ಒಟ್ಟು 24701 ಕಡೆಗಳಲ್ಲಿ , 138 ದಾಸರು , 9090 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೃಷ್ಟಾಂತವಾಗಿದೆಯೈ ಪ ಕೃಷ್ಣಾ ನೀಮಾಡಿರ್ಪ ಸೃಷ್ಟ್ಯಾದಿಗಳೆಲ್ಲ ಅ.ಪ ಜನರು ನಡೆವದೀಗ ನೋಡಲ್ ಮನಕೇ ಬಂದಂತೆ ಕಾರ್ಯಂಗಳೊಡಗೂಡಲ್ 1 ಧೃಡವಾಗಿಯೇ ತೋರ್ಪುದು ನಡೆನುಡಿ ಮೊದಲಾದ ನರರು ಮಾಳ್ಪುದೆಲ್ಲ 2 ಚತುರಾವಸ್ಥೆಗಳಿಂದಲಿ ಹಿತವೇಬೇಕೆಂದರು ಅಹಿತವಾಗುತಿರುವುದು 3 ತನ್ನಿಂತಾನೆ ನಡೆವದು ಭಿನ್ನಾಭಿನ್ನವಾಗಿ ಭೇದ ಪ್ರಪಂಚವು 4 ಗುರುರಾಮವಿಠಲಾ ನೀ ಮಾಡಿರ್ಪ ಕಷ್ಟಗಳು 5
--------------
ಗುರುರಾಮವಿಠಲ
ದೃಷ್ಟಿ ಇರಬೇಕಯ್ಯ ಬ್ರಹ್ಮದಿ ದೃಷ್ಟಿಯಿರಬೇಕುದೃಷ್ಟಿಯಿಲ್ಲದಿರಲು ಅನುಭವ ಪಟು ದೊರಕದು ಪ ಆಲಿಯು ನಿಂತೆ ಆಲಿಯ ಗೊಂಬೆಯು ತಿರುಗದಲಿರಬೇಕುಆಲಿಯು ಮುಚ್ಚದೆ ಆಲಿಯ ರೆಪ್ಪೆಯು ಬಡಿಯದಲಿರಬೇಕು 1 ಅನಿಮಿಷ ದೃಷ್ಟಿಯಂದದಿ ಬ್ರಹ್ಮವ ಆಲಿಸುತಿರಬೇಕುಅನಿಮಿಷದಂದದಿ ಕಣ್ಣಿನ ಗುಡ್ಡೆ ತಿರುಗದಲಿರಬೇಕು2 ದೃಷ್ಟಿಯು ಕುಳಿತಾ ದೃಷ್ಟಿಯು ಮುಂದಕೆ ಸಾಗಲಿರಬೇಕುದೃಷ್ಟಿಯು ತಾನೆಡಬಲಕೆ ಸರಿಯದೆ ದೃಷ್ಟಿಯು ಇರಬೇಕು 3 ಕುಳಿತಾ ಸ್ಥಳವು ತಪ್ಪಲು ಮತ್ತೆಯು ಕುಳಿತುಕೊಳ್ಳಬೇಕುಥಳಥಳ ಹೊಳೆಯುವ ಬೆಳಗದ ಪಸರಿಸಿ ತರನಾಗಿರಬೇಕು 4 ಉದಯಾಸ್ತಮಾನವು ದಿವರಾತ್ರಿಯುಡುಗಿ ಇರಬೇಕುಚಿದಾನಂದ ಸದ್ಗುರು ತಾನಾಗಿಯೆ ತಾನೆ ಇರಬೇಕು 5
--------------
ಚಿದಾನಂದ ಅವಧೂತರು
ದೃಷ್ಟಿ ತಾಕಿತೆ ನಿನಗೆ ಶ್ರೀರಾಮ ಸುಂದರತರ ಮುಖ ಚಂದ್ರನ ನೋಡುತಲಿ ಸುಂದರಿಯರೆಲ್ಲ ಬಂದು ಕಂದ ನಿನ್ನ ಮುದ್ದಿಡಲು 1 ನೀಲ ಶುಭಕುಂತಲವ ನೀಲ ವೇಣಿಯರು ತಿದ್ದಿ ಲಾಲಿಸಿದ ಕಾರಣದಿಂ 2 ಮಂಗಳವಾದ ನಿನ್ನ ಕಂಗಳ ಢಾಳವನ್ನು ಅಂಗನೆಯರೆಲ್ಲ ನೋಡಿ ಹೆಂಗಿಸಿದ ಕಾರಣದಿಂ 3 ಮಾರಸುಂದರ ಸುಕು ಮಾರವರ ರೂಪವನು ಸಾರಸಾಕ್ಷಿಯರು ಕೂಡಿ ಮೀರಿಮಾತನಾಡಿದರಿಂ 4 ಮಾನವ ವಂದಿತನೆ ಮೌನಿಕುಲ ಸೇವಿತನೆ ಧೇನುಪುರ ವೆಂಕಟೇಶ ಶ್ರೀನಿವಾಸ ಪಾಲಿಸಲಿ 5
--------------
ಬೇಟೆರಾಯ ದೀಕ್ಷಿತರು
ದೃಷ್ಟಿ ತಾಕೀತೋ ಬೀದಿ ಮೆಟ್ಟಬ್ಯಾಡವೋಸೃಷ್ಟಿಯ ನಾರಿಯರೆಲ್ಲ ಕಣ್ಣಿಟ್ಟು ಹೀರುವರೋ ನಿನ್ನ ಪ ಪುಟ್ಟ ಪದಕಮಲದಿ ಮೆಟ್ಟಿ ರತುನ ಪಾದುಕಾಇಟ್ಟ ಕಿರುಗೆಜ್ಜೆ ಪೆಂಡ್ಯೆ ದಿಟ್ಟತನದಿಘಟ್ಟಿ ಸಾಸಿರ ಬಾಳುವ ಪಟ್ಟೆಯನೆ ಬಿಗಿದುಟ್ಟು ಮೇಗಿಲ್ಲದ ಬೆಲೆಯಾದ ಪಟ್ಟದುಡುದಾರವಿಟ್ಟು 1 ಸಿರಿಯಿರುವ ಉರದಲ್ಲಿ ಪರಿಮಳ ಗಂಧವ ಪೂಸಿಪರಿಪರಿ ಪದಕ ಮುತ್ತು ಸರ ವೈಜಯಂತಿಕೊರಳ ಕೌಸ್ತುಭದ ಕಾಂತಿ ನಿರುಪಮ ಶ್ರೀವತ್ಸಲಾಂಛನ ಸರಿಗೆ ತಾಳಿ ಪದಕವು ಸೇರಿದ ಮುತ್ತಿನ ಜಲ್ಲೆ 2 ಉಗುರ ಗೋರಂಟಿ ಛಾಯಾ ಚಿಗುರು ಪೋಲುವ ಬೆರಳುಬಗೆಬಗೆ ರತುನಂಗಳ ನಗಗಳನಿಟ್ಟುನಗವನೆತ್ತಿದ ಭುಜಕೆ ಬಿಗಿದ ಬಾಹುಪುರಿ ಕೆಂಪುನಿಗಿನಿಗಿಗುಟ್ಟುವ ಕಾಂತಿ ನಗುತಿದೆ ಬಾಲಭಾನುವ 3 ನಾಸಿಕ ಲಲಾಟಚೆಲುವ ಪುಬ್ಬು ಕಸ್ತೂರಿಯ ತಿಲಕ ಒಪ್ಪುವ ಮುಖದಿ 4 ಕೋಟಿ ಹೊನ್ನು ಬಾಳುವ ಕಿರೀಟವಿಟ್ಟು ಕಡೆಗಣ್ಣನೋಟದಿಂದ ತರುಣೇರ ಪೋಟಿ ಮಾಡುತಚಾಟು ಮಾತುಗಳಾಡುತ ಪೊಟ್ಟನಂತೆ ತಿರುಗಿದರೆನೀಟಲ್ಲವೋ ನಿನಗದು ಪಾಟಲಾಧರನೆ ಕೇಳು 5 ಬಿಂಕದಿಂದ ಎರಡು ಕರದಿ ಶಂಖ ಚಕ್ರವ ಪಿಡಿದುಅಂಕಿತ ವೇಣುನೂದುತ ಶಂಕೆ ಇಲ್ಲದೆ ಮಂಕು ಮಾಡುತ ಬಾಲೇರ ಪಂಕಜಾಕ್ಷ ಸುಳಿದರೆÉಮಂಕುಗಾರನೆಂದು ನಿನ್ನ ಅಂಕಿತ ಮಾಡುವರಲ್ಲೋ 6 ಮಂಗಳಮೂರುತಿ ಮುಂಚೆ ಶೃಂಗಾರಗಳನೆ ಮಾಡಿಪೊಂಗೊಳಲನೂದುತ ಶ್ರೀರಂಗ ಸುಳಿದರೆಹೆಂಗಳ ರಂಭೇರೊಂದಾಗಿ ಕಂಗಳಿಡಲು ಉನ್ನಂತರಂಗವಿಠಲಗಲದಿರೋ ಹಿಂಗದೆ ನರಸಿಂಗನೇ 7
--------------
ಶ್ರೀಪಾದರಾಜರು
ದೃಷ್ಟಿಯೊಳಗೆ ದೃಷ್ಟಿ ನಿಂತಿತು | ನೋಡಲಿನ್ನು ದೃಶ್ಯ ನಷ್ಟವಾಯಿತು | ಕಷ್ಟವೆಲ್ಲ ಕಡೆಗೆ ಸಾರಿ | ಅದೃಷ್ಟವನ್ನು ಮೀರಿ ನಿಂದು ನಿಷ್ಠೆಯಲ್ಲಿ ತುಷ್ಟಿಯಾಯ್ತು ನೀ ನೋಡು ಸಖಿಯೆ ಪ ಐದು ಮಂದಿ ಅಗಲಿ ಹೋದರೆ | ಐದಕೈದು ಕೂಡಿ ಬಂದು ಕೂಡದಾದರೆ | ಐದರೊಳಗೆ ನೋಡಲಿನ್ನು || ಐದು ಐದು ತಾನೆ ಅಲ್ಲ | ಐದನೇದರಲ್ಲಿ ನಿಂತೆನೇ | ನೀ ಕೇಳಿದೇನೆ ? 1 ಕರ್ಮವೆಲ್ಲ ಕಾಣದಾಯ್ತು | ಧರ್ಮವೊಂದು ಸರ್ವಕಾಲ ತೂಗಿ ನಿಂತಿತು |ಶರ್ವನಲ್ಲದಿನ್ನು ಮತ್ತೆ | ಉರ್ವಿಯಲಿ ಪೇಳದಾಗಿ ಪರ್ವತಾಗ್ರ ಭೂಮಿ ಒಂದು ನಿರ್ವಿಕಾರ ತೋರಿತಲ್ಲಾ 2 ಹಿಂದೆ ಎಂದು ಕಂಡಿದಿಲ್ಲ | ಈ ಸೋಜಿಗವನ | ಮುಂದೆ ದಾರಿಗುಸುರಲೀಗತೀ | ತಂದೆ ಭವತಾರಕನ | ಹೊಂದಿದವರ ಕೇಳಿದೇನೆ | ಎಂದು ಎಂದು ಹೀಗೆಂಬರೆ | ನೀ ಬಲ್ಲಿಯೇನೇ 3
--------------
ಭಾವತರಕರು
ದೇವ ಕರುಣಾಳು ನೀ ಕಾವಲಾಗಿರುವುದಕೆ ಆವ ವೇತನ ಕೊಡುವೆ ಶ್ರೀ ವರನೆ ನಿನಗೆ ಪ. ರೂಢ ಕೈಪಿಡಿದು ಕಾಪಾಡುತಿಹ ಬಿರುದ ಪಾಡಿ ಪೊಗಳುತ ನಮಿಸಿ ಬೇಡಿಕೊಂಬುವೆನು ನಾ ಮಾಡಿದಪರಾಧಗಳು ನೋಡಲದ್ಭುತವು 1 ನಡೆ ತಪ್ಪು ನುಡಿ ತಪ್ಪು ನಿಂತಲ್ಲಿ ಬಹು ತಪ್ಪು ಖಡುಮೋಹ ಕೃತ ತಪ್ಪು ಕಾಮಕೃತ ತಪ್ಪು ಮಾಡದಿ ಮನೆ ಮಿತ್ರ ಧನ ಒಡವೆಯಾಶೆಯು ತಪ್ಪು ಒಡೆಯನೀ ಕ್ಷಮಿಸೆಂದು ವಂದಿಸುವೆ ನಿಂದು 2 ಯುಕ್ತಾಯುಕ್ತವನರಿಯೆ ಎನ್ನಹಂಕೃತಿ ಮರೆಯೆ ಭಕ್ತಿ ಮುಕ್ತಿದ ಸರ್ವ ಶಕ್ತಿ ಶ್ರೀ ಹರಿಯೆ ಭಕ್ತವತ್ಸಲ ವೆಂಕಟಾದ್ರಿ ಶೇಖರ ಸಿರಿಯೆ ಯುಕ್ತಿಯಿಂದಲಿ ಎನ್ನ ಪಾಲಿಸುವ ದೊರೆಯೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ದೇವ ಗುರುಸ್ತುತಿ ಅಂಗವೇ ಶ್ರೀ ಮಹಾಂಗಿರೀಶ ಲಿಂಗವಾದುದು ಸಂಗ ಸುಖದ ದುರಿತವೆಲ್ಲ ಹಿಂಗಿ ಪೋದುದು ಪ ನಿರ್ಮಲಾತ್ಮ ಗುರುಕಟಾಕ್ಷ ಮರ್ಮಸಿಕ್ಕಿತು ಕರ್ಮ ಹರಿದು ಜ್ಞಾನಜ್ಯೋತಿ ಬೆಳಕು ಮಿಕ್ಕಿತು ಧರ್ಮ ತತ್ವದಮೃತವೆಂಬ ಶರಧಿಯುಕ್ಕಿತು ಪ್ರೇಮದಿಂದ ಪ್ರಕಟವಾದ ಬ್ರಹ್ಮ ದಕ್ಕಿತು 1 ಮಾಯೆಯಿಂದ ಮಮತೆಯೆಲ್ಲ ಸತ್ಯವಾದುದು ನ್ಯಾಯಪಥವ ತಿಳಿಯೆ ಸರ್ವ ಮಿಥ್ಯವಾದುದು ಸಾಯುತೊಡನೆ ಹುಟ್ಟುವುದರ ಭೀತಿಪೋಪುದು ಕಾಯದೊಳಗೆ ದಿವ್ಯಜ್ಯೋತಿ ಪಥ್ಯವಾದುದು 2 ಪರಶಿವಾತ್ಮಲಿಂಗವೆನ್ನ ಮನಕೆ ಸಾರಿತು ತುಂಬಿ ತುಳುಕಿ ಬೀರಿತು ಪರಮಾನಂದರಸದ ಲಹರಿ ಉಕ್ಕಿ ಹರಿಯಿತು 3
--------------
ಭಟಕಳ ಅಪ್ಪಯ್ಯ
ದೇವ ತನದ ಮಹಿಮೆಯಗಳೆದೇ ಅವಲೀಲೆಯೋ ನರನಾಗಿ ಗೋಪಾಲಕೃಷ್ಣಾ ಪ ಕುಂಡ ಗೋಳಕರರ ಸನ ಮನಿಯಲಿ ಜನ ಉಂಡ ವೆಂಜಲ ಬಳಿದು ಹಿಂಡ ರಾಯರ ಮುಂದ ಕುದುರೆಯ ತೊಳೆವುತ ಭಂಡಿಯ ಹೊಡೆವುತ ಪಾರ್ಥನವಶವಾಗಿ1 ಗೊಲ್ಲತೆಯೊಬ್ಬಳು ನೀರಕೊಡುವ ಪೊತ್ತು ನಿಲ್ಲದೇ ಮಾರ್ಗದಿ ಬರುತಿರಲು ಮುಳ್ಳು ಮುರಿಯವಳ ಕಾಲವ ಹಿಡಿವುತ ಸಂತೈಸಿ ಕಳುಹಿದ 2 ಜಾರ ಚೋರನೆನಿಸಿ ನಿರುತ ಗೋವಳರುಂಡನ್ನ ಸವಿದು ಗುರುವರ ಮಹಿಪತಿ ಪ್ರಭು ಜನ್ಮರಹಿತನವ ತರಿಸಿ ಯಶೋಧೆಯ ಮೊಲೆ ಪಾಲವನುಂಡು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೇವ ದೇವ ತೋರು ದಯವ ಪ ಕಾವದೇವ ನೀನೆ ಎನ್ನ ಕೈಯಪಿಡಿದು ಕಾಯೊ ಅಭವ ಅ.ಪ ಧ್ಯಾನಿಪ ಭಕ್ತ ದೀನರಭಿಮಾನಿ ನೀನೆ ಕರುಣಿಸೊ ದೀನಸ್ವರದಿ ಬೇಡಿಕೊಂಬೆ ಮಾನರಕ್ಷಿಸಿ ಪೊರೆಯೊ ಜೀಯ 1 ನೀಗಿಸಲು ದುರ್ಬವಣೆಯನು ಬಾಗಿ ನಿಮ್ಮ ಮರೆಯ ಹೊಕ್ಕೆ ಭೋಗಿಶಯನ ಬಾಲನನ್ನು ಬಗಲೊಳಿಟ್ಟು ಸಲಹು ಜೀಯ 2 ಭಾಮೆಮಣಿಯ ಸಮಯಕೊದಗಿ ಪ್ರೇಮದಿಂದ ಮಾನ ಕಾಯ್ದಿ ಸ್ವಾಮಿ ನೀನೆ ಗತಿಯು ಎನಗೆ ಪ್ರೇಮದಿಂದ ಕಾಯೊ ಶ್ರೀರಾಮ 3
--------------
ರಾಮದಾಸರು
ದೇವ ದೇವ ದೇವ ದೇವ ದೇವಾದಿದೇವ| ಶ್ರೀ ದೇವನೇ ದೇವಾ|ಸಲಹೆನ್ನ ಸದಾ ಪ ವಸುಧಿಯ ತನುಭವ ತನುಗಿರಿ ಕುಲಿ|ಶಾ| ಮರರಿಗಡಿಗಡಿಗೆ ನೀ ಸಲಹುವೆ ಕರುಣದಿ| ಬಿಸರುಹ ಲೋಚನ ದೇವ ದೇವಾ| ಸುರತರು ದೇವದೇವ1 ನಗವರಧರ ಮೃಗಕುಲದಧಿಪತಿ| ವೈರಿಯ ಕುಲವರ ವರದನೇ ಕೇಶವಾ| ಉಡಗಣ ಪತಿಯನ ಪಡೆದನ ತನುಜೆಯ| ರಮಣನೆ ಮಹಿಪತಿ ನಂದನ ಜೀವನಾ| ಪೊಡವಿ ಮನೋಹರ ದೇವ ದೇವಾ 2
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೇವ ದೇವ ಲೋಕೇಶ್ವರಾ ರಾಮ ಪ ಪಾವನಾತ್ಮ ಪರಾತ್ಪರಾ ದೋಷದೂರಾ ಜೀವ ಜೀವ ಚರಾಚರ ಗೂಢಚಾರ ಅ.ಪ ತ್ರಿಗುಣಾತ್ಮಕಲೀಲಾ ಕರುಣಾಲವಾಲಾ 1 ಧರಣಿಜಾ ಕಳತ್ರಾ ಕರುಣೈಕ ಪಾತ್ರಾ 2 ಜವ ಜೀವನೇ ಶ್ರೀಧವ ಮಾಂಗಿರೀಶ || 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೇವ ನೀ ದಯಮಾಡಿ ಕರುಣಿಪುದೂ ಪ ಮಮದುರಿತಹರಣ ಜೀಯ ಅ.ಪ ಕಾಲ ಪಾವಕಾಸನನೇ ದೇವ ಪ್ರತ್ಯಂಗನದ್ಯಾರೊ ತೋರೋ ಸಾವಧಾನ ಸರ್ವಾತ್ಮಕ ತ್ರಿಗುಣನೆಬಾರೊ ಬಾವ ಜಾರಿ ಸಖ ಭಜಕ ಜನ ವಿಹತ ಸರ್ವಜನರಿಗಾದರದಿ ಸಂಪದವು ನೀವ ಸುಂದರನೆ ನಿಜಪರ ಬ್ರಹ್ಮನೆ 1 ಪ್ರಣವನಾದ ಪಂಡಿತಜನ ಶಿಖರನೆ ಫಣಿಪಾಸನ ಹರಿಯೆ ಧೊರೆಯೆ ಅಣಿದು ಬರುವ ದುರ್ನಡೆಗಳ ಕಡಿಯದೆ ಯೆಣಿಪುದು ನಿನಗಿದು ಸರಿಯೇ ತ್ರಿಣೆಯೆಸಖನೆ ತ್ರಿಗುಣೇಶನೆ ಕೇಶವ ಅಣಿದು ಬಾರೊ ದಯಕೋರೆಲೊ ಮಹಾ 2 ದ್ವಿಜಗಣ ಮಣಿಯಹುದೋ ಅಜ ಮಹರಾಜನೆ ದು:ಖವ ನೀ ತ್ಯಜಿಸಬೇಕಹುದಹುದೋ ವಿಜಯಸಾರಥಿಯೆ ನಿಜ ಭಗವಂತನೆ ಸುಜನರೊಡನೆ ಸುಖಿಸುವದೆನಗದು ಕೊಡೊ 3 ನಿಗಮವಿನುತ ನಿಖಿಲಾಂಡಕೋಟಿ ಬ್ರಹ್ಮಾಂಡ ಜಗದಾದಿ ನಾಯಕ ಕನ್ಯಾರೊ ಬಾರೊ ಸುಗುಣರೂಪ ಸಾಕ್ಷಾತ್ ಪರಮಪದ ತೋರೋ ಅಗಣ ಸಹಜ ಮತ್ಕುಗುಣ ಕಾಲನೆ ಕಲಿ ನೆಗುರು ಮಂಗಳಪುರಿಧಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
ದೇವ ನೀನಹುದೋ ದೇವರದೇವ ನೀನಹುದೋ ಪ ದೇವ ರಿಪುವನದಾವ ದುರಿತಾಖ್ಯನಾವ ನಮಿತರ ಕಾವ ಕರುಣಸಂಜೀವ ಜಿತಪೂರ್ಣಕಾಮ ಅ.ಪ ದೇವಕಿಯಲ್ಲವತರಿಸಿ ಗೋಕುಲವನ್ನು ಪಾವನವನ್ನು ಮಾಡಿ ಮಡುಹಿ ಮಾವನ ಮಧು- ರಾವನಿಯನುಗ್ರಸೇನಗಿತ್ತು ದೈತ್ಯಾಳಿಯ ಸವರಿ ಜೀವ ಸಖನಾಗಿ ಪಾಂಡವರಿಗೆ, ಪಾರ್ಥ ಸೇವೆಯಲಿ ಸಂದು ಕೀಲಿಸಿ ಕೌರವರನ್ನು ಭೂವರನ ಹಯಮೇಧಕೊಲಿದು ಬಂದಾ 1 ಧರ್ಮರಾಜನ ಯಜ್ಞತುರಗ ರಕ್ಷೆಗೆ ಕೃತ- ವರ್ಮಜರು ಕೂಡಿ ನಡಸಿ ನೀಲಾಂಕನ ಮರ್ಮವರಿತು ಸೋಲಿಸಿ ಹಂಸಧ್ವಜರನ್ನು ಮಾಮಳಿದಡರಿ ಕರ್ಮವಶದಿಂದ ಬಭ್ರುವಾಹನನ ಕೈಯ ದುರ್ಮರಣವಾದ ವಿಜಯ ಕರ್ಣರನು ನಿತ್ಯ ನಿರ್ಮಳಿಕನಹುದೊ 2 ಮುಂತೆ ನಡೆದರ್ಜುನಿಯ ಗೂಡಿ ತಾಮ್ರಧ್ವ ಜಂ ತುಡುಕಿ ಬರೆ ದ್ವಿಜನಾಗಿ ಶಿಖಿ ದಂತಿಪುರಕೆ ಬಂದರಸನ ಹಯಮೇಧ- ಮಂ ಪಾಲಿಸಿ ತ್ರಿಜಗವನು ಪಾಂಡವರಿ- ಗಿತ್ತೊಲಿದು ಸುರಪುರವ ಪೊರೆವ ಲಕ್ಷ್ಮೀಕಾಂತ ನೀನಹುದೋ 3
--------------
ಕವಿ ಲಕ್ಷ್ಮೀಶ
ದೇವ ನೀನುಪಕಾರ ಅಪಾರ ಮಾಡಿದೆ ಕಾವ ಕರುಣಾ ಸ್ವಭಾವ ಕೇಳು ಪೇಳುವೆ ಪ ನವಯುವತಿ ಶಿಲೆ ಕೊರಳಿಗೆ ಕಟ್ಟಿಕೊಂಡು ಭವ ಸಾಗರದೊಳು ಮುಳುಗಿ ಪೋಗುವ ನಾ ಅವಸರಕೊದಗಿ ಪಿಡಿದು ದಡ ಸೇರಿಸಿ ದವನಾಗಿ ಎಚ್ಚರಿಕೆ ತಂದಿತ್ತೆ ದಯಾಳೊ 1 ಭಾರ ತಾಳದು ಎಂದು ಸೂತ್ರವೂ ಶಿಖಿಯೊ ನಿ ವಾರಿಸಿ ತನುವಿಗೆ ಲಘುವು ಮಾಡಿದೇಯೆ ಭಾರಮಯತಾ ರಜ್ಜು ಮನಕೆ ಸುತ್ತಿದೆ ಆಶಾಂ- ಕುರ ಕೇಶಗಳು ಬೆಳದಿವೆ ಪರಿಹರಿಸು 2 ಲಕ್ಷ್ಯವಿಲ್ಲದೆ ಅನ್ನ ಮೊದಲಾಗಿ ಕೊಡುವಂಗೆ ಶಿಕ್ಷಿಸಿ ಗರ್ವವು ಕಳೆದು ಈಗ ಭಿಕ್ಷುಕನ ಮಾಡಿದೆ ನಿನ್ನದೆ ಬೇಡುವೆ ಲಕ್ಷ್ಮೀಪತಿಯೆ ಅಂತರಂಗದ ಗೃಹಸ್ಥ 3 ಏಳು ಮನೆಗಳನ್ನು ಕೇಳೋದು ಯತಿಧರ್ಮ ಏಳಲಾರಿನೊ ವೃದ್ಧ ಕೇಳಲಾರೆ ಕೇಳುವೆ ನಿನ್ನನೇ ಏಳು ಭಿಕ್ಷವ ನೀಡು ಬಾಳುವೆ ಬಹುಕಾಲ ನಿನ್ನ ಕೊಂಡಾಡುತ 4 ಶ್ರೋತ್ರಕ್ಕೆ ನಿನ್ನ ಕಥೆ ನಾಸಕೆ ನಿನ್ನ ಗಂಧ ನೇತ್ರಕ್ಕೆ ನಿನ್ನ ರೂಪ ರಸನಿಗೆ ನಾಮಾಮೃತ ಗಾತ್ರಕ್ಕೆ ನಿನ್ನ ಪಾದಸ್ಪರುಷ ಮನೋಬುದ್ಧಿ ಮಾತ್ರಕ್ಕೆ ಗುಣಕರ್ಮ ಕೊಡು ವಾಸುದೇವವಿಠಲ5
--------------
ವ್ಯಾಸತತ್ವಜ್ಞದಾಸರು
ದೇವ ಫಣಿಭೂಷಣನೆ ಬಾ ಸಕಲ ಜನ ಜೀವಚೈತನ್ಯ ಬಾರೈ ದೇವತೆಗಳುಯ್ಯಲೆಯನು ಭಯಭಕ್ತಿ ಭಾವದಿಂ ತೂಗತಿಹರು ಪ ಅವನಿಯೊಳಗಯನವೆರಡು ಸರಪಣಿಗೆ ಭುವನವೇಳರ ಪೀಠವು ಶಿವನೆ ತೊಡಿಸಿರಲು ಮೇಲೆ ಕುಣಿಕೆ ತಾ ಧ್ರುವನ ಕೈಲಿಹುದುಯ್ಯಲೆ 1 ಧರಣಿಯಿದು ಮೇಲುಮಣೆಯು ಗಗನದಿ ಸ್ಫುರಿಸುತಿಹ ಶಶಿಸೂರ್ಯರು ದೀಪವಾ ಗಿರಲೊಪ್ಪುತಿಹದುಯ್ಯಲೆ 2 ಇಂದ್ರಾದಿ ದಿಕ್ಪಾಲಕರು ಮಿಕ್ಕಾದ ಗಂಧರ್ವ ಸುರ ಸಿದ್ಧರು ವಂದಿಸುತ ಸ್ತುತಿಗೈಯುತ ಸಂದಣಿಸಿ ಮುಂದೆ ನಿಂದಿಹರು ಮುದದಿ 3 ಕುಸುಮಮಾಲೆಗಳಾಗಿವೆ ನಕ್ಷತ್ರ ವೆಸೆದು ಗಗನದಲೊಪ್ಪುತ ಅಸಮತೇಜೋರಾಶಿಯೆ ಮದನಹರ ನಸುನಗುತ ಬಂದು ನೆಲೆಸು 4 ಮಂಗಳ ಮಹಾಮಹಿಮನೆ ಶಿವಗಂಗೆ ಗಂಗಾಧರೇಶ ನೀನೆ ಲಿಂಗವೆಂದೆನಿಸುತಿಲ್ಲಿ ತಿರುಪತಿಯ ರಂಗ ವೆಂಕಟನೆನಿಸುವೆ 5
--------------
ತಿಮ್ಮಪ್ಪದಾಸರು