ಒಟ್ಟು 335 ಕಡೆಗಳಲ್ಲಿ , 2 ದಾಸರು , 313 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾರಸಭವ ಮೋಹಿತೆ ದೇವಿ ಜಗನ್ಮಾತೆ ಪ ಚಾರುಕೀರ್ತಿ ಪರಿಶೋಭಿತೆ ಲಾವಣ್ಯಾಂಬರಭೂಷಿತೆ ಅ.ಪ ಸುರನುತೆ ಶಾರದೆ ಬುಧಗಣಸೇವಿತೆ ಮಯೂರರಂಜಿತೆ ವರ ಮಾಂಗಿರಿವರ ಭಾವಿತೆ ಪಾಹಿಮಾಂ ಲೋಕವಂದಿತೆ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಾಸಿರ ನಾಮವ ಹಾಡೆ | ತಂಗಿ ಪ ದಾಸರು ಬಂದರೆ ಕೈ ಜೋಡಿಸಿ ವಂದಿಸೆ ತೋಷದಿ ವರಗಳ ಸೀಡುವರಮ್ಮ ಅ.ಪ ಪರಿಮಳ ಭರದಲಿ ಮೆರೆಯುವ ಹೂಗಳ ಅರಸಿ ತಂದಿರುವಳು ನೀನಲ್ಲವೇ ಪರಮ ಮಂಗಳಕರ ಸರಸಿಜಪಾದಕೆ ಹರುಷದೊಳರ್ಪಿಸೆ ಮರೆಯದಿರಮ್ಮ 1 ಮಂದರಧರ ಗೋವಿಂದನು ಮನದಲಿ ನಿಂದಿರುವನು ತಾನೆಂದೆಣಿಸಮ್ಮ ಬಂಧಿಸಿ ಪಂಚೇಂದ್ರಿಯಗಳನೆಲ್ಲ ವಂದಿಸಿ ಕೈಪಿಡಿ ಎಂದು ಬೇಡಮ್ಮ 2 ಅಂಗನೆಯರ ಭಾವಭಂಗಿಗೆ ನಲಿಯುವ ಮಾಂಗಿರಿಯರಸನು ನಿಜವಮ್ಮ ಇಂಗಿತವರಿತು ಗೋಪಾಂಗನೆಯರಿಗಾ- ಲಿಂಗನವಿತ್ತವನಿವನಮ್ಮ 3 ಇವನಮ್ಮ ಮನದೈವ ಗೋಪಾಲನು ಇವನಮ್ಮ ಪರದೈವ ನೀಲಾಂಗನು ಭವದೂರ ಸುಕುಮಾರ ಸಿರಿಲೋಲನು ನವನೀತ ದಧಿಚೋರ ಸುವಿಲಾಸನು 4 ಪರಮಾರ್ಥ ಚರಿತಾರ್ಥ ವರದಾತನು ಪರತತ್ವ ಚಿರತತ್ವ ಗುರುವೀತನು ದುರಿತಾರಿ ಉಪಕಾರಿ ಪರಮಾತ್ಮನು ಸಿರಿರಂಗ ಮಾಂಗಿರಿಯ ದೊರೆಯೀತನು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಿಕ್ಕದೆ ಪೋಪೆಯೇತಕೆ ಮಾಂಗಿರಿರಂಗ ಪ ಸಿಕ್ಕದೆ ಪೋಪೆಯೇಕೆ ಠಕ್ಕುಮಾಡುವೆಯೇಕೆ ಅಕ್ಕರೆಯಿಂದ ನಾ ಸಕ್ಕರೆ ಕೊಡುವೆನೆ ಅ.ಪ ಚಿಣ್ಣರ ಕೂಡಾಡಿ ಕಣ್ಣುಸನ್ನೆಯ ಮಾಡಿ ಸಣ್ಣಕೊಳಲಪಾಡಿ ಬೆಣ್ಣೆಗಳ್ಳ ರಂಗಾ1 ಪಿಡಿದು ಬರುವೆನೆಂದು ಕಡಲಿನೊಳಗೆ ಮಿಂದು ಪೊಡವಿದೇವಿಯ ತಂದು ಕಡುನೊಂದುದಾಯ್ತಿನ್ನು 2 ತರಳ ಪ್ರಹ್ಲಾದನು ಕರೆಯುತಲಿಹನೇ ನಿನ್ನ ಕರದೆ ಬೆಣ್ಣೆಯನಿಟ್ಟು ಕರುಣಾಳು ಬಾರೆನಲ 3 ಕಡುನುಡಿಗಳ ಕೇಳಿ ಪಿಡಿಯಲಾರೆನೇ ನನ್ನ ಕಡೆಗಣಿಸಲಿ ಬೇಡ ಅಡಿಗೆರಗುವೆ ರಂಗಾ 4 ಮಾಂಗಿರಿಮೇಗಿಹ ಶೃಂಗಾರ ದೇವಯ್ಯ ರಂಗ ನೀನೆನ್ನಂತರಂಗ ದೇವದೇವಾ 5 ತಾಮರಸಾಕ್ಷನೆ ಕಾಮಿತ ದಾತನೆ ರಾಮದಾಸಾರ್ಚಿತ ಭೀಮವಿಕ್ರಮ ರಂಗಾ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸುನಾಮ ಗುರುವಂದಿತ ಶ್ರೀರಾಮ ಪ ಅಹಿಭೂಷಣ ನುತರಾಮ | ಮಹಿಜಾಪ್ರಿಯ ಶ್ರೀರಾಮ ಅ.ಪ ದಶರಥೇಂದ್ರ ಸುಕುಮಾರ | ನಿಶಿಚರಾಳಿ ಸಂಹಾರ | ಕೌಶಿಕ ಭಯ ಪರಿಹಾರ | ಪರಮಶೂರ ಶ್ರೀರಾಮ 1 ಮುನಿಗೌತಮ ಸತಿಪಾವನ | ಜನಕಾತ್ಮಜ ಮನಮೋಹನ | ಮುನಿಸನ್ನುತ ಸುರಜೀವನ | ವನಜೇಕ್ಷಣ ಶ್ರೀರಾಮ 2 ಜನಕಜಾ ಸುಮಿತ್ರಜಾಯುತ | ವನವನಾಂತರ ಸಂಚರಿತ | ಸನಕಾನತ ಶ್ರೀರಾಮ 3 ಭರತಾನತ ಪೂಜ್ಯಪಾದ | ಪರಮಾದ್ಭುತ ಶರ ವಿನೋದ | ಸುರಭೀಕರ ದೈತ್ಯಸೂದ | ಅಭಯಪ್ರದ ಶ್ರೀರಾಮ 4 ಖಚರಾಧಿಪ ಪ್ಲವಗೇಶ್ವರರಾಮ ವರದಾಯಕ ಭಯಹಾರಕ ರಾಮ | ಶುಭಕಾರಕ ಶ್ರೀರಾಮ 5 ನಿಶಿಚರ ಕಾಲಾಂತಕ ರಣಭೀಮ | ಸನ್ನುತ ಶ್ರೀರಾಮ 6 ಭುವನೋದ್ಧಾರಣ ಕಂಕಣ ರಾಮಾ | ಭುವನಾನಂದದ ಶ್ರೀರಾಮಾ 7 ದಾವಾನಲ ಸಮರಂಜಕ ರಾಮಾ | ರಾವಣಕುಲ ವಿಧ್ವಂಸಕ ರಾಮಾ | ಸೀತಾನಾಯಕ ಶ್ರೀರಾಮಾ 8 ರಾಕಾಚಂದ್ರ ಸುಧಾಕರ ರಾಮಾ | ಏಕಚಕ್ರಾಧಿಪ ರಘುರಾಮ | ಲೋಕಸುಖಂಕರ ಶ್ರೀರಾಮ 9 ಅಂಗದ ಹನುಮತ್ಸೇವಿತರಾಮ | ಮಂಗಳಕರ ಸೀತಾರಾಮ | ಮಾಂಗಿರಿನಿಲಯ ಶುಭಾನ್ವಿತ ರಾಮ | ಜಗವಂದಿತ ಶ್ರೀರಾಮ10
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸುಮ್ಮನಿಹುದು ನ್ಯಾಯವೇ ಪ ದಮ್ಮಯ್ಯ ಪೊರೆಯೆನಲು ಒಮ್ಮೆಯಾದರೂ ಎನ್ನ ದುಮ್ಮಾನವೇನೆಂದು ನಮ್ಮಯ್ಯ ಕೇಳಲಿಲ್ಲ ಅ.ಪ ಸಣ್ಣ ಬಾಲಕನೊಬ್ಬ ಕಣ್ಣೀರ ಸುರಿಸಲು ಪುಣ್ಯ ಲೋಕವನಿತ್ತಮ್ಮಾ ಕಣ್ಣುಕಾಣದೆ ಗೊಂಡಾರಣ್ಯಮಧ್ಯದಿ ನಾನು ಬಣ್ಣಿಸಿ ಕರೆದರೂ ಕಣ್ಣೆತ್ತಿ ನೋಡಲಿಲ್ಲವಮ್ಮಾ 1 ಪರಿದೋಡಿದನಮ್ಮ ನಮ್ಮಯ್ಶ ದುರಿತವಾರಿಧಿಯಲಿ ಕೊರಗುತಲಿಹ ಎನ್ನ ಅರಿತು ಅರಿಯದಂತೆ ಇರುವನಲ್ಲ ಇಂದಿರಮ್ಮ 2 ಮೃತಿಯ ವೇಳೆಯೊಳೊಬ್ಬ ಸುತನಕರೆಯಲಾಗ ಹಿತದಿ ಸೌಖ್ಯವನಿತ್ತನು [ಕೇಳಮ್ಮಾ] ಮಾಂಗಿರಿರಂಗ ಪತಿತಪಾವನಾಯೆಂದು ನುತಿಸಿ ಬೇಡಿದರೂ ಸಂಗತಿಯೇನೊ ಎನಲಿಲ್ಲ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸುರೇಶ ಪದವಿಯ ಬೇಡುವನಲ್ಲ ನರೇಶ ಭಾಗ್ಯವ ಕೋರುವನಲ್ಲ ಪ ಗುರೂಪದೇಶವ ಮರೆಯುವನಲ್ಲ ಪರೇಶ ಸ್ಮರಣೆಯ ಬಿಡುವವನಲ್ಲ ಅ.ಪ ಜನನ ಮರಣಕೇ ಹೆದರುವನಲ್ಲ ಜನುಮಗಳು ಬೇಡ ಎನ್ನುವನಲ್ಲ ಮನದಿ ವ್ಯಾಮೋಹವ ಪಡೆಯುವನಲ್ಲ ವನಜನಾಭನ ನಾಮ ಮರೆಯುವನಲ್ಲ1 ನಿನ್ನ ಚರಿತಗಳ ಕೇಳದೆ ಬಿಡೆನು ನಿನ್ನ ಮೂರ್ತಿಯ ನೋಡದೆ ಬಿಡೆನು ನಿನ್ನ ಪಾದಾರ್ಚನೆ ಮಾಡದೆ ಬಿಡೆನು [ನಿನ್ನ ನಾಮಂಗಳ ನುತಿಸದೆ ಬಿಡೆನು] 2 ಮಾಂಗಿರಿಪತಿ ನಿನ್ನ ಒಲಿಸದೆ ಬಿಡೆನು ಕಂಗಳಿಂದಾನಂದ ಪಡೆಯದೆ ಬಿಡೆನು ಅಂಗಾಂಗದ ಸೇವೆ ಮಾಡದೆ ಬಿಡೆನು ರಂಗ ಸಮರ್ಪಣ ಎನ್ನದೆ ಬಿಡೆನು 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸುಲಲಿತ ಮಧುಕರ ಕೊಳಲನೂದುವುದನು ಕಲಿಸಿದರಾರೇ ನಳಿನಮುಖೀ ರಾಧೇ ಪ ಬಲಿಸಂಹಾರನು ಲೋಕದ ನಾರಿಯ ರಲಸದೆ ಗಾನವ ಕಲಿಸಿದನೇನೇ ಅ.ಪ ಕರು ತುರುಗಳ ಬಳಿ ಸರಸವನಾಡುತ ಮುರಳಿಯನೂದುವ ಸರಸಿಜನಾಭ ಕರೆಕರೆದು ನಿನ್ನ ಬೆರಳಿಗುಂಗುರವಿಟ್ಟು ಸ್ವರಗಳ ಬೋಧಿಸಿ ನಲಿನಲಿದಿಹನೇನೇ 1 ಬೃಂದಾವನದಲಿ ನಂದಕುಮಾರನ ವಂದಿಸೆ ನಾರದ ಬಂದುಹಾಡಿದನೇ ಅಂದದ ಕಲಿಕೆಯ ತುಂಬುರ ನಿನಗಾ ನಂದದಿ ಗಾನವ ಕಲಿಸಿದನೇನೆ 2 ಅಂಗಜಪಿತನಿಗೆ ಮಂಗಳಗಾನವ ಅಂಗನೆ ಶಾರದೆ ಪಾಡಿದಳೇನೇ ಮಾಂಗಿರಿರಂಗ ಮಾತಂಗವರದನಂತ ರಂಗದರಾಣಿ ನೀ ಕಲಿಯೆಂದನೇನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹಣವನರಸುವರೆಲ್ಲ ಗುಣವನರಸುವರೆ ಮಣಿಯನರಸುವ ಕೆಲರು ಹಣಕೆ ಬಾಯ್ ಬಿಡರೆ ಪ ನೀಡುವವನೊಬ್ಬನಿರೆ ಬೇಡವೆಂಬುವರಿಹರೆ ನೀಡಲೊಲ್ಲದ ನರನ ನೋಡುವವರಿಹರೆ ಬೀಡು ಹೆಚ್ಚಳಸಿರಿಯ ನೀಡೆನಗೆ ತನಗೆಂಬ ನಾಡಿಗರ ಗಡಣವನು ಎಣಿಸಲಳವೇ 1 ಕಲಿಯುಗದ ನೀತಿಯೋ ಬಲುದುರಾಸೆಯ ಬಲೆಯೋ ಸಲೆ ಬೆಳೆದಸೂಯೆಯೋ ಕಲಿತ ದುರ್ನೀತಿಯೋ ಜಲಜಾಕ್ಷನನೀ ದುಶ್ಶೀಲ ಪ್ರವಾಹದಲಿ ಅಲೆಯಬಿಡಬೇಡಯ್ಯ ಮಾಂಗಿರಿಯ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹರಿಪಾದ ತೀರ್ಥವನು ಕರದಿ ಪಿಡಿದವರೆಲ್ಲ ತಿರುನಾಮದವರೆನಲು ನಂಬಬಹುದೇ ಪ ಪರವಾಸುದೇವನನು ಮರೆತು ಸತಿಸುತರ ವರಾಭರಣವೇ ಹಿರಿದೆಂಬ ನರರಿಲ್ಲವೇ ಅ.ಪ ಹರಿನಿವೇದನಕಾಗಿ ಕರದಿ ಫಲಪುಷ್ಪಗಳ ತರುವವರು ದಕ್ಷಿಣೆಯ ಇರಿಸಿಹರೋ ಎಂದು ಪರಿಪರಿಯ ದೃಷ್ಟಿಯಲಿ ಪರಿಕಿಸುತ ಅಲ್ಲವೆಂ ದರಿತಾಗ ಕೋಪ ನಿಷ್ಠುರ ಗೈಯುವರು 1 ಈಶಾಯನಮಃ ಓಂ ಶ್ರೀಶಾಯ ನಮಃ ಪ ರೇಶಾಯ ನಮಃ ಎಂಬುದಕೆ ಬದಲು ಆಶೋತ್ತರವನಾಂತು ಕ್ಲೇಶಪೂರಿತರಾಗಿ ನಾಶವಾಗಲಿ ಕುಡದಜನರೆಂಬರಕಟಾ 2 ಮಾನವೋತ್ತಮ ಮಾತ್ರ ತಿರುನಾಮಧಾರಿ ಜ್ಞಾನಿ ಇಂಥವನಿಂದ ತೀರ್ಥವನು ಪಡೆದವರು ಶ್ರೀನಾಥ ಮಾಂಗಿರಿಯ ಭಕ್ತರೆನಿಸುವರು3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹರೇ ರಾಘವ ಪಾಲಯ ಚಿರಕರುಣಾಲಯ ಅಪ್ರಮೇಯ ಪ ಕೇಸರಿ ದ್ವಿಜಾವತಾರಿ ಪರೇಶ ಮುರಳಿ ಧರೇಶ ಶೌರಿ ವಿರಾಧ ಮಾರೀಚ ದಶಾನನಾರಿ ಸರೋಜನೇತ್ರ ಮಾಂಗಿರಿವಿಹಾರಿ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹಿಡಿದ ಕೈಬಿಡಬೇಡವೋ ರಾಮಾ ಪ ಹಿಡಿದ ಕೈ ಬಿಡಬೇಡ ಕಡಲವಾಸವು ಬೇಡ ತಡಿಗೆ ತಳೆಯದಿರಬೇಡ ಕಡೆಗಣ್ಣಿಡ ಬೇಡ ಅ.ಪ ನುಡಿ ಕೇಳದೆನಬೇಡ ಅಡಿದೋರದಿರ ಬೇಡ ಕುಡುಕ ಹೋಗೆನಬೇಡ ನುಡಿಸದಿರ ಬೇಡ ಕೊಡು ಕೊಡೆನ್ನಿಸಬೇಡ | ಪಡೆಯುವಾಸೆಯು ಬೇಡ ದೃಢವಾಗಿ ನಿನ್ನಡಿಯ ಹಿಡಿಸದಿರ ಬೇಡ 1 ಬಿಗುಮಾನ ಬೇಡಯ್ಯ ನಗುಮೊಗವ ತೋರಯ್ಯ ಬಗೆಯರಿತು ನಡೆಸಯ್ಯ ಸುಗತಿದೋರಯ್ಯ ಬಿಗಿಹಿಡಿದ ಕೈಯ ಜಗುಳಿಸಲು ಬೇಡಯ್ಯ ನಿಗಮ ವಂದಿತಜೀಯ ಮಾಂಗಿರಿಯ ರಂಗಯ್ಯ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹುಚ್ಚು ಹಿಡಿಯಬೇಕು ಭಜನೆಯ ರಚ್ಚೆ ತೊಡಗ ಬೇಕು ಪ [ಮೆಚ್ಚುತ] ಅಚ್ಯುತನಾಮವ ಉಚ್ಚರಿಸುತಲಿರೆ ಕಿಚ್ಚೂ ಮಂಜಹುದು ಅ.ಪ ನೇರುತಲಿರಬೇಕು ಊರುಹೆಜ್ಜೆಗೂ ನಾರಾಯಣ ನಾಮೋ ಚ್ಚಾರದ ಹಸಿವು ಬಾಯಾರಿಕೆಯಾಗುವತನಕ 1 ಕೀರ್ತನೆಯಲಿ ಮುಳುಗಿ ಕೃಷ್ಣನ ಮೂರ್ತಿಯ ಕಾಣುತಲಿ ಪಾರ್ಥಸಾರಥಿಯವ ಅನಾಥರಕ್ಷಕನೆಂಬ ಕೀರ್ತಿಯನಾಂತ ಮಾಂಗಿರಿಯ ಭಜನೆಯಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹೊಂಗೊಳಲೂದುತ ಬರುವ ರಂಗ ಮಂಗಳ ಗಾನಕೆ ನಲಿವ ಪ ಅಂಗನೆಯರ ಕೂಡಾಡುತೆ ಕುಣಿವ ರಂಗನ ಪಾದಕೆ ಮಣಿವ ಅ.ಪ ಕಿರುನಗೆ ನಸುನಗೆ ನಗುವ ಮರಕತಹಾರದಿ ಹೊಳೆವ ಸ್ಮರವರನಂದವ ಹಳಿವ ಕರುಣವ ಬೀರುತ ಒಲಿವ 1 ಗಾನದಿ ಮನವನು ಸೆಳೆವ ಧ್ಯಾನಕೆ ತನುಮನ ತೆರುವ ಸನ್ನುತ ಪದವಿಯ ಕೊಡುವ ಮಾಂಗಿರಿ ರಂಗಗೆ ಮಣಿವ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್