ಒಟ್ಟು 921 ಕಡೆಗಳಲ್ಲಿ , 93 ದಾಸರು , 714 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೆನಗೀ ಜ್ಞಾನ ಪಾಲಸಾಗರಶಾಯಿ ಶ್ರೀ ಲೋಲ ನೀ ನಿತ್ಯದಿ ಪ. ಶೀಲಗುಣ ನಿನ್ನ ಏನು ಬೇಡುವುದಿಲ್ಲೊ ಕಾಲರೂಪನೆ ನಿನ್ನನು | ಇನ್ನು ಅ.ಪ. ಒಂದು ಅಸ್ವತಂತ್ರ ಒಂದು ಸರ್ವಸ್ವತಂತ್ರ ಒಂದು ಮನೆಯೊಳಗೆ ಇದ್ದು ಒಂದೆರಡು ಲೋಕಕ್ಕೆ ಒಂದೆ ದೈವನು ಎನಿಸಿ ಒಂದೊಂದರಲಿ ಇರುವ ಒಂದು ಅಪೇಕ್ಷಿಸದೆ ಒಂದೆರಡು ಗುಣದಿಂದ ಒಂದೆರಡು ಮಾಳ್ಪ ಜಗವ ಇಂದಿರೇಶನೆ ನಿನ್ನ ಈ ವಿಧದ ವ್ಯಾಪಾರ ಒಂದೊಂದು ಮನಕೆ ತೋರೋ | ಸ್ವಾಮಿ 1 ಎರಡು ಮಾರ್ಗಗಳಿಹವು ಎರಡು ಕರ್ಮಗಳಿಂದ ಎರಡು ವಿಧ ಸಮ ತಿಳಿದರೆ ಎರಡು ರೂಪಗಳನು ಒಂದಾಗಿ ಭಾವಿಸುತ ಎರಡೊಂದು ಜೀವ ತಿಳಿದು ಎರಡು ಫಲ ಅನುಭವಿಸಿ ಎರಡು ಹರಿಗರ್ಪಿಸುತ ಎರಡು ವಿಧ ಕರ್ತನೆಂದು ಎರಡು ಎಪ್ಪತ್ತು ಸಹಸ್ರನಾಡಿಗಳಲ್ಲಿ ಎರಡು ರೂಪದಲಿರುವ ಪೊರೆವ 2 ಮೂರು ಅವಸ್ಥೆಯಲಿ ಮೂರು ತಾಪವ ಸಹಿಸಿ ಮೂರು ಮಾರ್ಗದಲಿ ನಡೆದು ಮೂರೆಂಟು ಇಂದ್ರಿಯವ ಮೂಲರೂಪದಿ ಲಯಸಿ ಮೂರಾರು ವಿಧ ಭಕ್ತಿಯಲಿ ಮೂರೈದು ನುಗ್ಗೊತ್ತಿ ಮೂರು ಮೂರು ಅರಿಯ ಮೂರು ಶುದ್ಧಿಯಲಿ ಗೆದ್ದು ಮೂರಾರು ಎರಡೊಂದು ಖೋಡಿ ಮತಗಳ ಮುರಿಸಿ ಮಾರುತಿಯ ಮತದಿ ನೆಲಸಿ | ತಿಳಿಸಿ 3 ವಿೂನ ಕೂರ್ಮನೆ ವರಹ ಶ್ರೀ ನಾರಸಿಂಹನೆ ದಾನಯಾಚಕ ಭಾರ್ಗವ ವಾನರರಿಗೊಲಿದನೆ ವೇಣುಹಸ್ತರೂಪಿ ಮಾನವಿಲ್ಲದ ಕಲ್ಕಿಯೆ ಶ್ರೀನಿವಾಸನೆ ನಿನ್ನ ನಾನಾವಿಧ ರೂಪಗಳು ನಾನು ವರ್ಣಿಸಲು ಅಳವೆ ಮಾನಾಭಿಮಾನದೊಡೆಯನೆ ಕೃಷ್ಣ ಕೈಪಿಡಿಯೊ ಭಾನುಪ್ರಕಾಶ ಹರಿಯೆ | ಸಿರಿಯೆ 4 ಶಿರದಲ್ಲಿ ಕಿರೀಟ ಫಣೆಯಲ್ಲಿ ತಿಲುಕವು ಮೆರೆವ ಕುಂಡಲದ ಕದಪು ಕಿರುನಗೆಯ ಪಲ್ಗಳು ಕೊರಳಲ್ಲಿ ಹಾರಗಳು ಕರದಲ್ಲಿ ಆಯುಧಗಳು ಸಿರಿ ಭೂಮಿ ಎಡಬಲದಿ ಸುರನದಿಯ ಪೆತ್ತಪಾದ ಸಿರಿರಮಣ ಗೋಪಾಲಕೃಷ್ಣವಿಠ್ಠಲ ಎನಗೆ ಪರಿ ಪರಿಯ ರೂಪ ತೋರೊ ಸ್ವಾಮಿ 5
--------------
ಅಂಬಾಬಾಯಿ
ಪಾಲಿಸೊ ಶ್ರೀನಿವಾಸ ಪಾಲಿಸೊ ಶ್ರೀನಿವಾಸ ಪಾಲಾಬ್ಧಿಶಯನ ಕಾಪಾಲಿಯ ಕಾಯ್ದ ಗೋ ಪಾಲ ಹರಿ ವಿಶ್ವರೂಪ ಲೋಕಾಧೀಶ ಪಾಲಯವಾಗೆನ್ನ ಪಾಲಿಲಿದ್ದ ಶಿಶುಪಾಲಕ ಎನ್ನ ಕಾಯನ್ನಾ ಪ ಮನೆ ನಿನಗಾಗಿ ದೇಹಾ ಸುಮ್ಮನೆ ಪೇಳುವುದಿಲ್ಲ ಹ ಮ್ಮನೆ ಬಿಡಿಸುವುದು ಘಮ್ಮನೆ ಬಂದು ಒಲಿದು ನಿ ಮ್ಮನೆ ಭಕ್ತರ ಕೂಡ ನೆಮ್ಮನೆ ಕೊಟ್ಟ ಬಲನ ತ ಮ್ಮನೆ ನಡಿಸುವುದು ತಿಮ್ಮನೆ ಅಜಿತಾನಂತ ನಾ ಸಾರ್ವಭೌಮನೆಯಾಗಿ ಪುಟ್ಟಿ ಭೀ ಮನೆ ಗುರು ನಿತ್ಯಾ ಸಮನೆ ಎಂದು ಪೇಳಿದಾ ಮನೆಯಲ್ಲಿ ಇಡು ಮಾಮನೆಯುಳ್ಳಾ ಮಹಿಮನೆ ವೆಂಕಟೇಶಾ1 ಮನ ದುರ್ವಿಷಯಕೆ ಗಮನವಾಗಿ ಪೋಗುತಿದೆ ಕಾಮನ ಸಂಬಂಧವುಪಶಮನ ಮಾಡು ಬೇಗ ಸುಧಾ ಮನ ಮಿತ್ರ ಪವಿತ್ರ ಸುಮ್ಮನಸಕೊಡಿಯಾ ವಾ ಮನ ಮೂರುತಿಯೆ ಮನಸಂಹಾರ ಬಮ್ಮನ ಬಿಡಿಸಿದಾ ಹಿ ಮನ ಭಾವನೆ ನಿನ್ನ ಮನನಾದಿ ದಿನಯಸ್ತ ಪರಿಯಂತ ನೇಮನ ಚಿಂತಿಸುವಂತೆ2 ಜನನ ಮರಣ ಶೂನ್ಯಾ ಜನಕಾದ್ಯನಂತಗಂಗ ಜನಕಾಯಿದಾನಾದಿ ದೈವ ಅ ಜನನಯ್ಯ ಸ್ವರ್ಣ ಕಾಯಂ ಜಿನೆ ಪುತ್ರಪ್ರಿಯ್ಯಾ ದುಷ್ಟ ಜನಮರ್ದನಾ ಬಲು ಯೋಜನ ಮೆರೆವ ದೇವ ಸು ಜನಪಾಲ ಗುಣಶೀಲಾ ಜನುಮ ಜನುಮಕ್ಕು - ಜನಮತಿ ಕಳೆದು ರಂ ಜನವಾದಾ ಜ್ಞಾನ ಪುಂಜಿನ ಮಾಡು ದನುಜ ಭಂ ನಿರಂಜನ ನಿರ್ಮಳ ಅಂಜನ ಗಿರಿವಾಸಾ 3
--------------
ವಿಜಯದಾಸ
ಪಾಲಿಸೋ ಶ್ರೀ ಗುರುವೇ ಯನ್ನ ನೀ ಪ ಮರವಿನ ಕತ್ತಲಿ ಮನೆಯೊಳಗಿರುವೇ | ಅರವಿನ ಬೆಳಗಿಗೆ ಯಂತು ನಾ ಬರುವೆ 1 ಅನುದಿನ ಬೆರೆವೇ | ಕುಸುಮನಾಭನ ಸೇವೆಯಲಿ ಜರೆವೇ 2 ತಂದೆ ಮಹಿಪತಿ ಸುತ ಸುರ ತರುವೇ | ಛಂದದಿಯಚ್ಚರಿಸೈ ಸುಖ ತರುವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪುಣ್ಯ ದೊರಕುವುದು ಅನು ಗಣ್ಯವಾಗಿದ್ದ ಸತಿಯಿದ್ದ ಜನರಿಗೆ ಪ ಬಡತನವಿದ್ದರು ನೆರೆಹೊರೆ ಮನೆಯಲ್ಲಿ ನುಡಿ ಬಿಚ್ಚಿ ಪೇಳದೆ ಸೌಮ್ಯಳಾಗಿ ಬಿಡದೆ ಮಾಡುವ ಗೃಹಕೃತ್ಯಂಗಳು ಜಗ ಅನುದಿನ 1 ವಿಪರೀತ ಕಾಲಗಳಟ್ಟಿದ ಕಾಲಕ್ಕು ಸ್ವಪನಾದಿಯಪ ಕಳವಳಿಸದಲೇ ಪತಿ ಸೇವೆ ಅಫಲದಲ್ಲಿ ಮಾಡಿ ಒಲಿದೊಲಿದಾಡುವ2 ಲಾವಣ್ಯ ಪುರುಷರ ಕಂಡರು ಮನದಲ್ಲಿ ಭಾವಿಸಬೇಕು ಸಹೋದರರು ಎಂದು ವಿಭೂತಿ ರೂಪವ ನಿತ್ಯ 3 ಬಂದು ತಂದರೆ ಸಾವಿರ ಮಾಡಿ ಚಿಂತಿಸಿ ಇಂದಿರೇಶನೆ ಪತಿರೂಪವೆಂದು ಅಂದದದಲಿದ್ದ ವಿಭವಾನುಸಾರ ಆ ನಂದವಾಗಿ ಸಂಸಾರದೊಳಗಿರೆ 4 ಪತಿಯ ಜನಕ ಮಾತೃ ಮಿಗಿಲಾದ ಜನರಿಗೆ ಹಿತವಂತಳಾಗಿ ನುಡಿಸಿಕೊಳುತಾ ಗಾತ್ರ ಸರ್ವದಾ ಪ್ರತಿದಿನ ಸುವಿನುವಳಾ ನಾರಿ ಅಧಿಕಾರಿ 5 ಚಕೋರ ಚಂದ್ರಮನಲ್ಲಿ ಮನಸು ಇಟ್ಟು ಸುಖಬಡುವಂತೆ ನಾನಾ ಪ್ರಕಾರ ಕಕುಲಾತಿಯಿಂದ ಕಾಮುಕಳಾಗದೆ ಮಹಾ ಭಕುತಿಯಿಂದಲಿ ಗುರು ಹಿರಿಯರ ಸಮ್ಮತ 6 ಸಂತಜನರೆಂಬ ಕ್ಷೀರಾಂಬುಧಿ ಮಧ್ಯ ಸಂತತ ಮೀನಿನಂದದಿ ಬೀಳುತಾ ಪತಿ ಧರ್ಮವಹಿಸಿ ಶ್ರೀ ಕಾಂತನ ಗುಣಕಥೆ ಕೇಳಿ ಪೊಗಳಲಾಗಿ 7 ನಾಮ ಮೊದಲು ಮಾಡಿ ಪ್ರಕೃತಿಯ ಪರಿಯಂತ ಪ್ರೇಮದಿಂದಲಿ ಗುಣಗಳ ಗುಣಿಸೀ ಕಾಮಾದಿ ಚತುರ್ವಿಧÀ ಪುರುಷಾರ್ಥ ತನ್ನಯ ಸ್ವಾಮಿಯಲಿಂದಲಿ ಸಂಪಾದಿಸುತಿಪ್ಪಾ 8 ಆವಾವ ಪ್ರಯೋಜನ ಮಾಡಲು ಸರ್ವದ ದೇವದೇವೇಶನಾಧೀನವೆಂದೂ ಭಾವದಲಿ ತಿಳಿದನ್ಯ ಕರ್ಮವ ಬಿಟ್ಟು ಪಾವನ ವಿಜಯವಿಠ್ಠಲನ ಭಕುತಿಯಿಂದಾ 9
--------------
ವಿಜಯದಾಸ
ಪುಣ್ಯದ ಹಾದಿಯ ಪೇಳ್ವೆ ಪೇಳಿದಂದದಲಿರೆ ಪುಣ್ಯಲೋಕವು ನಿನಗಣ್ಣಪುಣ್ಯವ ಕೆಡುಗೊಡದಲೆ ನೀನು ನಡೆದರೆ ಪುಣ್ಯ ಪುರುಷನಹೆಯಣ್ಣ ಪ ಬಿಸಿಲೊಳಗಿದ್ದವರ ನೀನು ನೆರಳಿಗೆ ಕರೆದರೆ ಬಹಳ ಸುಖವು ನಿನಗಣ್ಣಹಸಿದು ಬಂದವರಿಗೆ ತುತ್ತನಿಕ್ಕಲು ನಿನಗೆ ಅರಕೆಯಿಲ್ಲದ ಅನ್ನವಣ್ಣ 1 ನೀರಡಸಿದವರಿಗೆ ನೀರನ್ನು ಎರೆದರೆ ನಿನಗೆಂದು ಕಷ್ಟವಿಲ್ಲಣ್ಣದಾರಿ ತಪ್ಪಿದವರಿಗೆ ದಾರಿಯ ತೋರಿಸೆ ಧಾವತಿ ನಿನಗಿಲ್ಲವಣ್ಣ 2 ಮನೆಯಿಲ್ಲದವರಿಗೆ ಮನೆಯ ಕೊಟ್ಟೊಡೆ ನಿನಗೆ ಮುಂದಿಹುದು ಮನೆಯಣ್ಣಇನಿತು ವಸ್ತ್ರವಿಲ್ಲದವಗೆ ವಸ್ತ್ರವನು ಕೊಡೆ ಏನು ವಿಪತ್ತು ನಿನಗಾಗದಣ್ಣ 3 ಬಡವರನು ಮುಂದಂತೆ ತಂದರು ನೀನೀಗ ಬಲವಂತನಾಗುವೆಯಣ್ಣನುಡಿಯಲು ಒಳ್ಳೆಯ ವಾಕ್ಯವ ನೀನೀಗ ನೋಯದಂತಿರುವೆ ಮುಂದಣ್ಣ4 ವನಗುಡಿ ಕೆರೆಬಾವಿ ಧರ್ಮ ಮಳಿಗೆ ಹಾಕೆ ಒಲಿವನು ಶಿವನು ನಿನಗಣ್ಣಘನ ಚಿದಾನಂದ ಸತ್ಪುರುಷರ ಸೇರಲು ಘಟ್ಟಿ ಮುಕ್ತಿಯು ನಿನಗಣ್ಣ5
--------------
ಚಿದಾನಂದ ಅವಧೂತರು
ಪುಣ್ಯೋದವೇ ಈ ಪುಣ್ಯಭೂಮಿಯೊಳು ಪನ್ನಂಗಶಯನ ಸನ್ನುತಿಪ ದಾಸರಿಗೆ ಪ ಕಡುಸಿರಿವಂತರಾದೊಡೆ ಬಡವರ ಬಾಯ್ಬಡಿಯದೆ ಕೊಡುವಿಡುವ ಕೆಡದತಿ ಪುಣ್ಯ ಬಡತನವಿರ್ದಡೆ ಎಡೆಬಿಡದೆ ಒಡಲೊಳು ಜಡಜಾಕ್ಷನಡಿಧ್ಯಾನ ಹಿಡಿದ ಮಹಪುಣ್ಯ 1 ಮಡದಿಯರೊಂದಿಗೆ ಬಿಡದೆ ಸಂಸಾರಗೈಯೆ ದೃಢಯುತರು ಮನೆಯೊಳಗಡಿಯಿಡುವ ಪುಣ್ಯ ಸಡಗರದಿ ಮಕ್ಕಳನ್ಹಡೆದು ಮೋಹದಿ ಜಗ ದೊಡೆಯನ್ಹೆಸರಿಟ್ಟು ನುಡಿಯುವ ಪುಣ್ಯ 2 ತಿರುಕರಾಗಿರ್ದಡೆ ತಿರಿದು ತಂದನ್ನವನು ಹರಿಯಪ್ರಸಾದವೆಂದು ತಿರಿದುಣುವ ಪುಣ್ಯ ಪರಮಪುರುಷನ ಚರಣ ನಿರುತ ಸ್ಮರಿಪ ಪುಣ್ಯ 3 ಹಿಂದೆ ಮುಂದೆ ತಮಗೆ ನಿಂದೆಯಾಡಲು ಆ ನಂದದಿ ಹಿಗ್ಗದ ಕುಂದದ ಪುಣ್ಯ ಮಂದಿಮಕ್ಕಳು ಬಿಡದ್ಹೊಂದಿಸಲದು ಹರಿ ಗೆಂದು ಅರ್ಪಿಸಿ ಮನಸೊಂದೆಮಾಡಿದ ಪುಣ್ಯ 4 ನೀರಿನೊಳಿರಲೇನರಣ್ಯದೊಳರಿಲೇನು ಘೋರತಾಪದಿರಲೇನಪಾರಜ್ಞಾನಿಗಳು ಪಾರಮೋಕ್ಷಕ್ಕಧಿಪ ಧೀರ ಶ್ರೀರಾಮಪಾದ ವಾರಿಜದೊಳು ಮನ ಸೇರಿಸಿದ ಪುಣ್ಯರಿಗೆ5
--------------
ರಾಮದಾಸರು
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಪುರಂದರ ಗುರುರಾಯಾ ಸತ್ಪ್ಪುಣ್ಯ ಕಾಯಾ ಪ ನಿರುತ ನಿನ್ನ ಚರಣ ಸೇವೆ ಕರುಣ ಮಾಳ್ಪದೋ ಜೀಯಾಅ.ಪ. ಬಹು ಜನ್ಮಗಳಲ್ಲಿ ನಾನು ಮಹ ಪುಣ್ಯ ಮಾಡಿದವರ ಸಹವಾಸದಲಿದ್ದು ಗ್ರಹದ ಮುಂದೆ ಗ್ರಹದಿಂದೆನಗೆ ಮಹಿಸುರ ಜನ್ನವಿತ್ತೆ 1 ಶ್ವಾನ ಸೂಕರನೊ ನಾನದನು ಕಾಣೆನೊ ಮತ್ತಾವನೊ ನಾನಾ ಜೀವನೊ ಆನು ಒಂದು ತಿಳಿಯೆ ಗುರುವೆ ನೀನೆ ಬಲ್ಲಿ ಎನಗೆ ಬಂದ ಅನಾದಿ ಶರೀರವ ಅಜ್ಞಾನವನ್ನೇ ತೆಜಿಸುವುದು2 ಯಾಚನೆ ದೇಹದಲ್ಲಿ ಊಚು ಭಾಗ್ಯವ ಜಯಸದಿಪ್ಪ ಯೋಚನೆಯಿಂದಲಿ ಕಮಲಲೋಚನ ನಿನ್ನಂಘ್ರಿಯಾ ಕರವ ಬಾಚೆನೊ ಹೀನರಿಗೆ ನಿನ್ನ ಪಾಚಕರ ಮನೆಯ ಪರಿಚಾರ ಸಿದ್ಧÀ್ದವಾಗಲಿ 3 ಹಿಂದೆ ಏನು ಪ್ರೇರಿಸಿದಿಯೊ ನಂದವ ನಾನರಿಯೆನೊ ತಂದೆ ತಾಯಿ ನೀನೆ ಎಂದು ಪೊರದಿ ಸಂದೇಹವಿಲ್ಲ ಯೆಂದು ಪೊರೆದದ್ದು ನಿನ ಕರುಣವಲ್ಲವೆ ಮತ್ತೆ ಭಾರವು ನಿನದೆಂದು ನಾ ಪ್ರಾರ್ಥಿಸುವೆ 4 ತಿರುಗುವುದು ಕುಳ್ಳಿರುವುದು ಬರುವುದು ಮತ್ತೇಳುವದು ಮರಳೆ ಮಾತನಾಡುವುದು ವಾಸರದಲ್ಲಿ ಬಿಡದೆ ಸಿರಿ ವಿಜಯವಿಠ್ಠಲನ್ನ ಕರದೊಳಿಪ್ಪಂತೆ ಮಾಳ್ಪದೊ ಜೀಯಾ 5
--------------
ವಿಜಯದಾಸ
ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು
ಪೂಜಿಸುವೆನು ದೇವಿಯ ಶ್ರೀನಿತ್ಯ ಗೌರಿಯ ಪ ಪರಶಕ್ತಿರೂಪೆಯ ಪರತತ್ವಮೂರ್ತಿಯ ಪರಮಮಂಗಳ ದೇವಿಯ ಪರಮಾನುರಾಗದಿ 1 ಮೃಗಧರಮೌಳಿಯ ಜಗದುದ್ಧಾರಾಂಬೆಯ ಮಿಗೆ ಮನದಲಿ ಧ್ಯಾನಿಸಿ ಅವಾಹಿಸುತ್ತಲಿ 2 ಸರ್ವಲೋಕೇಶ್ವರಿಯ ಸರ್ವಾಲಂಕಾರೆಯ ಸರ್ವಾಂಗ ಸುಂದರಿಯ ಆಸನವನಿತ್ತು 3 ವಿದ್ಯಾಧಿದೇವಿಯ ಶುದ್ಧಚಿದ್ರೂಪೆಯ ಪಾದ್ಯಾಘ್ರ್ಯಾಚ ಮನದಿಂದ ಪರಿಶುದ್ಧ ಹೃದಯದಿ 4 ಪಂಚಮವಾಣಿಯ ಚಂಚರಿಕಾಂಬೆಯ ಪಂಚಾಮೃತವ ಜಲವ ಮುದದಿಂದ ತಳಿಯುತ 5 ಸುಂದರ ಹಾಸೆಯ ಸೌಂದರ್ಯ ಶರದಿಯ ಚಂದ್ರಗಾವಿಯ ನುಡಿಸಿ ಕಂಚುಕವ ಗೊಡಿಸಿ 6 ಚಂದ್ರ ಬಿಂಬಾಸ್ಯೆಯ ಸಿಂಧುರ ಗಮನೆಯ ಇಂದು ತಿಲಕವ ತಿದ್ದುತ ಗಂಧವನೆ ತೊಡೆದು 7 ಮಂಗಳ ಮಾತೆಯ ಮಂಗಳ ಮೂರ್ತಿಯ ಮಂಗಳ ದ್ರವ್ಯದಿಂದ ಶೃಂಗಾರ ವೆಸಗಿ8 ಲೀಲಾವಿನೋದೆಯ ಬಾಲ ಕುಚಾಂಬೆಯ ಮಾಲೆಯ ನರ್ಪಿಸುತ ಕುಸುಮಗಳ ನಿಚಯದಿ 9 ಪಾಪನಿಹಂಶ್ರಿಯ ಶ್ರೀಪತಿ ಸೋದರಿಯ ಧೂಪ ದೀಪವ ಕಲ್ಪಿಸಿ ಅಚಮನವಿತ್ತು 10 ಸತ್ಯಸಂಕಲ್ಪೆಯ ನಿತ್ಯಸಂತುಷ್ಟೆಯ ಉತ್ತಮ ಫಲಭಕ್ಷ್ಯದಿಂ ನೈವೇದ್ಯ ವೆಸಗಿ 11 ಕಂಬುಸುಕಂಠಿಯ ಬಿಂಬಫಲಾಧರೆಯ ತಾಂಬೂಲ ದಕ್ಷಿಣೆಯಂ ಭಕ್ತಿಯೊಳಗರ್ಪಿಸಿ 12 ಮಂಗಳ ಮೂರ್ತಿಯ ಮಂಗಳ ಗೌರಿಯ ಮಂಗಳಾರತಿಯ ಗೈದು ಆಚಮನವಿತ್ತು 13 ಕಲಕೀರವಾಣಿಯ ಕಲಹಂಸಗಮನೆಯ ಲಲನಾಶಿರೋಮಣಿಯ ಬಲವಂದುನಮಿಸಿ 14 ಜಯ ಜಯ ಗೌರಿಯೆ ಜಯ ಜಯ ಮಾತೆಯೆ ಜಯದೇವಿ ಕರುಣಿಸು ನೀಂ ವರ ಸುಪ್ರಸಾದವ 15 ಮಾನಿನಿ ದೇವಿಯು ಮೌನಿ ಸುವಂದ್ಯೆಯು ಧೇನುಪುರೀಶ್ವರಿಯು ಸುಪ್ರೀತೆಯಾಗಲಿ 16
--------------
ಬೇಟೆರಾಯ ದೀಕ್ಷಿತರು
ಪೋಗುವೆವಮ್ಮ ಪ ಉದಯವಾಗದ ಮುನ್ನ ಬರುವ ಕಣಮ್ಮ ಕದವ ಬಾರಿಸಿ ಒಳಪೊಕ್ಕ ಕಣಮ್ಮ ಮೊದಲೆನ್ನ ಮಗಳ ತಕ್ಕೈಸಿದನಮ್ಮ ಸದರದಲಿ ಮೊಸರನೆಲ್ಲ ಕುಡಿದ ಕಣಮ್ಮ 1 ಉಟ್ಟ ಸೀರೆಯ ಬೆಲೆ ಏನೆಂದಮ್ಮ ಪಟ್ಟೆ ಕುಪ್ಪಸಕೇನು ಪಣವೆಂದನಮ್ಮ ತೊಟ್ಟು ಕೊಂಡೆನ್ನನು ಬಿಡದೆ ಕಾಣಮ್ಮ 2 ನಸುಗಪ್ಪಿನೊಳು ಸಜ್ಜೆಮನೆಯೊಳಗಮ್ಮ ಮೊಸರು ಪಾಲ್ಬೆಣ್ಣೆಯ ಮೆದ್ದ ಕಾಣಮ್ಮ ಸೊಸೆಯು ಪಿಡಿಯೆ ಬಿಗಿದಪ್ಪಿದನಮ್ಮ ನಸು ಬೆವರಿಡೆ ತನು ಬಿಡದೆ ಕಾಣಮ್ಮ 3 ಜಾರ ಜೋರರ ಶಿಖಾಮಣಿಯಿವನಮ್ಮ ಯಾರೆಂದು ಹೊರಗೊಬ್ಬ ಕರೆಯೆ ಗೋಪಮ್ಮ ಚೋರ ಗಂಡಿಯ ಪೊಕ್ಕು ಓಡಿದನಮ್ಮ 4 ಊಚು ನೀಚುಗಳೇನು ಇವಗಿಲ್ಲವಮ್ಮ ನಾಚಿಕೆನಮಗಾಗುತಿದೆ ಹೇಳಲಮ್ಮ ಕೀಚಕರಿಪು ಕೋಣೆ ಲಕ್ಷ್ಮೀಶಗಮ್ಮ ವಾಚಿಸೆ ನೀನೊಂದ ಮಾತ ನಮ್ಮಮ್ಮ 5
--------------
ಕವಿ ಪರಮದೇವದಾಸರು
ಪ್ರಕಾಶರೂಪಿ ವಿಠಲಾ ತೋಕನ್ನ ಸಲಹೋ ಪ ಅಕಳಂಕ ಚಾರಿತ್ರ | ನಿಖಿಲಾಗಮಸುವೇದ್ಯಪ್ರಕಟಿಸಿವನಲಿ ಜ್ಞಾನದಂಕುರವ ಹರಿಯೇ ಅ.ಪ. ಮಧ್ವಮತದಲಿ ದೀಕ್ಷೆ | ಶುದ್ಧ ಭಕುತಿ ಜ್ಞಾನಸಿದ್ದಿಸುವುದಿವನಲ್ಲಿ | ಮಧ್ವಾಂತರಾತ್ಮಾವಿದ್ಯೆಸಂಪದದಲ್ಲಿ | ಸ್ಪರ್ಧಿಸುವ ಮನಕಾಗಿಬುದ್ಧಿ ಪ್ರೇರಿಸು ಹರಿಯೆ ಸಿದ್ಧಮುನಿವಂದ್ಯಾ 1 ಕಾಮಾದಿ ಷಡ್ವೈರಿ | ಸ್ತೋಮವನೆ ಕಳೆಯುತ್ತನೇಮನಿಷ್ಠೆಯಲಿ ಮನ | ಕಾಮನೆಯ ಕೊಟ್ಟೂಪ್ರೇಮದಲಿ ಹರಿಗುರೂ | ಸ್ವಾಮಿ ಕಾರ್ಯವಗೈಸಿಕಾಮಿತಾರ್ಥದನಾಗೊ | ಕಾಮ ಪಿತ ಹರಿಯೇ 2 ಅಂಶದಲಿ ತನುವ್ಯಾಪ್ತಿ | ಸಾಂಶದೇವಾದಿಗಳುಸಂಸಾರ ನಿರ್ವಹಣೆ ಮಾಡಿಮಾಡಿಸುತಾಕಂಸಾರಿ ಪೂಜೆ ಎನೆ | ಶಂಸಿಸುತ ಯೋಗ್ಯರಲಿವಂಶ ಉದ್ಧರವೆಂಬ | ಅಂಶವನೆ ತಿಳಿಸೋ 3 ಕಾಕು ಜನಗಳ ಸಂಗ | ಓಕರಿಸುವಂತೆಸಗಿನೀಕೊಟ್ಟು ಸತ್ಸಂಗ | ಪ್ರಾಕ್ಕರ್ಮ ಕಳೆಯೋಲೌಕಿಕದಿ ಸತ್ಕೀರ್ತಿ | ನೀ ಕರುಣಿಸಿವನಲ್ಲಿಏಕಮೇವನೆ ಇದನೆ | ನಾ ಕೇಳ್ವೆ ಹರಿಯೇ 4 ಜೀವರಂತರ್ಯಾಮಿ | ಜೀವಕರ್ಮವವೆಸಗಿಆವಫಲ ದ್ವಂದ್ವಗಳ | ಜೀವಕರುಣಿಸುವನೇಭಾವುಕರ ಪಾಲಗುರು | ಗೋವಿಂದ ವಿಠ್ಠಲನೆಕಾವುದಿವನನು ಎಂಬ | ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ಪ್ರತಿಪದೆಯ ದಿನ ರಂಭೆ :ಓಹೊ ಬಲ್ ಬಲ್ ಬಲ್ ಶ್ಯಾಣೆ ಜಾಣೆ ಪ. ಈ ದಿವಸದಿ ನಿನ್ನೆಯ ದಿನದವನನ್ನು ಆದರಿಸಲು ಕಾರ್ಯೋದಯವೇನೆ ಓಹೋ ಬಲ್ ಬಲ್ ಶಾಣೆ ಜಾಣೆ ಅ.ಪ. ಊರ್ವಶಿ : ಚಿತ್ತಜರೂಪೆ ಸರ್ವೋತ್ತಮ ಭಾಷೆಯ ನಿತ್ತಿಹ ಕಾರಣದಿ ಉತ್ತಮ ಶ್ರೀಪಾದ ಎತ್ತಲು ಬೇಕೆಂದು ಒತ್ತಾಯಗೈದ ಮೋದಿ 1 ಮತ್ತೊಂದು ಕಾರಣ ಉಂಟು ಶ್ರೀಹರಿಗಿವ ನಿತ್ಯವಾಹನ ಕಾಣೆಲೆ ಇತ್ತ ಪಯಣಗೈವೊಡತ್ತಬೇಕಾದರೆ ಭೃತ್ಯನಿವನು ಹೇ ಬಾಲೆ 2 ಆದಕಾರಣದಿಂದ ನಾದಿನಿ ಕೇಳೆ ಪ- ಕ್ಷಾದಿಯೊಳಿವನ ಮ್ಯಾಲೆ ಪಾದವ ನೀಡಿ ವಯೋದಯದಿಂದ ಶ್ರೀ ಮಾಧವ ಬರುವ ಕಾಣೆ 3 ಕೇರಿಕೇರಿಯ ಮನೆಯಾರತಿಗಳನೆಲ್ಲ ಶ್ರೀರಮಾಧವ ಕೊಳ್ಳುತ ಭೂರಿ ವಾದ್ಯಗಳ ಮಹಾರವದಿಂದಲಿ ಸಾರಿ ಬರುವನು ಸುತ್ತ 4 ಭಾವೆ ನೀ ಕೇಳೆ ನಾನಾ ವಿಧದಿಂದಲಿ ಸೇವಕರಿಗೆ ದಯದಿ ಪಾವನಗೈದು ಮಹಾವಿನೋದೇಕಾಂತ ಸೇವೆಯ ಗೊಂಡ ಕಾಣೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರತಿಮೆ ಪೂಜೆಗಳವು ಪರ-ಮಾರ್ಥವಲ್ಲವು ಪಾಮರರಿಗೆ ಅದು ಸಾಧನವುಪ್ರತಿಮೆ ಪೂಜೆಯು ತಿಳಿದವರಿಗೆಉತ್ತಮವಲ್ಲದ ಪರಮಾತ್ಮ ಪ್ರತ್ಯಕ್ಷ ನೀವೆನ್ನಿ ಪ ಶುನಕ ಮನೆ ಮುಂದಿತ್ತು ಆದರೆಬಲ್ಲತೊದರಿ ಮನೆಯ ಉಳುಹುವುದು 1 ದಂಡು ಬರಲು ದೇವರನು ಹೊರು ಎಂಬರುಮುಂದೆ ಏನು ಕೆಲಸವಿಲ್ಲವುಮುಂದೆ ಉರಿಯುವುದು ಹೊತ್ತರೆ ಹಗುರವಿಲ್ಲಚಂಡ ಚೈತನ್ಯಾತ್ಮೆ ನೀವೆನ್ನಿರಿ 2 ಬೆಕ್ಕನೆ ಹಿಡಿದೊಯ್ಯೆ ಇಲಿಗಳ ಹಿಡಿಯುವುದುಬಟ್ಟೆ ಬರಿಯ ಜೋಪಾನ ಮಾಡುವುದುಬೆಕ್ಕು ಪ್ರಯೋಜನ ದೇವರಪ್ರಯೋಜನತಕ್ಕವು ಪರಮಾತ್ಮ ನೀವೆನ್ನಿರಿ 3 ಪ್ರತಿಮೆಗಳ ಯೋಗ್ಯವಲ್ಲ ಬ್ರಹ್ಮವಾದೀಪ್ರತಿಮೆ ಎಂತು ಯೋಗ್ಯ ಪಂಚಾಳನವುಪ್ರತಿಮೆ ಎಂಬುವು ಜಡಬೊಂಬೆಸಂಶಯವಿಲ್ಲ ಪರವಿಲ್ಲ ಪರವಸ್ತು ನೀವೆನ್ನಿರಿ 4 ಕಾಲ ಪರಿ ದೇವರ5
--------------
ಚಿದಾನಂದ ಅವಧೂತರು
ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು