ಒಟ್ಟು 2901 ಕಡೆಗಳಲ್ಲಿ , 115 ದಾಸರು , 2194 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಣನಯನೆ ಏಣಭೋಜ ಮಧ್ಯಳೆ ತೋರೆಏಣಾಂಕ ಬಿಂಬ ಮುಖಿಏಣವೈರಿಯ ವೈರಿಯ ಶಿರಕುಚಯುಗೆ ಕರೆತಾರೆಏಣಾಂಕಧರ ಸಖನ ಪ ಚಳಿಯ ಮಗಳ ತಾಯಳಿಯನ ತನಯನಇಳುಹದೆ ಪೊತ್ತಿಹನಬಳಿದುಣ್ಣಲೀಸದೆ ಸೆಳೆದುಂಡನಣ್ಣನಸಲಹಿದಾತನ ಸುತನಕಳದೊಳು ತಲೆ ಚೆಂಡಾಡಿದ ಧೀರನಬಳಿ ವಾಘೆಯನು ಪಿಡಿದನಇಳೆಯ ಮೊರೆಯನು ಕೇಳಿ ಖಳರುತ್ತಮಾಂಗವನಿಳುಹಿದಾತನ ತೋರೆಲೆ 1 ಇಪ್ಪತ್ತುನಾಲ್ಕು ನಾಮಗಳೊಳಗೇಳನುತಪ್ಪದೆಣಿಸಿ ಕಳೆದುಬಪ್ಪ ಎಂಟನೆಯ ನಾಮದ ಪೆಸರಿನೊಳ್‍ಇಪ್ಪ ಕಡೆಯ ಬೀಡಲಿಅಪ್ಪ ಜಯದರಸನ ಕೂಡೆ ಜನಿಸಿದಕಪ್ಪು ವರ್ಣದ ಮೈಯಳಅಪ್ಪನ ಮಿತ್ರನ ಮಗನೆಂಬ ಬೊಮ್ಮನಬೊಪ್ಪನ ತೋರೆನಗೆ2 ಬಿಡುಗಣ್ಣ ಬಾಲೆ ತನ್ನೊಡೆಯನ ನುಡಿಗೇಳಿದೃಢದಿಂದ ನಡೆದು ಬಂದುಜಡಿವ ಕೋಪಕೆ ಶಾಪ ಪಡೆದುಕೊಂಡಾಕ್ಷಣನುಡಿದ ದಿನವು ದಾಟಲುಪಡೆಯನೆಲ್ಲವ ನಡು ರಣದಲಿ ಸೋಲಿಸಿಜಡಿದು ಗೋವುಗಳನೆಲ್ಲಒಡನೆ ತನ್ನಯ ಪುರಕೆ ಹೊಡೆತಂದ ಧೀರನಒಡೆಯನ ತೋರೆನಗೆ 3
--------------
ಕನಕದಾಸ
ಏನಾದರಾಗಲಿ ಹರಿ ನಿನ್ನ ಸ್ಮರಣೆ ಮಾತ್ರ ಒಂದಿರಲಿ ಪ ಆಚಾರಿಯೆನಲಿ ಬಹು ದು | ರಾಚಾರಿಯೆನಲಿ ಜನರೆಲ್ಲನೀಚನೆಂದೆನಲಿ ಅನದಿರಲಿ 1 ಜ್ಞಾನಿ ಎಂದೆನಲಿ ದುರ್ಮಾರ್ಗ | ನಾನೆನಲಿ ಜನರೆಲ್ಲ ಬಹು ಮಾನವಂತನೆನಲಿ ಅನದಿರಲಿ 2 ಪಾಪಿಯಾಗಿರಲಿ ಬಹು ಸಂ | ತಾಪಿಯಾಗಿರಲಿ ಜನರೆಲ್ಲಪಾಪಿಯೆಂದೆನಲಿ ಅನದಿರಲಿ 3 ರಾಗವೇ ಬರಲಿ ಬಹು ವೈ | ಭೋಗವೇ ಬರಲಿ ವಿಷಯ ನಿಯೋಗವೇ ಬರಲಿ ಬರದಿರಲಿ 4 ಒಲಿದರೆ ನೀ ವ್ಯಾಸವಿಠಲ ಜನ | ರೆಲ್ಲ ಮತ್ತ್ಹಳಿಯುತಿರಲಿ ಇರದಿರಲಿ ಏನಾದರಾಗಲಿ ಹರಿಯೆ 5
--------------
ವ್ಯಾಸವಿಠ್ಠಲರು
ಏನಾದರೇನು ಪ ತನು ವೈರಾಗ್ಯದಲ್ಲಿಟ್ಟನವರತಾ | ಅಣಿಮಾ ಸಿದ್ಧಿ ಅರತಾ | ಘನಗುರು ಜ್ಞಾನವಾ ಮರತು 1 ಓದಿಕಿಯಲಿ ನಿಪುಣಾದವನು ಯಲ್ಲಾ | ವೇದಾರ್ಥ ಮಾಡಬಲ್ಲಾ ಸಾಧುರಾ ಮಾರ್ಗವೆ ತಿಳಿಲಿಲ್ಲಾ 2 ಗುರು ಮಹಿಪತಿ ಸುತ ಪ್ರಭುವಲಿಯದೆ | ಪರಗತಿ ಸಾಧಿಸುವದೆ | ಬರೆ ವ್ಯರ್ಥಡಂಭದಿ ಮೆರೆವುದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಇದ್ದರೇನು ನಿನ್ನ ಸಂಗದ ಸಂಗಡ ಬಾರದೇನು ದಾನ ಧರ್ಮವ ಮಾಡಿದ್ದೊಂದು ಬೆನ್ನಬಿಡದದೇನು ಪ ಆಳು ಕಾಳು ಮಂದಿ ಮನುಷರು ಬಹಳವಿದ್ದರೇನು ಮಾಳಿಗೆ ಕೈಸಾಲೆ ಚಂದ್ರಶಾಲೆಯಿದ್ದರೇನು ನೀಲ ಮುತ್ತು ಕೆಂಪಿನುಂಗುರ ಕೈಯಲಿದ್ದರೇನು ಕಾಲನವರು ಎಳೆಯುತಿರಲು ನಾಲಗೆಗೆ ಬಾರದೇನು 1 ನೆಟ್ಟ ಹತ್ತಿಲು ತೋಟ ತೆಂಗು ಎಷ್ಟುತಾನಿದ್ದರೇನು ಮಹಿಷಿ ಸಾವಿರವಿದ್ದರೇನು ಪಟ್ಟೆ ಶಾಲು ಚಿನ್ನದ ಕುಳದ ಘಟ್ಟಿಯಿದ್ದರೇನು ಕಟ್ಟಿಯಿಟ್ಟ ಗಂಟುನಿನ್ನ ಸಂಗಡ ಬಾರದೇನು 2 ಲಕ್ಷವಿತ್ತ ಜಯಿಸಿ ರಾಜ್ಯ ಪಟ್ಟವಾದರೇನು ಕಟ್ಟಿದಾನೆ ಮಂದಿ ಕುದುರೆ ಹತ್ತಿರಿದ್ದರೇನು ನೆಟ್ಟನೆ ಜೀವಾತ್ಮ ಗೂಡ ಬಿಟ್ಟು ಪೋಗದೇನು ಕುಟ್ಟಿ ಕೊಂಡಳುವುದರೆ ಮಂದಿ ಎಷ್ಟು ಇದ್ದರೇನು 3 ಮಕ್ಕಳು ಮೊಮ್ಮಕ್ಕಳು ಹೆಮ್ಮಕ್ಕಳಿದ್ದರೇನು ಚಿಕ್ಕ ಪ್ರಾಯದ ಸತಿಯು ಸೊಸೆದಿಕ್ಕಳಿದ್ದರೇನು ಲೆಕ್ಕವಿಲ್ಲದ ದ್ರವ್ಯ ನಿನಗೆ ಸಿಕ್ಕುಯಿದ್ದರೇನು ಡೊಕ್ಕೆ ಬೀಳೆ ಹೆಣವ ಬೆಂಕಿಗಿಕ್ಕಿ ಬರುವರೋ 4 ಹೀಗೆ ಎಂದು ನೀನು ನಿನ್ನ ತಿಳಿದು ಕೊಳ್ಳಬೇಕೋ ಆಗೋದ್ಹೋಗೋದೆಲ್ಲ ಈಶ್ವರಾಜÉ್ಞ ಎನ್ನ ಬೇಕೋ ವೈರಿ ಕೋಣೆ ಲಕ್ಷ್ಮೀರಮಣನ ಭಜಿಸಬೇಕೋ ಯೋಗ ಮಾರ್ಗದಿಂದ ನೀನು ಮುಕ್ತಿ ಪಡೆಯ ಬೇಕೋ 5
--------------
ಕವಿ ಪರಮದೇವದಾಸರು
ಏನು ಮಹಿಮರೊ ನಮ್ಮ ಶ್ರೀ ಗುರುಗಳು ಶ್ರೀನಿಧಿಗೆ ಪರಮ ಪ್ರಿಯರೆನಿಸಿ ಮೆರೆಯುವರು ಪ. ಶಾಂತತ್ವವೆಂತೆಂಬ ಕವಚವನೆ ತೊಟ್ಟಿಹರು ದಾಂತತ್ವದಾ ನಡುಕಟ್ಟು ಕಟ್ಟಿಹರು ಸಂತೋಷ ಸುಖದಲಿ ಅಂತರಂಗದಿ ಹರಿಯ ಚಿಂತನೆಯ ಮಾಡುತಲಿ ಮುಕ್ತಿಪೊಂದಿಹರು 1 ವೈರಾಗ್ಯವೆಂತೆಂಬ ಆಯುಧವ ಧರಿಸಿಹರು ಸೇರಿದವರನು ಪೊರೆವ ಕಂಕಣವ ಕಟ್ಟಿ ನಾರಸಿಂಹನ ನಾಮ ಕರ್ಣಭೂಷಣ ಧರಿಸಿ ನಾರಾಯಣನ ಗುಣದ ಹಾರ ಧರಿಸಿಹರು 2 ಪರರಿಗುಪಕಾರವನೆಸಗುವ ಭುಜದ ಕೀರುತಿಯು ವರತತ್ವ ಅರುಹುವ ವನಮಾಲಿಕೆಯು ಸಿರಿ ಭಕ್ತಿಗುಣಗಳೆಂತೆಂಬೊ ವಸನಗಳು ಧರಿಸಿರುವ ಮಹಿಮರ ಸರಿಗಾಣೆ ಜಗದಿ 3 ಕುಂದದೆ ಭಕ್ತರನು ಪೊರೆಯುವ ಭಾರದ ಅಂದದಾ ಮುಕುಟ ಶಿರದಲ್ಲಿ ಧರಿಸಿ ತಂದೆ ಮುದ್ದುಮೋಹನದಾಸರೆಂದೆನಿಸುತ ಮಂದಜ್ಞ ಮನ ಪಾಪ ಪಾದುಕೆಯ ಮೆಟ್ಟಿಹರು 4 ಎಷ್ಟು ಹೇಳಲು ಸಾಧ್ಯ ಶ್ರೇಷ್ಠ ಗುರುಗಳ ಚರಿತೆ ಪಟ್ಟವಾಳ್ವರು ಜ್ಞಾನ ಸಾಮ್ರಾಜ್ಯವ ಕೆಟ್ಟ ಭವರೋಗವನು ಸುಟ್ಟು ಭಸ್ಮವ ಮಾಡಿ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ತೋರ್ವರು5
--------------
ಅಂಬಾಬಾಯಿ
ಏನು ಮಾಡಿದರೆ ನಾ ನಿನ್ನ ಕಾಂಬೆಶ್ರೀನಿವಾಸನೆ ಭಕ್ತ ದೀನಜನ ಬಂಧೊ ಪ ಪರಮೇಷ್ಠಿ ಸುತನು ಕೊಟ್ಟ ಹರಿಮಂತ್ರ ತುಷ್ಟನಾಗುತ ನರಹರಿಯದೃಷ್ಟಿಯಿಂದ ಕಂಡವನಾ ಭೆಟ್ಟಿ ಸಾಧಿಸಲ್ಯಾ 1 ಹುಡುಗತನದಲಿ ತಂದೆ ತೊಡೆಯಾಸಿಗೆ ಬರೆ ತಾಯಿ-ನುಡಿದ ಮಾತನು ಕೇಳಿ ಅಡವಿಯೊಳಗೆಮೃಡ ಶಿಷ್ಟನುಪದೇಶವನು ನಂಬಿ ವೈಕುಂಠವನುಪಡೆದಿರುವ ಬಾಲಕನ ನಡತೆ ನಂಬಿರಲ್ಯಾ 2 ಐದು ಮಂದಿ ತನ್ನ ಕಾದುಕೊಳ್ಳದೆ ಇರಲುದುರುಳನೊಬ್ಬನು ರಾಜಬೀದಿಯೊಳಗೆಕೂದಲು ಹಿಡಿದೆಳೆದು ತರಲು ಶ್ರೀಧರನೆ ಎಂದೊದರಿಮೋದಿಸಿದ ಕಾಮಿನಿಯ ಹಾದಿ ಸೇರಿರಲ್ಯಾ 3 ಸತಿ ಸಹಾಯ ವೃಂದದಿ ಸಹಾಯ ಭೂತನಾಗಿಪ್ರೀತಿಯಲಿ ಲಂಕಾನಾಥನಾಗಿಹ ಮುನಿಪೋತ ರಾಕ್ಷಸನ ಸಖ ನೀತಿ ಸಾಧಿಸಲ್ಯಾ4 ಹೇ ಸುರಾರ್ಚಿತ ಮನುಜ ಕೇಸರಿಯ ಸುರಗೀತಾವಾಸುದೇವ ದ್ವಾರಕೀಶ ಕೃಪಾ ದಾಶರಥೆಶ್ರೀವೆಂಕಟೇಶ ಬದರಿನಿವಾಸ ದಾಸರ ಕಾಯೋಆದರದಿ ಇಂದಿರೇಶ ಕರುಣಾಬ್ಧಿ 5
--------------
ಇಂದಿರೇಶರು
ಏನು ರಾಗವ ಮಾಡಲ್ಯಾ ನಾನು ಬ್ಯಾಗನೆ ಸಾನುರಾಗದಿ ಹರಿಯು ತಾನೇ ಮಾಡಿಸುವಾ ಪ ದಾನವ ದ್ವಿಪ ವೃಂದ ಮಾನನದಿ ಕರ್ಚಿದ ಮಾನನಿಧಿ ಕೇಸರಿಯೋ ಶ್ರೀಹರಿಯೋ ಅ.ಪ. ಅಜ್ಞಾನ ತಮದೊಳಗೆ ಸುಜ್ಞಾನಿಗಳು ಬಳಲೆ ತಜ್ಞಾನಪೂರ್ಣ ಸರ್ವಜ್ಞರವತರಿಸಿ ಅಜ್ಞಾನದಿಂದ ಗತಿಯಕ್ಕುದೆಂದರುಹಿಸಿದ ಸುಜ್ಞಾನ ದರ್ಪಣವೋ ಶ್ರೀ ಧನವೊ 1 ಕರ್ಮದಿಂದಲೆ ಭಕ್ತಿ ವೈರಾಗ್ಯ ವಿಜ್ಞಾನ ಧರ್ಮವರಿಯಲು ಮುಕ್ತಿಪಥಕೆ ಸೋಪಾನ ಮರ್ಮವರಿಯದೆ ವಿಷಯ ಕಾನನದಿ ಚರಿಸುವ ನರರಿಗೆ.... ಶ್ರೀವರನೊ 2 ವನರುಹಭವಾಂಡದೊಳು ಕುನರ ಸಸಿಗಳು ಬೆಳೆದು ಸುನರ ಕಮಲವು ತೋರದಂತೆ ಮುಸುಕೆ ವನಜದಂದವ ತೋರೆ ನರಸಿಂಹವಿಠಲಾಖ್ಯ ಮುನಿದು ಸದೆ ಬಡೆÉದಗದವೋ ಶ್ರೀ ಮುದವೊ 3
--------------
ನರಸಿಂಹವಿಠಲರು
ಏನು ವಿನೋದವಿದು ನಮ್ಮ ಶ್ರೀ ನಿಲಯನ ಗುಣಗಾನ ಮಾಡುವುದು ಪ ಮಾನಸ ಮಂದಿರದಲಿ ಶ್ರೀ ಕೃಷ್ಣನ ಕಾಣಲು ಬಯಸುವ ಜನಕೆ ವಿಧಾನ ಅ.ಪ ಶಾಸ್ತ್ರ ವಿಚಾರ ಶ್ರೋತೃ ವಿಹಾರ ಶ್ರೋತೃ ಜನಕೆ ಇದು ಪರಮಾಧಾರ1 ಶ್ರೀಶನ ನೋಟ ಭೂಸುರ ಕೂಟ ದಾಸ ಜನಕೆ ಇದು ಭೂವೈಕುಂಠ 2 ವೇದ ಸುಘೋಷ ವಾದ್ಯದ ಹರ್ಷ ಸಾಧುಜನಕೆ ಇದು ಬಲು ಸಂತೋಷ 3 ಸಿಕ್ಕಿತು ಕಾಂತಿ ಹೊಕ್ಕಿತು ಶಾಂತಿ ಭಕ್ತ ಪ್ರಸನ್ನನು ಬಿಡಿಸಿದ ಭ್ರಾಂತಿ4
--------------
ವಿದ್ಯಾಪ್ರಸನ್ನತೀರ್ಥರು
ಏನು ವೈಭವವೊ ಶ್ರೀನಿವಾಸ ಧೊರೆಯೆನಿನ್ನದೇನು ವೈಭವವೊ ಪ ಸಿರಿಯು ತಾನೆ ನಿಂತು ನಿನ್ನನಿರುತ ಸೇವೆ ಗೈಯ್ಯುತಿಹಳೊಸರಸಿಜಾಸನಾದಿ ಸುರರುಕರವ ಮುಗಿದು ತುತಿಸುತಿಹರೂ 1 ನಾಗರಾಯ ದಿವ್ಯಾಸನನಾಗಿ ಹೆಡೆಯ ಛತ್ರ ಪಿಡಿವಯೋಗಿ ನಾರದ ತುಂಬುರಾರುರಾಗ ಮಾಡಿ ಹಾಡುತಿಹರೊ 2 ಗರುಡ ವಾಯು ಸುತರು ನಿನ್ನಪರಮ ವಾಹನರಾಗಿ ಬಹರುಸುರಮುನಿಗಳು ಸಕಲ ನರರುನಿರುತನಾಮ ಜಪಿಸುತಿಹರು 3 ಮಂಗಳ ವಾದ್ಯಗಳು ಮೊಳಗಿಮಂಗಳಾರುತಿಯಾಗಿ ಬೆಳಗಿತಿಂಗಳು ನೇಸರರು ದಿವ್ಯಮಂಗಳ ದೀವಟಿಗರಾಗಿ 4 ಅಮೃತ ನಿನ್ನ ಪಾನತೋರ ಭಕುತರಾಳೆ ಗದಗುವೀರನಾರಾಯಣನೆ ನಿನ್ನದೇನು ವೈಭವವೊ 5
--------------
ವೀರನಾರಾಯಣ
ಏನು ಸೋಜಿಗವಯ್ಯ ಪಂಪಾಪತೇ ಪ ನೀನೆ ಪರನೇಂಧ್ಹೇಳ್ವ | ದೀನ ಜನಗಳನೆರಹೀ ಅ.ಪ. ಹರಿಯಾಜ್ಞೆಯನುಸರಿಸಿ | ದುಶ್ಯಾಸ್ತ್ರ ಬಿತ್ತರಿಸಿಹರಿಪರನು ಎಂತೆಂಬ | ವರ ಜ್ಞಾನ ಮರೆಸೀ |ಸರ್ವ ತಮೋ ಯೋಗ್ಯ | ನರರಿಗ್ವರಗಳನಿತ್ತುಉರುತರೈಹಿಕ ಸುಖದಿ | ಮೆರೆಸುವಿಯೊ ಪರವಾ 1 ಜಂಗಮರು ಜೋಗಿಗಳು | ಲಿಂಗಗಳ ಧರಿಸಿಹರುಮಂಗಳಾತ್ಮಕ ನಿನ್ನ | ಅಂಗದೊಳಗೈಕ್ಯಾ |ಮಂಗನಂದದಿ ಬಯಸಿ | ಮಂಗಳವ ಕಳಕೊಂಡುಭಂಗ ಪಡುವರು ಪರದಿ | ಶೃಂಗಾರ ಮೂರ್ತೇ 2 ಹರಿಕಾರ್ಯ ಸಾಧಕರ5ಲೆರಡನೇ ಂiÀ5ನಾಗಿಪರಮ ವೈ5ವನೆನಿಸಿ | ಭೂ ಭುಜರಿಗೇಹರಿ ಪುರದ ದಾರಿಯನು | ತೋರಿಸುತ ಮೆರೆಯುತಿಹವಿರೂಪಾಕ್ಷ ನಿನಚರಣ | ಸರಸಿಜಕೆ ನಮಿಪೇ 3 ಮರುತಾತ್ಮ ಸಂಭೂತ | ವೈರಾಗ್ಯನಿಧಿ ಶಿವನೆಗಿರಿಜೆಯಳ ಪರಿಗ್ರಹಿಪ | ಕಾರ್ಯ ನಿರ್ವಹಿಸೀ |ಶರಣ ಜನ ಸಂದೋಹ | ನೆರಹಿ ವೈಭವದಿಂದಪರಮ ಮುದವನು ಈವೆ | ಹರಿಯ ಭಕುತರಿಗೆ 4 ಮಾಧವ ಗುರು | ಗೋವಿಂದ ವಿಠ್ಠಲನಸಂದರ್ಶನಾದಿಯಲಿ | ಛಂದದಲಿ ಗೈದೂ |ಬಂದು ನಿನ್ನಂಘ್ರಿಗಳ | ದ್ವಂದ್ವ ಕೆರಗುವ ಭಕ್ತವೃಂದಗಳಿಗೀವೆಯಾ | ನಂದ ಸಂದೋಹ 5
--------------
ಗುರುಗೋವಿಂದವಿಠಲರು
ಏನು ಹೇಳಲಿ ನಿನಗಿನ್ನೂ ಗುರು ಧ್ಯಾನದ ಸುಖವನ್ನು ಪ ಚಿತ್ತದ ತಾಪವು ನೀಗಿ ಮಾಯಾವೃತ್ತಿಯ ಗುಣಗಳು ಪೋಗಿ | ಎತ್ತೆತ್ತ ನೋಡಲು ಅತ್ತತ್ತ ಪರಿಪೂರ್ಣ ಸಚ್ಚಿದಾನಂದ ಘನ ನಿಜವಾಗಿಹ 1 ದ್ವೈತಾದ್ವೈತಗಳೆಲ್ಲ ಪೋಗಿ ಶುದ್ಧ ಚೈತನ್ಯವೇ ತಾನಾಗಿ | ಮಾತು ಕಳೆದು ಮೌನವೆಂಬ ಏಕಾಂತದಿ | ಕೂತು ಲಕ್ಷಿಸುವ ಲಕ್ಷಣನೆ ತಾನಾಗಿಹ2 ಮನದ ಕಲ್ಪನೆಯನ್ನು ಮರೆದು ಹಮ್ಮು ತನುವಿನಮಮತೆಯ ಜರಿದು | ಅನುದಿನದಲಿ ಗುರು ರಾಮ ಪದಾಂಬುಜ ತಾನೆಂದು ಕಾಂಬುವ ಘನ ನಿಜವಾಗಿಹ 3
--------------
ಭೀಮಾಶಂಕರ
ಏನುಕಾರಣ ಯೆನಗೆ ತಿಳಿಯದಿದೇಕೋ ನೀನುದ್ಧರಿಸುವುದಕೋ ಕೆಡಿಸುವುದಕೋ ಕೃಷ್ಣ ಪ ಸುರರು ಹಬ್ಬವ ಕೆಡಿಸೆ ಸುರಪತಿಯು ಕೋಪದಲಿ ಭರದಿಂದ ಕಲ್ಲು ಮಳೆಯನು ಕರೆಯಲಾಗ ಕಿರುವೆರಳ ತುದಿಯಲ್ಲಿ ಗಿರಿಯ ನೀನಾಂತು ಹಗ ಲಿರುಳೇಳು ದಿನ ಬೋವಿಗಳಂತೆ ಕೊಡೆವಿಡಿದ 1 ಭವ ತಿಮಿರ ಶರಧಿಯದಾಂಟಿಸುವ ವೋಲು ಸುರಿವ ಮಳೆಗತ್ತಲೆಗೆ ಬೋವಿಯಾಗಿ ಕರದಲ್ಲಿ ಕೊಡೆ ದೀವಟಿಗೆಯ ಪಿಡಿದೆನ್ನ ಮನೆ ಪರಿಯಂತ ಕಳುಹಿ ಕ್ಷುಧೆಯಾಯಿತೆಂಬುದೇನು 2 ಕೊಟ್ಟ ಕಜ್ಜಾಯಂಗಳಿಗೆ ನೀ ಸೆರಗೊಡ್ಡಿ ಕಟ್ಟಿ ಕೊಂಡೊಯ್ದು ಲಕ್ಷ್ಮಿಯ ಬಳಿಯೊಳು ಇಟ್ಟರ್ಧವನು ಎನ್ನ ಸಂತತಿಗೆ ನೀಕರುಣಿಸಿದೆ ಇಷ್ಟರೊಳಗೆ ವೈಕುಂಠಪತಿ ಚೆನ್ನಿಗರಾಯಾ 3
--------------
ಬೇಲೂರು ವೈಕುಂಠದಾಸರು
ಏನೆಂದು ಬಣ್ಣಿಸಲಿ ಎಲೆ ಧನವೆ ನಿನ್ನ ಮಾಣುವ ವಿಷಯಸುಖ ಅಹುದೆನಿಪ ಪರಿಯ ಪ ಏರಿಸುವಿ ಹಿರಿಕುದುರೆ ತೋರಿಸುವಿ ದುರ್ಮದವ ಹಾರಿಸುವಿ ಸುವಿಚಾರ ಮೀರಿಸುವಿ ಸುಪಥ ದೂರಿಸುವಿ ಮಹನೀತಿ ಘೋರಿಸುವಿ ಬಡವರನು ಕಾರಿಸುವಿ ತಿಂದನ್ನ ಧಾರುಣಿಯೊಳು 1 ಮೆರೆಸುವಿ ಅಂದಣದಿ ಸುರಿಸುವಿ ದುರ್ವಚನ ನರಸುವಿ ಎಡಬಲದಿ ಪರಿಪರಿಯ ಜನರ ತರಿಸುವಿ ಸತಿಸುತರ ಇರಿಸುವಿ ಅರಮನೆಯೊಳ್ ಮರೆಸುವಿ ಮಹಿಮರ ಸಂದರುಶನದ ಸುಖವ 2 ವೇದಶಾಸ್ತ್ರಕಿಳಿಸುವಿ ವಾದನುಡಿ ಕಲಿಸುವಿ ನೀ ಸಾಧುಸಜ್ಜನರ ನಿಜಬೋಧ ತೋರಿಸುವಿಯೋ ಭೇದನಿಕ್ಕುತ ವೈರ ಸಾಧಿಸುತ ಪರಲೋಕ ಸಾಧನೆಯ ಕೆಡಿಸ್ಯಮಬಾಧೆಗಾನಿಸುವಿ 3 ತೊಡಿಸುವಿ ವಿಧವಿಧದ ಒಡವೆವಸ್ತ್ರಂಗಳನು ನುಡಿಸುವಿ ಕಡೆತನಕ ಕಡುದುಗುಡ ಬಡಿಸುವಿ ಬಲುಜಂಬ ನಡೆಸುವಿ ದುಷ್ಷಥದಿ ಕೆಡಿಸುವಿಯೋ ಸಲೆ ಪುಣ್ಯಪಡೆದ ನರಜನುಮ 4 ಇನ್ನೆಷ್ಟು ಬಣ್ಣಿಸಲಿ ನಿನ್ನ ಕರುಣದ ಗುಣವ ನಿನ್ನ ನಂಬಲು ಬಿಡದೆ ಕುನ್ನಿಯೆಂದೆನಿಸಿ ಪನ್ನಂಗಶಯನ ಮಮ ಸನ್ನುತಾಂಗ ಶ್ರೀರಾಮ ನುನ್ನತಂಘ್ರಿಯ ಧ್ಯಾನವನ್ನು ಅಗಲಿಸುವಿ 5
--------------
ರಾಮದಾಸರು
ಏನೆಂದು ಬಣ್ಣಿಸಲಿ ಗುರುರಾಯನಾ | ತಾ ನೆನೆದವರ ಧನ್ಯಗೈಸುವನಾ ಮಹಿಮೆ ಪ ಧರಿಯೊಳಜ್ಞಾನ ತಮಹರಣ ಭಾಸ್ಕರ ನೆನಿಪ | ಕರ ಕಮಲದಲಿ ಜನಿಸೀ | ವರಮೂಲ ಮಂತ್ರವನೆ ಗುರು ಮಹಿಪತಿಯಂಬಾ | ನಿರುತ ಖ್ಯಾತಿಯ ನಾಮ ಧರಿಸಿ ಬಂದನ ಮಹಿಮೆ1 ಘನಸಾರ ವಿದ್ಯದಾಕಾರವೋ | ಶುದ್ಧಜ್ಞಾನ ಕಲ್ಪ ದ್ರುಮವಿನಾ | ಮುದ್ದು ಫಲವೋಯನಲು ಸಿದ್ಧ ಸಾಧಕರ ನಡು | ಗದ್ದುಗೆಯೊಳೆಸೆವ ಗುಣ ನದ್ವೀತಿಯನ ಮಹಿಮೆ 2 ಸ್ವಸ್ಥ ಮನದಿಂದ ಭಕುತಿ ಸ್ತವನ ಮಾಡಲಿಕೆ | ಮಸ್ತಕದ ಮ್ಯಾಲಭಯ ಹಸ್ತನೀಡೀ | ಅಸ್ತಿ ಭಾತಿ ಪ್ರಿಯಂ ವಸ್ತು ವಿದೇಶ ಸಕಲ ಹೃದ | ಯಸ್ಥನೆಂದನು ಭವವ ವಿಸ್ತರಿಸುವನ ಮಹಿಮೆ 3 ಆರಿಗಳವಡದಿಹ ನೈರಾಸ್ಯ ವೃತ್ತಿಯಾ | ತಾರದಲಿ ನಡೆದು ಮುನಿ ವೈರಾಗ್ಯದಾ | ಸಿರಿ ಸಂಪದವ ತೋರಿದನು ನೋಡಲಿಕೆ | ಸಾರ ಸಾಂಖ್ಯವು ಯೋಗ ದಾರಿ ಬಲ್ಲನ ಮಹಿಮೆ4 ಹೊಂದಿದ್ದವರ ಚಿದಾನಂದ ಸುಖಸಾಗರದಿ | ನಿಂದು ಲೋಲ್ಯಾಡಿಸಿದ ನಂದಿಗಿಂದು | ತಂದೆ ಮಹಿಪತಿ ತನ್ನ ದ್ವಂದ್ವಪಾದುಕೆಗಳನು | ನಂದನ ಸಿರದಲ್ಲಿಟ್ಟು ಛಂದ ನೋಡುವನ ಮಹಿಮೆ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂದೆ ಏನೆಂದೆ ಪ ನಾನೇನೆಂದೆನೆ ಗಾನಲೋಲಗವ ಮಾನದ ಮಾತಿಂಥ ಜೀನನ ಕಾಣೆನೆಂದೆ ಅ.ಪ ಕಾಲು ಇಲ್ಲದ ಹೆಳವನೆಂದೆ ತಲೆಯ ಕಾಣದ ಕುರೂಪಿಯೆಂದೆ ಚೆಲುವಿಕಿಲ್ಲದ ಕಾಡು ಹೀನಮೃಗವೆಂದೆ ಬಲಿಯ ಬಾಗಿಲ ಕಾಯ್ವ ಕೂಲಿಕಾರನೆಂದೆ1 ನಾಲಗೆ ಚಾಚಿ ರಕ್ತ ಕುಡಿದನೆಂದೆ ತಿಳಿದು ಜನನಿತಲೆ ಕಡಿದವನೆಂದೆ ಲಲನೆಯೊಡನೆ ವನವಾಸಕೆ ಪೋಗಿ ಬಳಲಿ ಬಳಲಿ ಬಾಯಾರಿದನೆಂದೆ 2 ಗೊಲ್ಲರ ಕುಲದಲಿ ಹುಟ್ಟಿದನೆಂದೆ ಗುಳ್ಳೆ ಗುಳ್ಳೆ ಬೆಣ್ಣೆ ಕದ್ದವನೆಂದೆ ಗೊಲ್ಲರ ಅಕಳ ಕಾಯುವ ಚರನೆಂದೆ ಫುಲ್ಲನಲನೆಯರ ವಸ್ತ್ರಗಳ್ಳನೆಂದೆ 3 ಬತ್ತಲೆ ಕುಣಿಕುಣಿದಾಡಿದನೆಂದೆ ಸತ್ಯಭ್ರಷ್ಟ ಮಹಕಲಿಯು ಈತನೆಂದೆ ಮತ್ತೆ ವೈಕುಂಠದಿ ಒದೆಸಿಕೊಂಡು ಇವ ವಿತ್ತದಾಸೆಗೆ ಮತ್ರ್ಯಲೋಕಕಿಳಿದವನೆಂದೆ 4 ಕುದುರೆ ನಡೆಸಿ ಒಬ್ಬನುಳಿಸಿದನೆಂದೆ ಕದನದ್ವೊಂಚಿಸಿ ಒಬ್ಬನಳಿದವನೆಂದೆ ಕುದುರೆ ಕಟ್ಟಿದ ವೀರ ತಾಮ್ರಧ್ವಜಗೆ ಸೋತು ಮುದುಕನಾಗಿ ಭಿಕ್ಷದಶ್ವ ತಂದವನೆಂದೆ 5 ಸೋದರಮಾವನ ಕೊಂದವನೆಂದೆ ಸೋದರಳಿಯರ ಜೀವ ಹೊಡೆಸಿದನೆಂದೆ ಭೇದದಿಂದ ಸಾಧು ಹನುಮನ ಸೋಲಿಸಿ ಸಾಧಿಸ್ವರೂಪಕ್ಕೆ ಪತಾಕೆನಿಸಿದನೆಂದೆ 6 ಜಾರ ಸಿರಿ ಸೊರೆಗೊಂಡವನೆಂದೆ ಮೀರಿದಂಥ ಮಹಮಾಯದ ಹೆಣ್ಣೆಂದೆ ಈರೇಳುಲೋಕದ ಕಪಟನಾಟಕನೆಂದೆ 7 ಮೊಚ್ಚೆಗಾರ ಕೈಯೊಳುಂಡವನೆಂದೆ ಉಚ್ಚಿಷ್ಟನಾಗಿ ಬಹಿಷ್ಕಾರ್ಹೊಂದಿದನೆಂದೆ ವೆಚ್ಚಮಾಡಿ ಮತ್ತು ಕುಲದಿ ಬಿದ್ದವನೆಂದೆ ನಿಶ್ಚಲ ಭಕ್ತರಿಗ್ಹುಚ್ಚ್ಹಿಡಿಸಿದನೆಂದೆ 8 ಪುಲ್ಲನಯನ ಸಿರಿರಾಮನ ಮುಂದೆ ಅಲ್ಲದ ಮಾತುಗಳ್ನಾನೇನೆಂದೆ ಬಲ್ಲಿದ ಹದಿನಾಲ್ಕು ಲೋಕ ಪೊತ್ತವನೆಂದೆ ಉಲ್ಲಾಸದಿ ನಿಮ್ಮ ಬಿರುದು ಸಾರುತ ಬಂದೆ 9
--------------
ರಾಮದಾಸರು