ಒಟ್ಟು 8092 ಕಡೆಗಳಲ್ಲಿ , 130 ದಾಸರು , 4966 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಾರದೇಂದು ಸನ್ನಿಭಾನನೇ ಸರಸಿಜಲೋಚನೆ ಪ. ಶಾರದೇ ಸುವಿಶಾರದೇ ದಯೆಬಾರದೇ ನತಕಾಮದೆ ಭೂರಿಹರ್ಷದೆ ಬೀರಿ ನಲ್ಮೆಯಾಪಾರ ಸೌಖ್ಯವ ತೋರು ಕೀರ್ತಿಯ 1 ವಾಣಿ ವೀಣಾಪಾಣಿ ಮಂಜಳವಾಣಿ ಪುಸ್ತಕಧಾರಿಣಿ ವೇಣುನಾದ ವಿನೋದಿನಿ ಸುಜ್ಞಾನದಾಯಿನಿ ಪಾಹಿ ಜನನೀ 2 ಮಾತೆ ಮಂಗಳ ಗೀತೆ ಕವಿಸುಪ್ರೀತೆ ಪದ್ಮಜದಯಿತೆ ಖ್ಯಾತೆ ಶೇಷಗಿರೀಶ ಭಕ್ತಿಪ್ರದಾತೆ ಸದ್ಗುಣಪೂತೆ ಮಹಿತೆ 3
--------------
ನಂಜನಗೂಡು ತಿರುಮಲಾಂಬಾ
ಶಾರದೇಂದುಮುಖಿ ನೀರಜನಯನಳೆ ಬಾರೆಲೆ ಬಾಗಿಲ ತೆಗಿಯಲೆ ಭಾಮೆ ಪ ಯಾರಯ್ಯ ಬಾಗಿಲ ಹೊರಗೆ ನಿಂತಿರುವನು ಜಾರ ಪುರುಷನಂತೆ ತೋರುವೆ ನೀನು ಅ.ಪ ಜಾರನಾದರೆ ನಿಂಗೆ ಜಾರನಲ್ಲವೆ ಮೀನಾ ಕಾರ ಧರಿಸಿರುವ ಹರಿಯಲೆ ಭಾಮೆ ಮೀನನಾದರೇ ಬಲು ಮೌನದಲಿರದಂತೆ ಮಾನವರಂತೆ ಮಾತು ಯಾವುದೋ ನಿನಗೆ 1 ಮಂದರಗಿರಿಯ ಬೆನ್ನಿಂದ ಧರಿಸಿರುವ ಅಂದ ಕೂರ್ಮನಲ್ಲವೇನೆ ಭಾಮೆ ಕೂರ್ಮ ನೀನಾದರೆ ಕೂಪದೊಳಿರುವುದೆ ಧರ್ಮವೆಂಬುವುದನು ಮರೆತೆಯಾ ನೀನು 2 ನೀಲವೇಣಿಯೆ ಕೇಳೆ ಕೋಲರೂಪದಿ ಬಂದು ಕ್ಷಿತಿ ತಂದೆನೆ ಭಾಮೆ ಪೋತರೂಪನೇ ನಿಜ ಧಾತ್ರಿಯ ಭೇದಿಸಿ ಗಾತ್ರ ರಕ್ಷಣೆ ಮಾಡು ಹೋಗೆಲೊ 3 ಸ್ತಂಭ ಭೇದಿಸಿ ರಿಪು ಡಿಂಭನ ಕಾಯಲು ಜಂಭದಿ ಖಳನನು ಕೊಂದೆನೇ ಭಾಮೆ ಸ್ಥಂಭ ಭೇದಿಸಿದ ನಾ ನಂಬುವುದಿಲ್ಲವೊ ಡಂಭದಿ ಬಾಗಿಲು ಭೇದಿಸಿ ಬಾರೊ 4 ವಾಮನನೆಂದು ವಟುರೂಪದಿ ಬಂದು ಸಾರ್ವ ಭೌಮನಲ್ಲಿ ಭೂಮಿ ಬೇಡಿದೆ, ಭಾಮೆ ವಟುರೂಪನಾದರೆ ಕುಟಿಲಾಕ್ಷಿಯರಲಿಂಥ ಚಾಟುವಚನಗಳು ಯಾಕೆಲೊ 5 ದುರುಳನೃಪರ ಪರಿಹರಿಸಿದ ಭೃಗುಮುನಿ ವರಕುಲಜಾತ ಶ್ರೀ ರಾಮನೇ ಭಾಮೆ ಮುನಿವರಸುತನಾಗಿ ಸ್ವನಿಯಮಗಳ ಬಿಟ್ಟು ವನಿತೆಯರಲ್ಲಿಂಥಾ ಸರಸವೆ ನಿನಗೆ 6 ದಶರಥ ನೃಪತಿಯ ಮನೆಯೊಳವತರಿಸಿ ದಶಶಿರರನು ಕೊಂದ ರಾಮನೆ ಭಾಮೆ ಪರ ಕಾಮಿನಿಯರೊಳಿಂಥಾ ಪ್ರೇಮ ಮಾಡುವುದುಂಟೆ ಯೋಚಿಸೊ ನೀನು 7 ನೀರಜಾಕ್ಷಿ ಕೇಳೆ ಜಾರಚೋರತೆಯಲ್ಲಿ ಸಿರಿ ಕೃಷ್ಣನೇ ಭಾಮೆ ಚೋರನಾದ ಮೇಲೆ ಸೇರಿಸುವುದು ಹೇಗೆ ಭಾರಿ ಆಭರಣಗಳಿರುವುವೊ 8 ಮುಗ್ಧೆ ಕೇಳೆ ಇದಬದ್ಧವಲ್ಲದೆ ಅತಿ ಶುದ್ಧನಾದ ಬುದ್ಧರೂಪನೆ ಬುದ್ಧರೂಪನೆ ನಿನ್ನ ನಡತೆಯ ಕೇಳಲು ಶುದ್ಧಿಯು ಲೋಕಪ್ರಸಿದ್ಧವು9 ಸರಸಿಜಮುಖಿ ವರತುರಗವನೇರಿದ ನೃಪರ ಗೆಲ್ವ ಕಲ್ಕಿಯೇ ಭಾಮೆ ದುರುಳ ಜನರು ಇಲ್ಲಿ ಸೇರುವುದಿಲ್ಲವೊ ತರಳೆಯರಲಿ ದುಷ್ಟ ಕಾರ್ಯವೇ ಪೋಗೊ10 ಪರಿ ಸರಸವನಾಡುವ ನಾಮಗಿರಿ ನರಹರಿ ರೂಪ ರಮಾ ರಮೇಶರು ವಿಹರಿಪ ಬಗೆಯನು ಸ್ಮರಿಸುವ ಸುಜನರ ಪರಮಪುರುಷ ಹರಿ ಪೊರೆವುದು ನಿಜ 11
--------------
ವಿದ್ಯಾರತ್ನಾಕರತೀರ್ಥರು
ಶಿಖಾಮಣಿ ಬಾರೋ ಬಾರೊ ಪಾವನ ಗೈಸುವ ಪರಮ ದಯಾಕರುಣ ಬಾರೊ ಬಾರೊ ಧ್ರುವ ಮಾಧವ ಶ್ರೀಹರಿ ಮುಕುಂದ ಬಾರೊ ಸುಂದರ ವದನನೆ ನಂದ ಯಶೋದೆಯ ಕಂದ ಬಾರೊ ಕಂದರ್ಪ ಕೋಟಿ ಲಾವಣ್ಯದಲೊಪ್ಪುವಾನಂದ ಬಾರೊ ವಂದಿತ ತ್ರೈಲೋಕ್ಯ ಇಂದಿರಾಪತಿ ದೀನಬಂಧು ಬಾರೊ 1 ಗರುಡವಾಹನ ಗೋವಿಂದ ಗೋಪಾಲ ಶ್ರೀಕೃಷ್ಣ ಬಾರೊ ಸರಸಿಜೋದ್ಭವನುತ ಸಿರಿಯ ಲೋಲನೆ ಪರಿಪೂರ್ಣ ಬಾರೊ ಶರಣರಕ್ಷಕ ಸದಾ ಸಾಮಜವರದ ಸದ್ಗುಣ ಬಾರೊ ವರ ಶಿರೋಮಣಿ ಮುನಿಜನರ ಸ್ವಹಿತ ಸುಭೂಷಣ ಬಾರೊ 2 ಅನಾಥರನುಕೂಲಾಗುವ ಘನದಾಗರ ಬಾರೊ ಅನುಭವಿಗಳ ಅನುಭವದ ಸುಖಸಾಗರ ಬಾರೊ ಭಾನುಕೋಟಿತೇಜ ಭಕ್ತಜನ ಸಹಕಾರ ಬಾರೊ ದೀನಮಹಿಪತಿ ಸ್ವಾಮಿ ನೀನೆ ಎನ್ನ ಮನೋಹರ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶಿರಸಾವಂದಿಪೆ ನಿನ್ನ ಕರುಣಾಕರ ನೇತ್ರ ದೀನದಲಿತ ವರದಾತ [ಮಾಂಗಿರೀಶ ಪ್ರೀತ] ಪ ಗುರುರಾಜ ಸುರಭೂಜ ಸುರುಚಿರಗಾತ್ರ ಪರಮಾತ್ಮ ಶಶಿತೇಜ ಶ್ರೀಮಂತ್ರ ವಾಸ ಅ.ಪ ವರದಂ ಸುಖದಂ ಚಿರಂ ಅರವಿಂದ ಸಾನಂದ ನಿರುಪಮ ಗುರುವರ್ಯ ವಾರಿಜ ನೇತ್ರ 1 ಸಾರಸ ಪದಯುಗ ಕನಕ ಸಮಗಾತ್ರ ಚಾರುತರ ಕಮ[ನೀಯ] ಮಿತ್ರರೂಪಂ ದೃತಿಮಾನ್ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶಿರಿ ಮುದ್ದು ಕೃಷ್ಣವಿಠಲ | ಪೊರೆಯ ಬೇಕಿವಳಾ ಪ ಪಾದ | ಸಾರಿ ಭಜಿಸುವಳಾ ಅ.ಪ. ಪರಿಪರಿಯ ವಿಧದಿಂದ | ತೈಜಸನೆ ನೀನಾಗಿವರಸೂ ರೂಪಗಳಿಂದ | ವಸುದೇವ ಸುತನೇತರಳೆಗತಿ ಆಶ್ಚರ್ಯ | ತೋರಿ ಅಡಗಿದೆ ದೇವಶಿರಿಮುದ್ದು ಕೃಷ್ಣನೇ | ಮರುತಂತರಾತ್ಮ 1 ಸುಪ್ತಿಯಲಿ ಗುರುಪಾದ | ಭಕ್ತಿಯಲಿ ನಮಿಸುತ್ತತೀರ್ಥವನೆ ತಕ್ಕೊಂಡು | ಧನ್ಯನಾನೆಂದುಅತ್ಯಂತ ಹರ್ಷದಲಿ | ಸ್ತೋತ್ರವನೆ ಮಾಡುತ್ತಸಕ್ತಿಯನೆ ತೋರಿಹಳು | ದಾಸಪಂಥದಲೀ 2 ಭುವನ ಪಾವನವೆನಿಪ | ಮಧ್ವಮತದಾಸಕ್ತಿಶ್ರವಣಕಾನಂದವೆನೆ | ಕವನ ಸಂಸ್ಪೂರ್ತೀಜೀವೊತ್ತಮರ ಭಕುತಿ | ವಿಷಯದಲಿ ವಿರಕ್ತಿಹವಣಿಸೋ ಶ್ರೀಹರಿಯೆ | ಭವಕರಿಗೆ ಹರಿಯ 3 ಪತಿಸುತರು ಹಿತರಲ್ಲಿ | ಮತಿಮತಾಂವರರಲ್ಲಿರತನು ಶ್ರೀಹರಿಯೆಂಬ | ಸುಜ್ಞಾನವನ್ನುಕೃತಿಪತಿಯ ಕರುಣಿಸುತ | ಸಾಧನವ ಗೈಸುವುದುಚತುರಾಸ್ಯಪಿತ ಹರಿಯೆ | ದುರಿತವನ ದಾವಾ 4 ಮಾನನಿಧಿ ಶ್ರೀಹರಿಯೆ | ಧ್ಯಾನಾನುಕೂಲಿಸುತಸಾನುರಾಗದಿ ನಿನ್ನ | ರೂಪಹೃದ್ಗುಹದೀಕಾಣಿಪಂತಸಗೊ ಗುರು | ಗೋವಿಂದ ವಿಠಲನೆಆವಾದದನ್ಯವನು | ಬೇಡ ಬಂದಿಲ್ಲ5
--------------
ಗುರುಗೋವಿಂದವಿಠಲರು
ಶಿರಿದೇವಿಯೆ ಪೊರಿಯುವದೆನ್ನನು ತಾಯೆ ಭಾ ಸ್ಕರ ಪುರ ನಿಲಯೆ ಪ ಧರಣಿಸುರವರÀನಿಗೊಲಿದು ಶ್ರೀಗಂಧದ ವರ ಶಿಲೆಯೊಳು ನೆಲಿಸಿರುವ ಶುಭಾಂಗಿಯೆ ಅ.ಪ ಲಕುಮಿಯೆ ತವ ದರುಶನ ವರುಷಂಪ್ರತಿ ಮಾಡುವ ನೇಮಾಸಕ್ತ ಶ್ರೀ ಲಕ್ಷ್ಮೀಕಾಂತ ತತ್ಕರಸಂಪೂಜಿತ ಸತಿ 1 ಪದ್ಮೇ ಪ್ರಣಮಾಮಿ ಭವತ್ಪದ ಪದ್ಮೆ ವಾರಿಜದಳ ಸದ್ಮೆ ಪದ್ಮಾನನೆ ಸ್ಮರಿಸುವೆ ಕರಧೃತ ಪದ್ಮೆ ವಾಸಯಿ ಮಮಸದ್ಮನಿ ಪದ್ಮಾವತಿ ಪದ್ಮಜನುತ ಪದಪದ್ಮೇ ಉದ್ಭವಿಸಿದ ಪದ್ಮದಿ ಪದ್ಮನಾಭ ಹೃತ್ಪದ್ಮನಿವಾಸಿನಿ 2 ಸಿಂಹಧ್ವಜ ಶೋಭಿತೆ ಸಾನುರಾಗದಿ ಭಜಿಸುವರಿಗೆ ಪ್ರೀತೆ ಕಾಮಿತ ಫಲದಾತೆ ಜ್ಞಾನಾ ಸದ್ಭಕುತಿಯು ಕರುಣಿಸು ಮಾತೆ ವರದಾಭಯಹಸ್ತೆ ರಾಣೆಯೆ ನಮಿಸುವೆ 3 ವಂದಾರುಜನ ಮಂದಾರಾಮಿಂದಿರಾ ಸುಂದರಾನನಾಂ
--------------
ಕಾರ್ಪರ ನರಹರಿದಾಸರು
ಶಿವ ಕರುಣಿಸಯ್ಯ ಚಂದ್ರಶೇಖರ ನೀನೆನ್ನೊಳೊಲಿದು ಪ ತಾಪ ಹರಣ ಮಾಡು ನಿನ್ನ ದಿವ್ಯಚರಣಗಳಿಗೆ ನಮಿಪೆನುರಗಾಭರಣ ಶರಣು ಶರಣು ಶರಣು ಅ.ಪ. ಕಾಳಭೈರವ ಶಂಭು ಶಂಕರ ಗಿರಿಜೆಯಾಣ್ಮಕೇಳು ಕೇಳು ನಿನ್ನ ಕಿಂಕರಹೂಳಿ ಷಡ್ರಿಪುಗಳನು ಮನದಲಿಊಳಿ ನಿಜಜ್ಞಾನವನು ಸಜ್ಜನರೋಳಿಯಲಿ ನಿಲಿಸುತ್ತ ನಿತ್ಯದಿಬಾಳಿ ತಾಳಿ ಎನುವಂತೆ 1 ನಂಟನಯ್ಯ ಭಕ್ತ ಜನಕೆ ಇನ್ನು ಮಿತಿಯುಂಟೆ ನಿನ್ನಯ ಕರುಣಲಹರಿಂಗೆಎಂಟು ದಿಕ್ಕನು ಸುಡುವ ವಿಷವನುಕಂಠದಲಿ ಧರಿಸಿ ಜಗತ್ತಿನಕಂಟಕವನು ಪರಿಹರಿಸಿದಂಥಬಂಟ ನೀನೈ ಮಹಾದೇವಾ 2 ಮೂರು ಊರುಗಳನು ಸಂಹಾರಾಮಾಡಿ ಉಳಿಸಿದಿಘೋರ ಸಂಕಟದಿಂದ ಜಗಪೂರಸೂರಿ ಬೊಮ್ಮನ ಮತ್ತೆ ಗದುಗಿನವೀರನಾರಾಯಣನ ಕೂಡಿನಾರಿ ಸತಿಯನಸೂಯಳನ್ನುದ್ಧಾರ ಮಾಡಿದ ರೀತಿಯಲ್ಲಿ 3
--------------
ವೀರನಾರಾಯಣ
ಶಿವ ಶಿವ ನಿಮ್ಮ ನಾಮ ಅಡಿಗಡಿಗೆ ಬೇಕು ಪರಿಯಂತ ತಾನೊಂದೆ ಸಾಕು ಪ ಜಗವೆಲ್ಲ ಶಿವ ಮಯವು ಎಂದು ಕಾಣಲು ಬೇಕು ನಿಗಮ ದೂರನ ಹೃದಯ ದೊಳಗರಸಬೇಕು ಬಗೆಯರಿತು ಮಾನಸದಿ ಶಿವನ ಪೂಜಿಸಬೇಕು ನಿಗಮಾಗಮಸ್ತುತನ ಅಡಿಗೆರಗಬೇಕು 1 ಅನವರತ ಶಿವಮಂತ್ರವನು ಜಪಿಸುತಿರಬೇಕು ತನುಮನವ ವಸ್ತುವಿನೊಳಗಿರಿಸಬೇಕು ಘನ ಪರಂಜ್ಯೋತಿ ಸ್ವರೂಪವ ನರಿಯ ಬೇಕು ತನುಮಯ ಚಿದಂಬರನ ಕೂಡಬೇಕು 2 ನಾನು ನಾನೆಂದೆಂಬ ಹಮ್ಮ ಬಿಡಬೇಕು ಜ್ಞಾನಾಗ್ನಿಯಿಂದ ಜ್ಞಾನವನು ಸುಡುಲುಬೇಕು ಪವಮಾನ ಸುತ ಕೋಣೆ ಲಕ್ಷ್ಮೀಪತಿಯ ಕಡುಮಿತ್ರನಾದ ವನ ಪಾದವನು ಕೊಡಬೇಕು 3
--------------
ಕವಿ ಪರಮದೇವದಾಸರು
ಶಿವ ಶಿವ ಶಿವ ಶಿವ - ಶಿವರಾಯ | ನಮ್ಮಭವ ಭಯ ಪರಿಹರ ಮಹರಾಯ ಪ ಭವ | ಭಂಗಿಸಿ ಸುಜನರಸಂಗವ ಕೊಡಿಸೊ ನೀ | ಲಾಂಗನ ಪ್ರಿಯ ಸಖ 1 ಸಿರಿ | ಕರಿವರದನ ದಯನಿರುತ ನಿನ್ನೊಳಗುಂಟು | ಪೊರೆಯೊ ಮೃತ್ಯುಂಜಯ 2 ಸ್ವಾಪದಿ ಗರಸಹ | ರೂಪವ ತೋರ್ದೆ - ಸು-ರಾಪಗಧರ ಹರ | ತಾಪಸಿ ಶುಕನೇ |ಗೋಪತಿ ಗುರು ಗೋ | ವಿಂದ ವಿಠಲನರೂಪವ ತೋರಿಸಿ | ನೀ ಪರಿಪೋಷಿಸು 3
--------------
ಗುರುಗೋವಿಂದವಿಠಲರು
ಶಿಷ್ಟ ಜನರುಗಳಿಗೆ ಸತತ ಇಷ್ಟಾರ್ಥಗಳನೆ ಕೊಡುವ ಬೈಷ್ಮೀಸತ್ಯಾಸಮೇತ ಕೃಷ್ಣ ನಿನಗೆ ಮಂಗಳಂಪ ಸರ್ವಶಾಸ್ತ್ರಾರ್ಥಗಳನರಿತು ದುರ್ವಾದಿ ಮತವನಳಿದ ಸರ್ವಜ್ಞಾಚಾರ್ಯ ಪೂಜಿತ ಕೃಷ್ಣ ನಿನಗೆ ಮಂಗಳಂ 1 ಲೇಸಾಗಿ ಮಧ್ವಶಾಸ್ತ್ರವ ಭೂಸುರರಲಿ ಅರುಹಿದ ವ್ಯಾಸಾರ್ಯವರಕರಾರ್ಚಿತ ಕೃಷ್ಣ ನಿನಗೆ ಮಂಗಳಂ 2 ಘನ್ನ ಶ್ರೀ ವ್ಯಾಸಯತಿಗಳ ಉನ್ನತ ಪೀಠಪತಿಗಳಿಂ ಚೆನ್ನಾಗಿ ಪೂಜಿಗೊಂಬ ಪ್ರಸನ್ನÀ ಕೃಷ್ಣಗೆ ಮಂಗಳಂ 3
--------------
ವಿದ್ಯಾಪ್ರಸನ್ನತೀರ್ಥರು
ಶುಕಪಿತನ ಪದಕಂಜ ಪದುಪಾ | ಅಖಿಳ ಲೋಕದ ಗುರುವೆ ಸುಖ ತೀರ್ಥ ಮುನಿಪಾ ಪ ನಿತ್ಯ ನೈಮಿತ್ಯಗಳು | ಗತಿ ತಪ್ಪಿ ಪೋಗಿರಲು ಸರ್ವ ದೇವತೆಗಳು || ಪಥವ ಕಾಣದೆ ನೆರೆದು ಯೋಚಿಸಿ ತಮ್ಮೊಳು | ಅತಿಶಯದಿ ವೊದರಿ ಕೇಳು ಭವನದಾ | ಪತಿಯಾದ ಬೊಮ್ಮಗುಸರಿದರಂದು ಮೇಲು1 ತುತಿಸಲಾಕ್ಷಣ ಕೇಳಿ ಅಜನು ಶಿರದೂಗಿದನು | ಕೃತಭುಜರ ಸಹವಾಗಿ ಹರಿಪುರಕೆ ಸಾಗಿದನು | ನತನಾಗಿ ಶಿರಿಪತಿಯ ಪದಯುಗಕೆ ಬಾಗಿದನು | ಗತಿ ನೀನೆ ಎಂದು ಕೂಗಿದನು ಹರಿ ಕೇಳಿ | ಸತತ ನಿನ್ನನ್ನು ಕರೆದು ಪೇಳಿದವೇಗಿದನು 2 ಭೂಸುರನ ಗರ್ಭದಲಿ ಬಂದೆ ನೀನವತರಿಸಿ | ವಾಸುದೇವನೆಂಬ ನಾಮದಿಂದಲಿ ಜನಿಸೀ | ಭಾಸುರ ಕೀರ್ತಿಯಲಿ ಮೆರೆÀದೆ ಬಲು ಪಸರಿಸಿ | ದೋಷ ವರ್ಜಿತದ ಗುಣರಾಸಿ ಎನಿಸುವಾ | ಲೇಸು ಆರೈದೆರಡು ಲಕ್ಷಣ ಸಂನ್ಯಾಸಿ 3 ಪುಟ್ಟಿ ಇಳಿಯೊಳಗೆ ಸಂಕರನೆಂಬ ದುರವಾದಿ | ಜಟ್ಟಿಗನಾಗಿ ಸೋsಹಂ ಯೆಂಬ ಅತಿ ಕ್ರೋಧಿ | ಅಟ್ಟಹಾಸದಲಿ ತಿರುಗಿದನು ಬೀದಿ ಬೀದಿ | ಘಟ್ಟವಚನದಿಂದ ಕಾದಿ ಅವನ ಮುರಿ | ದೊಟ್ಟಿದೇ ವಪ್ಪದಲಿ ಮಾಯಿ ಮತಭೇದಿ 4 ಅಮೃತ | ಗ್ರಂಥ ಉತ್ತಮರಿಗೆರೆದು ಸುಖ ಬಡಿಸಿದೆ ಅತಿಶ್ಯಾಂತ | ಅತ್ಯಂತ ಮಹಿಮ ಬಲವಂತ ನಿಮಗೆ ನಾ | ಎತ್ತಿ ಕರಗಳ ಮುಗಿವೆ ತೋರು ನಿಜ ಪಂಥ 5 ಹರಿಯೆ ಪರನೆಂದು ಬೊಬ್ಬರಿದು ಎಳಹರಿ | ಮರಿಯೆ ಬಿರಿದು ಡಂಗುರವ ಹೊಯಿಸಿ | ಚರಿಸಿದ ಗುರು ದೊರೆಯೇ | ಸರಿಗಾಣೆ ನಿನಗೆಲ್ಲಿ ಮತ್ತೊಬ್ಬರನ ಕರಿಯೇ | ವರ ಬದರಿಲಿಪ್ಪ ವೈರಾಗ್ಯದ ಸಿರಿಯೇ 6 ಮುನಿಗಳೊಳಗೆ ರನ್ನ ಮುನಿದವರಿಗಿರಬೆನ್ನ | ಘನ ವಿದ್ಯಸಂಪನ್ನ ಗುಣದಲ್ಲಿ ಅಚ್ಛಿನ್ನ | ನೆನೆದವರ ಪ್ರಸನ್ನ ತನುವೆ ತಪುತ ಚಿನ್ನ | ಮಿನಗುವಂತೆಯಿಪ್ಪ ಪಾವನ್ನ ಮಧ್ವಮುನಿ | ಚಿನುಮಯ ವಿಜಯವಿಠ್ಠಲನ್ನ ಪ್ರಸನ್ನಾ7
--------------
ವಿಜಯದಾಸ
ಶುದ್ಧ ಸನ್ಮಾರ್ಗ ಸರ್ವರಿಗಿದು ಒಂದೆ ಬುದ್ಧಿವಂತರು ತಿಳಿದರು ಇದರಿಂದೆ 1 ಇದರಿಂದೇವೆಂಬುದು ನಿರ್ವಾಣ ಒದರುತಲಿಹುದು ವೇದಪುರಾಣ 2 ಪುರಾಣ ಪುಣ್ಯದ ಹಾದಿಯು ನಿಜ ಸುರಮುನಿಗಳಿಗಿದು ಹೊಳೆವದು ಸಹಜ 3 ಸಹಜಾನಂದದ ಸುಖಸಾಗರ ಬಾಹ್ಯಾಂತ್ರ ಸದೋತಿತ ಸಹಕಾರ 4 ಸಹಕಾರವು ಚಿನ್ಮಯ ಚಿದ್ರೂಪ ಸೋಹ್ಯದೋರುವ ಶ್ರೀ ಗುರುಸ್ವರೂಪ 5 ಸ್ವರೂಪವೆ ಸದ್ಗೈಸುವ ಹಾದಿ ಪರಮ ವೈಷ್ಣವರ ಮೂಲಾಗ್ರದ ಆದಿ 6 ಅಧಿವೆಂಬುದು ನಿಜನಿರ್ಧಾರ ಸಾಧಿಸುದವರಿಗೆ ಸಾಕ್ಷಾತಾರ 7 ಸಾಕ್ಷಾತ್ಕಾರವೆ ಮೋಕ್ಷದಮನೆಯು ಅಕ್ಷಯ ಪದ ಅದ್ವೈತದ ಖಣಿಯ 8 ಅದ್ವೈತವೆ ಆಧ್ಮಾತ್ಮ ಸುವಿದ್ಯ ಸಿದ್ದಸಾಧಕರಿಗೆ ಆಗುವ ಸಾಧ್ಯ 9 ಸಾಧ್ಯವೆಂಬುದು ನಿಜಸಿದ್ಧಾಂತ ಭೇದಿಸಿದವರಿಗೆ ಇದು ಸನ್ಮತ 10 ಸನ್ಮತವೆ ಮತ ಸರ್ವರಿಗೆಲ್ಲ ಉನ್ಮನಲೀಹ ಮಹಾಯೋಗಿಯು ಬಲ್ಲ 11 ಬಲ್ಲೆವೆಂಬುದು ಬಲು ಅಗಾಧ ಸೊಲ್ಲಿಗೆ ಸಿಲುಕದು ಗುರುನಿಜಭೋದ 12 ಬೋಧವೆ ಸದ್ಗುರುವಿನ ದಯಕರುಣ ಸದ್ಗತಿಸುಖ ಸಾಧನದ ಸ್ಫುರಣ 13 ಸ್ಫುರಣವೆ ಬ್ರಹ್ಮಾನಂದದ ಹರುಷ ತರಣೋಪಾಯದ ಮಹಾ ಉಪದೇಶ 14 ಉಪದೇಶವೆ ನಿಜ ಉಪನಿಷದ್ವಾಕ್ಯ ಒಪ್ಪಿಡುವದು ಭೂಸ್ವರ್ಗತ್ರೈಲೋಕ್ಯ 15 ತ್ರೈಲೋಕ್ಯಕೆ ಇದು ನಿಜನಿಧಾನ ಭಯವಿಲ್ಲದ ಮಹಾಸುಖಸಾಧನ 16 ಸಾಧನದಿಂದ ಸದ್ಗತಿ ಸಂಪೂರ್ಣ ಸಾಧು ಸಜ್ಜನರಿಗೆ ಸಕಲಾಭರಣ 17 ಸಕಲಾಭರಣ ಸದ್ಗುರು ನಿಜ ಅಭಯವು ಶುಕಾದಿ ಮುನಿಗು ಕೂಡಿದ ಪ್ರಭೆಯು 18 ಪ್ರಭೆಗಾಣಲು ತೋರದು ನೆಲೆನಿಭವು ನಿಭವೆ ಮಹಾಮಂಗಳಕರ ಶುಭವು 19 ಶುಭದೋರುದು ಸದ್ಗುರು ಕೃಪೆಯಿಂದ ಭ್ರಮೆಹಾರಿತು ಮಾಯೆ ಇದರಿಂದ 20 ಇದರಿಂದೆ ಇದರಿಟ್ಟಿತು ಪುಣ್ಯ ಒದಗಿ ಕೈಗೂಡಿತು ಬಂತು ತಾರ್ಕಣ್ಯ 21 ತಾರ್ಕಣ್ಯವು ಬಂತೆನ್ನೊಳು ಪೂರ್ಣ ಸರ್ಕನೆ ದೊರೆಯಿತು ಸದ್ಗುರುಖೂನ 22 ಖೂನವೆ ಎನ್ನೊಳಗಾಯಿತು ಧ್ಯಾನ ಘನಸುಖದೋರುವ ಅನುಸಂಧಾನ 23 ಅನುಕೂಲಾದ ನಮ್ಮಯ್ಯ ಪ್ರಸಿದ್ಧ 24 ಪ್ರಸಿದ್ಧವೆ ಪ್ರತ್ಯಕ್ಷ ಪ್ರಮಾಣ ಭಾಸುತಿಹುದು ಶ್ರೀಗುರು ಶ್ರೀಚರಣ 25 ಶ್ರೀಚರಣಕೆ ಎರಗಿಹ ಮಹಿಪತಿಯು ಸೂಚನೆ ಮಾತ್ರ ಕೊಂಡಾಡಿದ ಸ್ತುತಿಯು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶುಭ | ಮಂಗಳ ಶ್ರೀ ಲಕ್ಷ್ಮೀ ನರಸಿಂಹಗೇ | ಸಹಸ್ರ | ಮಂಗಳ ಭಕ್ತರ ಸಲಹುವಗೆ ಪ ಶರಣ ಪ್ರಲ್ಹಾದಗೆ ಪಟ್ಟಾಭಿಷೇಚನ | ಕರುಣದಿಮಾಡಿಸಿಸುರದಿಂದಲಿ | ಅರಸುತನವಕೊಟ್ಟು ಭಕ್ತಾಗ್ರಣಿ ಮಾಡಿ ವರಮುಕ್ತಿಗಳ ಸೂರಾಡಿದವಗೆ | ಮಂಗಳ .... 1 ಎನ್ನನು ನೆನೆಯಲಿ ನೆನೆಯದವರಿರಲಿ ಒಮ್ಮೆ | ನಿನ್ನ ನೆನೆದು ಘನ ಚರಿತೆಯನು || ಮನ್ನಿಸಿ ಒದುವ ಕೇಳುವ ಮನುಜರ | ಚೆನ್ನಾಗಿ ಕಾಯ್ವೆನೆಂದಭಯ ವಿತ್ತವಗೆ ಮಂಗಳ ..... 2 ಅಂದಿಗಿಂದಿಗೆ ತನ್ನ ದಾಸರಾದಾಸನಾ | ಮಂದಿರ ಸಾರಿದವಗೆ ದಯದೀ || ಚಂದಾಗಿ ತನ್ನ ಭಕುತಿ ಎಚ್ಚರವ ನೀವ | ತಂದೆ ಮಹೀಪತಿ ಸುತ ಪ್ರೀಯಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶುಭ ಮಂಗಳಂ ಮಂಗಳಂ ಹರಿಸಚ್ಚಿದಾನಂದಗ ಮಂಗಳಂ ಅಚ್ಯುತಾನಂತ ಗೋವಿಂದಗೆ ಮಂಗಳಂ ವಿಧಿಭವಾಮರ ವಂದ್ಯಗೆ ಪ ಆನಂದ ಕೋಶಗ ಅಖಿಳಜನಪೋಷ ದಾನವಿನಾಶಗ ದೇವೇಶಗ ವನಮೂಲಭೂಷಗವರದ ಹೃಷೀಕೇಶಗ ಮುನಿಜನೋಲ್ಲಾಸಗ ಧರಿಣೀಶಗೆ 1 ಮಾಯಾ ವಿಮುಕ್ತಗ ಸಕಲಗುಣಯುಕ್ತಗ ವಿರಹಿತಂಗೆ ಭಕ್ತಾನುರಕ್ತಗ ಚಿಂತ್ಯ ಅವ್ಯಕ್ತಗ ಅಕುತೋಭಯದಾ ತಗ ಜದಧಾತಗೆ 2 ವರಯದುರಾಯಗ ನಂದ ಕುಮಾರಗ ಸುರಸಹಕಾರಗ ಸುಂದರಗ ದುರಿತ ಸಂಹಾರಗ ಅಮಿತಾವತಾರಗ ಗುರುಮಹೀಪತಿ ನಂದ ನೋದ್ಧರಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶುಭ ಮಂಗಳಂ ಸುಮಂಗಳಂ ರಘವರಗೆ ದಯಾವಾರಿನಿಧಿ ಮುರುಹರಗೆ ನರಸಾರಧಿ ಗಿರಿಧರ ಮಾಧವಗೆ | ಶೌರಿ ರವಿನಿಭಾಂಗ ಕೃಪಾನಿಧಿಗೆ | ದುರಿತಾನಲ ಫಣಿವನಮಾಲೆಯ ಶುಭದಾಯಕಗೆ ದಯವಾರಿಧಿ ಮುರಹರಗೆ 1 ಸನ್ನುತ ಶ್ರೀಧರಗೆ ದೂರೀಕೃತದೋಷ ನಿರಾಮಯಗೆ ನಗಜಪತಿ ಪಾಲಕ ದೇವಕಿ ಸುತಗೆ ದಯವಾರಿಧಿ ಮುರಹರಗೆ 2 ಅಮರಾದಿಪವಿನಮಿತ ಮೂರುತಿಗೆ ಭಾಮೆ ನವಮೋದ ಪ್ರದಾಯಕಗೆ ಸ್ವಾಮಿ ಶ್ರೀನಿಧಿ ಶಾಮಸುಂದರ ಧೊರೆಗೆ ದಯವಾರಿಧಿ ಮುರಹರಗೆ 3
--------------
ಶಾಮಸುಂದರ ವಿಠಲ