ಒಟ್ಟು 1764 ಕಡೆಗಳಲ್ಲಿ , 104 ದಾಸರು , 1291 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ಷಣತೋರಿ ಇಲ್ಲದಂತಾಗುವ ವಿಷಮ ಮಹ ಕನಸಿನ ಮೋಹದಿಂ ಕೆಡಬೇಡ ಮನುಜ ಪ ಹಲವು ಜನಮದಿ ಬಿದ್ದು ತಿಳಿಯದೆ ಇಹ್ಯಪರಕೆ ತೊಳಲುತ ಬಳಲುತ ತಿರುತಿರುಗಿ ಗಳಿಸಿದ ನರಜನುಮ ವಿವರಿಸಿ ನೋಡದೆ ಕಳಕೊಂಡು ಬಳಿಕಿನ್ನು ಸುಲಭವಲ್ಲೆಲೆ ಖೋಡಿ 1 ನೀರಮೇಲಣ ಗುರುಳೆಯಂತೆ ಕಾಂಬುವ ಈ ನರಕ ಮೂತ್ರದ ತನುಭಾಂಡವಿದು ಅರಿಯದೆ ಮೋಹಿಸಿ ಪರಿಪರಿ ಕುಣಿಕುಣಿದು ಪರಮ ರೌರವ ನರಕಕ್ಹೋಗ ಬೇಡೆಲೆ ಖೋಡಿ 2 ಜವನÀದೂತರು ಬಂದು ಕವಿದುಕೊಳ್ಳಲು ಆಗ ಕಾಯುವರಾರಿಲ್ಲ ಕೈಪಿಡಿದು ದಿವನಿಶೆಯೆನ್ನದೆ ಭವಹರ ಶ್ರೀರಾಮ ದೇವನ ನೆರೆನಂಬಿ ಭವಮಾಲೆ ಗೆಲಿಯೊ 3
--------------
ರಾಮದಾಸರು
ಕ್ಷಮಾ ಪ್ರಾರ್ಥನೆ ಗುರುಹಿರಿಯರೆಡೆಯಲ್ಲಿ ಶಿರಬಾಗಿಸಿನಯದಲಿ ಎರೆವೆನೀಪರಿಯಲ್ಲಿ ಕರವಮುಗಿದು ಯತಿನಿಯಮ ಛಂದಸ್ಸು ಗತಿತಾಳಲಯಬಂಧ ನುತಶಬ್ದ ತತ್ವಾರ್ಥ ಸಂಗತಿಯನು ವರಕವಿಗಳೊರೆದಿರ್ಪ ತರತರದ ಪ್ರಾಸಗಳ ವರಲಕ್ಯಣಲಂಕಾರ ಮೆಂಬ ಪರಿಕರಂಗಳನರಿದು ಪರಿಪರೀಸಿಂಗರಿಸ ಲರಿಯೆ ಕವಿತಾಮಣಿಯ ಪರಿಯನರಿಯೆ ಸರಿಸದೋಳ್‍ನಿಂದೆ ನೆಂದರಿಯ ಬೇಡಿ ಅರಿಯದಾತರಳೆ ರಚಿಸಿದುದನುನೋಡಿ ಹಿರಿಯರೊಳುಗರುವತೋರಿದೆನೆನ್ನ ಬೇಡಿ ಸರಿದೋರಿದಂತೆಸಿಗೆ ಕೃಪೆಮಾಡಿ ಸಮರ್ಪಣೆ ತ್ವದ್ದತ್ತವಾಚಾ ತವಕಿಂಕರೇಣ ತ್ಪತ್ಪ್ರೀತಿ ಕಾಮೇನ ಮಯಾಕೃತೇನ | ಸ್ತೋತ್ರೇಣ ಲಕ್ಷ್ಮೀನೃಹರೇ ಸವಿಷ್ಣುಃ ಪ್ರೀತೋಭವತ್ಪಂ ಕರುಣಾದ್ರ್ರದೃಷ್ಟಿಃ ||
--------------
ನಂಜನಗೂಡು ತಿರುಮಲಾಂಬಾ
ಖೋಡಿಗುಣ ಜಗದಲ್ಲಿ ಹೂಡಿ ನೀ ನಲಿವಾಗ ನಾಡೆದ್ದು ಕುಣಿಯುವದೊ ನಾಸ್ತಿಕಾದಲ್ಲಿ ಪ ಮಾಡಿ ದುಪ್ಕ್ರಿಯ ಜಾಲ ಮತಿಭ್ರಷ್ಟತನದಲ್ಲಿ ನೋಡರೂ ಸನ್ಮಾರ್ಗ ಗಾಡಿಕಾರನೆ ಹರಿಯೆ ಅ.ಪ ಗತಿಸಿದಾ ತನುಗಳಲಿ ರತಿವಿಷಯಗಳ ಮಾಡಿ ಮತಿ ಮನಸು ದುರ್ಭಾವಗಳಲಿ ನೆಯದು ಮತ್ರ್ಯರನು ನೋಡಲತಿ ಭೀತಿ ಆಹುದೊ ಮನಕೆ 1 ನಾನಾಭಾವವ ಪೊಂದಿ ಹಾನಿವಶರಾಗಿಹರು ಜ್ಞಾನನಿಧಿ ತವಕರುಣಕೆರವಾಗಿ ನಡೆದು ನಾನಾ ದುಃಖದಿ ನರಳಿ ನರಕ ಯಾತನೆಗೊಂಬ ಜ್ಞಾನಹೀನರ ನೋಡಿ ನಡುಗುವೆನೊ ಹರಿಕಾಯೊ 2 ಕ್ವಚಿತು ಸಜ್ಜನ ತಾವು ಶುಚಿ ಮನದಿ ನಿನ್ನಲ್ಲಿ ರುಚಿಗೊಳಲು ಎತ್ತೆನಿಸೆ ಎದೆ ಬಿಚ್ಚುವಂತೆ ಹೆಚ್ಚಿ ಆದಿವ್ಯಾಧಿ ನುಚ್ಚು ಮಾಳ್ಪದೊ ಮನಸು ಸಚ್ಚಿದಾನಂದ ಹರಿ ಸಜ್ಜನಾಧಾರಿ ಧೊರಿ3 ವಿಧಿ ಲಕ್ಷ್ಮಿ ಸನ್ನತ ಮಹಿಮ ಬಂದ ಭಯಗಳು ನಿನ್ನ ಇಚ್ಛೆಯಿಂದ ಬಂದದಲ್ಲದೆ ಬೇರೆ ಒಂದು ಕಾರಣ ಕಾಣೆ ಸಿಂಧು ಕೊಡುವವ ನೀನೆ4 ತಾಮಸರ ವಿಕಾರ ದುಃಖರಸÀ ಸೃಜಿಸುವುದು ಸೌಮ್ಯ ಜನ ಸದ್ಭಾವ ಸುಖಸಾರ ಸೃಷ್ಟಿ ಕಾಮಧೇನು ಜಯೇಶವಿಠಲಯ್ಯ ನಿನ್ನ ಮಹ ನೇಮ ಇಂಥಾದ್ದೆ ಪತಿತ ಪಾವನ ಪಾಹಿ 5
--------------
ಜಯೇಶವಿಠಲ
ಗಂಗಾ ಜನಕ ವಿಠಲ | ಅಂಗನೆಯ ಪೊರೆಯೋ ಪ ಮಂಗಳಾಂಗನೆ ದೇವ | ರಂಗ ಭವಹಾರೀ ಅ.ಪ. ವೈರಾಗ್ಯ ಭಾಗ್ಯಗಳ | ಹಾರೈಸುವಂತೆಸಗೋಸಾರಸುಖ ಸಾಂದ್ರ ಹರಿ | ಮಾರಮಣ ದೇವಾ |ಘೋರ ಭವವೆನಿಪ ಕೂ | ಪಾಠ ದಾಟಿಸೊ ಹರಿಯೆಕಾರುಣ್ಯ ಶರಧಿತವ | ಓರೆ ನೋಟದಲೀ1 ಗಣನೆಗೊಳಗಾಗದಿಹ | ಜನನ ಮರಣವು ಬರಲಿತನು ಮನದ ಸಂತಾಪ | ಅಣು ಬೃಹತು ಇರಲೀಗುಣ ಪೂರ್ಣ ಶ್ರೀಹರಿಯೆ | ಗಣನೆಗದು ಸಿಗದ ತೆರಅನನುತನೆ ನಿನ್ನ ಕಾರುಣ್ಯ ಒಂದಿರಲೀ 2 ಅಂಗನೆಗೆ ಸ್ವಪ್ನದಲಿ | ಗಂಗೆ ಮೀಯಿಸಿ ಬಾಲಸಂಗದಲಿ ಧವಳಾಖ್ಯ | ಗಂಗೆ ಸೋಪಾನಾಭಂಗ ವಿಲ್ಲದೆ ಯೇರಿ | ಮಂಗಳಾಂಗೆರ ಕಂಡುಶಿಂಗರದಿ ಪೂಜಿಸಿಹ | ಅಂಗನಾ ಮಣಿಯಾ 3 ಉಚ್ಚ ನೀ ಚಂಗಳನು | ಸ್ವಚ್ಛ ತಿಳಿಸುತ್ತಿವಳಕೃಚ್ಛ್ರಕೇ ಒಲಿಯುತ್ತ | ಲಕ್ಷ್ಮೀ ರಮಣಾಅಚ್ಚ ಭಕುತಿ ಜ್ಞಾನ | ನಿಚ್ಚಳದ ಮನವಿತ್ತುಸಚ್ಚಿದಾನಂದಾತ್ಮ | ಉಚ್ಚಳೆಂದೆನಿಸೋ 4 ವಿಷ್ಣು ಪದಿಧರಸಖನೆ | ದಶರಥಾತ್ಮಜ ಹರಿಯೆಯಶವಂತೆ ಗೃಹಿಣಿ ತವ | ಎಸೆವಪದ ಬಿಸಜವನು ಹಸನು ಸೇರಿಸೊಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗಂಗೆ ನಿನಗೋಸ್ಕರ ನಾನು ನಮೋ ಎಂಬೆತುಂಗೆ ಎನ್ನ ಪಂಥವ ಕೇಳಿ ಗೆಲಿಸೆಂಬೆ ಪ. ಅಚ್ಯುತನ ನಖತಾಕಿ ಬಿಚ್ಚಿ ಬ್ರಹ್ಮಾಂಡವುಸ್ವಚ್ಚಜಲವಾಗಸುರಿದಾವುಸ್ವಚ್ಚ ಜಲವಾಗ ಸುರಿದಾವುಅಜನೋಡಿ ಉತ್ಸಾಹದಿ ನುತಿಸಿದ1 ತಂದೆಯ ನಖದಿಂದ ಬಂದ ಜಲಕಂಡು ಮಂದಜಾಸನು ಸ್ತುತಿಸಿದಮಂದಜಾಸನು ಸ್ತುತಿಸಿದ ಸರಸ್ವತಿಬಂದು ಆರುತಿಯ ಬೆಳಗೋಳು 2 ತುಂಬಿ ಭೂಮಂಡಲ ಪತಿಯ ಚರಣವಭೂಮಂಡಲ ಪತಿಯ ಚರಣವ ತೊಳೆಯಲುಕೊಂಡಾಡಿ ಹರನು ಧರಿಸಿದ 3 ರೇಣು ರೇಣು ಹರಿದಿಲ್ಲಿ ಬಂತೆಂದುಸುರರು ಸಂತೋಷಪಡುತಲಿ4 ವಿಷ್ಣುಪದಿಯೆಂದು ಇಟ್ಟರು ನಾಮವಧಿಟ್ಟ ರಾಮೇಶನ ಮಗಳಿಗೆ ಧಿಟ್ಟ ರಾಮೇಶನ ಮಗಳಿಗೆ ಧೃವರಾಯಎಷ್ಟು ಭಕ್ತಿಂದ ಸ್ತುತಿಸಿದ 5
--------------
ಗಲಗಲಿಅವ್ವನವರು
ಗಂಗೆ-ಕಾವೇರಿ ವಾತ ಸಂಗದಿ ಆವ ದೇಶವು ಧನ್ಯವೊ ಪ ಪಾವನಾತ್ಮಕ ಪ್ರಥಮ ಝಾವದಲಿ ಮಜ್ಜನವ ಗೈವ ಸುಜನರೇ ಧನ್ಯರೋಅ.ಪ ಆದಿ ಮಧ್ಯಾಂತರಂಗರ ಸೇವೆಯನು ಮಾಡಿ ಸಾಧಿಸಿದೆ ಮಾಂಗಲ್ಯವ ಹೋದ ದೇಶದಿ ಹೊನ್ನು ಮಳೆಗರೆವ ನಿನ್ನ ಪರ ಮಾದರದಿ ಸೇವಿಸುವರು 1 ಚೋಳ ಮಂಡಲಭಾಗ್ಯ ಪೇಳಸಾಧ್ಯವೆ ನಿನ್ನ ಲಾಲನೆಯ ಪಡೆಯುತಿರಲು ಕೇಳುವನು ನಿನ್ನಯ ಕೃಪಾಲವದಿ ತನು ಮನವ ಕೀಳು ವಿಷಯಕೆ ಬಿಡದಿರು 2 ಪುಣ್ಯನದಿಗಳಲಿ ಬಲು ಗಣ್ಯಸ್ಥಾನವ ಪಡೆದು ಮಾನ್ಯಳಾಗಿರುವೆ ಮಾತೆ ನಿನ್ನ ತೀರದಲಿ ನೆಲಸಿಹ ಜನಕೆ ಪರಗತಿ ಪ್ರ ಸನ್ನ ಮುಖಿ ನಿಶ್ಚಯವಿದು 3
--------------
ವಿದ್ಯಾಪ್ರಸನ್ನತೀರ್ಥರು
ಗಣನಾಥ ಮಣಿವೆನೊ ಗಣನಾಥ ಪ ಘನ ವಿಶ್ವಾರಾಧಕ ವಿಘ್ನ ವಿದಾರಕ ಅ.ಪ ಲಂಬ ಉದರ ವಿಳಂಬ ತಡೆಯಲಾರೆ ಶಂಭುಗೆ ಪೇಳು ಭವಾಂಬುಧಿಗಂಬಿಗ 1 ಭವ ಬಂಧನ ಮೋಚಕ ಗಾತ್ರ ಸುಂದರ ಗಜವಕ್ತ್ರ 2 ಪ್ರಾಣಾವಿಷ್ಟ ಪ್ರಭು ಪ್ರಾಣಾ ಜಯೇಶ ವಿಠಲನರಿಸುವ ವಿಘ್ನ ನಿವಾರಿಸು 3
--------------
ಜಯೇಶವಿಠಲ
ಗಳಿಸಿದೆ ನಾಕಳತಿ ತಿಳಿಯದೆ ನಿನ್ನಳತಿ ಅಳೆದು ಹಾಕಿ ತೊಳಲಿ ಬಳಲಿದೆ ಚಿತ್ತ ಹೊಲತಿ 1 ಏಸು ಜನ್ಮ ತಾಳಿ ಹೆಸಲಿಲ್ಲ ಮೂಳಿ ಘಾಸಿಯಾದೆ ಸೋಶಿಲಿನ್ನು ಆಶಿಯಲಿ ಬಾಳಿ 2 ವಿಷಯದಾಶಿವಳಗ ವಶವನೀಗೊಂಡಲಗ ಪಶುವಿನಂತೆಗಳದಿ ಜನ್ಮವ್ಯಸನದಾಶಿ ಕೆಳಗೆ 3 ಏನ ನೀನಾದರ ಜ್ಞಾನಹೀನನಾದರೆ ಭಾನುಕೋಟಿ ತೇಜನ ನೀ ಶರಣು ಪುಗು ಇನ್ನಾರೆ 4 ಪಿಡಿದು ನಿಜಖೂನ ಪಡೆದುಕೋ ಸುಜ್ಞಾನ ಬಿಡದೆ ಸಹಲುತ್ಹಾನೆ ಮಹಿಪತಿಯ ಸ್ವಾಮಿ ಪೂರ್ಣ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗಾಳಿಗಿಟ್ಟ ದೀಪಕಾಣಿರೋ ಈ ಸಂಸಾರ ಗಾಳಿಗಿಟ್ಟ ದೀಪಕಾಣಿರೋ ಪ ಗಾಳಿಗಿಟ್ಟ ದೀಪಕಾಣಿರೋ ಬೀಳು ಜಗದ ಬಾಳು ಎಲ್ಲ ನೀಲಶಾಮನ ಪಾದನಂಬಿ ಕಾಲನಾಳಿನ ದಾಳಿ ಗೆಲಿಯಿರೋ ಅ.ಪ ಸೂತ್ರಬೊಂಬೆಯಂತೆ ಕುಣಿಯುವ ಈ ದೇಹವೆಂಬ ತುಂಬಿ ತುಳುಕುವ ಆ ಗಾಳಿ ನಿಮಗೆ ಸೂತ್ರಧಾರಿಯ ಭಜಿಸಿ ಭವದ ಯಾತ್ರೆ ಜಯವ ಪೊಂದಿರಯ್ಯ 1 ಮಾಯೆಯಿಂದ ಕಲ್ಪಿಸಿರುವ ಈ ಮಾಯಕಲ್ಪ ಮಾಯೆಯೊಳಗೆ ಲಯಿಸುತಿರುವ ಆ ಮಾಯಗಾರ ಮಾಯದಾಟ ಆಡುತಿರುವ ತಿಳಿರೋ ನಿಜವ ಮಾಯತುಂಬಿ ಮಾಯಬೆಳಗಿ ಮಾಯಜಗವೆನಿಸಿ ತೋರ್ಪ ಮಾಯಮಹಿಮನ ಮರೆಯಬಿದ್ದು ಮಾಯಮೃತ್ಯು ಗೆಲ್ಲಿರಯ್ಯ 2 ವಿಷಮಕನಸಿನಂತೆ ತೋರುವ ಈ ಇಂದ್ರಜಾಲ ಹಸನಗೆಡಿಸಿ ನಿಮಿಷದಡಗುವ ಈ ಹೇಯ ಮಲ ಅಸಮಸುಖಕೆ ಬೆಂಕಿಹಚ್ಚುವ ಪಾಪಕೊಂಡವ ಅಸಮಜ್ಞಾನದಿಂದ ದಾಂಟಿ ವಸುಧೆಗಧಿಕ ಶ್ರೀರಾಮಪಾದ ಕುಸುಮಕ್ಹೊಂದಿ ನಿರ್ಮಲೆನಿಸಿ ಎಸೆವಮೋಕ್ಷ ಪಡೆಯಿರಯ್ಯ 3
--------------
ರಾಮದಾಸರು
ಗಿI. ಲೋಕ ನೀತಿ ಅಮೃತ ಸುರಿದಂತೆ ಸಜ್ಜನರ ಸಂಗ ಅಮೃತ ಸುರಿದಂತೆ ಪ ಅಮೃತುಂಡಿತಿಹ್ಯ ಸಾಮ್ರಾಜ್ಯದಲಿ ಬಂದು ನಮ್ರತೆಯಿಂದಪಮೃತ್ಯು ಗೆಲಿಸುವಂಥ ಅ.ಪ ಮಾಯ ಮುಸುಕು ತೆಗೆಸಿ ನಿರುತ ಕಾಯಕರ್ಮ ಕೆಡಿಸಿ ಭಾವಶುದ್ಧಮಾಡಿ ಸಾವಧಾನವಿತ್ತು ಸಾವು ಹುಟ್ಟಳುಕಿಸಿ ಪಾವನವೆನಿಸುವ ದಿವ್ಯ 1 ಆಶಪಾಶಕಡಿದು ವಿಷಯ ದ್ವಾಸನೆಯನು ತೊಡೆದು ದೋಷರಾಶಿಗಳ ನಾಶಮಾಡಿ ಭವ ಘಾಸಿ ತಪ್ಪಿಸಿ ಮಹ ಶಾಶ್ವತಪದವೀವ2 ಅಡರಿಕೊಂಡು ಬರುವ ಸಂಸಾರ ತೊಡರು ಕಡಿವ ಪೊಡವಿತ್ರಯಂಗಳ ಒಡೆಯ ಶ್ರೀರಾಮನ ಅಡಿದೃಢವಿತ್ತು ಮುಕ್ತಿಗೊಡೆಯನೆನಿಸುವಂಥ 3
--------------
ರಾಮದಾಸರು
ಗುಬ್ಬಿಯಾಳೊ ಗೋವಿಂದ ಗೋವಿಂದಾ ಗೋವಿಂದ ಗೋವಿಂದಾನೆಂದು ನೆನಯಿರೊ ಗುಬ್ಬಿಯಾಳೊ ಪ. ಕ್ಲೇಶ ಪರಿಹಾರವು ಗುಬ್ಬಿಯಾಳೊ ನಾರಾಯಣನ ಧ್ಯಾನದಿಂದ ನರಕಭಯವಿಲ್ಲವೊ ಗುಬ್ಬಿಯಾಳೊ 1 ಮಾಧವನ ನೆನೆದರೆ ಮನೋಭೀಷ್ಟ ಕೊಡುವೊನು ಗುಬ್ಬಿಯಾಳೊ ನಾಶನವು ಗುಬ್ಬಿಯಾಳೊ 2 ವಿಷ್ಣುಭಜನೆಯಿಲ್ಲದವಗೆ ವೈಷ್ಣವರ ಜನ್ಮವುಂಟೆ ಗುಬ್ಬಿಯಾಳೊ ಇಹುದೊ ಗುಬ್ಬಿಯಾಳೊ 3 ತ್ರಿವಿಕ್ರಮನ ನೆನೆದರೆ ಸಾವಿತ್ರಿಯಾಗಿಹರೊ ಗುಬ್ಬಿಯಾಳೊ ವಾಮನದೇವರು ನಮಗೆ ವರಗಳ ಕೊಡುವೋರು ಗುಬ್ಬಿಯಾಳೊ 4 ಸಿರಿ ನಮಗೆ ಒಲಿವಳೊ ಗುಬ್ಬಿಯಾಳೊ ಹೃಷೀಕೇಶನ ಧ್ಯಾನದಿಂದ ಹೃದಯ ಪರಿಶುದ್ಧವೊ ಗುಬ್ಬಿಯಾಳೊ 5 ಪದ್ಮನಾಭ ನಮ್ಮೆಲ್ಲರ ಪಾಲಿಸಿ ರಕ್ಷಿಪನೊ ಗುಬ್ಬಿಯಾಳೊ ದಾಮೋದರನ ನೆನೆದರೆ ಪಾಮರತ್ವ ಬಿಡಿಸುವನೊ ಗುಬ್ಬಿಯಾಳೊ 6 ಸಂಕರ್ಷಣನ ಧ್ಯಾನದಿಂದ ಸಂತಾನ ಅಭಿವೃದ್ಧಿಯು ಗುಬ್ಬಿಯಾಳೊ ವಾಸುದೇವನ ದಯದಿಂದ ವಂಶಉದ್ಧಾರವೊ ಗುಬ್ಬಿಯಾಳೊ 7 ಪ್ರದ್ಯುಮ್ನನ ನೆನೆದರೆ ಭೂಪ್ರದಕ್ಷಿಣೆ ಫಲವು ಗುಬ್ಬಿಯಾಳೊ ಅನಿರುದ್ಧನ [ಸೇವಿಸೆ ಪುನೀತರಹೆವೊ] ಗುಬ್ಬಿಯಾಳೊ 8 ತಿಳಿಯಿರೊ ಗುಬ್ಬಿಯಾಳೊ ಅಧೋಕ್ಷಜ ನಮ್ಮೆಲ್ಲರಿಗಾಧಾರವಾಗಿಹನೊ ಗುಬ್ಬಿಯಾಳೊ 9 ನಾರಸಿಂಹದೇವರು ನಮ್ಮ ಕುಲದೈವವೊ ಗುಬ್ಬಿಯಾಳೊ ಅಚ್ಯುತ ಲಕ್ಷ್ಮಿಯ ಕೂಡಿ ಸಚ್ಚಿದಾನಂದನೊ ಗುಬ್ಬಿಯಾಳೊ 10 ಜನಾರ್ದನದೇವರು ಜಗಕೆಲ್ಲ ಶ್ರೇಷ್ಠರೊ ಗುಬ್ಬಿಯಾಳೊ ಕ್ಷಮಿಸುವನೊ ಗುಬ್ಬಿಯಾಳೊ 11 ಹರಿನಾಮಾಮೃತಕೆ ಸರಿಧರೆಯೊಳಗೆ ಇಲ್ಲವೊ ಗುಬ್ಬಿಯಾಳೊ ಶ್ರೀಕೃಷ್ಣ ರಂಗೇಶಯೆಂಬೊ ಸಿದ್ಧಕ್ರಿಯ ಬಲ್ಲರೆ ಗುಬ್ಬಿಯಾಳೊ12 ಈ ಗುಬ್ಬಿ ಪಾಡುವರಿಗೆ ಇಹಪರವು ಸಂತತವು ಗುಬ್ಬಿಯಾಳೊ ಧರಣಿಯೊಳು ಆಚಂದ್ರಾರ್ಕ ತಾರಕವಾಗಿಹರು ಗುಬ್ಬಿಯಾಳೊ 13 ನಿತ್ಯ ಮರೆಯದೆ ನೀ ನೆನೆಮನವೆ ನಿತ್ಯ ಮನವೆ ಗುಬ್ಬಿಯಾಳೊ 13
--------------
ವಾದಿರಾಜ
ಗುರು ಜಗದೀಶ ವಿಠಲ | ಪೊರೆಯ ಬೇಕಿವನ ಪ ಮರುತಾಂತರಾತ್ಮ ಹರಿ | ಪ್ರಾರ್ಥಿಸುವೆ ನಿನಗೇ ಅ.ಪ. ಕಾಕು ಸಂಗವ ಕೊಡದೆ ಮಾಕಳತ್ರನೆ ಕಾಯೊ | ಜೋಕೆಯಿಂದಿವನವಾಕು ಮನ್ನಿಸಿ ಎನ್ನ | ಬೇಕಾದಭೀಷ್ಟಗಳತೋಕನಿಗೆ ಕೊಡು ನೀನೆ |ಶ್ರೀಕರಾರ್ಚಿತನೇ 1 ಶರ್ವಾದಿ ದಿವಿಜೇಡ್ಯ | ಪರ್ವಕಾಲದಿ ಬಪ್ಪಸರ್ವ ವಿಘ್ನಗಳ್ಹರಿಸಿ | ಪೊರೆಯೊ ಇವನದುರ್ವಿಭಾವ್ಯನೆ ಹರಿಯೆ | ದರ್ವಿಜೀವಿಯ ಕಾದಸರ್ವ ಭಾರವು ನಿನದೊ | ಸರ್ವಾಂತರಾತ್ಮ 2 ಸಾರ ಅಂಕಿತವಿತ್ತುಧೀರ ನೀ ಪೊರೆಯೆಂದು | ಪ್ರಾಥಿಸಿಹೆ ಹರಿಯೇ 3 ಕೃಷ್ಣೆಗಕ್ಷಯ ವಸನ | ಕೊಟ್ಟು ರಕ್ಷಿಸಿದಂಥಕೃಷ್ಣ ಮೂರುತಿ ಇವನ | ಸುಷ್ಠುಷ್ಟು ಪಾಲಿಪುದೋಶ್ರೇಷ್ಠ ಹರಿ ಗುರು ಭಕ್ತಿ | ಮತ್ತೆ ತರತಮ ಜ್ಞಾನಕೊಟ್ಟು ಕಾಪಾಡೊ ಹರಿ | ವಿಷ್ಠರಶ್ರವನೇ 4 ಜಲಧಿ | ನಾನೆ ಎಂದೆನಿಪ ತವಭವ್ಯ ನಾಮಾಮೃತವ | ಸಾರ್ವಕಾಲದಲೀತಾವಕಗೆ ಉಣಿಸುತ್ತ | ಭಾವದಲಿ ಮೈದೋರೊಗೋವಿದಾಂಪತಿಯೆ ಗುರು | ಗೋವಿಂದ ವಿಠಲ5
--------------
ಗುರುಗೋವಿಂದವಿಠಲರು
ಗುರು ವಿಜಯರಾಯರ ಪದಸರಸಿಜ ಸೇವಿಪ ನರನೇ ಜಗನ್ಮಾನ್ಯ ಧನ್ಯಾ ಪ ದುರಿತ ತರಿಯಲವತರಿಸಿ ನರಹರಿಯ ಪರಿಚರಿಸುವ ನಿಜ ಅ.ಪ ಭೂಕಾಂತನ ಬಹು ಬಾಧಿಗೆ ತಾಳದೆಈ ಕರುಣಿಕನ ತನವಾಬೇಕಿಲ್ಲೆಂದರು ತಾಕಿಕದ ಸ್ಥಿತಿಸಾಕುವ ಶ್ರೀ ದೇವಾಶ್ರೀ ಕಳತ್ರನ ಕೃಪಾ ಕಟಾಕ್ಷದಿಂ-ದೇಕ ಮನೋಭಾವಾಸ್ವೀಕರಿಸುತ ಪರಲೋಕ ಸಾಧನವನೀ ಕರಿಸಿದರಾನೇಕ ದುರ್ವಿಷಯವ 1 ಇಂತುಪಯ ನಿಶ್ಚಿಂತನಾಗಿ ಗುರು-ವಂತರಾತ್ಮ ಹರಿಯಾಸ್ವಾಂತತಿ ಭಜಿಸುತ ಚಿಂತವರೇವಲಿ ಹನು-ಮಂತನ ಪರಮದಯಾಎಂತು ಪೇಳಲಿ ಬಲು ಶಾಂತರಾಗಿ ಶ್ರೀ-ಕಾಂತನ ಪರಿಪರಿಯಾಅಂತರಂಗದೊಳನುಭವಿಸುತ ಗುಣ-ವಂತರಿವರಿಗೆ ದಿಗವಂತದಿ ಸರಿಯಾ 2 ಲೇಸು ಜ್ಞಾನವ ಬಯಸುವ ಜನರೋಲ್‍ಆ ಸೋಮಪುರದಲಿವಾಸವಾದ ರಾಮದಾಸರಿಂದುಪ-ದೇಶವ ಕೊಳ್ಳುತಲೀಹೇಸಿ ವಿಷಯದಿಂದೋಷಿಯಾದ ಶ್ರೀನಿ-ವಾಸರಾಯರಲ್ಲೀ ಯೇಸು ಜನ್ಮದ ಸುಕೃತವು ಇವರನು ನಿ-ರ್ದೊಷಿಗಳನು ಗೈದಿಸಿದರು ತ್ವರಿತದಲಿ 3 ವೇದ ವೇದ್ಯನ ಗುಣಂಗಳ ಪದ ಸು-ಳಾದಿ ಪ್ರಮೇಯವನೂ ಸಾದರದಿಂದಲಿ ಭೂದೇವರಿಗೆ ಬೋಧಿಸಿ ತತ್ವವನೂಸಾಧಿಸಿ ಭೇದವ ಜೀವೇಶ್ವರ ಮತಭೇದಿಸಿ ವಾದಿಯನೂಆದಿ ವ್ಯಾಧಿ ಅನಾದಿ ಭೂತಗಣ ಭೇದಿಸಿ ಮಾಡಿ ಪರೋದರ ಗತವನೂ 4 ಪತಿ ಅಚಲ ವ-ಸತಿಯನೆ ಮಾಡೀದಾಕೃತಿ ರಮಣನ ಒಲಿಸುತನಶನ ವ್ರತ ಪಥದಿಂದಾಗಾಧಾನುತಿಸುತ ಕಮಲಾಪತಿ ನರಸಾರಥಿ ಪ್ರತಿಮೆಯಪ್ರತಿಷ್ಠಿಯ ಹಿತದಿಂದಗೈದಾ 5
--------------
ಕಮಲಪತಿವಿಠ್ಠಲರು
ಗುರು ಹಿರಿಯರ ಸೇವಿಸಿಹರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿಕೊಳ್ಳಿರೊ ಪ ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದೆರಕ್ಕಸಾರಿಯ ಭಕ್ತರೊಳು ಸೇರಿ ನೀವು ಸೆರೆಯಿಕ್ಕದಂಥವನ ಮೊರೆ ಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆಲ್ಲತುಂಬಿರುವ ಸುಖವೆಲ್ಲ ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವನುಂಬ ಭ್ರಮರಕೆ ಸರಿಗಾಣೆನೊ 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಬಿಕ್ಕುಗಳು ಬಂದು ಬೈವಾಗಇಕ್ಕಿ ಪೊರೆವುದಕೆ ಗತಿಯಿಲ್ಲದಾ ದರಿದ್ರರಿಗೆಸೌಖ್ಯವೆತ್ತಣದೊ ಮನುಜರಿಗೆ 3 ತಾಯ ಮಾರಿ ತೊತ್ತನು ಕೊಂಬ ಪಾಮರರಂತೆಹೇಯ ಕುಜನರಾ ಚರಣಕೆರಗಿಮಾಯಾಪತಿಯಂಘ್ರಿಗಳ ನೆನೆಯಲೊಲ್ಲದ ನರನಆಯುಷ್ಯ ಬರಿದೆ ಹೋಯಿತಲ್ಲ 4 ಅಯಿವರಿತ್ತೊಡವೆಯ ಅವರವರೊಯ್ಯುವರು ಮ-ತ್ತಯಿವರೆಂಬುವರು ತೊಲಗುವರುಮೈಯ ನೆತ್ತರು ಕೂಡ ಹರಿದು ಹೋಹುದು ನಿಮ್ಮಕೈಯ ಪಿಡಿದೆತ್ತುವರ ನಾನು ಕಾಣೆ 5 ಬಲಗುಂದಿ ನೆಲ ಹಿಡಿಯೆ ರೋಗರುಜಿನಗಳೆಂಬಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖ ಗಂಟಲೊಳಗಣನಾಲಗೆಯ ನಾದ ಎಲ್ಲಿಹುದೊ 6 ಆಗಲೇ ಹರಿನಾಮ ನಾದದಿಂದೆಚ್ಚತ್ತುನಾಗಶಯನನ ಪುರದ ಪಥವಆಗಮಜ್ಞರ ಕೇಳಿ ತಿಳಿದುಕೊಳ್ಳಿರೊ ನಿಮಗೆಈ ಗಾಳಿ ದೀಪ ಸ್ಥಿರವಲ್ಲ 7 ಜರೆಯೆಂದು ಕಡೆಯಲ್ಲಿ ಗೊರಗೊರನೆ ಉಸಿರಾಡೆಶರೀರದ ಸಂಬಂಧಗಳಕಟಾತರುಣಿಯರ ಮ್ಯಾಲಾಸೆ ತಮ್ಮ ಹಿತವನರಿಯದೆಬರಿದೆ ಭವದಲ್ಲಿ ಬಳಲುವಿರಿ 8 ಸರಕು ಇಲ್ಲಮಾಧವನ ಪೂಜೆ ಒಮ್ಮೆಯೂ ಮಾಡಿಲ್ಲ ಹರಿಪಾದ ತೀರ್ಥದಾ ವ್ರತಗಳಿಲ್ಲ 9 ಊಧ್ರ್ವಪುಂಡ್ರಗಳಿಲ್ಲ ಹರಿಯ ಲಾಂಛನವಿಲ್ಲಪದ್ಮ ತುಳಸಿಯಾ ಸರಗಳಿಲ್ಲಸದ್ಧರ್ಮ ಪಥವೆತ್ತ ವಿಷಯಾಂಧ ಕೂಪದೊಳುಬಿದ್ದು ಪೊರಳುವ ಮರುಳಿದೆತ್ತ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕ ವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ11 ಸಕ್ತಿಯಿಂ ಹರಿಯ ಪೊಗಳಿ ಅಡಿಯಲುರುಳಿ ಶುಷ್ಕಭುಕ್ತಿಗಳ ಮೇಲುಗುಳಿ ದೂರ ನಿಲ್ಲಿಭಕ್ತಿ ಜ್ಞಾನಗಳಿರಲಿ ಮತ್ರ್ಯ ಪಥದಿಂ ಮರಳಿಮುಕ್ತಿ ಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆ ಕೆಡಹುವ ಮುನ್ನಕಳ್ಳರೈವರ ಕಾರಣದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭನ ಅಡಿಗೆ ಮೊರೆ ಹೋಗಿರೊ13 ಪಾದ ಸೇರಿರೋ 14 ಒಂಬತ್ತು ರಂಧ್ರಗಳ ತನುವೆಂಬ ಮನೆಯಲ್ಲಿತುಂಬಿರುವ ವಾಯು ಸ್ಥಿರವಲ್ಲನಂಬಿದರ ಪೊರೆವ ನೆಲೆಯಾದಿಕೇಶವನ ಪಾದಾಂಬುಜವನು ಸೇರಿ ಬದುಕಿರೊ 15
--------------
ಕನಕದಾಸ
ಗುರುದತ್ತ ದಿಗಂಬರ ಸ್ತುತಿ ಈಸಲಾರೆ ಗುರುವೆ ಸಂಸಾರಶರಧಿಯ ಮೋಸದಿಂದ ಬಿದ್ದು ನಾನು ಘಾಸಿಯಾಗಿ ನೊಂದೆ ಗುರುವೆ ಪ ಗುರುವೆ ಬೇರೆ ಗತಿಯ ಕಾಣೆ ನೀನೆಗತಿ ದಿಗಂಬರೇಶ ಮರಯ ಹೊಕ್ಕೆನಿಂದು ನಿಮ್ಮ ಚರಣ ಕಮಲವ ತರುಣ ದಿಂದಲೆನ್ನ ಭವದ ಶರಧಿಯನ್ನು ದಾಟುವಂಥ ಪರಿಯನೊರೆದು ನಾವೆಯಿಂದ ದಡವ ಸೇರಿಸೋ 1 ಮಡದಿ ಮಕ್ಕಳೆಂಬುದೊಂದು ನೆಗಳುಖಂಡವನ್ನು ಕಚ್ಚಿ ಮಡುವಿಗೆಳೆದು ತಿನ್ನು ತಾವೆ ತಡೆಯಲಾರೆನು ನಡುವೆ ಸೊಸೆಯು ಎಂಬನಾಯಿ ಜಡಿದು ಘೋರ ಸರ್ಪದಂತೆ ಕಡಿಯೆ ವಿಷಮ ನೆತ್ತಿಗಡರಿ ಮಡಿವಕಾಲ ಬಂದಿತು 2 ಹಲವು ಜನ್ಮದಲ್ಲಿ ಬಂದು ಹಲವು ಕರ್ಮವನು ಮಾಡಿ ಹಲವು ಯೋನಿಯಲ್ಲಿ ಹುಟ್ಟಿ ಹಲವು ನರಕವ ಹಲವು ಪರಿಯ ಲುಂಡು ದಣಿಯ ನೆಲೆಯ ಗಾಣದೆನ್ನಜೀವ ತೊಳಲಿತಿನ್ನುಗತಿಯ ಕಾಣೆ ಗುರು ಚಿದಂಬರ 3 ಕಾಲವೆಲ್ಲಸಂದು ತುದಿಯಕಾಲ ಬಂತು ಕಂಡ ಪರಿಯೆ ತಾಳಿ ಕಿವಿಗೆ ಊದ್ರ್ವಗತಿಗೆ ಪೋಪಮಂತ್ರವನ್ನು ತಿಳಿಸಿ ನಿರಾಳ ವಸ್ತುವನ್ನು ತೋರೋವರ ದಿಗಂಬರಾ 4 ಆಸೆಯೆಂಬ ನಾರಿಯನ್ನು ನಾಶಗೈದು ಗುರುವಿನಡಿಗೆ ಹಾಸಿತನುವ ದಡದಂತೆ ಬೇಡಿಕೊಂಡೆನು ಈಸ ಮಸ್ತಲೋಕವನ್ನು ಪೋಷಿಸುವ ಲಕ್ಷ್ಮೀಪತಿಯ ದಾಸಗಭಯವಿತ್ತು ಕಾಯೋವರ ದಿಗಂಬರ 5
--------------
ಕವಿ ಪರಮದೇವದಾಸರು