಪಾರಗಾಣದೆ ಪರಿದು ಪೋಪೆನೊ ದೂರನೋಳ್ಪದು ಧರ್ಮವಲ್ಲವೊ ದ್ವಾರಕಾಪುರನಿಲಯ ಪರಮೋ - ದಾರ ತನುವೆಂದೆನ್ನ ಪಾಲಿಗೆ ಬಾರದಲ್ಲದೆ ಭವವಿಮೋಚನ 2 ವಿಕಸನಾರ್ಚಿತಪಾದ ವಿಶ್ವೇಶ ಜನ್ಮಾ - ದ್ಯಖಿಲ ಕಾರಣನಾದ ನಿರ್ದೋಷ ಸತ್ಯಾ - ಸುಖಗುಣಾರ್ಣವ ಶ್ರೀದವಿಠಲಪ್ರಸೀದ ಸಕಲ ಕ್ರಿಯ ಯೋಗಗಳು ತನು ಬಂ- ಧಕವು ನಿನಗೊಪ್ಪಿಸದಿರಲು ಎನೆ ನಿಖಿಳ ಜೀವರ ಭಿನ್ನ ನಿನ್ನಯ ಯುಕುತಿಗೆ ನಮೊ ಎಂಬೆನಲ್ಲದೆ ಯುಕುತ ಯುಕ್ತಿಗಳೊಂದರಿಯದ - ರ್ಭಕನ ಬಿನ್ನಪ ಸಲಿಸಿ ನವವಿಧ ಭಕುತಿ ಭಾಗ್ಯವ ಕೊಟ್ಟು ತವ ಸೇ - ವಕರ ಸೇವಕನೆನಿಸದಿರ್ದೊಡೆ 3
--------------
ಶ್ರೀದವಿಠಲರು
ಎದ್ದು ನಿಂತ ಖಳರ ಕೃತಾಂತಹೊದ್ದಿದವರ ಪೊರೆವ ಧವಳಗಂಗೆ ಹನುಮಂತಪ. ಕಪಟ ದಶಮುಖನ ಮದಭಂಜನ ಮಾಳ್ಪೆನೆಂದೆದ್ದು ನಿಂತಸಂಜೀವನವ ತಂದು ಕಪಿಗಳ ಕಾಯ್ದಆಂಜನೆಯ ತನಯ ತಾನೆದ್ದು ನಿಂತ 1 ಗುದ್ದ್ದಿ ರಾವಣನ ಧರೆಯೊಳು ಕೆಡಹಿ ಅರಿಕಟಕಮರ್ದನ ಮಹಾಮಹಿಮನೆದ್ದು ನಿಂತಯುದ್ಧದಲಿ ರಘುಪತಿಯ ಹೊತ್ತು ಭಕುತಿಯ ತೋರ್ದಶುದ್ಧಸ್ವಭಾವ ತಾನೆದ್ದು ನಿಂತ2 ರಾಗಗಳ ಮೇಳೈಸಿ ಹಯವದನನೊಲಿಸಿಯೋಗಿಗಳನುದ್ಧರಿಸಲೆಂದೆದ್ದು ನಿಂತಈಗ ಧರೆಯೊಳು ಸುಜನರ ಮನೋಭೀಷ್ಟಗಳವೇಗದಲಿ ಕೊಡುವೆನೆಂದೆದ್ದು ನಿಂತ3
--------------
ವಾದಿರಾಜ
ಎದ್ದೆವು ನಾವಿನ್ನು ಸದ್ಗುರು ಕೃಪೆಯಿಂದ ಧ್ರುವ ಭವ ನಿದ್ರಿಯಗಳೆದು 1 ಕಾಯ ಮಂದಿರದೊಳು | ಮಾಯ ಮುಸುಕು ತೆಗೆದು 2 ಚೆನ್ನಾಗಿ ಮಲಗಿದ್ದ | ಜನ್ಮ ಹಾಸಿಗೆ ಬಿಟ್ಟು 3 ತನ್ನ ತಾ ತಿಳಿವ್ಹಾಂಗೆ ಕಣ್ದೆರೆದಿನ್ನು 4 ಎದ್ದಿದ್ದರೆ ನೀವಿನ್ನು ಶುದ್ಧ ಬದ್ಧರಾಗಿ 5 ಮನದಲ್ಲಿ ಇನಕೋಟಿ ತೇಜನ ಕಾಣುಹಾಂಗೆ 6 ದೀನ ಮಹಿಪತಿ ಸ್ವಾಮಿ ಮನೋಹರ ಮಾಡೊಹಾಂಗೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನಗೆ ಕಾರಣವೇನು ಪಾಪಕ್ಕೆ ುನ್ನುನಿನಗೆ ಕಾರಣವೆಂಬ ಮಾತಿನ್ನದೇಕೆ ಪಎನ್ನ ಸ್ಟೃಯ ಮಾಡ ಹೇಳಿದೆನೆ ಮತ್ತೆಅನ್ನವನಿತ್ತುಣ್ಣ ಕಲಿಸೆಂದೆನೆಮನ್ಮಥ ನೆಲೆಯಾಗಬೇಕೆಂದೆನೆ ಬೇಗಕನ್ನೆಯೊಬ್ಬಳ ಮುಂದೆ ನಿಲಿಸೆಂದೆನೆ ಸ್ವಾಮಿ 1ಜಾತಾದಿ ಷೋಡಶ ಕರ್ಮಗಳ ನಿತ್ಯಪ್ರೀತಿುಂದಲಿ ಮಾಡಿ ಸ್ವರ್ಗಗಳವೋತು ಪಾಪಗಳಿಂದ ನರಕಗಳ ಹೊಂದಿಯಾತನೆಗೊಳಿಪಂತಾಗೆಂದೆನೆ ವಿಧಿಗಳ 2ಮಡದಿ ಮಕ್ಕಳು ಮನೆವಾರ್ತೆಯೆಂಬ ಬಲುತೊಡಕಿನೊಳನ್ಯರೆನ್ನವರೆಂತೆಂಬಬಡಿಶಕ್ಕೆ ಸಿಲುಕಿಯೊದ್ದಾಡಿಕೊಂಬ ುಂಥಹೆಡಗುಡಿಯನು ಕಟ್ಟಿ ಕೊಲ್ಲೆಂದೆನೆ ಸ್ವಾಮಿ 3ಆಡಿಸಿದಂತೆ ನೀನಾಡುವೆನು ುೀಗನೋಡಿದರಿಲ್ಲ ಸ್ವತಂತ್ರವಿನ್ನೇನುಬೇಡಿಕೊಂಬೆನು ಪಾದಕ್ಕೆರಗೀಗ ನಾನು ನೀನುಕೂಡಿ ರಕ್ಷಿಸಬೇಕು ಕಪಟವಿನ್ನೇನು 4ಸೂತ್ರಧಾರಕ ನೀನು ಸಕಲಕ್ಕೆ ಮಾಯಾಮಾತ್ರವೀ ಜಗವಿದನಾಡಲಿನ್ನೇಕೆಪಾತ್ರ ಕೃಪೆಗೆ ನಾನು ಗುರು ನೀನಾಗಲ್ಕೆ ಸುಪವಿತ್ರ ಚರಿತ್ರ ವೆಂಕಟ ಮರೆಹೊಕ್ಕೆನು 5ಓಂ ಸತ್ಯಭಾಮಾಧವಾಯ ನಮಃ
--------------
ತಿಮ್ಮಪ್ಪದಾಸರು
ಎನ್ನ ಕೈ ಬಿಡಬೇಡವೋ ಪ ರಿನ್ನಾರ ಕಾಣೆನು ಪನ್ನಗಶಯನನೆ ಅ.ಪ ತಂದೆ ಅನಾಥರ ಬಂಧು ಕಾಪಾಡಯ್ಯ 1 ಭುವನವಿಖ್ಯಾತನೆಂದೆನಿಸಿ ಕಾಯ್ದವ ನೀನೆ 2 ಸ್ಥಿರ ಸುಖದೊಳು ಕಾಯ್ದೆ ಕರುಣಿಗಳರಸನೆ 3 ಇಂಬಿಟ್ಟು ಭಕುತನ ಸಂಭ್ರಮದೊಳು ಕಾಯ್ದೆ 4 ಶರಣನ ಸಲಹಿದ ಪರಮ ಪುರುಷ ನೀನೆ 5 ಜೋಕೆಯೊಳ್ ನಿಜದಿ | ಸಾಕಿದೆ ಕರುಣಾಳು 6 ಕೃಪೆಯೊಳವಳಿಗೊಲಿಖಿಲವಸ್ತ್ರವನಿತ್ತೆ 7 ಸಂತೈಸಿ ಮತ್ತೆ ಪಾಂಡವರನ್ನು ಸತ್ಯಾತ್ಮರೆನಿಸಿದೆ 8 ಕುಡುತೆ ದಾಸ ವಿದುರನಿಗೆ ಲೇಸ ಮುಕ್ತಿಯ ಕೊಟ್ಟೆ 9 ವಂದ್ಯನೆಂದೆನಿಸಿದೆ ಇಂದಿರಾ ವರದನೆ 10 ದೃಢಭಕ್ತಿಗೊಲಿದಿತ್ತೆ ತಡೆಯದಿಷ್ಟಾರ್ಥವ 11 ನೀನೇನು ತೋರದೇನು || ಏನು ಗತಿಯೆನಗಿನ್ನು ನೀನೊಲಿಯದಿಲ್ಲಿನ್ನು 12 ಲೀಲೆಯಿಂದನುದಿನ ಸಲಹೊ ಸದಾನಂದ 13
--------------
ಸದಾನಂದರು
ಎನ್ನ ಪ್ರಿಯನಾ ನೀ ತಂದು ತೋರೇ ಸುಜ್ಞಾನೇ ಪ ಕನಸಿನೊಳಗ ಕಂಡ ಪರಿಯಾರೂಪದ ದೋರಿ ದಾವ ತೇಜಮುಸುಕಿತು ಧರಿಯೇ | ತ್ರೈ ಭುವನವ ರಕ್ಷಿಸ ಬಂದಾ ಹರಿಯೇ | ಮುಜ್ಜೆಮರಿಯೇ 3 ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಅಡಿಯಿಟ್ಟುನಲಿದು ಬರುವ ರಾಮೋ ಘಮ್ಮನೇ ಪರಬೊಮ್ಮನೆ4 ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು